ಒಟ್ಟು 125 ಕಡೆಗಳಲ್ಲಿ , 37 ದಾಸರು , 111 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೋಲೆಂದು ಪಾಡಿರೆ ಕೋಮಲೆಯರೆಲ್ಲ ಅಮ್ಮಯ್ಯಬಾಲೆಯರು ಅರಿಷಿಣ ಕುಂಕುಮ ಹಚ್ಚಿಹೊಯಿದಾರಮ್ಮಯ್ಯ ಕೋಲ ಹೊಯಿದಾರಮ್ಮಯ್ಯ ಪ. ಹಿಂಡು ನಾರಿಯರೆಲ್ಲ ಕೂಡಿ ದುಂಡು ಗಟ್ಟುತ ಕೊಂಡಾಡಿ ಕೃಷ್ಣನ ಕೋ¯ ಹೊಯಿದಾರಮ್ಮಯ್ಯ 1 ಹಸ್ತ ಕಡಗ ಹರಡಿ ದೋರೆ ಹವಳ ಕಂಕಣಹಸ್ತಿಗಮನೆಯರು ಎತ್ತಿ ಕೋಲ ಹೊಯಿದಾರಮ್ಮಯ್ಯ 2 ವಾಲೆ ಮೂಗುತಿ ಮುದ್ದು ಸುರಿಯುತ್ತಜತ್ತಾಗಿ ಜಾಣೆಯರು ಕೋಲ ಹೊಯಿದಾರಮ್ಮಯ್ಯ 3 ನಳಿನ ಮುಖಿಯರಿಟ್ಟ ಕೋಲ ಹೊಯಿದಾರಮ್ಮಯ್ಯ 4 ಮಲ್ಲಿಗೆ ಸಂಪಿಗೆ ಮುಡಿದ ನಲ್ಲೆಯರೆಲ್ಲರುನಮ್ಮ ಫುಲ್ಲನಾಭನ ಪಾಡಿ ಕೋಲ ಹೊಯಿದಾರಮ್ಮಯ್ಯ5 ಚವರಿ ರಾಗಟೆ ಚಲ್ವಗೊಂಡ್ಯ ಛಂದಾಗಿ ಒಪ್ಪುತಚದುರೆಯರು ಛಂದಾಗಿ ಕೋಲ ಹೊಯಿದಾರಮ್ಮಯ್ಯ 6 ಭಾರ ಧರಿಸುತ ರಘುವೀರನ ಕೊಂಡಾಡಿ ಕೋಲ ಹೊಯಿದಾರಮ್ಮಯ್ಯ 7 ನಡುವಿಗೆ ಒಡ್ಯಾಣವಿಟ್ಟು ನಾರಿಯರೆಲ್ಲರು ತಮ್ಮ ಬಡನಡಬಳುಕುತ ಕೋಲ ಹೊಯಿದಾರಮ್ಮಯ್ಯ8 ಉಟ್ಟ ಪೀತಾಂಬರ ಕಾಲಿಗಿಟ್ಟ ಗೆಜ್ಜೆಯುನಮ್ಮ ಧಿಟ್ಟರಮಿಅರಸನೆಂದು ಕೋಲ ಹೊಯಿದಾರಮ್ಮಯ್ಯ9
--------------
ಗಲಗಲಿಅವ್ವನವರು
ಗಜವದನಾ ಸುಂದರವದನನೆ ವೋ ಪ ಭುಜಗಬಂಧನಪಾದಾ ಭಜಿಪೆನಹುದೊ ರಾಜಾ ಅ.ಪ ಗೌರೀನಂದನ ಸರ್ವಸಿದ್ಧಿ ಪ್ರದಾಯಕ ಶೌರೀ ಮೂಷಕವಾಹನ ಕುಶಲ ಅಂತಕದೇವ 1 ದೇವಿಜನಿತ ಪುತ್ರಾಭಾವ ಲಂಬೋದರನೇ ಪಾವನಂಘ್ರಿಯ ತೋರೋ ಪಾಶ ಅಂಕುಶ ಹಸ್ತಾ 2 ಅಸುರಸಿಂಧುಕನರಿದೂ ವಸುಧೆ ಬಾಧಿಸುತಿರೆ ನಶಿದು ಹೋಗಲಿಯೆಂದ ನಾರಾಯಣನೆ ದೇವಾ 3 ಬಾಲನಾಗಿರೆ ಚೆಲ್ವ ಬಾಲೆಯೀಶ್ವರಿಯೊಳೊ ಫಾಲಲೋಚನ ಶಂಭೋ 4 ನಮಿಸುವ ಪ್ರಮಧಾರಿಗಮಿತ ಫಲವನೀವಾ ಕಮಲಜಪಿತನಾದದಾ ಕಾಣುವರಿಗೆ ಬ್ರಹ್ಮ5 ನಿತ್ಯ ಮಂಗಳನಾಮ ಪ್ರತ್ಯಕ್ಷಮಾದಾ ಮದ್ಗುರುವೇ ತುಲಸೀರಾಮಾ 6
--------------
ಚನ್ನಪಟ್ಟಣದ ಅಹೋಬಲದಾಸರು
ಗೋಪಿ ನೋಡಮ್ಮಾ ಗೋಪೆಮ್ಮಾ ಪ. ಗಡಿಗೆಯ ಒಡೆದಾನು ಕೊಡಹಾಲು ಕುಡಿದಾನು ಹುಡುಗರ ಬಡಿದು ಓಡಿ ಪೋದಾನು ನಿಮ್ಮ ಹುಡುಗಾ ಸಿಕ್ಕಿದ ಮೇಲೆ ಭಿಡಿಯಾವಿಲ್ಲದೆ ಗಿಡದಾ ನೆರಳಿಗೆ ಕಟ್ಟುವೆನು ಬೆನ್ನಟ್ಟುವೆನು 1 ನೆಲವಿನಲ್ಲಿದ್ದ ಪಾಲುಮೊಸರು ಬೆಣ್ಣೆ ಕದ್ದಾನು ಬಾಲಕರೊದ್ದನು ಮುದ್ದು ಹೆಣ್ಣು ಬಾಲೆಯರಿಗೆ ಕಣ್ಣುಸನ್ನೆ ಮಾಡಲಿ ಬಂದಾನು ಭಂಡು ಮಾಡಿದಾನು ದುಂಡ ಕುಚವ ಕರದಿ ಪಿಡಿದಾ ಓಡಿ ಪೋದಾ 2 ಹೆಡೆಯ ಸರ್ಪಾವ ಕರದೊಳು ಹಿಡಿದು ಸಂಜೀಯ ಹೊತ್ತಿಲಿ ತಂದಾನು ನಮ್ಮನ್ನಂಜಿಸಲು ಬಂದಾನು ನಾಗಕನ್ನಿಕೆಯರಿಂದ ಸ್ತೋತ್ರ ಮಾಡಿಸಿಕೊಂಡಾನು ಕಾಲಿಮರ್ಧನಕೃಷ್ಣಾನು 3
--------------
ಕಳಸದ ಸುಂದರಮ್ಮ
ಗೋಪಿ ಸುಕೃತ ಪ ಸುಕೃತ 1 ಕೌಸ್ತುಭ ಸುಕೃತ 2 ಕಸ್ತೂರಿಯಿಟ್ಟು ಕಂಗಳಿಗೆ ಕಾಡಿಗೆ ಹಚ್ಚಿಮತ್ತೆ ಕದಪಿನಲಿ ಕುಂಕುಮವನೊತ್ತಿಮುತ್ತಿನಂದದೊಳಿರುವ ಬೆವರ ಸೆರಗಿನೊಳೊರೆಸಿಮುತ್ತು ತಾರೈಯೆಂದು ಮುದ್ದಾಡುವೋ ಸುಕೃತ3 ಅಸುರಕುಲ ಹರಣನಿಗೆ ಅಂಗಿಯನು ತೊಡಿಸಿ ಬಲುಕುಶಲದಿ ಪೀತಾಂಬರವನ್ನು ಉಡಿಸಿಪೊಸ ರತುನ ಬಿಗಿದ ಮಣಿಮಯದ ಮಕುಟವ ಮಂಡೆ-ಗೊಸವಿಟ್ಟು ನಲಿ ನಲಿದು ಮುದ್ದಾಡುವೊ ಸುಕೃತ4 ಶಂಖ ಚಕ್ರಾಂಕಿತಗೆ ಭುಜಕೀರ್ತಿಯನೆ ಧರಿಸ್ಯ-ಲಂಕಾರದಲಿ ತಾರೆ ಮಣಿಯ ಕಟ್ಟಿಕಂಕಣವು ಕಡಗ ಥಳಥಳಿಪ ಪವಳದಿ ರಚಿಸಿಬಿಂಕದಲಿ ತೊಟ್ಟಿಲೊಳಗಿಟ್ಟು ತೂಗುವ ಸುಕೃತ5 ಮುಂಗೈಯ ಮುರಿ ಮುತ್ತಿನುಂಗುರವು ಥಳಥಳಿಸೆರಂಗು ಮಾಣಿಕದ ಒಡ್ಯಾಣ ಹೊಳೆಯೆಕಂಗೊಳಿಸುತಿಹ ಕಾಂಚಿದಾಮವಲಂಕರಿಸಿ ಸ-ರ್ವಾಂಗದೊಳು ಗಂಧ ಪರಿಮಳವ ಸೂಸುವ ಸುಕೃತ6 ಕಡಗ ಪೊಂಗೆಜ್ಜೆ ಕನಕದ ಘಂಟೆ ಸರಪಳಿಯಬಿಡದೆ ಶ್ರೀಹರಿಯ ಚರಣದಲ್ಲಿ ಧರಿಸಿಪೊಡವಿಯನು ಅಳೆದ ಶ್ರೀಪುರುಷೋತ್ತಮನಿಗೆ ಮೆ-ಲ್ಲಡಿಯನಿಡು ಎಂದೆನುತ ನಡೆಯ ಕಲಿಸುವ ಸುಕೃತ7 ನೆಲನ ಈರಡಿಮಾಡಿ ಬಲಿಯ ಮೆಟ್ಟಿದ ಪಾದಚೆಲುವ ಚರಣದಿ ಭೂಮಿಯಳೆದ ಪಾದಶಿಲೆಯೆಡಹಿ ಬಾಲೆಯನು ಮಾಡಿದ ದಿವ್ಯವಾದಒಲಿದಿಟ್ಟು ನಡೆಯೆಂದು ನಡೆಯ ಕಲಿಸುವ ಸುಕೃತ8 ಅಂದಿಗೆ ಪಾಯ್ವಟ್ಟು ಕುಂದಣದ ಕಿರುಗೆಜ್ಜೆಸಂದಣಿಸಿ ಕಿರಿಬೆರಳೊಳುಂಗುರಗಳುಚೆಂದದ ಕಡಗ ಪಾಡಗ ಘಂಟೆ ಸರಪಣಿಯುಮಂದಗಮನನ ಪಾದಪದ್ಮಕ್ಕಿಡುವೊ ಸುಕೃತ9 ಸುಕೃತ 10 ದಿನಕರ ನಿಭಾಂಗ ಕೇಶವ ರಾಮಚಂದ್ರ ಮುನಿಸನಕಾದಿವಿನುತ ಕುಣಿದಾಡು ಎನುತತನ್ನ ಕರಗಳಲಿ ತಕ್ಕೈಸಿ ಕೃಷ್ಣನ ದಿವ್ಯಘನ್ನ ಚರಿತೆಯ ಪಾಡಿ ಪೊಗಳುವ ಸುಕೃತ11
--------------
ವ್ಯಾಸರಾಯರು
ತಾಳಲಾರೆನಮ್ಮಾ ಬಾಲಕನಟ್ಟುಳಿ ಗೋಪೀಘನವಮ್ಮ ಕೇಳಿದುಳವಿಲ್ಲಾ ಕೇಳಿದುಳವಿಲ್ಲಾ ಕಾಲಕಾಲದಲಿಟ್ಟ ಬೆಣ್ಣೆ ಮೂಲವಿರಲಿಕ್ಕಿಲ್ಲಾ ಪ ಅತ್ತನೋಡ ಲಿಹಾ ಇತ್ತ ನೋಡಲಿಹಾ ಸುತ್ತಸೂಸುತ ಬಾಲೆಯರಾ ಚಿತ್ತಮೋಹಿಸುತಿಹಾ1 ಹಿಡಿದೇನೆಂದರೆ ಸಿಕ್ಕಾ ತುಡುಗ ಬಲುದಕ್ಕಾ ಹಿಡಿದು ನಿಲ್ಲಿಸುವರಿಲ್ಲಾ ಪೊಡವಿಲಿವನ ತುಕ್ಕಾ2 ಆರಿಗೇ ವಿಚಾರಾ ಸಾರಬೇಕು ದೂರಾ ಸೂರೆಹೋಗುತಿದೆ ಸಂಸಾರಾ ಸುಖಸಾರ 3 ತಂದೆಮಹಿಪತಿ ನಂದನ ಸಾರಥಿ ಇಂದು ನಮ್ಮ ಕಾಡಿದರ ಮುಂದಾರುಗತಿ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಿಮ್ಮಿ ಸಾಲೆ ರಂಗ ದಿಮ್ಮಿ ಸಾಲೆ ಪ. ದಿಮ್ಮಿ ಸಾಲೆನ್ನಿರೊ ಗೋಮಕ್ಕಳೆಲ್ಲ ನೆರೆದುಗೋಪಾಂಗನೇರÀ ಮೇ¯ ಒಪ್ಪಿ ಭಸ್ಮ ಸೂಸುತಅ.ಪ. ಶಂಖನಾದ ಕೊಳಲ ಭೇರಿ ಪೊಂಕದಿ ಪಂಚಮಹಾವಾದ್ಯದಿಅಂಕವತ್ಸಲನ ನಿರಾತಂಕದಿಂದ ಹಿಡಿವ ಬನ್ನಿ1 ಗಂಧ ಕಸ್ತೂರಿ ಪುನುಗು ಚೆಂದದಿಂದ ಲೇಪಮಾಡಿನಂದಗೋಪಸುತನ ಮೇಲೆ ತಂದು ಸೂಸಿ ಭಸ್ಮವ 2 ಎರಳೆಗಣ್ಣಿನ ಬಾಲೇರು ಹರುಷದಿಂದ ಬಂದು ನಿಂತುವರದ ಕೆÉೀಶವನ ಮೇಲೆ ಪರಿದು ಸೂಸಿ ಭಸ್ಮವ 3 ಮತ್ತೆ ಕುಶಲದ ಬಾಲೆಯರುಗಳಿತ್ತೆರದಲಿ ಬಂದು ನಿಂತುಚಿತ್ತಜನಯ್ಯನ ಮೇಲೆತ್ತಿ ಸೂಸಿ ಭಸ್ಮವ 4 ವಾದಿರಾಜಗೊಲಿದು ಬಂದು ಸೋದೆಪುರದಲ್ಲಿ ನಿಂದಮೋದಿ ಹಯವದನನ ಮೇಲೆ ಪರಿದು ಸೂಸಿ ಭಸ್ಮವ5
--------------
ವಾದಿರಾಜ
ನವಖಂಡದ ಸ್ವಾಮಿ ಒಂದು ನಮ್ಮಗೆಲಿಸಲಿಶುಕಬುದ್ಧಿ ಬಾಲೆಯರ ಕುಂದುಗೈಸಲಿ ಪ. ಚನ್ನನಚಾರಿವಾಸ ಮನ್ನಾರಿ ಕೃಷ್ಣನ ಸಹಮುನ್ನ ಪ್ರಯಾಗಿ ಮಾಧವನ ಬಲಗೊಂಬೆವು1 ಇಳಾ ವರ್ತಾ ಭದ್ರಶಾಮ ಈತನ ಬಲಗೊಂಬೆವುನಾವು ಈತನ ಬಲಗೊಂಬೆವು ಅವರು ನಮ್ಮ ಪಂಥ ಗೆಲಿಸೆಂಬೆವು2 ಹರಿ ವರುಷ ಕಿಂಪುರುಷ ಭರತ ಖಂಡದಲ್ಲಿದ್ದಭರತ ಖಂಡದಲ್ಲಿದ್ದ ನರಹರಿಯ ಬಲಗೊಂಬೆ ಪಂಥಗೆಲಿಸುವ ಶುದ್ಧ 3 ಕೇತು ಮೂಲ ಖಂಡದ ಹರಿಯ ಪ್ರೀತಿಲೆ ಬಲಗೊಂಬೆವುಮಾತು ಸೋಲಿಸಿ ಅವರ ನಮ್ಮ ಮಾತುUಲಿಸೆಂಬೆವು 4 ರಮ್ಯಕ್ಕೆ ಹಿರಣ್ಮಯ ಈ ಕುರುಖಂಡವೆಂಬೊಕುರುಖಂಡದಲಿ ರಮಿಸಿ ಅಲ್ಲಿರುವ ರಾಮೇಶನ ಬಲಗೊಂಬೆವು5
--------------
ಗಲಗಲಿಅವ್ವನವರು
ನಳಿನಿಯ ಬಳಿಯಲಿ ಕುಳಿತ ಮರಾಳಾ ಕೊಳಲಿನ ಬಾಲನು ಬಂದರೆ ಹೇಳಾ ಪ ಪುಳಿನದ ಕೊಳದಲಿ ಕುಳಿತು ಕಾಯುವಳಾ ಗೆಳತಿಯೆ ರಾಧೆಯು ಅವಳನು ಕೇಳಾ ಅ.ಪ ತರುಗಳ ಮರೆಯಲಿ ತುರುಗಳ ನೆರೆಯಲಿ ಕರುಗಳ ಜೊತೆಯಲಿ ನಲಿಯುತಲಿ ಅರಳಿದ ಹೂಗಳ ಪರಿಮಳ ಭಾರದಲಿ ಮೆರೆವಲತೆಯ ಬಳಿ ಇರುವನು ಒಲವಿನಲಿ 1 ಮುರಳಿಯ ನಾದವನೆಲ್ಲೆಡೆಗೆರೆವ ತರುಣಿಯರೀವಾ ಬೆಣ್ಣೆಯ ಮೆಲುವಾ ಮೆರೆವಪೀತಾಂಬರ ಉಡಿಗೆಯೊಳೆಸೆವ ಶರಣೆಂದೊಡೆ ನವಚೇತನವೀವ 2 ಪಾಡಿಪೊಗಳುವರ ಕೂಡ ನರ್ತಿಸುವಾ ನಾಡೆ ನರ್ತಿಸುವರ ನೋಡುತ ನಗುವ ಬೇಡಿದ ವರಗಳ ನೀಡುತ ನಗುವ ಮಾಡೆ ವಂದನೆಗಳ ಓಡಿಬಂದಪ್ಪುವ 3 ಜೊನ್ನದ ಬಣ್ಣವ ಹಳಿಯುತೆ ಬೆಳಗುವ ಚೆನ್ನ ಮರಾಳವೆ ನಿನ್ನೆಡೆ ಬರುವ ಅನ್ನೆಗಮೆನ್ನನೀ ಕರೆಯಲು ಮಾಡುವ ಸನ್ನೆಯ ಕಂಡೋಡಿ ಪಿಡಿಯುವೆ ಚರಣವ 4 ಬಾಲೆಯರೊಡನೆ ಕೋಲಾಟವನಾಡುವ ನೀಲಾಂಬರ ಘನ ಶ್ಯಾಮನವ ಮೇಲೆನಿಸುವ ವನಮಾಲೆಯಿಂದೆಸೆವ ಬಾಲನವನು ಮಾಂಗಿರಿಗೆ ಬಾರೆನುವ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಿಂತು ಲಾಲಿಸಲಿ ರಾಧಾ ಕಂತುಪಿತನ ಪದನಾದ ಪ ಬಲದ ಕಾಲೆಡದೊಳಿಟ್ಟು ಇಳೆಗೆ ಎಡದ ಪದ ಕೊಟ್ಟು ಒಲಿದು ಮುರಲಿ ಮುಖವಿಟ್ಟು ಉಲಿಯೆ ಮಧುರ ರವ ಪುಟ್ಟಿ ಬಲಬಾಲರೆಲ್ಲ ನಲಿಯುತಲಿಗೋ ಪೂರ್ವ ಮಳೆಗರೆವುತಲಿ ನಾನೆಂತು ಬಣ್ಣಿಸಲಿ ಹರಿಯ ಲೀಲೆಗಳ ಉಲಿಯುವ ಶ್ರುತಿನಾದ ಬಲದ ಸಿಂಹದ ನಾದ ಸಲೆ ವಟುವಿನ ನಾದ ಬಲವಾದ ಪರಶುವಿನತಿನಾದವು ಯಶೋಜಿತ ನಾದವು ಬಲು ವಾಜಿನಾದಗಳ್ ಕೊಳಲಲಿ ಕೇಳುತ ನಿಂದು 1 ಪಾಲು ಮೊಸರುಗಳನುಂಡು ಲೀಲೆಯಾಡುತಿರೆ ಕಂಡು ಬಾಲೆಯರತಿ ಖತಿಗೊಂಡು ಗೋಳಿಡುತಲೆ ಹಿಂಡಿಂಡು ಎಮ್ಮಾಲಯದೊಳು ಬೆಣ್ಣೆ ಮೆಲುತಲಿ ಸಣ್ಣ ಬಾಲೆರಿಟ್ಟ ಪಾಲ್ ಕುಡಿವುತಲಿ ಕೆಳಮೇಲಾಗಿ ಧದಿಯನು ಸುರಿವುತಲಿ ಜಲದೊಳು ಧುಮುಕಿದ ಕಲಕದ ಚಲವಿಡಿದ ಬಲುಬೇರ ಕೋರೆಯಿಂದಗಿದು ತಿಂದಾ ಒಲಿದು ಕಂಬವ ನೋಡಿದಾ ಬಲಿಗೆ ಬಾಯಿ ತೆರೆದಾ ಮೊಲೆ ಕೊಟ್ಟ ಜನನಿಯ ಶಿರಕಡಿದಾ ಕುಲಹೀನೆಂಜಲ ತಿಂದಾ ಖಳಪೂತನಿಯಳಿದಾ ತಿಳಿಗೆಟ್ಟು ಮೈಬಟ್ಟೆ ಕಳೆದೊಗೆದಾ ಬಲು ಮಿಂದೇರಿ ವಾಜಿ ಭಟರ ಬೆನ್ನಟ್ಟಿದಾ ನಿಂತು 2 ಸುರಿವುತಿರಲು ಮಳೆ ಭಾರಿ ಚರಿವಾವ್ಗಳು ಹೌಹಾರಿ ಮರೆಯ ಕಾಣದೆಲೆ ಹೋರಿ ಕರವುತಿರಲು ಮುರವೈರಿ ಕಿರಿಬೆರಳಲಿ ಕೊಡೆವಿಡಿವುತಲಿ ಸಣ್ಣ ಕರಗಳಾವುಗಳ್ ಸಲಹುತಲಿ ಮುದ ಗೋವುಗಳ ನೋಡುತಲಿ ನಾನೆಂತು ಬಣ್ಣಿಸಲಿ ಶಿರಿವರನಾನಂದ ಭರದಿ ವೇದವ ತಂದ ನೆರೆಶೈಲನೆಗಹಿದ ಧರಾಲಲನೀಯ ನಾಸದಿ ಪಿಡಿದ ಸುರನದಿ ದ್ವಿಜರಿಗೆ ದಾನವ ಮಾಡಿದಾ ಹರಿಗೆ ಯಜಪದ ನೀಡ್ದಾ ಗುರುಪುತ್ರರನೆ ಪಡಿದಾ ಹರಿಯೇರಿ ಮೆರೆವುದು ನಿಂತು 3
--------------
ನರಸಿಂಹವಿಠಲರು
ನಿನ್ನ ಮಗನ ಲೀಲೆಯ ತಾಳಲಾರೆವೆ ನಾವುತರಳನ ದುಡುಕು ಹೇಳಬಾರದೆ ಗೋಪಾಲಕೃಷ್ಣಗೆಬುದ್ಧಿ ಅಮ್ಮ ಪ ಇಂದು ಚೆನ್ನಾಯಿತು ತಿಳಿದವನಲ್ಲವೆನೀ ಕೇಳೇ ಯಶೋದೆ ಅ.ಪ. ಬಾಲಕನೆಂದು ಲಾಲಿಸಿ ಕರೆದರೆಮೂಲೆ ಮನೆಯೊಳಗೆ ಪೊಕ್ಕು ಪಾಲು ಬೆಣ್ಣೆ ಮೊಸರೆಲ್ಲವ ಮೆದ್ದುಕೋಲಲ್ಲಿ ನೀರ ಕೊಡವ ಒಡೆದನೇಅಸಲ ವರ್ಣನವ ದಿಟ್ಟ ನಿತ್ಯಾ ಇವನ ಹೋರಾಟಹೆಬ್ಬಾಲೆಯರಲ್ಲಿ ನೋಟ ಬಹಳ ಬಗೆಯಲಿಪಿಡಿದೇವೆಂದರೆ ಮೇಲಿಯಂಜಲುಗಳವೋಡಿದಾಅಮ್ಮ ಇದು ಚೆನ್ನಾಯಿತು 1 ಮತ್ತೆ ಭಾಮಿನಿಯರೆಲ್ಲರು ಕೂಡಿಮಡುವಿನಲಿ ಜಲಕ್ರೀಡೆಯಾಡಲುಚಿತ್ತಚೋರ ಸೀರೆಗಳನೆಲ್ಲವ-ನೆತ್ತಿಕೊಂಡು ಮರವನೇರಿದನವ್ವಾಬೆತ್ತಲೆ ಭಾಮೆಯರೆಲ್ಲ ಬೇಡಿದರೆ ಕೊಡನಲ್ಲಈ ಯುಕ್ತಿಗಳೇ ಬಹುಬಲ್ಲಹತ್ತಿಲಿ ಬಂದು ಕರವೆತ್ತಿ ಮುಗಿದರೆವಸ್ತ್ರಗಳೆಲ್ಲವ ಕೊಡುವೆನೆಂದನೇ ಅಮ್ಮ 2 ಜಾರ ನೀನೆಂದರೆಪರಿಹಾಸ್ಯವ ಮಾಡಿದ ರಂಗವಿಠಲನ ಅಮ್ಮ3
--------------
ಶ್ರೀಪಾದರಾಜರು
ನಿಲ್ಲ ಬಾ ನಿಲ್ಲ ಬಾ ಮೆಲ್ಲಮೆಲ್ಲನೆ ಹೆಜ್ಜೆನಿಟ್ಟುನಿಲ್ಲ ಬಾರೋ ಕೃಷ್ಣಾ ನಿಲ್ಲ ಬಾರೋ ಪ ದುಷ್ಟ ಪೂತನಿಯ ದೊಡ್ಡ ಹೊಟ್ಟೆಯೊಳಾಡಿದಿ ಮಂದಿದೃಷ್ಟಿ ತಾಕಿಹುದೊ ರಕ್ಷೆನಿಟ್ಟು ಮುದ್ದಿಸುವೆ 1 ಆಲಯದಂಗಳದೊಳು ಲೀಲೆ ಮಾಡುವಿಯೊ ಕೆಟ್ಟಬಾಲೆಯರ ಗಾಳಿ ಸೋಕಿಹುದೋ ಹಣ್ಣು ನಿವಾಳಿಸಿಒಗೆವೆ ಕೃಷ್ಣ 2 ಇಂದಿರೇಶ ನಿನ್ನ ಬಹುಮಂದಿ ನೋಡುವರೋ ದೃಷ್ಟಿಇಂದು ಆಗಿಹುದೊ ಮಾಳ್ಪೆ ಕದಲಾರತಿಯ ಕೂಸೆ 3
--------------
ಇಂದಿರೇಶರು
ನೋಡಿದೆನು ಕೃಷ್ಣನ್ನ | ದಣಿಯ ನೋಡಿದೆನು ಕೃಷ್ಣನ್ನ | ಮನದಣಿಯ ಪ. ಪಾಡಿದೆನು ವದನದಲಿ ಗುಣಗಳ ಮಾಡುತಲಿ ಸಾಷ್ಟಾಂಗ ಕಡು ಕೃಪೆ ಬೇಡಿದೆನು ಹರಿಯ ಅ.ಪ. ಅರುಣ ಉದಯದ ಮುನ್ನ ಯತಿಗಳೂ ಶರಣವತ್ಸಲನನ್ನು ಪೂಜಿಸಿ ಕರದಿ ಕಡಗೋಲನ್ನು ಪಿಡಿದಿಹ ಬಾಲರೂಪನಿಗೆ ತರತರದ ನೇವೇದ್ಯವರ್ಪಿಸಿ ತುರುಕರುಗಳಾರತಿ ಗೈಯ್ಯುತ ಪರಮಪುರುಷಗೆ ವಂದಿಸಲು ಈ ಚರಿತ ಮತ್ಸ್ಯನ್ನಾ 1 ಮಧ್ವರಾಯರ ಹೃದಯವಾಸಗೆ ಮುದ್ದು ಯತಿ ಪಂಚಾಮೃತಂಗಳ ಶುದ್ಧ ಗಂಗೋದಕದ ಸ್ನಾನವಗೈಸಿ ಸಡಗರದಿ ಮಧ್ಯೆ ಮಧ್ಯೆ ನೈವೇದ್ಯವರ್ಪಿಸಿ ಮುದ್ದು ತರಳರಿಗ್ಹೆಜ್ಜೆ ಪಂಕ್ತಿಯು ಅಗಣಿತ ಕೂರ್ಮರೂಪನ್ನಾ2 ಉದಯಕಾಲದಿ ಸರ್ವ ಜನಗಳು ಮುದದಿ ಮಧ್ವ ಸರೋವರದೊಳು ವಿಧಿಯಪೂರ್ವಕ ಸ್ನಾನ ಜಪ ತಪವಗೈದು ಮಾಧವನಾ ಉದಯದಾಲಂಕಾರ ದರ್ಶನ ಪದುಮನಾಭಗೆ ನಮನಗೈವರು ವಿಧಿಕುಲಕೆ ಉದ್ಧಾರಕರ್ತನು ವರಹನೆಂದಿವನಾ 3 ಪಾಲಿಸಲು ಬಾಲನ ಶ್ರೀ ಗೋ ಪಾಲಕೃಷ್ಣನು ಕಂಭದಲಿ ಲೀಲೆಯಿಂದಲಿ ಉದಿಸಿ ಖೂಳನ ಸೀಳೀ ತೊಡೆಯಲ್ಲಿ ಬಾಲೆಯನು ಕುಳ್ಳಿರಿಸಿಕೊಂಡಘ ಜಾಲಗಳ ಸುಡುವಂಥ ದೇವನು ಬಾಲರೂಪವ ಧರಿಸಿ ನಿಂತಿಹ ಲೋಲ ನರಹರಿಯ 4 ಅದಿತಿ ದ್ವಾದಶವರ್ಷ ತಪಸಿಗೆ ವಿಧಿ ಜನಕ ತಾ ಕುವರನಾದನು ಅದರ ತೆರದಲಿ ವ್ರತವ ಗೈದ ವೇದವತಿಗಿನ್ನು ಚದುರ ತನಯನ ವರವನಿತ್ತನು ಯದುಕುಲಾಗ್ರಣಿ ಅವರ ಭಕ್ತಿಗೆ ಒದಗಿ ಬಂದ ಮೂರ್ತಿವಾಮನನೆಂಬ ವಟುವರನ5 ದುಷ್ಟ ಕ್ಷತ್ರಿಯರನ್ನೆ ಕೊಲ್ಲುತ ಅಷ್ಟು ಭೂಮಿಯ ದಾನಗೈಯುತ ದಿಟ್ಟ ತಾನೆಲ್ಲಿರಲಿ ಎಂಬುವ ಯೋಚನೆಯ ತಳೆದು ಅಟ್ಟಿ ಅಬ್ಧಿಯ ಪುರವ ನಿರ್ಮಿಸಿ ಪುಟ್ಟ ರೂಪವ ತಾಳಿ ಬರುತಲಿ ಮೆಟ್ಟಿ ನಿಂತಿಹ ರಜತ ಪೀಠದಿ ಶ್ರೇಷ್ಠ ಭಾರ್ಗವನ 6 ಪಿತನ ಆಜ್ಞೆಯ ಪೊತ್ತು ಶಿರದಲಿ ಸತಿ ಅನುಜ ಸಹಿತದಿ ಜತನದಲಿ ವನವಾಸ ಮುಗಿಸುತ ದಶಶಿರನ ಕೊಂದ ಅತಿ ಸಹಾಯವ ಗೈದ ಶರಧಿಗೆ ಪ್ರತಿಯುಪಕಾರವನು ಕಾಣದೆ ಜತನದಲಿ ತಾ ನಿಲ್ಲೆ ನೆಲಸಿದ ಜಾನಕೀಪತಿಯ7 ಗೋಪಿಯರ ಉಪಟಳಕೆ ಸಹಿಸದೆ ಗೋಪನಂದನರೊಡನೆ ಕಾದುತ ತಾಪಪಡಿಸುವ ಕಂಸರನುಚರರಿಂದ ಕಳದೋಡಿ ಗೋಪಿ ಮೊಲೆ ಕೊಡುತರ್ದದಲಿ ಬಿಡೆ ಈ ಪರಿಯ ತಾಪಗಳ ಸಹಿಸದೆ ತಾಪಸರ ಪೂಜೆಗಳ ಬಯಸುತ ಬಂದ ಗೋಪತಿಯ 8 ವೇದ ಬಾಹಿರರಾದ ದುರುಳರು ವೇದ ಮಾರ್ಗವ ಪಿಡಿಯೆ ಸುರತತಿ ನೀ ದಯದಿ ಸಲಹೆಂದು ಪ್ರಾರ್ಥಿಸೆ ಜಿನ ವಿಮೋಹಕನೂ ವೇದರ್ಥವ ಗುಪ್ತದಲಿ ತಾ ಬೋಧಿಸುತ ಮೋಹಕವ ಕಲ್ಪಸಿ ಬುದ್ಧ ಪ್ರಮೋದನೆಂಬುವನಾ 9 ಚತುರ ಪಾದವು ಕಳದು ಧರ್ಮವು ಅತಿಮಲಿನವಾಗುತಲಿ ಕಲಿಜನ ಚತುರ ಜಾತಿಯ ಕಲೆತು ಕಂಗೆಡೆ ಭಕ್ತವರ್ಗಗಳು ಗತಿಯು ನೀನೆ ಪೊರೆಯೊ ಎಂದೆನೆ ಸತಿಯ ಹೆಗಲೇರುತಲಿ ಖಡ್ಗದಿ ಹತವಗೈಯ್ಯುತ ಖಳರ ಸುಜನರ ಪೊರೆದ ಕಲ್ಕಿಯನು10 ನೋಡಿದೆನು ವರ ಮಚ್ಛ ಕೂರ್ಮನ ನೋಡಿದೆನು ಧರಣೀಶ ನೃಹರಿಯ ನೋಡಿದೆನು ವಾಮನನ ಭಾರ್ಗವ ರಾಮಚಂದ್ರನನೂ ನೋಡಿದೆನು ಕಡಗೋಲ ಕೃಷ್ಣನ ಬುದ್ಧ ಕಲ್ಕಿಯ ನೋಡಿದೆನು ಗುರು ವರದ ಗೋಪಾಲಕೃಷ್ಣವಿಠ್ಠಲನ 11
--------------
ಅಂಬಾಬಾಯಿ
ನೋಡುವ ಬನ್ನಿ ಮುರಳೀಧರನ್ನ ಪ ಪಾಡುತ ಕುಣಿ ಕುಣಿದಾಡಿ ಕೊಂಡಾಡುತ ಅ.ಪ ಮನೆಕೆಲಸಗಳಿಗೆ ಕೊನೆ ಮೊದಲಿಲ್ಲವು ನೆನೆದರೆ ಬೇಸರ ಮನೆಗಳಂತಿರಲಿ 1 ಪತಿಗಳ ಸೇವೆ ಶ್ರೀಪತಿಯನೆ ಒಲಿಸಲು ಅತಿ ಸುಲಭದಲಿರೆ ಪತಿಗಳಂತರಲಿ 2 ಬಾಲೆಯರಾದರೆ ಲಾಲಿಸುವನು ಬಲು ಏಳಿರೇ ಎಮ್ಮಯ ಬಾಲರಂತಿರಲಿ 3 ಪರಪುರುಷನ ಕೂಡಿ ದುರಿತಗಳೆಲ್ಲವ ತೊರೆಯುತ ಮೈಗಳ ಮರೆಯುವ ಮುದದಿ 4 ಬಂಧುಗಳೆಂದೆಮ್ಮ ಬಂಧನ ಸಾಕಮ್ಮ ಚಂದದಿ ಪ್ರಸನ್ನ ನಂದಕುಮಾರನ 5
--------------
ವಿದ್ಯಾಪ್ರಸನ್ನತೀರ್ಥರು
ಪತಿತಪಾವನ ನಾಮ ಪೂರ್ಣಕಾಮಾ | ಗತಿಯ ಪಾಲಿಸೊ ಎನಗೆ ಗುರುಸಾರ್ವಭೌಮಾ ಪ ಹದಿನಾರು ಸಾವಿರ ಸುದತಿಯರೆಲ್ಲರು | ತ್ರಿದಶವಿರೋಧಿಯ ಸದನದಲ್ಲಿ || ಮದದಿಂದ ಸೆರೆಬಿದ್ದು ಹದುಳ ಕಾಣದೆ | ಸುತ್ತಿಸಿದರು ಮನದೆ ನಾರದನಿಂದ ನಲಿದಾಡಿ1 ಕಾರ್ತಿಕ ಮಾಸದಲಿ ಕಾಂತೆಯ ಒಡಗೂಡಿ | ಕಾರ್ತರಥವನೇರಿ ಕೀರ್ತಿಪುರುಷಾ || ಧೂರ್ತನ ಕೊಂದು ಬಾಲೆಯರಾರ್ತವ ಪರಿಹರಿಸೆ | ತೀರ್ಥಧರಾದಿಗಳು ನರ್ತನದಲಿ ಪೊಗಳೆ 2 ಇಂದುಮುಖಿಯರ ಬಂಧನ ತರಿದವರು | ಅಂದು ಉತ್ಸಾಹದಿಂದ ದ್ವಾರಾವತಿಗೆ || ಮಜ್ಜನ ಮಾಡೆ | ಮಂದಾರ ಮಳೆ ನಭದಿಂದ ಸುರಿಯೆ 3 ದೇವ ಶೃಂಗಾರವಾಗೆ ವೇದಾದಿಗಳು ನಿಂದು | ತಾವೆಲ್ಲ ಮಣಿಭೂಷಣಾವಳಿಯಿಟ್ಟು || ನೋವ ಪೋಗಾಡಿಸಿ ಪಾವನರಾಗಿ ಸುಖ- | ವನಧಿಯೊಳು ಮೀಯುತ್ತ ಕೊಂಡಾಡೆ 4 ನರಕಾಸುರನ ಕೊಂದು ಇರಳು ಈ ಪರಿಯಲ್ಲಿ | ಹರಿಮಾಡಿದ ಚರಿತೆ ತಿಳಿದುದನು- || ಚ್ಚರಿಸಿದವನ ಕುಲ ನರಕದಿಂದುದ್ಧಾರ | ಮೊರೆಹೊಕ್ಕೆ ಇದÀಕೇಳಿ ವಿಜಯವಿಠ್ಠಲರೇಯಾ 5
--------------
ವಿಜಯದಾಸ
ಪಾಲಿಸಮ್ಮ ಶ್ರೀ| ಮೂಕಾಂಬಿಕೆಯೆ|| ಹಿಮಶೈಲಸಂಭವೆ|| ಪಾಲಿಸಮ್ಮ ಶ್ರೀ| ಮೂಕಾಂಬಿಕೆಯೇ|| ಪ ಸುಲಲಿತೆ| ದೇವಿ ಮಂಗಳೆ|| ಬಾಲೆಯನುಪಮ| ಲೀಲೆ ಶುಭಚರಿತೆ|ಭೂಲೋಕಪಾಲೆ ಸುಶೀಲೆ ಕಾತ್ಯಾಯಿನಿ 1 ಅಂಬುಜಾಕ್ಷಿ ಸ್ವ| ಯಂಭುಮುನಿ ನಿಕು| ರುಂಬನುತೆ ಜಗ|ದಂಬೆ ಶಂಕರಿ|| ಶುಂಭಧ್ವಂಸಿ ನಿ|ಶುಂಭಮರ್ದಿನಿಯೆ|ನಂಬಿದೆ ನಿನ್ನ ಹೇರಂಬನ ಮಾತೆಯೆ 2 ವೀವುದನುದಿನ|| ಭಾವವಿರಿಸುತ | ಪಾವನಾತ್ಮಕಿಯೆ| ದೇವಿ|ಮೃಡಾನಿ|ಭವಾನಿ|ಶರ್ವಾಣಿಯೆ 3
--------------
ವೆಂಕಟ್‍ರಾವ್