ಒಟ್ಟು 305 ಕಡೆಗಳಲ್ಲಿ , 62 ದಾಸರು , 275 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉದ್ಧರಿಸೆನ್ನಯ್ಯ ಮುದ್ದು ಶ್ರೀಹರಿಯೆ ಬಿದ್ದು ಬೇಡುವೆ ನಿಮ್ಮ ಪಾದಪದ್ಮದೊಳು ಪ ಬದ್ಧಗುಣ ಬಚ್ಚಿಟ್ಟು ಶುದ್ಧ ಮನದವನಂತೆ ಸುದ್ದಿ ಹೇಳುತ ಸತತ ಕದ್ದು ತಿನ್ನುವ ಎನ್ನ ಬದ್ಧ ಮನಸಿನ ಡೊಂಕ ತಿದ್ದು ಬೇಗದೊಳು 1 ನಂಬಿಗುಳ್ಳವನಂತೆ ಹೇಳುವ ಪರರ ಅಂಬುಜಾಕ್ಷಯರೊಲುಮೆ ಹಂಬಲವ ಮನದಿ ತುಂಬಿಕೊಂಡಿಹ್ಯ ಎನ್ನಡೊಂಕ ಶಂಭುವಿನುತನೆ ತಿದ್ದಿ ಇಂಬುಗೊಡು ಜವದಿ 2 ಸಫಲಮಾನಿಸನಂತೆ ಜಪಮಾತುಗಳಾಡಿ ಕಪಟತ್ವದಿಂದಿತರ ಅಪಹರಿಸುವ ಕುಪಿತ ಮನಸಿನ ಡೊಂಕ ಅಪರೂಪತಿದ್ದಿ ನುತ ಸುಫಲದಾಯಕ ಹರಿ ಕೃಪೆಮಾಡು ಜವದಿ 3 ಹಸುತೃಷಳಿದವನಂತೆ ವಸುಧೆಜನರಿಗೆ ತೋರಿ ಬಸವಳಿದು ಬಾಯಾರಿ ದೆಸೆಗೆಟ್ಟು ಪರರ ಅಶನ ಬೇಡುಂಬ ಪುಸಿಯ ಮನಸಿನ ಡೊಂಕ ಹಸನಾಗಿ ತಿದ್ದಿ ಲಕುಮೀಶ ಒಲಿ ದಯದಿ 4 ಪಾಮರಮನದ ದುಷ್ಕಾಮಿತಗಳನೆಲ್ಲ ಕ್ಷೇಮದಿಂ ಕಡೆಹಾಯ್ಸಿ ಸ್ವಾಮಿಯೇ ನಿಮ್ಮ ನಾಮಧ್ಯಾನದ ನಿತ್ಯನೇಮವನು ಪಾಲಿಸಿ ಪ್ರೇಮದ್ಹಿಡಿಕರ ಶ್ರೀರಾಮಪ್ರಭುತಂದೆ 5
--------------
ರಾಮದಾಸರು
ಊ. ವಿಶಿಷ್ಟ ಹಾಡುಗಳು ಅಂಗಡಿ ಗೋವಿಂದನ್ಹಣ ವಿಂಗಡಿಸಿರೊ ಸಂಗಡಿಕ್ಕ ಬೇಡ ನೀವು ಭಂಗಬಡುವಿರಿ ಪ ಮುಂಗಡದ ಬಡ್ಡಿಯನು ಮುಂದೆ ಕಳುಹಿಸಿ ಅಂಗಡಿ ಗೋವಿಂದನ್ಹಣ ವಿಂಗಡಿಸಿರೊ ಅ.ಪ ಕೋಲುಗಾರನೊಬ್ಬನಲ್ಲಿ ಹೊರಟನಂತೆ ಬೇಳುವ ಶಂಖದ ಧ್ವನಿಯ ತೋರ್ಪನಂತೆ ಹೀಲಿಯ ಕುಂಚವು ಕಯ್ಯೊಳಿಪ್ಪುದಂತೆ ಮೇಲೆ ಮೂರು ನಾಮ ಧರಿಸಿ ಬಪ್ಪನಂತೆ 1 ಮೂರುಗಡುಬ ಸುಳ್ಳನಾಡಿ ಮೀರಿ ಹೋಯಿತೀ ಸಾರಿ ಬಂದ ದೂತರಿಂಗೆ ಲಂಚ ನಡೆಯದು ಭಾರಿಯಿಕ್ಕಿ ಕೈಗೆ ಚಿಪ್ಪಳೇರಿಸುವರು ಸಾರಿ ಕಂಡು ಬದುಕುವರೆ ದಾರಿವೊಳ್ಳೆದು 2 ಮೊದಲ ಪತ್ರದ್ಹಣವ ಕೊಟ್ಟು ಬದಲು ಪತ್ರವ ಸದರ ಬಡ್ಡಿಯಿಂದ ಬರೆದು ಚದುರತನದಲಿ ಇದಿರು ಬಿದ್ದು ಕೈಯ ಮುಗಿದುವೊದಗಿನಿಂದಲೆ ಗದರಬೇಡ ಬನ್ನಿ ಚಿನ್ನ ವರದನಲ್ಲಿಗೆ 3 ದುಡ್ಡು ಕೊಟ್ಟು ಮಡ್ಡಿಯನ್ನು ತೆಗೆದು ಉಂಬೆವು ಅಡ್ಡಕೊಂಡು ಅತಿರಸವ ತೆಗೆದುಕೊಂಬೆವು ದೊಡ್ಡ ದೋಸೆ ವ್ಯವಹಾರವ ಮಾಡಿಕೊಂಬೆವು ಕಡ್ಡಾಯದ ಸರಕನೆಲ್ಲ ಕಂಡು ಬಿಡುವೆವು 4 ಗಂಧಿಕಾರನಂಗಡಿ ಗೋವಿಂದನಲ್ಲಿ ಚಂದದ ಔಷಧವನ್ನು ತಿಂಬೆವಲ್ಲಿ ಬಂದ ಭವದ ರೋಗ ಕೊಂದೆವಲ್ಲಿ ಆತ ಮಿಂದ ತೀರ್ಥವನ್ನು ಊರಿಗೆಂದೆವಲ್ಲಿ 5 ಸಾಲವನ್ನು ತಿದ್ದಿ ಮುದದ ಸಾಲವನ್ನು ನಾಲಿಗೆಯ ಪತ್ರದಿಂದ ತಂದೆವಿನ್ನು ನೀಲದ ಮಣಿಯನೊಂದ ಕದ್ದುದನ್ನು ಆಲಿಯೊಳಗಿಟ್ಟುಕೊಂಡು ಬಂದುದನ್ನು 6 ಅಂಗಡಿ ಗೋವಿಂದ ಬಹಳ ಅಂಗವುಳ್ಳವ ಮಂಗಳವ ಮಾರುವಲ್ಲಿ ಶೃಂಗಾರವುಳ್ಳವ ಬಂಗಾರ ವ್ಯಾಪಾರದಲ್ಲಿ ತುಂಗ ವಿಕ್ರಮ ಮುಂಗುಡಿಯ ಜನಕೆ ಅಂತರಂಗ ಕೊಡುವವ 7 ದಾಸರಿಗೆ ಧರ್ಮವನ್ನು ಕೊಡುವನಲ್ಲದೆ ಕಾಸು ಹೊರತು ಮೀಸಲನ್ನ ನೀಡಲರಿಯನು ಶೇಷಗಿರಿಯವಾಸನೆಂದು ಹಾಸಿಕೊಂಬನು ಬೇಸರನ್ನು ಕಂಡು ಸಂತೋಷವೀವನು 8 ಸ್ವಾಮಿಯೆಂಬ ತೀರ್ಥದೊಳಗೆ ಮಿಂದೆವಲ್ಲಿ ಭೂಮಿ ವರಾಹತಿಮ್ಮಪ್ಪನ ಧ್ಯಾನದಿಂದಲಿ ಕಾಮಿತ ವ್ಯಾಪಾರವನ್ನು ತಂದೆವಿಲ್ಲಿ ಆ ಮಹಾ ಚಂದ್ರಾರ್ಕವಾಗಿ ಬಾಳುವಲ್ಲಿ 9
--------------
ವರಹತಿಮ್ಮಪ್ಪ
ಎಂತು ಜೀವಿಸಲಯ್ಯ ಯಾದವೇಶ ಪ ಎನ್ನಸುವಿಗಸು ನೀನು ಭಿನ್ನ ಜ್ಞಾನದಿ ಎನ್ನ ಅ.ಪ ಬನ್ನ ಬಡಿಸುವಿ ಮಾಯ ಜೈಸಲರಿಯೆ ವಿಧಿ ವಾಯು ಶಿವ ಶಕ್ರ ಸುರನಿಕರ ನಿನ್ನಲ್ಲಿ ಸುಖಿಸುವರೊ ಅನ್ನೆಲ್ಲಿ ಅಸತೆಂದು 1 ನೀರಗುಳ್ಳೆಯಂತೆ ಸಂಸೃತಿಯ ಸುಖವೆಂದು ದಾರಿತೋರ್ವವ ನೀನು ಕಣ್ಣುಕಟ್ಟೆ ಆರು ಬಿಚ್ಚುವರಯ್ಯ ಆ ಪಟಲಕಿಕ್ಕಟ್ಟು ವಾರಿಜಾಸನನಯ್ಯ ವಂಚಿಸದೆ ಮೈದೋರು 2 ಕಾಮಾದಿ ಷಡ್ವರ್ಗ ದುಷ್ಕರಣ ದುಮ್ಮಾನದ ತಾಮಸದಿ ಸಿಗಬಿದ್ದು ಪಾಮರಾದೆ ವ್ಯೋಮಕೇಶನ ಮಿತ್ರ ಜಯೇಶವಿಠಲ ನೀ ಮನಸು ಮಾಡಲು ಆತ್ಮಾಪಿ ವೈಕುಂಠ 3
--------------
ಜಯೇಶವಿಠಲ
ಎಂಥ ಸೂಕ್ಷ್ಮವ ನೋಡಿರಿವನ ನಮ್ಮ ಕಾಂತೆ ದ್ರೌಪತಿದೇವಿಗೆ ವರಹೀನ ಪ. ಸಣ್ಣ ಕೂಸಿದ್ದಾಗ ಇವನು ಸೂರ್ಯಗೆ ಹಣ್ಣೆಂದುಹಾರಿದ ಗಗನಕ್ಕೆ ತಾನು ಉಡ್ಡೀನ ಗೈದುನೀರಧಿಯ ದಾಟಿದನುಇವನ ಅಂಗದ ಕೋಮಲ ಬಣ್ಣ ವರ್ಣಿಸಲೇನು 1 ಗಂಧಮಾದನ ಗಿರಿ ತಂದು ನೋಡಿ ಗಿರಿ ನಿಂದಲ್ಲೆ ಹಿಂದಕ್ಕೆ ಒಗೆದ ಈಡ್ಯಾಡಿಒಂದೊಂದು ಬೆಡಗವ ನೋಡಿನಮ್ಮ ಇಂದಿರೇಶನು ನಕ್ಕ ಕೌತುಕ ಮಾಡಿ 2 ಹುಟ್ಟಿದಾಗ ಭೀಮ ಒಂದಿಷ್ಟು ಎತ್ತಿಪಟ್ಟನೆ ಬಿದ್ದು ಕೌತುಕ ಮಾಡಿದನೆಷ್ಟುಬೆಟ್ಟಗಳ ಒಡೆದು ಹಿಟ್ಟೆಟ್ಟುಇವನ ಅಂಗದ ಕೋಮಲ ವರ್ಣಿಸಲೆಷ್ಟು3 ಭಿಕ್ಷೆ ಬೇಡಿದನಂತೆ ಕಂಡು ತಾನರಿಯಳು ಕಾಂತೆ ಇಂಥ ದಿಂಡ ಪುರುಷನ ಬೆರೆದಳು ಕಾಂತೆ4 ಘನ್ನಗರಳ ಕುಡಿದನಂತೆ ಅದು ತನ್ನ ದೇಹವ ತಪಿಸುತಲಿದ್ದವರಂತೆಸನ್ಯಾಸ ಇವಗ್ಯಾಕೆ ಕಾಂತೆನಮ್ಮ ಚೆನ್ನ ರಾಮೇಶ ನೋಡಿನಕ್ಕನಂತೆ 5
--------------
ಗಲಗಲಿಅವ್ವನವರು
ಎಂದು ಕಾಂಬುವೆ ಮಾಧವತೀರ್ಥರ ಸುಂದರ ಮಂದಿರ ಪ ಚಾರುಚಿತ್ರ ಕಲಶಕನ್ನಡಿ ಆರೊಂದು ನೆಲೆಗೋಪುರವ ಸವಿ ಸ್ತಾರಮಾಗಿ ತೋರುವ ಮಹಾ ದ್ವಾರದಮುಂದೆ ಬಿದ್ದು ನಮಿಸಿ 1 ತೊಲೆತುಂಡು ಕಂಭ ಬೋದುಗೆ ಶಿಲೆಯಿಂದ ನಿರ್ಮಿತವಾಗಿ ಹೊಳೆವ ಮಂಟಪ ರಂಗು ಮಧ್ಯ ದೊಳಗೆಚೆಲುವ ವೃಂದಾವನವ 2 ಮೂಲ ಪ್ರತಿಮೆ ಸಾಲು ಸಾಲು ವಿ ಮೂಲಪೀಠದ ಪವಿತ್ರಶಾಲೆ ಕಾಲತ್ರಯದಿ ವೇದಘೋಷ 3 ಧಾತ್ರಿಜನರು ಬಂದು ಕೂಡಿ ಯಾತ್ರೆಗೈದು ಜನುಮ ನಿತ್ಯ ಸಾರ್ಥಮಾಡಿಕೊಂಡು ಸತತ ಅರ್ಥಿಯಿಂದ ಪೋಪ ಸಮಯ 4 ಧರೆಯೊಳಧಿಕ ಬುದ್ಧಿನ್ನಿಪುರದಿ ಮೆರೆವ ಶ್ರೀಗುರು ಮಾಧವೇಂದ್ರ ವರಮಂದಿರದಮಿತ ವೈಭವ ಕರುಣಿ ಶ್ರೀರಾಮ ನಿಂತು ನಡೆಸುವ 5
--------------
ರಾಮದಾಸರು
ಎಂದು ದೂರಮಾಡುವಿ ಎನ್ನ ಬಂಧನವನು ಸಿಂಧುಶಯನ ತಂದೆ ಈ ಭವದಂದುಗವನು ಸಹಿಸಲಾರೆ ಪ ಸತಿಪತಿಯ ರತಿಯ ಕಲಹದಿ ಪತನಾದಿಂದ್ರಿಯಿಂದೆ ನಾನು ಪೃಥಿವಿಮೇಲೆ ಬಿದ್ದು ಘನ ವ್ಯಥೆಯಬಡುವ ತಾಪತ್ರಯವ 1 ಮಂದಭಾಗ್ಯನಾಗಿ ಆಗಿ ನಾನಾ ಸಂದಿನೊಳಗೆ ಬಂದು ಬಂದು ಮಂದಿಸೇವೆಗೈದು ನರಕ ಬಂಧರುರುಳವಂಥ ಕೆಡುಕು 2 ಆಸೆದೆಳಸಿ ಪರರಾಸ್ತಿ ಮೋಸತನದಿ ಕದಿಸಿ ಯಮನ ಪಾಶದೊಳಗೆ ನೂಕುವಂಥ ಹೇಸಿ ಎನ್ನ ನಾಶಬುದ್ಧಿ 3 ಅವನಿಯೊಳು ಜನಿಸಿಬಿಟ್ಟ ಬವಣೆ ನೆನೆಸಿ ನೆನೆಸಿ ಎನಗೆ ಸವೆಯದಯ್ಯೋ ದು:ಖ ಈ ದು ರ್ಭವ ಪಾಪ ಸಂಕಟ 4 ದಾಸಜನರ ಪ್ರಾಣಪ್ರಿಯ ಶ್ರೀಶ ಶ್ರೀರಾಮ ನಿಮ್ಮ ಚರಣ ಧ್ಯಾಸ ಮರೆಗೆ ಬಳಲಿಸುವ ಹೇಸಿಭವದ ವಾಸನವ 5
--------------
ರಾಮದಾಸರು
ಎಲೆ ಎಲೆ ಎಲೆ ಥೂ ಪರದೇಸಿ ನೀ ಸುಳ್ಳೆ ಸುಳ್ಳೆ ಮಾಡಬೇಡ ಚೌಕಾಸಿ ಪ ತಿಳಕೊಂಡು ನೋಡು ನೀನು ಸುಧಾರಿಸಿ ಬಲವಾಗಿ ಬರದೇನು ಹಿಂಬಾಲಿಸಿ ಅ.ಪ ಎಷ್ಟು ದುಡಿದಿ ಸತಿಸುತರಿಗಾಗಿ ಗಂಟು ಕಟ್ಟಿಕಟ್ಹ್ಹೂಳಿಟ್ಟಿ ಇವರಿಗಾಗಿ ಅಷ್ಟು ಬಿಟ್ಟು ನಡೀತಿದ್ದಿ ಹಾಳಾಗಿ ನಿನ್ನ ಇಟ್ಟು ಬಂದು ಉಣುತಾರೋ ಹೋಳಿಗಿ 1 ಕಣ್ಣು ಮುಚ್ಚ್ಯಾಟವನಾಡುತಿದ್ದಿ ನೀ ಬಣ್ಣಗೆಟ್ಟು ಖರೆಯೆನುತಿದ್ದಿ ಸುಣ್ಣದ್ಹರಳ್ಹೊತ್ತ ಕೋಣ ಹೋಗಿ ಭರದಿ ಕಂಡು ತಣ್ಣೀರಿನೊಳು ಬಿದ್ದು ಸತ್ತ ಗಾದಿ2 ಘಟ ಇದು ಪುಸಿಯು ಬರಿದೆ ಗಾಳಿಯ ಮಟ್ಟ ವಸುಧೇಯೊಳಧಿಕೆಂದು ತೊಡು ನಿಷ್ಠೆ ನಮ್ಮ ಅಸಮ ಶ್ರೀರಾಮನ ಪಾದ್ಹಿಡಿ ಗಟ್ಟಿ 3
--------------
ರಾಮದಾಸರು
ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿಪ ವೇದಶಾಸ್ತ್ರ ಪಂಚಾಂಗವ ಓದಿಕೊಂಡು ಅನ್ಯರಿಗೆಬೋಧನೆಯ ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ 1 ಚಂಡಭಟರಾಗಿ ನಡೆದು ಕತ್ತಿ ಢಾಲು ಕೈಲಿ ಹಿಡಿದುಖಂಡ ತುಂಡ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 2 ಅಂಗಡಿ ಮುಂಗಟ್ಟನ್ಹೂಡಿ ವ್ಯಂಗ್ಯ ಮಾತುಗಳನ್ನಾಡಿಭಂಗ ಬಿದ್ದು ಗಳಿಸುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 3 ಕುಂಟೆ ತುದಿಗೆ ಕೊರಡು ಹಾಕಿ ಹೆಂಟೆ ಮಣ್ಣು ಸಮನು ಮಾಡಿರೆಂಟೆ ಹೊಡೆದು ಬೆಳೆಸುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 4 ಬೆಲ್ಲದಂತೆ ಮಾತಾನಾಡಿ ಎಲ್ಲರನ್ನು ಮರುಳು ಮಾಡಿಸುಳ್ಳು ಬೊಗಳಿ ತಿಂಬುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 5 ಕೊಟ್ಟಣವನು ಕುಟ್ಟಿಕೊಂಡು ಕಟ್ಟಿಗೆಯನು ಹೊತ್ತುಕೊಂಡುಕಷ್ಟ ಮಾಡಿ ಉಣ್ಣುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 6 ತಾಳ ದಂಡಿಗೆ ಶ್ರುತಿ ಮೇಳ ತಂಬೂರಿಯ ಹಿಡಿದುಕೊಂಡುಸೂಳೆಯಂತೆ ಕುಣಿಯುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 7 ಸಂನ್ಯಾಸಿ ಜಂಗಮ ಜೋಗಿ ಜಟ್ಟಿ ಮೊಂಡ ಬೈರಾಗಿನಾನಾ ವೇಷಗಳೆಲ್ಲ ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 8 ಹಳ್ಳದಲ್ಲಿ ಕುಳಿತುಕೊಂಡು ಕಲ್ಲು ದೊಣ್ಣೆ ಹಿಡಿದುಕೊಂಡುಕಳ್ಳತನವ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 9 ಅಂದಣ ಪಲ್ಲಕ್ಕಿ ಏರಿ ಮಂದಿ ಮಾರ್ಬಲ ಕೂಡಿಚಂದದಿಂದ ಮೆರೆಯುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ 10 ಉನ್ನತ ಕಾಗಿನೆಲೆಯಾದಿಕೇಶವನಾ ಧ್ಯಾನವನ್ನುಮನಮುಟ್ಟಿ ಮಾಡುವುದು ಮುಕ್ತಿಗಾಗಿ ಆನಂದಕಾಗಿ 11
--------------
ಕನಕದಾಸ
ಎಲ್ಲಿ ತಿಳಿವುತದೆ ನಿಮ್ಮಾಟದ ಸುಧ್ಯೇಯ ಧ್ರುವ ನಾಲ್ಕಾರು ಹದಿನೆಂಟು ಮಂದಿಯ ಕೇಳಿದೆ ಸಿಲುಕನೆಂದವರಾಡುದೆ ಮಲಕು ಎಂಬತ್ತು ನಾಲ್ಕು ಲಕ್ಷ ನೂ ಸೋಸಿದೆ ನಿಲುಕಿ ನಿನ್ನ ನೆಲೆ ನಿಜವು ದೋರದೆ 1 ನಾನಾ ಮತ ನಾನಾ ಮಾರ್ಗ ಶೋಧಿಸಿದೆ ಖೂನ ನಿನ್ನದು ತಿಳಿಯದೆ ನಾನು ನಾನೆಂಬವರಿಗೆ ಅನುಸರಿಸಿದೆ ನೀ ನಿಹ ಸ್ಥಳದ ಗಾಳಿಯು ಬೀಸದೆ 2 ಬೀಳದವರ ಕಾಲುಬಿದ್ದು ನಾ ಕೇಳಿದೆ ಸುಳಹು ನಿನ್ನದು ತೋರದೆ ತಲೆ ಕೆಳಗನೆ ಮಾಡಿ ತಪಸವ ಮಾಡಿದೆ ಒಲವು ನಿಮ್ಮದು ಎಂದಿಗೆ ಅಗದೆ 3 ಬಡದ ಬವಣೆ ಬಟ್ಟು ಹುಡುಕದಾ ಹುಡುಕಿದೆ ತುಡಕು ನಿಮ್ಮದು ತಿಳಿಯದೆ ಒಡನೆ ಎನ್ನೊಳು ಬಂದು ಅಡಕವ ಹರಿಸಿದೆ ಬಡವನಾಧಾರೆಂದು ಕೈ ಬಿಡದೆ 4 ಮನೋನ್ಮನವಾಗಿ ಕಂಗಳ ತೆರೆಸಿದೆ ಸ್ವಾನುಭವನೇ ಬೀರಿದೆ ದೀನಮಹಿಪತಿ ಮನೋಹರಣ ಮಾಡಿದೆ ಅನುದಿನ ಘನಸುಖದೊಳಗಿರಿಸಿದೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎಷ್ಟು ಜಾಣಳೆ ಸುಭದ್ರಾ ಎಷ್ಟು ಜಾಣಳೆ ನಷ್ಟ ಮಾತು ನಿನ್ನದುನಾವು ಅಷ್ಟು ತಾಳಿಕೊಂಡೆವಲ್ಲ ಪ. ಮಾನ್ಯ ಮಾನ್ಯರೊಳಗೆ ನೀನು ಕನಿ ರುಕ್ಮಿಣಿಗೆಧಿಕವಾಗಿಎನ್ನ ಹೀನ ನುಡಿದು ಹರಿಯ ನೀಬೆನ್ನ ಬಿದ್ದು ಬಂದುಕುಳಿತೆ1 ಫುಲ್ಲ ಮಲ್ಲಿಗಿ ಹಾಂಗಕುಳಿತೆ2 ಅಷ್ಟು ಜನರೊಳಗೆ ಎನಗೆ ನಿಷ್ಠುರವಾಡಿ ಬಹಳ ಕೃಷ್ಣರಾಯರ ಬದಿಲೆ ನೀನುಶ್ರೇಷ್ಠಳಾಗಿ ಬಂದು ಕುಳಿತಿ 3 ನೋಡ ಬಂದ ಜನರೊಳಗೆ ಆಡಿಕೊಂಡಿ ಅಕ್ಕನ ಬಹಳ ಮೂಡಲಗಿರಿವಾಸಗೆ ಮಾರಿ ಬಾಡಧಾಂಗೆ ತೋರಿಕೊಂಡಿ 4 ಮಾನ ಬಿಟ್ಟು ಮಂದಿಯೊಳಗೆ ನಾನಾ ಮಾತು ಎನಗೆ ಆಡದಿನೀನು ರಾಮೇಶನಂಫ್ರಿಯಲಿಮೌನ ದಿಂದ ಬಂದು ಕುಳಿತಿ 5
--------------
ಗಲಗಲಿಅವ್ವನವರು
ಏನ ಹೇಳಲಿ ನರಹರಿ ನಿನ್ನ ಮಹಿಮೆಯ ಪ. ನಿನ್ನ ಧ್ಯಾನ ಮಾಡೇನೆಂದರೆ ನಿಲ್ಲಗೊಡದು ಮನ ಅ.ಪ. ಸಚ್ಚಿದಾನಂದನ ಪಾದಾರವಿಂದವಮೆಚ್ಚಿ ಹಸನಾಗಿ ಇರು ಎಂದೆಡೆಹುಚ್ಚೆದ್ದ ಕಪಿಯಂತೆ ವಿಷಯವೆಂಬಡವಿಲಿಕಿಚ್ಚುಕಂಗೊಂಡು ಎನ್ನ ಕಾಡುತಿದೆ ರಂಗ 1 ವಾಸುದೇವನ ಗುಣಗಳ ಸ್ತುತಿಸದೆ ದು-ರಾಸೆಯೊಳು ಬಿದ್ದು ಕಾಡುತಿದೆಲೇಸಾಗಿ ನಾಯಿಬಾಲಕೆ ನಾರಾಯಣ ತೈಲಏಸುಬಾರಿ ತೀಡಿದರೆ ನೀಟಾಗುವುದೊ2 ಸಾಧು ಸಜ್ಜನರ ಸಂಗವ ಮಾಡಲೊಲ್ಲದೆಬಾಧಿಸುತಿದೆ ದುಷ್ಟಸಂಗದಿಂದಮಾಧವ ಭಕ್ತವತ್ಸಲ ಹಯವದನನೆನೀ ದಯಮಾಡಿ ನಿನ್ನಂತೆಮಾಡೆನ್ನ ಮನ 3
--------------
ವಾದಿರಾಜ
ಏನಂತ ನರನೆನ್ನಬೇಕೋ ಜಾನಕೀಶನ ಧ್ಯಾನ ಮನದೊಳಿಲ್ಲದವಗೆ ಪ ಸುಕೃತ ಒಡಗೂಡಿ ಮಾನವನಾದದ್ದು ಖೂನವಿನತಿಲ್ಲದೆ ಜ್ಞಾನಶೂನ್ಯನಾಗಿ ಶ್ವಾನನಂದದಿ ಕೂಗಿ ಹೀನಭವಕೆ ಬಿದ್ದು ನರಕಕ್ಹೋಗುವನಿಗೆ 1 ತಾನಾರೆಂಬ ವಿಚಾರವು ಇಲ್ಲದೆ ಏನೇನು ಸುಖವಿಲ್ಲದ್ಹೇಯಸಂಸಾರದ ಕಾನನದೊಳು ಬಿದ್ದು ಕುನ್ನಿಯಂದದಿ ಮಹ ಜಾಣರ ಜರೆಯುತ ಜವಗೀಡಾಗುವನಿಗೆ 2 ಹೇಸಿಪ್ರಪಂಚದ ವಾಸನ್ಹಿಡಿದು ಹಿಂದ ಕ್ಕೇಸೇಸು ಜನಮದಿ ಘಾಸಿಯಾದಂಥಾದ್ದು ಸೋಸಿಲಿಂ ತಿಳಕೊಂಡು ದಾಸಾನುದಾಸರ ದಾಸನಾಗದೆ ಕಾಲಪಾಶಕ್ಹೋಗುವನಿಗೆ 3 ಮಿಥ್ಯೆ ಕಾಣುವುದೆಲ್ಲ ನಿತ್ಯವಲ್ಲೆನ್ನುತ ಸತ್ಯವೃತ್ತಿ ತನ್ನ ಚಿತ್ತದೋಳ್ಬಲಿಸಲು ನಿತ್ಯ ಸುಖವನೀವ ಉತ್ತಮವಾದಂಥ ಹೊತ್ತನು ಕಳಕೊಂಡು ಮೃತ್ಯುವಶನಾಗುವಗೆ 4 ಸುಮನಸಕಲ್ಪದ್ರುಮ ತಂದೆ ಶ್ರೀರಾಮ ನಮಿತ ಚರಣ ಕಂಡು ನಮಿಸಿ ಪ್ರಾರಬ್ದವ ಕ್ರಮದಿ ಗೆಲಿದು ನಿಜ ವಿಮಲಪದ ಪಡೆವ ಸಮಯವನರಿಯದೆ ಯಮಲೋಕ ಸೇರುವಗೆ 5
--------------
ರಾಮದಾಸರು
ಏನಿದು ಎಲೆ ಮನ ಏನು ಇದು ನೆನೆಸಿದರೆದೆ ಝಲ್ಲೆನುವುದು ಪ ನಾನು ಯಾರೆಂಬುವ ಖೂನವ ತಿಳಿಯದೆ ಶ್ವಾನನಂದದಿ ಕೆಟ್ಟ ಹೀನಭವಕೆ ಬಿದ್ದು ಅ.ಪ ಏತಕ ಬಂದದ್ದೀ ಜನುಮಕ್ಕೆ ತಲೆಯೆತ್ತಿ ನೋಡದೆ ಕೂತಿಮುಂದಕೆ ನೀತಿಗೇಡಿ ಮಹಪಾತಕನು ಯಮ ದೂತರು ನಿಂತಾರೊ ಎಳಿಲಿಕ್ಕೆ 1 ಬೀಳಬೇಡೋ ಮಾಯದ ಜಾಲಕ್ಕೆ ಘಳಿಲನೆ ತಿಳಿತಿಳಿ ಸುಲಭದಿ ಸಮಯವು ಬಲಿಸಿ ಹರಿಯ ಧ್ಯಾನ ಕಾಲನ ನೂಕೋ 2 ಹುಟ್ಟಿಬಂದಿ ಶಿಷ್ಟಪದ ಪಡಿಲಿಕ್ಕೆ ಮರ್ತುಬಿಟ್ಟಿ ನಿಂತಿ ಬಿಟ್ಟಗಂಟ್ಹೊರಲಿಕ್ಕೆ ಭ್ರಷ್ಟಗುಣವ ಬಿಟ್ಟು ದಿಟ್ಟರಾಮನ ಗಟ್ಟ್ಯಾಗಿ ನಂಬಿ ಮುಟ್ಟು ಮುಕ್ತಿಪದಕೆ3
--------------
ರಾಮದಾಸರು
ಏನು ನಡತೆಯೋ ಏಕೆ ಕೆಡುವೆಯೋಮನುಜ ಜನ್ಮವನ್ನು ವ್ಯರ್ಥಮಾಡಿಬಿಟ್ಟೆ ಮೂರ್ಖ ಪ ಹಂಡತಿ ಕದಪನು ನೀನು ಸವರಿ ನೋಡುವಂತೆ ಮೊನ್ನೆಕೊಂಡ ಸಾಲಗ್ರಾಮವನ್ನು ಮುಟ್ಟಬಾರದೇ ತಡಹಬಾರದೇರಂಡೆಯರ ವಿಷಯವಾಗಿ ಕಾಲಿಗೆರಗಿದಂತೆ ತತ್ತ್ವಪಂಡಿತರ ಚರಣಕ್ಕೆ ಬೀಳಬಾರದೆ ಹೊರಳಬಾರದೆದುಂಡು ಮುತ್ತಿನ ಸರವ ಸತಿಗೆ ಕೊಂಡು ಹಾಕಿದಂತೆಪಿಂಡಾಂಡ ವಿವರಿಪರಿಗೆ ವಂದನೆ ಮಾಡಬಾರದೇಭಂಡ ಮಾತನು ನಾರಿ ಕಿವಿಯ ಖಂಡಿ ಯೊಳು ಪೇಳ್ದ ತೆರದಿಸುವಚನ ಸಾಧುಗಳೊಳು ಉಸುರಬಾರದೇ ಅರುಹಬಾರದೆ 1 ನನ್ನ ಮಕ್ಕಳೆಂದು ನೀನು ಬನ್ನಬಟ್ಟ ತೆರದಿ ಇತರಸಣ್ಣವರ ಮೇಲೆ ನೀನು ಕರಗಬಾರದೆ ತೋರಬಾರದೆಹೊನ್ನು ಹಣವು ಬಿದ್ದುಯಿರೆ ಹೆಂಟೆಯೆನುತಲಾಗ ಎರಡುಕಣ್ಣು ತೆರೆದು ದೃಷ್ಟಿಸಿ ನೋಡಬಾರದೆ ಕಾಣಬಾರದೆಮನ್ನಣೆ ಎಂಬುದನ್ನು ಸೂಕರನ ವಿಷೈ ಸಮನುಎನ್ನುತಲಿ ಚಿತ್ತದಲ್ಲಿ ಎಣಿಸಬಾರದೆ ಹತ್ತಬಾರದೆಉನ್ನತದ ಜೀವರಾಶಿ ಎಲ್ಲ ಒಬ್ಬ ಶಿವನು ಎಂದುಭಿನ್ನ ಕಳೆದು ಆತ್ಮ ಸುಖದಿ ಮುಳುಗಬಾರದೆ ಬೆಳಗಬಾರದೆ 2 ನಾನಾ ಜನ್ಮ ಜನ್ಮ ತಿರುಗಿ ನರನ ಜನುಮ ಬಂದುನಾನಾರೋ ಎಂದು ನಿನ್ನ ತಿಳಿಯಬಾರದೆ ಅರಿಯಬಾರದೆಜ್ಞಾನಿಗಳ ಮುಖಗಳಿಂದ ನಿನ್ನ ಒಳಗೆ ನಿನ್ನ ಕಂಡುನಾನೆ ಬ್ರಹ್ಮವೆಂದು ನಿಜವ ಕಾಣಬಾರದೆ ಕೂಡಬಾರದೆನಾನಾಧ್ವನಿಯು ನಾನಾಕಳೆಯು ದೇಹದೊಳು ತೋರುತಿರಲುಆನೆಯಂತೆ ನೀನು ಈಗ ತೊನೆಯಬಾರದೆ ತೂಗಬಾರದೆತಾನಾದ ಚಿದಾನಂದ ಗುರುವು ತಾನೆ ತಾನೆಯಾಗಿನಾನು ನೀನು ಎಂಬುದನ್ನು ತಿಳಿಯಬಾರದೆ ಕಳೆಯಬಾರದೆ 3
--------------
ಚಿದಾನಂದ ಅವಧೂತರು
ಏನು ಪವಮಾನಿ | ಏನು ಪವಮಾನಿ | ಈ ನಿಧಿಯಲಿ ಬಂದು ನಿಂದ ಕಾರಣ | ಮಾಣದೆ ಪೇಳು ನಿ | ದಾನದಿಂದಲಿ | ಮಾನಸದಲಿ | ದಾನವಾರಿಯ | ಧ್ಯಾನ ಮಾಡುವ ಜಾಣ ಜಗದ ಪ್ರಾಣ ಸುಂದರಾ | ನಾನಾ ಮಹಿಮಾ ಗುರುವೆ ಪ ಕೇಸರಿನಂದನ ಪಾಶವಿನಾಶ ನಿರ್ದೋಷ | ಭಾರತೀಶ ಈಶಾ | ಶೇಷಾದ್ಯರಿಗುಪದೇಶದ ಕರ್ತಾ | ಲೇಸು ಸದ್ಗುಣಗಣ ಕೋಶ ಸರಸಿಜಾಸನ ಪದವಿಗೆ ಸೇರುವಾತಾ || ದೇಶದೊಳು ಬಲುಭೂಷಣ ಪಾಕಶಾಸನ ಶರದ ಶರೀರ | ದಾಶರಥಿ ಪಾದಾಸರವಿಡಿ | ದೇಸು ಬಗೆಯಲಿ | ಮೋಸ ಪೋಗದಾಯಾಸಬಡದಲೆ | ಮೀಸಲ ಮನ ಸೂಸು ವನರಾಸಿ ಲಂಘಿಸಿ 1 ಪರಿಸರ ಪೋಗಲಾಸಮಯದಲ್ಲಿ | ಭಾಸುರ ಲಂಕೆ | ಯ ಶೋಧಿಸಿದನಾ ಗೋ | ಸಾಸಿರವಿತ್ತು ಕೂಸಿನಂದದಲಿ || ಭಾಷಿಯನಾಡಿ ಪದ್ಮಾಸನಿಗೆ ಸಂ | ಸವರಿ ಫಲ ಸವಿದು ಖಳನ ನಗುತ | ನಾಶಗೊಳಿಸಿದ ಸಮರ್ಥನೆ 2 ಹಿಂದೆ ಪ್ರಳಯದಲ್ಲಿಂದಿರೇಶನು ಸುರ್ವೃಂದ ಉದರದೊಳು | ಪೊಂದಿಟ್ಟುಕೊಂಡು ಆಗ | ಅಂದು ನೀನೊಬ್ಬನೇ ಮಂದನಾಗದೆ ನಯದಿಂದಲಿ ಎಚ್ಚತ್ತು | ಪೊಂದಿಕೊಂಡು ಇದ್ದೆ | ಇಂದು ಕದನದೊಳು ಇಂದ್ರಜಿತನು ಕರದಿಂದ ಸೆಳೆದÀ ಶರ | ದಿಂದಲಿ ಸಿಗಿಬಿದ್ದು | ಬಂಧಿಸಿಕೊಂಡಂಜಿನಿಂದಂತೆ ಮೈದೆಂದಿಗಿಲ್ಲದಂತೆ ನಂದವ ತೋರಿದೆ ಇಂದು ಮೌಳಿಯ ಪೊಂದಿದದಶ | ಕಂಧರನ ಮೊಗ ಮುಂದೆ ಭಂಗಿಸಿ | ಬಂದು ಗುದ್ದಿಲಿನೊದ್ದನು ಅವನಿರೆ | ಮಂದಹಾಸದಲಿಂದ ನಗುತ 3 ಪುರವನುರುಹಿ ಅಸುರರ ಸದೆದು ತೀ | ವರದಿಂದ ಶರಧಿಯ ಮರುಳೆ ಹಾರಿ ಬಂ | ದುರವಣಿಯಿಂದ ಶ್ರೀ | ಹರಿ ಚರಣಕ್ಕೆರಗಿ ಪೊಡಮಟ್ಟು | ಕರವನೆ ಮುಗಿದು | ಚೂಡಾಮಣಿ ಇಡೆ ಮುಂದೆ ವಿವರಿಸಿದೆ | ರಿಪುಗಳಾ | ಗರದ ವಿಸ್ತಾರ | ಸುರರು ಭಾಪುರೆ ಎಂದಂಬರದಲಿವಾದ್ಯ | ಬೆರೆದಲ್ಲಿ ಮೊರೆಯಾಗಿ ಅರಮರೆಯಿಲ್ಲದೆ | ತರಿಸಿ ಮಾರ್ಗವಸರದಲಿ ವಿಸ್ತರಿಸಿ | ಧುರದೊಳಗರಿಗಳಿಂದಲಿ ಮರಣವಾದವರನ ಎಬ್ಬಿಸಿ 4 ಪಾತಾಳದೊಳು ಹತ್ತು ತಲೆಯವನಿರಲು ಕಾತುರದಿಂದ ಹೋ ಮಾತುರಕಾರ್ಚಿಸೆ | ಮಾತು ಮುಂಚದ ಮುನ್ನ ಭೀತಿ ಇಲ್ಲದೆ ಪೋಗಿ | ಪಾತಕನವಧಾನ | ದಾತಗೆ ದಿವ್ಯವರೂಥವೆಂದೆನಿಸಿ ವಿ| ಧೂತ ರಾವಣನ ವಿ | ಪಾತನ ಗೈಸಿದೆ | ಪ್ರೀತಿ ಬಡಿಸಿ ನಿಜಾರಾತಿ ವಿಭೀಷಣಗೆ ತಪ್ಪದೆ ಲಂಕಾ | ನಾಥನ ಮಾಡಿ ನೀ | ರಘುನಾಥನ ಯಡೆ ನೀ ತೆಗೆದುಂಡೆ | ಶ್ರೀ ತರುಣೇಶ ವಿಜಯವಿಠ್ಠಲನ ದೂತಾ ಹನುಮಾ 5
--------------
ವಿಜಯದಾಸ