ಒಟ್ಟು 162 ಕಡೆಗಳಲ್ಲಿ , 56 ದಾಸರು , 127 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವೆ ವರಹಜೆ ತಟವಾಸಾ | ಗುರುವೇ ಪುರಿ ಮಂತ್ರಾಧೀಶಾ ಪ ಆರು ಮೊರೆ ಇಡುವೆನೊ | ವರಪದ ಪದುಮಕೆಕರುಣದಲೆಮನ | ಹರಿಯಲಿ ಇರಿಸೋ ಅ.ಪ. ಬಾಗಿ ಭಜಿಪೆ ಗುರುವೇ | ಎನ್ನಯರೋಗ ಹರಿಸು ಪ್ರಭುವೇ ||ರಾಘವೇಂದ್ರ ದುರಿತೌಘ ವಿದೂರನೆ |ಭೋಗಿ ಶಯನ ಪದ | ರಾಗದಿ ಭಜಿಸುವ 1 ಭೂತ ಪ್ರೇತ ಬಾಧೇ | ಬಿಡಿಸುವಖ್ಯಾತಿ ನಿಮ್ಮದು ತಿಳಿದೇ ||ದೂತರೆನಿಪ ಜನ | ಆತುನಿಮ್ಮ ಪದ |ಪ್ರೀತಿ ಸೇವೆಯಲಿ | ಕಾತುರರಿಹರೋ 2 ಯೋನಿ ಬರಲೇನು ಅಂಜೆನೂ 3 ಪರಿಮಳಾರ್ಯರೆಂದೂ | ನಿಮ್ಮಯಬಿರಿದು ಕೇಳಿ ಬಂದೂ ||ಮೊರೆಯ ನಿಡುವೆ ತವ | ಚರಣಾಂಬುರುಹಕೆ |ಅರಿವ ನೀಯೊ ತವ | ಪರಿಮಳ ಸೊಬಗನು 4 ಪಾದ ಬಿಸಜ ||ವರ ಸುಹೃದ್ಗ ಗುರು | ಗೋವಿಂದ ವಿಠಲನಚರಣ ಸರೋಜವ | ನಿರುತ ಭಜಿಪ ಗುರು 5
--------------
ಗುರುಗೋವಿಂದವಿಠಲರು
ಗುರುವೇ ರಾಘವೇಂದ್ರ ಪ ಗುರುವೆ ಆಶ್ರಿತ ಸುರತರುವೆನುತಲಿನಿನ್ನ ಚರಣ ನಂಬಿದವರಿಗೆ ಪರಮಾನುಗ್ರಹ ಮಾಳ್ಪ ಅ.ಪ ಮಂತ್ರಾಲಯದಲಿ ನೀನಿಂತುನಿರಂತರ ಸಂತರಿಷ್ಟಾರ್ಥವ ಸಲಿಸುತಲಿರುವೆ 1 ದೃಢ ಮಾಡಿ ಅವರ ಆದರಿಸುವೆ ಸತತ2 ಭವ ದುರಿತವ ತರಿವೆ ಗುರುರಾಮವಿಠಲನ ಶರಣರಗ್ರಣಿಯೆ 3
--------------
ಗುರುರಾಮವಿಠಲ
ಘಿಲ್ಲು ಘಿಲ್ಲೆನ್ನುತಲಿಘಮಕದಿಪಾಂಡವರುಫುಲ್ಲನಾಭನÀ ದಯಪಲ್ಲವನೋಡಿ ನಿಲ್ಲದಲೆ ಎಲ್ಲರೂ ಪ. ಸೂರಿ ಬಿಡವೋನೆ ದಯವನೆ1 ಸಲ್ಲು ಸಲ್ಲಿಗೆ ಲಕ್ಷ್ಮಿನಲ್ಲನ ಸ್ತುತಿಸುತಮಲ್ಲಿಗೆ ತುರುಬಿನಮಲ್ಲಿಗೆ ತುರುಬಿನ ಚಲುವಿಯರೆಲ್ಲ ಹೊರಡಲುಮಲ್ಲ ಮರ್ದನನ ಮನೆ ನೋಡ2 ಎಲ್ಲರು ಹೊರಡಲು ಹಲ್ಲಿ ಮಾತಾಡಿದವುಫುಲ್ಲನಾಭನ ದಯ ಚಲ್ಲುವುದೆನುತಲಿಫುಲ್ಲನಾಭನ ದಯ ಚಲ್ಲುವುದೆನುತಲಿವಾಲಿ ಗಂಟಿಟ್ಟ ನಕುಲನು3 ಅಂಗಳಕೆ ಬರುತಿರೆ ಮಂಗಳವಾದ್ಯಗಳಾದವುಹಂಗ ಹಾರಿದವು ಎಡಗಡೆಹಂಗ ಹಾರಿದವು ಎಡಗಡೆ ರಂಗಯ್ಯಆಲಿಂಗನವ ಕೊಡುವೋನು ನಿಜವೆಂದು 4 ತೇರಿನ ಬೀದಿಯ ದ್ವಾರದಿ ಬರುತಿರೆಕಾಗೆ ಹಾರಿದವು ಬಲಗಡೆ ಕಾಗೆ ಹಾರಿದವು ಬಲಗಡೆ ರುಕ್ಮಿಣಿಸೂರಿ ಬಿಡುವಳು ದಯವನ್ನೆ5 ರೂಢಿಗೊಡೆಯನ ಕೈಲಿ ನೀಡಿ ಮಂತ್ರಾಕ್ಷತೆನೋಡುವರು ದ್ವಿಜರು ದಯದಿಂದ ನೋಡುವರು ದ್ವಿಜರು ದಯದಿಂದ ಸತ್ಯಭಾಮಮಾಡುವಳು ಪರಮ ಕರುಣವ 6 ಅಕ್ಕಿ ತೆಂಗಿನಕಾಯಿ ಚಿಕ್ಕ ನಿಂಬೆ ಹಣ್ಣುಅಚ್ಚ ಮಲ್ಲಿಗೆ ಇದುರಿಗೆಅಚ್ಚ ಮಲ್ಲಿಗೆ ಇದುರಿಗೆ ರಮಿಯರಸುನಕ್ಕು ನುಡಿವನು ನಮಕೂಡ 7
--------------
ಗಲಗಲಿಅವ್ವನವರು
ಚಂದ್ರಹಾಸನ ಕಥೆ ಸುಜನ ತ್ರೈಭುವನೋದ್ಧಾರ ಕಾರುಣ್ಯನಿಧಿ ಹೆಳವನಕಟ್ಟೆರಂಗಯ್ಯ ನಾರಾಯಣ ಶರಣೆಂಬೆ 1 ಭಕ್ತರ ಭಾಗ್ಯನಿಧಿಯೆ ನುಡಿಸಯ್ಯ ಎನ್ನ ಜಿಹ್ವೆಯಲಿ 2 ಅಜಹರಿಸುರ ವಂದಿತನೆ ನಿಜವಾಗೊ ಮತಿಗೆ ಮಂಗಳವ 3 ಸಂಗೀತಲೋಲೆ ಸುಶೀಲೆ ಹಿಂಗದೆ ನೆಲಸೆನ್ನ ತಾಯೆ 4 ನಿತ್ಯಾನಂದ ರಜತಾಚಲವಾಸನೆ ಭಕ್ತವತ್ಸಲ ಭಾಳನೇತ್ರ ಮುಗಿದು ವಂದಿಸುವೆ 5 ಸೂರ್ಯ ಪತಿಯ ಚರಣವನ್ನು ನೆನೆವೆ ಮಂಗಳವಾಗಲೆಂದು 6 ಒರೆದಂಥ ಜೈಮಿನಿಯೊಳಗೆ ಮಾಡಿ ವರ್ಣಿಸುವೆ 7 ಸಂದೇಹ ಮಾಡುತ್ತಿರಲು ಪೇಳಿದ ಫಲುಗುಣಗೆ 8 ಮುಂದೊತ್ತಿ ರಥವ ಬೆಂಬತ್ತಿ ನಿಂದಿರಿಸಿದ ಚಂದ್ರಹಾಸ 9 ವೈಷ್ಣವಕುಲ ಶಿರೋರನ್ನ ಪರಾಕ್ರಮ ದಿಟ್ಟರಿಗಿದು ನೀತವೆಂದು 10 ನ್ನೊಡೆಯಗೆ ಪೇಳಿದರಾಗ ಕಡುಚಿಂತೆಯಲಿ ಪಾರ್ಥನಿದ್ದ 11 ದಿನಕರ ಪ್ರತಿಬಿಂಬದಂತೆ ವನಜನಾಭ ಕೃಷ್ಣ ಶರಣೆನ್ನುತ ಸುರಮುನಿ ಇಳಿದಂಬರದಿಂದ12 ಉಟ್ಟಿಹ ಕರದಿ ವೇಣುವನು ಶ್ರೇಷ್ಠÀ ಬಂದನು ಇವರೆಡೆಗೆ 13 ಆನಂದದಿಂದ ಕೇಳಿದರು 14 ಎಲ್ಲ ವೃತ್ತಾಂತವನರುಹಿ ಬಲ್ಲಿದ ತುರಗವ ಕಟ್ಟಿದ ಧೀರ ಅಲ್ಲಾರು ಎನುತ ಕೇಳಿದರು15 ಪ್ರಮುಖರಿಲ್ಲ್ಯಾರು ಪೇಳೆನುಲು ಸಮಯವಲ್ಲವು ಪೇಳೆನಲು 16 ವ್ಯಾಸಾಂಬರೀಷ ವಿಭೀಷಣಕ್ರೂರ ಪರಾಶರ ಧ್ರುವ ಪ್ರಹಲ್ಲಾದ ಈಸುಮಂದಿ ಭಕ್ತರಿಗಧಿಕನು ಚಂದ್ರಹಾಸನೆಂಬಾ ಹರಿಭಕ್ತ17 ಹೇಳಬೇಕೆನುತ ಮುನೀಶನೆಂದೆಂಬ ಕೇರಾಳದೇಶದ ರಾಜ್ಯವನು ಪ್ರಧಾನಿಯನು 18 ಭೂತಮೂಲದಲಿ ಪುಟ್ಟಿದನು ತಾತ ಕಾಲವಾಗಿ ಪೋದ 19 ಸಾಯಲಾದಳು ರಾಜಪತ್ನಿ ಸಿರಿ ಪರರಾಯರು ಬಂದು ಕಟ್ಟಿದರು20 ಬಾಲನಿರಲು ಆ ಶಿಶುವೆತ್ತಿ ನಡೆದಳು 21 ಕುಂತಳಪುರಕಾಗಿ ಬಂದು ಆ ಗ್ರಾಮದಲ್ಲಿ 22 ಎರೆದು ಪೋಷಣೆಯ ಮಾಡುವಳು ಮರುಗುತಿರ್ದಳು ಮನದೊಳಗೆ 23 ಹಾಸುವ ವಸ್ತ್ರಗಳಿಲ್ಲ ಬೇಸತ್ತು ಅಳಲುವಳೊಮ್ಮೆ 24 ನೋಡಿ ಹಿಗ್ಗುವಳು ಆಲಂಬದಲ್ಲಿರುತಿಹಳು 25 ಕಂಗಳ ಕುಡಿನೋಟವೆಸೆಯೆ ಮಂಗಳಗಾತ್ರದ ಮುದ್ದುಬಾಲಕನೆಲ್ಲರಂಗಳ- ದೊಳಗಾಡುತಿಹನು 26 ಪರಪುಟ್ಟನಾದುದ ಕಂಡು ಮಡಿಯ ಪೊದಿಸುವರು 27 ಮಾಗಾಯಿ ಮುರವಿಟ್ಟು ಮನ್ನಿಸಿ ಕೆನೆಮೊಸ- ರೋಗರವನ್ನು ಉಣಿಸುವರು ರಾಗಗಾನದಲಿ ಪಾಡುವರು 28 ಎಣ್ಣೂರಿಗೆಯನು ಕೊಡಿಸುವರು ಕೇರಿ ಕೇರಿಗಳೊಳು ಕೊಡುವರೆಲ್ಲರ ಕಾರುಣ್ಯದ ಕಂದನಾಗಿ29 ತಮ್ಮಾಲಯದೊಳು ಕರೆದೊಯ್ದು ಮಾಲೆಯನವಗೆ ಹಾಕುವರು 30 ಮಾವಿನ ಫಲಗಳನು ಮದನನಯ್ಯನ ಕಿಂಕರಗೆ 31 ಸಾಲಿಗ್ರಾಮ ಶಿಲೆಯ ಅಷ್ಟು ಜನರಿಗೆ ತೋರಿಸಿದ 32 ಪುಣ್ಯೋದಯದಿ ಸಾಲಿಗ್ರಾಮ ಶಿಲೆಯು ಲಕ್ಷ್ಮಿನಾರಾಯಣ ಮೂರುತಿಯ 33 ಕೂಡಿದ ಗೆಳೆಯರ ಕೂಡೆ ದೌಡೆಯೊಳಿಟ್ಟು ಕೊಂಡಿಹನು 34 ಮಂಡೆಗಳನು ತಗ್ಗಿಸುವನು 35 ಬೆಚ್ಚುವನಪಹರಿಸುವರೆನುತ ಬಹು ಎಚ್ಚೆತ್ತು ಪಿಡಿದಾಡುವನು ಬಾಯೊಳಗಿಡುವ 36 ಮಂದಿರದಲಿ ವಿಪ್ರರಿಗೆ ಆ- ಬಂದರು ಬುಧಜನರೆಲ್ಲ 37 ಶ್ರೇಷ್ಠರೆಲ್ಲರ ಕುಳ್ಳಿರಿಸಿ 38 ಮಂತ್ರಾಕ್ಷತೆಯನು ಮಂತ್ರಿಗಿತ್ತು ಲಕ್ಷಣವನ್ನೆ ನೋಡಿದರು 39
--------------
ಹೆಳವನಕಟ್ಟೆ ಗಿರಿಯಮ್ಮ
ಚಾರು ಚರಣವ ಸಾರಿದೆ ಶರಣ ಮಂದಾರ ಕರುಣವ ಬೀರಿ ಭವವನಧಿ ತಾರಿಸು ತವಕದಿ ಸೂರಿ ಸುಧೀಂದ್ರ ಕುಮಾರ ಉದಾರ ಪ ಪಾದ ವನರುಹ ಧ್ಯಾನ ಪ್ರಣವನ ಸ್ತವನ ಅರ್ಚನೆ ಮಾಳ್ಪ ನಾನಾ ಜನರ ವಾಂಛಿತವೀವಗುಣ ಪೂರ್ಣ ಜ್ಞಾನ ಧನಪ ಪಾಲಿಸೆನಗೀಕ್ಷಣ ನಿನ್ನಾಧೀನ ಮನುಜನ ನೀ ಪ್ರತಿದಿನದಿ ದಣಿಸುವುದು ಘನವೆ ಗುರುವೆ ಪಾವನತರ ಚರಿತ 1 ಪಾದ ಕೀಲಾಲಜ ಮಧುಪಾ ಬಾಲಕನ ಬಿನ್ನಪವ ಲಾಲಿಸೋ ಮುನಿಪ ತಾಳಲಾರೆನೊ ತಾಪತ್ರಯದ ಸಂತಾಪ ಕೇಳೋವಿಮಲಜ್ಞಾನ ಶೀಲ ಸ್ವರೂಪ ಭೂಲಲನಾಧವ ಕೋಲನಂದನಾ ಕೂಲಗವರ ಮಂತ್ರಾಲಯ ನಿಲಯ 2 ಕಲಿಕಲ್ಮಷವಿದೂರ ಕುಜನ ಕುಠರಾ ನಳಿನಾಕ್ಷ ವಿಮಲ ಶ್ರೀ ತುಲಸಿಯ ಹಾರ ಗಳ ಸುಶೋಭಿತ ಕಮಂಡಲ ದಂಡಧರಾ ಜಲಧಿ ವಿಹಾರಾ ಸುಲಲಿತ ಕರುಣಾಂಬುಧಿಯೆ ಜಗನ್ನಾಥ ವಿ ಠಲನೊಲಿಮೆಯ ಪಡೆದಿಳೆಯೊಳು ಮೆರೆದಾ 3
--------------
ಜಗನ್ನಾಥದಾಸರು
ಜ್ಞಾನದ ನಡಿಬ್ಯಾರೆ ತತ್ವಜ್ಞಾನದ ನಡಿ ಬ್ಯಾರೆ ಧ್ರುವ ದೇಹದಂಡನೆ ಮಾಡಿದರೇನು ಬಾಹ್ಯಾರಂಜನೆ ದೋರಿದರೇನು 1 ಶಬ್ದ ಜ್ಞಾನ ಸೂರಾಡಿದರೇನು ಲಭ್ದಾ ಲಬ್ಧೇಲಾಡಿದರೇನು 2 ರಿದ್ದಿ ಸಿದ್ದಿಯ ದೋರಿದರೇನು ಗೆದ್ದು ಮಂತ್ರಾಂತ್ರಸೋಲಿಪರೇನು 3 ಗೀರ್ವಾಣ ಆಡಿದರೇನು ಭೂತ ಭವಿಷ್ಯ ಹೇಳಾಡಿದರೇನು 4 ವ್ರತ ತಪ ತೀರ್ಥಾಶ್ರೈಸಿದರೇನು ಕೃತ ಕೋಟ್ಯಜ್ಞಾವ ಮಾಡಿದರೇನು 5 ಯೋಗಾಯೋಗಾಚರಿಸಿದರೇನು ಭೋಗ ತ್ಯಾಗ ಮಾಡಿದರೇನು6 ಏನು ಸಾಧನೆ ಮಾಡಿದಫಲವೇನು ಖೂನ ದೋರದೆ ಮಹಿಪತಿಗುರುತಾನು7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತುಂಗೆ ಮಂಗಳ ತರಂಗೆ | ಕರುಣಾಂತರಂಗೆ ರಂಗನಾಥನ ಪದಭೃಂಗೆ ಪ. ಅಂಗಜಪಿತನ ಅಂಗದಿ ಉದ್ಭವೆ ಭವ ಭಂಗ ಹರಿಸೆ ಅಂಗನೆ ಎನ್ನಂತರಂಗದಿ ಹರಿಪಾ- ದಂಗಳ ತೋರಿಸೆ ಶೃಂಗೆ ಶುಭಾಂಗೆ ಅ.ಪ. ಆದಿ ದೈತ್ಯನು ಖತಿಯಲಿ | ಮೇದಿನಿಯ ಸುತ್ತಿ ಒಯ್ದು ಪಾತಳ ಪುರದಲಿ ಮಾಧವ ಕರುಣದಿ ಆದಿವರಾಹನೆಂದೀ ಧರೆಯೊಳು ಬಂದು ಮೇದಿನಿ ಪೊರೆಯಲು ಶ್ರೀದನ ದಾಡೆಯಿಂ ನೀನುದುಭವಿಸಿದೆ 1 ಸ್ನಾನಪಾನದಿ ನರರನು | ಪಾವನಗೈವ ಮಾನಿನಿ ನಿನ್ನ ಕಂಡೆನು ನಾನಾ ದುಷ್ಕøತಗಳ ನೀನೋಡಿಸಿ ಮತ್ತೆ ನಾನು ಎಂಬುವ ನುಡಿ ನಾಲಗೆಗೀಯದೆ ಮಾನವ ಕಾಯೆ ಶ್ರೀನಾಥನ ಪದಧ್ಯಾನವನೀಯೆ 2 ಹರನ ಪೆಸರಿನ ಪುರದಲಿ | ಹರಿದು ಬಂದು ವರ ಶ್ರೀ ಕೂಡಲಿ ಸ್ಥಳದಲಿ ಭರದಿ ಭದ್ರೆಯ ಕೂಡಿ ಪರಿದಲ್ಲಿಂದಲಿ ಹರಿಹರ ಕ್ಷೇತ್ರವ ಬಳಸಿ ಮಂತ್ರಾಲಯ ಪುರಮಾರ್ಗದಿ ಸಾಗರವನೆ ಸೇರಿ ವರ ಗೋಪಾಲಕೃಷ್ಣವಿಠ್ಠಲನೆ ಧ್ಯಾನಿಪೆ 3
--------------
ಅಂಬಾಬಾಯಿ
ತೋರಮ್ಮಯ್ಯ ಯತಿಕುಲ ಸರ್ವಭೌಮನ್ನ ಪಮೂರವತಾರದ ಪುಣ್ಯರಾಶಿಯನು ತೂರಿಸುಜನರ ಪೊರೆವ ಉದಾರನ ಅ.ಪಅಸುರ ಬಾಲನಂತೆ ಹರಿಯಲಿ ಅಸಮ ಭಕ್ತಿಯಂತೆಅಸುರಾರಿಯ ನರಸಿಂಹರೂಪವನು ಅಸುರತಾತನಿಗೆ ತೋರ್ದನಂತೆ 1ಪರಮಹಂಸನಂತೆ ಪುರಂದರದಾಸರ ಗುರು ಅಂತೆಅರಸನ ರಕ್ಷಿಸಿ ಅರಸನಾಗಿ ಕ್ಷಣ ಉದ್ಗ್ರಂಥಗಳನು ರಚಿಸಿದನಂತೆ 2ಕಡುಬಡತನವಂತೆ ಸುದಾಮನ ಮರಸಿ ಬಿಟ್ಟಿತಂತೆಸಡಗರದಿಂದ ಸನ್ಯಾಸಿಯಾಗಿ ದರ್ಮಸಾಮ್ರಾಜ್ಯವನಾಳಿದನಂತೆ3ಕಾಮಧೇನುವಂತೆ ಕಲಿಯುಗ ಕಲ್ಪವೃಕ್ಷವಂತೆನೇಮದಿಂದ ಸೇವೆಯನು ಮಾಡಿದರೆ ಕಾ'ುತಾರ್ಥಗಳನೀಯ್ವನಂತೆ 4ಸಾಲವಪುರದಂತೆ ಭಕ್ತರಿಗೊಲಿದು ಬಂದನಂತೆಮೂಲಸ್ಥಾನ ಮಂತ್ರಾಲಯವಂತೆ ಭೂಪತಿ'ಠಲನ ತೋರುವನಂತೆ 5
--------------
ಭೂಪತಿ ವಿಠಲರು
ತ್ರಾಹಿತ್ರಾಹಿ ಮಂತ್ರಾಲಯನಿಲಯ ಪ ತ್ರಾಹಿತ್ರಾಹಿ ಮಂತ್ರಾಲಯ ಗುರುವೆ ಸೂತ್ರನಪಿತಕೃಪಾಪಾತ್ರ ನೀನಹುದೊ1 ಧ್ಯಾನ ಮೌನ ಸುಜ್ಞಾನವಿಲ್ಲದಿಹ ದೀನ ಜನರುದ್ಧಾರ ಗಂಭೀರ 2 ವಸುಧೆಯೊಳಗೆ ದಶಪ್ರಮತಿ ಸುಶಾಸ್ತ್ರವ ಪ್ರಸರಿಸಿ ತೋರಿದ ಅಸಮಮಹಿಮನೆ3 ಮೂಕ ಬಧಿರ ಅಂಧಾದಿಗಳ ಕುಂದುಗಳ ವ್ಯಾಕುಲ ಹರಿಪ ಕೃಪಾಕರ ಮೂರ್ತೇ 4 ಕರುಣಶರಧಿ ಸಿರಿರಮಣನ ಭಕುತಾಗ್ರಣಿ ಸುಗುಣಗಣಾಭರಣಕೆಣೆಯೆ 5 ಬೇಡಿದಿಷ್ಟವ ನೀಡಿ ಕಾಪಾಡುವೆ ಈಡುಗಾಣೆ ನಿನಗೀ ನಾಡೊಳು ಇನ್ನು 6 ಇಂದು ಮುಂದು ಎನ್ನ ಕುಂದುಗಳೆಣಿಸದೆ ಕಂದನೆಂದು ಎನ್ನ ಮುಂದಕೆ ಕರೆಯೊ 7 ಕ್ಷೋಣಿಯೊಳಗೆ ನಿನಗಾರೆಣೆಕಾಣೆನೊ ವೀಣೆವೆಂಕಟ ನೀ ಸಂಕಟ ಹರಿಸೊ 8 ಪಾಲಿಸಯ್ಯ ಪ್ರಹ್ಲಾದ ವ್ಯಾಸ ಭೂ ನಲ್ಲ ನೀನಹುದೋ ಬಾಹ್ಲೀಕ ಪ್ರಭುವೇ 9 ಬಗೆ ಬಗೆ ಪಾಪೌಘಗಳನು ಕಳೆಯುವ ರಘುಪತಿಕಿಂಕರ ಶ್ರೀ ರಾಘವೇಂದ್ರ 10 ಪವನಾಂತರಾತ್ಮ ಶ್ರೀ ವೇಂಕಟೇಶ ಪದ ಕುವಲಯಕೆ ನೀ ಕುಮುದಬಾಂಧವ 11 ಶಂಕುಕರ್ಣ ಲಂಕೇಶನನುಜ ಶ್ರೀರಾಮ- ಕಿಂಕರನಕಳಂಕಮೂರುತೇ12 ಮರುತಮತಾಬ್ಧಿಯ ಸಾರಸುಧೆಯನಿತ್ತೆ ಉರಗಾದ್ರಿವಾಸವಿಠಲನ ದೂತ13
--------------
ಉರಗಾದ್ರಿವಾಸವಿಠಲದಾಸರು
ದಯಮಾಡಿ ಬಾರೆನ್ನ ಗುರುವೇ ಮಂತ್ರಾಲಯ ಪ್ರಭುವೇ ಪ ಧರೆಯೊಳು ಸುಜನರಾ ಪೊರೆಯಲೋಸುಗ ನೀನು ವರ ಮಂತ್ರಾಲಯದೊಳು ಬಂದು ನಿಂದಿಹೆ ಗುರುವೇ 1 ಬಹು ವಿಧದಲಿ ನಿನ್ನ ಮಹಿಮೆಗಳ ಕೇಳೀ ದೇಶ ದೇಶದಿ ಜನರು ಬಂದು ಕಾದಿಹರೋ2 ಕರೆದಾರೆ ಬರುವಂಥ ಕರುಣಸಾಗರ ನೀನು ಪರಿ ಪರಿಸ್ತುತಿಸುವೆ ಕಾರುಣ್ಯ ಮೂರ್ತಿಯೆ 3 ಬೇಡಿದಳಾ ವರಗಳ ಕೊಡುವ ನೀನೆನುತಲಿ ಧೃಡ ಭಕುತಿಯೊಳು ನಿನ್ನಡಿಗಳ ಸೇವಿ ಸುವರೋ 4 ಹಗಲು ಇರುಳು ನಿನ್ನ ಬಿಡದೆ ಸ್ತುತಿಸುವಂತೆ ಮತಿಯ ಪಾಲಿಪುದು - ಶ್ರೀ ಗುರುರಾಘವೇಂದ್ರಾ 5
--------------
ರಾಧಾಬಾಯಿ
ದಾಸರಾಗಿರೊ ವೈಷ್ಣವ ದಾಸರಾಗಿರೊ ದಾಸರಾಗಿ ಬಯಲಾಸೆಯ ನೀಗಿ ರ- ಮೇಶನ ಗುಣವಾರಾಶಿಯೊಳಿರಿಸುವ ಪ. ಸುಂದರ ಮಾನಾನಂದತೀರ್ಥಮತ ಸಾಂದ್ರ ಸುಖಾಂಬುಧಿಮಿಂದ ಮಹಾತ್ಮರ 1 ದಿವ್ಯಲೋಕಜನ ಭವ್ಯೋಭಯವಿಧ ಕಾವ್ಯರಚನ ಲಾತವ್ಯಯತೀಂದ್ರರ 2 ಸೀತಾಪತಿ ರಘುನಾಥನ ಮನದೊಳ- ಗಾತು ಭಜಿಪ ಗಣನಾಥ ಜನಕನ 3 ಶ್ರೀ ಮಹೇಶ ವಟು ವಾಮನ ಪದಯುಗ ಸಾಮಜವಾಹನ 4 ಕಾಕರಟನದೊಳ ಭೀಕರ ಮತವ ನಿ- ರಾಕರಿಸಿರುವ ಸುಧಾಕರ ಮೂರ್ತಿಯ 5 ತಂತ್ರ ದೀಪಿಕಾ ಯಂತ್ರವ ರಚಿಸಿದ ಮಂತ್ರಾಲಯವರ ಮಂತ್ರದೇವತೆಯ 6 ಗೋಪಿನಾಥನೆ ಭೂಪನೆಂದು ಸಂ- ತಾಪವ ಬಿಡಿಸುವ ಶ್ರೀಪಾದರ ಪದ 7 ಮಂದಕಲಿಯ ಕಾಲಿಂದಲೊರಿಸಿದ ಪು- ರಂದರದಾಸರ ಹೊಂದಿ ಹರಿಯ ನಿಜ8 ಸುಜನ ಹೃದಂಬುಜ ಸುಖಕರ ದಿನಮಣಿ ವಿಜಯರಾಜ ಪದ ಭಜನೆಯ ಮಾಡುತ 9 ಭಂಗುರ ಭವಭಯ ಭಂಗದ ಸುಗುಣ ತರಂಗನ ಒಲಿಸಿದ ಮಂಗಳ ಮಹಿಮರ 10 ಹರಿಕಥಾಮೃತದ ತೆರೆಗಳೊಳಾಡುವ ಪರತರಸಾರವ ಸುರಿದ ಮಹಾತ್ಮರ 11 ಸಿಡುಕರ ಸಂಸ್ಕøತಿ ಕಡಲೊಳು ಮುಳುಗಲು ಬಿಡದಲೆ ಕೈಪಿಡಿದೊಡೆಯನ ತೋರ್ಪರ 12 ಅರಿಷಡ್ವರ್ಗವ ತರಿದು ಬಿಸುಟು ಶ್ರೀ- ವರನ ಕೃಪಾರಸ ಸುರಿಸಿದ ಧನ್ಯರ 13 ಮೂಕನ ವಾಗ್ಮಿಯ ಮಾಡಿ ಮುರಾರಿಗೆ ಸಾಕ ಕೊಟ್ಟಿ ದೀನಾಕರದಾಸರ 14 ಮಾತಿಗೆ ಕಂಸಾರಾತಿನಲಿಯೆ ಜಗ ನ್ನಾಥರೆಂ¨ ವಿಖ್ಯಾತಿ ಪಡೆದವರ 15 ತಾಪತ್ರಯಗಳ ತಪ್ಪಿಸಿ ವೆಂಕಟ ಭೂಪನ ಸದಯಾರೋಪಗೈದವರು 16
--------------
ತುಪಾಕಿ ವೆಂಕಟರಮಣಾಚಾರ್ಯ
ದೀನ ಬಂಧು ಕರುಣಾಸಿಂಧು ನೀನೆ ಬಂದು ರಕ್ಷಿಸೆಂದು ಪ. ನಿತ್ಯ ಮಂಗಳಾತ್ಮ ನಿಜ ಭೃತ್ಯಪೋಷಣ ಪರಾತ್ಮ ನಿತ್ಯ ಕಾರುಣ್ಯ ಚಿತ್ತಜನಯ್ಯನೆ ಈ ಜಗತ್ತಿನೊಳು ನಿನ್ನ ಪೋಲ್ಪ ಉತ್ತಮ ವಸ್ತುವ ಕಾಣೆ ಸತ್ಯಭಾಮಾ ವರ ನಿನ್ನಾಣೆ 1 ಸರಸಿಜಾಸನ ತಾನು ಪರಮ ಭಕುತಿಯಿಂದ ಸಿರಿವರ ನಿನ್ನ ನಾನಾ ಪರಿಯಿಂದಲಿ ಶರದೃತುವಿಲಿ ಬಹುಧರವಾಗಿ ಪೂಜಿಸುವ- ದರಿತು ಪಾಡುವೆನೀಗ ಕರುಣಿಸೆನ್ನ ನೀ ಬೇಗ 2 ಮತ್ಸಕೇತುಪಿತ ಭಕ್ತವತ್ಸಲ ವೆಂಕಟನಾಥ ತತ್ಸದೆಂಬೋ ಮಂತ್ರಾಗಮ್ಯ ಕುತ್ಸಿತಾಗಮ್ಯ ಉತ್ಸವ ಕಾಲದಲಿ ಸಿರಿವತ್ಸ ಬೆನ್ಹಾನಿನ್ನನು ನಿ- ರ್ಮತ್ಸರದಿ ನಂಬಿದೆ ಗೋವತ್ಸವೈದುವಂತೆ ಬಾರೊ 3
--------------
ತುಪಾಕಿ ವೆಂಕಟರಮಣಾಚಾರ್ಯ
ದೃಷ್ಟಿ ದೋಷವು ತಗಲಿತೆನ್ನ ಕಂದನಿಗೆ ಪ ದೃಷ್ಟಿಗೋಚರನಲ್ಲದಾ ದೇವ ರಕ್ಷಿಸಲು ಅ.ಪ ಸೇರು ಬೆಣ್ಣೆಯ ತಿಂದು ದೂರು ಕೇಳಿದೆನಿಂದು ಚಾರು ಮುಖಿಯರ ನೋಟ ಕ್ರೂರವೆಂದರಿ ಕಂದ ಈರೇಳು ಭುವನಗಳ ತಿಂದು ತೇಗುವ ದೇವ ಆರೋಗ್ಯಭಾಗ್ಯವನು ನಿನಗೆ ಕರುಣಿಸಲಿ 1 ಎಂದು ಕಾಣೆವು ಇಂಥಾ ಸುಂದರನ ನಾವೆಂದು ಮಂದಗಮನೆಯರ ನುಡಿ ಅಂದವಾಯಿತೆ ಕಂದ ಸಂದೇಹವಿಲ್ಲವರ ಶೃಂಗಾರಕೀ ಫಲವು ಜಲಧಿ ಮನುಮಥನ ಮನುಮಥನೆ ಗತಿ 2 ನೀರು ಮಂತ್ರಿಸಿದಾಯ್ತು ಬೂದಿ ಮಂತ್ರಿಸಿದಾಯ್ತು ನಾರಸಿಂಹಾದಿ ವರಮಂತ್ರಗಳ ಜಪವಾಯ್ತು ಭಾರಿ ಪುಸಿಯಾಯ್ತು ಜನನಿಯೊಲು ಹರಸಿದೀತನಲಿ ಮೀರಿಹನು ಯಂತ್ರ ಮಂತ್ರಾರ್ಥವೆಲ್ಲಾ ಪ್ರಸನ್ನ3
--------------
ವಿದ್ಯಾಪ್ರಸನ್ನತೀರ್ಥರು
ನಮಿಸುವೆ ಗುರುರಾಜ - ಸುತೇಜ ಪ ನಮಿಸುವೆ ಸುಜನರ ಕಲ್ಪಭೂಜ ಅ.ಪ ಶರಣ ಜನಾವನ ಕರುಣಾಭರಣ ಹರಿಚರಣಾರಾಧನ ಧುರೀಣ 1 ಮೂರಾವತಾರವನೆತ್ತಿದ ಧೀರ ಸಾರಿದವರ ಸಂತಾಪ ವಿದೂರ 2 ದ್ವಿಜಕುಲದೀಪ ಭವ್ಯ ಸ್ವರೂಪ ಅಜರಾಮರ ಸತ್ಕೀರ್ತಿ ಪ್ರತಾಪ 3 ಜ್ಞಾನವಿರಕ್ತಿ ನಿರ್ಮಲಭಕ್ತಿ ಮಾಣದೆ ಕೊಡುವುದು ಮನಸಿಗೆ ಶಾಂತಿ 4 ವರ ಮಂತ್ರಾಲಯ ಸುರುಚಿರ ನಿಲಯ ಕರಿಗಿರೀಶ ಶ್ರೀ ನರಹರಿಪ್ರಿಯ 5
--------------
ವರಾವಾಣಿರಾಮರಾಯದಾಸರು
ನರಕ ಎತ್ತಣದೋ ನರಕ ಎತ್ತಣದೋ ನರ ಕಂಠೀರವನೆಂದು ಸ್ಮರಿಸುವ ಜನರಿಗೆ ಪ ಸ್ನಾನ ಮಾಡುವುದೇಕೆ ಧ್ಯಾನಗೈಯುವುದೇಕೆ ದಾನ ಧರ್ಮಂಗಳು ಮಾಡಲೇಕೆ ಶ್ರೀ ನಾರಾಯಣನೆಂದು ಆವಾಗಲೂ ಜಿಹ್ವೆ ತ್ರಾಣದಲಿ ಬಿಡದೆ ಎಣಿಸುವ ಜನರಿಗೆ1 ತೀರ್ಥ ಮೀಯುವದೇಕೆ ಯಾತ್ರೆ ಚರಿಪದೇಕೆ ಸ್ತೋತ್ರ ಮಂತ್ರಾದಿಗಳು ಪಠಿಸಲೇಕೆ ಚಿತ್ರಮಹಿಮ ನೀಲಗಾತ್ರನ್ನ ಚರಿತೆ ಕಾ ಲತ್ರಯ ಬಿಡದೆ ಉಚ್ಚರಿಸುವ ಜನರಿಗೆ 2 ದೀಪ ಧೂಪಗಳೇಕೆ ನಾನಾ ಪರಿಯಲ್ಲಿ ಸೋಪಸ್ಕರದ ಎಡೆ ಇಡಲೇತಕೆ ಅಪಾರ ಮಹಿಮ ಅನಾಥರೊಡೆಯ ರಂಗ ಶ್ರೀಪತಿ ಎಂದೀಗ ಸ್ಮರಿಸುವ ಜನರಿಗೆ 3 ಭೂತದಯಗಳೇಕೆ ನೀತಿ ಎಂಬುದು ಏಕೆ ಜಾತವೇದಸನಲ್ಲಿ ಕಳವಳವೇಕೆ ಪಿನಾಕಿ ಸಖನೆಂದು ಮಾತು ಮಾತಿಗೆ ನೆನೆದು ಸುಖಿಸುವ ಜನರಿಗೆ 4 ಏನೇನು ಕರ್ಮದಾಚರಣೆ ಮಾಡುವದೇಕೆ ಭಾನು ಉದಯವಿಡಿದು ತೊಳಲಲೇಕೆ ದೀನನಾಗಿ ದಾತಾ ವಿಜಯವಿಠ್ಠಲ ಹರಿಯ ಮಾನಸದಲಿ ಧ್ಯಾನ ಮಾಡುವ ಜನರಿಗೆ 5
--------------
ವಿಜಯದಾಸ