ಒಟ್ಟು 167 ಕಡೆಗಳಲ್ಲಿ , 48 ದಾಸರು , 146 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೋಲು ಕೋಲೆನ್ನ ಕೋಲೆ ಪ ಅಂಜಾನೆ ಗಿರಿಯಲ್ಲಿ | ಸಂಜೀವರಾಯ ಸಹ ಕಂಜನಾಭನಿರುವ | ಅಂಜಿಕ್ಯಾತಕಮ್ಮ 1 ಮೂಡಲು ಗಿರಿವಾಸ | ನಾಡಿಗೊಡೆಯನೆಂದು ಪಾಡುವವರ ದೋಷ | ಓಡಿಸುವನಮ್ಮ 2 ವೆಂಕಟರಮಣನು | ಕಿಂಕರ ಜನಗಳ ಸಂಕಟಗಳ ಕಳೆವ | ಶಂಕೆ ಇಲ್ಲವಮ್ಮ 3 ಈಶ ಶ್ರೀನಿವಾಸ | ದಾಸ ಜನರ ಪೋಷ ರಾಶಿ ದೋಷ ಸುಟ್ಟು | ಲೇಸುಗೈವನಮ್ಮ 4 ಮತ್ಸ್ಯ ಮೂರುತಿ ತ | ನ್ನಿಚ್ಛೆಯಿಂದಲಿ ಬಲು ತುಚ್ಛ ದೈತ್ಯನನು | ಕೊಚ್ಚಿ ಬಿಸುಟನಮ್ಮ 5 ಅಮಿತ ಭಾರ ಪೊತ್ತು ಸುಮನಸರಿಗಮೃತ | ಮಮತೆಲಿತ್ತನಮ್ಮ 6 ಕ್ರೋಡಾಕಾರನಾಗಿ | ರೂಢಿಚೋರನಾದ ಹೇಡಿ ರಕ್ಕಸನ | ತೀಡಿ ಕೊಂದನಮ್ಮ 7 ಘೋರ ರೂಪ ಕೊಂಡು | ಕ್ರೂರ ರಕ್ಕಸನ ದೋರೆ ಕರುಳಕಿತ್ತು | ಪೋರನ ಪೊರೆದನಮ್ಮ 8 ಪುಟ್ಟ ಪೋರನಾಗಿ | ಬೆಟ್ಟದಂತೆ ಬೆಳೆದು ದಿಟ್ಟ ಬಲಿಯ ಶಿರವ | ಮೆಟ್ಟಿ ತುಳಿದನಮ್ಮ 9 ತಾತನ ನುಡಿ ಕೇಳಿ | ಕಾತರನಾಗದೆ ಮಾತೆಯ ಶಿರವನ್ನು | ತಾ ತರಿದಿಟ್ಟನಮ್ಮ 10 ಸೀತೆಯ ಬಿಡಿಸಲು | ಸೇತುವೆಯನು ಕಟ್ಟಿ ಭೂತನನ್ನು ಕೊಂದು | ಖ್ಯಾತಿಗೊಂಡನಮ್ಮ 11 ದ್ವಾರಕಪತಿ ತಾನು | ನಾರಿ ಪಾಂಚಾಲೆಯು ಕೋರಿದ ಕ್ಷಣದಲ್ಲಿ | ಸೀರೆಯ ನೇದನಮ್ಮ 12 ಚಿತ್ತಜನಯ್ಯನು | ಅತ್ತಿತ್ತ ಅಲೆಯುತ ಬೆತ್ತಲೆ ನಾರಿಯರ | ಮುತ್ತುಗೊಂಡನಮ್ಮ 13 ಜಲಜನಾಭನು ತಾ | ಕಲಿಗಾಲ ಕಡೆಯಲ್ಲಿ ಹಲವು ಪಾಪಿಗಳನು | ಫಲದಿ ಕೊಂದನಮ್ಮ 14 ಮುಟ್ಟಿ ಭಜಿಸುವರಿಗೆ | ಇಷ್ಟವಾದ ವರವಕೊಟ್ಟನು ರಂಗೇಶ | ವಿಠಲ ಕೇಳಮ್ಮ 15
--------------
ರಂಗೇಶವಿಠಲದಾಸರು
ಗೋವಿಂದೋ ನಾರಾಯಣ ಗೋವಿಂದೋ ನಾರಾಯಣ ಪ ವೇದಗಳು ಕದ್ದೊಯ್ದು ದೈತ್ಯ ಪಯೋಧಿಯೊಳಗಿಡಲು ಮತ್ಸ್ಯ ರೂಪದೊಳಂದು ವೇದಗಳ ತಂದನಮ್ಮ 1 ಬೆಟ್ಟವು ಮುಳುಗು ಸಮಯದಿ ನಮ್ಮರಂಗ ಹುಡಿಗಟ್ಟಿ ಸುರರರಕ್ಷಿಸಿದನಮ್ಮ 2 ಮಡಿದೊಯ್ಯಲು ಕ್ರೋಡತನ ತಾಳ್ದವನ ಛೇದಿಸಿ ದವಡೆಯೊಳ- ವನಿಯನೆತ್ತಿದನಮ್ಮ 3 ಕಶ್ಯಪನ ಸಿಗಿದನಮ್ಮ ಕೀರ್ತಿಯ ಪಡೆದನಮ್ಮ 4 ದಾನವ ಬೇಡಿದನು ಬಲಿಯಕೊಂದ ನಮ್ಮ 5 ನಿತ್ಯಾತ್ಮಕನಾಗಿ ಮೆರೆದ ನಮ್ಮ 6 ವಾರಿಧಿಯನು ಬಂಧಿಸಿದನಮ್ಮ ಮೀರಿದ ರಕ್ಕಸನಗಳ ನಿಳುಹಿ ನಾರಿ ಸೀತೆಯ ತಂದನಮ್ಮ 7 ಕಂಸನನು ಕೊಂದನಮ್ಮ ಗೋವುಗಳನು ಕಾಯ್ದನಮ್ಮ 8 ಬೌದ್ಧರೂಸವತಾಳ್ದನಮ್ಮ ಕೀರ್ತಿಯ ಪಡೆದ ನಮ್ಮ 9 ತುರುಗವ ನೇರುತ ಬಂದನಮ್ಮ ಕರುಣದಿಂದಲಿ ಕಾಯ್ದನಮ್ಮ 10 ಶ್ರೀ ಕೃಷ್ಣ ಮುಕುಂದನಮ್ಮ 11
--------------
ಕವಿ ಪರಮದೇವದಾಸರು
ಘನತರ ದೂರದೊಳು ಸಮಮತದೊಳು ವನಜನಾಭನತಿ ಮನಸಿಜಾನ್ವಿತನಾದ ವನಿತೆ ನೀ ದಾರೆಂದಾ ನಿನ್ನೊಳು ಮನಸೋತೆ ಕೇಳೆಂದಾ ಪ ಮತ್ಸ್ಯಗಂಗಳಲಿ ಸ್ವಚ್ಛ ಜಲವು ಯಾಕೆ ಮತ್ಸ್ಯಾವತಾರದ ಉತ್ಸವ ತೋರುವಿ ವನಿತೆ ನೀ ಬಾರೆಂದಾ 1 ಕೂರ್ಮ ಕಠೋರದ ಹೆರಳು ಭಂಗಾರವು ಕೂರ್ಮಾವತಾರದ ಮರ್ಮವ ತೋರುವಿ2 ಸರಸ ಮೌಕ್ತಿಕದ ಮುರವು ನಾಸದೊಳು ವರಹವತಾರದ ಕುರುಹು ತೋರುವಿ 3 ಹರಿಯ ಹಿಡಿಯ ತಂತಿ ಭರದಿ ಬಳುಕುತೆ ನರಸಿಂಹರೂಪದೆ ಸ್ಮರಣೆ ತೋರುವಿ 4 ವಾಮನ ಬಾಲೆ ನೀ ಸಾಮಜೆ ಗಮನೆ ವಾಮನ ರೂಪದ ಸೀಮಾ ತೋರುವಿ 5 ತಾಮಸಗಿಡಗಳ ಕಾಮಿಸಿ ತವಿಸುವಿ ರಾಮನ ಕಾಲದ ನೇಮವ ತೋರುವಿ 6 ಸ್ಮರಶರದಂದದಿ ಕರದಿ ಕೇತಕಿ ಪುಷ್ಪ ಪರಶುರಾಮನ ಅರುಹ ತೋರುವಿ 7 ಎದೆಯೊಳಚಲಸ್ತನ ಮುದದಿ ಧರಿಸಿರುವೆ ಮಾಧವ ತಾರದ ಸದವು ತೋರುವಿ 8 ಅಂಗಜ ಬಾಣದಿಂದಂಗದ ಪರವಿಲ್ಲ ಮಂಗಲ ಬೌದ್ಧನ ರಂಗವ ತೋರುವಿ 9 ಮನಸಿಜಾಶ್ವವೇರಿ ವನಿತೆ ಕಂಗೊಳಿಸುವಿ ಪರಿ ವನಪು ತೋರುವಿ 10 ಕುರುಹು ಅರಿದೆ ನಿನ್ನ ಬೆರದು ಸುಖಿಪರನ್ನೆ ನರಸಿಂಹವಿಠಲನರಸಿ ಬಂದಿರುವೇ 11
--------------
ನರಸಿಂಹವಿಠಲರು
ಚಿಂತೆಯನು ಪರಿಹರಿಸು ಚಂದ್ರವದನೇ ಪ ಚಂದ್ರಶೇಖರನಾಣೆ ಬಹುವಿಧದಿ ನೊಂದು ಭ್ರಾಂತನಾದೆತಾಯಿ ಅ.ಪ. ಹೆಣ್ಣಿಗೋಸುಗ ಪೋಗಿ ಹೆಣ್ಣಿನಾಶೆಯ ಮಾಡಿ ಮಣ್ಣುಪಾಲಾದೆನೇಬಣ್ಣಕ್ಕೆ ಮರುಳಾಗಿ ಬಾಣಕ್ಕೆ ಗುರಿಯಾಗಿಕಣ್ಣುಕಾಣದೆ ಕೂಪದೊಳು ಬಿದ್ದೆಅನ್ನಪೂರ್ಣೆಯೆ ನಿನ್ನ ಚರಣವನು ನಂಬಿದ ಶರಣನ ಪಾಲಿಸು ತಾಯಿ 1 ಮನನಿಲ್ಲದೆ ಮತ್ತೆ ಮನಬಂದತ್ಯೆರ ತಿರುಗಿ ಮನ್ಮಥನ ಬಯಸಿದೆ ಮಾನಹಾನಿಯಾಗಿ ಹೀನನಾದೆನು ನಾನು ಮನ್ಮಥನ ತಾಯೆಪ್ರಾಣ ಪೋಗೋದು ಲೇಸು ಪ್ರಾಣಿಗಳ ಮಧ್ಯದಿಮನೋಮಾನಿನೀ2 ಮತ್ಸ್ಯ ಮೂರುತಿ ತಂದೆವರದಗೋಪಾಲವಿಠ್ಠಲನ ಅಚ್ಚಸುಖ ಶರಧಿಯೊಳಿಪ್ಪ ಮೀನಾಕ್ಷಿಯೇ 3
--------------
ತಂದೆವರದಗೋಪಾಲವಿಠಲರು
ಛೀ ಛೀ ಮನವೆ ನಾಚದ ತನುವೆನೀಚವೃತ್ತಿಯ ಬಿಟ್ಟುನೆನೆ ಕಂಡ್ಯ ಹರಿಯ ಪ. ಕಿವಿಗೊಟ್ಟು ಗಂಟೆಯ ನಾದಕ್ಕೆ ಹುಲ್ಲೆಯನಿವಹ ಬಲೆಗೆ ಸಿಕ್ಕಿ ಬಿದ್ದುದನರಿಯನವ ಯೌವನೆಯರ ಕೋಕಿಲಾಲಾಪದಸವಿನುಡಿಗೇಳದಚ್ಯುತನ ಕಥೆ ಕೇಳೊ 1 ಪಣ್ಣೆಂದು ಭ್ರಮಿಸಿ ಪತಂಗ ದೀಪದಿ ಬಿದ್ದುಉಣ್ಣದುರಿವುದ ನೀ ಕಂಡು ಕಂಡರಿಯಬಣ್ಣದಬಲೆಯರ ರೂಪಿಗೆ ಮರುಳಾಗಿಮಣ್ಣ ತಿನ್ನದೆ ಮಾಧವನ್ನ ನೀ ಸ್ಮರಿಸೋ 2 ಗಾಣದ ತುದಿಯ ಮಾಂಸವ ಮೆಲ್ಲುವ ಮತ್ಸ್ಯಪ್ರಾಣವ ಬಿಡುವುದಂಗನೆಯರಧರವಮಾಣದೆ ಬಯಸಿ ಕೆಡದೆ ಶ್ರೀಮನ್ನಾರಾ-ಯಣ ನಾಮಾಮೃತಸವಿ ಎಲೆ ಮನವೆ 3 ಕರಿ ಕರಿಣಿಯ ಸ್ಪರುಶಕೆ ಪೋಗಿಕುಳಿಯ ಬಿದ್ದುದ ನೀ ಕಂಡು ಕಂಡರಿಯಲಲನೆಯರಾಲಿಂಗನಕೆÀಳೆಸದೆ ಸಿರಿ-ಲಲನೇಶನಂಘ್ರಿಯ ಅಪ್ಪಿಕೋ ಮನವೆ 4 ಅಳಿ ಪರಿಮಳಕ್ಕಾಗಿ ನಳಿನದೊಳಗೆ ಸಿಕ್ಕಿಅಳಿವಂತಂಗನೆಯ ಮೈಗಂಧವ ಬಯಸಿಬಳಲದೆ ವರದ ಶ್ರೀಕೃಷ್ಣನಂಘ್ರಿಯೊಳಿಪ್ಪತುಳಸಿಯನಾಘ್ರಾಣಿಸು ಕಂಡ್ಯಮನವೆ 5
--------------
ವ್ಯಾಸರಾಯರು
ಜಯ ಮಂಗಳಂ ಮಹಾ ಶುಭಮಂಗಳಂ ಶ್ರೀಯಕರಾನಂದ ಘನಚಿನ್ಮೂರ್ತಿಗೆ ಪ ಅನಿಮಿಷಾಕ್ಷಗ ಧರಮಹೀಗ ಸಂಭೋದ್ಬವಗ ಮುನಿಪಟು ಕ್ಷತ್ರಿ ಕುಲಸಂಹಾರಗ ಇನಕುಲೋದ್ಭವ ವಾಸುದೇವಶ್ರೀ ಬೌದ್ಧಗ ಘನತರದ ತುರಗ ಹರರಾವುತಂಗೆ 1 ಮರಮತ್ಸ್ಯ ಶ್ರೀಕಮಠ ಹಿರಣ್ಯಕ್ಷಮರ್ಧನಗೆ ಕೊರಳೊನಮೂಲಿ ವಾಮನದೇವಗೆ ಧರಿ ಭೂಸುರಗಿತ್ತು ಧಾಶರಥಿ ಶ್ರೀ ಹರಿಗೆ ಸಿರಿದಿಂಗಬರ ಕಲ್ಕಿ ಯವತಾರಗೆ 2 ಕೂರ್ಮ ವರಾಹನರಸಿಂಹಗೆ ಅಗವೈರಿಯನುಜ ಪರಶುರಾಮಗ ರುಘುನಾಥ ಕೃಷ್ಣ ಬೌದ್ದೇಶಕಲಿನಾಶಗ ಜಗದ್ಗುರು ಮಹಿಪತಿ ಸುತಪ್ರಿಯಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜೋ ಜೋ ಶ್ರೀಹರಿ ಮಲಗೊ ಜೋಗುಳ ಪಾಡಿ ಪಾಡಿ ತೂಗುವೆ ಮುದದಿಪ ಯೋಗಿಗಳರಸನೆ ಸಾಗರಶಯನನೆ ಭಾಗವತರಪ್ರಿಯ ಬಾಗಿ ಸ್ತುತಿಪರೊ ನಿನ್ನ ಅ.ಪ ಹರ ಬ್ರಹ್ಮಾದಿಗಳು ಕೂಡಿ ನಿನ್ನನು ಪರಿಪರಿ ವಿಧದಲಿ ಕೊಂಡಾಡಿ ಸುರರು ಗಂಧರ್ವರು ವರಋಷಿಗಳು ಕೂಡಿ ಪರಮ ಸಂಭ್ರಮದಿಂದ ಹರಿ ನಿನ್ನ ಸ್ತುತಿಪರು 1 ಗೋಕುಲದ ನಾರಿಯರು ಗೋವಿಂದ ನಿನಗೆ ಬೇಕಾದ ಪಾಲ್ಮೊಸರು ಜೋಕೆಯಿಂದಲಿ ಹೊಸ ಬೆಣ್ಣೆ ತಂದಿಹೆವೆಂದು ಅ- ನೇಕ ಬಗೆಯಲಿ ಸ್ತುತಿ ಮಾಡಿ ಬೇಡುತಲಿರುವರು 2 ದಿಟ್ಟ ಗೋಪಾಲ ಕಯ್ಯೊಳಗೊಂದು ಪುಟ್ಟ ಬಚ್ಚೆಯ ಪಿಡಿದು ಅಚ್ಚುತ ನಿನಗೀವೆವೆಂದು ಬಾಗಿಲೋಳ್ ನಿಂದು ಪುಟ್ಟ ಮಕ್ಕಳು ಬಾಯಿಬಿಟ್ಟು ಪ್ರಾರ್ಥಿಸುವರು 3 ಇನಕೋಟಿ ಪ್ರಭೆ ನಾಚಿಪ ಮುಖ ಕಮಲದ ದನುಜದಲ್ಲಣ ನಿನ್ನನು ಸನಕಾದಿಗಳು ಸ್ತುತಿಮಾಡಿ ಮೈ ಮರೆತರೊ ವನಿತೆಯರೋಕುಳಿಗಳನಾಡಿ ನರ್ತಿಸುವರೊ 4 ನಿದ್ರೆ ಮಾಡಿದರೆ ನೀನು ಈ ಜಗವೆಲ್ಲ ಉದ್ಧಾರವಾಗುವುದೇನು ನಿದ್ರೆ ಸಾಕೇಳೆಂದು ದುರ್ಗಾದೇವಿಯರು ಸ್ತುತಿಸೆ ಮುದ್ದು ಕೃಷ್ಣನೆ ಭಕ್ತರುದ್ಧಾರಕರ್ತನೆ5 ಹಯ ಮುಖ ಹರಿ ಮತ್ಸ್ಯನೆ ಕೂರ್ಮನೆ ವರಹ ಹಯಗ್ರೀವ ನರಸಿಂಹನೆ ಜಯವಟು ಭೃಗು ರಾಮಕೃಷ್ಣ ಬುದ್ಧನÉ ಕಲ್ಕಿ ಜಯ ನಾನಾ ರೂಪನÉ ಜಯವೆಂದು ಪೊಗಳ್ವರೊ6 ನವನೀತ ಚೋರನೆಂದು ನಾರಿಯರೆಲ್ಲ ನವವಿಧ ನುಡಿ ನುಡಿವರೊ ಭುವನ ಮೋಹನಸ್ವಾಮಿ ಸುಮನಸ ವಂದ್ಯನೆಕವಿ ಜನರಪ್ರಿಯ ಶ್ರೀ ಕಮಲನಾಭ ವಿಠ್ಠಲ 7
--------------
ನಿಡಗುರುಕಿ ಜೀವೂಬಾಯಿ
ಜ್ಞಾನಾನಂದ ಸ್ತುತಿ ಜ್ಞಾನಾನಂದ ಅನಂತರೂಪ - ಆನಮೋ ನಮೋ ತ್ವಂಪಾಲಯಮಾಂ ಪ. ಮತ್ಸ್ಯ ಸುರೂಪ ಮಂದರೋದ್ಧಾರ ಕಚ್ಛಪರೂಪ 1 ಭೂಧರಕೋಲ ನರಹರಿರೂಪ ಅದಿತೇಃ ಸೂೀನೋ - ಗಂಗಾಜನಕ 2 ಕೃನೃಪಾಹರಿ ರಾಮಪರಶ್ವಿ ಹನೂಮತೇವ್ಯ ರಮಸ್ತ ಸೀತಾ 3 ದೇವಕಿಪುತ್ರ ಪಾಂಡವಬಂಧೋ ದೇವ ಶ್ರೀಕೃಷ್ಣ ರುಕ್ಮಿಣೀನಾಥ 4 ದೈತ್ಯವಿಮೋಹ ದೇವಸುಬೋಧ ಬುಧ್ಧಸ್ವರೂಪ - ದೇಹಿಮೇ ಜ್ಞಾನಂ 5 ದರ್ಜೇನ - ಹಂತಾಧರ್ಮಸ್ವರೂಪ ಸಜ್ಜನಪಾಲ ದೇಹಿಮೇ ಭಕ್ತಿಂ 6 ಪದ್ಮಜಿತಾತ ಪ್ರಸನ್ನ ಶ್ರೀನಿವಾಸ ಪದ್ಮೇಶ ಶರಣಂ ಪಾಹಿ 7
--------------
ಪ್ರಸನ್ನ ಶ್ರೀನಿವಾಸದಾಸರು
ತನುಮನದಲ್ಲಿ ಯೋಚನೆ ಮಾಡೀ ಎಣಿಸಿ ಗುಣಿಸಿ ಮನಸಿಜನ್ನ ಜನಕನ ಲೀಲೆ ಪ ನರನಾರಾಯಣನೀತ ಕೃಷ್ಣ ಹರಿ ಹೃದ್ಭಾನು ಕಪಿಲನೀತ ಹರಿನಾರಾಯಣೇನೀತ ಯೋಗೀ ಶ್ವರ ತಾಪಸ ವೈಕುಂಠನೀತ ಹರನಸಖ ಸ್ವಧಾಮನೀತ ಕರುಣಿ ಸಾರ್ವಭೌಮನನೀತಾ 1 ಅಜಿತಯಜ್ಞನಾಮನೀತ ಅಜಗೆ ಪೇಳಿದ ಹಂಸನೀತ ಸುಜನಪಾಲ ವ್ಯಾಸ ವೀ ರಜ ಮಹಿದಾಸ ದತ್ತನೀತ ನಿಜ ಮಹಿಮ ಧನ್ವಂತ್ರಿ ಈತ ತ್ರಿಜಗವಳೆದುಪೇಂದ್ರನೀತ ಭಜಕರೊಡಿಯ ವಿಷಕ್ಸೇನ ಭುಜಗಶಾಯಿವಿಭುವೆ ಈತ 2 ಚಲುವ ಧರ್ಮಶೇತು ಈತ ಬಲುವುಳ್ಳ ಶಿಂಶುಮಾರನೀತ ಮತ್ಸ್ಯ ಕೂರ್ಮವರಹ ಲಲಿತನರಸಿಂಹನೀತ ಬಲಿಗೊಲಿದ ವಾಮನ್ನನೀತ ಕುಲವೈರಿ ರಘರಾಮನೀತ ಕಲಕಿ ರೂಪನಾದನೀತಾ 3 ವಾಸುದೇವ ಜಯಪತಿ ಸುಂ ದರ ಪ್ರದ್ಯುಮ್ನ ಈತ ನಿರಂತರ ಅನಿರುದ್ಧನೀತ ಚ ತುರ ವಿಂಶತಿ ಮೂರುತಿಯೇ ಈತ ಮೆರೆವ ಅಜಾದಿ ನಾಮಕನೀತ ವರ ಪಂಚಮೂರುತಿಯೇ ಈತಾ ಎರಡೈದು ಮೇಲೊಂದನೀತ 4 ಪರಿಪರಿ ರೂಪ ಉಳ್ಳನೀತ ಹೊರಗೆ ಒಳಗೆ ವ್ಯಾಪ್ತನಾಗಿ ಸರಿಸರಿ ಬಂದ ತೆರದಿ ಜಗವ ಸರಸದಲಿ ಆಡಿಪನೀತ ಸ್ಮರಣೆ ಮಾಡಲು ಸಕಲ ಇಷ್ಟವ ಕರೆÀದು ಕೊಡವನೀತ ಮರಣ ಜನನರಹಿತ ನೀತ 5
--------------
ವಿಜಯದಾಸ
ತುತಿಸಬಲ್ಲೆನೆ ನಾ ನಿನ್ನೆ ವೆಂಕಟರನ್ನ ಪ ಪತಿ ನಿನ್ನ ಬ್ರಹ್ಮ ಪಾ ರ್ವತಿ ಪತ್ಯಾದ್ಯಳವಡದುತುಳ ಮಹಿಮೆಗಳ ಅ.ಪ. ನಮಿಪ ಜನರ ಕಲ್ಪದ್ರುಮ ದುಷ್ಟದಾನವ ದಮನ ದಿವಿಜಕುಲೋತ್ತಮ ಲಕ್ಷ್ಮೀ ಪವನಾದಿ ಸುಮನಸಾರ್ಚಿತ ಪಾದಕಮಲ ಯುಗ್ಮನೆ ಅನು ಕಾಯ ಹೃ ತ್ತಿಮಿರ ಭಾಸ್ಕರ ಶ್ರೀ ಭೂರಮಣ ಸರ್ವಗ ಸದಾ ಗಮವೇದ್ಯ ವೇದವ್ಯಾಸ ಕಪಿಲ ದತ್ತ ಕುಮುದಾಪ್ತ ಕೋಟಿ ಭಾಸಾ ತದ್ಭಕ್ತರ ಸಮುದಾಯಕೀಯೋ ಲೇಸಾ ಆನತ ಬಂಧು ಸುಮುಖ ಸುಲಭನೆಂದಾ ನಮಿಪೆ ಎನ್ನರಸಾ 1 ಘನಮಹಿಮನೆ ವೃಂದಾವನವಾಸಿ ಸ್ವಪ್ರಯೋ ಜನವಿವರ್ಜಿತ ಗೋವರ್ಧನಧಾರಿ ಗೋ ಗೋಪೀ ಜನ ಮನೋರಂಜನ ಜನಕಜಾರಮಣ ಪೂ ತನಿ ಪ್ರಾಣಾಂತಕ ವೇದವಿನುತ ಶ್ರೀ ವತ್ಸಲಾಂ ಕೌಸ್ತುಭ ಮಣಿ ವೈಜಯಂತೀ ಸ ದ್ವನ ಮಾಲಾಂಚಿತ ಕಂಧರಾ ಸತ್ಕಲ್ಯಾಣ ಗುಣ ಜ್ಞಾನಾತ್ಮಕ ಶರೀರಾ ಸಂತತ ನಿಷ್ಕಿಂ ಚನ ಭಕ್ತಜನಮಂದಾರಾ ವಂದಿಸುವೆ ಮ ನ್ಮನದಲಿ ನಿಲಿಸೋ ಕರುಣಾ ಪಾರಾವಾರಾ 2 ಕವಿಭಿರೀಡಿತ ಪುಣ್ಯ ಶ್ರವಣ ಕೀರ್ತನ ಮತ್ಸ್ಯಾ ದ್ಯವತಾರಂತರ್ಯಾಮಿ ಪ್ರವಿವಿಕ್ತ ಭುಗ್ವಿಭು ಭುವನ ನಿಧಿಯ ಪೆತ್ತ ಸವನ ತ್ರಯಾಹ್ವಯ ಶಿವರೂಪಿ ಶಿವದ ಭೂರ್ಭೂವಸ್ವಸ್ಥ ಸ್ವಶ ಭಾ ರ್ಗವ ನಿನ್ನೊಳಿಪ್ಪ ದಾನವನ ಸಂಹರಿಸುವ ನೆವದಿಂದ ದಾಶರಥೀ ಸಂಗಡ ಯುದ್ಧ ತವಕದಿ ಮಾಡಿ ಭೀತಿ ಬಟ್ಟವನಂತೆ ಅವನಿಗೆ ತೋರ್ದ ರೀತಿ ವರ್ಣಿಸಲಿನ್ನು ಪವನಮುಖಾದ್ಯರಿಗವಶ ನಿನ್ನಯ ಖ್ಯಾತಿ3 ಗತಶೋಕ ಗಾಯಿತ್ರಿ ಪ್ರತಿಪಾದ್ಯ ತತ್ವಾಧಿ ಪತಿಗಳೆನಿಸುವ ದೇವತೆಗಳೊಳಗಿದ್ದು ಮಾ ರುತನಿಂದ ಒಡಗೂಡಿ ಪ್ರತಿದೇಹಗಳಲಿ ಯೋ ಗ್ಯತೆಯನರಿತು ಕರ್ಮಗತಿಗಳನೀವೆ ಸಾಂ ಪ್ರತ ಬೇಡಿಕೊಂಬೆ ಆನತರ ಸಂತೈಸೆಂದು ಪ್ರಥಮಾಂಗ ಪ್ರಿಯ ಸತ್ತಮ ಸೌಭಾಗ್ಯ ಸಂ ಭೃತಸಾರ ಸರ್ವೋತ್ತಮ ನೀನೆ ಪಾಂಡು ಸುತರಾದ ಧರ್ಮ ಭೀಮಾ ಪಾರ್ಥರ ಕಾಯ್ದೆ ಪ್ರತಿಗಾಣೆ ನಿನಗೆ ಸಂತತ ಪರಂಧಾಮಾ 4 ಕಲಿ ಮುಖ್ಯ ದೈತ್ಯ ಗಂಟಲಗಾಣ ಗುರುತಮ ಬಲಿಬಂಧಮೋಚಕ ಸುಲಭ ಚೆತ್ಸುಖದಾಯಿ ಫಲ ಚತುಷ್ಟಯನಾಮ ಫಲಸಾರ ಭೋಕ್ತø ಶಂ ಬಲನಾಗಿ ಭಕತರ ಸಲಹುವ ಕರುಣಿ ಶಂ ಫಲಿಪುರವಾಸಿ ಬಾಂಬೊಳೆಯ ಜನಕ ಲಕ್ಷ್ಮೀ ನಿಲಯ ನಿರ್ಗತ ದುರಿತಾ ಮನ್ಮನದ ಚಂ ಚಲವ ಬಿಡಿಸೋ ನಿರುತಾ ಬೇಡಿಕೊಂಬೆ ತಲೆ ಬಾಗಿ ಸರ್ವಗತಾ ನೀನಹುದೆಂದು ತಿಳಿಸೋ ತೀವ್ರದಿ ಮುಪ್ಪೊಳಲುರಿಗನ ತಾತಾ 5 ಉದಿತ ಭಾಸ್ಕರನಂತೆ ಸುದತೇರಿಂದೊಡಗೂಡಿ ಉದರ ನಾಮಕ ನೀನು ಉದರದೊಳಿದ್ದೆನ್ನ ಉದಕಗಳಿಗೆ ನಿತ್ಯಾಸ್ಪದನಾಗಿ ಜೀವರ ಹೃದಯದೊಳಿರುತಿಪ್ಪೆ ಸದಸದ್ವಿಲಕ್ಷಣಾ ವಿಧಿಭವ ಶಕ್ರಾದಿ ತ್ರ್ರಿದಶರೊಂದಿತ ಪಾದ ಬದಿಗನಾಗಿರಲು ಪಾಪ ಕರ್ಮಗಳು ಬಂ ದೊದಗುವುವೇನೋ ಶ್ರೀ ಪಾ ಬಿನ್ನೈಸುವೆ ಬುಧ ಜನರಂತಸ್ತಾಪಾ ಕಳೆದು ನಿತ್ಯ ಬೆದರದಂದದಲಿ ಮಾಳ್ಪುದು ದೋಷ ನಿರ್ಲೇಪಾ 6 ಪಣಿಗಣ್ಣ ಸ್ವರದಿಂದಾಗ್ರಣಿಯಾದ ದುಷ್ಟ ರಾ ವಣನ ಬಾಹುಬಲ ಗಣಿಸಿದೆ ನಿಶಿತ ಮಾ ರ್ಗಣದಿ ಸದೆದು ವಿಭೀಷಣಗೆ ನೀ ಲಂಕಾಪ ಟ್ಟಣ ಭೋಗ ತತ್ಕಾಲ ಉಣಲಿತ್ತು ಭಕ್ತಗೆ ಪ್ರಣತ ಕಾಮದನೆಂಬೋ ಗುಣ ನಿನ್ನಲ್ಲಿದ್ದ ಕಾ ರÀಣದಿ ಪ್ರಾರ್ಥಿಸುವೆ ನಿನ್ನಾ ದಾಸರೊಳು ಗಣಿಸು ನೀ ದಯದಿ ಎನ್ನಾ ತಪ್ಪುಗಳ ನೀ ನೆಣಿಸಲಾಗದು ಪ್ರಸಾನ್ನಾ ಪಾಲಕನೆ ಕುಂ ಭಿಣಿಸುರರನು ಕಾಯೊ ಕ್ಷಣಾ ಲಕ್ಷ್ಮನಣ್ಣಾ 7 ಬಿಸಜ ಸಂಭವನ ನಿರ್ಮಿಸಿ ನಾಭಿಕಮಲದಿ ಸಶರೀರದೊಳು ಸುಮನಸರ ಪಡೆದು ನಿನ್ನಾ ಪೆಸರಿಟ್ಟು ಅವರವರೊಶನಾದೋಪಾದಿ ತೋ ರಿಸಿದಿ ನೀ ಸ್ವಾತಂತ್ಯ ಅಸಮನೆಸಿಕೊಂಡು ಬಸಿರೊಳಗಿಟ್ಟು ಪೊಂಬಸರಾದಿ ಸುರರ ಪಾ ಲಿಸುವಿ ನೀ ಪ್ರತಿ ಕಲ್ಪದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ವಾಸಿಸುತ ರ ಕ್ಕಸರನಂಧಂತಮದಿ ದಣಿಸುತಿಪ್ಪ ಪ್ರಸವಿತ್ತ ನಾಮ ವಂದಿಸುವೆ ಪ್ರಮೋದೀ 8 ಆಪದ್ಭಾಂಧವ ಬಹುರೂಪಾ ರುಕ್ಮಿಣೀಶಾ ತಾಪಸ ಜನರ ಹೃತ್ತಾಪದರ ಧರ್ಮ ಸುಜನ ಲೋ ಕೋಪಕಾರಕ ಧರ್ಮ ವ್ಯೂಪ ಊಧ್ರ್ವಗ ನಿರ್ಗು ಣೋಪಾಸಕರ ಸಲಹಲೋಸುಗದಿ ಸ ಲ್ಲಾಪದಿ ಬಹ ಕಲಹಾ ಮನ್ನಿಸೋ ಭವಾ ಕೂಪಾರ ನಾವಿಕ ಭೂಪತಿ ವರಹಾ 9 ಕೂರ್ಮ ಕ್ರೋಡ ವಪುಷ ಹಿರಣ್ಯಕ ಶಿಪುವಿನ ಸೀಳ್ದ ಕಾಶ್ಯಪಿಯಾಚಿಕನೆ ದುಷ್ಟ ನೃಪರ ಸಂಹರಿಸಿದ ಕಪಿವರ ಪೂಜಿತ ದ್ರುಪದಾತ್ಮಜೆಯ ಕಾಯ್ದ ತ್ರಿಪುರಾರಿ ಕಲಿಮುಖ್ಯ ರುಪಟಳ ಬಿಡಿಸಿದ ಕೃಪಣವತ್ಸಲ ಕಲ್ಕಿ ಅಮಿತ ರೂಪಾತ್ಮಕ ಸುಫಲ ಚಿತ್ಸುಖ ಭರಿತಾ ತ್ರೈ ಲೋಕಕ್ಕೆ ಪ್ರಪಿತಾಮಹನೆ ನಿರುತಾ ಪ್ರಾರ್ಥಿಸುವೆ ನಿ ನ್ನಪರೋಕ್ಷವಿತ್ತು ಪಾಲಿಪುದೆಮ್ಮ ಸ್ವರತಾ 10 ವಟಪತ್ರಶಯನ ವೆಂಕಟಗಿರಿ ನಿಲಯ ನಿ ಷ್ಕುಟಿಲ ದುರ್ವಿಷಯ ಲಂಪಟವ ಸದೆದು ನಿನ್ನ ಭಟಜನರಿಗೆ ಧರ್ಮ ಘಟಕನಾಗುವೆ ನಿತ್ಯ ವಟುರೂಪಿ ಎಡಪಾದಂಗುಟದಿ ಅಬ್ಬಜಾಂಡ ಕಟಾಹ ಭೇದಿಸಿ ದೇವ ತಟನೀಯ ಪಡಿಯೋ ಧೂ ರ್ಜಟಿ ತಲೆಯೊಳು ಧರಿಸಿ ನಿನ್ನ ನಾಮ ಪರಿಸುತ್ತ ಸತಿಗೆರಸಿ ಕುಣಿದನೆಂದು ತ್ಕಟದಿ ಕೈಗಳ ಬಾರಿಸಿ ಜಗನ್ನಾಥ ವಿಠಲ ಸರ್ವೋತ್ತಮ ದಿಟನೆಂದುದ್ಫಟಸೀ11
--------------
ಜಗನ್ನಾಥದಾಸರು
ತೇಲಿದೆ ಅಯ್ಯಾ ತೇಲಿದೆ ಪ ತೇಲಿಬಾರದಂಥ ಸುಳಿಯ ಮಡುವುಮುಳುಗಿ ನೀಲಶಾಮನ ಪಾದಕಮಲಕರುಣದಿಂದ ಅ.ಪ ಪಾರಾವಾರಿಲ್ಲದ ಮಡುವು ಕಾಲು ಜಾರಿ ಬಿದ್ದಿದ್ದೆ ತಪ್ಪಿದಡವು ಬಲು ಮೇರೆದಪ್ಪಿದ ತೆರೆ ಸೆಳವು ಉಲಿ ದ್ಹಾರಿಬರುವ ಜಲಚರವು ಆಹ ಮೀರಿದಂಧಕಾರ ನೀರಿನ ಸುಳಿಯೊಳು ಘೋರಬಡುತಲಿರ್ದೆ ಮುಳುಮುಳುಗೇಳುತ 1 ತಂಡತಂಡದಿ ಒದಗುವ ಬಲು ಗಂಡಸುಳಿಯು ತಿರುಗುವ ಒಳ ಗೊಂಡ ಮತ್ಸ್ಯಮಕರಿಭಯವ ಆಹ ಕಂಡು ಕಾಣದೆ ಬಿದ್ದು ಗುಂಡಿಗೊಡೆದು ನಾನು ಬೆಂಡಾದೆ ಕಂಗೆಟ್ಟು ಮುಳುಮುಳುಗೇಳುತ 2 ಹಿಂದಕ್ಕೆ ಏನಾದದ್ದಾಯ್ತು ಶ್ರೀಶ ಮುಂದೆ ಎನ್ನಗೆ ಇಂಥ ಹೊತ್ತು ಈಶ ಎಂದೆಂದು ತರದಿರು ಮತ್ತು ಕೇಶ ಕಂದನ ಸನ್ಮಾರ್ಗಕ್ಹೊತ್ತು ಆಹ ಸಿಂಧುಶಯನ ಎನ್ನ ತಂದೆ ಶ್ರೀರಾಮ ನಿನ್ನ ಬಂಧುರಂಘ್ರಿಯ ಕೃಪೆಯಿಂದ ನಾ ಉಳಕೊಂಡೆ 3
--------------
ರಾಮದಾಸರು
ತೊರವಿ ನರಸಿಂಹನ ಸ್ತೋತ್ರ ನರಹರೀ | ಪಾಲಿಸೊ ಎನ್ನ | ನರಹರೀ ಪ ನರಹರೀ | ನಮಿಸೂವೆ ನಿನ್ನ | ಚಾರುಚರಣ ಕಮಲಕ್ಕೆ ಮುನ್ನ | ಅಹತೊರವಿ ಕ್ಷೇತ್ರದಲ್ಲಿ | ಪರಿಪರಿ ಭಕುತರಮೊರೆಯ ಕೇಳ್ಕರುಣದಿ | ವರವ ನೀಡುತಲಿಹ ಅ.ಪ. ಪೂರ್ವ ಸಾಲಿಗ್ರಾಮ ರೂಪ | ದಲ್ಲಿದೂರ್ವಾಸ ಪೂಜಿತ | ರೂಪ | ಇದ್ದುಓರ್ವ ಭಕ್ತನಿಗೆ ಸಲ್ಲಾಪ | ತೇಜಗೈವದ ಕೇಳ್ವದು ಅಪರೂಪ | ಅಹಊರ್ವಿಯೊಳ್ ಚಿಮ್ಮಲಗಿ | ಸರ್ವಾಧಿಕವು ಕ್ಷೇತ್ರಇರ್ವೆ ನಾನಲ್ಲೀಗ | ತರ್ವೋದು ತೊರವೀಗೆ 1 ಸೊಲ್ಲ ಲಾಲಿಸಿ ಗಾಢ ಭಕ್ತ | ಎದ್ದುಚೆಲ್ಲೀದ ವಾರ್ತೆ ಸರ್ವತ್ರ | ಜನರಲ್ಲಸ ಗೊಳದೆ ಮುಂದತ್ತ | ಹಸಿಹುಲ್ಲನು ತೆಂಕದಿಶಿಯಿತ್ತ | ಅಹಚೆಲ್ಲುತ ಪೋಗುತಿರೆ | ಜ್ವಲೀಸಿತದುಚಿಮ್ಮಲ್ಲಿಗಿ ಊರ್ಬಳಿ | ಒಳ್ಳೆ ಕೃಷ್ಣಾತೀರ 2 ಸ್ವಪ್ನ ಸೂಚಿತ ತಾಣ ಬಗೆದು | ನೋಡೆಅಪ್ಪ ನೃಹರಿ ಕಂಡನಂದು | ಭಕ್ತರಪ್ಪಿ ಆನಂದಾಶ್ರು ಬಿಂಧು | ಕೈಚಪ್ಪಾಳೆ ಬಡಿದುಘೇಯೆಂದು | ಆಹಅಪ್ಪಾರ ಮಹಿಮನ | ಗೊಪ್ಪಾದ ಘನಮೂರ್ತಿಉಪ್ಪರಿ ತಂದಿಡುತ | ದರ್ಪದಿ ನಿಂತರು 3 ಶಿರಿ ಹಾಗೂ ಪ್ರಹ್ಲಾದರಾಯ | ಯುಕ್ತಹಿರಣ್ಯಕನ ತನ್ನ ತೊಡೆಯ | ಮೇಲೆಇರಿಸಿ ಉದರ ಸೀಳ್ದ ಬಗೆಯ | ಕೇಳಿಕರುಳನು ಮಾಲೆಯ ಪರಿಯ | ಆಹಧರಿಸುತ್ತ ತೋರ್ದನು | ಹಿರಣ್ಯಕಶಿಪೂಜತರಳ ಭಕ್ತನ ತೆರ | ತರಳನರಿದಿಷ್ಟೆಂದು 4 ಶಿಷ್ಟ ಮತ್ಸ್ಯಾವತಾರ | ಯುಕ್ತಶ್ರೇಷ್ಠ ಪ್ರಭಾವಳಿಹಾರ | ಸುವಿಶಿಷ್ಟದಿ ನರ ಮೃಗಾಕಾರ | ನಾಗಿಅಷ್ಟವು ಭುಜಯುಕ್ತಾಕಾರ | ಆಹಶಿಷ್ಟ ಭಕ್ತರಿಂದ ಕಷ್ಟವಿಲ್ಲದೆ ತೆರಳಿಶ್ರೇಷ್ಠ ತೊರವಿಯಲ್ಲಿ ಇಷ್ಟನಾಗಿ ನಿಂದ 5 ಮುನ್ನಿದ್ದ ನೃಹರಿಯ ಶಿಲೆಯ | ಕೊಂಡುಚೆನ್ನ ತೀರ್ಥದಿ ನರಹರಿಯ | ಇಡಲುಕೃಷ್ಣೆಗೆ ಪೋಗುವ ಪರಿಯ | ಪೇಳೆಘನ್ನ ಮೂರ್ತಿಯ ಒಯ್ದ ಬಗೆಯ | ಆಹ ಇನ್ನು ಮುನ್ನು ಪೇಳ್ವ | ನನ್ನೆಯ ಜನರಿಹರು ಮನ್ನಿಸುತೀವಾರ್ತೆ ಚಿನ್ಮಯನ ಕೊಂಡಾಡಿ 6 ಗುಪ್ತಾವು ಗಂಗಾ ಸನ್ನಿಹಿತ | ತೀರ್ಥಉತ್ತಮ ದಿಂದಭಿಷೇಚಿತ | ನಾಗಿನಿತ್ಯವು ಪವಮಾನ ಸೂಕ್ತ | ಪಂಚಯುಕ್ತವು ಪೂಜಾದಿ ಕೃತ | ಆಹಭಕ್ತಿ ಪೂರ್ವಕವಾದ | ಉತ್ತಮ ಸೇವೆಯನಿತ್ಯ ಕೈಗೊಳ್ಳುತ | ಭಕ್ತರಭೀಷ್ಟದ 7 ಮಾಸ | ಎರಡುಉತ್ಸವ ವೈಭವ ಘೋಷ | ಕೇಳಿ ಕುತ್ಸಿತ ಜನರೊಲ್ಲ ಈಶ | ಅಂತೆ ಸಚ್ಛಾಸ್ತ್ರ ಪ್ರವಚನ ಪೋಷ | ಆಹವತ್ಸಾರಿ ದುರುಳನ | ಕುತ್ಸಿತ ಉದರವವಿಸ್ತ್ರುತ ನಖದಿಂದ | ಕುತ್ತಿದ ಚಿಂತಿಸು 8 ನರಹರಿ ನಾಮಕ ಕವಿಯು | ಇಲ್ಲಿತೊರವಿಯ ನರಹರಿ ಸನಿಯ | ಚೆಲ್ವವರರಾಮ ಕಥೆಯನ್ನು ಬರೆಯು | ಅವ - ಕುವರ ವಾಲ್ಮೀಕಿಯೆ ಮೆರೆಯು | ಆಹತೊರವೆ ರಾಮಾಯಣ | ವಿರಚಿತ ವಾಯ್ತಿಲ್ಲಿಹರಿಯನುಗ್ರಹ ಜಾತ | ವರ ಕವಿತೆ ಉಲ್ಲಾಸ 9 ಹೃದಯ ಗುಹೆಯಲ್ಲಿ ವಾಸ | ಉಪನಿಷದು ಪೇಳ್ವದು ಅಂತೆಲೇಸ | ಬಲುಮುದದಿಂದ ಮಾಳ್ಪದ ವಾಸ | ಅಂಥಬುಧಜನಕಹುದು ಸಂತೋಷ | ಆಹವಿಧವು ಈ ಪರಿಯೆಂದು | ವಿಧಿಸಲು ಜಗತೀಗೆಹದುಳದಿ ತೊರವಿ ಸ | ನ್ನಿಧಿ ಗುಹೆಯೊಳುವಾಸ 10 ವಿಭವ | ದಿಂದಲೀವನು ಮುಕ್ತಿಯ ಸುಖವ | ಈತಕೈವಲ್ಯಾಕಧಿಪತಿ ಇರುವ | ಆಹತಾವಕನಾಗಿ ಗುರು | ಗೋವಿಂದ ವಿಠಲನಭಾವದಿ ನೆನೆವಂಗೆ | ತೀವರ ವರವೀವ11
--------------
ಗುರುಗೋವಿಂದವಿಠಲರು
ದಯಮಾಡೆನಗೇ ಕೃಷ್ಣದಯ ತೋರನಗೇ ರಂಗ ದಯ ಮಾಡೆನಗೆ ಶ್ರೀ ಚನ್ನಕೇಶವನೇ ಪ ಧರಣಿ ಪಾಲಕನಂತೆ ಮೃತವ ನಾನರಿಯೆನು ಸರಳೆ ದ್ರೌಪದಿಯಂತೆ ಸ್ತೋತ್ರವನರಿಯೇ ಕರಿರಾಜನಂತೆ ನಾ ಮರೆಹೊಕ್ಕಲರಿಯೆನು ತರಳ ಧೃವನಂತೆ ತಪ ಮಾಡಲರಿಯೇ 1 ಪರೀಕ್ಷಿತನಂತೆ ಶ್ರವಣವ ಮಾಡಲರಿಯೆನು ವರಶುಕರಂತೆ ಕೀರ್ತನೆ ಮಾಡಲರಿಯೇ ತರಳ ಪ್ರಲ್ಹಾದನಂದದಿ ಸ್ಮರಿಸಲರಿಯೆನು ಚರಣವ ರಮೆಯಂತೆ ನಾ ಭಜಿಸಲರಿಯೇ 2 ಹರಿಯನ ಕ್ರೂರನಂತೇ ನಮಿಸಲರಿಯೆನು ಹರಿಯ ಪೃಥುವಿನಂತೆ ಪೂಜಿಸಲರಿಯೇ ಮರುತಜನಂತೆ ನಾ ದಾಸ್ಯತ್ವವರಿಯನು ನರನಂತೆ ಮಿತ್ರತ್ವ ಪಡೆಯಲಿಕ್ಕರಿಯೇ 3 ಆತ್ಮವ ಬಲಿಯಂತೆ ಅರ್ಪಿಸಲರಿಯೆನು ನಿತ್ಯವು ನರಕದಿ ಮುಳುಗಿ ನಾನಿರುವೇ ಮತ್ಸ್ಯಾದಿ ದಶರೂಪವೆತ್ತಿದ ರಂಗನೆ ಬೃತ್ಯರ ಸಲಹಯ್ಯ ಸ್ವಾಮಿ ದೂರ್ವೇಶಾ 4
--------------
ಕರ್ಕಿ ಕೇಶವದಾಸ
ದೂರ ಕೇಳೊ ದೊರೆಯೆ ಥಟ್ಟನೆ ಬಾರೊ ಭಕ್ತ ಸಿರಿಯೆ ಗತಿ ಹರಿಯೆ ಪ. ಖುಲ್ಲ ವೈರಿಯು ಮೊದಲನೆಯ ಕಳ್ಳ ಸನ್ನಿಧಿಯಲಿ ಬಂಧಿಸಿ 1 ಕ್ರೋಧನನೆಂಬವನಿವನು ಮಾನಸ ಬೋಧವ ಕೆಡಿಸುವನು ಮಾಧವ ಮಧುವತ್ಕರಿದಿ ನಿವಾರಿಸಿ 2 ತುದಿ ನಡು ಮೊದಲಿಲ್ಲ ಲೋಭ ತಡೆಯುವವರ್ಯಾರಿಲ್ಲ ಶ್ರೀಮಡದಿಯ ನಲ್ಲ 3 ಬಾಹ ಬಾಧೆಗಳನು ತಿಳಿಸದೆ ಚೋಹದಿ ಕೆಡಹುವನು ಮಹಿಮೆಯ ಮಾರ್ಗವ ತಿಳಿಸುತ 4 ಅಷ್ಟವೇಷವುಳ್ಳ ಐದನೆ ದುಷ್ಟನು ಬಿಡಲೊಲ್ಲ ಮುರಿದಟ್ಟು ದಯಾಪರ 5 ಮತ್ಸ್ಯಘಾತಿಯಂತೆ ಕುತ್ಸಿತ ಮತ್ಸರನೆಂಬುವನು ಸತ್ಸಂಗಗತಿಗಳನುತ್ತರಿಪನು ಶ್ರೀವತ್ಸ ಬೆನ್ಹನೀ ತಾತ್ಸಾರಗೊಳದಲೆ 6 ಈ ಶತ್ರುಗಳಿರಲು ತತ್ವ ವಿಲಾಸಗಳೆಂತಹವು ಶೇಷಗಿರೀಶ ಕೃಪಾಂಬುಧಿ7
--------------
ತುಪಾಕಿ ವೆಂಕಟರಮಣಾಚಾರ್ಯ
ದೇವಿ ಲಕ್ಷಣೆ ಎಮ್ಮ ಸಲಹ ಬೇಕಮ್ಮಭಾವದಲಿ ನೀನಿದ್ದು ಭಾವನಯ್ಯನ ತೋರೀ ಪ ಪಿತನು ಬೃಹತ್ಸೇನ ನಿನಗಾಗಿ ಸ್ವಯಂವರವಹಿತದಿಂದಲೆಸಗುತ್ತ ಲಕ್ಷ್ಯವನೆ ಬಿಗಿದೂ |ಅತಿಶಯದ ಧನುವಿಗೆ ಸಜ್ಜಿಸುತ ಬಾಣವನುಚತುರತೆಲಿ ಭೇದಿಪಗೆ ಸುತೆಯ ಪಣವೆಂದ1 ಮತ್ಸ್ಯ ಯಂತ್ರವಿದಲ್ಲಔಪಚಾರಿಕವೆಲ್ಲ ಸರ್ವವಿಧ ಛನ್ನಾ |ವೈಪರೀತ್ಯದಿ ದ್ವಾರ ಉಪರಿ ಇರುವುದು ಕೇಳಿಕಾಪುರುಷಗಿದು ಕಾಂಬ ಮಾರ್ಗವೇ ಇಲ್ಲ 2 ಸೂತನುತ ಮಾಗಧನು ಕೌತುಕದ ಕೌರವರುಪಾರ್ಥನೂ ಅವನಣ್ಣ ಭೀಮಸೇನಾ |ಆತು ಧನುವನು ಲಕ್ಷ್ಯ ಭೇದಿಸಲೆ ಬೇಕೆಂದುಪೃಥಿವಿಪರು ಮತ್ತಿತರು ಬಂದು ಸೇರಿದರು 3 ಸಜ್ಜುಗೈಯಲು 5ನುವ ಆರಿಂದಲಾಗದಿರೆಲಜ್ಯೆಯಿಂದಲಿ ಮರಳಿ 5ೀಗುವರೆ ಬಹಳ |ಅರ್ಜುನನು ತಾನೊಬ್ಬ ಲಕ್ಷ್ಯವೀಕ್ಷಣ ಶಕ್ತಅರ್ಜುನಾಗ್ರಜ ಹರಿಗೆ ಅಪರಾಧವೆನೆ ಸರಿದ 4 ನೆರೆದ ಸಭೆಯಲ್ಲಿ ಪುಷ್ಪಹಾರವನೆ ಪಿಡಿಯುತ್ತಬರುತ ವೈಯ್ಯಾರದಲಿ ಶಿರಿ ಕೃಷ್ಣ ಕಂಠದಲ್ಲಿ |ಇರಿಸಿ ಪರಮಾನಂದ ಭರಿತಳಾಗಲು ಹರಿಯುಕರಪಿಡಿದು ಹೊರವಂಟ ತನ್ನ ದ್ವಾರಕಿಗೇ 5 ಪರಿ ಪರಿ ಪುಷ್ಪ ವೃಷ್ಟಿಗಳ ಗರೆಯೇ |ದುರುಳರೆದುರಾಗಿ ಸಂಗರಕೆ ಬರುತಿರಲುಹರಿ ಭೀಮರೆದುರಿಸದೆ ದುರುಳರೋಡಿದರು 6 ಮೋದ ಬಡುವಂಥ |ಧೀವರರ ಮನೋಭೀಷ್ಟ ಪೂರ್ಣವನೆ ಗೈಯ್ಯುವನುದೇವ ಗುರು ಗೋವಿಂದ ವಿಠಲ ಕೃಪೆಯಿಂದ 7
--------------
ಗುರುಗೋವಿಂದವಿಠಲರು