ಒಟ್ಟು 40 ಕಡೆಗಳಲ್ಲಿ , 24 ದಾಸರು , 40 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿವಾಯುಗಳು ಮೂರಕ್ಕರದ ದೇವ ಮೂರು ವಸ್ತುವ ಬೆರಸಿ ಮೂರು ಮೂರಾಗಿಸೆಯೆ ಪಾಲಿಸುವ ನಮ್ಮ ಎರಡು ವಸ್ತುವು ಸೇರಿ ದೇಹಕ್ಕೆ ಚಲನೆಯದು ಹರಿವಾಯುಗಳ ಒಲುಮೆ ದೇಹ ರಕ್ಷಕವು4 ಅವ್ಯಾಕೃತಾಕಾಶ ರೂಪದಲಿ ತಾನಿಹನು ವಿಶ್ವಂಭರಾತ್ಮಕನು ದೇವ ನಿಜದಿಂದ ಸೃಷ್ಟಿಗವನೇ ಮೂಲ ವಾಸುದೇವಾತ್ಮಕನು ಮಧ್ವಹೃದಯನಿವಾಸಿ ಸರ್ವಮೂಲನವ 5 ಪೃಥಿವಿಯಪ್ ತೇಜಸ್ಸು ಮೂರು ಭೂತಾಣುಗಳು ತುಂಬಿಯಾಗಸದಲ್ಲಿ ವ್ಯಾಕೃತವದಹುದು ತುಂಬಿ ವಾಯುವಿನಣುಗಳ್ ಒಂದೆಡೆಯೆ ತಾನಹುದು ವ್ಯಾಕೃತಾಕಾಶ 6 ಆಗಸದಿ ವಾಯುವಿನ ಪರಮಾಣು ಒತ್ತಡವೆ ದೃಶ್ಯವಾಯುವು ತಾನೆ ಹರಿವುದಾಗಸದಿ ದೃಶ್ಯವಾಯುವಿನ ಪರಮಾಣುವೊತ್ತಡದಿ ನಿಜ ತೇಜವುದಯಿಸುವುದದರಲ್ಲಿ ಮೂರಿಹವು 7 ತೇಜದಿಂದಲೆ ನೀರು ಜಗಕೆಯಾಧಾರವದು ನೀರಿನಿಂದಲೆ ಭೂಮಿ ಉದಯಿಸುವದದರಿಂ ಪಂಚಭೂತಂಗಳಿವು ಭೂಮಿಯಲಿ ತೋರುವವು ಪಂಚಭೂತಾತ್ಮದ ಪ್ರಕೃತಿಯಿದು ಸತ್ಯ 8 ಇವುಗಳಿಗೆ ಒಡತಿಯಾ ಪ್ರಕೃತಿದೇವಿಯು ಸತ್ಯ ಪ್ರಕೃತಿಯೆದೆಯಲ್ಲಿರುವ ದೇವರೂ ಸತ್ಯ ಪ್ರಕೃತಿ ಪುರುಷರ ಲೀಲೆ ಮಧ್ವಮತದಾ ತಿರುಳು ಮಧ್ವ ಸದ್ಗ್ರಂಥಗಳು ಸರ್ವಮೂಲಗಳು 9 ಭೂತಕೃತ್ತೂ ಅವನೆ ಭೂತಪಾಲಕನವನೆ ಭೂತಭಾವದಲಿದ್ದು ಪ್ರೇರಕನು ಅವನೆ ಆತ್ಮಾಂತರಾತ್ಮವೆಂದೆರಡು ರೂಪಗಳವಗೆ ಹೃದಯದಾಕಾಶದಲಿ ವಾಸವಾಗಿಹನು 10 ಪಂಚಭೂತಗಳು ಪಂಚೇಂದ್ರಿಯಗಳು ಪಂಚ ಕರ್ಮೇಂದ್ರಿಯಗಳ ರಚಿಸಿ ಹರಿಯು ಪಂಚಾತ್ಮಕನು ದೇವ ಪಂಚವಾಯುಗಳಿಂದ ಪಂಚತನ್ಮಾತ್ರಗಳ ಜ್ಞಾನವೊದಗಿಪನು11 ಸುಖ ರತಿ ಪ್ರೇರಕನು ತಾನಾಗಿ ಸಿರಿವರನು ಶಾರೀರ ಪುರದಲ್ಲಿ ನೆಲೆಯಾಗಿ ಇಹನು ಬೆಳಗುತ್ತ ದೇಹವನು ಬೆಳಗಿಸುವ ದೇವತೆಗ ಳವನ ಬಳಿಯಿದ್ದು ಸೇವೆಯ ಗೈಯುತಿಹರು 12 ವಿಶ್ವ ದರ್ಶನಕಾಗಿ ವಿಶ್ವಜನರೊಳು ಕಣ್ಣಿನಲ್ಲಿ ನೆಲೆನಿಂತು ವಿಶ್ವಸಾಕ್ಷಿಯು ಸೂರ್ಯನಲ್ಲಿಯೂ ತಾನಿದ್ದು ವಿಶ್ವವನು ಬೆಳಗಿಸುತ ಜ್ಞಾನವೊದಗಿಪನು 13 ಸೂರ್ಯನೊಂದೆಡೆಯಿದ್ದು ತಾನ್ ಬೆಳಗಿ ಲೋಕವನು ತನ್ನ ಕಿರಣಂಗಳಿಂ ಬೆಳಗಿಸುವ ತೆರದಿ ಕಣ್ಣು ಮೊದಲಾದಿಂದ್ರಿಯಗಳಲಿ ತಾನಿದ್ದು ಅವುಗಳನು ಬೆಳಗಿಸುತ ರಕ್ಷಿಪನು ನಮ್ಮ14 ತೈಜಸದ ದೇವನವ ತೇಜದಾರೂಪದಲಿ ಕಂಠಗತನಾಗಿದ್ದು ದೇಹದಲಿ ಬೆಳಗಿ ಹುಲಿ ಕರಡಿ ಮೊದಲಾದ ಜಂತುಗಳ ಸೃಷ್ಟಿಸುತ ಸ್ವಪ್ನಲೋಕವನು ಮಾನಸಕೆ ತೋರಿಸುವ 15 ಪ್ರಾಜ್ಞರೂಪದ ದೇವನಪ್ಪಿ ಜೀವಾತ್ಮನನು ಮಾಯೆಯಾ ಮುಸುಕಿನಿಂದಜ್ಞಾನಬರಿಸಿ ಜೀವನಿಗೆ ತೋರದುದರಿಂದ ಪ್ರಾಜ್ಞನದಾಗಿ ಜಗಕೆ ತನ್ನಯ ಮಾಯೆಯನು ತೋರಿಸುವನು 16 ನಾಲ್ಕನೆಯ ರೂಪವದು ತುರ್ಯ ನಾಮದಲಿಹುದು ಮುಕ್ತರಿಗೆ ಮಾತ್ರವೇ ತೋರುವುದು ಪೇಳ್ವೆ ಜಾಗರಾದಿಯವಸ್ಥೆಗಳ ನಾಲ್ಕು ಪೇಳಿದನು ಮಾಯಾವಿ ಪರಮಾತ್ಮನದು ಲೀಲೆಗಳಿವು 17
--------------
ನಿಡಂಬೂರು ರಾಮದಾಸ
ಹೇಗೆ ಮಾಡಬೇಕು ಭಜನೆಯನು ಹೇಗೆ ಮಾಡಬೇಕುಬೇಗ ಜ್ಞಾನ ಭಕ್ತಿ ವೈರಾಗ್ಯ ಬರುವಂತೆ ಭಜನೆಮಾಡಬೇಕು ಪಆಧ್ಯಾತ್ಮಿಕ 'ಷಯದಲಿ ಮೊದಲು ಬಲು ಶುದ್ಧಜ್ಞಾನ ಬೇಕುಮಹಾತ್ಮ್ಯದ ಸುಜ್ಞಾನ ಪೂರ್ವಕ ಸುಧೃಡ ಸ್ನೇಹಬೇಕುದೇಹದೌಲತ್ತಿನ ಸ್ವರೂಪವರಿತು ವೈರಾಗ್ಯ ಹುಟ್ಟಬೇಕುಈ ಮೂರು ಮನಸಿನಲಿ ಮೂಡುವಂತೆ ನಾವು ಭಜನೆ ಮಾಡಬೇಕು 1ನಾನು ನನ್ನದೆಂಬ ಅಹಂಕಾರ ದಿನದಿನಕೆ ಅಳಿಯಬೇಕುಮಾನಾಪಮಾನವು ಆದರೆ 'ಗ್ಗದೆ ಕುಗ್ಗದೆ ಇರಬೇಕುಹೆಣ್ಣು ಹೊನ್ನು ಮಣ್ಣುಗಳ 'ಷಯದಲಿ ತ್ಯಾಗ ವೈರಾಗ್ಯ ಬುದ್ಧಿಬೇಕುಪುಣ್ಯ ಪಾಪಗಳನರಿತ ಸದ್ಭಕ್ತರ ಸಂಗತಿ ಇರಬೇಕು 2ಮಧ್ವಮತದ ಸಾತ್ವಿಕರ ಸಂಗದಲಿ ಭಜನೆ ನಡೆಯಬೇಕುಶುದ್ಧಮನದ ಸಾತ್ವಿಕರ ಸಂಗದಲಿ ಭಜನೆ ನಡೆಯಬೇಕುಬುದ್ಧಿಗೇಡಿ ದುರ್ದೈ' ದುಷ್ಟರನು ದೂರದಲಿ ಇಡಬೇಕುಶ್ರದ್ಧೆುಂದ ಭೂಪತಿ'ಠ್ಠಲನನು ಭಜಿಸಿ ಕುಣಿಯಬೇಕು ನ
--------------
ಭೂಪತಿ ವಿಠಲರು
ಹೇಳುವೆನು ಕೇಳಿ ಕರ್ಣಾಮೃತವ ಆಲೋಚನೆ ಸಲ್ಲ ತಿಳಿದ ಜ್ಞಾನರಿಗೆ ಪ ಲಕ್ಷಣ ಛಂದಸ್ಸು ಅಡಿಪ್ರಾಸ ಆದಿ ಅಂತಿ ಲಕ್ಷಕ್ಕೊಂದಾದರು ಮೊದಲೇ ಇಲ್ಲಾ ಅಕ್ಷಿ ಇಲ್ಲದವನು ಕೋಲು ಸಂಪಾದಿಸುವ ಅಕ್ಷಿ ಉಂಟಾದವಗೆ ಅದರಿಂದ ಫಲವೇನು 1 ಜ್ಞಾನ ಕರ್ಮರ ಲಂಬನ ಮಾಡಿ ತಿಳಿದಂಥ ಮಾನವನು ನಾನಲ್ಲ ಎಂದೆಂದಿಗೂ ಜ್ಞಾನಿಗಳ ಮನೆಯ ತೊಂಡರ ಪಾದರಕ್ಷೆಯಾ ಪಾಣಿಯಲ್ಲಿ ಪಿಡಿದವನ ನಖಧೂಳಿ ದಯದಿಂದ 2 ರಾಗತಾಳ ಭೇದ ಜತೆ ಜಾಣತನದಿಂದ ವಾಗರ ನಿಮಿತ್ಯ ಪೇಳಲಿಲ್ಲಾ ಹ್ಯಾಗಾದರೇನು ನಾರಾಯಣಚ್ಯುತನೆಂದು ಕೂಗಿ ಕಾಲವ ಕಳದೆ ಜನುಮ ಸಾಧನಕೆ 3 ಬೆಲ್ಲ ಕರದಲಿ ಪಿಡಿದು ಆವನಾದರೇನು ಎಲ್ಲಿ ತಂದರೆ ಅದು ಸೀ ಎಲ್ಲವೇ ಬಲ್ಲನವ ನರಿಯನಿವನೆಂದು ಆಡದಿರಿ ಪುಲ್ಲನಾಭನ ಸ್ಮರಣೆ ಒಂದು ಮುಕ್ತಾರ್ಥ 4 ಹರಿದೈವವೆಂದು ತಾ ಉತ್ತರೋತ್ತರ ತಿಳಿದು ಗುರುಮಧ್ವಮತದಲ್ಲಿ ಲೋಲಾಡಲು ಸಿರಿಯ ಅರಸ ವಿಜಯವಿಠ್ಠಲ ಬಂದು ವೊಲಿವನು ಗುರು ಪುರಂದರನ ದಯೆ ಎನ್ನ ಮೇಲಿರಲಾಗಿ5
--------------
ವಿಜಯದಾಸ
ಇದು ಭಾಗ್ಯ ಇದು ಭಾಗ್ಯ ಇದು ಭಾಗ್ಯವಯ್ಯಪದುಮನಾಭನಪಾದಭಜನೆ ಸುಖವಯ್ಯಪ.ಕಲ್ಲಾಗಿ ಇರಬೇಕು ಕಠಿಣ ಭವತೊರೆಯೊಳಗೆಬಿಲ್ಲಾಗಬೇಕು ಬಲ್ಲವರ ಒಳಗೆ ||ಮೆಲ್ಲನೇ ಮಾಧವನ ಮನದಿ ಮೆಚ್ಚಿಸಬೇಕುಬೆಲ್ಲವಾಗಿರಬೇಕು ಭಕುತಜನರೊಳಗೆ 1ಬುಧ್ಧಿಯಲಿ ತನ್ನ ಮನ ತಿದ್ದುತ್ತಲಿರಬೇಕುಮುದ್ದಾಗಬೇಕು ಮುನಿಯೋಗಿಗಳಿಗೆ ||ಮಧ್ವಮತದಬ್ಧಿಯೊಳು ಮೀನಾಗಿ ಇರಬೇಕುಶುದ್ಧ ಭಕುತಿಯಸುಕೃತಉಣಲುಬೇಕು2ವಿಷಯ ಭೋಗದ ತೃಣಕೆ ಉರಿಯಾಗಿ ಇರಬೇಕುಕುಶಲದಲಿ ಶ್ರೀ ಹರಿಯ ನೆನೆಯಬೇಕು ||ವಸುಧೆಯೊಳು ನಮ್ಮ ಪುರಂದರವಿಠಲನಹಸನಾಗಿ ನೆನೆನೆನೆದು ಸುಖಿಯಾಗಬೇಕು 3
--------------
ಪುರಂದರದಾಸರು
ಜಯಭಾರತೀಶಜಯ ಜಯಭಾರತೀಶಜಯಜಯಭಾರತೀಶಜಯತುಜಯ ರಾಘವಾಂಘ್ರಿಪಾದಕಮಲಭೃಂಗನೆ ನಮಿಪೆಜಯಭಾರತೀಶಜಯತುಪಜಯಭಾರತೀಶಜಯಜಯ ಭೀಮ ಹನುಮನೆಭಯವ ಪರಿಹರಿಸಿ ಪೊರೆಯೈಜಯ ಮಧ್ವಮುನಿರಾಯಗುರುಮಧ್ವಮುನಿರಾಯಗುರುವೆ ಪಾಲಿಸು ಜಯ ಜಯ ಅ.ಪತ್ರೇತೆಯಲಿ ರಘುಪತಿಯ ಸೇವೆ ಮಾಡುವೆನೆಂದುಸೀತೆಗುಂಗುರವನಿತ್ತುಮಾತೆಯಾಜೆÕಯ ಕೊಂಡುಘಾತಿಸಿದೆ ರಕ್ಕಸರದೂತ ರಾವಣನ ಕಂಡುಭೀತಿಯಿಲ್ಲದೆ ಜನಕ-ಜಾತೆಯಳ ಕಳುಹೆನಲುಆತ ಕೋಪದಿಂದಲಿ ತನ್ನದೂತರಿಂದಲಿ ವಾಲ-ವಗ್ನಿಯಲಿ ದಹಿಸಿರೆನೆಆ ಪುರವ ದಹಿಸಿ ಮೆರೆದೆ 1ದ್ವಾಪರದಿ ಶ್ರೀಕೃಷ್ಣನಂಘ್ರಿ ಸೇವಕನಾಗಿಪಾಪಿ ಜರೆಸುತನ ಸೀಳಿದ್ರೌಪದಿಯ ನುಡಿಕೇಳಿಪಾಪಿ ಕೀಚಕನನ್ನುಕೋಪದಿಂ ಕೊಂದ ಮಹಿಮಾಪಾಪಿ ದುರ್ಯೋಧನಾದಿಗಳ ಸಂಗಡ ಕಾದಿಸೋತು ಓಡಲು ದುರುಳನುನೀತಿ ಬಿಡದಲೆ ಗದೆಯಏಟಿನಿಂದವನ ತೊಡೆಘಾತಿಸುತಲವನನಳಿದೆ 2ಮಧ್ವಮತದವರನುದ್ಧರಿಸ ಬೇಕೆಂದೆನುತಮಧ್ಯಗೇಹರಲಿ ಜನಿಸಿಶುದ್ಧ ಶಾಸ್ತ್ರಗಳನುದ್ಧರಿಸುತ ಜಗದೊಳಗೆ ಪ್ರ-ಸಿದ್ಧನೆಂದೆನಿಸಿ ಮೆರೆದೆಮುದ್ದು ಕೃಷ್ಣನ ಪೂಜೆಶ್ರದ್ಧೆ ಬಿಡದಲೆ ಮಾಡಿಉದ್ಧರಿಸಿ ಸಜ್ಜನರನುಮುದ್ದು ಕಮಲನಾಭ-ವಿಠ್ಠಲಗರ್ಪಿತವೆಂದೆಮಧ್ವಮುನಿರಾಯ ಜಯತು 3
--------------
ನಿಡಗುರುಕಿ ಜೀವೂಬಾಯಿ
ಮಧ್ವಮತದ ಸಿದ್ದಾಂತದ ಪದ್ಧತಿ |ಬಿಡಬೇಡಿ ಬಿಡಬೇಡಿ ಪ.ಹರಿ ಸರ್ವೊತ್ತಮನಹುದೆಂಬ ಙ್ಞÕನವ |ತಾರತಮ್ಯದಲಿ ತಿಳಿವ ಮಾರ್ಗವಿದು 1ಘೋರ ಯಮನ ಬಾಧೆ ದೂರಕೆ ಮಾಡಿ ಮು -ರಾರಿಯ ಚರಣವ ಸೇರುವ ಮಾರ್ಗವು 2ಭಾರತೀಶ ಮುಖ್ಯ ಪ್ರಾಣಾಂತರ್ಗತ |ನೀರಜಾಕ್ಷನಮ್ಮ ಪುರಂದರವಿಠಲನ3
--------------
ಪುರಂದರದಾಸರು
ವಿಧಾತೃದೇವತೆಗಳೂ ವಿಷ್ಣುವಿನ ಹಿಂದೆ |ಇದಕೆ ತಪ್ಪಿದರೆ ಫಣಿಫಣವ ಪಿಡಿವೆ ಪ.ಸಕಲ ತೀರ್ಥಗಳೆಲ್ಲ ಸಾಲಗ್ರಾಮದ ಹಿಂದೆ |ಪ್ರಕಟಗ್ರಂಥಗಳೆಲ್ಲ ಭಾರತದ ಹಿಂದೆ ||ಸಕಲ ವೃಕ್ಷಗಳೆಲ್ಲ ಶ್ರೀ ತುಳಸಿಯ ಹಿಂದೆ |ಸಕಲ ಪರ್ವತಗಳು ಮೇರುವಿನ ಹಿಂದೆ 1ಮತಗಳೆಲ್ಲವು ಮಧ್ವಮತದ ಸಾರದ ಹಿಂದೆ |ಇತರ ವರ್ಣಗಳೆಲ್ಲ ವಿಪ್ರರ ಹಿಂದೆ ||ವ್ರತಗಳೆಲ್ಲವು ಹರಿಯ ದಿನದ ವ್ರತದ ಹಿಂದೆ |ಅತಿಶಯದ ದಾನಗಳು ಅನ್ನದಾನದ ಹಿಂದೆ 2ಉತ್ತಮಗುಣಗಳೆಲ್ಲ ಉದಾರತ್ವದ ಹಿಂದೆ |ಮತ್ತೆ ಕರ್ಮಗಳು ಮಜ್ಜನದ ಹಿಂದೆ ||ಪೃಥ್ವಿಯೊಳಗೆ ನಮ್ಮ ಪುರಂದರವಿಠಲನ |ಭಕ್ತವತ್ಸಲನೆಂಬ ನಾಮವೇ ಮುಂದೆ 3
--------------
ಪುರಂದರದಾಸರು
ಶ್ರೀ ಪ್ರಸನ್ನ ರಘೂತ್ತಮ ತೀರ್ಥರ ಚರಿತ್ರೆ122ಶ್ರೀ ರಘೂತ್ತಮರಂಘ್ರಿ ರಾಜೀವಯುಗ್ಮದಲಿಶಿರಬಾಗಿ ಶರಣಾದೆ ಧನ್ಯನಾದೆಶ್ರೀರಾಮಚಂದ್ರನ ಪೂರ್ಣಾನುಗ್ರಹ ಪೂರ್ಣಪಾತ್ರರು ಎಮ್ಮ ಪಾಲಿಸುವ ಕರುಣಾಳು ಪಶ್ರೀ ಹಂಸ ಲಕ್ಷ್ಮೀಶ ಪರಮಾತ್ಮ ಸರ್ವೇಶಬ್ರಹ್ಮ ಸನಕಾದಿಗಳ ಗುರುಪರಂಪರೆಯಬ್ರಹ್ಮಪದ ಐದುವ ಶ್ರೀ ಆನಂದತೀರ್ಥರನೀರ್ರುಹ ಚರಣಂಗಳಲ್ಲಿ ಶರಣಾದೆ 1ಪಂಕೇರುಹನಾಭ ನರಹರಿಮಾಧವಅಕ್ಷೋಭ್ಯ ಜಯತೀರ್ಥ ವಿದ್ಯಾಧಿರಾಜವಾಗ್ವಜ್ರ ರಾಜೇಂದ್ರ ಕವಿವರ ಕವೀಂದ್ರವಾಗೀಶಶ್ರೀ ರಾಮಚಂದ್ರರಿಗೆ ಶರಣು2ಶ್ರೀ ರಾಮಚಂದ್ರರ ಕರಜರು ಈರ್ವರಿಗೂಎರಡನೇಯವರು ವಿದ್ಯಾನಿಧಿಯಹಸ್ತಅರವಿಂದೋತ್ಪನ್ನ ರಘುನಾಥರಿಗೆ ನಮೋ ಎಂಬೆಸೂರಿವರ ರಘುವರ್ಯರಲ್ಲಿ ಶರಣಾದೆ 3ರಘುವರ್ಯ ಗುರುರಾಜ ಕರಕಮಲ ಸಂಜಾತರಘೂತ್ತಮ ತೀರ್ಥರ ಚರಣಕಾನಮಿಪೆಅಗಣಿತಗುಣಾಂಬುಧಿ ಅಘದೂರ ರಘುಪತಿಯಹೃದ್ಗುಹಾ ಒಳಹೊರಗೆ ಕಾಂಬುವಧೀರ 4ರಾಮಚಂದ್ರಾಚಾರ್ಯ ನಾಮ ಬಾಲಕನುಬ್ರಹ್ಮಚಾರಿಯು ಧೃಢÀವ್ರತನು ಹರಿಭಕ್ತಸುಮನೋಹರಮೂರ್ತೇ ಗುಣಗುಣಾಲಂಕೃತನುಈ ಮಹಾವೇದಾಂತ ಪೀಠಕ್ಕೆ ಅರ್ಹ 5ತಮ್ಮ ಮಠ ಶಿಷ್ಯರಲು ಮಾಧ್ವ ಸಜ್ಜನರಲ್ಲೂಸುಮಹಾಪಂಡಿತರು ಇರುತಿದ್ದರೂನುಈ ಮಹಾ ಪುರುಷ ಬಾಲನೇ ತಕ್ಕವನೆಂದುನೇಮಿಸಿದರು ಪೀಠಕ್ಕೆ ರಘುವರ್ಯ ಗುರುವು 6ರಘೂತ್ತಮತೀರ್ಥ ನಾಮದಿ ತುರೀಯಾಶ್ರಮರಘುವರ್ಯರೀ ರಾಮಚಂದ್ರಗೆ ಇತ್ತುರಾಘವನ ಪೂಜಾದಿ ಸಂಸ್ಥಾನ ಅಧಿಕಾರನಿಗಮಾಂತ ಗುರುಗಳು ನಿಯಮನ ಮಾಡಿದರು 8ವೇದವೇದಾಂತ ಸಚ್ಛಾಸ್ತ್ರ ಪಂಡಿತನುವಿದ್ಯಾರ್ಥಿ ಬಹುಮಂದಿಗೆ ಪಾಠ ಪೇಳುವವಿದ್ವಾಂಸ ಓರ್ವನ್ನ ರಘುವರ್ಯ ತೀರ್ಥರುವಿದ್ಯೆಕಲಿಸಲು ಏರ್ಪಾಡು ಮಾಡಿದರು9ಶೇಷಪ್ಪನಾಯಕರ ಮಕ್ಕಳು ಈರ್ವರಲಿಜ್ಯೇಷ್ಠ ಪುತ್ರನು ವಿದ್ವಾಂಸರಲಿ ಪ್ರಮುಖಶಿಷ್ಯರೂ ಬಹು ಜನರು ಈತನಿಗೆ ಉಂಟುಭೂಷಣವೆಂದೆನಿಸಿದನು ಮಾಧ್ವ ಸಮೂಹಕ್ಕೆ 10ಸಾವಿರದ ನಾನ್ನೂರು ಎಪ್ಪತ್ತ ಒಂಭತ್ತುಸಂವತ್ಸರದಲಿ ಶಾಲಿವಾಹನದಿದಿವಸ ತದಿಗೆ ಕೃಷ್ಣ ಜ್ಯೇಷ್ಠ ಪಿಂಗಳದಿಶ್ರೀವರನಪುರಕೆ ತೆರಳಿದರು ರಘುವರ್ಯರು 11ದಯಾಳು ರಘುವರ್ಯರು ಸಮಾಧಿಸ್ಥರಾಗಲುಬಾಲ್ಯಾವಸ್ಥೆಯಲಿ ಇದ್ದ ರಘೂತ್ತಮರುವಿದ್ಯಾವ್ಯಾಸಂಗಗುರುನಿಯಮನದಂತೇಯೆಗೈಯಲಿ ಪೋದರು ಆ ವಿದ್ವಾಂಸನಲ್ಲಿ 12ಮಣೂರು ಎಂದ್ಹೆಸರುಉಳ್ಳಆ ಊರಲ್ಲಿಘನವಿದ್ವನ್ಮಣಿಯಲ್ಲಿ ಕಲಿಯುವಾಗಧನವಂತ ಊರುನಾಯಕರಘೂತ್ತಮರಲ್ಲಿಬಿನ್ನೈಸಿದ ಭೋಜನಕೆ ಬರಬೇಕೆಂದು 13ಸ್ವಾಮಿಗಳಿಗೆ ಪಾಠ ಹೇಳುವ ವಿಪ್ರನೂಆ ಮನೆಯಲಿ ಊಟಕ್ಕೆ ಬಂದಿದ್ದನೇಮ ಆಹ್ನೀಕ ಮುಗಿಸಿ ಬರಲಿಕ್ಕೇತಾಮಸವು ಆಯಿತು ವಿಲಂಬವು ಸ್ವಲ್ಪ 14ಸ್ವಾಮಿಗಳ ಬಾಲ್ಯತ್ವ ವಿದ್ಯಾರ್ಥಿತ್ವವುಆ ಮನೆಯಲಿ ಗೃಹಸ್ಥನನ್ನೂ ವಿಪ್ರನನ್ನೂ ಮೋಹಿಸಿತುತಮ್ಮ ಯೋಗ್ಯತೆ ಸ್ಥಾನ ಮರೆತು ಗರ್ವದಿವಿಪ್ರಸ್ವಾಮಿಗಳ ಲೆಕ್ಕಿಸದೆ ಕುಳಿತನು ಭೋಜನಕೆ 15ಅಂದು ರಾತ್ರಿಸ್ವಪ್ನದಲಿ ರಘುವರ್ಯ ಗುರುಗಳುಬಂದು ಪೇಳಿದರ್ತಮ್ಮ ಪ್ರೇಮಿಶಿಷ್ಯರಿಗೆಇಂದಿನಾರಭ್ಯ ಪಾಠವ ನಿಲಿಸು ವಿಪ್ರನಲಿಕುಂದುಇಲ್ಲದೆ ಹೇಳುವೆ ನೀನೇವೆ16ಈ ರೀತಿ ಸ್ವಪ್ನವು ಆಗೇ ರಘೂತ್ತಮರುವಿಪ್ರನಲಿ ಪಾಠಕ್ಕೆ ಪೋಗುವುದು ತೊರೆದುಆ ಪಂಡಿತವರ್ಯರಿಗಿಂತ ಉತ್ತಮ ರೀತಿತಾಪೇಳಿದರು ಪಾಠ ಮಠದಿ ಶಿಷ್ಯರಿಗೆ 17ಗುರುಗಳಲಿಹರಿಇಷ್ಟ ಗುರುದ್ವಾರ ಒಲಿವನುಗುರುಅನುಗ್ರಹ ಇದ್ದರೇಹರಿಅನುಗ್ರಹಗುರುಪ್ರಸಾದವ ಪಡೆದ ಶ್ರೀ ರಘೂತ್ತಮರಿಗೆಶಾಸ್ತ್ರ ಜ್ಞಾನವು ಪ್ರಜ್ವಲಿಸಿತು ಪೂರ್ಣದಲಿ 18ಜಾತಾಪರೋಕ್ಷಿಗಳು ದೇವತಾಂಶರಿಗೇವೆಜ್ಞಾತವಾಗುವ ಪದ ವಾಕ್ಯದ ತಾತ್ಪರ್ಯಈ ದೇವತಾಂಶ ಶ್ರೀ ರಘೂತ್ತಮ ಗುರುವರರುಸಂದೇಹವಿಲ್ಲದೆ ತಿಳಿದು ಬೋಧಿಸಿದರು 19ತನ್ನಲ್ಲಿ ವ್ಯಾಸಂಗ ಪೂರೈಸದ ಬಾಲಏನು ಪಾಠವ ಹೇಳೇ ಶಕ್ತನೆಂದರಿಯೆಕಾಣದೆ ಮರೆಯಾಗಿ ನಿಂತು ಆವಿಪ್ರಶ್ರವಣ ಮಾಡಿದ ಗುರುಗಳು ಬೋಧಿಸುವುದು 20ಸಂದಿಗ್ಧÀ್ದವಾಗಿ ತನಗಿದ್ದ ವಿಷಯಗಳನ್ನೂಅದ್ಭ್ಬುತ ರೀತಿಯಲಿ ಅನಾಯಾಸವಾಗಿಅತಿವಿಶದದಿ ರಘೂತ್ತಮರು ಪೇಳಲುಕೇಳಿಬಂದು ಮುಂದೆ ನಿಂತು ನಮಿಸಿದನುವಿಪ್ರ21ತಾನು ಮಾಡಿದ ಉದಾಸೀನ ಅಪರಾಧಗಳಘನದಯದಿ ಕ್ಷಮಿಸಬೇಕೆಂದು ಬೇಡುತ್ತತನು ದಂಡವತ್ ಭುವಿಯಲಿ ಬಿದ್ದು ನಮಿಸಿದನುದೀನದಯಾಳುಗುರುಅಭಯನೀಡಿದರು22ದಿಗ್ವಿಜಯ ಮಾಡುತ್ತ ಅಲ್ಲಲ್ಲಿ ದುರ್ಮತದುರ್ವಾದಿಗಳನ್ನು ಖಂಡಿಸಿ ಸಿದ್ಧಾಂತತತ್ವಬೋಧಿಸಿ ಜಗತ್ ಪ್ರಖ್ಯಾತರಾದರುಶಾಶ್ವತ ನಿಜಸುಖ ಮಾರ್ಗದರ್ಶಕರು 23ರಘುವರ್ಯ ಗುರುಗಳು ನೇರಲ್ಲು ಸ್ವಪ್ನದಲುರಘೂತ್ತಸಮರಿಗೆ ಪೇಳಿದ ಪ್ರಕಾರದಿಗ್ವಿಜಯ ಸಮಯದಿ ಸಂಸ್ಥಾನಕ್ಕೆ ಭೂಷಣಬಗೆಬಗೆ ವಸ್ತು ಪರಿವಾರ ಸೇರಿಸಿದರು 24ವೇದಾಂತ ಸಾಮ್ರಾಜ್ಯ ರಾಜಗುರುರಾಜರುಹಸ್ತಿಘೋಟಕ ಕೊಂಬು ವಾದ್ಯಮೇಳಗಳುಸುತ್ತಲೂ ವಿದ್ವಜ್ಜನ ವೇದಘೋಷದ ಮಧ್ಯಮುತ್ತು ಪಲ್ಲಕ್ಕಿಯೊಳು ಕುಳಿತರು ದೇವರ ಸಹ 25ಪೋದ ಕಡೆಗಳಲಿ ದಿಗ್ವಿಜಯ ರಾಮಾರ್ಚನೆವಿದ್ವಜ್ಜನ ಸಭೆ ವಾಕ್ಯಾರ್ಥ ಪಾಠಸಿದ್ಧಾಂತ ಸ್ಥಾಪನೆ ದುರ್ಮತ ನಿರಾಸವುಸಾಧು ಸಜ್ಜನರ ಉದ್ಧಾರ ಪ್ರತಿದಿನವು 26ಬಾದರಾಯಣನಿರ್ಣೀತ ರೀತಿಯಲಿಮಧ್ವರಾಯರು ಬರೆದ ಗ್ರಂಥಗಳಿಗೆಅದ್ಬುತ ಟೀಕೆ ಜಯತೀರ್ಥರು ಮಾಡಿಹರುಸದ್ಭಾವ ಬೋಧವು ರಘೂತ್ತಮರ ರಚನೆ 27ಟೀಕಾ ಭಾವಬೋಧರು ಎಂದು ಪ್ರಖ್ಯಾತರಘೂತ್ತಮರ ಎಲ್ಲೆಲ್ಲೂ ವಿದ್ವಜ್ಜನರುನಗರಪಟ್ಟಣ ಗ್ರಾಮ ನಾಯಕರು ಪ್ರಮುಖರುಸ್ವಾಗತ ಅರ್ಪಿಸಿ ಪೂಜಿಸಿದರು ಮುದದಿ 28ಪುಟ್ಟಿದಾರಭ್ಯಹರಿಪಾದಕಮಲದಿ ಮನಇಟ್ಟು ರಘುವರ್ಯರು ಕೊಟ್ಟ ಸಂಸ್ಥಾನಪಟ್ಟ ಆಳಿ ಸರ್ವೋತ್ತಮನನ್ನ ಸೇವಿಸಿಶ್ರೇಷ್ಠತಮ ಸುಖಪ್ರದಮಾರ್ಗತೋರಿಹರು29ಹದಿನೈದು ನೂರು ಹದಿನೇಳು ಶಕ ಮನ್ಮಥಶುದ್ಧ ಏಕಾದಶಿ ಪೌಷ್ಯದಲಿ ಹರಿಯಪಾದಸೇರಿದರು ಸಂಸ್ಥಾನ ಆಡಳಿತವೇದವ್ಯಾಸ ತೀರ್ಥರು ಮಾಡಲಿಕೆ ಬಿಟ್ಟು 30ಮತ್ತೊಂದು ಅಂಶದಲಿ ವೃಂದಾವನದೊಳುಹತ್ತಾವತಾರಹರಿದ್ಯಾನಪರರಿಹರುಭಕ್ತರು ಅಲ್ಲಲ್ಲಿ ಅರ್ಚಿಸಿ ಸೇವಿಸುವಮೃತ್ತಿಕೆಯಲ್ಲು ಸಹ ಇದ್ದು ಪಾಲಿಪರು 31ವೃಂದಾವನ ತಿರುಕೋಯಿಲೂರ್ ಮಣಂಪೂಂಡಿಎಂದು ಕರೆಯಲ್ಪಡುವ ಗ್ರಾಮದಲಿ ಇಹುದುಇಂದುಶೇಖರ ಚಾಪದಿಂದ ಉದಿಸಿದ ಪುಣ್ಯನದಿಯು ಹರಿಯುತ್ತೆ ಮಜ್ಜನವು ಅಘಹರವು 32ಮಂದಜಾಸನಮೊದಲಾದ ಸುರವೃಂದವಂದಿತ ರಮಾಪತಿಯು ರಘೂತ್ತಮಾಂತಸ್ಥವೃಂದಾವನದಿಗುರುಹರಿಭಕ್ತಿ ಪೂರ್ವಕದಿಬಂದು ಸೇವಿಪರಿಗೆ ವಾಂಛಿತÀಗಳೀವ 33ಗಾಳಿ ಬಿಸಿಲು ಮಳೆ ಮಂಜುಗಳ ಲೆಕ್ಕಿಸದೆಮಾಲೋಲನ ಧ್ಯಾನಿಸುತ ವೃಂದಾವನದೊಳುಕುಳಿತಿಹರುಪರಮಕಾರುಣಿಕಈ ಗುರುಗಳುಪಾಲಿಸುತಿಹರು ಎಮ್ಮಅನುಗಾಲದಯದಿ34ವೃಂದಾವನ ದರ್ಶನ ತೀರ್ಥ ನಮಸ್ಕಾರಪ್ರದಕ್ಷಿಣೆ ಅರ್ಚನೆ ಹಸ್ತೋದಕವಂದನೆ ಸೇವಾದಿಗಳ ಮಾಳ್ಪ ಸಜ್ಜನರಕುಂದುಕೊರತೆಗಳಳಿವ ಇಷ್ಟಾರ್ಥ ಪ್ರದರು35ಪಿಲ್ಲಿ ಶೂನ್ಯಾದಿ ವಾಮಾಚಾರ ಪೀಡೆಗಳುಗಾಳಿದುಷ್ಟಗ್ರಹ ಪೈಶಾಚಾದಿಗಳುಕಳವಳಿಕೆ ಬುದ್ದಿಭ್ರಮೆ ವ್ಯಾಧಿದಾರಿದ್ರ್ಯಾದಿಎಲ್ಲ ದೋಷಗಳನ್ನ ಪರಿಹರಿಸುವರು 36ಸವೈರಾಗ್ಯ ಜ್ಞಾನವ ಭಕುತಿ ಅಪರೋಕ್ಷವಸೇವಿಪ ಯೋಗ್ಯರಿಗೆ ಒದಗಿಸಿ ಉದ್ಧರಿಸಿಸರ್ವವಿಧದಲು ಭಾಗ್ಯ ಆಯುಷ್ಯ ಆರೋಗ್ಯಈವರು ಭಕ್ತಯಲಿ ಸ್ಮರಿಸಿ ವಂದಿಪರ್ಗೆ 37ಉತ್ತಮ ತರಗತಿ ದೇವತಾಂಶರು ಇವರುಮಧ್ವಮತದುಗಾಬ್ಧಿ ಪೂರ್ಣಚಂದ್ರಹತ್ತು ತಿಂಗಳು ಹೊತ್ತು ಹೆತ್ತ ಉತ್ತಮ ಸಾಧ್ವಿಮಾತೆಯ ಭಾಗ್ಯ ಏನೆಂಬೆ ಇಂಥವರ 38ಸೂರಿಸುರವರ ಶ್ರೀ ರಘೂತ್ತಮರ ಚರಣದಲಿಶರಣಾದೆ ಎನ್ನಯ ಎನ್ನಸೇರಿದವರಪರಿಪರಿ ಪೀಡೆಗಳ ಪಾಪಗಳ ಅಳಿದುಕಾರುಣ್ಯ ಔದರ್ಯದಿ ಪಾಲಿಸುವರು 39ಸರಿದ್ವರ ಪಿನಾಕಿನಿಯಲಿ ಕೇಶವ ಜಗವಈರಡಿಯಲಿ ಅಳೆವ ತ್ರಿವಿಕ್ರಮನು ಶಿರಿಯುಇರುತಿಹರು ಹನುಮ ಶಿವಸ್ಕಂಧ ತೀರಗಳಲಿಶರಣೆಂಬೆ ಇವರೆಲ್ಲರ್ಗು ಶ್ರೀ ರಘೂತ್ತಮರಿಗೂ 40ಕಮಲಭವಪಿತ `ಶ್ರೀ ಪ್ರಸನ್ನ ಶ್ರೀನಿವಾಸ 'ಕಮಲಾಯುತವಿಶ್ವರೂಪತ್ರಿವಿಕ್ರಮಗೂಭೀಮ ಶಿವಸ್ಕಂಧರಿಗು ಪ್ರಿಯತಮ ರಘೂತ್ತಮರಈ ಮಂಗಳ ಚರಿತ ಶ್ರೀ ಕೃಷ್ಣಾರ್ಪಿತವು 41 ಪ|| ಇತಿ ಶ್ರೀ ರಘೂತ್ತಮ ತೀರ್ಥ ಚರಿತ್ರೆ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಸಜ್ಜನರ ನಡತಿದೊ ಶ್ರೀ |ಅರ್ಜುನ ಸಖನ ಪದಾಬ್ಜ ಭಜಿಸುವದೆ ಪಕುಹಕರ ಸಂಗವ ಮಾಡದೆಖೇಚರ|ವಹನನಾಳುಗಳ ಆಳಾಗೀ ||ಅಹರ್ನಿಶಿಯಲಿ ತತ್ವ ವಿಚಾರಿಸುತಲಿ |ಅಹಲ್ಲಾದವ ಮನದಲಿ ಬಿಡುತಿಪ್ಪುದೆ 1ನೀಚ ಸುರ ನರರ ಸೇವಿಸಿ ವರಶನ |ಯಾಚಿಸದೆ ಸ್ವಧರ್ಮವ ಬಿಡದೇ ||ಖೇಚರಜ ಮತವ ಪೊಂದಿಸು ಕರ್ಮಗ- |ಳಾಚರಿಸುತವಿಜ್ಞಾನಘಳಿಸುವದೆ 2ಪದ್ಮಜಮುಖರಿಗೆ ಕ್ಷಣ ಕ್ಷಣದಲಿ ಶಿರಿ |ಬುದ್ಧಿಯ ಪ್ರೇರಿಸುವಳು ಆರೇ ||ಪ್ರದ್ಯುಮ್ನನು ಮಾಡುವ ಲೀಲಿಯು ಬಳಿ |ಇದ್ದರು ಒಂದನು ಅರಿಯಳು ಎಂಬುದೆ 3ತತ್ವಭಿಮಾನಿಗಳೆಲ್ಲಸಮೀರಪ್ರ- |ವರ್ತಿಸಿದಂದದಿ ವರ್ತಿಪರೂ ||ಸತ್ಯವತಿ ಜಗತೊಬ್ಬನೆ ಅಚ್ಛಿನ್ |ಭೃತ್ಯಶಿವಾದ್ಯರು ಛಿನ್ನರು ಎಂಬುದೆ 4ಮೂಲದಲಿದ್ದ ಮಹತ್ಮಿ ನಿರುತ ಶ್ರೀ |ಲೋಲನ ಅವತಾರದೋಳುಂಟೂ ||ಕಾಳೀಶಗೆ ಕೊಂಡರೆ ಬರುತಿಪ್ಪುದು |ನೀಲಕಂಠ ಪ್ರಮುಖರಿಗಿಲ್ಲೆಂಬುದೆ 5ಚೇತನಚೇತನವಾದ ಜಗತ್ಯವು |ವಾತನಧೀನದೊಳಿರುತಿಹದೂ ||ಆತನು ರಮೆಯಧೀನವಳುಹರಿ|ದೂತಳೆಂದು ನಿಶ್ಚಯ ತಿಳಕೊಂಬುದೆ 6ಎಲ್ಲ ದಿವಿಜರವಲಕ್ಷಣ ಯುಕ್ತರು |ಬಲ್ಲಿದಹರಿಮಾರುತ ಮಾತ್ರಾ ||ಸಲ್ಲಕ್ಷಣರೆನುತಲಿ ತಿಳಿದು ಗಿರಿಜ |ವಲ್ಲಭಪ್ರಮುಖರಿಗೊಂದಿಸುತಿಪ್ಪುದೆ 7ಅಂಬುಜಭವ ಮೊದಲಾದವರಿಗೆ ಪೀ- |ತಾಂಬರತನ ಪೆಸರಿತ್ಯಹನೂ ||ಕಂಬಸದನ ತೊಲಿ ಜಂತಿಯು ಮಾಳಿಗಿ |ಎಂಬ ಶಬ್ದವಾಚ್ಯನುಹರಿಎಂಬುದೆ 8ಅರಸುಗಳಾದವರನುಗರ ಕೈಯಲಿ |ನರರ ಶೀಕ್ಷಿ ಮಾಡಿಸುವಂತೇ ||ಹರಿವಿಧಿಶಿವರೊಳು ತಾನಿಂತಾವಾಗ |ಮರಿಯಾದಿಗಳು ನಡಿಸುತಿಹ್ಯನೆಂಬುದೆ 9ಸೃಜಿಸುವ ಜನೊಳಿದ್ದು ಜಗವ ಪೊರವನು |ಭುಜಗಭೂಷಣನೊಳಿದ್ದು ಲಯಾ ||ದ್ವಿಜರೂಪಿಯೆ ಮಾಳ್ಪನು ಎಂತಿಳಿಯದ |ಕುಜನರು ನರಕವ ಐದುವರೆಂಬುದೆ 10ವಂದೊಂಧರಿ ನೇಮದಿ ಬಲ್ಲರು ಮರ |ಳೊಂದನರಿಯರಜಾದಿಗಳೂ ||ಮಂದರಧರಬಹು ಬಲ್ಲನು ಜೀವರ |ಬಂಧಕ ಶಕುತಿಯೊಳಿರಿಸಿಹನೆಂಬುದೆ 11ಜ್ಞಾನಾನಂದಾದಿ ಗುಣಭರಿತಹರಿ|ಹೀನತನವನೆಂದಿಗ್ಯು ಅರಿಯಾ ||ಕಾಣಿಸಿಕೊಳ್ಳನು ಎಂದಿಗು ಅಧಮರಿ- |ಗೇ ನಳಿನಾಕ್ಷನು ಎಂದುಚ್ಚರಿಪುದೆ 12ಝಷಮೊದಲಾದವತಾರವು ಮಿಥುನೀ |ದೆಶೆಯಿಂದಲಿ ಆಗಿಲ್ಲನಳಾ ||ಮಸಿಯಲು ಕಾಷ್ಠದಿ ತಾ ತೋರ್ವಂದದಿ |ವಸುದೇವಜನವ್ಯಕ್ತನು ಯಂದರಿವದೆ 13ಆಪಗ ವನಧಿಯನಳನಿಳಶಶಿರವಿ|ಈ ಪೊಡವೀವನನಿರಂತರದೀ ||ಶ್ರೀಪತಿಕಟ್ಟಲಿಯೊಳಗಿಹದೆಂದು ಪ- |ದೆ ಪದೆ ನೆನದು ಸುಖಬಡುತಲಿರುವುದೆ 14ನಿಶಿಯಲಿ ಕಂಡಿಹ ಸ್ವಪ್ನವು ನಿಶ್ಚಯ |ಅಸಮ ಸೃಜಿಸಿದ ಜಗತ್ಯವನೂ ||ಹುಸಿಎಂಬವ ಕುಲಭ್ರಷ್ಟನು ಎಂದಿಗು |ಹಸಗತಿ ಅವನಿಗೆ ಇಲ್ಲಿಲ್ಲೆಂಬುದೆ 15ಪ್ರಾಣಿಗಳೊಳಗಿದ್ದೆಲ್ಲ ಕೆಲಸವನು |ತಾನೆ ಮಾಡಿ ಮಾಡಿಸಿ ಫಲವಾ ||ಏನು ನೋಡೆ ನಿರ್ಮಲನಾಗಿಹಹರಿ|ಭಾನುಸಖ ಜಲದೊಳಿರುವಂತೆಂಬುದೆ16ತಾ ಬಂಧಿಸುತಿಹ ಸರ್ವ ಜಗತ್ಯವ |ನೂ ಬದ್ಧನು ಅಲ್ಲವು ಊರ್ಣಾ ||ನಾಭಿಯ ಜಾಲಿಯ ಹೊರಗಿರುವಂದದಿ |ಶ್ರೀ ಭಗವಂತನು ಇರುತಿಹನೆಂಬುದೆ17ಭಕ್ತಿಗೆ ಭೇದವು ಜ್ಞಾನಕೆ ಭೇದವು |ಮುಕ್ತಿಗೆ ಭೇದವು ಯಂತಿಳಿದೂ ||ಸುತ್ಪುರುಷರ ಸ್ನೇಹವ ಸಂಪಾದಿಸಿ |ಮತ್ತೊಂದೊಲ್ಲೆನು ಯಂದಿರುತಿಪ್ಪುದೆ 18ಸಾಧನತ್ರಯ ಫಲಗಳನು ವಿಚಾರಿಸಿ |ಮಾಧವನಗುಣಮಹತ್ಮಿಯನೂ ||ಸಾದರದಿಂ ಜ್ಞಾನಿಗಳ ಮುಖದಲಿ ದಿ- |ನೇ ದಿನೇಕೇಳಿವಿಜ್ಞಾನಘಳಿಸುವದೆ 19ಕಾಲಿಲ್ಲದೆ ನಡಿಯಲು ಬಲ್ಲನುಹರಿ|ಕೇಳುವ ಕಿಂವಿಯಿಲ್ಲದೆ ತನ್ನಾ ||ಲೀಲಿಯು ಹೀಂಗದೆ ಯಂದು ತಿಳಿಪುದಕೆ |ಈ ಲೋಕದಿಅಹಿಮಾಡಿಹನೆಂಬುದೆ 20ಚೇತನ ಕೃತ್ಯವ ಮಾಡುತಲಿಪ್ಪವ |ಚೇತನಗಳು ಚಿಂತಾಮಣಿ ದೇ- ||ವಾತರು ಸಂಜೀವನ ಪರ್ವತ ಶ್ರೀ-ನಾಥನ ಆಜÕವು ಯಿದು ಎಂದರಿವುದೆ 21ಸತ್ವಾದಿ ಗುಣರಹಿತ ಪರಮಾತ್ಮನು |ಚಿತ್ತು ಜ್ಞಾನಬಲ ಸುಖ ಪೂರ್ಣಾ ||ಮೃತ್ಯುಂಜಯಸಖಗುಣಶೂನ್ಯಂಬ ಪ್ರ- |ವರ್ತಕ ಹೀಗೆಂದೂ ತಿಳಿದೀಹದೆ 22ಯೇಸು ಯೇಸು ಕಲ್ಪಗಳಾದರು ಶ್ರೀ- |ವಾಸುಕಿಶಯನಗೆ ಎಂದೆಂದೂ ||ನಾಶವಿಲ್ಲ ವಿಶೋಕರು ಧರಿಯೊಳು |ಶ್ರೀಶನ ವ್ಯತಿರಿಕ್ತಾರಿಲ್ಲೆಂಬುದೆ 23ಬ್ರಹ್ಮಾದಿಗಳಿಗೆ ಜನಕನು ಶ್ರೀಪರ|ಬ್ರಹ್ಮಗೆ ಒಬ್ಬರು ಸರಿಯಿಲ್ಲಾ ||ಒಮ್ಮಿಗು ಅಧಿಕರು ಇಪ್ಪರೆ ಶೃತಿಯಲಿ |ಸಮ್ಮತವಾಗದೆ ಈ ನುಡಿಯಂಬುದೆ 24ಶತಸುಖಿ ವಿಧಿ, ಕೋಟಿ ಸುಖಿ ರಮಾ, ಪರಿ- |ಮಿತಯಿಲ್ಲದ ಸುಖಿ ಕೇಶವನೂ ||ಕ್ಷಿತಿಯೊಳು ಪರಮೇಶ್ವರನೈಶ್ವರ್ಯಕೆ |ಇತರರು ಆರುಂಟು ಸಮಾನೆಂಬುದೇ 25ತಾರಿಯು ಗಗನದೊಳೀಸವೆ ಯಂಬುದು |ಧಾರುಣಿಯೊಳಗೆಣಿಸಲಿ ಬಹುದೂ ||ನಾರಾಯಣನ ಮಹತ್ಮಿ ಗಣಣಿಯನು |ಆರಾರಿಲ್ಲವು ಬಲ್ಲವರೆಂಬುದೆ 26ವಿಶ್ವಾಸದಿ ದೂರ್ವಿಯ ದಳವಿತ್ತರೆ |ವಿಶ್ವಕುಟುಂಬಿಯು ಕೈಕೊಂಬಾ ||ಅಶ್ವಾದಿ ಮುಖದಿಂ ಪೂಜಿಸಲು ಅ |ವಿಶ್ವಾಸದವರು ಕೊಳ್ಳನು ಎಂಬುದೆ27ಗೋವಿಂದಗೆ ನಿಜ ನಾಮೆನಿಸುತಿಹವು |ಐವತ್ತೊಂದೂ ವರ್ಣಗಳೂ ||ಈ ವಿವರವು ತಿಳಿದೂ ನಿಂದಾಸ್ತುತಿಗಳು |ದೇವನ ಗುಣಕಥನಗಳೆಂದರಿವದೆ 28ದುರ್ಜನರಿಗೆ ಎಂದಿಗೂ ದಯಮಾಡನು |ನಿರ್ಜರೇಶ ಸಂತರಿಗೊಲಿವಾ ||ದುರ್ಜಯವಾದ ಮನಸು ನಿಶ್ಚೈಸುತ |ಅಬ್ಜದಳಾಕ್ಷನ ಒಲಿಸಿರೊ ಎಂಬುದೆ 29ಯಮ ನಿಯಮಾದಿಗಳಲಿ ದಾರಢ್ಯದಿ |ಕಮಲಾ ಸ್ವಸ್ತಿಕದಾಸನದೀ ||ಸಮಚಿತ್ತದಿ ರೇಚಕ ಪ್ರಮುಖದಲಿಂ |ಸಮಿರನ ಬಂಧಿಸಿ ಜಪವನು ಮಾಳ್ಪುದೆ 30ಸ್ವಾಗರ್ಭಕ ಆಗರ್ಭಕ ಎಂಬುವ |ಯೋಗದ ಲಕ್ಷಣ ತಿಳಕೊಂಡೂ ||ಮೂಗಿನ ತುದಿಯನೆ ಈಕ್ಷಿಸುತಲಿ ಶ್ರೀ |ಭಾಗೀರಥಿ ಪಿತನ ಸ್ಮರಿಸುತಿಪ್ಪುದೆ31ಅಂಗುಷ್ಠಾರಂಭಿಸಿ ಮಸ್ತಕತನ |ಕಂಗಜ ಜನಕನ ರೂಪವನೂ ||ಹಿಂಗದೆ ಧೇನಿಸಿ ಮೈರಧರುಷದಿ |ಕಂಗಳಿಂದುದಕ ಸೂಸುತಲಿಪ್ಪುದೆ 32ಈ ಕರ್ಮವ ಮಾಡಿದೆ ಯನಗೀಪರಿ|ಸಾಕಲ್ಲ್ಯೆವು ಆಯಿತು ಎಂದೂ ||ಲೋಕಕೆ ತಿಳಿಸದೆ ತನ್ನಯ ಭಾವವ |ಜೋಕಿಲಿ ಬಚ್ಚಿಟ್ಟೂಕೊಂಡಿರುವದೆ 33ಧ್ಯಾನಕೆ ಕುಳಿತರೆ ಮನ ಹರಿದೋಡಲು |ಜಾನಕಿರಮಣನ ಮೂರುತಿಯಾ ||ತಾನೀಕ್ಷಿಸುತಲಿ ಸರ್ವದ ತತ್ವದ |ರೇಣುದೊಳಗೆ ಮುಣಿ ಮುಣಿಗಿ ಯೇಳುವದೆ 34ಅಸುರರನಳಿಯಲು ಶಕ್ತನು ಶ್ರೀಹರಿ |ದಶರೂಪವ ತಾಳಿದನ್ಯಾಕೇ ||ವಸುಧಿಯೊಳಗೆ ಪಾಪಿಷ್ಠ ಜನರ ಮೋ- |ಹಿಸುವದಕೀಪರಿಲೀಲಗಳೆಂಬುದೆ 35ಅನ್ಯತ್ರದಿ ಇಂದ್ರಿಯಗಳ ಚಲಿಸದೆ |ತನ್ನೊಶದೊಳಗಿರಿಸನುದಿನದೀ ||ಪನ್ನಗಶಯನನ ಪೂಜಿಯ ಮಾಡುತ |ಧನ್ಯನು ಈ ನರನೆನಿಸುತಲಿಪ್ಪುದೆ 36ಕೋಪವ ಬಿಟ್ಟು ನಿರಂತರ ಜ್ಞಾನಿಗ- |ಳಾ ಪದ ಭಜಿಸುತ ಹರಿದಿನದೀ ||ಲೋಪವ ಮಾಡದೆ ನಿರ್ಜಲ ಜಾಗರ- |ವಾಪರಮಮುದದಿ ನಡಸುತಲಿಪ್ಪುದೆ 33ಋಣಕೆ ಕಾಳಕೂಟವ ಕುಡಿವಂತೆ ಮ- |ರಣದಂದದಿ ಸನ್ಮಾನಕ್ಕೇ ||ಕುಣುಪದಂತೆ ಪರಸ್ತ್ರೀ ನೋಡಲ್ ಭಯ |ವನು ಬಡುವನು ಬ್ರಾಹ್ಮಣನೆಂದರಿವದೆ 38ಶತಮಖನಿಗೆ ಈಶಬಲ ಅವಗೆ ಬಲ ಮ- |ರುತವಗೆ ಬಲಹರಿಅವಗೆಂದೂ ||ಇತರರ ಬಲ ಬೇಕಿಲ್ಲ ಸ್ವತಂತ್ರ |ಚ್ಯುತಸರ್ವಜÕ ಸುಗುಣ ಪೂರ್ಣೆಂಬುದೆ 39ಸಂಸಾರವ ಹೇಯಿಸಿಕೊಂಡಾವಗ |ಕಂಸಾಂತಕನೂಳಿಗವನ್ನೂ ||ಸಂಶಯವಿಲ್ಲದೆ ಮಾಡುತೊಂದಧಿಕ |ವಿಂಶತಿ ಕುಲ ಉದ್ಧಾರ ಮಾಡುವದೆ 40ಪ್ರಥಮ ವಯಸದಲಿ ವಿದ್ಯಾಭ್ಯಾಸವು |ದ್ವಿತಿಯದಲ್ಲಿ ಗೃಹಕರ್ಮವನೂ ||ತೃತಿಯದಿ ಸತ್ತೀಥ್ರ್ಯಾತ್ರಿಗಳನುಮಾ|ಡುತಲಲ್ಲೆಲ್ಲಿಹ ಮಹಿಮಿ ಕೇಳುವದು 41ಘೋರತರ ಕುಸಂಸಾರವೆಂಬ ಈ |ವಾರಿಧಿತ್ವರದಾಟುವದಕ್ಕೇ ||ಮಾರಮಣನ ನಾಮೋಚ್ಚಾರವೆ ನವ |ತಾರಕವೆಂದುಪದೇಶ ಮಾಡುವದೆ 42ಜಲದೊಳಗುದ್ಭವಿಸಿದ ಮುತ್ತುದಕ ಮ- |ರಳೆ ಹ್ಯಾಂಗಾಗದೊ ಅದರಂತೇ ||ಕಲಿಕ್ಯವತಾರನ ಶರಣರು ಎಂಬರು |ಇಳಿಯೊಳು ನರರೆಂದೆನಿಸಲು ಯಂಬುದೆ 43ದ್ವಾದಶ ನಾಮವ ಪಂಚಮುದ್ರಿಗಳು |ಆದರದಲಿ ಧರಿಸುತ ಪಂಚಾ ||ಭೇದವ ತಿಳಿದು ನಿರಂತರದಲಿ ದು- |ರ್ವಾದಿಗಳ ಮತವ ಹಳಿವುತಲಿಪ್ಪುದೆ 44ಮಧ್ವಮತದ ಸರಿ ಮತಗಳು ಸಪ್ತ ಸ- |ಮುದ್ರತನಕ ಹುಡುಕಿದರಿಲ್ಲಾ ||ಬುದ್ಧಿವಂತರೆಲ್ಲೀತನ ಸೇವಿಸಿ |ಸದ್ವೈಷ್ಣವರೆಂದೆನಿಸಿರೊ ಎಂಬುದೆ 45ಮಾತಾಪಿತೃರ ಆರಾಧನಿ ಬಲು |ಪ್ರೀತಿಲಿ ಮಾಡುತ ಭಾಸ್ಕರಗೇ ||ಪ್ರಾತರಾದಿ ಸಂಧ್ಯಾಘ್ರ್ಯವ ಕೊಡುತಲಿ |ಆ ತರುವಾಯ ಜಪಂಗಳ ಮಾಳ್ಪುದೆ 46ಗುರುಹಿರಿಯರ ಚರಣವ ವಂದಿಸುತಲಿ |ಪರರಿಗೆ ಉಪದ್ರವನು ಕೊಡದೇ ||ಮರುತಾಂತರ್ಗತನೋಲ್ಗವನಲ್ಲದೆ |ನರಸ್ತೋತ್ರವ ಸ್ವಪ್ನದಿ ಮಾಡದಿಹದೆ 47ನಡಿಯಲು ದಾರಿಯ ಮನಿಯೊಳಗಿದ್ದರು |ನುಡಿ ನುಡಿಗನಿರುದ್ಧನ ನೆನದೂ ||ಬಡವರೆ ಗೋಪಾಲನ ಹೊಂದಿದವರು |ಅಡವಿಯೊಳಿದ್ದರು ಧೊರಿಗಳೆ ಎಂಬುದೆ 48ಪರಮಾಣುಗಳೊಳು ತಾನಿಹ್ಯ ತನ್ನೊಳ- |ಗಿರಸಿಹನಗಣಿತ ಬೊಮ್ಮಾಂಡಾ ||ಶಿರಿಗೆಂದೆಂದಿಗಸದಳವು ತಿಳಿಯಲು |ಕರಿವರದಿಂಥ ಮಹತ್ಮನು ಎಂಬುದೆ 49ಹೊತ್ತರಾದಿನಿಶಿಪ್ರಹರಾಗುವನಕ |ಮೃತ್ತಿಕಿ ಶೌಚಾದಿ ಸುಕರ್ಮಾ ||ತತ್ತಲವಾಗದೆ ಶ್ರೀ ಮುದತೀರ್ಥರ |ಉಕ್ತ್ಯನುಸಾರಾಚರಿಸುತಲಿಪ್ಪುದೆ 50ಹಾನಿ ಲಾಭ ಜಯ ಅಪಜಯ ಮಾನಪ- |ಮಾನಸುಖಾಸುಖ ಸಮ ಮಾಡೀ ||ಈ ನರರಿಗೆ ತನ್ನಿಂಗಿತ ತೋರದೆ |ಪ್ರಾಣೇಶ ವಿಠಲನ ಕರುಣವ ಪಡೆವದೆ 51
--------------
ಪ್ರಾಣೇಶದಾಸರು
ಸ್ಮರಿಸುವೆ ನಾ ನಿಮ್ಮ ಚರಣಕಮಲಗುರುವಿಜಯರಾಯಜನ್ಮಾರಭ್ಯವು ನಿಮ್ಮ ಗುಣಕರ್ಮಗಳೆಲ್ಲ ವಿಜಯರಾಯದಿವಿಜರ ವೇಷದಿಂದವನಿಯೊಳುದಿಸಿದ್ಯೊ ವಿಜಯರಾಯಭಾಗವತಧರ್ಮವಹಿಸಿ ತ್ರಿರಾವರ್ತಿ ವಿಜಯರಾಯಕಂಚಿಕಾಳ್ಹಸ್ತಿ ಶ್ರೀರಂಗ ಸೇತುಯಾತ್ರೆ ವಿಜಯರಾಯಮರಿಯಾದೆಯಿಲ್ಲದೆ ವರಗಿರಿಯಾತ್ರೆಯ ವಿಜಯರಾಯಮಹಿಯಲ್ಲಿ ತಿರುಗಿ ಸರ್ವಕ್ಷೇತ್ರದಿ ವಿಜಯರಾಯಗುರೂಪದೇಶಕನಾಗಿ ವ್ಯಾಸಕಾಶಿಯಲ್ಲಿದ್ಯೊ ವಿಜಯರಾಯಸ್ವಚ್ಛವಾಗಿ ಗಂಗಾತೀರ ವಾಸಮಾಡಿ ವಿಜಯರಾಯತುಂಗಾತೀರದಿ ಕುಳಿತು ಗಂಗೆ ಪೆಚ್ಚಿಸಿದಿ ವಿಜಯರಾಯಮಧ್ವಮತದಸಾರಕವನದಿ ರಚಿಸಿದ್ಯೊ ವಿಜಯರಾಯಶುದ್ಧ ತತ್ವಸಾರ ಸುಳಾದಿ ಪದಮಾಡಿ ವಿಜಯರಾಯಸದಾಚಾರಸಂಪತ್ತು ಮಧುಕರವೃತ್ತಿಯು ವಿಜಯರಾಯಭಕ್ತರ ಅಪಮ್ಯತ್ಯುಬಿಡಿಸಿ ಆಯುನಿತ್ತೆ ವಿಜಯರಾಯನಿತ್ಯಾನ್ನ ಪುತ್ರೋತ್ಸವಗಳು ಭೃತ್ಯರಿಗೆ ವಿಜಯರಾಯಭಕ್ತಜನರಿಗೆ ತತ್ವೋಪದೇಶವ ಮಾಡಿ ವಿಜಯರಾಯಎಲ್ಲರಲಿ ಸಿರಿನಲ್ಲನ ಅಂಶವ ವಿಜಯರಾಯಬಲ್ಲಿದನೀನೊಂದುರೂಪದಿ ಎನ್ನಲ್ಲಿ ವಿಜಯರಾಯನಿಮ್ಮ ಪುಣ್ಯದ ಶೇಷವಿನ್ನು ಉಂಬೆವೊ ನಾವು ವಿಜಯರಾಯಎನ್ನಿಂದ ಆಗೋ ಸಾಧನವೆಲ್ಲ ನಿನ್ನದೊ ವಿಜಯರಾಯಈಗ ಈ ಯುಗದಿ ಸಾಧನವೆಂಬುದು ಕಾಣೆ ವಿಜಯರಾಯಗುರುನಿನ್ನ ಕರುಣಕವಚತೊಟ್ಟ ಭಕುತರ್ಗೆ ವಿಜಯರಾಯ
--------------
ಗೋಪಾಲದಾಸರು