ಒಟ್ಟು 111 ಕಡೆಗಳಲ್ಲಿ , 32 ದಾಸರು , 78 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೃಢಚಿತ್ತದೊಳಗೆನ್ನ ಒಡೆಯನೀತಗೆ ಮುನ್ನ ಪಡಿಯೆನಿಪರಿನ್ನುಂಟೆ ಪೊಡವಿಯಲ್ಲಿ ಜನವಾರ್ತೆಯನೆ ಕೇಳಿ ವನಿತೆಯೊಳು ಖತಿತಾಳಿ ಇನಿತು ಕಾಡಿದ ಚಾಳಿಯೊರೆವೆ ಕೇಳಿ ಮಡಿವಳನ ನುಡಿಗಾಗಿ ಕಡುಮೂರ್ಖ ತಾನಾಗಿ ಅಡವಿಗಟ್ಟುವರೇನೆ ಮಡದಿಯನ್ನೆ ಧರ್ಮಪತ್ನಿಯುಮಂತು ಪೂರ್ಣಗರ್ಭವನಾಂತ ಅರ್ಧಾಂಗಿಯನ್ನುಳಿದ ನಿರ್ದಯಾತ್ಮ ದಯೆಯೆಂಬುದಿವನಲ್ಲಿ ತೋರದಿಲ್ಲಿ ಪ್ರಿಯರಾರು ಮತ್ತಿವಗೆ ಧಾತ್ರಿಯಲ್ಲಿ ಭಯವಿಲ್ಲ ಮಾತಿನೊಳು ನಯವದಿಲ್ಲ
--------------
ನಂಜನಗೂಡು ತಿರುಮಲಾಂಬಾ
ದೇಹಿಯೆಂಬವನೊಡನೆ ನಾಸ್ತಿಯೆನಬೇಡ ಕಾಯೊ ವೆಂಕಟಪತಿಯೆ ಕಾರುಣ್ಯವಾರಿಧಿಯೆ ಪ ಮಾಡಿದಪರಾಧಗಳ ನೋಡಿ ಕ್ಷಮಿಸಿಯೆ ಯೆನಗೆ ರೂಢಿಯೊಳು ಬೆಳೆಸಿರಿಯ ಕೈಗೂಡಿಸಿ ಆಡಿ ತಪ್ಪಿದ ನುಡಿಯ ಕೂಡಿ ನಡೆಸುತ ಮುಂದೆ ಬೇಡಿದಿಷ್ಟವನಿತ್ತು ಮಾತಾಡಬೇಕೆನುತ 1 ನರನಾದ ಕುರಿಯಿದನು ಸಲಹಬೇಕೆಂದೆನುತ ಮೊರೆಯಿಟ್ಟು ನಿನ್ನಡಿಗೆ ಶರಣಾದೆನು ಕರುಣವಾರಿಧಿ ನಿನ್ನ ಚರಣದಾಭರಣನಿಗೆ ಹರಣವನು ಮರೆವಾಗೆ ಸ್ಮರಣೆ ನೀಡೆನುತ 2 ಗುಣವಾದ ಪತ್ರಿಕೆಯ ಕ್ಷಣದೊಳಗೆ ಹರಿದೆನ್ನ ಕಣುಮನಕೆ ದೃಢವಾದ ಗುಣವ ತೋರೆನುತ ಫಣಿಶಯನ ನಿನ್ನಡಿಗೆ ಮಣಿದು ಬೇಡುವೆ ನಾನು ಉಣಲಾಗದೋಗರವ ಉಣಿಸಬೇಡೆನುತ 3 ಕೆಟ್ಟ ಕೆಲಸವನಿದಿರು ದೃಷ್ಟಿಗಿಕ್ಕದೆÀಯೆನ್ನ ಬಿಟ್ಟು ಕಳೆಯಲು ಬೇಡ ಸೃಷ್ಟಿಪಾಲಕನೆ ಇಟ್ಟಡಿಯ ಕಮಲವನು ಮುಟ್ಟಿ ಭಜಿಸುವೆ ನಾನು ಹುಟ್ಟಿದೀ ಬವರದೊಳು ಕಷ್ಟ ಬೇಡೆನುತ 4 ಶುದ್ಧ ಸ್ನಾನವ ತೊರೆದು ಇದ್ದ ಜಪಗಳ ಮರೆದು ಕರ್ಮ ಒದ್ದು ಕಳೆದು ಉದ್ದಂಡವಾಗಿ ನಡೆದಿರ್ದ ಪಾಪಂಗಳನು ತಿದ್ದಿಟ್ಟು ಎನ್ನನುರೆ ಉದ್ಧರಿಸಬೇಕಯ್ಯ 5 ಪೊಡೆವಿಯೊಳಗೆನ್ನಂಥ ಕಡುಮೂರ್ಖರನು ಕಾಣೆ ಮಡದಿಯೆಂಬಡವಿಯೊಳು ಕೈದುಡುಕಿದು ಪಡೆದ ಮಕ್ಕಳ ಮುಂದೆ ಕಡೆ ಹಾಯುವವರಿಲ್ಲ ಒಡೆಯನಾಗಿಯೆ ಯೆನ್ನ ಬಿಡದೆ ಸಲಹೆನುತ 6 ನಾರಿ ಮಕ್ಕಳಿಗೆಲ್ಲ ಮೀರಿದಾಪತ್ತಿನಲಿ ತೋರಿಸುವೆ ನಿನ್ನ ಚರಣಂಗಳೆನುತ ಹಾರೈಸಿದ್ಹರಕೆಯಿದು ಭಾರವಾಗಿಯೆ ಶಿರದಿ ಏರಿದುದನಿಳುಹುವರೆ ದಾರಿ ತೋರೆನುತ 7 ತ್ರಾಹಿ ವೆಂಕಟರಾಯ ಕಾಯೊ ನಿನ್ನಯ ಮಾಯೆ ಮೋಹಿಸುತ ಜಗವೆಲ್ಲ ಬಾಯ ಬಿಡುತಿಹುದು ದೇಹಿಯೆನುತಿಹ ಜನಸಹಾಯನಲ್ಲವೆ ನೀನು ಮಾಯವಾಗದೆ ಮುಂದೆ ಆಯತನ ತೋರೆನುತ 8 ಸುರವಂದ್ಯ ಮುರಮಥನ ಗುರುದೈವ ಪರಮಾತ್ಮ ವರಲಕ್ಷ್ಮಿಕರವೆನಿಪ ಹರಿವೆಂಕಟೇಶ ಮರೆವಾಗದಿರು ಯೆನ್ನ ಕರೆದು ನೆರೆ ಸೌಖ್ಯವನು ಸ್ಥಿರವಾಗು ಎನ್ನೊಡನೆ ವರಾಹತಿಮ್ಮಪ್ಪ 9
--------------
ವರಹತಿಮ್ಮಪ್ಪ
ಧರ್ಮವೆಂದೆನಿಪ ಮಾರ್ಗವನು ಬಿಟ್ಟುಕರ್ಮವೆಂದೆನಿಪ ಕಾನನವ ಪೊಕ್ಕುದುರ್ಮಾರ್ಗದಲಿ ನಡೆದವಗೆ ಘೋರವ್ಯಾಧಿಕರ್ಮಪಾಕದಲಿ ಸಾರುತಿದೆ ಜಗದಿ ಪ ಹರಿಹರ ವಿಭೇದಗೈದವಂಗೆ ದಂತಚ್ಯುತವುಗುರುದೈವಗಳ ನಿಂದೆಗೈದವಗೆ ಉನ್ಮದವುಪರಸತಿಯ ಕಾಮಿಸಿದವಗೆ ಪಾಂಡು ರೋಗವುಕೆರೆಗಳನು ಒಡೆಸಿದಾತಗೆ ಶೀತಜ್ವರವುಹಿರಿಯರನು ಜರಿದವಗೆ ಪೀನಾಶಿ ರೋಗವುಧರೆಯನಳಿಸಿದವಗೆ ಸರ್ವಾಂಗ ಪರಿಶ್ವೇತವುಪುರ ಅಗ್ರಹಾರ ಕೆಡಿಸಿದವಗೆ ರಾಜರೋಗವೆಂದುಅರಿವುದು ಸಕಲ ಜನರು 1 ಕಥೆ ಪುರಾಣಗಳ ಹಳಿದವಗೆ ಕಾಸಶ್ವಾಸಮತಭೇದವನು ಮಾಡಿದವಗೆ ಮೂಲವ್ಯಾಧಿಪಿತಮಾತೆಯರ ಸಲಹದವಗೆ ಗಂಡಾಮಾಲೆಯತಿಗಳನು ನಿಂದಿಸಿದವಗೆ ಸನ್ನಿಪಾತ - ಪರಸತಿಯರಿಗೆ ಅಳುಪಿದಾತಗೆ ಮೂತ್ರ ಕೃಚ್ರಪತಿವ್ರತೆಯರ ಪೀಡಿಸಿದವಗೆ ಅತಿಸಾರಮತಿಗೇಡಿ ಮೂರ್ಖನಿಗೆ ಕ್ಷಯರೋಗ - ಇದುಕ್ಷಿತಿಯೊಳಗೆ ಸಿದ್ಧಾಂತ 2 ಶಿಶು ಹತ್ಯೆ ಗೈದವಗೆ ಕುಕ್ಷಿಶೂಲೆಪಶುಗಳನು ಮರ್ದಿಸಿದವಗೆ ಪ್ರಮೇಹವುಉಸಿರಲೇಕಿನ್ನು ಸ್ವಾಮಿದ್ರೋಹಿಗೆ ಬಹುಮೂತ್ರಪುಸಿಯನಾಡುವ ಪುರುಷಗೆ ರಕ್ತ ಕಾಳಿಹಸಿದವರಿಗನ್ನವಿಕ್ಕದವಗೆ ಆಮ್ಲಪಿತ್ತವೃಷಭವನು ಒದ್ದವಗೆ ಬಿಗರುವಾತಮುಸುಕುವುದು ವಿಶ್ವಾಸಘಾತಕಗೆ ನರರೋಗಪುಸಿಯಲ್ಲವಿದು ಕೇಳಿ ಜನರು 3 ಕೊಟ್ಟು ಭಾಷೆಯ ತಪ್ಪಿದವಗೆ ಉಪಜಿಹ್ವೆಕೊಟ್ಟು ತುಪ್ಪಿದವಗೆ ಕರಕಂಪನಕೊಟ್ಟರೂ ಕೊಡಲಿಲ್ಲವೆಂಬವಗೆ ಉದರರೋಗಕೊಟ್ಟವರಿಗೆರಡು ಬಗೆವಗೆ ಮೇಹರೋಗಅಷ್ಟಮದದಿಂದ ಮೆರೆವವಗೆ ಬೆರಗಿನ ರೋಗಬಟ್ಟೆಯೊಳು ಮುಳ್ಳು ಹರಡಿದವಗೆ ನೇತ್ರವ್ಯಾಧಿಹುಟ್ಟುವುದು ಕಂಕಣ ಕಂಟಕಗೆ ಕುಷ್ಠರೋಗಕಟ್ಟಿಟ್ಟ ಬುತ್ತಿ ಇದು4 ಕರ್ಮ ಬಲ್ಲವರಾರುಎಂದು ಮಂದಮತಿಗಳಾಗಿ ಕೆಟ್ಟಳಿಯದಿರೆಹಿಂದಣದೆಲ್ಲವೂ ಬಹದೆಂಬುದಕೆ ಸಾಕ್ಷಿಇಂದು ಕಣ್ಣೆದುರೆ ಜಗದೊಳಗೆ ತೋರುತಿಹುದಿಗೊಚಂದದಲಿ ತಾಯಿ ಮಗುವಿಗೆ ಮೊಲೆಯ ಹಾಲುಣಿಸುವಂದದಲಿ ಉಣಿಸಿದಲ್ಲದೆ ಬಿಡದು ಮರೆಯದಿರಿಕಂದರ್ಪಪಿತ ಸೊಂಡೆಕೊಪ್ಪದಾದಿಕೇಶವನಮುಂದರಿತು ಭಜಿಸಿ ಮುಕ್ತಿಯ ಪಡೆಯಿರಣ್ಣ5
--------------
ಕನಕದಾಸ
ನಿಜವತಂದೆ ಗುರುಕೃಪೆಯಿಂದ ಸುಖಿಯಾಗಿರೊ ಮನವೆ 1 ದೊರ್ಕದು ಎಂದಿಗೆ ಮೂರ್ಖರಿಗಿದು ತಾ ತರ್ಕರಹಿತ ಪರವಸ್ತು ಗರ್ಕನೆ ತಿರುಗಿ ಸರ್ಕನೆ ನೋಡಿ ಅರಿಕ್ಯುಳ್ಳವಗರ್ಜಿತ ನಿಜಧನವು 2 ಸಾಧಿಸಿ ಜನ್ಮಾಂತರದ ಪುಣ್ಯವು ಒದಗಿ ಬಂತಿದಿರಾಗಿ ಭೇದಿಸಿ ಬೆರಿ ಚೆನ್ನಾಗಿ ಮನವೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೆಚ್ಚದಿರು ಸಂಸಾರ ಕಡೆಗೆ ಹಾಕುವುದಲ್ಲ ಮಚ್ಚುಗೊಳಿಸುವುದು ವಿಷಯದಲಿ ಎಚ್ಚತ್ತು ಪ್ರವರ್ತಿಸು ಇನ್ನಾದರೂ ಸಿರಿ- ಅಚ್ಯುತನ ಪಾದವನು ನಂಬೊ ಪ್ರಾಣಿ ಪ ಪುಂಪೆಣ್ಗಳಿಂದ ಪುಟ್ಟಿದ ದೇಹವನು ತಿಳಿ ಕೆಂಪು ಬಿಳಿದಿನ ವರ್ಣ ಮಿಳಿತ ಇಂಪಾಗಿದೆಯೆಂದು ಹಿಗ್ಗದಿರೆಲವೊ ಹೊಲೆ- ಗಂಪು ನಾರುವುದು ಅದ ತೊಳೆಯದೆ ಇರಲು 1 ಜನಿಸಿದಾಕ್ಷಣ ಕಾಯು ಕಡಮೆಂದು ತಿಳಿಯದಲೆ ಜನನಿ ಜನಕರು ಸುಖಿಸುತಿಹರು ತನುಭ್ರಮಣವಲ್ಲದೆ ಚಿದ್ರೂಪ ಬಲ್ಲರೆ ಕೊನೆಗೆ ಏನಾಗುವುದೊ ಪ್ರಾಣಿ 2 ಗಳಿಸಿ ಧನ ತರುವಾಗ ಸುತ್ತ ನೆರೆದಿಹರೆಲ್ಲ ಭಳಿರೆ ಇವ ಮಹಾತ್ಮನೆಂದು ಘಳಿಗೆ ತೊಲಗಲು ಧನವು ಕರಗಿ ತಿಂದು ಪೋಗಿ ಹಳಿದು ಹಲ್ತೆರೆದು ಅಣಕಿಪರೋ-ಪ್ರಾಣಿ 3 ಹುಬ್ಬಿನಿಂದಲೆ ಹೊಡೆದು ಹೃದಯದ ಕಗ್ಗಂಟು ಕಬ್ಬು ಕಾರ್ಮುಕನಿಂದ ಬಿಡಿಸಿ ಉಬ್ಬಿಸ್ಯುಕ್ಕಿನ ತಂತಿಯಂತೆ ಮಾತುಗಳಾಡಿ ಉಬ್ಬಸವ ಬಡಿಸುವಳೊ ನಾರಿ ಪ್ರಾಣಿ 4 ಯೌವನವೊದಗಿದಾಗ ಏನೆಂದರೂ ಅಪ್ಪ ಅವ್ವಣ್ಣನೆಂದು ನಸುನಗುತ ಗವ್ವಳಿಕೆ ವೃದ್ಧಾಪ್ಯ ಬಂದೊದಗಲು ಇವನ ಬವ್ವನ ತೆರೆದಲಾಡಿಪರೋ-ಪ್ರಾಣಿ 5 ನಿಷ್ಠಕ್ಕೆ ದೇಹವನು ಮಾಡಿಕೊಂಡಂತೆ ನೀ ದುಷ್ಕರ್ಮಕೊಳಗಾಗದಿರೆಲೋ ನಿಷ್ಕಂಟಕವಾದ ಮಾರ್ಗದಲಿ ನರಹರಿಯ ನಿಷ್ಕಾಮದಲಿ ಭಜಿಸೊ ಮನವೆ ಪ್ರಾಣಿ 6 ಅಂ¨ಲಿಗೆ ಗೃಹಪಾಲ ಮನೆ ಮುಂದೆ ಹಗಲಿರುಳು ಹಂಬಲಿಸಿ ಬಿದ್ದಂತೆ ನೀನು ಕವಿ ಜೋತು ಬಿದ್ದು ಈ ಡಿಂಬವನು ಪೋಷಿಸದಿರೆಲವೊ-ಪ್ರಾಣಿ 7 ದೇಹಕ್ಕೆ ಬಲವಾಗಬೇಕೆಂದು ಎಲ್ಲರೊಳು ಕಂಡಲ್ಲಿ ಸ್ನೇಹಭಾವವನ್ನು ಬಯಸಿ ಕಾಯ ಪುಷ್ಟಿಯಿಂದ ಮೋಹಕ್ಕೆ ಒಳಗಾದೆಯಲ್ಲೋ-ಪ್ರಾಣಿ8 ಸ್ವಲ್ಪ ದಿನವುಳಿಯಿತು ಒಂದು ಸಾಧನ ಕಾಣೆ ಕಲ್ಪಾಯು ನಿನಗಿಲ್ಲವಲ್ಲೊ ಬಲ್ಪಂಥಗಳ ಮಾಡಿ ಭೋಗಪಡದಿರು ನಾಗ- ತಲ್ಪನ್ನ ಮೊರೆಹೋಗಲೋ-ಪ್ರಾಣಿ9 ದೇಶ ದೇಶವ ತಿರುಗಿ ಬಳಲಿ ಬಾಯಾರಿ ನೀ ಕ್ಲೇಶಕೊಳಗಾಗಿ ಹೊನ್ನುಗಳ ಏಸೇಸು ತಂದದ್ದು ಏನಾಯಿತೋ ಒಂದು- ಕಾಸು ನಾಳೆಗೆ ಕಾಣೆಯೋ-ಪ್ರಾಣಿ10 ಎಂದಿಗಾದರೋ ಇದೇ ಸಂಸಾರ ವಿಸ್ತಾರ ಒಂದಕ್ಕೆ ಒಂದೊಂದು ಅಧಿಕ ಬಂಧನವಲ್ಲದಲೆ ಲೇಶ ನಿರ್ಮಲ ಕಾಣೆ ಪೊಂದು ಸಜ್ಜನರಲ್ಲಿ ಮಂದ-ಪ್ರಾಣಿ11 ನಿತ್ಯ ಗಂಡಾಂತರದಿ ಬಿದ್ದು ಸಕಲಕ್ಕೆ ಕರ್ತೃ ನಾನೆಂದು ಕೂಗುವಿಯಲೊ ಮೃತ್ಯು ನಗುವುದು ನಿನ್ನ ಹೆಡತಲೆಯಲಿ ನಿಂದು ಚಿತ್ತದಲ್ಲಿ ತಿಳಿದು ತಲೆ ಬಾಗೊ-ಪ್ರಾಣಿ 12 ದೊಡ್ಡವನು ನಾನು ಎನಗೆಲ್ಲ ಜನರು ಬಂದು ಅಡ್ಡಬೀಳುವರೆಂಬ ಮಾತು ಹೆಡ್ಡತನ ತಾಳದಿರು ಕೊನೆಗೆ ಅನುಭವಕ್ಕು ಕಡ್ಡಿಯಂದದಿ ಮಾಳ್ಪರೋ-ಪ್ರಾಣಿ 13 ಕೋಟಿಯಾದರು ಕೇಳು ಅವರೋಕ್ಷಿಗಾದರೂ ಕೋಟಲೆಯೊಳಿರದೆ ಗತಿಯಿಲ್ಲ ತಾಟತೂಟಕ ಮಾಡಿ ಅವರಂತೆ ನುಡಿದು ಭವ ದಾಟಬೇಕೋ ಬೇಗ ಜಾಣ-ಪ್ರಾಣಿ14 ಆದರಿಸಿ ಸತಿಸುತರು ಬಂಧು ಬಳಗಕ್ಕೆ ಸಂ ಪಾದಿಸಿ ಧನ ಧಾನ್ಯ ತಂದು ಮೋದಪಡಿಸುವೆನೆಂದು ವಾದಿಸುವ ಮನುಜನ್ನ ಪಾದಕ್ಕೆ ಶರಣು ಸಾರೆಲವೋ-ಪ್ರಾಣಿ 15 ವನಧಿಯೊಳು ಸಪ್ತದ್ವೀಪದ ಮೃತ್ತಿಕೆ ಹಾಕೆ ದಣುವಿಕ್ಯಲ್ಲದೆ ಪೂರ್ಣವಹುದೆ ಇನಿತು ತಿಳಿಯೆಲ್ಲೆಲ್ಲಿ ತಂದ ಧನದಿಂದ ಭವ- ವನಧಿ ತುಂಬದು ಕಾಣೊ ಮರುಳೆ-ಪ್ರಾಣಿ 16 ನಿತ್ಯ ಬರೆದ ಲೆಖ್ಖವು ದಿವಾ ರಾತ್ರಿ ನೋಡುತಲಿದ್ದು ನಿನ್ನ ಪತ್ರ ಕರದಲಿ ಪಿಡಿದು ಈ ಮೂರ್ಖ ನರಮಹಿಷ- ಪುತ್ರನೆಂದು ನಸುನಗುವರಲ್ಲೋ-ಪ್ರಾಣಿ 17 ಎನಗೆ ತನಗೆಂದು ಯಮಭಟರು ಕರಗಳ ಹೊಯಿದು ಕಣಿದು ಭುಜ ಚಪ್ಪರುಸುತಿಹರೊ ಅನಿತರೊಳಗೆಚ್ಚರಿಕೆ ಎಚ್ಚತ್ತು ಹರಿಚರಣ ವನಜ ಧಾನ್ಯವ ಒಲವು ಮಾಡೊ-ಪ್ರಾಣಿ 18 ಶ್ರುತಿಗೆ ಅಪ್ರಾಮಾಣ್ಯ ಬಾರದಂತೆ ಮಧ್ವ ಮತಕೆ ವಿರೋಧವಾಗದಂತೆ ಕ್ಷಿತಿಯೊಳಗೆ ಸುಜನರಿಗೆ ಹಿತವಾಗುವಂತೆ ಶ್ರೀ- ಪತಿಯ ಸೇವಿಸಿ ಸುಗತಿ ಪಡೆಯೋ-ಪ್ರಾಣಿ 19 ಅರ್ಥಬಾರದು ನಿನ್ನ ಸಂಗಾತ ಕೇಳ್ ಕೊನೆಗೆ ವ್ಯರ್ಥಧಾವತಿ ಪ್ರಾಪ್ತಕರ್ಮ ತೀರ್ಥಯಾತ್ರೆಯ ಮಾಡಿ ನಿಸ್ಸಂಗನಾಗು ಯ_ ಥಾರ್ಥಾ ಜ್ಞಾನದಿಂದ ಬಾಳೊ ಪ್ರಾಣಿ20 ಶಿಥಿಲವಾಗಿ ಪೋಪ ದೇಹಕೆ ಮಮತಿಂದ ಮಿಥುನ ಭಾವಗಳನ್ನೆ ಬಯಸಿ ವ್ಯಥೆಪಟ್ಟು ಪಥತಪ್ಪಿ ನಡೆದು ನರಹರಿ ಸುಗಣ ಕಥೆಗೆ ವಿಮುಖನಾಗದಿರೆಲೊ-ಪ್ರಾಣಿ 21 ವನಗಿರೀ ನದಿ ಮೆದೆ ಹೊದರು ಗಹ್ವರ ಹುತ್ತ ವನರಾಶಿ ದ್ವೀಪ ಪಾತಾಳ ತನು ಮತ್ರ್ಯ ಸುರಲೋಕ ಜನನಿ ಜಠರದೊಳಿರಲು ಅಣು ಮಾತ್ರ ತಪ್ಪುವುದೆ ಬರಹ ಪ್ರಾಣಿ 22 ಹಲವು ಹಂಬಲ ಸಲ್ಲ ಆದ್ಯಂತಕಾಲದಲಿ ಗಳಿಸಿಕೋ ಪೂರ್ಣಾಯು ವಾಯು ಒಲಿಯದಲೆ ನಿನ್ನೊಳಗೆ ವಿಜಯವಿಠ್ಠಲರೇಯ ಸುಳಿಯ ಜಾಗ್ರತನಾ ಗೆಲೋ ಪ್ರಾಣಿ 23
--------------
ವಿಜಯದಾಸ
ಪಾಲಿಸೆ ಪದುಮಾಲಯೆ, ನೀನೇ ಗತಿ ಪ ಬಾಲಕನು ತಾನಾಗಿ ಗೋಪಿಗೆ ಲೀಲೆಯಿಂದಲಿ ನಂದ ಗೋಕುಲ- ಬಾಲೆಯರ ಮೋಹಿಸುತ ಅಸುರರ ಕಾಲನೆನಿಸಿದ ಬಾಲಕನ ಪ್ರಿಯೆ ಅಪ ಅನ್ಯರ ನೆನೆಯಲೊಲ್ಲೆ ನಿನ್ನಯ ಪಾದ- ವನ್ನು ನಂಬಿದೆ ನೀ ಬಲ್ಲೆ ತಡಮಾಡದೆ ಚಿಣ್ಣ ಕರೆಯಲು ಘನ್ನ ಮಹಿಮನು ಉನ್ನತದ ರೂಪಿನಲಿ ಗುಣಸಂ ಪನ್ನ ರಕ್ಕಸನನ್ನು ಸೀಳಿದ ಪನ್ನಗಾದ್ರಿ ನಿವಾಸೆ ಹರಿಪ್ರಿಯೆ 1 ಅರಿಯದ ತರಳನೆಂದು ಶ್ರೀಪತಿ ಸತಿ ಕರುಣದಿ ಸಲಹೆ ಬಂದು ಕರುಣಾಸಿಂಧು ಸರಸಿಜಾಸನ ರುದ್ರರೀರ್ವರ ವರದಿ ಮೂರ್ಖನು ಸುರರ ಬಾಧಿಸೆ ಹರಿವರರ ದಂಡೆತ್ತಿ ಬಹುಮುಖ ದುರುಳನ ಶಿರ ತರಿದವನ ಪ್ರಿಯೆ 2 ಅಜ ಮನಸಿಜ ಜನನಿ ಅಂಬುಜಪಾಣಿ ನಿತ್ಯ ಕಲ್ಯಾಣಿ ಕುಜನಮದರ್Àನ ವಿಜಯವಿಠ್ಠಲ ಭಜಿಸಿ ಪಾಡುವ ಭಕ್ತಕೂಟವ ನಿಜದಿ ಸಲಹುವೆನೆಂಬ ಬಿರುದುಳ್ಳವಿಜಯಸಾರಥಿ ವಿಶ್ವಂಭರ ಪ್ರಿಯೆ 3
--------------
ವಿಜಯದಾಸ
ಬೂಟಾಟಿಗನು ನಾನು ಸತ್ಯಮಾಯ ಝಾಟ ನಾಟಕವಾಡಿ ದಾಟಿ ಬೈಲಿಗೆ ನಿಂತ ಪ ಮಿಥ್ಯ ಪ್ರಪಂಚ ಮರೆದು ಅರ್ತು ನಿತ್ಯಸುಖದಿ ಮನ ಬೆರೆದು ಅರ್ತುಅರಿಯದೆ ಮತ್ರ್ಯದೊರ್ತನದೊಳಗಿರ್ದು ಗುರ್ತಿಟ್ಟು ಪರಲೋಕ ಸುರ್ತುಮಾಡಿಕೊಂಡ 1 ಸಾಧುವರ್ತನದ್ಹಾದಿ ತಿಳಿದು ನಿಜ ಶೋಧಿಸಿ ಕಾಲನ ಬಾಧೆ ಗೆಲಿದು ವಾದಿಮೂರ್ಖರ ಕೂಡಿ ವಾದಿಸದನುದಿನ ಸಾಧಿಸಿ ಪರಸುಖಸ್ವಾದ ಸವಿಯುವಂಥ2 ಕಾಮಕ್ರೋಧಾದಿಗಳಳಿದು ಮಹ ಪ್ರೇಮ ಮೋಹಂಗಳ ತುಳಿದು ಸ್ವಾಮಿ ಶ್ರೀರಾಮನ ಪ್ರೇಮ ಪಡೆದು ಮುಕ್ತಿ ಸಾಮ್ರಾಜ್ಯಸುಖ ಸಂಪಾದಿಸಿಕೊಂಡಂಥ 3
--------------
ರಾಮದಾಸರು
ಬ್ರಹ್ಮವೆತ್ತಲು ಪರಬ್ರಹ್ಮವೆತ್ತಲುಬ್ರಹ್ಮ ತಾವೆಯೆಂದು ವಾಚಾಬ್ರಹ್ಮವನೆ ಬಗಳುತಿಹರಿಗೆ ಪ ಆಸೆಯೆಂಬದು ಅಳಿಯಲಿಲ್ಲ ಆಕಾಂಕ್ಷೆತಾ ಕಳೆಯಲಿಲ್ಲಪಾಶವೆಂಬುದು ಬಿಗಿದು ಉರುಲು ಬಿದ್ದಿಹುದುದೋಷವೆಂಬುದು ಅಡಗಲಿಲ್ಲ ದುಷ್ಕøತವೆಂಬುದು ಒಣಗಲಿಲ್ಲಕ್ಲೇಶ ಪಂಚಕದ ವಿಷಯದಿ ಕೆಡೆದಿಹ ಮನುಜರಿಗೆ 1 ಕಾಮವೆಂಬುದು ಕಡಿಯಲಿಲ್ಲ ಕ್ರೋಧವೆಂಬುದು ಅಳಿಯಲಿಲ್ಲತಾಮಸವೆಂಬುದು ಶರೀರ ತುಂಬಿಕೊಂಡಿಹುದುಕಾಮಿತವೆಂಬುದು ಹೋಗಲಿಲ್ಲ ಕಷ್ಟವೆಂಬುದು ನೀಗಲಿಲ್ಲಪಾಮರರಾಗಿ ದಾಹಕೆ ಸಿಕ್ಕುಬಿದ್ದಿಹ ಮನುಜರಿಗೆ2 ಮೋಹವೆಂಬುದು ಹರಿಯಲಿಲ್ಲ ಮೂರ್ಖತೆಯೆಂಬುದು ಕರಗಲಿಲ್ಲಊಹೆ ಎಂಬ ಕುಬುದ್ಧಿಯು ಉಡುಗಲಿಲ್ಲದೇಹ ಶೋಧನೆ ತಿಳಿಯಲಿಲ್ಲ ದೇಹಿ ಚಿದಾನಂದ ಅರಿಯಲಿಲ್ಲಕಾಹುರ ಮದದಲಿ ಮರೆತಿಹ ಮಂಕುವನು ಮನುಜರಿಗೆ 3
--------------
ಚಿದಾನಂದ ಅವಧೂತರು
ಭಜರೇ ಹನುಮಂತಂ | ಮಾನಸಭಜರೇ ಹನುಮಂತಂ ಪ ಕೋಮಲ ಕಾಯಂ ನಾಮ ಸುದೇವಂ |ಭಜ ಸಖಸಿಂಹಂ ಭೂಸುರ ಶ್ರೇಷ್ಠಂ1 ಮೂರ್ಖ ನಿಶಾಚರ ವನ ಸಂಹಾರಂ |ಸೀತಾ ದುಃಖ ವಿನಾಶಕಾರಂ 2 ಪರಮಾನಂದ ಗುಣೋದಯ ಚರಿತಂಕರುಣಾರಸ ಸಂಪೂರ್ಣ ಸುಭರಿತಂ3 ರಣರಂಗ ಧೀರಂ ಗುಣಗಂಭೀರಂದಾನವ ದೈತ್ಯಾರಣ್ಯ ಕುಠಾರಂ 4 ಗುರು ಚೆನ್ನಕೇಶವ ಕದಳೀ ರಂಗಂಸ್ಥಿರ ಸದ್ಭಕ್ತಂ ಮುಖ್ಯಪ್ರಾಣಂ 5
--------------
ಕನಕದಾಸ
ಮದಲಗಟ್ಟಿ ಪ್ರಾಣನಾಥಾ ಮುದವನಿತ್ತು ಪಾಲಿಸಯ್ಯ ಪ ಮದನಜನಕ ಮಾಧವಾನಬೋಧವಿತ್ತು ಕರುಣಿಸಯ್ಯ ಅ.ಪ. ತಾಪ ಮೂರ್ತಿ ನೀನುದೀಪದಂತೆ ಹೊಳೆದು ಭವದಕೂಪ ದಾಟಿಸಯ್ಯಾ ಭೂಪ 1 ದೇವ ದೇವೋತ್ತಮನೆ ನೀನುಜೀವದಾನ ಮಾಡಿಸಯ್ಯಪಾವಮಾನಿ ಪರಿಕೆಸೆಮ್ಮಾನೋವನದೂರ ಮಾಡಿಸಯ್ಯಾ 2 ಅಂಧ ಬಧಿರ ಮೂರ್ಖ ಜನರುಬಂದು ನಿನ್ನ ವಂದಿಸಲುಛಂದದಿಂದ ಅವರ ದುರಿತವೃಂದವನ್ನು ನಾಶಗೈವೆ 3 ಭೂಸುರೇಂದ್ರ ವ್ಯಾಸರಿಂದಆರು ತುಂಗಾ ಹೃದವ ಬಿಟ್ಟುಭಾವಿಸುವೆ ಇಲ್ಲದೇವಆ ಸಮೀರ ಜಾತ ಶೂರ 4 ಮುದದಿನಾಥ ಜ್ಞಾನ ವಾತಾಕಂದಧೀಮಂಧ ರಾಮ ದೂತಾಹೃದಯ ಸದನದಲ್ಲಿ ತೋರೋತಂದೆಶ್ರೀನರಹರಿಯ ರೂಪ 5
--------------
ತಂದೆ ಶ್ರೀನರಹರಿ
ಮನುಜದನುಜ ರಿವರೆವೆ ನೋಡಿ | ದನುಜನು ದೈತ್ಯರೊಳೆನ ಬ್ಯಾಡಿ ಪ ಹರಿ ನೆನೆಯುತ ಹರಿಕಥೆಗಳ ಕೇಳುತ | ಹರಿ ಭಕುತಿಗೆ ಬೆರೆದವ ಮನುಜಾ | ನಿರುತ ಆಹಾರ ನಿದ್ರೆ ಚರಟ ಮಾತುಗಳಾಡಿ | ಬರಿದೆವೆ ದಿನಗಳೆವವ ದನುಜಾ 1 ಪರರ ಸದ್ಗುಣ ವಾಲಿಸಿಕೊಳುತಲಿ | ಸಕ | ಲರಿಗೆ ಮನ್ನಿಸುವವನೇ ಮನುಜಾ | ಗರುವ ಹಿಡಿದು ತನ್ನ ಹೊಗಳುತ ಅನ್ಯರ | ಬರಿದೆ ನಿಂದಿಸುವವನೆ ದನುಜಾ 2 ಪಥ | ಸರ್ಕನೆ ತಿಳಿದವ-ನೆವೆ ಮನುಜಾ | ಮೂರ್ಖತನ ಹಿಡಿದು ಸಾಧು ಸಂತರಲಿಕು | ತರ್ಕವ ಮಾಡುವವನೆ ದನುಜಾ 3 ಹುಟ್ಟಿದರಲಿ ಸಂತುಷ್ಟದಿ ಕವಳವ | ನಿಷ್ಠೆಗೆ ತಾರದವನೆ ಮನುಜಾ | ನೃಪರ ನಂಬಿ ಲಾಭಾ ಲಾಭ ಕೊಡುವ | ಸೃಷ್ಟೀಶನನು ಮರೆತವ ದನುಜಾ 4 ತಂದೆ ಮಹಿಪತಿ ಭೋಧವ ಮನದಲಿ | ತಂದು ಹರುಷವ ಪಡುವವ ಮನುಜಾ | ದಂದುಗ ಚಿತ್ತದಿ ಹೇಳಿದ ಮಾತಿಗೆ | ಸಂದೇಹ ಬಟ್ಟವನವ ದನುಜಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮರುಳೆ ಸುಖ ನೀನೆನು ಪಡೆದಿ ನರಜನುಮ ತಾಳಿ ಇಹ್ಯದಿ ಪ ಪರಿಪರಿ ಜನುಮ ತಾಳಿ ಪರಮ ಬಂಧದೊಳೊರಲ ಉರುಳಿ ವರಮುಕ್ತಿ ದೊರೆವ ಕೀಲಿ ಸ್ಮರಿಸಿ ಬಂದಿ ಹರಿಯ ಬಳಲಿ 1 ಅರಿಯದೆ ಮತ್ತು ಭವಮಾಲೆ ಕೊರಳಿಗ್ಹಾಕಿಕೊಂಡಿ ದುರುಳ ಮರೆಯಮೋಸ ಕಾಂಬೋದೆಲ್ಲ ಹರಿದು ಪೋಗ್ವುದು ಸ್ಥಿರವಲ್ಲ 2 ಸಮಯ ಮಿಂಚಿಪೋದ ಬಳಿಕ ಕ್ರಮದಿ ಮತ್ತೆ ಸಿಗುವುದೆ ಮೂರ್ಖ ವಿಮಲ ಶ್ರೀರಾಮ ಪಾದಕಮಲ ನಮಿಸಿ ಪಡಕೊ ಮುಕ್ತಿಮಾಲಾ 3
--------------
ರಾಮದಾಸರು
ಮೂರ್ಖ ತಿಳಿವನೆ ಗುರುವೆ ನಿನ್ನ ಬೋಧದ ಸವಿಯ ಅರ್ಕನಾ ತೇಜವನು ಗೊಗೆಯರಿದಪುದೇ ಪ ನೀನೆ ಪರಮಾತ್ಮನಿಹೆ ಎಂದು ನೀ ಬೋಧಿಸಲು ಮಾನವ ನಾನು ಪರಮಾತ್ಮನೆ ಏನಾದರೂ ಪೇಳಿ ಮೋಸಮಾಳ್ಪನು ಎಂದು ಸ್ವಾನುಭವ ಪಡೆಯದಲೆ ನಿನ್ನ ನಿಂದಿಸುವಾ 1 ಕರ್ಮದಾ ಸಂಕಲೆಯ ಕಟ್ಟಿಕೊಂಡಿಹ ಜೀವ ಕರ್ಮ ಕಳೆಯುವ ದಿವ್ಯ ಜ್ಞಾನವರಿಯುವನೇ ದುರ್ಮತಿಯು ದ್ವೇಷಿಸುತ ಬೋಧದಲಿ ಮನವಿಡದೆ ಧರ್ಮವಂತನು ಎಂಬ ಒಣ ಹೆಮ್ಮೆ ಪಡುತಿರುವ 2 ಈ ನಿಂದೆ ಸ್ತೋತ್ರಗಳಿಗೊಳಗಾಗುವವನೆ ನೀ ಸ್ವಾನುಭವಸಂವೇದ್ಯ ಕೇವಲಾನಂದಾ ನೀನೆ ಸರ್ವವ್ಯಾಪಿ ನಿನ್ನ ನಿಂದಿಸಿದೊಡೆ ತಾನು ತನ್ನನು ಬೈದು ದೂರಿಕೊಂಡಂತೆ 3 ಜಗದ ಸುಖಕಾಗಿ ಬಲು ಕಾತರಿಪ ಮನುಜನಿವ ಜಗದಾಚೆಗಿಹ ಪರಮಶಾಂತಿಯರಿಯುವನೇ ಸೊಗಸಾಗಿ ತಿಳಿಯುವೊಡೆ ಜಿಜ್ಞಾಸುವಲ್ಲದೆ ಅಘನಾಶಶಂಕರನೆ ಅನ್ಯರರಿಯುವರೇ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಮೂರ್ಖ ಬಲ್ಲನೆ ಸತ್ಯಸುಜ್ಞಾನಿ ನಡೆಯ ತಾರ್ಕಿ ಬಲ್ಲನೆ ಪರಸಾಧನದ ಬಗೆಯ ಪ ಕತ್ತೆ ಬಲ್ಲುದೆ ಹೊತ್ತ ಮುತ್ತುರತ್ನದ ಬೆಲೆಯ ತೊತ್ತು ಬಲ್ಲುದೆ ಮಹ ಉತ್ತಮರ ನಡೆಯ ಮಿಥ್ಯ ಬಲ್ಲನೆ ಶರಣಸತ್ಸುಜನರ ನೆಲೆಯ ಮೃತ್ಯು ಬಲ್ಲುದೆ ಹೊತ್ತು ಗೊತ್ತಿನ ಪರಿಯ 1 ಸೂಶೆಬಲ್ಲಳೆ ಸತಿಯ ಶೀಲವ್ರತನೇಮಗಳ ಕೋಳಿ ಬಲ್ಲುದೆ ಮರಿಗೆ ಮೊಲೆಹಾಲುಣಿಸಿ ಸಲಹೋದ ಕೇಳಬಲ್ಲನೆ ಕಿವುಡ ಆಲಿಸಿ ಏಕಾಂತವನು ಹೇಳಬಲ್ಲನೆ ಮೂಕ ಕೇಳಿ ಹರಿಚರಿತ 2 ಭ್ರಷ್ಟಬಲ್ಲನೆ ಸುಗುಣ ಶಿಷ್ಟ ಸಂತರ ಸಂಗ ದುಷ್ಟಬಲ್ಲನೆ ಪರರ ಕಷ್ಟನಷ್ಟಗಳ ಹುಟ್ಟುಗುರುಡ ಬಲ್ಲನೆ ಮುಂದಿಟ್ಟ ಗಂಟಿನ ವಿವರ ಕೆಟ್ಟಭವಿಬಲ್ಲನೆ ತತ್ತ್ವಕಟ್ಟಳೆಯ ಗುಟ್ಟು 3 ಕುರಿಯು ಬಲ್ಲುದೆ ತನ್ನ ಕೊರಲು ಕೊಯ್ಯವರೆಂದು ಮರುಳ ಬಲ್ಲನೆ ದೊರೆತ ನರಜನುಮ ಸಮಯ ನರಕದ ಹುಳ ಬಲ್ಲುದೆ ಕಾಳೋರಗನ ಹರಿದಾಟ ತಿರುಕ ಬಲ್ಲನೆ ಅರಸರ ಮನೆಯ ಸುದ್ದಿ 4 ಕಾಮಿಗಳು ಬಲ್ಲರೆ ನೇಮನಿತ್ಯದ ನಿಜವ ತಾಮಸರು ಬಲ್ಲರೆ ಸಾಮ ದಾನ ಗುಣವ ಪಾಮರರು ಬಲ್ಲರೆ ಭೂಮಿಯೊಳಧಿಕ ಮಮ ಸ್ವಾಮಿ ಶ್ರೀರಾಮನ ನಾಮಮಹಾತ್ಮೆಯನು 5
--------------
ರಾಮದಾಸರು
ಮೂರ್ಖರ ವಡಂಬಡಿಸಲಾಗವದೆಂದೆಂದು ಪ ಮಳಲ ತಂದಿಕ್ಕಿ ಗಾಣದೊಳಗ ಸಾಯಸದಿಂದ | ಬಲಿದು ಎಣ್ಣೆಯ ತೆಗೆಯಲಿಬಹುದು 1 ಗಿರಿಗಳಂದದಿ ಬಹಥೆರೆಗಳ ಕಡಿಯುತ | ಶರಧಿಯದಾಟಿ ಹೋಗಲು ಬಹುದು 2 ಇಳೆಯೊಳು ತಿರುಗುತ ದೇಶ ದೇಶಗಳನು | ಮೊಲದಾ ಕೋಡವ ದೊರಕಿಸಬಹುದು 3 ತೋರುವ ಮೃಗಜಲ ಹಿಡಿದು ಪ್ರಾಶನ ಮಾಡಿ | ನೀರಡಕಿ ಶಾಂತ ಮಾಡಿಲಿಬಹುದು 4 ಮೊಸಳಿದಾಡಿಯೊಳಿಹ ಅಮೌಲಿಕ ರತ್ನ ತನ್ನ | ವಶವನೆ ಮಾಡಿಕೊಳ್ಳಲಿಬಹುದು 5 ಪರಿ | ಶಿರಸದಿ ಬೇಗ ಧರಿಸಲಿಬಹುದು 6 ಗುರುಮಹಿಪತಿಸುತ ಪ್ರಭು ಗುರುತಿಲ್ಲವರಾ | ನೆರಳಿಗೆ ದೂರ ಕೈ ಮುಗಿವನು 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು