ಒಟ್ಟು 957 ಕಡೆಗಳಲ್ಲಿ , 98 ದಾಸರು , 740 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

3. ಎಲ್ಲ ಆಳ್ವಾರರು ಆಳ್ವಾರ್ ತಿರುವಡಿಗಳೆ ಶರಣೆನ್ನುತ ಬಾಳ್ವರು ಭಜಿಪುದು ಬಕುತಿಯಲಿ ಪ ಕೇಳ್ವರು ಕಥೆಗಳ ಮಮತೆಯಿಂದಲಿ ಮಾಳ್ವರು ಮನೆ ವೈಕುಂಠದಲಿ ಅ.ಪ ಮೊದಲಿನ ಮೂವರು ಮಾಧವನೆನುತ್ತ ಪದುಮನಾಭನೊಡನಾಡಿದರು ಅದುಭುತ ಮಹಿಮಾ ತಿರುಮೊಳಿಶಯ್ಯರ ಮುದದಿಂ ಶಿವ ಕೊಂಡಾಡಿದನು 1 ಮಧುರಕವಿಗಳು ನಮ್ಮಾಳ್ವಾರರ ಪದಗಳ ಪೂಜಿಸಿ ಹಾಡಿದರು ತದುಪರಿ ತಿರುವಾಯ್ಮೊಳಿಯನು ಅವರಿಂ ದಧಿಕರಿಸುತ ಹಿತವೆಸಗಿದರು 2 ಪೆರಿಯಾಳ್ವಾರರು ಹರಿಯನು ಪಾಡುತ ವರವೇದಕೆ ತಾವ್ ಮೊದಲಿಗರು ಪರಮಪಾವನೆ ಗೋದಾದೇವಿಯು ದೊರೆ ಶ್ರೀರಂಗನ ಕೈವಿಡಿದಳ್ 3 ಪೆರಿಯ ತಿರುಮೊಳಿಯ ತಿರುಮಂಗೈಯ್ಯರು ತಿರುಪ್ಪಾಣ ವಿಪ್ರನಾರಾಯಣ ತಿರುವನಂತಪುರದ ಕುಲಶೇಖರರು ಸಿರಿಯರಸನ ತೇರ ಮಾಡಿದರು 4 ಪರಮಾತ್ಮನ ಸನ್ನಿಧಿಯಿಂದಲ್ಲಿಗೆ ತೆರಳುತ ಮಹಿಮೆಯ ತೋರಿದರು ನಿರುತ ದೇವರೆಡೆ ಪೂಜೆಗೊಂಬರು ವರಜಾಜೀಶನ ಸೇವಕರು 5
--------------
ಶಾಮಶರ್ಮರು
351ಆದಿತ್ಯದೇವ ತ್ವತ್ಪಾದಯುಗಳಕಭಿ ವಾದನವ ಮಾಳ್ಪೆ ಅನುದೀನ | ಅನುದೀನ ಸಜ್ಜನರ ವ್ಯಾಧಿಯ ಕಳೆದು ಸುಖವೀಯೊ 1 352ಸಂಜ್ಞಾರಮಣ ನಿನಗೆ ವಿಜ್ಞಾಪಿಸುವೆನೊ ಸ ರ್ವಜ್ಞ ನೀನೆಂದು ಸರ್ವತ್ರ | ಸರ್ವತ್ರ ಎನಗೆ ಬ್ರ ಹ್ಮಜ್ಞಾನ ಭಕುತಿ ಕರುಣೀಸೊ 2 353 ಸೂರಿಗಮ್ಯನೆ ವಾಕ್ಶರೀರ ಬುದ್ಧಿಜವಾದ ಪಾರ ದೋಷಗಳನೆಣಿಸಾದೆ | ಎಣಿಸಾದೆ ಭಗವಂತ ನಾರಾಧನೆಯನಿತ್ತು ಕರುಣೀಸೊ 3 353 ರೋಹಿಣೀರಮಣ ಮದ್ದೇಹಗೇಹಾದಿಗಳ ಮೋಹ ಪರಿಹರಿಸಿ ಮನದಲ್ಲಿ | ಮನದಲ್ಲಿ ಎನಗೆ ಗರುಡ ವಾಹನನ ಸ್ಮರಣೆಯನು ಕರುಣೀಸೊ 4 354ಕ್ಷೀರಾಬ್ದಿಜಾತ ಮಾರಾರಿಮಸ್ತಕಸದನ ವಾರಿಜೋದ್ಭವನ ಆವೇಶ | ಆವೇಶಪಾತ್ರ ಪರಿ ಹಾರ ಗೈಸೆನ್ನ ಭವತಾಪ 5 355 ದತ್ತದೂರ್ವಾಸನನುಜ ಅತ್ರಿಸಂಭವನೆ ತ್ವ ದ್ಭøತ್ಯ ನಾನಯ್ಯ ಎಂದೆಂದು | ಎಂದೆಂದು ಪ್ರಾರ್ಥಿಸುವೆ ಹೃತ್ತಿಮಿರ ಕಳೆದು ಸಂತೈಸೊ 6 356 ಕೋಲ ಭೂನಂದನ ಪ್ರವಾಳ ಸಮವರ್ಣ ಕರ ವಾಳ ಸಮಖೇಟ ನಿಶ್ಯಂಕ | ನಿಶ್ಯಂಕನಾಖ್ಯ ಸುರ ಮೌಳಿ ನೀಯೆನ್ನ 7 357 ಮಂಗಳಾಹ್ವಯನೆ ಸರ್ವೇಂಗಿತಜ್ಞನೆ ಅಂತ ರಂಗದಲಿ ಹರಿಯ ನೆನೆವಂತೆ | ನೆನೆವಂತೆ ಕರುಣಿಸೊ ಅನುದಿನ 8 358 ಭೌಮರಾಜನೆ ತ್ವನ್ಮಹಾಮಹಿಮೆ ತುತಿಸಲ್ಕೆ ಪಾಮರನಿಗಳವೆ ಎಂದೆಂದು | ಎಂದೆಂದು ಸಜ್ಜನರ ಕಾಮಿತಾರ್ಥವನೆ ಕರುಣೀಸೊ 9 359 ಬುಧನೆ ನೀ ಸುಗುಣವಾರಿಧಿಯೆಂದು ಬಿನ್ನೈಪೆ ಕ್ಷುಧೆಯ ಸಂಹರಿಸಿ ಸುಜ್ಞಾನ | ಸುಜ್ಞಾನ ಸದ್ಭಕ್ತಿ ಸುಧೆಯ ಪಾನವನೆ ಕರುಣೀಸೊ 10 360 ಚಂದ್ರನಂದನ ಸತತ ವಂದಿಸುವೆ ಮನ್ಮನದ ಮಮದೈವ ಸರ್ವ ಗೋ ವಿಂದನಹುದೆಂದು ತಿಳಿಸಯ್ಯಾ 11 361 ತಾರಾತ್ಮಜನೆ ಮಚ್ಛರೀರದೊಳು ನೆಲೆಗೊಂಡು ತೋರು ಸಜ್ಜನರ ಸನ್ಮಾರ್ಗ | ಸನ್ಮಾರ್ಗ ತೋರಿ ಉ ದ್ಧಾರಗೈಸೆನ್ನ ಭವದಿಂದ 12 362 ನತಿಸಿ ಬೇಡುವೆ ಬೃಹಸ್ಪತಿ ಗುರುವೆ ಎನ್ನದು ರ್ಮತಿಯ ಪರಿಹರಿಸಿ ಸುಜ್ಞಾನ ಸುಜ್ಞಾನವಿತ್ತು ಶ್ರೀ ಪತಿಯ ತೋರೆನ್ನ ಮನದಲ್ಲಿ 13 363 ಸುರರಾಜಗುರುವೆ ತ್ವಚ್ಚರಣಾರವಿಂದಗಳಿ ಗೆರಗಿ ಬಿನ್ನೈಪೆ ಇಳೆಯೊಳು ಇಳೆಯೊಳುಳ್ಳಖಿಳ ಬ್ರಾಹ್ಮ ಣರ ಸಂತೈಸೋ ದಯದಿಂದ 14 364 ತಾರಾರಮಣನೆ ಮದ್ಬಾರ ನಿನ್ನದೊ ಮಹೋ ದಾರ ನೀನೆಂದು ಬಿನ್ನೈಪೆ | ಬಿನ್ನೈಪೆ ದುರಿತವ ನಿ ವಾರಿಸಿ ತೋರೊ ತವರೂಪ 15 365 ಶಕ್ರಾರಿಗಳ ಗುರುವೆ ಶುಕ್ರಮುನಿರಾಯ ದರ ಚಕ್ರಾಬ್ಜಪಾಣಿ ಗುಣರೂಪ | ಗುಣರೂಪ ವ್ಯಾಪಾರ ಪ್ರಕ್ರಿಯವ ತಿಳಿಸೊ ಪ್ರತಿದೀನ 16 366 ಕವಿಕುಲೋತ್ತಂಸ ಭಾರ್ಗವ ಬೇಡಿಕೊಂಬೆ ಭಾ ಗವತ ಭಾರತ ಮೊದಲಾದ | ಮೊದಲಾದ ಶಾಸ್ತ್ರಗಳ ಶ್ರವಣ ಸುಖವೆನಗೆ ಕರುಣೀಸೊ | 17 367 ನಿಗಮಾರ್ಥ ಕೋವಿದನೆ ಭೃಗುಕುಲೋತ್ತಂಸ ಕೈ ಮುಗಿದು ಬೇಡುವೆನೊ ದೈವಜ್ಞ | ದೈವಜ್ಞ ಹರಿಯ ಓ ಲಗದಲ್ಲಿ ಬುದ್ಧಿಯಿರಲೆಂದು 18 368 ತರಣಿನಂದನ ಶನೈಶ್ಚರ ನಿನ್ನ ದಿವ್ಯ ಪದಾಬ್ಜ ಕ್ಕೆರಗಿ ಬಿನ್ನೈಪೆ | ಬಿನ್ನೈಪೆ ಬಹುಜನ್ಮಕೃತ ಪಾಪ ತ್ವರಿತದಿಂದಿಳಿಸಿ ಪೊರೆಯೆಂದು 19 369 ಛಾಯಾತನುಜ ಮನೋವಾಕ್ಕಾಯ ಕ್ಲೇಶಗಳಿಂದ ಸಮಯದಿ ಶ್ರೀ ಲಕ್ಷ್ಮೀನಾ ರಾಯಣನ ಸ್ಮರಣೆ ಕರುಣೀಸೊ 20 370 ಇದನೆ ಬೇಡುವೆ ಪದೇಪದೆಗೆ ಪುಷ್ಕರನ ಗುರುವೆ ಹರಿಮೂರ್ತಿ ಕೀರ್ತನೆಗೆ ಳೊದಗಲೆನಗೆಂದು ಬಿನ್ನೈಪೆ 21 371ಅಹಿಕ ಪಾರತ್ರಿಕದಿ ನರಹರಿಯದಾಸರ ನವ ಗ್ರಹದೇವತೆಗಳು ದಣಿಸೋರೆ | ದಣಿಸೋರೆ ಇವರನ್ನು ಅಹಿತರೆಂದೆನುತ ಕೆಡಬೇಡಿ22 372 ಜಗನ್ನಾಥವಿಠ್ಠಲನ ಬದಿಗರಿವರಹುದೆಂದು ಹಗಲಿರುಳು ಬಿಡದೆ ತುತಿಸುವ | ತುತಿಸುವ ಮಹಾತ್ಮರಿಗೆ ಸುಗತಿಗಳನಿತ್ತು ಸಲಹೋರು 23
--------------
ಜಗನ್ನಾಥದಾಸರು
5. ವಿಶಿಷ್ಟ ಗೀತೆಗಳು ಭ್ರಮರಗೀತೆ 92 ಭೃಂಗಾ ನಿನ್ನಟ್ಟಿದನೇ ಶ್ರೀರಂಗ ಮಧುರೆಲಿ ನಿಂದುಅಂಗಜಲುಬ್ಧಕ ಪೂಗೋಲಂಗಳ ತಡೆಯನಿಕ್ಕಿಅಂಗನೇರೆಂಬೋ ಹುಲ್ಲೆ ಮೃಗಂಗಳಿಗೆ ಗುರಿಯೆಚ್ಚುಹಿಂಗಿಸುತೈಧಾನೆ ಅಸುವ ಹೇ ಕಿತವಾ ಪ ನಿನ್ನ ನೋಡೆ ನಮ್ಮ ಅಚ್ಯುತನ್ನ ಕಂಡಂತಾಯಿತಯ್ಯಚನ್ನಿಗರರಸ ಕುಶಲೋನ್ನತಿಯೊಳಹನೇನೋಚಿಣ್ಣತನ ಮೊದಲಾಗವನ್ನ ಕಿತವ ಬಲ್ಲೆವೋಗನ್ನಗಾರ ಚಿತ್ತ ಚೋರನ್ನ ಶ್ರೀ ಹರಿಯಾಮನ್ನಣೆಗೆ ಮೆಚ್ಚಿ ತನುವನ್ನೊಪ್ಪಿಸಿದ ಮುಗುದೆವೆಣ್ಣುಗಳ ವಿರಹಾಬ್ಧಿಯನ್ನೆ ದಾಟಿಸುವೆನೆಂದುತನ್ನ ನೇಹವೆಂಬೋ ನಾವೆಯನ್ನೇರಿಸಿ ಮೋಸದಿನಡುನೀರೊಳು ತೊರೆದ್ಹೋದನೆ ಹೇ ಕಿತವಾ 1 ತಮ್ಮ ನಂದಗೋಪ ಯಶೋದಮ್ಮನ ಕಂಡುಬಾರೆಂದುರಮ್ಮ್ಮೆಯ ರಮಣ ನಿನ್ನನೊಮ್ಮೆ ಕಳುಹಿದನೈಸೆಹಮ್ಮುಗೆಟ್ಟಾರಮ್ಮಣೇರಿಂದುಮ್ಮಳಿಸುವೆವೊ ವೃಥಾನಮ್ಮ ಹಂಬಲಿನ್ನೇನವಗೆ ಶ್ರೀ ಹರಿಗೆಹೊಮ್ಮೇಲಟ್ಟದಲಂಚೆಯಗಮ್ಮನೇರ ಕುಚದ ಕುಂ-ಕುಮ್ಮ ಕಸ್ತೂರಿಯ ಕರದಿಮ್ಮನದಿ ಸಿಲುಕಿದಂಗೆಕಮ್ಮಗೋಲನ ಬಾಣಂಗಳುಮ್ಮಳಿ ನೋಯಿಸುತಿವೆಸುಮ್ಮನೆ ಬಾಹೋದು ಸುಲಭವೆ ಹೇ ಕಿತವಾ2 ಮಧುವೈರಿ ಮೇದಿನಿ ನಿಟ್ಟಿಸಲಾಗಮೃದುವಾಕ್ಯದೊಳೆಮ್ಮಪ್ಪಿ ಅಧರಾಮೃತ ಭೋಜನಕ್ಕೊದಗುವ ಸತತ ಸನ್ನದ್ಧ ನಮ್ಮನಗಲಿ ಕಲ್ಲೆದೆಯಾದನೆಂತೋ ಕೃಪಾಳು ಹೇ ಕಿತವಾ 3 ಮಜ್ಜನ ಸಾಯುಜ್ಯ ಸುಖವತ್ತಲಿಪ್ಪುದೂ ಶ್ರೀ ಹರಿಯಅಬ್ಜಭವ ಮುನಿಜನ ಪೂಜ್ಯನಗಲಿದ ಮ್ಯಾಲೆನಿರ್ಜೀವಿಗಳಾಗಿ ಕಣ್ಣ ಕಜ್ಜಲ ಕಲಕಿಕೊಂಡುಲಜ್ಜೆಗೆಟ್ಟು ತನುಲತೆ ಜರ್ಝರಿತದಿ ಜೀವಿಸೆವಜ್ಜರೆದೆಯಲ್ಲವೆ ನಮ್ಮದು ಹೇ ಕಿತವಾ 4 ಕೌಸ್ತುಭ ವೈಜಯಂತಿ ಮಾಲೆಶ್ರೀ ತುಲಸಿ ಘಮಘಮಿಸುತ್ತಲಿಹ ವನಮಾಲೆರತುನ ಕಂಕಣ ಭುಜಕೀರ್ತಿಯಿಂದೊಪ್ಪುವ ಪುರುಷೋತ್ತಮನ್ನ ಬಣ್ಣಿಪರುಂಟೇ ಹೇ ಕಿತವಾ 5 ಉತ್ಪಲ ಶ್ಯಾಮಲ ಮುದವೆತ್ತ ಬಾವನ್ನವದೀಡಿಅತ್ಯಮಲ ಪೊನ್ನಂಬರ ಸುತ್ತಿದಮತ್ತಾ ನೂಪುರ ಝಣತ್ಕಾರದಿ ಮಿಂಚಿಯೆಮ್ಮಚಿತ್ತಶಿಖಿಗೆ ಪೀಯೂಷಸಿಕ್ತ ಮೇಘದಂತೆ ಒಪ್ಪುವ ಶ್ರೀಹರಿಯಹೆತ್ತ ತಾಯಿ ಆಪ್ತ ಬಂಧು ಗೋತ್ರ ಗತಿ ನೀನೆ ನಮ್ಮ ಚಿತ್ತವೆಂದು ನಂಬಿ ತನ್ನ ಹತ್ತಿಲಿ ಸಾರಿದವರಒತ್ತಿ ತಾಂ ರಥವನೇರಿ ಸತ್ವರ ಬರುವೆನೆಂದುಮತ್ತಕ್ರೂರನೊಡನೈದಿದ ಹೇ ಕಿತವಾ 6 ಲಕ್ಷುಮಿರಮಣನವ ಸೂಕ್ಷುಮ ಗೊಲ್ಲತೇರಾವುಕುಕ್ಷಿಯೊಳು ಬೊಮ್ಮಾಂಡವವಗೆ ಮಕ್ಷಿಕಗಳಂತಿಪ್ಪೆವುಮೋಕ್ಷದರಸನು ಅವ ಗೋಕ್ಷೀರದಿ ತೃಪ್ತರಾವುಲಕ್ಷಿಸುವದೆಂತೋ ಎಮ್ಮನು ಶ್ರೀ ಹರಿಯುರಕ್ಷಿಸಲುದಿಸಿ ಜನರಕ್ಷಣೆಗೆ ಪಾಲÉ್ಬಣ್ಣೆಯಭಕ್ಷಿಸಿ ನಿರುತ ನಮ್ಮ ಅಕ್ಷಿಗೆ ಹಬ್ಬವನುಣಿಸಿಈ ಕ್ಷೋಣಿ ಚರಾಚರ ದೀಕ್ಷಿಗೆ ನರರ ಸಾಮ್ಯವಕ್ಷ(ಮ)ಣರಾದೆವೊ ಮೂರ್ಖರೋ ಹೇ ಕಿತವಾ 7 ಸಿರಿ ಮಂದರೋದ್ಧರನಂಘ್ರಿಯಪೊಂದುವ ಭಾಗ್ಯಕ್ಕೆಣೆ ಉಂಟೆ ಶ್ರೀಹರಿಯಅಂದೆಮ್ಮೊಳು ರಾಸಕ್ರೀಡೆಯಿಂದ ಬಂದಪರಾಧವ-ನೊಂದನೆಣಿಸದೆ ಸಲಹೆಂದು ಬಿನ್ನೈಸಿ ಸಾಷ್ಟಾಂಗದಿಂದವಂದಿಪೆವೋ ಭಕ್ತ ಬಂಧುವಿಗೆ ನಮ್ಮ ಹೃದಯ ಮಂದಿರದೊಳೆಂದೆಂದಿರೆಂದು ಹೇ ಕಿತವಾ 8 ಹೆಂಗಳೇರೊಂದಾಗಿ ಅಂತರಂಗದರಸನಾಡಿದಮಂಗಳಚರಿತೆಯನ್ನು ಸಂಗೀತದಿಂ ಪೊಗಳುತ್ತಕಂಗಳಶ್ರುಗಳೆವುತ್ತ ಇಂಗಿತಜ್ಞ ದೇವ-ನಂಗಸಂಗದ ಸುಖವ ನೆನೆದು ಶ್ರೀಹರಿಯಮಂಗಳ ವೇದಸ್ತೇಯಾರಿ ಶೃಂಗಾರ ಕೂರವ ನಮ್ಮಪೊಂಗಣ್ಣನ ಸೀಳ್ದ ನರಸಿಂಗ ವಟು ಭಾರ್ಗವನೆಅಂಗದ ಪಾರ್ಥ ಕಂಬುತುರಂಗಪ ರಂಗವಿಠಲತುಂಗ ಮಹಿಮ ನಮೋ ಎಂಬೆವೋ ಹೇ ಕಿತವಾ 9
--------------
ಶ್ರೀಪಾದರಾಜರು
624ಚಿ ಇಂದು ಧನ್ಯವಾಯಿತು ಜನುಮ ಬಂದು ಕೂಡಿದ ಘನ ಮಹಿಮ ಧ್ರುವ ಏನು ಪುಣ್ಯ ಮಾಡಿದ್ದೆವೊ ಮೊದಲೆ ಖೂನಗಂಡೆವೊ ಹರಿಯ ಮನದಲಿ ಕಾಣದಿದ್ದೆವೊ ಏಸು ಜನ್ಮದಲಿ ತಾನೆ ಒಲಿದು ಬಂದು ಸುಪ್ರಸನ್ನಲಿ 1 ಬ್ರಹ್ಮಾದಿಕರಿಗೆ ದಾವ ದುರ್ಲಭ ನಮ್ಮ ನೆನವಿನೊಳಾದವ ಸುಲಭ ತಮ್ಮ ನಿಜಸುಖದ ನೆಲೆನಿಭ ಬ್ರಹ್ಮಾನಂದ ದೋರಿದ ಪ್ರಾಣದೊಲ್ಲಭ 2 ಖೂನದೋರಿತು ಮುನ್ನ ನಾ ಮಾಡಿದ ಭಾನುಕೋಟಿತೇಜನ ಕೈಗೂಡಿದ ಅನುಭವಾಮೃತಸಾರ ನೀಡಿದ ದೀನ ಮಹಿಪತಿ ಮನೋಹರ ಮಾಡಿದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅಕ್ಷರ ಮಾಲಾ ಅದ್ವೈತ ಅಗಣಿತಆದ್ಯಂತ ರಹಿತಇಹ ಪರಕೆ ವರ್ಜಿತಈಶ್ವರಯ್ಯ |ಉದಯಾಸ್ತಗಳಿಲ್ಲಊ(ಉ)ಚ್ಚ ನೀಚಗಳಿಲ್ಲಋಷಿಯ ಮೂಲವ ಬಲ್ಲವರಾರಿಲ್ಲಲೃ ಚೇಕಗಳಿಲ್ಲಲñ ಗಳಿಲ್ಲಏಕಮೇವ ತಾನೆಲ್ಲಐಕ್ಯ ಮೊದಲಿಗಿಲ್ಲ ಸೌಖ್ಯಾನಂದಓದಲಿಕೆ ಅಳವಲ್ಲಔದಾಸೀನ ಶೀಲಅಂತ ತಿಳಿಯದು ಬಹಳಅ:(ಹ)ರ್ನಿಶಿಯಲಿ || ಹರ ಹರಾ ಮಹಾದೇವ ಶಿವ ಶಿವ ಮಹಾದೇವ ಶಂಕರಾ ಮಹಾದೇವ ದೇವ ದೇವಾ 1 ಮೂರ್ತಿ ನೀಕಿರಣ ಕೋಟಿ ಪ್ರಕಾಶ ಮಹಿಮ ಕೀರ್ತಿ ನಿಮ್ಮದು ಬಹಳಕುಳಿತಲ್ಲಿ ನಿಂತಲ್ಲಿಕೂ(ಖೂ)ನ ನಾ ತಿದ್ದದೆ ಕಾಲಿಲೊದ್ದುಕೇಳಿ ಬಂದೆನು ಮಹಿಮೆಕೈ ಮುಗಿದು ಶರಣೆಂಬೆಕೋಟಾಳ (ಕೋಟಲೆ) ನಮ್ಮದು ಬಿಡಿಸು ದೇವಾಕೌ (ಕವಿ)ದು ಕೊಂಡಿದೆ ಮಾಯೆಕಂಬನಿಯ ತೆರೆ ಗುಡಿದುಕಃ(ಷ)ಷ್ಟ ಕಷ್ಟ ಜನ್ಮ ಬಹಳ ಕಷ್ಟ || ಹರಹರಾ 2 ಖಳರ ಸಂಗತಿಯಿಂದಖಾತಿಗೆ ನಾ ಬಿದ್ದೆಖಿನ್ನನಾದೆ ಅಳುಕಿ ಭಿನ್ನನಾದೆ ಖೀ(ಕೀ) ಸುತಿದೆ ಬಲು ಬಯಕೆಖುರ ಖುರಿ ಗುಟ್ಟುತಲಿಖೂನ ತೋರಿಸಿ ನಮ್ಮ ಕಡೆದಾಟಿಸು ಖೇದವನು ಬಡಲಾರೆಖೈರದ ಮನೆಯಲಿಖೋಡಿತನ ನಮ್ಮದು ಬಿಡಿಸು ದೇವ ಖೌ(ಖವ)ಟ ಮನವನು ಬಿಡಿಸಿಖಂ ಮಗೆ (ಖಮಂಗ) ಮಾಡಯ್ಯಖಃಖಃ ಎನುತಲಿ ಕೆಮ್ಮಲಾರೆ || ಹರಹರಾ 3 ಗದ್ದಲ ಮನದಿಂದ ತಿದ್ದಲಾರದೆ ಹೋದೆಗಾವಿಲ ನಾನಾದೆ ಕರುಳನಾದೆಗಿರಿಜೇಶ ನೀ ಕೇಳು ಪ್ರಳಯಕ್ಕೆ ಒಳಗಾದೆ ಉಳಿದು ಕೊಂಡರೆ ನಿಮ್ಮ ಮರೆಯೆನೆಂದು |ಗೀತ ಹಾಡಿದರೇನು ನಾಥನನು ಕೊಳಲಿಲ್ಲ ಪ್ರೀತಿಗಳು ನಡಲಿಲ್ಲ ಗುರುವಿನಲ್ಲಿ | ಗುಣಕರ್ಮಕಾಡುತಿದೆ ಗೂಳಿಯನೆ ಮಾಡುತಿದೆ ಗೆಲವ ಹಾದಿ ಬಯಲ ಜ್ಞಾನವಿಲ್ಲ |ಗೈಯಾಳ ತನದಿಂದ ಹೈಯಾಲಿಕೆಗೆ (ಹುಯಿಲಿಕೆಗೆ) ಬಿದ್ದು ಗೊಡ್ಡತನ ಎಷ್ಟೆಂತು ಹೇಳಲಯ್ಯಗೌಪ್ಯದ ಮನೆಯೊಳಗೆಗಂಭೀರತನ ಬಿಟ್ಟುಗಃ(ಗಾಹ)ಳ ಹರಿಸೊ ಬಹಳ ಕೃಪೆಯಿಂದಲಿ || ಹರಹರಾ 4 ಘ(ಗ)ಳಿಸಲಾರೆನು ಪರವುಘಾ(ಗಾ)ಳಿಯಾಗಿದೆ ಮನಸುಘಿಲಕೆಂದರೆ ಬೆದರಿಘೀರಿಡುತಲಿಘುಮ್ಮರಿ ಸಿಕ್ಕುತದಘೂ(ಗೂ)ಳಿ ಸೊಕ್ಕಿದ ಹಾಗೆ ಘುರಘೂರಿಯ ತಪ್ಪಿಸಿ ಹರವ ಮಾಡು ||ಘೇರಿ ಬಂದೆರಗಿತುಘೃರಿಸುವರಿನ್ನಾರುಘೋರದಲಿ ಮುಳುಗಿದೆ ತಾರಿಸಯ್ಯಘೌ(ಗೌ)ರವನು ಮಾಡೆನಗೆಘಂಮನೆ ವರವಿತ್ತುಘಃ(ಘಾ)ಸಿಯಾಗಿಸಬೇಡ ಯಮನ ಬಾಧೆಯಲಿ || ಹರಹರಾ 5 ಸಾರ ಗುಹ್ಯ ಜ್ಞಾನಿ ಸಂಗದ ಗೋಷ್ಟಿಜ್ಞಾನಿಗೇ ಪರಿಪಾಟಿಜ್ಞಾನಿಯೆಂದರೆ ಕೋಟಿ ಕೋಟಿ ಪುಣ್ಯ ಜ್ಞಾನಕ್ಕೆ ಸರಿಯಿಲ್ಲಜ್ಞಾನಿಯಾದವ ಬಲ್ಲಜ್ಞಾನಿಯೆಂದರೆ ಕಲ್ಲು ಹಾಕುತಾರೆ || ಹರಹರಾ 6 ಚರಣವನು ಪಿಡಿಯಾದೆಚಾರ್ವಾಕ ನಾನಾದೆಚಿರಕಾಲ ಬದುಕುವಚೀ(ಚಿ)ಹ್ನ ವಿಲ್ಲ ಚುಲಕ ಬುದ್ಧಿಯ ಹಿಡಿದುಚೂಕ (ಚುಕಾ)ರಾದೆನು ಬಹಳಚೇರಿಗೇಡಿತನವನು ಬಿಡಿಸು ದೇವಾ |ಚೈತನ್ಯನೆಂಬವನು ಒಳ ಹೊರಗೆ ಐದಾನೆಚೋರತನವನು ಮಾಡಿ ಕದ್ದನನ್ನಚೌಖಂಡಿ ಒಡೆದನೊಚಂನಾಗಿ ಹಗಲವೆಚಃ(ಚಾ)ಡಿ ನೋಡುತಲಿದ್ದೆ ಉಲವಿಲ್ಲವು ಹರಹರಾ 7 ಛಲದ ಬುದ್ದಿಯ ಹಿಡಿದುಛಾನಸ ನಾನಾದೆಛಿಛೀ ಎಂದರು ಸಾಧು ಜನರುಛುಲಕತನಕೆಲ್ಲಛೂರಿಯನೆ ಹಾತುತಲಿಛೇದಿಸಲು ತಡವಿಲ್ಲಛೈ ತಾಳಿಸಿಛೋದವನು ಬಡುವರು ಭಕ್ತರಾದವರೆಲ್ಲಛೌಕಂಠ ನಮ್ಮಯ್ಯ ಕೂಡಿಕೊಂಡಛಂದಾಗಿ ಸಲಹಯ್ಯ ಆನಂದ ಪದವಿಯ ಕೊಟ್ಟು ಛತ್ರವನು ಮೇಲಿಟ್ಟು ಛಃ(ಛಾ)ಯ ವಾಗೋ ಹರಹರಾ 8 ಜಪ ತಪಗಳ ನಾ ಮಾಡಿಜಾಗ್ರತ ನಾನಾದೆಜಿತೇಂದ್ರಿಯಾದೆನೊಜೀವದಿಂದ ಜುಗಳನೆಲ್ಲವನುಜೂಜನಾಡಿ ಗೆದ್ದೆಜೇನವನಿಕ್ಕಿದೆ ನೆಲಕಬ್ಬಿಗೆಜೈ ಜಯಾಕಾರವನು ಜಗವೆಲ್ಲ ಮಾಡುವರುಜೋಗುಳ ಹಾಡುವರು ಪ್ರೇಮದಿಂದಜೌನಾಗಳೆ (ಯೌವನಾಗಲೆ) ಹೋಗಿಜಂಬುಲಿಂಗನ ಕೂಡಿ ಜಃ(ಹ)ಜ ನಾಡಿ ಹರಹರಾ 9 ಝ(ಜ)ಳಕವನು ಮಾಡಿದೆಝಾರಿ ಬ್ರಹ್ಮನ ಕೈಯ ಉದಕವೇ ಉಷ್ಣವನು ಬಿಡಿಸಿತಲ್ಲಝಿಂಜ ಬೀಜ ಮಲ ತೊಳೆದುಝೀ ಎಂಬ ಖಣಿಯೊಳಗೆಝುಣಿಝೂಣಿಸುವನಾದಝೇಲಿಸಿಕೊಂಡಝೈಯ ರಾಗದ ಯೋಗಝೋತಿ ಮಾಡಲಿ ಬೇಕುಝೌಗರದ ಒಳ ಮೊಲಿಯ ಭಾರಿಡುತಲಿ ಝಂಮನೊದಗಿತು ಮೇಘ ಝಳಮಳ ಮಿಂಚೇರಿಝಃಗ ಝಗಿಸುವ ದಿವಾ ರಾತ್ರಿಯಲಿ ಹರಹರಾ 10 ಕೊಂಡ ಹೊತ್ತರು ಆತ್ಮಜ್ಞಾನಿಗಳು ಟೀಕು ಆಯಿತು ಹೀಗೆಟುಕಿಲಿ ತಿಳಕೊಳ್ಳಿಟೂಕ ಮಾಡಲಿ ದೇಹ ಮೋಕ್ಷವಿಲ್ಲ ಟೇಕದ ಮೇಲೇರಿ ಜಾರಿ ಬಿದ್ದರೆ ಕೇಡುಟೈಳತನದಲಿಟೊಂಕ ಮುರಿದುಕೊಂಡಟೌಕರಕ ಗತಿಗಾಣಟಂಮನೆ ಕೆಲಸಕ್ಕೆಟಃ(ಟಾ)ಹ ಬಡೆವವರಿಲ್ಲ ಹುಟ್ಟಮೂಕಗೆ ಹರಹರಾ 11 ಲಂಡ ಸಾಕುಸಾಕುಠೊಂಬಿಯ ಮತದವನುಠೌಳಿಕಾವನು ಬದ್ಧಠಂಮೆಂದರೆ ನಮ್ಮರಸು ಸಿಕ್ಕಠಃ (ಠಾ)ವು ಬಲ್ಲಿದವನಲ್ಲ ಠಾಣೇ ಕುಳಿತವನಲ್ಲ ಠಾಕುರಾಯಿ ಕಾದು ಗೋವ ನಾದ ಹರಹರಾ 12 ಡಗಳ ಮುದ್ರಿಯ ಹಾಕಿಡಾಗಿನ ಪಶುವಾಗಿಡಿವರಿ ಎಂದರೆ ಖೋ ಎನುತಲಿ ಡೀಂಗರಿಗಲ್ಲದೆಡುರುಕು ಹಾಕುತಲಿದೆಡೂ(ಡು)ಳಿಕಿಸುತಲಿಹ ಸೊಕ್ಕಿನಲ್ಲಿ ಡೇಗಣಿ ಕಟ್ಟದೆಡೈಳತನ ಹೋಗದುಡೊಂಗ ತಟ್ಟಿದ ಬಳಿಕ ನೋಡು ಅಳುಕಡೌಲಿಸಿದ ಮಡವಿನಲಿ ನೀರ ಕುಡಿಯಲು ಹೋಗಿಡಂಕ ಮೊಸಳಿಯ ಕಂಡುಡಃ(ಡ)ಳಮಳಿಸಿತು ಹರಹರಾ 13 ಢಣಿಢಣಿಸುವ ಜ್ಯೋತಿಢಾಳಾಗಿ ತೋರುತದೆಢಿಳಿಗ್ಯಾತಕ ಹೋದಿ ಇಲ್ಲಿ ನೋಡು ಢೀಗು ಬಿದ್ದ ಮುನ್ನೆಢುಮಿಢೂಮಿಗುಟ್ಟುತಲಿಢೇಕರವ ಕೊಟ್ಟುಂಡು ತೃಪ್ತನಾಗೊ ಢೈಯಾಳಿತನದಿಂದಢೋಗರ ಬೀಳಲಿ ಬೇಡಢೌಳಿ (ಡೌಲು) ಮಾಡಲಿ ಬೇಡ ಸಾಧುರೊಳಗೆ ಢಂಮನಾಗಿರ ಬೇಡ ಅಹಂಕಾರ ತಲೆಗೇರಿಡಃ(ಢಾ)ಣಕ ನೀಗವಲ್ಲದೆ ಬಳಲುವಿ ಹರಹರಾ 14 ತುಂಬಿ ಕೊಂಡಿದೆ ನೋಡುತೂ (ತು)ಳಕುವ ತೆರೆ ನೋಡುತೇಲಿ ಬರುತದೆ ನೋಡುತೈ ಧಾಂಗೆ (ತೆಯ್ಧಾಂಗೆ)ತೊಳೆದ ಮುತ್ತನು ನೋಡುತೌರಮನೆಯನು (ತವರಮನೆಯನು) ಕೂಡುತಂದೆ ಶಿವರಾಯನ ಆನಂದ ನೋಡುತಃ(ತಾಹ) ಕುಡುತದೆ ನೋಡು ಬಹಳ ಅಭ್ಯಾಸ ಮಾಡು ದೇಹವಳಿದು ಆತ್ಮನೊಡಗೂಡು ಹರಹರಾ 15 ಥರ ಗೊಳಿಸುವ ಜ್ಞಾನ ಸ್ಥಾ(ಸ್ಥ)ಳವ ಶುದ್ಧ ಮಾಡು ಸ್ಥಿರವಾದ ಮನಸಿನ ಸೂತ್ರವಿಡಿದು ಸ್ಥೀ(ಸ್ಥಿ)ತಿ ಉತ್ಪತ್ತಿ ಪ್ರಲಯ ಮೀರಿದ ಮುಹೂರ್ತದಲಿ ಕೇಸರಗಳ ಹಾಕಿದರು ಯೋಗಿಗಳು ಉಪ್ಪಾರ ಈಶ್ವರಣ್ಣ ಬಡಿಗೇರ ಬೊಮ್ಮಣ್ಣ ಕಟ್ಟಲೀ ಜಾಣರು ಸೃಷ್ಟಿರಚನಾ ಮುಟ್ಟಿತು ಮುಗಿಲಿಗೆ ದಟ್ಟಿಸಿತು ಭೂಮಿಗೆ ಪಟ್ಟದರಸನು ನಮ್ಮ ಗುರುರಾಯನು ಹರಹರಾ 16 ದಗಿಯ ಬೀಳಲಿ ಬೇಡದಾ(ದ)ಯದ ಮನೆಯನು ಗಳಿಸುದಿನ ದಿನಕ ಭಕ್ತಿಯಿಂದೀರ್ಘವಾಗಿದುಗುಣಿಸಿದ ಪ್ರೇಮಗಳುದೂರ ಬೀಳದ ಹಾಗೆದೇವರಿಗೆ ಅರ್ಪಿಸಿದೈವ ಪಡೆಯೊ ದೊರಕೊಂಬ ತಡವೇನುದೌಲಿತನ ಹೋದರೆದಂಭವೆಂಬುದು ಎಲ್ಲದಃ(ಹ)ನವಾಗಿ ದಾವ ದರಶನದೊಳಗೆ ದೇವದರ್ಶನ ಮೇಲು ನೀನ್ಯಾಕ ಕೊಳವಲ್ಲಿ ಏನು ಬಂತೋ ಹರಹರಾ... 17 ಧನಕೆ ಹೆಣಗಲಿ ಬೇಡಧಾರುಣಿಗಂಜ ಬೇಡಧಿಗಿ ಧಿಗಿಗೊಳ ಬೇಡಧೀರನಾಗೊಧುಗಿ ಧುಗಿಸಲಿ ಬೇಡಧೂಳಿ ಕೂಡಲಿ ಬೇಡಧೇನು ಕರೆವುತಲಿದೆ ಸಂತರಲ್ಲಿಧೈರ್ಯವನು ಬಿಡಬೇಡ ಧೊ(ದೊ)ರೆಗೆ ಶರಣೋಗ ಬೇಡಧೌತ ರಂಗದ ಬಿರುದುಧಂಮ ಧಂಮಿಸುತಧಾ(ಧಃ)ಹಕಿಲ್ಲ ಮೃತ್ಯುವಿನ ಸೋಂಕಿಲ್ಲ ಜನ್ಮದ ಏಕಾಂತ ದಲಿರುತಿಹ ಶಿವಶರಣನು ಹರಹರಾ 18 ನರದೇಹಿ ಆದುದಕೆನಾಗಭೂಷಣನ ಭಜಿಸು ನಮ್ಮನಿª6Éಲ್ಲರಿಗೆ ಮೋಕ್ಷ ನೀರ ಮುಣುಗಲಿ ಯಾಕೆನುಡಿಯ ಬಂಧನವ್ಯಾಕೆನೂರಾರ ಶರಣ್ಯಾಕೆ ಬೆಂಡಾಗುತನೇಮ ಕೊಳಬೇಕ್ಯಾಕೆನೈಷ್ಠಿಯ ಕಟ್ಟಲ್ಯಾಕೆನೊಗನ ಹೊತ್ತಾನಂತ ನೆನಿಸಲ್ಯಾಕೆನೌಸರದ (ನವಸಿಗರ) ಪರಿಯಾಕೆನಂಮಯ್ಯನಗಲಲ್ಯಾಕೆನಃ(ನಾ)ನಾತ್ವವನಳಿದರೆ ಅಷ್ಟೇ ಸಾಕು ಹರಹರಾ 19 ಮೂರ್ತಿ ಶರಣು ಶರಣು ಪೇತು ಪತಿಗೆ ಶರಣುಪೈಜ ಗೆದ್ದವಗೆ ಶರಣುಪೊಡವಿ ಕೈಲಾಸದ ನಿಧಿಗೆ ಶರಣುಪೌರೋಹಿತನೆ ಶರಣುಪಂಥ ದುರಿತನೆ ಶರಣುಪಃ(ಪಾ)ರ್ವತಿ ಕಾಂತನ ಪಾದಕ್ಕೆ ಶರಣು ಹರಹರಾ 20 ಫಲವ ಬಯಸಲಿ ಬೇಡಫಾಸಿ (ಪಾಶದಿ) ಬೀಳಲಿ ಬೇಡಫಿರ್ಯಾದಿಗಳ ಹಳಿತಲ ಬೇಡಫೀ (ಫಿ)ತವಿ ಮಾಡಲಿ ಬೇಡಫುಗಸಾಟಿ ಕೆಡಲಿ ಬೇಡಫೂರಸೊತ್ತಿತೆನಬೇಡ ಶಿವ ಶಿವಗೆ ಫೇಡಿ ಮಾಡಲಿ ಬೇಡಫೈಣ್ಯ ಹೂಡಲಿ ಬೇಡಫೋಡಣಿ ಕೊಡಬೇಡ ಸಮುದ್ರಕೆಫೌಗೊಂಡ ಹೂವಿನಫಂಗಡಿಯನೆ ತಂದುಪಃ(ಫಾ)ರ ಪರಮಾತ್ಮಂಗೆ ಅರ್ಪಿಸಯ್ಯ ಹರಹರಾ 21 ಭರವಸವು ನಿನಗೇನುಭಾಗ್ಯ ಬಂದೀತೆಂದುಭಿಕ್ಷೆ ಬೇಡುವಗಿನ್ನುಭೀತಿಯಿಲ್ಲ ಭುವನದೊಳಗಿದಿರಿಲ್ಲಭೂತಾಳ ಕೆಳಗಿರಲಿಭೇದವಿಲ್ಲದೆಭೈರವನು ಕಾವ ಭೋಜನಂಗಿರುತಿಹನುಭೌತ್ಯ ವ್ಯಾಳೆ ಬಂದದಕೆಭಂಗ ಬಡಿಸಿಲಕಿಲ್ಲ ಸಂಗ ಸಿಲುಕಿ ಭಃ(ಭಾ)ಲ ಲೋಚನ ಚಂದ್ರಶೇಖರನ ಸ್ಮರಣೆಗೆ ಭಾರನಿಳುಹಿ ಭೂಮಿಯ ಹೊರಗಾಗಿ ಹರಹರಾ 22 ಮರಣ ಬರುತದೆ ಕೊಮಾರಗಳ ಹಾಕುತಲಿಮಿ (ಮೀ)ರಲಿಕ್ಕಲಿದುಮೀ(ಮಿ)ಥ್ಯಾವಲ್ಲ ಮುನಿಯು ಆದರೆ ಏನುಮೂರು ಕಣ್ಣಿರಲೇನುಮೇರು ಸಹಿತಾಗಿದು ನುಂಗುತದೆ ಮೈಯ ತಾಳಿದ ಬಳಿಕಮೋಕ್ಷ ಪಡೆಯಲು ಬೇಕುಮೌನವ ಹಿಡಿದಂಗೆ ದೇಶ ಭಂಗಮಃ(ಮ)ಹಾ ಪ್ರಲಯಕೆ ಹೊಂದದ ಮಹಾತ್ಮಂಗೆ ಭಯವೇನು ಮಹಾದೇವನ ಮೈಯ ಕೂಡಿಕೊಂಡ ಹರಹರಾ 23 ಯದಿಯ (ಎದೆಯ) ಬಲ್ಲಿದನಾಗುಯಾತ್ಯಾತಕಂಜದೆಯಿ(ಈ) ತನೆಯೀ(ಈ)ಶ್ವರನು ಈಶ ಗುಣದಿ ಯುವತಿ ಇದ್ದರು ಏ£4ಯೂ(ಯು)ಗದ ಅಂಜಿಕೆ ಏನುಯೇ(ಏ)ಸೊಂದು ಗ್ರಹಗಳು ಬಂದರೇನುಯೈ(ಐ)ದಿಸಿ ಸಾಯೋಜ್ಯಯೋಗಿಯಾದ ಬಳಿಕಯೌವನಾಗಿರುತಿರಲಿ ಬಹು ವೃದ್ಧನುಯಂ(ಎಂ)ಮ ಬಸವನ ತಮ್ಮನಾಗಲಿಕೆ ಪರಬೊಮ್ಮಯಃಕಾಕಸಾರೆ ನಿಮ್ಮಯೇಕಾಕನಂದ ಹರಹರಾ 24 ರಮಣ ನಾಯಕತೆಯರುರಾಗವನೆ ಮಾಡುವರು ಸ-ರಿಗದಲಿ (ಸರಿಗಮದಲಿ) ಹಾಡುವರುರೀತಿಯಿಂದರುಣಿ ಝಣಿಸುವ ತಂತಿರೂಪದ ಮೃದಂಗರೇಖ್ಯಕೊಳಗಾಗದೆರೈಷಕೂಡಿರೋಮಾಂಚ ಗುಡಿಗಟ್ಟಿರೌದ್ರಾವತಾರದಲಿರಂಗ ದಾರಿಗೆ ಸಿಲುಕಿರಃ(ರಾ)ಹಣ ಒದಗಿ ರಾಯಪಂಚಾಕ್ಷರವ ಪರಶಿವನ ಕೊಂಡಾಡಿ ವರವ ಪಡೆದರು ಪ್ರತ್ಯಕ್ಷವಾಗಿ ಹರಹರಾ 25 ಲವಲವಿಕೆ ನನಗೆ ಹುಟ್ಟಿಲಾವಕೆ ಹೆಣಗಿದೆಲಿಂಗವನು ಗಳಿಸಿದೆಲೀಲೆ ಗಮನೆಲುಪ್ತವಾದೀತೆಂದುಲೂಟನೆ ಮಾಡಿದೆಲೇಸು ಲೇಸೆಂದರು ಭಕ್ತರೆಲ್ಲ ಲೈಕ್ಯದ ಹೆಸರೇನುಲೋಕದಂತಾಗದೆಲೌಸಡಿಯಿಲ್ಲದೆಲಂಭತನವೇ ಶಂಭುಶಂಕರ ನಿಮ್ಮಲಃ(ಲಾ)ಹಣೆವು ನರಗುಂಟು ಲೋಹ ಪರಿಸಕೆ ತಾ ಸೋಂಕಿದಂತೆ ಹರಹರಾ 26 ವಶವಾದ ಪರಬ್ರಹ್ಮವಾಸವಾಗಿರಲಿಕ್ಕೆವಿಷಯ ತಪ್ಪಿಸಿದೆನುವೀ(ವಿ)ಪರೀತ ಕೇಳಾ ವು(ಉ)ದಾಸವಿಲ್ಲದೆವೂ(ಉ)ಪರತಿಯ ಹೊಂದದೆವೇದವನು ಫುಂದದೆವೈದಿಕನೆ ಓದಿದ ಫಲವೇನುವೌಂ(ವಂ)ಶಿತ ನಾಗದೆವಂಮನವ ಬೀರದೆ ದೊಡ್ಡತನವೇ ವಃ(ವೋಹ)ಳ ಸೋಹಳವುಂಟು ತಾಮಕರ ದಾಮ ನಂಟು ವಾಸುದೇವನ ಗಂಟು ಕಟ್ಟಿಕೊಳ್ಳಿ ಹರಹರಾ 27 ತಿಮಿರ ನಿದ್ರಿ ಕಣ್ಣು ತೆರೆದ ಹರಹರಾ 28 ಸಕಲ ಶಾಸ್ತ್ರವನೋದಿಸಾಕಾರ ತಿಳಿಯದು ನಿರಾಕಾರ ಎಂಬುದು ಬಹಳ ದೂರಸಿದ್ಧವಾಗಿದ್ದದ್ದುಸೀ(ಸಿ)ಕ್ಕದು ಕೈಯೊಳಗೆಸುಳವಿಲ್ಲ ಕಳವಿಲ್ಲಸೂಕ್ಷ ಘನವು ಸೇರಿ ಬಾರದ ನುಡಿಗೆಸೈರಾವೈರಾವೆಲ್ಲಸೊನೆ ಸೊನೆ........ಸನ್ನಿಹಿತನುಸೌರಸಾ(ಸುರಸ)ವಾದನುಸಂಮ್ಯಗ್ ಜ್ಞಾನವು ಬಲ್ಲಸಃ(ಸಹ)ಜಾನಂದ ತುಂಬನು ಲೌಕಿಕಕ್ಕೆ ಹರಹರಾ 29 ಹರ ಹರಾ ಎನುತಲಿ ಶಿವನಹಾಡಿಕೊಂಡೆಹಿತವು ತೋರಿತು ಘನಾಹೀ(ಹಿ)ತಕಾರಿಗೆಹುಗವರಿ ಕೇಳೊಲ್ಲಹೂ(ಹು)ಸಿಯ ತೀರ್ಥ3ಮಿಂದುಹೇತುವರ್ಜಿತನೆಂದು ಫಲವು ಕೊಂಡಹೈಯೆಂದು ನಿಂತಿತುಹೊಂಗಲ್ಲವಾ ಹಾಡುಗಳುಹಂಸ ಅರಿತುದಿಲ್ಲ ಬಲ್ಲ ತನವೇ ಹಮ್ಮು ನಡಿಯದು ಇಲ್ಲಿಹಃ(ಹಾಹಾ)ಕಾರ ಮಾಡಿದರೆ ಹಸಿದವನು ಉಣಬೇಕು ಬ್ರಹ್ಮರಸವ ಹರಹರಾ 30 ಕ್ಷಣ ಕ್ಷಣಕೆ ಶಿವನಿನ್ನಕ್ಷಾ (ಖ್ಯಾ)ತಿ ಕೊಂಡಾಡಿದಕ್ಷಿತಿಯ ಮೇಲಿಹುದುಕ್ಷೀರ ಉದಧಿಕ್ಷುದ್ರ ಕರ್ಮಿಗಳುಕ್ಷೂ(ಕ್ಷು)ದ್ರನೆ ಎನಿಸುವರುಕ್ಷೇಮ ಕಲ್ಯಾಣವ ಪಡೆಯರೆಂದೂಕ್ಷೈ(ಕ್ಷಯ) ವ್ಯಾಧಿ ಹೊಡೆದವನುಕ್ಷೋಭೆಯನು ಬಡುವನುಕ್ಷೌತಿಯನು ಕೂಡುತಿಹ ಜನ್ಮ ಜನ್ಮಕ್ಷಂ(ಕ್ಷೇ)ಮ ಸಾಯೋಜ್ಯಕ್ಕೆಕ್ಷಃ(ಕ್ಷಾ)ಳ ಸಕಲಪಾಪ ಪರಮಾತ್ಮ ಗತಿಗೆ ಕೋಪ ಪರಮ ಸಾಧು ಹರಹರಾ 31 ಅಮೃತ ಬಿಂದು ಪ್ರಕಾಶ ತಾನು ಶರಣರಿಗೆ ಇದು ಬೇಕು ಚರಣ ಸಾರಿದ ಟೀಕುಪರಬ್ರಹ್ಮದಾ ತೂರು ತೂಗಿಕೊಳ್ಳಿ 32 ಹರಹರಾ ಮಹಾದೇವ ಶಿವ ಶಿವಾ ಮಹಾದೇವಶಂಕರಾ ಮಹಾದೇವ ದೇವ ದೇವಾ ||
--------------
ನರಸಿಂಹ
ಅತ್ಯಾಸೆಪಡಬೇಡ ಅಸ್ಥಿರ ಸಂಸಾರ ಮತ್ತನಾಗದಿರೆಲವೊ ಪ ವೆತ್ಯಸ್ತ ಸ್ಥಿತಿಯಿಂದಾನಿತ್ಯಾ ಶರೀರವಿದು ಅ.ಪ ಜನರಾಡುವುದು ಕೇಳಿ ಮನಕೆ ಬಂದುದ ಕೋರಿ ಅನುಮಾನ ಚಿತ್ತನಾಗಿ ವನಿತೆಯರ ಬಲೆಯೊಳು ಸಿಲುಕಿ ಮೋಹಭ್ರಾಂತಿ ವಶನಾಗಿ ಧರ್ಮಾಧರ್ಮಗಳ ತಿಳಿಯದೆ 1 ಹೇಯ ಸುಖವ ಬಯಸಿ ಆಯಾಸ ಪಡುತಲಿ ಬಾಯ ಬಿಡುತ ಸತತ ನೋಯುತಾ ನುಡಿಯುತ ಕ್ರೋಧ ಲೋಭದಿ ಮುಳುಗಿ ನಾಯಿಯಂದದಿ ತಿರಿಗಿ ನಾನಾ ವಿಧದಲಿ 2 ದಾನಧರ್ಮಗಳಿಲ್ಲ ಜ್ಞಾನಸತ್ಯಗಳಿಲ್ಲ ಧ್ಯಾನವು ಮೊದಲೇ ಇಲ್ಲ ಮಾನಾಭಿಮಾನ ಅಜ್ಞಾನದಿ ಮುಳುಗಿ 3 ಪರರೊಡೆವೆಯ ತಂದು ಒಡಲ ಹೊರೆಯುತಲ- ನೆರೆಹೊರೆ ನೋಡಿ ಅವರಂತೆ ನಾನಿರಬೇಕೆಂದ 4 ಕರ್ಮ ಭಿನ್ನಇವರಿಗೆಲ್ಲ ಮುನ್ನಿನ ಕರ್ಮದಿ ಫಲ ಬೆನ್ನಬಿಡದು ಎಂದು ಪೇಳುವ ಶಾಸ್ತ್ರಗ- ಳನ್ನು ನಂಬದಲೆ ನಿನ್ನನ್ನೆ ನೀ ಪೊಗಳಿ ಕೊಂಡು 5 ನ್ಯಾಯಾರ್ಜಿತ ದ್ರವ್ಯದಿಂದ ಕಾರ್ಯಗಳವು- ಪಾಯದಂದಲಿ ನಡೆಸಿ ತಾಯಿ ಮಕ್ಕಳ ನೋಡುವಂತೆ ದೀನರಿಗೆ ಸ- ಹಾಯ ಮಾಡುತ ಜ್ಞಾನಿಗಳ ಸೇವಿಸುತಿಹರು 6 ಪೊರೆವೊ ಭಾರಕರ್ತ ಗುರುರಾಮವಿಠಲ ತಾ ಶರಣಾದವರಿಗೆ ಭಯವೇನು ಸ್ವಾಮಿ ಸರ್ವರ ಪಾಲಿಸುವನು ನಿನ್ನನು ಮಾತ್ರ ಬಿಡುವನೆ 7
--------------
ಗುರುರಾಮವಿಠಲ
ಅಂದೇನಿಂದೆನುತಾ ಪ ಒಂದು ಮನದಿ ನಿಂದು ನಂಬ ಬಲ್ಲಡೆ ಸಾಕು|ತನ್ನ| ಹೊಂದಿದವರ ಕಾವಾ ಇಂದಿರೇಯರಸನು ಅ.ಪ. ಸಗರ ಕಾರ್ತೀಕನು ಭಗೀರಥ ಮೊದಲಾದಾ| ಸುಗುಣ ರಾಯರನುಧ್ಧರಿಸಿಹ| ಜಗದೊಳೀ ಪಾಮರ ಲೋಕದ ಕುಂದವ| ಬಗೆಯದೇಪಾವನ ಮಾಡುವ ಗಂಗೆಗೆ 1 ರನ್ನಗಣಕು ಪರೀಕ್ಷೆ ಮುಖ್ಯರಾಗಿಹ| ಮನ್ನೆಣೆಯವರನು ಎಚ್ಚರಿಸಿ| ಮುನ್ನಿನ ಬೋಧಧಿ ಭಾವಿಕ ಸಾಧಕ| ರನ್ನು ತಾರಿಸುವ ಸತ್ಸಂಗ ಮಹಿಮೆಗೆ 2 ಹಿಂದಿನ ಶರಣರ ಸಲಹಿದ ದೇವರಿ| ಗಿಂದೇನು ಮಹಿಮೆಗೆ ಬಲ್ಲವಿಲ್ಲದೇ| ತಂದೆ ಮಹಿಪತಿ ಸ್ವಾಮಿಯ ನಾಮವ| ಛಂದದಿ ನೆನೆಯುತ ಇಹಪರ ಪಡೆವುದಕ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅಧ್ಯಾಯ ಎರಡು ಪದ ಪದುಮ ನಾಭನ ಸ್ಮರಿಸಿ ಮುದದಿ ಹಿಮಗಿರೀಂದ್ರನು ಮದುವೆಯಕಾರ್ಯಕೆ ತೊಡಗಿದ ಮಗಳ ಹುಡುಕಿದ 1 ಅಲ್ಲೆ ಮನೆಯೊಳಗಿಲ್ಲ ಎಲ್ಲಿ ಹುಡುಕಿದರಿಲ್ಲ ಅಲ್ಲೆ ಇಲ್ಲೆಂದು ಇಲ್ಲ ಎಲ್ಲೆಲ್ಲಿ ಇಲ್ಲಾ 2 ಘನಹಿಮ ಗಿರೀಂದ್ರ ದಮ್ಮನೆ ದಣಿದು ಮಾತಾಡಿದನು ಮನೆಮನೆಯಲ್ಲಿ ಹುಡುಕಿ ಮನದೊಳು ಮಿಡುಕಿ3 ಮಾನವಂತಿ ಮಗಳೆಲ್ಲೆ ತಾನು ಹೋದಳು ನಾನಿ ನ್ನೇನು ಪಾಯವ ಮಾಡಲಿ ಎಲ್ಲೆ ನೋಡಲಿ 4 ಅಚ್ಯುತಾನಂತಾದ್ರೀಶ ನಿಚ್ಛೆ ತಿಳಯದು ಎಂದು ಎಚ್ಚರಿಲ್ಲದೆ ಬಿದ್ದನು ಮೂರ್ಛಿತನಾದನು 5 ಪದ ಏಳೆಏಳೆಂದು ಆಕಾಲದಲಿ ಆಜನರು ಹೇಳಿ ಎಬ್ಬಿಸಲಾಗ ಏಳಲೊಲ್ಲವನು ಆ ಮೇಲೆ ಹಾ ಇದು ಎಂಥ ವೇಳೆ ಬಂದಿತು ಎಂದು ಬಹಳ ಗಾಬರಿಯಿಂದ ಗಾಳಿ ಹಾಕಿದರು ಶ್ರೀಶೈಲೇಂದ್ರ ತಾನು ಆಮೇಲೆ ಏಳುತ ಮೈಮೇಲೆ ಎಚ್ಚರ ಹುಟ್ಟು ಆಲಯದೊಳಗಿರುವ ಶೇಲಾದ ಮಗಳನ್ನು ಕಾಣದಲೆ ಕಣ್ಣು ಕ ಗ್ಗಾಳಿಗೈಯುತ ಶೋಕ ಬಹಳ ಮಾಡಿದನು 1 ಪದ ಎಲ್ಲಿ ಪೋದಳೆಲ್ಲಿ ಹುಡುಕಲಿ ಮಗಳಿಲ್ಲ ಮನೆಯೊಳೆಲ್ಲಿ ಇರುವಳಲ್ಲಿ ಪೋಗಲಿ ಎಲ್ಲಿ ಪೋದಳೆಲ್ಲಿ ಹುಡುಕಲೆಲ್ಲಿ ಮಗಳು ಇಲ್ಲ ಪ್ರಾಣ ನಿಲ್ಲ ಲೊಲ್ಲದಿಲ್ಲೆ ಮನಸು ಕಲ್ಲುಮಾಡಿಯೆಲ್ಲಾ ಬಿಟ್ಟು ಪ ಚಾರು ಮುಖಿಯ ಯಾರು ಒಯ್ದರೋ ವಿಚಾರ ಮಾಳ್ಪರಾರ ಇಲ್ಲ ಚೋರರೊಯಿದರೋ ಕ್ರೂರದೈತ್ಯ ವರ್ಯರೋ ಉದಾರಗಂಧರ್ವರೋ ಪೂರ್ವವಯದ ಪಾರ್ವತಿಯ ಯಾರು ವೈದಿದಾರು ಮತ್ತೆ1 ಇಂದ್ರತಾನು ಬಂದು ಒಯ್ದನೋ ಆ ಚಂದ್ರ ಮುಖಿಯ ಚಂದ್ರ ಬೇಕೆಂದು ಒಯ್ದನೋ ಮುಂದೆ ಯಾರು ಬಂದು ಒಯ್ದರೆಂದು ತಿಳಿಯದಿಂದು ಎನಗೆ ಬಂದ ತಾಪದಿಂದ ಬಹಳ ಬೆಂದೆನಾರ ಮುಂದೆ ಹೇಳಲಿ 2 ಎಂತು ನಾನು ಚಿಂತೆ ಮಾಡಲಿ ಧೀಮಂತ ಮುನಿಗೆ ನಿಂತು ಏನಂತ ಹೇಳಲಿ ಎಂಥ ಕಷ್ಟ ಬಂತÀು ಈ ಚಿಂತೆಗಿನ್ನು ಪ್ರಾಂತಗಾಣೆ ಪ್ರಾಂತಕಾನಂತ ಗಿರಿಯ ಕಾಂತಗೇನಂತ ಹೇಳಲಿ 3 ಪದ್ಯ ಮುನ್ನಯೀಪರಿ ಶೋಕವನ್ನು ಮಾಡುತಲೆದ್ದು ಘನ್ನ ಆ ಗಿರಿರಾಜ ನಿನ್ನೇನು ಗತಿಯೆಂದು ಕಣ್ಣೀರು ಸುರಿಸುತಲೆ ಹೆಣ್ಣು ಮಗಳನು ನೆನಸಿ ಉಣ್ಣದಲೆ ತಾನು ಅರಣ್ಯದಲಿ ನಡೆದ ಕಣ್ಣಿಟ್ಟು ನಾಕುಕಡೆ ಚನ್ನಾಗಿ ನೋಡಿದನು ಮುನ್ನಲ್ಲೆ ಕುಳಿತಿರುವ ತನ್ನ ಮಗಳನು ಕಂಡು ಕನ್ನಡಿಯ ಪರಿಹೊಳೆವ ಮುನ್ನವಳಗಲ್ಲವನು ಚೆನ್ನಾಗಿ ಪಿಡಿದು ಬಹು ಬಣ್ಣಿಸುತ ನುಡಿದ ಪದ ಪ್ರೀತಿ ಮಗಳೆ ನೀನು ಈ ವನದಲ್ಲಿ ಕೂತ ಕಾರಣವೇನು ಅಮ್ಮಯ್ಯಾ ಪ್ರೀತಿಯ ಮಗಳೆ ಇಲ್ಲೇತಕೆ ಬಂದೆ ನೀ ಪ್ರೀತನಾದ ಶ್ರೀನಾಥ ಮನೆಗೆ ನಡಿ ಪ ಮದುವಿ ನಿಶ್ಚಯವಿಂದು ಮಧುಸೂದನನಿಗೆ ನಾ ಮುದದಿ ನಿನ್ನನ್ನು ಕೊಟ್ಟು ಮದುವೆ ಮಾಡುವೆನು ಮುದದಿ ಮನೆಗೆ ನಡಿ 1 ಮನಸಿನೊಳಗೆ ಮಿಡುಕೀ ಮನೆಯ ಬಿಟ್ಟು ವನವನವÀ ಚರಿಸುವರೇ 2 ಮನೆಗೆ ನಡಿಯೆ ನಿನ್ನ ಮನಸಿನಂತಾಯಿತು ಏಸು ಜನ್ಮಕೆ ಬಂದು ಮಾಡಿದ ಪುಣ್ಯರಾಶಿ ಫಲಿಸಿತಿಂದು ವಾಸುದೇವ ಸರ್ವೇಶ ಅನಂತಾದ್ರೀಶ ನೀನ್ನ ಕೈವಶವಾದನಡಿ 3 ಪದ ಪಡೆದ ತಂದೆಯ ಮಾತು ದೃಢವಾಗಿ ಕೇಳುತಲೆ ಬಿಡದೆ ಆ ನಾರದನ ನುಡಿ ಸ್ಮರಿಸಿ ಪಾರ್ವತಿಯು ಎಡವಿದಾ ಬಟ್ಟುಮ ತ್ತೆಡವಿದಂತೆ ದು:ಖ ಬಡುವುತಲೆ ಮನದಲ್ಲೆ ಮಿಡುಕಿದಳು ತಾನು ಅಡವಿಯಲಿ ನಾ ಬಂದು ಅಡಗಿದರು ಇದು ಎನ್ನ ಬಿಡಲಿಲ್ಲ ಮತ್ತಿನ್ನ ತುಡುಗುತನವು ಯಾಕೆ ನುಡಿಬೇಕೆಂದು ತನ್ನ ಒಡಲೊಳಗಯಿದ್ದದ್ದು ಒಡೆದು ಆಡಿದಳಾಗ ಭಿಡೆಯಬಿಟ್ಟು ಪದ ಅಪ್ಪಯ್ಯ ಒಲ್ಲೆ ನಾ ವಿಷ್ಣುವ ಒಲ್ಲೆನಾ ವಿಷ್ಣುವ ಎಲ್ಲಿ ಹುಡುಕಿ ತಂದಿ ಬಲ್ಲಿದ ಶಿವಯೆನ್ನ ವಲ್ಲಭನಯ್ಯಾ ಪ ಧೀರ ಕೇಳವನ ವಿಚಾರಯೆನ್ಹೇಳಲಿ ನೀರು ಮನೆಯಮಾಡಿ ಭಾರವಗೆಲುವ ಮಣ್ಣು ಮೆಲುವಾ ಬಿಟ್ಟು ಅವದಾವ ಚೆಲುವಾ 1 ನಿತ್ಯ ಕ್ರೂರನಾಗಿ ಮತ್ತೆ ಬಲಿಯ ತಳಕೊತ್ತಿ ತುಳಿದನವ ಕುಹಕ ಕುತ್ತಿಗೆ ಕೊಯಿಕಾ ಅವಗೆಲ್ಲಿ ವಿವೇಕಾ 2 ಶುದ್ಧ ಕೋತಿಯ ಕೂಡಿ ಕದ್ದು ಬೆಣ್ಣೆಯ ಬತ್ತ ಲಿದ್ದು ತೇಜಿಯ ಬಿಟ್ಟು ಅನಂತಾದ್ರಿಯಲ್ಲಿಹನು 3 ಪದ ವನದಲ್ಲೆ ಇರುವ ಆ ವನಜ ಮುಖಿ ಪಾರ್ವತಿಯು ವಿನಯದಿಂದೀಶ್ವರನ ಮನದಲ್ಲೆ ಸ್ಮರಿಸುತ್ತಲೆ ಮನಸಿನ ಭಾವವನ್ನು ಅನುಮಾನ ಬಿಟ್ಟು ತನಗನುಕೂಲವಾಗಿ ಘನ ಹಿಮಾಚಲ ಜನಾರ್ದನಗೆ ಕೊಡಬೇಕೆಂದು ಮನದಲ್ಲೆ ಆತನ ನೆನವುತಲೆ ಭಕ್ತಿಯಲಿ ಮುನಿದಿರುವ ಪಾರ್ವತಿಯ ಮನಸಿನ ಭಾವವನು ಮನಸಿಗೆ ತಾರದಲೆ ಮನೆಗೆ ನಡೆಯೆಂದ 1 ಪದ ಮನೆಗೆ ನಡೆಯೆ ಪಾರ್ವತಿ ನೀನು ಎನ್ನ ಮನಸಿನಂತಾದರೆ ಬರುವೆನು 1 ನಿನ್ನ ಮನೋರಥ ವದುಯೇನು ಬಹು ಮನ್ನಿಸಿ ಶಿವಗೆನ್ನ ಕೊಡು ನೀನು 2 ಹರಿಗೆ ನಿಶ್ಚಯ ಮಾಡಿದೆ ನಾನು ಬಿಡು ಹರಗೆ ನಿಶ್ಚಯ ಮಾಡೆಲೋ ನೀನು 3 ಬಾಲೆ ಕೊಟ್ಟ್ಹಣ್ಣು ತಿರುಗೂದಿಲ್ಲೆ ಶಿಶುಪಾಲನ ರುಕ್ಮಿಣಿ ಬಿಡಲಿಲ್ಲೆ 4 ಗೆದ್ದೊಯ್ದ ಆಕೆಯ ಹರಿ ತಾನು ನಾನು ಗೆದ್ದವರಿಗೆ ಮಾಲೆ ಹಾಕುವೆನು 5 ಯಾವ ಪುರುಷ ನಿನ್ನ ಗೆದ್ದವನು ಮಹದೇವನೆ ನಿಶ್ಚಯ ತಿಳಿ ನೀನು 6 ಗೆದ್ದಿಹ ನಿನ್ನಾನಂತಾದ್ರೀಶಾ ನಿನಗದರ ಚಿಂತೆಯಾಕೋ ಶೈಲೇಶಾ7 ಪದ ಅವನು ಹಿಮವಂತನೆಂಬುವನು ತನ್ನ ಮಗಳು ಆದವಳಿಗೀಪರಿ ನುಡಿದಾ ಶಿವನನಾಮದುವೆ ಆಗುವೆನು ಎಂಬುವೆ ನೀನು ಶಿವನುಯೆಂದೆನಿಸಿಕೊಂಬುವನು ಅವ ಮತ ಎಂಥವನು ಪೇಳೆ ಅವನ ಮಾತನು ಕೇಳಿ ಯುವತಿಮಣಿ ಪಾರ್ವತಿಯು ಶಿವನ ಸ್ಮರಿಸುತ ಮತ್ತೆ ಶಿವನ ಸರಿಯಿಲ್ಲ ಈ ಭುವನದೊಳು ಎಂತೆಂದು ಅವನ ಕೊಂಡಾಡುತಲೆ ಸ್ತವನ ಮಾಡುತ ನುಡಿದಳವನ ಪತಿಯೆಂದು 1 ಪದ ಅವನೆ ಪತಿಯು ಶಿವನು ಎನಿಸುವಾ ಅಪ್ಪಯ್ಯ ಕೇಳೋ ಅವನೆ ಪತಿಯು ಶಿವನು ಎನಿಸುವವನು ಸರ್ವÀಭುವನದೊಡೆಯ ಅವನೆ ಯನಗೊಪ್ಪುವನು ಸತ್ಯ ಅವನೀಶನೆ ಯೆನ್ನವಗರ್ಪಿಸು ಪ ಭಕ್ತಪ್ರಿಯ ತ್ರೀನೇತ್ರನಾಥನು ತಾ ನಿತ್ಯ ನದಿಯ ನೆತ್ತಿಯಲಿ ಪೊತ್ತಿಹಾತನು ಪ್ರಖ್ಯಾತನು ಸತ್ಯಶೀಲಕೃತ್ತಿವಾಸಕ್ಲøಪ್ತ ಅವನೆ ಚಿತ್ತದೊಡೆಯ ಅವಗಗತ್ಯ ಕೊಡುನೀ 1 ಬಂದದುರಿತ ಹಿಂದೆ ಮಾಡುವ ಭಕ್ತಿಂದ ನಡದು ನಡದು ಬಂದವರಿಗಾನಂದ ಮಾಡುವ ದಯಮಾಡುವ ತಂದು ಕೊಡುವ ತಂದೆ ಕೇಳಾನಂದಮೂರುತಿ ನಂದಿವಾಹನ ಚಂದ್ರಶೇಖರ ಅಂಥ ಇಂಥ ಕಾಂತನಲ್ಲವೋ ಭೂಪ್ರಾಂತದೊಳವನಂಥ ದಯಾವಂತರಿಲ್ಲವೋಸುಳ್ಳಲ್ಲವೋ ಕಂತುಪಿತ ಅನಂತಾದ್ರೀಶನಂಥ ಕಪಟವಂತರಿಲ್ಲ ಅಂತರಂಗದ ಕಾಂತ ಶಿವನೇ ಚಿಂತೆಯಾಕ್ಹಿಮವಂತ ಇನ್ನು ಪದ ಇಂಥ ಮಾತನು ಕೇಳಿ ಸಂತೋಷದಲಿ ಹಿಮವಂತ ರಾಜೇಂದ್ರ ತಾನು ಮಾತಾಡಿದನು 1 ಮನೆಗೆ ಬಂದನು ಉದ್ರೇಕದಲ್ಲಿ ಸ್ನೇಹಬದ್ಧಾಗಿ ಸ್ವಯಂವರ ದುದ್ಯೋಗ ಮಾಡಿದನು 2 ಲೇಸಾಗಿ ತಾ ಸರ್ವದೇಶಕ್ಕೆ ದುಂದುಭಿ ಘೋಷವ ಮಾಡಿಸಿದಾ ತೋಷದಿ ಸರ್ವಲೋಕೇಶರನೆಲ್ಲಾ ಕರೆ ಕಳುಹಿದಾ 3 ಇಂದ್ರ ತಾ ಬಂದ ಅಲ್ಲಿಂದ ಅಗ್ನಿಯು ಬಂದಾ ಮುಂದೆ ಆ ಯಮನು ಬಂದಾ ಬಂದಾ ನಿರುತಿಮತ್ತೆ ಬಂದ ವರುಣ ವಾಯು ಬಂದ ಕುಬೇರ ತಾನು 4 ನಿಲ್ಲದೆ ಸ್ವಯಂವರಕೆ ಬಲ್ಲಿದನಂತಾದ್ರಿ ವಲ್ಲಭ ತಾ ಬಂದ ಎಲ್ಲರು ಬಂದರಾಗ 5 ಪದ ಗಿರಿರಾಜ ಮುಂದೆ ಆ ಸುರರಲ್ಲಿ ಬಹುಸ್ನೇಹ ಸುರಿಸುತಲೆ ಆಸನವ ತರಿಸಿ ಎಲ್ಲರನು ಕುಳ್ಳಿರಿಸಿ ಕರಗಳ ಮುಗಿದು ಹರಿ ಮೊದಲು ಮಾಡಿಕೊಂ- ಡ್ಹರುಷದಿಂದಲಿ ಸರ್ವ ಸುರರಿಗರ್ಚಿಸಿದ ಸುರಸಾದ ಈ ಕಥೆಯ ಸರಸಾಗಿ ಕೇಳಿದರೆ ಸುರರು ವೊಲಿವುವರೆಲ್ಲ ಸರಸಿಜಾಕ್ಷಿಯ ಸ್ವಯಂವರಕೆ ಬಂದಿಹ ಸರ್ವ ಸುರರನುಗ್ರಹದಿಂದ ಸರಸರನೆ ಮುಗಿದಿತಿಲ್ಲಿಗೆರಡು ಅಧ್ಯಾಯ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಎರಡು ಪದ:ರಾಗ:ಯರಕಲಕಾಂಬೋದಿ ತಾಳ:ಬಿಲಂದಿ, ಸ್ವರ ಷಡ್ಜ ದೇವಕಿಯಲಿ ಅವತರಿಸಿದ ದೇವಾಧೀಶನ ಕಂಡು ಆ ವಸುದೇವನು ಸ್ತುತಿಸಿದ ಕೇವಲ ಭಕುತಿಯಲಿ | ಲಾವಣ್ಯಾಂಬುಧಿಯನಿಸುವ ಭಯದಿಂದ || 1 ಲೋಕಾಧೀಶನೆ ನಿನ್ನ ಅತೌಕಿಕ ರೂಪಾವು ಕಂಡು ಆ ಕಂಸನ ಭಯದಲ್ಲಿ ನಾ ವ್ಯಾಕುಲಳಾಗಿರುವೆ| ಸಾಕೀಕಾಲಕ ಈ ಅಪ್ರಾಕೃತರೂಪವು ಎÀÀನಲು ಶ್ರೀಕಾಂತನು ಆಕ್ಷಣದಲಿ ಪ್ರಾಕೃತ ಶಿಶುವಾದಾ|| 2 ಆ ಕಾಲದಲ್ಯಾದುರ್ಗಾ ತಾ ಕಾಲವ ಕಳಿಯದಲೆ ಗೋಕುಲದಲ್ಲಿ ಪುರುಷೆಂದಾಕಿಯು ತಿಳಿಯದೆ ನಿದ್ರಿಲಯಲ್ಯಾಕ್ರಾಂತಾದಳು ಹುಟ್ಟಿರುವಾಕಿಯ ಮಹಿಮೆ ಇದು|| 3 ಪಟ್ಟಣದಲಿ ಸರ್ವರು ಭಯಬಿಟ್ಟು ನಡರಾತ್ರಿಯೋಳ್ ತಟ್ಟಲು ಬಹುನಿದ್ರಿ ಸೃತಿಗೆಟ್ಟು ಮಲಗಿರಲು | ಹÀುಟ್ಟಿದ ಬಾಲಕನ ನಾ ಬಚ್ಚಿಟ್ಟು ಬರುವೆನೆಂದ ಥಟ್ಟನೆ ನಡದನು ಕೃಷ್ಣನ ಘಡ್ದ್ಹಡದು ಶೌರಿ|| 4 ಕಾಲೊಳಗಿನ ಬೇಡಿಯು ತತ್ಕಾಲಕ ಕಡದಿತು ಬಾಗಿಲಕೀಲಿಗಳೆಲ್ಲಾ ಸಾಲ್ಹಿಡದಿಂದ್ಗರಂತೆ| ಬೈಲಾದವು ಬಾಗಿಲಗಳಾ ಕಾಲದಿ ಹೀಂಗಾದದ್ದು ಬಾಲಕ ಹರಿ ಬದಿಲಿದ್ದ ಮ್ಯಾಲೇನಾಶ್ಚರ್ಯ 5 ವಾಸದ ವೃಷ್ಟಿಯ ಮಾಡಲು ಶೇಷನು ಬೆನ್ನಿಲೆ ಬಂದು ಸೂಸಿ ಬಾಹುವ ಯಮುನಿ ವಾಸುದೇವನ ಕಂಡು ಘಾಸಿಯು ಮಾಡದೆ ಕೂಟ್ಟಳು ಅಸಮಯಕೆ ಹಾದಿ 6 ಗೋಕುಲಕ್ಹೋಗುತ ಶೌರಿಯು ಶ್ರೀ ಕೃಷ್ಣನ ಅಲ್ಲಿಟ್ಟು ಆ ಕನ್ನಿಕೆಯ ತಂದು ತನ್ನಕಿಯ ಬದಿಲಿಟ್ಟಾ| ಆ ಕಾಲಕ ಆ ಬೇಡಿಯ ತಾಕಾಲಗಳಲ್ಲಿತಟ್ಟು|| ಶ್ರೀ ಕಾಂತನ ಸ್ಮರಿಸುತಲೆ ಏಕಾಂತದಲ್ಲಿರುವಾ|| 7 ಬಾಗಿಲುಗಳು ಎಲ್ಲಾ ಮತ್ಥಾಂಗೆ ಕೀಲಿಗಳ್ಯಲ್ಲಾ ಬ್ಯಾಗನೆ ಆದವು ಮುಂಚಿನ್ಹಾಂಗೆ ತಿಳಿಗೂಡದೆ| ಆಗಾ ಕೂಸಿನ ಧ್ವನಿ ಛಂದಾಗಿ ಕಿವಿಯಲಿ ಬೀಳಲು ಬಾಗಿಲಕಾಯುವ ಭೃತ್ಯರು ಬ್ಯಾಗನೆದ್ದರು ಭಯದಿ|| 8 ಗಡಿಬಿಡಿಯಿಂದಲ್ಯವರು ಯಡವುತ ಮುಗ್ಗುತ ತ್ಯೋಡುತ ನಡಿದರು ನಿಂದಿರದಲೆ ಬಹುಸಡಗರದರಮನಿಗೆ| ಒಡಿಯಾನಂತಾದ್ರೀಶನ ಖಡುದ್ವೇಷ ಆಸವಗೆ ನುಡಿದರು ದೇವಕಿದೇವಿಯು ಹಡಿದಾಳೆಂತೆಂದು|| 9 ಪದ್ಯ ನುಡಿಯ ಕೇಳೀಪರಿಯ ಖಡುಪಾಪಿ ಕಂಸ ಗಡವಡಿಸಿ ಕೊಂಡೆದ್ದು ಭಯ ಬಡುವತಲೆ ಶ್ವಾಸವನು ಬಿಡುವುತಲೆ ಭರದಿಂದ ಎಡವುತಲೆ ಮುಗ್ಗುತಲೆ ನಡದನಾ ದೇವಕಿಗೆ ಕುಡು ಕೂಸು ಎಂತ್ಯಂದು ನುಡಿಕೇಳಿ ಮನದಲ್ಲಿ ಮಿಡುಕುತಲೆ ದೇವಕಿಯು ದೃಢವಾಗಿ ಕೈಯೊಳಗೆ ಹಿಡಿದು ಆಕೂಸಿನಾ ಕುಡದೆ ಕಂಸನ ಮುಂದೆ ನುಡಿದಳೀ ಪರಿಯು|| 1 ಪದ:ರಾಗ:ನೀಲಾಂಬರಿ ತಾಳ:ತ್ರಿವಿಡಿ ಕುಡಲಾರೆ ಕೂಸಿನ್ನನಾ ನಿನಗೆ || ಅಣ್ಣ ಕುಡಲಾರೆ ಒಡ್ಡಿ ಬೇಡುವೆ ಕಡಿ ಹುಟ್ಟ ಹೆಣ್ಣದು|| ಪ ಸೂಸಿಯು ನಿನಗೆ ಈಕಿ ತಿಳಿ ನೀನು | ಮತ್ತು ಹಸಗೂಸು ಎಂಬುವದರಿಯೇನು | ಇಂಥಾ ಶಿಶುವಿನಳಿದಾರೆ ಪಾಪ ಬರದೇನು| ವಸುಧಿ ಒಳಗೆ ಬಹು ಹೆಸರಾದವನೋ ನೀನು|| 1 ಹಿರಿಯಣ್ಣನಲ್ಲೇನೊ ನೀ ಎನಗೆ | ಸ್ವಲ್ಪ ಕರುಣಾವಿಲ್ಲವೋ ಎನ್ನೊಳು ನಿನಗೆ|| ಮಕ್ಕಳಿರಧಾಂಗ ಮಾಡಿದಿ ಮನಿಯೋಳಗೆ ಗುರುತಕ್ಕಿದು ಒಂದು ನೋಡಿ ಮರೆತೆನ್ಹಿಂದಿನ ದುಃಖ|| 2 ನಾ ಏನು ನಿನಗೆ ಮಾಡಿದೆ ಪೇಳು | ಬಹು ಬಾಯಿತಗುವೆ ಕೋಪವು ತಾಳು| ಇಂಥಾ ಮಾಯಾ ಮೋಹತಳಿಗಿ|| 3 ಪದ್ಯ ಅಪ್ಪ ಕುಡಲಾರೆಂದು ತಪ್ಪದಲೆ ಆ ಕೂಸಿನಪ್ಪಿಕೊಂಡಳುವಾಗ ಕಲ್ಲ ಮ್ಯಾಲಪ್ಪಳಿಸಲಾಕೂಸು ತಪ್ಪನ್ಹಾರಿತು ಮ್ಯಾಲೆ ಅಷ್ಟು ಚಿನ್ಹಿಗಳಂದ ಉಟ್ಟ ಪೀತಾಂಬರದಿ ತೊಟ್ಟ ಹೀಂಗೆ ಸ್ಪಷ್ಟಪೇಳಿದಳು| ಪದ ರಾಗ:ತೋಡಿ ತಾಳ ಬಿಲಂದಿ ಮಂದ ಮತಿಯೇ ಕಂದರನ್ನ ಕೂಂದರೇನು ಫಲವೂ| ಇಂದು ಎನ್ನ ಕೂಂದ ವ್ಯೂಲ ಮುಂದೆ ಬರುವದೇನು| 1 ವೈರಿ ಅನ್ಯರಲ್ಲಿ ಇನ್ನ ಬೆಳೆವುತಿಹನೊ| ಮುನ್ನ ಬಂದು ತನ್ನ ಬಲದಿ ನಿನ್ನ ಕೊಲ್ಲುವೊನು 2 ಅಂತಕನ್ನ ನಿಂತು ಕೊಲ್ಲುವ ಭ್ರಾಂತಿ ಬಿಡೆಲೊ ನೀನು| ಅನಂತಾನಂತಾದ್ರೀಶನಂತು ತಿಳುವದೇನೇ|| 3 ಪದ್ಯ ಆ ಮಹಾ ಪಾಪಿ ಗ್ಯಾಡೀ ಮಾತು ದೇವಿ ತಾ ಭೂಮಿಯಲಿ ಬಂದು ಬಹುಗ್ರಾಮದಲೆ ನಿಂತು ಬಹುನಾವು ಉಳ್ಳವಳಾಗಿ ಕಾಮಿತಾರ್ಥಗಳನ್ನೂ ಪ್ರೇಮದಲಿ ಕುಡುತಿಹಳು ನೇಮದಿಂದಾ|| ಆ ಮಾಯಿ ವಚÀನವನು ಪಾಮರನು ತಾ ಕೇಳಿ ರೋಮಾಂಚಗಳು ಉಬ್ಬಿ ನಾ ಮಾಡಿದಲ್ಲೆಂದು ನೇಮದಲಿ ಇಬ್ಬರಿಗೆ ನೇಮಿಸಿದ ಬೇಡಿಯನು ತಾ ಮೋಚನವು ಮಾಡಿ ಪ್ರೇಮದಿ ನುಡದಾ|| 1 ಪದ:ರಾಗ :ಸಾರಂಗ ಅದಿತಾಳ ಸ್ವರ ಮಧ್ಯಮ ಎಲೆ ತಂಗಿಯೆ ಎಲೊ ಶಾಲಕ ಬಲು ಪಾಪಿಯು ನಾನು| ಬಲು ಮಂದಿ ಮಕ್ಕಳನ ಛಲದಿಂದ ಕೊಂದೆ| ತಿಳಿಯದೆ ನಾ ಇಂಥ ಕೆಲಸಕ್ಕೆ ತೊಡಕಿ ಪರಿ ಪಾಪದ ಫಲ ಭೋಗಿಯು ಆದೆ|| 1 ಅಶರೀರದ ವಾಣಿಯು ಹುಸಿ ಅಯಿತು ಇಂದು ವಸುಧಿಯೋಳಿರುವಾ ಮಾನುಷರಾ ಪಾಡೇನು|| ಶಶಿಮುಖಿ ನಾನಿಮ್ಮ ಶಿಶುಗಳ ಕೂಂದೆ||2 ಅಮಿತಾ ಅಪರಾಧಾಯಿತು ಕ್ಷಮಾ ಮಾಡಿರಿ ನೀವು|| ವಿಮಲ ಮನಸಿನಿಂದ ನಮಿಸಿದೆ ನಿಮಗೆ|| ಕಮಲೋದ್ಭವ ಬರದಂಥಾ ಕ್ರಮ ತಪ್ಪದು ಎಂದು ಶ್ರಮಯಾತಕ ಸುಖದುಃಖವ ಸಮಮಾಡಿರಿ ನೀವು|| 3 ತಿಳಗೇಡಿಯು ಆ ಕಂಸ ತಿಳಿಹೇಳಿಪರಿಯು ಸ್ಥಳಬಿಟ್ಟು ತಾ ತನ್ನ ಸ್ಥಳಕ್ಹೋದನು ಬ್ಯಾಗೆ\ ಬ್ಯಳಗಾಗಲು ಎಲ್ಲಾರಿಗೆ ತಿಳಿಸೀದನು ಆಗೆ ಹೊಳುವಾ ದೇವಿಯ ಮಾತುಗಳನೆಲ್ಲ ಬಿಡದೆ || 4 ಖಳರಂದರು ನಾವಿನ್ನ ಇಳಿಯೊಳ್ಹುಟ್ದರುವಾ| ಉಳದಾ ಬಾಲಕೃಷ್ಣಕರನ್ನ ಕೊಲ್ಲು ವುದ ಸತ್ಯಾ| ತಿಳದೀಪರಿ ಅವರನ್ನ ಕಳಸೀದ ಕಂಸಾ ಚಲುವಾನಂತಾದ್ರೀಶನ ಕೊಲ್ಲವೊದು ಎಂದು|| 5 ಪದ್ಯ ಮುಂದ ಗೋಕುಲದಲ್ಲಿ ನಂದಗೋಪನು ತನ್ನ ಕಂದನಾ ಮುಖವನ್ನು ಛಂದದಲಿ ನೋಡಿ ಆನಂದ ಹಿಡಿಸದೆ ತಾನು ಬಂದ ಬಂದವರಿಗ್ಯಾನಂದ ಬಡಸಿದ ಮನಕ ಬಂದದ್ದು ಕೂಟ್ಟು| ನಂದನಂದನನ ವದನೇಂದು ದರ್ಶನಕಾಗಿ ಬಂಧು ಬಾಂಧವರೆಲ್ಲ ಬಂದು ಒದಗಿದರಲ್ಲೆ ದುಂದುಬಿಯು ಮೊದಲಾದ ಛಂದಾದ ವಾದ್ಯಗಳು ಒಂದಾಗಿ ನುಡದÀವಾನಂದದಿಂದಾ| ಗೀತ ಬಲ್ಲವರು ಸಂಗೀತವನು ಮಾಡಿದರು ಪ್ರೀತಿಯಲಿ ಪಾಡಿದರು ಶ್ರೋತ್ರಸುಖರಾಗಿ ಮಾಡಿದರು ಪ್ರೀತಿಯಲಿ ಪಾಡಿದರು ಶ್ರೋತ್ರಸುಖರಾಗಿ ತಾತನವ ತನ್ನಲ್ಲೆ ಜಾತನಾಥಂಥವಗೆ ಜಾತಕರ್ಮವು ಮಾಡಿ ಪ್ರೀತನಾದಾ| ಪ್ರೀತಗೋಕುಲದಲ್ಲಿ ನೂತನೈಶ್ವರ್ಯಗಳು ಜಾತವಾದವು ಸರ್ವಜಾತಿಗಳಿಗ್ಯಾದರೂ ಯಾತಕ್ಕೂ ಕಡಿಮಿಲ್ಲ ಸೋತಂಥ ದಾರಿದ್ರ್ಯ ಯಾತಕಿರುವದು ರಮಾನಾಥ ಇರಲು|| 1 ಸ್ಥಿರ ಮನಸಿನಿಂದಲ್ಲೆ ಸ್ಥಿರವಾಗಿ ಕುಳಿತು ಈ ಚರಿತವನು ಕೇಳಿದವರ ಪರಿಪರಿಯ ಅಭಿಲಾಷ ಪರಿಪೂರ್ಣವಾಗುವದು ಚರಿಸದಲೆ ಅವರಲ್ಲಿ ಸ್ಥಿರಳಾಗಿ ಇರುವವಳು ವರಮಹಾಲಕ್ಷ್ಮೀ| ಧರಿಯೊಳಗ ಇರುವಂಥ ವರಕವೀಶ್ವರರಂತೆ ಸ್ಥಿರವಲ್ಲ ಗೋಕುಲದಲ್ಲಿ ತ್ವರ ಅವನೇ ಮುಗಿಸಿದಿಲ್ಯರಡು ಅಧ್ಯಾಯಾ|| 2 “ಶ್ರೀ ಕೃಷ್ಣಾರ್ಪಣ ಮಸ್ತು” ಎರಡನೆಯ ಅಧ್ಯಾಯವು ಸಂಪೂರ್ಣವು”
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಎರಡು ರಾಗ ಭೂಲೋಕವನು ಜೈಸುತ ಬಲದಿಂದಾ ಇಂದ್ರನೇ ಮೊದಲಾದ ಬೇಗಾ ದೇವೇಂದ್ರ ನಾಸನಕೆ 1 ಉಗ್ರಶಾಸನ ಮಾಡು ಮಾಡುವಂಥಾ ಉಗ್ರಶಾಶನ ಶೀಘ್ರದಿಂ ಹರಿಗೆ 2 ಬಿಡದೆ ದಯದಿ ಅನಂತ ಇಂಥ ಕಾಲಕೆ ಎಲ್ಲಿ `ಅನಂತಾದ್ರೀಶನೆ ' ನಿಂತು ನುಡಿದನು ಅಂತರಿಕ್ಷದಲಿ 3 ರಾಗ ಅಂಜಬೇಡಿರಂಜ ಬೇಡಿರೋ ನೀವಿನ್ನು ಮೇಲೆ ಪ ಪಂಜರದೊಳಗಿರುವೆ ನಿಮ್ಮನಂಜಿಸುವನ ಭಂಜಿಸುವೆನು ಅ.ಪ ಎಂದು ದ್ವೇಷ ಮಾಡುವನೋ ಅಂದಿಗವನ ಕೊಂದÀು ಬಿಡುವೆ 1 ದ್ವೇಷವನ್ನು ಮಾಡಿದವನು ಉಳಿಯ ಮುನ್ನ ಬಹಳ ದಿವಸ ಸತ್ಯ 2 ಪ್ರಹ್ಲಾದ ಇದ್ದ ಸ್ಥಳದಲ್ಲಿರುವೆ ನಾನು 3 ವಚನ ಶ್ರೀ ಲಲಾಮನವಾಣಿ ಕೇಳಿ ಉಳಿದವನಲ್ಲ ಕಾಲ ಹಿರಣ್ಯಕನಿಂದ ಬಾಲ ಕಾಲಕಾಗುವದೆಂದು ಕಾಲವನು ನೋಡುತಲೆ ಕಾಲಗಳೆದರು ಲೋಕಪಾಲಕರು ಎಲ್ಲಾ 1 ರಾಗ ಕೈಯಲಿಕೊಟ್ಟು ನಕ್ಕು ನುಡಿದಾನು 1 ಇರಲಿ ಬುದ್ಧಿವಂತನಾಗಲಿ ಪ್ರಸಿದ್ಧನಾಗಲಿ2 ಆಗ ಪ್ರಹ್ಲಾದನ್ನ ಕರದ್ಹೇಳಿದರು ಆಹ್ಲಾದದಿಂದಾ3 ಸಂಭ್ರಮದಿಂದ ಉತ್ತಮ ಶ್ರೀ ಹರಿನಿಂದಾ ಶಾಸ್ತ್ರ ನುಡಿದರು 4 ತ್ರೈವರ್ಗಿಕ ಶಾಸ್ತ್ರ ನುಡಿದರು 5 ಪಾಠಮಾಡಲಿಲ್ಲ ಸವಿದು ಹರಿ ಚರಿತಾಮೃತವನ್ನು ಸವಿ ಇನ್ನೊಂದನರಿಯಾ 6 ನುಡಿದನು ಅವನು ನವನೀತ ಧಾಂಗಿರುವಂಥಾದು ನವವಿಧ ಭಕ್ತಿ 7 ಅವರಿಗೆ ಮತ್ತಾರಿಗಾದರು ಅವನಂಜುವನಲ್ಲಾ 8 ಅವನು ಚಲುವ ನಂತಾದ್ರೀಶನಲ್ಲೆ ಛಲ ಬಿಟ್ಟನಲ್ಲಾ 9 ವಚನ ಕೂಡಿಸಿಕೊಂಡು ಮಂದ ಮುಂದ್ಹೇಳು ಇಷ್ಟುದಿನ ಒಂದು ಬಿಡದಲೆ ಹೀಗೆ ಅಂದ ಮಾತಿಗೆ ಮತ್ತೆ ಕಂದ ಪ್ರಹ್ಲಾದ ಹೀಗೆಂದನಾಗ 1 ರಾಗ ಬರೆಯಲಿಲ್ಲ ಓದಲಿಲ್ಲವೋ ಅಪ್ಪಯ್ಯ ನಾನು ಪ ಹರಿಯ ನಿಂದಿಸುವ ಶಾಸ್ತ್ರ ಬರೆಯಲ್ಹ್ಯಾಗೆ ಓದಲ್ಹ್ಯಾಗೆ ಅ.ಪ ಹರಿಯ ಗುಣಗಳನ್ನು ಮಾಡುವೆನು ಹರಿಯಪಾದ ಹರಿಯ ವಂದಿಸುವೆ ನಿತ್ಯಾ 1 ಅಂಥಾದು ಎನ್ನ ಮನಸು ಮನಸಿಲ್ಲೆ ವಿಷಯಗಳನ್ನು ನೆನೆಸುವೆ ಸುಹರಿಯ ರೂಪಾ2 ಗೆಳೆಯನಾದ ತಾನು ಅಂತರಂಗದಲ್ಲಿ ತಾನು ನಿಂತು ಪ್ರೇರಿಸುವ ಅಂತರಂಗದಂತೆ ಇರುವೆ 3 ವಚನ ಸಿಟ್ಟು ಮಾಡುತಲಿಂಥ ಥಟ್ಟನ್ಹೇಳಿರಿಯೆನಲು ಥಟ್ಟ ನಾವಲ್ಲ ಕೊಟ್ಟವರು ಕೊಟ್ಟ ಬುದ್ಧಿಯು ಅಲ್ಲ ರಾಗ ಕೇಳಿರಿ ನೀವೆಲ್ಲ ಭಾಳ ಭಕುತಿಯಲಿ ಕೇಳಿರಯ್ಯಾ ಪ ಬಾಳ ಮಾತುಗಳೇಕೆ ಹೇಳುವೆ ಸಾರಾಂಶ ಕೇಳಿರಯ್ಯಾ ಅ.ಪ ಅಲ್ಲ ಕೇಳಿರಯ್ಯಾ ದಿಟ್ಟಾಗಿ ಶ್ರೀ ಹರಿಯು ಕೊಟ್ಟ ಬುದ್ಧಿಯು ಇದು ಕೇಳಿರಯ್ಯ 1 ಶ್ರೀ ಜಗದೀಶನಿಂದೀ ಜಗ ತಿರಗೋದು ಕೇಳಿರಯ್ಯಾ 2 ಅನಂತಾದ್ರೀಶನು ತಾನೆ ಆಡುವದು ಕೇಳಿರಯ್ಯಾ 3 ವಚನ ದೈತ್ಯ ಅಡಿಯಿಟ್ಟು ನೀತಿಯಲಿ ಕಿಡಿಗಣ್ಣಿನೊಳು ನೋಡಿ ಒಡಲೊಳಗೆ ಸಿಟ್ಟಿನಲಿ ದೃಢವಾಗಿ ಇರುವಂಥ ಭೃತ್ಯರುಗಳಿಗೆ ನುಡಿದನೀಪರಿಯ 1 ರಾಗ ಕಡಿದ್ಹಾಕಿರೀತನ ||ಪಲ್ಲ|| ಬಗೆ ದುಷ್ಟಮಾತುಗ- ವಿಷ್ಣುವ ಸೊಗಸಾಗಿ ಪೂಜಿಸಿ ನಗುತಿಪ್ಪನ 1 ಸುತನಾಗದಿದ್ದರೂ ಸುತನವನೆ ಅತಿರಭಸದಲೆ ವಿಶ್ರುತವಾಗಿ ಹುಟ್ಟಿದ ವಿತತರೋಗ ತನಗ್ಹಿತವಾಗಿರುವದೇನು 2 ನಾನಾರೀತಿಗಳಿಂದ ಹಾನಿಯ ಅನಂತಾದ್ರೀಶನ ಧ್ಯಾನದಲ್ಲಿರುವನ 3 ರಾಗ ಆಗೆಲ್ಲ ಮಂದಿಗಳನ ನೆರಸಿದಾ1 ಮುರಿದು ಅವನ ಭಯ ಬಿಡಿಸಿದಾ 2 ಹರಿಯು ಬಂದು ಉಳಿಸಿದಾ3 ಸರ್ಪಶಯನ ಬಂದು ಭಯವಾ ಬಿಡಿಸಿ4 ವಿಷವ ತಂದು ಯತ್ನದಿಂದ ಕುಡಿಸಿದಾ ಹರಿ ತಾ ವಿಷವಮೃತ ಮಾ ಡಿ ಸೌಖ್ಯ ಬಡಿಸಿದಾ 5 ಘಟ್ಟ್ಯಾಗ್ಹಿಡಿದು ಶ್ರೀಹರಿ ಸಾಕಿದಾ 6 ತಾನೆ ತಾರಿ ಸಿದಾ7 ಶೀತಾಗಿ ಸೌಖ್ಯ ಬಡಿಸದಾ 8 ನಾನಾರೀತಿಯಿಂದಲವನನು ಸರಿಸಿದಾ ಅಚ್ಯುತನಂತಾದ್ರೀಶನು ಸೌಖ್ಯ ಸುರಸಿದಾ 9 ವಚನ ಮಾಡಿದರಿವಗೆ ಇನ್ನದೇನು ಪಾಯವುಯೆಂದು ಮಾನಿತರು ಗುರುಗಳಾ ದಾನವೇಂದ್ರ ನೀನು ದೀನನಾಗುವದು ಮುಂದೆ ನೀನು ತಿಳಿಯೊ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಒಂದು ಜಯ ವಿಬುಧನುತರ ಚರಣ ಜಯತು ನಾಗಾಭರಣ ಜಯ ಭಕ್ತ ಜನ ಶರಣ ಜಯ ದುಃಖಹರಣ 1 ಜಯತು ಖಳಕೃತಕದನ ಜಯಜಯತು ಜಿತಮದನ ಜಯ ಜಯತು ಸುಖಸದನ ಜಯ ಪಂಚವದನ2 ಜಯತು ಶ್ರೀಶಕೈಲಾಸ ಜಯ ಭಜಕವಿಶ್ವಾಸ ಜಯ ಅನಂತಾದ್ರೀಶ ಪ್ರಿಯಪಾರ್ವತೀಶ 3 ಪದ ಮುಂಚೆ ನುತಿಸುವೆ ಭಕುತಿಯಿಂದಲಿ ಪಂಚವದನನ ಪಾದಪಂಕಜ ಚಂಚಲಾಗದಲಿರಲಿ ಮನ ಮತಿ ಮುಂಚೆ ಕೊಡುಯೆಂದು ಹಿಂಚೆ ಕುಲ ದೇವಾದಿ ಪದಯುಗ ವಂಚನೆಯು ಇಲ್ಲದಲೆ ನುತಿಸುವೆ ಹಂಚಿಕಿಂದಲಿ ಕುಶಲಬುದ್ಧಿ ಪ್ರಪಂಚ ಕೊಡುಯೆಂದು 1 ಮನಸಿಜನ ಗೆದ್ದವರು ಮೇದಿನಿಯ ಹುಡಿಕಿದರಿಲ್ಲಾ ಮತ್ತೀಮನಸು ಗೆದ್ದವರುಂಟೆಯೆಲ್ಲರಿ ಗನುಭವಾಗಿಹುದು ಮನಸಿಜನ ಗೆದ್ದಂಥ ರುದ್ರನು ಮನಕೆ ತಾ ಅಭಿಮಾನಯಾಗಿಹ ನೆನುತ ಮೊದಲಾತನನ ನುತಿಸಿದೆ ಮನಸಿನೊಳಗಿಟ್ಟು 2 ಸಾರಲಿಂಗ ಪುರಾಣದರ್ಥದ ಸಾರಿ ತಿಳುವುತ ಮತ್ತೆ ಗ್ರಂಥ ವಿ ಚಾರ ಮಾಡುತ ಅದರ ಅರ್ಥವ ಪೂರ್ಣ ತಿಳಕೊಂಡು 'ಶ್ರೀರತಾನಂತಾದ್ರಿ' ರಮಣನ ಸಾರ ಕೃಪೆಯಿಂದಲೆಯೆ ಪೇಳುವೆ ಪಾರ್ವತೀಶಗೆ ಪ್ರೀತಿಕರ ಶಿವ ಪಾರಿಜಾತವನು 3 ಪದ ಪೂರ್ವದಲ್ಲಿ ಪಾರ್ವತಿಯು ಪರ್ವತಶ್ರೇಷ್ಠ ಹಿಮ ಪರ್ವತದ ಮಧ್ಯದಲ್ಲಿ ಸರ್ವಗುರು ಕೈಲಾಸ ಪಾರ್ವತೀಶನ ಮನ:ಪೂರ್ವಕದಿ ಬಯಸುತಲ ಪೂರ್ವ ತಪ ಮಾಡುತಿರುವಳಲ್ಲೆ ಪಾರ್ವತಿಯ ಕಷ್ಟ ಹಿಮಪರ್ವತನು ತಾ ನೋಡಿ ಸರ್ವ ಕಾರ್ಯವ ಬಿಟ್ಟು ಇರುವ ಬಲು ಚಿಂತೆಯಲಿ ಸರ್ವಸಂಪನ್ನಳಾಗಿರುವಳೆನ್ನ ಮಗಳು ಈ ಪಾರ್ವತಿಗೆ ತಕ್ಕ ವರನಿರುವನಾರೆಂದು 1 ಬಂದನಾಗಲ್ಲವನ ಮಂದಿರಕೆ ನಾರದನು ಮುಂದೆ ಗಿರಿರಾಜ ಅಲ್ಲಿಂದ ಆತನಕಂಡು ಇಂದು ಇಲ್ಲಿಗೆ ನೀವು ಬಂದು ಕಾರಣವೇನುಯೆಂದು ಕೇಳಿದನು ಅಂದ ಮಾತನ್ನು ಕೇಳಿ ಮುಂದೆ ಮುನಿರಾಜ ತಾ ಮಂದಹಾಸದಿ ನಗುತವೊಂದೊಂದು ಕಥೆ ಪೇಳಿ ಛಂದದಲಿ ಮನಸಿಗಾನಂದ ಬಡಿಸುತ ನುಡಿದ ಬಂದ ಕಾರ್ಯವ ಅವನ ಮುಂದೆ ವಿಸ್ತರದಿ 2 ಪದ ತಿಳಿಯೋ ನೀ ಗಿರಿರಾಜ ನಾ ಬಂದ ಕಾರ್ಯವ ತಿಳಿಯೋ ನೀ ಗಿರಿರಾಜ ಭೋರಾಜರಾಜಾ ತಿಳಿಯೋ ನಿನಗೊಬ್ಬಳಿಯ ಬಂದಿಹ ನಳಿಯನಾಗಿ ಮುಖಕಳೆಯು ಉಳ್ಳವ ಇಳೆಯೊಳಿಂಥಾ ಅಳಿಯನ ಸಮ ಅಳಿಯನಿಲ್ಲ ಕಾಲ್ಗಳೆಯುದಲೆ ಇರು ಪ ಹರಿಯಿರುವ ಪ್ರಖ್ಯಾತಾ ಸರ್ವರಿಗೆ ಆತನೆ ದೊರೆಯೆನಿಸಿಕೊಂಬಾತಾ ಕರಿರಾಜ ಕೂಗುತ ಕರೆಯಲೊದಗಿದನಾತಾ ತನ್ನ ಸ್ಮರಿಸಿದವರನು ಮರೆಯದಲೆ ಪೊರೆವಾತಾ ಅನಾಥಾನಾಥ ಧರೆಯೊಳಗೆ ಶ್ರೀಹರಿಯ ಮೂರ್ತಿಯ ಸರಿಯುಯಿಲ್ಲವು ಮರೆಯದಲೆ ಆ ಸಿರಿಯ ರಮಣನ ಕರೆಯ ಕಳಿಸುತ ಹಿರಿಯ ಮಗಳನು ಹರಿಗೆ ಅರ್ಪಿಸು1 ಬಡವನಲ್ಲವು ಆತಾ ಬಹುಬಡವ ಭಕ್ತರ ದೃಢವ ನೋಡುವನಾತಾ ತಾ ಬಿಡದೆ ಕರವನು ಪಿಡಿವ ಸ್ನೇಹ ಸಮೇತಾ ಬೇಡಿದ್ದು ತ್ವರದಲಿ ಕೊಡುವನವ ಬಹು ದಾತಾ ಲಕ್ಷ್ಮಿಯಸತ್ತಾ ದೃಢವಿರಲಿ ಮನ ಪೊಡವಿರಲಿ ಉಂಬುಡುವ ಮಗಳನು ತಡವು ಮಾಡದೆ2 ಕೊಡುವದುಚಿತವು ಒಡವೆಗಳು ಬಹಳಿಡುವುತಲೆ ಸುಖಪಡುವಳಾಕೆಯು ಎಂಥವನು ಅವ ತಾನು ಎಂಬಂಥ ಮನಸಿನ ಭ್ರಾಂತಿ ಬಿಡು ಎಲೋ ನೀನು ಅತ್ಯಂತವಾಗಿಹ ಶಾಂತ ಮೂರುತಿ ತಾನು ಎಂತೆಂಥವರಿಗವ ನಂತ ತಿಳಿಯದು ಇನ್ನು ಮತ್ಹೇಳಲೇನು ಇಂಥ ಶ್ರೀಮದನಂತಾದ್ರೀಶನು ಕಾಂತಿಯಿಂದಿರುವಂಥ ಮಗಳಿಗೆ ನಿಶ್ಚಿಂತೆಯಿಂದಿರು 3 ಪದ ಮುನಿಯ ಮಾತನು ಕೇಳಿ ಮನಸಿನೊಳು ಹಿಗ್ಗುತಲೆ ಮನದ ಚಿಂತೆಯ ಬಿಟ್ಟು ಮನಸಿಜಪಿತನು ಎನ್ನ ಮನಿ ಅಳಿಯನಾದ ಎನ್ನ ಜನುಮ ಸಾರ್ಥಕವಾಯಿ ತೆನುತ ತಿಳಿದನು ತಾನು ಘನ ಹಿಮಾಚಲನು ಅನುದಿನವು ತನ್ನಲ್ಲಿ ಅನು ಕೂಲವಾಗುತಲೆ ತನಗೆ ಹಿತಮಾಡುತಿಹ ಜನರೊಳಗೆ ಮ- ತ್ತಾಪ್ತ ಜನರನ್ನು ಕೇಳದಲೆ ಅನುಮಾನ ಬಿಟ್ಟು ಹೀಗೆನುತ ಮಾತಾಡಿದನು ಮುನಿಯ ಮುಂದೆ ಪದ ಕೊಡುವೆನು ಆ ವಿಷ್ಣುವಿಗೆ ಮಗಳನ್ನು ಕೊಡುವೆನು ಕೊಡುವೆನು ಸಂತೋಷ ಬಡುವೆನಾತನ ಪಾದಾ ಹಿಡಿವೆನು ಚಿಂತೆಯ ಬಿಡುವೆನು ಮಗಳನ್ನು ಪ ನಾರದ ನಿನಮಾತು ಇನ್ನು ಸರಿ ಬಾರದು ಆರಿಗೆ ಮುನ್ನ ನೀರದ ವರ್ಣನ ತೋರಿದ ಬುದ್ಧಿ ವಿ ಶಾರದ ನಿನ್ನ ಮಾತು ಮೀರದೆ ಮಗಳನ್ನು ಕೊ....1 ನಿನ್ನ ಮಹಿಮೆ ಬಲ್ಲೆ ನಾಲ್ಕುಲೋಕ ಮಾನ್ಯರಿಗತಿಮಾನ್ಯ ನೀನು ನಿನ್ನ ಚಿತ್ತಕೆ ಬಂದರಿನ್ನೇಕೆ ತಡಬಹು ಚೆನ್ನಾತ ಆತಗೆ ಮನ್ನಿಸಿ ಮಗಳನ್ನು ಕೊ....... 2 ಭಾಷೆಯು ಅದು ಸುಳ್ಳಲ್ಲ ಲೇಸಾಗಿ ನಾನಿನ್ನ ಭಾಷೆಗೆ ಮೆಚ್ಚಿ ಉಲ್ಲಾಸದಿ `ಅನಂತಾದ್ರೀಶಗೆ ' ಮಗಳನ್ನು ಕೊಡುವೆನು3 ಪದ ಬ್ರಹ್ಮಪುತ್ರ ಕೇಳಿ ಸಂಭ್ರಮ ಬಡವುತ ನಮ್ಮ ಕಾರ್ಯ ಆಯಿತೆಂದು ಸುಮ್ಮನಿರುವುತ 1 ಒಮ್ಮಿಂದೊಮ್ಮೆಲೆದ್ದು ಮತ್ತೊಮ್ಮೆ ಹೇಳುತ ರಮಿಸದಲೆ ನಡೆದ ತನ್ನ ಜಿವ್ಹೆ ತೋರುತ 2 ಹೋಳು ತಂಬೂರಿ ತಂತಿಗಳನು ಮೀಟುತ ಚೆಲುವ ಮುನಿಯ ನಡೆದ ಬಾಗಿಲವ ದಾಟುತ 3 ಚೆಂದವಾಗಾನಂದ ಭಾರದಿಂದ ಮಣಿವುತ ಮುದೆ ಪಾರ್ವತಿಯ ಬಳಿಗೆ ಬಂದು ಕುಣಿಯುತ 4 ಮುನ್ನ ನುಡಿದ ಮದುವೆಯ ಸುದ್ದಿಯನು ನಗವುತ ಚೆನ್ನಿಗ`ನಂತಾದ್ರೀಶ'ನನ್ನು ಸ್ಮರಿಸುತ 5 ಪದ ಕೇಳಮ್ಮ ಹೊಸಸುದ್ದಿ ಪಾರ್ವತಿ ನಿನಗೆ ಹೇಳಬಂದೆನು ಎನಗಿದು ಪ್ರೀತಿಪ ಪಂಕಜನಾಭ ಬರುವನಂತೆ ನಿನ್ನ ಕಂಕಣಕಯ್ಯ ಪಿಡಿವನಂತೆ ಪಂಕಜಮುಖಿಯೆ ನಿಶ್ಚಯವಂತೆ ನಿ ಶ್ಯಂಕೆಯಿಂದಿರು ಯಾತಕೆ ಚಿಂತೆ 1 ನಕ್ಕು ಆಡುವನಲ್ಲವು ನಾನು ಎ ನ್ನಕ್ಕಯ್ಯ ನಿನಗೆ ಹಿತ ಪೇಳುವೆನು ಮಿಕ್ಕ ಮಾತುಗಳಿಂದ ಫಲವೇನು ನಿನ್ನ ತಕ್ಕ ಪುರುಷ ಅವ ತಿಳಿ ನೀನು 2 ಶ್ರೀಮದನಾಂತಾದ್ರಿವಾಸಗೆ ನಿನ್ನ ನೇಮಿಸಿದ ಹಿಮವಂತನು ಈಗ ಕೋಮಲಾಂಗಿಯೇ ಎನ್ನ ಮನಸಿಗೆ ಬಂತು ಈ ಮಾತು ಸತ್ಯವಾಗಲಿ ಬೇಗ 3 ಪದ ಪರಿ ಸುದ್ದಿಯುಂಟೆಂದು ಪೇಳುತಲೆ ಟಣ್‍ಟಣನೆ ಜಿಗಿವುತು ತ್ಕಂಠzಲ್ಲಿ ಅಲ್ಲಿಂದ ಹೊರಟು ಮುನಿಬಂದು ವೈ ಕುಂಠದಲಿ ತಾ ನುಡಿದ ಉಂಟಾದ ಸುದ್ದಿ ವೈಕುಂಠಪತಿಗೆ ಎಂಟೆಂಟು ಕಳೆಯಿಂದ ಉಂಟಾದ ಪಾರ್ವತಿಯ ಗಂಟು ಹಾಕಿದೆಯೆನಲು ತಂಟಕನೋ ನೀ ಕಲಹಗಂಟಕನೋ ಸರಿಯಿನ್ನು ಭಂಟನಹುದೆಂದು ವೈಕುಂಠಪತಿನಕ್ಕ 1 ನಾರದನ ಮಾತು ಸರಿಬಾರದೆ ಪಾರ್ವತಿಯು ತೀರದಂಥಾ ದು:ಖವಾರಿಧಿಯಲಿ ಮುಳುಗಿ ಸಾರಿದಳು ತನ್ನೊಳಗೆ ಘೋರಾದ ಚಿಂತೆ ಬಂತಾರಿದನು ಬಿಡಿಸುವರು ತೋರದೆನಗೆ ತೋರದಿರಬೇಕು ನಾ ದೂರದಲಿ ಇಲ್ಲೆ ಇರಬಾರದೆಂತೆಂದು ಸುಖ ತೋರದಲೆ ತನ್ನ ಮಾತು ಮೀರದಲೆ ಇರುವ ಸುವಿ ಶಾರದಳು ಸಖಿಯೊಡನೆ ಘೋರಾದರಣ್ಯವನು ಸೇರಿದಳು ತಾನು ಮುಂದೆ ಮತ್ತಾಕೆಯ ಮುಂದೆ ಮಾತಾಡದಲೆ ನೊಂದು ತನ್ನೊಳಗೆ ತಾ ತಂದು ಆ ವನದಲ್ಲಿ ಮುಂದೇನು ಮಾಡಲೆಂತೆಂದು ತಿಳಿಯದೆ ಮರುಗಿ ಮಂದಗಮನೆಯು ಚಿಂತೆಯಿಂದ ಮಲಗಿದಳು ಮುಂದೆ ಆ ಸಖಿ ನೋಡಿ ಸಂದೇಹ ಬಡುತ ತ್ವರ ದಿಂದ ಬದಿಯಲಿ ತಾನು ಬಂದು ಹಾ ಇದುಯೇನು ಇಂದು ಮುಖಿ ಹೀಗೆಯೆಂದೆಂದು ಮಲಗುವಳಲ್ಲ ಇಂದೇನು ಬಂತು ಇಂತೆಂದು ಚಿಂತಿಸುತ ಹೀಗೆಂದಳಾಗ 2 ಪದ ಇಲ್ಲೇಕೆ ಮಲಗಿದೆ ಹೇಳಮ್ಮ ನೀ ಇಲ್ಲೇಕೆ ಎಲ್ಲಾನು ಬಿಟ್ಟು ವನದಲ್ಲಿಯೆ ಪಾರ್ವತಿ ಮಂದಿರ ಪ ಬಿಟ್ಟು ಇಲ್ಲಿ ಮಲಗುವರೆ ನಿನಗೆ ಬಂದಿಹದೇನು ಹೇಳದಿರುವರೆ ನಿನ್ನ ತಂದೆ ತಾಯಿಗಳೆಷ್ಟು ಮರಗುವರೆ ಇಂದು ಮುಖಿಯಳೆ ಯಾರೇನಂದರೇನೆ ಗೆಳತಿ ನಿನಗೆ 1 ನಿನ್ನ ಪ್ರಾಣದ ಸಖಿನಾನಲ್ಲೆ ನಿನ ಗಿನ್ನಾರಿರುವರು ಹಿತವರು ಇಲ್ಲೆ ನಾ ನಿನ್ನ ಕಾರ್ಯವ ಮಾಡುವಳಲ್ಲೆ ಚಿನ್ನದಂಥವಳೆ ನೀ ಘನ್ನಾರಣ್ಯಕೆ ಬಂದು 2 ನಿದ್ರೆ ಬಂದಿಹುದೇನೆ ನಿನಗಿಂದು ಅಥವಾ ಬುದ್ಧಿ ಹೋಯಿತೆ ಮತ್ತೆ ನಿನ್ನದು ಇಂದು ತಿಳಿಯದು ಬುದ್ಧಿವಂತಿಯೆ ಅನಂತಾದ್ರೀಶನಾಣೆ ನಿನಗೆ 3 ಪದ ಇಂದು ಮುಖಿ ಪಾರ್ವ ತಿಯು ಹಿತದಿಂದ ಆಡಿದ ಮಾತು ಒಂದೊಂದು ಸ್ಮರಿಸುತಲೆ ಛಂದಾಗಿ ಮನಸಿಗೆ ತಂದು ನೋಡಿದಳು ಇಂದು ಯೆನ್ನ ಭಾಗ್ಯಕ್ಕೆ ತಂದೆ ತಾಯಿಗಳಿಲ್ಲ ಬಂಧು ಬಾಂಧವರಿನ್ನು ಮುಂದೆಲ್ಲಿ ಬರುವವರು ಸಂದೇಹವೇಕೆ ಸಖಿ ಯಿಂದಧಿಕ ಮತ್ತಿಲ್ಲ ವೆಂದು ದು:ಖವ ಸಖಿಯ ಮುಂದ ಹೇಳಿದಳು 1 ಪದ ಏನು ಹೇಳಲಿಸಖಿ ಇನ್ನೇನು ಹೇಳಲಿ ನಾನು ಖೂನದಿ ತಂದೆಯು ಹರಿಗೆಯೆನ್ನನು ನೇಮಿಸಿದಾ ಪ ಮೃತ್ಯುಂಜಯ ಮೃಡನೆ ಎನ್ನ ಚಿತ್ತಕೊಪ್ಪುವ ಪತಿಯು ಸತ್ಯದಿ ಆಗಲಿಯೆಂದು ಚಿತ್ತದಿ ಬಯಸುತಲೆ ನಿತ್ಯದಿ ಬಹುದಿನ ಬಿಡದಲೆ ಅರ್ಥಿಲೆ ಮಾಡಿರುವಂಥ ಪಾರ್ಥೇಶ್ವರನಾ ಪೂಜೆಯು ವ್ಯರ್ಥಾಯಿತಲ್ಲೆ 1 ನಾರದ ಮುನಿಯಿ ಮಾತು ಸಾರಿದ ನನ್ನಲಿ ಬರಿದು ಬಾರದೆನ್ನ ಮನಸಿಗೆ ಅದು ತಾರದೆ ನಾ ಬಂದೆ ಮೀರಿದ ಕೆಲಸವು ತೀರಲಾರದು ಅದು ಎಂದು ಸೇರಿದೆ ವನವನು ನಾಕಾಲೂರದೆ ಮನೆಯಲ್ಲೆ2 ಹೃದ್ರೋಗದಿ ಬಳಲುವಳಿಗೆ ನಿದ್ರೆಯೆಂಬುವದೆಲ್ಲೆ ಭದ್ರಾಂಗಿಯು ಸತಿ ನಾನು ಉದ್ರೇಕದಿ ಮೈಮರೆತು, ಹಿಮಾದ್ರಿಯು ಎನ್ನನು ಕೈಲಾ ಸಾದ್ರೀಶನ ಬಿಟ್ಟು ಅನಂತಾದ್ರೀಶಗೆ ಕೊಡುವ3 ಪದ ಪರಿ ಮಾತುನು ಕೇಳಿ ಆ ಪ್ರಾಣದ ಸಖಿ ತಾನು ಪರಿ ಮಾತಾಡಿದಳು ಆ ಪಾರ್ವತಿಯ ಮುಂದೆ ಏ ಪಾರ್ವತಿಯೇ ಬಿಡುಸಂತಾಪವ ನಿನಗೊಂದು ಹೇಳುವೆ ಆ ಪಿತಗರಿಯದೆ ನಡೆ ನೀ ತಾಪಸವನದಲ್ಲೆ 1 ಈ ರೀತಿಯ ನುಡಿ ಕೇಳಿ ಹಾರೈಸುತ ಸಖಿಕೂಡಿ ಪಾರ್ವತಿ ತಾ ನಡೆದಳು ಘೋರಾರಣ್ಯದಲಿ ಇರ್ವಳು ಆಳುPದೆÀಲಿಂಗಾಕಾರವು ಪೂಜಿಸುತಲ್ಲೆ ಚಾರ್ವಾಂಗಿಯು ತಾ ನಿದ್ರಾಹಾರವು ಇಲ್ಲದಲೆ2 ದೀನೋದ್ಧಾರಕ ಶಿವನು ತಾನೆ ಅಲ್ಲಿಗೆ ಬಂದು ಏನು ಬೇಡುವೆ ಪಾರ್ವತಿ ನೀನು ಬೇಡೆಂದ ಏನು ಧೇನಿಸುವೇ ಬಿಡು ಮಾನಿನಿಯೆ ಭಕ್ತಾ ಧೀ ನಾನಂತಾದ್ರೀಶನ ಆಣೆ ನಿನಗುಂಟು 3 ಪದ ಹರನ ಮಾತನು ಕೇಳಿ ಹರಿಣಾಕ್ಷಿ ಪಾರ್ವತಿಯು ತ್ವರದಿಂದ ಎದ್ದು ಪರಮ ನಾಚಿಕೆಯಿಂದ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಒಂಬತ್ತು ಶ್ರೀ ವಾಣೀಭಾರತೀ ಗೌರೀ ಶಚೀಭಿಃಸ್ನಾಪಿತೋವತಾತ್| ಕುಚೀರಾಲ್ಲಬ್ಧ ವಿತ್ತೋರ್ಚನ್ ವಿಪ್ರಾನ್ ಲಕ್ಷ್ಮೀಪ್ರಿಯಂಶರಃ|| ವಚನ ಪರಮೇಷ್ಠಿ ಮಾಡಿದನು ಸರಸ್ವತಿಯು ಮೊದಲಾದ ಶೃಂಗರಿಸಿಕೊಂಡರು ತಾವು ವರನಾಗಿ ಶೋಭಿಸಿದ ವರ ಹರುಷದಲಿ ನಾಲ್ಕು ವರಕಲಶಗಳನಿಟ್ಟು ವರ ರತ್ನ ಸುರಗಿಯನು ಸುತ್ತಿ ಶ್ರೀಹರಿಗೆ ಸುರರೊಡೆಯ ಬೇಗಿನ್ನು ಮಜ್ಜನ ಮಾಡು ಹರಿಯೆ ನೀನು 1 ರಾಗ:ನೀಲಾಂಬರಿ ಆದಿತಾಳ ಕೇಳೀ ಕಂದಗಂದನು ಶೋಕ ದಲಿ ನೊಂದು ಮನದಲಿ1 ಹಿರಿಯರೆಂಬವರಾರೆನಗೆ ಹರುಸವರಾರಿಲ್ಲ ಅಕ್ಕರವಿಲ್ಲಾ 2 ಅಕ್ಕರದಿಂದ ಪೂಸೆ ಹಿಕ್ಕಿ ಎರೆಯುವದಕ್ಕೆ ಅಕ್ಕ ತಂಗಿಯರಾರಿಲ್ಲ ಅಕ್ಕರವಿಲ್ಲಾ 3 ಬಿಡದ ಕರ್ಮಕ್ಕೆ ಮಾಡುವದು ಬಿಡುವದೆ ಇದು 4 ತಂದೆ ತಾಯಿಗಳಿಲ್ಲದೆ ನೊಂದು ಬಳಲಿದೆ 5 ವಚನ ಎಂದಿಗಾದರು ನಿನಗೆ ತಂದೆ ಬರುವರು ಮಂದಿ ಚಂದೇನೊ ನಿನಗೆ ಇದು ಎಂದಿಗಗಲದೆ ನಿನ್ನ ಸಂದೇಹವ್ಯಾಕೆ ನಗುತ ಮುಂದಿರುವ ತನ್ನ ನೋಟದಿಂದ ನೋಡಿದನು 1 ತಿಳಿದು ತರಸಿದಳು ತೈಲವನು ಹರುಷದಲೆದ್ದು ತಿಳಿದು ತ್ವರದಿ ವರರತ್ನ ಪೀಠದಲ್ಲಿ ಹರಿಣಾಕ್ಷಿ ತಾ ಬಂದು ಸರಸಾದಸಂಪಿಗೆಯ ಹರಸಿದಳು ಹೀಗೆ2 ಮಂಡಿತನೆ ಭಕ್ತರಿಗುದ್ದಂಡ ವರ ಸಂತತಿ ಉದ್ದಂಡ ನಾಯಕನೆ ಭೂಮಂಡ ಕೂಡಿಕೊಂಡು ನಿನ್ನ ಈ ಲೇಪಿಸಿದಳಾ ಜಗದ್ವಾಪಕನ ಎರೆವಳು ತಾಪಿತೋ ದಕÀದಿ ಸಂತಾಪ ಹಾರಕಳು 3 ಗಂಧಪರಿಮಳದಿಂದ ಚಂದಾಗಿ ತಿರೆ ತಂದಳಾರತಿದೇವಿ ಚಂದದಾರತಿ ಒಡಗೂಡಿ ಮುಕುಂದನ ಫಣಿಗೆ ಆರತಿ ಬೆಳಗಿ ಮುಂದೆ ಮತ್ತೆರ ಸುಂದರಾಂಗಿಯು ತನ್ನ ಹರಿವಾಣದ್ಹಿಂದಿಟ್ಟು ಎತ್ತಿ ಕಲಶವೃಂದದಿಂದೋ ಕುಳಿಯ ಚಂದಾಗಿ ಎರೆವಳಾನಂದದಲ್ಲಿ ಸುಂದರಿಯರಿಂದ ಕೂಡಿ 4 ಮೈವರಿಸಿ ಸುತ್ತ ವಸ್ತ್ರ ಪೀತಾಂಬರವ ಬಹುಭಕ್ತಿಯಲಿ ಗಿರಿಜೆ ಸುತ್ತ ಕೇಶಗಳೆಲ್ಲ ತನ್ನ ಪುತ್ರಿ ಭಾಗೀ ಮೆಟ್ಟಿ ಪತ್ನಿಯಳ ಉತ್ತಮಾಸನದಲ್ಲಿ ಹತ್ತಿಕುಳಿತ5 ರಾಗ:ನೀಲಾಂಬರಿ ಆದಿತಾಳ ಎಲ್ಲರು ಬಂದರು ಬಹು ಉಲ್ಹಾಸದಿಂದಲ್ಲೆ ಅವನ ಚಲ್ವಿಕೆಯ ನೋಡುತಲೆ ಅಲ್ಲೆ ಕುಳಿತರು 1 ಚಂದದ ಚಾಮರಗಳ ಪಿಡಿದರು 2 ಕೊಟ್ಟಳು ವಿಚಿತ್ರದ ಕನ್ನಡಿ3 ಚೆನ್ನಾಗಿ ಹಚ್ಚಿಕೊಂಡ ಚನ್ನಿಗ ತಾನು 4 ಮುದದಿಂದ್ಹೀಗೆಂದಳು ಸೊಸೆಗೆ ಮುದು ಮಗನಿಗೆ ಕುಂಕುಮ ಹಚ್ಚು ಮದಗಜಗಮನೆ 5 ಫಣಿಗೆ ತಿದ್ದಿ ಕುಂಕುಮ ವನ್ನಿಟ್ಟಳು ಮುದ್ದು ಸುರಿಯುತ 6 ಮುಂದಲ್ಲೆ ಕುಬೇರಕೊಟ್ಟ ಚಂದದಾಭರಣಗಳಿಟ್ಟು ಸಂಧ್ಯಾನು- ಷ್ಠಾನವ ವಿಧಿಯಿಂದ ಮಾಡಿದ 7 ಪುಣ್ಯಾಹ ವಾಚನಕೆ ಕುಳಿತಾ ಪುಣ್ಯಾತ್ಮನು ತಾನು 8 ಒಡಗೂಡಿ ಕುಳಿತಳಲ್ಲೆ ಸಡಗರದಿಂದ 9 ಮತ್ತಲ್ಲೆ ವಶಿಷ್ಠ ಮುನಿಯು ಮುತ್ತಿನ ರಾಸಿಗಳಿಂದ ಉತ್ತಮ- ಗದ್ದಿಗೆಯ ಬರೆದ ಕ್ಲಪ್ತದಿಂದಲಿ 10 ವಿಧಿಯಿಂದ ಮಾಡಿಸಿದನÀು ವಿಧಿಸುತ ತಾನು11 ಸಂಭ್ರಮದಿಂದಲ್ಲೆ ಕೊಟ್ಟ ತಾ ಬ್ರಹ್ಮದೇವ 12 ದೇವಾಧಿದೇವಗೆ ಕೊಟ್ಟರಾ ವೇಳೆಯಲ್ಲಿ 13 ಮುತ್ತಿನ ಅಕ್ಷತೆ ಇಟ್ಟು ಮುತ್ತೈದೆರಲ್ಲೆ 14 ನುಡಿದ ಕುಲದೇವಿ ಯಾವಕೆ ನಿನಗೆ ಶ್ರೀನಾಥಪೇಳೋ 15 ಹಲವು ಕಾಲದಲ್ಲಿ ಎನ್ನ ಕುಲಪುರೋಹಿತನಾದ ಮೇಲೆ ಕುಲದೇವಿ ಯಾವಕೆ ಅರಿಯೆ ಮುನಿನಾಥ ನೀನು 16 ಕುಲಪುರೋಹಿತ ನೆನಿಸುವೆನೊ ಶ್ರೀನಾಥನಿನಗೆ17 ಕುಲದೇವಿ ಎನಗೆ ಉಂಟು ಮುನಿನಾಥ ಕೇಳೊ 18 ಯಾವರೂಪ ದಿಂದೆಸೆವಳು ಶ್ರೀನಾಥ ಪೇಳೊ19 ವೃಕ್ಷರೂಪದಿಂದ ಅಮಿತಾದ ಫಲಕೊಡುವಳಯ್ಯ ಮುನಿನಾಥ ಕೇಳೊ20 ವೃಕ್ಷ ಎಲ್ಲಿ ಇರು ತಿಹುದು ಪೇಳೋ ಶ್ರೀನಾಥ ನೀನು 21 ಇರುತಿಹುದು ವೃಕ್ಷ ಮುನಿನಾಥ ಕೇಳೊ 22 ಸಹಿತ ತ್ವರದಿ ನಡೆದ ಕುಲದೇವಿಯ ಕರೆವುದಕೆ 23 ವಚನ ಕ್ರಮದಿಂದ ಪೂಜಿಸುತ ದಯಮಾಡು ನಮಗೆ ಕುಲ ಅಮಿತ ಕಾರ್ಯವನು ಕ್ರಮ 'ಶಮಿಶಮಮೇ' ಎಂತೆಂಬ ಮಾಡಿ ಕುಲದೇವತೆಯಾ ಮಾಡಿ ನುಡಿದವು ಆಗ ಸೂರಾಡುತಲೆ ಬಂದ ಗಾಢನೆ ಸ್ನೇಹ ಸಂರೂಢನಾಗಿ 1 ವರಹದೇವನೆ ಎನ್ನವರ ಧರಣಿದೇವಿಯ ಕೂಡಿ ಸರಸಾಗಿ ಎಲ್ಲರಿಗೆ ಹರಿಯೆ ನೀನು ಹರಿ ಅಂದಮಾತಿಗೆ ಆ ಹಿರಿಯಳೆಂತೆಂದು ತಿಳಿ ಎನ್ನ ಇರುವೆ ಕೃಷಿ ಕಾರ್ಯದಲಿ ನಿರತನಾಗಿ 2 ಎಲ್ಲ ಈ ಪರಿಕೇಳಿ ಫುಲ್ಲನಾಭನು ಅವನ ಒಲಿದಾಜ್ಞೆಯ ಕೊಂಡು ಉಲ್ಲಾಸಬಟ್ಟು ಮನದಲ್ಲಿ ಕುಲದೇವತೆಯ ಅಲ್ಲಿ ಸ್ಥಾಪನೆ ಮಾಡಿ ನಿಲ್ಲದಲೆ ಸ್ವಸ್ಥಾನದಲಿ ಬರುತಾ ರಮಾ ವಲ್ಲಭನು ನುಡಿದನಾಗಲೆ ಈ ಪರಿಯು ಎಲ್ಲರ್ಹೊರಡಿರಿ ಇನ್ನು ಸುಳ್ಳ್ಯಾಕೆ ತಡ ದೂರದಲ್ಲೆ ಇರುತಿಹದು ಬಲ್ಲಿ ದಾಕಾಶಪುರ ಇಲ್ಲಿದ್ದ ಬಾಲಕರು ಎಲ್ಲ ವೃದ್ಧರು ಮತ್ತೆ ಮೆಲ್ಲಗ್ಹೋಗಲಿ ಮುಂದೆ ನಿಲ್ಲದಲೆ ಸಾಗಿ3 ತನ್ನ ತಂದೆಯ ವಚನವನ್ನು ಕೇಳೀಪರೀ ಮುನ್ನ ನುಡಿ ದನು ಬ್ರಹ್ಮ ಪುಣ್ಯಪುರುಷನೆ ಕೇಳು ಪುಣ್ಯಾಹ ವಾಚನವ ಚೆನ್ನಾಗಿ ನೀ ಮಾಡಿ, ಮುನ್ನ ಆಕುಲದೇವಿಯನ್ನು ಸ್ಥಾಪನೆಮಾಡಿ, ಉಣ್ಣದಲೆ ಪೋಗುವುದುಚಿತವಲ್ಲಾ ಸಣ್ಣ ಬಾಲರು ಮತ್ತೆ ಹೆಣ್ಣು ಮಕ್ಕಳು ದೇಹಹಣ್ಣಾಗಿ ಇರುವ ಬಹು ಪುಣ್ಯ ಶೀಲರು ಮತ್ತೆ ನೀನ್ನ ಕುಲ ಬಾಂಧವರು ಮಾನ್ಯ ಮುನಿಗಳು ಎಲ್ಲ ಉಣ್ಣದಲೆ ಹಸಿವೆಯಲ್ಲಿ ಬಣ್ಣಗೆಟ್ಟಿಹರು 4 ತನ್ನ ತನಯನ ವಚನವನ್ನು ಕೇಳೀ ಪರಿಯಮುನ್ನ ಶ್ರೀಹರಿನುಡಿದ ಎನ್ನ ಪುತ್ರನೆ ಕೇಳು ಎನ್ನ ಕಾರ್ಯಕೆ <ಈಔಓಖಿ ಜಿಚಿ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಮೂರು ಜನ್ಮನಾಕಾಶನಂದಾ ವಸುಧಾನಾಗ್ರಜಾ ನಿಜಾನ್ ಪದ್ಮಾವತೀ ಪದ್ಮಭವಾ ವನಕ್ರೀಡಾರತ್ಯಾವತಾತ್ ವಚನ ಸಂದರ್ಶನಾದದ್ದು ತಂದೆಯ ಕಥೆಸ್ಮøತಿಗೆ ತಂದು ಅದು ವಿಸ್ತಾರದಿಂದ ಪೇಳುವೆನು ಸುಧರ್ಮನೆಂದು ಇರವನು ಅವಗೆ ಮುಂದೆ ಇಬ್ಬರು ಸುತರು ಚಂದದಲಿ ಆಕಾಶನೆಂದು ತೊಂಡಮಾನಸೆನಿಸುವನು 1 ವ್ಯಾಕುಲದಿ ಹೀಗೆ ಇಲ್ಲೆಂದು ಶೋಕದಲಿ ಕಣ್ಣೀರು ಹಾಕಿ ಸ್ಮರಿಸಿದ ದೇವಲೋಕ ಗುರುವ ಯಾಕೆ ಸ್ಮರಿಸಿದೆ ಎನ್ನನೀಕಾಲದಲಿ ಏನುಬೇಕು ಬೇಡಲೋನೀನು ನಾ ಶೋಕವನು ನುಡಿದಾ2 ಪಾಪಿಷ್ಠ ಏನು ಇದ್ದೇನು ನಾನು ಮಾಡಿದ ಪೇಳೋ ಹೀನಬುದ್ಧಿ ಕೊಲಿಸಿದೆನೇನು ಏನು ಕಾರಣ ಸಂತಾನ ಕಣ್ಣಿಲಿ ಕಾಣೆ ನಾನು ಅಯ್ಯಯ್ಯೊ 3 ಮಕ್ಕಳಾಡಿದರೆ ಬಹಳಕ್ಕರತೆ ಜೀವಕ್ಕೆ ಮಕ್ಕಳಿಲ್ಲದೆ ಮತ್ತೆ ಮಿಕ್ಕರಸ ಮಕ್ಕಳಿÀಂದಲೆ ಹಬ್ಬ ಹುಣ್ಣಿಮೆಯು ಉಲ್ಲಾಸ ಮಕ್ಕಳಿಂದಲೆ ಮುಂಜಿ ಮದುವೆಯ ಧರೆಯೊಳಗಿಲ್ಲ ಮಕ್ಕಳಿಂದಲೆ ಇಹವು ಮಕ್ಕಳಿಂದಲೆ ಪರವು ಮಕ್ಕಳಿಲ್ಲೆನ್ನ ಭಾಗ್ಯಕ್ಕೆ ಅಯ್ಯಯ್ಯ 4 ನೋಡಿಲ್ಲ ಮಕ್ಕಳಾಡಿದ ಮಾತು ನಕ್ಕು ಕೇಳಿಲ್ಲ ನಾ ಮಕ್ಕಳಿಂದಲೆ ಕೂಡಿ ಅಕ್ಕರದಿ ಉಣಲಿಲ್ಲ ಮಕ್ಕಳನು ಎತ್ತಿ ಮುದ್ದಿಕ್ಕಿದವನಲ್ಲ ಮಕ್ಕಳಿಲ್ಲದ ಮನುಜ ಲೆಕ್ಕದಾವದರೊಳಗೆ ಬೆಕ್ಕು ಮೊದಲಾದಂಥ ಮಿಕ್ಕ ಪ್ರಾಣಿಗಳೆಲ್ಲ ಮಕ್ಕಳಾಡಿದ ಬಹಳ ಚಕ್ಕಂದವನು ನೋಡಿ ಸೌಖ್ಯ ಪಡುತಿಹದಯ್ಯ ಧಿಕ್ಕರಿಸು ಎನ ಜನ್ಮ ಅದಕ್ಕಿಂತ ವ್ಯರ್ಥ 5 ಮುನ್ನ ನಮ್ಮೊಳಗಾರು ಉಣ್ಣದಲೆ ಈ ಬದುಕು ಮಣ್ಣು ಪಾಲಾಗುವದು ಘನ್ನ ಈ ಚಿಂತಿಯಲಿ ಬಣ್ಣಗೆಟ್ಟೆನು ಕುದ್ದು ಸುಣ್ಣಾದೆನಯ್ಯ ಉಭಯಕುಲ ತಾರಿಸುವಂಥ ನಾನು ಅಣ್ಣತಮ್ಮರ ಒಳಗೆ ಪುಣ್ಯ ಇಲ್ಲೊಬ್ಬನಲಿ ಪುಣ್ಯಗುರುವೆ 6 ರಾಗ:ಶಂಕರಾಭರಣ ಆದಿತಾಳ ಇಂಥ ಮಾತಿಗೆ ಜೀಯ ಹೀಗಂತ ನುಡಿದನು ಚಿಂತೆ ಮಾಡಬೇಡ ಭೂಕಾಂತ ಎಂದನು 1 ಪುತ್ರ ಕಾಮೇಷ್ಟಿಮಾಡು ಭಕ್ತಿಯಿಂದಲಿ ಪುತ್ರನಾಗುವನು ನಿಮಗೆ ಸತ್ಯ ನೀ ತಿಳಿ 2 ಗುರುವಿನ ಮಾತುಕೇಳಿ ಪರಮ ಹರುಷದಿಂದಲಿ ಅರಸ ಬ್ರಾಹ್ಮಣರನೆಲ್ಲ ಕರೆಸಿದಾಗಲೇ 3 ಮುಂದೆ ಯಜ್ಞ ಮಾಡಬೇಕು ಎಂದÀು ತ್ವರದಲಿ ಒಂದು ಭೂಮಿ ಶೋಧಿಸಿದನು ಚಂದದಲಿ 4 ಚಲುವ ನೇಗಿಲ ಜಗ್ಗಿ ಎಳೆವ ಕಾಲಕೆ ಹೊಳೆವ ಪದ್ಮ ಬಂತು ಅಲ್ಲಿ ಸುಳಿದು ಮೇಲಕೆ 5 ಇರುವಳೊಬ್ಬಳಲ್ಲಿ ಮತ್ತೆ ಪರಮಸುಂದರಿ ಅರಸನೋಡಿ ಬೆರಗಿನಿಂತ ಸ್ಮರಿಸಿ ಪರಿಪರಿ 6 ಕಾಣಿಸಿದಲೆ ಗಗನದಲಿ ವಾಣಿಯಾಯಿತು ಕಾಣದಿದ್ದರೂ ಈಗ ಸಕಲಪ್ರಾಣಿ ಕೇಳಿತೊ 7 ಇನ್ನು ಚಿಂತೆ ಮಾಡಬೇಡ ಧನ್ಯ ಅರಸ ನೀ ನಿನ್ನ ಮಗಳು ಎಂದು ಚೆನ್ನಾಗಿ ತಿಳಿಯೋ ನೀ8 ಕ್ಲೇಶ ಹಿಂದೆ ಬಿಡುವಿಯೊ ಮುಂದೆ ಮುಂದಕಿನ್ನು ಆನಂದ ಬಡವಿಯೊ9 ಗಗನ ವಾಣಿಯನ್ನು ಕೇಳಿ ಅರಸ ಬಗೆಯಲಿ ಮಗಳ ನೆತ್ತಿಕೊಂಡನಾಗ ಮುಗಳು ನಗೆಯಲಿ 10 ತಂದೆ ಮಗಳ ಜನ್ಮ ಪದ್ಮದಿಂದ ತಿಳಿದನು ಮುಂದೆ ಪದ್ಮಾವತಿಯೆಂದು ಕರೆದನು11 ಮಗಳಕಾಲಗುಣದಿ ಮುಂದೆ ಮಗನು ಆದನು ಅವನ ಕರೆದ ವಸುಧಾನನೆಂದು ಗಗನರಾಜನು 12 ತಕ್ಕವಾಗಿ ಅರಸಗ್ಹೀಗೆ ಮಕ್ಕಳಾದರು ಸೌಖ್ಯದಿಂದ ಮುಂದೆ ದಿನದಿನಕ್ಕೆ ಬೆಳೆದರು13 ಬಂತು ಯೌವನವು ಭೂಕಾಂತ ಪುತ್ರಿಗೆ ಬಂತು ಆಗ ಮತ್ತೆ ಬಹಳ ಚಿಂತೆ ಅರಸಗೆ 14 ಇಂಥ ಮಗಳಿಗಿನ್ನು ತಕ್ಕಂಥ ಪುರುಷನು ಪ್ರಾಂತದೊಳಗೆ ಇಲ್ಲದಿವ್ಯ ಕಾಂತಿ ಮಂತನು 15 ಎಂತು ನೋಡಲಿನ್ನು ಹುಡುಕಿ ಶ್ರಾಂತನಾದೆನು ಚಿಂತೆಯೊಳಗೆ ಬಿದ್ದು ಮುಂದೆ ಪ್ರಾಂತಗಾಣೇನು 16 ಅಂತರಂಗದೊಳಗೆ ಹೀಗಂತ ಅನುದಿನ ಚಿಂತಿಸಿದನು ಮರೆತು ಅನಂತಾದ್ರೀಶನ17 ವಚನ ಚಂದಾದ ಕುಸುಮಗಳ ಕೂಡಿ ಮುಂದೆ ಇಂದು ಮುಖಿಯು ನೋಡುತಲೆ ಮುಂದೆ ತೆಗೆದು ತ್ವರದಿಂದ ಆಭರಣಗಳ ಮುಂದೆ ತರಿಸಿದಳು1 ಕೆತ್ತಿಸಿದ ರಾಗುಟಿಯ ಒತ್ತಿ ಮೊದಲ್ಹಾಕಿ ಹತ್ತೊತ್ತಿದಳು ಸಾಲ್ಹಿಡಿದು ಇತ್ತಿತ್ತು ಮತ್ತೆ ತುದಿಗೆ ಅತ್ತಿತ್ತ ಮತ್ತ ಮೇಲರಿಸಿನವ ಚಿತ್ತಗೊಟ್ಟಚ್ಚಿದಳು ಚಿತ್ತಾರ ಬರೆದಂತೆ ಮತ್ತ ಗಜಗಮನೆ 2 ಥಳಥಳನೆ ಜಾತಿಯಿಂದ್ಹೊಳೆವ ಮುತ್ತಿನ ಭವ್ಯ ಎಳೆಯ ಇಮ್ಮಡಿ ಮಾಡಿ ನಳಿನಾಕ್ಷಿ ಬೈತಲಗೆ ಅಳತೆಯಿಂದ್ಹಾಕಿದಳು ತಳಪಿನಲಿ ಎಡಬಲಕೆ ಎಳೆದು ಕಟ್ಟಿದಳ್ಹಿಂದೆ ಹೆರಳಿಗ್ಹಾಕಿ ತೊಳೆದ ಮುತ್ತಿನ ಬುಗಡಿ ಪೊಳೆವ ಮೀನ್ಬಾವಲಿಯು ಝಳಿ ಝಳಿತವಾಗಿರುವ ಗಿಳಿಗಂಟಿ ಚಳತುಂಬುಗಳ ನಿಟ್ಟು ಕರ್ಣದಲಿ ಉಳಿದ ದ್ರಾಕ್ಷಾಲತೆಯ ಎಳೆದು ಬಿಗಿದಳು ಮೇಲೆ ಸುಳಿಗುರಳಿನಲ್ಲಿ 3 ಇದ್ದ ಮುತ್ತುಗಳ್ಹಚ್ಚಿ ತಿದ್ದಿ ಮಾಡಿದ ನತ್ತು ಉದ್ರೇಕದಿಂದಿಡಲು ಮುದ್ದು ಸುರಿವುತ ಮುಂಚೆ ಇದ್ದ ಮುಖ ಮತ್ತೆ ಎದ್ದು ಕಾಣಿಸಿತು ಪ್ರದ್ಯುಮ್ನ ಚಾಪದಂತೆರಡÀು ಹುಬ್ಬುಗಳ ಮಧ್ಯೆ ನೊಸಲಿನ ಮೇಲೆ ಶುದ್ಧ ಕಸ್ತೂರಿಯನ್ನು ತಿದ್ದಿ ತಿಲಕವನಿಟ್ಟು ತಿದ್ದಿದಳು ಕಾಡಿಗೆಯ ಪದ್ಮಲೋಚನಗಳಿಗೆ ಪದ್ಮಜಾತೆ 4 ಚಂದ್ರಗಾವಿಯನ್ನುಟ್ಟು ಚಂದಾದ ಕುಪ್ಪಸವ ಮುಂದೆ ಬಿಗಿ ಬಿಗಿತೊಟ್ಟು ಮುಂದಲೆಗೆ ಶೋಭಿಸುವ ಚಂದ್ರಸೂರ್ಯರನಿಟ್ಟು ಚೆಂದಾಗಿ ಬೈತಲೆಗೆ ಚಂದಿರವ ಸುರಿದಳು ಚಂದ್ರಮುಖಿಯು ಪರಿ ಗೀರು ಗಂಧವನು ಕೈಗ್ಹಚ್ಚಿ ಮುಂದೆ ಕೊರಳಿಗೆ ಒರಿಸಿ ಚಂದ್ರಸರ ಮುಂದೆ ಹಾಕಿದಳು 5 ಮೇಲಿಟ್ಟು ಚಿಂತಾಕವನು ಕಟ್ಟಿ ತಾಯತ ಬಟ್ಟಕುಚಗಳ ಏಕಾವಳಿಯ ಇಟ್ಟು ಪುತ್ಥಳಿ ಸರವು ಅಷ್ಟು ಸರಗಳನೆಲ್ಲ ಮೆಟ್ಟಿ ಮೇಲ್ಮೆರೆವಂಥ ಶ್ರೇಷ್ಠ ಸರಿಗಿಯತರಿಸಿ ಇಟ್ಟಳಾಕೆ6 ಟೊಂಕದಲಿ ಒಡ್ಯಾಣ ಮುಂದಲಂಕರಿಸಿದಳು ಪೊಂಕದಿಂದಿಟ್ಟು ಅಕಳಂಕ ಕೊಂಕವನು ಮಾಡುತಲೆÉ ಕಿಂಕಿಣಿಪೈಜಣ ಇಟ್ಟಳಾಕೆ7 ಪಿಲ್ಲೆ ಮೇಲಾದ ಮುಸುಕಿಕ್ಕಿ ಬಹು ಬಾಲೆಯರು ಕೊಟ್ಟ ಕೂಡಿ ಭಾಳ ಹರುಷದಿ ಹೊರಟಳಾಕಾಲದಲ್ಲಿ. 8 ವಚನ ಪರಿ ಗಜಗಮನದಿಂದಾ ವನ ಮದನ ಸತಿಯಂತಿಪ್ಪ ತರುಣಿರೂಪವ ತಾಳಿ ವನಮಧ್ಯದಲ್ಲಿ ತಾಂ ಬೆಸಗೊಂಡಳು ಯಾರಲೆ ಬಾಲೆ ನೀ ಬಾಲಚಂದ್ರ ಲಲಾಟೆ ಕಾಳಾಹಿ ವೇಣೀ ನೀ ಜಾತೆಯರ ಕೂಡಿ ಬಳಗವು ಕಾಂತನ್ಯಾರು ಪೇಳೆಂದು 1 ಧ್ವನಿ ಕೇಳೆ ಕುಸುಮಕ್ಕೆ ನಾ ಬಂದೆ ತಿಳಿಯೆ ಮಾತಿನರಗಿಳಿಯೆ 1 ಅಸಮ ತೋಂಡಮಾನನೆಂಬುವನು ನಮ್ಮ ಕಕ್ಕನು 2 ನಾ ಖೂನವನು ಪೇಳಿದೆ ಸಾರಿ ಪೇಳಿದೆ &ಟಿ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಹತ್ತು ತಾಕ್ರ್ಷಸ್ಕಂಧ ಸಮಾರೂಢಃ ಶ್ರೀ ಬ್ರಹ್ಮಾದಿಭಿರಾವ್ನತಃ | ಧ್ವನಿ ಪರಿ ಪರಿ ಪ ಗರುಡನೇರಿದ ಶ್ರೀನಿವಾಸನು ರಾಜ ವರ ಹಂಸವನೇರಿದ ಬ್ರಹ್ಮನು ತ್ವರ ನಂದಿಯೇರಿದ ರುದ್ರನು ಅ ವರ ನಡುಮಧ್ಯೆ ನಡೆದ ಶ್ರೀಹರಿ ತಾನು 1 ದೇವಿಯೇರಿದಳಾಗ ರಥದಲಿ ಬಕುಲಾ ದೇವಿ ಯೇರಿದಳೊಂದು ರಥದಲಿ ಕೇವಲ ತಮ್ಮ ತಮ್ಮ ರಥದಲಿ ಉಳಿದ ದೇವಿಯರೇರಿ ಕೊಂಡರು ಅಲ್ಲಿ 2 ಉತ್ತಮ ಮಂಗಳವಾದ್ಯವು ನË ಬತ್ತು ನಗಾರಿಗಳಾದವು ಮತ್ತೆ ಉಳಿದ ಎಲ್ಲ ವಾದ್ಯಗಳು ಬಹು ವತ್ತಿ ಶಬ್ದಮಾಡಿ ನುಡಿದವು 3 ನಡೆದರು ಋಷಿಗಂಧರ್ವರು ಬಹು ಸಡಗರದಿಂದಲ್ಲೆ ಅಪ್ಸರರು ಬಡವ ಬಗ್ಗರು ಉಳಿದ ಮನುಜರು ಬಹು ಗಡಿಬಿಡಿಯಿಂದಲ್ಲೆ ನಡೆದರು 4 ಕುಂಟರು ಕುರುಡರು ಕಲ್ಲು ಕಂಟಕ ಕಾಲಿಲೆ ತುಳಿವವರೂ ಗಂಟು ತಲಿಯಲಿಟ್ಟುನಡಿಯುವರು ತಪ್ಪ ಗಂಟಾಗಿ ಒದರುತಲಿಹರು 5 ಕೆಲವರು ಗಂಡನ ಒದರುವರು ಮತ್ತ ಕೆಲವರು ಮಕ್ಕಳನೊದರುವರು ಕೆಲವರು ಎಡವುತಲಿರುವರು ಮತ್ತು ಕೆಲವರು ಭರದಿಂದ ಬೀಳುವರು 6 ಕೆಲವರೆಳೆದು ಎಬ್ಬಿಸುವರು ಮತ್ತು ಕೆಲವರು ನೋಡುತ ನಗುವವರು ಬಾಲರಳುವ ಧ್ವನಿ ಆಯಿತು ಜಗತ್ ಪಾಲನಸೈನ್ಯ ನಡೆಯಿತು ಮೇಲಾದನಂ ತಾಂದ್ರೀ ಇಳಿಯಿತು ಭೂಪಾಲಪುರದ್ಹಾದಿ ಹಿಡಿಯಿತು7 ವಚನ ಶೈಲವನು ಹಿಡಿದು ಭೂಪಾಲನಪುರತನಕ ಸಾಲ್ಹಿಡಿದು ನಡೆವಂಥ ಕಾಲದಲಿ ಮತ್ತಲ್ಲಿಡುವದಕ್ಕೆ ಎಳ್ಳು ಕಾಳಷ್ಟು ಸ್ಥಳವಿಲ್ಲ ಶ್ರೀಲಲಾಮನು ಮಧ್ಯಸಾಲಿನ ಮಧ್ಯಾಹ್ನ ಕಾಲ ದಲಿ ಶುಕಮುನಿಯ ಆಲಯಕೆ ಬಂದು ಕಾಲಿಗೆರಗಿದನು ಆಕಾಲಕೆ ಮುನಿ ಬಂದು ಹೇಳಿಕೊಂಡೀ ಪರಿಯು ಶೈಲ ಭೋಜನವು ಎನ್ನ ಮೇಲೆ ಕರುಣಿಯಿಂದಾ 1 ಹೀಗೆಂದು ನುಡಿದ ಶುಕಯೋಗಿಯ ವಚನವ ಕೇಳಿ ಬಾಗಿ ತಾ ನಮಿಸುತಲೆ ಆಗ ಶ್ರೀಹರಿ ನುಡಿದ ಯೋಗಿಗಳು ನಾ ಸಂಸಾರಿ ಆಗಿ ಇರವೆ ಇಲ್ಲೆ ಉಂಡರೆ ಮಿತಿಯ ಇಲ್ಲದಲೆ ಪುರದಲ್ಲೆ ಪೋಗುವುದು 2 ಮುನಿ ಮಂಡಲೇಶನು ಕೇಳಿಕೊಂಡು ಹೀಗೆಂದು ಬ್ರಹ್ಮಾಂಡ ಪತಿಯೆ ಒಬ್ಬ ಉಂಡರೆ ಜಗವೆಲ್ಲ ಉಂಡಂತೆ ಆಗುವುದು ಪುಂಡರೀಕಾಕ್ಷಾ ಭಾಳ ಕೇಳುತಲೆ ಮುಂದೆ ಬಾಲಕನ ಮುಖನೊಡಿ ಬಾಲೆ ನುಡಿದಳು ಬಕುಲ ಮಾಲಿಕೆಯು ತಾನು3 ಧ್ವನಿ:ವಸಂತಭೈರವಿ ಆದಿತಾಳ ತರವೆ ಹರಿಯೆ ಈ ಪರಿಯ ಮಾಡುವದುಪ ಸುಖಕರವಾಗಿಹ ಶುಕಮುನಿ ವಚನವು || ಲಕ್ಷಿಸದೆ ಶುಭಕಾರ್ಯಕೆ ಪೋಗುವದೂ 1 ಬಲ್ಲಿದ ಶಕುನವು ಇಲ್ಲೆನಿನಗೆ ತಿಳಿ| ಊಟಕೆ ಒಲ್ಲೆನೆಂಬುವದೂ 2 ಶ್ರೀಶ ಅನಂತಾದ್ರೀಶ ಮಹಾತ್ಮರ|| ಭಾಷೆಯ ಕೇವಲುದಾಸೀನ ಮಾಳ್ಪುದು 3 ವಚನ ಹೆತ್ತಾಯಿ ಪರಿಯಾಗಿ ಹೊತ್ತು ಹೊತ್ತಿಗೆ ತನಗೆ ಅತ್ಯಂತ ಹಿತ ಮಾಡುತಿರ್ದ ಬಕುಲಾವತಿ ಸತ್ಯವಚನ ಹರಿಯು ಮತ್ತು ಶುಕಮುನಿಗೆ ಉತ್ತರವ ಕೇಳಿ ಮುನಿ ಉತ್ತರಣೆಯು ಬೀಜ ಒತ್ತಿಕೈಯಲಿ ಮಾಡಿ ವೃತ್ತಾದ ಗುಳ್ಳ ಫಲದುತ್ತಮೋತ್ತಮಶಾಕ ತಿಂತ್ರಿಣಿಯ ರಸಸಹಿತ ಪಾತ್ರದಲಿ ಬಡಿಸಿ ಸತ್ಪಾತ್ರನಾಗಿರುವ ಸರ್ವೋತ್ತಮಗೆ ಅರ್ಪಿಸಿದ ಭಕ್ತಿಯಿಂದ 1 ತೃಪ್ತನಾದನು ನಿತ್ಯತೃಪ್ತ ಹರಿ ತಾ ಉಂಡು ಮತ್ತೆ ಮುನಿಗಳು ಎದ್ದರತ್ಯಂತ ಕೋಪದಲಿ ಚಿತ್ತಜನ ಪಿತ ಅವರ ಚಿತ್ತವೃತ್ತಿ ಸತ್ಯದಲಿ ಎಲ್ಲರಿಗೂ ತೃಪ್ತಿಯಾಗಲಿ ಎಂದು ತಿಳಿದು ಪೂತ್ಕಾರ ಮಾಡಿದನು ತತ್ಕಾಲದಲ್ಲಿ ಉತ್ತಮಳು ಶ್ರೀರಮಾ ಮತ್ತೆ ಬ್ರಹ್ಮಾದಿಗಳು ಸುತ್ತಸನ ಶುಕ ಸತ್ವ ಶೀಲರು ಉಳಿದ ಸುತ್ತೆಲ್ಲ ಜನರು ಸಂತೃಪ್ತರಾದರು ಹರಿಯ ಫೂತ್ಕಾರದಿಂದ 2 ನಿದ್ರೆಯನು ಮಾಡಿ ಅಲ್ಲಿದ್ದು ಆ ರಾತ್ರಿಯಲಿ ಎದ್ದು ಮರು ಕೂಡಿ ವಾದ್ಯ ವೈಭವ ದಿಂದ, ಸಿದ್ಧಾಗಿ ಬಂದರು ವಿಯದ್ರಾಜನ ಪುರಕೆ ಶುದ್ಧ ಸಂಜೆಯಲಿ ಮುದ್ದು ವೇಂಕಟ ಬಂದ ಸುದ್ದಿಯನು ಕೇಳುತ ವಿಯದ್ರಾಜ ತಾ ಬಹಳ ಉದ್ರೇಕದಿಂದಲೆ ಇದ್ದ ಜನರನು ವೈಭವದಿಂದ ಸಿದ್ಧನಾಗಿ3 ಧ್ವನಿ:ಕಾಂಬೋಧಿ ಆದಿತಾಳ ಆಕಾಲದಲಿ ಕಂಡನು ಹರಿಯಮುಖ ಆಕಾಲದಲಿ ಕಂಡನು ಎಲ್ಲರ ಕೂಡ ಆಕಾಶ ರಾಜನು ತಾನು1 ಹರುಷದಿಂದಲಿ ಉಬ್ಬಿದ ಹರಿಯ ಕಂಡು ಹರುಷದಿಂದಲಿ ಎದರುಗೊಂಡು ವರಪೂಜೆಯನು ಮಾಡಿದ 2 ಅಳಿಯಗಾಭರಣವನು ವಸ್ತ್ರವ ಕೊಟ್ಟು ಅಳಿಯಗಾಭರಣವನು ಉತ್ಸವದಿಂದೆ ಕಳಿಸಿ ಮನೆಗೆ ಪೋದನು3 ಶ್ರೀನಾಥದೇವ ತಾನು ಆ ಕಾಲಕ್ಕೆ ಶ್ರೀನಾಥದೇವ ತಾನು ಕರೆದುತೊಂಡ ಮಾನರಾಜಗೆ ನುಡಿದನು 4 ಹಸಿದು ಬಂದೆವು ನಾವೆಲ್ಲ ಉಣ್ಣದೆ ಬಹಳ ಹಸಿದು ಬಂದೆವು ನಾವೆಲ್ಲ ಬೇಗನೆ ಪಾಕ ಹಸನಾಗಿ ಮಾಡಿಸೆಲ್ಲ5 ಅಕ್ಕರದಲಿ ರಾಜನು ಆನುಡಿ ಕೇಳಿ ಅಕ್ಕರದಲಿ ಮಾಡಿಸಿದನು ರುಕ್ಕೋತದಡಿಗೆಯನು 6 ಮಂಡಿಗೆ ಗುಳ್ಳೋರಿಗೆ ಶಾವಿಗೆ ಮೊದಲು ತೊಂಡಮಾನÀನು ಚಂದಾಗಿ 7 ಹರಿಗೆ ಅರ್ಪಣೆ ಮಾಡಿದ ಎಲ್ಲರ ಕೂಡಿ ಹರಿಯು ಭೋಜನ ಮಾಡಿದ 8 ಆನಂದದಿಂದಿದ್ದನು ಆ ರಾತ್ರಿಯೊಳ್ ಆನಂದದಿಂದಿದ್ದನು ಮಾಡಿದ ನಿದ್ರೆ `ಅನಂತಾದ್ರೀಶ' ತಾನು 9 ವಚನ ಶ್ರೀನಿವಾಸ ಎದ್ದು ತಾನು ಮರುದಿನದಲಿ ಮಾನಿತ ವಶಿಷ್ಠ ಲಕ್ಷ್ಮೀಸಹಿತ ನೀನು ಬ್ರಹ್ಮನು ಮತ್ತೆ ಮಾನಿತಳು ಎನ್ನತಾಯಿ ತಾನು ಐವರು ಅನ್ನಹೀನರಗಿರುವುದು ಖೂನದಲಿ ಕನ್ನಿಕೆಯ ದಾನ ಪರ್ಯಂತ ಮಾನಿತನು ಆರಾಜಮಾನಿನಿಯು ಮತ್ತೆ ವಸು ದಾನರಾಜನು ಅನ್ನರಹಿತರೈವರು ಅವರು ಖೂನದಲಿ ಕನ್ನಿಕೆಯ ದಾನಪರ್ಯಂತ 1 ಪೇಳು ಅರಸನಿಗೆಂದು ಹರಿಯು ಹೇಳಿದಂತಾ ಭೂಮಿಪಾಲ ಮಾಡಿದನು ಮುನಿಹೇಳಿದಂತೆ ಮೇಲೆ ಮುನ್ನ ಸಾಯಾಹ್ನಕಾಲದಲಿ ಚತುರಂಗ ಸಾಲ ಸೈನ್ಯವು ನಡೆಸಿ ಕಾಳಿ, ಕರ್ಣಿಯ ತೂರ್ಯ, ತಾಳಮದ್ದಲೆ ಮೊದಲು ಭಾಳವಾದ್ಯ ಗಳಿಂದ ಮೇಲಾದ ಗುರುಮುಂದೆ ಮೇಲೆ ತನ್ನವರಿಂದ ಕಾಲನಡುತಿಯಲೆ ಹರಿಯ ಆಲಯಕೆ ಬಂದ 2 ಈ ವ್ಯಾಳ್ಯದಲಿ ಧರಣಿದೇವಿ ತಾ ಲಜ್ಜೆಯಲಿ ದೇವ ಗುರು ಬ್ರಹಸ್ಪತಿಯ ಕೇವಲಾಜ್ಞದಿ ದೇವದೇವ ಎನಿಸುವ ಅಳಿಯ ಶಾವಿಗೆಯ ಪರಮಾನ್ನ ವಿಯದ್ರಾಜ ಮುಂದಾ ವೇಳೆಯಲಿ ಐರಾವತದ ಮೇಲೆ ದೇವನ ಕುಳ್ಳಿರಿಸಿ ಬಂದನು ಮನೆಗೆ ತೀವ್ರದಿಂದ 3 ಆಕಾಲದಲಿ ತೋಂಡ ಸತಿ ನಿವಾಳಿಸುವತ ಚಲ್ಲಿದಳು ಶೈಲದೊಡೆಯನು ಗಜದ ಮೇಲಿಂದ ಇಳಿದು ಆಮೇಲೆ ತಾ ಬಂದಾ ಸುವಿಶಾಲ ಮಂಟಪಕೆ ಮೇಲಾದ ಗದ್ದಿಗೆಯ ಮೇಲೆ ವೇಂಕಟರಮಣನು ಕಾಲಿಟ್ಟು ಕುಳಿತನಾಮೇಲೆ ಬ್ರಹ್ಮಾದಿ ಗಳು ಗಾಲವ, ವಶಿಷ್ಠಮುನಿ ವಾಲ್ಮೀಕಿ ಭೃಗು ಜಟಾಜಾಲ ಸಂಪನ್ನ, ಶುಕ, ದಾಲ್ಭ್ಯ ಮೊದಲಾದವರು ಸಾಲ್ಹಿಡಿದು ಕುಳಿತರಾ ಕಾಲಕ್ಕೆ ಎಲ್ಲಾ ಒದಗಿ ಬೇಗನೆ ವಿಷ್ಣು ಪದರಾಜ4 ತೊಳೆದು ಆ ಉದಿಕ ಮಧುಸೂದನನ ಪೂಜೆ ಮಧುಪರ್ಕದಿಂದ ಬುಧಜನರು ಪೇಳಿದಾಜ್ಞೆಯಲಿ ಗೃಹ ದೇವತಾಸನದಲಿ ಹರಿಯ ಧ್ಯಾನದಲಿ ಇರುತಿರುವ ಮದನ ಮೋಹನ ಸನ್ನಿಧಿಗೆ ಸಮ್ಮುಖವಾಗಿ ಮುದದಿ ಇರಿಸಿದನಾಗ ಬದಿಲಿದ್ದ ಬೃಹಸ್ಪತಿಯ ಒದಗಿ ವಧು ವರಗಳಿಗೆ ವಿಹಿತದ ಅಂತಃಪÀಟವ ಮುದದಿ ಮಧ್ಯದಲ್ಲಿ ಪಿಡಿದು ಒದರಿದನು ಈ ಪರಿಯು ಮದವೆಯ ಕಾಲಕ್ಕೆ ಮಧುರÉೂೀಕ್ತಿಯಿಂದ5 ಧ್ವನಿ:ಸೌರಾಷ್ಟ್ರ ಅಟತಾಳ ಸಾವಧಾನ ಧೇ ವಾಧೀಶನ ಲಗ್ನ ದಿವ್ಯ ವೇಳೆಯಲ್ಲಿ ಸಾವಧಾನ ಪ ಪದ್ಮನಾಭನೆ ನೀನು ಸಿದ್ಧಾಗಿ ಇರು ಕಂಡ್ಯ ಸಾವಧಾನ ಪದ್ಮಾವತಿಯೆ ನೀನು ಪದ್ಮನಾಭನ ಸ್ಮರಿಸು ಸಾವಧಾನ 1 ಫಲಕಾಲದಲಿ ಚಂಚಲರಾಗದಲೆ ನೀವು ಸಾವಧಾನ ಕುಲದೇವಿ ಸ್ಮರಣಿ ನಿರ್ಮಲವಾಗಿ ಮಾಡಿರಿ ಸಾವಧಾನ 2 ಶ್ರೇಷ್ಠಾದ ಅತಿ ವಶಿಷ್ಠ ಮುನಿಗಳೆಲ್ಲ ಸಾವಧಾನ ಸ್ಪಷ್ಟಾಗಿ ಶ್ರೀ ಮಂಗಳಾಷ್ಟಕ ಪಠಿಸಿರಿ ಸಾವಧಾನ 3 ಮಂಗಳ ಮೂರುತಿ ಮನದಿಂ ಸ್ಮರಿಸಿರಿ ಸಾವಧಾನ
--------------
ಅನಂತಾದ್ರೀಶ - ಕಥನಕಾವ್ಯಗಳು
ಅನಂತ ಅಪರಾಧ ಅನುಗಾಲ ಮಾಡುತಿಹೆ ಪ ಸ್ನಾನ ಸಂದ್ಯಾ ಜಪ ಮೌನವೇ ಮೊದಲಾದ ನಾನಾವಿಧದ ವಿಹಿತ ಧರ್ಮತೊರೆದು ನಾನು ನನ್ನದು ಎಂಬೊ ಹೀನ ಬುದ್ಧಿಗಳಿಂದ ಹೀನ ಜನರೊಡಗೂಡಿ ಙÁ್ಞನಿಗಳ ನಿಂದಿಸುವೆ 1 ಶ್ರೀಕಾಂತ ನಿನ್ನ ಸೇವೆಯನು ಮರೆದು ಬೇಕಾದ ವೈಷಿಕವ ಸ್ವೀಕರಿಸಿ ಲೋಕÀದೊಳು ಸಾಕಿದವರನು ನಾ ನಿರಾಕರಿಸಿ ಬಾಳುವೆನು 2 ಎನಗಿಂತ ಅಧಿಕರಾದವರ ಕೂಡ ದ್ವೇಷವನು ಅನುಗಾಲ ಮಾಡುವೆನೊ ಅನಿಮಿಷೇಶಾ ಎನಗೆ ಸರಿಯಾದವರ ಕಂಡು ಮತ್ಸರಿಸುವೆನು ಎನಗಿಂತ ನೀಚರನು ನಾ ನೋಡಿ ನಗುತಿಪ್ಪೆ 3 ಕಾಸಿನಾಸೆಗೆ ಪೋಗಿ ದಾಸವೇಷವÀ ಧರಿಸಿ ಮೋಸಮಾಡುವೆ ಜನರ ಪಾಶದಿಂದಾ ವಾಸುದೇವನೆ ಸರ್ವದೇಶ ಕಾಲಾದಿಗಳಿ ಗೀಶನೆಂದರಿಯದಲೆ ಮೋಸಹೋದೆನು ಸ್ವಾಮಿ 4 ಸಕಲ ದುರ್ಗುಣಕೆ ಆಗಾರ ನಾನವನಿಯೊಳು ಭಕುತಿ ವೈರಾಗ್ಯ ಪ್ರಸಕುತಿಯಿಲ್ಲಾ ಭಕುತವತ್ಸಲ ಗುರುಜಗನ್ನಾಥವಿಠಲನೆ ಅಕಳಂಕಮಹಿಮನೆ ಮುಕುತಾಮುಕುತರೊಡೆಯಾ 5
--------------
ಗುರುಜಗನ್ನಾಥದಾಸರು