ಒಟ್ಟು 49 ಕಡೆಗಳಲ್ಲಿ , 28 ದಾಸರು , 49 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾನಿನೀ ವ್ರತಹರಣ ದೀನರಕ್ಷಣ ನಿಪುಣ ದಾನವ ಕುಲಾಹನನ ವಸನಹೀನ ತ್ರಿಪುರಾರಿ ವಂದಿತ ತಪ್ತಹೇಮಸುಗಾತ್ರ ಸುಪವಿತ್ರ ಸುಚರಿತ ಭೇದರಹಿತ ನಿತ್ಯ ನಿಷ್ಕಲ್ಮಷ ಸತ್ವಮಯ ಸ್ವರೂಪ ಬುದ್ಧರೂಪ ಆನಂದಪರಿಪೂರ್ಣ ಅಬ್ಜಪತ್ರೇಕ್ಷಣ ಆದ್ಯಂತಕಾರಣ ಅಪಾರಮಹಿಮ ಭೂತದಯಾಪರ ಧರ್ಮಸಾರ ಪೂತ ಸದ್ಗುಣಲಸಿತ ದುರಿತದೂರ ಧಾತ ಸುಕವಿಜನ ಚೈತನ್ಯದಾತ ಖ್ಯಾತ ಶೇಷಾದ್ರಿವರ ಪಾಹಿಸುಕÀರ
--------------
ನಂಜನಗೂಡು ತಿರುಮಲಾಂಬಾ
ಮಾಯಾದೊಳಗೆ ಶಿಲ್ಕಿ ಮಗ್ನನಾಗಿ ಮರವೆಗೆ ಒಳಗಾದೆ ಕಾಯಬೇಕಯ್ಯ ನಿನ್ನ ಕರುಣ ರಸವನ್ನು ಕಾಣದೆ ನಾ ಬರಿದೆ ಪ ದೀನದಯಾಪರ ದನುಜಾಂತಕ ನಿಧಾನ ಸುಜನವಂದ್ಯಾ ಮಾನವಾದಿ------ಜನಕ ಸನ್ಮಾನಿತ ಮುಚುಕುಂದ ನಿತ್ಯ ಶ್ರೀ ರಂಗಾ 1 ಇತರ ಜ್ಞಾನತೊರೆದು ಮನಬಣ್ಣ ಮರೆದು ಪಾದ ಸೌಖ್ಯವ ಕಾಣದಿನ್ನೂ ಪಿಡಿವರು ಇನ್ನೂ 2 ಏಸೋ ಬಾರಿ ನಾ ಹುಟ್ಟಿದರೇನು ಇನ್ನು ನಿನ್ನ ಕಾಣದೆ ಮನವು ನಿನ್ನಲ್ಲಿಲ್ಲದೆ ಘಾಸಿಗೆ ಬಿದ್ದೆನು ಕರುಣಿಸೊ ಬೇಗನೆ ಘನ್ನ `ಹೆನ್ನ ವಿಠ್ಠಲನೆ ' ವಾಸುದೇವ ಎನ್ನ ವೈನದಿ ರಕ್ಷಿಸೋ ವಸುಧೆಯ ಪಾಲಕ 3
--------------
ಹೆನ್ನೆರಂಗದಾಸರು
ಮೂರ್ತಿ ಪ ಲೋಕದ ಜನರಘವನು ತೊಳೆಯಲಿಕೆ ತ್ರೈ ಲೋಕ ದೊಡೆಯ ಚದಂಬರನಾಗಿ ಭೂಕಾಂತೆಯೊಳಗೆ ಮೂರ್ತಿ ದಯಾಪರ ಮೂರುತಿ 1 ಮಾಡಿಕೊಂಡ ಪಾಪದ ರಾಶಿಯು ದಿನ ದಿನ ಉರಿಗೊಂಡು ಸುಟ್ಟುದು ಮರೆಹೊಕ್ಕೆನೀಗಳು ಪಾದ ಪುಂಡರೀಕವನು ಚಿದಂಬರಮೂರ್ತಿ 2 ಹೊನ್ನು ಹಣವ ಚಿನ್ನ ಚಿಗುರು ಬೇಡುವನಲ್ಲ ಪಾದ ಪದ್ಮದ ಸ್ಮರಣೆಯನು ಸಂಪೂರ್ಣವಾಗಿರುವ ನಿತ್ಯ ಸುಖಾರ್ಣವಾನಂದ ಚಿದಂಬರಮೂರ್ತಿ 3 ಬೇಡುವೆನೊಂದು ವರವ ಕೊಡುವರೆ ಈ ಗೂಡಿರುವತನಕ ಕೃಪೆಮಾಡಿ ಸಲಹೋ ಎನ್ನ ನೋಡಿ ಬಡವನ ಚಿದಂಬರಮೂರ್ತಿ 4 ಪ್ರಾಕುನುಡಿದ ಪುಣ್ಯದಿಂದ ನಿಮ್ಮಯಪಾದ ಸೇರೆ ನಾ ಕೃತ ಕೃತ್ಯನಾದೆ ನಿಂದಿನ ಜನ್ಮ ಸಾರ್ಥಕ ವಾಯ್ತು ಪರಾಕೆ ಚಿದಂಬರ ನೀ ಕರುಣಿಸೋ ಎನಗಭಯವಿತ್ತು 5
--------------
ಕವಿ ಪರಮದೇವದಾಸರು
ಮೈಸೂರು ವೈಕುಂಠದಾಸರಿಂದಧರಣಿಕಧಿಕವಾದ ಗುರುರಂಗಸ್ವಾ'ುಯೆಚರಣಕಮಲಕೆ ನಮೊ ನಮೊಭರತಪುರೀಯೊಳೂ ತುಲಸೀರಾಮರಸ್ಥಿರಪಡಿಸಿದ ಗುರು ನಮೊ ನಮೊವೇದಾಂತಗಳ ಭೇದವ ತಿಳಿದೂ ಆದಿಯ ತೋರಿಸಿದೆ ನಮೊ ನಮೊಸಾಧೂಜನಗಳ ಸೇವೆಯೊಳಿರಿಸಿಸ್ವಾಧೀನ ಮಾಡಿಕೊಂಡೆ ನಮೊ ನಮೊಬೋಧಾಮೃತವೆಂವ ನಾದವತುಂಬಿಶೋಧನೆ ಮಾಡಿಕೊಂಡೆ ನಮೊ ನಮೊರಾಧಾರುಕ್ಮಿಣಿರಮಣನ ಸೇವೆಯಹೃದಯದೊಳಿರಿಸಿದೆ ನಮೊ ನಮೊಪೂರ್ವಜನ್ಮದ ಸುಕೃತಫಲದಿ ನಿಂಮ್ಮ[ವರ]ದಾಸನಾದೆನೊ ನಮೊ ನಮೊಪರ್ವತಾಕಾರದಿ ಪಾ¥ವ ಮಾಡಿದೆನೂಪರಿಹರಿಸೆನ್ನನು ನಮೊ ನಮೊರಾಮಕೃಷ್ಣೋತ್ಸವ ನಾಮಧ್ಯಾನವ ನೇಮದಿಪಾಡುವೆ ನಮೊ ನಮೊಸೋಮಸುಂದರಾ ಜಗದಭಿರಾಮನೇಪ್ರೇಮದಿಸಲಹೈ ನಮೊ ನಮೊದೀನದಯಾಪರದಾಸಜನೊತ್ತಮಧ್ಯಾನದೊಳಿರಿಸೆನ್ನ ನಮೊ ನಮೊಸ್ವಾನುಭಾವದೀ ದಾನವ ಬೇಡುವೆದೀನನ ಸಲಹೈ ನಮೊ ನಮೊವರಗುರುಪಾದಕೆ ವಂದಿಪೆ ನಿರತವೂವೈದಿಕೋತ್ತಮನೆ ನಮೊ ನಮೊಪರಮಪುರುಷನೆ ಪತಿತೋದ್ಧಾರನೇವರರಾಮದಾಸಪಾಲ ನಮೊನಮೊ
--------------
ಮಳಿಗೆ ರಂಗಸ್ವಾಮಿದಾಸರು
ಯಾಚಿಸುವೆನು ನಿನ್ನನಿದಕೆ ಕರುಣಸಾಗರ ಗಮನ ಜಗತ್ಪಾಲ ಪ್ರಭುವರ ಪ ದೈನ್ಯರಾಹಿತ್ಯ ರಹಿತ ಜಾಡ್ಯರಹಿತವು ಪಾದ ಕಮಲರತಿ ಸದಾವಕಾಲವು 1 ಪ್ರಭುವೆ ನಿನ್ನ ಭೃತ್ಯನಾನಾದಿಕಾಲದಿ ಅಭಯವಿತ್ತು ಪಾಲಿಸೆನ್ನ ಹೇ ದಯಾನಿಧೆ 2 ತುಷ್ಟನಾದರೇನುರುಷ್ಟನಾರೇನೊಲೊ ಇಷ್ಟದೈವ ನಿನ್ನ ಹೊರತು ಗತಿಯ ಇಲ್ಲೆಲೊ 3 ತುಷ್ಟನಾದ ಬಳಿಕ ನೀನೆ ಹೇ ಕೃಪಾಕರ ಬಿಟ್ಟುನಿನ್ನ ಭಜೀಸಲ್ಯಾಕೆ ಯಿತರಕಾಯ್ವರ 4 ನೀನೆ ರೋಷವನ್ನು ತಾಳೆ ಸುಜನಬಂಧುವೆ ದೀನನನ್ನು ಕಾಯ್ವರಾರು ನೀನೆಯಲ್ಲವೆ 5 ದೋಷ ಕ್ಷಮಿಸುವಲ್ಲಿ ನಿನ್ನ ಪೋಲ್ವ ಅರಸರು ದೇಶಸರ್ವಗಳಲಿ ಪುಡುಕಲಲ್ಲೆ ದೊರಕರು 6 ಎನ್ನಸರಿ ಕೃತಘ್ನ ವಂಚನೀಯ ಮಾಳ್ಪನ ವನ್ನಜಾಭವಾಂಡದೋಳಾವಲ್ಲಿ ಕಾಣೆನಾ 7 ದೀನ ದಾಸ ನಿನಗೆ ನಾನು ಹೇ ಜಗತ್ಪತೆ ಮಾಣದೆಲ್ಲಿರಲ್ಲಿ ತೋರಿ ಪ್ರೇಮ ಸಾಮ್ಯತೆ 8 ಎನ್ನ ವಿಷಯ ಭಯವು ನಿನಗೆ ಲಕ್ಷವಾವುದು ಮನ್ನಿಸೆನ್ನ ಪೊರೆವ ಸರ್ವಭಾರ ನಿನ್ನದು 9 ಈಶಪೂರ್ಣಕಾಯ ನಿನಗಸಾಧ್ಯವಾವುದು ಆಶೆಯನ್ನದಾವಘನವು ನಿನಗೆ ತೋರ್ಪುದು 10 ದಾಸನಾಶೆಪೂರ್ತಿಸಲ್ಕಾಲಸ್ಯವುಚಿತವೋ? ಅಶಿಶಿಸುವನು ದಾಶಗೈವುದೇನು ನೀತವೋ? 11 ಲೋಕನಾಥ ಕರುಣ ಪೂರ್ಣನೇ ಪರಾತ್ಪರ ಯಾಕೆ ಯೊನ್ನೊಳಿನಿತು ನೀನು ನಿರ್ದಯಾಪರ 12 ಗರವತಾಯಿತನನುಜಗೀಯೆ ಅವುದೋಗತಿ ತರುಳನಲ್ಲಿ ಕರುಣಿಸುವದು ಕೃಷ್ಣ ಮೂರುತಿ 13 ದಾತ ಜ್ಞಾತನು ನಿನ್ನ ವಿನಹಾಭಿಷ್ಟಫಲದ ಕರ್ತೃ ಆವನು 14 ಲಕ್ಷ್ಮಿಪತಿಯ ಪೋಲ್ಪೋದಾರ ಸುಗುಣ ಶೀಲನ ಈಕ್ಷಿಸಲ್ಕೆ ಜಗದೊಳಾರನೆಲ್ಲಿ ಕಾಣೆನಾ 15 ನಿನ್ನ ಔದಾರ್ಯ ಸರ್ವರಲ್ಲಿ ಸಾಮ್ಯವು ಎನ್ನೊಳಿನಿತ್ತು ನಿನ್ನದ್ಯಾಕೆ ಕಾರ್ಪಣ್ಯವು 16 ಆರ್ತಬಂಧುವೆಂದು ನಿನಗೆ ಶರಣುಬಂದೆನು ಸಾರ್ಥಕವನು ಮಾಡುವಿಯೊ ಜರಿದೆ ಬಿರುದನು 17 ದೀನ ಬಂಧು ಕರುಣಸಿಂಧು ಸುಹೃದ್ಬಾಂಧವ ಹೀನ ಭವಾರ್ಣವದಿ ಮಗ್ನನಿರುವೆ ಭೂಧವ 18 ತಾರಿಸೈ ಭವಾಬ್ದಿಯಿಂದ ಇಂದಿರಾವರ ಸೂರಿಜನರ ಸಂಗವೆನ್ನಗೀಯೋಗಿರಿಧರ19 ಶ್ರೀನೃಸಿಂಹ ಸತತ ನೀನು ಸದಯ ಮೂರುತಿ ದೀನ ನನ್ನೊಳ್ಯಾಕೆ ನಿರ್ದಯವ ತೋರುತಿ 20 ಸಾಧುಗಳು ನಿರ್ಗುಣಿಗಳಲ್ಲಿ ದಯವÀ ಮಾಳ್ಪರು ಸಾದರದಲಿ ಸರ್ವರಲ್ಲಿ ಸದಯರಿಪ್ಪರು 21 ಧನ್ಯಜನಕೆ ನಿನ್ನನೀವುದೇನು ಅಚ್ಚರ ದ್ಯೆನ್ಯ ಬಡುವನನ್ನು ಪಾಲಿಸುವದು ಪರತರ 22 ಚಂದ್ರಚಾಂಡಾಲಗೃಹದ ಮೇಲೆಯಾದರು ಸುರತರು 23 ಈತೆರ ಶ್ರೀ ಪತಿಯೆ ಎನಗೆ ಪ್ರೀತನಾಗೆಲೋ ನೀತವಾಗಿ ಕರುಣದಿಂದ ಕರವಪಿಡಿಯಲೊ 24 ಪುನಃ ಪುನಃ ನಿನ್ನನಿದನೆ ಬೇಡಿಕೊಂಬೆನಾ ಮನದೊಳು ಪ್ರಸನ್ನನಾಗು ಜನಕಜಾರಮಣ25 ಪಂಚರಾತ್ರಾಗಮೋಕ್ತ ಈಸ್ತುತಿಯನು ವಿನುತ ಶ್ರೀ ರಾಮಚಂದ್ರನು 26 ಮುದದಿ ಮನಸಿನೊಳಗೆ ತಾನೆವದಗಿ ಪೇಳಿದ ಅದನೆ ಶ್ರೀವರದೇಶ ವಿಠಲ ನುಡಿಸಿ ಬರೆಸಿದ 27
--------------
ವರದೇಶವಿಠಲ
ರಾಮ ಶ್ರೀ ರಘುನಂದನ ಶರಣು ಸಾರ್ವ- ಭೌಮ ಭೂಸುರವಂದ್ಯ ಸೋಮಶೇಖರಮಿತ್ರ ಕಾಮಿತ ಫಲದಾತ್ರ ಸನ್ನುತ ಸೀತಾ ಪ. ಕ್ರೂರ ದಾನವ ಸಂಹಾರ ಕೌಸಲ್ಯಾಕುಮಾರ ಭೂ- ಭಾರಹರ ಭಜಕÀಜನೋದ್ಧಾರ ವೇದಾಂತಸಾರ ಚಾರುವದನ ಮಣಿಹಾರ ಕುಂಡಲಧರ ವೀರರಾಘವ ವಿಶ್ವಾಧಾರ ಕರುಣಿಸು ಸೀತಾ 1 ಪಾಪರಹಿತ ಪಾವನ ಚರಿತ ಅಹಲ್ಯಾ ಹರಣ ದಿವ್ಯರೂಪ ರಮಾರಮಣ ತಾಪ ವಿಚ್ಛೇದನ ತಾಮಸ ಗುಣಹರಣ ದ- ಯಾಪರ ಬ್ರಹ್ಮಸ್ವರೂಪ ಮೂರುತಿ ಸೀತಾ 2 ಮಾಧವ ಪುಣ್ಯಚರಿತ ಕರುಣಾಪಾಂಗ ಹೆಳವನಕಟ್ಟೆ ರಂಗಯ್ಯ ಸದಾನಂದ ಸುಮತೀಂದ್ರ ಹೃದಯ ಪಂಕಜಭೃಂಗ ಕದನ ವಿಕ್ರಮ ಬಾಹು ಕೋದಂಡಧೃತ ಸೀತಾ 3
--------------
ಹೆಳವನಕಟ್ಟೆ ಗಿರಿಯಮ್ಮ
ರಾಮಕೃಪಾಕರ ರಾಮ ದಯಾಪರ ರಾಮದಿವಾಕರ ರಾಮ ರಾಮ ಪ ದಶರಥನಂದನ ಋಷಿಕುಲ ಪಾವನ ದಶಶಿರಭಂಜನ ರಾಮ ರಾಮ ರಾಮ 1 ಜನಕನ ಜೀವನ ಮುನಿಗಣ ಪಾಲನ ಧನುಜನಿವಾರಣ ರಾಮ ರಾಮ ರಾಮ 2 ವಾಲಿಯ ಮರ್ಧನ ವಾಲಿಜ ರಕ್ಷಣ ಬಾಲ ಸುಪೋಷಣ ರಾಮ ರಾಮ ರಾಮ 3 ಅಜರಾಮರ ಸಿರಿಭಜಕರವರಹರಿ ಅಜಪಿತ ನರಹರಿ ರಾಮ ರಾಮ ರಾಮ 4 ಚನ್ನಿಗರಾಯನೆ ಚಿನ್ಮಯ ರೂಪನೆ ಚೆನ್ನಕೇಶವನೆ ರಾಮ ರಾಮ ರಾಮ 5
--------------
ಕರ್ಕಿ ಕೇಶವದಾಸ
ರಾಮರಾಮ ರಾಮ ರಾಮಸೀತಾರಾಮ ದಶರಥನಂದನ ರಾಮ ದಯಮಾಡು ಶ್ರೀರಾಮ ಪಶುಪತಿ ಪಾಲಕರಾಮ ಪಾಲಿಸೊಯನ್ನನು ಶ್ರೀರಾಮ ಪ ಭಕ್ತವತ್ಸಲರಾಮ ಪಾಂಡವ ಪಕ್ಷಕರಾಮ ಮುಕ್ತಿದಾಯಕ ರಾಮ ಮುನಿಗಣ ವಂದ್ಯರಾಮ ಯುಕ್ತ ಜಗತ್ಕರ್ತರಾಮ ಇನಕೂಲಭೂಷಣರಾಮ ಮೌಕ್ತಿಕ ಮಣಿಗಣರಾಮ ಮಾಣಿಕ್ಯ ಮುಕುಟಧರರಾಮ 1 ಅಹಿಪಶಯನ ಶ್ರೀರಾಮ ಅನೇಕ ಚರಿತರಾಮ ಅಮಿತ ಪರಾಕ್ರಮ ರಾಮ ಇಹಪರ ಬಾಂಧವ ರಾಮ ವಿಶ್ವಕುಟುಂಬ ರಾಮ ಮಹಾಮಹಿಮ ಶ್ರೀರಾಮ ಮನುಜಾಧಿಪತಿರಾಮ 2 ಭೂತದಯಾಪರರಾಮ ಪುಣ್ಯಪುರುಷ ಶ್ರೀರಾಮ ಪಾತಕ ಭಯಹರರಾಮ ಪತಿತ ಪಾವನ ರಾಮ ನಾಥ ಜಗತ್ರಯರಾಮ ಅನಾಥ ರಕ್ಷಕರಾಮ ಸೇತುಬಂಧನ ರಾಮ ಶಾಶ್ವತ ವಿಗ್ರಹರಾಮ 3 ಮಂಗಳ ಮೂರುತಿ ರಾಮ ಮಧುಸೂದನ ಶ್ರೀರಾಮ ಗಂಗಾಪಿತ ಹರಿರಾಮ ಗೌರೀವಲ್ಲಭರಾಮ ಶೃಂಗಾರಾಂಗ ರಾಮಾಶ್ರಿತಜನ ಪೋಷಿತರಾಮ ರಾಜೀವ ನಯನ ರಾಮ 4 ಸತ್ಯವಾಕ್ಯ ಶ್ರೀರಾಮ ಸದಾನಂದ ರಾಮ ನಿತ್ಯನಿರಂಜನ ರಾಮ ನಿರ್ವಿಕಲ್ಪ ಶ್ರೀರಾಮ ಭೃತ್ಯಕೋಟಿ ಸಂಘರಾಮ ಪುಣ್ಯಪ್ರಭಾವ ಶ್ರೀರಾಮ ದೈತ್ಯಾಂತಕ ಶ್ರೀರಾಮ ತಾಟಕಮರ್ದನ ಶ್ರೀರಾಮ 5 ನವನೀತ ಹೃದಯರಾಮ ಕೋಟಿ ಭಾನುತೇಜ ರಾಮ ಕರುಣಸಾಗರ ರಾಮ ಹಾಟಕಾಂಬರಧರ ರಾಮ ಆದಿನಾರಾಯಣ ರಾಮ ಕೋಟಿಕಂದರ್ಪರೂಪ ರಾಮ ಕೋಮಲಗಾತ್ರರಾಮ 6 ಯದುಕುಲಾಬ್ಧಿಚಂದ್ರ ರಾಮ ಯಶೋದಾನಂದನ ರಾಮ ಮೃದು ಮಧು ಭಾಷಣರಾಮ ಮೂಲರೂಪ ಶ್ರೀರಾಮ ಗದಧರ ವಂದ್ಯರಾಮ ಘನಗಂಭೀರರಾಮ ಪದುಮನಾಭ ಶ್ರೀರಾಮ ಪರಮಕೃಪಾಳುರಾಮ 7 ಸರಸಿಜಭವನುತರಾಮ ಸದ್ವಿಲಾಸ ಶ್ರೀರಾಮ ಕರಿರಾಜ ಪಾಲಕ ರಾಮ ಕಲ್ಮಷ ಪರಿಹರರಾಮ ಸುರಪತಿ ವಂದ್ಯರಾಮ ಸುಜನಾಂತರ್ಯಾಮಿ ರಾಮ ಶರಧಿಶಯನ ಶ್ರೀರಾಮ ಶಾಙ್ರ್ಞಪಾಣಿ ರಾಮ 8 ಕಮಲೋದರರಾಮ ಘನಗುಣಶಾಂತ ರಾಮ ಸಾರಥಿ ರಾಮ ಕಮಲಮನೋಹರ ರಾಮ ಗರುಡವಾಹನರಾಮ ಕಮಲಾಪ್ತ ಶಶಿನೇತ್ರ ಕರ್ಮಸಾಕ್ಷಿ ಭೂತರಾಮ 9 ಈಶ ಜಗತ್ರಯ ರಾಮ ವಿಷ್ಣುಸರ್ವೋತ್ತಮ ರಾಮ ವಾಸುದೇವ ಕೃಷ್ಣರಾಮ ವಸುದೇವ ನಂದನ ರಾಮ ಭೂಸುರಪ್ರಿಯ ಶ್ರೀರಾಮ ಸರ್ವಪೂಜಿತರಾಮ ವಸುಗಿರಿ ವಾಸರಾಮ ವೈಕುಂಠನಿಲಯರಾಮ 10 ನೀಲಮೇಘವರ್ಣರಾಮ ನಿಖಿಲವೈಭವರಾಮ ಪುಂಡರೀಕ ವರದ ರಾಮ ಫಾಲಲೋಚನ ಪ್ರಿಯರಾಮ ಪಾಂಡುರಂಗ ಶ್ರೀರಾಮ ಕಾಲಿಯಾಮರ್ದನರಾಮ ದ್ವಾರಕಾವಾಸರಾಮ 11 ವೇಣುನಾದ ಶ್ರೀರಾಮ ವೆಂಕಟರಮಣ ರಾಮ ಗಾನಲೋಲ ಶ್ರೀ ರಾಮ ಕಂಬುಕಂಧರರಾಮ ಮಾನಿತ ತ್ರಿಭುವನರಾಮ ಮಂದರಧರ ಶ್ರೀರಾಮ ಧೇನು ಪಾಲಕ ರಾಮ ದೇವಾಧಿದೇವ ರಾಮ 12 ಕುಂಭಿನೀಧವ ರಾಮ ಕುಶಲವ ಜನಕರಾಮ ಅಂಬರ ಧ್ರುವನಂತೆ ರಾಮ ಅಜಮಿಳನಂತೆ ರಾಮ ಪೊರೆದಂಥ ರಾಮ 13 ತಾಪತ್ರಯದಲಿ ರಾಮ ನಾತಪಿಸುತಿರುವೆ ರಾಮ ಪರಿ ತಾಪವ ರಾಮ ಹೆದರಿಸಿ ಕಳೆಯೊ ರಾಮ ಭೂಪ ನೀನಲ್ಲದೆ ರಾಮ ಭೂವಿಯೊಳಧಿಕ ನೀನಲ್ಲವೆರಾಮ ಕಾಪಾಡುವ ಭಾರರಾಮ ಕರ್ತನು ನೀನೆ ರಾಮ 14 ನಿತ್ಯ ಕಲ್ಯಾಣರಾಮ ಅಘನಾಶನ ಶ್ರೀರಾಮ ಅನಂತನಾಮರಾಮ ಜಗದೊಳಧಿಕನಾದರಾಮ ಜಯ`ಹೆನ್ನೆವಿಠಲ’ ರಾಮ ಮನ್ನಿಸಿ ಸಲಹೊರಾಮ 15
--------------
ಹೆನ್ನೆರಂಗದಾಸರು
ವೆಂಕಟೇಶ ದೀನ ದಯಾಳೊ ಪ. ಶ್ರೀರಮಣೀಕರ ನೀರರುಹಾರ್ಚಿತ ಪಾದ 1 ವರ ಸುದರ್ಶನ ಧಾರಕರಾಂಬುಜ ಪುರಂದರ ಪದದಾಯಕ2 ಪನ್ನಗ ಗಿರೀಶ ದಯಾಪರ 3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀಹರಿ ಮೂಜಗದೊಳು ನೀನು ತೇಜವುಳ್ಳವನಾಗಿ ಪ ಕಾಲದಿ ನಿನ್ನಯ ಮೇಲಿಹ ನಿರ್ಮಾಲ್ಯ ಮಾಲೆಯನೆಲ್ಲ ವಿಸರ್ಜಿಸಿ ತೊಳೆದು ನೀಲಮಾಣಿಕ ವಜ್ರಮಯವಾದ ಪೀಠದ ಮೇಲೆ ವಾಲಗವಾಗಿ ಲೀಲೆಯ ತೋರುತ1 ಮೊದಲು ಸಂಕಲ್ಪಿಸಿ ತುಳಸಿ ಶ್ರೀಗಂಧದಿ ಉದಕ ಶುದ್ಧವ ಮಾಡಿ ಅದರೊಳು ಬಳಿಕ ವಿಧಿಸಿಯೆ ಮತ್ತೇಳು ನದಿಯನುಚ್ಚರಿಸಲು ಒದಗಿ ಬಾರೆಲೊ ಕರಚರಣ ಮಜ್ಜನಕೀಗ 2 ಮಾನಸದಘ್ರ್ಯವು ಆಚಮನಗಳು ನಾನಾ ಪಂಚಾಮೃತ ಫಲವಭಿಷೇಕವು ಗಾನ ಸೂಕ್ತಗಳಿಂದ ಮಧುಪರ್ಕಾದಿಗಳು 3 ವಸ್ತ್ರವಾಭರಣವು ಯಜ್ಞಸೂತ್ರವ ತೊಡಿಸಿ ಚಿತ್ರವಾಗಿಹ ಗಂಧ ಅಕ್ಷತೆವಿಡಿಸಿ ಪತ್ರಪುಷ್ಪವು ಶ್ರೀತುಳಸಿ ಮಾಲೆಗಳಿಂದ ಸ್ತೋತ್ರವು ಸಾಹಸ್ರನಾಮಗಳಾಯಿತು 4 ಧೂಪಮಾಧ್ರೂಪಯ ದೀಪದ ದರುಶನವು ಆದಷ್ಟು ಸರ್ವೋಪಚಾರಗಳು ಕದಳಿ ನಾರಿಕೇಳÀವು ಪರಿ ನೈವೇದ್ಯ ದಯಾಪರಮೂರ್ತಿ 5 ಆಗರದೊಳು ಬೆಳೆದ ನಾಗವಲ್ಲಿಯ ದಳ ಪೂಗಿಯಫಲ ಸಹ ನಾಗಶಯನಗಿಟ್ಟು ಬೇಗದಿ ಮಂಗಳ ಪದಗಳ ಹೇಳಿ ಲೇ ಸಾಗಿ ಎತ್ತುವ ಅಮೋಘದಾರತಿಗಳ 6 ಮಾಡಿದ ಪೂಜೆಯ ನೋಡಿ ಕರುಣದಿಂದ ಬೇಡಿದಿಷ್ಟವನೀಯೊ ರೂಢಿಯ ಒಡೆಯ ಪಾಡಿ ಪೊಗಳುವೆ ನಿನ್ನ ಪಂಥ ಬೇಡೆನ್ನೊಳು ಅನುದಿನ ವರಾಹ ತಿಮ್ಮಪ್ಪ 7
--------------
ವರಹತಿಮ್ಮಪ್ಪ
ಸ್ವಾಮಿ ವೆಂಕಟರಮಣ ಭೂಮಿಪಾಲಕ ದೇವ ಸಂಜೀವ ಪ ಸುರರು ಅಸುರರೆಲ್ಲ ಶರಧಿಯ ಮಥಿಸಲು ಸಿರಿಯು ಜನಿಸಿ ಬಂದು ಹರಿಯ ಸೇರಿದಳು 1 ಸತಿ ಕುಸುಮಮಾಲೆಯನು ಅತಿ ಹರುಷದಿ ಜಗತ್ಪತಿಗೆಯಿಕ್ಕಿದಳು 2 ವಾರಿಧಿಯಾಕ್ಷಣ ಧಾರೆಯನೆರೆಯಲು ವಾರಿಜಾಂಬಕ ಲಕ್ಷ್ಮಿ ಒಡನೆ ನಿಂದಿರಲು 3 ಫಣ್ಭಿಹ್ತ್ರ1ಸೆಮಣಿಯೊಳು ರಮಣಿಯನೊಡಗೊಂಡು ಗುಣನಿಧಿಯು ಒಪ್ಪಿರಲು ತರುಣಿಯರೆಲ್ಲ 4 ಪಚ್ಚವ ಧರಿಸಿ ನವ ಸ್ವಚ್ಛವಾಗಿಯೆ ತುಳಿದು ಅಚ್ಯುತ ಮಹಾಲಕ್ಷ್ಮಿಗಚ್ಚಬೇಕೆನುತ 5 ಸಣ್ಣ ಮಲ್ಲಿಗೆ ಎಣ್ಣೆ ಬಣ್ಣವಾದರಿಸಿನವ ಪುಣ್ಯವಂತೆಗೆ ಕೈಗರ್ಣವ ಕೊಡಲು 6 ಸಿರಿ ತನ್ನ ತಲೆಗೆ ಪ್ರೋಕ್ಷಿಸಿಕೊಳಲು ಹರಿಯು ಮೆಚ್ಚಿದನು 7 ಗಟ್ಟಿಯಾದರಿಸಿನವ ಬಟ್ಟಲೆಣ್ಣೆಯಗೂಡಿ ಮುಟ್ಟಲಂಜಿಯೆ ನಿಲಲು ಸೃಷ್ಟಿಪಾಲಕನ 8 ಅಂಗೈಯ ಅರಿಸಿಣವ ಮುಂಗೈಗೆ ಒರಸುತ್ತ ರಂಗನ ಸಿರಿಮೊಗವ ಕಂಗಳಿಂದೀಕ್ಷಿಸುತ 9 ಅಭಯ ಹಸ್ತವನಿತ್ತ ತ್ರಿಭುವನದೊಡೆಯನು ಅಬುಜಲೋಚನೆ ಮುಖಾಂಬುಜಕೆ ತಿಮುರಿದಳು 10 ಸತಿ ಕೈಯ ಅರಿಶಿಣವ ಪತಿಯಾದಿಕೇಶವನ ನುತಿಸಿ ಊರಿದಳು 11 ಸಿರಿಯೆನೆತ್ತಿದ ಕೈಯ ಹರಿ ತಾನು ತೋರಿಸಲು ಸಿರಿ ನಾರಾಯಣ ಎಂದು ಅರಿಶಿಣವ ತಿಮುರೆ 12 ಶಂಖವ ಧರಿಸಿದ ಪಂಕಜಾಕ್ಷನೆ ವಿಷ್ಣು ವೆಂಕಟೇಶನ ಕರಪಂಕಜಕೆ ತಿಮುರೆ 13 ಕದನದೊಳ್ ಖಳರನು ಸದೆದು ಮರ್ದಿಸಿ ಗೆಲಿದು ಮಧುಸೂದನ ಶ್ರೀವತ್ಸದೆದೆಯ ತೋರೆನುತ 14 ಚಕ್ರವ ಪಿಡಿದು ಪರಾಕ್ರಮಿಯೆನಿಸಿಯೇ ಅಕ್ರೂರಗೊಲಿದ ತ್ರಿವಿಕ್ರಮಗೆ ತಿಮುರೆ 15 ವಾಮನನನಾಗೆ ಶ್ರಮವನು ಪಟ್ಟೆನುತ ಭೂಮಿಯ ಅಳೆದ ಪಾದವಿತ್ತಲು ತಾರೆನುತ16 ಕಾದಲನು ಕಾಣುತ್ತ ಪಾದವನಿತ್ತನು ಶ್ರೀಧರನೆನುತಲಿ ಅರಸಿನವ ತಿಮುರೆ 17 ವಾಮಪಾದವ ಕಂಡು ಭಾಮಿನಿ ತಾರೆನೆಲು ಸೋಮಸನ್ನಿಭ ಹೃಷಿಕೇಶ ತಾನಿತ್ತ 18 ಪದ್ಮಬÁಂಧವ ತೇಜ ಪದ್ಮಸಂಭವ ಪೂಜ ಪದ್ಮನಾಭಗೆ ಪದ್ಮಗಂಧಿ ತಾ ತಿಮುರೆ 19 ಆ ಮಹಾ ನಾಮದ ದಾಮೋದರನ ಕಂಡು ಭಾವೆ ಮಹಾಲಕ್ಷುಮಿ ವೀಳ್ಯವ ಕೊಡಲು 20 ವಾಸುದೇವನು ತನ್ನ ಅರಸಿ ಮಾಲಕ್ಷ್ಮಿಗೆ ಪೂಸಿದನರಿಸಿನದ ಎಣ್ಣೆಯ ಮೊಗಕೆ 21 ಪಂಕಜಾಕ್ಷನ ಕಂಡು ಕಂಕಣದ ಹಸ್ತವನು ಕುಂಕುಮದೆಣ್ಣೆಯ ಸಂಕರ್ಷಣ ತಿಮುರೆ 22 ಬುದ್ಧಿವಂತೆಯ ಎಡದ ಮುದ್ದು ಹಸ್ತವ ನೋಡಿ ಉದ್ಧರಿಸಿ ನವ ಪ್ರದ್ಯುಮ್ನ ನಗುತ 23 ಅನಿರುದ್ಧ ನಗುತಲೆ ಘನಕುಚಮಂಡಲಕೆ ಅರಿಸಿನವ ತಿಮುರೆ 24 ಪುರುಷರೊಳು ಉತ್ತಮನು ಹರುಷವನು ತಾಳಿಯೆ ಅರಸಿ ಮಹಾಲಕ್ಷುಮಿಗೆ ಅರಿಸಿನವ ತಿಮುರೆ 25 ಅಧೋಕ್ಷಜನು ತನ್ನ ತುದಿವೆರಳ ಅರಿಸಿನವ ಪದುಮನೇತ್ರೆಯ ಪದದೊಳಗೆ ಮಿಡಿದಿರ್ದ 26 ನಾರಸಿಂಹನು ಸತಿಯ ಮೋರೆಯಿಂದಾರಭ್ಯ ಓರಣವಾಗಿಯೇ ಅರಿಸಿನವ ತಿಮುರೆ 27 ನೆಚ್ಚಿಯೆ ಹರಿ ತಾನು ಅಚ್ಚ ಕರ್ಪೂರದೆಲೆಯ ಅಚ್ಯುತ ಕೊಡಲು 28 ಮನದಿ ಲಜ್ಜಿತೆಯಾಗಿ ಘನಮಹಿಮ ಮುನಿವಂದ್ಯ ತನಗೆ ವಲ್ಲಭ ನಿಜನಾದನೆನುತ 29 ಆ ಪರಮಹಿಮನು ರೂಪಸಂಪನ್ನ ದ- ಯಾಪರನಾಗಿಯೆ ಉಪೇಂದ್ರ ತಾನೊಲಿದು 30 ಹರಯೆಂಬ ನಾಮದಿ ಹರದಿ ಮಾಲಕ್ಷ್ಮಿಯ ವರಸಿದ ಶ್ರೀಹರಿಯು ಹರದಿಯರ್ಪೊಗಳೆ31 ಬೆಟ್ಟದೊಡೆಯನೆನಿಸಿ ದೃಷ್ಟಿಗೋಚರವಾದ ಶ್ರೀಕೃಷ್ಣ ಮಾಲಕ್ಷುಮಿಗೆ ಆರತಿಯ ತಿಮುರೆ 32 ವರಮಹಾಲಕ್ಷುಮಿಗೆ ವರಾಹತಿಮ್ಮಪ್ಪಗೆ ಅರಸಿನದೆಣ್ಣೆಯ ರಚಿಸಿದ ಪರಿಯು 33
--------------
ವರಹತಿಮ್ಮಪ್ಪ
ಹಿತದಿಂದ ಪೊರೆಯೆನ್ನ | ವಿತತ ಮಹಿಮ ಹರಿಯೇ ಹಿತ ಅಹಿತವೆರಡನ್ನು | ಸಹಿಸುವಂತೇ ಪ ಅತಿ ದಯಾಪರನೆಂದು | ಖತಿದೂರನೆಂದೆನುತಶ್ರುತಿ ನಿಚಯ ಸಾರುತಿದೆ | ಗತಿ ಪ್ರದನೆ ದೇವಾ ಅ.ಪ. ವೇದ ವೇದ್ಯನೆ ದೇವ | ಆದ್ಯಂತ ರಹಿತನೇಕಾದುಕೋ ಎನ್ನನು | ಮೋದಗಳನಿತ್ತೂ ||ಸಾಧನ ಸುಮಾರ್ಗದಲಿ | ಹಾದಿಯನು ಕಾಣದಲೆಬಾಧೆಗೊಳಗಾಗಿಹನ | ಆದರಿಸು ದಯವನಧೀ 1 ಪ್ರಾಣಪತಿಯೇ ಎನ್ನ | ಪ್ರಾಣಗಳು ವಶವಿಲ್ಲಧ್ಯಾನ ಮಾಡುವೆನೆನ್ನ | ಮನನಿಲ್ಲಧ್ಹರಿಯೇ ||ಜ್ಞಾನ ಕರ್ಮೇದ್ರಿಗಳು | ಏನೊಂದು ನಿನ್ನಯಾಧೀನವಿರಲೂ ನಾನು | ಏನು ಮಾಡಲು ಸಾಧ್ಯ 2 ಗೋವರ್ಧನೋದ್ಧರನೆ | ಗೋವುಗಳ ಪರಿಪಾಲಕಾವ ಕರುಣೀ ನಮ್ಮ | ದೇವರ ದೇವಾ ||ಗೋವಿದಾಂಪತಿ ಗುರು | ಗೋವಿಂದ ವಿಠಲನೆನೀವೊಲಿಯದಿನ್ನಾರು | ಕಾವರನು ಕಾಣೆನಯ್ಯಾ 3
--------------
ಗುರುಗೋವಿಂದವಿಠಲರು
ಹೊಂದಿ ಭಜಿಸಿರೆಲೋ ಹರಿನಾಮ ದಯ ಸಿಂಧು ಭಜಕಬಂಧು ಹರಿನಾಮ ಪ ಬಂಧನಿವಾರಣ ಹರಿನಾಮ ಬಹ ಕುಂದು ನಿಂದೆ ದೂರ ಹರಿನಾಮ ಅ.ಪ ವಿಷಯಲಂಪಟಹರ ಹರಿನಾಮ ಮಹ ವ್ಯಸನ ಕಳೆದು ಕಾಯ್ವ ಹರಿನಾಮ ಅಸಮಸೌಖ್ಯಜ್ಞಾನ ಹರಿನಾಮ ಮಾಯಾ ಮುಸುಕು ನಿವಾರಣ ಹರಿನಾಮ 1 ಬೇಡಿದ್ದು ಕೊಡುವುದು ಹರಿನಾಮ ಮಹ ಕೇಡು ತಪ್ಪಿಸುವುದು ಹರಿನಾಮ ಗಾಢಪದವಿನೀಯ್ವ ಹರಿನಾಮ ತಾ ಕೂಡಿ ಅಗಲದಿಹ್ಯ ಹರಿನಾಮ 2 ಗಾನಲೋಲಾನಂದ ಹರಿನಾಮ ಮಹ ದೀನ ದಯಾಪರ ಹರಿನಾಮ ಧ್ಯಾನದಾಯಕ ನಿಜ ಹರಿನಾಮ ಮಮ ಪ್ರಾಣದೊಡೆಯ ಶ್ರೀರಾಮನಾಮ 3
--------------
ರಾಮದಾಸರು
(ಮೂಲ್ಕಿಯ ನರಸಿಂಹದೇವರು)ಜಯತು ಜಯತು ನೃಹರಿ ಬ್ರಹ್ಮಾದಿನಿರ್ಜರಜಯತು ಜಾತಕೈವಾರಿ ಪ.ಜಯ ನಮೋ ಜಗದಾದಿಮಾಯಾಶ್ರಯ ಚರಿತ್ರ ಪವಿತ್ರ ವಿಗತಾ-ಮಯ ಸದಾನಂದೈಕನಿಧಿ ಚಿ-ನ್ಮಯ ದಯಾರ್ಣವ ಭಯನಿವಾರಣ ಅ.ಪ.ಸುಕುಮಾರ ಪ್ರಹ್ಲಾದನ ಬಾಧಿಸೆ ಭಯಾ-ನಕರೂಪತಾಳ್ದಾಕ್ಷಣಸಕಲ ಲೋಕಾಲೋಕಭೀಷಣಪ್ರಕಟನಖಮುಖ ಕ್ರೋಧವಾಹಿನಿಪ್ರಖರ ಜ್ವಾಲಾಮಾಲ ಬದ್ಧ-ಭ್ರಕುಟಿ ಲಾಲಿತ ಭಕುತ ವತ್ಸಲ 1ಪಾರಮೇಷ್ಠಿ ರುದ್ರರೇ ಮುಖ್ಯಸ್ಥ ವೃಂ-ದಾರಕಋಷಿವರರೇವೀರಭದ್ರ ಸುಭದ್ರ ನಂದಿ ಪ್ರ-ವೀರ ಭೈರವ ಭೃಂಗಿ ಮುಖ್ಯರುಶ್ರೀರಮಣ ಕುರು ಕರುಣ ಪಾರಾ-ವಾರಸಮ ಗಂಭೀರನೆಂಬರು 2ಶಾಂತವಾಗದು ಕ್ರೋಧ ಮಾಡಿದುದಾ-ನಂತ ಸಂಕ್ಯಾಪರಾಧಾಎಂತು ನಿರ್ವೃತಿ ಎಂದು ಚಿಂತಾ-ಕ್ರಾಂತರಾಗಿ ಪಿತಾಮಹಾದ್ಯರುಕಂತುಜನನಿಯ ಬೇಡಿಕೊಳಲ-ತ್ಯಂತ ಹರುಷವನಾಂತು ಬಂದಳು 3ಪಟ್ಟದರಸನರೂಪ ಕಾಣುತ ಭಯ-ಪಟ್ಟಳಪೂರ್ವಕೋಪಶ್ರೇಷ್ಠಭಕ್ತಶಿಖಾಮಣಿಯ ಮುಂ-ದಿಟ್ಟೆರಗಿ ಸಂಸ್ತುತಿಸೆ ದನುಜಘ-ರಟ್ಟ ಹೃದಯನಿವಿಷ್ಟ ಕರುಣಾ-ದೃಷ್ಟಿಯಿಂದ ಸಂತುಷ್ಟಗೊಳಿಸಿದ 4ಶ್ರೀ ಲಕ್ಷ್ಮೀನಾರಾಯಣ ದೈತ್ಯೇಂದ್ರ ಹೃ-ಚ್ಛೂಲ ಅಖಿಲ ಕಾರಣಕಾಲಕಾಲಾಂತಕ ತಮಾಲ ಸು-ನೀಲನಿಭ ನಿತ್ಯಾತ್ಮ ಸುರಮುನಿಜಾಲಪಾಲ ವಿಶಾಲ ಗುಣನಿಧಿಮೂಲಿಕಾಲಯಲೋಲ ನರಹರಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯಮಂಗಳಂನಿತ್ಯಶುಭಮಂಗಳಂಪ.ಮಂಗಳ ಮಧು ಕೈಟಭಾಸುರ ಮರ್ದನಗೆಮಂಗಳಮದನ ಕೋಟಿ ಲಾವಣ್ಯಗೆ ||ಮಂಗಳ ಜಗದಂತರಂಗ ಕೃಪಾಂಗಗೆಮಂಗಳ ಯದುಕುಲೋತ್ತಮ ಸಾರ್ವಭೌಮಗೆ 1ಶ್ರೀವತ್ಸಲಾಂಛನಗೆ ಸಿರಿದೇವಿಯರಸಗೆಗೋವರ್ಧನೋದ್ಧಾರ ಗೋವಿಂದಗೆ ||ಮಾವ ಕಂಸನ ಕೊಂದಮಕರ ಕುಂಡಲಧರಭಾವಜನಯ್ಯ ಚಿನ್ಮಯ ಮೂರ್ತಿಗೆ 2ಅಂಬುಜನಾಭಗೆ ಅಖಿಳಲೋಕೇಶಗೆಶಂಭು -ಅಜ - ಸುರ - ಮುನಿವಂದ್ಯ ಹರಿಗೆ ||ಎಂಬತ್ತುನಾಲ್ಕು ಲಕ್ಷ ಜೀವರಾಶಿಗಳಬೊಂಬೆಯ ಮಾಡಿ ಕುಣಿಸುವ ದೇವಗೆ 3ಸಕಲಗುಣ ಪೂರ್ಣಗೆ ಸರ್ವಸ್ವಾತಂತ್ರ್ಯಗೆಅಕಳಂಕ ಆದಿನಿರ್ದೋಷ ಹರಿಗೆ ||ಭಕುತ ವತ್ಸಲನಿಗೆ ಭವರೋಗ ವೈದ್ಯಗೆನಿಖಿಳಜೀವದಯಾಪರಿಪೂರ್ಣಗೆ4ಪನ್ನಗಶಯನಗೆ ಪಾವನ ಮೂರ್ತಿಗೆಸನ್ನುತಾನಂತ ಸದ್ಗುಣ ಭರಿತಗೆ ||ಎನ್ನೊಡೆಯ ಪುರಂದರವಿಠಲ ರಾಯಗೆತನ್ನ ನಂಬಿದವರ ಸಲಹುವ ಮೂರ್ತಿಗೆ 5
--------------
ಪುರಂದರದಾಸರು