ಒಟ್ಟು 101 ಕಡೆಗಳಲ್ಲಿ , 38 ದಾಸರು , 100 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸೋ ಸುಬ್ರಹ್ಮಣ್ಯ ಪಾಲಿಸೋ ಪ ಷಡ್ಶಿರ ಪಾಲಿಸೋ ಅ.ಪ ಕಂಬುಕಂಧರ ಮೂರುತಿ ಸ್ಕಂದ ಷಡ್ಶಿರ 1 ಚಾರು ಮಾರ ಮಯೂರವಾಹನ ಧೀರ ಷಡ್ಶಿರ 2 ಈಶ ಪಾವಂಜೆವಾಸ ಷಡ್ಶಿರ 3
--------------
ಬೆಳ್ಳೆ ದಾಸಪ್ಪಯ್ಯ
ಬಂದನಮ್ಮಾ ಬಂದನಮ್ಮಾ ನಮ್ಮ ರಂಗನು| ಇಂದು ನಮ್ಮ ಪೂರ್ವಾರ್ಜಿತಫಲ ವದಗಿ ಬಂದಿತೆಂದು ಪ ಬಿಸಜಾಸಖ ಶತಕೋಟಕಿ ಸಮತೇಜ ದೊಪ್ಪತಿಹನಖವು| ಅಂದುಗೆ ಗೆಜ್ಜೆಯಿಂದ ಘಲುಘಲುಕೆನುತಾ 1 ಉಟ್ಟ ಪೀತಾಂಬರದ ಮ್ಯಾಲ ವಡ್ಯಾಣವನಿಟ್ಟುಕೊಂಡು| ಕಟ್ಟಿದ ಸು ಕಿಂಕಿಣಿಗಳಿಂದ ಝಣ ಝಣ ಕೆನುತಾ2 ಕರ ಕಡಿಗ ವಂಕಿ ತೋಳ ತಾಯಿತ ಕೇಯೂರವನು| ಕೌಸ್ತುಭ ವನಮಾಲೆಯಿಂದ ಪೊಳವುತಾ 3 ಕುಂಡಲ ಕದಪು ಚಲ್ವಿನಿಂದಾ| ದಾಳಿಂಬ ದಶನಾ ಸುನಶಿಕದೆಸಳು ಕಣ್ಣಿಂದಾ 4 ಸ್ಮರನಾಥನು ಸೋಲಿಪ ಭ್ರೂಲತೆಯು ಫಣಿಯಲ್ಲಿಕ| ಸ್ತೂರಿಯನಿಟ್ಟು ಹರಿಮಯ ಕಿರೀಟಕಾವಳಿಮ್ಯಾಲಿರಿಸಿಕೊಂಡು5 ಪಿಡಿದು ಬಿಂಬಾಧರಕತಂದು| ಪರಿ ಪರಿಯಲೂದುತಾ ಮಹಿಪತಿ ನಂದನ್ನ ಪ್ರೀಯನಾ 6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೆನ್ನ ಸಖಿಯೇ ಕರೆದು ತೋರಿಸೇ ಪ ಕರೆದು ತೋರಿಸೇ ಕಂಜನಯ್ಯಾನಾ| ಕರಿವರ ದಾಯಕ ಕರುಣಾ ಸಾಗರನಾ 1 ಸರಸಿಜ ಲೋಚನ ಮುಕುಟ ಕುಂಡಲನಾ| ಕೌಸ್ತುಭ ಕೇಯೂರ ಧರನಾ 2 ಮದನ ಶರಕ ಗುರು ಮಾಡುವರೇನೇ| ಮಧುಹರ ಮುನಿವದು ಉಚಿತ ವೇನೇ 3 ಒಂದರಗಳಿಗೆಯ ಮರೆದಿರ ಲಾರೆ| ಇಂದು ನೀ ಧನ್ಯಳ ಮಾಡಲೆ ನೀರೆ4 ಬೆರೆದು ಬಿಡುವನಲ್ಲಾ ಸಕಲಂತರ್ಯಾಮಿ| ನೆರೆದನು ಗುರು ಮಹಿಪತಿ ಸುತಸ್ವಾಮಿ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೊ ಶ್ರೀವೆಂಕಟರಮಣ ತವಪಾ- ದಾರಾಧಕರನು ಪೊರೆಯಲು ಕರುಣಾಪೂರ್ಣ ಪ ಬಾರೋ ನಮಿಸುವೆ ಪೂರ್ಣ ಕೃಷ್ಣಾ ತೀರದಲಿ ಮಾಂಡವ್ಯ ಋಷಿಗಳ ಘೋರ ತಪಸಿಗೆ ಒಲಿದು ಗುಡೆಬಲ್ಲೂರು ಮಂದಿರನೆಂದು ಕರೆಸುತ ಅ.ಪ ಎಲ್ಲ ಕಡೆಗೆ ನೆಲೆಸಿರುವ ಸಿರಿ ನಲ್ಲನೊಲಿಸಲು ತಪವನು ಗೈವ ಬಲ್ಲಿದ ಮಾಂಡವ್ಯರಿರವ ಕಂಡು ಗೊಲ್ಲರು ಮಾಡಿದರನು ದಿನ ಶೇವಾ ಪುಲ್ಲನಾಭನು ದರುಶನವ ಮುನಿ ವಲ್ಲಭಗೆ ತೋರಿಸಲು ಬೇಡಿದ ಗೊಲ್ಲರೆನ್ನಯ ಭಕುತರವರಿಂದಲ್ಲಿ ಪೂಜೆಯಗೊಳ್ವದೆಂದನು 1 ಬಾರೊ ಬೇಗನೆ ದ್ವಿಜರಾಜ ಧ್ವಜ ವೇರಿ ಪೊರೆದೆಯೊ ಬಂದು ಕರಿಯೆ ಕರಿ ರಾಜ ತೋರೋ ಚವತರಣ ಸರೋಜಯುಗ್ಮ ಸಾರಿ ಭಜಿಸುವ ಭಕುತರ ಕಲ್ಪ ಭೂಜ ಮಾರಜನಕನೆ ಚಾರುಕನಕ ಕಿ ರೀಟ ಕುಂಡಲಹಾರಪದಕ ಕೇಯೂರ ಸಾಲಂ- ಕಾರ ವಪು ಶೃಂಗಾರದಲಿ ರಥವೇರಿ ಮೆರೆಯುತ 2 ವೇದವೇದ್ಯನೆ ನಿನ್ನ ಪ್ರೇಮಾ ಪಡೆದ ಪಾದ ಮಹಿಮೆಯ ವರ್ಣಿಸಿದ ದೇವ ಶರ್ಮಾ ಬೋಧಾದಿ ಸದ್ಗುಣಧಾಮ ಪಾಹಿ ಮೇದಿನಿ ವಿಬುಧ ಪೂಜಿತ ಪೂರ್ಣಕಾಮ ಮೇದಿನಿಯೊಳು ಶ್ರೀದ ನಿನ್ನಯ ಪಾದಯುಗಳವ ಕಂಡು ಹರುಷದಿ ಪಾದುಕೆಯ ರಚಿಸಿದಗೆ ಒಲಿದ ಅಗಾಧ ಮಹಿಮನೆ ಮೋದಗರೆಯಲು 3 ಒಂದಿನ ನಿಶಿಯೊಳುತ್ಸವದಿ ದಣಿ ದಂದು ಮಲಗಿರಲರ್ಚಕರು ದೇವಾಲಯದಿ ಬಂದು ಚೋರರು ಅತಿಜವದಿ ನಿನಗೆ ಪೊಂದಿಸಿದೊಡವೆ ಗಳನು ಚೌರ್ಯತನದಿ ಮಂದ ಮತಿಗಳು ಒಯ್ಯುತಿರೆ ಖಳ ವೃಂದಕಂಗಳು ಪೋಗೆ ತುತಿಸಲು ಚಂದದಿಂ ಬರೆ ಹೇಮನಾಮವ ಕುಂದದಲೆ ಮಾಡಿಸಿದರಾಕ್ಷಣ 4 ನೀರಜಾಸನ ಮುಖ್ಯ ತ್ರಿದಶ ಗಣದಿಂ- ಪಂಕಜ ಭಕ್ತಪೋಷ ಸೂರಿಜನರ ಸಹವಾಸ ಕೊಡು ಧಾರುಣಿಯೊಳು ಕೃಷ್ಣ ತೀರನಿವಾಸ ಬಾರೊ ನಿನ್ನನು ಶೇರಿದವರW ವಾರಿವಾಹ ಸಮೀರ ಕಾರ್ಪರ ನಾರ ಶಿಂಹಾತ್ಮಕನೆ ಯನ್ನಯ ಭವ ಭಯ ದೂರಮಾಡಲು 5
--------------
ಕಾರ್ಪರ ನರಹರಿದಾಸರು
ಬಾರೋ ಬಾರೋ ರಂಗಯ್ಯಾ | ಅಂದುಗೆ ಗೆಜ್ಜೆ | ಝಣ ಝಣ ಝಣ ಝಣ ರವದಿಂದಾ ಪ ಕಡೆಗಣ್ಣು ಹೊಳವನು | ಅಡಿಗಡಿಗೆ ದೋರುತಾ | ಎಡಬಲದೋಳಿಂದೊಲಿದು | ದುಡುದುಡು ದುಡು ನಲಿಯುತಾ 1 ಪದಹತಿಗೆ ಮಯೂರಾ | ವದನ ತಗ್ಗಿಸುವಂತೆ | ಮುದದಿ ಗೆಳೆಯರವೆರಸಿ | ಒದಗಿ ಧಿಗಿಧಿಗಿ ಧಿಗಿಲೆನುತಾ 2 ಅಂದು ಉದಯದಲೆದ್ದು | ಬಂದು ಬೆಣ್ಣೆಯ ಬೇಡೆ | ಕಂದಾ ನೀ ಕುಣಿಯೆನಲು | ನಿಂದು ತೋರಿದ ಭಾವದಿಂದ 3 ಬಿರಮುಗುಳ ನಗುತಾ | ಪೆರೆ ನೊಸಲೊಳು ಮೆರೆವಾ | ಕರ್ಣ ಕುಂಡಲಾ | ಭರದಿಂದಾ ಒಲಿಯುತಾ 4 ಗುರು ಮಹಿಪತಿ ಸ್ವಾಮಿ | ಹಾರೈಸುವಾ ನಯನಕ | ಹರುಷದಿ ತೃಪ್ತಿಗೈವಾ | ಕರುಣಾ ಸಾಕಾರದಿಂದಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೋ ವಾರಿಜ ಚರಣಾ ಪ ಭೂರಿ ದುರಿತ ಹರಣಾ 1 ಕ ರುಣಾ 2 ದ್ವಿಜರಾಜ ಕುಲಾಭರಣಾ 3 ಸುರಪಾರಿ ನಂದನನ ಕಾಯಿದೇ ಹರಿಣಾ | ಸುರಪಾದಿ ಮುನಿ ಸ್ಪುರಣಾ 4 ಗುರು ಮಹಿಪತಿ ಸುತ ಪ್ರಭು ಕೇಯೂರಾಭರಣಾ | ಇಹಪರಾನಂದ ಪೂರಣಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬುಗುರಿ ಆಡೋ ತಮ್ಮ ಬುಗುರಿ ಆಡೊ ಪ ಬಗೆ ಬಗೆ ಜನುಮದಿ ತಿರುಗಿ ತಿರುಗಿ ಬಂದೊದಗತನದನುಭವ ಪರಿಕಿಸಿ ನೋಡೊ ಅ.ಪ. ತನುವೆಂಬುದೆ ಕೊರಡಿನ ತುಂಡುದಿನದ ಕರ್ಮವೆ ಕೊನೇರು ದುಂಡುಮನವೆಂಬುವ ಮೊಳೆಯನು ಚುಚ್ಚಿಕೊಂಡುಘನ ಹರುಷದಿ ಕರದಲಿ ಕೊಂಡು 1 ಭವವೆಂಬುದೆ ನಿನ್ನ ಜಾಳಿಗೆ ನೋಡೋತವಕದಿ ಬಿಡದಲೆ ಬಿಗಿಗಿಸುತ್ತ್ಯಾಡೋಸವಿಯನುಂಡು ನೀ ಹರಿಯನು ಬೇಡೊಜವದಲಿ ಝಾಡಿಸಿ ಭರದಿ ಬೀಸಾಡೊ 2 ಧರೆಯ ಗದುಗಿನ ವೀರನಾರಾಯಣನಚರಣದಿ ಮೊಳೆಯೂರಿ ತಿರುಗುತಲಾಡೊಕರಣಗಳಳೆದು ಏಕ ಚಿತ್ತದಿಸ್ಮರಿಸುತ ನಿಂತು ನಿದ್ದೆಮಾಡೊ 3
--------------
ವೀರನಾರಾಯಣ
ಭಜಿಸಿದ್ಯಾ | ವೆಂಕಟನಾ ನೀ | ಭಜಿಸಿದ್ಯಾ ಪ ಭಜಿಸಿದ್ಯ ಈ ಭಾಗ್ಯನಿಧಿಯ | ನೋಡು | ತ್ರಿಜಗವಂದಿತ ಗುಣಾಂಬುಧಿಯಾ ||ಆಹ|| ಪಂಕಜ ಕರ್ಣಿಕೆ ವಾಸ | ಅಜ ಸುರಾರ್ಚಿತ ಪಾದರಜ ತಮದೂರನ್ನ ಅ.ಪ. ಮನ ಸೋಲಿಸುವ ಸುಲಲಾಟ | ಚನ್ನ | ಫಣಿಗೆ ಕಸ್ತೂರಿನಾಮ ಮಾಟ | ನ ಮ್ಮನು ಪಾಲಿಸುವ ವಾರೆನೋಟ |ಆಹ| ಕನಕ ಮೋಹನ ಕುಂಡಲಾ ಕರ್ಣ ಮಿನುಗುವ ಕದವು ಆವಿನ ಸೋಲಿಪ ನಿತ್ಯಾ1 ಭೃಂಗಕುಂತಳ ನೀಲಕೇಶ | ಹುಬ್ಬು | ಚಾಪ ವಿಲಾಸ | ಉ | ತ್ತುಂಗ ಚಂಪಕ ಕೋಶನಾಸ | ರಸ ರಂಗು ತುಟಿ ಮಂದಹಾಸ || ಆಹ || ತಿಂಗಳು ಯೆಳೆ ಬೆಳೆದಿಂಗಳು ಮೀರಿ ಭೂ ಕೃತಿ ತಿರುವೆಂಗಳ ಸ್ವಾಮಿಯ 2 ಪರಿಮಳವೀಳ್ಯ ಕರ್ಪೂರ | ಇಟ್ಟು | ಜಲಧಿ ಗಂಭೀರ | ದಂತ ಪರಿಪಜ್ಞೆ ಸಮ ವಿಸ್ತಾರ ||ಆಹ || ಮಿನುಗುವನಂತ ಚಂದೀರ ತೇಜಾಧಿಕ ಮುಖ ಪರಿಪರಿ ವೇದ ಉಚ್ಚರಿಸುವ ಚತುರಾರ 3 ಬಕುಳಾರವಿಂದ ಮಲ್ಲೀಗೆ | ಅದು | ಕುರುವಕ ಪನ್ನೀರು ಸಂಪಿಗೆ | ಭೂಚಂಪಕ ಜಾಜಿ ಯಿರುವಂತಿಗೆ | ಪೂಕೇತಕಿ ಮರುಗ ಶಾವಂತಿಗೆ ||ಆಹ|| ಸಕಲ ಪೂತರುವಿರೆ ವಿಕಸಿತ ಮುಕುಳಿತ ಮಕರಂದ ಮೊರದ್ವಂದ್ವ ಕಸ್ತೂರಿಯ ನಿಂದು4 ಕರತಾಳರೇಖೋಪರೇಖ | ಕಾಂತಿ | ಅರುಣಸಾರಥಿ ಮಯೂಖ | ಬೇರೆ | ಪರಿ ಶೊಭಿತ ಹಸ್ತ ಶಂಖ | ಗದೆ | ಧರಿಸಿದ ಚಕ್ರ ನಿಶ್ಶಂಕ || ಆಹ | ಸರಿಗೆ ಕೌಸ್ತಭಮಣಿ ಸಿರಿವತ್ಸವನ ಮಾಲೆ ವೈಜಯಂತಿ ಮಂಜರಹೀರ ಹಾರನ್ನ5 ಕಡಗ ಕಂಕಣ ಮುದ್ರೆ ಬೆರಳ | ಪಾಣಿ | ನಿಡಿತೋಳ ಕಕುಭುಜಿ ಕೊರಳ ಸ್ಕಂಧ ವಿಡಿ ಸಪ್ತವರಣ ವಿಸರಳ | ಬೆನ್ನು | ಮುಡಿಯವಿಟ್ಟ ಮಣಿಹವಳ ||ಆಹ | ಝಡಿತದ ಪವಳ ವಡಸೀದ ಕೇಯೂರ ವಡನೆ ಕಾಯಿಕ ಕೀರ್ತಿ ವಡಲೀಲಿ ಮೆರೆವನ್ನ6 ಮುತ್ತು ವೈಢೂರ್ಯ ಪ್ರವಾಳ | ಪಚ್ಚೆ | ಕೆತ್ತಿದ ಪದಕನ್ಯಾವಳ ಸುತ್ತ ಸುತ್ತಿದ ಸನ್ಮುಡಿವಾಳ | ಇತ್ತ ತುತಿಪ ಜನಕೆ ಜೀವಾಳ ||ಆಹ || ಪ್ರತ್ಯೇಕವಾಗಿ ತೂಗುತ್ತಿಹ ಸರಗಳ ಸುತ್ತುಲಸಿಯ ಮಾಲೆ ಚಿತ್ರವಾಗಿರೆ ಬಹಳ 7 ಕೇಸರಿ ಅಂಬರ | ಗೋರೋ ಚನ ನಖಚಂದ ನಗಾರು | ಪೆಚ್ಚಿ | ತೆನೆ ಮೃಗನಾಭಿ ಪನ್ನೀರ | ವೆಳ | ಘನಪರಿಮಳ ಗಂಧಸಾರ ||ಆಹ || ಸೊಗಸು ಸಲಿಸುತ್ತ ಒಪ್ಪುವ ಘನರುಹ ತ್ರಿವಳಿಯಾ 8 ತ್ರಿವಳಿ ಉಪಗೂಢ ಜಠರ | ಅಖಿ | ಳಾವನೀ ಧರಿಸಿದಾ ಧೀರಾ | ಮೇಲೆ | ಕುಸುಮ ಮಂದಿರಾ | ಮೃಗದೇವ ಉಡಿನಡು ಧಾರಾ ||ಆಹ || ಭಾವ ಕಿಂಕಿಣಿ ತೋಳಲಿವಾಸನಾ ಬಿರು ದಾವಳಿಕೊಂಡರು ದೈತ್ಯಾವಳಿ ಹಾರನ್ನಾ 9 ಊರು ಜಾನು ಜಂಘ ಗುಲ್ಫ | ವಿ ಚಾರ ಶಕ್ರ ಮಾತು ಅಲ್ಪ | ಎನ್ನ ತೋರುನೆಯ ಅಗ್ರ ಸ್ವಲ್ಪ | ಗುಣ | ಸಾರಮಾಡಿಪ್ಪ ಸಂಕಲ್ಪ ||ಆಹ || ವಾರಣಕರದಂತೆ ಹಾರೈಸು ಈ ತನೂ ಪುರ ಕಡಗಾ ಗೆಜ್ಜೆ ಚಾರುಚರಣ ಪೆಂಡ್ಯಾ10 ಪಾದ | ಪಾಪ ಪಾದ | ಕಾಮ ಪಾದ | ಬಹು ಪಾದ ||ಆಹಾ|| ಅನಂತ ಚಿನ್ಮಯ ಒಮ್ಮೆ ನೀನೇ ಗತಿಯೆಂಬ ಮಾನವಗೆ ಬಂದು ಕಾಣಿಸಿಕೊಂಬನ11 ಮೃದುತಾಳಾಂಗುಲಿನಿಸಿ ಭಾಸ | ರಕ್ತ ಪದತಳ ಧ್ವಜ ವಜ್ರಾಂಕುಶ | ಚಕ್ರ ಪದುಮ ಚಿಹ್ನೆ | ನಿರ್ದೋಷ | ಸುಧಿ ಸುಧ ಕಥಾಪಾಠ ಸರಸÀ ||ಆಹ|| ತ್ರಿದಶನಾಯಕ ಶಿವ ವಿಧಿಗಮುಗುಟ ಪಾದದಲಿ ಸಮರ್ಥವಾದರು ನೋಡು ತರುವಾಯ 12 ಆಪದ್ರಕ್ಷಕ ಸುರಾಧ್ಯಕ್ಷ | ಜಗ | ದ್ವ್ಯಾಪಕ ಕರುಣಾಕಟಾಕ್ಷ | ಜಾಗ್ರತ್ | ಸ್ವಪ್ನದಲಿ ನೀನೆ ದಕ್ಷಾ | ನಗೆ | ಆಪನ್ನರಿಗೆ ನೀನೆ ವೃಕ್ಷಾ ||ಆಹ || ರೂಪರೂಪಾಂತರ ವ್ಯಾಪಾರ ಮಾಳ್ಪನ್ನ ಆಪಾದ ಮೌಳಿ ಪರಿಯಂತರ ನೀನು 13 ಹಿಂದಾಣ ಅನುಭವ ಧಾನ್ಯ | ಲೋಹ | ತಂದು ಸಂಪಾದಿಸೋ ಜ್ಞಾನ | ಭಕ್ತಿ | ಯಿಂದ ಮುಂದಕೆ ನಿಧಾನ | ಚಿತ್ತ | ಯಿಂದು ಕೊಂಡಾಡೋ ಮುನ್ನೀನ ||ಆಹ|| ಬಂಧನ ಹರಿಸಿ ಆನಂದಾವ ಕೊಡುವ ಮು- ಕುಂದ ಅನಿಮಿತ್ತ ಬಂಧು ವೆಂಕಟನಾ ನೀ14 ನಿತ್ಯ | ನೀಲ | ಪುಣ್ಯ | ವ್ರಜವ ಪಾಲಿಸುವ ವಿಶಾಲ | ವಿತ್ತು | ನಿಜದೊಳಗಿಡುವ ಈ ಕೋಲ ||ಆಹ|| ವ್ರಜದಲ್ಲಿ ಪುಟ್ಟಿದ ಸುಜನಾರಾಂಬುಧಿ ಸೋಮ | ವಿಜಯವಿಠ್ಠಲರೇಯ ಗಜರಾಜವರದನ್ನ 15
--------------
ವಿಜಯದಾಸ
ಭೀಮ ಶಾಮ ಕಾಮಿನಿಯಾದನು ಪ ಭೀಮ ಶಾಮ ಕಾಮಿನಿಯಾಗಲು ಪತಿ ಪುಲೋಮ ಜಿತುವಿನ ಕಾಮಿನಿ ಸಕಲ ವಾಮ ಲೋಚನೆಯ- ರಾಮೌಳಿ ಕೂಗುತಲೊಮ್ಮನದಿ ಪಾಡೆಅ.ಪ ದಾಯವಾಡಿ ಸೋತು ರಾಯ ಪಾಂಡವರು ನ್ಯಾಯದಿಂದ ಸ್ವಾಮಿಯ ಸೇವೆಯೆಂದು ಕಾಯದೊಳಗೆ ಅಸೂಯೆಪಡದಲೆ ಮಾಯದಲ್ಲಿ ವನವಾಯಿತೆಂದು ರಾಯ ಮತ್ಸ್ಯನಾಲಯದೊಳು ತಮ್ಮ ಕಾಜು ವಡಗಿಸಿ ಅಯೋನಿಜೆ ದ್ರೌಪ- ದೀಯ ವಡಗೂಡಿ ಆಯಾಸವಿಲ್ಲದೆ ಅಯ್ವರು ಬಿಡದೆ ತಾವಿರಲು 1 ಬಾಚಿ ಹಿಕ್ಕುವ ಪರಿಚಾರತನದಲಾ ಪಾಂಚಾಲಿಗೆ ಮತ್ಸ್ಯನಾ ಚದುರೆಯಲ್ಲಿ ಆಚರಣೆಯಿಂದ ಯಾಚಕರಂದದಿ ವಾಚವಾಡಿ ಕಾಲೋಚಿತಕೆ ನೀಚರಲ್ಲಿಗೆ ಕೀಚಕನಲ್ಲಿಗೆ ಸೂಚಿಸಲು ಆಲೋಚನೆಯಿಂದಲಿ ನಾಚಿಕೆ ತೋರುತಲಾ ಚೆನ್ನೆ ಪೋಗಲು ಕರ ಚಾಚಿದನು 2 ಎಲೆಗೆ ಹೆಣ್ಣೆ ನಿನ್ನೊಲುಮೆಗೆ ಕಾಮನು ಕಳವಳಿಸಿದ ನಾ ಗೆಲಲಾರೆನಿಂದು ವಲಿಸಿಕೊ ಎನ್ನ ಲಲನೆಯ ಕರುಣಾ- ಜಲಧಿಯೆ ನಾರೀ ಕುಲಮಣಿಯೆ ಬಳಲಿಸದಲೆ ನೀ ಸಲಹಿದಡೇ ವೆ- ಗ್ಗಳೆಯಳ ಮಾಡಿಪೆನಿಳೆಯೊಳೆನ್ನೆ-ಆ- ಖಳನಾ ಮಾತಿಗೆ ತಲೆದೂಗುತಲಿ ಅ- ನಿಳಜನೆನ್ನ ನೀ ಸಲಹೆಂದ 3 ಮೌನಿ ದ್ರೌಪದಿ ಮೌನದಲ್ಲಿ ಹೀನನಾಡಿದಾ ಊನ ಪೂರ್ಣಗಳು ಮನೋಭಾವವ ಧೇನಿಸಿ ನೋಡುತ್ತ ಹೀನಕೆ ತಿಳಿದಳು ಮನದಲಿ ದೀನವತ್ಸಲ ಕರುಣವು ಮೀರಿತು ಕಾನನದೊಳ್ಕಣ್ಣು ಕಾಣದಂತಾಯಿತು ಏನು ಮಾಡಲೆಂದು ಜಾಣೆಯು ಚಿಂತಿಸಿ ಅನಿಲಗೆ ಬಂದು ಮ-ಣಿದಳು4 ಚೆಲ್ವೆ ಕಂಗಳೇ ನಿಲ್ಲೆ ನೀ ಘಳಿಗೆ ಸಲ್ಲದೆ ಆತನ ಹಲ್ಲನು ಮುರಿದು ಹಲ್ಲಣವ ಹಾಕಿ ಕೊಲ್ಲುವೆ ನಾನೀಗ ತಲ್ಲಣಿಸದಿರೇ ಗೆಲ್ಲುವೆನೆ ಪುಲ್ಲನಾಭ ಸಿರಿನಲ್ಲನ ದಯವಿ- ದ್ದಲ್ಲಿಗೆ ಬಂದಿತು ಎಲ್ಲ ಕಾರ್ಯಗಳ ಸಲ್ಲಿಸಿ ಕೊಡುವನು ಬಲ್ಲಿದ ನಮಗೆ ಮಲ್ಲಿಗೆ ಮುಡಿಯಾ ವಲ್ಲಭಳೆ 5 ಎಂದ ಮಾತಿಗಾನಂದ ಮಯಳಾಗಿ ಬಂದಳಾ ಖಳನ ಮಂದಿರದೊಳು ನೀ- ನೆಂದ ಮಾತಿಗೆ ನಾನೊಂದನು ಮೀರೆನು ಕಪಟ ಸೈರಂಧಿರಿಯೂ ಕುಂದಧಾಭರಣವ ತಂದು ಕೊಡಲು ಆ- ನಂದದಿಂ ಪತಿಯ ಮುಂದೆ ತಂದಿಟ್ಟಳು ಮಂದರೋದ್ಧರನ ಚಂದದಿ ಪೊಗಳುತ ಇಂದು ಸುದಿನವೆಂದ ಭೀಮ6 ಉಟ್ಟ ಪೀತಾಂಬರ ತೊಟ್ಟ ಕುಪ್ಪಸವು ಇಟ್ಟತಿ ಸಾದಿನ ಬಟ್ಟು ಫಣಿಯಲ್ಲಿ ಕಟ್ಟಿದ ಮುತ್ತಿನ ಪಟ್ಟಿಸ ಕಿವಿಯಲ್ಲಿ ಇಟ್ಟೋಲೆ ತೂಗಲು ಬಟ್ಟ ಕುಚ ಘಟ್ಟಿ ಕಂಕಣ ರ್ಯಾಗಟೆ ಚೌರಿ ಅ- ದಿಟ್ಟಂಥ ಈರೈದು ಬೆಟ್ಟುಗಳುಂಗರ ಮುಟ್ಟೆ ಮಾನೆರಿ ದಟ್ಟಡಿವೊಪ್ಪತಿ ಕಟ್ಟುಗ್ರದ ಜಗ ಜಟ್ಟಿಗನು 7 ತೋರ ಮೌಕ್ತಿಕದ ಹಾರ ಸರಿಗೆ ಕೇ ಯೂರ ಪದಕ ಭಂಗಾರ ಕಾಳಿಸರ ವೀರ ವಿದ್ರುಮದ ಭಾಪುರಿ ಉ- ತ್ತಾರಿಗೆ ವರ ಭುಜಕೀರುತಿಯು ಮೂರೇಖೆಯುಳ್ಳ ಉದಾರ ನಾಭಿವರ ನಾರಿ ನಡು ಉಡುಧಾರ ಕಿಂಕಿಣಿ ಕ- ಸ್ತೂರಿ ಬೆರಸಿದ ಗೀರುಗಂಧವು ಗಂ- ಬೂರ ಲೇಪ ಶೃಂಗಾರದಲಿ8 ವಂಕಿ ದೋರ್ಯವು ಕಂಕಣ ಒಮ್ಮೆಯೀ- ಚಾಪ ಭ್ರೂ ಅಲಂಕಾರ ಭಾವ ಪಂಕಜಮಾಲೆ ಕಳಂಕವಿಲ್ಲದಲೆ ಸಂಕಟ ಕಳೆವ ಪಂಕಜಾಂಘ್ರಿ ಝಂಕಾರಕೆ ಲೋಕ ಶಂಕಿಸೆ ನಾನಾ- ಅಂಕುರ ವೀರ- ಕಂಕಣ ಕಟ್ಟಿದ ಬಿಂಕದಿಂದಲಾ- ತಂಕವಿಲ್ಲದೆಲೆ ಕಂಕಾನುಜ 9 ಕಂಬು ಕೊರಳು ದಾಳಿಂಬ ಬೀಜ ದಂತ ದುಂಬಿಗುರುಳು ನೀಲಾಂಬುದ ಮಿಂಚೆಂ- ದೆಂಬ ತೆರದಲಾ ಅಂಬಕದ ನೋಟ ತುಂಬಿರೆ ಪವಳ ಬಿಂಬಾಧರ ಜಂಬೀರ ವರ್ಣದ ಬೊಂಬೆಯಂತೆಸೆವ ತಾಂಬೂಲ ಗಿಳಿಯೆಂಬ ಗಂಭೀರ ಪುರುಷನು ಹಂಬಲಿಸಿದ ತಾ ಸಂಭ್ರಮದಿ 10 ಸಂಧ್ಯಾದೇವಿಯೊ ಇಂದ್ರನ ರಾಣಿಯೊ ಚಂದ್ರನ ಸತಿಯೋ ಕಂದರ್ಪನಾಕರ- ದಿಂದ ಬಂದ ಅರವಿಂದದ ಮೊಗ್ಗೆಯೊ ಅಂದ ವರ್ಣಿಪರಾರಿಂದಿನಲಿ ಇಂದು ರಾತ್ರಿ ಇದೆ ಎಂದಮರಮುನಿ ಸಂದೋಹ ಕೊಂಡಾಡೆ ಇಂದುಮುಖಿಯೊಡ ನಂದು ತಾ ನಾಟ್ಯದ ಮಂದಿರಕೆ ನಗೆ- ಯಿಂದ ಬಂದ ಕುಂತಿನಂದನನು11 ಭಂಡ ಉಡಿಯಲಿ ಕೆಂಡವೊ ಪರರ ಹೆಂಡರ ಸಂಗ ಭೂಮಂಡಲದೊಳೆನ್ನ ಗಂಡರು ಬಲು ಉದ್ದಂಡರು ನಿನ್ನನು ಕಂಡರೆ ಬಿಡರೋ ಹಂಡಿಪರೋ ಲಂಡ ಬಾಯೆಂದು ಮುಕೊಂಡು ಕೈದುಡುಕಿ ಅಂಡಿಗೆಳೆದು ಅಖಂಡಲನ ಭಾಗ್ಯ ಮಂಡೆ ಮೊಗ ಗಲ್ಲ ಡುಂಡು ಕುಚ ಮುಟ್ಟಿ ಬೆಂಡಾದನು 12 ಸಾರಿಯಲ್ಲ ಮಕಮಾರಿಯಿದೆನುತ ಶ- ರೀರ ವತಿ ಕಠೋರವ ಕಂಡು ಜ- ಝಾರಿತನಾಗಿ ನೀನಾರು ಪೇಳೆಂದು ವಿ- ಕಾರದ್ಯಬ್ಬರಿಸಿ ಕೂರ್ರನಾಗಿ ತೋರು ಕೈಯೆಂದು ಸಮೀರನು ಎದ್ದು ವಿ ಚಾರಿಸಿಕೋ ಎನ್ನ ನಾರಿತನವೆಂದು ವೀರ ಮುಷ್ಟಿಯಿಂದ್ಹಾರಿ ಹೊಡೆಯಲು ಕ್ರೂರನು ರಕ್ತವ ಕಾರಿದನು 13 ಹಾರಿ ಹೊಯ್ಯತಲೆ ಮೋರೆಲಿದ್ದ ಕಳೆ- ಸೂರೆಯಾಯಿತು ಪರನಾರೇರ ಮೋಹಿಸಿ ಪಾರಗಂಡವರುಂಟೆ ಶರೀರದೊಳಿದ್ದ ಮಾರುತೇಶ ಹೊರಸಾರಿ ಬರೆ ಧೀರ ಭೀಮರಾಯ ಭೋರಿಡುತ ಹಾರಿ ಕೋರ ಮೀಸೆಯನೇರಿಸಿ ಹುರಿಮಾಡಿ ನಾರಿಮಣಿ ಯಿತ್ತ ಬಾರೆಂದು ಕರೆದು ಸಾರಿದನು ನಿಜಾಗಾರವನು 14 ಸರಸವು ನಿನಗೆ ವಿರಸವು ಆಯಿತು ಕರೆಸೆಲೊ ಈ ಪುರದರಸಾ ಕಳ್ಳನ ನರಸಿಂಹನ ನಿಜ ಅರಸಿಗೆ ಮನವನು ಮಂದರ ಅರಸನೆ ಅರಸಿ ನೋಡುತಿರೆ ವರೆಸಿದನಾ ಜೀವ ದೊರಸೆಯ ಖೂಳನ ಬೆರೆಸಿ ಸವಾಂಗ ಸಿರಿ ವಿಜಯವಿಠ್ಠಲ ಅರಸಿನ ಲೀಲೆಯ ಸ್ಮರಿಸುತಲಿ 15
--------------
ವಿಜಯದಾಸ
ಭೋಗೀಂದ್ರ ಭೂಷಣಾ ಪ ಶ್ರೀ ವಾಸುದೇವನ ಮಿತ್ರಾ ದಿನೇಶ ತೇಜ ಪವಿತ್ರಾ ಸರ್ವೇಶ ಮಂಜುಳಗಾತ್ರಾ ಗುಹೇಶ ಸುಚರಿತ್ರಾ1 ಖಳ ತಾರಕಾಸುರ ಮಥನಾ ಬಲು ಧೀರ ಪದ್ಮನ ದಮನಾ ಸುವಿಚಾರಿ ವಲ್ಲಿಯ ರಮಣಾ ಮಯೂರ ವಾಹನಾ 2 ಅರಿ ಭಂಜ ರಕ್ಷಕ ವಾಸಾ ರಂಜನಾನತ ಪೋಷಾ ಧನಂಜಯ ಭಾಸಾ 3
--------------
ಬೆಳ್ಳೆ ದಾಸಪ್ಪಯ್ಯ
ಮಂಜುಳಾ ಪಾಶಾಂಕುಶದ ರಂಜಿತವರ ಬಾಹುದಂಡಮಂಜುಳಹಾರ ಕೇಯೂರಾದಿಭೂಷಮೌಂಜಿ ಕೃಷ್ಣಾಜಿನಧರನಿತ್ಯತೋಷಕಂಜ ಬಾಂಧವ ಶತರೂಪಿಸಂಕಾಶಕುಂಜರವದನಾ ಹಸೆಗೇಳು 1 ಪಾದ ಪಯೋಜರಾವಣಾಸುರಗರ್ವಹರ ಗಾನಲೋಲಪಾವನತರಸುರಕಾರ್ಯಾನುಕೂಲಗ್ರಾವತನೂಜೆಯ ಪ್ರೇಮದ ಬಾಲಶ್ರೀ ವಿಘ್ನರಾಜ ಹಸೆಗೇಳು 2 ಸೂರ್ಯ ಸು-ತ್ರಾಮಾಚ್ಯುತ ಚಂದ್ರ ವಂದ್ಯಹೇಮಾದ್ರಿಸನ್ನಿಭ ಕೋಮಲಗಾತ್ರರಾಮಣೀಯಕ ಕಾಂಚನಯಜ್ಞ ಸೂತ್ರಸೋಮಶೇಖರನ ಸಮ್ಮೋಹದ ಪುತ್ರಶ್ರೀಮದ್ಗಣೇಶ ಹಸೆಗೇಳು 3 ಕಾಮಕರ್ಮಾತೀತ ಸನ್ಮುನಿಜಾಲ ಮಾನಸರಾಜಹಂಸಬಾಲಾರ್ಕಶತರೂಪಿಕಾಂತಿ ಶರೀರಸ್ಥೂಲಕಂಧರ ದುಃಖದುರಿತವಿದೂರಫಾಲಲೋಚನ ಚಂದ್ರಗರ್ವಾಪಹಾರಬಾಲವಟುರೂಪ ಹಸೇಗೇಳು4 ಸಂತತ ಬಹುವಿಧಲೀಲಾಸಂತತ ಮುದಿತಾದ್ರಿಬಾಲಾಅಂತರಹಿತ ಶುಭಗುಣಗಣಸಾಂದ್ರದಂತದೀಧಿತಿನಿರ್ಜಿತಶರಶ್ಚಂದ್ರಕಾಂತವಿಗ್ರಹವಿಪದದ್ರಿಮಹೇಂದ್ರಚಿಂತಿತಾರ್ಥಪ್ರದನೇ ಹಸೆಗೇಳು 5
--------------
ಕೆಳದಿ ವೆಂಕಣ್ಣ ಕವಿ
ಮಾನನಿಧಿ ಶ್ರೀಕೃಷ್ಣ ಮಧುರೆಗೈದುವನಂತೆಏನು ಪಥವಮ್ಮ ನಮಗೆ ಪ ಮಾನವೇನಿನ್ನಿದಕೆ ಮಾನಿನಿಯರೆಲ್ಲರುಆಣೆಯನು ಕಟ್ಟಿವನಿಗಡ್ಡ ನಿಲ್ಲುವ ಬನ್ನಿ ಅ.ಪ. ಕಳ್ಳತನವೇ ನಮ್ಮ ವಲ್ಲಭರು ಈ ಸುಳುವುಎಲ್ಲವನು ಬಲ್ಲರಮ್ಮಒಲ್ಲದಲೆ ನಮ್ಮ ಬಿಟ್ಟರೆ ಒಳಿತು ವನಜಾಕ್ಷಎಲ್ಲಿಗೈದಿದರೆ ನಾವಲ್ಲಿಗೈದುವ ಬನ್ನಿ1 ಇಂದುದಯದಿ ಮೊದಲು ಇಂದೀವರಾಕ್ಷಿಯರುಗೋವಿಂದನ ಬಳಿಗೈದುವಒಂದು ಕಡೆಯಲಿ ಕುಳಿತು [ವನಜಾಕ್ಷಿಯೋರ್ವ ಕೈಯಂದಲಲ್ಲಿಗೆ ಕಳುಹಿ] ಕೇಳ್ವೆವೇನು ಪೇಳುವನೋ 2 ಹರಿಣಾಂಕವದನೆಯರು ನೆರೆದು ಬರುತಿರೆ ಕಂಡುಪರಮ ಹರುಷದಲಿ ಬಂದುಸರಿ ರಾತ್ರಿಯೊಳು ಹೀಗೆ ಬರುವುದೇನೆಂದೆನಲುಎರಗಿ ಬಿನ್ನೈಸಿದರು ಅಂಬುಜದಳಾಕ್ಷನಿಗೆ3 ಶ್ಲೋಕ ಹಲವು ಕಾಲವು ನಿನ್ನ ಸ್ನೇಹ ಸುಖವ ಹಾರೈಸಿಕೊಂಡಿರುತಿಹಲಲನಾವ್ಯೂಹವ ಬಿಟ್ಟು ಅಕ್ರೂರನೊಡನೆ ನೀ ಮಧುರೆಗೆ ಪೋದರೆಕಳೆಯಲಾಪವೇ ಕಾಂತ ಕೇಳು ದಿನವ ಈ ಕಂತುವಿನ ಬಾಧೆಗೆಘಳಿಗೊಂದು ಯುಗವಾಗಿ ತೋರುತಿÀಹುದೋ ಜಲಜಾಕ್ಷ ನೀನಿಲ್ಲದೆ ಪದ ಮಾಧವ ಕೃಪಾಕರನೆ4 ಶ್ಲೋಕ ಬಾಲಭಾವದಲಿಂದಲಂಗಸುಖವ ಬಹುಬಗೆಯಲಿಂದುಳುಹಿದೆಲೋಲಲೋಚನೆ ನಿಮ್ಮ ಬಿಟ್ಟು ಪುರದ ನಾರೇರಿಗಾನೊಲಿದರೆನೀಲಕಂಠನು ಮೆಚ್ಚ ನೋಡು ನಿಜವ ನಿಮಗ್ಯಾತಕೀ ಸಂಶಯಕಾಲಕ್ಷೇಪವನಲ್ಲಿ ಮಾಡೆ ಕಿಂಚಿತ್ಕಾಲದೊಳಾನೈದುವೆ ಪದ ಪಾಲಿಸಿರೆನಗಪ್ಪಣೆಯ ಪಾಟಲ ಸುಗಂಧಿಯರೆಕಾಲಹರಣವ ಮಾಡದೆನಾಳೆ ಉದಯಕೆ ಪೋಗಿ ನಾಲ್ಕೆಂಟು ದಿನದೊಳುವ್ಯಾಳೆಗಿಲ್ಲಿಗೆ ಬರುವೆ ಕಾಳಾಹಿವೇಣಿಯರೆ 5 ಶ್ಲೋಕ ಮಾರನಯ್ಯನೆ ಕೇಳು ಅಲ್ಲಿರುತಿಹ ನಾರೇರು ಬಲು ನಿಪುಣರೋನೀರಜಾಂಬಕ ನೋಡು ನಿನ್ನ ಮನವ ನಿಮಿಷಾರ್ಧದೊಳುಸೆಳೆವರೋಮಾರಕೇಳಿಯ ಶಾಸ್ತ್ರಮರ್ಮವರಿದ ಆ ನಾರೇರು ನೆರೆಯಲುಗಾರು ಪಳ್ಳಿಯಲಿಪ್ಪ ಗೋಪಿಯರ ವಿಚಾರಂಗಳ ಸ್ಮರಿಪೆಯಾ ಪದ ಬಿಲ್ಲ ಹಬ್ಬವೆ ಸುಳ್ಳು ಬಿಸುರುಹಾಕ್ಷಿಯರಿಕ್ಷುಬಿಲ್ಲಿನುತ್ಸವಕೆ ನಿನ್ನಖುಲ್ಲ ಅಕ್ರೂರನನು ಕಳುಹಿ ಕರೆಸಿದರಲ್ಲಿವಲ್ಲಭೆಯರನ್ನು ನೆರೆವೆ ನಮ್ಮೆಲ್ಲರನು ಮರೆವೆ 6 ಶ್ಲೋಕ ನಾರೀಹಾರ ಕಿರೀಟ ಕುಂಡಲಯುಗ ಕೇಯೂರವಲಯಾದಿಗಳುಚಾರು ವಸ್ತ್ರ ಸುಗಂಧ ಪುಷ್ಪನಿಚಯ ಹಾರಂಗಳಂ ಧರಿಸದೆಮಾರ ಕೇಳಿಯ ಮಾತಿಲಿಂದಲವರ ಮನಸೆಮ್ಮೊಳೊಂದಾಗದೆನಾರೇರೊಲುಮೆಯುಂಟೆ ಲೋಕದೊಳಗೆ ನನ್ನ್ಯಾತಕೆ ದೂರ್ವಿರೇ ಪದ ಮಲ್ಲಯುದ್ಧವ ನೋಡಬೇಕೆನುತ ನಮ್ಮಾವಅಲ್ಲಿಗೆ ಕರೆಸಲದಕೆಇಲ್ಲದಪವಾದ ಈ ಸುಳ್ಳು ಸುದ್ದಿಗಳ ನೀ -ವೆಲ್ಲ ಸೃಜಿಸಿದಿರಿ ಸರಿಯಲ್ಲ ನಿಮಗಿಳೆಯೊಳಗೆ 7 ಶ್ಲೋಕ ವಾರಿಜಾಂಬಕ ವಾರಿಜಾರಿವದನ ವಾರಾಶಿಜಾವಲ್ಲಭವಾರಿವಾಹನಿಭಾಂಗ ವಾಸವನುತ ವಾಕೆಮ್ಮದೊಂದಾಲಿಸೋವಾರಿಜೋದ್ಭವನಯ್ಯ ನಿನ್ನ ವಿರಹ ವಾರಾಶಿಯೊಳು ಮುಳುಗಿಹನಾರೀನಿಚಯವ ಪಾರುಗಾಣಿಸು ಕೃಪಾನಾವೆಯಲಿಂದೆಮ್ಮನು ಪದ ಮಾರನೆಂಬುವನು ಬಲು ಕ್ರೂರ ನಮ್ಮಗಲಿ ನೀ ಊರಿಗ್ಹೋದುದನು ಕೇಳಿವಾರಿಜಾಸ್ತ್ರವನು ಎದೆಗೇರಿಸೆಮ್ಮನು ಬಿಡದೆಹೋರುವನು ಅಹÉೂೀ ರಾತ್ರಿಯಲಿ ತಪಿಸುತ 8 ಶ್ಲೋಕ ನೀಲಕುಂತಳೆ ಕೇಳು ನಿಮ್ಮ ಮನೆಯೊಳಾ ನೆಲುವಿನ ಮ್ಯಾಲಿನಪಾಲು ಬೆಣ್ಣೆಯ ಕದ್ದು ಮೆದ್ದು ಬಹಳ ಕಾಲಂಗಳಂ ಕಳೆದೆನೆಬಾಲೆ ಮನ್ಮಥಬಾಣದೆಚ್ಚು ತಪಿಸೆ ಬಹು ಬಗೆಯಲಿಂದುಳುಹಿದಲೋಲಲೋಚನೆ ನಿಮ್ಮೊಳಾನು ಬಹಳ ಜಾರತ್ವಮಂ ಮಾಳ್ಪೆನೇ ಪದ ಬಟ್ಟಗಂಗಳೆ ನಿಮ್ಮ ಬಿಟ್ಟು ಘಳಿಗಿರಲಾರೆದುಷ್ಟ ಕಂಸನು ಕರೆಸಲುಅಟ್ಟಿದರೆ ಪೋಗದಿರೆ ಸಿಟ್ಟಿನಿಂದಲಿ ವ್ರಜಕೆಅಟ್ಟುಳಿಯ ಮಾಡುವನು ಅಂಬುಜಸುಗಂಧಿಯರೆ 9 ಶ್ಲೋಕ ಪತಿ ಸುತ ಪಿತೃ ಮುಖ್ಯ ಭ್ರಾತೃ ಬಾಂಧವರು ಎಂಬಅತಿಶಯ ನಮಗಿಲ್ಲ ಆಲಿಸೋ ಮಾತನೆಲ್ಲರತಿಪತಿಪಿತ ನೀನೇ ರಾತ್ರಿಯೊಳು ಕೊಳಲನೂದೆಕ್ಷಿತಿಪತಿ ನಿನ್ನೆಡೆಗೆ ಕ್ಷಿಪ್ರದಿಂ ಬಂದೆವಲ್ಲೊ ಪದ ಬಾಲತನದಲಿ ಯಮುನಾ ತೀರದಲಿ ನೀ ವತ್ಸ-ಪಾಲನೆಯ ಮಾಡುತಿರಲು ಆಕಾಲ ಮೊದಲಾಗಿ ಈ ವ್ಯಾಳೆ ಪರಿಯಂತರವುಕಾಲುಘಳಿಗಗಲದಿಹ ಕಾಂತೆಯರ ತ್ಯಜಿಸುವರೆ10 ಶ್ಲೋಕ ಪರಿಪರಿಯಲಿ ನಿಮ್ಮ ಪಾಲಿಸಿ ನೋಡೆ ಮುನ್ನಕರುಣಕೆ ಕೊರತಿಲ್ಲ ಕಾಂತೆ ಕೇಳೆನ್ನ ಸೊಲ್ಲತ್ವರಿತದಿ ಬಾರದಲೆ ತಡೆದು ನಾ ನಿಂತರಲ್ಲೆಸರಸಿಜಭವ ಮಾರರಾಣೆ ಕಾಣೆ ಪ್ರವೀಣೆ ಪದ ಕ್ಲುಪ್ತ ಕಾಲಕೆ ಬಂದುನೆರೆಯದಿದ್ದರೆ ನಾನು ಪರಮ ಪುರುಷೋತ್ತಮನೆ11 ಶ್ಲೋಕ ಮಾರನೆಂಬುವನಂದೆ ಮಡಿದನು ಶಿವನ ಮೂರನೆ ಕಣ್ಣಿಲಿನಾರೇರಿಲ್ಲದೆ ನಾಭಿಯಿಂದ ಪಡೆದ ಆ ಬ್ರಹ್ಮನೆಂಬಾತನ ನಾರಿ ಈರ್ವ ಕುಮಾರರಾಣೆ ಹರಿಯು ತಾನಿಟ್ಟನೇನೆಂಬೆವೆಮಾರಿ ಹೊರಗಿನ ಹೊರಗೆ ಹೊಯಿತೆಂಬೊ ತೀರಾಯಿತೆ ಭಾವುಕಿ ಪದ ಹಲವು ಮಾತುಗಳ್ಯಾಕೆ ಜಲಜಾಕ್ಷ ನಿನ್ನ ಪದನಳಿನಗಳ ನೆರೆ ನಂಬಿಹಒಲುಮೆಯಲ್ಲಿರುತಿಪ್ಪ ಲಲನೆಯರನೆಲ್ಲರನುಸಲಹೊ ಸಲಹದೆ ಮಾಣು ರಂಗವಿಠಲರೇಯ12
--------------
ಶ್ರೀಪಾದರಾಜರು
ಮಾನವಾತ್ಮರೆ ನಿಮ್ಮ ಮಾನಸ ಪೂಜೆಯಿಂಮಾನವನಿಗೆ ಮೋಕ್ಷ ಸಾಧಿಸೀರಿ ಪ ರತ್ನ ನಿರ್ಮಿತ ಸುಚರಿತ್ರ ಮಂಟಪವನ್ನುಸತ್ಯಭಾಮೆಯ ಪತಿಗಿತ್ತು ಪೂಜಿಸುವೆ1 ಆಸನ ನೀಡುವೆ ಶೇಷಶಯನನೆ ಇಲ್ಲಿವಾಸ ಮಾಡಿ ಎನ್ನ ಸೇವೆ ಸ್ವೀಕರಿಸು2 ಧ್ಯಾನ ಮಾಡುವೆ ನಿನ್ನ ಗಾನ ಮಾಡುವೆ ನಿನ್ನಜ್ಞಾನ ಭೂಷಣ ಶೋಭಿತಾನನಾಂಬುಜ 3 ಧೃತ ವೇಣುಗೋಪಾಲ ಬಾರೋ ಮನಸಿಗೆ ತೋರೊಮೂರುತಿ ನಿನ್ನಯ ಸಮೀರ ಸಂಸ್ತುತನೆ 4 ಅಘ್ರ್ಯ ನೀಡುವೆ ನಾನು ಅನಘ್ರ್ಯ ವಸ್ತುಗಳಿಂದಸ್ವಘ್ರ್ಯಗ್ರಹಣ ಮಾಡೋ ಭರ್ಗ ಸೇವಿತನೆ 5 ಪಾದ್ಯ ನೀಡುವೆ ವೇದ ವೇದ್ಯ ಮಹಿಮನೇ ಮುನ್ನಾವದ್ಯ ಕಳೆದು ಭವದಿಂದ ಉದ್ಧರಿಸೆನ್ನ 6 ಆಚಮನವ ನೀಡುವೆ ಹೇ ಚತುರಾನನೇಶವಾಚಾಮಗೋಚರ ಮೋಚಕ ಹೇತು 7 ಸುದತಿ ಮೋಹನ ತವಮಧುಪರ್ಕವನೀವೆ ಮುದದಿ ಸ್ವೀಕರಿಸು 8 ಮತ್ತೆ ಆಚಮನವನಿತ್ತು ಪೂಜಿಪೆ ಕರವೆತ್ತಿ ಮುಗಿವೆ ಸರ್ವಭಕ್ತ ಪೋಷಕನೆ 9 ಗಂಗೆ ಯಮುನೆ ಗೋದಾ ತುಂಗೆ ಜಲವ ತಂದಿಹೆ ಅ-ನಂಗ ಜನಕ ಮಾಡೋ ಅಭ್ಯಂಗ ಸ್ನಾನ 10 ನಿರಿಗೆಗಳನೆ ಹಾಕಿ ಜರದ ಪೀತಾಂಬರ ಗ-ರುಡವಾಹನ ನೀನು ಧರಿಸು ಮಧ್ಯದಲಿ 11 ಹಾರ ಕಿರೀಟ ಕಾಂಚಿ ನೀರ ನೂಪುರ ಸು-ಕೇಯೂರ ನೂಪುರನೀವೆ ಧಾರುಣಿಪತಿಗೆ 12 ಸ್ವರ್ಣ ರಚಿಸಿದ ಸೂತ್ರವನು ಕೊಡುವೆ ಲಕ್ಷ್ಮೀರನ್ನ ಸೌರಭ ಗಂಧವನು ಸ್ವೀಕರಿಸು 13 ವಾಸುದೇವನೆ ದಿವ್ಯ ನಾಸಿಕೇಂದ್ರಿಯದಿಂದಈಸು ಧೂಪದ ಗಂಧ ವಾಸನೆ ಗ್ರಹಿಸೋ 14 ಮರುಗು ಮಲ್ಲಿಗೆ ಜಾಜಿ ಸುರಗಿ ಸೇವಂತಿಗೆಸುಮಗಳ ಪರಿಮಳ ಧರಿಸೋ ಮಧ್ಯದಲಿ 15 ಹತ್ತು ಅಂಗಗಳಿಂದ ಉತ್ತಮ ಸುಧೂಪವಎತ್ತುವೆ ನಿನಗೆ ಸರ್ವೋತ್ತಮ ಹರಿಗೆ16 ಆಕಳ ಘೃತದ ಅನೇಕ ದೀಪಗಳ್ಹಚ್ಚಿಶ್ರೀಕರ ತವ ಮುಖಾವಲೋಕಿಸುತ್ತಿಹೆನು 17 ಏಕಾರತಿ ಗೋಪಿಪ್ರೀತನೆ ಬೆಳಗುವೆನಾಕ ನಾಯಕ ಸುರಲೋಕ ಸೇವಿತನೆ 18 ಆರು ವಿಧದ ಅನ್ನ ಸಾರು ಪಾಯಸ ಭಕ್ಷ್ಯಭೂರಿ ಶಾಕಗಳೀವೆ ನೀರಜಾಂಬಕನೆ 19 ಮಾರಜನಕನೆ ಮುತ್ತಿನಾರತಿ ಬೆಳಗುವೆಶ್ರೀರಾಮನೆ ನಿನ್ನ ಮೋರೆಯ ತೋರೊ20 ಛತ್ರ ಚಾಮರ ವ್ಯಜನ ದರ್ಪಣ ಪರ್ಯಂಕಕರ್ಪುರ ತಾಂಬೂಲವಿತ್ತು ಪೂಜಿಸುವೆ 21 ಹತ್ತಾರು ಉಪಚಾರ ಚಿತ್ರ ಚರಿತನೆ ನಿನಗೆಅರ್ಥಿಯಲಿ ಕೊಡುವೆನು ಮುಕ್ತಿ ನೀಡೆನಗೆ 22 ಇಂದಿರೇಶನೆ ನಿನ್ನ ಮುಂದೆ ತುತಿಪನೆ ನಿಂತುನಂದಬಾಲನೆ ಕೃಪೆಯಿಂದ ನೋಡೆನ್ನ 23
--------------
ಇಂದಿರೇಶರು
ಮುಚ್ಚದಿರೆಲೊ ಮುರಾರಿ ಕಣ್ಣ ಪ ಮಂಗಳಕರ ಮಕರಂದ ಸೂಸುತಲಿರೆ ಕಂಗೊಳಿಸುವರೂ ಕಯ್ಯೂರಿ ಕೃಷ್ಣ 1 ಮುತ್ತಿನ ಹಾರಾ ಪದಕ ಮುದ್ರಿಕೆಯು ಒತ್ತುತಲಿಹವೊ ಬೆರಳೂರಿ 2 ಸುಲಭರರಸ ಕೇಳು ಶ್ರೀದವಿಠಲನ ಶೌರಿ 3
--------------
ಶ್ರೀದವಿಠಲರು
ರಥವನೇರಿದ ರಥಗಾತ್ರ ಪಾಣಿ | ರಥಪತಿ ದಶರಥ ಸುತ ದಶರಥ ನೃಪ ಭಾಗೀ | ರಥಿ ವಿನುತಾ ಸು | ರಥನಯ್ಯ ಮನೋರಥ ದೇವ ಪ ಕರಿ ಭಯಂಕ ಹರ ಹರಿಣಾಂಕಾ | ಕಿರಣಶತ ಧಿಕ್ಕರಿಸುವ ದೇವಾ || ವರಮಣಿ ಭಕ್ತ ವರದಾಯುದಧಿ ತುರಗವು | ಪರತರ ತಮ ತರರಸ | ಪರಮ ಮಂಗಳ ಪುರುಷ ಪ್ರಧಾನಂ | ಪ್ರವಿಷ್ಠ ಭಾ | ಸುರ ಕೀರ್ತಿಹರ ನಿರುತ ಪ್ರದರು ಸುರಪತಿ 1 ಮಣಿಪ್ರಚುರ ಮುತ್ತಿನ ಮುಕುಟ ಸು | ಫಣಿ ಕಸ್ತೂರಿ ಕಂಕಣ ಕೇಯೂರ ಕಾಂ| ಕೌಸ್ತುಭ ಸೂರ್ಯನಗೆಲ್ಲ್ಲೆ | ವನಮಾಲೆ ಹರಿಮಣಿ ಪದಕ ಪಾ | ವನ ಪೀತಾಂಬರ ಮಿನಗುವ ಕಾಂಚಿ | ಝಣ ಝಣ ಮಹಾ | ಧ್ವನಿ ಚರಣ ಭೂಷಣವಾಗಿಯೂ ಮಾ | ನಿನಿ ಕೂಡಾ 2 ಎತ್ತಿದ ಶ್ವೇತಾತಪತ್ರ ಚಾಮೀಕರ | ವಿತ್ತ ನಭ ತುಳುಕುತ್ತಲಿರೆ ಧ್ವಜ | ಮಾತ್ರ ಬಂದಾಗಿ ತೂಗುತ್ತಿರಲು | ಸುತ್ತಲು ಊದುವ ತುತ್ತುರಿ ಶಂಖ | ವತ್ತಿ ಬಾರಿಸುವ ಮತ್ತೆ ವಾದ್ಯಗಳು | ತುತ್ತಿಸುವ ಮುನಿ | ಉತ್ತಮ ಜನ ಬಾ | ಗುತ್ತ ವಡನೆ ಬರುತಿರಲು 3 ವಸು ರುದ್ರಾದಿತ್ಯ ವಸುಜನರ ಪಾ | ಲಿಸುವೆನೆಂದು ದರಶನವು ಸರಸಿಜಗದಾಧರಿಸಿಕೊಂಡು ಅಷ್ಟ ರಸ ನಾಮಕ ಹರುಷದಿಂದ | ನಸುನಗುತ ನೀಕ್ಷಿಸಿಕೊಳುಂತ ಆ | ಲಸ ಮಾಡದೆ ರಂ | ಜಿಸುವ ಲೀಲಾಮಾನಸ ವಿಗ್ರಹ ಮೆ | ಚ್ಚಿಸಿದ ಜನರ | ವಶವಾಗಿಪ್ಪ ರಾಕ್ಷಸ ರಿಪು 4 ವನಧಿ ಚಿನ್ಮಯ ಉ | ಭಯಾ ಭಯ ಹಾರೆ | ಪಯೋವಾರಿ ನಿಧಿ | ಶಯನ ಚತುರ್ಬೀದಿಯಲಿ ತಿರುಗಿ | ಪ್ರೀಯದಿಂದಲಿ ಸ | ತ್ಕ್ರಿಯವಂತ ಜಯ ಜಯ ಪ್ರದಾ | ಸಾರಥಿ ನಿ | ರಯ ವಿದೂರ ವಿಜಯವಿಠ್ಠಲ ಸಾ | ಹಾಯವಾಗುವ ಗಿರಿಯ ವೆಂಕಟರಾಯ ಬಂದಾ 5
--------------
ವಿಜಯದಾಸ