ಒಟ್ಟು 205 ಕಡೆಗಳಲ್ಲಿ , 54 ದಾಸರು , 201 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಮಲ ಲೋಚನನೆ ಎನ್ನತಡಿಯ ಸೇರಿಸೊ ತರಣಿಶತಕೋಟಿ ತೇಜ ಪ ಕಾಕು ಇಂದ್ರಿಯಗಳೆಂಬ ಕಟುಕರಿಗೆ ನಾ ಸಿಲುಕಿಮೇಕೆಯಂದದಿ ಬಾಯಿ ಬಿಡುತಿಪ್ಪೆನುಸಾಕಾರ ರೂಪ ಸರ್ವೋತ್ತಮನೆ ನೀ ಕರುಣಾಕರನೆಂಬ ಪೆಂಪುಂಟಾದಡೀಗೆನ್ನ 1 ಕೇಸರಿ ಎಂಬಛಲ ಬಿರುದು ತಾಳ್ದ ದೇವರ ದೇವ ನೀನೆನ್ನ 2 ಹಾದಿಗಾಣದೆ ತೊಲಗಿ ಪೋಪೆನೆಂದರೆ ಭಾವಬೂದಿಯೊಳಗಾಡಿ ಮುಳುಗಾಡುತಿಹೆನೊಭೂಧರನ ತಾಳ್ದ ಕೂರ್ಮಾವತಾರನೆ ಬಾಡದಾದಿಕೇಶವರಾಯ ಬೆನ್ನಲೆತ್ತಿಕೊಂಡು 3
--------------
ಕನಕದಾಸ
ಕರುಣಾಕರ ಕೃಷ್ಣ ಪ ಮರೆಯದೆ ಕಾಯೊ ಮೊರೆಯಿಡುವೆ ದೇವ ಅ.ಪ. ಸರಸಿಜಾಕ್ಷಸ್ವಾಮಿ ಮೆರೆದ ಸಭೆಯೊಳು ಕರುಣದಿ ಕಾಯ್ದೆಯೊ 1 ಅನಿಮಿತ್ತ ಬಂಧುವೆ ಹರೆ ಅನುದಿನ ಎನ್ನ ಮಾನ ನಿನ್ನಾಧೀನ 2 ಕರಿಗಿರೀಶÀ ಶ್ರೀಶ ದುರುಳನ ಬಾಧೆಯ ಪರಿಹರಿಸೋ ದೇವ 3
--------------
ವರಾವಾಣಿರಾಮರಾಯದಾಸರು
ಕರುಣಾಕರ ದೇವಾ ಶೀತಾ ಚರನೋಕೆ ಕೇಶವಾ ಪ ಪಾತಕಾರಿ ವೋಂ ಪ್ರಸನ್ನಹನುಮನೆ ಪ್ರೀತಿಯೊಳಿರಿಸೆನ್ನಂ ನುತಿಸುವನಾ ನಿನ್ನಂ ಶರಣಂ 1 ಲಂಕಾಪುರದೀ ಕಿಂಕಿಣಿಧಾರಿ ಲಂಕಿಣಿಕೆ ಸಂಹಾರಿ ವಾಹನ ಹೌರ ಬ್ರಹ್ಮಚಾರಿ ಶರಣ ಕರು 2 ಪರಾಂಧಮ ತುಮ ಪ್ರಹ್ಲಾದಾರ್ಚಿತ ಪರಂದೇಹಿ ಸನ್ನಾಸಿ ಗೀರ್ವಾಣಭಾಷಿ | ಶರಣಂ 3
--------------
ಚನ್ನಪಟ್ಟಣದ ಅಹೋಬಲದಾಸರು
ಕರುಣಾಕರ ದೇವಾಧಿ ದೇವಾ ತವ ಪಾದವ ಪ ನೆರೆನಂಬಿದೆ ಜವನಂಜಿಕೆ ಜವದಿ ಓಡಿಸೋ 1 ಮುರಭಂಜನಾ ನರಸಾರಥಿಯೇ ಶಿರಬಾಗಿ ನಾ ಪ್ರಾರ್ಥಿಸುವೆ 2 ಶ್ರೀಶಾಮಸುಂದರ ವಿಠಲಾ ಅಸುರಾಂತಕ ಪಶುಪಾಲಕ 3
--------------
ಶಾಮಸುಂದರ ವಿಠಲ
ಕರುಣಾಕರ ಧರಣೀಧರೇಂದ್ರ ಪ ದಶರಥಸುಪುತ್ರ ಶಶಧರ ಸುವಕ್ತ್ರ ಪಶುಪತಿಮಿತ್ರನೆ ಪೊರೆಯೊ ಎನ್ನನು 1 ವನರುಹದಳಾಕ್ಷ ದನುಭುಜವಿಪಕ್ಷ ಮುನಿಜನ ಸುರಕ್ಷ ರಕ್ಷಿಸೆನ್ನನು ದೇವನೆ 2 ಸುರಜನ ಸುಪೋಷ ಖರಹರ ಸುರೇಶ ನಿರತವು ನಾ ನಿನ್ನ ನಮಿಸುವೆನೈ ಹರೇ 3 ದಾನವಖಂಡನ ಧೇನುಪುರೀಶನೆ ಮಾನವ ಪುಂಗವ ದೇವನೆ ಪೊರೆಯೈ 4
--------------
ಬೇಟೆರಾಯ ದೀಕ್ಷಿತರು
ಕರುಣಾಕರ ಪರಮೇಶ್ವರ ಗುರುತಮ ಕಲ್ಯಾಣಧಾಮ ಪ. ಸುರುಚಿರ ಪೀತಾಂಬರಧರ ನರಕೇಸರಿ ಕರಿವರವರದ ನಮೋ ನಮಃ ಅ.ಪ. ಮಂದರಧರ ಮಧುಸೂದನ ವೃಂದಾವನಸಂಚರಣ ಚಂದ್ರಕೋಟಿಸದೃಶಾನನ ವಂದನೀಯ ನಂದಕುಮಾರವ್ರಜೇಶ್ವರ 1 ಭುಜಗಶಯನ ಭೂತಭಾವನ ಭಜಕಜನೋದ್ಧರಣನಿಪುಣ ಕುಜನಜನಾರಣ್ಯದಹನ ವಾಹನ ಮೋಹನ2 ಮಾತರಿಶ್ವಸಖ ಲೋಕೈಕ ನಾಥ ಲಕ್ಷ್ಮೀನಾರಾಯಣ ವೀತಭಯ ವಿಧಾತ ರುಕ್ಮಿಣೀ- ಪ್ರೀತ ತ್ರಿಗುಣಾತೀತನೆ ಫಲ್ಗುಣಸೂತನೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕರುಣಾಕರ ಪರಮೇಶ್ವರ ಗುರುತಮ ಕಲ್ಯಾಣಧಾಮ ಪ. ಸುರುಚಿರ ಪೀತಾಂಬರಧರ ನರಕೇಸರಿ ಕರಿವರವರದ ನಮೋ ನಮಃ ಅ.ಪ. ಮಂದರಧರ ಮಧುಸೂದನ ವೃಂದಾವನಸಂಚರಣ ಚಂದ್ರಕೋಟಿಸದೃಶಾನನ ವಂದನೀಯ ನಂದಕುಮಾರವ್ರಜೇಶ್ವರ 1 ಭುಜಗಶಯನ ಭೂತಭಾವನ ಭಜಕಜನೋದ್ಧರಣನಿಪುಣ ಕುಜನಜನಾರಣ್ಯದಹನ ವಾಹನ ಮೋಹನ 2 ಮಾತರಿಶ್ವಸಖ ಲೋಕೈಕ ನಾಥ ಲಕ್ಷ್ಮೀನಾರಾಯಣ ವೀತಭಯ ವಿಧಾತ ರುಕ್ಮಿಣೀ- ಪ್ರೀತ ತ್ರಿಗುಣಾತೀತನೆ ಫಲ್ಗುಣಸೂತನೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಾಕರ ಭಕ್ತ ಪಾರಾಯಣ ಸತ್ಯನಾರಾಯಣ ಪ ಭಕ್ತಿ ಭಾವದೆ ನಿನ್ನ ಸೇರಿದೆನು ವ್ರತ ಮಾಡಿದೆನು ಸತ್ಯ ದೇವನೆ ಕೃಪೆ ತೋರುವುದು ವರ ನೀಡುವುದು ಸತ್ಯ ದೇವೇಶನೆÀ ಬೇಡುವೆನು ನುತಿ ಮಾಡುವೆನು 1 ಗಂಧ ಪುಷ್ಪಾಕ್ಷತೆ ದೀಪಗಳಿಂ ಪಂಚಫಲಂಗಳಿಂ ಇಂದಿರೇಶನೆ ನಿತ್ಯ ಭಾವಿಸಿದೆ ವಂದಾರು ಮಂದಾರ ಪಾಲಿಸೆನ್ನನು ಬೇಡಿಕೊಂಬೆನು 2 ಮೌನೀಶ ವಂದ್ಯನೆ ಸರ್ವೇಶನೆ ದೀನಪಾಲಕನೆ ಸುಜ್ಞಾನ ಭಾವಿಪುದು ನಿಜತೋರುವುದು ದಯೆಯಿಂದ ಬಹು ವಿಧದಿಂದ 3
--------------
ಬೇಟೆರಾಯ ದೀಕ್ಷಿತರು
ಕರುಣಾಕರನೀತ ಕರಿಭಯ ಹರಿದಾತ ಹರಿಪರಂದೈವೀತ ಗುರುನಾಥ ಧ್ರುವ ಮೂರುಗುಣರಹಿತ ಮೂರುಲೋಕ ವಂದಿತ ಮುರಹರನಹುದೀತ ಗುರುನಾಥ 1 ಸುರಜನ ಪೂಜಿತ ಪರಮಾನಂದಭರಿತ ತಾರಕನಹುದೀತ ಗುರುನಾಥ 2 ಪತಿತಪಾವನೀತ ಪಿತಾಮಹನ ಪಿತ ದಾತನಹುದೀತ ಗುರುನಾಥ 3 ಅನುದಿನ ಸಾಕ್ಷಾತ ದೀನದಯಾಳುನೀತ ಗುರುನಾಥ 4 ಭಕ್ತವತ್ಸಲನೀತ ಶಕ್ತಸದ್ಗುರುನಾಥ ಮುಕ್ತಿದಾಯಕನೀತ ಗುರುನಾಥ 5 ಜನವನದೊಳಗೀತ ಮನೋಭಾವಪೂರಿತ ಆನಂದೋ ಬ್ರಹ್ಮನೀತ ಗುರುನಾಥ6 ಗುಹ್ಯಕೆ ಗುಹ್ಯನೀತ ಬಾಹ್ಯಂತ್ರ ಸದೋದಿತ ಮಹಾಮಹಿಮನೀತ ಗುರುನಾಥ 7 ಇಹಪರ ನಮಗೀತ ಮಹಿಪತಿ ಪ್ರಾಣನಾಥ ಸಹಾಕರನಹುದೀತ ಗುರುನಾಥ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣಾಕರಾ ಕಮಲಾರಮಣ ಕರಿರಾಜ ಬಂಧನ ಹರಣಾ ಸುರ ಬ್ರಹ್ಮ ಮುಖಾರ್ಚಿತ ಚರಣಾ ಶರಣಾಗೆಲೋ ದೀನೋದ್ಧರಣಾ ಪ ಅತಿಸುಂದರ ನಂದ ಕುಮಾರಾ ಸುತ ನಾಗೈ ತಂದನು ಮಾರಾ ಅತನೇ ಕುಸುಮದ ಶರೀರಾ ಸುತ ಸದ್ಗುಣ ಗಣ ಮಂದಾರಾ ಪ್ರತಿಯುಗದಲಿ ಧರಿಸೈವತಾರಾ ಕ್ಷಿತಿಯೊಳು ಪಾಲಿಪ ಸುರನಿಕರಾ 1 ಜಲಧಿ ಯೊಳಗೆರಡು ರೂಪಾದೆ ಸಲೆ ವೇದಾಮೃತವನು ತಂದೆ ಬಲಿದೀ ಕ್ರೂರಾಂಗವ ವಿಡಿದೆ ಇಳೆಸಲೆ ಪ್ರಲ್ಹಾದರ ಹೊರೆದೆ ನೆಲೆ ಪ್ರಥಮಾಶ್ರಮದಲಿ ನಿಂದೇ ಬಲಿ ಜಮದಗ್ನ್ಯರ ತೋಷಿಸಿದೆ 2 ಎರಡನೆ ವರ್ಣದೊಳಗೆ ಜನಿಸಿ ಸುರ ಪಾಂಡವರೇಳಿಗೆ ಬಲಿಸಿ ನೆರೆ ಅಂತ್ಯಯುಗದಿ ಅವತರಿಸಿ ಪುರಹರ ದ್ವಿಜರಭಿಮತ ಸಲಿಸಿ ಗುರು ಮಹಿಪತಿ ಪ್ರಭು ಕರುಣಿಸಿ ಹೊರಿಯೋ ನಿನ್ನೆಚ್ಚರ ನಿಲಿಸಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕರುಣಾರಸಮಾರ್ಜಿತ ಸಂತಾಪಂ ಪ ಮುನಿಮಾನಸ ಪೂಜಿತ ನಿರ್ಲೇಪಂ ವನರುಹಾಸನ ಮುಖ್ಯ ವಂದಿತ ಗೌರವಂ ನರ ಪುಂಗವಂ ಮನುಕುಲಾರ್ಚಿತ ಪಾದಪಂಕಜ ರಾಘವಂ ಸುರಧೇನುವಂ 1 ಶೋಭಿತ ಪಾವನ ಕೀರ್ತಿಯುತಂ ಪಶುಪತಿ ಪ್ರಿಯಮವ್ಯಯಂ ಸುರಪೂಜಿತ ಗುಣಭೂಷಿತಂ ಶಶಧರಾನನೆ ಜಾನಕೀ ಪ್ರಿಯ ಭಾಸುರಂ ಕರುಣಾಕರಂ 2 ಖರದೂಷಣ ಶಾಸಕ ದೇವಂ ಶರಣಾಗತ ಸಂರಕ್ಷಣ ನಿರತಂ ಚರಣಪಲ್ಲವನುನ್ನ ದುಂದುಭಿಕಾಯಂ ಅಕ್ಷಯಂ ಅದ್ವಯಂ ಸುರವರಂ ವರಧೇನುನಾಮಕ ನಗರನಾಯಕಂ ಹಾಯಕಂ 3
--------------
ಬೇಟೆರಾಯ ದೀಕ್ಷಿತರು
ಕರುಣಿಸಲಾರೆಯಾ ಇನ್ನಷ್ಟು ನೀ ಸಿರಿಪತಿಯಾ ಪ ಕರುಣಿಸಲಾರೆಯಾ ಕರುಣಾಕರನೆಂಬೊಬಿರುದನುಳಿಸಿಕೊಳ್ಳಲಾರೆಯಾ ನೀನರಿಯಾ ಅ.ಪ. ಬುವಿಯೊಳು ನಿನ್ನ ದಯವಿರದಿರೆ ಕಣಲವಸಹ ಸರಿಯದಯ್ಯಾಭವದೊಳು ದೇವ ನಿನ್ನ ಕೃಪೆಯಾಗಲುಜವದೊಳೀಗಿನ ಸುಖ ಸ್ರವಿಸಿ ಪೋಗುವದಯ್ಯಾ 1 ಈಗೆಲ್ಲ ನಿನ್ನದಯೆದಿಂದೀ ಬಾಳ್ವೆಸಾಗಿದೆ ಬಲ್ಲೆನಯ್ಯಾಹೋಗಿಸಿ ಸಂಸಾರ ಬೇಗುದಿಯನು ನೀನುಬೇಗ ನಿನ್ನ ಧ್ಯಾನಭೋಗವ ನೀಡಯ್ಯಾ 2 ತುಷ್ಟಿಹೊಂದಲು ನೀ ಜೀಯಾ ಕಷ್ಟದ ಪರಿಯಾನಷ್ಟಮಾಡಲು ಅರಿಯಾಸೃಷ್ಟಿಯ ಜೀವಿಗದೃಷ್ಟ ಎಷ್ಟೆಷ್ಟೆಂಬಸ್ಪಷ್ಟ ಸಂಕಲ್ಪವ ಬದಲಿಸಲರಿಯಾ 3 ಎಲ್ಲವು ನಿನ್ನಧಿವಲ್ಲವೇ ಹರಿಯೇಸಲ್ಲದ ಅನುಮಾನಖುಲ್ಲ ದೈವವ ತಿರುವ ಬಲ್ಲೆಯಲ್ಲವೇ ನೀನುಬಲ್ಲೇಕೆ ಮನವನು ಕಲ್ಲು ಮಾಡಿದೆಯಾ 4 ಶರಣೆಂಬ ಜನ ಕೈಯ್ಯಾ ಎಂದೂ ಬಿಡದೆಪೊರೆಯುವೆ ಎಂಬರಯ್ಯಾಧರೆಯೊಳು ಗದುಗಿನ ವೀರನಾರಾಯಣಮರೆಯದೆ ಸಲಹಯ್ಯಾ ಕೇಳ್ವೆನ್ನ ಮೊರೆಯಾ 5
--------------
ವೀರನಾರಾಯಣ
ಕರುಣಿಸು ಕಮಲಾಸನ ಮಾತಯೆ ನೀಂ ಕರಧೃತ ವರ ಕಮಲೆ ಪ ಶರಣವ ಪÉÇಂದಿಹೆ ಕರುಣದೊಳೀಕ್ಷಿಸು ವರದೆ ವರಲಕ್ಷ್ಮಿ ಅ.ಪ. ಕುಸುಮ ಧೂಪಾವಳಿಯಿಂದಲಿ ಸುಂದರಿ ಪೂಜಿಪೆನು ಬಂಧುರಗಾತ್ರಿಯೆ ಅಂದದೊಳೆನ್ನಯ ಮಂದಿರದೊಳಗಿಹುದು 1 ಶ್ರಾವಣ ಮಾಸದಿ ಭಾವಕಿ ನಿನ್ನನು ಭಾವದಿ ಭಾವಿಸುತ ತಾವಕ ಪಾದವ ಪ್ರೇಮದಿ ಪೂಜಿಪೆ ದೇವಿಯೆ ಒಲಿಯುವುದು 2 ಚಂದನಭೂಷಿತೆ ಸುಂದರ ಗಾತ್ರೆಯ ಮಂದಹಾಸಮೊಲಿಯೆ ಚಂದದ ಕಿಂಕಿಣಿಯಂದದರವದೊಳ್ ಬಂದು ದಯಂಗೆಯ್ಯೆ3 ಹರಿಮಾನಸ ಮೋಹದ ಪ್ರಾಣೇಶ್ವರಿ ಹರಸುತ ವರಗಳಿಂದ ವರಧೇನುನಗರ ವರಜನ ಪೋಷಿಣಿ ಕರುಣಾಕರೆ ವರದೆ4
--------------
ಬೇಟೆರಾಯ ದೀಕ್ಷಿತರು
ಕರುಣಿಸು ಜಯೇಶವಿಠಲ ವರ ಅಂಕಿತವಿದನು ಇತ್ತೆ ಪ ತರಳ ನಿನ್ನವನೆಂದು ಗುರುವಾತ ಸ್ಥಿತನಾಗಿ ಭರದಿ ಪಾಲಿಸಿದೆ ಇವನ ಹರಿ ನೀನಿದ್ದೆಡೆಗೆ ಕರೆಸಿ ಅ.ಪ ಇರಿಸು ವರ್ಣಾಶ್ರಮ ವರಧರ್ಮ ಕರ್ಮಗಳಲಿ ಮರೆಸಿ ಕಾಮ್ಯಕರ್ಮಗಳೆಲ್ಲವನು ಸ್ಮರಿಸದಂತೆ ಮಾಡು ಪರಸತಿಯರೊಲುಮೆ ಮರೆಯದಂತಿರಲಿ ಪರತತ್ವವನು 1 ಸತಿ ಸುತ ಪರಿವಾರದಿ ಕೃತಕೃತ್ಯನಾಗಿ ಮಾಡಿಸಿ ಪತಿತರ ಸಹವಾಸ ಹಿತವೆಂದರುಪದೆ ಸ- ದ್ಗತಿಯೀವ ಮಾರ್ಗ ತಿಳಿಸಿ 2 ನಿರುತ ತತ್ವ ನಿಶ್ಚಯದಲ್ಲಿ ಜ್ಞಾನ ಗುರುಹಿರಿಯರಲ್ಲಿ ಭಕ್ತಿ ದುರ್ವಿಷಯದಲಿ ವಿರಕ್ತಿನಿತ್ತು ವರ ವಿಜಯ ರಾಮಚಂದ್ರವಿಠಲ ಸುರರೊಡೆಯ ಬರೆದು ನಾಮಾಮೃತವ ನುಡಿಸಿ 3 (ಜಯೇಶವಿಠಲರಿಗೆ ಅಂಕಿತ ನೀಡಿದ ಸಂದರ್ಭ) ದುರಿತ ವಿ ದೂರ ಕರುಣಾಕರ ಸುಂದರ ಗಂಭೀರ 1 ದೀನೋದ್ಧಾರ ವಿರ್ಪಿವಿಹಾರ ದಾನವಹರ ಸುರಕಾವ್ಯ ವಿಚಾರ 2 ಸೀತಾನಾಥ ವಾನರಯೂಥ ವಾರಾತ್ಮಜ ನುತ ಶ್ರೀ ಲಕ್ಷ್ಮೀಕಾಂತ 3
--------------
ವಿಜಯ ರಾಮಚಂದ್ರವಿಠಲ
ಕರುಣಿಸೊ ಗುರು ತಾರಿಸೊ ಶರಣರಕ್ಷಕ ನಮ್ಮ ಕರುಣಾಕರ ದೇವ ಧ್ರುವ ¨Àವಜನ್ಮದಲಿ ಬಂದು ಬಹುಬಳಲಿದೆ ನಾನು ಅವಿದ್ಯದಾಟಕೆ ಐವರು ಕೂಡಿ ತಾ ಜೀವನ ಮುಕ್ತಿಗಾಣಿಸಗೊಡದಿಹರು 1 ಮೂರೊಂದು ಮಂದಿಯು ಸೇರಗೊಡದೆ ಪಥ ಆರುಮಂದಿಯ ಕೂಡಿ ಕಾಡುತಲಿ ಆರು ಮತ್ತೆರಡುಮಂಡೆಯ ಕಾವಲಿಗೆ ನಾನು ಆರೆನಯ್ಯ ಶ್ರೀಗುರುಶಿರೋಮಣಿಯೆ 2 ಹತ್ತು ಹೊಳಿಯು ಸುತ್ತ ಅಡ್ಡಗಟ್ಟಿಹುದು ಪಥ ನಡಲೀಸದೆ ಇಂತಿವ ತಾರಿಸಿ ಮೂಢsÀಮಹಿಪತಿಯ ಸಂತತ ಸದ್ಗತಿಸುಖ ಈವುದೆನಗಿನ್ನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು