ಒಟ್ಟು 2936 ಕಡೆಗಳಲ್ಲಿ , 122 ದಾಸರು , 2125 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

* ಇಂದು ಕಾಯಲಿಬೇಕೊ ಸುಂದರ ಧನ್ವಂತ್ರಿ ಇಂದಿರೆರಮಣ ಆನಂದ ಕೃಷ್ಣ ಪ. ತಂದೆ ಮುದ್ದುಮೋಹನ ಗುರುಗಳ ನೀನು ಚಂದದಿಂ ಪಾಲಿಸಿ ತಂದುಕೊ ಕೀರುತಿಅ.ಪ. ಬಂದಿತೊ ನಿನಗೊಂದು ಕುಂದು ಇದರಿಂದ ನಂದಕಂದನೆ ಕೃಷ್ಣ ಉಡುಪಿ ನಿಲಯ ಮಂದರೋದ್ಧರ ಕೃಷ್ಣ ಬಂದು ಈಗ ನೀ ಕಾಯೊ ಇಂದು ಬೇಡುವೆ ನಿನ್ನ 1 ಭವರೋಗ ಹರನಿಗೆ ಇದೊಂದಸಾಧ್ಯವೆ ತವಕದಿಂದಲಿ ಆಯುವಿತ್ತು ಕಾಯೊ ಪವನನಂತರ್ಯಾಮಿ ಭವಪಾಶಬದ್ಧರ ತವಕದಿಂದಲಿ ಕಾಯ್ವ ಗುರುಗಳಲ್ಲವೆ ಇವರು 2 ನಿನ್ನ ಆಜ್ಞೆಯಿಂದ ಭಕ್ತರನುದ್ಧರಿಸ ಲಿನ್ನು ಧರೆಗೆ ಬಂದವರಲ್ಲವೆ ಮನ್ನಿಸಿ ನೀನಾಯುರಾರೋಗ್ಯ ಭಾಗ್ಯವಿತ್ತು ಚನ್ನಾಗಿ ಕಾಯಬೇಕಿನ್ನು ಎನ್ನಯ ದೊರೆಯೆ 3 ಕಷ್ಟ ಬಿಡಿಸುವರಿಗೆ ಕಷ್ಟ ಕೊಡುವರೆ ನೀನು ಕಷ್ಟ ಪರಿಹಾರಕನೆಂದೆನಿಸಿ ಬಿಂಕ ಥಟ್ಟನೆ ಕಾಪಾಡೊ ಶ್ರೇಷ್ಠ ಗುರುಗಳ ಎಮ್ಮ ಕಷ್ಟ ಬಿಡಿಸುವರ 4 ಅನ್ನ ಪಾನವಿಲ್ಲದಿನ್ನು ಬಳಲಿಸುವರೆ ಚನ್ನವಾಯಿತು ಇದು ನಿನ್ನ ಘನತೆ ಸನ್ನುತ ಮಹಿಮ ಶ್ರೀ ಗೋಪಾಲಕೃಷ್ಣವಿಠ್ಠಲ ಇನ್ನು ಕಾಯದಿರೆ ಎನ್ನಾಣೆ ಬಿಡೆ ಕಂಡ್ಯಾ 5
--------------
ಅಂಬಾಬಾಯಿ
* ಇದೆ ಇದೆ ಉಡುಪಿಪುರ ನಮ್ಮ ಪದುಮನಾಭನು ನೆಲೆಸಿರುವ ಮಂದಿರ ಪ. ಬಂದ ಆಯಾಸಗಳೊಂದು ಕಾಣಿಸದಿನ್ನು ಸಿಂಧು ತಡಿಯಲಿಪ್ಪ ಪಟ್ಟಣ ನೋಡೆ ಸುಂದರ ಗೋಪುರ ಅಂದವಾಗಿಹ ಬೀದಿ ಬಂದೆವೆ ಗುರು ಹಿರಿಯರ ಕೃಪೆಯಿಂದ 1 ಮೊದಲೆ ತೋರುವುದು ಶ್ರೀ ರಾಘವೇಂದ್ರ ಮಠ ಅದರ ಬದಿಯಲ್ಲೆ ಕೃಷ್ಣಪುರ ಮಠವು ಅದರೆದರಲ್ಲೆ ಶಿರೂರು ಶ್ರೀಗಳ ಮಠ ಎದುರೆ ಕಾಣುವುದೆ ಕನಕ ಮಂಟಪವು 2 ಕಿಂಡಿಯಲ್ಲಿ ನೋಡಿ ಪುಂಡರಿಕಾಕ್ಷನ ಕಂಡು ವಂದಿಸಿ ಮಹಾದ್ವಾರಕೆ ಬನ್ನಿ ಮಂಡೆ ಬಾಗಿಸಿ ಬನ್ನಿ ಮಹಾಪ್ರದಕ್ಷಿಣಿಗಾಗಿ ಕಂಡು ಸಾಗಿರಿ ಮುಂದೆ ಕಾಣೂರು ಮಠವ 3 ಎರಡನೆಯ ಬೀದಿಯಲಿ ಬಲದ ಮಹಾದ್ವಾರ ಗಿರಿಜೆಯರಸ ಚಂದ್ರೇಶ್ವರನ ಗುಡಿ ಎರಗಿ ಮುಂದ್ವರಿಯೆ ಎಡದಲ್ಲಿ ಸೋದೆಯ ಮಠ ಅ ದರ ಪಕ್ಕವೆ ಪುತ್ತಿಗೆ ಮಠ ನೋಡಿ 4 ಬರಬರುತ ಬೀದಿ ಎರಡು ಪಕ್ಕಗಳಲ್ಲಿ ಇರುವ ಅಂಗಡಿ ಸಾಲು ವ್ಯಾಸಾದಿ ಮಠಗಳ್ ನಿರರುತಿ ಕೋಣದಿ ಆದಮಾರು ಮಠ ಅ ದರ ಪಕ್ಕವೆ ಪೇಜಾವರ ಮಠವೆನ್ನಿ 5 ಮುಂದೆ ಒಂದೆರಡ್ಹೆಜ್ಜೆಯಿಂದ ಬರಲು ಅಲ್ಲಿ ಸುಂದರವಾದ ಪಲಿಮಾರು ಮಠ ಅಂದ ನೋಡುತ ಸಾಗಲರ್ಧ ಪ್ರಥಮ ಬೀದಿಯಿಂದ ಬಲಗಡೆ ತಿರುಗೆ ಅನಂತೇಶ್ವರ 6 ಚತುರ ಬೀದಿಯ ಮಧ್ಯೆ ರಾಜಿಸುತಿಹ ಗುಡಿ ಅತಿ ಉನ್ನತವಾದ ಗರುಡಸ್ಥಂಭ ಪ್ರಥಮ ಪ್ರದಕ್ಷಿಣೆ ದ್ವಾರ ದರ್ಶನಗಳು ಗತಿಸಿ ಪೋದುವು ನಮ್ಮ ಪಾಪರಾಶಿಗಳು 7 ನಡೆಯಿರಿ ನಡೆಯಿರಿ ಕೃಷ್ಣನ ಮಠದೆಡೆ ಬಡಿಯುತಲಿಹರು ನಗಾರಿಗಳು ತಡೆಯದೆ ತೆಗೆವರು ಮಹಾದ್ವಾರವೀಗಲೆ ಒಡೆಯ ಕೃಷ್ಣನ ನೋಡ ಬಲ್ಲಿರೆಲ್ಲ 8 ಬೆಳಗು ಝಾವದ ನಾಲ್ಕು ತಾಸಿನ ಭೇರಿಯು ಒಳಗೆ ಪೋಗಿರಿ ಎಂದು ಕೂಗುತಿದೆ ಬಲು ಬೇಗ ಸ್ನಾನ ಮಾಡುತ ಮಧ್ವಸರಸಿನೋಳ್ ಚಲುವ ಕೃಷ್ಣನ ನೋಡ ಬನ್ನಿರೆಲ್ಲ 9 ಮುನಿವರರೆದ್ದು ಸ್ನಾನವಗೈದು ಉಷಃಕಾಲ ಘನಪೂಜೆಗೈದು ಪೊಂಗಲು ದೋಸೆಯ ಮುನಿವರದಗೆ ನೈವೇದ್ಯವರ್ಪಿಸಿ ತಮ್ಮ ಮನದಣಿಸುತ್ತಲಾನಂದಿಪರು 10 ಬಾಲತೊಡಿಗೆಯನಿಟ್ಟ ಬಾಲರೂಪನ ನೋಡಿ ನೀಲಮೇಘಶ್ಯಾಮ ನಿರ್ಮಲಾತ್ಮ ಆಲಯದೆಡಬಲ ಗರುಡ ಮುಖ್ಯಪ್ರಾಣ ಓಲೈಸೆ ಗೋಪಾಲಕೃಷ್ಣವಿಠಲನ 11
--------------
ಅಂಬಾಬಾಯಿ
* ಸತ್ಯವಂತನೊ ನೀನು ಸರಸಿಜಾಕ್ಷ ಸಿರಿ ನಿತ್ಯಾವಿಯೋಗ ಪ. ಶ್ರೀನಿವಾಸನೆ ಕೃಷ್ಣ ಭಾನು ಪ್ರಕಾಶ ಹರಿ ಏನೆಂಬೆ ನಿನ್ನ ಪ್ರಭಾವವನ್ನು ನಾನಾ ವಿಧದಿಂದ ಭಕ್ತರ ಕಾಯ್ವ ನರಹರಿಯೆ ಮಾನವಂತರ ಕಾಯ್ವ ದಾನವಾಂತಕನೆ 1 ಕೃಷ್ಣಮೂರುತಿ ನಿನ್ನ ದರುಶನದ ಕಾರಣದಿ ಕ್ಲೇಶ ತಂದೊಡ್ಡಿ ಇಷ್ಟು ಪರಿಯಲಿ ಎನ್ನ ಮನವ ಶೋಧಿಸಿ ನೋಡಿ ಕಷ್ಟ ಕಳೆದೆಯೊ ಈಗ ಕರುಣಾಳು ದೇವ 2 ಗುರುಗಳಿಗೆ ಬಂದಂಥ ರೋಗವನೆ ಪರಿಹರಿಸಿ ಕರುಣಿಸಿದೆ ಮನಕೆ ಬಹು ಆನಂದವನ್ನು ಪರತರನೆ ಇದರಂತೆ ಭವರೋಗವನೆ ಹರಿಸಿ ನಿರುತ ನಿನ್ನಯ ಪಾದಸ್ಥಾನ ನೀಡೆನಗೆ 3 ಸುರಪನಿಗೆ ಬಂದಂಥ ಪರಿಪರಿಯ ಕಷ್ಟದಿಂ ಹರಿಯೆ ನಿನ್ನಾಜ್ಞೆಯಿಂದೆಲ್ಲರೂ ಕೂಡಿ ಶರಧಿ ಮಥಿಸುತಲಿರಲು ಕರುಣೆಯಿಂದಲಿ ಸುಧೆಯ ಕಲಶ ತಂದವನೆ4 ವಂಚನೆಯ ಪೆಣ್ಣಾಗಿ ವಂಚಿಸಿ ದೈತ್ಯರನು ಅಮೃತ ಸುರರಿಗುಣಿಸಿ ಪಂಚಬಾಣನ ಪಿತನೆ ಸುರರ ರಕ್ಷಕನಾದೆ ವಂಚಿಸದೆ ಎಮ್ಮಗಳ ನೀನೀಗ ಕಾಯೊ 5 ಅಮೃತಹಸ್ತನೆ ಕೃಷ್ಣ ಅಮೃತವಿತ್ತು ಕಾಯೊ ಅಮೃತರಲ್ಲವೆ ನಿನ್ನ ಪಟ್ಟಣದ ಜನರು ಅಮೃತ ಕಿರಣಾಂತರ್ಯಾಮಿಯೆ ಶಾಂತ ಧನ್ವಂತ್ರಿ ಅಮೃತರಾಗುವರೈಯ್ಯ ನಿನ್ನ ನಂಬಿದರೆ 6 ಸಚ್ಚಿದಾನಂದ ಸರ್ವೋತ್ತಮನೆ ಶ್ರೀ ಕೃಷ್ಣ ಬಿಚ್ಚಿ ಸಲಹಯ್ಯ ಎನ್ನಜ್ಞಾನ ಬಂಧ ಅಚ್ಚುತಾನಂತ ಶ್ರೀ ಗುರುಗಳಂತರ್ಯಾಮಿ ಅಚ್ಚವೈಷ್ಣಣವ ಪ್ರಿಯ ಗೋಪಾಲಕೃಷ್ಣವಿಠ್ಠಲ 7
--------------
ಅಂಬಾಬಾಯಿ
ಅಂಕಿತ-ಗಿರಿಧರಸುತ ಗುರುಮಹೀಪತಿರಾಯಾ | ಕೊಡು ಎನಗೆ ಸುಮತಿಯಾ ಪ ಭಕ್ತರ ಸುರಧೇನು | ಐಗಳಿ ವೃತ್ತಿಯನು | ಮನಕೆ ತಾರದೆ ಘನ ವ್ಯಾಪರವನು | ಮಾಡುತ ಭಾಗ್ಯವನು | ಮಾಡಲು ತಿಮ್ಮವ್ವನು 1 ಭಾಸ್ಕರ ಮುನಿ ಬಂದು | ಧಾರುಣಿ ಜನರುದ್ಧರಿಸಲಲ್ಲೆ ನಿಂದು | ಇರಲು ದಯಾಸಿಂಧು | ನಾರಿಶಿರೋಮಣಿ ದರುಶನಕ್ಕೆ ತಂದು | ನೀನೆ ಗತಿಯೆಂದು | ಆರು ತಿಂಗಳಾರಾಧಿಸೆ ಸಲಹೆಂದು | ದೀನಜನ ಬಂಧು | 2 ಸತಿಪತಿಗಳ ಚಿತ್ತಾ | ಆಗುದು ಎನೆ ವನಿತಾ | ನಮಿಸಲು ಗುರುತಾತ | ಆತರಿದನು ತವ ಮುಖವನು ಈಕ್ಷಿಸುತಾ ಪಕ್ವಾಫಲವೆನುತಾ 3 ಮಂದಹಾಸದಿಂ ನುಡಿದನು ನಿಜಗುಟ್ಟು | ವ್ಯಾಪಾರವ ಬಿಟ್ಟು | ಚಂದದಿ ಯಾಚಕ ವೃತ್ತಿಲಿ ಮನನಟ್ಟು | ಎನೆ ಸಮ್ಮತ ಬಟ್ಟು | ಮಂದಿ ಕುದುರಿಗೆಲ್ಲರಿಗಪ್ಪಣೆ ಕೊಟ್ಟು | ನಿಲ್ಲದ್ಹರುಷ ತೊಟ್ಟು | ಉಪದೇಶವ ಕೊಟ್ಟು 4 ಯೋಗಧಾರಣದ ಕೀಲವ ದೋರಿಸಲು | ದೂದಿಯವೋಲ್ | ನಾನಾ ಬಯಕೆಗಳು | ತ್ಯಾಗವ ಮಾಡುವ ಅನ್ನ ಉದಕಗಳು | ಕ್ಲಪ್ತಕೆ ನಿಲ್ಲಿಸಲು | ಮುಗಿದವು ಹಸ್ತಗಳು 5 ಭ್ರೂಮಧ್ಯದ್ವಿದಳದಾ | ದ್ವಾರವ ತ್ಯಜಿಸುತ್ತಾ | ತ್ರಿಕುಟ ಶ್ರೀಹಟ ಗೋಲ್ಹಟ ಗೋಪುರದಾ | ನೋಡುತ ಸಂಭ್ರಮದಾ | ಪಂಕಜದೊಳಗಿದ್ದ 6 ನಿತ್ಯ ಪ್ರಭೆಯು ಅನುದಿನಾ | ಕಾಣುತ ಸಂಪೂರ್ಣಾ | ತಿಳಕೊಂಡ್ಯೋ ಪ್ರವೀಣಾ | ದಿಂದಲೇ ಭಯಹರಣಾ 7 ಅಂತಹದು ಬೇಗ | ನೋಡೆಂದನು ಅನಘಾ | ನಿನ್ನಲ್ಲೇ ಈಗಾ | ದುಷ್ಕøತ ತರುನಾಗಾ 8 ಆಗುದು ನಿರ್ಧಾರಾ | ನಿನ್ನುದರದಿ ಕುವರಾ | ಸಂಶಯ ಬಿಡು ಅದರಾ | ಭಕ್ತರ ಸಹಕಾರಾ 9 ಮುನಿವರನಾಜ್ಞೆದಿ ಸ್ವಸ್ಥಾನಕೆ ಬರುತಾ | ಕೆಲ ದಿವಸಲ್ಲಿರುತಾ | ಸತ್ಪುರುಷರೆನಿಸುತಾ | ಇರಲು ದಯವಂತಾ | ವೇಧಿಯು ಬಂತೆನುತಾ 10 ಅಂತರಂಗದಲಿ ತಿಳಿಯತಲಾಗ್ರಾಮ | ತ್ಯಜಿಸಿದೆ ನಿಸ್ಸೀಮಾ | ಧಾಮಾ ಮಾಡಿದೆ ನಿಷ್ಕಾಮಾ | ಬಟ್ಟರು ಬಹುಪ್ರೇಮಾ | ಗುರುಸಾರ್ವಭೌಮಾ 11 ಅಲ್ಲಿ ಮೂರು ಸಂವತ್ಸರ ಇರಲಾಗಿ | ಶರಣ್ಹಾಳಿಯು ಬಾಗಿ | ಇಲ್ಲಿ ನೀವು ದಯಮಾಡುವದೊಳಿತಾಗಿ | ಸರಿ ಬಾರದಾಗಿ | ಬಂದ್ಯೋ ಮಹಾತ್ಯಾಗಿ | ಬರಲು ವರಯೋಗಿ12 ಕರೆದೊಯ್ದರು ಸ್ತುತಿಸಿ | ಕರಣಿಕ ತನ್ನಯ ಸ್ಥಳದಲಿ ಗೃಹ ರಚಿಸಿ | ಕೊಡಲಂಗೀಕರಿಸಿ | ಹರುಷದಿ ವರಭಾಸ್ಕರ ಮುನಿಕರ ಸರಿಸಿ | ರುಹಜಾತನೆನಿಸಿ | ಇರುತಿರೆ ತೋರಿತು ಸಂತತಿ ಉದ್ಭವಿಸಿ | ಗುರುವಾಕ್ಯಫಲಿಸಿ 13 ಆರಿಂದಾಗದು ನೈರಾಶ್ಯಾಚಾರಾ | ನಡೆಸಿದೆ ಗಂಭೀರಾ | ಧಾರುಣಿ ಜನರಿಂದಧಿಕೃತ ಸಂಸಾರ | ಜಲ ಪದ್ಮಪ್ರಕಾರಾ | ಅನುದಿನ ವೈರಾಗ್ಯದಾಗರಾ | ಸಂಪತ್ತು ಅಪಾರಾ | ತಿಳಿದ್ಯೋ ಸುಕುಮಾರಾ 14 ಕೊಟ್ಟರ್ಹಿಡಿಯಲಿಲ್ಲ ಓರ್ವರ ಧನವು | ಪೂರ್ವದ ಸಂಗ್ರಹವು | ಸತಿಸುತ ಪರಿವಾರವು | ಭಕ್ತರ ಸಮುದಾಯವು | ಮೃಷ್ಟಾನ್ನ ಭೋಜನವು 15 ತುಕ್ಕವ್ವಳು ನಿಮ್ಮತ್ತಿಗೆ ಭಾವಿಕಳು | ಪ್ರೀತಿಯ ಶೇವಕಳು | ಫಕ್ಕನೆ ವಿನಯದಿ ಮೃದು ಮಾತಾಡಿದಳು | ಸತ್ಪುರುಷರಿಳೆಯೊಳು | ಅಕ್ಕರದಲಿ ದೋರುವರು ಶಿದ್ಧಿಗಳು ನೀವೇನಿಲ್ಲೆನಲು | ಆದೀತೆಂದೆನಲು16 ಸೊಸಿಯೊಳು | ತುಕ್ಕವ್ವ ತಿಳಿಸಲು | ಕೈಯ್ಯನೆಳೆಯಲು | ನೋಡುತ ಬೆರಗಾದಳು 17 ಲೋಕವನುದ್ಧರಿಸಲು ನೀನವತರಿಸಿ | ಜಡದೇಹವ ಧರಿಸಿ | ಕೊಟ್ಯೋ ಗುಣರಾಶಿ | ಕೊಂಡ್ಯೋ ಸುಖವಾಸಿ | ಬಹು ನರಕದ ವಾಸಿ 18 ಜಗದೊಳಗಿಹ ಶಿದ್ಧರ ಮುಕುಟದ ಮಣಿಯೇ | ಸಾಧಕರೊಳಗೆಣೆಯೆ | ದುರಿತಾಂಧ ದ್ಯುಮಣಿಯೆ | ಕುಹಕರಿಗೇನ್ಹೊಣೆಯೆ | ವರಸತ್ವದ ಗುಣಿಯೆ 19 ಕಾಲ ತಪ್ಪಿಸುವದೇನೈ ನಿಮಗರಿದೆ | ಮನದೊಳು ನೀನರಿದೆ | ತಾಳಿದ ದೇಹವ ಸಾಕೆನುತಲಿ ಜರಿದೆ | ಚಿದ್ರೂಪವ ಬೆರೆದೆ | ಬಹು ಭಕ್ತರ ಪೊರೆದೆ | ತಡಮಾಡಗೊಡದೆ20
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅಧ್ಯಾಯ ಐದು ಲೋಕ ಮೋಹಕ: ಪಾತು ಮಾಧವ: ಧ್ವನಿ ರಾಗ:ಯರಕಲ ಕಾಂಬೋದಿ ಅಟತಾಳ ತಿರುಗಿ ವೇಂಕಟಗಿರಿ ಏರಲು ಪ ಪದ್ಮನಾಭನ ಸ್ಮರಿಸಿ ಬಿದ್ದಳು ಮೂರ್ಛಿತಳಾಗಿ ಸದ್ದು ಮಾಡಿದರಲ್ಲಿ ಇದ್ದ ಗೆಳತಿಯರೆಲ್ಲ ಮುದ್ದು ಮುಖದವಳೆ ನೀ ಎದ್ದು ಮಾತಾಡೆಂದರು ಪದ್ಮಿನಿಯು ತಾ ಕೇಳಿ ಎದ್ದು ನುಡಿಯದೆ ಇರಲು ಸಿದ್ಧಮಾಡಿ ಬೇಗೊಬ್ಬ ಬುದ್ಧಿವಂತೆಯ ಕಳುಹಿ ಗದ್ದಲಮಾಡದೆ ಅಂದಣವನು ತರಿಸಿ ಪದ್ಮ ಗಂಧಿಯ ಕೊಂಡು ಎದ್ದು ನಡೆದರು ಪುರಕೆ ಸುದ್ದಿ ಹರಡಿತು ಅಲ್ಲಿ ಗದ್ದಲಾಯಿತು ಬಹಳ 1 ಬಂದಳಲ್ಲಿಗೆ ತಾಯಿ ಅಂದಳೀಪರಿ ನೋಡಿ ಇಂದು ಎಲ್ಲಿಗೆ ಚಿಕ್ಕ ಕಂದಮ್ಮ ನೀ ಪೋಗಿದ್ದೆ ಇಂದು ಬಾಡಿಹುದೇಕೆ ಇಂದು ಮೈಯೊಳು ಜ್ವರ ಬಂದಿಹುದೇಕಮ್ಮಯ್ಯ ಮುಂದೆ ಮಾತಾಡದಿರಲು ತಂದೆ ಕೇಳಿದನಾಗ ಸುಂದರಿಯಳೆ ದಾರೇನಂದರಮ್ಮಯ್ಯ ನಿನಗೆ ಅಂದು ಅವರನು ಬಿಡದೆ ಕೊಂದು ಹಾಕುವೆ ಪೇಳು ಅಂದ ಮಾತಿಗೆ ತಾನು ಒಂದು ಮಾತಾಡಲೊಲ್ಲಳು 2 ತಿಳಿಯಲೊಲ್ಲದು ಎಂದು ಬಳಲಿ ಆಕಾಶರಾಜ ಕಳವಳಿಸುತ ಕರೆಕಳಿಸಿ ಬಲ್ಲವರನು ತಿಳಿಯಬಲ್ಲವರೆಲ್ಲ ತಿಳಿದು ಹೇಳಿರಿ ಎಂದ ಕೆಲವರೆಂದರು ಪಿತ್ತ ತಲೆಗೆ ಏರಿಹುದೆಂದು ಕೆಲವರೆಂದರು ಭೂತ ಬಲಿಯ ಚಲ್ಲಿರಿ ಎಂದು ಕೆಲವರೆಂದರು ಗ್ರಹಗಳ ಬಾಧೆ ಇರುವದು ಉಳಿದ ಮಂದಿಗೆ ಮತ್ತೆ ತಿಳಿಯಲಾಗದಾಯಿತು ಚಲುವನಂತಾದ್ರೀಶನ ಚಲುವಿಕೆಯನೆ ಕಂಡು 3 ವಚನ ಬಹುಶೋಕವನು ಮಾಡುತಲಿ ತಾ ಕರಿಸಿ ಕೇಳಿದನು ನಾಕೇಶಗುರು ಹೀಗೆ ತಾ ಕೇಳುತಲಿ ನುಡಿದ ಆಕಾಶನೃಪ ಚಿಂತೆಯಾಕೆ ಬ್ರಾಹ್ಮಣರ ಏಕಾದಶಾವರ್ತಿ ಏಕಚಿತ್ತದಲಿ 1 ಲೇಸಾಗಿ ತಿಳಿಯೆಂದು ಉರ್ವೀಶ ಭಕುತಿಯಂ ಆಸನಾದಿಗಳಿಂದ ಭೂಸುರರಿಗೆ ಅರ್ಪಿಸಿ ಸಂತೋಷವನು ಮಾಡಿರಿ ಎಂದು ಆಶು ಕಳುಹಿದನಗಸ್ತೇಶ್ವರನಾಲಯಕೆ 2 ಧ್ವನಿ ಕೇವಲ ಚಿಂತೆಯಿಂದಲೇ ದೇವಿಬಕುಲಾವತಿ ತಾನು1 ಪರಿವಾಣದಲ್ಲಿಟ್ಟುಕೊಂಡು ಇದ್ದಲ್ಲೆ ಗೋವಿನಂತೆ 2 ಆಲಯದಿ ಜಗತ್ಪಾಲಯ ಮಲಗಿದ್ದು ಕಂಡು ಬಾಲೆ ತಾಮಾತಾಡಿದಳು ಇಂದು 3 ಹೆಚ್ಚಿನ ವರಹ ಅಚ್ಯುತ ವಾಮನ ಏಳೊ 4 ಉದ್ಧರಿಸಿದಾತನೆ ಏಳೊ ಮುದ್ದು ಹಯವದನ ಏಳೋ 5 ಕೊಡದೆ ಸೃಷ್ಟಿಕರ್ತನು ಹರಿವಾಣ ಕೆಳಗಲ್ಲೆ ದಿಟ್ಟನಡೆದಳು ಬದಿಯಲಿ6 ಎನುತ ಮುಸುಕ ಕಂಡು ಅಂತ:ಕರಣದಿ ನುಡಿದಳು7 ಧ್ವನಿ ರಾಗ:ಕಾಪಿ ಅಟತಾಳ ಯಾಕೆ ಮಲಗಿದೆ ನೀ ಏಳೋ ಅಣ್ಣಯ್ಯಾ ವೇಂಕಟ ಯಾಕೆ ಮಲಗಿದೆ ಏಳೋ ಏನು ಚಿಂತೆಯು ಪೇಳೊ ಲೋಕ ಸಾಕುವ ದಯಾಳೋ ಅಣ್ಣಯ್ಯ ವೇಂಕಟಪ ಬಾಳ ಬಳಲಿದಿಯೊ ಹಸಿದು ಮಾತಾಡದಂಥ ಮೂಲ ಕಾರಣವೇನಿದು ಹಾಲುಸಕ್ಕರೆ ತುಪ್ಪಾಯಾಲಕ್ಕಿ ಪರಮಾನ್ನ ಬಾಲಯ್ಯ ನೀನು ಉಣಲೇಳೋ 1 ವಟದೊಳು ಹೆಬ್ಬುಲಿಯ ಕಂಡಂಜಿದಿಯೇನೊ ನೆಲೆಯು ತಿಳಿಯದು ನಿನ್ನ ಪ್ರಳಯ ಕಾಲಕ್ಕೆ ಆಲದೆಳೆಯೊಳು ಮಲಗಿದವನೋ2 ಹಗಲ್ಹೊತ್ತು ಮಲಗಿದ ದವನಲ್ಲೊ ಹೆತ್ತತಾಯಿ ಆಣೆ ಸತ್ಯವಾಣಿ ನೀಪೇಳೋ ಚಿತ್ತ ವ್ಯಾಕುಲವು ಯಾಕೆ3 ಕೊಂಬುವರೋಮುನ್ನ ಇಂದು ಮೋಹಿತನಾಗಿರುವಿ4 ಬಾಹುವದುಕಂಡು ಮರಳು ಮಾಡಿದಳೋ ನಿನ್ನ 5 ತಕ್ಕ ಉಪಾಯಾ ಅಕ್ಕರವಾಗುವದೆನಗೆ 6 ಎನ್ನ ಮುಂದೆ ನೀ ಸಂಶಯ ಬಿಡು ಚನ್ನಿಗನಂತಾದ್ರೀಶನೆ 7 ವಚನ ಕಣ್ಣೀರುವರಸುತಲೆದ್ದು ಕೀರವಾಣಿಯೇಕೇಳು ಘೋರು ದು:ಖವ ತನಗೆ ಆರಿಗುಸರಲಿ ನಾನು ಆರಿ ಹೇಳುವೆ ನಿನಗೆ ಸಾರಾಂಶ ಮಾತು 1 ನೀನೆ ಎನಗ್ಹಿರಿಯಣ್ಣ ನೀನೆಗಜರಾಜೇಂದ್ರ ವರಧ್ರುವರಾಯ ನೀನು ಸರ್ವವು ಅಭಿಮಾನ ರಕ್ಷಕಳು 2 ಎಂಬೋರನ್ಯಾರನು ನಾ ಎನ್ನ ಮನಸ್ಸಿನ ಅರಣ್ಯದೊಳು ರೂಪ ಲಾವಣ್ಯ ಮುಖವು ಹುಣ್ಣಿಮೆಯ ಚಂದ್ರ 3 ಕಣ್ಣಮೂಗಿಲೆ ಸಂಖ್ಯೆ ಜನ್ಮದಲಿ ಮಾಡಿದ್ದು ಅನ್ಯಾಯದಲಿ ಎನ್ನ ಪ್ರಾಣವನು ಬಿಟ್ಟಿತು ಉಳಿದೆ ಮುನ್ನವಳ ಹೊರತು ಮನ ಉಣ್ಣಲೊಲ್ಲದು ನಿದ್ರೆ ಕಣ್ಣಿಗಿನ್ನೆಲ್ಲಿ 4 ನೀನು ಎಂದದು ಮೋಹಿಸುವಂಥ ಜಾಣೆಯನು ಕಳೆದಂಥ ಮಾನಿನಿಯ ಇರಲುನಾನು ಬದುಕುವನಲ್ಲ ಖೂನ ಪೇಳುವೆನು 5 ಯಾನ ಬರುವದು ಹೆಚ್ಚು ಉಂಟು ಕ್ಷೋಣಿಯಲಿ ಕಟ್ಟಿ, ದಾನದೊಳು ಸಾಹಸ್ರದಾನ ಪಾತ್ರರಿಗೆ ತಿಳಿ ಒಂದು ಕಲ್ಯಾಣ ಕಟ್ಟಿದರೆ 6 ಧ್ವನಿ ರಾಗ:ಸಾರಂಗ ಭಿಲಂದಿತಾಳ ಬಕುಲಾದೇವಿ ತಾ ನುಡಿದಳು ಆ ಕಾಲಕ್ಕೆ ಹೀಗೆ ದೇವಾಧೀಶನೆ ನಿನ್ನ ಕೇವಲ ಮರುಳು ಈವತ್ತಿಗೆ ಮಾಡಿದಳು ಯಾವಕೆ ಅವಳು 1 ಪೂರ್ವಜನ್ಮದಲಾಕೆ ಯಾವಕೆ ಬಂದಿಹಳು ಆ ವಾರ್ತೆ ಪೇಳೊ 2 ಇಂಥ ಮಾತನು ಲಕ್ಷ್ಮಿಕಾಂತಾ ಚಿಂತಿಸಿ ನುಡಿದಾ 'ಶ್ರೀಮದನಂತಾದ್ರೀಶ’ 3 ವಚನ ತಾ ವನದರಲಿರುತಿರಲು ದೇವಿಯನು ಅಪಹರಿಸಿ ತಾ ಒಯ್ಯ ಬೇಕೆಂಬೋ ಭಾವದಲಿ ಬಂದಾ ಆ ವೇಳೆಯಲಿ ಅಗ್ನಿದೇವ ಪತ್ನಿಯಲ್ಲಿದ್ದ ಶ್ರೀ ವೇದವತಿಯನ್ನು ದೇವೇಂದ್ರನ ಸಹಿತ ಆವಾಹನ ಮಾಡಿ ತಾ ವಾಸಮಾಡಿದಳು ಕೈಲಾಸದಲ್ಲಿ1 ಮುಂದೆ ರಾಮನು
--------------
ಅನಂತಾದ್ರೀಶ - ಕಥನಕಾವ್ಯಗಳು
ಕಥನಾತ್ಮಕ ಬಾಗಿಲಿಕ್ಕಿದ ಬಗಿಯೇನೆ | ಬೇಗ ಬ್ಯಾಗದಿಂದ ಪೇಳೆ ನೀನೆ | ನಾಗವೇಣಿಯೆನ್ನ ಕೂಡ ಜಾಗುಬ್ಯಾಡ ಬಾಗಿಲುತೆಗೆಯೆ ಪ (ಬಂದೆಯಾದರಿಂದಿನದಿನದಿ) | ಛಂದದಿಂದ ಪೇಳೊ ಮದದಿ ನಾಮವುಸಾರೊ ಮುದದಿ 1 ಅಚ್ಯುತಾನ ಇಚ್ಛೆಯಿಂದ | ಸ್ವೇಚ್ಛ ದೈತ್ಯರಾಳಿದೇನೆ ಮತ್ಸ್ಯರೂಪಗೈದುನಾನೆ | ಭೀಭತ್ಸು ರಾಯ ನಲ್ಲವೇನೆ 2 ಯೇಸು ಪೇಳಿದ್ರಿಗುಣವನ್ನು | ಈಸು ಮಂದಿಯೊಳು ನೀನು ಬೂಸುರಾಗೆ ಭಾಷೆಕೊಟ್ಟು | ಕೂಸೀನ ಕೊಡದಾವ ನೀನು 3 ಪಾರ್ವತಿಯ ಪತಿಯನೊಲಿಸಿ | ಪಾಶು ಪತಾಸ್ತ್ರವ ಗೆಲಿಸಿ ಪಾರ್ಥರಾಯನೆ ಪಾಂಚಾಲಿ 4 ಪಾರ್ಥರಾಯ ನೀನಾದರೇನು, ಕೀರ್ತಿಯೆಲ್ಲಾ ಬಲ್ಲೆನಾನು ಸ್ತೋತ್ರ ಮೂರುತಿ ತಂಗಿಗೀಗ | ತೀರ್ಥಯಾತ್ರೆಲಿ ಗೆಲಿಹೋಗೊ 5 ಫುಂಡತೊರೆವ ಗಂಡನಾನೆ | ಖಾಂಡವನ ದಹಿಸಿದೆನೆ ಗಂಡುಗಲಿ ವರಹನ ದಾಸಾ | ಗಾಂಡೀವರ್ಜುನ ನಲ್ಲವೇನೆ 6 ಧೀರ ನೀನಾದರೆ ಏನು ಭಾರಿ ಗುಣವೆಲ್ಲಾ ಬಲ್ಲೆನಾನು ಯತಿಯಾಗಿರು ಹೋಗೋ 7 ವಟುರೂಪನ್ನ ವಲಿಸಿದೆನೆ ಕಿರೀಟಿ ಅಲ್ಲವೆ ಕೃಷ್ಣಿನಾನೆ 8 ಕೋಟಿರಾಯಗೆ ಮೇಟಿ ನೀನು | ಮಾಟವಾದ ಮುಖದವನು | ಬೂಟಿತನದಿ ವಿರಾಟನಲ್ಲಿ | ಆಟವಾ ಕಲಿ ಸ್ಹೋಗೊ ನೀನು 9 ಘಾತುಕ ಕರ್ಮಗಳನ | ಖ್ಯಾತಿಯಿಂದ ಚೈಸಿದ್ದೇನೆ ಮಾತೆ ಅಳಿದಗೆ ದೂತನಾನು ಶ್ವೇತವಾಹನ ದ್ರೌಪದಿನಾ 10 ವಾಹನ ನೀನಾದರೇನು | ಖ್ಯಾತಿಯೆಲ್ಲ ಬಲ್ಲೆ ನಾನು ಜೂತದಲ್ಲಿ ಸೋತವ ನೀ | ಅಗ್ನಾತವಾಸದಲ್ಲಿರು ಹೋಗೋ 11 ವಿಪಿನಾವಾಸದಿಯುದ್ಧ | ವಿಪರೀತ ಮಾಡಿದೇನೇ ಶ್ರೀ ಪತಿ ಶ್ರೀ ರಾಮದೂತ, ಭೂಪ ವಿಜಯನಾ ವಿಮಲಾಂಗೀ 12 ಭಾಳ ಪೇಳಿದಿ ಗುಣವನ್ನು ಕೇಳಲಿಕೆ ಅಶಕ್ಯವಿನ್ನು ಭಾಳ ಹರುಷದಿಗೆಲಿ ಹೋಗೋ 13 ಮೀನು ಫಕ್ಕನೆ ಖಂಡಿಸಿದೆನೇ ಪತಿ ಶ್ಯಾಲ ನಾನು | ಹೆಚ್ಚಿನ ಸವ್ಯಸಾಚಿ ನಾನು 14 ದುಷ್ಟ ಕುರುಪಕಿಗೆ ಭಯವ ಬಿಟ್ಟು | ಶ್ರೇಷ್ಟ ಸ್ತ್ರೀ ವೇಷ ಬಿಟ್ಟು ಅಷ್ಟು ಜನರೊಳು ಗುಟ್ಟುತೋರದೆ | ಧಿಟ್ಟದ್ವಿಜನಾಗಿ ಹೋಗೊ 15 ಬೌದ್ದ ರೂಪಗೆ ಬಂಧು ನಾನು | ಪ್ರಸಿದ್ಧ ಕೃಷ್ಣ ನಾನಲ್ಲವೇನು 16 ಯುದ್ಧದಲ್ಲಿ ಪ್ರಸಿದ್ದನೆಂದು | ಸಿದ್ದಿಗಳನು ಹೇಳಿದಿಂದು ಮುದ್ದು ಬಬ್ರುವಾಹನನಲ್ಲಿ | ಬಿದ್ದ ಸುದ್ದಿಯ ಪೇಳೊ ಇಲ್ಲಿ 17 ಕಂಜ ಮುಖಿಕಲಿ ಭಂಜನಾನ ಮಾಯಾ ಕೇಳೆ ನಾರಾಯಣನಲ್ಲವೇನೆ 18 ವಜ್ರದಬಾಗಿಲು ತೆಗೆದು | ಅರ್ಜುನನಪ್ಪಿದಳ್ ಬಿಗಿದು ದೊಡೆಯಗೆ ಕೈಮುಗಿದು 19 ನಿರುತವೀ ಸಂವಾದ ಪಠಿಸಲು ಭರಿತವಾದ ಸುಖವೀವೊದು ವಿಠಲನ್ನ ನೆನೆಯೋದು 20
--------------
ಓರಬಾಯಿ ಲಕ್ಷ್ಮೀದೇವಮ್ಮ
ಗಣೇಶ ಪ್ರಾರ್ಥನೆ ಭುಜಗಭೂಷಣ ಕರುಣಾ ಗಜಾನನಾ ಪ ಅಂಬರಕಭಿಮಾನಿ ಶಂಭುದೇವನ ಸುತ ಇಂಬು ತೋರಿಸೊ ನೀ ವಿಶ್ವಂಭರನ ಸ್ಮರಣೆಗೆ 1 ದಾಸವರ್ಯನೆ ವೇದವ್ಯಾಸರಿಗತಿಪ್ರಿಯ ದಾಸನೆಂದೆನಿಸೆನ್ನ ಶೇಷಮೂರುತಿಯೆ 2 ಮತಿಯ ಪಾಲಿಸು ಶ್ರೀಪತಿಯ ಸ್ತುತಿಗೆ ವಿಘ್ನ ತತಿಯ ತಾರದೆ ಶುಭಮತಿ ಇತ್ತು ಸಲಹೊ 3 ತತುವರೊಳಗೆ ಅತುಳ ಮಹಿಮನೆಂದು ಪ್ರಥಮ ಕಾರ್ಯದಿ ನಿನ್ನ ನುತಿಸಿ ಬೇಡುವರೊ 4 ಶ್ರುತಿಪ್ರತಿಪಾದ್ಯ ಶ್ರೀ ವೆಂಕಟೇಶನ ದೂತ ಹಿತರೆನಗಿಲ್ಲ ನೀ ಗತಿ ಎಂದು ನಂಬಿದೆ 5
--------------
ಉರಗಾದ್ರಿವಾಸವಿಠಲದಾಸರು
ಗೋಪಿಕಾ ಗೀತೆ ಬಾಲ ಲೀಲೆಯ ಜಗಕೆ ತೋರುತ 1 ಗಾಡಿಗಾರನು ಅವಳ ಹೆಗಲನೇರಿಸಿ 2 ದೀನನಾಥನು ಅದೃಶ್ಯನಾದನು 3 ಅಗರು ಕಸ್ತೂರೀ ಪೂಸಿ ಹೃದಯಕೇ ಮೊಗರು ಕುಚಗಳ ಮುಖದ ಕಮಲವು 4 ಎತ್ತ ಪೋದನೋ ರಂಗ ಎನುತಲಿ ಚಿತ್ತ ಭ್ರಮೆಯಲಿ ಹುಡುಕುತ್ತಿದ್ದರು 5 ಎಲ್ಲಿ ಪೋದನೋ ಕೃಷ್ಣ ಎನುತಲಿ ಮತ್ತೆ ಸಖಿಯರು ಹುಡುಕುತ್ತಿದ್ದರು 6 ಸುತ್ತ ಗೋಕುಲಾದೊಳಗೆ ಸ್ತ್ರೀಯರೂ ಪಾದ ಕಾಣದೇ 7 ಗಿಳಿಯು ಕೋಗಿಲೇ ಹಂಸ ಭೃಂಗನೇ ನಳಿನನಾಭನ ಸುಳಿವು ಕಂಡಿರಾ8 ಕಂದ ಮೂಲವೇ ಜಾಜಿ ವೃಕ್ಷವೇ ಇಂದಿರೇಶನ ಸುಳಿವು ಕಂಡಿರಾ 9 ಇಂದಿರೇಶನು ನಮ್ಮನು ವಂಚಿಸೀ ಮಂದಭಾಗ್ಯರ ಮಾಡಿ ಪೋರನು10 ಶ್ರುತಿಗೆ ಸಿಲುಕದ ದೋಷದೂರನೇ ವ್ರತವ ಕೆಡಿಸಿರೆ ಎಲ್ಲಿಗ್ಹೋಗೋಣ11 ರಂಗರಾಯನು ಬಂದು ಸೇರಿದ 12 ಬಹಳ ಪರಿಯಲಿ ಸ್ತೋತ್ರಮಾಡಲು ಕೃಷ್ಣರಾಯನು ಬಂದು ಸೇರಿದ13 ಮದನನಯ್ಯನಾ ಮುದದಿ ನೆನೆದರೆ ನದಿಯ ತೀರದಿ ವಿಜಯವಿಠ್ಠಲ14 ನದಿಯ ತೀರದ ತೀರ್ಥಪಾದರುಸಲಿಹ ಭಕುತರ ಪಾಲಿಸೂವನು 15
--------------
ವಿಜಯದಾಸ
ಪಾರ್ವತಿರಮಣನಾ ನೋಡಿದೆನು | ನೋಡಿದೆನು | ಪರ್ವತ ಮಲ್ಲೇಶನಾ 1 ಆಟವಾಡುತ ಪಾಟ ಪಾಡುತ | ಕೋಟಿ ಜನರ ಸಹಿತಾಗಿ ಸಾಟಿಯಿಲ್ಲದ ಪರ್ವತ | ನಾಗಾ ಲೋಟಿಯನೆ ನಾ ನೋಡಿದೆ 2 ಅಲ್ಲಿದ್ದ ಜನರ ಸಹಿತಾಗಿ ಪೆದ್ದ ಚೆರುವನ್ನೆದಾಟಿದೆ | ಪುಟ್ಟ ಬೆಟ್ಟಗಳೇರಿ ಇಳಿಯುತ ಕೃಷ್ಣಧ್ಯಾನವ ಮಾಡುತ ದಿಟ್ಟ ಮಲ್ಲಿಕಾರ್ಜುನನ ಮನ ಮುಟ್ಟಿ ಸ್ನರಣೆಯ ಮಾಡುತ 3 ಶ್ರೀಭೌಮನ ಕೊಳ್ಳ ನೇಮದಿಂದಲಿ ದಾಟಿದೆ4 ಆ ಶೈಲ ಕೈಲಾಸ ಧಾಮರೆ | ಸೋಂಪಿನಿಂದಲಿ ಬಂದೆನೂ ಸಾಕ್ಷಿಗಣಪಗೆ ಕೈಯ ಮುಗಿದೂ | ಶ್ರೀ ಶೈಲಶಿಖರವ ಕಂಡೆನು5 ಭಂಗಾರ ಗೋಪುರದ ಮ್ಯಾಲೆ | ಶೃಂಗಾರವನು ನಾ ನೋಡಿದೆ ನಂದಿ ಭೃಂಗಿ ಮೊದಲು ಮಾಡಿ ಸಕಲ ತೀರ್ಥವ ನೋಡಿದೆ6 ಅಲ್ಲಿ ಸ್ನಾನವ ಮಾಡಿನಾನು | ಬಲ್ಲಿದನ ಬಲದಿಂದಲಿ ಎಲ್ಲ ಫಲ ಪುಷ್ಪಧರಿಸಿದ ಮಲ್ಲಿಕಾರ್ಜುನನ ನೋಡಿದೆ 7 ಪಂಚಾಮೃತವ ಮಾಡಿನಾನು | ಸಂಚಿತಾಗಮ ಕರ್ಮವು ವಂಚನಿಲ್ಲದೆ ಕರೆದು | ನಿಶ್ಚಿಂತೆ ಮನವನು ಮಾಡಿದೆ 8 ಜನಿತ ಪಾತಾಳಗಂಗಿ ಉದಕವು ತಂದು ಗಂಗಾಧರಗೆ ಎರೆದು ನಾನು | ಕಂಗಳಿಂದಲಿ ನೋಡಿದೆ 9 ಥೂಪ-ದೀಪ-ನೈವೇದ್ಯದಾರುತಿ | ಅನೇಕ ಭಕ್ತಿಲಿ ಮಾಡಿದೆ ಪ್ರೀತಿಯ ತೋರೆಂದು ಶಿವಗೆ | ಪ್ರೀತಿಲಿ ಕರಮುಗಿದೆನು 10 ಮುದ್ದು ಕೋಟಿಲಿಂಗಗೆ ನಾನು | ವಿಧ್ಯುಕ್ತದಿ ನಮಿಸಿದೆ ವೃದ್ಧ ಮಲ್ಲೇಶ್ವರನ ನೋಡಿ | ಅಲ್ಲಿದ್ದದೇವರ ಭಜಿಸಿದೆ 11 ಅಮರರಿಂದರ್ಚಿಸಿಗೊಂಬ | ಭ್ರಮರಾಂಬನ ನೋಡಿದೆ ಭ್ರಮೆಯು ಬ್ಯಾಡೆಂದು ಸಂಸಾರದ | ಬ್ಯಾಗದಿಂದಲಿ ಬೇಡಿದೆ 12 ಥಟ್ಟನೇ ಪಂಚಾ ಮಠವನೋಡಿ | ಅಟಕೇಶ್ವರಕೆ ಬಂದೆನು ಶಿಖರೇಶ್ವರನ ದರ್ಶನ ಮಾಡಿ | ಹಾಟಕೇಶ ಪುರ ನೋಡಿದೆ13 ಭಾರತಿಯ ಶೈಲಿ ವಿಸ್ತಾರ ಪತ್ರಿ ಪುಷ್ಪಗಳ ಫಲಗಳ ನಾರಸಿಂಹ ವಿಠಲಗರ್ಪಿಸಿ | ಧಾರೆ ಎರೆದು ಬಂದೆನು 14
--------------
ಓರಬಾಯಿ ಲಕ್ಷ್ಮೀದೇವಮ್ಮ
ಫಣಿರಾಜಶಯನ ರುಕ್ಮಿಣೀ ದೇವಿಯೊಡಗೂಡಿ ಕುಳಿತಿರ್ದು ಸತಿಯೊಡನೆ ಅಣಕವಾಡಿದನು ಇನಿತೆಂದು 1 243 ಹೇ ರಾಜಕನ್ನಿಕೆ ಭೂರಮಣ ನಾನಲ್ಲ ನಾರದನ ನುಡಿಗೆ ನಳಿನಾಕ್ಷಿ 2 244 ಶಿಶುಪಾಲ ಮೊದಲಾದ ವಸುಧೆಪಾಲರ ಬಿಟ್ಟು ಸುಕುಮಾರಿ ಎನಲು ಪರ ವಶಳಾದಳಾಗ ಮಹಲಕ್ಷ್ಮಿ 3 245 ಈ ಮಾತ ಕೇಳಿ ಕೈ ಚಾಮರವನೀಡಾಡಿ ಭುಗಿಲೆಂದು ಮಲಗಿದಾ ಕಾಮಿನಿಯ ಕಂಡ ಕಮಲಾಕ್ಷ 4 246 ಕಂಗೆಟ್ಟಳೆಂದು ತನ್ನ ಅಂಗನೆಯ ಬಿಗಿದಪ್ಪಿ ಮುಂಗುರುಳ ತಿದ್ದಿ ಮುದ್ದಿಸಿ | ಮುದ್ದಿಸಿ ಮಾತಾಡ್ಡ ಕಂಗಳಶ್ರುಗಳ ಒರೆಸುತ್ತ5 247 ಸಲಿಗೆ ಮಾತಿನ ಬಗೆಯ ತಿಳಿಯದಲೆ ಹೀಗೆ ಚಂ ಚಲವನೈದುವರೆ ಚಪಲಾಕ್ಷಿ | ಚಪಲಾಕ್ಷಿ ಏಳೆಂದು ತÀಲೆಯ ಮೇಲಿಟ್ಟ ಕರಪದ್ಮ 6 248 ಶ್ರೀ ದೇವಿ ನಿನ್ನೊಳು ವಿನೋದ ಮಾಡಲಿಷ್ಟು ವಿ ಅನುದಿನ | ಅನುದಿನದಿ ಸ್ಮರಿಸುವರ ಕಾದುಕೊಂಡಿಹೆನು ಬಳಿಯಲ್ಲಿ 7 249 ಹಿಗ್ಗಿದಳು ಮನದಿ ಸೌಭಾಗ್ಯ ಭೂಮಿನಿಯು ಅಪ ವರ್ಗದನ ನುಡಿಗೆ ಹರುಷಾದಿ | ಹರುಷದಿಂದಲಿ ಪಾದ ಯುಗ್ಮಕೆರಗಿದಳು ಇನಿತೆಂದು 8 250 ಜಗದೇಕ ಮಾತೆ ಕೈ ಮುಗಿದು ಲಜ್ಜೆಯಲಾಗ ಮಾತಾಡಿದಳು ಪತಿಯ ಮೊಗವ ನೋಡುತಲಿ ನಳಿನಾಕ್ಷಿ 9 251 ಪರಿಪೂರ್ಣಕಾಮ ನಿನ್ನರಸಿ ನಾನಹುದು ಸ್ವೀ ಕರಿಸಿದೆಯೊ ಎನ್ನ ಸತಿಯೆಂದು | ಸತಿಯೆಂದ ಕಾರಣಾ ಕ್ಷರಳೆನಿಸಿಕೊಂಡೆ ಶ್ರುತಿಯಿಂದ10 252 ಭುವನಾಧಿಪತಿ ನೀನು ಅವಿಯೋಗಿ ನಿನಗಾನು ನೃಪರ ಪತಿಯೆಂದು | ಪತಿಯೆಂದು ಬಗೆವೆನೇ ಸವಿ ಮಾತಿದಲ್ಲ ಸರ್ವಜ್ಞ 11 253 ಭಗವಂತ ನೀನು ದುರ್ಭಗ ದೇಹಗತರವರು ತ್ರಿಗುಣವರ್ಜಿತವು ತವರೂಪ | ತವರೂಪ ಗುಣಗಳನು ಪೊಗಳಲೆನ್ನಳವೆ ಪರಮಾತ್ಮ12 254 ಭಾನು ತನ್ನಯ ಕಿರಣ ಪಾಣಿಗಳ ದೆಸೆಯಿಂದ ಪಾನೀಯಜಗಳನರಳಿಸಿ | ಆರಳಿಸಿ ಗಂಧ ಆ ಘ್ರಾಣಿಸಿದಂತೆ ಗ್ರಹಿಸೀದಿ13 255 ಬೈದವನ ಕುತ್ತಿಗೆಯ ಕೊಯ್ದು ಅಂಧಂತಮಸ್ಸಿ ಪರಿಪಂಥಿ ನೃಪರನ್ನು ಐದುವೆನೆ ನಿನ್ನ ಹೊರತಾಗಿ 14 256 ನಿಮ್ಮನುಗ್ರಹದಿಂದ ಬ್ರಹ್ಮರುದ್ರಾದಿಗಳ ನಿರ್ಮಿಸಿ ಸಲಹಿ ಸಂಹಾರ | ಸಂಹಾರ ಮಾಡುವೆನು ದುರ್ಮದಾಂಧರನಾ ಬಗೆವೇನೆ 15 257 ಮಂಜುಳೋಕ್ತಿಯ ಕೇಳಿ ಅಂಜಲ್ಯಾತಕೆಂದು ನವ ಕಂಜಲೋಚನೆಯ ಬಿಗಿದಪ್ಪಿ | ಬಿಗಿದಪ್ಪಿ ಮುದ್ದಿಸಿದ ಧ ನಂಜಯ ಪ್ರಿಯನು ಸಥೆಯಿಂದ16 258 ನಿನಗೆ ಎನ್ನಲಿ ಭಕುತಿ ಎನಿತಿಹುದೊ ಕಂಡೆ ಎಂದೆಂದು ಇಹುದು ಇದ ಕನುಮಾನವಿಲ್ಲ ವನಜಾಕ್ಷಿ 17 259 ದೋಷವರ್ಜಿತ ರುಕ್ಮಿಣೀಶನ ವಿಲಾಸ ತೋಷದಲಿ ಕೇಳಿ ಪಠಿಸಿದ | ಪಠಿಸಿದಂಥವರ ಅಭಿ ಲಾಷೆ ಪೊರೈಸಿ ಸಲಹೂವ 18 260 ನೀತಜನಕ ಶ್ರೀ ಜಗನ್ನಾಥ ವಿಠ್ಠಲ ಜಗ ನ್ಮಾತೆಯೆನಿಸುವಳು ಮಹಲಕ್ಷ್ಮಿ | ಮಹಲಕ್ಷ್ಮಿ ಸುತ ಬ್ರಹ್ಮ ಪಾತ್ರನೆನಿಸುವ ಗುರು ರುದ್ರ 19
--------------
ಜಗನ್ನಾಥದಾಸರು
ಯತಿಕಕ್ಷೆ - ದಾಸಕಕ್ಷೆ ಮುನಿಜನರ ನೆನೆಸಿ ಜನರೂ | ಮುನಿ ಜನರ ನೆನೆಸಿ ಬಿಡ | ದನುದಿನದಲಿ ನಿಮ್ಮ | ಮನ ಮಲಿನ ಪೋಗಿ ಸ | ವನಧಿ ಹರಿವೊಲಿದು | ಘನವಾಗಿ ಪಾಲಿಸುವನು ಪ ವಿಶ್ವ | ಮಿತ್ರ ಮೈತ್ರಾವಾರುಣಿ ಭೃಗು | ವೀತಿ ಹೋತ್ರ ಕಪಿ ಗಾಗ್ರ್ಯ ಗಾಲವ | ಗರ್ಗಗಾರ್ಚಮಾ || ಪತ್ರ ಫಾಲಾಶವಟು | ಶಾಂಡಿಲ್ಯ ಶಕಟ ಸು | ಕೃತಿ ಗೋತ್ರ ಗೌರೀವೀತಹವ್ಯ | ಕಪಿ ಶಂಖಕಟ ಮೈತ್ರಾವರುಣವಾಧುಳಾ || 1 ಉಪಮನ್ಯು ಶಂಕು ಉದ್ದಾಲಕ ಕೌಂಡಿಣ್ಯ | ಅಪುನವಾನ ಅತಿಥಿ ಪಾಂತುಚಾವನ ಚವನ | ಕ | ಶ್ಯಪ ಪೂತಿಮಾಷರೈಭ || ವಿಪುಳ ಜಮದಗ್ನಿ ವಾಲ್ಮಿಕಿ ರೇಭ ಜಾಬಾಲಿ | ಸ್ವಪನ ಸಾತ್ಯಕಿಯು ಸಾಮ್ಯಾಳ ದೇವರತತಿ | ಕಪಿಕುತ್ಸ್ನ ಪೌರಕುತ್ಸಾ 2 ಮುನಿಮಾದ್ರಮ ಶಣಶರ್ಮ ಬಾದರಾಯಣ | ಕನಕ ಕಾತ್ಯಾಯನ ಮಾರ್ಕಾಂಡ್ಯ ಮಾಂಡವ್ಯ | ತೃಣಬಿಂದು ಭಾಷ್ಕಾಳಾಖ್ಯ || ಪನಸ ಅಘಮರ್ಷಣ ಪ್ರಮಧ ಪ್ರಾಗಾಧ ಜೀ | ವನಯಾಜ್ಞವಲ್ಕ್ಯ ಜಿವಂತಿ ಮಾತಂಗ ಶೋ | ದನ ಧೌಮ್ಯ ಆರ್ಯ ರುಚಿರಾ || 3 ವಾಸಿಷ್ಟ ಶ್ರೀವತ್ಸ ಲೋಹಿತಾಷ್ಯಕಶರ್ವ | ಕರ್ದಮ ಮರೀಚಿ ಪಾ | ಬೇಷಿ ಜಾವಾಯುಲಿಕೆಯೂ || ಭೂಷಣೌ ಬಾರ್ಹಸ್ಪತ್ಯದಾಲ್ಭ್ಯ ಸುಯಜ್ಞಾಜ್ಞಿ | ವೇಶ್ಯ ಮುಖ ಸಪರಿಧಿಸಾಲಂಕಾಯನಾ ಧರ್ಮ | ನಾಶಯ ದೇವಶ್ರವತಾ ||4 ಶ್ರವ ಪೂರ್ಣವಾಹಕ ಕೃತು ಅಂಗಿರಸಾಂಗಿರಾ || ಲವ ಶಮನ ಋಷಿಶೃಂಗ || ಕವಿ ವೇದಶಾಲ ವಿಶಾಲ ಕೌಶಿಕ ಶುಚಿ | ಭುವನ ಉರ್ಜಯನ ಮಾಹಋಷಿಭಹುದ ಸಂ | ಭವಸ್ತಂಭ ಕಿರಾಠಿ ಕಪಿಸೇನ ಶಾಂಡಿಲ್ಯ | ಪವನದಮ ಬೀಜವಾಪಿ || 5 ಉಲಿಖಲು ಧನಂಜಯ ವಾಲಿಖ್ಯಮಾಯ | ಕಲಿಕಿ ಸೃಂಗಿ ಮಧು ಚಂದವಿತನು ಬಹು | ಶರಭ || ಪುಲಸ್ತ್ಯ ದಧೀಚಿ ಕಥಾಸೂನು ಸೇವಾಸ್ಯ ಮಾ | ದ್ಗಲ ವಿಷ್ಣು ತ್ರಿಧಕುಕ್ಷಿ ಶುಕ್ಷ ಮನತಂತು | ಬಲವೀರ್ಯ ಬಬ್ರಾಮೇನೂ6 ಅಪವರ್ಗ ಹಿರಣ್ಯನಾಭ ಅ | ದ್ಭುತ ಅಜಾಮೀಡ ಪರ್ವತ ಶ್ವೇತಕೇತಮಾಹ || ಸತ್ಯವ್ರತ ಶ್ರ್ರುತಿದೃತಿ ಆಯತಾ || ಶ್ರುತಿಕೀರ್ತಿ ಸುಪ್ರಭಾವತ್ಸ ಮೃತಾಂಡ ಸೂ | ಕ್ರೋಢ ಕೋಲ ಗೋಬಲ ಮಾತೃಕಾನಂದ || ಕಥನ ಸರ್ವಸ್ಥಂಬವಾ 7 ನೈಧ್ರುವಾ ದೀರ್ಘತಮ ಜಮದಗ್ನಿ ಕಾರುಣಿ | ಸದ್ಮುನಿಕಾಂಡಮಣಿ ಮಾಂಡವ್ಯವಾಚÀಸಕ | ಶಿದ್ಧಿಸನಕಸ ನಂದನಾ || ವಿದ್ಯಾಂಗ ಹವ್ಯರೋಹಿತಶರ್ಮ ಸೂಕರ್ಮ | ಮೇಧ ಮೇಧ ಪ್ರ | ಶುಕ ಬುದ್ಧಿ ಸಮೇಧ ಪೇರ್ಮಿ 8 ಪಂಚ ಪಂಚಾಸಪ್ತ ಅಪ್ಟ ಕಾಲದಲಿ ಪ್ರಾ | ಪಂಚದೊಳು ತೊಡಕದಲೆ ಬುದ್ಧಿ ಚಿತ್ತದೊಳಿಟ್ಟು | ಗಿದ್ದವರ ಕೊಂಚ ಮುನಿಗಳ ಪೇಳಿದೆ || ವಂಚನೆಯಿಲ್ಲದೆ ಸ್ಮರಿಸಿ ಮಧ್ವಮತಪೊಂದಿ | ಸಂಚಿತಾಗಮ ಕಳೆವ ಸರ್ವಸುಖವೀವ ವಿ | ಮಿಂಚಿನಂದದಿ ಪೊಳೆವನು 9
--------------
ವಿಜಯದಾಸ
ಶ್ರೀ ಮಧ್ವನಾಮ ಜಯ ಜಯ ಜಗತ್ರಾಣ ಜಗದೊಳಗೆ ಸುತ್ರಾಣಅಖಿಳ ಗುಣ ಸದ್ಧಾಮ ಮಧ್ವನಾಮ ಪ ಆವ ಕಚ್ಚಪ ರೂಪದಿಂದ ಲಂಡೋದಕವಓವಿ ಧರಿಸಿದ ಶೇಷಮೂರುತಿಯನುಆವವನ ಬಳಿವಿಡಿದು ಹರಿಯ ಸುರರೆಯ್ದುವರುಆ ವಾಯು ನಮ್ಮ ಕುಲಗುರುರಾಯನು 1 ಆವವನು ದೇಹದೊಳಗಿರಲು ಹರಿ ನೆಲಸಿಹನುಆವವನು ತೊಲಗೆ ಹರಿ ತಾ ತೊಲಗುವಆವವನು ದೇಹದ ಒಳ ಹೊರಗೆ ನಿಯಾಮಕನುಆ ವಾಯು ನಮ್ಮ ಕುಲಗುರುರಾಯನು 2 ಸುರರು ಮುಖ್ಯಪ್ರಾಣ ತೊಲಗಲಾ ದೇಹವನುಅರಿತು ಪೆಣವೆಂದು ಪೇಳುವರು ಬುಧಜನ 3 ಸುರರೊಳಗೆ ನರರೊಳಗೆ ಸರ್ವ ಭೂತಗಳೊಳಗೆಪರತರನೆನಿಸಿ ನಿಯಾಮಿಸಿ ನೆಲಸಿಹಹರಿಯನಲ್ಲದೆ ಬಗೆಯ ಅನ್ಯರನು ಲೋಕದೊಳುಗುರು ಕುಲತಿಲಕ ಮುಖ್ಯ ಪವಮಾನನು 4 ತರಣಿ ಬಿಂಬಕ್ಕೆ ಲಂಘಿಸಿದಈತಗೆಣೆಯಾರು ಮೂರ್ಲೋಕದೊಳಗೆ 5 ತರಣಿಗಭಿಮುಖನಾಗಿ ಶಬ್ದ ಶಾಸ್ತ್ರವ ರಚಿಸಿಉರವಣಿಸಿ ಹಿಂದು ಮುಂದಾಗಿ ನಡೆದಪರಮ ಪವಮಾನಸುತ ಉದಯಾಸ್ತ ಶೈಲಗಳಭರದಿಯೈದಿದಗೀತಗುಪಮೆ ಉಂಟೇ 6 ಅಖಿಳ ವೇದಗಳ ಸಾರಪಠಿಸಿದನು ಮುನ್ನಲ್ಲಿನಿಖಿಳ ವ್ಯಾಕರಣಗಳ ಇವ ಪಠಿಸಿದಮುಖದಲ್ಲಿ ಕಿಂಚಿದಪಶಬ್ದ ಇವಗಿಲ್ಲೆಂದುಮುಖ್ಯಪ್ರಾಣನನು ರಾಮನನುಕರಿಸಿದ 7 ತರಣಿಸುತನನು ಕಾಯ್ದು ಶರಧಿಯನು ನೆರೆದಾಟಿಧರಣಿಸುತೆಯಳ ಕಂಡು ದನುಜರೊಡನೆಭರದಿ ರಣವನೆ ಮಾಡಿ ಗೆಲಿದು ದಿವ್ಯಾಸ್ತ್ರಗಳಉರುಹಿ ಲಂಕೆಯ ಬಂದ ಹನುಮಂತನು 8 ಹರಿಗೆ ಚೂಡಾಮಣಿಯನಿತ್ತು ಹರಿಗಳ ಕೂಡಿಶರಧಿಯನು ಕಟ್ಟಿ ಬಲು ರಕ್ಕಸರನುಒರಸಿ ರಣದಲಿ ದಶಶಿರನ ಹುಡಿಗುಟ್ಟಿದಮೆರೆದ ಹನುಮಂತ ಬಲವಂತ ಧೀರ 9 ಉರಗ ಬಂಧಕೆ ಸಿಲುಕಿ ಕಪಿವರರು ಮೈಮರೆಯೆತರಣಿ ಕುಲತಿಲಕನಾಜ್ಞೆಯ ತಾಳಿದಗಿರಿಸಹಿತ ಸಂಜೀವನವ ಕಿತ್ತು ತಂದಿತ್ತಹರಿವರಗೆ ಸರಿಯುಂಟೆ ಹನುಮಂತಗೆ 10 ವಿಜಯ ರಘುಪತಿ ಮೆಚ್ಚಿ ಧರಣಿಸುತೆಯಳಿಗೀಯೆಭಜಿಸಿ ಮೌಕ್ತಿಕದ ಹಾರವನು ಪಡೆದಅಜಪದವಿಯನು ರಾಮ ಕೊಡುವೆನೆನೆ ಹನುಮಂತನಿಜಭಕುತಿಯನೆ ಬೇಡಿ ವರವ ಪಡೆದ 11 ಆ ಮಾರುತನೆ ಭೀಮನೆನಿಸಿ ದ್ವಾಪರದಲ್ಲಿ ಸೋಮಕುಲದಲಿ ಜನಿಸಿ ಪಾರ್ಥನೊಡನೆ ಭೀಮ ವಿಕ್ರಮ ರಕ್ಕಸರ ಮುರಿದೊಟ್ಟಿದಆ ಮಹಿಮನಮ್ಮ ಕುಲಗುರು ರಾಯನು 12 ಕರದಿಂದಶಿಶುಭಾವನಾದ ಭೀಮನ ಬಿಡಲುಗಿರಿವಡೆದುಶತಶೃಂಗವೆಂದೆನಿಸಿತುಹರಿಗಳ ಹರಿಗಳಿಂ ಕರಿಗಳ ಕರಿಗಳಿಂಅರೆವ ವೀರನಿಗೆ ಸುರ ನರರು ಸರಿಯೇ 13 ಕುರುಪ ಗರಳವನಿಕ್ಕೆ ನೆರೆ ಉಂಡು ತೇಗಿಹಸಿದುರಗಗಳ ಮ್ಯಾಲೆ ಬಿಡಲದನೊರಸಿದಅರಗಿನರಮನೆಯಲ್ಲಿ ಉರಿಯನಿಕ್ಕಲು ವೀರಧರಿಸಿ ಜಾಹ್ನವಿಗೊಯ್ದ ತನ್ನನುಜರ14 ಅಲ್ಲಿರ್ದ ಬಕ ಹಿಡಿಂಬಕರೆಂಬ ರಕ್ಕಸರನಿಲ್ಲದೊರಸಿದ ಲೋಕಕಂಟಕರನುಬಲ್ಲಿದಸುರರ ಗೆಲಿದು ದ್ರೌಪದಿಯ ಕೈವಿಡಿದುಎಲ್ಲ ಸುಜನರಿಗೆ ಹರುಷವ ತೋರಿದ 15 ರಾಜಕುಲ ವಜ್ರನೆನಿಸಿದ ಮಾಗಧನ ಸೀಳಿರಾಜಸೂಯ ಯಾಗವನು ಮಾಡಿಸಿದನುಆಜಿಯೊಳು ಕೌರವರ ಬಲವ ಸವರುವೆನೆಂದುಮೂಜಗವರಿಯೆ ಕಂಕಣ ಕಟ್ಟಿದ 16 ಮಾನನಿಧಿ ದ್ರೌಪದಿಯ ಮನದಿಂಗಿತವನರಿತುದಾನವರ ಸವರಬೇಕೆಂದು ಬ್ಯಾಗಕಾನನವ ಪೊಕ್ಕು ಕಿಮ್ಮೀರಾದಿಗಳ ತರಿದುಮಾನಿನಿಗೆ ಸೌಗಂಧಿಕವನೆ ತಂದ 17 ದುರುಳ ಕೀಚಕನು ತಾಂ ದ್ರೌಪದಿಯ ಚಲುವಿಕೆಗೆಮರುಳಾಗಿ ಕರೆÀಕರೆಯ ಮಾಡಲವನಾಗರಡಿ ಮನೆಯಲ್ಲಿ ವರೆಸಿ ಅವನನ್ವಯದಕುರುಪನಟ್ಟಿದ ಮಲ್ಲಕುಲವ ಸದೆದ 18 ಕೌರವರ ಬಲ ಸವರಿ ವೈರಿಗಳ ನೆಗ್ಗೊತ್ತಿಓರಂತೆ ಕೌರವನ ಮುರಿದು ಮೆರೆದವೈರಿ ದುಶ್ಯಾಸನ್ನ ರಣದಲ್ಲಿ ಎಡೆಗೆಡಹಿವೀರ ನರಹರಿಯ ಲೀಲೆಯ ತೋರಿದ 19 ಗುರುಸುತನು ಸಂಗರದಿ ನಾರಾಯಣಾಸ್ತ್ರವನುಉರವಣಿಸಿ ಬಿಡಲು ಶಸ್ತ್ರವ ಬಿಸುಟರುಹರಿಕೃಪೆಯ ಪಡೆದಿರ್ದ ಭೀಮ ಹುಂಕಾರದಲಿಹರಿಯ ದಿವ್ಯಾಸ್ತ್ರವನು ನೆರೆ ಅಟ್ಟಿದ 20 ಚಂಡ ವಿಕ್ರಮನು ಗದೆಗೊಂಡು ರಣದಿ ಭೂಮಂಡಲದೊಳಿದಿರಾಂತ ಖಳರನೆಲ್ಲಾಹಿಂಡಿ ಬಿಸುಟಿಹ ವೃಕೋದರನ ಪ್ರತಾಪವನುಕಂಡುನಿಲ್ಲುವರಾರು ತ್ರಿಭುವನದೊಳು21 ದಾನವರು ಕಲಿಯುಗದೊಳವತರಿಸಿ ವಿಬುಧರೊಳುವೇನನ ಮತವನರುಹಲದನರಿತುಜ್ಞಾನಿ ತಾ ಪವÀಮಾನ ಭೂತಳದೊಳವತರಿಸಿಮಾನನಿಧಿ ಮಧ್ವಾಖ್ಯನೆಂದೆನಿಸಿದ 22 ಅರ್ಭಕತನದೊಳೈದಿ ಬದರಿಯಲಿ ಮಧ್ವಮುನಿನಿರ್ಭಯದಿ ಸಕಳ ಶಾಸ್ತ್ರವ ಪಠಿಸಿದಉರ್ವಿಯೊಳು ಮಾಯೆ ಬೀರಲು ತತ್ವಮಾರ್ಗವನುಓರ್ವ ಮಧ್ವಮುನಿ ತೋರ್ದ ಸುಜನರ್ಗೆ23 ವಿಶ್ವ ವಿಶ್ವ ಗೀರ್ವಾಣ ಸಂತತಿಯಲಿ 24 ಅಖಿಳ ವೇದಾರ್ಥಗಳನುಪದುಮನಾಭನ ಮುಖದಿ ತಿಳಿದು ಬ್ರಹ್ಮತ್ವಯ್ಯೆದಿದ ಮಧ್ವಮುನಿರಾಯಗಭಿವಂದಿಪೆ 25 ಜಯಜಯತು ದುರ್ವಾದಿಮತತಿಮಿರ ಮಾರ್ತಾಂಡಜಯಜಯತು ವಾದಿಗಜ ಪಂಚಾನನಜಯಜಯತು ಚಾರ್ವಾಕಗರ್ವಪರ್ವತ ಕುಲಿಶಜಯ ಜಯ ಜಗನ್ನಾಥ ಮಧ್ವನಾಥ26 ತುಂಗಕುಲ ಗುರುವರನ ಹೃತ್ಕಮಲದಲಿ ನಿಲಿಸಿಭಂಗವಿಲ್ಲದೆ ಸುಖದ ಸುಜನಕೆಲ್ಲಹಿಂಗದೆ ಕೊಡುವ ನಮ್ಮ ಮಧ್ವಾಂತರಾತ್ಮಕರಂಗವಿಠಲನೆಂದು ನೆರೆ ಸಾರಿರೈ 27 “ಮಧ್ವನಾಮ” ಕೃತಿಗೆ ಶ್ರೀ ಜಗನ್ನಾಥದಾಸರ ಫಲಶ್ರುತಿ ಸೋಮ ಸೂರ್ಯೋಪರಾಗದಿ ಗೋಸಹಸ್ರಗಳಭೂಮಿದೇವರಿಗೆ ಸುರನದಿಯ ತೀರದಿಶ್ರೀಮುಕುಂದಾರ್ಪಣವೆನುತ ಕೊಟ್ಟ ಫಲಮಕ್ಕುಈ ಮಧ್ವನಾಮ ಬರೆದೋದಿದರ್ಗೆ 1 ಪುತ್ರರಿಲ್ಲದವರು ಸತ್ಪುತ್ರರೈದುವರುಸರ್ವತ್ರದಲಿ ದಿಗ್ವಿಜಯವಹುದು ಸಕಲಶತ್ರುಗಳು ಕೆಡುವರಪಮೃತ್ಯು ಬರಲಂಜವುದುಸೂತ್ರನಾಮಕನ ಸಂಸ್ತುತಿ ಮಾತ್ರದಿ 2 ಶ್ರೀಪಾದರಾಯ ಪೇಳಿದ ಮಧ್ವನಾಮ ಸಂತಾಪಕಳೆದಖಿಳ ಸೌಖ್ಯವನೀವುದುಶ್ರೀಪತಿ ಜಗನ್ನಾಥವಿಠಲನ ತೋರಿ ಭವಕೂಪಾರದಿಂದ ಕಡೆ ಹಾಯಿಸುವುದು 3
--------------
ಶ್ರೀಪಾದರಾಜರು
ಶ್ರೀವೇಂಕಟೇಶ ಸುಪ್ರಭಾತ ಶ್ರೀವೆಂಕಟೇಶಂಗೆ ಜಯ ಸುಪ್ರಭಾತ ದೇವಾದಿದೇವಂಗೆ ನವಸುಪ್ರಭಾತ ಪ ಪಾವನ ಶರೀರಂಗೆ ಜಯ ಸುಪ್ರಭಾತ ದೇವಪರಮಾತ್ಮಂಗೆ ನವಸುಪ್ರಭಾತ ಅ.ಪ ಅಂದು ಕೌಸಲ್ಯೆಯಣುಗ ರಾಮಾ ಏಳು ಎಂದಿನಂತೆ ಆಹ್ನಿಕವ ಮಾಡೆಂದು ನುಡಿಯಾ ಮುಂದೆ ವಿಶ್ವಾಮಿತ್ರ ಮುನಿ ರಾಮಭದ್ರಂಗೆ ಮಂದಹಾಸದಿ ಪೇಳ್ದ ಸರಯೂಬಳಿಯಲ್ಲಿ 1 ಎದ್ದೇಳು ಗೊವಿಂದ ಗರುಡಧ್ವಜಸ್ವಾಮಿ ಉದ್ಧರಿಸ ಬೇಕಯ್ಯ ಕರುಣಾಂತರಂಗ ಎದ್ದೇಳು ಚೈತನ್ಯ ಪುಣ್ಯದಾತ [ಎದ್ದೇಳು ಕಮಲಾಕಾಂತರಂಗ] 2 ಮಧುಕೈಟಭಾರಿಯಾ ವಕ್ಷಸ್ಥಲದಲಿ ನಿಂದ ಹದಿನಾಲ್ಕು ಲೋಕಗಳ ಮಾತೆಯೆನಿಸಿ ಪದುಮಾಕ್ಷಿ ಲಕ್ಷ್ಮೀಗೆ ಜಯಸುಪ್ರಭಾತ 3 ಸರ್ವಭುವನೇಶ್ವರಿ ಸರ್ವ ಭಕ್ತಂಕರಿ ಸರ್ವಲೋಕ ವಿಖ್ಯಾತೆ ಜಾತೆ ವಿನೀತೇ ಸರ್ವಲೋಕೇಶನ ರಾಣಿ ಕಲ್ಯಾಣಿ ಸರ್ವಸನ್ನುತೆ ನಿನಗೆ ಸುಪ್ರಭಾತ 4 ಸಪ್ತರ್ಷಿ ಮಂಡಲವು ಔಪಾಸನೆಯಾಗೆ ತೃಪ್ತರಾಗಿರುತಿಹರು ನಭದ ನದಿಯೊಳು ವ್ಯಾಪ್ತವಾದಖಿಳ ಕರಪುಷ್ಪಗಳ ಅರ್ಪಿಸಿ ಒಪ್ಪಿರ್ಪರೇಳೇಳು ವೆಂಕಟೇಶ 5 ಅಜ ನಿರಂಜನ ಸ್ಮರಿಸಿ ತ್ರೈವಿಕ್ರಮನ ಚರಿತೆಗೇಳು ಶಿರಬಾಗಿ ವಂದಿಪರು ಗುರು ಶುಭವ ಪೇಳುವನು ವರದರಾಜ ಏಳು ವೇಂಕಟೇಶ 6 ಈಗ ವಿಕಸಿತವಾದ ಕಮಲಸೌರಭದೊಡನೆ ರಾಗ ರಸ ತಂಪಿಂಪು ಮಿಳಿತಮಾಗಿ ಸಾಗುತಿದೆ ತಂಗಾಳಿ ಉಲ್ಲಾಸಮಂ ಬೀರಿ ತ್ಯಾಗಿ ನೀನೇಳಯ್ಯ ವೇಂಕಟೇಶ 7 ಕದಳಿ ಖರ್ಜೂರಗಳ ರಸಯುಕ್ತ ಪಾಯಸ ಮುದದಿ ಸಂಸೇವಿಸುತ ಉತ್ಸಾಹದೀ ಮಧುರ ಗಾನವ ಪಾಡಿ ಶುಕಪಿಕಗಳುಲಿಯುತಿವೆ ಪದುಮನಾಭ ಏಳು ವೇಂಕಟೇಶ 8 ದೇವರ್ಷಿನಾರದನು ಮಹತಿ ವೀಣೆಯ ನುಡಿಸಿ ದೇವದೇವನೆ ನಿನ್ನ ನುತಿಸುತಿಹನು ಭಾವರಸಯುತವಾದ ಗಾನಕೇಳುತಿಹುದು ಪಾವನಾತ್ಮನೇ ಏಳು ವೇಂಕಟೇಶ 9 ಸುರಿವ ಮಕರಂದವನು ಹೀರಿ ಹೀರಿ ಅರುಣನುದಯವ ತಿಳಿದು ಅರಳುತಿಹ ಕಮಲದಿಂ ಸರಸರನೆ ಝೇಂಕರಿಸಿ ಬರುತಿರ್ಪುವೈ ಸಿರಿಯ ದುಂಬಿಗಳೇಳು ವೆಂಕಟೇಶ 10 ಮಡದಿಯರು ಕೆನೆಮೊಸರನಾಂತ ಭಾಂಡಗಳಲ್ಲಿ ಕಡೆಗೋಲಿನಿಂ ಮಥಿಸಿ ಹಾಡುತಿಹರು ಅಡಿಗಡಿಗೆ ಜಯ ಘೋಷ ಕೇಳುತಿದೆಯಯ್ಯ ಪೊಡವೀಶ ನೀನೇಳು ವೇಂಕಟೇಶ 11 ಕಮಲದಿಂದೈತಂದ ದುಂಬಿಗಳು ಸುತ್ತಲಿನ ಕುಮುದಗಳ ಮೈಗಪ್ಪಿ ಝರಿಝರಿ ಗರ್ವದಿ ಅಮರ ದುಂದುಭಿಯಂತೆ ಝೇಂಕರಿಸುತಿವೆಯಿದೋ ವಿಮಲಾಂಗ ನೀನೇಳು ವೇಂಕಟೇಶ 12 ಶ್ರೀರಮೆಯ ನಿತ್ಯಯೋಗಸ್ಥಾನ ಹೇಸ್ವಾಮಿ ಭೂರಿಭಕ್ತರ ಕಾಯ್ವ ಕರುಣಾನಿಧೇ ಸ್ವಾಮಿ ಮೂರು ಲೋಕವನಳೆದು ಪಾಲಿಸುವ ಸ್ವಾಮಿ ಮಾರಮಣ ನೀನೇಳು ವೇಂಕಟೇಶ 13 ಅಜ ರುದ್ರ ಸನಕಾದಿ ಪರಮ ಭಕ್ತರ ಬಂಧು ಭಜಿಸಿ ತವ ದರ್ಶನವ ಕಾಯುತಿಹರು ವಿಜಯ ಜಯರೀರ್ವರು ತಡೆಯುತ್ತಲಿಹರಯ್ಯ ಗಜವಿನುತ ನೀನೇಳು ವೇಂಕಟೇಶ 14 ಶೌರಿ ನಿನ್ನಾವಾಸ ತಾಣ ವೈಕುಂಠದಿಂದ ನಾರಾಯಣಾದ್ರಿ ಗರುಡಾದ್ರಿ ಎಂತೆಂಬ ಆರೇಳು ನಾಮಗಳ ಪೇಳ್ವರಿದು ಶೇಷಾದ್ರಿ ಸಾರತರ ನಾಮವೈ ವೇಂಕಟೇಶ 15 ಭುವಿಯ ಗೋಪಾಲಕರು ಅನುಮತಿಯ ಬೇಡುವರು ರವಿಯಗ್ನಿಯುಕ್ತ ನವಗ್ರಹಗಳು ಕಾದಿಹರು ಭವದೂರನೇ ನಿನಗೆ ಸುಪ್ರಭಾತ 16 ದಿವಿಮೋಕ್ಷ ಬೇಡ ತವದರ್ಶನವು ಸಾಕೆಂದು ನವಭಕ್ತಿಯಿಂ ತಳೆದು ಭಜನೆ ಮಾಡುತಿಹರು ಪವಮಾನನುತ ನಿನಗೆ ಸುಪ್ರಭಾತ 17 ನಿನ್ನ ಧಾಮದ ಶಿಖರ ವೀಕ್ಷಣೆಯೊಳಾನಂದ ವನ್ನು ಪಡುತಿಹರೆಲ್ಲ ಶರಣ ಜನರು ನಿನ್ನ ದರ್ಶನವೊಂದೆ ಪರಮ ಪದವದನು ಸನ್ನುತಾಂಗನೆ [ತೋರೇಳು]ಸುಪ್ರಭಾತ 18 ಭೂಮಿಪತಿ ಕರುಣಾಂಬುಸಾಗರನೆ| ಧೀರ ಶೂರಾನಂತ ಗರುಡ ವಿಷ್ವಕ್ಸೇನ ರಾರಾಜಿಸುತ್ತಿಹರು ನಿನ್ನ ದರ್ಶನಕಾಗಿ ನಾರಾಯಣಾ ನಿನಗೆ ಸುಪ್ರಭಾತ|| 19 ಕಮಲನಾಭ ದೇವ ಪುರುಷೋತ್ತಮಾ ಸ್ವಾಮಿ ಅಮಲಸದ್ಗುಣಧಾಮ ಕೃಷ್ಣ ವೈಕುಂಠ ಸುಮಬಾಣಕೋಟಿ ಸೌಂದರ್ಯನುತ ಮಾರಮಣ ಕಮಲನಯನಾ ನಿನಗೆ ಸುಪ್ರಭಾತ|| 20 ದೀನರಕ್ಷಣೆಗಾಗಿ ಹತ್ತುಜನ್ಮದಿ ಬಂದೆ ಮಾನವ ಶ್ರೇಷ್ಠರೂ ಆಕಾಶಗಂಗೆಯಲಿ ನಾನಾ ಸುಗಂಧಗಳ ಬೆರೆಸಿ ಕಾಯುತ್ತಿಹರು ಭಾನುತೇಜನೆ ನಿನಗೆ ಸುಪ್ರಭಾತ 21 ದಿನಪನುದಯಿಸುತ್ತಿಹನು ಕಮಲವರಳುತ್ತಿಹುದು ಬನದ ಪಕ್ಷಿಗಳೆಲ್ಲ ಹಾಡುತ್ತಲಿಹವು ಘನವೈಷ್ಣವರು ಮಂಗಳಂಗಳಂ ಪಾಡುವರು ಮನುಜಪುಂಗವ ನಿನಗೆ ಸುಪ್ರಭಾತ 22 ಕಮಲಜಾದ್ಯಮರರೂ ಸಪ್ತರ್ಷಿಯೋಗಿಗಳು ವಿಮಲ ಮಾನಸರಾಗಿ ನಿನಗಾಗಿ ಕಾದಿಹರು ತಿಮಿರಸಾಗರವನ್ನು ದಾಟಿಸುವ ಪರಮಾತ್ಮ ಕಮನೀಯಗುಣ ನಿನಗೆ ಸುಪ್ರಭಾತ|| 23 ಭಾವನೆಯೊಳೀಯದ್ರಿ ವೈಕುಂಠವಾಗಿಹುದು ಮಾವನಿತೆಯುಪಚಾರದಭ್ಯರ್ಥಿಯಾಗಿಹಳು ಶ್ರೀವೈಷ್ಣವ ಕೇಳು ಕೈಮುಗಿದು ಕಾದಿಹರು ಕಾವಕಾರುಣ್ಯನಿಧಿ [ನಿನಗೆ ಸುಪ್ರಭಾತ] 24 ಅರುಣೋದಯದೊಳೆದ್ದು ಈ ಸುಪ್ರಭಾತವನು ಪರಮ ಭಕ್ತಿಯೊಳೊಮ್ಮೆ ಪಾಡುವರಿಗೆ ಪರಮಪುರುಷನು ದಿವ್ಯತಾಣವನು ನೀಡುವನು ಹಿರಿಯರಾ ವಚನವಿದು ಪರಮ ಚರಿತಾರ್ಥ25 ಶರಣಾಗತಿ ಒಂದೆರಡು ಮೂರು ನಾಲ್ಕೈದಾರು ಮೊಗದವರು ಬಂದು ವಂದಿಸುತಿಹರು ಪುರುಷೋತ್ತಮ ಬಂಧುರ ಶರೀರನೀ ಪಾಲಿಸೆಮ್ಮ ವೆಂಕಟೇಶ 26 ನಾನಾಪರಾಧಗಳ ಮಾಡಿರುವೆನಯ್ಯ ನೀನೆಲ್ಲವನು ಕ್ಷಮಿಸಿ ಪರಿಪಾಲಿಸಯ್ಯ ನೀನೇ ಸರ್ವಾಧಾರ ಕರುಣಾಂತರಂಗನು ದಾನಶೀಲಾ ಸ್ವಾಮಿ ಶ್ರೀವೇಂಕಟೇಶ 27 ಗೋಪಿಕಾ ಪರಿವೃತನೆ ಪರವಾಸುದೇವನೆ ಗೋಪಿಕಾ ಗೀತಗುಣ ಸಂಪೂಜ್ಯ ದೇವನೆ ಗೋಪಿಕಾ ಮನ್ಮಥನೆ ದೈತ್ಯಾರಿ ಶ್ರೀಕೃಷ್ಣ ನೀ ಪೊರತು ಬೇರೆ ದೇವರ ಕಾಣೆ ವೆಂಕಟೇಶ28 ದಶರಥನ ಸುತನಾಗಿ ಜಾನಕಿಯ ಕರವಿಡಿದು ದಶಮುಖಾದ್ಯಸುರರನು ಸಂಹರಿಸಿದಾತ ಶಶಿಮೌಳಿ ವಂದ್ಯನೆ ಲೋಕಮೋಹನ ಸ್ವಾಮಿ ಕ್ಲೇಶಗಳ ಸಹಿಸಿ ಶಾಶ್ವತ ಸುಖವ ನೀಡಯ್ಯ ವೆಂಕಟೇಶ 29 ಕಂಜಾಯತಾಕ್ಷಿಯೆ ಸರ್ವಲೋಕ ಶರಣೇ ಕಂಜವದನೆಯೆ ಸರ್ವವಾತ್ಸಲ್ಯ ಪೂರ್ಣೇ ಕಂಜನಾಭನ ದಿವ್ಯ ವಕ್ಷಸ್ಥಲಾವಾಸಿ ಕಂಜಸರ್ವಾಂಗಿ ಪೊರೆ ಪುಣ್ಯಚರಿತೆ ಶ್ರೀಯೆ 30 ಸರ್ವಲೋಕ ಶರಣ್ಯ ಸರ್ವಗುಣ ಸಂಪೂರ್ಣ ಸರ್ವದೇವರದೇವ ವೇದವಂದಿತ ಸರ್ವಕಾರುಣ್ಯನಿಧಿ ಸರ್ವಾತ್ಮ ಸಂಚಾರಿ ಸರ್ವಪೂಜಿತ ನಿನಗೆ ಶರಣು ವೆಂಕಟೇಶ 31 ರಕ್ಷಿಸು ಜಗನ್ಮಯ ರಕ್ಷಿಸು ದಯಾಮಯ ರಕ್ಷಿಸು ಮನೋಮಯಾ ಮಾಯ ನಿರ್ಮಾಯ ರಕ್ಷಿಸೈ ಸರ್ವಜ್ಞ ಸರ್ವಲೋಕಾಧ್ಯಕ್ಷ ರಕ್ಷಸೈ ಹರಿ ನಿನ್ನ ಚರಣ ವೆಂಕಟೇಶ 32 ಆವನಾದಿಯನಂತನೆಂದೆನಿಪನೊ ವರವ ಈವ ಕರುಣಾಳುವೋ ಜೀವರಾಶಿಯನೆಲ್ಲ ಕಾವನೋ ಸಹಸ್ರಾಕ್ಷನೆಂದೆನಿಪ ದೇವನಾ ಶ್ರೀವನಜ ಪದವೆನಗೆ ಶರಣು ವೆಂಕಟೇಶ 33 ವೇದಗಳ ತಂದು ಮಂದರವೆತ್ತಿ ಹರಿಯ ಮೇದಿನಿಯ ನಳೆದ ಭಾರ್ಗವನಾದ ರಾಮನೀ ನಾದೆ ಕಂಸನಕೊಂದೆ ಗೋಪಾಲಕೃಷ್ಣ ನಾದ ಕಲ್ಕೀ ನಿನ್ನ ಚರಣ ವೆಂಕಟೇಶ34 ಮೂರು ವೇಣಿಗಳುಳ್ಳ ಗಂಗೆ ಪುಟ್ಟಿದ ಪಾದ ಮೂರು ಲೋಕವನಳೆದ ಸುಪ್ರಸಿದ್ಧದ ಪಾದ ಮೂರು ಕಣ್ಣಾಂತವನು ಜಪಿಸುತಿರುವ ಪಾದ ಚಾರುತರ ಪದವೆನಗೆ ಶರಣು ವೆಂಕಟೇಶ 35 ಕಾಳಿಂಗನಾ ಹೆಡೆಯ ತುಳಿದು ಕುಣಿದಾ ಪಾದ ಖೂಳ ಶಕಟನನೊದ್ದು ಕೊಂದ ಪಾದ ಚೋಳರಾಯನು ತೊಳೆದು ವಂದಿಸಿದ ಪಾದ ನಾಳೀಕ ಪದವೆನಗೆ ಶರಣು ವೆಂಕಟೇಶ36 ಕ್ಷೀರವಾರಿಧಿತನುಜೆಯೊಪ್ಪಿ ವೊತ್ತುವ ಪಾದ ನಾರದಾದಿಗಳೆಲ್ಲ ಪಿಡಿದು ನಲಿವಾ ಪಾದ ಶ್ರೀರಮಣಿ ಮುದದಿಂದ ಕಣ್ಗೊತ್ತುವ ಪಾದ ಮಾರಮೋಹಕ ನಿನ್ನ ಚರಣ ವೆಂಕಟೇಶ37 ಮಂಗಳ ಕಲ್ಯಾಣ ರೂಪಂಗೆ ಅದ್ಭುತಾಕಾರಂಗೆ ಮಾಲ್ಯಪೀತಾಂಬರಾಂಗದ ಶೋಭಿತಂಗೆ ಶಾಲ್ಯನ್ನ ಸಂಪ್ರೀತ ಶ್ರೀ ವೇಂಕಟೇಶಂಗೆ ಬಾಲ್ಯಕುಂದದವಂಗೆ ಜಯಮಂಗಳ 38 ಭಕ್ತಪರಿಪಾಲಂಗೆ ಜಗದಾದಿ ಮೂಲಂಗೆ ಭಕ್ತಿದಾತಾರಂಗೆ ರಮೆಯರಸಂಗೆ ಮುಕ್ತಿ ಸೌಖ್ಯವನೀವ ಶ್ರೀವೇಂಕಟೇಶಂಗೆ ಶಕ್ತಿ ಸ್ವರೂಪಂಗೆ ಶುಭಮಂಗಳ 39 ಶೇಷಾದ್ರಿ ವಾಸಂಗೆ ದಿನಕರ್ತ ಭಾಸಂಗೆ ಕ್ಲೇಷದಾರಿದ್ರ್ಯಾದಿ ಪರಿಹಾರ ಕರ್ತಂಗೆ ಶೇಷ ಪಂiÀರ್iಂಕಂಗೆ ಶ್ರೀ ಶ್ರೀನಿವಾಸಂಗೆ ದೋಷಾಪಹಾರಂಗೆ ಜಯಮಂಗಳ 40 ಅರವಿಂದ ವದನಂಗೆ ಅರವಿಂದ ಲೋಚನಗೆ ಅರವಿಂದನಾಭನಿಗೆ ಅರವಿಂದ ಗಾತ್ರಗೆ ಅರವಿಂದ ಪಾದನಿಗೆ ಅರವಿಂದ ಭೂಷನಿಗೆ ಅರವಿಂದ ಹಸ್ತಂಗೆ ಶುಭಮಂಗಳಂ 41 ಹಿಂದಿನಾಚಾರ್ಯರಿಗೆ ಮುನಿಮುಖ್ಯಭಕ್ತರಿಗೆ ಇಂದಿನಾ ಭೂದೇವಿ ನೀಳಾದಿ ವಧುಗಳಿಗೆ ಮಂದಾಕಿನೀಧರಗೆ ಇಂದ್ರ ದಿಕ್ಪಾಲರಿಗೆ ವಂದಿಪೆನು ಮಂಗಳಾಚರಣೆ ಮಾಡಿ 42 ಫಲಶ್ರುತಿ ಹನ್ನೆರಡು ಮಾಸವು ತಪ್ಪದೆ ಹಾಡಿದರೆ ಮುನ್ನಮಾಡಿದ ಪಾಪವೆಲ್ಲ ಕಳೆಯುವುದು ಪನ್ನಗಾರಿಧ್ವಜನ ಕರುಣೆಯೊದಗುವುದು ಬನ್ನಗುಡುವನರಕಬಾಧೆ ತಪ್ಪುವುದು 43 ಶ್ರಾವಣಾಶ್ವೀಜದಲಿ ಮಾರ್ಗಶಿರ ಮಾಸದಲಿ ಭಾವಭಕ್ತಿಯಲಿಂತು ಹಾಡುವರಿಗೆ ನೋವು ಕಾಲನಭಟರ ಕಾಟನಶಿಪುದು ಹರಿಯ ಭಾವುಕರು ಸತ್ಕರಿಸಿ ಕರೆದೊಯ್ವರು 44 ಅಪ್ಪ ಮಾಂಗಿರಿರಂಗನಪ್ಪಣೆ ಪಡೆದಿದನು ಒಪ್ಪಿಸುವೆನೈ ನಿನಗೆ ವೇಂಕಟೇಶ| ತಪ್ಪು ನೆಪ್ಪುಗಳನ್ನು ಮನ್ನಿಸೈ ಜಗದೀಶ ಒಪ್ಪದಿಂ ಸಕಲರನು ಪೊರೆ ವೇಂಕಟೇಶ|| 45
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸತ್ಯಲೋಕೇಶನೆ ಬಳಿತ್ಥಾದಿ ಶ್ರುತಿವಿನುತ ಸುರಪೂಜ್ಯ ಭಕುತರ ವಿ ಪತ್ತು ಪರಹರಿಸಿ ಸಲಹಯ್ಯ 1 270 ಸತ್ಯಲೋಕವೆ ಸದನ ತತ್ವಾಭಿಮಾನಿಗಳು ಭೃತ್ಯರೆನಿಸುವರು ಮಹಲಕ್ಷ್ಮಿ | ಮಹಲಕ್ಷ್ಮಿ ಜನನಿ ಪುರು ಷೋತ್ತಮನೆ ಜನಕನೆನಿಸುವ 2 271ಚತುರದಶ ಲೋಕಾಧಿಪತಿಯೆಂದೆನಿಪ ನಿನಗೆ ಸರ ಸ್ವತಿಯು ನಿಜರಾಣಿ ವಿಹಗೇಂದ್ರ | ವಿಹಗೇಂದ್ರ ಶೇಷ ಪಾ ರ್ವತಿಪರಾತ್ಮಜರು ಎನಿಸೋರು 3 272 ಋಜುಗಣಾಧೀಶ್ವರನೆ ಅಜಪದವಿಗೋಸುಗದಿ ಭಜಿಸಿದವನಲ್ಲ ಹರಿಪಾದ | ಹರಿಪಾದ ಸೇವೆಯು ಸ ಹಜವೇ ಸರಿ ನಿನಗೆಂದೆಂದು 4 273 ಚತುರಾಸ್ಯ ತತ್ವ ದೇವತೆಗಳಂತರ್ಯಾಮಿ ನತಿಸಿ ಬಿನ್ನೈಪೆ ನಿನ್ನಲ್ಲಿ | ನಿನ್ನಲ್ಲಿ ಭಕ್ತಿಶಾ ಶ್ವತವಾಗಿರಲೋ ಹರಿಯಲ್ಲಿ 5 274 ದ್ವಿಶತ ಕಲ್ಪದಲಿ ತಪವೆಸಗಿ ಅಸುದೇವ ಪೊಂ ಹರಿಯಿಂದ ಮಿಕ್ಕ ಸುಮ ನಸರಿಗುಂಟೇನೊ ಈ ಭಾಗ್ಯ 6 275 ಇನಿತಿದ್ದ ಬಳಿಕ ನೀ ಸಲಹದಿಪ್ಪುದು ನಮ್ಮ ಅನುಚಿತೋಚಿತವೊ ನೀ ಬಲ್ಲೇ | ನೀ ಬಲ್ಲೆ ಶಾರದಾ ವನಿತೆಯ ರಮಣ ದಯವಾಗೊ 7 276 ಸತ್ವಾತ್ಮಕ ಶರೀರ ಮಿಥ್ಯಾದಿ ಮತಗಳೊಳು ಉತ್ಪತ್ತಿ ಸಂಪತ್ತು ಕೊಡದಿರು | ಕೊಡದಿರೆನಗೆಂದು ಸಂ ಪ್ರಾರ್ಥಿಸುವೆ ನಿನಗೆ ನಮೋ ಎಂದು 8 277 ಅಜ್ಞಾನವೆಂಬ ಧಾನ್ಯವನು ಒರಳಿಗೆ ಹಾಕಿ ಸುಜ್ಞಾನವೆಂಬೊ ಒನಕೀಲಿ | ಒನಕೀಲಿ ಪಾಪಧಾನ್ಯಗಳ ನುಗ್ಗು ಮಾಡಿದೆಯೊ ಘಳಿಗ್ಯಾಗೆ 9 278 ಮಾತರಿಶ್ವನೆ ನಿನ್ನ ಪ್ರೀತಿಯೊಂದೇ ಜಗ ನ್ನಾಥವಿಠಲನ್ನ ಕರುಣಕ್ಕೆ | ಕರುಣಕ್ಕೆ ಕಾರಣವು ಯಮ ಯಾತನವು ಬರಲು ನಾನಂಜೆ 10
--------------
ಜಗನ್ನಾಥದಾಸರು
--------------ಹರಿಯೇ ಪ ಮುನ್ನ ಘಣಿಯಲಿ ಬರದದಕಿನ್ನಾ ಅತಿಶಯೇನುಂಟು ನಿನ್ನ ಚಿತ್ತಕೆ ಬಂದಂತೆ ಮಾಡುವುದೆಲ್ಲಾ 1 ಎನ್ನ ದುಷ್ಕರ್ಮಯೋಗ ಬೆನ್ಹತ್ತಿ ಕಾಡುತಿರಲು ಇನ್ನೀ ಅನುಭವ-----ನಾ------ನಿರುವದೆಲ್ಲಾ2 ಕರ್ಮಕೆ ಸಾಕ್ಷಿ ಭೂತ ಕಾರಣ ಕರ್ತನಾಗಿ ಧರ್ಮವೇ ಎನ್ನ ದುಷ್ಕರ್ಮ ಇದ್ದಾನಂ---ನೆಲ್ಲಾ 3 ಎಷ್ಟು ಹೇಳಲಿ ಎನ್ನದೃಷ್ಟವ ಕಳಿಯಲಾಪೆ ಸೃಷ್ಟಿರಕ್ಷನಾದ ಕೃಷ್ಣಾಮೂರುತಿ ದೇವಾ 4 ಬಲ್ಲೀದ ನೀನು ಎಲ್ಲಿ ಬಡವನು ನಾನು ಎಲ್ಲಿ ನಲ್ಲ “ಹೆನ್ನವಿಠ್ಠಲ” ಮಹಾನುಭಾವ 5
--------------
ಹೆನ್ನೆರಂಗದಾಸರು