ಒಟ್ಟು 48 ಕಡೆಗಳಲ್ಲಿ , 12 ದಾಸರು , 48 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಮರಾಮ ರಾಮ ರಾಮಸೀತಾರಾಮ ದಶರಥನಂದನ ರಾಮ ದಯಮಾಡು ಶ್ರೀರಾಮ ಪಶುಪತಿ ಪಾಲಕರಾಮ ಪಾಲಿಸೊಯನ್ನನು ಶ್ರೀರಾಮ ಪ ಭಕ್ತವತ್ಸಲರಾಮ ಪಾಂಡವ ಪಕ್ಷಕರಾಮ ಮುಕ್ತಿದಾಯಕ ರಾಮ ಮುನಿಗಣ ವಂದ್ಯರಾಮ ಯುಕ್ತ ಜಗತ್ಕರ್ತರಾಮ ಇನಕೂಲಭೂಷಣರಾಮ ಮೌಕ್ತಿಕ ಮಣಿಗಣರಾಮ ಮಾಣಿಕ್ಯ ಮುಕುಟಧರರಾಮ 1 ಅಹಿಪಶಯನ ಶ್ರೀರಾಮ ಅನೇಕ ಚರಿತರಾಮ ಅಮಿತ ಪರಾಕ್ರಮ ರಾಮ ಇಹಪರ ಬಾಂಧವ ರಾಮ ವಿಶ್ವಕುಟುಂಬ ರಾಮ ಮಹಾಮಹಿಮ ಶ್ರೀರಾಮ ಮನುಜಾಧಿಪತಿರಾಮ 2 ಭೂತದಯಾಪರರಾಮ ಪುಣ್ಯಪುರುಷ ಶ್ರೀರಾಮ ಪಾತಕ ಭಯಹರರಾಮ ಪತಿತ ಪಾವನ ರಾಮ ನಾಥ ಜಗತ್ರಯರಾಮ ಅನಾಥ ರಕ್ಷಕರಾಮ ಸೇತುಬಂಧನ ರಾಮ ಶಾಶ್ವತ ವಿಗ್ರಹರಾಮ 3 ಮಂಗಳ ಮೂರುತಿ ರಾಮ ಮಧುಸೂದನ ಶ್ರೀರಾಮ ಗಂಗಾಪಿತ ಹರಿರಾಮ ಗೌರೀವಲ್ಲಭರಾಮ ಶೃಂಗಾರಾಂಗ ರಾಮಾಶ್ರಿತಜನ ಪೋಷಿತರಾಮ ರಾಜೀವ ನಯನ ರಾಮ 4 ಸತ್ಯವಾಕ್ಯ ಶ್ರೀರಾಮ ಸದಾನಂದ ರಾಮ ನಿತ್ಯನಿರಂಜನ ರಾಮ ನಿರ್ವಿಕಲ್ಪ ಶ್ರೀರಾಮ ಭೃತ್ಯಕೋಟಿ ಸಂಘರಾಮ ಪುಣ್ಯಪ್ರಭಾವ ಶ್ರೀರಾಮ ದೈತ್ಯಾಂತಕ ಶ್ರೀರಾಮ ತಾಟಕಮರ್ದನ ಶ್ರೀರಾಮ 5 ನವನೀತ ಹೃದಯರಾಮ ಕೋಟಿ ಭಾನುತೇಜ ರಾಮ ಕರುಣಸಾಗರ ರಾಮ ಹಾಟಕಾಂಬರಧರ ರಾಮ ಆದಿನಾರಾಯಣ ರಾಮ ಕೋಟಿಕಂದರ್ಪರೂಪ ರಾಮ ಕೋಮಲಗಾತ್ರರಾಮ 6 ಯದುಕುಲಾಬ್ಧಿಚಂದ್ರ ರಾಮ ಯಶೋದಾನಂದನ ರಾಮ ಮೃದು ಮಧು ಭಾಷಣರಾಮ ಮೂಲರೂಪ ಶ್ರೀರಾಮ ಗದಧರ ವಂದ್ಯರಾಮ ಘನಗಂಭೀರರಾಮ ಪದುಮನಾಭ ಶ್ರೀರಾಮ ಪರಮಕೃಪಾಳುರಾಮ 7 ಸರಸಿಜಭವನುತರಾಮ ಸದ್ವಿಲಾಸ ಶ್ರೀರಾಮ ಕರಿರಾಜ ಪಾಲಕ ರಾಮ ಕಲ್ಮಷ ಪರಿಹರರಾಮ ಸುರಪತಿ ವಂದ್ಯರಾಮ ಸುಜನಾಂತರ್ಯಾಮಿ ರಾಮ ಶರಧಿಶಯನ ಶ್ರೀರಾಮ ಶಾಙ್ರ್ಞಪಾಣಿ ರಾಮ 8 ಕಮಲೋದರರಾಮ ಘನಗುಣಶಾಂತ ರಾಮ ಸಾರಥಿ ರಾಮ ಕಮಲಮನೋಹರ ರಾಮ ಗರುಡವಾಹನರಾಮ ಕಮಲಾಪ್ತ ಶಶಿನೇತ್ರ ಕರ್ಮಸಾಕ್ಷಿ ಭೂತರಾಮ 9 ಈಶ ಜಗತ್ರಯ ರಾಮ ವಿಷ್ಣುಸರ್ವೋತ್ತಮ ರಾಮ ವಾಸುದೇವ ಕೃಷ್ಣರಾಮ ವಸುದೇವ ನಂದನ ರಾಮ ಭೂಸುರಪ್ರಿಯ ಶ್ರೀರಾಮ ಸರ್ವಪೂಜಿತರಾಮ ವಸುಗಿರಿ ವಾಸರಾಮ ವೈಕುಂಠನಿಲಯರಾಮ 10 ನೀಲಮೇಘವರ್ಣರಾಮ ನಿಖಿಲವೈಭವರಾಮ ಪುಂಡರೀಕ ವರದ ರಾಮ ಫಾಲಲೋಚನ ಪ್ರಿಯರಾಮ ಪಾಂಡುರಂಗ ಶ್ರೀರಾಮ ಕಾಲಿಯಾಮರ್ದನರಾಮ ದ್ವಾರಕಾವಾಸರಾಮ 11 ವೇಣುನಾದ ಶ್ರೀರಾಮ ವೆಂಕಟರಮಣ ರಾಮ ಗಾನಲೋಲ ಶ್ರೀ ರಾಮ ಕಂಬುಕಂಧರರಾಮ ಮಾನಿತ ತ್ರಿಭುವನರಾಮ ಮಂದರಧರ ಶ್ರೀರಾಮ ಧೇನು ಪಾಲಕ ರಾಮ ದೇವಾಧಿದೇವ ರಾಮ 12 ಕುಂಭಿನೀಧವ ರಾಮ ಕುಶಲವ ಜನಕರಾಮ ಅಂಬರ ಧ್ರುವನಂತೆ ರಾಮ ಅಜಮಿಳನಂತೆ ರಾಮ ಪೊರೆದಂಥ ರಾಮ 13 ತಾಪತ್ರಯದಲಿ ರಾಮ ನಾತಪಿಸುತಿರುವೆ ರಾಮ ಪರಿ ತಾಪವ ರಾಮ ಹೆದರಿಸಿ ಕಳೆಯೊ ರಾಮ ಭೂಪ ನೀನಲ್ಲದೆ ರಾಮ ಭೂವಿಯೊಳಧಿಕ ನೀನಲ್ಲವೆರಾಮ ಕಾಪಾಡುವ ಭಾರರಾಮ ಕರ್ತನು ನೀನೆ ರಾಮ 14 ನಿತ್ಯ ಕಲ್ಯಾಣರಾಮ ಅಘನಾಶನ ಶ್ರೀರಾಮ ಅನಂತನಾಮರಾಮ ಜಗದೊಳಧಿಕನಾದರಾಮ ಜಯ`ಹೆನ್ನೆವಿಠಲ’ ರಾಮ ಮನ್ನಿಸಿ ಸಲಹೊರಾಮ 15
--------------
ಹೆನ್ನೆರಂಗದಾಸರು
ವಂದಿಪೆ ಗುರುವೆ ನೀ ಕಲ್ಪತರುವೇ ಬಂಧನ ಕಳೆಯುವ ಭೋಧಾತ್ಮ ಗುರುವೆ ಅಗಣಿತ ಮಹಿಮಾ ಜಗದಾಧಾರ ಬಗೆಗೆ ನಿಲುಕದಿಹ ಘನನಿರ್ವಿಕಲ್ಪ ಮಾನವ ರೂಪದಿ ಸ್ವಾನುಭವವ ತೋರ್ದ ಮುಕುತಿದಾಯಕನೇ ಪರಮಾತ್ಮ ನೀನೆಂದು ಪರಶೃತಿ ಪೇಳೆ ಸರಿಯಾಗಿ ಬೋಧಿಸಿ ಕರುಣೆದೋರುವನೇ ಜಗವೆಲ್ಲ ಪುಸಿಯೆಂದು ಜಗಕೆಲ್ಲ ಪೇಳುವ ಭಗವಂತ ದಯದೋರಿ ಪೊರೆವುದು ದೇವಾ ಚಿನುಮಯರೂಪನೆ ಸ್ವಾನಂದರೂಪಾ ಮನವು ನಿನ್ನೊಳಗಿರಲಿ ಶಂಕರರೂಪಾ
--------------
ಶಂಕರಭಟ್ಟ ಅಗ್ನಿಹೋತ್ರಿ
ವಂದಿಪೆ ನಾ ಭಗವಾನ್ ಪೂರ್ಣಘನಾ ನೀ ಮುಕುತಿನಿದಾನಾ ಜ್ಞಾನಘನಾ ಆನಂದಘನಾ ನಿತ್ಯಾನಂದನು ನೀ ಚೈತನ್ಯ ಮೂಲಪದ ಮಾಯಾರಹಿತ ಸದಾ ಆ ನಿರ್ವಿಕಲ್ಪಾತ್ಮಾ ಸತ್ಯನು ನೀ ಹೇ ಸರ್ವಾಂತರ್ಯಾಮೀ ಪ್ರೇಮಘನಾ ಆನಂದ ಕಣ್ಣು ಮನಗಳಿಗೆ ನಿಲುಕದಲೇ ನೀ ಸಾಕ್ಷಿಸ್ವರೂಪಾ ಇವುಗಳಿಗೇ ಕಲ್ಪಿತವ್ಯೆ ಮಾಯಾಮೋಹಿತವೈ ಈ ಜಗವೆಲ್ಲಾ ನಿನ್ನೊಳ್ ಸತ್ಯಘನಾ ಆನಂದ ಎಂತು ಬಣ್ಣಿಸಲೈ ನಿನ್ನನು ನಾ ಈ ವಾಣಿಯಿಂ ದೂರಾ ನಿಜಸಾರಾ ಯೋಗಿವರಾ ಗುರು ಶ್ರೀ ಶಂಕರಾ ಹೇ ಸರ್ವಾತ್ಮಪೂರ್ಣಾನಂದಘನಾ ಆನಂದ
--------------
ಶಂಕರಭಟ್ಟ ಅಗ್ನಿಹೋತ್ರಿ
ವಂದೇ ವಂದೇ ವಂದೇ ನಾರಾಯಣ ಗುರುದೇವಾ ವಂದೇ ವಂದೇ ವಂದೇ ಪರಿಪೂರ್ಣ ಬ್ರಹ್ಮರೂಪ ಪರಮಾತ್ಮ ಜ್ಞಾನದೀಪ ತಾಪ ಪರಿಹರಿಪ ಜ್ಞಾನಿ ಭೂಪ ಶಿರವಿಡುವೆ ಚರಣಯುಗದೀ ಗುರುದೇವ ಎನ್ನಮನದಿ ಪರತತ್ವ ತಿಳಿವ ತೆರದಿ ಕರುಣಿಪುದು ನೀನೇ ಮುದದಿ ಜಾಗರಣ ಕನಸು ನಿದ್ರಾ ಆಗುಗಳನರಿಯುತಿರ್ದಾ ಈ ಗತಿಗಳೆಲ್ಲ ಮೀರ್ದಾ ಆ ಘನವೆ ನಿರ್ವಿಕಲ್ಪ ಅದೇ ನೀನು ಎಂದು ಪೇಳ್ದೀ ಇದು ಎಲ್ಲ ಮಿಥ್ಯವೆಂದಿ ಇದೊ ಮರಣಭಯವ ಕಳೆದಿ ನಿಜಬೋಧವಚನ ಬಲದಿ ಮರೆದಿರ್ದ ತತ್ವವಿದನು ಪರತತ್ವ ಶೋಧಕರನು ಬೊಧಿಸುತ ನೀ ನಿಜವನು ತೋರಿಸುತ ಕಾಯುವವನು ವರಜ್ಞಾನ ಜಗದಲೆಲ್ಲಾ ಮರೆದಾಡಿ ತಮವನೆಲ್ಲಾ ಪರಿಹರಿಸಲೆಂದು ನೀನೇ ಗುರುಶಂಕರನಿಗೆ ಪೇಳ್ದೀ ವಂದೇ ಶಂಕರಾ ಗುರುದೇವಾ ವಂದೇ ಶಂಕರ ಗುರುದೇವಾ ಪಾವನಚರಣಾ ತೋರೈ ಕರುಣಾ ಜ್ಞಾನಾಂಬುಧಿ ಪೂರ್ಣಾ ವಂದೇ
--------------
ಶಂಕರಭಟ್ಟ ಅಗ್ನಿಹೋತ್ರಿ
ವಸ್ತು ಕಂಡೆನು ಒಂದು ಕರ್ತೃ ಸದ್ಗುರುವಿನ ಕೃಪೆಯಿಂದ ಧ್ರುವ ತೇಜ:ಪುಂಜದ ರೂಪ ಮೂಜಗದೊಳಗಿದು ಅಪರೂಪ ನಿಜ ನಿರ್ವಿಕಲ್ಪ ಸುಜನರ ಹೃದಯಕ ಸದ್ಛನದೀಪ 1 ರೂಪಕ ನೆಲೆಇಲ್ಲ ವ್ಯಾಪಕವಿದು ಜಗದೊಳಗೆಲ್ಲ ಗುಪಿತಜ್ಞಾನಿಯು ಬಲ್ಲ ಜಪತಪಕಿದು ಸಿಲ್ಕುವದಲ್ಲ 2 ಙÁ್ಞನಕ ಸಾಹೀತ ಮುನಿಜನ ಹೃದಯದಿ ಸದೋದಿತ ಧ್ಯಾನಕೆ ಆಯಿತು ಮನಕಾಮನವಿದು ಪೂರಿತ 3 ಮೂರಕೆ ವಿರಹಿತ ಮೂರುಲೋಕವು ವಂದಿತ ಪರಮ ಸಾಯೋಜ್ಯತ ತಾರಕವಸ್ತು ಸಾಕ್ಷಾತ 4 ಬೈಲಿಗೆ ನಿರ್ಬೈಲ ಭಾವಿಕ ಬಲ್ಲನು ಇದರ್ಹೊಯಿಲ ಮಹಿಪತಿಗನುಕೂಲ ಜೀವನ್ಮುಕ್ತಿಗೆ ಇದು ಮೂಲ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶಂಕರ ಗುರುವರ ಮಹದೇವ ಭವ- ಸಂಕಟ ಪರಿಹರಿಸಯ್ಯ ಶಿವ ಪ. ಸಂಕಲ್ಪ ವಿಕಲ್ಪಮನೋನಿಯಾಮಕ ಕಿಂಕರಜನಸಂಜೀವ ಅ.ಪ. ಭಾಗವತರರಸ ಭಾಗೀರಥೀಧರ ಬಾಗುವೆ ಶಿರ ಶರಣಾಗುವೆ ಹರ ಶ್ರೀ ಗೌರೀವರ ಯೋಗಿಜನೋದ್ಧರ ಸಾಗರಗುಣಗಂಭೀರ 1 ರಾಯ ಲಕ್ಷ್ಮೀನಾರಾಯಣ ಭಕ್ತಿಪ- ರಾಯಣ ತ್ರಿನಯನ ಪುರಹನ ಕಾಯಜಮಥನ ಮುನೀಂದ್ರ ಸಿದ್ಧಜನ- ಗೇಯಸ್ವರೂಪೇಶಾನ 2
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀ ಪಾದವಲ್ಲಭಾ ದೇವಾ ಗುರುನಾಥಾ ದತ್ತರಾಜಾ ವರಗಾಣ ಪುರಾಧೀಶಾ ಅವದೂತಾ ದತ್ತರಾಜಾ ತ್ರಿಗುಣಾತ್ಮಕಾ ಘನಮಹಿಮಾ ತ್ರಿಗುಣಾತೀತ ಭೂಮಾ ಅಘನಾಶ ಪೂರ್ಣಕಾಮಾ ಜಗದೀಶ ಸೌಖ್ಯಧಾಮಾ ಬಗೆಹರಿಸೈ ಮೋಹಮಾಯಾ ಭಗವಂತ ನೀ ಗುರುರಾಯಾ ವೈರಾಗ್ಯ ಶಾಂತಿ ಸುಖವಾ ಪರಮಾರ್ಥಜ್ಞಾನದರಿವಾ ಗುರುಪಾದಸೇವೆ ಗೈವಾ ವರಭಾಗ್ಯ ನೀಡು ದೇವಾ ಪರಿಹರಿಸೈ ವಿಷಯಚಿಂತಾ ಪ0ರಮಾತ್ಮ ಸದ್ಗುರುನಾಥಾ ಘನ ನಿರ್ವಿಕಲ್ಪರೂಪಾ ನೀನೆನ್ನ ಸ್ವಾತ್ಮಾರೂಪಾ ಮನವಾಣಿ ಮೀರ್ದ ರೂಪಾ ಆನಂದ ಬ್ರಹ್ಮರೂಪಾ ಕನಸೈ ಈ ಜಗವು ನಿನ್ನೋಳ್ ಗುರುರಾಜ ಶಂಕರಾರೂಪಾ
--------------
ಶಂಕರಭಟ್ಟ ಅಗ್ನಿಹೋತ್ರಿ
ಶ್ರೀನಿವಾಸನೆ ಗಾನಲೋಲನೆ ಸಾನುರಾಗದೊಳೀಕ್ಷಿಸೈ ಜ್ಞಾನಪೂರ್ಣನೆ ಸೂನುವೆಂಬಭಿಮಾನದಿಂ ಪರಿಪಾಲಿಸೈ ಪ. ದೀನಪಾಲಕ ದಾನವಾಂತಕ ದೈನ್ಯದಿಂ ಮೊರೆಹೊಕ್ಕೆನೈ ಜ್ಞಾನಗಮ್ಯನೆ ಭಾನುತೇಜನೆ ನೀನೇ ಗತಿಯೆಂದೆಂಬೆವೈ ಅ.ಪ. ಸಾರಸಾಕ್ಷನೆ ಶ್ರೀರಮೇಶನೆ ಸಾರಿ ಬಾ ಭವದೂರನೇ ಗಾರುಗೊಂಡೆವು ಪಾರುಗಾಣಿಸು ನೀರಜೋದ್ಭವ ಜನಕನೆ ಕಾರ್ಯಕಾರಣ ಕರ್ತೃ ನೀನಹುದಾರಯಲ್ ಜಗದೀಶನೆ ಬೇರೆ ಕಾಣೆವದಾರ ನಿನ್ನನೆÉೀ ಸಾರೆ ಬೇಡುವೆ ದೇವನೆ 1 ಸಾರ ಸಂಗ್ರಹ ಮಾಡುತೆ ಆರ್ಯಕೀರ್ತಿಯ ಸಾರಿಪಾಡುತೆ ವೀರನಾದವ ಗೈಯುತೆ ಭೂರಿ ವೈಭವವೆಲ್ಲವಂ ಧೈರ್ಯದಿಂ ನಲವೇರೆ ಕೀರ್ತಿಸಿ ಕಾರ್ಯಸಿದ್ಧಿಯ ಪೊಂದುವೋಲ್2 ನಿರ್ಗುಣಾತ್ಮನೆ ನಿರ್ವಿಕಲ್ಪನೆ ನಿತ್ಯನಿರ್ಮಲಚರಿತನೆ ಮಾರ್ಗದರ್ಶಕನಾಗಿ ನಮ್ಮೊಳಗಾವಗಂ ಕೃಪೆ ಗೈವನೇ ಸಾರ್ವಭೌಮನೆ ಸರ್ವಶಕ್ತನೆ ಶೇಷಶೈಲ ನಿವಾಸನೇ ಸಾರ್ವಕಾಲದೊಳೋವುದೆಮ್ಮನು ಪಾರ್ವತೀಪತಿ ಮಿತ್ರನೆ 3
--------------
ನಂಜನಗೂಡು ತಿರುಮಲಾಂಬಾ
ಸತತ ಸದಮಲ ಪತಿತಪಾವನ ಅತೀತಗುಣತ್ರಯಾನಂದನ ಶ್ರುತಿಗಗೋಚರ ಯತಿಜನಾಶ್ರಯ ಅತಿಶಯಾನಂದಾತ್ಮನ ಭಜಿಸು ಮನವೆ ಧ್ರುವ ಪವಿತ್ರಪ್ರಣವ ಸುವಿದ್ಯದಾಗರ ವ್ಯಕ್ತಗುಣ ಅವಿನಾಶನ ಘವಿಘವಿಸುವಾನಂದಮಯ ರವಿಕೋಟಿ ತೇಜಪ್ರಕಾಶನ ಭವರಹಿತ ಗೋವಿಂದ ಗುರುಪಾವನ ಪರುಮಪುರುಷನ ಭುವನತ್ರಯಲಿಹ್ಯ ಭಾವಭೋಕ್ತ ಸಾವಿರನಾಮ ಸರ್ವೇಶನ 1 ಮೂಜಗದಿ ರಾಜಿಸುತಿಹ್ಯ ತೇಜೋಮಯ ಘನಸಾಂದ್ರನ ಅಜಸುರೇಂದ್ರ ಸುಪೂಜಿತನುದಿನ ರಾಜಮಹಾರಾಜೇಂದ್ರನ ಭಜಕ ಭಯಹರ ನಿಜ ಘನಾತ್ಮಗಜವರದ ಉಪೇಂದ್ರನ 2 ಪರಾತ್ಪರ ಪರಿಪೂರ್ಣ ಪರಂಜ್ಯೋತಿ ಘನಸ್ವರೂಪನ ಪರಂಬ್ರಹ್ಮ ಪರೇಶ ಸುರವರನಾಥ ಗುರುಕುಲದೀಪನ ನಿರಾಳ ನಿರ್ವಿಶೇಷ ನಿರಾಕಾರ ನಿರ್ವಿಕಲ್ಪನ ಕರುಣದಿಂದಲಿ ಹೊರೆವ ಮಹಿಪತಿಸ್ವಾಮಿ ಚಿತ್ಸ ್ವರೂಪನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹತ್ತಿಲಿಹÀ ವಸ್ತುನೋಡೊ ಮನವೆ ನಿತ್ಯ ನಿಜನಿರ್ಗುಣವ ಕೂಡೊ ಮನವೆ ಧ್ರುವ ಅತ್ತಲಿತ್ತಲಾಗದಿರು ಮನವೆ ಚಿತ್ತ ಚಂಚಲ ಮಾಡದಿರೆನ್ನ ಮನವೆ ಉತ್ತುಮ ಸುಪಥ ನೋಡು ಮನವೆ ನೆತ್ತಿಯೊಳಿಹ ಸುವಸ್ತು ಕೂಡೊ ಮನವೆ 1 ಹೋಕಹೋಗದಂತೆ ಎನ್ನ ಮನವೆ ಏಕರಸವಾಗಿ ಕೂಡೊ ಎನ್ನ ಮನವೆ ನಾಲ್ಕು ಶೂನ್ಯವ ಮೆಟ್ಟಿ ನೋಡು ಮನವೆ ಜೋಕೆಯಿಂದ ಜ್ಯೋತಿರ್ಮಯ ಕೂಡೊ ಮನವೆ 2 ಧನ್ಯವಿದು ರಾಜಯೋಗಮನವೆ ಭಿನ್ನವಿಲ್ಲದೆ ಬೆರೆದು ಕೂಡೊ ಮನವೆ ಚೆನ್ನಾಗಿ ಚಿನ್ಮಯ ನೋಡು ಮನವೆ ಅನ್ಯಪಥವಿನ್ಯಾತಕ ನೋಡು ಮನವೆ 3 ಗರ್ವಗುಣ ಹಿಡಿಯದಿರು ಮನವೆ ನಿರ್ವಿಕಲ್ಪನ ತಿಳಿದು ನೋಡು ಮನವೆ ಪೂರ್ವಪುಣ್ಯಹಾದಿ ಇದು ಮನವೆ ಸರ್ವರೊಳು ವಸ್ತುಮಯ ಒಂದೆ ಮನವೆ 4 ದೃಷ್ಟಿಸಿ ಆತ್ಮನ ನೋಡು ಮನವೆ ಪುಷ್ಟವಾಗಿ ಘನದೋರುವದು ಮನವೆ ಭ್ರಷ್ಟವಾಗಿ ಬಾಳಬ್ಯಾಡ ಮನವೆ ನಿಷ್ಠನಾಗಿ ನಿಜನೆಲೆಯಗೊಳ್ಳ ಮನವೆ 5 ಏರಿ ಆರುಚಕ್ರ ನೋಡು ಮನವೆ ಪರಮಾನಂದ ಸುಪಥ ಕೂಡೊ ಮನವೆ ಆರು ಅರಿಯದ ಹಾದಿ ಮನವೆ ತೋರಿಕೊಡುವ ಸದ್ಗುರು ಎನ್ನ ಮನವೆ 6 ಹರಿಭಕ್ತಿಯೊಳಗಿರು ಮನವೆ ಸಿರಿ ಸದ್ಗತಿ ಸುಖವ ಕೂಡೊ ಮನವೆ ಗುರುವಾಕ್ಯ ನಂಬಿ ನಡೆ ಮನವೆ ಪರಲೋಕಕ್ಕೆ ಸೋಪಾನವಿದು ಮನವೆ 7 ಪರದ್ರವ್ಯಗಲ್ಪದಿರು ಮನವೆ ಪರಸತಿಯ ನೋಡದಿರೆನ್ನ ಮನವೆ ಪರರ ನಿಂದ್ಯ ಮಾಡದಿರು ಮನವೆ ದಾರಿ ಹೋಗದಿರು ದುಷ್ಟರ ನೀ ಮನವೆ 8 ಸಜ್ಜನರ ಸಂಗ ಮಾಡೊ ಮನವೆ ಹೆಜ್ಜೆವಿಡಿದು ಪರಲೋಕ ಕೂಡೊ ಮನವೆ ಭೆಜ್ಜರಿಕೆ ಹಿಡಿಯೊ ಎನ್ನ ಮನವೆ ದುರ್ಜನರ ಸಂಗ ಮಾಡಬ್ಯಾಡೊ ಮನವೆ 9 ಕಂಗಳ ತೆರೆದು ನೋಡು ಮನವೆ ಮಂಗಳಾತ್ಮನ ಶ್ರೀಪಾದ ಕೂಡೊ ಮನವೆ ಹಿಂಗದಂತೆ ಕೂಡೊ ಬ್ಯಾಗೆ ಮನವೆ ಗಂಗೆಯೊಳು ಜಲಬೆರೆದಂತೆ ಮನವೆ 10 ಭೇದ ಬುದ್ಧಿಯ ಮಾಡಬ್ಯಾಡ ಮನವೆ ಸಾಧುಸಂತರ ಸುಬೋಧ ಕೇಳು ಮನವೆ ಭೇದಿಸಿ ತಿಳಿದುನೋಡು ಮನವೆ ಸದಮಲ ಬ್ರಹ್ಮ ಸೂಸುತಿದೆ ಮನವೆ 11 ಯುಕ್ತಿ ನಿನಗಿದು ನೋಡು ಮನವೆ ಭಕ್ತವತ್ಸಲ ಸ್ಮರಿಸು ಮನವೆ ಮುಕ್ತಿಯಿಂದಧಿಕಸುಖ ಮನವೆ ಭಕ್ತಿರಸದೊಳು ಮುಳಗ್ಯಾಡು ಮನವೆ 12 ಲೇಸು ಲೇಸು ಮಹಿಪತಿ ಸು ಮನವೆ ದಾಸನಾಗಿರುವ ವಾಸುದೇವನ ಮನವೆ ಭಾಸಿ ಪಾಲಿಪನ ಕೂಡೊ ಎನ್ನ ಮನವೆ ಭಾಸ್ಕರ ಮೂರ್ತಿಯ ನೋಡು ಮನವೆ 13
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹಬ್ಬವನು ಮಾಡಿದನು ಗುರುರಾಯ ಇಬ್ಬರೊಡಗೂಡಿಸುವದಿಂಗಿತದ ನೆಲೆಯರಿದು ಪ ಶ್ರವಣದಕ್ಷತೆ ಕೊಟ್ಟು ಪರಮಾರ್ಥ ದೌತಣದಿ | ಅವನಿಯೊಳು ಪರಮ ಕರುಣ ಸ್ನೇಹದಿ | ಸುವಿವೇಕ ವೈರಾಗ್ಯ ವೆಂಬ ಜಲ ಸಮಬೆರಸಿ | ತವಕದಲಿ ಮಜ್ಜನವ ಗೈಸಿದನು ಮುದದಿ 1 ಸ್ಥಿರ ಚಿತ್ತ ದಾಸನದಿ ಕುಳ್ಳಿರಿಸಿ ಸದ್ಭಾವ ಬೋಧ ಸುಧೆಯಾ ಪರಿ ಪರಿಯಲುಣಿಸಿ ಅಪರೋಕ್ಷದನುಭವ ಕಲಶ ನೆರೆವಿಡಿಸಿ ಕೈದೊಳಿಸಿ ಭವದೆಂಜಲ ಗೆಳಸೀ 2 ಸಹಜಾವಸ್ಥೆ ತಾಂಬೂಲವನು ಕರದಿತ್ತು | ವಿಹರಿಸುತ ನಿರ್ವಿಕಲ್ಪ ಸಮಾಧಿಯಾ | ವಿಹಿತದುಡುಗೊರೆ ಹೆಗಲಲಿಪೊದಿಸಿ ಪಾಲಿಸಿದ | ಮಹಿಪತಿ ಸ್ವಾಮಿ ನಂದನಗ ದಯ ಬೀರಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ)ಶ್ರೀನಿವಾಸಾಯ ನಮೋ ಪ.ಶ್ರೀನಿವಾಸಾಯ ಶತಭಾನುಪ್ರಕಾಶಾಯಶ್ರೀನಿವಾಸಾಯ ನಿಜ ಭಕ್ತಜನಪೋಷಾಯಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ.ದೋಷಗಂಧವಿದೂರ ಕೇಶಿಮುಖದಾನವ ವಿ-ನಾಶವಿಧಿಭವಸುಖನಿವಾಸ ವಾಸುಕಿಶಯನವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ-ಭೂಷ ಭೂತಾತ್ಮ ಭವಪಾಶಹರ ಪರತರ ದ-ಯಾ ಸಮುದ್ರ ವಿನಿದ್ರ ಭೂಶಯನ ಭೂರಿಪ್ರದಕೇಶವಾಯ ನಮೋನಮಃ 1ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತನಾರದಾದಿಮುನೀಂದ್ರವಾರಸನ್ನುತಪಾದನೀರರುಹದ್ವಂದ್ವನೆವಾರಿಜಾಸನಮುಖ್ಯಸುರರುತಿಳಿಯರು ನಿನ್ನಭೂರಿಮಹಿಮೆಗಳ ಸಾಕಾರವನು ಬಣ್ಣಿಸುವಧೀರನಾವನು ಮಹಾ ವೀರ ವಿಶ್ವಾಧಾರನಾರಾಯಣಾಯ ನಮೋ 2ವೇದವೇದ್ಯನೆ ದುರಿತಶೋಧನೆ ದೈತ್ಯಗಣ-ಛೇದಕನೆ ಸುರಸುಪ್ರಸಾದಕನೆ ಭಕ್ತಜನ-ಮೋದದಾಯಕ ಸ್ವಗತ ಭೇದವರ್ಜಿತಸಮಾನಾಧಿಕ್ಯರಹಿತ ಸತತಆದಿತ್ಯ ಶತಕೋಟಿತೇಜೋವಿರಾಜ ಮಹ-ದಾದಿಕಾರಣ ಮಧುವಿರೋಧಿ ಮಂಗಲಸುಖಾಂ-ಬೋಧಿ ಪದ್ಮಾಲಯವಿನೋದಿ ರಾಧಾರಮಣಮಾಧವಾಯ ನಮೋನಮಃ 3ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು-ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ-ನಂದ ಭರಿತ ಕಾಳಿಂದೀರಮಣ ರಾಮಚಂದ್ರಸನ್ನುತಮಹೇಂದ್ರವಂದಾರುಜನತ್ರಿದಶಮಂದಾರ ಕೋಮಲಿತವೃಂದಾವನವಿಹಾರ ಕಂದರ್ಪಜನಕ ಬಾ-ಳೇಂದುಶೇಖರಸಖ ಸನಂದನಾರ್ಚಿತ ಶ್ರೀಗೋವಿಂದಾಯತುಭ್ಯಂ ನಮಃ 4ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷಮುಷ್ಟಿಕಾಸುರವೈರಿ ಮುನಿಜನಮನೋಹಾರಿಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆತುಷ್ಟಿಯನು ನೀನಿತ್ತು ಸಲಹೊ ಸಾಮಜವರದಬೆಟ್ಟದೊಡೆಯನೆ ಕೃಪಾದೃಷ್ಟಿಯಿಂದಲಿನೋಡುವಿಷ್ಣವೇತುಭ್ಯಂ ನಮೋ 5ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತಬುಧಜನಪ್ರಿಯ ಭೂತಭಾವನ ಜಗನ್ನಾಥಪದುಮಾಕ್ಷ ಪಾಂಡವಪ್ರತಿಷ್ಠಾಪನಾಚಾರ್ಯಮದನಕೋಟಿಸ್ವರೂಪವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ-ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸವಿಧುಮಂಡಲಸ್ಥ ಸದ್‍ಹೃದಯಪಂಕಜವಾಸಮಧುಸೂದನಾಯ ನಮೋ 6ಅಕ್ರೂರವರದ ಸದತಿಕ್ರಮರ ಗೆಲಿದ ಹಯ-ವಕ್ತ್ರವೈಕುಂಠಾಖ್ಯ ಪುರವಾಸ ಜಗದೀಶಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನುಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ-ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿನಕ್ರಮದಹರನಾದ ಬ್ರಹ್ಮ ಗಂಗಾಪಿತತ್ರಿವಿಕ್ರಮಾಯ ನಮೋನಮಃ 7ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು-ದಾಮಸಖ ಪರಿಪೂರ್ಣಕಾಮ ಕೈರವದಳ-ಶ್ಯಾಮ ಕಲ್ಯಾಣ ನಿಸ್ಸೀಮ ಮಹಿಮನೆಸುಜನಸ್ತೋಮಸುರಕಾಮಧೇನುಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ-ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ-ರಾಮ ವಿಷ್ವಕ್ಸೇನ ವಿಶ್ವತೈಜಸಪ್ರಾಜÕವಾಮನಾಯ ನಮೋನಮಃ8ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ-ರಾಧಭಂಜನ ಭವಾಂಬೋಧಿಕುಂಭಜ ಭಜಕ-ರಾದವರನುದ್ಧರಿಪ ಬೋಧರೂಪನೆಚತುಷ್ಟಾದ ಪಾವನಚರಿತನೆಗಾಧಿಜಾಧ್ವರಪಾಲ ಗರುಡಧ್ವಜ ದಯಾಳುನಾದಬಿಂದು ಕಲಾತೀತ ರುಕ್ಮಿಣಿನಾಥಬಾದರಾಯಣನೆ ನಿರುಪಾಧಿ ಮಾಯಾತೀತಶ್ರೀಧರಾಯ ನಮೋನಮಃ 9ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ-ಕಾಶ ಪಾಲಿತನಿಖಿಳಭೂಸುರವ್ರಜ ಮಂದ-ಹಾಸಮುಖ ನವಕುಂದಭಾಸರದನವಿರಾಜದೂಷಣಾದ್ಯ ಸುರಹರನೆಈಶಪತಿಸೇವ್ಯಾಂಬರೀಶನೃಪವರದ ಪರ-ಮೇಶ ಕೋವಳಪೀತವಾಸ ಕರ್ದಮಶುಕಪ-ರಾಶರಾದ್ಯಮಿತಯೋಗೀಶರಕ್ಷಕಹೃಷೀಕೇಶಾಯ ತುಭ್ಯಂ ನಮೋ 10ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ-ಸಿದ್ಧ ಪೂಜ್ಯ ಪುಂಡರೀಕದಳಾಕ್ಷಬುದ್ಧಬುಧಜನಸುಲಭಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇತದ್ವೀಪವೈಕುಂಠಮಂದಿರತ್ರಯ ಸಾಧು-ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11ಸಾಮಗಾನವಿನೋದ ಸಾಧುಜನಸುಖಬೋಧಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತವ್ಯೋಮಯಾನವರೂಥ ಓಂಕಾರಭರಿತ ರಘುರಾಮಸಮರಂಗ ಭೀಮನಾಮಧಾರಕರ ಪರಿಣಾಮರೂಪಕ ಸುಜನ-ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣಭೌಮಪುರುಷೋತ್ತಮ ನಿಯಾಮಕನೆ ರಕ್ಷಿಸೈದಾಮೋದರಾಯ ನಮೋ 12ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯವೆಂಕಟಾಚಲಸದಾಲಂಕಾರ ಶೇಷಪರಿ-ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತಓಂಕಾರನಿಧನ ಸಾಮಕಭಕ್ತರಾನೇಕಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ13ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದುಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯಸೂಸಿಬಹ ಸಂಸಾರಸಾಗರದಿ ಮುಳುಗಿದೆನುನೀ ಸಲಹೊ ದೇವದೇವಭೂಸಲಿಲಪಾವಕಾಕಾಶಾದಿ ಭೂತಾಧಿ-ವಾಸ ರಾಕ್ಷಸವನಹುತಾಶ ನಾನಾ ರೂಪ-ವೇಷಧಾರಕ ನರಾವೇಶ ಪಾಲಿಸು ಎನ್ನವಾಸುದೇವಾಯ ನಮೋ 14ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ-ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ-ಬದ್ಧಕಮನೀಯರೂಪಸುತಪದುರಾಪಪ್ರದ್ಯುಮ್ನಾಯ ತುಭ್ಯಂ ನಮಃ 15ಉದ್ಧವಾದಿ ಸಮಸ್ತ ಭಾಗವತಜನಕಮಲ-ಮಧ್ಯಚರರಾಜಹಂಸಾಯ ಮಾನಸದಶ್ರದ್ಧೆಯಂ ಕೊಟ್ಟು ರಕ್ಷಿಸು ಧೊರೆಯೆಶ್ರೀಹರಿಯೆ ವೈದ್ಯನಾಥವಿಧಾತನೆಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ-ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆಹೊದ್ದಿದೆನು ಮೈದೋರು ಚಿನುಮಯಾತ್ಮಕನೆಅನಿರುದ್ಧಾಯ ತುಭ್ಯಂ ನಮಃ 16ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷಪರತರಾವ್ಯಯಲೋಕಭರಿತಮಂಗಲರಿತ ಗುರುತಮ ಗುಣಧ್ಯಕ್ಷನೆಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದಶರಭಂಗಮುನಿಪಾಲ ಶಮಿತದಾನವಜಾಲಧುರವಿಜಯ ವಿಜಯಮೈದುನ ಕೃಷ್ಣ ರಕ್ಷಿಸೈಪುರುಷೋತ್ತಮಾಯನ್ನಮೋ 17ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್-ವಿಶ್ವತೋಮುಖ ವಿಶ್ವತೋಬಾಹು ಕರುಣಾಕ-ಟಾಕ್ಷದಿಂ ನೋಡೆನ್ನಮ್ಯಾಲೆದಯಮಾಡು ಶ್ರೀವಕ್ಷಸ್ಥಲನಿವಾಸನೆಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ-ಮೋಕ್ಷದಾಯಕ ಯಜÕಮೂರ್ತಿ ರೂಪತ್ರಯ ಮ-ಹೋಕ್ಷಧ್ವಜನಂ ಮೋಹಿಸಿದ ಮೋಹಕಲ್ಪಅಧೋಕ್ಷಜಾಯ ನಮೋನಮಃ 18ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು-ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ-ಹಾರವಕುಲಿಶ ಶತಕೋಟಿಸದೃಶನಶಿರಪ್ರಕರಧೀರ ಪ್ರಹ್ಲಾದಾಭಿವರದಭೂರೀಕರರೂಪ ಭೂಮಕೀರ್ತಿಕಲಾಪಸಾರವಜ್ರಸ್ತಂಭದಿಂ ಬಂದ ನಂದ ಸುಕು-ಮಾರಮಾರ್ಕಾಂಡೇಯವರದ ಲೋಕಶರಣ್ಯನಾರಸಿಂಹಾಯ ನಮೋ 19ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ-ನ್ನಿಚ್ಛೆಯಿಂದಲಿ ಜಗವ ಪಾಲಿಸುವನಿರ್ಮಿಸುವ ಆಶ್ಚರ್ಯಕೃತಸಲೀಲಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ-ಕಚ್ಛಪನೆ ಕಾಳೀಯಮರ್ದನಮಹಿತಶ್ರೀಮದಚ್ಯುತಾಯ ನಮೋನಮಃ 20ಚೈದ್ಯಮಥನ ಮನೋಜÕಶುದ್ಧಾತ್ಮ ಸರ್ವಜÕಯುದ್ಧದಲಿ ಸೈಂಧವನ ಶಿರವ ಕೆಡಹಿಸಿ ಜಯವಹೊದ್ದಿಸಿದ ಪಾರ್ಥನಿಂಗೆಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ-ವಿದ್ದ ಮಾನಸವ ಪಾದದ್ವಯದೊಳಿರಿಸೈ ದ-ಯಾದ್ರ್ರಚಿತ್ತ ಸ್ವಭಕ್ತಸಂಸಾರಿ ಕಾಯೆಜನಾರ್ದನಾಯ ನಮೋನಮಃ 21ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದನಂದಗೋಪನ ಕಂದನೆನಿಸಿ ಬಾಲಕತನದಚಂದಮಂ ತೋರಿಸಿದ ಕುಬುಜೆಗಂಧಕೆ ಒಲಿದಸುಂದರೀರಮಣ ಜಯತುತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ-ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ-ನಿಂದಾದಿ ದೋಷಗಳ ಮಾಡಿ ಬಳಲುತ್ತಿಹರ್ಉಪೇಂದ್ರಾಯ ತುಭ್ಯಂ ನಮಃ 22ಸ್ಥಿರಚರಾತ್ಮಕ ಧೇನುಚರ ದೇವಕೀಜಠರ-ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥಪರಮತೇಜೋಮಯ ಪುರಾಣಪುರುಷೇಶ್ವರನೆದುರಿತದೂರ ಗಭೀರನೆನಿರತಿಶಯನಿಜನಿರ್ವಿಕಲ್ಪ ಕಲ್ಪಾಂತಸಾ-ಗರದಿ ವಟಪತ್ರಪುಟಶಯನ ಪುಣ್ಯಶ್ರವಣಪುರುಷನಾಮಕ ಪುಷ್ಕರಾಕ್ಷ ಶ್ರೀಕರನೆ ಜಯಹರಯೇ ನಮೋನಮಸ್ತೇ 23ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ-ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ-ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾದುಷ್ಟ ನರಕಾದಿದಾನವರ ಮರ್ದಿಸಿದ ಜಗ-ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ-ಶ್ರೇಷ್ಠನಂ ಘಾತಿಸಿದ ರಾಮಾನುಜನೆಹರೇ ಕೃಷ್ಣಾಯ ತುಭ್ಯಂ ನಮಃ 24ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ-ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು-ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ-ಶಿಕ್ಷಕ ಪರೀಕ್ಷಕನೆ ಪವನವಾಹನಲಕ್ಷ್ಮೀನಾರಾಯಣಾಯ ನಮೋ25
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮರವೆ ಎಂಬುದು ಎಲ್ಲಿಹುದೋ ಯೋಗಿಗೆಮರವೆ ಎಂಬುದು ಎಲ್ಲಿಹುದೋಅರಿತು ಸರ್ವವ ಸರ್ವದಲಿ ಆತ್ಮ ತಾನಾಗಿರ್ದುನಿರುತ ಕಾಲದಿ ಮುಕ್ತಗೆ ಅವಗೆಪನಿರ್ವಿಕಲ್ಪಸಮಾಧಿನಿತ್ಯನಿತ್ಯಳವಟ್ಟುದುರ್ವಿಘ್ನಗಳೆಜರಿದುಗರ್ವದೂರವಾಗಿ ಗಾಢ ತೂರ್ಯದೊಳಿದ್ದುನಿರ್ವಹಿಸಿ ನಿಜಸುಖವನುಪರ್ವಿಪಸರಿಸಿ ತನಗೆ ಪ್ರತಿಗಾಣುತಿರುತಿಪ್ಪಸರ್ವಸಾಕ್ಷಿ ತಾನಾದವಗೆ1ನಾದದೊಳು ಕಿವಿಯಿಟ್ಟು ನಾಸ್ತಿಮನವಸಿಮಾಡಿಬೋಧೆ ಬಲಿದಾ ಲಹರಿಯಹಾದಿಯಂತುಟೋ ಅಂತು ಹರಿದಾಡುತಲಿ ತಾಭೇದಾ ಭೇದಗಳನುಳಿದುಸಾಧು ಸಂಗವ ಕೂಡಿ ಸಂತುಷ್ಟನಾಗಿಪ್ಪನಾದ ಮೂರುತಿಯಾಗೆ2ಪರಮಸಾರವ ತಿಳಿದು ಪರಿಪೂರ್ಣನಾಗಿರುತವರಚಿದಾನಂದ ಗುರುವೆಚರಣಸ್ಮರಣೆಯ ಮನದಿ ಚಲಿಸದಂತಾವಾಗಹಿಡಿದು ನಾಲಗೆಯೊಳಿರಿಸಿಗುರುವೆ ಗುರುವೆ ಎಂದು ತಾನಾಗಿರ್ದುನಿರತಿಶಯದ ಪರಮಗೆ3
--------------
ಚಿದಾನಂದ ಅವಧೂತರು
ಯೋಗಕ್ಕೆ ಸ್ಥಿತಿ ನಾಲ್ಕೇ ಒಡವೆಯೋಗಕ್ಕೆ ಈ ನಾಲ್ಕು ಇಲ್ಲದಿದ್ದರೆ ಅದು ಅಡವಿಪಸುಸುಖ ಬುದ್ಧಿಯ ತಾಳ್ದು ಎಲ್ಲ ವ್ಯವಹಾರ ತಾಳ್ದುಹಸಿವೆ ಎಂಬುದುನೀಗಿಮೌನಕ್ಕೆ ಮನಸಾಗಿಅಸನವಿಕ್ಕಿದರುಂಡು ಸಾತ್ವಿಕವ ಕೈಗೊಂಡುಉಸುರೆ ಪ್ರಥಮ ಸ್ಥಿತಿ ಇದುವೆ ಪಶುಸಿದ್ಧಿ1ಕರ್ಮಂಗಳನ ಸುಟ್ಟುವಿಧಿನಿಷೇಧಗಳ ಬಿಟ್ಟುನಿರ್ಮಳತ್ವವ ತಾಳಿ ಪಾಪ ಪುಣ್ಯವ ದೂಡಿದುರ್ಮತಿ ಸನ್ಮತಿಗಳಿಲ್ಲ ದೋಷ ಭೂಷಣವಿಲ್ಲಧರ್ಮವೆರಡನೆಯ ಸ್ಥಿತಿ ಇದುವೆ ಶಿಶುಸ್ಥಿತಿ2ಅಂತರವೆ ಸಹ್ಯವಾಗಿ ಬ್ರಾಂತ್ಯ ಅಸಹ್ಯವಾಗಿನಿಂತು ಕಣ್ಣು ಮುಚ್ಚಿ ಕುಳಿತು ಮೈಯ ಮರೆಯುತಸಂತತಾನಂದದ ಬೆಳಗ ತೋರುತಿರೆ ನಿತ್ಯಬೆಳಗುಇಂತಿದು ಮೂರನೆಯ ಸ್ಥಿತಿ ಇದುವೆ ತೂಕಡಿಸುವ ಸ್ಥಿತಿ3ಧ್ಯಾನವೆಂಬುದನೀಗಿಧಾರಣೆಯದು ಹೋಗಿಹೀನ ಮೈಲಿಗೆ ತೊಳೆದು ಆತ್ಮ ಜ್ಯೋತಿಯು ಹೊಳೆದುತಾನೆ ಮಲಗಿಹನು ರಾತ್ರೆ ದಿವಗಳ ಕಾಣಇದುವೆ ನಾಲ್ಕನೆಯ ಸ್ಥಿತಿ ಇದುವೆ ನಿದ್ರಾಸ್ಥಿತಿಯು4ಒಂದರಿಂದ ಒಂದರಂತೆ ಇವನು ಸಾಧಿಸಬೇಕುಒಂದಲ್ಲದಿರೆ ನಿರ್ವಿಕಲ್ಪಸಮಾಧಿತಾನಿಲ್ಲಸಂದುಗೊಂದಿನ ಹಾದಿಯಲ್ಲವಿಹಂಗಪಥಬಂಧ ಹರನು ಚಿದಾನಂದನೆ ತಾನಂಹನು5
--------------
ಚಿದಾನಂದ ಅವಧೂತರು
ಲಾಲಿಪಂಪಾಂಬಿಕೆಲಾಲಿಭ್ರಮರಾಂಬಿಕೆಲಾಲಿಬಗಳಾಂಬಿಕೆಲಾಲಿಲಾಲಿಎಂದು ಪಾಡಿರಿ ಸಾಧು ಸಜ್ಜನರೆಲ್ಲದೇವಿ ತಾನೇ ಎಂದುಲಾಲಿಪಅದ್ವಯಾಗಮ ದ್ಯುತಿಗೋಚರ ಅನಾದಿಅಚಲಾನಂದವೇಲಾಲಿಶುದ್ಧ ಸಮ್ಯಕ್ ಜ್ಯೋತಿರ್ಮಯ ಸ್ವರೂಪಸುಚರಿತ್ರ ನಿಶ್ಚಲಲಾಲಿಚಿದ್ಬಯಲಿನೊಳು ಹೃದಯ ತೊಟ್ಟಿಲೊಳುಭಾವಹಾಸಿಗೆಯಲ್ಲಿ ಪವಡಿಸಿಹೆಲಾಲಿಸಿದ್ಧರಿ ಮಲಗಿನ್ನು ಜೋಗುಳ ಪಾಡುವೆಶ್ರೀ ಮಹಾಲಕ್ಷ್ಮಿಯೇಲಾಲಿ1ನಿತ್ಯನಿರ್ಗುಣ ನಿಷ್ಕಲಂಕ ನಿರ್ವಿಕಲ್ಪನಿಜನಿತ್ಯ ನಿರ್ಮಳೆಲಾಲಿಸತ್ಯ ವಸ್ತುವೆ ಸನಾಥ ವಿಶೋತ್ಪತ್ತಿಸರ್ವಪರಬ್ರಹ್ಮರೂಪಲಾಲಿಪ್ರತ್ಯಗಾತ್ಮಳೆ ಪೂರ್ಣಪರಮ ಪರತರವಂದ್ಯೆಪಾವನ ಚಾರಿತ್ರೆಲಾಲಿಕರ್ತೃನೀ ಅನಂತ ಬ್ರಹ್ಮಾಂಡಾದಿಗಳಿಗೆಕರುಣಾ ಸಮುದ್ರವೇಲಾಲಿ2ಪೃಥ್ವಿಅಪ್ಪುತೇಜವಾಯುರಾಕಾಶಕ್ಕೆಪೃಥಕಾಗಿ ಹೊಳೆದಿಹಳೆಲಾಲಿಸತ್ವರಜತಮಸು ಮೂರರೊಳಗೆ ನೀಸಾಕ್ಷಿರೂಪದಲಿರುವೆಲಾಲಿವೇದ ವೇದಾಂಗಗಳ ವಾಗ್ರೂಪಿನಲ್ಲಿನೆಲೆಸಿ ರಂಜಿಪಳೆಲಾಲಿತತ್ವವಿಂಶತಿ ಪಂಚಶರೀರಗಳೊಳಗೆ ನೀತೊಳ ತೊಳಗಿ ಬೆಳಗುತಿಹೆಲಾಲಿ3ಜಾಗೃತ ಸ್ವಪ್ನ ಸುಷುಪ್ತಿ ಮೂರವಸ್ಥೆಜನಿತದಿ ಕಾಣಿಸಿಲಾಲಿಪ್ರಾಜÕತೈಜಸವಿಶ್ವಮೂರು ಮೂರುತಿಯಾಗಿಪರಿಣಮಿಸಿ ತೋರುವೆಲಾಲಿಶೀಘ್ರದಲಿ ಸದ್ಭಾವ ಸಚ್ಛಿಷ್ಯರಾದರ್ಗೆಸ್ವಾನಂದ ಸುಖವೀವೆಲಾಲಿರೌದ್ರದಲಿ ಭುಗುಭುಗು ಭುಗಿಲೆಂಬ ಕಳೆಗಳುಅತ್ಯುಗ್ರದಿ ಝಂಗಿಸುವೆಲಾಲಿ4ವಿದ್ಯಾವಿದ್ಯವ ತೋರಿ ದೃಶ್ಯಾದೃಶ್ಯಕೆ ಮೀರಿಅದೃಶ್ಯರೂಪ ಶ್ರೀ ಲಕ್ಷ್ಮೀಲಾಲಿಸಿದ್ಧಿಗಳೆಂಬುವ ಛೇದಿಪ ಹರಿಹರಸರಸಿಜೋದ್ಭವ ಮಾತೆಲಾಲಿಸಿದ್ಧ ಪರ್ವತವಾಸ ಸಾಹಸ್ರದಳ ಮಧ್ಯೆಶ್ರೀ ಬಗಳಾಮುಖಿಲಾಲಿಸದ್ಗುರು ಚಿದಾನಂದಅವಧೂತಬಗಳಾಂಬ ಸಗುಣನಿರ್ಗುಣಮೂರ್ತಿಲಾಲಿ5
--------------
ಚಿದಾನಂದ ಅವಧೂತರು