ಒಟ್ಟು 591 ಕಡೆಗಳಲ್ಲಿ , 80 ದಾಸರು , 486 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಧ್ಯಾಯ ಎರಡು ಪದ ಪದುಮ ನಾಭನ ಸ್ಮರಿಸಿ ಮುದದಿ ಹಿಮಗಿರೀಂದ್ರನು ಮದುವೆಯಕಾರ್ಯಕೆ ತೊಡಗಿದ ಮಗಳ ಹುಡುಕಿದ 1 ಅಲ್ಲೆ ಮನೆಯೊಳಗಿಲ್ಲ ಎಲ್ಲಿ ಹುಡುಕಿದರಿಲ್ಲ ಅಲ್ಲೆ ಇಲ್ಲೆಂದು ಇಲ್ಲ ಎಲ್ಲೆಲ್ಲಿ ಇಲ್ಲಾ 2 ಘನಹಿಮ ಗಿರೀಂದ್ರ ದಮ್ಮನೆ ದಣಿದು ಮಾತಾಡಿದನು ಮನೆಮನೆಯಲ್ಲಿ ಹುಡುಕಿ ಮನದೊಳು ಮಿಡುಕಿ3 ಮಾನವಂತಿ ಮಗಳೆಲ್ಲೆ ತಾನು ಹೋದಳು ನಾನಿ ನ್ನೇನು ಪಾಯವ ಮಾಡಲಿ ಎಲ್ಲೆ ನೋಡಲಿ 4 ಅಚ್ಯುತಾನಂತಾದ್ರೀಶ ನಿಚ್ಛೆ ತಿಳಯದು ಎಂದು ಎಚ್ಚರಿಲ್ಲದೆ ಬಿದ್ದನು ಮೂರ್ಛಿತನಾದನು 5 ಪದ ಏಳೆಏಳೆಂದು ಆಕಾಲದಲಿ ಆಜನರು ಹೇಳಿ ಎಬ್ಬಿಸಲಾಗ ಏಳಲೊಲ್ಲವನು ಆ ಮೇಲೆ ಹಾ ಇದು ಎಂಥ ವೇಳೆ ಬಂದಿತು ಎಂದು ಬಹಳ ಗಾಬರಿಯಿಂದ ಗಾಳಿ ಹಾಕಿದರು ಶ್ರೀಶೈಲೇಂದ್ರ ತಾನು ಆಮೇಲೆ ಏಳುತ ಮೈಮೇಲೆ ಎಚ್ಚರ ಹುಟ್ಟು ಆಲಯದೊಳಗಿರುವ ಶೇಲಾದ ಮಗಳನ್ನು ಕಾಣದಲೆ ಕಣ್ಣು ಕ ಗ್ಗಾಳಿಗೈಯುತ ಶೋಕ ಬಹಳ ಮಾಡಿದನು 1 ಪದ ಎಲ್ಲಿ ಪೋದಳೆಲ್ಲಿ ಹುಡುಕಲಿ ಮಗಳಿಲ್ಲ ಮನೆಯೊಳೆಲ್ಲಿ ಇರುವಳಲ್ಲಿ ಪೋಗಲಿ ಎಲ್ಲಿ ಪೋದಳೆಲ್ಲಿ ಹುಡುಕಲೆಲ್ಲಿ ಮಗಳು ಇಲ್ಲ ಪ್ರಾಣ ನಿಲ್ಲ ಲೊಲ್ಲದಿಲ್ಲೆ ಮನಸು ಕಲ್ಲುಮಾಡಿಯೆಲ್ಲಾ ಬಿಟ್ಟು ಪ ಚಾರು ಮುಖಿಯ ಯಾರು ಒಯ್ದರೋ ವಿಚಾರ ಮಾಳ್ಪರಾರ ಇಲ್ಲ ಚೋರರೊಯಿದರೋ ಕ್ರೂರದೈತ್ಯ ವರ್ಯರೋ ಉದಾರಗಂಧರ್ವರೋ ಪೂರ್ವವಯದ ಪಾರ್ವತಿಯ ಯಾರು ವೈದಿದಾರು ಮತ್ತೆ1 ಇಂದ್ರತಾನು ಬಂದು ಒಯ್ದನೋ ಆ ಚಂದ್ರ ಮುಖಿಯ ಚಂದ್ರ ಬೇಕೆಂದು ಒಯ್ದನೋ ಮುಂದೆ ಯಾರು ಬಂದು ಒಯ್ದರೆಂದು ತಿಳಿಯದಿಂದು ಎನಗೆ ಬಂದ ತಾಪದಿಂದ ಬಹಳ ಬೆಂದೆನಾರ ಮುಂದೆ ಹೇಳಲಿ 2 ಎಂತು ನಾನು ಚಿಂತೆ ಮಾಡಲಿ ಧೀಮಂತ ಮುನಿಗೆ ನಿಂತು ಏನಂತ ಹೇಳಲಿ ಎಂಥ ಕಷ್ಟ ಬಂತÀು ಈ ಚಿಂತೆಗಿನ್ನು ಪ್ರಾಂತಗಾಣೆ ಪ್ರಾಂತಕಾನಂತ ಗಿರಿಯ ಕಾಂತಗೇನಂತ ಹೇಳಲಿ 3 ಪದ್ಯ ಮುನ್ನಯೀಪರಿ ಶೋಕವನ್ನು ಮಾಡುತಲೆದ್ದು ಘನ್ನ ಆ ಗಿರಿರಾಜ ನಿನ್ನೇನು ಗತಿಯೆಂದು ಕಣ್ಣೀರು ಸುರಿಸುತಲೆ ಹೆಣ್ಣು ಮಗಳನು ನೆನಸಿ ಉಣ್ಣದಲೆ ತಾನು ಅರಣ್ಯದಲಿ ನಡೆದ ಕಣ್ಣಿಟ್ಟು ನಾಕುಕಡೆ ಚನ್ನಾಗಿ ನೋಡಿದನು ಮುನ್ನಲ್ಲೆ ಕುಳಿತಿರುವ ತನ್ನ ಮಗಳನು ಕಂಡು ಕನ್ನಡಿಯ ಪರಿಹೊಳೆವ ಮುನ್ನವಳಗಲ್ಲವನು ಚೆನ್ನಾಗಿ ಪಿಡಿದು ಬಹು ಬಣ್ಣಿಸುತ ನುಡಿದ ಪದ ಪ್ರೀತಿ ಮಗಳೆ ನೀನು ಈ ವನದಲ್ಲಿ ಕೂತ ಕಾರಣವೇನು ಅಮ್ಮಯ್ಯಾ ಪ್ರೀತಿಯ ಮಗಳೆ ಇಲ್ಲೇತಕೆ ಬಂದೆ ನೀ ಪ್ರೀತನಾದ ಶ್ರೀನಾಥ ಮನೆಗೆ ನಡಿ ಪ ಮದುವಿ ನಿಶ್ಚಯವಿಂದು ಮಧುಸೂದನನಿಗೆ ನಾ ಮುದದಿ ನಿನ್ನನ್ನು ಕೊಟ್ಟು ಮದುವೆ ಮಾಡುವೆನು ಮುದದಿ ಮನೆಗೆ ನಡಿ 1 ಮನಸಿನೊಳಗೆ ಮಿಡುಕೀ ಮನೆಯ ಬಿಟ್ಟು ವನವನವÀ ಚರಿಸುವರೇ 2 ಮನೆಗೆ ನಡಿಯೆ ನಿನ್ನ ಮನಸಿನಂತಾಯಿತು ಏಸು ಜನ್ಮಕೆ ಬಂದು ಮಾಡಿದ ಪುಣ್ಯರಾಶಿ ಫಲಿಸಿತಿಂದು ವಾಸುದೇವ ಸರ್ವೇಶ ಅನಂತಾದ್ರೀಶ ನೀನ್ನ ಕೈವಶವಾದನಡಿ 3 ಪದ ಪಡೆದ ತಂದೆಯ ಮಾತು ದೃಢವಾಗಿ ಕೇಳುತಲೆ ಬಿಡದೆ ಆ ನಾರದನ ನುಡಿ ಸ್ಮರಿಸಿ ಪಾರ್ವತಿಯು ಎಡವಿದಾ ಬಟ್ಟುಮ ತ್ತೆಡವಿದಂತೆ ದು:ಖ ಬಡುವುತಲೆ ಮನದಲ್ಲೆ ಮಿಡುಕಿದಳು ತಾನು ಅಡವಿಯಲಿ ನಾ ಬಂದು ಅಡಗಿದರು ಇದು ಎನ್ನ ಬಿಡಲಿಲ್ಲ ಮತ್ತಿನ್ನ ತುಡುಗುತನವು ಯಾಕೆ ನುಡಿಬೇಕೆಂದು ತನ್ನ ಒಡಲೊಳಗಯಿದ್ದದ್ದು ಒಡೆದು ಆಡಿದಳಾಗ ಭಿಡೆಯಬಿಟ್ಟು ಪದ ಅಪ್ಪಯ್ಯ ಒಲ್ಲೆ ನಾ ವಿಷ್ಣುವ ಒಲ್ಲೆನಾ ವಿಷ್ಣುವ ಎಲ್ಲಿ ಹುಡುಕಿ ತಂದಿ ಬಲ್ಲಿದ ಶಿವಯೆನ್ನ ವಲ್ಲಭನಯ್ಯಾ ಪ ಧೀರ ಕೇಳವನ ವಿಚಾರಯೆನ್ಹೇಳಲಿ ನೀರು ಮನೆಯಮಾಡಿ ಭಾರವಗೆಲುವ ಮಣ್ಣು ಮೆಲುವಾ ಬಿಟ್ಟು ಅವದಾವ ಚೆಲುವಾ 1 ನಿತ್ಯ ಕ್ರೂರನಾಗಿ ಮತ್ತೆ ಬಲಿಯ ತಳಕೊತ್ತಿ ತುಳಿದನವ ಕುಹಕ ಕುತ್ತಿಗೆ ಕೊಯಿಕಾ ಅವಗೆಲ್ಲಿ ವಿವೇಕಾ 2 ಶುದ್ಧ ಕೋತಿಯ ಕೂಡಿ ಕದ್ದು ಬೆಣ್ಣೆಯ ಬತ್ತ ಲಿದ್ದು ತೇಜಿಯ ಬಿಟ್ಟು ಅನಂತಾದ್ರಿಯಲ್ಲಿಹನು 3 ಪದ ವನದಲ್ಲೆ ಇರುವ ಆ ವನಜ ಮುಖಿ ಪಾರ್ವತಿಯು ವಿನಯದಿಂದೀಶ್ವರನ ಮನದಲ್ಲೆ ಸ್ಮರಿಸುತ್ತಲೆ ಮನಸಿನ ಭಾವವನ್ನು ಅನುಮಾನ ಬಿಟ್ಟು ತನಗನುಕೂಲವಾಗಿ ಘನ ಹಿಮಾಚಲ ಜನಾರ್ದನಗೆ ಕೊಡಬೇಕೆಂದು ಮನದಲ್ಲೆ ಆತನ ನೆನವುತಲೆ ಭಕ್ತಿಯಲಿ ಮುನಿದಿರುವ ಪಾರ್ವತಿಯ ಮನಸಿನ ಭಾವವನು ಮನಸಿಗೆ ತಾರದಲೆ ಮನೆಗೆ ನಡೆಯೆಂದ 1 ಪದ ಮನೆಗೆ ನಡೆಯೆ ಪಾರ್ವತಿ ನೀನು ಎನ್ನ ಮನಸಿನಂತಾದರೆ ಬರುವೆನು 1 ನಿನ್ನ ಮನೋರಥ ವದುಯೇನು ಬಹು ಮನ್ನಿಸಿ ಶಿವಗೆನ್ನ ಕೊಡು ನೀನು 2 ಹರಿಗೆ ನಿಶ್ಚಯ ಮಾಡಿದೆ ನಾನು ಬಿಡು ಹರಗೆ ನಿಶ್ಚಯ ಮಾಡೆಲೋ ನೀನು 3 ಬಾಲೆ ಕೊಟ್ಟ್ಹಣ್ಣು ತಿರುಗೂದಿಲ್ಲೆ ಶಿಶುಪಾಲನ ರುಕ್ಮಿಣಿ ಬಿಡಲಿಲ್ಲೆ 4 ಗೆದ್ದೊಯ್ದ ಆಕೆಯ ಹರಿ ತಾನು ನಾನು ಗೆದ್ದವರಿಗೆ ಮಾಲೆ ಹಾಕುವೆನು 5 ಯಾವ ಪುರುಷ ನಿನ್ನ ಗೆದ್ದವನು ಮಹದೇವನೆ ನಿಶ್ಚಯ ತಿಳಿ ನೀನು 6 ಗೆದ್ದಿಹ ನಿನ್ನಾನಂತಾದ್ರೀಶಾ ನಿನಗದರ ಚಿಂತೆಯಾಕೋ ಶೈಲೇಶಾ7 ಪದ ಅವನು ಹಿಮವಂತನೆಂಬುವನು ತನ್ನ ಮಗಳು ಆದವಳಿಗೀಪರಿ ನುಡಿದಾ ಶಿವನನಾಮದುವೆ ಆಗುವೆನು ಎಂಬುವೆ ನೀನು ಶಿವನುಯೆಂದೆನಿಸಿಕೊಂಬುವನು ಅವ ಮತ ಎಂಥವನು ಪೇಳೆ ಅವನ ಮಾತನು ಕೇಳಿ ಯುವತಿಮಣಿ ಪಾರ್ವತಿಯು ಶಿವನ ಸ್ಮರಿಸುತ ಮತ್ತೆ ಶಿವನ ಸರಿಯಿಲ್ಲ ಈ ಭುವನದೊಳು ಎಂತೆಂದು ಅವನ ಕೊಂಡಾಡುತಲೆ ಸ್ತವನ ಮಾಡುತ ನುಡಿದಳವನ ಪತಿಯೆಂದು 1 ಪದ ಅವನೆ ಪತಿಯು ಶಿವನು ಎನಿಸುವಾ ಅಪ್ಪಯ್ಯ ಕೇಳೋ ಅವನೆ ಪತಿಯು ಶಿವನು ಎನಿಸುವವನು ಸರ್ವÀಭುವನದೊಡೆಯ ಅವನೆ ಯನಗೊಪ್ಪುವನು ಸತ್ಯ ಅವನೀಶನೆ ಯೆನ್ನವಗರ್ಪಿಸು ಪ ಭಕ್ತಪ್ರಿಯ ತ್ರೀನೇತ್ರನಾಥನು ತಾ ನಿತ್ಯ ನದಿಯ ನೆತ್ತಿಯಲಿ ಪೊತ್ತಿಹಾತನು ಪ್ರಖ್ಯಾತನು ಸತ್ಯಶೀಲಕೃತ್ತಿವಾಸಕ್ಲøಪ್ತ ಅವನೆ ಚಿತ್ತದೊಡೆಯ ಅವಗಗತ್ಯ ಕೊಡುನೀ 1 ಬಂದದುರಿತ ಹಿಂದೆ ಮಾಡುವ ಭಕ್ತಿಂದ ನಡದು ನಡದು ಬಂದವರಿಗಾನಂದ ಮಾಡುವ ದಯಮಾಡುವ ತಂದು ಕೊಡುವ ತಂದೆ ಕೇಳಾನಂದಮೂರುತಿ ನಂದಿವಾಹನ ಚಂದ್ರಶೇಖರ ಅಂಥ ಇಂಥ ಕಾಂತನಲ್ಲವೋ ಭೂಪ್ರಾಂತದೊಳವನಂಥ ದಯಾವಂತರಿಲ್ಲವೋಸುಳ್ಳಲ್ಲವೋ ಕಂತುಪಿತ ಅನಂತಾದ್ರೀಶನಂಥ ಕಪಟವಂತರಿಲ್ಲ ಅಂತರಂಗದ ಕಾಂತ ಶಿವನೇ ಚಿಂತೆಯಾಕ್ಹಿಮವಂತ ಇನ್ನು ಪದ ಇಂಥ ಮಾತನು ಕೇಳಿ ಸಂತೋಷದಲಿ ಹಿಮವಂತ ರಾಜೇಂದ್ರ ತಾನು ಮಾತಾಡಿದನು 1 ಮನೆಗೆ ಬಂದನು ಉದ್ರೇಕದಲ್ಲಿ ಸ್ನೇಹಬದ್ಧಾಗಿ ಸ್ವಯಂವರ ದುದ್ಯೋಗ ಮಾಡಿದನು 2 ಲೇಸಾಗಿ ತಾ ಸರ್ವದೇಶಕ್ಕೆ ದುಂದುಭಿ ಘೋಷವ ಮಾಡಿಸಿದಾ ತೋಷದಿ ಸರ್ವಲೋಕೇಶರನೆಲ್ಲಾ ಕರೆ ಕಳುಹಿದಾ 3 ಇಂದ್ರ ತಾ ಬಂದ ಅಲ್ಲಿಂದ ಅಗ್ನಿಯು ಬಂದಾ ಮುಂದೆ ಆ ಯಮನು ಬಂದಾ ಬಂದಾ ನಿರುತಿಮತ್ತೆ ಬಂದ ವರುಣ ವಾಯು ಬಂದ ಕುಬೇರ ತಾನು 4 ನಿಲ್ಲದೆ ಸ್ವಯಂವರಕೆ ಬಲ್ಲಿದನಂತಾದ್ರಿ ವಲ್ಲಭ ತಾ ಬಂದ ಎಲ್ಲರು ಬಂದರಾಗ 5 ಪದ ಗಿರಿರಾಜ ಮುಂದೆ ಆ ಸುರರಲ್ಲಿ ಬಹುಸ್ನೇಹ ಸುರಿಸುತಲೆ ಆಸನವ ತರಿಸಿ ಎಲ್ಲರನು ಕುಳ್ಳಿರಿಸಿ ಕರಗಳ ಮುಗಿದು ಹರಿ ಮೊದಲು ಮಾಡಿಕೊಂ- ಡ್ಹರುಷದಿಂದಲಿ ಸರ್ವ ಸುರರಿಗರ್ಚಿಸಿದ ಸುರಸಾದ ಈ ಕಥೆಯ ಸರಸಾಗಿ ಕೇಳಿದರೆ ಸುರರು ವೊಲಿವುವರೆಲ್ಲ ಸರಸಿಜಾಕ್ಷಿಯ ಸ್ವಯಂವರಕೆ ಬಂದಿಹ ಸರ್ವ ಸುರರನುಗ್ರಹದಿಂದ ಸರಸರನೆ ಮುಗಿದಿತಿಲ್ಲಿಗೆರಡು ಅಧ್ಯಾಯ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಎರಡು ರಾಗ ಭೂಲೋಕವನು ಜೈಸುತ ಬಲದಿಂದಾ ಇಂದ್ರನೇ ಮೊದಲಾದ ಬೇಗಾ ದೇವೇಂದ್ರ ನಾಸನಕೆ 1 ಉಗ್ರಶಾಸನ ಮಾಡು ಮಾಡುವಂಥಾ ಉಗ್ರಶಾಶನ ಶೀಘ್ರದಿಂ ಹರಿಗೆ 2 ಬಿಡದೆ ದಯದಿ ಅನಂತ ಇಂಥ ಕಾಲಕೆ ಎಲ್ಲಿ `ಅನಂತಾದ್ರೀಶನೆ ' ನಿಂತು ನುಡಿದನು ಅಂತರಿಕ್ಷದಲಿ 3 ರಾಗ ಅಂಜಬೇಡಿರಂಜ ಬೇಡಿರೋ ನೀವಿನ್ನು ಮೇಲೆ ಪ ಪಂಜರದೊಳಗಿರುವೆ ನಿಮ್ಮನಂಜಿಸುವನ ಭಂಜಿಸುವೆನು ಅ.ಪ ಎಂದು ದ್ವೇಷ ಮಾಡುವನೋ ಅಂದಿಗವನ ಕೊಂದÀು ಬಿಡುವೆ 1 ದ್ವೇಷವನ್ನು ಮಾಡಿದವನು ಉಳಿಯ ಮುನ್ನ ಬಹಳ ದಿವಸ ಸತ್ಯ 2 ಪ್ರಹ್ಲಾದ ಇದ್ದ ಸ್ಥಳದಲ್ಲಿರುವೆ ನಾನು 3 ವಚನ ಶ್ರೀ ಲಲಾಮನವಾಣಿ ಕೇಳಿ ಉಳಿದವನಲ್ಲ ಕಾಲ ಹಿರಣ್ಯಕನಿಂದ ಬಾಲ ಕಾಲಕಾಗುವದೆಂದು ಕಾಲವನು ನೋಡುತಲೆ ಕಾಲಗಳೆದರು ಲೋಕಪಾಲಕರು ಎಲ್ಲಾ 1 ರಾಗ ಕೈಯಲಿಕೊಟ್ಟು ನಕ್ಕು ನುಡಿದಾನು 1 ಇರಲಿ ಬುದ್ಧಿವಂತನಾಗಲಿ ಪ್ರಸಿದ್ಧನಾಗಲಿ2 ಆಗ ಪ್ರಹ್ಲಾದನ್ನ ಕರದ್ಹೇಳಿದರು ಆಹ್ಲಾದದಿಂದಾ3 ಸಂಭ್ರಮದಿಂದ ಉತ್ತಮ ಶ್ರೀ ಹರಿನಿಂದಾ ಶಾಸ್ತ್ರ ನುಡಿದರು 4 ತ್ರೈವರ್ಗಿಕ ಶಾಸ್ತ್ರ ನುಡಿದರು 5 ಪಾಠಮಾಡಲಿಲ್ಲ ಸವಿದು ಹರಿ ಚರಿತಾಮೃತವನ್ನು ಸವಿ ಇನ್ನೊಂದನರಿಯಾ 6 ನುಡಿದನು ಅವನು ನವನೀತ ಧಾಂಗಿರುವಂಥಾದು ನವವಿಧ ಭಕ್ತಿ 7 ಅವರಿಗೆ ಮತ್ತಾರಿಗಾದರು ಅವನಂಜುವನಲ್ಲಾ 8 ಅವನು ಚಲುವ ನಂತಾದ್ರೀಶನಲ್ಲೆ ಛಲ ಬಿಟ್ಟನಲ್ಲಾ 9 ವಚನ ಕೂಡಿಸಿಕೊಂಡು ಮಂದ ಮುಂದ್ಹೇಳು ಇಷ್ಟುದಿನ ಒಂದು ಬಿಡದಲೆ ಹೀಗೆ ಅಂದ ಮಾತಿಗೆ ಮತ್ತೆ ಕಂದ ಪ್ರಹ್ಲಾದ ಹೀಗೆಂದನಾಗ 1 ರಾಗ ಬರೆಯಲಿಲ್ಲ ಓದಲಿಲ್ಲವೋ ಅಪ್ಪಯ್ಯ ನಾನು ಪ ಹರಿಯ ನಿಂದಿಸುವ ಶಾಸ್ತ್ರ ಬರೆಯಲ್ಹ್ಯಾಗೆ ಓದಲ್ಹ್ಯಾಗೆ ಅ.ಪ ಹರಿಯ ಗುಣಗಳನ್ನು ಮಾಡುವೆನು ಹರಿಯಪಾದ ಹರಿಯ ವಂದಿಸುವೆ ನಿತ್ಯಾ 1 ಅಂಥಾದು ಎನ್ನ ಮನಸು ಮನಸಿಲ್ಲೆ ವಿಷಯಗಳನ್ನು ನೆನೆಸುವೆ ಸುಹರಿಯ ರೂಪಾ2 ಗೆಳೆಯನಾದ ತಾನು ಅಂತರಂಗದಲ್ಲಿ ತಾನು ನಿಂತು ಪ್ರೇರಿಸುವ ಅಂತರಂಗದಂತೆ ಇರುವೆ 3 ವಚನ ಸಿಟ್ಟು ಮಾಡುತಲಿಂಥ ಥಟ್ಟನ್ಹೇಳಿರಿಯೆನಲು ಥಟ್ಟ ನಾವಲ್ಲ ಕೊಟ್ಟವರು ಕೊಟ್ಟ ಬುದ್ಧಿಯು ಅಲ್ಲ ರಾಗ ಕೇಳಿರಿ ನೀವೆಲ್ಲ ಭಾಳ ಭಕುತಿಯಲಿ ಕೇಳಿರಯ್ಯಾ ಪ ಬಾಳ ಮಾತುಗಳೇಕೆ ಹೇಳುವೆ ಸಾರಾಂಶ ಕೇಳಿರಯ್ಯಾ ಅ.ಪ ಅಲ್ಲ ಕೇಳಿರಯ್ಯಾ ದಿಟ್ಟಾಗಿ ಶ್ರೀ ಹರಿಯು ಕೊಟ್ಟ ಬುದ್ಧಿಯು ಇದು ಕೇಳಿರಯ್ಯ 1 ಶ್ರೀ ಜಗದೀಶನಿಂದೀ ಜಗ ತಿರಗೋದು ಕೇಳಿರಯ್ಯಾ 2 ಅನಂತಾದ್ರೀಶನು ತಾನೆ ಆಡುವದು ಕೇಳಿರಯ್ಯಾ 3 ವಚನ ದೈತ್ಯ ಅಡಿಯಿಟ್ಟು ನೀತಿಯಲಿ ಕಿಡಿಗಣ್ಣಿನೊಳು ನೋಡಿ ಒಡಲೊಳಗೆ ಸಿಟ್ಟಿನಲಿ ದೃಢವಾಗಿ ಇರುವಂಥ ಭೃತ್ಯರುಗಳಿಗೆ ನುಡಿದನೀಪರಿಯ 1 ರಾಗ ಕಡಿದ್ಹಾಕಿರೀತನ ||ಪಲ್ಲ|| ಬಗೆ ದುಷ್ಟಮಾತುಗ- ವಿಷ್ಣುವ ಸೊಗಸಾಗಿ ಪೂಜಿಸಿ ನಗುತಿಪ್ಪನ 1 ಸುತನಾಗದಿದ್ದರೂ ಸುತನವನೆ ಅತಿರಭಸದಲೆ ವಿಶ್ರುತವಾಗಿ ಹುಟ್ಟಿದ ವಿತತರೋಗ ತನಗ್ಹಿತವಾಗಿರುವದೇನು 2 ನಾನಾರೀತಿಗಳಿಂದ ಹಾನಿಯ ಅನಂತಾದ್ರೀಶನ ಧ್ಯಾನದಲ್ಲಿರುವನ 3 ರಾಗ ಆಗೆಲ್ಲ ಮಂದಿಗಳನ ನೆರಸಿದಾ1 ಮುರಿದು ಅವನ ಭಯ ಬಿಡಿಸಿದಾ 2 ಹರಿಯು ಬಂದು ಉಳಿಸಿದಾ3 ಸರ್ಪಶಯನ ಬಂದು ಭಯವಾ ಬಿಡಿಸಿ4 ವಿಷವ ತಂದು ಯತ್ನದಿಂದ ಕುಡಿಸಿದಾ ಹರಿ ತಾ ವಿಷವಮೃತ ಮಾ ಡಿ ಸೌಖ್ಯ ಬಡಿಸಿದಾ 5 ಘಟ್ಟ್ಯಾಗ್ಹಿಡಿದು ಶ್ರೀಹರಿ ಸಾಕಿದಾ 6 ತಾನೆ ತಾರಿ ಸಿದಾ7 ಶೀತಾಗಿ ಸೌಖ್ಯ ಬಡಿಸದಾ 8 ನಾನಾರೀತಿಯಿಂದಲವನನು ಸರಿಸಿದಾ ಅಚ್ಯುತನಂತಾದ್ರೀಶನು ಸೌಖ್ಯ ಸುರಸಿದಾ 9 ವಚನ ಮಾಡಿದರಿವಗೆ ಇನ್ನದೇನು ಪಾಯವುಯೆಂದು ಮಾನಿತರು ಗುರುಗಳಾ ದಾನವೇಂದ್ರ ನೀನು ದೀನನಾಗುವದು ಮುಂದೆ ನೀನು ತಿಳಿಯೊ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಮೂರು ಪದ ಸಾವಿರ ಬುಧರÀರನೆಲ್ಲ ಮೀರಿ ಪರಮೇಶ್ವರಗೆ ಹಾರ ಹಾಕುವೆನೆಂದು ಪಾರಿಜಾತದ ಕುಸುಮ ಪಾರ್ವತಿಯು ತಾತರಿಸಿ ಪೂರ್ವದಲಿ ಮಾಡಿದಳ ಪೂರ್ವ ಮಾಲೆಯ ಭಕ್ತಿಪೂರ್ವಕವಾಗಿ ಚಾರುತರವಾಗಿಹ ಅಲಂಕಾರಗಳ ನಿಟ್ಟು ಶೃಂಗಾರ ಭರಿತಳು ಆಗಿ ಪಾರಿಜಾತದ ಹೂವಿನ ಹಾರಕೈಯಲಿ ಪಿಡಿದು ಚಾರು ಸಖಿಯಲ್ಲಿ 1 ಚಂದ್ರವದನೆಯ ಬಹಳ ಛಂದಾದ ಮುಖನೋಡಿ ಚಂದ್ರಮನು ಇದುಕಾಂತಿ ನಂದು ಒಯ್ದಳು ಈಕೆ ಮುಂದಿವಳನೊಯ್ಯಬೇಕೆಂದು ಕುಚಗಳ ಕಂಡು ಇಂದ್ರ ತಾ ಯನ ನಾ ಗೇಂದ್ರನ ಶಿರವೆಂದ ಮುಂದದರ ಸೊಂಡೆ ಇದು ಯೆಂದು ಕರಗಳಿಗೆಂದಾ ಮಂದಗತಿ ಮತ್ತಾದರರಿಂದ ನಡಗಿಯ ಕಂಡು ಸುಂದರಿಯ ಆಹುಬ್ಬು ಕರಿದರ್ಪ ತಾ ಕಂಡು 2 ಎರಳೆ ನೋಟವ ಕಂಡು ಎರಳೆವಾಹನ ನುಡಿದ ಯರವಿಂದವಯವಕ್ಹಿಗ್ಗಿ ಹೊರಳು ವಳು ಯಂತೆಂದು ಕೊರಳವನು ಕಂಡು ಹರಿ ಕರದಲೊಪ್ಪುವಯೆನ್ನ ವರಪಾಂಚಜನ್ಯವಿದು ಸರಿಯೆಂದು ನುಡಿದಾ ಗುರುಳು ಗೂದಲದವಳ ಹೆರಳವನು ನೋಡಿಹರಿ ಇರುಳ ಮಲಗುವಯನ್ನ ಸರಳ ಹಾಸಿಗೆಯೆಂದು ಸುರರು ಎಲ್ಲರು ಪರಿ ಪರಿಯಿಂದ ನುಡಿದರನುಸರಿಸಿಯಿದರಂತೆ 3 ಪದ ಮುಂದೆ ಆ ಪಾರ್ವತಿ ಬಂದು ಕುಳಿತಳಲ್ಲೆ ಬಂದ ಶಿವನು ತಾ ಬಾಲಕನಾಗಿ 1 ಲೀಲೆಯಿಂದಲಿ ತೊಡೆಯ ಮೇಲೆ ಮಲಗಿದನಾಗ ಬಾಲೆ ಹೀಗೆಂದಳು ಎಲ್ಲರಿಗೆ 2 ಮುನ್ನೆತ್ತಿದವರಿಗ್ಹಾಕುವೆ ಮಾಲೆ 3 ಅಂದಮಾತನು ಕೇಳಿ ಇಂದ್ರ ಬಂದನು ಆಗ ಮುಂದೆ ಆ ಬಾಲನೆತ್ತುವೆನೆಂದು4 ಚನ್ನಿಗನಂತಾದ್ರೀಶನ ಹಿಂದಕೆ ಮಾಡಿ ಸಣ್ಣ ಬಾಲನ ತಾ ಮುಂದಕೆ ಕರೆದಾ 5 ಪದ ಸಣ್ಣಬಾಲನೇ ಬಾರೋ ಹಣ್ಣು ಕೊಡುವೆ ನಿನಗಿನ್ನು ಕೈತಾರೋ ಪ ಚಂಡು ಬೊಗರಿ ಗೋಲಿಗುಂಡು ನಾ ಕೊಡುವೆ ಬೆಂಡು ಬತ್ತಾಸವ ಕೊಂಡು ನಾ ಕೊಡುವೆ 1 ಚಿಣಿಕೋಲು ಮತ್ತೆ ಈಕ್ಷಣ ತಂದು ಕೊಡುವೆ ಮನಸಿಗೊಪ್ಪುವ ಚಿಂತಾಮಣಿ ತಂದು ಕೊಡುವೆ 2 ನಡಿಯೋ ನಿನಗೆ ದೊಡ್ಡ ಗುಡಿಯ ತೋರಿಸುವೆ ಒಡೆಯ ನಂತಾದ್ರೀಶನಡಿಯ ತೋರಿಸುವೆ 3 ಪದ್ಯ ಮತ್ತೇ ಮತ್ತೀಪರಿಯ ಒತ್ತಿ ಒದರಿದರೇನು ವ್ಯರ್ಥ ಬಾಲನು ಕಣ್ಣೆತ್ತಿ ನೋಡಲುವಲ್ಲ ಒತ್ತಿ ತೋಳುಗಳ್ಹಿಡಿದು ಎತ್ತಿನೋಡಿದನಾಗ ಯತ್ನದಿಂದಲ್ಲಿಯೆ ತಿತ್ತಿದಮ್ಮನೆ ದಣಿದು ಮತ್ತ ದೇವೇಂದ್ರ ಬಲು ಮೆತ್ತಗಾದ ವ್ಯರ್ಥ ಈ ಬಾಲಕನ ಎತ್ತಿ ನಗೆಗೀಡು ಈವತ್ತು ಆಯಿತು ಎಂದು ವೃತ್ರಾರಿ ತಾ ಮುಂದೆ ಅತ್ಯಂತ ಕೋಪದಲಿ ಎತ್ತಿದನು ವಜ್ರವನು ಎತ್ತಿದಾ ಕೈಬರದೆ ಮತ್ತಲ್ಲಿ ನಿಂತಿಹುದು ಚಿತ್ರದಲ್ಲಿಯ ಗೊಂಬೆ ಹಸ್ತದಂತೆ 1 ಪದ ಆಯಿತು ಈ ಪರಿಯು ದೇಹಕೆ ಆಯಾಸವೇ ಸರಿಯ ಪ ಮತ್ತೆ ಅಗ್ನಿಯು ಅಲ್ಲೆ ಬಾಲನ ಎತ್ತದೆ ದಣಿವುತಲೆ ಶಕ್ತಿ ಎತ್ತಿದ ಮೇಲೆ ಮತ್ತಾ ಶಕ್ತಿ ನಿಂತಿತು ಅಲ್ಲೆ1 ದಂಡಧರನು ಆಗ ಯೆತ್ತದೆ ಭಂಡಾದನು ಬೇಗ ದಂಡ ನೆತ್ತಿದನಾಗ ಎತ್ತಿದ ದಂಡ ನಿಂತಿತುಹಾಗೆ 2 ಮತ್ತೆ ನೈರತಿ ಅಲ್ಲೆ ಬಾಲನ ಎತ್ತದೆ ದಣಿವುತಲೆ ಕತ್ತಿಯೆತ್ತಿದ ಮೇಲೆ ಮುಂದಾ ಕತ್ತಿನಿಂತಿತು ಅಲ್ಲೆ 3 ಪಾಶಧರನು ಆಗ ಬಹು ಕಾಸೋಸಿ ಬಿಟ್ಟು ಬೇಗ ಪಾಶವೆತ್ತಿದನಾಗ ಮುಂದಾ ಪಾಶನಿಂತಿತು ಹಾಗೆ 4 ವಾಯು ಬಂದನಲ್ಲೆ ಬಳಲಿದ ಕಾಯಕ್ಲೇಶದಲ್ಲೆ ಕಯ್ಯನೆತ್ತಿದ ಮೇಲೆ ಮತ್ತಾಕೈಯು ನಿಂತಿತು ಅಲ್ಲೆ 5 ಸತ್ವರ ಬರವುತಲೆ ಕುಬೇರ ನಿಸ್ಸತ್ವನಾದನಲ್ಲೆ ಶಸ್ತ್ರಯೆತ್ತಿದ ಮೇಲೆ ಮುಂದಾ ಶಸ್ತ್ರ ನಿಂತಿತು ಅಲ್ಲೆ 6 ಶೂಲಧರನು ಅಲ್ಲೆ ಮತ್ತಾ ಬಾಲನಯೆತ್ತದಲೆ ಶೂಲನೆತ್ತಿದ ಮೇಲೆ ಮುಂದಾಶೂಲ ನಿಂತಿತು ಅಲ್ಲೆ7 ಬುಧಜನಕನು ಅಲ್ಲೆಬರವುತ ಗದಗದ ನಡುಗುತಲೆ ಗದೆಯನೆತ್ತಿದ ಮೇಲೆ ಮುಂದಾಗದೆಯು ನಿಂತಿತು ಅಲ್ಲೆ8 ಗೋಣನಲ್ಲಾಡುವ ತಲೆಯತ್ತಿದ ಹರಿ ತಾನು ಚಕ್ರವು ಮೇಲೆಖೂನದಿ ಅದು ಅಲ್ಲೆ ಆಯಿತು ಗೋಣವು ತಿರುವುತಲೆ 9 ಅಲ್ಲೆ ಪೂಷಣ ಬೇಗ ಕರಕರ ಹಲ್ಲು ತಿಂದನಾಗ ಹಲ್ಲು ಬಿದ್ದವಾಗ ತೋರಿದ ಎಲ್ಲ ದೇವತೆಗಳಿಗೆ 10 ಕೂಸನೆತ್ತದಾಗಿ ಎಲ್ಲರು ಮೋಸವಾದರು ಹೋಗಿ ಆ ಸ್ವಯಂವರಕಾಗಿ ಅನಂತಾದ್ರೀಶನ ಸಹಿತಾಗಿ 11 ಪದ್ಯ ಅಂಬುಜೋದ್ಭವ ತಾನು ಸ್ತಂಭಿತಾಗಿಸುರ ಕ ದಂಬವನು ಕಾಣುತಲೆ ಸಾಂಬನ ಮಹಿಮೆಯಿದು ಅಂಬಿಕೆಯ ತೊಡೆಯ ತಲೆಗಿಂಬು ಮಾಡಿಹ ಬಾಲ ಸಾಂಬನಿವನಹದೆಂದು ಸಂಭವಿಸಿದಾಗ ನಂಬಿ ಸ್ತುತಿ ಮಾಡಿದನು ಸ್ತಂಭೀತರು ಎಂದೆನಿಸಿ ಕೊಂಬುವರು ಎಲ್ಲಾರು ನಂಬಿ ಸ್ತುತಿಸಿದರು ಆ ಸಾಂಬಗೀಪರಿಯು ಪದ ಸಾಂಬಸದಾಸಿವನೆ ರಕ್ಷಿಸು ಬಾಲಕನೇ ಸಾಂಬಸದಾಶಿವನೆಂಬುವ ಬಾಲಕ ನೆಂಬುವದರಿಯದೆ ಸ್ತಂಭಿತರಾದೆವು ನಂಬಿಗೆ ತಿಳಿಯದೆ ನಂಬಿದೆವೋ ಜಗ ದಂಬೆಯ ತೊಡೆ ತಲೆ ಗಿಂಬು ಇಟ್ಟವನೆ ಪ ಪಟುತರನಾದಂಥವನೆ ತಿಳಿಯದೋ ನಿನ್ನ ಘಟಿತ ಘಟನೆ ಹರನೆ ಸ್ಫಟಿಕ ಸನ್ನಿಭ ಧೂರ್ಜಟಿಯೆ ನಿನಗೆ ಸಂ ಘಟಿತಳಾದ ಈ ಕುಟಿಲ ಕುಂತಳೆಯು ಹಟದಲಿ ಗೆಲವುದುವ ಹಟವೊಂದಿದು ಈ ಸ್ಪುಟವಾಯಿತು ಸಂಕಟ ಪರಿಹರಿಸು 1 ಸರ್ವರನೆಲ್ಲಾ ತರಿಸಿ ಸರಸ ಮಾಡಿದೆಯೊ ಗರ್ವವ ಪರಿಹರಿಸಿ ಉರ್ವಿಯೊಳಗೆ ನಿನಗಿರ್ವರಾರು ಸರಿ ಸರ್ವರನ್ನು ಮೀರಿರುವ ದೇವನೆ ಸರ್ವಪ್ರಕಾರದಿ ಸರ್ವರ ಅವಯವ ಪೂರ್ವದಂತಾಗಲಿ ಪಾರ್ವತಿಪ್ರಿಯನೇ 2 ಭೋ ಶಿಶುವರ ರೂಪ ಬೇಗನೆ ಬಿಡು ಈ ಸಮಯಕ್ಕೆ ಕೋಪ ಈ ಶಶಿವದನೆಯ ಆಶೆಗೆ ವ್ಯರ್ಥದಿ ಮೋಸಹೋಗಿ ಕಾಸೋಸಿ ಬಟ್ಟೆವು ಘಾತಿ ಮಾಡಬೇಡಾಸೆಯ ಪೂರಿಸು ಶ್ರೀ ಅನಂತಾದ್ರೀಶ ಪ್ರಿಯನೆ 3 ಪದ್ಯ ವಿರಳಾಟ ಈ ಸ್ತುತಿಗೆ ಮರುಳಾಗಿ ತಾನು ಗರಳ ಗೊರಲಿಸಾ ಮೂರುತಿಯ ಸರಳ ಮಾಡೆಲ್ಲವರು ಗುರುಳು ಗೂದಲದವ ಸರಳಾದವ ತೊಡೆಯಲ್ಲಿ ಹೊರಳೆದ್ದು ತೋರಿಸಿದ ಸರಳ ನಿಜರೂಪ ವಿರಳೆ ನೋಟದಲಿರುವ ತರಳೆ ಆ ಪಾರ್ವತಿಯು ಹೊರಳಿ ನೋಡುತಲೆದ್ದು ಹರಳಿನುಂಗರ ಕೈಯ್ಯ ಹೆರಳಿನೊಳಗಿರುವಂಥ ಅರಳಿದ್ಹೂವಿನ ದಿವ್ಯ ಸರಳ ಮಾಲೆಯ ಅವನ ಕೊರಳಿಗ್ಹಾಕಿದಳು 1 ಗಂಭೀರ ವಾದ್ಯಗಳೇಳು ಸಾರಿ ನುಡಿದವು ಆಗ ಸಾವಿರಬುಧರ ಎಲ್ಲ ವೃಷ್ಟಿಸೂರಿಮಾಡಿದರು ಚಾರ್ವನಂತಾದ್ರಿಯಲ್ಲಿರುವ ದೇವನ ಬಿಟ್ಟು ಸಾರ ಪರಮೇಶ್ವರಗೆ ಹಾರ ಹಾಕುವೆನೆಂಬ ಪಾರ್ವತಿಯ ಅಭಿಲಾಷೆ ಪೂರ್ಣವಾದಲ್ಲೆ ಸಂಪೂರ್ಣ ಸಾಂಬ ಮೂರುತಿಯ ದಯೆಯಿಂದ ಮೂರು ಅಧ್ಯಾಯ
--------------
ಅನಂತಾದ್ರೀಶ - ಕಥನಕಾವ್ಯಗಳು
ಅನುದಿನ ವಿಷಯ ಸುಖವು ಎಂದು ಕನಸಿಲಾದರು ಸ್ಮರಿಸಲಾಗದು ಮನವೆ ಪ ಘನ ಸಂತೋಷವಿಲ್ಲವಿದು ನಿತ್ಯಾನಿತ್ಯ ಸುಖ ಬಯಸಿ ಮನದಲ್ಲಿ ನೀ ಸ್ಮರಿಸೆ ಹರಿಯೆ | ತೊರೆಯ ಅ.ಪ ಅಶನ ವಸನ ಪಶುವ್ರಾತ ವಶವಿರುವಾಭರಣ ಹಸನಾದ ರಥ ಪದಾತಿಗಳು ಸ್ವಸ್ವರೂಪವಲ್ಲ ಭಿನ್ನ ತಿಳಿಯೊ | ಮಮತೆ ಅಳಿಯೊ 1 ಬುದ್ಧಿ ವಿದ್ಯಾಕುಶಲ ಗತಿ ಅಧ್ವರ್ಯ ಪ್ರಭು ಮನ್ನಣೆ ಶುದ್ಧ ರೂಪ ಲಾವಣ್ಯ ಯೌವನ ಸಿರಿ ಶೌರ್ಯ ಪರಾಕ್ರಮ ವದ್ಯವಾಗಿ ಪೋಪುದು ಸ್ಥಿರವಲ್ಲ | ಸುಳ್ಳಲ್ಲ 2 ಇಚ್ಛೆಯಿಲ್ಲದೆ ನೀನು ಜನರ ಮೆಚ್ಚಿಗಾಗಿ ಮಾಡಿದ ದಾನ ವೆಚ್ಚವಾಗಿ ಪೋಪವೊ ಧನವಲ್ಲದೆ ನಿಚ್ಚಳ ಪುಣ್ಯಬಾರದು ಮನವೆ ಹೆಚ್ಚಿನ ಸ್ತೋತ್ರಕೆ ಮರುಳಾಗಿ ನೆಚ್ಚದಿರು ವಿಹಿತೋಕ್ತಿಯ | ಬಿಡದಿರು ಸನ್ಮತಿಯ 3 ಆರ್ತನಾಗದಲೆ ನೀನು ಕೀರ್ತಿಗೋಸುಗ ಕಥಾಶ್ರವಣ ಕರ್ತಭಾವದಿ ಸತತ ಮಾಡೆ ವರ್ತಿಸುವ ಪುಣ್ಯಪ್ರಾಪ್ತಿ ವೈಷಿಕ ಸುಖವಲ್ಲದೆ ಶಾಸ್ತ್ರಮರ್ಮ ತಿಳಿಯದೊ | ಅಹಂ ಮಮವಳಿಯದೊ 4 ಮಾನಿತನು ನಾನೆಂದು ನಾನಾ ಮತವಾಶ್ರಯಿಸಿ ಜ್ಞಾನಿಗಳಿಗೆ ಶಿರಬಾಗಲೊಲ್ಲಿ ಏನು ಇದರಿಂದೆಂಬ ತ್ರಿಕರಣ ಶುದ್ಧಿಕಾರಣ ದ್ಯುನದಿ ಸ್ನಾನವಾಹವಲ್ಲಾ | ಇದು ಬಿಡಸಲ್ಲಾ 5 ಕೈಗೊಳುವುದೇ ಮಾನ ಅನ್ಯಾಧೀನವೆನ್ನದೆಂಬುದೇ ಲಜ್ಜಾ ಅನುಭವ ಜ್ಞಾನಿಗಳ ಸಹವಾಸ ಸ್ನಾನ ಸಚ್ಛಾಸ್ತ್ರಾಲಾಪ ನಾನು ನನ್ನದು ಬಿಡುವುದೇ ತ್ಯಾಗ | ಇದೇ ಯೋಗ 6 ಕರಣ ವಿಷಯಗಳಲ್ಲಿ ಹರಿಯ ಚಿಂತಿಸುತ ನಿತ್ಯ ವರ ಯೋಗ ಭೋಗದಲ್ಲಿ ವರ ರಾಮಚಂದ್ರವಿಠಲರಾಯನು ನಿನ್ನ ದುರಿತ ಕಳೆದು ಪಾಲಿಸುವ7
--------------
ವಿಜಯ ರಾಮಚಂದ್ರವಿಠಲ
ಅಪ್ಪನ ನೋಡಿರೊ ವರಗಳ ತಪ್ಪದೆ ಬೇಡಿರೋ ಸರ್ಪನಮೇಲೆ ಉಪ್ಪವಡಿಸಿ ಮುಪ್ಪು ಇಲ್ಲದೆ ಭಕ್ತರನ ಪೊರೆವಾ ಪ ಬಲುವಾ ನಂದಗಡಲ ಸುಖವೊ ತೂಗುವ ಸುಳಿಗುರುಳ ಚುಂಚೊ ಸುಂದರದವತಾರ ಮಂದರಧರನೋ 1 ಅರಳಿದ ಸಂಪಿಗೆ ತೆನೆಯು ನಾಸಾ ಕೊನೆಯಲ್ಲಿ ಮಣಿಯು ತರುಳ ಹಾರವೋ ಮುಂದಲೆಯಲ್ಲಿ ಅರಳೆಲೆ ವೈಯಾರವೋ ತಿಲಕಾಂಬರದ ಬಿದಿಗೆ ತಿಂಗಳೊ ಮಕರ ಕುಂಡಲವೊ 2 ಕುಸುಮ ವನದ ಹಬ್ಬೊ ಗಲ್ಲದ ಚಿಬವೊ ಕಮಠದ ಬೆನ್ನೊ ಹೋಲಿಕೆ ಅಧರಾಮೃತದ ಸುರಿಯು ಅಲ್ಲಲ್ಲಿಗೆ ಕಿರಿಬೆವರಿಡೆ ನಿಲ್ಲದೆ ವೀಳ್ಯದ ಜೊಲ್ಲಿನ ಧಾರೆಯು 3 ಬಾಳಿದಿಂಡಿನ ತೋಳು ಕಟ್ಟಿದ ತಾಯಿತಗಳೇಳು ಕೀಲು ಕಡಗ ಝಣವೊ ದ್ವಾರೆ ಘಟ್ಟಿ ಕಂಕಣವೋ ನೀಲದುಂಗುರ ಹರಳೊ ಮುಂಗೈ ಸರಪಳಿಯ ಬೆರಳೊ ಬಾಲಲೋಲ ಗೋಪಾಲನೊ 4 ಪನ್ನಲಗ ಮುರಿಗ್ಯೂರಕ್ಷಿಯ ಮಣಿಯು ಥೋರ ದಾಸರಿಗೆ ಕೌಸ್ತುಭ ಶೃಂಗಾರವೊ ರನ್ನದ ಮಾಲೆ ತುಲಸಿ ಪದಕ ಹಾಕಿದ ಎಣ್ಣಿನುಲೊ ಗೋಪಿ ಮನ್ನಿಸುತಲಿ 5 ಹುಲಿಯುಗುರೂಮುತ್ತಿನಮಾಲಿಕಿಯುಪೂಸಿದಗಂಧಗರೊ ವೀಳೆಯರುಣನೊ ಅಂಗೈಯ ಗೆರೆಯು ವಿಸವ ಲಕ್ಷಣನೊ ವೈಜಯಂತಿ ಸುಳ್ಳುವೊ ಒಲಿಸಿದಳೊ ಮಗನ ಯಶೋದೆ 6 ಕಂಬು ಕೊರಳೊ ಮೂರೇಖಿಯು ಅಂಗೈಯಿವರಿಗೆ ಮರುಳೊ ತುಂಬಿ ಸೂಸುವ ಹೊಳೆಯು ಜಠರದ ನಾಭಿ ತ್ರಿವಳಿಯು ಬಿಸಲಿನ ಘನ ಹರಿಯು ಭೊಂ ಭೊಂ ಭೊಮೆಂದು ಕೊಂಬಿನ ಊದು ಎಂಬೊ ನುಡಿಯಲಿ ರಂಬಿಸಿ ಕೃಷ್ಣನ 7 ಕಮಲದ ಮಗ್ಗ್ಯೊ ಉಂಗುರ ನಡುವಿದು ಅಲಂಕಾರದ ಸುಗ್ಗ್ಯೊ ಅಮಮ ಧೊರೆಯು ನಾದದ ಘಂಟ್ಯೊ ಮಣಿಶಿಂಗನ ಮರಿಯು ಜಾನು ಕನ್ನಡಿ ಕ್ರಮವೊ ಧಿಮಿ ಧಿಮಿ ಎಂದು ರಂಗನ ಕುಣಿಯೆಂದು ನಿಮನಿಮಗೆಲ್ಲ 8 ಕಾಲಲಿಯಿಟ್ಯ ಗೆಜ್ಜ್ಯೋ ಅಂದಿಗೆ ತಪ್ಪು ತಪ್ಪು ಹೆಜ್ಜ್ಯೊ ನೀಳದ ದಂತೊ ಜಂಘ ಸರಪಳಿಯ ಗಗ್ಗರಿಯ ಯಿಂತೊ ನಖ ಕೇದಿಗೆ ಮುಳೆಯು ಲಾಲಿ ಲಾಲಿ ಕಂದ ಎನುತಲಿ ಶ್ರೀ ಲಕುಮಿ ಲೋಲನ ಎಬ್ಬಿಸಿ 9 ನೆರೆದವರಿಗೆ ತರುಳರನೆಲ್ಲಾ ಕರೆದು ಸುತ್ತಲು ನಿಲಿಸಿ ಹರಿಹರಿ ಎಂದು ಹರದಾಡುತಲಿ ಪರಮ ಸಂಭ್ರಮದಿಂದ ಕರೆಕರೆದು ವಿಜಯವಿಠ್ಠಲನ ತರಕಿಸಿ ಸಂತತ ಉಡಿಯಲಿ ಎತ್ತಿ 10
--------------
ವಿಜಯದಾಸ
ಅಭ್ಯಾಸವಮಾಡಿ ಅಭ್ಯಂತ್ರದೊಳಗಿಹುದು ಧ್ರುವ ಕಣ್ಣು ಕಾಣುವದ್ಹಚ್ಚಿ ಚೆನ್ನಾಗಿ ಚಿತ್ಸ ್ವರೂಪವ ಭಿನ್ನವಿಲ್ಲದೆ ಭಾಸುವದು ಪುಣ್ಯಪ್ರಭೆಯು 1 ಕಿವಿಯು ಕೇಳುವದ್ಹಚ್ಚಿ ಸವಿಸವಿ ಸಾರಾಯದ ಶ್ರುತಿ ಆವಾಗ ನಿಮ್ಮೊಳಾಲಿಸಿ ಪವಿತ್ರ ಪ್ರಣವ 2 ಘ್ರಾಣ ಗ್ರಹಿಸುವದ್ಹಚ್ಚಿ ದೇಹದೊಳಾವಾಗ ಪೂರ್ಣ ಸೋಹ್ಯ ಸೂತ್ರವಿದು ಸೋಹ್ಯವೆಂಬುದಾ 3 ಜೀವಕೆ ಜೀವ್ಹಾಳಚ್ಚಿ ಸುವಿದ್ಯಸೇವೆ ಸೂತ್ರದ ಸರ್ವದಾ ಸವಿಸಾರವ ನೋಡಿ ದಿವ್ಯನಾಮದ 4 ಶಿವಸುಖವಿದುರಿಡುವಾಂಗೆ ಜೀವ ಜೀವದಾ 5 ಮನಸಿಗೆ ಮನಹಚ್ಚಿ ಮನೋನ್ಮನಮಾಡಿ ಘನಸುಖದೊಳು ಬೆರೆದಾಡಿ ಅನುಭವಿಸಿ ನೋಡಿ 6 ಗುರುವಿಗೆ ಗುರುವೆಂದರಿದು ನರದೇಹದ ಭಾವನೆಯ ಮರೆದು ಕರಕೊ ಮಹಿಪತಿ ಇರುಳ್ಹಗಲೆ ಸ್ಮರಿಸಿದಾಕ್ಷಣ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅರಿ ನಿನ್ನ ನಿಜವಾ ಆನಂದಘನವಾ ಚೈತನ್ಯದಿರವಾ ಮರಣರಹಿತವಾ ಆತ್ಮಾನುಭವ ಪ ಮನವಾಣಿ ಮೀರಿ ತನು ಮೂರ ಮೀರಿ ಕಲ್ಪನ ತೀರೀ ತಾ ನಿರ್ವಿಕಾರಿ ಅದೇ ನೀನು ತಿಳಿಯೈ ಇದು ನೀನಲ್ಲ 1 ಜಗವಿದು ಕನಸೋ ಪುಸಿಯೆಂದೆಣೆಸೋ ಮನದಿ ವಿವೇಕವ ಮಾಡಿ ನಿಶ್ಚಯಿಸೋ ಶಂಕರಬೋಧಾ ಇದುವೇ ಮೋದಾ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಅಲ್ಲೆ ನೋಡಿದರೀಹ್ಯ ಇಲ್ಲೆ ನೋಡಿದರೀಹ್ಯ ಎಲ್ಲಾ ಕಡೆಯಲ್ಲೇಕೋಮಯವೋ 1 ಸುಲ್ಲಭವಾಗಿ ನಮ್ಮ ಫುಲ್ಲಲೋಚನ ಕೃಷ್ಣ ಬಲ್ಲ ಮಹಿಮರಿಗೆ ಭಾಸುವನು 2 ಭೇದಿಸಿ ನೋಡಿರಯ್ಯ ಸಾಧು ಜನರೆಲ್ಲ ಮೇದಿನಿಯೊಳು ಘನತುಂಬಿಹುದು 3 ಕಣ್ಣಾರೆ ಕಂಡೆವಯ್ಯ ಪುಣ್ಯಚರಣಮಹಿಮೆ ಸಣ್ಣ ದೊಡ್ಡದರೊಳು ಸಾಕ್ಷಾತವೊ 4 ನಂಬಿನಡಿಯಲಿಕೆ ಅಂಜುಜಾಕ್ಷನ ಪಾದ ಗುಂಭಗುರುತವಾಗಿದೋರುವದು 5 ಗುರುಕೃಪೆಯಿಂದ ನೋಡಿ ಹರುಷವಾಯಿತು ಜೀವ ಬೆರತುಕೂಡಿತು ಸಮರಸವೊ 6 ಬೆರೆದು ಕೊಡುವದು ಹರಿಯ ಕಟಾಕ್ಷವಿದು ಮರುಳ ಮಂಕಗಳಿದು ಅರಿಯಾವೊ 7 ವದಗಿ ಬಂದತಿದರಿಟ್ಟು ಸದಮಲಬ್ರಹ್ಮಸುಖಾ ಮೊದಲಿನ ಪುಣ್ಯ ಪೂರ್ವಾರ್ಜಿತವೊ 8 ಧನ್ಯವಾಯಿತು ಮೂಢ ಮಹಿಪತಿ ಪ್ರಾಣಜೀವ ಮನವು ಆಯಿತು ಉನ್ಮನವೊ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅಹಹ ಮೋಸ ಹೋದೆನಯ್ಯ ಹರಿಯೆ ನಿನ್ನ ನೆನೆಯದೆ ಪ ಇಹದ ಭೋಗ ನಿತ್ಯವೆಂದು ಮೆರೆದೆ ನಿನ್ನ ನೆನೆಯದೆ ಅ ಹೇಯವಾದ ದೇಹವನ್ನು ಶ್ಲಾಘನೀಯವೆಂದು ನಾಲ್ವರೊಡನುಪಾಯದಿಂದ ಹೇಮದಂತೆ ಬಣ್ಣಗಟ್ಟಿಬಾಯ ಬಡಿದು ತಂದು ತಂದುಕಾಯ ಕಳದೆನಲ್ಲದೆ 1 ಚಂಚಲತ್ವ ಬಲವು ಫಲವು ಜಾಲ ಕೋಪ ತಾಪದಿಂದವಂಚನಾರ್ಥ ಹಲವು ಕೆಲವು ಮಿಂಚಿನಂತೆ ಸುಳಿಸುತಸಂಚುಮಾಡಿ ಕಾಲನವರ ವಂಚನೆಗಳ ತಿಳಿಯದ್ಹೋದೆಪಂಚಬಾಣನಯ್ಯ ಕಾಯೊ ಎನ್ನವಗುಣಗಳನೆಣಿಸದೆ2 ದಿಕ್ಕುದೆಸೆಯದಾರೊ ಅಕ್ಕರದಿಂದಾರ ಕರೆವೆಉಕ್ಕಿ ಸವಿದು ಮನುಜರೊಡನೆಸೊಕ್ಕಿ ದಿನವ ಕಳೆದೆನೆನಗೆತಕ್ಕುದಾಯಿತಯ್ಯ ಕೇಳು ಒಡೆಯ ಆದಿಕೇಶವ3
--------------
ಕನಕದಾಸ
ಅಹುದಾದಡಹುದೆನ್ನಿ ಅಲ್ಲವಾದಡಲ್ಲವೆನ್ನಿಸಹಜವಿದು ಸಜ್ಜನರ ಮನಕೆ ಸಮ್ಮತವು ಪ ಕರಿಕೆಯಿಲ್ಲದ ಬಾಳು ಕರಿವರದನ ದಯೆ ಕೇಳುಅರಿತವರಿರೆ ಮನೆಯೊಳು ಅದು ಸ್ವರ್ಗವು ಕೇಳುಕರಣಿಕರೊಳಗಣ ನಂಟು ಕಟ್ಟಿದ ಹಣವಿನ ಗಂಟುಗುರುವಿನ ವಾಕ್ಯದಿ ಭಕ್ತಿ ಇಹಪರಕದು ಮುಕ್ತಿ1 ಒಕ್ಕಲಿಗಾಗದ ಗವುಡ ಮೇಲೆರಗಿ ಕುಕ್ಕುವ ಲಗಡಮಕ್ಕಳ ಪಡೆವುದು ಪುಣ್ಯ ನಲಿವು ನಗೆಗಳ ಪಣ್ಯಇಕ್ಕುವ ಅನ್ನವು ಧರ್ಮ ಇಹಪರಕದು ಅತಿ ಧರ್ಮಬಿಕ್ಕಳಿಕಿಕ್ಕಿದ ವ್ಯಾಧಿ ಯಮಪುರಕದು ಹಾದಿ2 ಕಂಡರೆ ಸೇರದ ನಾರಿ ಕೆಂಡವನುಗುಳುವ ಮಾರಿದಂಡವ ತೆರಿಸುವ ಪುತ್ರ ಹಗೆಗಳಿಗವ ಮಿತ್ರಉಂಡರೆ ಸೇರದ ತಾಯಿ ಉರಗನ ಮೆಕ್ಕೆ ಕಾಯಿಹಿಂಡನಗಲಿದ ಗೋವು ಹುಲಿಗಿಕ್ಕಿದ ಮೇವು 3 ಪರನಾರಿಯರೊಡನಾಟ ಗರಲವನಟ್ಟುಂಬಾಟಬರೆದೂ ಅರಿಯದ ಲೆಕ್ಕ ಕಡೆಯಲಿ ಬಹು ದುಕ್ಕಇರಿತಕೆ ಬೆದರುವ ಮದಕರಿ ಬಾಯ್ಕಿರಿವ ಕೋಡಗ ಮರಿಕರೆ ಬರಲರಿಯದ ಗಂಡ ಅವ ನಾಚಿಕೆ ಭಂಡ4 ಸಮಯಕ್ಕೊದಗದ ಅರ್ಥ ಸಾವಿರವಿದ್ದರು ವ್ಯರ್ಥಸವತಿಯರೊಳಗಣ ಕೂಟ ಎಳನಾಗರ ಕಾಟಅಮರರಿಗೊದಗದ ಯಾಗ ಆಡಿನ ಮೇಲಣ ರೋಗನಮ್ಮ ಆದಿಕೇಶವನ ಭಕ್ತ ಅವ ಜೀವನ್ಮುಕ್ತ 5
--------------
ಕನಕದಾಸ
ಆ ನಮಿಪೆ ವಿಷ್ಣು ಶ್ರೀ ಬ್ರಹ್ಮ ವಾಯು ವಾಣಿ ಭಾರತಿ ಮುಖ್ಯರವತಾರ ಆವೇಶಕಾನಮಿಪೆ ಪ ಮತ್ಸ್ಯ ಕೂರ್ಮ ಭೂವರಹ ನರಸಿಂಹ ದಧಿ ವಾಮನ ತ್ರಿವಿಕ್ರಮ ಭೃಗುಕುಲೋದ್ಭವ ಬುದ್ಧ ಕಲ್ಕಿ ಹಯಾಸ್ಯ ನಾಮ ತಾಪಸ ಮನು ಉಪೇಂದ್ರ ಅಜಿತಾದಿಗಳಿಗಾ ನಮಿಪೆ 1 ದಾಸ ಧನ್ವಂತ್ರಿ ಹರಿ ಹಂಸ ದತ್ತಾ ವ್ಯಾಸ ಕಪಿಲಾತ್ಮಂತರಾತ್ಮ ಪರಮಾತ್ಮ ಯ ಜ್ಞೇಶ ವೈಕುಂಠ ನಾರಾಯಣಾಧ್ಯವತಾರಕಾನಮಿಪೆ 2 ನಾರಾಯಣೀ ಋಷಭ ಐತರೇಯ ಶಿಂಶು ಮಾರ ಯಜ್ಞ ಪ್ರಾಜ್ಞ ಸಂಕರುಷಣಾ ಕ್ಷಿರಾಬ್ದಿ ನಿಲಯ ಯಮನಂದನಾ ಕೃಷ್ಣ ಹರಿ ನಾರಾಯಣ ಧರ್ಮಸೇತು ರೂಪಾದಿಗಳಿಗಾನಮಿಪೆ 3 ಗುಣಗಳಭಿಮಾನಿ ಶ್ರೀ ಭೂ ದುರ್ಗ ದಕ್ಷಿಣಾಂ ಭೃಣಿ ಮಹಾಲಕ್ಷ್ಮೀ ಶ್ರೀ ವಿಷ್ಣುಪತ್ನೀ ಮಾಯಾ ಕೃತಿ ಶಾಂತಿ ಶುದ್ಧ ರು ಕ್ಮಿಣಿ ಸತ್ಯ ಸೀತಾದ್ಯಮಿತ ರೂಪಗಳಿಗಾನಮಿಪೆ 4 ಹೀನಳೆನಿಸುವಳನಂತಾಂಶದಲಿ ಸುಖ ಬಲ ಜ್ಞಾನಾದಿ ಗುಣದಿ ಮಹಾಲಕ್ಷ್ಮಿ ಹರಿಗೆ ಆನಂದ ವಿಜ್ಞಾನ ಮಯನ ವಕ್ಷಸ್ಥಳವೆ ಸ್ಥಾನವಾಗಿಹುದು ಇಂದಿರೆಗೆ ಆವಾಗ 5 ವಿಧಿ ವಿರಿಂಚಿ ಮಹನ್ ಬ್ರಹ್ಮ ಸೂತ್ರ ಗುರು ಮಹಾಪ್ರಭು ಋಜ ಸಮಾನ ವಿಜ್ಞ ಪ್ರಾಜ್ಞ ಹರಿಭಕ್ತಿ ಮೇಧಾವಿ ಮುಕ್ತಿ ಧೃತಿ ಅಮೃತನಿಗೆ 6 ಸ್ಥಿತಿ ಯೋಗ ವೈರಾಗ್ಯ ಚಿಂತ್ಯ ಬಲಸುಖ ಬುದ್ಧಿ ವಿತತಾದಿ ಗೋಪ ಹನುಮ ಭೀಮ ವೃಷಿವರಾನಂದ ಮುನಿ ಮೊದಲಾದ ರೂಪಶ್ರೀ ಪತಿಗಧಿಷ್ಟಾನ ಕೋಟಿಗುಣಾಧಮರು ರಮೆಗೆ ಆ ನಮಿಪ 7 ಸರಸ್ವತಿ ಗಾಯತ್ರಿ ಬುದ್ಧಿ ವಿದ್ಯಾ ಪ್ರೀತಿ ಗುರುಭಕ್ತಿ ಸರ್ವ ವೇದಾತ್ಮಿಕ ಭುಜಿ ಪರಮಾನು ಭೂತಿ ಸಾವಿತ್ರಿ ಸು ಸುಖಾತ್ಮಿಕಾ ಪತಿ ನಾಮಗಳಿವೆಂದರಿದು 8 ಶಿವಕನ್ಯ ಇಂದ್ರಸೇನಾ ಕಾಶಿಜಾ ಚಂದ್ರ ಯುವತಿ ದ್ರೌಪದಿಯು ಭಾರತಿ ರೂಪವು ಪವಮಾನ ಬ್ರಹ್ಮರಿಗೆ ಶತಗುಣಾಧಮ ಸದಾ ಶಿವನ ರೂಪಗಳ ಈ ಪರಿಯ ಚಿಂತಿಸುತ 9 ತತ್ಪುಮಾನ್ನೂಧ್ರ್ವಪಟ ದುರ್ವಾಸ ವ್ಯಾಧ ಅ ಶ್ವತ್ಥಾಮ ಜೈಗೀಷವ್ಯ ತಪ ಅಹಂಕ್ರತು ಶುಕ ವಾಮದೇವ ಗುರು ಮೃತ್ಯುಂಜಯೋರ್ವ ಸದ್ಯೋಜಾತ ತತ್ಪುರುಷಗಾನಮಿಪೆ 10 ನರ ವಯು ಶುಕಕೇಶವೇಶ ಬಲಗೆ ಸಂ ಕರುಷಗಾವೇಶ ಲಕ್ಷ್ಮಣದೇವಗೆ ಗರುಡ ಶೇಷಾಘೋರ ಸಮರು ಶತಗುಣದಿಂದ ಕೊರತೆಯೆನಿಸುವರು ಮೂವರು ವಾಣಿ ದೇವಿಗೆ 11 ಶೇಷಗೆ ಸಮಾನನೆನಿಪಳು ಜಾಂಬವತಿ ರಮಾ ವೇಶ ಕಾಲದಿ ಷಣ್ಮಹಿಷಿಯರ ಒಳಗೆ ಹ್ರಾಸಕಾಲದಿ ಸಮಳು ಐವರಿಗೆ ಜಾಂಬವತಿ ವೀಶಾದ್ಯರಿಗೆ ಹರಿ ಸ್ತ್ರೀಯರ ಸಮರೈದುಗುಣ12 ರೇವತಿ ಶ್ರೀಯುತ ಶ್ರೀ ಪೇಯ ರೂಪತ್ರ ಯಾವಕಾಲದಿ ವಾರುಣಿಗೆ ಪಾರ್ವತೀ ದೇವಿ ಸೌಪರಣಿಗೆ ಸಮ ಷಣ್ಮಹಿಷಿಯರಿಗೆರಡು ಮೂವರೀರೈದು ಗುಣ ಕಡಿಮೆ ಪತಿಗಳಿಗೆ 13 ಕುಶ ವಾಲಿ ಗಾಧಿ ಮಂದ್ರದ್ಯುಮ್ನನು ವಿಕುಕ್ಷಿ ಶ್ವಸನ ಹರಿ ಶೇಷ ಸಂಯುಕ್ತಾರ್ಜುನಾ ಅಶನೀಧರನ ಸುರೂಪಂಗಳಿವು ಮನ್ಮಥನ ನಿತ್ಯ 14 ಪ್ರದ್ಯುಮ್ನ ಸಂಯುಕ್ತ ರುಕ್ಮಿಣೀ ದೇವಿ ಸುತ ಪ್ರದ್ಯುಮ್ನ ಭರತನು ಸನತ್ಕು ಮಾರಾ ಸಾಂಬ ಸ್ಕಂಧ ಸುದರುಶನ ರುದ್ರ ನಾರ್ಧಾಂಗಿನಿಗೆ ದಶಗುಣಾಧಮರೆಂದು15 ಭವ ಪ್ರಾಣ ನಾಮರಗೆ ರೂಪ ಸರ್ಮೋತ್ತುಂಗನು ಕಾಮ ಪುತ್ರಾನಿರುದ್ದಾದಿಗಳು ದಶ ಹೀನ ಈ ಮಹಾತ್ಮರ ದಿವ್ಯ ಅವತಾರರೂಪಗಳಿಗಾನಮಿಪೆ 16 ಪ್ಲವಗ ಬ್ರಹ್ಮಾಂಶಯುಗ್ದೋಣ ಮಾರುತಾವೇಶ ಸಂಯುತ ವುದ್ಧವಾ ಮುರು ರೂಪವು ಬೃಹಸ್ಪತಿಗೆ ಪ್ರದ್ಯುಮ್ನನ ಕು ಮಾರಾನಿರುದ್ಧ ಶತೃಘ್ನ ಅನಿರುದ್ಧನಿಗೆ 17 ತಾರ ಚಿತ್ರಾಂಗದ ಶಚಿ ರೂಪ ಲಕ್ಷುಣ ಈ ರುಗ್ಮವತ್ರಿ ಎರಡು ರತಿರೂಪವು ಆರುಜನ ದಕ್ಷ ಸ್ವಯಂಭುವ ಮನು ಪ್ರಾಣ ಗಿರೈದು ಗುಣಗಳಿಂದಧಮರೆಂದರಿದು 18 ಭೂತಾಭಿಮಾನಿ ಪ್ರವಹ ಪಂಚಗುಣದಿ ಪುರು ಹೊತ ಪತ್ನ್ಯಾದಿಗಳಿಗಧಮನೆನಿಪ ಈತಗವತಾರವಿಲ್ಲವನಿಯೊಳು ಚಂದ್ರ ಪ್ರ ದ್ಯೋತನಾಂತಕ ಸ್ವಯಂಭುವ ಪತ್ನಿ ಶತರೂಪಿ 19 ಸತ್ಯಜಿತ ಜಾಂಬವಾನ್ ವಿದುರ ಗುರು ವಾಯು ಸಂ ಯುಕ್ತ ಧರ್ಮಜ ಯಮಗೆ ರೂಪ ನಾಲ್ಕು ರಾತ್ರಿ ಚರನವತಾರ ಯಿಂದ್ರ ಯುಕ್ತಾಂಗದಾ ದಿತ್ಯ ನವತಾರ ಬ್ರಹ್ಮ ವಿಷ್ಟ ಸುಗ್ರೀವ 20 ಹರಿಯುಕ್ತ ಕರ್ನ ಮನು ಪತ್ನಿ ಶತರೂಪ ನಾ ಲ್ವರು ಸಮರು ಪ್ರವಹಗಿಂದೆರಡು ಗುಣದೀ ಕೊರತಿ ಮಹ ಭಿಷಕು ಮಂಡೂಕ ಶಂತನು ಸುಶೇ ಪಾದ ಪಾದಾರ್ಧಿಕಾನಮಿಪೆ21 ನಾರದಾಧಮ ವರುಣಗಿಂತಗ್ನಿ ಅವ ತಾರ ದೃಷ್ಟದ್ಯುಮ್ನ ಲವ ನೀಲರೂ ಪಾದ ಗುಣದಾಧಮರು ಎಂದು22 ಅಂಗೀರ ಪುಲಸ್ತ್ಯಾತ್ರಿ ಪುಲಹನು ಮರೀಚಿ ಮುನಿ ಪುಂಗವ ದಶಿಷ್ಠ ಕೃತು ಬ್ರಹ್ಮ ಸುತರೂ ತುಂಗ ವಿಶ್ವಾಮಿತ್ರ ವೈವಸ್ವತರು ಸದಾ ಕೆಂಗದಿರಗಧಮರೊಂಭತ್ತು ಜನರೆಂದು 23 ಸಪ್ತ ಋಷಿಗಳಿಗೆ ಸಮನೆನಿಪ ವೈವಸ್ವತನು ಲುಪ್ತವಾಗಲು ಕಡಿಮೆಯೆನಿಪ ಪ್ರಾವಹ ತಾರ ಕ್ಲುಪ್ತ ಒಂದೇ ರೂಪ ಕೃಪೆಯೆಂದು ಕರೆಸುವಳಿಗಾನಮಿಪೆ24 ಹರನಾವೇಶಯುತ ಘಟೋತ್ಕಚ ದುರ್ಮಖನು ನಿಋಋತಿ ಕರೆಸುವನು ರಾಹು ಯುಗ್ಭೀಷ್ಟಕ ನೃಪಾ ನರೆ ಮಿತ್ರ ನಾಮಕನ ರೂಪ ನಾಲ್ವರು ಅಗ್ನಿ ಗೆರಡು ಗುಣದಿಂಧಮರೆನಿಪರೆಂದೆಂದು 25 ಮಾರಾರಿಯುಕ್ತ ಭಗದತ್ತ ತತ್ತನÀಯ ಕು ಬೇರಗೆರಡವತಾರ ವಿಘ್ನೇಶಗೆ ಚಾರುದೇಷ್ಣನು ಒಂದೆ ಇಂದ್ರನಾವೇಶಯುತ ಆರುರೂಪಗಳುಳ್ಳ ನಾಸತ್ಯ ದಸ್ರರಿಗೆ 26 ವಿವಿಧÀ ಮೈಂದ ತ್ರಿಸಿಖ ನಕುಲ ಸಹದೇವ ವಿಭು ಅವತಾರ ಅಶ್ವಿನೀ ದೇವತೆಗಳ ಲವಣಾದಿ ಷಡ್ರಸಗಳೊಳಗಿದ್ದು ಜೀವರಿಗೆ ವಿವಿಧ ಭೋಗಗಳಿತ್ತು ಸಂತೈಪರೆಂದೆಂದು 27 ದ್ರೋಣಾರ್ಕ ದೋಷಾಗ್ನಿ ಧ್ರುವ ವಿಭಾವಸು ವಸ್ತು ಪ್ರಾಣಾಷ್ಟ ವಸುಗಳೊಳಗೆ ದ್ಯುನಾಮಕ ವಾಣೀಶಯುಕ್ತ ಭೀಷ್ಮನು ನಂದಗೋಪಾಲ ದ್ರೋಣನಾಮಕ ಪ್ರಧಾನಾಗ್ನಿಗಿಂದಧಮರೆಂದಾ ನಮಿಪೆ 28 ಭೀಮರೈವತ ವೋಜಜ್ಯೆಕಪಾದ ಹಿರ್ಬದ್ನಿ ಭವ ವಾಮ ಬಹುರೂಪೋಗ್ರಜ ವೃಷಾಕಪಿ ಈ ಮಹನ್ನೆಂಬ ಹನ್ನೊಂದು ರುದ್ರರು ಭೂರಿ ನಾಮಕ ಜೈಕ ಪಾದಹಿರ್ಬದ್ನಿ ಭೂರಿಶ್ರವಗಾನಮಿಪೆ29 ತ್ರ್ಯಕ್ಷನುಳಿಧತ್ತು ರುದ್ರರು ಸಮರು ಶಲ್ಯ ವಿರು ಪಾಕ್ಷನವತಾರ ಕೃಪ ವಿಷ್ಕಂಭುನೂ ಅಕ್ಷೀಣಬಲ ಪತ್ರತಾಪಕ ಸಹದೇವ ರಕ್ಷಘ್ನ ಸೋಮದತ್ತನು ಎನಿಸುತಿಹಗೆ 30 ವಿರೂಪಾಕ್ಷ ವಿಷ್ಕಂಭ ಪತ್ರತಾಪಕ ಮೂರು ಹರನ ರೂಪಾಂತರಗಳಿವು ವಿವಸ್ವಾನ್ ಅರಿಯಮ ಪೂಷ ಭಗ ಸವಿತು ತೃಷ್ಟಾಧಾತ ವರುಣ ಶಕ್ರೋರುಕ್ರಮನು ಮಿತ್ರ ಪರ್ಜನ್ಯಗಾನಮಿಪೆ 31 ಶೌರಿನಂದನ ಭಾನು ಸವಿತ್ರ ನಾಮಕ ಸೂರ್ಯ ವೀರಸೇನನು ಯಮಾವಿಷ್ಟ ತ್ವಷ್ಟಾ ಆರುಜನ ರುಕ್ತರೆನಿಪರು ವುರುಕ್ರ್ರಮ ಶಕ್ರ ವಾರಿಧಿ ವಿವಸ್ವಾನ್ ಮಿತ್ರ ಪರ್ಜನ್ಯರಿಗೆ 32 ಪ್ರಾಣ ನಾಗ ಪಂಚಕ ಅಹಂಕಾರಿಕ ಪ್ರಾಣ ಪ್ರವಹ ನಿವಹ ಸಂವಹ ಸ್ವಹಾ ಕಾಲ ಶ್ವಾಸ ಏ ಕೋನ ಪಂಚಾಶನ್ ಮರುದ್ಗಣಸ್ಥರು ಎಂದು 33 ಶ್ವೇತ ಶಂ ಹನುಮ ಭೀಮ ಯತಿವುದಿತ ಕಾಮ ಜಡಪಿಂಗ ಕಂ ಪನ ವೃದ್ವಹ ಧನಂಜಯ ದೇವದತ್ತರಿಗೆ 34 ಶುಕ್ರ ಶಂಕು ಗುರು ಕಾಂತ ಪ್ರತಿಭ ಸಂವರ್ತಕನು ಪಿಕ ಕಪಿಗಳಿವರು ಮುರುತರು ಸಮೀರಾ ಯುಕುತ ಪಾಂಡು ವರಾಹನು ಎನಿಪ ಸಂಪಾತಿ ಕೇಸರಿ ಶ್ವೇತ ಮರುತನವತಾರ ವೆಂದಾನಮಿಪೆ35 ಪ್ರತಿಭವಂಶನು ಚೇಕಿತಾನೆಂದೆನಿಪ ವಿ ಪ್ರಥು ಸೌಮ್ಯ ಕುಂತೀಭೋಜನೆ ಕೂರ್ಮನು ಕ್ಷಿತಿ ಯೊಳಗೆ ಪ್ರಾಣಪಂಚಕರೊಳು ಪ್ರಾಣ ಗಜ ಅಥ ಗವಾಕ್ಷಾಪಾನ ವ್ಯಾನ ಗವಯನು ಎಂದು 36 ವೃಷನು ಸರ್ವತ್ರಾತನು ವುದಾನಗಂಧ ಮಾ ದ ಸಮಾನನರಿವರು ವಿತ್ತಪನ ಸುತರು ಶ್ವಸನಗಣದೊಳು ಕಿಂಚಿದುತ್ತ ಮರಹಂ ಪ್ರವಹ ಗಸಮರೆನಿಪರು ಪ್ರಾಣ ಪಂಚಕರು ಎಂದೂ 37 ಪ್ರತಿ ವಿಂಧ್ಯ ಧರ್ಮಜನ ಭೀಮಸೇನನ ಪುತ್ರ ಶೃತಸೋಮ ಅರ್ಜುನಜ ಶೃತಕೀರ್ತಿಸಾ ಶತಾನೀಕÀನ ಕುಲಜ ಸಹದೇವಾತ್ಮಜನು ಶೃತಕರ್ಮರಿವರು ದ್ರೌಪದಿ ದೇವಿಗಾತ್ಮಜರಿಗಾನಮಿಪೆ38 ಚಿತ್ರರಥ ಅಭಿಪೌಮ್ರಬಲ ಕಿಶೋರ ಗೋಪಾಲ ರುತ್ತಮರು ಗಂಧರ್ವರೈವರಿಂದ ಯುಕ್ತರಾಗಿಹರು ಕೈಕೇಯರೈವರು ಪಾಂಡು ಪುತ್ರಜರು ವಿಶ್ವದೇವತೆಗಳಿವರೆಂದು39 ಕಾಲ ಕಾಮಲೋಚನದಕ್ಷ ಕೃತು ಪುರೂ ರವ ಸತ್ಯ ವಸು ಧುರಿಗಳಿವರು ವಿಶ್ವೇ ಋಭು ಗುಣ ಪಿತೃತ್ರಯ ದ್ಯಾವ ಅವನಿಪರು ಗಣಪಾದ್ಯರಧಮ ಮಿತ್ರನಿಗೆಂದು 40 ವಸುಗಳೆಂಟಾದಿತ್ಯರೀರಾರು ಒಂದಧಿಕ ದಶರುದ್ರಗಣ ಪಿತೃತ್ರಯ ಬೃಹಸ್ಪತೀ ವಿಶ್ವ ದೇವ ಅಶ್ವಿನಿಗಳೆರಡೈವತ್ತು ಶ್ವಸನಗಣರು ಋಭುವೊಂದು ಎರಡು ದ್ಯಾವಾಪೃಥವಿ 41 ಒಂಭತ್ತು ಕೋಟಿ ದೇವತೆಗಳೊಳು ನೂರು ಜನ ಅಂಬುಜಾಪ್ತರ ಒಳಗುರುರುಕ್ರಮನುಳಿದು ಪದ್ಮ ಸಂಭವನ ಸಹರಾಗಿಹರು ಶತಸ್ಥರಿಗೆ 42 ಮರುತತ್ರಯರು ವನಿಯಮ ಸೋಮ ಶಿವದಿವಾ ಕರರಾರು ರುದ್ರ ಗುರು ಇವರುಕ್ತರೂ ಉರವರಿತ ಎಂಭತ್ತೈದು ಸಮರು ತಮ್ಮೊಳಗೆ ಸರಸಿಜೋದ್ಭವನ ಸುತರೆನಿಪ ಸನÀಕಾದಿಗಳಿಗಾನಮಿಪೆ43 ಸನಕಾದಿಗಳೊಳುತ್ತಮ ಸತತ್ಕುಮಾರ ಶಿಖಿ ತನುಜ ಪಾವಕನು ಪರ್ಜನ್ಯನು ಮೇಘಪ ಎನಿಸುವನು ಶರಭವೊಂದೇರೂಪ ಧರ್ಮರಾ ಜನ ಪತ್ನಿ ದೇವಕಿಯು ಶಾಮಲೆಯ ರೂಪವೆಂದಾ ನಮಿಪೆ44 ಯಮ ಭಾರ್ಯ ಶಾಮಲಾ ರೋಹಿಣಿದೇವಿ ಚಂ ದ್ರಮನ ಸ್ತ್ರೀ ಅನಿರುದ್ಧದೇಹಿ ಉಷಾ ದ್ಯುಮಣಿ ಭಾರ್ಯಾ ಸಂಜ್ಞ ಗಂಗಾ ವರುಣ ಭಾರ್ಯ ಸುಮರಾರು ಜನರು ಪಾವಕಗೆ ಕಿಂಚಿದಧಮರೆಂದಾ ನಮಿಪೆ45 ಪರ್ಜನ್ಯ ಈ ರೆರಡು ವನ್ಹಿಗೆ ಕಡಿಮೆ ಪಾದಮಾನೀ ಸುರಪನಂದನ ಜಯಂತನು ಪ್ರಹಲ್ಲಾದ ಈ ರ್ವರು ಮುಖ್ಯರಧಮ ಪರ್ಜನ್ಯಗೆಂದೆಂದು 46 ಎರಡು ಗುಣ ಪರ್ಜನ್ಯಗಿಂದಧಮಳು ಸ್ವಹಾ ರೆರಡಧಿಕ ಗುಣದಿ ಸ್ವಪತಿಗೆ ನೀಚಳೂ ಹರಿ ಶಕ್ರಸತಿ ಅಶ್ವಿ ಯುಕ್ತಾಭಿಮನ್ಯು ಚಂ ದಿರಜ ಬುಧನವತಾರ ಸ್ವಾಹಾ ದೇವಿಗಧಮಳೆಂದಾ ನಮಿಪೆ 47 ಎನಿಸುವಳು ಶಲ್ಯ ಜರಾಸಂಧನಾತ್ಮಜಾ ಶ್ವಿನಿ ಭಾರ್ಯಾನಾಮಾಭಿಮಾನಿ ಉಷಾ ಘನರಸಾಧಿಪ ಬುಧಗೆ ಕಿಂಚಿದ್ಗುಣ ಕಡಿಮೆ ಅವಳ ಪತ್ನಿಗೆ ದಶಗುಣಾಧಮಳುಯೆಂದು 48 ಧರಣಿಗಭಿಮಾನಿ ಎನಿಸುವ ಸೂರ್ಯಸುತ ಶನೇ ಶ್ವರ ಉಷಾದೇವಿಗೆರಡು ಗುಣಾಧಮ ತರಣಿ ನಂದನಗೆ ಸತ್ಕರ್ಮಾಭಿಮಾನಿ ಪು ಷ್ಕರ ಕಡಿಮೆ ಪಂಚಗುಣದಿಂದ ಎಂದೆಂದು 49 ನಾರದನ ಶಿಷ್ಯ ಪ್ರಹ್ಲಾದ ಬಾಲ್ಹೀಕ ಸ ಮೀರ ಸಂಯುಕ್ತ ಸಹ್ಲಾದ ಶಲ್ಯಾ ಮೂರನೆಯನುಹ್ಲಾದ ಸವಿತ್ರನಾವೇಶದಲಿ ತೋರಿದನು ದೃಷ್ಟಕೇತು ಎನಿಸಿ ಧರೆಯೊಳಗೆ 50 ತಾಮಾಂಶಯುಗ್ ಜಯಂತನು ಬಭ್ರುವಹ ವರು <ಈ
--------------
ಜಗನ್ನಾಥದಾಸರು
ಆತನ ಪಾಡುವೆ ಅನವರತಪ್ರೀತಿಯಿಂದ ಭಾಗವತರ ಸಲಹುವ ದೇವನೆಂದು ಪ ಆವಾತನ ಕೀರ್ತಿಯ ಕಳೆ ಪೆರೆಯು..........ಯಿಂದ ಶುಕನಾರ ಪೊಗಳಿದನು ?ಆವಗೆ ಬಲೀಂದ್ರನು ಆರ......................................ವಿದನಯ್ಯಾ ? 1 ಕಲು ತರುಣಿಯ ಮಾಡಿದ ಪಾದವಾರದುಜಲಜ ಸಂಭವನ ಪೆತ್ತವನಾರು ?ಕಲಿಯುಗದ ಜನರಿಗೆ ಆರ ನಾಮವು ಗತಿಇಳೆಯ ಭಾರವನುಳುಹಿದನಾರಯ್ಯ2 ದ್ರುಪದನ ಮಗಳ ಅಭಿಮಾನ ರಕ್ಷಕನಾರುನೃಪ ಧರ್ಮನೆನೆಸಿಕೊಂಡವನಾರು ?ಕೃಪೆಯೊಳು ವಿದುರನ ಮನೆಯಲುಂಡವನಾರುಆಪತ್ಕಾಲದಿ ಗಜೇಂದ್ರನ ಸಲಹಿದರಾರು ? 3 ಅತಿ ಸ್ನೇಹದಿಂದ ಅರ್ಜುನಗೆ ಸಾರಥಿಯಾಗಿರಥವ ನಡೆಸಿದವನಾರು ?ಪೃಥಿವಿಯಲಿ....................................................................................................4
--------------
ಕನಕದಾಸ
ಆತ್ಮನಿವೇದನೆ ಅಚಿಂತ್ಯಾದ್ಭುತ ಮಹಿಮ ಈ ಸಚರಾಚರದೊಳು ಪ್ರಚುರನಾಗಿಹೆ ದೇವಾ ಮುಚುಕುಂದವರದಾ ಪ ಅಚಲಭಕುತಿಯು ನಿನ್ನ ಚರಣದಿ ಕಿಂಚಿತಾದರೂ ಪ್ರಚುರಮಾಡಿಸು ಅತಿಚಂಚಲನು ಬಲು ವಂಚಕನು ನಾ ಅನು- ಚಿತೋಚಿತ ಕರ್ಮವರಿಯೆನೋ ಅ.ಪ ವಿಪಿನವಾಸದಿ ಎನಗೆ ವಿಪರೀತವನು ತೋರಿ ಅಪರಾಧವೆಣಿಸದೆ ಪಾಲಿಸಿದೇ ಕೃಪಣವತ್ಸಲ ನೀನೇ ಕೃಪೆಮಾಡಿ ಸ್ವಪನದಿ ಅಪರಿಮಿತದ ವಿಶ್ವರೂಪವ ನೀ ತೋರ್ದೆ ಅಪರಾಧಿ ನಾನಹುದೋ ಸ್ವಾಮಿ ಅಪವರ್ಗಪ್ರದನು ನೀನು ಸಫಲಗೊಳಿಸಿದೆ ಎನ್ನ ಮನದನು- ತಾಪವನು ಪರಿಹರಿಸಿ ಕಾಯ್ದೆ ನಿನ್ನಡಿದಾವರೆಯ ನಂಬಿದೆನೋ ಶ್ರೀ ಪರಮಹಂಸರಿಂದ ನುಡಿಸಿದ ರಹಸ್ಯಗಳು ಅದುಏನೋ ಶ್ರೀ ಪುರುಷೋತ್ತಮನೆ ನೀನೆನ್ನಭಯಹಸ್ತದಿ ಕರೆದ ಪರಿಯೇನೋ ಅದನೊಂದನರಿಯೆನೊ ಈಪರಿಯ ಕರಚರಣದಲಿ ಚರಿಸಿದ ಅನುಪಮ ಕ್ರಿಯೆಯ ನೋಡಿ ಮನದೊಳು ಸುಪುತಕಾಲದಿ ತೈಜಸನೆ ನೀನೆನ್ನ ಪುಳುಕಾಂಕಿತನ ಮಾಡಿದೇ 1 ಅಮಿತ ಕಾರ್ಯವನೆಸಗೀ ಬಲು ಯಾತನೆಗೊಂಡು ಇಳೆಯೊಳು ಬಾಳೀ ದು- ರ್ಬಲನಾಗಿದ್ದರು ಎನ್ನ ಛಲವು ತೊಲಗಲಿಲ್ಲ ಜಲಜನಾಭನೆ ನೀನೆ ಕರುಣಿಸಿ ಸಲಹದಿರ್ದೊಡೆ ಪ್ರ- ಬಲರೆನ್ನನು ಕವಿದು ಮನಚಂಚಲವ ಪುಟ್ಟಿಸೀ ವಲೀಮುಖನಂತಾಡಿಸುವರೋ ಕಲಿಮಲವನ್ನೆ ಪರಿಹರಿಸುವುದೋ ಮನದಿ ಎಡೆಯು ದುರ್ಲಭವೋ ಒಲುಮೆಯಿಂದಲಿ ಸಾಧಿಸಲು ಎಲ್ಲೆಡೆಯ ಸರ್ವತಂತ್ರ ಸ್ವಾತಂತ್ರ್ಯ ನಿನ್ನದೋ ಭೋ ಜಗತ್ಪತೇ ಕಾಲನಾಮಕ ನೀನೆ ಆಪತ್ಕಾಲಬಾಂಧವವೆಂದು ನಂಬಿದೆ ಜಾಲಮಾಡದೆ ಎನ್ನ ಜೀವಿತದಲ್ಪಕಾಲದಿ ಕರುಣೆ ತೋರೈ2 ತುಷ್ಟನೆಂತಾಗುವೆಯೊ ಭ್ರಷ್ಟಪಾತಕಿ ನಾನು ಕಷ್ಟವಲ್ಲವೋ ನಿನಗೆ ಶ್ರೇಷ್ಟಮೂರುತಿಯೆ ಇಷ್ಟಮೂರುತಿಯೆಂದು ಇಷ್ಟು ನುಡಿದೆನೊ ಸಾಷ್ಟಾಂಗ ನಿನ್ನೊಳು ಇರಲೋ ಇಷ್ಟೇ ಎನ್ನದೊ ದೇವಾ ಕಷ್ಟಕಷ್ಟವೊ ಬೆಟ್ಟದೊಡೆಯ ಕೊಟ್ಟುದಷ್ಟು ನಿನ್ನದಯ್ಯಾ ಇಷ್ಟೆಬೇಡುವೆ ಎನಗೆ ಎ- ಳ್ಳಷ್ಟು ಭಕುತಿಯ ಕೊಡದಿರುವೆಯಾ ಸೃಷ್ಟಿಸ್ಥಿತಿಲಯನಿಯಮನಾದ್ಯಷ್ಟ ಕತೃತ್ವವು ನಿನ್ನದೊ ಅಷ್ಟಾಂಗಯೋಗದಿ ತುಷ್ಟಪಡಿಸೆ ತನುಮನೋಧಿಷ್ಟಾನವು ನಿನ್ನದೊ ಶ್ರೇಷ್ಠಮೂರುತಿ ಸುಲಭದಲಿ ನೀ ದೃಷ್ಟಿಗೋಚರವಾಗುವುದು ಇನ್ನೆಂತೋ ಹಾ ಕಷ್ಟಕಷ್ಟವೋ ಸೃಷ್ಟಿಯೊಳು ನಾನೆಷ್ಟರವ ನಿನ್ನಿಷ್ಟಬಂದಂತಾಗಲಿ ಭವ- ಶ್ರೀ ವೇಂಕಟೇಶ ಉರಗಾದ್ರಿವಾಸವಿಠಲ 3
--------------
ಉರಗಾದ್ರಿವಾಸವಿಠಲದಾಸರು
ಆತ್ಮನಿವೇದನೆ ಏನಿದು ಎನ್ನಯ ಬಾಳು-ನರಹರೀ ಪ ಶ್ರೀನಿಧಿಯನು ಮನಮನೆಯೊಳು ನಿಲಿಸದಾ ಅ.ಪ. ಕಳೆಯಿತು ಆಯು-ಕಳೆಯಿತು ಕಾಯೊ ಬೆಳೆಯಿತು ಆಶೆ-ಉಳಿಯಿತು ಸಾಧನ 1 ಹೊಟ್ಟೆಗೆ ಹಾಕೇ-ಪುಟ್ಟಿದು ದಾಯ್ತೇ ಪೊಟ್ಟೆಯ ತುಂಬವೆ-ದುಷ್ಟ ಮೃಗಂಗಳು2 ಇಲ್ಲವು ತಾ ಹರಿ-ಎಲ್ಲವೂ ನೀನೇನೆ ಇಲ್ಲವು ಯಾಕೇ-ಎಲ್ಲ ಕಾಲದಿ ಸುಖ 3 ಪುಟ್ಟವುದೇ ಜಗ-ಪುಟ್ಟಿಸ ನಿಲ್ಲದೇ ಭ್ರಷ್ಠರ ಮತವಿದು-ಅಷ್ಟಕರ್ತನ ಬಿಡೆ 4 ಮಾನವಾ ತನುವಾ-ಬಾಹೋದೆ ದುರ್ಲಭ ಮಾನದ ಶ್ರೀ ಕೃಷ್ಣ ವಿಠಲನ ತೋರದಿಹ5
--------------
ಕೃಷ್ಣವಿಠಲದಾಸರು
ಆತ್ಮನಿವೇದನೆ ಏನು ಕಾರಣವೆನಗೆ ತಿಳಿಯಲಿಲ್ಲದೀನ ರಕ್ಷಕನಾದ ಹರಿಯೆ ತಾ ಬಲ್ಲ ಪ ಕಾನನದೊಳಗೆ ಕಡುತಪಿಸಿ ತೃಷಿಯಾದವಂಗೆತಾನಾಗೆ ಮೋಡೊಡ್ಡಿ ಮೇಘ ಕವಿದುನಾನು ಧನ್ಯನೆಂದು ನರ್ತಿಸುವ ಸಮಯದಲಿಕಾಣದೇ ಪೋಯಿತು ಬಿಂದು ಮಾತ್ರ 1 ಪಾದ ಭಜನೆಯನ್ನುಹರುಷದಲಿ ಪಾಡಿ ಹಗಲಿರುಳು ಪ್ರಾರ್ಥಿಸುವಂಗೆಪುರುಷಾರ್ಥ ಪೂರೈಸಿ ಬಾರದಿಪ್ಪ ಬಗಿಯು 2 ಅನ್ನಾದಿಯಿಂದ ಅನ್ನಂತ ಜನ್ಮದಿ ಬಂದುಉನ್ನಂತ ಮಾಡಿದ ಪಾಪರಾಶಿ-ಯನ್ನು ಉಣದನಕ ಭೂವನ್ನದೊಳು ಮತ್ತೆ ಪಾ-ವನ್ನರಾ ಪಾದಗಳು ಪಡೆಯಲರಿಯದೊಯೇನೊ 3 ಅನ್ನಾಥ ಬಂಧು ಹರೆಯೆನ್ನುವಾ ಬಿರುದಿಗೆನಿನ್ನಂಥ ಮಹಿಮನಾ ಕರೆದು ವೊಂದೂಎನ್ನಂಥ ಪರಮ ಪಾತಕಿಯನುದ್ಧರಿಸಿತಾ-ಸನ್ನಗೊಳಿಸಿ ಸತತ ಸಲಹದಿಹುದು ಏನು 4 ಅರಸಿನಾಲೋಚನಿಯು ಸತತ ಸನ್ನಿಧಿಯೊಳನು- ಸರಿಸಿದ ಆಳುಗಳು ಬಲ್ಲ ತೆರದಿಸರಸಿಜ ನಯನ ವೆಂಕಟ ವಿಠಲನ ಪಾದಸರಸಿಜದಿ ಸರಸರೊಳು ನಲಿದು ನೀ ಬಾರದಿಹುದು 5
--------------
ವೆಂಕಟೇಶವಿಟ್ಠಲ