ಒಟ್ಟು 51 ಕಡೆಗಳಲ್ಲಿ , 24 ದಾಸರು , 50 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಮತಾರಕ ಮಂತ್ರ ಜಪಿಸಿ | ಸರ್ವಕಾಮಗಳ ಪಡೆದವನೆ ನಮಿಸಿ | ಬೇಡ್ವೆಕಾಮದುಷ್ಟಗಳ ಪರಿಹರಿಸಿ | ಹೃದ್‍ಧಾಮೆ ಹರಿ ತೋರೊ ಕರುಣಿಸೀ ಪ ಗಜ ಅಜಿನ ಧರಿಸಿ | ಮತ್ತೆಕರ್ಪರವ ಕೈಯಲ್ಲಿ ಇರಿಸಿ | ನೀನುಅಪವಿತ್ರ ಅಶಿವ ನೆಂದೆನಿಸೀ | ವರಮಸಫಲ ಶಿವ ಅಮಂಗಳವ ಹರಿಸೀ 1 ಪರಮ ಸದ್ಭಾಗವತ ಮೂರ್ತೇ | ಲಕ್ಷ್ಮೀನರಹರಿಯ ಆಣತಿಯ ಪೊತ್ತೇ | ವಿಷಯನಿರತರನು ಹರಿವಿಮುಖ ಶಕ್ತೆ | ಕಾಯೊಹರ ಸದಾಶಿವ ಭಾವ ಮೂರ್ತೇ 2 ತಪದಿಂದ ಹರಿಯೊಲಿಸೆ ನೀನು | ಹತ್ತುಕಲ್ಪ ಲವಣಾಂಭುದಿಯಲಿನ್ನು | ಗೈದೆತಪ ಉಗ್ರದಲಿ ಪೇಳ್ವುದೇನು | ನೀನು`ತಪ` ನೆಂದು ಕರೆಸಿದೆಯೊ ಇನ್ನು 3 ಶುಕಿಯಾಗಿ ಬಂದ ಅಪ್ಸರೆಯ | ಕೂಡ್ಡಅಕಳಂಕ ವ್ಯಾಸಾತ್ಮ ಧೊರೆಯ | ಮಗನುಶುಕನಾದೆ ಶಿವನೆ ಇದು ಖರೆಯ | ನುತಿಪೆಪ್ರಕಟ ಭಾಗವತಕ್ಕೆ ಧೊರೆಯ 4 ಮಾರುತನು ನಿನ್ನೊಳಗೆ ನೆಲಿಸಿ | ಗೋಪ್ಯದೂರೆಂಬ ನಾಮವನೆ ಧರಿಸಿ | ಇರಲುದೂರ್ವಾಸನೆಂಬ ಕರೆಸಿ | ಮೆರೆವಭೂ ಭೃತರ ಮಾನವನೆ ಕೆಡಿಸಿ 5 ಪತಿ ಸಂಗ ರಹಿತೆ | ಎನಿಸೆಭಾರತಿಯ ದೇಹದಲಿ ಜಾತೆ | ಇರಲುಪ್ರಾರಬ್ಧ ಭೋಗಿಸುವ ಮಾತೆ | ಎನಿಸಿವೀರ ಅಶ್ವತ್ಥಾಮ ಕೃಪೆ ಜಾತೆ 6 ಧಾಮ ಈಶಾನ್ಯದಲಿ ಇದ್ದು | ನಿನ್ನವಾಮದಲಿ ವಾಸುದೇವಿದ್ದು | ನೀನುವಾಮದೇವನ ಪೆಸರು ಪೊದ್ದು | ಧರಿಪೆಸ್ವಾಮಿ ಪೂಜಕನೆಂಬ ಮದ್ದು 7 ಕಾಲಾತ್ಮ ನಿನ್ನೊಳಗೆ ನೆಲಸಿ | ಪ್ರಳಯಕಾಲದಲಿ ಜಗವ ಸಂಹರಿಸಿ | ನಿನ್ನಕಾಲಾಖ್ಯ ನೆಂತೆಂದು ಕರೆಸಿ | ಮೆರೆವಲೀಲಾತ್ಮ ನರಹರಿಯು ಎನಿಸಿ 8 ಶಫರ ಹರಿದ್ವೇಷಿಗಳು ಎನಿಪ | ದೈತ್ಯತ್ರಿಪುರಸ್ಧರನು ಸಂಹರಿಪಾ | ಶಿವನೆವಪು ಧರಿಸಿ ಅಘೋರ ನೆನಿಪಾ | ಗೈದಅಪವರ್ಗದನ ಸೇ5ರೂಪ 9 ಹೃದ್ಯ ಹರಿಸೇವೆಂi5Àು ಗೈವಾ | ಮನದಿಬದ್ಧ ದ್ವೇಷಿಗಳೆಂದು ಕರೆವಾ | ದೈತ್ಯಕ್ರುದ್ಧರ ತಪಕೆ ಸದ್ಯ ವರವಾ | ಇತ್ತುಸಧ್ಯೋಜಾತನೆನಿಸಿ ಮೆರೆವ 10 ಹರಿಯಂಗ ಸೌಂದರ್ಯ ನೋಡಿ | ನೋಡಿಪರಮಾನಂದವನೆ ಗೂಡೀ | ಇಂಥಹರಿಪದ ದೊರಕೆ ಚಿಂತೆ ಗೂಡಿ | ಅತ್ತೆಹರುಷದಿ ಊರು ಸುತ ಪಾಡಿ 11 ಊರು ನಾಮಕ ರುದ್ರನಿಂದ | ಜಾತಕಾರಣ ಔರ್ವಭಿಧದಿಂದ | ಕರೆಸಿಉರ್ವರಿತ ರೋದನದಲಿಂದ | ಮೆರೆದೆಮಾರಾರಿ ಔರ್ವಭಿಧದಿಂದ 12 ವಿಷಯದಲಿ ಆಸಕ್ತರಾದ | ಮುಕ್ತಿವಿಷಯಕೆ ಬಹುಯೋಗ್ಯರಾದ | ಜನರವಿಷಯಾನುಕಂಪಿತನು ಆವ | ರುದ್ರಹಸನಾಗಿ ರೋದಿಸಿದಗಾಢ 13 ಕಮಲಾಕ್ಷಿ ದಕ್ಷಸುತೆ ತನ್ನ | ದೇಹವಿಮಲಯೋಗಾಗ್ನಿಯಲಿ ಭಗ್ನ | ಮಾಡಿಹಿಮದಾದ್ರಿ ಯೊಳಗೆ ಉತ್ಪನ್ನ | ವಾಗೆವಿಮಲ ಶಿವಗೊಂಡ ವ್ರತ ಕಠಿಣ 14 ಆದ್ಯಕಾಲದಲಿಂದ ಊಧ್ರ್ವ | ರೇತಬುದ್ಧಿಮಾಡುತ ತಪವು ಶುದ್ಧ | ಗೈದುಸಿದ್ಧನಾಗಿರುತಿರಲು ರುದ್ರ | ಕೇಳಿಊಧ್ರ್ವ ನೆಂಬಭಿಧಾನ ಪೊದ್ದ 15 ಕಾಮಹರ ತಪದಿಂದಲೆದ್ದು | ಬಹಳಪ್ರೇಮದಲಿ ಅದ್ರಿಸುತೆ ಮುದ್ದು | ಮಾಡಿಕಾಮಲಂಪಟನೆಂಬ ಸದ್ದು | ಗಳಿಸಿನಾಮ ಲಂಪಟ ನೆಂದು ಪೊದ್ದು 16 ಹರಪೊತ್ತ ಹನ್ನೆರಡು ನಾಮ | ದಿಂದಹರಿಮುಖ್ಯನಿಹನೆಂಬ ನೇಮ | ತಿಳಿದುಹರನ ಪೂಜಿಸೆ ಈವ ಕಾಮ | ನೆಂದುಗುರು ಗೋವಿಂದ ವಿಠ್ಠಲನ ನೇಮ17
--------------
ಗುರುಗೋವಿಂದವಿಠಲರು
ರಾಮನ ನೋಡಿರೈ ಮಂಗಳ ನಾಮನ ಪಾಡಿರೈ ಪ ಪೂಜಿತನ ಸೀತಾನ್ವಿತನ ಅ.ಪ ದಶರಥ ಗೃಹದಿ ಸುಜನರ ಸಲುಹಿ ಬೆಸಗೊಳಲಂದು ಸೀತಾವರನಾ 1 ಚಿಂತಿಸು ರಾಮನ ಶುಭಲಕ್ಷಣಗಳನೇಕ ಕರ್ಮವಿಪಾಕ ದೊಳಗೀ ವಿಷಯಾ- ಖರೆಯ ಯತಿಕುಲವರ್ಯ ಚರಣ ಸುಜನೋದ್ಧರಣ 2 ಕುಂದಣ ಮಣಿಮಯದ ಕಿರೀಟ ಯುಕ್ತಲಲಾಟ ಚಿನ್ಮಯಗಾತ್ರದಿ ಮಿನುಗುವ ರತ್ನಾಭರಣ ಜಿತರವಿ ಕಿರಣ ಹರಣ ಕರುಣಾಪೂರ್ಣ ರಿಪುಕುಲಮಥನಾ 3 ಶುಭಕಾಯಾಕವಿಜನಗೇಯಾ ಹೇಮ ಕೊಳುವ ಮನದೊಳು ಪೊಳೆವ ವೇದಾ ಮನಕತಿಮೋದಾ ಮುನಿ ಸಂಶೇವÀ್ಯ 4 ಶುಭಚರಿಯ ಬಹು ಆ ಮಂದಿರದಿ ಪಾರಾ- ಸುನಾದ ಕೇಳಲು ಮೋದ ಪೊಕ್ಕರು ಗೃಹದಿ 5 ಪೊಂದಿರೆ ಮುದವ ಪುಡಕಿದರಾಗೆ ಬಾಲವ ಹೀಗೆ ಕುಂಡಲಿಶಯನ ಶ್ರೀರಾಮನೆ ದರ್ಶನವಿತ್ತ ಲಕ್ಷ್ಮಣಸಹಿತ6 ಧರೆಯೊಳು ಬಹುಯತಿಕರ ಪೂಜಿತ ಪದಪದುಮಸ- ಧಾಮ ನಿರುತ ಶೇವಿಸುವ ಧರೆಸುರ ನಿಕರಕೆ ಕೊಡುವ ಬೇಡಿದ ವರವ ಶರಣು ಜನಕೆ ಸುರ ತರುವೆನಿಸಿದ ಸುರಪ್ರಿಯ ಕಾರ್ಪರನಿಲಯ ತರು ಪಿಪ್ಪಲಗತ ಶಿರಿನಾರಸಿಂಹನೆ ಈತ ಶ್ರೀರಘುನಾಥಾ7
--------------
ಕಾರ್ಪರ ನರಹರಿದಾಸರು
ವಿಷಯಾಸೆ ಬಿಡಲೊಲ್ಲದೋ ದೇವ ಪ. ವಸುದೇವಸುತ ನಿನ್ನ ವಶವಾಗೋತನಕ ಅ.ಪ. ಉದಯದಲಿ ಎದ್ದು ಹರಿಪದಗಳನು ಸ್ಮರಿಸದಲೆಕುದಿದು ಪರರನ್ನೆ ಬೈದು ಸುಯಿದುಮುದದಿಂದ ಮಜ್ಜನವ ಮಾಡದಲೆ ಕಂಡಕಡೆಒದಗಿ ಪರಸದನಕಾಗಿ ಪೋಗಿಮದಗರ್ವದಿಂದ ಗುರುಹಿರಿಯರಿಗೆ ವಂದಿಸದೆಕದನವನೆ ತೆಗೆದು ಬಂದು ನಿಂದುಇದೆ ಸಾಧನವೆಂದು ಉದರ ನೆವದಿ ತಿರುಗಿಸುದತಿಯರ ಸುಖಬಡಿಸಿ ಮದನವೆಗ್ಗಳನಾದೆ 1 ಓದುವೆನು ವಿದ್ಯೆಗಳ ಓದನದ ಬಯಕೆಯಲಿಸಾಧುಶಾಸ್ತ್ರಗಳ ಮರೆದು ತೊರೆದುಕಾದುವೆನು ತರ್ಕವ್ಯಾಕರಣ ಬಲದಿಂದಬೀದಿಬೀದಿಯಲಿ ಚರಿಸಿ ಅರಸಿಮಾಧವನ ಪೂಜಿಸದೆ ಪರರ ಅನ್ನವನುಂಡು ಶೋಧಿಸದೆ ಪುಣ್ಯಪಾಪ ಲೇಪಕ್ರೋಧದಿಂದಲಿ ಇನಿತು ಪರಿಪರಿಯ ಬವಣೆÀಯಿಂದಬೋಧನೆಗೆ ಒಳಗಾಗಿ ಕುಧರ್ಮವನು ಪಡೆದೆ2 ಪರರ ಸೌಭಾಗ್ಯ ವಿದ್ಯಾ ಮಕ್ಕಳ ಕಂಡುಮರುಗಿ ಮನದೊಳಗೆ ಕೊರಗಿ ಸೊರಗಿತರತರಕೆ ಪರರಾಂಗನೆಯರ ಚೆಲುವಿಕೆ ಕಂಡು[ತೆರೆದ] ಕಣ್ಣಿಂದ ನೋಡಿ ಬಾಡಿಎರಗಿ ಮನ ಅವರಲ್ಲಿ ಏಕಾಂತದಲಿ ಕಂಡುಕರದಿ ಸನ್ನೆಯನು ಮಾಡಿ ಕೂಡಿಹೊರಗೆ ಗುಣವಂತನೆಂದೆನಿಸಿ ಧರೆಯೊಳಗೆ ಪಾಮರ ಬುದ್ಧಿಯಿಂದ ಸಂಚರಿಸಿ ನಿನ್ನನು ಮರೆದೆ3 ದೇಶದೇಶಕೆ ಧನದಾಸೆಗಾಗಿ ನಡೆದುಬ್ಯಾಸರದೆ ಮನೆ ಮನೆಗೆ ಪೋಗಿ ಕೂಗಿಭೂಸುರೋತ್ತಮರು ನಾವೆಂದು ಪರರಮುಂದೆಹೇಸದಲೆ ಪೇಳಿಕೊಂಡು ಭಂಡುಮೋಸಗೊಳಿಸಿ ಪರರ ಆಶ್ರಯವನೆ ಮಾಡಿಭೇಷಜವ ತೋರಿ ಕಳೆದೆ ಪೊಳೆದೆಈಸುಪರಿ ಧನವ ತಂದು ಕೂಳನೆ ಹಾಕಿಆಸತಿಸುತರೆನಗೆ ಗತಿಯೆಂದು [ಗುಣಿಸಿದೆ] 4 ಕಾಯದಾಸೆಗಾಗಿ ನೋಯಬಯಸದಲೆ ಉ-ಪಾಯವ ಚಿಂತಿಸುತ್ತಲಿತ್ತಹೇಯವಿಲ್ಲದೆ ಸ್ನಾನ ಸಂಧ್ಯಾವಂದನೆ ತೊರೆದುತೋಯಿಸದೆ ದೇಹವನ್ನು ಇನ್ನುಮಾಯಮೋಸಗಳಿಂದ ಬಾಯಿಗೆ ಬೇಕಾದ್ದುಆಯಾಸಪಟ್ಟು ತಂದು ತಿಂದುಶ್ರೀಯರಸ ಹಯವದನರಾಯನೆ ನಾ ನಿನ್ನಮಾಯವನು ತಿಳಿಯದನ್ಯಾಯದಿಂದಲಿ ಕೆಟ್ಟೆ 5
--------------
ವಾದಿರಾಜ
ಶ್ರೀ ವಧುರಮಣನ ಚರಿತಾಮೃತವನು ಸೇವಿಸಬಾರದೆ ಜಿವ್ಹೆ| ಆವಾಗು ವಿಷಯಾಸಕ್ತಿಲಿ ಬಾಳುವ ದಾವರಸಜ್ಞದ ಗುಣವೇ ಪ ಆರತಿಯಿಂದಲಿ ಷಡರಸದನ್ನದ ಸಾರಾಯಕ ಮರುಳಾದೆ ನೀ| ನರೆರಧರಕ್ಕೊಲಿದೇ ಸುಧಾರಸವೆಂದು ಬಗೆದೇ| ಧಾರಣಿ ಕಳ್ಳಿಯ ಹಾಲೆಂದೆನಿಸಲು ಗೋರಸದ್ಹಂಬಲ ಮರೆದೆ 1 ಜ್ಞಾನವ ಸಾಧಿಸಿ ಬಹು ಸಾಯಾಸದಿ ನಾನು ಶಾಸ್ತ್ರವ ನೋಡಿ| ಮಾನದ ಕಾಂಕ್ಷಿಯ ಕೂಡಿ| ಪರಿ ಕುಣಿದಾಡುವ ಹೀನ ಮನುಜರಾ ಪಾಡಿ2 ಸ್ಮರಿಸಲು ಶ್ರೀಹರಿಯಾ ಲೋಹ| ಪರಸವ ಮುಟ್ಟಿದ ಪರಿಯಾ ಧನ್ಯರು ತಮನೆನಿಸುವನರಿಯಾ| ಗುರುವ್ಕ ಮಹಿತಪಿ ನಂದನು ಸಾರಿದ ಮೊರೆ ಹೋಗು| ಮೂಜಗ ಧೊರಿಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀಕೃಷ್ಣಪರಬ್ರಹ್ಮ ನಮೊ ಶೇಷತಲ್ಪಶಯಶೌರಿ ನಮೊಪ್ರಾಕೃತರ'ತಾನಂತ ನಮೊ ಪರಮಪುರುಷ ಭವದೂರ ನಮೊ 1ಮದನಾರ್ವಧುಸುರಸ್ತೌತ್ಯ ನಮೊ ಮಧುಕೈಟಭದೈತ್ಯಾರಿ ನಮೊಯದುಕುಲಾಂಬುಧಿಸುಧಾಂಶ ನಮೊ ವಾಸುದೇವ ಪರಮಾತ್ಮ ನಮೊ 2ದೇವಕಿದೇ'ಕಿಶೋರ ನಮೊ ದ್ವಿಜಸುತಪ್ರಾಣಸುರಕ್ಷ ನಮೊಭಾವಜಪಿತ ಜಗನ್ನಾಥ ನಮೊ ಭಕ್ತಪ್ರಿಯಗೋಂ'ದ ನಮೊ 3ಅಷ್ಟಮಗರ್ಭಸಂಜಾತ ನಮೊ ಅ'ುತಧೈರ್ಯಗಾಂಭೀರ್ಯ ನಮೊದುಷ್ಟಪೂತನಧ್ವಂಸ ನಮೊ ಧೇನುಕಶಕಟ'ದೂರ ನಮೊ 4ಗೋವರ್ಧನಗಿರಿಧಾರಿ ನಮೊ ಗೋಪಗೋಪಿಕಾಲೋಲ ನಮೊಶ್ರೀವಸುದೇವಾನಂದ ನಮೊ ಸಾಂದೀಪಪ್ರಿಯಬೋಧ ನಮೊ 5ಯಶೋದನಂದೋತ್ಸಾಹ ನಮೊ ವೇಣುಗಾನ'ನೋದ ನಮೊಶಿಶುಪಾಲಶಿರಚ್ಛೇದ ನಮೊ ಶಂಖಚಕ್ರಕರಧಾರಿ ನಮೊ 6ಕೌರವಗರ್ವ'ದಾರಿ ನಮೊ ಕುಬ್ಜಪಾಲಕಮಲಾಕ್ಷ ನಮೊಪಾರಿಜಾತಮಪಹಾರಿ ನಮೊ ಪಾವನತೀರ್ಥಪದಾಯ ನಮೊ 7ತೃಣಾವರ್ತನಾಶಾಯ ನಮೊ ದ್ವಾರಕಾಪುರ'ಹಾರಿ ನಮೊಮೌನಿಮಾನಸೊಲ್ಲಾಸ ನಮೊ ಮಧುರಾಪುರಿನಾಥಾಯ ನಮೊ 8'ದುರ ಅಕ್ರೂರಸ್ತೌತ್ಯ ನಮೊ ವೃಷಭ ಮ್ಟುಕ ಮುರಾರಿ ನಮೊ (?) 9ಶ್ರೀರುಕ್ಮಣಿಹೃದಯೇಶ ನಮೊ ಸಿಂಧುಶಯನ ಕಂಸಾರಿ ನವನೀತ ನಮೊ ಜಂಭಭೇದಿಸುತಪ್ರೇಮ ನಮೊ 10ವೈಜಯಂತಿವನಮಾಲ ನಮೊ ವನದಶ್ಯಾಮಲವರ್ಣ ನಮೊವಜ್ರಸ್ಥಗಿತಕಿರೀಟ ನಮೊ ವರಮಣಿಕುಂಡಲಧರಣ ನಮೊ 11ಭುಜಕಿರೀಟಶುಭಗಾತ್ರ ನಮೊ ಭುವನಮೋಹನಾಕಾರ ನಮೊಅಜಪಿತಕನಕಸುಚೇಲ ನಮೊ ಆರ್ತಶರಣ್ಯೋದ್ಧಾರ ನಮೊ 12ಕಾಲಯವನಮದಖಂಡ ನಮೊ ಕೋಟಿರ'ಪ್ರಭಾಭಾಸ ನಮೊಮಾಲಾಕಾರುಪಕಾರ ನಮೊ ಲೀಲಾಮಾನುಷವೇಷ ನಮೊ 13ದ್ರೌಪತಿಕಭಯೋದ್ಧಾರ ನಮೊ ಧನಂಜಯಾದಿಸುಪಕ್ಷ ನಮೊಶ್ರೀಪತಿಸಕಲಾಧಾರ ನಮೊ ಸರ್ವಭೂತಹೃದಯಾತ್ಮ ನಮೊ 14ನಿಖಿಲಚರಾಚರದೂಪ ನಮೊ ನಾಮರೂಪಕ್ರಿಯರ'ತ ನಮೊಅಖಂಡಮಚಲಾಕಾರ ನಮೊ ಅದ್ಭುತಮ'ಮಾಪಾರ ನಮೊ 15ಸಗುಣನಿರ್ಗುಣಾತೀತ ನಮೊ ಸತ್ಯಾಸತ್ಯಸುಬೋಧ ನಮೊನಿಗಮಾಗನಶೃತಿಸಾರ ನಮೊ ನಿರ್ವಿಷಯಾಭವಪ್ರಣವ ನಮೊ 16ಅಜಪಸೂತ್ರಸಂಕೇತ ನಮೊ ಹಂಸತತ್ವಸುಪ್ರಕಾಶ ನಮೊತ್ರಿಜಗಾಂತರ್ಬ'ವ್ಯಾಪ್ತ ನಮೊ ತ್ರಿಗುಣಾಪ್ರತಿಭಾಗಮ್ಯ ನಮೊ 17ತುಳಸಿರಾಮ ಗುರುಸ್ತೌತ್ಯ ನಮೋ ತಾಕ್ಷ್ರ್ಯಾಚಲವರವಾಸ ನಮೊಮುಳಬಾಗಿಲಪುರಿಪಾಲ ನಮೋ ಮಹಾನುಮಪ್ರಿಯ ವಂದ್ಯ ನಮೋ 18ಮಂಗಳಮಘಚಯಭಂಗ ನಮೋ ಮಂಗಳಂ ಪಾ' ಪಾ' ನಮೋರಂಗಸ್ವಾ'ುದಾಸ ಪೋಷ ನಮೋ ಮಂಗಳಾಂಗ ಶ್ರೀಕೃಷ್ಣ ನಮೋ 19
--------------
ಮಳಿಗೆ ರಂಗಸ್ವಾಮಿದಾಸರು
ಶ್ರೀಶ ಬ್ರಹ್ಮ ಸದಾಶಿವಾದಿ ಸುರಾರ್ಚಿತ ದಾಶರಥಿ ತವ ದಾಸರೊಳಗಿಟ್ಟು ನೀ ಸಲಹೊ ವಿಷಯಾಶೆಗಳ ಬಿಡಿಸಿ ಪ ಲೋಕನೀಯ ವಿಶೋಕ ಭಕ್ತರ ಶೋಕ ಮೋಹವ ನೀ ಕಳೆದು ಸುಖ ವೇ ಕರುಣಿಸು ಕೃಪಕಟಾಕ್ಷದಿ ಅಕೂತಿತನಯ ವಾಕುಮನ್ನಿಸನೇಕ ಮಹಿಮ ವಿ ವೇಕ ಬುದ್ದಿಯ ನೀ ಕೊಡೆನೆಗೆ ಪಿ ನಾಕಿಸುತ ಪರಲೋಕದಾಯಕ ಲೌಕಿಕವ ಬಿಡಿಸೊ1 ವೈರಿವರ್ಗಗಳಾರು ಇಂದ್ರಿಯ ದ್ವಾರದೊಳು ಪೊಕ್ಕು ಚಾರುಧರ್ಮದ ದಾರಿ ಮನಸಿಗೆ ತೋರ ಗೊಡದಲೆ ನಾರಿ ಧರಣಿ ಧನಾ ಹಾರಯಿಸುತಿದ್ದು ಘೋರಿಸುತಿವೆ ಮುರಾರಿ ತವಚರ ಣಾರವಿಂದವ ತೋರಿ ಮನದಿ ಸಂ ಸಾರ ಶರಧಿಯ ತಾರಿಸನುದಿನ2 ತರಣಿ ನವ ಪೋತ ಕಾಲವ ಭೀತಿ ಬಿಡಿಸು ಪುರು ಹೂತನ ಪ್ರಿಯ ಮಾತುಳಾಂತಕ ಮಾತುಗಳನೆ ಮನ್ನಿಸಿ ಶ್ವೇತವಾಹನ ಸೂತಸುಖಮಯ ವಾತಪಿತ ಜಗನ್ನಾಥವಿಠ್ಠಲ ಪಾತಕಾರಣ್ಯ ವೀತಿಹೋತ್ರ ನಾ ತುತಿಪೆನೆ ನಿನ್ನಾ 3
--------------
ಜಗನ್ನಾಥದಾಸರು
ಸಿರಿ ಹರಿಯೇ | ಎನ್ನ ದೊರೆಯೇ ಪ ಎದುರಾಳಿ ಜನ ಬಂದು | ಹದನ ಗೆಡಲು ಮನಬದಿಗ ನಾಗಿಹ ನಿನ್ನ | ಹುದುಗಿಸುತಿಹರಯ್ಯ ಅ.ಪ. ಎನ್ನ ಕಂಗಳು ನಿನ್ನಯ | ರೂಪಂಗಳಚೆನ್ನಾಗಿ ನೋಡದೆಲೆ | ವಿಷಯಾನ್ಯವ |ನನ್ನೆಯಿಂದಲಿ ನೋಡಿ | ಧನ್ಯರಾದೆವು ಎಂದುಮನ್ನಿಸುತಿಹವಯ್ಯ | ಘನ್ನ ಗೋಪಾಲನೆ1 ಕರ್ಣಗಳ್ಹದನ ಕೇಳೋ | ಶ್ರೀಹರಿ ನಿನ್ನಗುಣಗಳ ಕೇಳದಲೇ | ಯುವತೀಯರ ||ತನುಗಳೊರ್ಣನೆ ಕೇಳಿ | ಕ್ಷಣ ಕ್ಷಣಕಾನಂದಸೊನೆಯಿಂದ ತೊಯ್ದಂತೆ | ಎಣಿಸುತಿಹವು ಅಯ್ಯ 2 ಪ್ರಾಣ ಛಾದಿಯ ಪೇಳ್ವೆನೊ | ನೀ ಮುಡಿಧೂವಾಘ್ರಾಣಿಸದೆಲೆ ಕನ್ಯೇರು | ಮುಡಿದಿಹ ಪುಷ್ಪ |ಘ್ರಾಣಿಸುತ್ತಲಿ ಬಹು | ಆನಂದ ಪಡುತಲಿನಾನಾ ಜನ್ಮದಿ ದುಷ್ಟ | ಯೋನಿಗೆ ತರುವೋದು 3 ವದನದ ಪರಿಯ ಕೇಳೊ | ನಿನ್ನಯ ಗುಣಮುದದಲಿ ವರ್ಣಿಸದೆ | ಧನಿಕರ ಸ್ತುತೀ ||ವದಗಿ ಪೇಳುತ ಮುಂದೆ | ಉದರ ಕೋಸುಕವಾಗಿವಿಧಿಯ ಮಾರುತ ದುಷ್ಟ | ಸಾಧನವಾಯ್ತಯ್ಯ 4 ಸ್ಪರಿಶೇಂದ್ರಿಯರ ಸಾಧನ | ಕೇಳೆಲೊ ಹರಿಹರಿಭಕ್ತರಾಲಿಂಗನ | ಮಾಡದಲಿದ್ದುಪರಸ್ತ್ರೀಯ ಸ್ಪರಿಶಕ್ಕೆ | ಹರಿಯುವಂತಿಹುದನ್ನಪರಿಹಾರ ಗೈ ಗುರು | ಗೋವಿಂದ ವಿಠಲಯ್ಯ 5
--------------
ಗುರುಗೋವಿಂದವಿಠಲರು
ಸ್ಮರಿಸೆಲವೋ ಸ್ಮರಿಸೆಲವೋ ಮನವೇ | ನಿರುತದಿ ಗುರುಮಹೀಪತಿ ಪಾದಾ ಪ ಆದ್ಯಾತ್ಮದಘನ ವಿದ್ಯೆಯ ಸಾಧಿಸಿ | ಸಿದ್ಧರ ನಡುವೆ ಪ್ರಸಿದ್ಧರಾದವರ 1 ನೆಟ್ಟನೆ ಶರಣರ ಪುಟ್ಟಿಸಿರಧಿಕಾ | ಬಿಟ್ಟುಪದೇಶವ ಕೊಟ್ಟು ಸಾಕುವರಾ 2 ಧಾರುಣಿಯೊಳು ಸಂಸಾರ ಮಾಡಿದರ | ಸಾರಸಜಲದಂತೆ ರಚಿಸಿದರಾ 3 ಯೋಗಧಾರುಣದಿ ಸಾಗಿಪದಿನಗಳು | ಭಾಗವತಾಗ್ರಣಿ ಎನಿಪಶ್ರೀಗುರುಪಾದಾ4 ವಿತ್ತಜನರು ತಂದಿತ್ತರೆ ಹಿಡಿಯದೆ | ನಿತ್ಯವ್ಯಯವ ಪವಡಿಸುತಿಹರವರಾ5 ಯುಕ್ತದಿ ವಿಷಯಾಸಕ್ತಿಯತ್ಯಜಿಸಿ | ವಿ ರಕ್ತಿ ಬೆಳಿಸಿ ಸುಮುಕ್ತಿ ಪಡೆದವರಾ 6 ಸ್ವಸ್ಥದಿ ನಾಲ್ಕು ಅವಸ್ಥೆಯ ಮೀರಿ | ಸ ಮಸ್ತರಲಿ ನಿಜ ವಸ್ತು ಕಂಡವರಾ7 ಕಾಖಂಡಕಿ ಸ್ಥಳ ಶ್ರೀಕರವಂದ್ಯೆ | ನಿ ರಾಕರಿಸದೆ ಅಂಗೀಕರಿಸಿದರಾ 8 ಎಂದೆಂದಿಗೂ ಹೊರಗೊಂದಿನ ಹೋಗದೆ | ಮಂದಿರದೊಳಗಾನಂದದಲಿಹರಾ9 ತಾಪತೃಯದಾ ಭವಪರಿಹರಿಸುತ | ತಾಪೋರೆದನು ಗುರು ಶ್ರೀಪತಿಗುರುಪಾದಾ 10 ಅಂಕಿತ-ಗುರುಶ್ರೀಪತಿ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಕರುಣಾನಿಧಿ ರಂಗ ನನ್ನನ್ಯೂನತೆ ನೋಡುವರೆ ರಂಗನಾನೇನು ಅರಿಯೆನೊ ರಂಗ ನೀದಾನಿ ನೀನೆಗತಿರಂಗಪ.ಭಕ್ತಿಯುಂಟೆಂಬೆಯ ರಂಗ ಮಿಶ್ರಭಕ್ತಿಯೆ ತುಂಬಿದೆ ರಂಗಶಕ್ತಿಯ ನೋಡುವೆ ರಂಗ ವಿಷಯಾಸಕ್ತಿಯೆ ಶಕ್ತಿಯು ರಂಗ 1ಜ್ಞಾನ ಪರೀಕ್ಷಿಪೆ ರಂಗ ಅಜ್ಞಾನದಖಣಿಕಾಣೊ ರಂಗಏನಾರು ವಿರತ್ಯುಂಟೆ ರಂಗ ಜಠರಾನುಕೂಲವಿರತಿರಂಗ2ಪೂಜಿಸು ಇನ್ನೆಂಬೆ ರಂಗ ಹೊಲೆಭಾಜನಮನವಾಯ್ತು ರಂಗನಾ ಜಪವರಿಯೆನೊ ರಂಗ ಕಲ್ಪಭೂಜಪ್ರಸನ್ವೆಂಕಟ ರಂಗ3
--------------
ಪ್ರಸನ್ನವೆಂಕಟದಾಸರು
ಏನು ಗತಿಯೊ ಮುಂದೆನಗೆ ಗೋವಿಂದಶ್ರೀನಿವಾಸ ರಕ್ಷಿಸದಿರೆ ದಯದಿಂದ ಪ.ನಿಶಿದಿನ ಹಸಿವುತೃಷೆಸುಡುವ ಕುಮರಿಯುಮಸಿವರ್ಣ ಮಾಡಿ ಕೇರಿಡಿವ ಮೂರುರಿಯು 1ನಾಚಿಕಿಲ್ಲದ ವಿಷಯಾಸೆಯಸಹ್ಯನೀಚ ದುರುಕ್ತಿಯಸ್ತ್ತ್ರದ ಘನಗಾಯ 2ಮಾಯದ ಕಡಲೊಳು ಕಟ್ಟಿಹ ಕೊರಳುಆಯಾಸ ಬಡುತ ಬಡುತ ಬಿದ್ದಿತುರುಳು 3ಎಳ್ಳನಿತು ಜ್ಞಾನ ಅಹಂಕಾರ ಬಹಳಘಲ್ಲನೆ ತಗಲುವ ಜ್ಞಾನದಶೂಲ4ಮರಹುಮದಗಳೆಂಬ ಮುಸುಕಿದ ಮೆಳೆಯುಪರದಾರ ಪರನಿಂದೆಯಗ್ನಿಯ ಮಳೆಯು 5ಬೇಡಿದ ಬಯಕೆ ಸಾಧ್ಯಾಗದ ನೋವುಮೂಢತನದಿ ದಿನ ನೂಕುವ ಸಾವು 6ಇನ್ನಾರೆ ಸಜ್ಜನ ಸಂಗಕೌಷಧಮುನ್ನ ಕೊಡಿಸೊ ಪ್ರಸನ್ವೆಂಕಟ ಮುಕುಂದ 7
--------------
ಪ್ರಸನ್ನವೆಂಕಟದಾಸರು
ಒಂದೆರೆಡೇ ನಾ ಹೇಳಲುಎಂದಿಗು ತೀರವು ಅಪರಾಧ ಸಿರಿಕೃಷ್ಣ ಪ.ಪಾಪವ ಗಳಿಸಿದರೇನುಂಡಾರದ ಬಲ್ಲೆಆ ಪುಣ್ಯವಂತರ ಕೀರ್ತಿ ಬಲ್ಲೆಈಪರಿತಿಳಿದರು ಕೆಟ್ಟವೃತ್ತಿಯ ಬಿಡೆಆಪದ್ಬಂಧು ಇದೇನು ಮಾಯವೊ ಸ್ವಾಮಿ 1ತಾಪತ್ರಯವನುಭವಿಸುವಾಗ ಪಶ್ಚಾತ್ತಾಪವಲ್ಲದೆ ಮಾತೊಮ್ಮಿಗಿಲ್ಲಶ್ರೀಪತಿನೋಡುಚಿತ್ತದಕಪಟವಿಷಯಾಲಾಪವೆವಿಡಿದಿದೆ ಹಿತ ಹೊಂದದಯ್ಯ 2ಹಣ್ಣು ಹಂಚಿದ ತೆರ ಹೊತ್ತು ಹೋಯಿತು ಕಿಂಚಿತ್ಪುಣ್ಯ ಮಾಡಿಹೆನೆಂಬ ನಂಬಿಗಿಲ್ಲಚಿನ್ಮಯ ಮೂರುತಿ ಪ್ರಸನ್ವೆಂಕಟೇಶನಿನ್ನವನೆಂಬ ಹೆಮ್ಮೆಲಿ ಮಾಡಿದ ತಪ್ಪು 3
--------------
ಪ್ರಸನ್ನವೆಂಕಟದಾಸರು
ನಮ್ಮ ತಪ್ಪೇನೊ ಪರಬೊಮ್ಮ ನಿನಗೆ ಕೋಟಿಬೊಮ್ಮಾಂಡನಾಯಕಅಚಿಂತ್ಯ ಮಹಿಮನಿಗೆಪ.ಒಂದು ನಾಮೋಚ್ಚರಣೆಯಲಿ ಪರಗತಿ ಪಡೆದರೊಂದುಗುಣಪಿಡಿದು ಕಡೆಗಾಣರ್ಯಾರುಮಂದಮತಿಯಲಿ ಭಜಿಸಿ ಮಹಾಪಾಪ ನೂಕುವರುಇಂದಿರಾರಾಧ್ಯಪದ ಭಕ್ತವತ್ಸಲನೆ 1ನಾರಾಯಣನೆ ನಿನ್ನ ಮಗಳ ಮೈಗಾಳಿಯಲಿಮೂರುಲೋಕದ ಪುಣ್ಯ ಬೆಳೆವುದುಸೂರ್ಯನ ಮಗನವರು ನಿನ್ನ ಬಂಟರಿಗಂಜಿಜಾರುವರೆಲೆ ಶ್ರೀ ಜಾನಕಿರಮಣ ರಾಮ 2ಶಿಶುಗಳಪರಾಧಕ್ಕೆ ನಯನದಂಜಿಕೆ ಶಿಕ್ಷೆಪಶುವಿರಕಳಿಗೆ ಕಂಠಕಾಷ್ಠವೆ ಶಿಕ್ಷೆವಿಷಮ ಹಿಂಸೆಯು ಸಲ್ಲ ಪ್ರಸನ್ನವೆಂಕಟರಮಣವಿಷಯಾಸೆ ಭವಶಿಕ್ಷೆ ಸಾಕೆನಗೆ ತಂದೆ 3
--------------
ಪ್ರಸನ್ನವೆಂಕಟದಾಸರು
ನೋಡುನೋಡುದಯಮಾಡು ಮಾಡಿನ್ನಪ.ನೋಡುವೈರಾಗ್ಯಭಾಗ್ಯವಿಹೀನನಕಾಡುತಿದೆ ಮನ ಕರುಣಾಸಂಪನ್ನ ಅ.ಪ.ಸ್ನಾನ ಸಂಧ್ಯಾವಂದನೆ ಸಚೇಲದಿಧ್ಯಾನ ಮೌನವ ಹಿಡಿಸಿಜ್ಞಾನ ಭಕ್ತಿ ವಿರಕ್ತಿ ಮಾತಿನನಾಣ್ನುಡಿಯಂತೆ ನುಡಿಸಿದಾನ ಧರ್ಮ ಕೈವಲ್ಯದಾರ್ಯೆಂದು ನಿದಾನ ತುಷ್ಟಿಯ ಬಡಿಸಿತಾನರೆಕ್ಷಣ ಸ್ವಸ್ಥವಿರದೆಲ್ಲಹಾನಿ ಮಾಡಿತೆನ್ನ ಚಿತ್ತವ ಕೆಡಿಸಿ 1ಸಾಲಂಕೃತ ಬಾಲನೊಯ್ದಡವಿಯಲಿ ಕೊಲ್ವಆಲಯದ ಕಳ್ಳನಂತೆಬಾಲೆಯನ್ನಾಳದೆ ಷಂಡಘನಕೂಪದೊಳು ನೂಕಿಸುವಂತೆಪೇಳಲೇನು ದುರ್ಬಲರನು ಅರಸ ತಾಶೂಲಕಿಕ್ಕಿಸುವಂತೆಮೇಲೆ ಮೇಲೆ ದುರ್ವಿಷಯಾಟವಿಯೊಳುಕಾಲಕಟ್ಟ್ಯೆನ್ನ ಕೆಡಹುತಿದೆ2ಕನ್ನಿಕೆಗೆ ವರನೊಪ್ಪಿದರೆ ತೆತ್ತಿಗನ್ನ ಪ್ರತಿಕೂಲವೇನುಪುಣ್ಯಶ್ಲೋಕನ ಅಭಯವಿರಲು ಸುಖಿಗನ್ಯ ತೊಡರ್ಯಾಕಿನ್ನಮನ್ನೆಯನ ಪಾದವಿಡಿದಿಹ ಮಡದಿಗೆಅನ್ಯರಾತಂಕವೇನು ಪ್ರಸನ್ನವೆಂಕಟಸ್ವಾಮಿ ನೀ ಒಲಿದರೆಕುನ್ನಿ ಮನ ಕಾಡಿ ಮಾಡುವದೇನು 3
--------------
ಪ್ರಸನ್ನವೆಂಕಟದಾಸರು
ಪಾಹಿಪಾಹಿಜಿತಮಾರ |ಪಾಹಿಸುಬೋಧೇಂದ್ರಸಮೀರ||ಮಹಾ ಮತಾಬ್ಧೀಂದು ದೀನಾಮರ |ಮಹಿಜ, ಸುಹಿತ, ಮಹಿತ ಪನಿರ್ಮಲಾತ್ಮ ಸದ್ಗುರು ಧೀರ |ಕರ್ಮವಿಷಯಾಪೇಕ್ಷಾ ದೂರ ||ಧರ್ಮಾಸಕ್ತ ಲೋಕೋದ್ಧಾರಶರ್ಮಸು |ಶರ್ಮಾದ ಭರ್ಮಾಂಗ ಮರ್ಮಜÕ 1ಅರ್ಕಮಹಿಮನೆ ಧೀಮಂತ |ಅರ್ಕಜನೊಲಿದಾನೀ ಶಾಂತ ||ಮರ್ಕಟದುರ್ವಾದಿಧ್ವಾಂತಅರ್ಕಕು |ತರ್ಕ ಸಂಪರ್ಕಾಹ ಅರ್ಕಾಭ ಪಾಹಿ 2ತೀರ್ಥ ಪಾಲಾ ಭಕ್ತಾಧೀನ |ತೀರ್ಥಾಂಘ್ರಿ ಪ್ರಾಣೇಶ ವಿಠಲನ ||ತೀರ್ಥದೂತ ನೀನಿದ್ದ ಸ್ಠಾನ ತೀರ್ಥವು |ತೀರ್ಥಪ ತೀರ್ಥಪ ತೀರ್ಥ ಮಾಂ ಪಾಹಿ 3
--------------
ಪ್ರಾಣೇಶದಾಸರು
ಭ್ರಾಂತಿ ಬಿಡದೊ ಭಾಗ್ಯ ಪುರುಷನೆವಿಷಯಂಗಳಜರಿದುಶಾಂತಚಿತ್ತನಾಗೋತನಕಕಾಲಕಾಲಕೆ ಹರಿಕಥಾಶ್ರವಣ ಗುರುಗಳ ಮುಖದಿಂದಪಾಂಚಜನ್ಯ ಅರಿಪಾಣಿ ಸರ್ವೇಶ ತದ್ರಾಣಿ ಲಕುಮಿ ವಿ-ಪೂರಕ ಕುಂಭಕ ರೇಚಕದಿಂದಲಿ ಹೃದಯಸ್ಥ ಭೌತಿಕಅಂಶಿ ಅಂಶ ವೇಷಾಧಿಷ್ಠಾನ ಅಂತರ್ಯಾಮಿಗಳಹಂಚುಹಾಟಕ ಸಮದರ್ಶಿ ಎನಿಸಿ ಶೀತೋಷ್ಣವ ಸಹಿಸಿವಿಷಯಾವಿಷಯಂಗಳ ರೂಪವ ತಿಳಿದು ವಶವಾಗದನ್ಯಸ್ವತಂತ್ರ ಅಸ್ವತಂತ್ರ ವಸ್ತು ವಿವೇಕವ ತಿಳಿದುಸಕಲೇಂದ್ರಿಯಗಳಿಂದ ಶ್ರೀಹರಿಯ ವ್ಯಕತತಿಗೆ ತಂದುಬಿಂಬಭಾವಕ್ರಿಯ ದ್ರವ್ಯಾ ದ್ವೈತವ ತಿಳಿದು ಸರ್ವಗತ
--------------
ಗೋಪಾಲದಾಸರು