ಒಟ್ಟು 203 ಕಡೆಗಳಲ್ಲಿ , 48 ದಾಸರು , 169 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಡಲಶಯನ ಹರಿಯ ತೊಡೆಯಲ್ಲಿ ಮಡದ್ಯೇರಿಬ್ಬರು ಕುಳಿತು ಪ ಪನ್ನಂಗಶಯನ ಕೇಳೆ ಸ್ವಾಮಿ ನೀ ಎನ್ನ ಮನೆಗೆ ಏಳೊ ನಿನ್ನ ಪಾದಕ್ಕೆ ಎರಗುವೆನೆಂದು ಭಾಮೆ ಕೈ- ಯನ್ನು ಮುಗಿದಳಾಗ 1 ಎನ್ನ ಮನೆಯಲ್ಲಿದ್ದ ಶ್ರೀಹರಿ- ಯನ್ನು ಕರೆಯಲವರ ಕಣ್ಣೇಸೆನುತಲಿ ಕರ್ಣಿ(ನ್ಯೆ?) ರುಕ್ಮಿಣಿ ಕೋಪ- ವನ್ನು ಧರಿಸಲಾಗ 2 ಎಷ್ಟು ಹಣವ ನೀನು ಕೃಷ್ಣಗೆ ಕೊಟ್ಟು ಕೊಂಡಿ ಹೇಳೆ ದಿಟ್ಟತನದ ಮಾತಾಡೋ ರುಕ್ಮಿಣಿ ನಿನ್ನ ಶ್ರೇಷ್ಠತನವೇನ್ಹೇಳೆ 3 ಹತ್ತು ಆರು ಸಾವಿರದಷ್ಟ ಭಾರ್ಯೇರವೊಳಗೆ ಸತ್ಯಭಾಮೆ ಉತ್ಕøಷ್ಟ ಚೆಲುವೆಯೆಂದು ಕೃಷ್ಣ ನಿನ್ನಲ್ಲಿಹನೆ4 ಹದಿನಾಲ್ಕು ಲೋಕದಲಿ ಹರಿ ಪಾದಾಂಬುಜವ ಕಾಂಬುವೋರಿಲ್ಲೆ ಯದುನಾಥನ ಎದೆ ಮ್ಯಾಲ್ಹತ್ತಿರುವೋದು ಇದು ಸೋಜಿಗವಲ್ಲೆ 5 ಇಷ್ಟೆ ಸೋಜಿಗವೆಂದು ಆಡಲು ದಿಟ್ಟೆ ನಿನಗೆ ಅರಿದೆ ಅಷ್ಟದಿಕ್ಪಾಲಕರನೆ ಓಡಿಸಿ ವೃಕ್ಷ ಕಿತ್ತು ಒದರು(ರುವು?) ದಲ್ಲೆ 6 ಜಲಪ್ರಳಯ ಕಾಲದಲಿ ಜನರಿಲ್ಲದ ಅಂಧಕಾರದಲಿ ಎಲೆಯಾಗಾ ಪರಮಾತ್ಮನ ಮನವ ನೀ ಮೊ- ದಲೆ ಒಲಿಸಿಕೊಂಡೆ 7 ಕಾದು ಸೇವಿಸೆ ಹರಿಯ ಪಾದದ- ಲ್ಲಾದರವಿಲ್ಲದಲೆ ದಾನ ಮಾಡುತ ಮುನಿಹಿಂದಟ್ಟಿದರ್ಹರಿ ಹ್ಯಾಗೆ ಬರುವನ್ಹೇಳೆ 8 ಮೂರು ಲೋಕದ ದೊರೆಯ ಮೂರೆಲೆ ತುಳಸಿ- ಸರಿಯ ಮಾಡಿ ಮುಕುತಿದಾಯಕ ಕೈವಶವಾ- ಗಿರಲು ನೀ ಸಕಲ ಮಾಯವ ಬಲ್ಲೆ 9 ಪಟ್ಟದ್ವೊಲ್ಲಭೆ ನಾನು ಕೃಷ್ಣಗೆ ಮೆಚ್ಚಿ ಬಂದೆಯೆ ನೀನು ಅಚ್ಚುತ ತಾ ಪರಮಾನುಗ್ರ(ಹ)ವ ಮಾಡಿ ಬಂ- ದಿಚ್ಛೆಲಿರುವ ತಾನು10 ಮಾತಾಪಿತರು ಅನುಜನನ್ವಂಚಿಸಿ ಈತಗ್ವಾಲೆಯ ಬರೆದು ಯಾತಕಂಜಿಕೆ ವಲಿಸ್ಯೋಡಿ ಬಂದವಳೆಂದು ಕೀರ್ಹೊಗಳುವುದಲ್ಲೆ 11 ತಂದು ಕೊಡಲು ಮಣಿಯ ಸಭೆಯೊಳು ಅಂದು ತಗ್ಗಿಸಿ ತಲೆಯ ನಿಂದ್ಯದ ಮಾತಿಗೆ ತಂದು ನಿಮ್ಮಯ್ಯ ಮುಂದಿಟ್ಟು ಪೋದನೆ ನಿನ್ನ 12 ಕೇಳೊ ಕೇಳೊ ನುಡಿಯ ನೀನೀ- ರೇಳು ಲೋಕದ ಒಡೆಯ ಹೇಳೋ ಬುದ್ಧಿ ನಿನ್ನಯ ವಲ್ಲಭೆ ಮಾತಾ- ಡೋಳೊ ನಿರ್ಭಿಡೆಯ 13 ರಕ್ಕಸಾಂತಕ ಕೇಳೊ ನಿನ್ನ ಚಿಕ್ಕವಲ್ಲಭೆ ಮ(ಹಿ)ಮೆ ಉಕ್ಕಿ ಉಕ್ಕಿ ಎನ್ನ ಮ್ಯಾಲೆ ಬರಲು ನಿನ- ಗಕ್ಕರ ತೋರುವುದೆ 14 ಆರ್ಯಳೆಂದು ನಾನು ತಾಳಿದೆ- ನಕ್ಕ ರುಕ್ಮಿಣಿ ಮಾತ ಏರಿ ಏರಿ ಏನ್ನಮ್ಯಾಲೆ ಬರಲು ಇದು ನ್ಯಾಯವೇನೊ ನಿನಗೆ 15 ನಾಲ್ಕು ತೋಳಿನಿಂದ ಆಲಿಂಗಿಸಿ ಕಾಂತೆಯರಿಬ್ಬರನು ಯಾತಕಿಂಥ ಕದನವು ಘನವಾಯಿತು ಸಾಕು ಸಾಕುಯೆನುತ16 ವಾರಿಜಾಕ್ಷ ಕೇಳೋ ನಾರದ- ರ್ಹೂಡಿದರೀ ಜಗಳ ಪಾರಿಜಾತ ಸರಿಸವತಿಗೆ ಕೊಟ್ಟ- ರಿನ್ಯಾರು ಸೈರಿಸೋರ್ಹೇಳೊ 17 ನಂದನವನ ತರುವ ನಾ ತಂದಿಟ್ಟೆನಂಗಳದಲ್ಲೆ ಅಂದಿಬ್ಬರನಾನಂದವ ಬಡಿಸಿದ ಚೆಂದದಿಂದಲಿ ನಗುತ 18 ಭಾಮೆ ರುಕ್ಮಿಣಿ ಸಹಿತ ನಡುವೆ ಭೀಮೇಶ ಕೃಷ್ಣನು ಕುಳಿತ ಕಾಮನಯ್ಯನ ಚರಿತ್ರೆಯ ಪಾಡ- ಲಮೃತ ಪಾನವು ನಿರುತ 19
--------------
ಹರಪನಹಳ್ಳಿಭೀಮವ್ವ
ಕಂಡು ನಮಿಸಿದೆ ಸತ್ಯಬೋಧ ಮುನಿಯ ಮಂಡೆ ಬಾಗುತ ದೇಹ ದಂಡವಿಕ್ಕುತಲಿ ಪ. ಭವ್ಯ ಬೃಂದಾವನದಿ ವೈಭವದಿ ಮೆರೆವವರ ಸವ್ಯಸಾಚಿಯ ಸಖನ ಪ್ರಿಯ ಪಾತ್ರರ ದಿವ್ಯ ಕೂರ್ಮಾಸನದಿ ಕುಳಿತು ತಪಚರಿಸುವರ ಅವ್ಯಯಾತ್ಮನ ಚರಣ ಧ್ಯಾನ ಮಾಳ್ಪವರ 1 ವಿಷವಿಡಲು ಪಾಪಿಗಳು ರಾಮಗರ್ಪಿಸಿ ಭುಜಿಸೆ ನಿಶಿಯಲ್ಲಿ ನಿದ್ರೆ ಜೈಸುತ ನಿತ್ಯದಲಿ ಹಸನಾಗಿ ದೇವತಾರ್ಚನೆ ಭೋಜನವಗೈಯೆ ದೂಷಿಸಿದ ಕುಜನರಿಗೆ ರಾತ್ರೆ ಸೂರ್ಯನ ತೋರ್ದ 2 ಕಾಶಿಗ್ಹೋಗುವೆನೆಂಬ ಆಸೆ ಪೂರೈಸುವೊಡೆ ತಾ ಸ್ವಪ್ನದಲಿ ಬಂದು ಜಾಹ್ನವಿಯು ಪೇಳೆ ರಸರಹಿತವಾದ ವೃಕ್ಷದಿ ಗಂಗೆಯನೆ ತರಿಸಿ ತಾ ಸ್ನಾನಗೈದು ಭಾಗೀರಥಿಯ ಪೂಜಿಸಿದ3 ಪೇಳಲಳವಲ್ಲದಿಹ ಬಹಳ ಕೌತುಕ ಮಹಿಮೆ ಕಾಲಕಾಲಕೆ ತೋರಿ ಭಕ್ತರನು ಕಾಯ್ದು ಮೇಲಾದ ಮಧ್ವ ಶಾಸ್ತ್ರಾರ್ಣವದಿ ಈಜುತಲಿ ಲೀಲೆಯಿಂದಲಿ ಮಾಯ್ಗಳನೆ ಗೆದ್ದ ಮಹಿಮ 4 ಪ್ರತಿವರ್ಷ ಪಾಲ್ಗುಣದಿ ದ್ವಿತೀಯ ಪಕ್ಷದಿ ದ್ವಿತೀಯ ತಿಥಿಯಲ್ಲಿ ದಿವ್ಯ ಉತ್ಸವ ಕೊಳುತ ಸತತ ಈ ಸವಣೂರು ಕ್ಷೇತ್ರದಲಿ ನೆಲಸುತಲಿ ಚ್ಯುತರಹಿತ ಗೋಪಾಲಕೃಷ್ಣವಿಠ್ಠಲನ ಭಜಿಪೆ5
--------------
ಅಂಬಾಬಾಯಿ
ಕಥನಕಾವ್ಯಗಳು ಶ್ರೀ ವೆಂಕಟೇಶ ಪಾರಿಜಾತ ಅಧ್ಯಾಯ ಒಂದು ಶ್ರೀಪತಿರ್ಭೃಗುಣಾ ಸರ್ವಲೋಕೋತ್ಕøಷ್ಟ ಇತೀ ಪಿತ: ಗೋಕ್ಷೀರ ಸಿಕ್ತ ಸರ್ವಾಂಗೋ ವಲ್ಮೀಕಸ್ಥ: ಶುಭಂ ದಿಶೇತ | ಶ್ರೀಸಹಿತ ಶ್ರೀವೆಂಕಟೇಶಗೆ ಸಾಸಿನಾರತಿ ಮಾಡಿ ಬೇಡುವೆ ಭಾಷೆ ಭಾಷೆಗೆ ಎನಗೆ ಬುದ್ಧಿವಿಕಾಸ ಕೊಡುಯಂದು ಕರಮುಗಿದು ಬೇಡುವೆ ದಾಶರಥಿ ನಿಜದಾಸ ಕಲ್ಲೊಳ್ಳೀಶಗೊಂದಿಸುವೆ 1 ಸಂತತಿಗೆ ನತಿಸುವೆ ಐಜಿ ವೆಂಕಟರಾಮವರ್ಯರ ಪೂಜೆಯಲ್ಲಿರುವೆ ಜಗತಿಯಲಿ ಜನಿಸಿ ಅವರಾ ಪೂಜಿತಾಖ್ಯವು ವಹಿಸಿದವರನು ಪೂಜಿಸುವೆ ಬಿಡದೆ2 ಪೊಂದಿ ಆ ಗುರು ಪುತ್ರರಾಗಿರುವ ವಿಷ್ಣುತೀರ್ಥರನು ನಮಿಪೆ ಮತ್ತೆ ಸ್ವೋತ್ತಮರಾಗಿ ಇರುವ ಗುರುಗಳಿಗೊಂದಿಸುತ ಸ ರ್ವೋತ್ತಮಾನಂತಾದ್ರಿ ರಮಣನ ಮಹಿಮೆ ಪೇಳುವೆನು3 ವಚನ ಬುದ್ಧಿ ಪೂರ್ವಕ್ಹಿಂ ಸಂಪೂರ್ಣ ಸರ್ವ ದೇವೋತ್ತಮನು ಇರುವನ್ಯಾರೆಂದು ತಿಳಿ ಸರ್ವಲೋಕದಲಿ ಕೇಳಿ ಪೂರ್ವದಲ್ಲಿ ಪೋದ ಪೂರ್ವಿಕನÀ ಮನೆಯಲ್ಲಿ ಗರ್ವ ಅವನಲ್ಲಿ ಕಂಡು ಇರುವ ನಡೆದನಲ್ಲಿ 1 ನೋಡಿದನು ಆಗಲ್ಲಿ ಪ್ರೌಢೆ ಪಾರ್ವತಿಯು ಮಾತಾಡಿದಳು ನಾಚುತಲಿ ಬೇಡಬಿಡು ಪ್ರಾಣೇಶ ನೋಡು ಭೃಗು ಮುನಿಬಂದ ಬೇಡಿಕೊಂಬುವೆನೊ ಗಾಢನೆ ಕಣ್ಕೆಂಪು ಮಾಡಿ ಮುನಿಯಿದ್ದಲ್ಲಿ ಓಡಿಬಂದನು ಪೂಜೆಯ ಬೇಡ ಈ ಲೋಕದಲಿ ನೋಡಿ ಲಿಂಗವ ಪೂಜೆ ಮಾಡಲಿ ಜನರು 2 ಪರಿ ಶಾಪ ಮೆಟ್ಟಿದನು ವೈಕುಂಠ ಥಟ್ಟನೆ ಮತ್ತಲ್ಲಿ ದಿಟ್ಟ ದೇವನ ಕಂಡ ಪಟ್ಟದರಸಿಯಕೂಡಿ ಧಿಟ್ಟಾಗಿ ಮಲಗಿರಲು ಸಿಟ್ಟಿಲÉೂದ್ದನು ಒಳ್ಳೆ ಪೆಟ್ಟು ಅವನೆದಿಗೆ ಮುಟ್ಟಿ ಮುನಿ ಪಾದವನು ತುಷ್ಟನಾಗಿ 3 ಧ್ವನಿ ಮೇಲಿಷ್ಟು ಸಿಟ್ಟು ಕಾರಣ ಪೇಳಿಷ್ಟು ತಪ್ಪಿತು ಕ್ಷಮಿಸಿಷ್ಟು 1 ಎಳ್ಳುಕಾಳಷ್ಟು ನೊಂದು ಕೊಂಡಿದ್ದಾವು ಎಷ್ಟೋ 2 ಧರೆಯೊಳಗೆ ದ್ವಿಜರಿಗೆ ಸರಿಯಾರು ಇಲ್ಲೆಂದು ಬರುವುದು ಭಯ ಬಹಳಷ್ಟು ವರದಾನಂತಾ ದ್ರೀಶನ ಪರಮ ಭಕ್ತರಿಗೆ ಬರಬಾರದೆಂದಿಗೂ ಸಿಟ್ಟು 3 ವಚನ ಇಂದಿರಾಪತಿಯು ಹೀಗೆಂದು ಮುನಿಪಾದಂಗಳÀÀÀ ಚಂದದಿಂದಲಿ ಒತ್ತಿತ್ವರದಿಂದ ಉಷ್ಣೋದಕವನು ತಂದು ತೊಳೆಯುತ ಇಂದು ಪಾವಿತನಾದೆನೆಂದು ಹರುಷದಲ್ಲಿ ಮುಂದೆ ಭೃಗುಮುನಿಯು ಮುಕುಂದನ ಸರ್ವರಿಂದಧಿಕ ಸತ್ಯತಿಳಿರೆಂದ ಮುನಿಗಳೆಲ್ಲ ಮುಂದೆ ವೈಕುಂಠದಲಿ ಇಂದಿರಾದೇವಿ ಗೋವಿಂದನಾಟವ ಕಂಡಂದಳೀ ಪರಿಯು1 ರಾಗ:ಮೋಹನ ಕಲ್ಯಾಣಿ ಆದಿತಾಳ ಹರಿಯೆ ಪೋಗುವೆ ನಾನು ಮುನ್ನಿರುತಿರು ಒಬ್ಬನೇ ನೀನು ತಿರುಕನಾಗಿ ಇರುತಿರುವ ಭೂಸುರನು ಭರದೊಳೊದ್ದ ನಿನ್ಹಿರಿಯತನವೇನು ಪ ನಿನ್ನ ಶ್ರೀವತ್ಸವಿದು ಬಹು ಮಾನ್ಯವು ಎಂದೆನಿಸುವುದು ಮಾನ್ಯ ವಾಗಿಹುದು 1 ಬಡವ ಬ್ರಾಹ್ಮಣರಿಂದ ನೀ ಕಡೆಗೆ ಕೂಡಿರು ಚಂದಾ ಮಡದಿಯ ಹಂಬಲ ಬಿಡುದೂರದಿಂದ ತಡಮಾಡದೆ ನಾ ನಡದೆ ಗೋವಿಂದಾ 2 ಇನ್ನೆನ್ನ ಗೊಡವ್ಯಾಕೊ ಬಿಡು ನಿನ್ನ ಸಂಗತಿ ಸಾಕು 3 ಎನ್ನ ವೈರಿಗಳ ಮನ್ನಿಸುವ್ಯಾಕೋ ನನ್ನಿಚ್ಛೆಯಲಿ ನಾ ಇನ್ನಿರಬೇಕೊ 4 ಹಿಂದಕೆ ಕುಂಭೋದ್ಭವನು ಎನ್ನ ತಂದೆಯ ನುಂಗಿದ ತಾನು ಅಂದಿಗೆ ಎನಗಾನಂದವು ಏನು 5 ಮತ್ತೆನ್ನ ಸೊಸೆಗವರು ಬಹು ಭಕ್ತಿಯಲಿ ಪೂಜಿಸುವರು ವೈರಿಯವರ್ಹೊರತು ಇನ್ಯಾರು 6 ಹುಡುಗ ಬುದ್ಧಿಯು ಎಂದು ನಾ ಕಡೆಗೆ ಬಲ್ಲೆನು ನಿಂದು ಮಡುವ ಧುಮುಕಿ ಕಲ್ಪಡೆಯ ಪೊತ್ತಿಹುದು ಪಿಡಿದು ಭೂಮಿಯ ಕಂಭ ಒಡೆದು ಬಂದಿಹುದು 7 ಬಡವ ಬ್ರಾಹ್ಮಣನಾದಿ ಚಪಗೊಡಲಿಯ ಕೈಯಲಿ ಪಿಡಿದಿ ಮಡದಿಯ ಕಳಕೊಂಡು ತುಡುಗ ನೀನಾದಿ ಹಿಡಿದು ಬತ್ತಲೆ ಖೊಟ್ಟಿ ಕಡವನೇರಿದಿ 8 ಎಷ್ಟು ಪೇಳಲೆ ನಿನಗೆ ನೀನೆಷ್ಟು ಮಾಡಿದಿ ಹೀಗೆ ಅಷ್ಟು ಮನಸಿನೊಳಗಿಟ್ಟುನೂ ಆಗ ಕಟ್ಟಕಡಿಗೆ ಬಲು ಸಿಟ್ಟು ಬಂತೆನಗೆ 9 ಎಲ್ಲರಿಗುತ್ತಮ ನೀನು ಎಂದಿಲ್ಲಿದ್ದೆ ಮೋಹಿಸಿನಾನು ಬಲ್ಲಿದನಂತಾದ್ರಿಯೊಳಿರು ನೀನೆ 10 ರಾಗ:ಸಾರಂಗ ಆದಿತಾಳ ಪರಿ ಕಲಹ ಮಾಡಿ ತ್ವರಿತದಿಂದ ನಡೆದಳು ಕರವೀರಪುರಕೆ ಪ ಪರಮಾತ್ಮನು ತಾ ಮುಂದೀಪರಿ ಚಿಂತಿಸುತಿಹನು ಸಿರಿಯಿಲ್ಲದ ವೈಕುಂಠ ಸರಿಬಾರದು ಎನಗೆ1 ದೀನನಾದೆನು ಹಾ ನಾನು ಕಾಣುವೆನೆಂದು ಪ್ರಾಣ ನಿಲ್ಲದು ಪಟ್ಟದ ರಾಣಿಯ ಬಿಟ್ಟು 2 ಇನ್ಹ್ಯಾಂಗೆ ಇರಲಿ ಇನ್ನಾಕೆಯ ಹೊರತು ಕಣ್ಣಿಗೆ ವೈಕುಂಠಾರಣ್ಯ ತೋರುವುದು ಇನ್ನೆಲ್ಹೋಗಲಿ ಎಂದು ಬಂದ ತನ್ನಿಂದ ತಾನು3 ಶ್ರೀ ವೈಕುಂಠಕಿಂತ ಶ್ರೀ ವೆಂಕಟಗಿರಿಯು ಅಧಿಕವೆಂದು ಭಾವಿಸೀ ಪರಿಯು ಆವತ್ತಿಗೆ ಬೇಗಲ್ಲೇ ತಾ ವಾಸಕೆ ನಡೆದ ದೇವ ತಿಂತ್ರಿಣೆಯೆಂಬೋ ಆ ವೃಕ್ಷವಕಂಡ 4 ಅಡಗಿದ ಮೆಲ್ಲನೆ ಪೋಗಿ ಅಲ್ಲ್ಯಾದೇಶದಲೊಬ್ಬ ಜೋಳಾಖ್ಯನು ಎಲ್ಲರಿಂದಲಿ ತನ್ನ ಪುರದಲ್ಲೆ ಇರುವಾ5 ಶಿವನ ಕರುವಿನ ಮಾಡಿ ತಾನಾಕಳಾಗಿ ಅವನ ತಾಯಿಯು ಲಕ್ಷ್ಮೀ ಅವನ ಮಾರಿದಳು ಕೊಂಡ 6 ನಿತ್ಯ ವರಸಾಧು ಗುಣದಿಂದ ಸರಸಾಗಿ ಕೂಡಿ ಚರಿಸಿ ಬರುವುದು ವೇಂಕಟಗಿರಿಗ್ಹೋಗಿ ನಿತ್ಯ7 ಬಂದ ಕಾರಣವೇನು ಎಂದು ಸ್ಮರಿಸುತಲಿ ಇಂದಿರೇಶಗೆ ಭಕ್ತಿಯಿಂದ ಕ್ಷೀರವನು ಚಂದಾಗಿ ಕರೆವುದು ಬಂದು ಹುತ್ತಿನಲಿ 8 ಹಿಂಡದು ತನ್ನ ಕರುವಿನ ಪರಿ ರಾಜನ ಹೆಂಡತಿಯ ಆಗ ಚಂಡ ಕೋಪದಿ ಗೋಪನ ಕಂಡಂದಳು ಹೀಗೆ 9 ವಚನ ನೀ ಏನು ಮಾಡುವಿನಿತ್ಯ ಕುಡಿವುದೋ ವತ್ಸ ಏನುಮಾಡು ಪ್ರಾಣಕೊಂಬುವೇನು ತಾನು ಗಾಭರಿಗೊಂಡು ಧ್ಯಾನಿಸುತ ಆ ರಾಜ ಮಾನಿನಿಗೆ ನುಡಿದ ಬಹು ದೀನನಾಗಿ 1 ರಾಗ:ದಂತಿ ಆದಿತಾಳ ಅರಿಯೆ ತುರುಗಳ ಕಾಯ್ಕೊಂಡು ಬರುವೆ ನಾ ಇದಹೊರ್ತು ಪ ಕಟ್ಟುವರ್ಯಾರೊ ಅರಿಯೆ ಬರಿದೆ ನೀ ಎನ್ನ ಮೇಲೆ ಹರಿಹಾಯುವದ್ಯಾಕೆ ಅರಿಯೆ 1 ಪಾಲಾಗುವುದೊ ಅರಿಯೆ ಸರಸಾಗಿ ತಿಳಿನೀನು ನೆರೆಯೊರೆಯವರನಾ ಅರಿಯೆ 2
--------------
ಅನಂತಾದ್ರೀಶ - ಕಥನಕಾವ್ಯಗಳು
ಕಥನಾತ್ಮಕ ಹಾಡುಗಳು ನೋಡಬನ್ನಿರಿ ಕಾರ್ಪರೇಶನ ಪಾಡಿರೈ ಸರ್ವೇಶನಾ ರೂಢಿಯೊಳು ಶೇಷಾದ್ರಿನಿಲಯನ ಕೂಡಿಕೊಂಡಿಲ್ಲಿರುವನ ಪ ಚಿಪ್ಪಗಿರಿ ದಾಸಾರ್ಯರೀತರು ಪಿಪ್ಪಲವ ಕಂಡಾಗಲೇ ಕಾರ್ಪರಾರಣ್ಯೆಂಬ ಪದದಿ ಸಂಕ್ಷಿಪ್ತ ಮಹಿಮೆಯ ಪೇಳ್ದರು 1 ಅಪರದಿಗ್ಭಾಗದಲಿ ನೋಡಲು ಸಪತ ಋಷಿಗಳ ಸ್ಥಾನವು ತ್ರಿಪಥಗಾಮಿನಿ ವ್ಯಕ್ತಳಾದಳು ತಪಕೆ ವಿಶ್ವಾಮಿತ್ರರ 2 ಯತ್ರಶ್ವೇತ ಶೃಂಗ ಕೃಷ್ಣಾಚೋತ್ತರ ವಾಹಿನಿಯೊಳು ತತ್ತದಾನ ಸ್ನಾನ ಕಾಸಿಗೆ ಉತ್ತಮವು ಫಲವೀಯಲು 3 ಚಾರುಕೃಷ್ಣಾತೀರವಿದರೊಳು ಕಾರ್ಪರಾಖ್ಯ ಮುನೀಂದ್ರನಾ ಘೋರತಪ ಕೊಲಿದರಳೆ ಮರದಾಗಾರನೆನಿಸಿದ ಧೀರನ 4 ನೀರಜಾಸನ ಮುಖ್ಯ ಸುರ ಪರಿಹಾರ ಸೇವಿತ ಚರಣನ ಸೇರಿದವರಘ ದೂರ ಮಾಡುವ ಘೋರನರಹರಿ ರೂಪನ 5 ಇಂತು ಅಶ್ವತ್ಥಾಂತರದಿ ಸಿರಿಕಾಂತನರಿಯನೆ ವಿಪ್ರರೊಳ್ ಶಾಂತ ನಾರಪ್ಪಯ್ಯನೆಂಬ ಮಹಾಂತರಿಲ್ಲಿರುತಿಪ್ಪರು 6 ದೊಡ್ಡವರ ಗುರುತರಿಯದಿವರನು ದಡ್ಡರೆನ್ನುತ ಭ್ರಾತ್ರರು ದೊಡ್ಡ ಕೃಷ್ಣಾನದಿಯೊಳಿವರನು ಕಟ್ಟಿ ಹಾಕಲು ಕೋಪದಿ 7 ಕಡಲಶಯನನ ಕರುಣದಿಂದಲಿ ದಡಕೆ ಸೇರಿದನಂತರ ದೃಢ ವಿರಾಗದಿ ವೆಂಕಟಾದ್ರಿಗೆ ನಡೆದರಾಗಲೆ ಹರುಷದಿ 8 ಶುಭ ಪಂಕಜ ಷಟ್ವದಾಯಿತ ಚಿತ್ತರು ಕೃಷ್ಣನಿರುತಿಹ ಬೆಟ್ಟದಡಿಯನು ಮುಟ್ಟಿಮಲಗಲು ಸ್ವಪ್ನದಿ9 ಇಲ್ಲಿ ದರ್ಶನವಿಲ್ಲ ನೀವಿರುವಲ್ಲಿ ಪುಣ್ಯಸ್ಥಾನವು ಪೋಗಿರೋ ಭೂಸುರ 10 ಧೇನು ರೂಪದಿ ಬರುವೆ ಕಾರ್ಪರ ಕಾನನದ ಅಶ್ವತ್ಥದಿ ಕಾಣುವುದು ಕ್ಷೀರಾಭಿಷೇಚನ ಧ್ಯಾನಿಸೆನ್ನನು ದ್ವಿಜವರ 11 ಇಂತುಸ್ವಪ್ನದಿ ಸೂಚಿಸಿದ ವೃತ್ತಾಂತವನು ಸಂಚಿಂತಿಸಿ ಕಂತು ಜನಕನ ಇಚ್ಛೆಯಿಂದಲೆ ಸಂತಸದಿ ಗಿರಿಗೊಂದಿಸಿ 12 ಮುಂದೆ ನಡೆದರು ಹಿಂದೆ ಗೆಜ್ಜೆಗಳಿಂದ ಬರುತಿಹ ಗೋಗಳ ಗೋವಿಂದನಂಘ್ರಿಯ ಸ್ಮರಿಸುತ 13 ಕುರುಕಿ ಹಳ್ಳಿಯ ಗ್ರಾಮದಿ ತಿರುಮಲೇಶನ ಕಂಡರು 14 ಗುರುತನು ಕಾಣುತ ಬಂದನು ಎನ್ನುತ 15 ಮುನಿವರನು ಸುಖದಿಂದಿರುತಿರೆ ತಿರೆ 16 ಬಂದರಲ್ಲಿಗೆ ತಮ್ಮ ಗ್ರಾಮದ ಬಂಧು ಬಾಲಕರೆಲ್ಲರು ಕಾಯುವದೆನುತಲಿ 17 ಚಾರು ಶಿಲೆಯೊಳಗೊಂದುದಿನ ಅಂಗಾರದಲಿ ಪ್ರಾಣೇಶನ ಪರಿಹಾರನುನಿಮಗೆಂದರು 18 ಪಾದ ನಿಷ್ಠೆಯಿಂದಲಿ ಸೇವಿಸೆ ಸಿದ್ಧಿಗಳಾಗ್ವವು 19 ನಾರಪ್ಪಯ್ಯರೆಂಬ ಮಹಾತ್ಮರು ಹರಿ ಸಂತತ 20 ಧರಣಿಯನು ಸಂಚರಿಸುತ ಚೆನ್ನೂರ ಗ್ರಾಮದಿ 21 ತೋರಿತಂದಿನ ರಾತ್ರಿಯೋಳ್ ಮಹಿಮೆಯಾ 22 ಭೂಪನ ಸ್ಪಪ್ನದಿ ತರುವನು ತೋರಿಸಿ 23 ಕಟ್ಟಿಸೆಲೊ ಭೂಪತಿಯೆ ಮಂದಿರ ಕೃಷ್ಣವೇಣಿಯ ಗರ್ಭದಿ ಶ್ರೇಷ್ಠನೆನ್ನಯ ಕರುಣದಿ 24 ಸುಪ್ರಭಾತದಲೆದ್ದು ನೃಪತಿಯು ಸ್ವಪ್ನಸೂಚಿತ ಸ್ಥಾನವ ಕ್ಷಿಪ್ರ ನೋಡುವೆನೆನುತ ಸೈನ್ಯದಿ ಕಾರ್ಪರಕೆ ಬಂದಿಳಿದನು25 ಆನೆಗಳು ಕಟ್ಟಿರುವ ಶಿಲೆಗಳು ಕಾಣಿಸುವ ವೀಗಾದರು ನನಸೇವಿಸಿದನು 26 ಮಂದಿರವಮೇಲ್ ನಿರ್ಮಿಸಿ ಇಂದಿರೇಶನ ಪದಕೆ ಭೂಸಂಬಂಧ ವೃತ್ತಿಯನೊಪ್ಪಿಸಿ27 ಹಿಂದೆ ನೋಡಲು ಚಂದ್ರಶೇಖರ ನಂದಿಪತಿ ಮಂದಿರಗಳು ವಂದೇ ವತ್ಸರದೊಳಗೆ ಶಿಲ್ಪಿಗಳಿಂದ ಕಟ್ಟಿದ ಶಿಲೆಗಳು 28 ವೃಷ್ಟಿಯ ಮಹಿಮೆಯ ಕಾಮಿತಾರ್ಥವನೀವುದು 29 ಮಾಸ ದೊ ಶರಧಿ ಸೇರುವ ಸಮಯದಿ 30 ಷೋಡಶ ಕರಗಳಿಂ ಹೊರಟನು ವೃಕ್ಷದಿ31 ತೀರ್ಥ ಸ್ನಾನದ ನರಹರಿ ದರ್ಶನ 32 ದಕ್ಷಿಣಾಯನ ಪರ್ವದಲಿ ಈ ವೃಕ್ಷದೆಡೆಯಲಿ ಸ್ನಾನವು ಮೋಕ್ಷ ಮಾರ್ಗಕೆ ಸಾಧನವು ಪ್ರದಕ್ಷಿಣಾದಿಕಮೆಲ್ಲವು33 ಮಂದಿರವ ಕಾಣುತಲೆ ಶ್ರೀಗೋವಿಂದ ಗೋವಿಂದೆನುತಲಿ ಬಂಧು ವರ್ಗ ಸಮೇತ ಭಕುತರ ವೃಂದ ಬರುವದು ನೋಡಿರೈ34 ಪಾಲಿನಭಿಷೇಕದಿ ಅರ್ಚನ ಪಾಲಕಿಯ ಸೇವಾವಧಿ ವಾಲಗವ ಕೈಕೊಳುತ ಭಕುತರ ಪಾಲಿಸುವ ನರಸಿಂಹನ 35 ವಾರವಾರಕೆ ಭಕ್ತಜನ ಪರಿವಾರ ಸೇವೆಯಕೊಳ್ಳುತ ಘೋರತರ ಸಂಸಾರ ಭಯಪರಿಹಾರ ಮಾಡುವ ದೇವನ 36 ತಪ್ಪದಲೆ ಪ್ರತಿವರ್ಷ ದ್ವಿಜ ಸಂತರ್ಪಣಾದಿಗಳಿಂದಲಿ ಕೊಪ್ಪರದಿ ನವರಾತ್ರ ಮೊದಲಾದುತ್ಸವಾದಿಗಳಾಗ್ವವು 37 ಹಿಂದೆ ಚಾತುರ್ಮಾಸ್ಯ ಕಾಲವು ಬಂದಿರಲು ವಿಭುದೇಂದ್ರರು ಬಂದರಿಲ್ಲಿಗೆ ಶಿಷ್ಯರಾದ ಯತೀಂದ್ರ ನಾರಾಯಣಾರ್ಯರು38 ಆ ಸಮಯದಿ ರಘುನಾಥ ತೀರ್ಥ ಯತೀಶರಿಲ್ಲಿಗೆ ಬಂದರು ತೋಷದಲಿ ವಿಭುದೇಂದ್ರ ತೀರ್ಥಮುನೀಶರವರಿಗೆ ಪೇಳ್ದರು39 ವೃಕ್ಷದಲಿ ಸನಿÀ್ನಹಿತ ನರಹರಿಯಕ್ಷನೆದುರಿಗೆ ನಮ್ಮಯ ಶಿಷ್ಯರೋದುವ ಗ್ರಂಥದರ್ಥ ಪರೀಕ್ಷೆ ಮಾಡಿರಿ ಎಂದರು40 ಮೌನಿರಘುನಾಥಖ್ಯರವರನು ಏನು ಓದುತಿರೆನ್ನಲು ಆನುಪೂರ್ವಿ ಸುಧಾಖ್ಯ ಗ್ರಂಥಾರ್ಥಾನುವಾದವ ಮಾಡಲು41 ಮೇದಿನಿಯಲಿ ವಾದಿಜಯ ಸಂಪಾದಿಸಿರಿ ನೀವೆಂದರೂ ಸಾದರದಿ ನಿಮಗೆಲ್ಲ ಜನ ಶ್ರೀಪಾದರಾಜರು ಎನ್ನಲಿ42 ಸೇವೆಯ ಮಾಡಲು ಒಂದು ವತ್ಸರದೊಳಗೆ ಸತ್ಯಾನಂದ ಯತಿಗಳ ಜನನವು43 ಸತ್ಯಧರ್ಮರು ಬಂದರೀ ಸುಕ್ಷೇತ್ರದರ್ಶನ ಮಾಡಲು ಮುತ್ತಿನ್ಹಾರವ ಪದಕ ಸಹಿತಾಗಿತ್ತರೀ ನರಸಿಂಹಗೆ 44 ಇದ್ದರಿಲ್ಲಿ ಜ್ಞಾನವೃದ್ಧ ಜನಾರ್ದನಾಭಿದ ಒಡೆಯರು ಶುದ್ಧ ಮನದಲಿ ನರಹರಿಯ ಪದಪದ್ಮ ಸೇವೆಯ ಮಾಡುತ45 ಬಿಡದೆ ತಪವಾಚರಿಸಿ ಕಾರ್ಪರದೊಡೆಯನನುಪಮ ಕರುಣವ ನಿತ್ಯದಲಿ ಪರಿಶುದ್ಧ ಮಧುಕರ ವೃತ್ತಿಯಿಂ ತಂದನ್ನವ ಎತ್ತಿ ವೃಕ್ಷಕೆ ಕಟ್ಟುವರು ಇದು ಬುತ್ತಿ ನಾಳೆಗೆ ಎನ್ನುತ47 ಪನ್ನಗಾರಿ ಧ್ವಜನಿಗರ್ಪಿಸಿ ಉಣ್ಣುತಿಹರಾನಂದದಿ48 ಮಂದಮತಿ ಭೂದೇವನೊಬ್ಬನು ನಿಂದೆ ಮಾಡಿದನಿವರನು ತಂದು ಕಟ್ಟಿದ ಅನ್ನ ತಂಗಳೆಂದು ತಿಳಿಯದೆ ಉಂಬರು 49 ನಿಂದೆ ಮಾಡಿದ ವಿಪ್ರನನು ಕರೆಸೆಂದರರ್ಚನ ಸಮಯದಿ ತಂದು ವೃಕ್ಷದಿ ಕಟ್ಟಿದನ್ನವ ತಂದು ಕೆಳಗಿಡಿರೆಂದರು 50 ಪೋಗಲು ವಿಪ್ರನು ಕೆಳಗಿಂತೆಂದರು
--------------
ಕಾರ್ಪರ ನರಹರಿದಾಸರು
ಕರುಣಾಲವಾಲ ಜಿಷ್ಣುಪರಿಪಾಲ ವಿಷ್ಣು ವಿಶ್ವವ್ಯಾಪಿಸಕಲ ದೃಷ್ಟಾದೀಶ ಕೃಷ್ಣಲೋಲ ಪ. ಪೊಳೆವ ಗರುಡ ಸ್ಕಂಧವೇರಿ ಘಳಿರನೆ ಪೋಗಿ ಜಲಜವ ಹರಿಸೆ ದೈತ್ಯ ಬಲವಕೊಂಡು ಬಂದ ಮುರನ ಥಳಥಳಿಪ ಚಕ್ರದಿಂದ ತಲೆಯ ಭೂಮಿಗಿಳಿಸಿ ಮೆರೆದ 1 ಧುರದಿ ಮಂತ್ರಿ ಸುತರ ತರಿದು ಕರಿಯನೇರಿ ಖತಿಯ ತಾಳ್ದ ನರಕನನ್ನು ನಳಿನಾಂಬಕಿಯ ಕರದಿ ಭಂಗಿಸಿ ಸರಸಿಜ ಸಂಭವದತ್ತ ವರದಿ ಸಕಲ ಸುರರ ಗೆಲಿದ ಗರುವನನ್ನು ನಿಲಿಸಿ ಕ್ಷಣದಿ ಶಿರವ ಚಂಡನಾಡಿದವನೆ 2 ಧಾತ್ರಿದೇವಿ ಬಂದು ನಾನಾ ಸ್ತೋತ್ರ ಗೈಯೈ ಕರುಣದಿಂದ ಪಾತ್ರಗೊಲಿದು ಸತ್ರಾಜಿತನ ಪುತ್ರಿ ಒಡಗೊಂಡು ಸುತ್ರಾಮ ಮಂದಿರವನೈದಿ ಚಿತ್ರ ತಾಟಂಕಗಳ ದಿತಿಗೆ ಪುತ್ರ ತಾನೆಂದಿತ್ತ ಶ್ರೀಕಳತ್ರ ನಿನ್ನ ನಂಬಿರುವೆನು 3 ಸೌಂದರ್ಯಸಾರೈಕ ನಿಲಯಾ ನಂದಬೋಧಾಧಾರಮೂರ್ತಿ ಇಂದಿರಾವತಾರೆ ಭಾಮೆ ಎಂದ ನುಡಿ ಕೇಳಿ ಮಂದಹಾಸದಿಂದ ನಗುತ ಮಂದವಾಯು ಸುಳಿವ ಸುರರ ನಂದನದೊಳಿಂದುಕಿರಣ ಛಂದದೊಳಾನಂದಗೊಂಡ 4 ವಾರಿಜಾಕ್ಷಿಯೆಂದ ನುಡಿಗೆ ಧೀರತನವ ತೋರಿ ದೇವ ಪಾರಿಜಾತ ವೃಕ್ಷವ ಸರ್ಪಾರಿ ಮೇಲಿರಿಸಿ ಸಾರೆ ಸ್ವರ್ಗನಾಥ ಸ್ವಪರಿವಾರ ಸಹಿತ ತಡಿಯೆ ಗೆದ್ದು ದ್ವಾರಾವತಿಗೆ ಪೋಗಿ ಮೆರದ ನೀರಜಾಕ್ಷ ವೆಂಕಟೇಶ 5
--------------
ತುಪಾಕಿ ವೆಂಕಟರಮಣಾಚಾರ್ಯ
ಕರ್ಮ ಬೇರೆ | ಬ್ರಹ್ಮದೊಳಗೆ ಕ್ರಿಯಾಕರ್ಮವಿಲ್ಲ |ಕರ್ಮ ಬ್ರಹ್ಮವಲ್ಲ ಪ ಶಿವನೊಳು ನೋಡಲು ಜಗವೇ ಇಲ್ಲ | ಜಗ ಶಿವನಲ್ಲ. ಶಿವನೂ ಜಗವೂಎಂಬೊ ಮಾತು ಸಲ್ಲ | ಅರಿದಾತನೆ ಬಲ್ಲ 1 ಬೀಜದಿ ನೋಡಲು ವೃಕ್ಷವೆ ಇಲ್ಲ | ವೃಕ್ಷಬೀಜವಲ್ಲ | ವೃಕ್ಷ ಬೀಜದಿ ಫಲಸ್ವಾದವಿಲ್ಲ |ತಿಂದಾತನು ಬಲ್ಲ 2 ಪಾಮರ ನರರೆಲ್ಲ ಭವತಾರಕನ ಭಕ್ತರಲ್ಲ | ಭವತಾರಕನ ಭಕ್ತನು ನರನಲ್ಲ | ಗುರುನಾಥನೆ ಬಲ್ಲ 3
--------------
ಭಾವತರಕರು
ಕಂಸಾರಿ ಬೇಗ ಬಾರೋ ಹರಿ ಭೇಷಜ ಕೃಷ್ಣ ಪ. ಸಾಗರ ಶಯನ ಮನೋಗತ ಫಲಕಾರಿ ಅಕ್ರಮದಲಿ ಬರುವ ಭಯಂಕರ ವಕ್ರ ಮುಖವ ತೋರುವ ಹರಿವು ಚಕ್ರವ ಕರಧೃತ ಚಕ್ರದಿ ತರಿದು ಪರಾಕ್ರಮವ ತೋರಿ 1 ದಾಸರ ರಕ್ಷಿಪುದು ಎಂದಿಗು ಶ್ರೀನಿ- ವಾಸ ನಿನ್ನಯ ಬಿರುದು ದ್ವೇಷಿ ಜನರ ಮೂಲ ನಾಶಗೈದನುಗಾಲ ಶ್ರೀಶತ್ವದ ಸೇವಾವಾಸನ ಬೆಳಸುತ್ತ 2 ನೀ ನೆಟ್ಟು ಬೆಳಸಿರುವ ವೃಕ್ಷವನು ನಿ- ಧಾನದಿಂದಲಿ ಪೊರವ ಮಾನ ನಿನ್ನದು ಪದ್ಮಮಾನ ವೆಂಕಟರಾಜ ದೀನ ಬಂಧು ನಿನಗೇನ ಪೇಳುವದಿನ್ನು 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾವೇರಿ ಕಲುಪಾಪಹಾರಿ ಪಾವನ ಶರೀರೆ ಶುಭತೋಷಕಾರಿ ಪ ವಾಸುದೇವ ರಂಗೇಶನಾಲಯಕೆ ನೀ ನಾವರಣಳಾಗಿಪ್ಪೆ ವಿರಜೆಯಂತೇ ದೇವ ಋಷಿ ಗಂಧರ್ವ ಪಿತೃಪ ನರವರರಿಂದ ಸೇವನೀಯಳಾಗಿ ಸರ್ವಾರ್ಥ ಪೂರೈಪೆ 1 ಜಲಚರಾನ್ವೇಷಣ ಲುಬ್ಧ ಸಾಲಿಗ್ರಾಮ ತುಲಸಿ ವೃಕ್ಷವನೆ ಕೊಡಿಸಿದ ಮಾತ್ರದೀ ಕಲುಷರಾಶಿಗಳೆಲ್ಲ ಕಳೆದು ಮುಕ್ತಿಯನಿತ್ತೆ ಸಲಿಲಮಂದಿರೆ ನಿನ್ನ ಕರುಣಕೇನೆಂಬೆ 2 ರವಿ ತುಲಾರಾಶಿಗೈದಿದ ಸಮಯದೊಳಗೊಂದು ಮಜ್ಜನ ಗೈವ ಮಾನವರಿಗೆ ಪವನಾಂತರಾತ್ಮಕನ ಪಾದಕಮಲವ ತೋರಿ ಭವಜ ರೋಗವ ಕಳೆದು ಭಾಗ್ಯವಂತರ ಮಾಳ್ಪೆ 3 ಶ್ರೀ ಪವನ ಶಿವರಿಂದ ತಾ ಪೂಜೆಗೊಳುತ ಬಹು ಪರ ಮನು ವ್ಯಾಪಿಸಿಹ ನಿನ್ನೊಳದ್ಯಾಪಿ ಸ್ವರ್ಗಸ್ಥ ಜನ ರೀ ಪೊಡವಿಯೊಳು ತವ ಸಮೀಪದಲಿ ಜನಿಸುವರು 4 ಮೂಢಮತಿ ನಾನು ಕೊಂಡಾಡ ಬಲ್ಲೆನೆ ನಿನ್ನ ಬೇಡಿಕೊಂಡೆನು ಹೃದಯ ನೀಡದೊಳಗೇ ಗೂಡ ಪದ ಶಯನ ಜಗನ್ನಾಥ ವಿಠ್ಠಲನಂಘ್ರಿ ನೋಡುವ ಸೌಭಾಗ್ಯ ದಯ ಮಾಡು ಪ್ರತಿದಿನದಲ್ಲಿ ಬ 5
--------------
ಜಗನ್ನಾಥದಾಸರು
ಕೃಪಿಗಳೊಳು ನಿನಗುಪಮೆ ಕಾಣೆನೊ ಸದಾ ಕೃಪಣವತ್ಸಲ ರಾಘವೇಂದ್ರಾ ಅಪರಿಮಿತ ಪಾಪೌಘ ಸÀಪದಿ ಪೋಗಾಡಿಸಿ ನೀ ಕೃಪಣ ಕಾಮಿತ ದಾತಾ - ಮನ್ನಾಥಾ ಪ ಮೋದತೀರ್ಥ ಮತೋದಧಿ ಸಂಜಾತಾ - ಮೋದ ಸಂಯುಕ್ತ ಸುಧಾ ಭೋಧಿಸಿ ಚಂದ್ರಿಕ ಭುಧಜನ ವೃಂದಕೆ ಉದಧಿನಂದನನಂತಿರುವೇ - ನಂದಕರ ಗುರುವೆ 1 ಕ್ಷಿತಿ ತಳದೊಳು ವರ ಯತಿಯ ರೂಪವ ಧರಿಸಿ ಪತಿತ ಪಾವನನೆನಿಸೀ ಸತತ ಸುಜನರ ಅತಿಹಿತದಲಿ ಪೊರೆವೊ ಮತಿವಂತ ಮನದಲೀಗ ಭಜಿಪೆ ತ್ವಚ್ಚರಣ2 ಧಿಟ ಗುರು ಜಗನ್ನಾಥ ವಿಠಲಪಾದ ಹೃತ್ಸಂ - ಪುಟದಿ ಭಜಿಸುತಲೀ ಶಿಷ್ಟಜನರ ಮನದಿಷ್ಟಾರ್ಥ ಸಲಿಸುವ ವÀಂ - ದ್ಯೇಷ್ಟದಾನದಿ ದಕ್ಷಾ - ಕಾಮಿತ ಕಲ್ಪವೃಕ್ಷಾ 3
--------------
ಗುರುಜಗನ್ನಾಥದಾಸರು
ಕೇಳು ಹಿತವಾ ಬಾಳು ಮನವೇ ಸಾಧು ಸಂಗ ಮಾಡು | ಹೇಳತೀರದ ಸ್ವಾನಂದದ ಸುಖಭಾವಿಕಗ ಬಲು ಪಾಡು ಪ ಹೀನ ಕೀಟಕ ಸಂಗದಿಂದ ಭೃಂಗಿಯಾಗಲಿಲ್ಲಾ | ತಾನು ಕಬ್ಬಿಣ ಪರಸವ ಮುಟ್ಟಿ ಚಿನ್ನವಾದುದಲ್ಲಾ 1 ಹಳ್ಳ ಕೊಳ್ಳ ಬಂದು ಕೂಡಿ ಗಂಗೆಯಾಗುವಂತೆ | ಎಲ್ಲ ವೃಕ್ಷವು ಸಂಗದಿಂ ಚಂದನಾಗುದು ಗಾದೆಯ ಮಾತೆ 2 ಕೋಟಿಗೆಂದೇ ಮಾತು ಕೇಳು ನಾಡ ಸಾಧನ್ಯಾಕ | ಪುನರಪಿ ನೀ ಬರಬೇಕ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೌತುಕವು ನೋಡಿ ಮಹಾ ಗುರುನಾಮಮಹಿಮೆಯು ಬಯಲು ವಿದ್ಯವು ಕೇಳಿ ಭಾವಿಕರೆಲ್ಲ ಧ್ರುವ ಶೂನ್ಯ ಮಂಡಲದಿ ನಿಶ್ಯೂನ್ಯ ಬೀಜದ ವೃಕ್ಷ ಮಾನ್ಯಮೋನದಲಿ ಬೆಳೆಯುತಿಹ ವೃಕ್ಷ ನೋಡಿ 1 ಬಯಲು ಭಾವದ ಪುಷ್ಪ ನಿರ್ಬೈಲ ಸಾಫಲವು ಸುವಾಸನೆಯ ಗೊಂಚಲವು ಜಡಿವೃತ ದಿವ್ಯಾಮೃತ ಫಲವು ಸವಿಯು ಸೇವಿಸುವದಕೆ ಹೊಯಲುವಾದರು ಮಹಾಮಹಿಮರಿದು ನೋಡಿ2 ತಾಯಿ ಇಲ್ಲದ ಶಿಶುವು ಕಾಯವಿಲ್ಲದೆ ಬಂದು ಕೈಯವಿಲ್ಲದೆ ಕೊಂಡು ಸೇವಿಸುವದು ಬಾಯಿ ಇಲ್ಲದ ನುಂಗವದು ಕಂಡು ಮಹಿಪತಿಯು ಕೈಯ ಮುಗಿದನು ಗುರುವಿಗೆ ತ್ರಾಹಿಯೆಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುವೆ ನಿಮ್ಮಯ ಕರುಣ ವೃಕ್ಷ ನೆಳಲೊಹೊರತಾದ ಕಾರಣದಿ ಹೀನನಾದೆ ಪ ಉದ್ಧವ ಖ್ಯಾತಿ ದ್ರೋಣನು ಕಲಿಯುಗದಿ ನಾನಾ ||ಭೌತಿಕಗಳ ಧರಿಸಿ ಪ್ರಾರ್ಥಿಸಿದ ಸಜ್ಜನರಆರ್ತಗಳ ಪರಿಹರಿಸಿ ಸರ್ವಾರ್ಥಗರೆವ1 ಶರಧಿ ಮುಣುಗಿದ ಮಹಾಪರಮ ಕರುಣಾನಿಧಿಯ ದೇವಮಣಿಯೆ2 ನಿರ್ಜನರು 3 ಆವಾವ ಕಾಲದಲಿ ನಿನ್ನ ದಯದಿಂದಲ್ಲಿದೇವಾರ್ತಿಗಳನೈದು (ದಿ) ಸೌಖ್ಯಬಡುವೆ ||ಕಾವ ಕರುಣೆಯೆ ಎನ್ನ ಅವಗುಣಗಳೆಣಿಸದಲೆಸಾವಧಾನದಲೆನ್ನ ಸಲಹಬೇಕು4 ಬಾಲಕನ ಅಪರಾಧ ಅನಂತವಿರಲಿನ್ನುಪಾಲಿಸಬೇಕಯ್ಯ ನೈಜಗುರುವೆ ||ಪಾಲಸಾಗರಶಾಯಿ ಗುರು ವಿಜಯ ವಿಠ್ಠಲರೇಯಕಾಲಕಾಲಕೆ ಅಗಲದಂತೆ ವರವೀಯೋ 5
--------------
ಗುರುವಿಜಯವಿಠ್ಠಲರು
ಗೋದೆ ಸಮಸ್ತಫಲದೆ ಸ್ನಾನ ಒದಗಿಮಾ-ದರೊಮ್ಮೆ ವೈಕುಂಠಪದವೀವೆ ಪ. ಬ್ರಹ್ಮಾದಿ ಶಿಖರದಿಂ ಪುಟ್ಟಿ ನೀನು ಬಲುಬ್ರಹ್ಮ ಋಷಿಯಾದ ಗೌತಮ ಮುನಿಯಬ್ರಾಹ್ಮರಿಂದಲಿ ಬಂದ ಗೋಹತ್ಯ ಪರಿಹರಿಸಿಅಮ್ಮಮ್ಮ ಸಪ್ತಮುಖದಿಂದ ಸಾಗರವ ಬೆರೆದೆ 1 ಆದಿಯಲಿ ತ್ರಿಯಂಬಕನ ಜ[ಡೆ]ಯಲುದಿಸಿದೆ ನೀನುಮುದದಿಂದ ಪಶ್ಚಿಮಕಾಗಿ ನಡೆಯೆ ಕಂಡುಒದಗಿ ಗೌತಮನು ಕುಶದಿಂದ ತಿರುಗಿಸÀಲು ನೀಸದಮಲ ಕುಶಾವರ್ತಳೆಂದೆನಿಸಿಕೊಂಡೆ 2 ಔದುಂಬರ ವೃಕ್ಷಮೂಲದಿಂದುದ್ಭವಿಸಿಉದಧಿಯನು ಕೂಡಬೇಕೆಂದು ಬೇಗಮೇದಿನಿಯಿಳಿದು ತಿರುಗುತಲಿ ನೀ ಮುದದಿಂದಆದರದಿ ಪೂರ್ವಾಬ್ಧಿಯನು ಕೂಡಿದೆ 3 ಸಿಂಹರಾಸಿಯಲಿ ಸುರಗುರು ಬಂದುದು ಕೇಳಿಅಂವ್ಹ ರಾಸಿಗಳು ಸಂಹಾರಕಾಗಿಬಂಹ್ವಾಯಾಸದಿ ಬಂದು ನಿಮ್ಮನು ಕಂಡೆಅಂವ್ಹಂಗಳು ಪರಿಹರಿಸಿ ಮುಕುತಿಯ[ಕೊಡು]ದೇವಿ 4 ವಿನಯದಲಿ ಸ್ನಾನಪಾನವನು ಮಾಡುವರಿಗೆವನಜಾಕ್ಷ ಹಯವದನ ಹರಿಯವನಜನಾಭನ ಲೋಕಸಾಧನವಾದಘನ ಭಕುತಿಯನಿತ್ತು ರಕ್ಷಿಸುದೇವಿ 5
--------------
ವಾದಿರಾಜ
ಚಿತ್ತಜನೈಯನ ಕೂಡ ಅರ್ಥಿಲೆ ಹೋಗುವಾಗ ಹಸ್ತಿನಾವತಿಯ ಕಂಡರು ಜತ್ತಾಗಿ ಜನರು ಪ. ನದ ನದಿಗಳ ದಾಟಿ ಮುದದಿಂದ ಮುಯ್ಯಕ್ಕೆ ಬರಲು ಅದ್ಭುತವಾಗಿ ಬೆಳಗೋದೆಅದ್ಭುತವಾಗಿ ಬೆಳಗೋದೆ ನಗರಿಯುಇದೇ ವೈಕುಂಠ ಹೌದೇನ1 ತರಣಿ ತರಣಿ ಸರೋವರ ಇವ ನೋಡಗಗನಕ್ಕೆ ಸರಳಾಗಿ ಬೆಳೆದ ಮರನೋಡ2 ಆಲ ಅಶ್ವತ್ಥ ಶಾಲ ಶಾಬರವೃಕ್ಷ ಸಾಲು ಮಂಟಪ ನೋಡ ಸಾಲು ಮಂಟಪ ಇವ ನೋಡ ದೇವಾಲಯವು ವಿಶಾಲವಾಗಿದ್ದ ಬಗಿ ನೋಡ3 ಪ್ಯಾಟಿ ಬಾಜಾರ ಸಾಲು ಥಾಟಾಗಿ ತೋರುವುದೆ ಕೋಟಿ ಸೂರ್ಯರ ಬೆಳಕಿಲೆಕೋಟಿ ಸೂರ್ಯರ ಬೆಳಕಿಲೆ ಒಪ್ಪೊ ನಗರಿಯ ಮಾಟ ವರ್ಣಿಸಲು ವಶವಲ್ಲ4 ಹತ್ತಿ ಗೋಪುರ ಕೋಟಿ ಹಚ್ಚಿದೆ ಧ್ವಜ ಕೋಟಿಮತ್ತ ಪತಾಕೆಗೆ ಮಿತಿ ಇಲ್ಲಮತ್ತ ಪತಾಕೆಗೆ ಮಿತಿಯಿಲ್ಲ ಹರಿಣಾಕ್ಷಿಸತ್ಯ ಲೋಕವು ಹೌದೇನ5 ಅಟ್ಟಾಲದ ಮ್ಯಾಲೆ ಧಿಟ್ಟಾದ ಗೊಂಬೆಗಳು ಕೃಷ್ಣಗೆ ಕೈಯ್ಯ ಮುಗಿವಂತೆ ಕೃಷ್ಣಗೆ ಕೈಯ್ಯ ಮುಗಿವಂತೆ ನಿಲ್ಲಿಸಿದ್ದುಎಷ್ಟು ವರ್ಣಿಸಲು ವಶವಲ್ಲ6 ಜತ್ತಾದ ಮನೆಗಳಿಗೆ ರತ್ನದ ಶೋಭೆ ನೋಡಹತ್ತು ದಿಕ್ಕುಗಳ ಬೆಳಗೋವೆÉಹತ್ತು ದಿಕ್ಕುಗಳ ಬೆಳಗೋವೆÉ ಸ್ವರ್ಗವಎತ್ತಿಟ್ಟರೇನ ಐವರು7 ಚಂದದ ಮನೆಗಳಿಗೆ ಮುತ್ತಿನ ಹಂದರ ತೋರಣUಳೆಷ್ಟುಶ್ರೀ ಗಂಧದ ಥಳಿಯ ಸೊಬಗೆಷ್ಟುಶ್ರೀ ಗಂಧದ ಥಳಿಯ ಸೊಬಗೆಷ್ಟ ರಂಗವಾಲಿಅಂದವಾಗಿದ್ದ ಜಗುಲಿ ಎಷ್ಟ 8 ತಾರಕ್ಕಿ ಹೊಳವಂತೆ ತೋರೋದೀವಿಗೆ ಎಷ್ಟನೀರೆ ನಿಲಿಸಿದ್ದ ಕನ್ನಡಿ ಎಷ್ಟನೀರೆ ನಿಲಿಸಿದ್ದ ಕನ್ನಡಿ ಎಷ್ಟ ಉಪ್ಪರಿಗಿಏರಿ ನೋಡುವ ಜನರೆಷ್ಟ 9 ಶ್ರೀಶನ ಮುಖವನೆ ಸೋಸಿಲೆ ನೋಡುತ ಈಜಾಡಿ ಸುಖದ ನದಿಯೊಳು ಈಜಾಡಿ ಸುಖದ ನದಿಯೊಳುಬಹುಜನ್ಮಕ ಲೇಸಾದ ಪುಣ್ಯ ಫಲಿಸಿತು10 ಮೇಲಾದ ಮನೆಗಳ ಮ್ಯಾಲೆ ಸಾಲು ಗೊಂಬಿಗಳ ನೋಡ ಶ್ರೀಲೋಲ ರಾಮೇಶಗೆ ಕೈ ಮುಗಿವಂತೆಶ್ರೀಲೋಲ ರಾಮೇಶಗೆ ಕೈ ಮುಗಿದುಹರಿಣಾಕ್ಷಿ ಕಾಲಿಗೆ ಎರಗುವ ಪರಿಯಂತೆ 11
--------------
ಗಲಗಲಿಅವ್ವನವರು
ಜಗದಾಖ್ಯ ವೃಕ್ಷ ಚಿಂತಿಪುದು ಬುಧರು ಪ ಭಗವಂತನೆಂಬ ಆಗಸದಲಿ ಪಸರಿಸಿದಅ.ಪ. ಚತುರಾಸ್ಯ ವಾಣಿ ಈರ್ವರು ಬೀಜ ಚಿತ್ಪ್ರ ಕೃತಿ ಪೃಥವಿ ಕರ್ಮವು ಬೇರು ತ್ರಿಗುಣತ್ವ - ವು ಕ್ಷಿತಿ ಜಲಾನಲ ವಾಯು ಗಗನ ಶಾಖೆಗಳಿಂದಕೆ ಶತಕಿರಣ ಉಪಕೊಂಬೆಯೆನಿಸಿ ಕೊಂಬವು ಇದಕೆ 1 ಅಹಂಕಾರ ಬಲದಿಂದ ಅಭಿವೃದ್ಧಿ ಐದುವುದು ಕುಸುಮ ತನ್ಮಾತ್ರ ರಸದಿ ಸಹಿತವಾರ ಪ್ರವೃತ್ತಿ ನಿವೃತ್ತಿ ಕರ್ಮಫಲ ಅಹರಹರ್ ಭುಂಜಿಪವು ತನ್ನಾಮ ಜೀವಖಗ 2 ನಾನು ನನ್ನದು ಎಂಬ ನೀಡ ದ್ವಯಗಳಿದಕೆ ಹೀನ ವಿದ್ಯಾದಿ ಪಂಚಕವೆ ಸರ್ಪಗಳಲ್ಲಿ ಶ್ರೀನಿಧಿ ಜಗನ್ನಾಥವಿಠಲ ಸಂರಕ್ಷಕನು 3
--------------
ಜಗನ್ನಾಥದಾಸರು