ಒಟ್ಟು 81 ಕಡೆಗಳಲ್ಲಿ , 41 ದಾಸರು , 78 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ಜಯ ವೈಷ್ಣವ ಪಯನಿಧಿ ಚಂದ್ರಗೆ ಜಯ ಜಯ ವ್ಯಾಸಯತೀಂದ್ರರಿಗೆ ಪ ಜಯ ಜಯ ವರ ಕರ್ಣಾಟಕ ಪತಿಗೆ ಜಯ ಸಿಂಹಾಸನವೇರಿದಗೆ ಅ.ಪ ನಾಕು ಶಾಸ್ತ್ರಗಳ ಪಾರಂಗತರಿಗೆ ಕಾಕುಮತಗಳನು ತುಳಿದವಗೆ ಆ ಕಮಲಾಪತಿ ಭಕುತವರೇಣ್ಯಗೆ ಶ್ರೀಕರ ಚಂದ್ರಿಕಾಚಾರ್ಯರಿಗೆ 1 ಹನುಮನ ಭಾಷ್ಯವ ಅಣಿಮಾಡಿದಗೆ ಹನುಮಗೆ ಭವನಗಳನು ಕಟ್ಟಿದಗೆ ಹನುಮನ ಯಂತ್ರದಿ ಬಿಗಿದಪ್ಪಿದಗೆ ಮುನಿತ್ರಯದಲಿ ಸೇರಿದ ದೊರೆಗೆ 2 ಮಾಯಾವಾದಗಳನು ಗೆಲಿದವಗೆ ನ್ಯಾಯಾಮೃತಧಾರೆಯ ಅಭಿಷೇಕದಿ ಆ ಯದುಪತಿಯನು ಕುಣಿಸಿದಗೆ 3 ಚಕ್ರಧರನ ಸುಳುಗಳ ತಿಳಿದವಗೆ ಮಿಕ್ಕಮತಗಳನು ಅಳಿದವಗೆ ವಕ್ರಯುಕುತಿಗಳನು ತುಕ್ಕುಡಗೈಯ್ಯವ ತರ್ಕ ತಾಂಡವದಿ ನಲಿದವಗೆ 4 ಕೃಷ್ಣದೇವರಾಯನ ಕುಲಪತಿಗೆ ಕಷ್ಟದ ಕುಹಯೋಗವ ಕೊಂದವಗೆ ಶಿಷ್ಟಜನಗಳಿಗೆ ಇಷ್ಟಾರ್ಥಗಳನು ವೃಷ್ಟಿಯಗೈವ ಪ್ರಸನ್ನರಿಗೆ 5
--------------
ವಿದ್ಯಾಪ್ರಸನ್ನತೀರ್ಥರು
ಜಯರಾಯ ಭವಹರಣ ಪಾಲಿಸೆಮ್ಮ ಪ ಜಯದೇವಿಪ್ರತಿ | ರೂಪ ಗುಣಕ್ರಿಯ ರತಯತಿಯೆ ಅ.ಪ. ಅಮರೇಶ ಸ್ವರ್ಗಪದ ತೃಣಮಾಡಿ ಕ್ಷಿತಿಯಲಿ ಪಾದ ಸೇವೆಗಾಗಿ ಅಮಿತ ಭಾಗ್ಯವಿದೆಂದು ಪಶುವಾಗಿ ನೀನಿಂದು ಕಮಲ ಮಧು ಸೇವಿಸಿದೆ 1 ತೃತಿ ಈಶರೆನಿಸುವ ಅಗ್ನಿ ಗರುಡ ಮಹರುದ್ರ ಪ್ರತಿ ಕ್ಷಣದಿ ಅತಿ ಭಕುತಿ ಭಾರದಿಂದ ನತಿಸಿ ಸೇವಿಪ ಪರಮ ಗುರುಚರಣವಾಶ್ರೈಸಿ ದತಿ ಸುಕೃತನಿಧಿ ನಮ್ಮ ಅತಿದಯದಿ ಈಕ್ಷಿಪುದು 2 ಶ್ರೀ ಭೂಮಿ ದುರ್ಗೇಶನ ಮತ ಮಂಗಳ ಮೂರ್ತಿ ಶೋಭನಾಂತ ಗುಣಕ್ರಿಯ ನಿವಹಗಳನು ಅದ್ಭುತದಿ ಧರಿಸಿಹಾ ಮಧ್ವಕೃತ ಗ್ರಂಥಗಳ ಸದ್ಭಕ್ತಿಯಲಿ ಪೊತ್ತೆ ಸೌಭಾಗ್ಯನಿಧಿ ಗುರುವೆ 3 ಪವಮಾನರಾಯನಾ ಕೃಪೆಯೆಷ್ಟೊ ನಿನ್ನಲ್ಲಿ ಅವನಿಯೊಳು ಸಿದ್ಧಾಂತ ಗ್ರಂಥಗಳ ಟೀಕೆ ಕವಿಶ್ರೇಷ್ಠನಿರಲಾಗಿ ನಿನ್ನಿಂದ ರಚಿಸಿದ ತ್ರಿ ಭುವನ ಮಾನ್ಯನೆ ಧನ್ಯ ಧನ್ಯತೆಲಿ ಪೊರೆ ಎಮ್ಮ 4 ಪಾರ್ಥನಾದಂದು ಶ್ರೀ ಯದುಪತಿಯ ಸಖ್ಯವನು ಪೂರ್ತಿಪೊಂದಿದೆ ಸರ್ವ ಪುರುಷಾರ್ಥವೆಂದು ಸ್ವಾರ್ಥಮತಿಯ ಹರಿಯ ಒಲಿಸಿದಾ ಮಹಾನಿಪುಣ ಪಾದ ಪಾಂಶು ರಕ್ಷಿಸಲೆನ್ನ 5 ದೇವಕೀಸುತ ನಿನ್ನ ಸಖನೆಂದು ಪವಮಾನ ದೇವ ನಿನ್ನಲ್ಲಿ ಮಾಡಿದ ಪರಮ ಪ್ರೀತಿ ಪತಿ ದಾಸ್ಯ ಪೂರ್ಣಪ್ರದ ಆರೂಢ ಕೇವಲಾ ಕೃಪೆ ಮಾಡು ಹರಿದಾಸ ಮಣಿಗುರುವೆ 6 ಭಾರತೀಪತಿಗೊಡೆಯ ಜಯೇಶವಿಠಲನ ವೈರಾಗ್ಯ ಸಿದ್ಧಿಯಲಿ ಏಕಾಂತ ಪೊಂದಿ ಭವ ತರಣ ಸತ್ಪಾತ್ರ ವೃಷ್ಟಿ ಹರಿಗುರುಗಳೊಲಿವಂತೆ 7
--------------
ಜಯೇಶವಿಠಲ
ಜೋಜೋ ಪದುಮದಳಾಕ್ಷ ಉಪೇಂದ್ರ ಪ ಜೋಜೋ ವೇದವಂದಿತ ನಿತ್ಯಾನಂದ | ಜೋಜೋ ಆದಿಮೂರುತಿ ಶ್ರೀಗೋವಿಂದ ಅ.ಪ ಉದಿಸಿದೆ ವಸುದೇವನರಸಿಯೊಳಂದು 1 ದೇವ ರೋಹಿಣಿ ನಕ್ಷತ್ರದೊಳು ಧರೆಗಿಳಿದೆ 2 ಕೌಸ್ತುಭ ಸಕಲ ಲೋಕೇಶ ಶೋಭಿಸುವೆ ಸಂಭ್ರಮದಿ3 ಪರಿಪರಿ ಶೋಭಿಸಿ ಮೆರೆವೆ ಆನಂದ 4 ಲೀಲಾವಿನೋದವ ಮಾಳ್ಪೆ ಸಂತಸದಿ 5 ಒಂದಾಗಿ ಸುಮವೃಷ್ಟಿ ಸುರಿವ ಸಂಭ್ರಮದಿ 6 ನಾರದ ಮುನಿಪನ ವೀಣಾಗಾನಗಳು | ನಾರಿ ಲಕ್ಷ್ಮಿಯು ರತ್ನದಾರತಿಯೆತ್ತುವಳು 7 ಗಿರಿಜೇಶಪ್ರಿಯನೆ ತ್ರೈಜಗದುದ್ಧಾರಿ8 ತ್ರುವಿತ್ರುವಿ ಶಂಖಚಕ್ರಗದಾಪದ್ಮ ಹಸ್ತ 9 ತ್ರುವಿತ್ರುವಿ ಪರತರ ಪಾವನರಾಮ 10 ನಂತರ್ಯದೊಳಗಿಟ್ಟು ಪೊರೆವೆನಿನ್ನೇನು 11 ಗುರು ದಾಮೋದರ ಶ್ರೀನಿವಾಸ ಆಗಿರುವೆ 12
--------------
ಸದಾನಂದರು
ದೇವಿ ಲಕ್ಷಣೆ ಎಮ್ಮ ಸಲಹ ಬೇಕಮ್ಮಭಾವದಲಿ ನೀನಿದ್ದು ಭಾವನಯ್ಯನ ತೋರೀ ಪ ಪಿತನು ಬೃಹತ್ಸೇನ ನಿನಗಾಗಿ ಸ್ವಯಂವರವಹಿತದಿಂದಲೆಸಗುತ್ತ ಲಕ್ಷ್ಯವನೆ ಬಿಗಿದೂ |ಅತಿಶಯದ ಧನುವಿಗೆ ಸಜ್ಜಿಸುತ ಬಾಣವನುಚತುರತೆಲಿ ಭೇದಿಪಗೆ ಸುತೆಯ ಪಣವೆಂದ1 ಮತ್ಸ್ಯ ಯಂತ್ರವಿದಲ್ಲಔಪಚಾರಿಕವೆಲ್ಲ ಸರ್ವವಿಧ ಛನ್ನಾ |ವೈಪರೀತ್ಯದಿ ದ್ವಾರ ಉಪರಿ ಇರುವುದು ಕೇಳಿಕಾಪುರುಷಗಿದು ಕಾಂಬ ಮಾರ್ಗವೇ ಇಲ್ಲ 2 ಸೂತನುತ ಮಾಗಧನು ಕೌತುಕದ ಕೌರವರುಪಾರ್ಥನೂ ಅವನಣ್ಣ ಭೀಮಸೇನಾ |ಆತು ಧನುವನು ಲಕ್ಷ್ಯ ಭೇದಿಸಲೆ ಬೇಕೆಂದುಪೃಥಿವಿಪರು ಮತ್ತಿತರು ಬಂದು ಸೇರಿದರು 3 ಸಜ್ಜುಗೈಯಲು 5ನುವ ಆರಿಂದಲಾಗದಿರೆಲಜ್ಯೆಯಿಂದಲಿ ಮರಳಿ 5ೀಗುವರೆ ಬಹಳ |ಅರ್ಜುನನು ತಾನೊಬ್ಬ ಲಕ್ಷ್ಯವೀಕ್ಷಣ ಶಕ್ತಅರ್ಜುನಾಗ್ರಜ ಹರಿಗೆ ಅಪರಾಧವೆನೆ ಸರಿದ 4 ನೆರೆದ ಸಭೆಯಲ್ಲಿ ಪುಷ್ಪಹಾರವನೆ ಪಿಡಿಯುತ್ತಬರುತ ವೈಯ್ಯಾರದಲಿ ಶಿರಿ ಕೃಷ್ಣ ಕಂಠದಲ್ಲಿ |ಇರಿಸಿ ಪರಮಾನಂದ ಭರಿತಳಾಗಲು ಹರಿಯುಕರಪಿಡಿದು ಹೊರವಂಟ ತನ್ನ ದ್ವಾರಕಿಗೇ 5 ಪರಿ ಪರಿ ಪುಷ್ಪ ವೃಷ್ಟಿಗಳ ಗರೆಯೇ |ದುರುಳರೆದುರಾಗಿ ಸಂಗರಕೆ ಬರುತಿರಲುಹರಿ ಭೀಮರೆದುರಿಸದೆ ದುರುಳರೋಡಿದರು 6 ಮೋದ ಬಡುವಂಥ |ಧೀವರರ ಮನೋಭೀಷ್ಟ ಪೂರ್ಣವನೆ ಗೈಯ್ಯುವನುದೇವ ಗುರು ಗೋವಿಂದ ವಿಠಲ ಕೃಪೆಯಿಂದ 7
--------------
ಗುರುಗೋವಿಂದವಿಠಲರು
ಧರೆಯೊಳಗೆ ವ್ಯಾಸಮುನಿವರನ ಸಂಸ್ಥಾನಕಿ ನ್ನೆರಡನೆಯದಾವುದುಂಟು ಪ. ಪರಿಪರಿಯಲಿ ನೋಡೆ ಪರಮ ವೈಭವದಿಂದ ಧರಣಿಯೊಳು ಮೆರೆಯುತಿಹುದು ಇಹುದುಅ.ಪ. ಹಂಸನಾಮಕನಿಂದ ಹರಿದು ಬಂದಂಥ ಯತಿ ಸಂಸ್ಥಾನ ಸುರನದಿಯೊ ಕಂಸಾರಿಪ್ರಿಯ ಶ್ರೀ ಮಧ್ವಮುನಿ ಮತ ಸಾರ ಹಂಸಗಳು ಸುರಿಯುತಿರಲು ಸಂಶಯವ ಪರಿಹರಿಸಿ ಸದ್ಗ್ರಂಥಗಳ ಸ- ದ್ವಂಶರಿಗೆ ಸಾರುತಿರಲು ಅಂಶ ಹರಿಪರ್ಯಂಕ ಸಹಿತ ಬಾಹ್ಲೀಕ ಯತಿ ವಂಶದಲಿ ಉದಿಸಿ ಬರಲು ಬರಲು 1 ಬನ್ನೂರು ಸ್ಥಳದಲ್ಲಿ ಜನ್ಮವೆತ್ತುತಲಿ ಬ್ರ ಹ್ಮಣ್ಯರಾ ಕರದಿ ಬೆಳೆದು ಚಿಣ್ಣತನದಲಿ ಮೌಂಜಿಧರಿಸಿ ಕಿತ್ತೊಗೆಯುತಲಿ ಧನ್ಯಯತಿಯಾಗಿ ಮೆರೆದು ಘನ್ನ ಶ್ರೀಪಾದರಾಯರಲಿ ಸದ್ಗ್ರಂಥಗಳ ಚನ್ನಾಗಿ ಮನನಗೈದು ಸಣ್ಣ ಪೆಟ್ಟಿಗೆಯೊಳಡಗಿದ್ದ ಶ್ರೀ ಕೃಷ್ಣನ ತನ್ನ ಭಕ್ತಿಯೊಳ್ ಕುಣಿಸಿ ನಲಿದು 2 ಪಡೆದು ಪರಿಪರಿಯ ಮಹಿಮೆಗಳ ತೋರುತಲಿ ದುರ್ವಾದಿ ದುರುಳ ಮತಗಳನೆ ಮುರಿದು ಮರುತ ಮತ ಶೀತಾಂಶುಕಿರಣ ಚಂದ್ರಿಕೆಯನ್ನು ಹರಹಿ ಪ್ರಕಾಶಗೈದು ಸರ್ವ ಸಜ್ಜನರ ಮನದಂದಕಾರವ ಕಳೆದು ಸಿರಿವರನ ಪ್ರೀತಿ ಪಡೆದು ತಿರುವೆಂಗಳೇಶನ ಪರಮ ಮಂಗಳ ಪೂಜೆ ವರುಷ ದ್ವಾದಶವಗೈದು ಮೆರೆದು 3 ಆರಸನಿಗೆ ಬಂದಂಥ ಆಪತ್ಕುಯೋಗ ಪರಿ ಹರಿಸಿ ಸಂಸ್ಥಾನ ಪಡೆದು ಪರಮ ಸಾಮ್ರಾಜ್ಯ ಪಟ್ಟಾಭಿಷೇಕವ ತಳೆದು ಪರಮ ವೈಭವದಿ ಮೆರೆದು ಚಿರಕಾಲ ವಿಜಯನಗರವು ಮೆರೆಯಲೆಂದ್ಹರಸಿ ಅರಸನಿಗೆ ರಾಜ್ಯವೆರೆದು ಕರುಣಾಳುವೆನಿಸಿ ವೈರಾಗ್ಯ ಶಿಖರದಿ ಮೆರೆದು ಮೊರೆಪೊಂದಿದವರ ಪೊರೆದು ಬಿರುದು 4 ಎಲ್ಲೆಲ್ಲಿ ನೋಡಲಲ್ಲಲ್ಲಿ ಶ್ರೀ ಮರುತನ್ನ ನಿಲ್ಲಿಸುತ ಪೂಜೆಗೈದು ನಿಲ್ಲದಿರೆ ಹಂಪೆಯಲಿ ಪ್ರಾಣಾರಾಯನು ಯಂತ್ರ ದಲ್ಲಿ ಬಂಧನವಗೈದು ಚಲ್ಲಾಡಿ ಸುವರ್ಣವೃಷ್ಟಿಯಿಂ ದುರ್ಭಿಕ್ಷ ನಿಲ್ಲಿಸದೆ ದೂರಗೈದು ಎಲ್ಲ ಕ್ಷೇತ್ರಗಳ ಸಂಚರಿಸಿ ಬಹುದಿನ ಹಂಪೆ ಯಲ್ಲಿ ಶಿಷ್ಯರನು ಪಡೆದು ನಿಂದು 5 ನವಕೋಟಿ ಧನಿಕ ವೈರಾಗ್ಯ ಧರಿಸುತ ಭವದ ಬವಣೆಯಲಿ ನೊಂದು ಬಂದು ನವ ಜನ್ಮಕೊಟ್ಟು ಉದ್ಧರಿಸಬೇಕೆಂದೆರಗೆ ಅವನಂತರಂಗವರಿದು ಪವಮಾನ ಮತವರುಹಿ ತಪ್ತ ಮುದ್ರಾಂಕಿತದಿ ನವ ಜನ್ಮವಿತ್ತು ಪೊರೆದು ಪವನ ಗ್ರಂಥಾಂಬುಧಿಯೊಳಡಗಿದ್ದ ದಾಸ್ಯ ರ ತ್ನವ ಪೂರ್ವಗುರುವಿಗೊರೆದು ಸುರಿದು 6 ಪುರಂದರ ಕನಕರೆಂ ಬತುಲ ಶಿಷ್ಯರ ಕೂಡುತಾ ಸತತ ಹರಿ ಚರ್ಯ ಮಹಿಮಾದಿಗಳ ಸ್ಮರಿಸುತ್ತ ಸ್ಮøತಿ ಮರೆದು ಕುಣಿದಾಡುತಾ ರತಿಪಿತನ ಗಾನ ಭಕ್ತಿಯಲಿ ಕನ್ನಡ ಕವನ ಮತಿಯೊಳ್ ನಾಲ್ವರುಗೈಯುತಾ ಕ್ಷಿತಿಯಲ್ಲಿ ದಾಸಪದ್ಧತಿ ಬಾಳಲೆಂದೆನುತ ಯತಿವರರ ಸೃಷ್ಟಿಸುತ್ತಾ | ಸತತ 7 ಅಂದು ವಿಜಯೀಂದ್ರರನು ಯತಿವರರು ಬೇಡÉ ಆನಂದದಲಿ ಭಿಕ್ಷವಿತ್ತ ಬಂದು ಕೈ ಸೇರಿದಾ ರಾಜ್ಯವನು ಕ್ಷಿತಿಪನಿಗೆ ಮುಂದಾಳಲೆನುತಲಿತ್ತ ಪತಿ ವೆಂಕಟೇಶನ್ನ ಪೂಜೆ ವರ ಕಂದನಿಗೆ ಒಲಿದು ಇತ್ತ ಒಂದೊಂದು ವೈಭವವು ಕೈ ಸೇರೆ ವೈರಾಗ್ಯ ತಂದು ಅಭಿರೂಪ ಬಿಡುತಾ | ಕೊಡುತ 8 ನವವಿಧದÀ ಭಕ್ತಿಯಲಿ ಜ್ಞಾನ ವೈರಾಗ್ಯದಲಿ ಕವನದಲಿ ಶಾಂತತೆಯಲಿ ನವಗ್ರಂಥ ನಿರ್ಮಾಣ ಪವನ ಗ್ರಂಥೋದ್ಧಾರ ಸವಿನಯವು ಸದ್ಗುಣದಲೀ ಸುವಿವೇಕ ಸತ್ಕರ್ಮ ಅಂತರ್ಮುಖ ಧ್ಯಾನ ಅವನಿ ಸಂಚಾರದಲ್ಲಿ ಇವರ ಸರಿಯಿಲ್ಲ ದಾಸ ವ್ಯಾಸ ಕೂಟದಲಿ ಭುವನದಲಿ ಮೆರೆದ ಧನ್ಯಾ | ಮಾನ್ಯ 9 ಪಾಪಿಗಳ ಸಲಹಿ ಪಾವನ್ನಗೈಯುತ ಭವದ ಕೂಪದಿಂದುದ್ಧರಿಸಿದಾ ಆಪಾರ ಮಹಿಮೆ ಆದ್ಯಂತ ವರ್ಣಿಸಲಳವೆ ಶ್ರೀಪಾದ ಪದುಮ ರಜದಾ ವ್ಯಾಪಾರವೆನ್ನ ಗುರು ದಯದಿ ಎನ್ನೊಳು ನಿಂದು ತಾ ಪಾಲಿಸುತ ನುಡಿಸಿದ ಗೋಪಾಲಕೃಷ್ಣವಿಠಲ ಧ್ಯಾನದಲಿ ಹಂಪೆ ಗೋಪ್ಯಸ್ಥಳದಲಡಗಿದಾ 10
--------------
ಅಂಬಾಬಾಯಿ
ಧೇನಿಸೊ ಶ್ರೀಹರಿಯ ಮಹಿಮೆಯ ಪ ಧೇನಿಸು ಲಯದ ವಿಸ್ತಾರ ಚತುರಾ ನಾನಕಲ್ಪದ ವಿವರಾ ||ಆಹಾ|| ಧೇನಿಸು ಶತಾನಂದಗೆ ಶತ- ಮಾನಕಾಲದಲ್ಲಿ ಇದ್ದು ನಡೆಸುವ ಹರಿಕಾರ್ಯ ಅ.ಪ ಮೊದಲರ್ಧ ಶತಮಾನ ಸೂಕ್ಷ್ಮ ಸೃಷ್ಟಿ ಪದುಮನ ತೋರಿದ ಮಹಾಮಹಿಮ ಆಗ ಅದೆ ಪ್ರಥಮ ಪರಾರ್ಧವು ನೇಮ ಮೇಲೆ ದ್ವಿತೀಯ ಭಾಗಕ್ಕೆಲ್ಲ ಬ್ರಹ್ಮ ||ಆಹಾ|| ಅದರೊಳು ತ್ರಿದಶ ಏಳರ್ಧ ವರ್ಷವು ಪದುಮಜನಿಂದ ರಾಜ್ಯವನಾಳಿಸಿದ ಪರಿಯನು 1 ದ್ವಾದಶಾರ್ಧವರುಷ ತಾ ಉಳಿಯೆ ಆಗ ತೋರ್ದ ಅದುಭೂತವಾದ ಮಹಾಪ್ರಳಯ ಸೂಚ- ನಾದಿ ಕಾರ್ಯವು ತಾ ಮೆರೆಯೆ ಶತ ಅಬ್ದ ಅನಾವೃಷ್ಟಿ ತೋರಿರೆ ಆಹಾ|| ಉದಧಿ ಶೋಷಣೆಯಿಂದ ಸರ್ವಸಂಹಾರವು 2 ಮೇರುಪರ್ವತ ಸ್ಥಳದಲ್ಲಿ ಇದ್ದ ವಿ- ಧಿರುದ್ರಾದಿಗಳೆಲ್ಲರಲ್ಲಿ ಮಹ ತೋರುತ್ತ ಕುಣಿದಾಡುತ್ತಲಿ ||ಆಹಾ|| ಸುರರವಯವಗಳ ತಾನಲಂಕರಿಸಿದನ 3 ನರಹರಿ ನರ್ತನ ಮಾಡಿ ತನ್ನ ಕರದಿ ತ್ರಿಶೂಲವನ್ನು ನೀಡಿ ದಿ- ಕ್ಕರಿಗಳ ಪೋಣಿಸಿ ಆಡಿ ಸರ್ವರಉ- ದರದೋಳಿಟ್ಟು ಕೂಡಿ ||ಆಹಾ|| ಗ್ರಾಸ ತ್ವರಿತದಿ ತಾ ಮಾಡಿ ಕ್ರೀಡಿಸುತಿರ್ಪನ್ನ 4 ವಾಯುದೇವರ ಗದಾಪ್ರಹಾರದಿಂದ ಭಯ ಹುಂಕಾರದಿಂದ ಜೀವರ ಲಿಂಗ ಆಯತ ಸ್ಥಳದಲ್ಲಿಟ್ಟವರಾ ||ಆಹಾ|| ಲಯಕಾಲದಿ ಸಂಕರುಷಣ ಮುಖದಿಂದ ಲಯವಾಗಲು ಅಗ್ನಿ ಪೊರಟು ದಹಿಪುದಾ 5 ಕರಿಯ ಸೊಂಡಿಲಿನಂತೆ ಮಳೆಯ ಧಾರೆ ನಿರುತ ಶತವರ್ಷಗರೆಯೆ ನೋಡೆ ಸರ್ವತ್ರ ಜಲಮಯವಾಗೆ ಆಗ ನೀರಜಾಂಡವೆಲ್ಲ ಕರಗೆ ||ಆಹಾ|| ಗರುಡ ಶೇಷ ಮಾರ್ಗವರಿತು ಬರುತಿರ್ಪ ಸರ್ವಜೀವರ ತನ್ನ ಉದರದೊಳಿಟ್ಟನ್ನಾ 6 ಅರಿಯೋ ನೀ ಶೇಷಮಾರ್ಗವನ್ನೂ ಇಲ್ಲಿ ಸುರರು ಕುಬೇರನೊಳಿನ್ನು ಆತ ವರುಣನಲ್ಲಿ ಲಯವನ್ನೂ ಚಂದ್ರ ಹರಿಪಾರ್ಷಧರನಿರುದ್ಧನನ್ನು ಆಹಾ ಅನಿರುದ್ಧ ಸನತ್ಕುಮಾರನ್ನ ತಾವು ಪೊಂದಿ ಮಾರ ವಾರುಣಿಯು ಹರಿಮಡದಿಯರಲ್ಲಿ ಲಯವಾ 7 ಸುರರು ಮೊದಲು ಅಗ್ನಿಯೊಳ್ ಲಯವನ್ನೈದುವರು ಆ ಅಗ್ನಿ ತಾ ಸೂರ್ಯನ್ನ ಸೇರುವನು ಸೂರ್ಯ ತಾ ಗುರುವನ್ನ ಸೇರುವನು ||ಆಹಾ|| ಆಗಲೇ ಸರ್ವಮನುಜರು ಪಿತೃಗಳು ನಿರುಋತಿಯೊಳು ಪೊಕ್ಕು ತಾ ಯಮನಲ್ಲಿ ಸೇರುವಾ 8 ಯಮ ಪ್ರಿಯವ್ರತರಾಯರೆಲ್ಲ ಲಯ ತಮ್ಮ ಸ್ವಾಯಂಭು ಮನುವಿನಲ್ಲಿ ಮತ್ತೆ ಮ- ಹಿಮ ಭೃಗುವು ದಕ್ಷನಲ್ಲಿ ಲಯವು ಆ ಮಹಾದಕ್ಷ ಸ್ವಾಯಂಭು ಇಂದ್ರನಲ್ಲೀ-ಆಹಾ ಅಮರಪತಿಯು ತಾ ಸೌಪರಣಿಯನು ಪೊಂದಿ ಈ ಮಾರ್ಗದಿ ತಾನು ಗರುಡನ್ನ ಸೇರುವುದು 9 ಶೇಷಗರುಡರೊಡಗೂಡಿ ಆಗ ಸರಸ್ವತಿಯನ್ನೆ ಪೊಂದುವರು ಮತ್ತೆ ಆಸುವಿರಂಚಿ ವಾಯುಗಳು ತಾವು ಸರಸ್ವತಿಯನ್ನೆ ಪೊಂದುವರು ಆಹಾ ಈ ಸೂಕ್ಷ್ಮಲಯವನ್ನೆ ಕ್ರಮವರಿತು ನೀನೀಗ 10 ಸೂತ್ರನಾಮಕ ವಾಯುದೇವ ರುದ್ರ ಉಮೆಪ್ರದ್ಯುಮ್ನದ್ವಾರ ತ್ರಾತ ಸಂಕುರುಷಣನಾ ದಯದಿ ಜಗ- ನ್ಮಾತೆ ಲಕ್ಷ್ಮಿಯೊಳು ಸೇರುವರು ||ಆಹಾ|| ಚತುರಾಸ್ಯ ಜೀವರ ತನ್ನುದರದೊಳಿಟ್ಟು ಅತಿಮೋದದಿಂದ ವಿರಾಟನ್ನೈದುವುದು11 ವಿರಾಟ್ ಬ್ರಹ್ಮನು ತಾನೆಲ್ಲಾ ತನ್ನ ಆ ವರಣದಲ್ಲಿ ಇಪ್ಪಂಥ ತನ್ನ ಧರೆಯಲ್ಲಿ ಲೀನವಾಗುವ ಆಗ ಪರಿಪರಿಯಿಂದ ತನ್ಮಾತÀ್ರ ಆಹಾ ಅರಿತು ಶಬ್ದಸ್ಪರ್ಶರೂಪರಸಗಂಧ ಪರಿಪರಿಯಿಂದಲಿ ಲಯವನ್ನೈದುವುದಾ12 ಗಂಧದ್ವಾರ ಲಯತನ್ನ ಬಿಲದಿ ಜಾತ ವೇದದಲ್ಲಿ ರಸ ಲಯವು ರೂಪ ದ್ವಾರ ಲಯ ಆಕಾಶದೊಳು-ಆಹಾ- ಶಬ್ದದ್ವಾರ ಲಯತಮ ಅಹಂಕಾರಾದಿ ತದಾಂತರ್ಗತÀ ಭಗವದ್ರೂಪದಲ್ಲ್ಯೆಕ್ಯವಾ 13 ಅಹಂಕಾರತ್ರಯದಲಿ ಬಂದಾ ತತ್ತ ್ವ ದೇಹಸೂರರೆಲ್ಲರ ಲಯವು ಇಹ ತತ್ವಾಂತರ್ಗತ ಭಗವದ್ರೂಪಕೆ ||ಆಗ|| ಅಲ್ಲಲ್ಲಿ ತನ್ನೊಳೈಕ್ಯವೂ-ಆಹಾ ಅಹಂಕಾರತ್ರಯ ಮಹತ್ತತ್ವದಲ್ಲಿ ಲಯ ಮಹತ್ತತ್ತ ್ವವು ಮೂಲಪ್ರಕೃತಿಯಲ್ಲಿ ಲಯವು 14 ವಾಸುದೇವಾದಿ ಚತುರ ರೂಪ ಮತ್ಸ್ಯ ಶ್ರೀಶನನಂತಾದಿರೂಪ ಮತ್ತು ಶ್ರೀಶನಷ್ಟೋತ್ತರ ರೂಪ ||ಆಹಾ|| ತಾ ಸಕಲರೂಪಗಳು ಮೂಲರೂಪದೊಳೈಕ್ಯ ಶಾಶ್ವತನಾದ ಶ್ರೀ ಸಚ್ಚಿದಾನಂದನ್ನಾ 15 ಗುಣಮಾನಿ ಶ್ರೀ ಭೂ ದುರ್ಗಾ ಅಂ- ಭ್ರಣಿ ರೂಪವನ್ನೆ ತಾ ಧರಿಸೀ ಸಂ- ಪೂರ್ಣನ್ನ ಸಾಮೀಪ್ಯ ಸೇರಿ ಪೂರ್ಣ ಕಾಮನ್ನ ಎಡಬಿಡದೆ ನೋಡೀ ||ಆಹಾ|| ಕ್ಷಣ ಬಿಡದೊಡೆಯನ ಅಗಣಿತಗುಣಗಳ ಕಡೆಗಾಣದೆ ನೋಳ್ಪ ನಿತ್ಯಮುಕ್ತಳ ಸಹಿತಾ16 ಏಕೋ ನಾರಾಯಣ ಆಸೀತ ಅ- ನೇಕ ಜನರ ಸಲಹಲಿನ್ನು ತಾನೆ ಸಾಕಾರದಲಿ ನಿಂದಿಹನು ಇಂತು ವೇಂಕಟಾಚಲದಿ ಇನ್ನು ಮುನ್ನು ||ಆಹಾ|| ಏಕಮನಸಿನಿಂದ ಭಜಿಪ ಭಕ್ತರನ ತಾ ನಿ- ನಿತ್ಯ 17
--------------
ಉರಗಾದ್ರಿವಾಸವಿಠಲದಾಸರು
ನಾರಾಯಣ ಕೃಷ್ಣ ಬೆಳಗಾಯಿತೇಳಯ್ಯ ಮೂರು ಲೋಕಂಗಳಿಗೆ ಮಂಗಳವ ಬೀರಯ್ಯ ಪ ಹರಿಹರಿ ಶ್ರೀನಿಲಯ ಪರವಾಸುದೇವ ಅ.ಪ ಬಂದಿರುವರೈ ಬ್ರಹ್ಮ ರುದ್ರೇಂದ್ರರು ತಂದೆ ತಂದಿರುವರೈ ಮಹನಿಧಿ ಕನಡಿ ಧೇನುಗಳ ನಿಂದು ಗಾನವಮಾಡುತಿರುವರಾನಂದದಿ ಗಂಧರ್ವರಪ್ಸರೆಯರಿಂದು ಕುಣಿದಾಡಿ ಕೂಡಿ 1 ದಾಸರೊಡೆ ತುಂಬುರರು ನಾರದರು ಜಯಜಯ ಶ್ರೀಶನೇ ಕೇಶವ ಗಜವರದ ಎಂದು ಆಶ್ರಯಿಸಿ ಚರಣಕ್ಕೆ ಶರಣೆಂದು ಮಣಿಯವರು ದೋಷನಾಶನ ಲೋಕಕಲ್ಯಾಣ ತ್ರಾಣ 2 ಪತಿವ್ರತಾ ಸ್ತ್ರೀಯರುಗಳತಿಶಯ ಮಡಿಯುಟ್ಟು ಹಿತವಾದ ಹುಗ್ಗಿ ಸಜ್ಜಿಗೆಯ ಗೈದು ಪತಿತಪಾವನ ನಿನಗೆ ದಧ್ಯನ್ನ ನೀಡುವರೊ ಕ್ಷಿತಿನಾಥ ನೀನವನು ತೋಷದಿಂ ಭುಜಿಸೊ 3 ರೋಗರುಜಿನಗಳಳಿದು ಆಯುವೃದ್ಧಿಯದಾಗಿ ಭಾಗವತ ಸಕುಟುಂಬ ಸಂತೋಷಗೂಡಿ ಭಾಗವತ ಭಾರತ ರಾಮಾಯಣಗಳ ಹಾಡಿ ಆಗಲೈ ಆಗಮಾರ್ಚನೆ ಆಲಯಗಳೊಳಗೆ 4 ಕಮಲಲೋಚನ ಕೆಟ್ಟ ಸ್ವಪ್ನ ಫಲವಳಿಸಿ ಯಮಕಂಟವಂ ಕಳೆದು ಭ್ರಮೆಗಳನು ನೀಗಿ ಸುಮನಸರ ಕೂಡಿ ಶ್ರೀಹರಿಯ ಗುಣಗಾನ ಮಾಡಿ ಅಮಿತ ಅಮೃತವುಣಿಸೈ 5 ಕ್ಷುಧ್ರಪಾಕೀ-ಚೀನ ಕೊಬ್ಬಿ ಛದ್ರಿಸುತು ಭದ್ರತೆಯನಾಡೊಳಗಸ್ಥಿರತೆಗೈಯುತ್ತ ಆದ್ರಿಅಂಬುಧಿ ಮಧ್ಯೆ ಭಾರತಿಯ ನಲಿಸುತ್ತ ಮುದ್ರೆಯುಂ ಧ್ವಜವನುಂ ನಿನ್ನವಾಗಿರಿಸೈ 6 ಕಾಲಕಾಲಗಳಲ್ಲಿ ಮಳೆಬಿಡದೆ ಸುರಿದು ಶಾಲಿಸಂತರ ಧಾನ್ಯ ಎಲ್ಲೆಲ್ಲು ಬೆಳೆದು ಮಹಿಷಿ ಶ್ರೀಲೋಲ ಕರುಣಿಸೈ ಕನಕವೃಷ್ಟಿಯನು 7 ಎದುರು ನೋಡುತ ನದಿಯು ಹರಿವುದು ಸಾಗರಕೆ ಮುದದಿಂದ ತಾವರೆಯು ಸೂರ್ಯನನ್ನು ವಿಧಿವಶದಿ ಪಾಪಿಗಳು ಯಮಲೋಕವನ್ನು ಸುಧೆಸವಿಯೆ ಭಕ್ತರು ಪರಮಪದವನ್ನು 8 ಮಕ್ಕಳಿಲ್ಲದ ಜನರು ಮಕ್ಕಳನು ಹಡೆದು ಲಕ್ಷ್ಮಿಯೊಲವನು ಹಾಡಿ ಜನರೆಲ್ಲ ದುಡಿದು ಭಕ್ತರಾಗುತ ಸರ್ವ ವಣಿಗೆಗಳು ನಡೆದು ಮುಕ್ತರಪ್ಪಂತೆಲ್ಲರ ಮಾಡು ಜಾಜೀಶ 9
--------------
ಶಾಮಶರ್ಮರು
ಪರಮ ಕರುಣಾಳುಗಳು ಈ ಗುರುಗಳು ಶ್ರೀ ವರತಂದೆ ಮುದ್ದುಮೋಹನವಿಠಲಾಖ್ಯರು ಪ. ಶಾಂತರು ದಾಂತರು ಸಂತೋಷ ಸುಖಿಗಳು ಅಂತರಂಗದಿ ಹರಿಯ ಧ್ಯಾನಿಸುವರು ಕಂತುಜನಕನ ಧ್ಯಾನ ಸತ್ಪಾಂಥರಿಗೆ ಬೀರುತಲಿ ಎಂತೆಂತೊ ಸುಜನರಿಂ ಸ್ತುತಿಸಿಕೊಳುತಿಹರು 1 ನಿರಪೇಕ್ಷೆಯಿಂದಲಿ ಪರರಿಗುಪಕಾರವನು ತೆರವಿಲ್ಲದೆಲೆ ಸತತ ಮಾಡುತಿಹರು ಅರಿಯೆನಿವರಾ ಮಹಿಮೆ ಪರದೇಶಿ ನಾನಿನ್ನು ಕರುಣೆಯಿಂದೆನಗೆ ಹರಿ ಅಂಕಿತವನಿತ್ತರು 2 ಸುಪ್ರೀತರಾಗಿನ್ನು ಈ ಶರೀರದ ಒಳಗೆ ಶ್ರೀಪತೀ ತೈಜಸನ ವ್ಯಾಪಾರದಿ ಶ್ರೀ ಪರಮ ಗುರುಗಳೆಂದ್ಹರಿಯ ನಿರ್ಮಾಲ್ಯವನು ಕೃಪಾತಿಶಯದಿ ಕೊಡಿಸಿ ಎನ್ನನುದ್ಧರಿಸಿದರು3 ಎಲ್ಲರೂ ದÉೀವಾಂಶರೆನ್ನುವುದು ಕೇಳುತಲಿ ನಿಲ್ಲದೇ ಮನಸು ಬಹು ತಲ್ಲಣಿಸುತಿರಲು ಪಲ್ಲವಿಸಿ ಎನ್ನ ಮನ ಮಂದಿರದಿ ಅನುಗಾಲ ಪುಲ್ಲಾಕ್ಷನನು ತೋರಿ ಉಲ್ಲಾಸಕೊಡುತಿಹರು 4 ಶ್ರೇಷ್ಠಗುರುಗಳು ಇವರು ಸೃಷ್ಟಿಯೊಳಗೆನಗಿನ್ನು ಎಷ್ಟು ಯೋಚಿಸೆ ಮನವು ಮಹಿಮೆಯರಿಯೆ ವೃಷ್ಟಿವಂಶಜ ರುಕ್ಮಿಣೀರಮಣ ಗೋಪಾಲ- ಕೃಷ್ಣವಿಠಲನ ಬಹು ದಿಟ್ಟಾಗಿ ತೋರುವರು 5
--------------
ಅಂಬಾಬಾಯಿ
ಪರಮ ಪುರುಷನ ಮೊದಲು ನಮಿಸುತಚರವವೈದಿದ ದೈವತಂಗಳಿಗೆರಗುವೆನು ಕ್ರಮದಿಂದ ಕೂಡುತಧರಣಿ ತಳದಲ್ಲಿ 1 ದರ್ಭ ಮುಖ ವಿಸ್ತರದಿ ಹಾಕುತಪದ್ಮ ಮೊದಲಾಸನದಿ ಪ್ರಾಂಗ್ಮುಖಇದ್ದರಗ್ರ್ಯಾಳ ಸಮ್ಮುಖ ಶ್ರದ್ಧೆ ಮಾಡುವುದು 2 ಕೂರ್ಮ ಆಸನಈಸು ಚಿಂತಿಸಬೇಕು ಎಂಬೋಭಾಷೆ ರಾಜಿಪುದು 3 ಧಾರುಣಿ ಮಂತ್ರದಲಿ ಕೂಡುತನಾರಸಿಂಹ ಸುದರ್ಶನಾಸ್ತ್ರದಿಆರು ದಿಕ್ ದಿಗ್ಬಂಧನಾಡಿಯಸೂರಿ ಮಾಡುವುದು 4 ನಾಗಭೂಷಾಜ್ಞೆಯಲಿ ಭೂತಗಳ್‍ಹೋಗಲೆಂಬುವ ಮಂತ್ರ ಪಠಿಸುತಯೋಗಿಗಳ ಪ್ರಾರ್ಥಿಸುತ ಸಂತತಯಾಗ ಮಾಡುವದು 5 ಹರಿಯ ಗುರುಗಳ ನಮನಗೋಸುಗಕರವ ಮನವನು ಶೋಧಿಸೂವುದುಎರಡು ಬೀಜಾಕ್ಷರದಿ ನಾಂಕುಎರಡು ಸ್ಥಾನದಲಿ 6 ಬ್ರಹ್ಮಹತ್ಯಾ ಮಂತ್ರದಿಂದಲಿತಮ್ಮ ವಾಮಾಂಗವನೆ ಮುಟ್ಟುತಅಧರ್ಮ ಪುರುಷನ ಚಿಂತಿಸುವುದುಕರ್ಮ ಕರ್ತೃಕನು 7 ಶೋಕ್ಷ ನಾಭಿಲಿ ಪಾಪ ಪುರುಷನನಾಶ ಹೃದಯದಿ ಭಸ್ಮ ತ್ಯಜಿಸುತಲೇಸು ವರುಣದಿ ಸುಧೆಯ ವೃಷ್ಟಿಲಿಸೂಸುವುದು ತನುವ 8 ಹೀಗೆ ನಿತ್ಯದಿ ಕಾಮಿನೀಯರುಬಾಗಿ ಪತಿಯಲೆ ಕಾರ್ಯ ಮಾಡುತನಾಗಶಯನ ನಕ್ಷರದ ತತ್ಸುಖಭೋಗ ಬಯಸುವುದು9 ನಾರಿಯರು ಗುರು ಮಂತ್ರದೀಪರಿಪೂರ್ವದಲೆ ಮಾಡುತ ಕೃಷ್ಣನಆರು ವರ್ಣವ ಪಠಿಸುತಲೆ ಗೃಹಕಾರ್ಯ ಮಾಡುವುದು 10 ರಾಮ ಮೊದಲಾದನ್ಯ ಮಂತ್ರಗಳ್‍ಕಾಮಿನೀಯರು ಜಪಿಸುತಲೆ ನಿಜಕಾಮದಿಂದಲೆ ಯೋಗ್ಯತಾವನುನೇಮದಿಂದಿರಲು 11 ತಾರತಮ್ಯವು ಪಂಚಭೇದವುಭೂರಿ ಭಕುತಿಲಿ ಭಜಿಸಿ ಕೃಷ್ಣನಆರು ವರ್ಣವು ಪಠಿಸುತಲೆ ತನ್ನು -ದ್ಧಾರ ಮಾಡುವನು12 ವಾಸು ಮಾಡುತಲೆನ್ನ ಮನದೊಳುಆಶು ಭೇದಕ ಸ್ತ್ರೀಜನಂಗಳಿಗೀಶ ಮಾಡಿದ ಇದನ ಇಂದಿ-ರೇಶಗರ್ಪಿಸುವೆ 13
--------------
ಇಂದಿರೇಶರು
ಪಾದ ನಂಬೋ ಸಿದ್ಧಾಂತ ಸಾರವ ಹೃದಯದಿ ತುಂಬೋಪ ಶತಕೋಟಿ ಜನ್ಮ ಸುಕೃತದಿ ಅತುಳ ವೈಷ್ಣವಜನ್ಮ ದೊರಕಿತು ನಿಜದಿ ಪಾದ ರಜದಿ ಮುಣುಗುತ ದುರ್ವಿಷಯಗಳನು ನಿಗ್ರಹಿಸೊ ನೀ ತ್ವರದಿ 1 ಈತನ ವಾಕ್ಯವೆ ವೇದವಾಕ್ಯಗಳೆಂದರಿಯೊ ಜಿಷ್ಣು ಸರ್ವೇಶ ಧಾತೃಗಳೊಂದೆಂಬ ದು ರ್ವಾದಿ ದುರ್ಗಜಕೆ ಕೇಸರಿಯಾಗಿರುವ 2 ವಟು ವೃಷ್ಟಿವಂಶ ಲಲಾಮ ತಟಿತಾಭ ಜಗನ್ನಾಥ ವಿಠಲಗೆ ಪ್ರೇಮಾ ಸ್ಫುಟರೂಪತ್ರಯನೆ ನಿಷ್ಕಾಮಾ ನಿ ಷ್ಕುಟಿಲ ಭಾರತಿರಮಣ ಹನುಮಂತ ಭೀಮ 3
--------------
ಜಗನ್ನಾಥದಾಸರು
ಬಂಟರಾಗಿ ಬಾಗಿಲ ಕಾಯೋರು ಹರಿಯವೈಕುಂಠದಿ ರಂಗನಾಯಕನರಮನೆಯ ಪ. ಸುತ್ತ ವಿರಜಾನದಿ ಮತ್ತು ನಂದನ ವನಉತ್ತಮೋತ್ತಮ ವೈಕುಂಠಉತ್ತಮೋತ್ತಮ ವೈಕುಂಠದೊಳಗಿನ್ನುಮಿಂಚಿನಂತೆ ಹೊಳೆವೊ ಮುಕ್ತರು1 ಶ್ರೀದೇವಿ ತಾನು ಮುರಹರನ ಪುರದಾಗವಿರಜಾ ತಾನೆಂದು ಕರೆಸುತವಿರಜಾ ತಾನೆಂದು ಕರೆಸುತ ನಾನಾ ಪರಿಗಿಳಿ ಕೋಗಿಲಾಗಿ ಮೆರೆವೋಳು2 ಉತ್ತರ ದಿಕ್ಕಿನಲೆಥಳ ಥಳಿಸುವ ದ್ವಾರ ಮುತ್ತು ಮಾಣಿಕ್ಯ ಅಳವಟ್ಟಮುತ್ತು ಮಾಣಿಕ್ಯ ಅಳವಟ್ಟ ಹರಿಪುರರತ್ನದ ಝಲ್ಲೆ ಬಿಗಿದಾವೆÉ 3 ರಾಜಿ ಮಾಣಿಕ ಗೋಡೆ ಗಾಜಿನ ನೆಲಗಟ್ಟುಈ ಜೋಡು ದ್ರವ್ಯ ಎಲ್ಲಿಲ್ಲ ಈ ಜೋಡು ದ್ರವ್ಯ ಎಲ್ಲಿಲ್ಲ ಇದುನಮ್ಮ ಶ್ರೀದೇವಿಯರಸನ ಅರಮನೆ 4 ಕೇಶರ ಶ್ರೀಗಂಧ ಕಲವೆಲ್ಲ ಪರಿಮಳಬಿಸÀಜನೇತ್ರನರಮನೆಯಬಿಸಜನೇತ್ರೆಯರ ಮನೆಯಿಂದ ಕುಸುಮದ ವೃಷ್ಟಿಗರೆದಾವು5 ಉತ್ತರ ಪಾಲ್ಗಡಲೊಳು ಮುತ್ತು ಮಾಣಿಕರತ್ನಪಚ್ಚ ಕರ್ಪೂರ ಸುಳಿಗಾಳಿಪಚ್ಚ ಕರ್ಪೂರ ಸುಳಿಗಾಳಿ ಇದುನಮ್ಮ ಅಚ್ಯುತಾನಂತನರಮನೆಯ6 ಕೃಷ್ಣ ರಾಮೇಶನ ವಿಶಿಷ್ಠದ ವೈಕುಂಠಸೃಷ್ಟಿ ಮಾಡಿ ರಚಿಸಿದ ಸೃಷ್ಟಿ ಮಾಡಿ ರಚಿಸಿದ ನೋಡಲು ದೃಷ್ಟಿ ಸಾಲದು ಜನರಿಗೆ7
--------------
ಗಲಗಲಿಅವ್ವನವರು
ಬಂದಾ ಗೋವಿಂದನು ಗೋಕುಲದಿಂದ ಆನಂದ ಮುಕುಂದನು ಪ ಅಂದಿಗೆ ಕಿರುಗೆಜ್ಜೆಯು ಘಲುಘಲುರೆನೆ ಮಂದಹಾಸನಗೆಯಿಂದಲಿ ಶ್ರೀಹರಿ ಅ.ಪ ಕರದಿ ಕಂಕಣ ವಂಕಿಯು ಹೊಳೆಯುತಲಿ ಸಿರದಿ ಕಿರೀಟ ಮುಂ- ಗುರುಳು ಮುಖ ಬೆವರಿನ ಹೊಸ ಕಾಂತಿಯಲಿ ಬೆರಳುಗಳಲಿ ಉಂಗುರ ಥಳಥಳಥಳ ಹೊಳೆಯುವ ಸೊಬಗಿನಲಿ ಕೊರಳೊಳು ಸರಿಗಿಯ ಸರ ಪರಿ ಸರ ಪದಕಗಳ್ಹೊಳೆಯುತಲಿ ಜರಿ ಪೀತಾಂಬರದ ನಡುವಿಲಿ ಕಿರು ಗೆಜ್ಜೆಗಳ್ಹೊಳೆಯುತಲಿ ತರುತುರು ತರುಣೇರು ಮರುಳಾಗುವ ತೆರ ಪರಿಪರಿ ರಾಗದಿ ಮುರಳಿಯ ನುಡಿಸಲು ಸುರರು ಪುಷ್ಪ ವೃಷ್ಟಿಯ ಸುರಿಸುತಲಿರೆ ತುರುಕರು ಮಧ್ಯದಿ ಪೊಳೆವೊ ಚಂದ್ರಮನಂತೆ1 ತುಂಬುರು ನಾರದರೆಲ್ಲರು ಕೂಡಿ ಅಂಬರದಲಿ ನೆರೆದರು ಗಂಧರ್ವಪ್ಸರ ಸ್ತ್ರೀಯರು ಕುಣಿದಾಡಿ ಪರಮಾತ್ಮನ ಸ್ತುತಿಸುತ ರಂಭೆ ಊರ್ವಶಿ ಮೇನಕೆಯರು ಕೂಡಿ ಆನಂದದಿ ನರ್ತಿಸೆ ಇಂದಿರೆ ರಮಣನ ಗುಣಗಳ ಪಾಡಿ ಅಂಬರದಲಿ ದೇವ ದುಂದುಭಿಗಳು ಮೊಳಗಲು ಕಂದರ್ಪನ ಪಿತ ಕರುಣದಿ ಭಕುತರ ಚಂದದಿ ದುರ್ಮತಿ ನಾಮ ವತ್ಸರದಲಿ ಕುಂದಿಲ್ಲದೆ ಸಲಹುವೆನೆನುತಲಿ ತ್ವರ 2 ಸೃಷ್ಟಿಗೀಶನ ಗುಣಗಳ ಪಾಡುತಲಿ ವ- ಶಿಷ್ಠರು ವಿಶ್ವಾಮಿತ್ರ ಕಶ್ಯಪ ಭಾರದ್ವಾಜ ಮುನಿಗಳು ದೇವೇಶನ ಸ್ತುತಿಸುತ ಅತ್ರಿ ಜಮದಗ್ನಿ ಜಾಬಾಲಿಗಳು ಶ್ರೀಕೃಷ್ಣನೆ ಪರನೆಂದು- ತ್ತಮ ಋಷಿಗಳು ಪೊಗಳುತಲಿರಲು ಪರಮೇಷ್ಠಿ ಪಿತನ ತ- ನ್ನಿಷ್ಟ ಭಕುತರನು ಸಲಹಲು ಕಂಕಣ ಕಟ್ಟಿಹ ಕಮಲನಾಭವಿಠ್ಠಲ ತ್ವರ ಶಿಷ್ಟರ ಸಲಹಲು ಸರಸರ ಓಡುತ 3
--------------
ನಿಡಗುರುಕಿ ಜೀವೂಬಾಯಿ
ಬಾರಯ್ಯ ಬಾರಯ್ಯ ಭಕ್ತವತ್ಸಲ ಹರಿ ಶ್ರೀಕೃಷ್ಣ ಪ ಭಕ್ತರು ಬಂದು ದ್ವಾರದಿ ನಿಂದು ಭಕ್ತಿಲಿ ಹಾಡುತ ಪಾಡುತಲಿರುವರು ಮುಕ್ತಿದಾತ ನೀನಲ್ಲದೆ ಸರ್ವ- ಶಕ್ತರಿನ್ಯಾರಿಹರೈ ಎನ್ನುತ ಪೊಗಳ್ವರು 1 ತಾಳಮೇಳದವರೆಲ್ಲರು ನಿನ್ನಯ ಊಳಿಗ ಮಾಡಬೇಕೆನುತಲಿ ಬಂದು ವೇಳೆ ವೇಳೆಗೆ ತಮ್ಮ ಸೇವೆಯ ಸಲಿಸುತ ಭಾಳ ಸಂಭ್ರಮದಿಂದ ಹಾರೈಪರೊ ಹರಿ 2 ತುಂಬುರು ನಾರದರ್ವೀಣೆಯ ನುಡಿಸಲು ರಂಭಾದ್ಯಪ್ಸರ ಸ್ತ್ರೀಯರು ನರ್ತಿಸೆ ವಿಶ್ವ ಕು- ಟುಂಬಿಯೆ ಬಾ ಬಾರೆನ್ನುತ ಸ್ತುತಿಪರು3 ಅಂಬರದಲಿ ದೇವತೆಗಳೆಲ್ಲರು ನೆರೆದು ತುಂಬಿ ಪುಷ್ಪವೃಷ್ಟಿಗಳನೆ ಮಾಡುತ ಕುಸುಮ ಮಳೆ ಗಂಭೀರದಿ ಸುರಿಸುತ ಪ್ರಾರ್ಥಿಸುವರು 4 ಅತ್ರಿ ವಸಿಷ್ಠ ಗೌತಮ ಮೊದಲಾಗಿ ರಾತ್ರಿಹಗಲು ಎಡೆಬಿಡದಲೆ ಸ್ತುತಿಸುತ ವೃತ್ರಾರಿಯ ಸುತನಿಗೆ ಸಾರಥಿಯೆ ವಿ- ಚಿತ್ರ ವ್ಯಾಪಾರಿ ಶ್ರೀಹರಿ ಎಂದು ಪೊಗಳ್ವರು 5 ಅಣುಮಹದ್ರೂಪನೆ ಘನಮಹಿಮನೆ ನಿನ್ನ ಮಣಿದು ಬೇಡಿ ಕೈಮುಗಿಯುತ ಸ್ತುತಿಪರು ಪ್ರಣವ ಪ್ರತಿಪಾದ್ಯನೆ ನಿನ್ನ ಗುಣಗಳ ಎಣಿಸಲಸಾಧ್ಯವೆನುತ ಕೊಂಡಾಡ್ವರು 6 ನವನವ ರೂಪದಿ ನಲಿಯುವ ದೇವನೆ ನವವಿಧ ಭಕುತರು ನಮಿಸುತ ಕರೆವರು ಭುವನ ಮೋಹನ ಸುಂದರಮೂರ್ತಿಯೆ ಎಂದು ಕವಿಗಳು ಪೊಗಳುತ ಕುಣಿಯುತಲಿರುವರು 7 ಎಡಬಲದಲಿ ಶ್ರೀ ಭೂದೇವಿಯರಿರೆ ಬಿಡದೆ ಛತ್ರಚಾಮರಗಳಿಂದೊಪ್ಪುತ ತಡಮಾಡದೆ ಬಾ ಮಡದಿಯರ ಸಹಿತದಿ ದಡ ದಡ ಬಾರೆಂದು ಬಡ ಬಡ ಕರೆವರು 8 ವಿಶ್ವರೂಪಕ ವಿಶ್ವನಾಮಕ ವಿಶ್ವತೋಮುಖ ವಿಶ್ವನಾಟಕ ವಿಶ್ವವ್ಯಾಪಕ ವಿಶ್ವಾಧಾರಕ ವಿಶ್ವ ಕುಟುಂಬಿಯೆ ವಿಶ್ವಾಸದಿ ಬಾ 9 ವಿರೋಧಿಕೃತು ಸಂವತ್ಸರ ಬರುತಿರೆ ಪರೋಪಕಾರವ ಮಾಡುತ ಸುಜನರು ವಿರೋಧಿಗಳ ದೂರಿಡುತಲಿ ಶ್ರೀ ಹರಿ ಸರೋಜದಳ ನೇತ್ರನÀ ಸ್ತುತಿಸುವರು 10 ಕಮಲಾಕ್ಷಿಯ ಒಡಗೂಡುತ ಬಾ ಬಾ ಕಮಲಾಸನ ಜನಕನೆ ಹರಿ ಬಾ ಬಾ ಕಮಲನಾಭ ವಿಠ್ಠಲ ಬೇಗ ಬಾರೆಂದು ಸುಮನಸ ವಂದ್ಯನ ಸ್ಮರಿಸುತ ಕರೆವರು11
--------------
ನಿಡಗುರುಕಿ ಜೀವೂಬಾಯಿ
ಬಿಸಜ ಕುಸುಮಾಸ್ತ್ರನÀ ಜನನಿ ಬೇಗ ನೀ ಪ ಎಸೆವ ಪೀಠಕೆ ನಸುನಗುತಲಿ ದಶರಥ ನೃಪನ ಸೊಸೆಯೆ ಕರುಣದಿ ಅ.ಪ ಕಮಲ ಪತಿ ಸಹಿತವಾಗಿ ಆನಳಿನಜಾದಿ ಪರಿವಾರದೊಡನೆ ಆನಂದಾಮೃತ ವೃಷ್ಟಿಯ ಕರೆಸುತೆ 1 ಕಾಲಲಂದಿಗೆ ಗೆಜ್ಜೆಗಳ್ ಮೆರೆಯೆ ಸುರರು ತಾ ಹೊಮಳೆಯ ಸುರಿಯೆ ಕಾಲ ಕಾಲದಿ ನಿನ್ನೋಲಗವಿತ್ತು ಪಾಲಿಸಲ್ಕೆ ಭಕ್ತ ಜನರನು 2 ಕೃತಿ ಶಾಂತಿ ರಮೆ ನಿರ | ಕಾಯುವಳು ನೀನೆಂದು ಶೃತಿ ನಿ | ಕಾಯ ಮುತ್ತೈದೆಯರ್ ಕರೆವರು 3 ತಟ್ಟೆಯೊಳಗರಿಸಿನ ಕುಂಕುಮಾಕ್ಷತೆಗ ಕೃಷ್ಣರಾಯನ ಪಟ್ಟದ ರಾಣಿಯೆ 4 ಹತ್ತುವಿಧದ ವಾದ್ಯಗಳು ಮೊರೆಯೆ ಚಿತ್ಪ್ರಕಾಶ ಜ್ಯೋತಿಗಳು ಹೊಳೆಯೆ ಚಿತ್ತೈಸಮ್ಮ ಚಿತ್ರಮಂಟಪದಲಿ 5
--------------
ಗುರುರಾಮವಿಠಲ
ಭಕ್ತವತ್ಸಲನೆಂಬ ಬಿರುದು ಬಿಡದಿರು ದೇವ ಬಹು ಪರಾಕೆಲೊ ಮುರಾರಿ ಪ. ಶಕ್ತ ನೀನೆಂದು ನಂಬಿರುವೆ ಕೃಪಾಸಿಂಧು ಮತ್ತಗಜ ಮೈಮರೆದು ಸುತ್ತಿ ಕೆಸರೊಳು ಬಿದ್ದು ಶಕ್ತಿ ಹೀನನಾಗಿ ಏಳದಂತಾಗಿದೆ ಮತ್ತಾರಿಗಳವಲ್ಲ ಮಂದರಾದ್ರಿಧರನೆ ಎತ್ತಿ ಕಡೆಹಾಯಿಸೊ ಎನ್ನೊಡೆಯ ಶ್ರೀ ಹರಿಯೆ 1 ನಿಂದ ನೆಲ ಮುನಿಯುತಿದೆ ನಿಪುಣತನವಡಗಿತು ಮಂದಮತಿ ವೆಗ್ಗಳಿಸಿ ನೆಲೆಗಾಣೆ ಮುಂದೆ ತಂದೆ ನೀನಲ್ಲದಿನ್ಯಾರು ರಕ್ಷಿಪರಯ್ಯ ಬಂಧನವ ಪರಿಹರಿಸೊ ಭಯನಿವಾರಣ ಹರಿಯೆ 2 ಕೊಂಡೆಯರ ಕೆಡಮೆಟ್ಟಿ ಕುಹಕಿಗಳ ಮಸ್ತಕವ ಚೆಂಡಾಡಿದ ಚಿನ್ಮಯರೂಪ ನೀನು ದಿಂಡರಿದು ದುರಳರನು ದುರಿತಗಳ ಪರಿಹರಿಸಿ ಪುಂಡರೀಕಾಕ್ಷ 3 ವ್ಯಾಕುಲದಿ ಕೃಷ್ಣಮೃಗವು ಎದೆಗುಂದಿರೆ ನೀ ಕರುಣಿ ಸಮಯದಲಿ ವೃಷ್ಟಿಯ ಕರೆದು ಜೋಕೆಯಲಿ ಪಥÀವೆನೇರಿಸಿದ್ಯೊ ಜಗದೀಶ 4 ನಿನ್ನನೆ ಪೂಜಿಪೆನು ನಿನ್ನನೆ ಪಾಡಿ ಪೊಗಳುವೆನು ನಿನ್ನನೆ ನಂಬಿದವಳಿಗಿಂತ ಉನ್ನತವಾದ ಕಂಟಕವು ಬಂದಿದೆ ಕಾಯೊ ಪನ್ನಗಶಯನ ಹೆಳವನಕಟ್ಟೆ ರಂಗಯ್ಯ 5
--------------
ಹೆಳವನಕಟ್ಟೆ ಗಿರಿಯಮ್ಮ