ಒಟ್ಟು 621 ಕಡೆಗಳಲ್ಲಿ , 55 ದಾಸರು , 423 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವದೇವರಿಗುಂಟೀ ವೈಭವ ಪ ಸಾರ್ವಭೌಮ ನೀನೆ ಸಕಲ ಭಾವಜನಯ್ಯ ಅ.ಪ ಸಿರಿಯರೆಂಟುಮಂದಿ ನಿನಗೆ ಅರಸಿಯರು ಕರುಣಶರಧಿ ಸುರರು ಮೂವತ್ತು ಮೂರು ಕೋಟಿ ಚರಣಸೇವಕರಯ್ಯ ಹರಿಯೆ1 ಅನುದಿನವು ಎಡೆಬಿಡದೆ ಮನು ಸುಜನ ಸಂತತಿ ಘನವೇದಘೋಷದಿಂದ ನೆನೆದು ಪೂಜಿಪರಪರಿಮಿತ ಲೀಲೆ 2 ಕೋಟಿಸೂರ್ಯಪ್ರಕಾಶ ನಿನ್ನ ಆಟ ಬಲ್ಲವರಾರು ಜಗದಿ ಆಟವಾಡುವಿ ಅಗಮ್ಯಚರಿತ ಸಾಟಿಯಿಲ್ಲದೆ ಧನವ ಕಲಸಿ 3 ಕರೆಸಿ ಅಸಮಭಕುತ ಜನರ ವರವ ನೀಡಿ ಮುಡಿಪುಗೊಂಡು ಮೆರೆವಿ ಪರಮ ಉತ್ಸವದೊಡನೆ ಗಿರಿಯ ಭೂವೈಕುಂಠಮೆನಿಸಿ 4 ಕಿಂಕರ ಜನರ ಪೊರೆಯಲೋಸುಗ ವೆಂಕಟಾದ್ರಿಯಲ್ಲಿ ನಿಂದಿ ವೆಂಕಟೇಶ ಕಿಂಕರಜನರ ಸಂಕಟಹರ ಶ್ರೀರಾಮಪ್ರಭೋ 5
--------------
ರಾಮದಾಸರು
ಆವಾಹನಆವಾಹನೋಪಚಾರವು ನಿನಗೆ ವಿಭುವೆಆವರಣರಹಿತ ಪರಿಪೂರ್ಣ ಚಿತ್ಸುಖವೆ ಪಹೃದಯಕಮಲದಿ ನೆನೆದು ಪೂಜಿಸುವೆನೆಂದು ಮತ್ತೊದಗಿ ಬಿಂಬದೊಳಿಳುಹಿಯರ್ಚಿಸುವೆನೆಂದುಇದಿರಾಗಿ ನಿಲ್ಲು ಸ್ಥಾಪಿತನಾಗು ಹತ್ತಿರಿರುಹದುಳುನಾಗೆಂದೆನೀ ತಪ್ಪನೆಣಿಸದೆ ಸಲಹು 1ಅಣುಮಹತ್ಪರಿಪೂರ್ಣ ವಾಸುದೇವನೆ ನಿನ್ನಗಣಿಸಿ ನೆಲೆಗಾಣವೀ ಶ್ರುತಿಗಳೆಂಬುದನುಮನದೊಳೆಣಿಸುತಲಿಹೆನು ಸರ್ವರೊಳು ಸಮಬುದ್ಧಿಯನು ಪಾಲಿಸೆಂದು ಬೇಡುವೆನು ಜಗದೀಶಾ 2ಪರಿಪೂರ್ಣನೆಂಬ ಭಾವದಿ ಮನವು ನಿಲದಾಗಿ ಗುರಿಗೈದು ನಿನ್ನ ಮಂಗಳ ಮೂರುತಿಯನುಪರಿಪರಿಯಲುಪಚರಿಸಿ ಸ್ಥಿರಗೈವೆನೀ ಮನವತಿರುಪತಿಯೆ ಸ್ಥಿರವಾಸ ಶ್ರೀ ವೆಂಕಟೇಶಾ 3ಓಂ ಯಮುನಾವೇಗಸಂಹಾರಿಣೇ ನಮಃ
--------------
ತಿಮ್ಮಪ್ಪದಾಸರು
ಇಕೋ ಈತ ವೆಂಕಟೇಶನೊ | ಭವದ | ಸಿಕ್ಕು ಬಿಡಿಸಿ ನೆನದವರಿಗೆ ಸಿಕ್ಕಿ ಮನದಿಂದಗಲದಿಪ್ಪಾ ಪ ಕರುಣ ಅರುಣ ಕಿರಣ ಪೋಲುವ | ಚರಣ ಧರಣಿ ತರುಣಿ ಸ್ಮರಿಸಿ | ಕರುಣಗಡಲಾ | ಧರಣಿಯಿಂದ ಉದ್ಧರಣೆ ಮಾಡಿದೆ ಪರಣನೀತ 1 ಮಂಡಿಯ ಮಂಡನ | ಕುಂಡಲ ಕಾಂತಿ | ಗಂಡ ಸ್ಥಳದಲಿ ಮಿರುಗೆ ತುಲಸಿ | ಕೌಸ್ತುಭ ಕಾಲ | ಪೆಂಡೆಯಿಟ್ಟು ನಂದನೀತ 2 ವಾಹನ ಆ ಖಂಡಲ ಇಕ್ಷುಕೋ | ಪರಮೇಷ್ಠಿ | ತೊಂಡರ ನಲಿದು ಕೊಂಡಾಡೆ ಚಂದಿರ ಮಂಡಲದೊಳು ಉ| ದ್ದಂಡನಾಗಿಯಿಪ್ಪಾ | ಪುಂಡ ದೈವನೀತ 3 ಪಂಜಿನಸಾಲು ಪರಂಜಳಿ ವಾದ್ಯ ವಿ | ರಂಜಿಸಲು ಜ್ಞಾನ | ಪುಂಜ ನಾರದ ಜಯ ಜಯ ಪೇಳಲು | ನಿರಂಜನ ಭಂಜನ ಈಶಾ 4 ಕರದ ಜನಕೆ ಸುರಧೇನು ಇದು | ನಿರುತದಲ್ಲಿ ಪೊರೆವ ಭಕ್ತರ | ಕರಿಯ ಕಾಯ್ದ ವಿಜಯವಿಠ್ಠಲ | ಪರಮ ಪುರುಷ ತಿರುಮಲನೀತ 5
--------------
ವಿಜಯದಾಸ
ಇದ್ದೀಯಾ ಶ್ರೀ ಹರಿ ನೀನೊಲಿದು ಬಂದಿದ್ದೀಯಾ ಪ ಇದ್ದೀಯಾ ಶ್ರೀಹರಿ ನೀನು - ವೃದ್ಧಿಸಿದ್ಧಿಯ ನಡುವೆ ಪದುಮನಾಭನು - ಅಭಿ-ವೃದ್ಧಿಯಾಗಲು ತಡವೇನು - ಅಹಬುದ್ಧಿಯಾಗಿ ಭಜಿಸುವ ಬಾಳುವೆಗೆ - ಸ-ಮೃದ್ಧಿಯಾಗಿ ಸರ್ವ ಸಿದ್ಧಿಯ ಕೊಡಲಾಗಿ 1 ನಂಬಿದ್ದ ಸುಜನರು ಹರಿಯೆ - ಕೆಟ್ಟದೆಂಬ ಸುದ್ದಿಯ ನಾನರಿಯೆ - ಸತ್ಕು-ಟುಂಬ ಎಂಬುದು ಹೊಸಪರಿಯೆ - ಅಹಬೆಂಬಲವಾಗಿ ಸಜ್ಜನರ ಸಲಹುವ ಕೃ-ಪಾಂಬುಧಿ ಮೂಜಗಕೊಲಿಯಲೋಸುಗ ಬಂದು ಉಲಿಯೆ2 ಇಂದು - ಅಹಆಸೆ ಬಿಟ್ಟು ಪೂಜಿಸುವ ಭಕ್ತರದಾಸನೆಂದು ವೆಂಕಟೇಶ ನೀನೊಲಿದು ಬಂದಿದ್ದೀಯಾ3
--------------
ಕನಕದಾಸ
ಇನ್ನಾದರೂ ಬುದ್ಧಿ ಬಾರದು ಜನಕೆ ಕಣ್ಣಾರೆ ಕಂಡರು ಮರವುದು ಮನಕೆ ಪ. ಉದರದಲ್ಲಿ ರಚಿಸುವರ್ಯಾರು ರೂಪಾ- ತದಧೀನವಾಗಿ ಬರುವದೆಂದು ತಾಪ ಮದ ಮೋಹಾದಿಗಳೆಂತು ಮಸುಕುವದೆಂತರಿ- ತಿದ ನೋಡಿದರೆ ಕರ್ತ ತೋರುವ ಭೂಪ 1 ಕಾರಣ ಸಾಮಥ್ರ್ಯಯಿದ್ದರು ಕಾರ್ಯ ತೋರದು ಕೆಲರಿಗೆ ತನ್ನಂತಾಗುವದು ವಾರಿಧಿ ಶಯನನ ವಶವಾದರಿಂದಹಂ- ಕಾರದಿಂದಲಿ ತನ್ನಿಂದಹದೆಂಬ ಮೋಹದಿ 2 ರಕ್ಷಕರಿಲ್ಲದ ಶಿಶು ಬದುಕುವುದು ಲಕ್ಷ ಜನರ ಯತ್ನದಲಿ ಮತ್ತೊಂದಿರದು ಲಕ್ಷ್ಮೀರಮಣ ವೆಂಕಟೇಶನ ಗತಿಯೆಂದಾ- ಪೇಕ್ಷಿಸದಿರೆ ಕುಕ್ಷಿಯೊಳಗಿಟ್ಟು ಸಲಹುವಾ 3
--------------
ತುಪಾಕಿ ವೆಂಕಟರಮಣಾಚಾರ್ಯ
ಇಲ್ಲಿ ಬಾರೋ ಹರಿ ತಾತ್ಸಾರ ಥರ ಪರಿ ಪ. ಬಿಲ್ಲಹಬ್ಬದ ನೆವನದಿಂದತಿ ಮಲ್ಲಕಂಸಾದಿಗಳ ಮಡುಹಿದ ಬಲ್ಲಿದನೆ ಲೋಕದಲಿ ಸರಿ ನಿನ- ಗಿಲ್ಲ ಶ್ರೀ ಭೂನಲ್ಲ ಕೃಪೆಯಿಂದ ಅ.ಪ. ಶ್ರೀ ಪಯೋಜಭವ ಶಿವ ಶಕ್ರಾದಿಗಳನ್ನು ಕಾಪಾಡಿ ಖಳಕುಲವ ಖಂಡಿಪ ಸರ್ವ ಭೂಪತಿ ತವ ಪಾದವ ನಂಬಿರಲೆನ್ನ ದುರಿತ ಮ- ಹಾಪಯೋಧಿಯೊಳಿಳಿಸಿದರೆ ಸುಜ- ನಾಪವಾದವು ಬಿಡದು ನಿನ್ನ ಪ- ದೇ ಪದೇ ಇನ್ನೆಷ್ಟು ಪೊಗಳಲಿ 1 ಕರ್ಮ ಕೊಡುವುದು ಫಲವೆಂಬ ನುಡಿಯನುಭವಸಿದ್ಧವು ಆದರು ಜಗ ದೊಡೆಯಗಾವದಸಾಧ್ಯವು ನೀ ಮಾಳ್ಪ ಚೋದ್ಯವು ನುಡಿ ಮನೋಗತಿಗಳುಕವೆಂಬೀ ಸಡಗರವು ವೇದ ಪ್ರಸಿದ್ಧವು ನಡೆಯಲೇಳಲು ಶಕ್ತಿ ಕುಂದಿದ ಬಡವನನು ಕೈಪಿಡಿದ ತವಕದೊಳ್ 2 ಬೆಟ್ಟದೊಡೆಯ ವೆಂಕಟೇಶ ನೀ ಗತಿ ಎಂದು ಘಟ್ಯಾಗಿ ನಂಬಿರುವ ದಾಸನ ಕೈಯ ಬಿಟ್ಟರೆ ಸರಿಯೆ ದೇವ ಸಜ್ಜನರ ಕಾವ ಸಟ್ಟಸ ಶಿಗಡಿ ನೀರ ಸುರಿಸುತ ಕಟ್ಟಿಕಟ್ಟಿಸುತದರ ಛಾಯ ದೊ - ಳಿಟ್ಟ ಗದ್ದಿಗೆಯಲ್ಲಿ ಕುಳಿತು ಸ- ಮೃಷ್ಟ ಸುಖವುಂಬರಸನಂದದಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಉತ್ಥಾನ ದ್ವಾದಶಿಯ ದಿವಸ (ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ) ರಂಭೆ ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ. ಮಾನಿನೀಮಣಿ ಈತನ್ಯಾರೆ ಕರು ಣಾನಿಧಿಯಂತಿಹ ನೀರೆ ಹಾ ಹಾ ಭಾನುಸಹಸ್ರ ಸಮಾನಭಾಷಿತ ಮ- ಹಾನುಭಾವನು ಸುಪ್ರವೀಣನಾಗಿಹ ಕಾಣೆ 1 ಭಯಭಕ್ತಿಯಿಂದಾಶ್ರಿತರು ಕಾಣಿ- ಕೆಯನಿತ್ತು ನುತಿಸಿ ಪಾಡಿದರು ನಿರಾ- ಮಯ ನೀನೇ ಗತಿಯೆಂದೆಲ್ಲವರು ಹಾ ಹಾ ಭಯನಿವಾರಣ ಜಯ ಜಯವೆಂದು ನುತಿಸೆ ನಿ- ರ್ಭಯ ಹಸ್ತ ತೋರುತ ದಯಮಾಡಿ ಪೊರಟನೆ2 ಭೂರಿ ವಿಪ್ರರ ವೇದ ಘೋಷದಿಂದ ಸ್ವಾರಿಗೆ ಪೊರಟ ವಿಲಾಸ ಕೌಸ್ತು- ಚಾರುಕಿರೀಟಕೇಯೂರಪದಕಮುಕ್ತಾ ಹಾರಾಲಂಕಾರ ಶೃಂಗಾರನಾಗಿರುವನು3 ಸೀಗುರಿ ಛತ್ರ ಚಾಮರದ ಸಮ ವಾಗಿ ನಿಂದಿರುವ ತೋರಣದ ರಾಜ ಭೋಗ ನಿಶಾನಿಯ ಬಿರುದ ಹಾ ಹಾ ಮಾಗಧ ಸೂತ ಮುಖ್ಯಾದಿ ಪಾಠಕರ ಸ- ರಾಗ ಕೈವಾರದಿ ಸಾಗಿ ಬರುವ ಕಾಣೆ4 ಮುಂದಣದಲಿ ಶೋಭಿಸುವ ಜನ ಸಂದಣಿಗಳ ಮಧ್ಯೆ ಮೆರೆವ ತಾರಾ ವೃಂದೇಂದುವಂತೆ ಕಾಣಿಸುವ ಹಾಹಾ ಕುಂದಣ ಖಚಿತವಾದಂದಣವೇರಿ ಸಾ- ನಂದದಿ ಬರುವನು ಮಂದಹಾಸವ ಬೀರಿ5 ತಾಳ ಮೃದಂಗದ ರವದಿ ಶ್ರುತಿ ವಾಲಗ ಭೇರಿ ರಭಸದಿ ಜನ ಜಾಲ ಕೂಡಿರುವ ಮೋಹರದಿ ಹಾಹಾ ಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ- ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6 ಊರ್ವಶಿ:ಈತನೆ ಭಾಗ್ಯನಿಧಿ ನೋಡೆ ನೀ ಮುದದಿಪ. ಈತನೆ ಈರೇಳು ಲೋಕದ ದಾತ ನಾರಾಯಣ ಮಹಾ ಪುರು- ವಿನುತ ನಿ- ರ್ಭೀತ ನಿರ್ಗುಣ ಚೇತನಾತ್ಮಕಅ.ಪ. ಮಂದರ ಪೊತ್ತ ಭೂನಿತಂಬಿನಿಯ ಪ್ರೀತ ಮಾನವಮೃಗಾಧಿಪ ತ್ರಿವಿಕ್ರಮ ದಾನಶಾಲಿ ದಶಾನನಾರಿ ನ- ವೀನ ವೇಣುವಿನೋದ ದೃಢ ನಿ- ರ್ವಾಣ ಪ್ರವುಢ ದಯಾನಿಧಿ ಸಖಿ 1 ವಾರಿಜಾಸವಾನವಂದಿತ ಶ್ರೀಪಾದಯುಗ್ಮವ ತೋರಿಕೊಂಬುವ ಸಂತತ ಕೇರಿಕೇರಿಯ ಮನೆಗಳಲಿ ದಿ- ವ್ಯಾರತಿಯ ಶೃಂಗಾರ ಭಕ್ತರ- ನಾರತದಿ ಉದ್ಧಾರಗೈಯಲು ಸ್ವಾರಿ ಪೊರಟನು ಮಾರಜನಕನು 2 ಮುಗುದೆ ನೀ ನೋಡಿದನು ಕಾಣಿಕೆಯ ಕ- ಪ್ಪಗಳ ಕೊಳ್ಳುವನು ತಾನು ಬಗೆಬಗೆಯ ಕಟ್ಟೆಯೊಳು ಮಂಡಿಸಿ ಮಿಗಿಲು ಶರಣಾಗತರ ಮನಸಿನ ಬಗೆಯನೆಲ್ಲವ ಸಲ್ಲಿಸಿ ಕರುಣಾ ಳುಗಳ ದೇವನು ಕರುಣಿಸುವ ನೋಡೆ3 ರಂಭೆ :ದೃಢವಾಯಿತೆಲೆ ನಿನ್ನ ನುಡಿಯು ಸುರ ಗಡಣ ಓಲಗಕೆ ಇಮ್ಮಡಿಯು ಜನ- ರೊಡಗೂಡಿ ಬರುತಿಹ ನಡೆಯು ಹಾ ಹಾ ಮೃಡ ಸರೋಜ ಸುರಗಡಣ ವಂದಿತ ಕ್ಷೀರ ಕಡಲ ಶಯನ ಜಗದೊಡೆಯನಹುದು ಕಾಣೆ1 ಮದಗಜಗಮನೆ ನೀ ಪೇಳೆ ದೇವ ಸದನವ ಪೊರಡುವ ಮೊದಲೇ ಚಂದ- ನದ ಪಲ್ಲಂಕಿಯ ತಂದು ಮ್ಯಾಲೆ ಹಾ ಹಾ ಮುದದಿಂದ ಬಾಲಕರೊದಗಿ ಸಂತೋಷದಿ ಚದುರತನದಿ ಪೋಗುವನು ಪೇಳೆಲೆ ನೀರೆ2 ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವ ಶ್ರೀರಮಾಧವನ ಲೀಲೆ ಘೋರ ದೈತ್ಯಕುಠಾರ ಲಕ್ಷ್ಮೀ ನಾರಾಯಣನ ಬಲಕರ ಸರೋಜದಿ ಸೇರಿ ಕುಳಿತ ಗಂಭೀರ ದಿನಪನ ಭೂರಿತೇಜದಿ ಮೆರೆವುದದು ತಿಳಿ1 ದೊರೆಯು ಬರುವನು ಎಂದು ಎಲ್ಲರಿಗೆ ಗೋ- ಚರಿಸುವನೊಲಿದು ಇಂದು ತರ ತರದ ಆರತಿಗಳನು ನೀವ್ ಧರಿಸಿ ನಿಂದಿರಿಯೆಂದು ಜನರಿಗೆ- ಚ್ಚರಿಗೆಗೋಸುಗ ಮನದ ಭಯವಪ- ಹರಿಸಿ ಬೇಗದಿ ಪೊರಟು ಬಂದುದು ರಂಭೆ :ಸರಸಿಜನಯನೆ ನೀ ಪೇಳೆ ಸೂರ್ಯ ಕಿರಣದಂತಿಹುದೆಲೆ ಬಾಲೆ ಸುತ್ತಿ ಗೆರಕವಾಗಿಹುದು ಸುಶೀಲೆ ಆಹಾ ಹರಿಯ ವೈಕುಂಠ ನಗರದಂತೆ ಜ್ಯೋತಿ ವಿ- ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1 ಊರ್ವಶಿ:ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧ ದ್ವಾದಶಿಯೊಳಗೆ ಬಾಲೆ ಮಾಧವನ ಪ್ರೀತ್ಯರ್ಥವಾಗಿ ಶು- ಭೋದಯದಿ ಸಾಲಾಗಿ ದೀಪಾ ರಾಧನೆಯ ಉತ್ಸಹದ ಮಹಿಮೆಯ ಸಾದರದಿ ನೀ ನೋಡೆ ಸುಮನದಿ1 ನಿಗಮಾಗಮದ ಘೋಷದಿ ಸಾನಂದ ಸು- ತ್ತುಗಳ ಬರುವ ಮೋದದಿ ಬಗೆ ಬಗೆಯ ನರ್ತನ ಸಂಗೀತಾ ದಿಗಳ ಲೋಲೋಪ್ತಿಯ ಮನೋಹರ ದುಗುಮಿಗೆಯ ಪಲ್ಲಂಕಿಯೊಳು ಕಿರು2 ನಗೆಯ ಸೂಸುತ ನಗಧರನು ಬಹ ಚಪಲಾಕ್ಷಿ ಕೇಳೆ ಈ ವಸಂತ ಮಂ- ಟಪದಿ ಮಂಡಿಸಿದ ಬೇಗ ಅಪರಿಮಿತ ಸಂಗೀತ ಗಾನ ಲೋ- ಲುಪನು ಭಕ್ತರ ಮೇಲೆ ಕರುಣದಿ ಕೃಪೆಯ ಬೀರಿ ನಿರುಪಮ ಮಂಗಲ ಉಪಯಿತನು ತಾನೆನಿಸಿ ಮೆರೆವನು3 ಪಂಕಜಮುಖಿ ನೀ ಕೇಳೆ ಇದೆಲ್ಲವು ವೆಂಕಟೇಶ್ವರನ ಲೀಲೆ ಶಂಕರಾಪ್ತನು ಸಕಲ ಭಕ್ತಾ ಕರ ಚ ಕ್ರಾಂಕಿತನು ವೃಂದಾವನದಿ ನಿ ಶ್ಯಂಕದಿಂ ಪೂಜೆಯಗೊಂಡನು4 ಕಂತುಜನಕನಾಮೇಲೆ ಸಾದರದಿ ಗೃ- ಹಾಂತರಗೈದ ಬಾಲೆ ಚಿಂತಿತಾರ್ಥವನೀವ ಲಕ್ಷ್ಮೀ ಕಾಂತ ನಾರಾಯಣನು ಭಕುತರ ತಿಂಥಿಣಿಗೆ ಪ್ರಸಾದವಿತ್ತೇ- ಕಾಂತ ಸೇವೆಗೆ ನಿಂತ ಮಾಧವ5
--------------
ತುಪಾಕಿ ವೆಂಕಟರಮಣಾಚಾರ್ಯ
ಉದಯಾದ್ರೀಶ ವಿಠಲ ಮುದವನಿತ್ತವನೀಗೆಉದ್ಧರಿಸ ಬೇಕೆಂದು ಪ್ರಾಥಿಸುವೆ ಹರಿಯೇ ಪ ಸದಯ ನೀನಿರೆದೇವ ಸಂಸ್ಕøತಿಯ ಶೃಂಖಲೆಗೆಬೆದರಿಕಿಲ್ಲವೊ ಇವಗೆ ನರಹರಿಯೆ ಸ್ವಾಮಿಅ.ಪ. ಸ್ವಾಪದಲಿ ನಭದಲ್ಲಿ ರೂಪವನೆ ತೋರಿದ ಯೊಪಯೋನಿಧಿಯಾಗಿ ಮೆರೆವೆ ವೆಂಕಟೇಶ |ಆಪಯೋಜಾಸನ ವಿಷಾದ್ಯರಿಗೆ ನಿಲುಕದಅಪಾರ ತವಮಹಿಮೆ ನಾ ಪೇಳಲೊಶವೇ 1 ಸಾರನಿಸ್ಸಾರವೆನೆ ಜಗದೊಳಗೆ ನೀನೊಬ್ಬಸಾರತಮನೆಂದೆಂಬ ಪಾರಮಾರ್ಥಿಕವ |ತಾರತಮ್ಯ ಜ್ಞಾನ ಮೂರೆರಡು ಭೇಧಗಳಸಾರವನೆ ತಿಳಿಸಿ ಸಂಸಾರ ನಿಧಿ ದಾಟಿಸೋ 2 ಗರ್ವರಹಿತನು ಇವಗೆ ಕವನ ಶಕ್ತಿಯನಿತ್ತುಸರ್ವತ್ರ ಸರ್ವದಾ ಸರ್ವಕಾರ್ಯಗಳಲ್ಲಿಸರ್ವೇಶ ತವನಾಮ ಸ್ಮøತಿಯನ್ನೆ ಕರುಣಿಸುತದರ್ವಿ ಜೀವನಕಾಯೊ ಸರ್ವಾಂತರಾತ್ಮಾ 3 ಶ್ರೀದ ಶ್ರೀ ವೆಂಕಟನ ನೋಡಿದೆ ಎಂಬಂಥಮೋದದಾಯಕ ಪದವು ಉದಯ ವಿಠಲಾಂಕಿತವಾದಿರಾಜರ ಶಿಷ್ಯ ಪಾಡಿ ಪೂರೈಸುತಿರೆನೀದಯದಿ ತವರೂಪ ತೋರ್ದುದನು ಮರೆ ಮಾಡಿದೆ4 ಪಾವಮಾನಿಯ ಪ್ರೀಯ ಭಾವುಕರ ಪರಿಪಾಲಗೋವತ್ಸ ಧ್ವನಿ ಕೇಳಿ ಧಾವಿಸೀ ಬರುವಂತೆತೀವ್ರುಪಾಸನೆ ಇತ್ತು ಇವನ ಹೃತ್ಕಂಜದಲಿದೇವ ಗುರು ಗೋವಿಂದ ವಿಠಲ ತವರೂಪ ತೋರೊ5
--------------
ಗುರುಗೋವಿಂದವಿಠಲರು
ಉರಮಂದಿರೆಯ ಇಂದಿರೆಯೆ ಪರಿಪಾಲಿಸನುದಿನ ಪ ನಿತ್ಯಪ್ರಕೃತಿಯ ಕೃತ್ಯನಡೆಸಿ ನಿರ್ಲಿಪ್ತಳಾಗಿಹೆ ನಿತ್ಯಮುಕ್ತಳೆ 1 ಮೊಕ್ಷದನ ಗುಣ ಈಕ್ಷಿಪಳೆ ಜಗರಕ್ಷಕಳೆ ಕಮಲಾಕ್ಷನಾ ಪ್ರಿಯೆ 2 ಭರದಿ ಕರವೀರಪುರದಿ ನಿಂದೆ ಉರಗಗಿರಿ ಶ್ರೀ ವೆಂಕಟೇಶನ ಪರಮಪ್ರೀಯೆ ನಿತ್ಯಾವಿಯೋಗಿನಿ ಪದುಮಸರೋನಿವಾಸಿನಿ 3 ಮುಕ್ತನಾಥಗೆ ಪ್ರೀಯೆ-ನೀ ಅವ್ಯಕ್ತತತ್ವಾಭಿಮಾನಿಯೇ | ವ್ಯಕ್ತಗೊಳಿಸೆನ್ನ ಚಿತ್ತದಲಿ ವೇದೋಕ್ತನ ನೀ ನಿತ್ಯದಲ್ಲಿ 4 ಪುರುಷಸೂಕ್ತಸುಮೇಯ ಶ್ರೀ ಉರಗಾದ್ರಿವಾಸವಿಠಲನ ಹರುಷದಲಿ ನಲಿದಾಡಿ ಸುಖಿಸುವ 5
--------------
ಉರಗಾದ್ರಿವಾಸವಿಠಲದಾಸರು
ಉರುಟಣಿಯಾ ಸರಸಿಜನಾಭಾಗ್ಹರುಷದಲಿ ಮಾಡುವೆನಾ ಪ ಶಂಖಚಕ್ರಧರಾ ವೆಂಕಟೇಶ ನಿಮಗೆ | ಕುಂಕುಮ ಹಚ್ಚುವೆ ಪಂಕಜಾಕ್ಷಿ ನಾ 1 ನಂದಗೋಪಿಕಂದ ಹಚ್ಚುವೆ ಗಂಧ ಹಚ್ಚುವೆ ಸುಗಂಧ | ಮುಕುಂದಗೆ 2 ಯಶೋದೆಯ ಬಾಲಾ ಕಾಮಿತಶೀಲಾ ಹಾಕುವೆನು ಮಾಲಾ ಗೋಪಾಲಗೆ 3 ಪೊಡವಿ ಪಾಲಿಪಾ | ಕಡಲಶಯನಾ | ಕೊಡುವೆನು ವಿಡಾ ಪಿಡಿ ಬೇಗನೆ 4 ಪೊಡವಿ ಪಾಲಿಪಾ ಕಡಲಶಯನಾ | ವಂದಿಸಿ ಪ್ರಾರ್ಥನೆಗೈಯುವೆನಾ 5
--------------
ಶಾಮಸುಂದರ ವಿಠಲ
ಉರುಟಣೆ ಹಾಡು ಪದ್ಮಾವತಿ ನಿಂತು ಮುದ್ದು ಪದ್ಮನಾಭನಿಗೆ ಪದ್ಧತಿಯಲಿ ಉರುಟಾಣಿಯನು ಮಾಡಿದಳೊ ಪ. ಪದ್ಮಾಕ್ಷ ನಿನ್ನಯ ಪಾದಪದ್ಮವನೆ ತೋರೀಗ ಪದ್ಮರೇಖೆಯ ಪಾದಕರಿಶಿಣವ ಹಚ್ಚುವೆನು ಪದ್ಮ ಸಂಭವನ ಪಿತ ವೆಂಕಟೇಶ ಶ್ರೀಶ ಅ.ಪ. ಪಣೆ ತೋರು ವರ ಕುಂಕುಮದ ತಿಲಕ ತಿದ್ದುವೇನು ಕೃಷ್ಣ ಕೊರಳ ತೋರೆಲೊ ದೇವ ಶ್ರೀ ವತ್ಸದಾಮೇಲೆ ಮೆರೆವ ತೆರ ಹಾರಹಾಕುವೆನೀಗ ಶ್ರೀಶಾ ಸುರವಂದ್ಯನೆ ದೇವ ಶ್ರೀನಿವಾಸ 1 ವೇದಾಭಿಮಾನಿಯೆ ವೇದದಿಂದಮುತ್ರವನು ಆದರದಿ ಭಕ್ತರಿಗೆ ಕೊಟ್ಟಿ ಕರಕೆ ಮೋದದಿಂದ ಗಂಧವನು ಹಚ್ಚುವೆನು ಎಲೊ ದೇವ ಸಾಧಿಸಿ ಭೂಮಿಯ ತಂದ ವರಹ ಕಂಠವ ತೋರೋ ಆದರದಿ ಹಚ್ಚುವೆನು ದೇವ ದೇವ 2 ಕಂದನಾ ನುಡಿಕೇಳಿ ಕಂಬದಿಂ ಬಂದವನೆ ಅಂದದಿಂ ಬ್ರಹ್ಮಚಾರಿಯಾಗಿ ಮೆರೆವ ದೇವ ಸುಂದರ ಪರಶುರಾಮ ಅಂದದ ದಶರಥಸುತನೆ ಮಂದರೋದ್ಧರ ಕೃಷ್ಣ ಸುಂದರ ಬೌದ್ಧ ಕಲ್ಕಿ ನಿನ್ನ ಮಂದಗಮನೆಯ ವೀಳ್ಯ ಸ್ವೀಕರಿಸೊ ಶ್ರೀ ಶ್ರೀನಿವಾಸಾ 3
--------------
ಸರಸ್ವತಿ ಬಾಯಿ
ಎಂಟು ದಿನವಾಯಿತಲ್ಲೊ ಭಕ್ತ ನೆಂಟನ್ಯಾಕೆ ತಡವು ಮನೆಗೆ ಕರೆಸಯ್ಯ ಕರುಣವಿರಿಸಯ್ಯ ಪ. ಆವಲ್ಲಿ ಪೋದರು ನಿನ್ನ ಸೇವೆ ಮಾಳ್ಪ ಸುಖಕೆ ಸರಿಯಾ ಪಡೆಯದೆ ಎಲ್ಲೂ ತಡೆಯದೆ ಶ್ರೀವಲ್ಲಭ ನಿನ್ನ ಕಾಂ¨ ಭಾವನೆಯಿಂದೆನ್ನ ಮನಸು ತಿರುಗಿತು ಬಹಳ ಕರಗಿತು 1 ಯೋಗಿವರದ ನಿನ್ನ ಮೂರ್ತಿ ಬೇಗದಿಂದ ನೋಳ್ಪೆನೆಂದು ಯೋಚಿಸಿ ಮುಂದೆ ಸೂಚಿಸಿ ನಾಗೂರ ಪಟ್ಟಣವ ಬಿಟ್ಟು ಸಾಗಿ ಬರುವ ಸಮಯದಲ್ಲಿ ಆಶೆಯಾ ಪಾಶ ಸೂಸಿತು 2 ದೋಷಿಯೆಂದು ಗ್ರಹಿಸದೆ ಸ- ರ್ವಾಸೆ ಪೂರಿಸಖಿಳ ಜಗದೀಶನೆ ವೆಂಕಟೇಶನೆ ಶ್ರೀಶ ನಿನ್ನ ಕಡೆಗೆ ಕರೆಸಿ ನಿತ್ಯ ಸೇವೆ ಕೊಳ್ಳಯ್ಯ ಖಜ್ಜಬಿಲ್ಲಯ್ಯ 3
--------------
ತುಪಾಕಿ ವೆಂಕಟರಮಣಾಚಾರ್ಯ
ಎಂದಿಗೆ ನೀ ಕರುಣಿಸುವಿ ಸುಂದರಾಂಗ ಎನ್ನೊಳು ಕುಂದಿ ಪೋದೆನಲ್ಲೊ ಬೇಗ ಬಂದು ಕಾಯೊ ಕರುಣಾಳು ಪ. ಧರ್ಮ ಕರ್ಮಗಳು ಮಾಳ್ಪ ಮರ್ಮವರಿಯದಿದ್ದರು ಭರ್ಮದಾಶೆಗಾಗಿ ಹೀನ ಕರ್ಮದೊಳಗೆ ಬಿದ್ದರು ದುರ್ಮದಾಂಧರನು ಗೆಲುವ ನಿರ್ಮಲ ಚಿದಾತ್ಮ ನಿನ್ನ ಹಮ್ರ್ಯದ ಮುಂದೊದರಿ ಸರ್ವಶರ್ಮಪೊಂದಿಚ್ಛಿಸುವೆನು 1 ಜೀಯ ನಿನ್ನ ಪೊಗಳಿ ಪಾಡುವಾಯವಿರಲು ಸಾಕಯ್ಯ ರಾಯರೊಲವು ತನ್ನಂತೆ ನಿರಾಯಾಸದಿಂದಹುದೈಯ್ಯ ವಾಯುವೀಯ ಜನರ ಕೂಡಿ ಮಾಯ ಗೆಲಲು ಮಾನವೀಯ ಕಾಯವನ್ನು ನೋಯದಂತೆ ಕಾಯೊ ಸಕಲದಾಯಕಾರಿ 2 ನಿತ್ಯಾನಂದ ನಿನ್ನ ಪಾಡಿ ಹೊತ್ತ ಕಳೆವ ಕಾರ್ಯಕ್ಕೆ ಒತ್ತಿ ಬರುವ ವಿಘ್ನಬಾಧೆ ಹತ್ತದಂತೆ ಓಡಿಸು ಸತ್ಯರಮಣ ಶರಣ ಪುರುಷೋತ್ತಮ ಶ್ರೀ ವೆಂಕಟೇಶ ಚಿತ್ತದಲ್ಲಿ ನಿನ್ನ ದಿವ್ಯ ಮೂರ್ತಿದೋರೊ ಮರಿಯದಿರು 3
--------------
ತುಪಾಕಿ ವೆಂಕಟರಮಣಾಚಾರ್ಯ
ಎಂದಿಗೆನಗೆ ಬುದ್ಧಿ ಬಂದಿತೋ ಹರಿಯೆ ಇಂದೀವರಾಕ್ಷ ನೀನೆ ಗತಿ ದೊರೆಯೆ ಪ. ಕಣ್ಣಿದಿರಲಿ ಕಂಡು ಕಾಲಗತಿಗಳನ್ನು ತನ್ನ ಸಂಸ್ಥಿತಿ ಮುಂದೆಂತಾಹುದನು ಚೆನ್ನಾಗಿ ಗ್ರಹಿಸದೆ ಚಪಲ ಚಿತ್ತದಿ ಗೃಹ ಸನ್ಮಹದಲಿ ಮನವನಿಟ್ಟು ಬಳಲುವೆ 1 ಸಾಗದ ಕಾರ್ಯವ ಸುಲಭವೆಂದೆಣಿಸಿದ- ರಾಗದು ಹಗಲಿರಳೊರಳಿದರು ನಾಗಶಯನ ನೀನು ನಿರ್ಣಯಿಸಿದ ರೀತಿ ಯಾಗುವದೆಂಬುದನರಿಯದೆ ಮರುಳಾದೆ 2 ಇಂತಾದ ಮ್ಯಾಲೆ ಶ್ರೀಕಾಂತ ನೀ ದೊರಕುವ- ದೆಂತು ಸಂಘಟ್ಟಿಪದೋ ನಾನರಿಯೆ ಕಂತುಜನಕ ವೆಂಕಟೇಶನೆ ಮಾನಸ ಭ್ರಾಂತಿಯ ಬಿಡಿಸು ನಿಶ್ಚಿಂತೆಯಿಂದಿರಿಸ 3
--------------
ತುಪಾಕಿ ವೆಂಕಟರಮಣಾಚಾರ್ಯ
ಎಂದು ಕಾಂಬೆನು ನಾನುಗೋ- ವಿಂದ ನಿನ್ನಯ ಪಾವನ್ನ ಪಾದವನ್ನು ನಾ ಪೊಂದಿಸೇವಿಸಿ ಆನಂದಪಡುವುದಕಿನ್ನು ಕರುಣಿಸೈ ಮುನ್ನ ಪ ಪೊಂದಿ ಮಹದಾನಂದ ಪಡೆಯಲು ಕಂದಿಕುಂದಿತು ತನುಮನೇಂದ್ರಿಯ ಇಂದೆ ತೋರಿಸೊ ಪಾದಕಮಲವ ಅ.ಪ ಬಾಲತನದಲಿ ನಾನು ಶ್ರೀಲೋಲ ನಿನ್ನಿಂದ ಪಾಲಿತನಾದೆನೊ ಬೆಲೆಯುಳ್ಳ ಆಯುವನೆಲ್ಲ ಕಳೆದು ಬಿಟ್ಟೆನು ನಾನು ಕೆಲಕಾಲದಲಿ ನಾ ಕಲುಶಕ್ರಿಯೆಗಳನ್ನು ಫಲವಿಲ್ಲದೆಸಗಿದೆನು ಎಲ್ಲರೊಳು ನೀ ನೆಲಸಿ ಜೀವರ ಎಲ್ಲಕರ್ಮವ ಮಾಡಿಸಿ ಫಲವೆಲ್ಲ ಅವರಿಗೆ ಇತ್ತು ನೀ ನಿರ್ಲಿಪ್ತನೆಂದು ತಿಳಿಯದಲೆ ಖುಲ್ಲಮಾನವರೊಡನೆ ಬೆರೆತು ಪುಲ್ಲಲೋಚನ ನಿನ್ನ ಮರೆದು ಇಲ್ಲ ಎನಗೆ ಎಣೆಯೆನುತ ನಾ ಬಲುಹೆಮ್ಮೆಯಿಂದಲಿ ದಿನಗಳ ಕಳೆದೇ ಇಲ್ಲನಿನಗೆಸರಿಯಿಲ್ಲ ನೀ ನಿಲ್ಲದಾಸ್ಥಳವಿಲ್ಲ ಜಗದಾ ಎಲ್ಲ ಕಾಲಗಳಲ್ಲಿ ಇಹ ಶ್ರೀನಲ್ಲ ನೀನೆಲ್ಲ ಬಲ್ಲೆಯೊ 1 ಬರಿದೇ ಕಾಲವ ಕಳೆದೇ ಶ್ರೀಹರಿಯೆ ನಿನ್ನಯ ಸ್ಮರಣೆಯನ್ನು ಮಾಡದೇ ಪರಿಪರಿಯ ತನುಮನ ಕ್ಲೇಶಗಳಿಗೊಳಗಾದೆ ನಾಮಸ್ಮರಣೆಯೊಂದಲ್ಲದೇ ಇನ್ನೆಲ್ಲಾ ಬರಿದೇ ಪರಮಕರುಣಾಶರಧಿ ಎಂಬುವ ಕರಿಧ್ರುವಬಲಿಮುಖ್ಯರೆಲ್ಲರ ಪೊರೆದ ಕೀರುತಿ ಕೇಳಿ ನಂಬಿದೆ ಶರಣಜನಮಂದಾರನೆಂದು ಅರಿಯೆ ನಾನವರಂತೆ ಸಾಧನ ಅರಿತು ಮಾಡುವ ಪರಿಯು ತಿಳಿಯದು ಬಿರುದು ಭಕ್ತಾಧೀನನೆಂದು ಹರಿಯೆ ನಿನ್ನಯ ಮರೆಯಹೊಕ್ಕೆನು ದುರಿತಶರಧಿಯೊಳಾಡುತಿರುವನ ಉ- ತ್ತರಿಸಲೊಂದೇ ನಾವೆಯಂತಿಹ ಚರಣಸ್ಮರಣೆಯಕೊಟ್ಟು ರಕ್ಷಿಸು ಪುರುಷಸೂಕ್ತಸುಮೆಯ ಜೀಯಾ2 ಶೇಷಗಿರಿಯವಾಸ ಶ್ರೀ ಶ್ರೀನಿವಾಸ ದೋಷರಹಿತ ಸರ್ವೇಶ ಮನೋ- ಕಾಶದಲಿ ಅನವರತ ನಿಲ್ಲೊ ಶ್ರೀಶಾ ಬಿಡಿಸೆನ್ನ ಭವಬಂಧ ಗ್ರಂಥಿಯ ಪಾಶಾ ಹರಿಸುವುದು ಕ್ಲೇಶಾ ಶ್ರೀಶ ನಿಗಗತಿಶಯವೆ ಎನ್ನಯ ವಿಷಯದಭಿಲಾಷೆಗಳ ಬಿಡಿಸೀ ದೋಷರಹಿತನ ಮಾಡಿಸೀ ಎನ್ನ ಪೋಷಿಸೋ ನಿನ್ನಸ್ಮರಣೆಯಿತ್ತು ದ್ವಾಸುಪ- ರ್ಣ ಶ್ರುತಿಗಳಿಂದಲಿ ಈಶ ದಾಸರ ಭಾವ ತಿಳಿಯದೆ ಮೋಸಹೋದೆನೊ ಬೋಧೆ ಇಲ್ಲದೆ ವಾಸುದೇವನೆ ರಕ್ಷಿಸೆನ್ನನು ಏಸುಕಾಲಕು ನೀನೆ ಗತಿ ಎಂದು ಆಸೆ ಮಾಡುವೆ ನಿನ್ನ ಕರುಣಕೆ ಬೇಸರದಲೆ ಮೊರೆಯ ಲಾಲಿಸಿ ಶ್ರೀಶ ಶ್ರೀ ವೆಂಕಟೇಶನೆ 3
--------------
ಉರಗಾದ್ರಿವಾಸವಿಠಲದಾಸರು