ಒಟ್ಟು 472 ಕಡೆಗಳಲ್ಲಿ , 70 ದಾಸರು , 338 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ಪಬಂದಾನು ರಾಘವೇಂದ್ರ ಎಂದೂ ಗೊತ್ತಿರದೆವೃಂದಾವನ ರೂಪದಿಂದಅ.ಪ'ಂದಿನ 'ರಿಯರ ಪುಣ್ಯ ಫಲಿಸಿತೆಂದುತಂದೆ ರಾಘವೇಂದ್ರ ಬಂದು ನೆಲೆಸಿದನಿಲ್ಲಿ 1ಸಂದೇಹಬೇಡ ಈ ವೃಂದಾವನದಿರಾಘವೇಂದ್ರರಾಯರು ಸ್ವಯಂವ್ಯಕ್ತರೂಪದಿ ಇಹರು 2ಭೂಪತಿ'ಠ್ಠಲನ ಕರುಣದಿಂದಲಿ ಇಲ್ಲಿಅಪರೂಪವಾದ ವೃಂದಾವನ ದೊರಕಿತು 3
--------------
ಭೂಪತಿ ವಿಠಲರು
ಇಂದು ನೋಡಿದೆ ನಂದಕರ ಯೋ- ಗೀಂದ್ರ ವಂದಿತ ಚರಣನಾ ಪ ವಂದನೀಯ ಶುಭೋರು ಗುಣ ಗಣ ಸಾಂದ್ರಗುರುರಾಘವೇಂದ್ರನಾ ಅ.ಪ ವೇದತತಿ ಶತಮೋದಗಿತ್ತ(ನ) - ಆದಿ ಮತ್ಸ್ಯನ ತೆರದಲಿ ವೇದವಾದವ ಶೋಧಮಾಡಿ ಮೇದಿನೀಸುರಗಿತ್ತನಾ 1 ಕಮಠರೂಪದಲಮರ - ತತಿಗೆ ಅಮೃತ ನೀಡಿದ - ತೆರದಲಿ ಸ್ವಮತ ಸುಧೆಯನು ಪ್ರಮಿತಗಿತ್ತಿಹ ಅಮಿತ ಸುಮಹಾಮಹಿಮನ 2 ಧರಣಿಮಂಡಲ ಧುರುದಿ ದಾಡಿಲಿ ಧರಿಸಿ ತಂದನ ತೆರದಲಿ ಧರಣಿ - ಜನರಿಗೆ ಧರೆಯ ಮೊದಲಾದ ಪರಮಭೀಷ್ಟೆಯನಿತ್ತು ಪೊರೆವನ 3 ತರುಳಪಾಲನ ತೆರದಲಿ ದುರಿತರಾಶಿಯ ತರಿದು ತನ್ನಯ ಶರಣಜನಪರಿಪಾಲನ 4 ಬಲಿಯ ಯಙ್ಞದÀ ಸ್ಥಳದಿ ಭೂಮಿಯ ನಳೆದರೂಪನÀತೆರದಲಿ ಖಳರ ವಂಚಕÀ ತನ್ನ ತಿಳಿವಗೆ ಸುಲಭದಿಂದಲಿ ಒಲಿವನ 5 ಕೆಟ್ಟರೋಗವು ಶ್ರೇಷ್ಠಭೂತದ ಅಟ್ಟುಳಿಯನೆ ಕಳೆವನ 6 ಜನಕನಾಜ್ಞದಿ ವನವ ಚರಿಸಿದ ಇನಕುಲೇಶನ ತೆರದಲಿ ಜನರಿಗೀಪ್ಸಿತ ತನಯ ಮೊದಲಾದ ಮನದಪೇಕ್ಷೆಯ ನೀಡೊನ 7 ಕನಲಿ ದ್ರೌಪದಿ ನೆನೆಸಲಾಕೆಯ ಕ್ಷಣಕೆ ಬಂದನ ತೆರದಲಿ ಮನದಿ ತನ್ನನು ನೆನೆವ ಜನರನು ಜನುಮ ಜನುಮದಿ ಪೊರೆವನ 8 ಮುದ್ದು ಸತಿಯರ ಬುದ್ಧಿ ಕೆಡಿಸಿ(ದ) ಗೆದ್ದು - ಬಂದನ ತೆರದಲಿ ಮದ್ದು ಮತಿಯನು ತಿದ್ದಿ ಭಕುತಗೆ ಶುದ್ಧ ಙÁ್ಞನವ ನೀಡೊನ 9 ಕಂಟಕ ಕಲಿಯವೈರಿ ಕಲಿಕಿರೂಪನ ತೆರದಲಿ ಹುಳುಕು ಮನವನು ಕಳೆದು ತನ್ನಲಿ ಹೊಳೆವ ಮನವನು ಕೊಡುವನಾ 10 ನೀತ ಗುರುಜಗನ್ನಾಥ ವಿಠಲ ಭೂತಳಕ್ಕಧಿನಾಥನು ಆತನಂತ್ಯತಿನಾಥ ಜಗಕೆ ಪ್ರೀತಿಶುಭಫಲದಾತನ 11
--------------
ಗುರುಜಗನ್ನಾಥದಾಸರು
ಇಂದ್ರರೊ ದೇವೇಂದ್ರರೊಚಂದ್ರನಂತೆ ಹೊಳೆಯುತ ಬಂದರೈವರು ಪ. ರಾಮ ಪಾಂಡವರಿಗೆ ಕ್ಷೇಮಾಲಿಂಗನಕೊಟ್ಟುಪ್ರೇಮದಿ ಕೈಯ ಹಿಡಿದನುಪ್ರೇಮದಿ ಕೈ ಹಿಡಿದು ಮಾತಾಡಿದಸ್ವಾಮಿ ಸನ್ನಿಧಿಗೆ ಬರಬೇಕು 1 ನೊಸಲಲ್ಲೆ ಕಸ್ತೂರಿ ಎಸೆವುತ ಸಂಪಿಗೆಕುಸುಮದ ಮಾಲೆ ಅಲವುತ ಕುಸುಮದ ಮಾಲೆ ಅಲವುತ ಪ್ರದ್ಯುಮ್ನವಸುಧಿಪಾಲಕರ ಕರೆದನು2 ದುಂಡು ಮುತ್ತುಗಳಿಟ್ಟು ಪೆಂಡೆ ಸರ ಹಾಕಿಪುಂಡರೀಕಾಕ್ಷ ಕುಳಿತಿದ್ದಪುಂಡರೀಕಾಕ್ಷ ಕುಳಿತಿದ್ದ ಚರಣಕ್ಕೆಪಾಂಡವರು ಬಂದು ಎರಗಿದರು3 ರನ್ನ ಮಾಣಿಕ ಬಿಗಿದ ಹೊನ್ನ ಮಂಚದ ಮೇಲೆ ಪನ್ನಂಗಶಯನ ಕುಳಿತಿದ್ದಪನ್ನಂಗಶಯನ ಕುಳಿತಿದ್ದ ಚರಣಕ್ಕೆಸುಭದ್ರೆ ಬಂದು ಎರಗಿದಳು 4 ಮಿಂಚಿನಂತೆ ಹೊಳೆಯುತ ಪಂಚಬಾಣನಪಿತ ಮಂಚದ ಮೇಲೆ ಕುಳಿತಿದ್ದಮಂಚದ ಮೇಲೆ ಕುಳಿತಿದ್ದ ಚರಣಕ್ಕೆಪಾಂಚಾಲೆ ಬಂದು ಎರಗಿದಳು5 ಸೂಸು ಮಲ್ಲಿಗೆ ಹೂವ ಹಾಸಿದ ಮಂಚದಿವಾಸುಕಿಶಯನ ಕುಳಿತಿದ್ದವಾಸುಕಿಶಯನ ಕುಳಿತಿದ್ದ ಚರಣಕ್ಕೆಆಶೇಷ ಜನರೆಲ್ಲ ಎರಗಿದರು6 ಸ್ವಾಮಿ ರಾಮೇಶನು ಕ್ಷೇಮ ಕುಶಲವ ಕೇಳಿಬ್ರಾಹ್ಮಣರ ದಯವು ನಿಮಗುಂಟು ಬ್ರಾಹ್ಮಣರ ದಯವು ನಿಮಗುಂಟು ಎನುತಲೆಸ್ವಾಮಿ ಶ್ರೀಕೃಷ್ಣ ನುಡಿದನು7
--------------
ಗಲಗಲಿಅವ್ವನವರು
ಈ ಪರಿಯ ಸೊಬಗು ಇನ್ನಾವ ಗುರುಗಳಿಗುಂಟುಈ ಪರಿಮಳಾರ್ಯ ಗುರುರಾಜಗಲ್ಲದೆ ಪಅರ್ಜುನಪ್ರಿಯ ಸೇವಕನು ಶಂಕುಕರ್ಣನು ಮೊದಲುಅಜನ ಶಾಪವ ತಾಳಿ ದೈತ್ಯರೊಳು ಜನಿಸಿಈ ಜಗದಿ ಸರ್ವತ್ರ ಹರಿಯ ವ್ಯಾಪ್ತಿಯ ತೋರಿನಿಜ ಭಕ್ತನೆನಿಸಿದನು ಪ್ರಹ್ಲಾದನಾಗಿ 1ದ್ವಾಪರಾಂತ್ಯದಿ ಇವನ ಬಾ'್ಲೀಕನೆಂದೆನಿಸಿಶಾಪಫಲ ಪರಿಹಾರವಾಗಬೇಕಾಗಿ'ಪರೀತ ಬುದ್ಧಿುಂ ಯುದ್ಧವನು ಮಾಡಿ ತಾ-ನಪೇಕ್ಷಿಸಿದ ಭೀಮನಿಂ ಮರಣವನ್ನು 2ಕಲಿಯುಗದಿ ಭೀಮಸೇನ ಮಧ್ವ ಮುನಿಯಾಗಿಅವತರಿಸಿ ತತ್ವಮತ ಸ್ಥಾಪಿಸಿದನುಬಾ'್ಲೀಕ ಬಾಲಯತಿ ವ್ಯಾಸಮುನಿಯಾಗಿಕರುಣಿಸಿದನು ಕೃಷ್ಣ ಸದ್ಗ್ರಂಥಗಳ ರಚಿಸಿ 3ವ್ಯಾಸರಾಯರ ಮುಂದೆ ಅವತರಿಸಿ ಗುರುವರ್ಯಶ್ರೀರಾಘವೇಂದ್ರನೆಂದೆನಿಸುತಮಧ್ವಮತ ದುಗ್ಧಾಬ್ಧಿ ಚಂದ್ರಮನು ತಾನಾಗಿಕಲಿಯುಗದ ಕಲ್ಪತರು ಎಂದೆನಿಸಿದ 4ಅಜನಪ್ರಿಯ ಅಜನ ತಾತನ ಭಕ್ತಅಜಪದಕೆ ಅರ್ಹನೆ ಇವನಂತ (?) ಅಜನ ತಾತನ ಕುಣಿಸಿ ಅಜಕರಾರ್ಚಿತಪೂಜಿಸಿದ ಭೂಪತಿ'ಠ್ಠಲನ ದಾಸ *5
--------------
ಭೂಪತಿ ವಿಠಲರು
ಈ. ಯತಿವರ್ಯ ನಮನ ಮಧ್ವರಾಯರಿಗೆ ನಮೋ ನಮೋ ಗುರು ಮಧ್ವಸಂತತಿಗೆನಮೋ ನಮೋ ಪ ಸಂತತ ಶುಭವಾದೆನುತ ದಾಸಜನರಿಗೇಕ ಚಿತ್ತದಿಂದವಂದಿಸಿ ಬೇಡುವೆ ಅ.ಪ. ಕುಸುಮನಾಭರ ಸಮ ನಾಲ್ವರುಯೆಂದೆನಿಪಹಸನಾದ ಗುರುಗಳ ಸ್ಮರಿಸುತಾನ್ಯಾಯಸುಧಾಕಾರರಿಗೆ ನಮೋ ನಮೋ 1 ರಘುಕುಲನಂದನ ಸುಬ್ರಮಣ್ಯತೀರ್ಥ ಕರದಿ ಪಾಲಿತಗೆಬಿಡದೆ ಬೋಧಿಸಿದ ತಲೆಗೆ ನಮೋ ನಮೋ 2 ರಘೋತ್ತುಮಾಖ್ಯರ ಕಾರುಣ್ಯಪರೆಂದೆನಿಪರಿಗೆಸೂರಿತಾರೇಶ ಜಾತ ವಿಜೇಂದ್ರತನಯನೆನಿಪಶ್ರೀ ಸುಧೀಂದ್ರ ಪೋಷಿತ ಸದ್ಗುರು ರಾಘವೇಂದ್ರತಾತಗೆನಮೋ ನಮೋ 3 ಗುರುಪುರಂದರ ದಾಸರ ಸುಜಾತರ್ಗೆ ನಮೋ ವೈಕುಂಠದಾಸರಿಗೆ ನಮೋ ನಮೋ ಚನ್ನ ಚಿಕ್ಕಬದರಿನಿಲಯನ್ನ ಕಂಡರ್ಗೆ ಕರುಣಾಪಾತ್ರರುಯೆನಿಪವರದಗುರುಗೋಪಾಲ ಸು ಜಗನ್ನಾಥರಾಯರಿಗೆನಮೋ ನಮೋ 4 ತತ್ವಮಸಿ ವ್ಯಾಸ ಶ್ರೀಧರ ಶ್ರೀಗುರು ಶ್ರೀಪತಿ ಪ್ರಾಣೇಶಗುರು ವಿಜಯ ರಾಮಚಂದ್ರದಾಸರಿಗೆ ನಮೋ ನಮೋಬಾದರಾಯಣಗುರು ವೆಂಕಟ ಶ್ರೀನಿವಾಸ ಜಯಜಯೇಶತಂದೆವರದಗೋಪಾಲವಿಠಲನ ದಾಸರಿಗೆ ನಮೋ ನಮೋ5
--------------
ತಂದೆವರದಗೋಪಾಲವಿಠಲರು
ಈತನೀಗ ವಾಸುದೇವನು ಲೋಕದೊಡೆಯ ಈತನೀಗ ವಾಸುದೇವನು ಪ ಈತನೀಗ ವಾಸುದೇವನೀ ಸಮಸ್ತ ಲೋಕದೊಡೆಯ ದೂತಗೊಲಿದು ತೇರನೇರಿ ತೇಜಿ ಪಿಡಿದು ನಡೆಸಿದಾತ ಅ ದನುಜೆಯಾಳ್ದನಣ್ಣನಯ್ಯನ ಪಿತನ ಮುಂದೆ ಕೌರವೇಂದ್ರನನುಜೆಯಾಳಿದವನ ಶಿರವ ಕತ್ತರಿಸುತ - ತನ್ನಅನುಜೆಯಾಳಿದವನ ಬೆಂಕಿ ಮುಟ್ಟದಂತೆ ಕಾಯ್ದ ರುಕ್ಮನನುಜೆಯಾಳಿದವನ ಮೂರ್ತಿಯನ್ನು ನೋಡಿರೊ1 ನರನ ಸುತನರಣ್ಯದಲ್ಲಿ ಗಿರಿಯೊಳ್ನಿಂತು ತನ್ನ ರೋಷದಿಶರಗಳನ್ನು ತೀಡುತಿಪ್ಪನ ಯೋಚಿಸಿಭರದಲವನ ಕರೆದು ಕುರುಹು ತೋರಿ ಪತ್ರವನ್ನು ಹಾರಿಸಿದವನಶಿರವನ್ನು ಛೇದಿಸಿದ ದೇವ ಕಾಣಿರೊ 2 ವೈರಿ ತೊಡೆಯ ಛೇದಿಸೆಂದು ಬೋಧಿಸಿಕಷ್ಟವನ್ನು ಕಳೆದು ಭಕ್ತರಿಷ್ಟವನ್ನು ಕಾದ ಉ-ತ್ಕøಷ್ಟ ಮಹಿಮನಾದ ದೇವ ಕಾಣಿರೊ 3 ಕ್ರೂರವಾದ ಫಣಿಪಬಾಣವನ್ನು ತರಣಿಜನೆಚ್ಚಾಗವೀರ ನರನತ್ತ ಬಪ್ಪುದನ್ನು ಈಕ್ಷಿಸಿ ಧಾರಿಣಿಯ ಪದದೊಳೌಕಿ ಚರಣಭಜಕ ನರನ ಕಾಯ್ದಭಾರಕರ್ತನಾದ ದೇವನೀತ ಕಾಣಿರೊ4 ವ್ಯೋಮಕೇಶನಿಪ್ಪ ದೆಸೆಯ ಸರ್ವ ಜಗಕೆ ತೋರುತಸಾಮಜವನೇರಿ ಬಹನ ಶಕ್ತಿಯನೀಕ್ಷಿಸಿಪ್ರೇಮದಿಂದ ಉರವನೊಡ್ಡಿ ಡಿಂಗರಿಗನ ಕಾಯ್ದ ಸಾರ್ವ-ಭೌಮ ಬಾಡದಾದಿಕೇಶವನ್ನ ನೋಡಿರೊ 5
--------------
ಕನಕದಾಸ
ಉದ್ಧರಿಸ ಬೇಕಿನ್ನು ಗುರು ರಾಘವೇಮದ್ರರಾಯಾ ಪ ನಿನ್ನ ಬಿಟ್ಟರೆ ನನಗಿಲ್ಲ ಬೇರಾರು ಗತಿಯಿಲ್ಲ ಕಾವ ಕರುಣಿಯು ನೀನೆ ರಾಘವೇಂದ್ರಾ ಅ.ಪ ಮೋದ ಪಡಿಸೆಮ್ಮನು ಆದರಿತಿಪೂದಯ್ಯ ಗುರುರಾಘವೇಂದ್ರಾ 1 ಒಂದು ದಿನವೂ ನಿಮ್ಮ ನಾಮ ನುಡಿಯಲಿಲ್ಲವೊ ನಾನು ಮಂದ ಮತಿನಾನಾದೆ ಗರುರಾಘವೇಂದ್ರಾ ಕುಂದುಗಾ ಳೆಣಿಸದಿರು ನೊಂದೆನೈಯ್ಯಾ ನಾನು ತಂದೆಯಂದದಿ ಕಾಯೊ ಗುರುರಾಘವೇಂದ್ರಾ2 ನಮೊ ನಮೋಗುರುರಾಜ ನಮೊ ನಮೋ ನಮೋ ಗುರು ರಾಘವೇಂದ್ರಾ 3
--------------
ರಾಧಾಬಾಯಿ
ಎಂಥ ಸುಂದರವಾದ ವೃಂದಾವನಾನಿಂತು ನೋಡಲು ಮನಕೆ ಸಂತೋಷವಾಗುವದು ಪಶ್ರೀ ರಾಘವೇಂದ್ರ ಗುರುಸಾರ್ವಭೌಮರ ದಿವ್ಯಧೀರ ಗಂಭೀರ ಸುಮನೋಹರ ಸುಮೂರ್ತಿರಾರಾಜಿಸುತಿಹುದು ಮುಗಳುನಗೆ ಮುಖದಿಂದಾಶರಣಾಗತರಿಗೆಲ್ಲ ಅಭಯ ಹಸ್ತವ ನೀಡಿ 1ಪ್ರೇರಕರು ತಾವಾಗಿ ಪ್ರೇರ್ಯರೊಬ್ಬನ ಮಾಡಿಕಾರಾಗಿರನ ಕನಸು ಮನಸಿನಲಿ ಪೋಗಿಇರಬೇಕು 'ೀಗೆಂಬ ವೃಂದಾವನದಿ ಚಿತ್ರತೋರಿಸುತ ಅಂತರಂಗದಿ ನಿಂದು ಮಾಡಿಸಿದ 2ಅಡಿಗಡಿಗೆ ಮ'ಮೆಯನು ತೋರಿಸುತ ಗಲಗಲಿಗೆನಡೆತಂದು ಶ್ರೀ ಮಠವ ಹ'್ಮುಕೊಂಡಿಹರುಸಡಗರದಿ ಭಕುತರಿಂ ಸೇವೆಕೊಳ್ಳುತಲಿಹರುಬಡವರಿಗೆ ಭಾಗ್ಯ ನಿಧಿಯು ಬಂದಂತೆ ಆಯ್ತು 3ಅಲ್ಲಿ ಮಂತ್ರಾಲಯವು ಇಲ್ಲಿ ಗಾಲವಕ್ಷೇತ್ರಅಲ್ಲಿ ತುಂಗಾ ಇಲ್ಲಿ ಕೃಷ್ಣವೇಣಿಅಲ್ಲಿ ಪ್ರಹ್ಲಾದರಾಜ ಯೋಗ ಮಾಡಿದನು ಇಲ್ಲಿತಪವ ಗೈದಿಹರು ಗಾಲವ ಮರ್ಹಗಳು 4ಅಲ್ಲಿ ರಾಯರಬಂಡಿ ಇಲ್ಲಿ ಋಗಳ ಬಂಡಿಅಲ್ಲಿ ಮಂಚಾಲೆಮ್ಮಾ ಇಲ್ಲಿ ಜಗದಂಬಾಅಲ್ಲಿ ಹೊಳೆದಾಟಿದರೆ ಪಂಚಮುಖಿಪ್ರಾಣೇಶಇಲ್ಲಿ ಹೊಳೆ ದಾಟಿದರೆ ಸಂಜೀವ ಪ್ರಾಣೇಶ 5ಕಲಿಯುಗದ ಸುರಧೇನು ಕಲ್ಪತರು ಗುರುರಾಯಗಲಗಲಿಯ ಭಾಗ್ಯ'ದು ಬಂದು ನಿಲಿಸಿಹನುಕಲುಷವರ್ಜಿತರಾಗಿ ದರುಶನವ ಮಾಡಿದರೆಕರೆದು ಈಪ್ಸಿತವ ಕೊಡುವ ಪರಮ ಕರುಣಾಳು 6ಪಾಪಿ ಕೋಪಿಷ್ಠರಿಗೆ ಸೇವೆ ದಕ್ಕುವದಿಲ್ಲಮಾಂ ಪಾ' ಪಾ' ಎಂಬುವ ಭಕುತರಾತಾಪತ್ರಯವ ಕಳೆದು ಸುಪ'ತ್ರರನು ಮಾಡಿಭೂಪತಿ'ಠ್ಠಲನ ಅಪರೋಕ್ಷ ಮಾಡಿಸುವ 7
--------------
ಭೂಪತಿ ವಿಠಲರು
ಎಂಥಾ ಮಹಿಮರು ನೋಡಿ - ಶ್ರೀ ರಾಘವೇಂದ್ರರು ಎಂಥಾ ಮಹಿಮರೋ ಪ ಕೊನೆಗಾಣೆನಿವರ ಅದಭುತ ಮಹಿಮೆಯನ್ನು ಅ.ಪ. ವರ ಮಂತ್ರಾಲಯದೊಳು ಬಂದು ನಿಂದಿಹರು 1 ನಿಮ್ಮ ಸ್ತುತಿಸಿ ಕೊಂಡಾಡುತಿಹರು 2 ಒಂದೇ ಮನದಿಂದ ಒಂದು ಪ್ರದಕ್ಷಿಣೆ ನಮಿಸಲು ಭವಬಂಧಗಳ ಬಿಡಿಸಿ ಆನಂದದಿ ಸಹಲುವರು 3 ಮೊದಲು ನಿಮ್ಮ ಸೇವಿಸೆ ಪಾವನಗೊಳುವರು4 ಪೀಡೆ ಪಿಶಾಚಿಗಳಿಂದ ಪೀಡಿತರಾಗುತ ನಿಮ್ಮಡಿಗೆರಗಲು ಕಡುದಯ ಮಾಡುವಿರಿ5 ಶ್ರೀರಾಘವೇಂದ್ರಾಯ ನಮಃ ಎಂಬ ದಿವ್ಯನಾಮವ ಪಠಿಸಲು ಪ್ರಭುಗಳು ಪಾವನ ಮಾಡುವರು 6 ಧರೆಯೊಳು ನಿಮ್ಮ ಸರಿಯಾರಿಹರೊ ಪ್ರಭು ಗುರುಸಾರ್ವಭೌಮರು | ಶ್ರೀ ರಾಘವೇಂದ್ರರು7
--------------
ರಾಧಾಬಾಯಿ
ಎಂದು ಕಾಂಬುವೆ ಮಾಧವತೀರ್ಥರ ಸುಂದರ ಮಂದಿರ ಪ ಚಾರುಚಿತ್ರ ಕಲಶಕನ್ನಡಿ ಆರೊಂದು ನೆಲೆಗೋಪುರವ ಸವಿ ಸ್ತಾರಮಾಗಿ ತೋರುವ ಮಹಾ ದ್ವಾರದಮುಂದೆ ಬಿದ್ದು ನಮಿಸಿ 1 ತೊಲೆತುಂಡು ಕಂಭ ಬೋದುಗೆ ಶಿಲೆಯಿಂದ ನಿರ್ಮಿತವಾಗಿ ಹೊಳೆವ ಮಂಟಪ ರಂಗು ಮಧ್ಯ ದೊಳಗೆಚೆಲುವ ವೃಂದಾವನವ 2 ಮೂಲ ಪ್ರತಿಮೆ ಸಾಲು ಸಾಲು ವಿ ಮೂಲಪೀಠದ ಪವಿತ್ರಶಾಲೆ ಕಾಲತ್ರಯದಿ ವೇದಘೋಷ 3 ಧಾತ್ರಿಜನರು ಬಂದು ಕೂಡಿ ಯಾತ್ರೆಗೈದು ಜನುಮ ನಿತ್ಯ ಸಾರ್ಥಮಾಡಿಕೊಂಡು ಸತತ ಅರ್ಥಿಯಿಂದ ಪೋಪ ಸಮಯ 4 ಧರೆಯೊಳಧಿಕ ಬುದ್ಧಿನ್ನಿಪುರದಿ ಮೆರೆವ ಶ್ರೀಗುರು ಮಾಧವೇಂದ್ರ ವರಮಂದಿರದಮಿತ ವೈಭವ ಕರುಣಿ ಶ್ರೀರಾಮ ನಿಂತು ನಡೆಸುವ 5
--------------
ರಾಮದಾಸರು
ಎಂದು ಕಾಂಬೆನೊ ರಾಘವೇಂದ್ರ ಗುರುಗಳನಾ | ಕಾಯ ಆನಂದ ನಿಧಿಯ ಪ ತಾಯಿಯಂದದಿ ನಮ್ಮ ಕಾಯುವ ಧಣಿಯಾ ನ್ಯಾಯ ಸದ್ಗುಣ ಪೂರ್ಣ ಮಾಯಿ ಜಗ ಹರಿಯಾ 1 ಮಾಯಾ ರಮಣನ ನಾಮ ಗಾಯನ ಪರನ ದಾಯಾದಿ ಕುಲವೈರಿ ಶ್ರೇಯ ಬಲಯುತನಾ2 ನರರೂಪ ಧರಿಸಿ ವಾನರÀ ಭಕ್ತವರನಾ ನರಶೌರಿ ಪ್ರೀಯ ದೀನರ ಕಾಯುತಿಹರಾ 3 ಜನರನ ಪೊರೆವನೆಂದೆನುತ ಭೂಮಿಯಲಿ ಜನಿಸಿದ ತನ್ನವನ್ನ ವನುತಿ ಸಹಿತದಲಿ 4 ದುರಿತ ವರೆಕೆ ತಾಮುರುತನಾಗಿಪ್ಪ ಗುರುವೆಂಬ ಸಿರಿಗೆ ಇವ ನಿರಂತರದಿ ಸುರಪಾ 5 ಭಕ್ತರ ಬಯಕೆ ಪೂರೈಪಾ ಸುರತರುವೇ ಶಕ್ತ ವಿರಕ್ತ ಹರಿಭಕ್ತ ಮದ್ಗುರುವೆ 6 ಭುವನದಿಂ ದಾಟಿಸೆ ನೌಕವಾಗಿಹಿನಾ ನವ ಭಕುತಿಯನೀವ ಕುವಿಕುಲ ವರನಾ 7 ಇವನೇ ಗತಿಯೆನೆ ಜ್ಞಾನ ತವಕದಿ ಕೊಡುವಾ 8 ನಿಂದಿಪ ಜನರಲ್ಲಿ ಪೊಂದಿಪ ಪ್ರೇಮ ವಂದಿಪ ಜನರಿಗೆ ಸತತ ಶ್ರೀ ರಾಮ 9 ಶ್ರೀನಿವಾಸ ಪುತ್ರ ಪರಮ ಪವಿತ್ರಾ ಜ್ಞಾನಿ ಜನರ ಮಿತ್ರ ವಿಹಿತ ಚರಿತ್ರಾ 10 ನಷ್ಟ ತುಷ್ಟಿಗೆ ಅಂಜಾ ದುಷ್ಟ ಶೇರಾ ಕಷ್ಟ ಕಳೆಯುವ ನಮ್ಮ ಕೃಷ್ಣ ಪಾರಿಜಾತ 11 ಪೊಳಲುರಿ ಸಖನಾ ಘನಪೊಳಿಯುವ ಪಾದಯುಗವಾ ಘಳಿಗಿ ಬಿಡದಲೆ ನೋಡುತ ನಲಿಯುತಿರುವಾ 12 ಅರಿದು ಈತನೇಯನ್ನ ಗುರುವೆಂಬಗೆ ರುದ್ರಾ ಧುರದೊಳು ಭೀಮ ಗುರುವಿಗತಾ ದಾರಿದ್ರ್ಯಾ 13 ಅನಿಮಿತ್ತ ಬಂಧು ಬ್ರಾಹ್ಮಣ ವಂಶಜಾ ಭವ ತ್ರಾತಾ 14 ತಪ್ಪು ನೋಡದಲೆ ಕಾಯುತಿಪ್ಪ ನಮ್ಮಪ್ಪ ಸರ್ಪ ತಲ್ಪನ ಧ್ಯಾನದಿಪ್ಪ ನಿಪ್ಪ 15 ಅರುಣಾಭಿ ಚರಣ ತಲೆಬೆರಳು ಪಂಕ್ತಿಗಳಾ ಸರಸಿಜ ಪೋಲ್ವ ಮೃದುತರ ಪಾದಯುಗಳಾ 16 ವಲಿದ ಭಕ್ತರಿಗಿಷ್ಟ ಸಲಿಸುವ ಪಾದ17 ಸಕಲ ರೋಗವ ಕಳೆವ ಅಕಳಂಕ ಪಾದ ಪಾದ 18 ಹರಿಯಂತೆ ಹರನೊಲ್ ಸಾಸಿರ ನಯನನಂತೆ ಶಿರಿಯಂತೆ ತೋರ್ಪ ಭಾಸ್ಕರ ನರನಂತೆ 19 ಸುಳಿರೋಮಗಳುಳ್ಳ ಚಲುವ ಜಾನುಗಳಾ ಎಳೆಬಾಳೆ ತೆರ ಊರು ಹೊಳೆವ ಸುಚೈಲ 20 ತಟಿತ ಸನ್ನಿಭವಾದ ಕಟಿಗಿಪ್ಪ ಸೂತ್ರ ನಟ ಶೇವಸಿವಲಿ ತಾನು ಪುಟಿಯು ಉದರಾ 21 ಎದೆಯಲಿಪ್ಪುದÀು ನಮ್ಮ ಪರಮೇಶನ ಮನೆಯೊ ವದಗಿ ಭಕ್ತರಿಗೆ ಕರುಣದಿ ಕಾಯ್ವ ಖಣಿಯೂ 22 ಹುತವಾಹನನಂತೆ ಭಾರತೀಕಾಂತನಂತೆ ಚತುರಾಶ್ಯ ಈ ಕ್ಷಿತಿಯಂತೆ ಇಹನಂತೆ23 ಹಸುವಿನಂದದಲಿ ಪಾಗಸನೊಳಿಹನ ವಸುಧಿಯೊಳಿಂತಿದೊಮ್ಮೆ ಪಸುಯನಿಸಿದನಾ 24 ಭೂಧರತನಂತೆ ವಸುಧರನಂತೆ ಭೂಧರನಂತೆ ಸೋದರನಂತೆ 25 ಚರ್ಚಿತ ಸುಂದರ ರೂಪ ಕಂಬು ಲೋಕ ಕಂಧರಾಯುತನ 26 ಕರೆದು ಭಕ್ತರಿಗಿಷ್ಟಗರಿಯುವ ಚೆಲ್ವಾ ವರ ರೇಖೆಯುತ ಶಿರಕರದಾ ವೈಭವನಾ 27 ಮಂಗಳದಾಯಕ ಅಂಗೈಯಿಯುಗಳಾ ಭಂಗಾರ ದುಂಗಾರ ಇಟ್ಟಿಪ ಬೆರಳು 28 ಕೆಂದುಟಿ ಮೊದನಾಗಿ ಇಂದಿಪ್ಪ ವದನಾ ಪೊಂದಿದ ದಂತಗಳಿಂದ ಸ್ವಾರಚನಾ29 ಹಸನಾದ ದೊಕರದಂತೆಸೆವ ಗಲ್ಲಗಳಾ ಬಿಸಜದಂತೆ ರಾಜಿಸುವ ನೇತ್ರಗಳಾ 30 ನಾಸಿಕದಲಿಪ್ಪ ಮೀಸಿ ದ್ವಂದ್ವಗಳಾ ದೇಶಾದಿ ಪಾಲ್ಮೂರು ವಾಸಿ ಕರ್ಣಗಳಾ 31 ಗಿಳಿಗೆ ವಾಚ್ಯಾಪದೊಳ ಹೊಳೆವಾ ಪುಚ್ಛಗಳಾ ತಿಲಕಾ ಮುದ್ರೆ ಪುಂಡ್ರಗಳುವುಳ್ಳ ಫಾಲಾ 32 ಹರಿಪಾದ ಜಲವನ್ನು ಧರಿಸಿದ ಶಿರವಾ ಶಿರಿಗೋವಿಂದ ವಿಠಲನ್ನಡಿಗೆಯರಗುವಾ ಶಿರವಾ33
--------------
ಅಸ್ಕಿಹಾಳ ಗೋವಿಂದ
ಏನು ಮಾಡಲಯ್ಯ ಬಯಲಾಸೆ ಬಿಡದು ಪ ಮಾನವ ಮೃಗೇಂದ್ರ ರಾಮಚಂದ್ರ ರಕ್ಷಿಸಯ್ಯ ಅ ಜ್ಯೋತಿರ್ಮಯವಾದ ದೀಪದ ಬೆಳಕಿಗೆ ತಾನುಕಾತರಿಸಿ ಬೀಳುವ ಪತಂಗದಂದದಲಿಧಾತುಗೆಟ್ಟು ಬೆಳ್ಳಿ ಬಂಗಾರದಲಿ ಮೆರೆವಧೂರ್ತೆಯರ ನೋಡುವೀ ಚಕ್ಷುರಿಂದ್ರಿಯಕೆ 1 ಅಂದವಹ ಸಂಪಗೆಯ ಅರಳ ಪರಿಮಳವುಂಡುಮುಂದುವರಿಯದೆ ಬೀಳ್ವ ಮಧುಪನಂತೆಸಿಂಧೂರ ಗಮನೆಯರ ಸಿರಿಮುಡಿಯೊಳಿಪ್ಪ ಪೂಗಂಧ ವಾಸಿಸುವ ಘ್ರಾಣೇಂದ್ರಿಯಕೆ 2 ಗಾಣದ ತುದಿಯೊಳಿಪ್ಪ ಭೂನಾಗನಂ ಕಂಡುಪ್ರಾಣಾಹುತಿಯೆಂದು ಸವಿವ ಮೀನಿನಂತೆಏಣಾಕ್ಷಿಯರ ಚೆಂದುಟಿಯ ಸವಿಯ ಸವಿಸವಿದುಜಾಣತನದಲಿ ನಲಿವ ಜಿಹ್ವೇಂದ್ರಿಯಕೆ 3 ದಿಮಿದಿಮ್ಮಿ ಘಣಘಣಾ ಎಂಬ ಘಂಟೆಯ ರವಕೆಜುಮುಜುಮನೆ ಬೆಮೆಗೊಳ್ಳುವ ಹರಿಣದಂತೆರಮಣಿಯರ ರಂಜಕದ ನುಡಿಗಳನು ಕೇಳಿ ಪ್ರ-ಣಮವೆಂದು ತೋಷಿಸುವ ಕರ್ಣೇಂದ್ರಿಯಕೆ 4 ತ್ವಕ್ಕು ಮೊದಲಾದ ಪಂಚೇಂದ್ರಿಯಗಳೊಳು ಸಿಕ್ಕಿಕಕ್ಕುಲಿತೆಗೊಂಬುದಿದ ನೀನು ಬಿಡಿಸೊಸಿಕ್ಕಿಸದಿರು ಸಿಕ್ಕಿಗೆ ಆದಿಕೇಶವರಾಯದಿಕ್ಕಾಗಿ ನಿನ್ನಂಘ್ರಿಯೊಳೆನ್ನ ಮನವನಿರಿಸೊ 5
--------------
ಕನಕದಾಸ
ಓಂ ನಮೋ ರಾ‌ಘವೇಂದ್ರಾಪ ಓಂ ನಮೋ ರಾಘವೇಂದ್ರಾ ಘನದಯ ದಾಸಾಂದ್ರಾ ವಾರಿಧಿ ಪೂರ್ಣಚಂದ್ರಾ1 ಶ್ರೀರಾಮ ಜಯರಾಮ ಸ್ವಾಮಿ ಜಯಜಯ ರಾಮಾ ಈರೀತಿ ಸ್ಮøತಿಸಲಿಕೆ ಕೊಡುವಿ ವೈಕುಂಠ ಧಾಮಾ2 ಉಗ್ರ ವೃತ ತಪದಿಂದಾ ಜಪ ಅನುಷ್ಠಾನದಿಂದಾ ಶ್ರೀಘ್ರದಿಂದ ಪಡಕೊಂಬಾ ಫಲಕಾಮ ಸನ್ನಿಧಾ3 ಹನುಮಬಲ್ಲಾ ಹರಬಲ್ಲಾ ಋಷಿನಾರದ ಬಲ್ಲಾ ನೆನವನಾಮ ಸವಿಯಲೋ ಹೇಳಲಿಕೆ ಅಳವಲ್ಲಾ 4 ಮರಳು ಮಾನವರಂತಾ ಎನ್ನ ನೋಡಬ್ಯಾಡ ಡೊಂಕಾ ಗುರುಮಹಿಪತಿ ಸ್ವಾಮಿ ನಾಮ ವೆನೆವ ನಿ:ಶಂಕಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಂಡು ಧನ್ಯನಾದೆ ಭೂಮಂಡಲದೋಳ್ ಪ ಶ್ರೀ ಗುರುಸಾರ್ವಭೌಮ ರಾಘವೇಂದ್ರರಾ 1 ಕಲಿಯುಗದೋಳ್ ಭಕ್ತಜನರಾ ಉದ್ಧರಿಸಬೇಕು ಎಂಬ ಮನದಿ ವರಮಂತ್ರಾಲಯದೊಳ್ ಬಂದು ನಿಂದಿಹ ಯತಿವರರಾ 2 ಮಂಗಳಮೂರುತಿ ರಾಘವೇಂದ್ರರ ಬೃಂದಾವನ ಮನದಣೆಯೆ 3 ವಿಶಿಷ್ಟ ಜನರ ಕಷ್ಟಗಳನು ನಿಮಿಷಮಾತ್ರದಿ ಕಳೆದು ಸಲಹುವ ಶ್ರೇಷ್ಟ ಗುರುಗಳ ದಿವ್ಯವಾದ ದರ್ಶನ ಭಾಗ್ಯಾ ದೊರೆಕಿತಿಂದು 4 ಆದಿವ್ಯಾಧಿಗಳೆಲ್ಲ ಹರಿಸಿ ಅಂಧ ಬಧಿರ ಮೂಕತ್ವ ತೊಲಗಿಸಿ ಬಂದ ದುರಿತಗಳೆಲ್ಲ ಓಡಿಸಿ ಕಂದನಂದದಿ ಸಲಹುವ ಗುರುಗಳಾ5 ದಿನದಿನದೊಳ್ ಇವರ ಮಹಿಮೆ ಅಧಿಕವಾಗುತಿರಲು ಕಂಡು ಹಿಂಡು ಹಿಂಡಾಗಿ ಬರುತಲಿಹರೂ 6 ಹೆಜ್ಜೆ ಹೆಜ್ಜೆಗೆ ವಂದಿಸುತಲೀ ದಂಡೆ ಮುಡಿ ಉರುಳುತಲೀ ಮಂಡೆಬಾಗಿ ನಮಿಸತಲಿ ಬಿಡದೆ ರಾಯರ ಕೊಂಡಾಡುತಲೀ 7 ಜನರೆನರವ ಕೊಡುತಾ ಕೊಡುವ ದಾತಾ 8 ನಿತ್ಯ ನಿತ್ಯದಿ ಬ್ರಾಹ್ಮಣರ ವೇದ ಪುರಾಣ ನಡೆಯುತಿರುವುದು ಕೇಳಿ ಭಕ್ತಿಯಿಂದ ಜನರಾನಂದ ಭರಿತರಾಗುತಿಹರು 9 ಕೇಳುತಿಹುದು ಮಂತ್ರಘೋಷ ಪೇಳುತಿಹ ಪುರಾಣ ರಹಸ್ಯ ನೀಡುತಿಹರು ಗುರೂಪದೇಶ ಎಮಗಾಯಿತಿಂದು ಬಹುಸಂತೋಷ10 ಗುರುಗಳ ಮನಸಾರಾ11 ಬಂದ ಭಕ್ತಬೃಂದಕೆಲ್ಲ ಬೇಡಿ ದೊರಗಳ ನೀಡುತ ಸಲಹಿ ಉಣಿಸಿದಣಿಸಿ ಹರಸಿ ಅವರ ಆನಂದದಿಂದ ಕಳುಹುತಿಹರು 12 ಭಕ್ತರಸವ ಪಾನಮಾಡಿಸಿ ಮುಕ್ತಿ ಮಾರ್ಗಕೆ ದಾರಿ ತೋರಿಸಿ ಕರ್ತೃ ಶ್ರೀಹರಿ ಹೊರತುಯಿಲ್ಲೆಂದು ಸತ್ಯವಾಕ್ಯ ವ್ಯಾಕ್ತಪಡಿಸುತಿಹರು13 ಭಕ್ತಜನರ ಪೊರೆಯಲಿವರ ಸರಿಗಾಣೆನೀಧರೆಯೊಳಗೆ ತಂದೆಯಂದದಿ ಬಿಡದೆ ಕಾಯ್ವರು ಸಾರ್ವಭೌಮ ಶ್ರೀ ರಾಘವೇಂದ್ರರು 14 ಎಷ್ಟು ಜನ್ಮದ ಸುಕೃತದ ಫಲವೋ ಶ್ರೇಷ್ಟಗುರುಗಳ ದರ್ಶನವಾಯಿತು ಕಂಗಳಿಂದಲಿ ಕಂಡು ಮನದ ಕ್ಲೇಶವೆಲ್ಲ ಪರಿಹಾರವಾಯಿತು 15 ಹಿಂದೆ ಪ್ರಹ್ಲಾದರಾಜರೆನಿಸಿ ಬಂದು ಮಂಚಾಲೆಯಾಂಬಿಕೆ ದರ್ಶನ ಕೊಂಡು ಗುರುಗಳ ದರ್ಶನ ಮಾಡಿಸೆಂದು ಭಕ್ತಿಲಿಜನ ಬೇಡುತಿಹರು 16 ದೇಶ ದೇಶದ ಜನರಿಗೆಲ್ಲ ವಿಸ್ತಾರದಿಂದ ಎಲೆಗಳ್ಹಾಕಿ ಭಕ್ಷ್ಯ ಪಾಯಸಾನ್ನಗಳನು ತೃಪ್ತಿಯಿಂದ ಉಣಿಸುತಿಹರು 17 ಶ್ರೀ ರಾಘವೇಂದ್ರಾಯ ನಮಃ ಎಂದರೆ ದುರಿತಗಳೆಲ್ಲವದೂರಮಾಳ್ವರು ಸ್ಮರಣ ಮಾತ್ರದಿ ಸಕಲಪಾಪಗಳೆಲ್ಲ ನಾಶಗೊಳಿಸೋರು18 ಗುರುವಾರ ಪೂಜಾ ಸಂಭ್ರಮದಿಂದ ನಮಗಾಯಿತು ಇಂದು ಮುಂದೆ ನಮಿಸಲು ಭಕ್ತವೃಂದಾ 19 ಜಯ ಜಯತು ಗುರುರಾಜ ಜಯ ಜಯತು ಸುರಭೂಜ ಜಯತು ಶ್ರೀ ರಾಘವೇಂದ್ರಾ ಜಯ ಜಯತು ಜಯ ಜಯತು ಜಯ ಜಯಾ 20
--------------
ರಾಧಾಬಾಯಿ
ಕರುಣಾಸಾಗರ ಬಾ ಗುರುವೆ | ಚರಣ ಕಮಲವನು ಸಾರಿದೆನೈ ಸ್ವಾಮಿ ಪ ಏನೆಂದು ಬಣ್ಣಿಪೆ | ದೀನವತ್ಸಲಪ್ರಭುವೆ | ಸಾನುರಾಗದಿ ನಿನ್ನ ಧ್ಯಾನಿಪೆನೈ ಜೀಯ1 ಗುರುರಾಘವೇಂದ್ರನೆ | ಶರಣರ ಸುರತರುವೆ | ನಿರುತ ಎಮ್ಮೊಳು ಕೃಪೆಯ ತೋರಿದಿರೈ ಸ್ವಾಮಿ 2 ಶ್ರೀ ಸುಧೀಂದ್ರಾರ್ಯರ | ಭಾಸುರಪ್ರಿಯತನಯ | ಶ್ರೀಶಕೇಶವನೊಲುಮೆ ಯಾಚಿಸುವೈ ಪ್ರಭುವೆ 3
--------------
ಶ್ರೀಶ ಕೇಶವದಾಸರು