ಒಟ್ಟು 78 ಕಡೆಗಳಲ್ಲಿ , 36 ದಾಸರು , 71 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಟ್ಟೆಯ ನೆವದಿಂದ ಬಂದು ತಟ್ಟ ಕವನೆ ಕಂಡು ಕಣ್ಣ ತೆರೆದ ಕೃಷ್ಣವೇಣಿ ನಿಮ್ಮ ಕಂಡೆ ದುಷ್ಟ ಮಾನವರ ಬಾಧೆಗೆ ಅಂಜಿ ಇತ್ತ ಬಂದೆ ಕಷ್ಟ ದುರಿತಗಳ ಕಳೆಯೆ ತಾಯೆ ಪ. ಭೋರಿಡುವ ಮಳೆಗೆ ಹಲ್ಲುಗಿಟಗರಿದು ಶೀತತಲೆ- ಗೇರಿ ಕಂಪಿಸಿ ನಡುಗುತ್ತ ಜಾರಿ ಕೆಸರೊಳು ಬಿದ್ದು ಮತ್ತೇಳುತಲಿ ದಾರಿಯನು ಕೇಳಿಕೊಳ್ಳುತ ಕ್ರೂರವಾಗಿದ್ದ ಜಾಲಿಯ ಮುಳ್ಳನೆ ತುಳಿದು ಹರಿ ನಾರಾಯಣ ಎನ್ನುತ ಹಾರೈಸಿ ನಿಮ್ಮ ದರುಶನಕ್ಕೆ ನಾ ಬಂದೆ ಘೋರ ದುರಿತವನು ಕಳೆಯೆ ತಾಯೆ 1 ನಿತ್ಯ ಕಲ್ಯಾಣಿ ನಿರ್ಜರಸ್ತೋತ್ರೆ ಶುಭಗಾತ್ರೆ ಪ್ರತ್ಯಕ್ಷ ವಿಷ್ಣುಜಾತೆ ಮಾತೆ ವಿಸ್ತರಿಸಲಾರೆ ಶ್ರೀ ವಿಷ್ಣು ಸಂಪ್ರೀತೆ ಸತ್ಪಾತ್ರ ಸಂಪೂಜಿತೆ ಪ್ರೀತೆ ಸತ್ತು ಹುಟ್ಟುವ ಜನ್ಮ ಕೋಟಲೆಯ ಖಂಡ್ರಿಸೆ ಪತಿತ ಪಾವನ ಚರಿತೆ ವ್ಯರ್ಥವಾಯಿತು ಜನ್ಮ ಸಾರ್ಥಕವ ಮಾಡಮ್ಮ ಮುಕ್ತಿಸಾಧನದಾತೆ ಮಾತೆ 2 ಸುರಗಂಗೆ ಕೃಷ್ಣಮಲಾಪಹಾರಿ ಮೂವರು ಕೂಡಿ ಬೆರೆದಿದ್ದ ಸಂಗಮದಲ್ಲಿ ಅರಿಸಿಣ ಅಕ್ಷತೆ ಗಂಧ ಕುಂಕುಮ ತಾಂಬೂಲಗಳ ಹರುಷದಿಂದರ್ಪಿಸುತಲಿ ಥರಥರದಿ ನೆರೆದ ಮುತ್ತೈದೆಯರೆಲ್ಲರು ಮರದ ಬಾಗಿನವ ಕೊಡುತಲಿ ಹರುಷದಿಂದಿಪ್ಪುದನು ಕಂಡೆ ಹೆಳವನಕಟ್ಟೆ ಅರಸು ರಂಗನ ಕೃಪೆಯಲ್ಲಿ ತಾಯೆ 3
--------------
ಹೆಳವನಕಟ್ಟೆ ಗಿರಿಯಮ್ಮ
ಬಹುದೂರ ಮುಕ್ತಿಪಥದಿ ನಡೆದು ನೀವುಹೋಗಲದನಳವಡಿಸಿಕೊಳ್ಳಿರೊ ಪ. ಸಂಸಾರವೆಂಬಡವಿಯ ಸುತ್ತ ಸುಳಿವಸಂಕಟವ ಕಳೆವರೆಕಂಸಾರಿ ತ್ರಿವಿಕ್ರಮನಿಗೆ ಸೇವೆಯಅಂಶುಪ್ರದಕ್ಷಿಣವ ಮಾಡಿರೊ 1 ಏಕಂ ವಿನಾಯಕೇ ಕುರ್ಯಾದ್ವೇ ಸೂರ್ಯೇನತ್ರೀಣೆ ಶಂಕರೆಚತ್ವಾರಿ ಕೇಶವೇ ಕುರ್ಯಾತ್ ಸಪ್ತಶ್ವತ್ಥಪ್ರದಕ್ಷಿಣವ ಮಾಡಿರೊ 2 ಬ್ರಹ್ಮತ್ಯವೆಂಬ ಪಾಪವ ಕಳೆವರೆಬ್ರಹ್ಮಪಿತನ ಪಟ್ಟದರಸಿಗೆಒಮ್ಮನದಲೊಮ್ಮೆ ಪ್ರದಕ್ಷಿಣವಮಾಡಿನಿರ್ಮಲ ಸುಖವ ಪಡೆಯಿರೊ3 ತೀರ್ಥಯಾತ್ರೆಗಳು ಬೇಡ ನೀವು ಗಳಿಸಿದರ್ಥವ್ಯರ್ಥವ ಕೆಡಿಸಬೇಡಚಿತ್ತದಲ್ಲಿ ಹರಿಯ ಚರಣವನು ಕೂಡಿಸತ್ಸುಖವನುಂಬುದು ಕಾಣಿರೊ4 ಅಸ್ವಸ್ಥರಾದ ಜನರು ಬಿಡದೆ ನಮ್ಮ-ಶ್ವತ್ಥ ನಾರಾಯಣನಿಗೆದಾಸ್ಯಮಂ ಪಡೆದು ಭಕ್ತಿಯಿಂತುತತ್ಸುಖವನುಂಬುದು ಕಾಣಿರೊ 5 ಇಂತು ಪ್ರದಕ್ಷಿಣವ ಮಾಡಿ ಲಕ್ಷ್ಮೀಕಾಂತನ ಕೃಪೆಯ ಪಡೆವರೆಚಿಂತೆಗಳ ಕಳೆದಮೇಲೆ ಮುಕ್ತಿಯಲಿಸಂತೋಷದಲಿ ಸುಖಿಪರು6 ಹಯವದನನೆಂಬ ಗುರುಕೊಟ್ಟಮಂತ್ರದಿಭಯವೆಂಬ ಭುಜಂಗನ ಜಯಿಸಿ ಮೂರು ಬಾರಿ ಸುತ್ತಿ ಹÀರಿಯ ಪದದಣಿಯ ಕಟ್ಟಿ ನಡೆಯಿರೊ 7
--------------
ವಾದಿರಾಜ
ಬಾಲಗೆ ಪಟ್ಟಗಟ್ಟಿಸು ಪರಿವಾರವ ಬಾಳಿಸು ಮುನ್ನಿನಂದದಲಿ ಸುತನ ಮುಂದಿಟ್ಟು 151 ಇಕ್ಷ್ವಾಕುಕುಲತಿಲಕನೆ ನಿನ್ನ ರಾಜ್ಯವ ಒಪ್ಪಿಸಿಕೊಳಲೆನಗಳವೆ ಪುತ್ರಗೆ ಪಟ್ಟವ ಕಟ್ಟುವುದೇನು ಕಾರಣ ವಿಸ್ತಾರವಾಗಿ ಹೇಳೆಂದ 152 ಕೇಳಿದೆ ಕರ್ಣದಿ ಹೀನದ ವಾಕ್ಯವ ಜಾರತ್ವ ಬಂದಿತಾತ್ಮಜೆಗೆ ಮಾಡುವೆನು 153 ಅಮರಲೋಕಕ್ಕೆ ವಶವಹರು ಭಾಧೆಗೆ ಗುರಿಯಾಗಿ 154 ವ್ಯರ್ಥವಾಯಿತು ಎನ್ನ ಬದುಕು ಮಾಡಿಕೊಂಬೆನೆಂದ 155 ಕಥೆಯ ಕೇಳರಿಯಾ ಕುಂದನೊದ್ದವರಾರು ಜಗದಿ 156 ಮೀರಿದರಾರೊ ಕಲ್ಪನೆಯ 157 ಸರ್ವಾಂಗದಿಂದ ಸುಂದರಿಯು ಸತಿ ಲಾಂಛನೆಯ ತಾಳಿದನು 158 ಸೆರೆತಂದ ತಾರಾದೇವಿಯನು ಪಾಡೇನು ಭೂಪಾಲ 159 ಕುಮಾರತಿಯ ಮಂದಿರಕೆ ಅರುಹಿದರಾರು ನಿನ್ನೊಡನೆ 160 ನಿಲ್ಲಿಸಿದ ಪ್ರಧಾನಿ ನಡೆತಂದ ಸೆಜ್ಜೆವಾಹರಿಗೆ 161 ಮಲಿನವನುಟ್ಟ ಮಾನಿನಿಯ ಸೆಳೆವಿಡಿದೆತ್ತಿದ ರಾಯ 162 ಮಾಜುವದೇಕೆ ಎನ್ನೊಡನೆ ಬ್ರಾಹ್ಮರು ಮೆಚ್ಚುವಂತೆ 163 ಸುರರೊ ನರರೊ ಕಿನ್ನರರೊ ಗಿರಿಜೇಶನಾಣೆ ಹೇಳೆಂದ 164 ವಿಶ್ವಲೋಚನನಂಘ್ರಿಯಾಣೆ 165 ಸರಿಯ ನಾರಿಯರು ಉರಿವ ಪಾವಕನ 166 ಬ್ರಾಹ್ಮರಿಗ್ಯೊಗ್ಯವಹುದೆ ಬರುವುದು ನಿಮ್ಮ ಕುಲಕೆ 167 ಪಾತಕಿಯೆಂದು ತಿಳಿದು ಬರುವುದೆ ಉಚಿತವು 168 ಮುನಿದು ಅರಣ್ಯಕ್ಹೋಗುವರೆ ವರಿಸು ನಿನಗೆ ಉತ್ತುಮವುಳ್ಳ ಪುರಷಗೆ ಧಾರೆಯನೆರೆವೆನು 169 ಪಾತಕ ಬರಿದೆ ನಿಂದ್ಯವನು (ಅ) ಬಂದೊದಗಿದ ಮೇಲೆ 170 ತೂಪಿರಿದು ಮಂತರಿಸಿ ಘೋರ ಕಾನನಕೆ 171 ಗುರಿಮಾಡಿ ನಾರಿ ಕಂಬನಿದುಂಬಿದಳು 172 ವಶವಲ್ಲದಂಥ ಮೂಗುತಿಯ ಬಿಸುಸುಯ್ವದೇತಕೆ ತಾಯೆ 173 ಕುಮಾರಿಯ ಮೇಲೆ ಸ್ನೇಹದಲಿ ವಿಧಿಯೆಂದ್ಹೊರಳಿದಳು 174 ಅಳುವುದೇತಕೆ ತಾಯೆ ನೀನು ಕಲ್ಮಾಡು ನಿನ್ನ ದೇಹವನು 175 ಹೇಳಿದನೇಕಾಂತದಲಿ ಉದಯಕೆ ಬನ್ನಿರೆಂದ 176 ಕರೆಸಿದನಾಗ ಕಿಂಕರರ ಪ್ರಧಾನಿಯು ತರಿಸಿದನೊಜ್ರದಂದಣವ ಬನ್ನಿರಿ ಶೀಘ್ರದಿಂದ 177 ಮಾಡಿರಿಮನಕೆ ಬಂದುದನು ನಾನಿಡುವೆ ರಾಯನ ಮುಂದೆ 178 ಮೇಲೆ ಪನ್ನಂಗ ಕವಿದವು ಶೀಘ್ರದಿ ಪೊತ್ತು ನಡೆದರು 179 ಬಸವಳಿದಳು ಶ್ರೀ ಹರಿಯ ಸ್ತುತಿಸುತಿರ್ದಳೆ ತನ್ನ ಮನದಿ 180 ಕಾಲನ ವಶಕೆÉ ಒಪ್ಪಿಸದೆ ಪಾದಾರವಿಂದೊಳಿರಿಸು 181 ಭಾರವನ್ಹೊತ್ತು ಬಳಲಿ ಬಾಯಾರುತ್ತ ಏರುತ್ತ ಘಟ್ಟ ಬೆಟ್ಟಗಳ ಬಾಲೆಯ ತಂದಿಳುಹಿದರು 182 ಬಾ ಬಳಲಿದೆಯೆನುತ ರಂಭೆಯನುಪಚರಿಸಿದರು 183 ತೊಪ್ಪಲ ಮೇಲ್ಹರಹಿದರು ಕತ್ತಿಗೆ ಮಯ್ಯನಿಕ್ಕಿದಳು 184 ಕಂಬುಚಕ್ರಧಾರಿ ವೈಕುಂಠವಾಸಗೆ ವಂದಿಸಿದಳು ತನ್ನ ಮನದಿ ಸ್ತುತಿಯ ಮಾಡಿದಳು 185 ಅರಣ್ಯದಲ್ಲಿ ತನ್ನ ನೆನೆವ ಕುಮಾರಿಗೆ ಕಾರುಣ್ಯದಿಂದೊದಗಿದನು ನಿದ್ರೆ ಕವಿದವು 186 ಕಾಮಧೇನು ಕಲ್ಪವೃಕ್ಷ ಚಿಂತಾಮಣಿ ಭಕ್ತರಿಗೊಜ್ರಪಂಜರನೆ ದೂತರ ಮನವ 187 ಯೋಚಿಸಿ ತಮ್ಮ ಮನದಿ ಪಾತಕ ಎತ್ತಿದಾಯುಧವನಿಳುಹಿದರು 188 ಒಬ್ಬರೊಬ್ಬರು ಮಾತನಾಡಿ ಉರ್ವೀಶಗೊಯ್ದು ಒಪ್ಪಿಸುವ 189 ವಾರಿಜಗಂಧಿಯ ಬಿಟ್ಟು ರಾಯಗೆ ಗುರುತ ತೋರಿದರು 190 ತಪ್ಪದೆ ರಾಯನೋಲಗಕೆ ಚಿತ್ತೈಸು ಜೀಯವಧಾನ 191 ತಂದೆವು ಮುದ್ರೆಯುಂಗುರವ ಮನದಲಿ ಮರುಗಿದನು 192 ಅಂಜೂರ ಕೊಯ್ದು ಕೊಟ್ಟಂತೆ ಬೆಂದೊಡಲನೆಂತು ಪೊರೆಯಲಿ 193 ಕೆಂಡದೊಳಾಜ್ಯ ಬಿದ್ದಂತೆ ಬೆಂದರು ಶೋಕಾಗ್ನಿಯಿಂದ 194 ಮೇಲೆ ಸ್ನೇಹದಲಿ ತಲೆಯೆತ್ತಿದವಬ್ಜ ಬಂಧುಗಳು 195 ಹಸಿದ ಹೆಬ್ಬುಲಿಗೆ 196 ಬೆದರುವಳು ವ್ಯಾಘ್ರದಟ್ಟುಳಿಗೆ ಮರಳಿ ಧೈರ್ಯವನೆ ಮಾಡುವಳು 197 ಮಾಯಪಾಶಕೆ ಗುರಿಮಾಡಿ ಮುಕ್ತಿ ಸಾಧನವು 198
--------------
ಹೆಳವನಕಟ್ಟೆ ಗಿರಿಯಮ್ಮ
ಭಕ್ತವತ್ಸಲನೆಂಬ ಬಿರುದು ನಿನಗಿರಲು ಭಕ್ತಜನಾಪತ್ತಿಗ್ಯಾಕೆ ನೀ ಬರದಿರುವಿ ಪ ಮುಕ್ತಿದಾಯಕನೆಂಬ ಯುಕ್ತ ಬಿರದ್ಹೊತ್ತಿರುವಿ ಚಿತ್ತಜಪಿತ ಭಕ್ತರ್ಹೊತ್ತಿಗ್ಯಾಕಿಲ್ಲೋ ನಿತ್ಯ ಬಿಡದ್ಹೊಗಳುವ ಸತ್ಯ ವೇದೋಕ್ತಿಗಳು ವ್ಯರ್ಥವೇನಯ್ಯಾ 1 ದೋಷನಾಶನೆ ನಿನ್ನ ಸಾಸಿರನಾಮಗಳಿಂ ಘೋಷಿಪರು ಮನುಮುನಿ ಬೇಸರಿಲ್ಲದಲೆ ದಾಸಜನರಾಶಕ್ಕೆ ಬೇಸತ್ತ ಬಳಿಕ ನಿನ ಗೀಸು ಬಿರುದುಗಳಿರ್ದು ಲೇಶವೇನಯ್ಯಾ 2 ಪರಮ ಕರುಣಾಕರ ಶರಣಜನಮಂದಾರ ಚರಣಸ್ಮರಿಪರ ಘೋರದುರಿತಪರಿಹಾರ ಖರೆಯಿರ್ದರಿಗೆನ್ನ ದುರಿತಮಂ ಪರಿಹರಿಸಿ ಕರುಣದಿಂ ರಕ್ಷಿಸೈ ಧರೆಗಧಿಕ ಶ್ರೀರಾಮ 3
--------------
ರಾಮದಾಸರು
ಭಾಗವತ ಮಹಿಮೆ ಬಣ್ಣಿಸಲಳವೇ ಪ ಈ ಭವಶರಧಿಗೆ ಸುನಾವೆಯಂತಿಹುದಯ್ಯಅ.ಪ ಸೂನು ಶ್ರೀ ಮನ್ನಾರಾಯಣ ಆಪದ್ಬಾಂಧವನಲ್ಲದಿನ್ನಿಲ್ಲವೆಂಬುವಾ1 ಮತ್ತೆ ಶಾಪದಲಿ ನಾರದನ ವಿಷಯವ ಪೇಳ್ವ 2 ಪರೀಕ್ಷಿತ ಶುಕ ಶ್ರೀಹರಿಯ ಅವತಾರಗಳ ವರ್ಣನೆಗಳು ಮತ್ತೆ ಮಹದಾದಿ ತತ್ವ ಸೃಷ್ಟಿಕ್ರಮ ಇತ್ಯಾದಿ ಪುಣ್ಯಚರಿತಗಳನು ಪೇಳ್ವ 3 ಆ ಬೊಮ್ಮಂಡದಿಂದೆ ಚತುರ್ಮುಖನ ಸೃಷ್ಟಿಯು ವಿಭಾಗವ ಪೇಳ್ವ ಸೂಕ್ಷ್ಮ ಪರಮಾಣು ಅಬ್ದಾದಿ ಕಾಲಗಳು ವ್ಯಷ್ಟಿ ಭೂತೋತ್ಪತ್ತಿ ಶ್ರೀ ವರಹ ರೂಪದಿ ತೋರಿದ ಮಹಿಮೆಯಾ 4 ವರಹಾವತಾರದೀ ಧರಣೀಯ ತಂದಂಥ ಶ್ರೀ ಕಪಿಲ ದೇವಹೂತಿಯ ಸಂವಾದವ ಪೇಳ್ವ 5 ಚತುರ ಸ್ಕಂದದಿ ನವಬ್ರಹ್ಮರ ಉತ್ಪತ್ತಿ ಪ್ರಾಚೀನ ಬರ್ಹಿಷರ ವೃತ್ತಾಂತವನು ಪೇಳ್ವ 6 ನೃಪರ ಋಷಭ ಚರಿತೆಗಳು ಪುತ್ರ ಭರತನ ಕಥೆಯು ನದ ನದಿಗಳ ಸೃಷ್ಟಿ ಜ್ಯೋತಿಶ್ಚಕ್ರ ನರಕ ಪಾತಾಳಗಳ ಪೇಳ್ವ 7 ಮಾನವ ವೃತ್ರನ ಜನನ ಮರಣಗಳೆಲ್ಲ ಪೇಳ್ವ 8 ಹಿರಣ್ಯಕಶಿಪುವಿನ ದುರುಳತನವು ಮತ್ತೆ ಧೀವರನಾದ ಪ್ರಹ್ಲಾದರಾಯನಿಂ ವ- ರ್ಣಿತಮಾದ ಶ್ರೀಹರಿಯ ಮಹಿಮೆಯ ಪೇಳ್ವ 9 ಅಷ್ಟಮ ಸ್ಕಂದದಿ ಮನ್ವಂತರ ವಿವರವು ಕಮಠ ಹಯವದನನವತಾರ ಸುಧೆಯಿತ್ತ ಮಹಿಮೆಯ10 ಇಳೋಪಾಖ್ಯಾನವ ತಾರೋಪಾಖ್ಯಾನವ ಪೇಳ್ವ 11 ಶರ್ಯಾತಿ ಕಾಕುಸ್ಥ ಖಟ್ವಾಂಗ ಧೀರ ಮಾಂ- ಧಾತೃ ಸೌಭರಿ ಸಗರರ ಚರಿತೆ ಪರಮಾತ್ಮ ರಘುರಾಮನ ಚರಿತೆಗಳನು ಪೇಳ್ವ12 ಮತ್ತೆ ನಿಮಿಯ ದೇಹತ್ಯಾಗದ ವಿಷಯವು ಉತ್ತಮ ಚಂದ್ರವಂಶದ ನಹುಷಾಸುತ ಯ- ಯಾತಿ ಶಂತನುಯದು ಚರಿತೆಗಳುಳ್ಳ 13 ದಶಮ ಸ್ಕಂದದಿ ಹರಿ ಯದುವಂಶದಿ ಜನಿಸಿ ಶಿಶುಲೀಲೆಗಳ ತೋರಿ ಅಸುರಿ ಪೂತನಿ ಕೊಂದು ಅಸುರಭಂಜಕ ಹರಿಯು ಮೆರೆದ ಮಹಿಮೆಯ ಪೇಳ್ವ 14 ಮಾಯಾ ಮಹಿಮಧೇನು ಪ್ರಲಂಬಕರಾ ಕೊಂದು ಕಾಡುಕಿಚ್ಚಿನಿಂದ ಗೋಪಾಲರ ಕಾಯ್ದ ನೋಯಿಸಿ ಕಾಳಿಯ ಬಾಯ ಬಿಡಿಸಿ ಕಾಳಿಮರ್ದನ ಕೃಷ್ಣ ನಾಡಿದ15 ಗೋಪಸ್ತ್ರೀಯರ ಚರಿತ ಗೋವರ್ಧನೋದ್ಧಾರಣ ಕಂಸವಧೆಯ ಮಾಡಿ ಗುರುಸುತನನು ತೋರ್ದ 16 ಜರೆಯ ಸೇನೆಯ ಜಯಿಸಿ ಕಾಲಯವನರ ಕೊಂದು ಸಿರಿ ರುಕ್ಮಿಣಿಯ ಪಡೆದು ಸೆರೆಯ ಬಿಡಿಸಿ ರಾಜಕನ್ಯೆಯರನು ಕಾಯ್ದ 17 ದ್ವಿವಿಧ ಮುರಾಸುರರೆಲ್ಲರ ನಾಶಪಡಿಸಿ ಕಾಶೀಪುರವ ದಹನ ಮಾಡಿ ಪಾಂಡವರನ್ನು ಕಾಯ್ದ ಪರಮ ಮಹಿಮೆಯ ಪೇಳ್ವ 18 ಭೂಭಾರನಿಳುಹಲು ಕುರು ಪಾಂಡವರೊಳು ಸದ್ಧವರ್i ಸ್ಥಾಪಿಸಿದ ಶ್ರೀಕೃಷ್ಣಚರಿತೆಯ ಪೇಳ್ವ 19 ಭೂಸುರ ಶಾಪದಿ ಯುದ್ಧವನೆ ಮಾಡಿ ಏಕನಾಗಿದ್ದ ಉದ್ಧವನಿಗೆ ಬೋಧಿಸಿ ಲೋಕಾವನೈದು ನಿಜಧಾಮಕ್ಕೆ ತೆರಳಿದ 20 ನಿತ್ಯನೈಮಿತ್ತಿಕ ಪ್ರಾಕೃತಗಳ ಸೃಷ್ಟಿ ವೇದ ವಿಭಾಗವು ಹರಿರಾತನ ಅಂತ್ಯ ಮಾರ್ಕಂಡೇಯ ಚರಿತ ಸೂರ್ಯಗಣಗಳ ಪೇಳ್ವ 21 ಮರೆ ವೆಯಿಂದಾಗಲಿ ರುಜೆಯಿಂದಾಗಲಿ ಹರಿಯೇನಮಃ ಎಂದುಚ್ಚರಿಸಿದ ಮಾತ್ರದಿ ದುರಿತಪಾಪವು ನಾಶವಾಗಿ ಪೋಗುವುದಯ್ಯ 22 ದುರಿತವ್ಯಾಧಿಗಳು ತ್ವರಿತದಿ ಓಡುವುವು ಹರಿಸಂಬಂಧವಲ್ಲದ ಮಾತೆಲ್ಲವೂ ವ್ಯರ್ಥವೋ 23 ಭಾಗವತದ ಸಪ್ತಾಹದ ಪುಣ್ಯಫಲವು ಪಾವನವಾದ ಶ್ರೀಪಾದವ ಸೇರುವ24
--------------
ಉರಗಾದ್ರಿವಾಸವಿಠಲದಾಸರು
ಮರುಳು ಮನುಜ ಹರಿಯ ಧ್ಯಾನಿಸೋ ಸ್ಥಿರವಿಲ್ಲವೀದೇಹ ಪ ಬರಿದೆ ಹೊನ್ನು ಮಣ್ಣಿಗಾಗಿ ಇರುಳು ಹಗಲು ವ್ಯರ್ಥವಾಗಿ ಕರೆಕರೆಯನು ಪಡುವೆಯಲ್ಲೊ ಅ.ಪ ತಂದೆ ತಾಯಿ ಸತಿಯು ಸುತರು ಬಂಧು ಬಳಗಗಳಾರಿದ್ದರು ಕರ್ಮ ತಪ್ಪಿಪರಾರು ಸಂದೇಹವಿಲ್ಲೆಂದು ತಿಳಿದು 1 ಜನರು ನಿನ್ನ ಸೇರುತಿಹರು ಕೊನೆಗೆ ಯಾರು ದಿಕ್ಕು ಕಾಣೆ ಮನೆಯಬಿಟ್ಟು ಹೋಗುವಾಗ 2 ಗುರುರಾಮವಿಠಲನಂಘ್ರಿ ಸ್ಮರಿಸಿ ಸ್ಮರಿಸಿ ಹರುಷ ಪೊಂದಿ ಪಾಪಿಯೆನ್ನಿಸಿಕೊಳ್ಳಬೇಡವೊ 3
--------------
ಗುರುರಾಮವಿಠಲ
ಮಾಧವ ಗೀತೆ ಶರಣು ಹರಿಗೆ ಶರಣು ಸಿರಿಗೆ ಶರಣು ಬ್ರಹ್ಮವಾಣಿಯರಿಗೆ ಶರುಣು ಭವಗೆ ಶರಣು ಶಿವೆಗೆ ಶರಣು ಬೆನಕಗೆ ಶರಣು ತತ್ವಮಾನಿಗಳಿಗೆ ಶರಣು ಮುನಿ ಸಮೂಹಗಳಿಗೆ ಮಾಧವ 1 ಪರಮಭಕ್ತರಾಗಿ ಮೆರೆದ ಗುರು ಪುರಂದರಾದಿ ಸಾಧು ವರರ ವಚನ ಮಣಿಗಳನ್ನು ಮನದೊಳಾರಿಸಿ ಸರವ ಮಾಡಿ ಶರಣ ಜನರ ಕರುಣದೆಳೆಯೊಳಿದನು ಬಿಗಿಸಿ ಮಾಧವ 2 ಶ್ರೀಯೆ ಸತಿಯು ನಿನಗೆ ಬ್ರಹ್ಮರಾಯ ಹಿರಿಯ ಮಗನು ವೈನ- ತೇಯ ರಥವು ಖಾದ್ರವೇಯೆ ಶಯ್ಯೆ ಛತ್ರವು ಮನೆಯ ದಾಸಿ ಸುರನಿ ಮಾಧವ 3 ಪರ್ವತೇಶನಣುಗಿ ತಂಗಿ ಶರ್ವದೇವ ನರ್ಮ ಸಖಳು ಸರ್ವದುರಿತವಳಿವ ಗಂಗೆ ನಿನ್ನ ಪುತ್ರಿಯು ಸರ್ವಕರ್ತ ಸರ್ವಶಕ್ತ ಸರ್ವಕಾಲ ದೇಶ ವ್ಯಾಪ್ತ ಭೋಕ್ತ ಮಾಧವ 4 ನೀನೆ ತಾಯಿ ನೀನೆ ತಂದೆ ನೀನೆ ಬಂಧು ನೀನೆ ಬಳಗ ನೀನೆ ಸಖಳು ನೀನೆ ಗುರುವು ನೀನೆ ದ್ರವ್ಯವು ನೀನೆ ಧೃತಿಯು ನೀನೆ ಸ್ಮøತಿಯು ನೀನೆ ಮತಿಯು ಮಾಧವ 5 ನಿನ್ನ ನಾಮ ಪುಣ್ಯನಾಮ ನಿನ್ನ ರೂಪ ಮಾನ್ಯರೂಪ ಅನ್ಯ ದೈವರನ್ನು ಕಾಣೆ ಘನ್ನ ಭಕ್ತವರ್ಯರಾಣೆ ಮಾಧವ 6 ದೀನ ನಾನು ದಾನಿ ನೀನು ಹೀನ ನಾನು ಮಾನಿ ನೀನು ಏನ ಬಲ್ಲೆನೈಯ ನಾನು ಜ್ಞಾನಪೂರ್ಣನೈಯ ನೀನು ಮಾಧವ 7 ಹೃದಯದಲ್ಲಿ ನಿನ್ನ ರೂಪ ವದನದಲ್ಲಿ ನಿನ್ನ ನಾಮ ಉದರದಲ್ಲಿ ಅರ್ಪಿತಾನ್ನವಿತ್ತು ಅನುದಿನ ಒದಗಿ ಬಂದು ಬದಿಯಲಿದ್ದು ಮದಡ ಬುದ್ಧಿಯನ್ನು ಬಿಡಿಸಿ ಮಾಧವ 8 ಸ್ನಾನ ಮೌನ ಧ್ಯಾನ ತಪಗಳೇನು ಮಾಡಲೇನು ದೇವ ನೀನೆ ಕೃಪೆಯಿನೊಲಿಯದಿರಲು ಜ್ಞಾನ ಬಾರದು ಏನು ಹೀನ ಹಾನಿ ಬರಲು ನೀನು ಮಾತ್ರ ಬಿಡದಿರೆನ್ನ ಮಾಧವ 9 ನಿತ್ಯವಲ್ಲ ದೇಹವಿನ್ನು ವ್ಯರ್ಥವಾಗಿ ಪೋಪುದಾಯು ಮತ್ತೆ ಬರುವುದೇನು ನಿಜವು ಮತ್ರ್ಯಕಾಯವು ನಿತ್ಯ ನಿನ್ನ ಭಜಿಸುತಿಪ್ಪ ಮಾಧವ 10 ಅಂಬುಗುಳ್ಳೆಯಂತೆ ಇರುವ ಡಿಂಬವನ್ನು ನಂಬಿ ಕೆಟ್ಟು ಹಂಬಲಿಸುತ ವಿಷಯಗಳಿಗೆ ಡೊಂಬನಾದೆನು ಕಂಬಳಿಯೊಳು ಕಟ್ಟಿದನ್ನ ತಿಂಬುವನಿಗೆ ದೊರೆವ ಸುಖವು ಮಾಧವ 11 ಹೊಟ್ಟು ತಂದು ಕುಟ್ಟಿ ಕೇರಿ ಕಷ್ಟಪಟ್ಟು ತುಕ್ಕಿ ಬೀಸಿ ಅಟ್ಟಹಾಸದಿಂದ ರೊಟ್ಟಿ ಸುಟ್ಟು ತಿನ್ನಲು ಎಷ್ಟು ಸುಖವೊ ಅಷ್ಟೆಯಿನ್ನು ಭ್ರಷ್ಟ ಭವದಿ ಮಮತೆಯಿಡಲ ಮಾಧವ 12 ಹೊಟ್ಟೆಕಿಚ್ಚು ಪಡುವೆ ದೈವಕೆಷ್ಟು ಪೂಜೆ ಮಾಡೆ ಕರುಣ ಪುಟ್ಟಲೊಲ್ಲದದಕೆ ಬೆಟ್ಟದಷ್ಟು ಕೊಟ್ಟರು ಬೆಟ್ಟು ನೀರೊಳದ್ದಿ ಬಾಯೊಳಿಟ್ಟು ಚಪ್ಪರಿಸಲು ರುಚಿಯ ಮಾಧವ 13 ತಪ್ಪು ಸಾಸಿರಂಗಳನ್ನು ಒಪ್ಪಿಕೊಂಡು ಕಾವದೇವ ಮುಪ್ಪುರಂಗಳನ್ನು ಗೆಲಿಸಿದಪ್ರಮೇಯನೆ ಕಪ್ಪು ಮೇಘಕಾಂತಿಯಿಂದಲೊಪ್ಪುತಿಪ್ಪ ತಿರುಮಲೇಶ ಮಾಧವ 14 ಒರಳ ನೆಕ್ಕಿ ವ್ರತವ ಕೆಟ್ಟ ಮರುಳನಂದವಾಯ್ತು ದೇಹ ಧರಿಸಿದುದಕೆ ನಿನ್ನ ಬಿಟ್ಟು ನರರ ಸ್ತುತಿಸಲು ಹರಕು ಚಿಂದಿ ಬಿಡಿಸಲಿಲ್ಲ ಕರಕು ಅನ್ನ ಹೋಗಲಿಲ್ಲ ಮಾಧವ 15 ಮೊರಡು ತುರುವ ಹಿಡಿದು ಕಟ್ಟಿ ಕರೆದು ಕಷ್ಟ ಪಟ್ಟು ಪಾಲ ನುರಗಗಳಿಗೆ ಎರೆದ ತೆರದಲಾಯ್ತು ನಿನ್ನನು ತರಣಿ ಮುಣಗ ದುಡಿದು ಬಡಿದು ಮಾಧವ 16 ಕೆರವ ತಿಂಬ ನಾಯಿಗಿನ್ನು ಸುರುಚಿಯನ್ನ ಸೊಗಯಿಸುವುದೆ ನರಕ ಭಾಗಿ ಪಾಮರಂಗೆ ನಿನ್ನ ನಾಮವು ಗರಳದಂತೆ ತೋರ್ಪುದೈಯ ಗುರುಗಳಿಲ್ಲ ಹಿರಿಯರಿಲ್ಲ ಮಾಧವ 17 ಕ್ರೂರ ಮಾನವರೊಳುದಾರ ಧೀರ ಶೂರರೆಂದು ಸಾರಿ ಬಾರಿ ಬಾರಿಗಿನ್ನು ಪೊಗಳಿ ಬೊಬ್ಬೆಯಿಟ್ಟರು ಬಾರದವರಿಗೆಂದು ಕರುಣ ಘೋರತನದ ದನುಜರವರು ಶೌರಿ ಮಾಧವ 18 ಹಾಳು ಹೊಲಕೆ ನೀರನೆತ್ತಿ ತೋಳು ಬೀಳು ಹೋದವೋಲು ಖೂಳ ಜನಕೆ ಪೇಳಿಕೊಳ್ಳುತಿಹನು ಬಾಳ್ವೆಯು ದಾಳಿ ಮಾಳ್ಪ ವಿಷಯಗಳನು ಹೂಳಿ ಜ್ಞಾನ ಭಕ್ತಿಯನ್ನು ಮಾಧವ 19 ಎಷ್ಟು ನೀಲಿಯನ್ನು ತೊಳೆಯೆ ಬಿಟ್ಟು ಹೋಗದವರ ಬಣ್ಣ ದುಷ್ಟ ಮಾನವರಿಗೆ ಕರುಣ ಪುಟ್ಟದೆಂದಿಗು ಕಷ್ಟಪಟ್ಟು ಸೇವಿಸುವರ ಹೊಟ್ಟೆಯನ್ನು ಹೊಡೆದು ತಮ್ಮ ಮಾಧವ 20 ನಿರುತ ನಿನ್ನ ಕಥೆಯ ಬಿಟ್ಟು ನರರ ಕಥೆಗಳನ್ನು ಕೇಳಿ ಗುರುಗಳನ್ನು ಹಿರಿಯರನ್ನು ಜರೆಯುತಿಪ್ಪರು ಪೊರೆದ ತಂದೆ ತಾಯ ಮಾತ ಪರಿಕಿಸದಲೆ ತೊರೆದು ತಮ್ಮ ಮಾಧವ 21 ಪಟ್ಟದರಸಿಯನ್ನು ತೊರೆದು ಬಿಟ್ಟು ಪರರ ಸತಿಯ ಕೂಡಿ ಕೊಟ್ಟ ಸಾಲವನ್ನು ಕೊಡದೆ ನುಂಗುತಿಪ್ಪರು ಕರವ ಭಾಷೆಯನ್ನು ಕೊಟ್ಟು ಮೋಸ ಮಾಡುತಿಹರು ಮಾಧವ 22 ಉಂಡ ಮನೆಗೆ ಬಗೆವರೆರಡನವರು ಭಂಡರು ಕಂಡು ನುತಿಸಿ ಬೇಡಿಕೊಂಡರು ದಂಡಿಸುವರ ಕಂಡು ನಡುಗಿ ಮಾಧವ 23 ಕೊಳ್ಳರೊಳಗೆ ಸ್ನೇಹ ಬಹಳ ಸುಳ್ಳರೊಳಗೆ ಸೋಲುತಿಹರು ಒಳ್ಳೆಯವರ ಕಂಡವರ ಟೊಳ್ಳು ಮಾಳ್ಪರು ಬಳ್ಳೆಸುರಿದು ಬಲ್ಲಿದವರಿಗಳ್ಳೆ ಬಿರಿಯಲುಣಿಸಿ ದಣಿಸಿ ಮಾಧವ 24 ಮಾಡಿದಂಥ ಕೃತಿಯು ಮರೆತು ಕೇಡು ಬಗೆದು ಕಾಡುತಿಹನು ನೋಡರೊಮ್ಮೆಗಾದರವರು ಬಡವರೆಂಬುದ ಜಾಡೆಯರಿತು ನಿನ್ನ ನಾಮ ಪಾಡಿ ಪೊಗಳುತಿಹರಿಗೆಂದು ಮಾಧವ 25 ಶಾಕವ್ರತದೊಳೆಲ್ಲ ಶಾಕಂಗಳನ್ನು ಬಿಡುವ ತೆರದಿ ಬೇಕು ಬೇಕು ಎಂಬ ಬಯಕೆ ಬಿಡಲು ಬಾರದು ಸಾಕೆನಿಸದೆ ರತಿಯ ಸುಖದೊಳೇಕ ಚಿತ್ತನಾಗುವಂತೆ ಮಾಧವ 26 ನೇಮ ನಿಷ್ಠೆಯೆಂದು ಪರರ ಧಾಮದನ್ನ ಬಿಡುವವೋಲು ಕಾಮಲೋಭ ಮೋಹಗಳನು ಬಿಡಲು ಬಾರದು ನಿತ್ಯ ಪರರ ಮಾಧವ 27 ಹೇಸಿಗೆಯನು ಕಂಡು ಕರದಿ ನಾಸಿಕವನು ಹಿಡಿಯುವಂತೆ ಹೇಸಿ ವಿಷಯ ವಾಸನೆಯನು ಬಿಡಲು ಸಲ್ಲದು ಘಾಸಿಬಟ್ಟು ಪರರ ಸೇವೆಯಾಸೆಬಟ್ಟು ಮಾಡುವಂತೆ ಮಾಧವ 28 ವಿತ್ತ ಪದವಿ ಕಂಡು ಹರುಷ ಕ್ಲೇಶಗಳಿಗೆ ಸಿಲುಕು- ತಿರುಳು ಹಗಲು ಬಿಡದೆ ಕುದಿದು ತೊಳಲುತಿರುವೆನು ದುರುಳ ವಿಷಯಗಳಿಗೆ ಮನವ ಮಾಧವ 29 ಹೇಸಿ ವಿಷಯ ಸುಖವ ನಾನು ಲೇಸೆನುತ್ತೆ ತಿಳಿದು ಮಮತೆ ಯಾಸೆಯಲ್ಲಿ ಕಟ್ಟುಬಿದ್ದು ಕ್ಲೇಶಪಡುತಿಹೆ ಪಾಶಬಿಡಿಸಿ ದಾಸ ದಾಸ ದಾಸನಾಗಿಸೆನ್ನ ದೋಷ ಮಾಧವ 30 ಆಗದೆನಗೆ ಅಬುಜನಾಭ ಭಾಗವತವ ಕೇಳೆ ಮನಸು ಬೈಗು ಬೆಳಗು ಪೋಗುತಿಹುದು ಸಾಗಿ ಬಾರದು ಭೋಗ ಭಾಗ್ಯಗಳನು ಬಯಸಿ ರಾಗ ಲೋಭಗಳಲಿ ನೆಲಸಿ ಮಾಧವ 31 ಬಂದ ಕಾರ್ಯವಾಗಲಿಲ್ಲ ಎಂದು ಬ್ರಹ್ಮ ದೇಹ ಧರಿಸಿ ಮುಂದ ನೊಂದನರಿಯೆ ಮಾಧವ 32 ದಾಸ ವೇಷವನ್ನು ಹಾಕಿ ದೇಶ ದೇಶವನ್ನು ತುಕ್ಕಿ ಮೋಸಮಾಡಿ ಸುಜನರನ್ನು ಘಾಸಿಗೊಳಿಸಿದೆ
--------------
ಲಕ್ಷ್ಮೀನಾರಯಣರಾಯರು
ಮಾನವ ಶ್ರೀಗುರುಚರಣವ ಮಾಡುತ ಪೂಜೆಯ ತೋಷದಲಿ ಪ ಬೇಡುತ ನಿಜಸುಖ ಆಜ್ಞಾಚಕ್ರದೊ ಳಾಡುತ ಪರಮನೆ ನೀನಾಗಿ ಅ.ಪ ಸತ್ತು ಹುಟ್ಟಿ ಈ ಪೋಗುವದೇಹವ ನಿತ್ಯವು ಎನ್ನುತ ಪೋಷಿಸದೆ ಸತ್ಯಪ್ರಬಂಧವ ಶ್ರೀಹರಿಪಾದವ ನೆತ್ತಿಲಿ ಪೊತ್ತರ ಮಗನಾಗಿ 1 ಚಿತ್ತವ ಚಲಿಸದೆಸಿದ್ದಾಪುರದೊಳ ಗಿತ್ತರೆ ಬಂಧುರಸಿದ್ಧಿಗಳೂ ಅರ್ಥಿಯಿಂದ ಬಂದೊದಗುವ ಫಲಗಳ ವ್ಯರ್ಥವ ಮಾಡದೆ ಶೀಘ್ರದಲಿ 2 ಹರಿಯಜ ರುದ್ರರು ಈಶ ಸದಾಶಿವ ಪರತರಮೂರ್ತಿಯ ಧ್ಯಾನಿಸುತ ಗುರುವನೆ ಯಜಿಸುತ ಭಜಿಸುತ ಸರ್ವರು ಗುರುವೇಯಾಗಿಹ ತೆರದಲ್ಲಿ 3 ತತ್ವಮಸಿಯ ಬೋಧಾಮೃತ ಸೇವಿಸಿ ಮೃತ್ಯುವ ಜೇಸುತ ಧೈರ್ಯದಲಿ ಪೃಥ್ವಿಯೊಳೀಮಹದೇವನಪುರದೊಳು ಭಕ್ತರ ಪೊರೆಯುವ ದೊರೆಯನ್ನೆ 4
--------------
ರಂಗದಾಸರು
ಮುದುಕನಾಗಿ ಬದುಕಿ ಫಲವೇನು ತನ್ನಯ ಪ್ರಾಣ ಪದಕವಾ ಕಂಡರಿಯದನಕಾ ಪ ಬದುಕಿ ಸಂಸಾರ ಸೆಲೆಯೊಳು ಅದಕಿದಕೆಂದು ಓಡ್ಯಾಡಿ ಮದಕೆ ಮಾಯೆಯೊಳು ಸಿಕ್ಕಿ ಬದರಿಕೊಳ್ಳುತ್ತಿರುವಾ ಮನುಜಾ ಅ.ಪ. ಸತ್ತು ಹುಟ್ಟು ಹುಟ್ಟು ಸಾವಿಗೆ ಅದಕೆ ತಕ್ಕ ಉತ್ತಮ ಶ್ರೀ ಗುರುಮಂತ್ರವನ್ನು ಚಿತ್ತದಿ ಧ್ಯಾನಿಸದೆ ಮುದಿ ಕತ್ತೆಯಂತೆ ಧರೆಯೊಳಗೆ ವ್ಯರ್ಥವಾಗಿ ಜನಿಸಿ ಮದೋ ನ್ಮತ್ತನಾಗಿ ಇರುವ ಮನುಜಾ 1 ಗುರೂಪದೇಶವನ್ನು ಪಡೆಯದೆ ಸಂಸಾರವೆಂಬ ಶರಧಿಯೊಳು ಈಸಾಡಿ ಬಳಲುತ್ತ ಹರಿಯಧಿಕ ಹರನಧಿಕನೆಂದು ವಾದಿಸುತ್ತ ಪರರ ಬರಿದೆ ನಿಂದಿಸಿ ಹೊಟ್ಟೆಯ ಮಂದ ಮನುಜಾ2 ಪರಿಪೂರ್ಣಾತ್ಮಕನನ್ನು ನೋಡದೆ ಪರಾತ್ಮರ ಗುರು ವಿಮಲಾನಂದನೊಳಾಡದೆ ಮರಗಳಲ್ಲಿ ಹಾರುವವಾ ನರನಂತೆ ಮನದೊಳು ಸಿಕ್ಕಿ ನರಳುತ್ತ ಪ್ರಾಯವು ಹೋದ ನರಿಯಂತೆ ಕೂಗುವ ಮನುಜಾ 3
--------------
ಭಟಕಳ ಅಪ್ಪಯ್ಯ
ಯಾಕೆ ನಿರ್ದಯ ಮಾಡಿದೆ ರಂಗಯ್ಯ ನೀನ್ಯಾಕೆ ನಿರ್ದಯ ಮಾಡಿದೆ ಪ ವ್ಯಾಕುಲ ಪಡಲಾರೆ ನಿಮ್ಮ ಲೋಕವ ಸೇರಿಸು ಅ.ಪ ದುಷ್ಟರ ಮಧ್ಯದಲ್ಲಿ ನಾನಿರಲಾರೆ ಸೃಷ್ಟಿಗೀಶ್ವರನೆ ಕೇಳು ಮುಟ್ಟಿ ಭಜಸಿ ನಿಮ್ಮ ಪಾದಪದ್ಮದ ಭಕ್ತಿಯಿಟ್ಟೇನೆಂದರೆ ದುಷ್ಟ ಇಂದ್ರಿಯ ಬಿಡದೆನ್ನ 1 ಪಂಚೇಂದ್ರಿಯಗಳೆನ್ನ ಬಹುಬೇಗ ವಂಚನೆ ಮಾಡುತಿದೆ ಪಂಚಬಾಣನ ಪಿತ ಪರಮಪುರುಷ ರಂಗ ಅ ಕಿಂಚನಾದೆ ನಿನ್ನಂಘ್ರಿಯ ಸೇರಿಸು 2 ಸಂಸಾರವೆಂಬ ಸರ್ಪ ಕಚ್ಚಿ ವಿಷ ಕ್ಷಣದಲ್ಲಿ ತಲೆಗೇರಿತು ಪರಮ ಹಂಸರ ಸಂಗದೊಳಗೆಯಿರಿಸಿ ಎನಗೆ ಭರದಿಂದೇರಿದ ವಿಷ ತಿರುಗೆಸೋ ಶ್ರೀಹರಿ 3 ಸರ್ಪ ತುಂಬಿದ ಕೂಪದಿ ಬಿದ್ದಿಹೆನು ಎನ್ನಪ್ಪ ರಕ್ಷಿಸೊ ಬೇಗದಿ ಸರ್ಪಶಯನ ಶ್ರೀಅಪ್ರಮೇಯ ರಂಗ ಇನ್ನು ಕ್ಷಿಪ್ರದಿಂ ಮುಕ್ತಿಯ ಒಲಿದು ಪಾಲಿಸು ರಂಗ 4 ಅಮ್ಬುಜನಾಭನೆ ನಿಮ್ಮ ಪಾದದಧ್ಯಾನ ಒಂದು ನಿಮಿಷವಾದರು ಮಾಡಲೀಸದು 5 ಹಿಂದಿನ ಕರ್ಮಂಗಳು ಇಂದಿರೇಶ ನಿಂದಕರ ವಶವಾಯಿತು ಇಂದು ಧರ್ಮದಲಿರ್ದೆ ಬಂಧುಗಳ ವಶವಾಯ್ತು ಇನ್ನು ಬಂಧನವೇನಯ್ಯ ಮುಕ್ತ್ಯಾನಂದ ತೋರುವುದಕ್ಕೆ 6 ಎಂದಿಗಾದರೂ ಮುಕ್ತಿಯ ಕೊಡುವೆಯೆಂದಾನಂದ ಇಂದು ಈ ಸಂಸಾರ ಬಂಧನದೊಳಗೆ ನಾ ಒಂದು ನಿಮಿಷ ಜೀವಿಸಲಾರೆನು ರಂಗ 7 ಅಂದು ದ್ರೌಪದಿ ಧ್ರುವÀ ಗಜೇಂದ್ರನ ರಕ್ಷಿಸಲಿಲ್ಲವೆ ಬಂದು ಅಂಬರೀಷ ಅಜಾಮಿಳರ ಪ್ರಹ್ಲಾದನ ಕಂಬದಿಂದಲೆ ಬಂದು ಕಾಯ್ದ ಗೋವಿಂದ 8 ಭಕ್ತವತ್ಸಲನೆಂತೆಂಬೊ ಬಿರುದು ಈಗ ವ್ಯರ್ಥವಾಯಿತೆ ಶ್ರೀರಂಗ ಉತ್ತಮ ಗುರುಗಳು ಶ್ರೇಯೋನಿಧಿಗಳ ವಾಕ್ಯ ಸತ್ಯವ ಮಾಡಿ ಮುಕ್ತ್ಯಾನಂದ ಪಾಲಿಸು 9 ರಂಗನಾಥ ನೀ ಕೈ ಬಿಟ್ಟರೆ ಎನ್ನ ಲೋಕಮಾತೆ ಬಿಡುವಳೆ ಬೇಗ ಮುಕ್ತಿಪಥವ ಪಾಲಿಸುವಳು 10 ಮಾಡಬಾರದ ಮಾಡಿದೆ ಈ ಸಂಸಾರದೆ ನೋಡಬಾರದ ನೋಡಿದೆ ಆಡಬಾರದ ವಾರ್ತೆಗಳನಾಡಿದೆ ಇನ್ನು ಗಾಡನೆ ಮುಕ್ತಿಯ ನೀಡೊ ವೆಂಕಟರಮಣ 11
--------------
ಯದುಗಿರಿಯಮ್ಮ
ಯಾಕೆ ಪುಟ್ಟಿಸಿದಿ ನೀ ಸಾಕಲಾರದೆ ಜಗ-ದೇಕ ಕಾರಣಪುರುಷನೆ ಕೃಷ್ಣ ಪ ವಾಕು ಚಿಂತಿಸೆ ಇಂಥಕಾಕು ಮಾಡುವುದುಚಿತವೆ ಕೃಷ್ಣ ಅ.ಪ. ಒಡಲಿಗನ್ನವ ಕಾಣೆ ಉಡಲು ಅರಿವೆಯ ಕಾಣೆಗಡಗಡನೆ ನಡುಗುತಿಹೆನೋ ಕೃಷ್ಣಮಡದಿ ಮಾತೆಯರ ಬಿಟ್ಟು ಒಡಹುಟ್ಟಿದವರ ಬಿ -ಟ್ಟಡವಿ ಪಾಲಾದೆನಲ್ಲೋ ಕೃಷ್ಣಕುಡುತೆ ಕೊಡುವವರಿಲ್ಲ ನುಡಿಯ ಕೇಳುವರಿಲ್ಲಬಡತನವು ಕಂಗೆಡಿಸಿತೋ ಕೃಷ್ಣಕಡೆ ಹಾಯಿಸುವರ ಕಾಣೆ ನಡುಮಡುವಿನೊಳು ಕೈ ಬಿಡದೆ ದಡವನು ಸೇರಿಸೋ ಕೃಷ್ಣ 1 ಕೊಟ್ಟವರ ಸಾಲವನು ಕೊಟ್ಟು ತೀರಿಸದವರಪೊಟ್ಟೆಯೊಳು ಪುಟ್ಟಲಾಯ್ತೋ ಕೃಷ್ಣಎಷ್ಟು ಜನುಮದಿ ಮನಮುಟ್ಟಿ ಮಾಡಿದ ಕರ್ಮಕಟ್ಟೀಗ ಉಣಿಸುತಿಹುದೋ ಕೃಷ್ಣಸೃಷ್ಟಿಯೊಳಗೆನ್ನಂಥ ಕೆಟ್ಟ ಪಾಪಿಷ್ಠ ಜನಘಟ್ಟಿಸಲಿಲ್ಲವೇನೋ ಕೃಷ್ಣವಿಠ್ಠಲನೆ ನಿನ್ನ ಮನಮುಟ್ಟಿ ಭಜಿಸಿ ಹಿಂದೆಎಷ್ಟು ಜನ ಬದುಕಲಿಲ್ಲೋ ಕೃಷ್ಣ 2 ಆಳು ದೇಹವು ಗೇಣು ಕೀಳಾಗಿ ಪಲ್ಕಿರಿದುಖೂಳ ಜನರ ಮನೆಗೆ ಕೃಷ್ಣಹಾಳು ಒಡಲಿಗೆ ತುತ್ತು ಕೂಳಿಗೆ ಹೋಗಿ ಅವರವಾಲೈಸಲಾರೆನಲ್ಲೋ ಕೃಷ್ಣಬಾಳು ಈ ಪರಿಯಾದ ಮ್ಯಾಲೆ ಭೂಮಿಯಲಿ ಬಹುಕಾಲ ಕಳೆಯುವುದುಚಿತವೆ ಕೃಷ್ಣಆಲಸ್ಯ ಮಾಡದಲೆ ಈ ವ್ಯಾಳ್ಯದಲಿ ಅರಿತುಪಾಲಿಸಲು ಬಹು ಕೀರ್ತಿಯೋ ಕೃಷ್ಣ 3 ಸಿರಿ ಅರಸನೆಂದು ಶ್ರುತಿ ಸಾರುತಿದೆಬಂದುದೀಗೇನು ಸಿರಿಯೋ ಕೃಷ್ಣಒಂದೊಂದು ನಿಮಿಷ ಯುಗಕಿಂತಧಿಕವಾಗುತಿದೆಮುಂದೋರದ್ಹಾಂಗಾಯಿತೋ ಕೃಷ್ಣಸಂದೇಹವಿಲ್ಲ ಗೋವಿಂದ ಶ್ರೀಪದದಾಣೆತಂದೆ ನೀ ರಕ್ಷಿಸದಿರೆ ಕೃಷ್ಣಮುಂದೆ ಭಜಿಸುವರು ಹೀಗೆಂದು ವಾರುತೆ ಕೇಳಿಬಂದುದಪಕೀರ್ತಿ ಮಾತು ಕೃಷ್ಣ 4 ವತ್ಸರ ಈರೀತಿ ಕಾಲಕಳೆದೆನೋ ಕೃಷ್ಣವ್ಯರ್ಥವಾಯಿತು ಜನುಮ ಸಾರ್ಥಕಾಗದು ಕಣ್ಣುಕತ್ತಲೆಗವಿಸಿತಲ್ಲೋ ಕೃಷ್ಣಇತ್ತ ಬಾರೆಂತೆಂದು ಹತ್ತಿಲಿಗೆ ಕರೆದೊಂದುತುತ್ತು ಕೊಡುವರ ಕಾಣೆನೋ ಕೃಷ್ಣವಿಸ್ತರಿಸಲಾರೆ ಇನ್ನೆತ್ತ ಪೋಗಲೊ ನಿನ್ನಚಿತ್ತವ್ಯಾತಕೆ ಕರಗದೋ ಕೃಷ್ಣ 5 ಆರು ಗತಿ ನಿನಗಧಿಕರಾರು ಧಾರುಣಿಯೊಳಗೆತೋರಿಸೈ ಕರುಣನಿಧಿಯೆ ಕೃಷ್ಣಈರೇಳು ಲೋಕಕಾಧಾರವಾದವಗೆ ಬಲುಭಾರವಾದವನೆ ನಾನು ಕೃಷ್ಣಮೀರಿ ನುಡಿಯಲು ಹದಿನಾರೆರಡು ಪಲ್ಗಳುಬೇರು ಕಳಕಳಯಿತೋ ಕೃಷ್ಣತೋರು ಬಂಕಾಪುರದ ಧಾರುಣಿಪುರವಾಸವೀರ ನರಸಿಂಹದೇವ ಕೃಷ್ಣ 6 ಹರಿಯಾತ್ರೆ ಮಾಡಲಿಲ್ಲ ಹರಿಮೂರ್ತಿ ನೋಡಲಿಲ್ಲಹರಿದಾಸ ಸÀಂಗವಿಲ್ಲ ಕೃಷ್ಣಹರಿಸ್ಮರಣೆ ಮಾಡಲಿಲ್ಲ ಸುರನದಿಯ ಮೀಯಲಿಲ್ಲಧರಣಿ ಸಂಚರಿಸಲಿಲ್ಲ ಕೃಷ್ಣಅರಿತರಿತು ಮನ ವಿಷಯಕೆರಗಿ ಹರುಷವ ತಾಳಿಬರಿದಾಯಿತಾಯುವೆಲ್ಲ ಕೃಷ್ಣಮರುತಾಂತರ್ಗತ ಸಿರಿಯರಸ ಹರಿಯೆಂದುಹರುಷಾಬ್ದಿ ಮಗ್ನನಲ್ಲ ಕೃಷ್ಣ7 ಹರಿನಾರಾಯಣನೆಂದು ಕರವೆತ್ತಿ ಮುಗಿದೊಮ್ಮೆ ಮೈ ಮರೆದು ನಟಿಸಲಿಲ್ಲ ಕೃಷ್ಣಹರಿಸ್ಮರಣೆ ಸ್ಮರಿಸಿ ಸಿರಿತುಳಸಿ ಪುಷ್ಪವನುಕರವೆತ್ತಿ ನೀಡಲಿಲ್ಲ ಕೃಷ್ಣಸರ್ವಜ್ಞರಾಯರು ವಿರಚಿಸಿದ ಗ್ರಂಥವನುದರುಶನವೆ ಮಾಡಲಿಲ್ಲ ಕೃಷ್ಣಸ್ಮರಿಸಲಾರದ ಪಾಪ ಸ್ಮರಣೆಪೂರ್ವಕ ಮಾಡಿಸ್ಥಿರಭಾರನಾದೆನಲ್ಲೋ ಕೃಷ್ಣ 8 ದುರುಳಜನರೊಡನಾಡಿ ಹರಿಣಾಕ್ಷಿಯರ ಕೂಡಿಸರಿ ಯಾರು ಎಂದು ತಿರುಗಿ ಕೃಷ್ಣನಿರುತ ಕ್ಷುದ್ರವ ನೆನೆಸಿ ನೆರೆದೂರ ಮಾರಿ ಹೆಗ್ಗೆರೆಗೋಣನಂತೆ ತಿರುಗಿ ಕೃಷ್ಣಪರರ ಅನ್ನವ ಬಯಸಿ ಶರೀರವನೆ ಪೋಷಿಸಿಶಿರ ಒಲಿದು ಶಿಲೆಗೆ ಹಾಯಿದು ಕೃಷ್ಣಶರಣವತ್ಸಲನೆಂಬೊ ಬಿರುದು ಪಸರಿಸುವಂಥಕರುಣ ಇನ್ನೆಂದಿಗಾಹುದೊ ಕೃಷ್ಣ 9 ಉರಗ ಫಣಿ ತುಳಿಯಲೊಎರಡೊಂದು ಶೂಲಕ್ಹಾಯಲೊ ಕೃಷ್ಣಕೊರಳಿಗ್ಹಗ್ಗವ ಹಾಕಿ ಮರವೇರಿ ಕರಬಿಡಲೋಗರಗಸದಿ ಶಿರಗೊಯ್ಯಲೋ ಕೃಷ್ಣಕರುಣವಾರಿಧಿ ಎನ್ನ ಕರಪಿಡಿದು ಸಲಹದಿರೆಧರೆಯೊಳುದ್ಧರಿಪರ್ಯಾರೋ ಕೃಷ್ಣ 10 ಎಷ್ಟು ಹೇಳಲಿ ಎನ್ನ ಕಷ್ಟ ಕೋಟಿಗಳನ್ನುಸುಟ್ಟೀಗ ಬೇಯ್ಯುತಿಹವೋ ಕೃಷ್ಣಕಷ್ಟಬಟ್ಟ ಮಗನೆಂದು ದೃಷ್ಟಿ ನೀರೊರೆಸೆನ್ನಪೊಟ್ಟೆಯೊಳ್ಪಿಡಿವರ್ಯಾರೊ ಕೃಷ್ಣಕೃಷ್ಣನಾಮ ವಜ್ರಕ್ಕೆ ಬೆಟ್ಟ ದುರಿತವು ನೀಗಿಥಟ್ಟನೆ ಬಂದು ನೀನು ಕೃಷ್ಣಇಷ್ಟವನು ಸಲಿಸಿ ಗುಟ್ಟ್ಟಲಿ ಶ್ರೀರಂಗವಿಠಲ ಎನ್ನ ಕಾಯೋ ಕೃಷ್ಣ 11
--------------
ಶ್ರೀಪಾದರಾಜರು
ಯಾತಕೆನ್ನ ಮೇಲಿನ್ನು ಪಂಥ ಸಾಕೊ ಶ್ರೀಕಾಂತ ಪ. ಘೋರ ಷಡ್ವೈರಿಗಳಾರುಭಟಿಗಳನ್ನು ದೂರಗೈದರೆ ನಿನ್ನ ಮಂದಿರವನು ಸಾರಿಸಿ ಶುಚಿಗೈವನಿಂದಿರಾ- ವರ ಬಾರೊ ಭಕ್ತ ಕುಮುದ ಚಂದಿರಾ ಶ್ರುತಿ ಸಾಗರಾ ಲೋಕೈಕ ಸುಂದರಾ 1 ವ್ಯರ್ಥವಾಗಿ ಬಹಿರರ್ಥದಿ ಮಾನಸ ವರ್ತಿಸದಿರೆ ನಿನ್ನ ನೋಡುವೆ ಬಹ- ಳರ್ಥಿಯಿಂದಲಿ ಪಾಡಿ ಪೊಗಳುವೆ ಮೋಹ ಕಾರ್ಥ ಶಾಸ್ತ್ರವ ದೂರ ದೂಡುವೆ ಪುರು- ಷಾರ್ಥದಾಯಕ ನಿನ್ನ ಕೂಡುವೆ 2 ಪತಿಯೆಂದು ಸಂಭ್ರಮಗೊಂಬೆನು ಭೂ- ಪತಿಯಲಿ ನೀನಿಹೆಯೆಂಬೆನು ಸಮ ರತಿಯಿಂದ ಪುರುಷ ಸುಖವುಂಬೆನು ಭಕ್ತಿ ಸತಿಯರ ಭರವನಿಂತು ಕಾಂಬೆನು 3
--------------
ತುಪಾಕಿ ವೆಂಕಟರಮಣಾಚಾರ್ಯ
ಯಾರು ಇದ್ದರೇನು ನಿನ್ನ ಪಥಕೆ ಬಾರರೋ ಶ್ರೀಹರಿ ಮುರಾರಿ ಎಂದು ಗತಿಯ ನೋಡಿ ಕೊಂಡಿರೋ ಪ ಹೊನ್ನು ಹಣವು ಚಿನ್ನ ಚಿಗುರು ಬಣ್ಣ ಬಂಗಾರವಿರಲು ಎನ್ನವರು ತನ್ನವರು ಎಂದು ಬರುವರೋ ಅನ್ನಕಿಲ್ಲದಿರಲು ಕೆಟ್ಟು ಅಲ್ಲಿ ಪರಿಕಾಲದಲ್ಲಿ ನಿನ್ನ ಕುಶಲವಾರ್ತೆಗಳನು ಮುನ್ನ ಕೇಳರೋ 1 ಇಂದು ಹಬ್ಬ ಹುಣ್ಣಿಮೆಂದು ಬಂಧು ಬಳಗವೆಲ್ಲನೆರೆದು ತಿಂದು ನಿನ್ನ ಹಿಂದೆ ಮುಂದೆ ತಿರುಗು ತಿಪ್ಪರೋ ಬಂಟ ಬಹಳ ಭಾಗ್ಯವೆಲ್ಲ ಕುಂದಿ ಹೋದ ಕಾಲದಲ್ಲಿ ಮುಂದೆ ಸುಳಿಯರೋ 2 ತುಂಬಿ ಇರಲು ಎಡದೆ ಬಿಡದೆ ನೆಂಟರಿಷ್ಟರೆಂದು ತಿಂಬರೋ ವಡವೆ ವಸ್ತು ನಷ್ಟವಾಗಿ ಬಡತನವು ಬಂದ ಬಳಿಕ ಬಿಡುವ ಕೈಯ ನಿನ್ನ ನೊಂದ ನುಡಿಯ ನುಡಿಸರೋ 3 ಮಡದಿ ಮಕ್ಕಳೆಲ್ಲ ನಿನ್ನ ಒಡನೆ ಹುಟ್ಟಿದವರು ಸಹಿತ ಕಡು ಮಮತೆಯಿಂದಲವರು ನೋಡಿ ನಡೆವರೋ ಉಡಲು ತೊಡಲು ಒಡಲಿಗಿಷ್ಟು ಕಡಿಮೆಯಾಗಿ ಎಂದು ಹೊಡೆದು ಕೊಂಬರೋ 4 ಮೃತ್ಯುನಿನ್ನ ಹತ್ತಿರಿದ್ದು ಹೊತ್ತು ವೇಳೆ ನೋಡುತಿಹುದು ವ್ಯರ್ಥವಾಗಿ ಇವರ ನಂಬಿ ಕತ್ತೆ ಕೆಡದಿರೋ ಸತ್ತು ಹುಟ್ಟಿ ಸಾಯ ಬೇಡಿ ಚಿತ್ತದಲ್ಲಿ ಭೀಮನಕೋಣೆ ಗೊತ್ತಿಲಿದ್ದ ಲಕ್ಷ್ಮೀಪತಿಯ ಒತ್ತಿ ಭಜಿಸಿರೋ 5
--------------
ಕವಿ ಪರಮದೇವದಾಸರು
ರಜತ ಪೀಠದ ಯಾತ್ರೆ ರಜೋತಮ ಗುಣವುಳ್ಳ | ಪ್ರಜರಿಗೆ ದೊರಕುವದೆ | ತ್ರಿಜಗದೊಳಗೆ ಮುಂದೆ | ಅಜನಾಗಿ ಬಪ್ಪಗೆ | ಭಜನೆ ಮಾಡುವಂಥ ಸುಜನರಿಗಲ್ಲದೆ ಪ ಮಂದಾಕಿನಿ ಮಿಕ್ಕಾದ ನದಿಗಳಲ್ಲಿಗೆ ಪೋಗೆ | ಮಿಂದು ನಾನಾ ಕ್ಷೇತ್ರವ ಬಂದೂ ಬಿಡದೆ ತಿರುಗಿ ವೇದ ಶಾಸ್ತ್ರಗಳು | ಚಂದದಿ ಓದಿಕೊಂಡು | ಕುಂದದೆ ವ್ರತ ಯಾಗ ಯೋಗ ಮಾಡಲೇನು | ಬಿಂದು ಮಾತ್ರ ಫಲವಿಲ್ಲ | ಸುರರು ಒಂದಾಗಿ ಒಂದಿನ | ಅಂದು ಪೀಯೂಷವ ಕರೆಯೆ ಉಂಡವರಾರು 1 ಮಾನವ | ನಾಡೊಳು ಉಡುಪಿ ಯಾತ್ರೆ ಮಾಡಿದರವಗೇನು ಲೇಶ ಸತ್ಕರ್ಮವು | ಕೂಡದು ಕೂಡದಯ್ಯಾ | ಬಿಡಾಲನಂದದಿ ತಿರುಗಿದಂತಾಗುವದು | ಕೇಡಿಗೆ ಗುರಿಯಾಗುವಾ | ಜೋಡು ಇಲ್ಲಿಗೆ ಬಂದು ತಿರುಗಿ ಪೋದರೆಯೇನು | ಆಡಲೇನದಕೆ ತಿಲಾಂಶ ಸುಖವುಂಟೆ 2 ತಮೋ ಯೋಗ್ಯ ಉಡುಪಿನ ಯಾತ್ರೆ ಮಾಡಲು | ಅಮಿತ ಬಲವಂತನಾಗಿ ಪುಟ್ಟಿ ಆಕ್ರಮಿಸಿ ಪುಣ್ಯವನೆ ಕೆಡಿಸಿ ತಮಕೆ ಸಾಧನವಾದ ಸುಖಬಟ್ಟು ಬಹುಕಾಲ | ರಮಣಿ ಮಕ್ಕಳು ಸಹಿತದಿ | ನಿತ್ಯ | ತಮಸಿನೊಳಗೆ ವಾಸಫಲ ವ್ಯರ್ಥವಾಗದು 3 ರಾಜಸ ಗುಣದಲ್ಲಿ ಈ ಯಾತ್ರೆ ಮಾಡಲು | ಭೂಷಣವನೆ ಯಿಟ್ಟು | ವಾಜಿ ಗಜವಾಗಿ ಸೌಖ್ಯ ಈ ಜಗದೊಳು ಒಟ್ಟು ಪೋಗೋದಲ್ಲದೆ ವಿ | ರಾಜಿಸುವದು ಬಲ್ಲದೇ | ರಾಜಮಂದಿರಕೆ ನವರತ್ನ ತೆತ್ತಿಸಿದಂತೆ | ಈ ಜನದ ಸುಖದ ಫಲ ವ್ಯರ್ಥವಾಗುವದು4 ಮುಕ್ತಿಯೋಗ್ಯನು ಬಂದು ಯಾತ್ರೆಯ ಮಾಡಲು | ಮುಕ್ತಿ ಉತ್ತಮ ಕುಲದಲ್ಲಿ | ವ್ಯಕ್ತನಾಗೀ | ದಿವ್ಯ ಮನದಲ್ಲಿ ವಿರುಕುತಿ | ಭಕ್ತಿಜ್ಞಾನದಲಿ ಬಾಳಿ | ಶಕ್ತನೆಂದೆನೆ ಸತತ ಶ್ರೀಮದಾರ್ಯರ | ಭಕ್ತಿಲಿ ಲೋಲಾಡುತ | ಭಕ್ತವತ್ಸಲ ವಿಜಯವಿಠ್ಠಲ ಕೃಷ್ಣಸಾರ | ಭೋಕ್ತನಲ್ಲಿಪ್ಪನು ಫಲ ವ್ಯರ್ಥವಾಗದು 5
--------------
ವಿಜಯದಾಸ
ಲೋಕನೀತಿ ಇತ್ತಿತ್ತ ಬಾರೆಂದು ಕರೆಯುವವರಿಲ್ಲದಿರೆ ವ್ಯರ್ಥವಲ್ಲವೆ ಜನ್ಮವು ಪ. ಅತ್ತತ್ತ ಹೋಗೆಂಬ ನುಡಿ ಕೇಳಿ ಜಗದೊಳಗೆ ಮತ್ತೆ ಇರಬಹುದೆ ಹರಿಯೆ ಅ.ಪ. ಆರಿಗಾರಾಗುವರೊ ಪ್ರಾರಬ್ಧ ನೀಗದಲೆ ಶೌರಿ ದಾರಿಯ ತೋರನು ಈ ರೀತಿಯರಿತು ಹೇ ದುರ್ಮನವೆ ನರಹರಿಯ ಆರಾಧನೆಯನೆ ಮಾಡೊ 1 ಏಕಾದಶ್ರೇಂದ್ರಿಯವ ಶ್ರೀ ಕಳತ್ರನೊಳಿಟ್ಟು ಏಕ ಮನದಲ್ಲಿ ಭಜಿಸು ಏಕೆ ತಲ್ಲಣಿಸುವೆ ಶೋಕಕ್ಕೆ ಒಳಗಾಗಿ ನೂಕು ಭವತಾಪ ಜಗದಿ 2 ಗೋಪಾಲಕೃಷ್ಣವಿಠ್ಠಲನೆ ಗತಿ ಎಂತೆಂದು ಈ ಪರಿಯಿಂದ ಭಜಿಸು ಶ್ರೀ ಪರಮ ಕಾರುಣ್ಯ ಗುರುಗಳಂತರ್ಯಾಮಿ ತಾಪ ಹರಿಸುವನು ಭವದಿ 3
--------------
ಅಂಬಾಬಾಯಿ