ಒಟ್ಟು 1028 ಕಡೆಗಳಲ್ಲಿ , 78 ದಾಸರು , 443 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಡುಪಿ ಪರಿಸರದ ದೇವತೆಗಳು ಕಣ್ವ ಋಷಿ ತಪಗೈದ ಅಜ್ಜರ್ಕಾಡೆಂಬಲ್ಲಿ ಅವನಿಗೊಲಿದಿರುವ ದುರ್ಗೆ ವಾಸವಾಗಿಹಳು ಒಳಕಾಡು ಎಂಬ ತಾನವೆ ಚಂದ್ರನ ತಪೋ ಭೂಮಿ ಇಲ್ಲಿಯೇ ಸಕಲ ವಿದ್ಯಾಲಯವಾಯ್ತು 132 ಬೆಳ್ಳಿ ಮಂಚದ ಕಾಲುಗಳು ನಾಲ್ಕು ಎಂಬಂತೆ ಆರ್ಮೊಗನ ರೂಪಗಳು ನಾಲ್ಕು ದೆಸೆಗಳಲಿ ಮಾಂಗೋಡು ತಾಂಗೋಡು ಆರಿತೋಡು ಮುಚ್ಲಿಕೋಡು ನಾಮದಿಂ ಬೆಳಗುವವು ಷಷ್ಠಿದಿನದಂದು 133 ಕಡಿಯಾಳಿ ಎಂಬಲ್ಲಿ ಮಹಿಷಮರ್ದಿನಿಯಾಗಿ ದುರ್ಗಾಲಯವು ಉಡುಪಿ ಪೂರ್ವದ್ವಾರದಲ್ಲಿ ಪುತ್ತೂರು ಬೈಲೂರು ಬಡಗು ತೆಂಕು ದೆಸೆಯಲ್ಲಿ ಕೃಷ್ಣ ಸೇವೆಗೆ ದುರ್ಗೆ ಕಟಿಬದ್ಧಳಿಹಳು 134 ಸತ್ಯ ನುಡಿಯಲ್ಲಿರಲಿ ಧರ್ಮ ನಡೆಯಲ್ಲಿರಲಿ ಸ್ವಾಧ್ಯಾಯದಲಿ ಎನಗೆ ಎಚ್ಚರವದಿರಲಿ ಅಜ್ಞಾನದಂಧಕಾರದ ದಿಕ್ಕಿನಿಂದೆನ್ನ ನಿನ್ನ ಬೆಳಕಿನ ಕಡೆಗೆ ಕರೆದೊಯ್ಯು ದೇವಾ 135 ಪರಶುರಾಮಕ್ಷೇತ್ರ ಹುಟ್ಟುಭೂಮಿಯು ಎನಗೆ ಪರಶುರಾಮನು ನೀನೆ ನಿನ್ನ ಕ್ಷೇತ್ರವಿದು ಪರಮಹಂಸಾಖ್ಯಯತಿಗಳ ಮಾನಸಹಂಸ ಸೋಹಂ ಎನ್ನುವ ಬ್ರಹ್ಮ ಎನ್ನೊಳಗೆ ಇರುವೆ 136 ಕೃಷ್ಣಾರ್ಪಣವದಿಲ್ಲದಾವುದು ಫಲ ಕೊಡದು ಅದರಿಂದ ಕೃಷ್ಣನಿಗೆ ಕೃತಿಯನರ್ಪಿಸುತ ಸಾಲೋಕ್ಯ ಸಾಮೀಪ್ಯವನ್ನು ಬಯಸುವೆ ನಾನು ಯೋಗ್ಯತಾನುಗುಣವಾಗಿ ಫಲವ ಕೊಡು ಹರಿಯೆ137 ಪರಶುರಾಮನು ರಾಮ ಪರಶು ರಾಮನು ಕೃಷ್ಣ ರಾಮದಾಸನು ನಾನು ಕೃಷ್ಣದಾಸನಿಹೆ ಬರೆದ ಕೃತಿಯಿಂದ ನೀನ್ ಸುಪ್ರಸನ್ನತೆ ಪಡೆದು ಭಕ್ತಿ ಮುಕ್ತಿಗಳ ಕೊಟ್ಟು ರಕ್ಷಿಸು ಶ್ರೀಶ 138 ಉಡುಪಾನ್ವಯಜ ನಾನು ಉಡುಪಾನ್ವಯದ ನೀನು ಉಡುಪಿ ಹುಟ್ಟೂರೆನಗೆ ನೀನುಡುಪಿಗತಿಥಿ ಮಧ್ವ ಹೃದಯವು ನಿನಗೆ ವಾಸದ ಸ್ಥಾನವಿರೆ ಮಾಧ್ವಕೋಟಿಗಳಲ್ಲಿ ಕೀಟನಾಗಿಹೆ ನಾನು 139 ವಿಷ್ಣು ಪದದೊಳಗಿರುವ ಜ್ಯೋತಿಲೋಕದ ಒಡೆಯ ಆ ಜ್ಯೋತಿಲೋಕಕ್ಕೆ ಕರೆದೊಯ್ಯುತ ನನ್ನ ಭಕುತರಿಗೆ ಮುಕುತಿ ಕೊಡುವುದೆ ನಿನ್ನ ಸಂಕಲ್ಪ ಅದರಿಂದ ನಿನ್ನನ್ನು ಶರಣು ಶರಣೆಂಬೆ 140 ಚಾಂದ್ರಮಾನದ ಪಿಂಗಳಾಖ್ಯ ಸಂವತ್ಸರದಿ ಚೈತ್ರ ಮಾಸದ ನವಮಿಯ ದಿನದಲ್ಲಿ ಕಾಲ ಇದನರ್ಪಿಸುತ ನಾನು ಕೃತಕೃತ್ಯನಾದೆ ಶ್ರೀಕೃಷ್ಣ ಕಾಪಾಡು 141
--------------
ನಿಡಂಬೂರು ರಾಮದಾಸ
ಊ. ದೇವತಾಸ್ತುತಿ ಬ್ರಹ್ಮದೇವರು ಕರುಣಿಸೊ ಕೋಮಲಾಂಗನೆನಾರಾಯಣಸುತನೆ ಕರುಣಿಸೊ ಪ ಕರುಣಿಸು ಎನ್ನನು ಸುರಸೇವಿತ ಪಾದಪರಮೇಷ್ಠಿಯ ನಿನ್ನ ಶರಣು ಬಂದಿಹೆನು ಅ.ಪ. ವಾಣಿರಮಣ ನಿನ್ನ ಗಾನ ಮಾಡುವೆ ಸಿರಿಮಾನಿನಿ ಅರಸನ ಧ್ಯಾನದೊಳಿರಿಸೊ 1 ಶಿವಜನಕನೆ ನಿನ್ನ ಕವನ ಮಾಡುವ ಹೃದ್-ಭವನದೊಳಗೆ ಮಾಧವನ ತೋರಿಸೊ2 ಇಂದಿರೇಶನ ಮನವಿಂದು ಬೋಧಿಸಿ ಭವಬಂಧನ ಬಿಡಿಸಿ ಶರ ವೃಂದಾಸನ ಗುರು 3
--------------
ಇಂದಿರೇಶರು
ಎಚ್ಚರಿಕೆ ಎಚ್ಚರಿಕೆ ಎಲೋ ದೇವ | ಎಚ್ಚರಿಕೆ ಎಚ್ಚರಿಕೆ | ಅಚ್ಚ ಕಲ್ಯಾಣ ಮೂರುತಿ ತಿರುವೆಂಗಳಾ ಪ ಅಜ ದ್ವಿಜಗಜ ಅಜಾಮಿಳ ಪರಿಪಾಲನೆಯಾ | ದ್ವಿಜ ರಾಜಾಂಗಾ ಗಂಗಜ ಭಕ್ತವರದನೆಯಾ | ಗಜ ಕುಜ ದನುಜ ಭೂ ಭುಜರ ಸಂಹಾರನೆಯಾ | ಪಂಕಜ ಹೃದಯಾರ್ಕನೆಯಾ1 ಪರಮೇಷ್ಠಿ ವಂದನೆಯಾ | ಶರಧಿ ತಾರಾ ಕರುಗಳ ಕಾಯಿದನೇಯಾ | ಎರಡೇಳು ಲೋಕ ಪೊರೆವಾ ಭಾರಣ ಹರಿಯಾ | ಶರಣು ಹೊಕ್ಕೆನು ಎನ್ನ ಮೊರೆ ವಿಚಾರಿಸೊಯಾ 2 ಜಯ ಜಯಾ ಚಿತ್ತಾವಾಧಾರು ಪರಾಕ್ರಮಯಾ | ಭಯ ನಿವಾರಣ ನಿಜ ಭಂಟರಿಗೆ ಬಂಟಯಾ | ನಯ ಮೂರುತಿ ನಮ್ಮ ವಿಜಯವಿಠ್ಠಲರೇಯಾ ಯಾ | ತ್ರಿಯಗುಣ ವಿರಹಿತ ಶೇಷಗಿರಿವಾಸಯಾ 3
--------------
ವಿಜಯದಾಸ
ಎಂತು ಜೀವಿಪೆನಯ್ಯಾ ನಿನ್ನನಗಲಿ ನಾನು ಶಾಂತ ಮೂರುತಿ ಕೃಷ್ಣ ಕೃಷ್ಣಯ್ಯಾ ಪ ದಂತಿವರದ ಭಕ್ತ ಚಿಂತಾಮಣಿಯೆ ಲಕ್ಷ್ಮೀ ಕಾಂತ ಸಕಲ ಜಗದಂತರಾತ್ಮಕ ದೇವ ಅ.ಪ. ಅಂಗಜಪಿತ ನಿನ್ನ ಅನುಪಮ ರೂಪವ ನಿತ್ಯ ನೋಡಿ ನಲಿಯುತ ತುಂಗಮಹಿಮ ನಿನ್ನ ಘನ ಕೃಪೆಯಿಂದ ಅಂತ- ರಂಗದ ಭಕ್ತ ನಾನೆಂದೆನಿಸಿರಲಾಗಿ ಮಂಗಳಾಂಗ ಮನೋಹರ ನಿನ್ನ ಸಂಗ ಬಿಟ್ಟಿರಲಾರೆನೋ ಸ್ವಾಮಿ ರಂಗ ಎನ್ನಂತರಂಗವರಿಯಯಾ ಇಂಗಿತಜ್ಞ ನೀನಲ್ಲವೇ ಕೃಷ್ಣ 1 ಇಂದಿರೇಶನೆ ನಿನ್ನ ಚರಿತೆಯ ಕೇಳಿ ಆ- ನಂದದ ಸವಿ ಕಂಡೆ ಪುಣ್ಯಾತ್ಮರಿಗೆ ಬೇರೆ ಒಂದರಲಭಿರುಚಿ ತೋರ್ಪುದೆ ಗುಣಗಣ ಸಿಂಧು ನಿನ್ನನು ಬಿಟ್ಟೇನೊಂದ ನಾನೊಲ್ಲೆನು ಸಿಂಧು ಮಂದಿರ ಸುಂದರ ನಿನ್ನ ಪೊಂದಿಕೊಂಡಿಹನಲ್ಲವೇ ಕೃಷ್ಣ ತಂದೆ ಕೈ ಬಿಡಬೇಡವೊ ಎಳ- ಗಂದಿಯೆಂಬುದ ನೆನೆದು ಪಾಲಿಸೊ 2 ದೋಷ ರಹಿತ ಯಾದವೇಶ ಭಕ್ತರ ಪೋಷ ಶ್ರೀಶ ಕರಿಗಿರೀಶ ಸಕಲ ಲೋಕೇಶ ಪಾದ ಭೂಸುರ ಪ್ರಿಯ ಎನ್ನ ದೋಷಗಳೆಣಿಸದೆ ನೀ ಸಲಹಲಿ ಬೇಕೊ ವಾಸುದೇವ ಪರಾತ್ಪರ ಕೃಷ್ಣ ಕ್ಲೇಶ ಪರಿಹರನಲ್ಲವೆ ಸ್ವಾಮಿ ದಾಸ ಜನರಭೀಷ್ಟದಾಯಕ ನಾ ಶರಣು ಹೊಕ್ಕಿಹೆನು ರಕ್ಷಿಸು 3
--------------
ವರಾವಾಣಿರಾಮರಾಯದಾಸರು
ಎಂತು ಬಿನ್ನೈಸಲೊ ಮುರಾರಿ ಸಾರಿಗೆ ಸಾರಿ | ಸಂತ ಜನರ ಆಧಾರಿ ಪ ಶ್ಲೋಕ - ಘನ ಅನವರತÀ ಕಾಯಾ | ಸ್ವಾಮಿ ಲಕ್ಷ್ಮೀ ಸಹಾಯ | ಅನಿಮಿಷ ಮುನಿಗೇಯಾ ಹೇಯ ಧರ್ಮ ವಿಹಾಯ | ನಗರ ನಿಲಯಾ | ಅಮಿತÀ ಆನಂದ ಕಾಯಾ | ನಾಗ ತಲ್ಪೋರು ಗಾಯಾ 1 ಪದ - ಶರಣು ಶರಣು ಶಾರಣ್ಯನೆ | ಗುಣ ಗುಣ್ಯನೆ | ನಮಗಾನನ್ಯನೆ | ನಿರುತರಂತರ ಕಾರುಣ್ಯನೆ ಪ್ರದದಾನ್ಯನೆ | ಅಪ್ರತಿ ಧನ್ಯನೆ | ಪರಮ ಪುರುಷ ಅಸಮಾನ್ಯನೆ | ಮಹ ಪುಣ್ಯನೆ | ಪ್ರಳಯ ಕನ್ಯೆನೆ | ಕರುಣ ಸಾಕ್ಷಿಗನೆ ಲಾವಣ್ಯನೆ | ಅನುಗಣ್ಯನೆ ಪ್ರಾಕೃತ ಶೂನ್ಯನೆ 1 ಶ್ಲೋಕ - ಪರಿಪರಿ ಹೇಯ ಗಾತ್ರಾ ತೆತ್ತನೊ ಇಷ್ಟ ಮಾತ್ರಾ | ಚರಿಸಿದೆ ವಿಷಯ ಯಾತ್ರಾ | ಪಾರಗಾಣೆನೋ ಮಿತ್ರಾ | ಕೊರಳಿಗೆ ಮಮತೆ ಸೂತ್ರಾ | ಉರುಲು ಬಿದ್ದಿದೆ ಚಿತ್ರಾ | ಸುರಕು ಬಡಿಪ ತನುತ್ತಾ | ಕಮಲ ನಿನೇತ್ರಾ | 2 ಪದ - ನರಕ ನರಕ ಉಂಡು ಬೆಂದೆನೊ | ಇಲ್ಲಿ ನಿಂದೆನೊ | ಗತಿಗೆ ಮುಂದೇನೊ | ಕುರುಡ ಕಿವುಡನಾಗಿ ನೊಂದೆನೊ | ಇನ್ನೊಂದೇನೊ | ಉಪಾಯವಂದೆನೊ | ಮರಹು ಸಾಗರದೊಳು ಸಂದೆನೊ | ಅಂದು ಹಿಂದೆನೊ | ಸುಜನರಿಗಂದೇನೊ 2 ಶ್ಲೋಕ - ಸುಲಲಿತ ರುಚಿರಪಾಂಗಾ | ಶುದ್ದ ಸ್ವಭಾವÀ ರಂಗಾ | ಪಲಿಪರಮಾಣು ಸಂಗಾ | ಪಾವನ ಕೋಮಲಾಂಗಾ | ವೊಲಿಸಿದವರ ಭಂಗಾ | ಪರಿಸುವ ಶಿಂಗ ಶಿಂಗಾ | ವರಬಲಗುಣ ತರಂಗಾ | ಸರಸಿಜ ಹೃತ್ಪುಂಗಾ3 ಪದ - ಚಿಂತಿಸುವೆನೊ ನಿನ್ನ ವಿಗ್ರಹಾ | ಮನೋನಿಗ್ರಹಾ | ವಾಗಲಿ ಅನುಗ್ರಹಾ | ಸಂತತ ಎನಗಿದೆ ಸಂಗ್ರಹಾ | ದೇಹವೈಗ್ರಹಾ | ದುರುಳರ ಪ್ರತಿ ಗ್ರಹಾ | ಮುಂತೆ ಕೈಕೊಂಬ ದುರಾಗ್ರಹಾ | ಯೈವ ವಿಗ್ರಹಾ | ಮಾಣಿಸು ಶಿರಿಗ್ರಹಾ | ಸಂತೈಸು ಕರುಣವಾರುಣಗ ಅನಿಗ್ರಹಾ 3 ನವನೀತ ಗೋಪಿ ವಸ್ತ್ರಾಪಹಾರಾ | ಕಾಲ ಧಾರಾ | ಕಂಸದಾನವ ಸಂಹಾರಾ | ಧ್ರುವ ಬಲಿಕರಿ ಉದ್ಧಾರಾ | ನಾನವತಾರ ಧೀರಾ | ಪವನ ಮನಮಂದಿರಾ ಪಾಲಿಸೊ ವಾರಂ ವಾರ4 ಪದ - ವಿಜಯನಗರಾಧೀಶ ಸರ್ವೇಶಾ | ಮಣಿಮಯ ಭೂಷಾ | ಸೂರ್ಯ ಕೋಟಿ ಪ್ರಕಾಶಾ | ತ್ರಿಜಗದೊಳಗೆ ನೀನೆ ನಿರ್ದೋಷಾ | ಶಕ್ತಿ ವಿಶೇಷಾ | ಐಶ್ವರ್ಯ ವಿಲಾಸಾ | ಋಜುಜ್ಞಾನ ಕೊಡುವದೊ ಮನೋತ್ತರಿಸಾ | ಮಂಜುಳ ಭಾಷಾ | ಭೂದಾ ರಜವಾಸಾ | ನಿರ್ಜರ ಕೋಶಾ | ಹೃದಯ ಕಾಶಾ | ನಾಮಕ ಮಹಿದಾಸಾ 4
--------------
ವಿಜಯದಾಸ
ಎಂದು ಕಾಹು(ಣು?)ವೆ ಎನ್ನ ಮನೋಹರ ಎಂದಿ[ಗೆಕಾ] ಹುದಿನ್ನೆಂದಿಗೆ ಬಂದೆ ಭವಭವಭವವೀ ದುಃಖದಿ ನೊಂದೆನೊ ರಂಗನಂಘ್ರಿ ಚರಣವ ಪ. ಮಂಗಳಾಂಗನ ಮಾಧವನ ಕೋಟಿ ಅಂಗಜಜನಕವಿಲಾಸನ ಗಂಗಾಜನಕನ ಗರುಡವಾಹನ ತುಂಗವಿಕ್ರಮನಂಘ್ರಿ ಚರಣವ 1 ಕಂತುಜನಕನ ಕಮಲನಾಭನ ಸಂತತದ ಸರ್ವೇಶನ ಯಂತ್ರವಾಹಕ ಎನ್ನ ಒಡೆಯನ ಚಿಂತಾಯ[ಕ]ನ ಶ್ರೀ ಚೆಲುವಚರಣವÀ 2 ಪರಮಪುರುಷನ ಪುಣ್ಯನಾಮನ ಶರಣುಜನಸರ್ವೇಶನ ಕರುಣಿ ಹೆಳವನಕಟ್ಟೆರಂಗನ ಚರಣ[ವ]---------- 3
--------------
ಹೆಳವನಕಟ್ಟೆ ಗಿರಿಯಮ್ಮ
ಎನ್ನ ಕಂಗಳಿಗೆ ತೋರೊ ಶ್ರೀಕೃಷ್ಣಪ. ಕರಿಯ ಮೊರೆ ಲಾಲಿಸಿದಿ ಬೇಗನೆನೆರೆದ ಸಭೆಯಲಿ ದ್ರೌಪದಿಗೆ ಅಭಯವನಿತ್ತಿ ಅಡವಿಅರಣ್ಯದಿ ಅಹಲ್ಯೆಯ ಸಲಹಿದಿಮುಚುಕುಂದನ ರಕ್ಷಿಸಿದಿ 1 ಸೂರ್ಯನುದಿಸುತ ಅಂತ್ಯಕಾಲದಿಶರತಲ್ಪದಲಿ ಅವಗೆ ತೋರಿದಿಶರಣು ಕಾಳೀಪಣೆಯ ಮೇಲಿಟ್ಟ ಮುದ್ದುಚರಣವ ತೋರೊ ರಂಗನಾಥ 2 ಪುಟ್ಟ ಪ್ರಹ್ಲಾದನ ಸಲಹಿದಿಪಟ್ಟವನು ವಿಭೀಷಣನಿಗೆ ಸ[ಲಿಸಿ]ದಿನೆಟ್ಟನಡವಿಲಿ ಬಂದ ಧ್ರುವನಆದರಿಸಿ ಕಾಯ್ದಿ ರಂಗನಾಥ 3 ಘನವಾಗಿ ಕ್ಷೀರಾಬ್ಧಿಯಲಿ ನಿಂತಿಉನ್ನಂತವಾಗಿದ್ದ ಸತ್ಯಲೋಕವನಾಳಿದಿ ಪ್ರಸನ್ನನಾಗಿಕ್ಷ್ವಾಕು ಕಾಯಗೆಒಲಿದ ಪಾದವ ತೋರೊ ರಂಗನಾಥ 4 ಎಷ್ಟು ಹೇಳಲಿ ನಿಮ್ಮ ಮಹಿಮೆಯಸೃಷ್ಟಿಸ್ಥಿತಿಲಯವನ್ನು ಅಳೆದೀ ಪುಟ್ಟ ಪಾದವ ಎನ್ನ ಮನದಲಿಇಟ್ಟು ದಯಮಾಡೊ ಶ್ರೀಕೃಷ್ಣ ರಂಗನಾಥ 5 ದÀಕ್ಷಿಣಮುಖವಾಗಿ ಪವಡಿಸಿದಿ ದೇವಶಿಖಾಮಣಿ ಏಳೈ ಬಂದ ಭಕ್ತರಿ-ಗೆಲ್ಲ ಅಭಯ ಹಸ್ತವ ಕೊಡುವಿರಾಜೀವನೇತ್ರ ಹಯವದನ[ರಂಗನಾಥ] 6
--------------
ವಾದಿರಾಜ
ಎಲರುಣಿಯ ಶಯ್ಯ ಪವನಾ |ಕಾವೇರಿ ಕೂಲಗ ಚೆನ್ನಾ | ಬಾಬಾರನ್ನಾ ಪ ಕಾಳಿರಮಣನುತ | ಕಾಳಿಂದಿಯ ಮನಕೀಲಾಲಜ ರವಿ | ಬಾಲ ಗೋಪಾಲಾ ಅ.ಪ. ಜಾಣಾ | ನೀರದವರ್ಣಾ | ಜಟೆ ಹೇಮವರ್ಣಾ | ಭಕ್ತ ಪಾವನ್ನಾ |ಮೌನಿ ಕುಲಕೆ ಸನ್ಮಾನ್ಯ ಪರಾಶರಮುನಿ ಸಂಭವ ತವ ಚರಣಕೆ ಶರಣು 1 ಅಹಿ | ಪೇಂದ್ರ ವಂದ್ಯ ಮನಮಂದಿರ ಚಂದಿರ ನಂದವನೀಯೋ 2 ಹೃದ್ಯಾ | ಅಚ್ಛೇದ್ಯ ಭೇದ್ಯಾ | ಹೇ ಅನವದ್ಯಾ | ಇಂದಿರಾರಾಧ್ಯ ಭಾಧ್ಯ ಭಾದಕ ಸನ್ಮೋದ ಪ್ರಮೋದನೆವೇದ ವೇದ್ಯ ಗುರು | ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ಎಷ್ಟು ಪೊಗಳಲಿ ನಾನು ಎನ್ನೊಡೆಯ ನಿಮ್ಮ ವಿ- ಶಿಷ್ಟ ಮಹಿಮೆಗಳನು ಸುಜನರಿಗೆ ಬಂದ ಕಷ್ಟವಳಿಯಲ್ಕೆ ನೀ ಸುರಕಾಮಧೇನು ಪ ವಿಷ್ಣುವೆ ಪರಮದೈವವೆಂದು ದುಷ್ಟ ರಾಕ್ಷಸರ ಕೊಂದೆ ಸೃಷ್ಟಿಸಿ ಪಾಲಿಪ ಶ್ರೀರಾಮರ ಇಷ್ಟ ಭಕ್ತರೊಳು ಶ್ರೇಷ್ಠನೆಂದೆನಿಸಿದೆ ಅ ತಾಯಿಯಪ್ಪಣೆಗೊಂಡು ಸೇವೆಗೆ ರಘುಪತಿ ರಾಯನಲ್ಲಿ ನಿಂದು ತನ್ನಾತ್ಮ ಸುಖ ಬಯಸೆನೆಂದು ಶ್ರೀ ಹರಿಗೆ ನುಡಿದುಕಾಯಬೇಕು ಸುಗ್ರೀವನನೆನುತಲಿ ತೋಯಜಾಕ್ಷಗೆ ಪೇಳಿ ವಾಲಿಯನು ಪಾಯದಿಂದಲಿ ಕೊಲ್ಲಿಸಿ ರವಿಜಗೆ ಸ- ಹಾಯ ಮಾಡಿದೆ ವಾಯುತನಯ1 ಶೌರಿ ಒಡೆಯಗೆ ವಾರ್ತೆಯ ಪೇಳಿ ಶೀಘ್ರದಿ ನಡೆಸಿ ಸೈನ್ಯವ ದಶಮುಖನ ಶಿರವ ನೊಡಿಸಿದಾಕ್ಷಣ ಲೋಕಮಾತೆಯ ನೊಡಗೂಡಿಸಿದೆ ಶ್ರೀವಾಸುದೇವರಿಗೆ 2 ಸಾರ ತತ್ತ್ವವ ಪೇಳ್ದೆ ಶರಣು ಹೊಕ್ಕ ಮನುಜರ ಘೋರ ದುರಿತವ ಸೀಳ್ದೆ ಧೀರ ತನು ಧುರದುಂಡಿ ಹನುಮಯ್ಯರಿಂ ಸೇವಿಸಿದ ನಿಮ್ಮಂಘ್ರಿ ಕಮಲವದೂರ ಮಾಡದೆ ಎನ್ನ ಸಲಹಯ್ಯ ಕರುಣಾವಾರಿಧಿ ಕಾಗಿನೆಲೆಯಾದಿಕೇಶವ ಮುತ್ತತ್ತಿ ದೊರೆಯೆ3
--------------
ಕನಕದಾಸ
ಎಷ್ಟು ಸಾಹಸವಂತ ನೀನೆ ಬಲವಂತದಿಟ್ಟಮೂರುತಿ ಭಳಭಳಿರೆ ಹನುಮಂತ ಪ. ಅಟ್ಟುವ ಖಳರೆದೆ ಮೆಟ್ಟಿ ತುಳಿದು ತಲೆಗಳಕುಟ್ಟಿ ಚೆಂಡಾಡಿದ ದಿಟ್ಟ ನೀನಹುದೊ ಅ.ಪ. ರಾಮರಪ್ಪಣೆಯಿಂದ ಶರಧಿಯ ದಾಟಿಆ ಮಹಾ ಲಂಕೆಯ ಕಂಡೆ ಕಿರೀಟಸ್ವಾಮಿಕಾರ್ಯವನು ಪ್ರೇಮದಿ ನಡೆಸಿದಿಈ ಮಹಿಯೊಳು ನಿನಗಾರೈ ಸಾಟಿ1 ದೂರದಿಂದಸುರನ ಪುರವ[ನ್ನು] ನೋಡಿಭರದಿ ಶ್ರೀರಾಮರ ಸ್ಮರಣೆಯನು ಮಾಡಿಹಾರಿದೆ ಹರುಷದಿ ಸಂಹರಿಸಿ ಲಂಕಿಣಿಯನುವಾರಿಜಮುಖಿಯನು ಕಂಡು ಮಾತಾಡಿ 2 ರಾಮರ ಕ್ಷೇಮವ ರಮಣಿಗೆ ಪೇಳಿತಾಮಸ ಮಾಡದೆ ಮುದ್ರೆನೊಪ್ಪಿಸಿಪ್ರೇಮದಿಂ ಜಾನಕಿ ಕುರುಹನು ಕೊಡಲಾಗಆ ಮಹಾ ವನದೊಳು ಫಲವನು ಬೇಡಿ 3 ಕಣ್ಣ್ಣಿಗೆ ಪ್ರಿಯವಾದ ಹಣ್ಣ[ನು] ಕೊಯ್ದುಹಣ್ಣಿನ ನೆವದಲಿ ಅಸುರರ ಹೊಯ್ದುಪಣ್ಣಪಣ್ಣನೆ ಹಾರಿ ನೆಗೆನೆಗೆದಾಡುತಬಣ್ಣಿಸಿ ಅಸುರರ ಬಲವನು ಮುರಿದು4 ಶೃಂಗಾರವನದೊಳಗಿದ್ದ ರಾಕ್ಷಸರಅಂಗವನಳಿಸಿದೆ ಅತಿರಣಶೂರನುಂಗಿ ಅಸ್ತ್ರಗಳ ಅಕ್ಷಯಕುವರನಭಂಗಿಸಿ ಬಿಸುಟಿಯೊ ಬಂದ ರಕ್ಕಸರ 5 ದೂರ ಪೇಳಿದರೆಲ್ಲ ರಾವಣನೊಡನೆಚೀರುತ್ತ ಕರೆಸಿದ ಇಂದ್ರಜಿತುವನೆಚೋರಕಪಿಯನು ನೀ ಹಿಡಿತಹುದೆನ್ನುತಶೂರರ ಕಳುಹಿದ ನಿಜಸುತನೊಡನೆ 6 ಪಿಡಿದನು ಇಂದ್ರಜಿತು ಕಡುಕೋಪದಿಂದಹೆಡೆಮುರಿ ಕಟ್ಟಿದ ಬ್ರಹ್ಮಾಸ್ತ್ರದಿಂದಗುಡುಗುಡುಗುಟ್ಟುತ ಕಿಡಿಕಿಡಿಯಾಗುತನಡೆದನು ಲಂಕೆಯ ಒಡೆಯನಿದ್ದೆಡೆಗೆ 7 ಕಂಡನು ರಾವಣನುದ್ದಂಡ ಕಪಿಯನುಮಂಡೆಯ ತೂಗುತ್ತ ಮಾತಾಡಿಸಿದನುಭಂಡುಮಾಡದೆ ಬಿಡೆನೋಡು ಕಪಿಯೆನೆಗಂಡುಗಲಿಯು ದುರಿದುರಿಸಿ ನೋಡಿದನು 8 ಬಂಟ ಬಂದಿಹೆನೊಹಲವು ಮಾತ್ಯಾಕೊ ಹನುಮನು ನಾನೆ 9 ಖುಲ್ಲ ರಕ್ಕಸನೆತೊಡೆವೆನೊ ನಿನ್ನ ಪಣೆಯ ಅಕ್ಷರವ 10 ನಿನ್ನಂಥ ದೂತರು ರಾಮನ ಬಳಿಯೊಳುಇನ್ನೆಷ್ಟು ಮಂದಿ ಉಂಟು ಹೇಳೊ ನೀ ತ್ವರಿಯಾನನ್ನಂಥ ದೂತರು ನಿನ್ನಂಥ ಪ್ರೇತರುಇನ್ನೂರು ಮುನ್ನೂರು ಕೋಟಿ ಕೇಳರಿಯಾ11 ಕಡುಕೋಪದಿಂದಲಿ ಖೂಳರಾವಣನು ಸುಡಿರೆಂದ ಬಾಲವ ಸುತ್ತಿ ವಸನವನುಒಡೆಯನ ಮಾತಿಗೆ ತಡೆಬಡೆಯಿಲ್ಲದೆಒಡನೆಮುತ್ತಿದರು ಗಡಿಮನೆಯವರು 12 ತÀಂದರು ವಸನವ ತಂಡತÀಂಡದಲಿಒಂದೊಂದು ಮೂಟೆ ಎಂಬತ್ತು ಕೋಟಿಯಲಿಚಂದದಿ ಹರಳಿನ ತೈಲದೊಳದ್ದಿಸೆನಿಂದ ಹನುಮನು ಬಾಲವ ಬೆಳೆಸುತ 13 ಶಾಲು ಸಕಲಾತ್ಯಾಯಿತು ಸಾಲದೆಯಿರಲುಬಾಲೆರ ವಸ್ತ್ರವ ಸೆಳೆದುತಾರೆನಲುಬಾಲವ ನಿಲ್ಲಿಸೆ ಬೆಂಕಿಯನಿಡುತಲಿಕಾಲಮೃತ್ಯುವ ಕೆಣಕಿದರಲ್ಲಿ14 ಕುಣಿಕುಣಿದಾಡುತ ಕೂಗಿ ಬೊಬ್ಬಿಡುತಇಣಿಕಿನೋಡುತ ಅಸುರರನಣಕಿಸುತಝಣಝಣಝಣರೆನೆ ಬಾಲದಗಂಟೆಯುಮನದಿ ಶ್ರೀರಾಮರ ಪಾದವ ನೆನೆಯುತ 15 ಮಂಗಳಂ ಶ್ರೀರಾಮಚಂದ್ರ ಮೂರುತಿಗೆಮಂಗಳಂ ಸೀತಾದೇವಿ ಚರಣಂಗಳಿಗೆಮಂಗಳವೆನುತ ಲಂಕೆಯ ಸುಟ್ಟುಲಂಘಿಸಿ ಅಸುರನ ಗಡ್ಡಕೆ ಹಿಡಿದ 16 ಹತ್ತಿತು ಅಸುರನ ಗಡ್ಡಮೀಸೆಗಳುಸುತ್ತಿತು ಹೊಗೆ ಬ್ರಹ್ಮಾಂಡಕೋಟಿಯೊಳುಚಿತ್ತದಿ ರಾಮರು ಕೋಪಿಸುವರು ಎಂದುಚಿತ್ರದಿ ನಡೆದನು ಅರಸನಿದ್ದೆಡೆಗೆ 17 ಸೀತೆಯಕ್ಷೇಮವ ರಾಮರಿಗ್ಹೇಳಿಪ್ರೀತಿಯಿಂ ಕೊಟ್ಟಕುರುಹ ಕರದಲ್ಲಿಸೇತುವೆ ಕಟ್ಟಿ ಚತುರಂಗ ಬಲಸಹಮುತ್ತಿತು ಲಂಕೆಯ ಸೂರೆಗೈಯುತಲಿ 18 ವೆಗ್ಗಳವಾಯಿತು ರಾಮರ ದಂಡುಮುತ್ತಿತು ಲಂಕೆಯ ಕೋಟೆಯ ಕಂಡುಹೆಗ್ಗದ ಕಾಯ್ವರ ನುಗ್ಗುಮಾಡುತಿರೆಝಗ್ಗನೆ ಪೇಳ್ದರು ರಾವಣಗಂದು 19 ರಾವಣಮೊದಲಾದ ರಾಕ್ಷಸರ ಕೊಂದುಭಾವಶುದ್ಧದಲಿ ವಿಭೀಷಣ ಬಾಳೆಂದುದೇವಿ ಸೀತೆಯನೊಡಗೊಂಡಯೋಧ್ಯದಿದೇವ ಶ್ರೀರಾಮರು ರಾಜ್ಯವಾಳಿದರು 20 ಶಂಖದೈತ್ಯನ ಕೊಂದೆ ಶರಣು ಶರಣಯ್ಯಶಂಖಗಿರಿಯಲಿ ನಿಂದೆ ಹನಮಂತರಾಯಪಂಕಜಾಕ್ಷ ಹಯವದನನ ಕಟಾಕ್ಷದಿಬಿಂಕದಿ ಪಡೆದೆಯೊ ಅಜನಪದವಿಯ21
--------------
ವಾದಿರಾಜ
ಒಂದಾನೊಂದು ದಿವಸದಲ್ಲಿ ಗುರುವ್ಯಾಸರಾಯರು | ಪ ಅಂದದಿಂದ ಪುರಂದರದಾಸರಿ | ಗಿಂದು ಭೋಜನಕ್ಕೆ ಬನ್ನಿರೆಂದು ಕರೆದರೂ ಅ.ಪ ಪೇಳಿತೆಂದು ದಾಸರು ಪೋಗಿ ತಾವು ನಿರ್ಮಲ ಸ್ನಾನ ಜಪಮಂತ್ರ ಹರಿಪೂಜೆಯನೆ ಮಾಡಿ || ಧಳಥಳಿಸುವ ವಿಠಲನ ದಿವ್ಯ ಪಾದ ಗಳ ಧ್ಯಾನಿಸಿ ಕುಳಿತರು ಜನಗಳೆಲ್ಲ ಕೇಳಿ 1 ವಿಠಲನ ದಿವ್ಯ ಮೂರ್ತಿಯ ಪಾಡಿ ದೃಷ್ಟಿಯಿಂದಲಿ ನೋಡಿ | ಮುಟ್ಟಿ ಮುಂದೊಲಿದು ಕುಣಿಕುಣಿದಾಡಿ || ಥಟ್ಟನೆ ವೇದಕ್ಕೆ ಸಮನಾದ ಪದಗಳು | ನಿಷ್ಠೆಯಿಂದ್ಹೇಳಿ ಅಭೀಷ್ಟವ ಪಡೆದರು2 ಎಡೆಯೊಳು ಷಡ್ರಸದನ್ನವ ನೀಡೆ | ಕಡು ಮಮತೆಗಳಿಂದ | ಬಿಡದೆ ದಾಸರ ದಾರಿಯ ನೋಡಿ || ಯೆಡ ಬಲದಷ್ಟ ದಿವ್ಯದಿಂಡೆಯರೆಲ್ಲಾ | ಕಡೆಯದೆಶೆ ಧರಿಸಿದರು ದಾಸರಾ 3 ಹಗಲು ಒಂಭತ್ತು ತಾಸಾಗಿರಲು | ಆಗೆದ್ದು ಬೇಗ ಗುರುಗಳ ಸಮೀಪಕ್ಕೆ ಬರಲು || ಮುಗಿದು ಕರಯುಗ್ಮವ ಬಗೆ ಬಗೆ ಸ್ತುತಿಸುತಾ | ಜಗದೊಳು ನಾನಪರಾಧಿಯೆಂದರೂ 4 ಭೋಜನವ ಮಾಡಿ ಗುರುಗಳಂದು ಸಿಂಹಾಸನದಲ್ಲಿ | ರಾಜಿಸುತ್ತ ಬಂದು ಕುಳಿತಿರಲಂದೂ || ಆ ಜನದೊಡಗೀ ದಾಸರು ಕರೆಯಲು | ನೈಜಭಾವದಿಂದು ಬಂದು ಕುಳಿತರೂ 5 ಪದಗಳು ಬರದ ವಹಿಯಕೊಂಡು ಪೋಗಿ | ಮಧ್ವಶಾಸ್ತ್ರದ ಮೇಲೆ ಕುಳ್ಳಿರಲಾಗ || ಅದನರಿಯದೆ ದಿಂಡೆಯನೊಬ್ಬನು ಆ | ಪದವಹಿಯ ತೆಗೆದು ಬಿಸುಟನಾಗಾ 6 ಯೆರಡಾವರ್ತಿ ತೆಗೆಯಲು ಆಗ | ತಿರುತಿರುಗಿ ಬಂದು ವರಪುಸ್ತಕದ ಮ್ಯಾಲೆ ಕುಳ್ಳಿರಲಂದೂ || ಗುರು ವ್ಯಾಸರಾಯರು ನೋಡಿ ಹರುಷದಿಂದ | ಕರೆದು ಬೈದರವಗೆ ಕಡು ಮೂರ್ಖನೆಂದೂ 7 ಪದದೊಹಿ ತೆಗೆದು ಬಿಸಾಡಿದರೆ ತಿರುತಿರು ಗ್ಯದರಮ್ಯಾಲೆ ವರನಾಲ್ಕು ವೇದಾರ್ಥದರೊಳಗುಂಟು || ನರರುತ್ತಮರೆಲ್ಲ ನೋಡಿ ಹರುಷದಿಂದ | ಪುರಂದರ ಉಪನಿಷತ್ತೆಂದರೂ 8 ಗುರುರಾಯರು ದಾಸರ ನೋಡಲಾಗ ಭರದಿಂದ ಯೆದ್ದು | ಅರಿವೆಯ ಕೈಯಿಂದೊರಸಲು ಆಗ || ತ್ವರಿತದಿ ಕೇಳಲು ವಿಠಲನ ಗುಡಿಯೊಳು | ಪಡದಗುರಿ ಹತ್ತವು ವರಿಸಿದೆವೆಂದರು 9 ಹಾಗೆಂದು ನುಡಿದಾಕ್ಷಣದಲಿ ಬೇಗ ಶಿಷ್ಯರಿಗೆ | ಹೋಗಿ ನೋಡಿ ಬಾರೆಂದೆನಲಾಗಿ || ಬೇಗದಿಂದಲಿ ಬಂದು ಕೇಳಲು ಅವರು | ಈಗ ದಾಸರು ಬಂದು ಪರಿಹರಿಸಿದರೆಂದು 10 ಆ ಮಾತು ಕೇಳಿದಾಕ್ಷಣದಿ ಬೇಗ | ಪ್ರೇಮದಿ ಬಂದು ಸ್ವಾಮಿರಾಯರಿಗೆ ಪೇಳಲು ಆಗ || ನಾಮವ ಸ್ಮರಿಸುತ ಪ್ರೇಮಾಲಿಂಗನವಿತ್ತು | ಕಾಮಿತಾರ್ಥ ಫಲವೀವ ಕಲ್ಪತರುವೆಂದರೂ 11 ಇಂತು ಅನುಭವ ಮಾತುಗಳನಾಡಿ ಲಕ್ಷ್ಮೀಕಾಂತನ | ಅಂತರಂಗದಲಿ ಅತಿಮಾನವ ಮಾಡಿ || ಮೂರ್ತಿ | ಶಾಂತತ್ವದಿ ನೋಡುತ ಶರಣು ಮಾಡಿದರೂ 12 ಗಜಪುರದಲ್ಲಿ ಇರುವರು ಕೂಡಿ ವಿಜಯವಿಠ್ಠಲನ್ನ | ಭಜನೆಯಿಂದ ದಿನ ದಿನ ಪೊಗಳಿ || ತ್ರಿಜಗದೊಡೆಯ ಗುರು ಪುರಂದರವಿಠಲನ | ನಿಜ ವೈಕುಂಠದ ಮುಕ್ತಿಯೈದಿದರೂ 13
--------------
ವಿಜಯದಾಸ
ಒಂದೇ ಮತ ಹರಿಯ ಮತ ಒಂದೇ ಭಾವ ಸಿರಿಯರಸನ ಭಾವ ಸಲಹಿದ ನರಹರಿ ಒಂದೇ ಮನದಂಬರೀಷನ ಕಾಯ್ದ ಹರಿ ಒಂದೇ ಮನದಿ ಧ್ರುವನ ಕಾಯ್ದ ಹರಿ ಒಂದೇ ಗಳಿಗೆಯಲಿ ತನ್ನುಂಗುಟದಿ ಸೋಕಿಸೆ ಕಲ್ಲಾಗಿದ್ದಹಲ್ಲೆಯ ಪೆಣ್ ಮಾಡಿದ ತಂದೆಯಂದದಿ ಭಕ್ತರ ಹಿಂದೆ ಕಾದಿದ್ದು ಕರುಣಾಸಿಂಧು ಭಕ್ತರ ಬಂಧು ಸುಂದರಿ ಸಿಂಧುಸುತೆಯರಸನ ನಿತ್ಯ ನೆನಯಿರಿ ಹರಿ ಭಕ್ತರು 1 ಸಾರ ನಾಲ್ಕು ಯುಗದಾಧಾರ ನಾಲ್ಕು ಮುಖದಲಿ ನೆಲಸಿ ಸೃಷ್ಟಿಕಾರ್ಯವ ನಡೆಸಿ ನಾಲ್ಕು ಮುಖ ಬೊಮ್ಮನಲಿ ನಾನಿಲ್ಲವೆನಿಸಿ ನಾಲ್ಕು ಯುಗದಲಿ ಜನಿಸಿದ ರಕ್ಕಸರಿಗೆ ತಿಳಿಸಿ ನಾಲ್ಕು ಲೋಕದಿ ಮೆರೆದ ನಾಕಚಾರ ವಂದ್ಯ ನಾಲ್ಕು ಹಸ್ತದಿ ನಾಲ್ಕು ವೇದತಂದಾ ಮೂರ್ತಿ ನಾಲ್ಕು ವೇದದ ಸಾರದಮೃತ ಭಕ್ತರಿಗಿತ್ತು ಹದಿನಾಲ್ಕು ಲೋಕಕೆ ನಾನೇ ಕರ್ತನೆಂದರಿಸಿ ನಾಲ್ಕು ವಿಧದಲಿ ಕಾವ ಶ್ರೀ ಶ್ರೀನಿವಾಸನ ಭಕ್ತರಾದರೆ ಈ ಕಲಿಯುಗದಿ ನಾಲ್ಕು ಜನರು ಮೆಚ್ಚುವರು ನಿಮ್ಮ ಹರಿ ಭಕ್ತರೆ ಕೇಳಿ2 ನಿನ್ನ ಸಹವಾಸ ಸೈ ನಿನ್ನ ಒಡನಾಟ ಸೈ ನಿನ್ನ ರೂಪ ಚತುರ ಬುದ್ಧಿ ಎನ್ನ ಸೈ ಎನ್ನಲಾಪರೆ ನಿನ್ನ ಕೈ ಚಳಕವಿಲ್ಲದಲೆ ಜೈಸುವದೆಂತೀ ಕಲಿಕಾಲದಿ ಸ್ವಾಮಿ ಜೈಲುವಾಸದಿ ಕೂತು ನಿನ್ನ ಕಲ್ಯಾಣವ ಕಟ್ಟಿದರೊ ನಿನ್ನ ಭಕ್ತರು ಜೈ ಕರುಣಾಕರ ನಿನ್ನ ಭಕ್ತರ ಮಹಿಮೆ ನಾ ಪೊಗಳುವದೆಂತೊ ಜೈ ಎನಿಸಿಕೊಳ್ಳಲು ನಿನ್ನೊಲುಮೆ ಕಾರಣವಲ್ಲವೆ ಜೈವೆಂಕಟ ಶ್ರೀಶಾ ಶ್ರೀ ಶ್ರೀನಿವಾಸ ನಿನ್ನ ಭಕ್ತರಿಗೆ ಜಯ ಅಪಜಯವೆಲ್ಲಿ ನಿನ್ನ ಭಕ್ತರಿಗೆ ಎಂದೆಂದಿಗೂ ಜೈ ಹರಿಭಕ್ತರ ನೆನೆಯಿರಿ ಹರಿಭಕ್ತರು 3 ಯನ್ನ ಯತ್ನವೇನಿಲ್ಲಿದರೋಳು ಪನ್ನಗಾದ್ರಿ ನಿವಾಸನಲ್ಲದೇ ಯನ್ನ ಯತ್ನ ಸಲ್ಲುವುದೇ ಎನ್ನ ಮನಸಿಲಿ ಬಂದು ನಿಂದು ತಾನೇ ನುಡಿಸಿದನಿಂದು ಚೆನ್ನಗಿರಿಯರಸ ಭಕ್ತ ಜನ ಬಂಧು ಬಂದು ನಿಂದು ಎನ್ನ ಮನದಭಿಲಾಷೆ ಸಲಿಸೆ ದೀನ ವತ್ಸಲನು ಎನ್ನ ಕರದಲಿ ಬರೆಸಿ ನಲಿದಾಡಿದ ತನ್ನ ವಾಣಿಯನಿತ್ತು ಎನ್ನ ಕುಲದೈವ ಶ್ರೀ ಶ್ರೀನಿವಾಸನ ಕೃಪೆ ಎನ್ನ ಮೇಲೆಂತುಟೊ ಕಾಣೆ ಇನ್ನು ಈ ವಾಣಿ ಹರಿಯದೆಂದು ನುಡಿವುದು ಹರಿಭಗವದ್ಭಕ್ತರು 4 ಪಾಮರರಿಗೆ ಕಲ್ಪತರು ಪಾಮರರಿಗೆ ಜಗದ್ಗುರು ವರವ ತೋರಿ ಪಾಮರರ ಪುನೀತರನು ಮಾಡೆ ಹರಿ ಪಾಮರೆಂದು ಲೆಕ್ಕಿಸದೇ ತಾವಲಿದು ನುಡಿಸಿದ ಪತಿತ ಪಾವನ್ನ ಶ್ರೀ ಶ್ರೀನಿವಾಸನದೇ ಈ ಉಕ್ತಿಯಲ್ಲರ ನೃತ್ರವಿಲ್ಲೆಂದು ತಿಳಿದು ಪಾಮರರನ್ನುದ್ಧರಿಸಲು ಹರಿಭಕ್ತರು ಪಠಿಸುವುದು ಈ ನುಡಿಯ 5 ಜತೆ ಶರಣು ಭಕ್ತರ ಪಾಲ ಶರಣು ಶ್ರೀಲೋಲಾ ಶರಣು ನಿನಗೆ ಸದಾ ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ಕರವ ಪಿಡಿ ಗುರುರಾಯ | ಶಿರಬಾಗಿ ಬೇಡುವೆ ಪೊರೆಯೊ ಸತ್ಕವಿಗೇಯ | ನೆರೆನಂಬಿದೆನು ನೀ ಮರೆಯದಿರು ಶುಭಕಾಯ | ಹೇ ಸೂರಿವರ್ಯ ಪ ಉರಗಕೇತನ ಮೊರೆಯ ಲಾಲಿಸಿ ತರಣಿಜನಿಗೆರಡೊಂದು ಯುಗದಲಿ ಧುರದಿ ಸಾರಥಿಯಾಗಿ ಸ್ಯಂದನ ಭರದಿ ನಡೆಸಿದ ಪರಮ ಪುರುಷನೆ ಅ.ಪ ಶರಣು ಜನ ಸುರಧೇನು | ಹೇ ತಾತ ನೀ ಮೂರೆರಡು ಜನುಮಗಳನ್ನು | ಕಳೆದು ಮ ತ್ತುರುವ ಅವತಾರವನು ಭಕ್ತಿಪೂರ್ವಕ ಪಿರಿಯರಾಜ್ಞದಿ ನೀನು ಪೂರೈಸಲಿನ್ನು ಧರಣಿಯೊಳಗವತರಿಸಿ ನರರಿಗೆ ಅರಿಯದಂದದಿ ಹರಿಯ ದಿಸೆಯೋಳ್ ಹರಿಯ ಸ್ಮರಿಸುತ ಚರಿಪ ಧೊರೆ ತವ ಚರಣ ದರುಶನಗರೆದು ಕರುಣದಿ 1 ಕ್ಲೇಶ ತಡಮಾಡದಲೆ ನೀ ಭವ ಪಾಶ | ದೃಢಮನವ ಕೊಡು ನಿ ನ್ನಡಿಗಳಲಿ ನಿರ್ದೋಷ | ನುಡಿಯಲಾಲಿಸಿ ಬಿಡದೆ ಮಾಡುಪದೇಶ ಪೊಡವೀಶದಾಸ ಒಡೆಯನೇ ನೀನಡಗಿ ಎನ್ನನು ಕಡೆಗೆ ನೋಡಲು ಪಡೆದ ಜನನಿಯು ಪಿಡಿದು ಬಾಲನ ಮಡುವಿನೋಳ್ ತಾ ಬಿಡುವ ತೆರ ತವ ನಡತೆ ಎನಿಪುದು 2 ಮಂದನಾನಿಜವಯ್ಯ | ಸಂದೇಹವಿಲ್ಲದೆ ಕುಂದು ಎಣಿಸದೆ ಜೀಯ ಬಂದೆನ್ನ ಮನದಲಿ ನಿಂದು ನೀಸಲಹಯ್ಯ ವಂದಿಪೆನು ಶ್ರೀ ಪು ರಂದರಾರ್ಯರ ಪ್ರೀಯ ಆನಂದ ನಿಲಯ 3
--------------
ಶಾಮಸುಂದರ ವಿಠಲ
ಕರುಣದಿ ಎನ್ನ ಪೊರಿಯೇ ತೊರಮ್ಮ ಶಿರಿಯೇ ಪ ಚರಣಯುಗಕೆ ನಾ ಶರಣು ಮಾಡಿದೆ ದೇವೀ ಅ.ಪ ವಾರಿಜಾಂಬಕೆ ಅಂಭ್ರಣೀ ಶ್ರೀ ಹರಿಯ ರಾಣಿ ಮಾರಾರಿ ಮುಖಸುರ ಸಂತ್ರಾಣಿ ವಾರವಾರಕೆ ನಿನ್ನ ಸಾರಿಭಜಿಪೆ ಎನ್ನ ದೂರ ನೋಡದೆ ಪೊರಿಭಾರ ನಿನ್ನದು ತಾಯಿ 1 ಸೃಷ್ಟಿ ಸ್ಥಿತಿಲಯ ಕಾರಿಣೀ ಸುಗುಣಸನ್ಮಣಿ ಕಷ್ಟ ದಾರಿದ್ರ್ಯ ದುಃಖ ಹಾರಿಣೀ ದುಷ್ಟರ ಸಂಗದಿ ಕೆಟ್ಟಿಹ ಎನ್ನನು ಥಟ್ಟನೆ ಕರುಣಾದೃಷ್ಟಿಲಿ ನೋಡಿ 2 ಜಾತರೂಪಳೆ ಶುಭಗಾತ್ರಿ ತ್ರಿಜಗಕೆ ಧಾತ್ರೀ ಸೀತೆ ಸತ್ರಾಜಿತನ ಪುತ್ರಿ ದಾತ ಗುರುಜಗನ್ನಾಥವಿಠಲನ ನೀತ ಸತಿಯೆ ಎನ್ನಮಾತೆ ವಿಖ್ಯಾತೇ 3
--------------
ಗುರುಜಗನ್ನಾಥದಾಸರು
ಕರುಣದಿ ಕಾಯೋ ಎನ್ನ ಕಾರುಣ್ಯನಿಧಿ ಕರುಣದಿ ಕಾಯೋ ಎನ್ನ ಪ ಚರಣಸೇವಕಭಯಹರಣ ಶ್ರೀ ಕೌಸ್ತುಭಾಭರಣ ಸೌಖ್ಯವಿ ತರಣ ನಿನ್ನಯ ಚರಣಯುಗಳವ ಶರಣುಹೊಕ್ಕೆನು ಅ.ಪ ಕರ್ಮತಂತ್ರವನುಳಿದು ಕಾಮಿಸಿ ಮ£ವ ನಿರ್ಮಲತ್ವವ ತೊರೆದು ಹಮ್ಮಿನಿಂದಲೆ ಭಕ್ತಿಯುಮ್ಮಳಿಸದೆ ಕಾಮವು ಹೊಮ್ಮುತಿದೆ ಪರಬೊಮ್ಮ ಮೂರುತಿ 1 ಸ್ನಾನ ಮೌನವ ತೊರೆದು ಸಂಧ್ಯಾದ್ಯನುಷ್ಠಾನ ನೇಮವ ಮರೆದು ಮಾನಸಪೂಜಾ ವಿಧಾನವನರಿಯದೆ ದೀನಜನಸುರಧೇನು ಭಕ್ತರಮಾನನಿಧಿಯಹ ಶ್ರೀನಿವಾಸನೆ2 ಶರಣಜನಾವನನೆ ಶಕ್ರಾದಿ ನಿರ್ಜರಕುಲಪಾಲಕನೆ ಪುರಹರ ಸನ್ನುತ ಚರಿತಪೂರಿತ ದುರಿತ ಸದ್ಗುಣ ಭರಿತ ಪುಲಿಗಿರಿ ವರದ ವಿಠಲ 3
--------------
ವೆಂಕಟವರದಾರ್ಯರು