ಒಟ್ಟು 108 ಕಡೆಗಳಲ್ಲಿ , 29 ದಾಸರು , 88 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜೋಜೋ ಕಂದÀರ್ಪಕೋಟಿ ಲಾವಣ್ಯಜೋಜೋ ವೃಂದಾರಕ ಶಿರೋರನ್ನ ಪ . ಜೋಜೋ ನಂದನ ಸುಕೃತದ ಫಲವೆಜೋಜೋ ಮುನಿಮನಮಧುಪ ಕಮಲವೆಅ.ಪ. ಪೊನ್ನ ತೊಟ್ಟಿಲ ಮೇಲೆ ಮಣಿಮಯವಾದ ವಿತಾನ್ನವ ಕಟ್ಟ್ಟಿ ಪಟ್ಟೆಯ ಮೇಲ್ವಾಸಿನಲಿಚಿನ್ನ ಶ್ರೀಕೃಷ್ಣನ ಮಲಗಿಸಿ ಗೋಕುಲದಕನ್ನೆಯರೆಲ್ಲ ತೂಗುತ ಪಾಡಿದರೆ 1 ಶಶಿಯ ಚೆಲುವ ಪೋಲ್ವ ಮೊಗದ ಚೆನ್ನಿಗನೆಎಸೆವ ಕಿರುಡೊಳ್ಳಿನ ಸೊಬಗ ಬಾಲಕನೆಪೊಸಕೆಂದಾವರೆಯಂದದಿ ಮೃದುಪದನೆಬಿಸರುಹನಯನ ಬಿಡದಿರೆಮ್ಮ ಕಂದ 2 ಪೂತನಿ ಅಸುವನೀಂಟಿದ ಪೋತ ಶಿಶುವೆವಾತದೈತ್ಯನ ಗೆಲಿದದುಭುತ ಬಾಲಭೂತಗಳನಂಜಿಸುವರ್ಭಕನೆಓತೆಮ್ಮ ಶಿಶುಗಳ ಸಲಹೊ ಶ್ರೀಹರಿಯೆ 3 ಅಮೃತವನೂಡಿ ಸುರರ ಬೆಳೆಸಿದನೆಭ್ರಮಿತನಾದ ಕರಿವರನ ಕಾಯ್ದವನೆಸುಮುಖತನದಿ ಪರೀಕ್ಷಿತನ ಪೊರೆದನೆಮಮತೆಯಿಂದೆಮ್ಮ ಶಿಶುಗಳ ನೀ ಸಲಹೊ 4 ಪೊಳೆÀವ ಮೂಲರೂಪದಿ ತೋರಿದೆ ನೀ-ನುಳಿದ ಶಿಶುಗಳಂತೆ ಶಿಶುವೆನ್ನಬಹುದೆಲಲನೆ ಬೇಡಿಕೊಳ್ಳೆ ತನ್ನ ತಾನೆ ಶಿಶು-ಗಳ ಭಾವವಿಡಿದೆಯೆಂದೆಂಬರು ನಿನ್ನ5 ಈ ಮಹಿಯೊಳು ಹರಿ ಶಿಶುವಾಗೆ ತನ್ನ ಮ-ಹಿಮೆಯ ತುತಿಸುವ ಶ್ರುತಿವನಿತೆಯರುವ್ಯಾಮೋಹದಿ ಬಂದು ಲಲನೆಯರಾದರುಆ ಮುಗ್ಧೆಯರು ಪಾಡುತ ತೂಗಿದರೆ 6 ನೀ. ಶಿಶುವಾದರೆ ನಿನ್ನುದರದೊಳಿರ್ದ ಶ್ರುತಿಮುಕ್ತರು ಶಿಶುಗಳೆಂತಾಹರೊವೇಷಧರನಾಗಿ ಶಿಶುಗಳ ವಾಸಿನೊಲಿದೆವಾಸುದೇವ ನಮ್ಮ ಬಿಡದಿರು ಶ್ರೀ ಕೃಷ್ಣ 7 ಆವಳಿಸಲು ನಿನ್ನ ಗರ್ಭದೊಳಗೆ ಭುವ-ನಾವಳಿ ಗೋಪಗೋಪಿಯರನ್ನು ತೋರಿದೆಶ್ರೀವರ ನೀನೆಲ್ಲರ ತಂದೆಯಲ್ಲದೆಭಾವಜ್ಞರ ಮತದಿ ಶಿಶುವೆಂತಪ್ಪೆ 8 ಹಯವದನನಾಗಿ ವೇದವÀ ತಂದುಪ್ರಿಯಸುತ ಚತುರಮುಖಗೆ ಪೇಳಿದಖಿಳ ವಿ-ದ್ಯೆಯ ಖನಿ ನೀನೀಗಳೇನೆಂದು ನುಡಿಯಲ-ರಿಯದ ಬಾಲಕನಾದ ಬಗೆ ಪೊಸತಯ್ಯ
--------------
ವಾದಿರಾಜ
ತಂದೆ ನೀನೆಂದು ನಾ ಬಂದೆ ರಕ್ಷಿಸೆಂದೆ ಪ ಮುಂದೆನ್ನ ಸಲಹುವ ಭಾರವು ನಿಂದೆ ಅ.ಪ. ಮಾತು ಮಾತಿಗೆ ನಾ ನಿನ್ನ ನೆನೆವೆ ಸ್ಮರಿಸುತಿರುವೆ ಜ್ಞಾತಿ ಬಾಂಧವರ ಮತ್ಸರ ಮರೆವೆ ಮಾತಾಪಿತರುಗಳ ಸೇವೆಗೈವೆ ಈ ತನು ನಿನ್ನ ಚರಣಕರ್ಪಿಸಿರುವೆ 1 ಸಾಧನವೇನೆಂಬುದ ನಾನರಿಯೆ ಕೇಳೊ ದೊರೆಯೆ ಮಾಧವ ನಿನ ನಾಮವೆಂದಿಗೂ ಮರೆಯೆ ವೇದಬಾಹಿರರೊಡನಾಡಿ ಮೆರೆಯೆ ಕಾದುಕೋಯೆನ್ನನೆಂಬೆನು ಶ್ರೀಹರಿಯೆ 2 ನಾ ನಿನ್ನ ಕಾಡಿ ಬೇಡುವುದಿಲ್ಲ ದೂರುವನಲ್ಲ ಜ್ಞಾನ ಮಾತುರವಿತ್ತು ಕಾಯಬೇಕಲ್ಲ ನೀ ನನ್ನ ಸಲಹೊ ಲಕ್ಷ್ಮೀ ನಲ್ಲ ಶ್ರೀನಿವಾಸ ರಂಗೇಶವಿಠಲ 3
--------------
ರಂಗೇಶವಿಠಲದಾಸರು
ನಮೋ ನಮೋ ನಾರಾಯಣನೇ ಓಂ ನಮೋ ಚನ್ನಕೇಶವನೆ ಪ ಅಚ್ಯುತ ಪಾದದಿ ಸೇರಿಸೊ ಅನಂತ ಅ.ಪ ನಮೋ ನಮೋ ವೆಂಕಟರಮಣನೆ ಸಂಕಟಹರಿಸೋ ಶ್ರೀವರನೆ 1 ನಮೋ ನಮೋ ವರದರಾಜನೆ ವರವ ನೀಡೋ ಪುರುಷೋತ್ತಮನೆ 2 ನಮೋ ನಮೋ ಶ್ರೀರಂಗನಾಥನೆ ಸುರಕ್ಷೆಯ ಕೊಡೊ ಭಕ್ತವತ್ಸಲನೆ 3 ನಮೋ ನಮೋ ಸಂಪತ್ಕುಮಾರನೆ ಸಂಪತ್ತನು ಹರಿಸೋ ಶ್ರೀಹರಿಯೆ 4 ನಮೋ ನಮೋ ಮುದಿಗೆರೆ ರಂಗನೆ ಮುದದಿ ಕಾಪಾಡೋ ಮಾಧವನೆ 5 ನಮೋ ನಮೋ ಯದುಗಿರಿ ಚಲುವನೆ ಸದಯದಿ ಸಲಹೋ ದಾಮೋದರನೆ 6 ನಮೋ ನಮೋ ಜಾಜಿಪುರೀಶನೆ ನೀ ಜೋಪಾನಮಾಡೆನ್ನ ಪರಮಪಾವನನೆ 7
--------------
ನಾರಾಯಣಶರ್ಮರು
ನರ್ತನಗೋಪ ಕೃಷ್ಣ | ವಿಠಲ ಪೊರೆ ಇವನಾ ಪ ಅರ್ತು ನಿನ್ನಂಘ್ರಿಯಲಿ | ದಾಸ್ಯ ಕಾಂಕ್ಷಿಪನಾ ಅ.ಪ. ಪತಿ ಸುಪ್ರೀಯ | ಮಧ್ವಾಂತರಾತ್ಮಸದ್ಧರ್ಮರತಿಯಿತ್ತು | ತಿದ್ದಿ ಸಂಸ್ಕತಿಗಳನುಶ್ರದ್ಧಾಳು ವೆಂದಿನಿಸು | ಸಿದ್ಧಾಂತ ಸಥದೀ 1 ಬೋಧ ಓದಗಿಸಿಕಾಯೋ | ಬಾದರಾಯಣದೇವಮೋದದಿಂ ಪ್ರಾರ್ಥಿಸುವೆ | ಹೇ ದಯಾಪೂರ್ಣ 2 ಧ್ಯಾನುಪಾಸನವಿತ್ತು | ಶ್ರೀನಿವಾಸನಮನದಿಕಾಣುವ ಸುವಿಜ್ಞಾನ | ನಿನಾಗಿ ಕೊಡುತಾಮೌನಿಕುಲ ಸನ್ಮಾನ್ಯ | ಜ್ಞಾನದಾಯಕ ಹರಿಯೆದೀನಜನ ಮಂದಾರ | ನೀನಾಗಿ ಪೊರೆಯೊ 3 ಪಿತೃ ಮಾತೃ ಪರಿವಾರ | ವ್ಯಾಪ್ತ ಹರಿಮೂರ್ತಿಯನುಅರ್ಥಿಯಿಂದಲಿ ಭಜಿಪ | ಮತಿಯ ಪಾಲಿಸುತಾಕರ್ತೃತ್ವ ಭ್ರಾಂತಿಯನು | ಹತಮಾಡಿ ಶ್ರೀಹರಿಯೆಕೀರ್ತಿವಂತನ ಗೈಯ್ಯೋ | ಆರ್ತರುದ್ಧರಣಾ 4 ಮುನ್ನವೇ ತ್ಯೆಜಸನು | ನನ್ನೆಯಿಂ ಸೂಚಿಸಿಹಚೆನ್ನ ಅಂಕಿತವನ್ನೆ | ಇನ್ನು ಸ್ಥಿರಪಡಿಸೀಘನ್ನ ಉಪದೇಶವನು | ಚಿತ್ಗಾನಿಗೆ ಇತ್ತಿಹೆನೋಮನ್ನಿಸೀಕೃತ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ನಾನೇನು ನಿನಗೆಂದೆನೊ ಶ್ರೀಹರಿಯೆನಾನಿನಗೇನೆಂದೆನೊ ಪ ನಾನೇನು ನಿನಗೆಂದೆ ನೀನಿಂತು ನನ್ನದುಧ್ಯಾನವ ಬಿಡಿಸಲು ಜ್ಞಾನಿಗಳರಸನೆ ಅ.ಪ. ಕರುಣಿ ನೀನೆಂತೆಂಬೋದು ನನಗೆ ಇನ್ನುಭರವಸೆ ಇಲ್ಲೆಂಬೆನೋಕರುಣಿ ನೀನಾದರೆ ಪರಿಪರಿ ಬೇಡಲುಕರುಣೆ ತೋರದೆ ಇರುವದು ಸರಿಯೇನೊ 1 ಭಕ್ತನು ನಾನಲ್ಲವೇನೊ ನಿನ್ನೊಳಗನುರಕ್ತಿ ಮಾಡುವದಿಲ್ಲೇನೋಮುಕ್ತಿ ಮಾಡಲು ಮತ್ತೆ ರಿಕ್ತ ಕರಣನೆಂಬ ಉಕ್ತಿ ಸುಳ್ಳೇನೋ2 ಸ್ಮರಿಸಲು ದುರಿತಗಳ ತರಿವನುಡಿಬರಿದೆನ್ನ ಬಗೆಗಾಯ್ತೆನೊಧರೆಯೊಳು ಗದುಗಿನ ವೀರನಾರಾಯಣಬಿರುಸು ನನ್ನ ನುಡಿ ಬರೆಯಲ್ಲವೇನೋ 3
--------------
ವೀರನಾರಾಯಣ
ನಾರಾಯಣಯೆಂಬೊ ನಾಮವನು ನೆನೆದರೆ ಹಾರಿ ಹೋಹುದು ಜನ್ಮಜನ್ಮದ ಪಾಪಗಳು ಮುಕ್ತಿದೋರಿಸು ಮುರಾರಿ ಪ. ಸಕಲವೇದ ಪುರಾಣ ಶಾಸ್ತ್ರಗಳ ತಿಳಿದೋದಿ ಭಕ್ತಿಯಲಿ ತಾಯತಂದೆಯ ಚಿತ್ತವಿಡಿದವರ ಸುಕುಮಾರನೆನಿಸಿಕೊಂಡು ಪ್ರಕೃತಿಯಲಿ ಹೋಮಕ್ಕೋಸ್ಕರ ಸಮಿದೆ ತರಹೋಗಿ ದುಷ್ಕøತ್ಯದ ಫಲದಿಂದ ಅಂತ್ಯಜಳನು ಕಂಡು ಕಾ- ಅರಿತರಿಯದೆ 1 ನಿಲ್ಲು ನಿಲ್ಲೆಲೆ ಕಾಂತೆ ನಿನಗೊಲಿದೆ ನೀನಾರು ಸೊಲ್ಲಿಸೆನ್ನೊಡನೆ ಸತಿಯರ ಕುಲಕೆ ಕಟ್ಟಾಣಿ ಹುಲ್ಲೆನೋಟದ ಭಾವಕಿ ಸಲ್ಲಿಲಿತ ಗಾತ್ರೆ ಸೊಕ್ಕಾನೆ ಮೆಲ್ಲಡಿಯವಳೆ ಮಲ್ಲಿಗೆಗಂಧಿ ಮದನನ ಕೈಯ ಮಸೆದಲಗೆ ಸೆರಗ ಪಿಡಿದ 2 ವಿಪ್ರ ಕೇಳು ನಾವು ಕುಲಹೀನರೆಮ್ಮನೆಯ ಹೊಲಸಿನ ಮಾಂಸ ಗೋವಿನ ಚರ್ಮದ್ಹಾಸಿಕೆಯು ಹಿಂಡು ಬಲು ಘೋರ ಎನಿಸಿಪ್ಪುದು ಬಲೆಗೆ ಸಿಕ್ಕಿದ ಪಕ್ಷಿ ಬೇಂಟೆಯವಗಲ್ಲದೆ ಕುಲವ ಕೂಡುವದೆ ಕಾಮಿನಿ ಕೇಳು ನಿನ್ನೊಡನೆ ಛಲವೊಂದೆ ಎನಗೆ ಎಂದ3 ವ್ಯರ್ಥ ಎನ್ನೊಡನೆ ಮಾತ್ಯಾಕೆಲೊ ವಿಪ್ರ ಚಿತ್ತವೆನ್ನಲ್ಲಿ ಇದ್ದರೆ ಹೋಗಿ ನೀ ಎನ್ನ ನಿನಗೊಲಿವೆನೆಂ[ದಳು] ಅತ್ತ ಕಾಮಿನಿಯ ಒಡಗೂಡಿ ಆಕೆಯ ಪಿತನ ಹತ್ತಿರಕೆ ಹೋಗಿ ಕೇಳಿದರಾತನಿಂತೆಂದ ಇಂಥ ಮೊತ್ತಕೊಳಗಾಗದಿರೊ 4 ಆಗದಾಗದು ಎನ್ನ ಕುಲಬಂಧು ಬಳಗವÀನು ನೀಗಿ ನಿಮ್ಮೊಡನೆ ಕೂಡುವೆನೆಂಬ ಮತವೆನಗೆ ನಾಗಭೂಷಣನ ಪಣೆಗಣ್ಣಿಂದ [ಲುರಿದನ] ಬಾಣತಾಗಿತೆನ್ನೆದೆಯನೆಂದ ಕೂಗಿ ಹೇಳಿದೆ ನಿನ್ನ ಕುಲವಳಿಯದಿರೆಂದು ಹೋಗಿ ಕೂಡೊ ಹೆತ್ತ ತಾಯಿತಂದೆಗಳ ಅದು ಆಗದಿದ್ದರೆ ಆಚೆ ಮನೆಯೊಳಗೆ ನೀವಿಬ್ಬರಲ್ಲಿರಿ ಹೋಗ್ಯೆಂದನು 5 ಹಾಲಂತ ಕುಲವ ನೀರೊಳಗದ್ದಿಪೂರ್ವದ ಶೀಲವನಳಿದು ಸತಿಯೊಡಗೂಡಿ ತಾನು ಚಾಂ- ಡಾಲತಿಗೆ ಹತ್ತುಮಕ್ಕಳ ಪಡೆದು ತಾನವರ ಲೀಲೆಯನು ನೋಡಿ ಹಿಗ್ಗಿ ಆಲಂಬನದಲಿ ಅಜಾಮಿಳನು ಇರುತಿರಲಾಗ ಕಾಲ ಬಂದೊದಗಿ ಕರೆಯಿರೊ ಪಾತಕಿಯನೆಂದು ಯಮನಾಳುಗಳು ಇಳಿದರಾಗ 6 ಎಡೆಗೈಯ ಪಾಶಗಳು ಹಿಡಿದ ಚಮ್ಮಟಿಗಳು ಒಡನೊಡನೆ ಚವುರಿಗಳು ವಜ್ರದ ಮೋತಿಯ [ಕಾಗಡಿ] ಘುಡು‌ಘುಡಿಸುತಲಿ ನಿಂತರು ಕಡುಹಸುಳೆ ಕಂದನಿವನೆಷ್ಟು ಅಂಜುವನೆಂದು ಗಡಗಡನೆ ನಡುಗಿ ಕಂಗೆಟ್ಟು ಅಜಾಮಿಳ ತಾನು ಲಾಲಿಸಿದ ಸ್ವಾಮಿ 7 ಮರಣಕಾಲದಿ ಶ್ರೀಹರಿಯೆಂಬ ನಾಮವನು ಹರಿವುದಾಕ್ಷಣದಲ್ಲಿ ಕರುಣದಿಂದಜಮಿಳನ ಕರೆತನ್ನಿರಿಲ್ಲಿಗೆಂದ ಉರದೊಳೊಪ್ಪುವ ತುಳಸಿದಂಡೆ ಪೀತಾಂ- ಬರವು ಗದೆ ಶಂಖ ಚಕ್ರ ದ್ವಾದಶನಾಮವನು ಧರಿಸಿ ಕರವೆತ್ತಿ ಅಂಜ ಬ್ಯಾಡೆಲೊ ಎಂದು ಹರಿದಾಸರೈ ತಂದರು 8 ಪುಂಡರೀಕಾಕ್ಷನ ಭೃತ್ಯನ ಭಾಧಿಸುವ ಲಂಡರಿವರ್ಯಾರು ನೂಕಿ ನೂಕಿರೊ ಎಂದು ಯಮನ ದಂಡವನು ಮುರಿದು ಬಿಸಾಡಿ ನಿಮ್ಮಸುವ ಹಿಂಡುವೆವು ಎಂದರಾಗ ಕಂಡ ಹರಿದೂತರಿಗೆ ಯಮನಾಳುಗಳೆರಗಿ ಭೂ- ಮಂಡಲದೊಳಗೆ ಎಮ್ಮೊಡೆಯ ಯಮಧರ್ಮನ ಉದ್ದಂಡರಹುದೆಂದರಾಗ 9 ತಂದೆ ಕೇಳೆಮ್ಮ ಬಿನ್ನಪವ ಲಾಲಿಸಿ ನೀವು ಒಂದು ದಿನ ಹರಿಯೆಂಬ ಧ್ಯಾನವನರಿಯನು ನಾವು ಬಂದೆಳೆಯಲಾತ್ಮಜನ ನಾರಗಾ ಎನಲು ಕುಂದಿತೆ ಇವನ ಪಾಪ ಹಂದಿಕುರಿಗಳಿರ ನಿಮಗಿಷ್ಟು ಮಾತುಗಳ್ಯಾಕೆ ನಿಂದಿರದೆ ಹೋಗ್ಯೆಂದು ನೂಕಿ ಯಮನಾಳ್ಗಳನು ತಂದಪೆವು ದಿವ್ಯ ಪುಷ್ಪಕವನೆಂದೆನುತ ಬಂದರಾ ವೈಕುಂಠಕೆ 10 ಎದ್ದು ಅಜಾಮಿಳನು ಮೂರ್ಛೆಯ ತಿಳಿದು ಎಚ್ಚೆತ್ತು ಬಿದ್ದ ಕಾಯವನು ಭಾದಿಸಿದವರ್ಯಾರು ಉ- ಪದ್ರವನು ಬಿಡಿಸಿದ ದಿವ್ಯ ಸ್ವರೂಪ[ದ] ಸುಧಾತ್ಮರಾರು ಎಂದ ಮದ್ಯಪಾನವ ಮಾಳ್ಪ ಹೆಂಗಸಿನ ಒಡನಾಡಿ ಅದ್ದಿದೆ ನೂರೊಂದು ಕುಲವ ನರಕದೊಳೆಂದು ತಾನತಿ ಮರುಗುತ 11 ವಿಪ್ರ ಕುಲದಲ್ಲಿ ಪುಟ್ಟಿ ವೇದಶಾಸ್ತ್ರವನೋದಿ ಮುಪ್ಪಾದ ತಾಯಿ-ತಂದೆಯ ಬಿಟ್ಟು ಬುಧÀ ಜನರು ಮದನ ಬಾಧೆಗೆ ಸಿಲುಕಿ ದುಷ್ಟ ತಾಪವ ಪೊತ್ತೆ ಜನನಿಂದಕನಾದೆ ಅಪ್ರತಿಮ ಅನಂತಪಾತಕಿ ಭುವನದಲಿ ತಪ್ಪಲಿಲ್ಲವೆ ಪಣೆಯ ಬರದ ಬರಹಗಳು ಇನ್ನು ಭಾಪುರೆ ವಿಧಿ ಎಂದನು 12 ಇಷ್ಟು ದಿನ ಹರಿಯೆಂಬೊ ನಾಮವರಿಯೆನು ನಾನು ದುಷ್ಟಯವÀುದೂತರನು ಕಂಡು ಚಂಡಾಲತಿಗೆ ಪುಟ್ಟಿದ ಮಗನ ನಾರಗನೆಂದು ಕರೆದರೆ ಮುಟ್ಟಿದವೆ ನಿಮಗೆ ದೂರು ಇಷ್ಟು ಅವಗುಣಗಳನು ಎಣಿಸಲಿಲ್ಲವೆ ಸ್ವಾಮಿ ಎಷ್ಟು ಕರುಣಾಕರನೊ ಎಂದು ಸ್ನಾನವ ಮಾಡಿ ಬಿಟ್ಟು ತಾಪತ್ರಯವ ಭಯ ನಿವಾರಣ ಹರಿಯ ಗಟ್ಯಾಗಿ ಧ್ಯಾನಿಸಿದನು 13 ತನ್ನ ನಾಮವ ನೆನೆವ ಭಕ್ತರಾದವರೆಲ್ಲ ಧನ್ಯರಿವರಹುದೆಂದು ಜಗವರಿಯಬೇಕೆಂದು ಉನ್ನತವಾದ ಪುಷ್ಪಕವ ತಾ ಕಳುಹಿದ ಪನ್ನಗಾರಿವಾಹನ ಅನ್ಯಾಯ ಇವಗಿಲ್ಲ ಅವನಿಯೊಳಗುತ್ತಮನು ಎನ್ನಯ್ಯ ಏಳೆಂದು ಕೈಲಾಗವÀನು ಕೊಡಲು ಉನ್ನತವಾದ ಪುಷ್ಪಕವೇರಿ ಅಜಮಿಳನು ಹರಿಯ . ಸನ್ನಿಧಿಗೆ ನಡೆದ 14 ಜಲಜನಾಭನ ದಿವ್ಯನಾಮವನು ನೆನೆದರೆ ಕುಲಕೋಟಿ ದೋಷಗಳಿಲ್ಲ ಕುಂದುಗಿಂದುಗಳಿಲ್ಲ ಸಲುವರಲ್ಲೆಂದ ಯಮನು ನಲವಿಂದ ಹೆಳವನಕಟ್ಟೆ ಶ್ರೀ ವೆಂಕಟನ ನೆಲೆಯರಿತು ನೆನೆದವರ್ಗೆಮನ ಭಾದೆಗಳಿಲ್ಲ ಸಾಯುಜ್ಯ ಪದವೀವ ಬಲು ನಂಬಿ ಭಜಿಸಿ ಜನರು 15
--------------
ಹೆಳವನಕಟ್ಟೆ ಗಿರಿಯಮ್ಮ
ನಿನ್ನವನಲ್ಲವೇನೋ ಶ್ರೀಹರಿಯೆ ನೀನೆನ್ನೊಳಗಿಲ್ಲವೇನೊ ಪ ನಿನ್ನವನಲ್ಲವೆ ನೀ ನೆನ್ನೊಳಗಿಲ್ಲವೆನಿನ್ನ ಭಕುತುನೆಂದು ಮನ್ನಿಸಲೊಲ್ಲೇನೊ ಅ.ಪ. ಹೃದಯದೊಳೆಂಟುದಳ ಪದುಮವುಮುದದಿ ನೀನಿರುವ ಸ್ಥಳಹದನವನರಿತು ನಾ ಸದಾವಕಾಲದಿಸದಮಲ ಭಕುತಿಯನ್ನೊದವಿಸಿ ಸೇವಿಸೆ 1 ಎಂಭತ್ತುನಾಲ್ಕು ಲಕ್ಷ ಜೀವನರಾಶೀ-ಗಿಂಬಿತ್ತು ಕಾಯ್ವದ ಗೊಂಬೆಯ ಮಾಡುವಬಿಂಬ ಮೂರುತಿ ನಿನ್ನ ನಂಬಿದ ನನ್ನನ್ನುತುಂಬ ಮರೆತೆಯೇನೋ 2 ಗದುಗಿನನೊಳ್ಮೆರೆವ ವೀರನಾರಾಯಣಪದವ ನಂಬಿರುವೆ ಪೂರಾವಿಧವಿಧ ಪರಿಕಿಸು ಬದುಕಿಸು ಮುಳುಗಿಸುಬೆದರಿಸು ಕರುಣಿಸು ಕದಲಲೊಲ್ಲೆನು ದೇವಾ 3
--------------
ವೀರನಾರಾಯಣ
ನೀನೆ ದಯಮಾಡಲು ನಾನುದ್ಧಾರಾಗುವೆನು ಏನೇನು ಪರಲೋಕ ನಾನರಿಯೆ ಶ್ರೀಹರಿಯೆ ಪ ಹೀನಸಂಸಾರದೊಳಗೆ ಮುಳುಗಿ ಶ್ವಾನನಂದದಿ ಕರಗಿ ಕೊರಗಿ ಜ್ಞಾನಶೂನ್ಯನಾಗಿ ಬಳಲುವೆ ಜ್ಞಾನಮೂರುತಿ ಅಭಯ ಪಾಲಿಸು ಅ.ಪ ಉದಯದಲ್ಲೇಳುತ ಸದಮಲ ತವಪಾದ ಮುದದಿಂದ ನೆನೆಯದೆ ಅಧಮತನದಿ ವಿಧವಿಧದಿ ಅಧಮಜನರ ಸುದ್ದಿ ವದನದಿಂದಾಡುತ ಮುದಿಕೋಣನಂದದಿ ಮದಮುಚ್ಚಿ ನಡೆದೆ ಎಡಬಿಡದೆ ಕುದಿದೆನನುದಿನ ಪರರ ಮನೆ ಸಂ ಪದವ ನೋಡಿ ಸಹಿಸದವರ ಸದನ ಮುರಿಯುವ ಬುದ್ಧಿ ಹುಡುಕಿದೆ ಪದುಮನಾಭಪರಾಧ ಕ್ಷಮಿಸಿ1 ಒಂದು ನಾನರಿಯದೆ ಮುಂದೆ ಭಲಾಯೆಂದು ಹಿಂದೆ ನಿಂದಿಸಿ ನಕ್ಕೆ ದ್ವಂದ್ವಕರ ಬಡಿದು ಬಲು ಜರಿದು ಹಂದ್ಯಮೇದ್ಯಕಂಡಾನಂದಿಪತೆರದನ್ಯ ಸುಂದರಿಯರ ನಯನದಿಂದ ನೋಡಿದೆ ಎವೆಯಿಕ್ಕದೆ ಇಂದಿರೇಶನೆ ನಿಮ್ಮ ಪಾದವ ಒಂದೆ ಮನದಿಂ ಭಜಿಸದೆ ಭವ ದಂದುಗದಲಿ ಬಿದ್ದು ನೊಂದವ ಕಂದನೊಳು ಕೃಪಾದೃಷ್ಟಿಯಿತ್ತು 2 ದಾಸಜನರ ಆವಾಸ ನಾ ಬಯಸದೆ ಈಷಣ ಪ್ರಪಂಚದ್ವಾಸನದಲ್ಲಿ ಬಹು ತೊಳಲಿ ಆಸೆಯೆಂಬುವ ಮಹಪಾಶದಬಲೆಯೊಳು ಘಾಸಿಯಾಗುವೆ ಸಿಲ್ಕಿ ಸೋಸಿ ನೋಡದಲೆ ಮರೆ ಮೋಸದಲಿ ದಾಸ ಬುದ್ಧಿಯಿಂದ ಮಾಡಿದ ಬಲು ದೋಷರಾಶಿಗಳೆಲ್ಲ ನಾಶಿಸಿ ಶ್ರೀಶ ಶ್ರೀರಾಮ ನಿಮ್ಮ ಪಾದ ದಾಸನಿಗೆ ನಿಜಧ್ಯಾಸ ನಿಲ್ಲಿಸು 3
--------------
ರಾಮದಾಸರು
ನೀನೆ ನುಡಿಸಿದಂತೆ ನುಡಿಯುವೆನು ಮಿಕ್ಕ ಜ್ಞಾನವಿಲ್ಲ ಎನಗೇನೇನು ಪ ನೀನೆ ಜಗತ್ರಾಣ ಶ್ರೀಹರಿಯೆಂಬುದೊಂದೆ ಖೂನಮಾಡಿ ಕೊಂಡಾಡುವೆನು ಅ.ಪ ನೀ ನಡೆಸಲು ನಾ ನಡೆಯುವೆನು ಹರಿ ನೀನಾಡಿಸಲು ನಾನಾಡುವೆನು ನೀನೀಡದಿರೆ ಬಲು ಮಿಡುಕುತ ಬಳಲುವೆ ನೀ ನುಣಿಸಲು ಉಂಡು ನಲಿವೆ ಪುಂಡನಾಗಿ 1 ಕಡುಪ್ರೇಮದಿ ಚರಾಚರಗಳನು ಕಾಯ್ವಿ ಪೊಡವಿ ಈರೇಳುವ್ಯಾಪಕ ನೀನು ಕೊಡುವ ಕರ್ತ ನೀನೆ ಮೂಲೋಕಕೆಂಬ ನುಡಿ ದೃಢದಿ ನಂಬಿ ಗಟ್ಟಿಮಾಡಿಹೆನು 2 ಹೋಮ ಯಜ್ಞ ಯಾಗ ತಿಳಿಯೆ ನಾನು ಮತ್ತು ನೇಮನಿತ್ಯದ ಗುರುತರಿಯೆನು ಭೂಮಿಗಧಿಕ ಮಮಸ್ವಾಮಿ ಶ್ರೀ ರಾಮನ ಪೂರ್ಣನಂಬಿಕೊಂಡಿಹೆನು 3
--------------
ರಾಮದಾಸರು
ನೆನೆಬೇಕು ನೆನೆಬೇಕು ಶ್ರೀಹರಿಯ ಪ ನೆನೆಬೇಕು ಹರುಷದಿಂದಲಿ ಶ್ರೀ ಹರಿಪಾದಂಗಳ ದುರಿತ ನಿವಾರಣ1 ಅಖಿಳಾಂಡಗಳನ್ನು ಉದರದಿ ಧರಿಸಿದ ನಿಖಿಳ ಲೋಕದಿ ವ್ಯಾಪ್ತ ಶ್ರೀಹರಿಯೆನುತಾ 2 ಸಂತತ ಚಿಂತೆಯ ಸಂತಾನ ಬಿಡಿಸುವ ಚಿಂತನೆ ಶ್ರೀ ವಿಜಯವಿಠ್ಠಲನಡಿಗಳ 3
--------------
ವಿಜಯದಾಸ
ನೆರೆನಂಬಿ ಬೇಡುವೆನೊ ಶ್ರೀಹರಿಯೆ ನಿನ್ನ ಪರಮ ಪರತರ ತವಬಿರುದುಗಳರಿದು ಪ ಪುರನಾಶಗೈದು ನೀ ಪುರಸತಿಯರ್ವ್ರತ ಕೆಡಿಸಿ ಪುರದೊಳಗೆ ತೋರಿದೆಲೋ ಪರಿಪರಿಯ ಲೀಲೆ ಕರುಣಿಸದ್ಯಸಮಸುಖ ಪರಮ ದಯಾನಿಧಿಯೆ 1 ಸತಿ ಅಹಲ್ಯಾದೇವಿಗೆ ಪತಿಯಿತ್ತ ಶಾಪವನು ಅತಿಹಿತದಿ ಪರಿಹರಿಸಿ ಗತಿಯಿತ್ತಿ ದೇವ ಕ್ಷಿತಿಜಾತೆಪತಿ ನಿನ್ನ ಪತಿತಪಾವನಪಾದ ನುತಿಪ ಭಕ್ತರಿಗೆ ಜವಮೃತ್ಯುಭಯತರಿವಿ 2 ಮೃಡಸಖ ಶ್ರೀರಾಮ ದೃಢದಿ ಭಜಿಪರ ಬೆಂ ಬಿಡದಿರ್ದು ಕಾಯ್ವಂಥ ಕಡುದಯದ ದೇವ ದೃಢದಿಂದ, ನಂಬಿದೆ ಒಡಲಾಸೆ ಪೂರೈಸು ಜಡಜಾಕ್ಷ ಕಡುದಯದಿ ಪಿಡಿಯೆನ್ನ ಕೈಯ 3
--------------
ರಾಮದಾಸರು
ಪಾದ ಪದ್ಮದಲಿಮಾಯೆ ದಾಟಿತು ಮಹಿಮಳೇ ದೇವಿ ಪಕಾಯ ಕರ್ಮಗಳೆಂಬ ಕಾತ್ಯ ಸಮುದಾಯವನುದಾಯದಿಂದಳವಡಿಸಿದೆ ದೇವಿ ಅ.ಪಆಜಸುರಾದಿಗಳಿಂಗೆ ಅಮರಿಸಿಹೆ ಭಾಗ್ಯವನುಭಜಿಸುತಿಹರನವರತವೂ ದೇವಿನಿಜದಿರವನೂ ಕೊಟ್ಟು ನಿಲಿಸಿರಲು ನೀನವರತ್ರಿಜಗ ವಂದಿತರಾದರು ದೇವಿಸುಜನ ವಂದಿತನಾದ ಶ್ರೀಹರಿಯೆ ನೀನಾಗಿರುಜುಕರದಲಾಳುತಿರುವೆ ದೇವಿಕುಜನನಾದರು ನಾನು ಕರವಿಡಿದು ನೀ ಕಾಯ್ದುದ್ವಿಜಜನ್ಮದೆಣಿಕೆದೋರ್ದೆ ದೇವಿ 1ಅಣುಮಾತ್ರವಿರಲಿಲ್ಲ ವಿಷಯ ಭೋಗಕೆ ಬೀಜದಣಿಸಿದುದು ದಾರಿದ್ರವು ದೇವಿಕಣುಗಾಣದಿದ್ದವಗೆ ಕೊಟ್ಟಿಯನ್ನವ ನೀನೆಮಣಿವದನು ಮಾಡ್ದೆ ನೀನೆ ದೇವಿಪ್ರಣತ ರಕ್ಷಾಮಣಿಯೆ ಪರತತ್ವವನ್ನಿತ್ತೆಎಣಿಪುದೆಂತೀ ಮಹಿಮೆಯಾ ದೇವಿಕ್ಷಣಮಾತ್ರ ಪೂಜೆಯನು ಕ್ರಮದಿ ಮಾಡ್ದವನಲ್ಲಭಣಿತೆುದ ಬಗೆವರಾರು ದೇವಿ 2ಪರಿತೃಪ್ತಳಾಗಿರುವೆ ಪರಮಭಾಗ್ಯವನೀವೆನೆರೆ ನೀನೆ ನಿರ್ಮಿಸಿರಲು ದೇವಿಇರಿಸಿದಂತಿರುವರಿಂದೇನಹುದು ಕೊಡುವದಕೆಅರಿಯಲಖಿಳವು ನಿನ್ನದೇ ದೇವಿಮರುಗಿ ನೀನೇ ಕಾಯ್ವೆ ಮಾತೃ ರೂಪಹುದಾಗಿಸುರತರುವಿನುಪಮಾನಳೇ ದೇವಿವರದ ತಿರುಪತಿ ವಾಸ ವೆಂಕಟೇಶನ ರೂಪಧರಿಸಿಹಳೆ ದಿವ್ಯ ಲಕ್ಷ್ಮೀದೇವಿ 3ಕಂ||ಸ್ಥಿರವಾರವಿಂದು ಕೇಶವಸ್ಥಿರವಹುದಿತ್ತಭಯವೆನಗೆ ಭಯವನು ಬಿಡಿಸೈಸ್ಥಿರವಲ್ಲದ ಸಂಸಾರವಸ್ಥಿರವೆಂದೇ ನೊಂದೆನೈಯ ವೆಂಕಟರಮಣಾಓಂ ನಾರಾಯಣಾಯ ನಮಃ
--------------
ತಿಮ್ಮಪ್ಪದಾಸರು
ಪಾರ್ಥಸಾರಥಿ ಪಾಲಿಸೆನ್ನ ಶ್ರೀಹರಿಯೆ ಪ ಅಂದು ಗಜನು ತಾನು ಬಂದು ತಾ ಬಂಧು ಬಳಗವ ಕೂಡಿ ಸೊಂಡಿ- ಲಿಂದ ನೀರನು ಕಲಕಲಾಕ್ಷಣ ಒಂದು ಮಕರ್ಹಲ್ಲಿಂದ ಪಿಡಿಯೆ ಮು- ಕುಂದ ನೀನೆ ಗತಿಯೆಂದರಾಕ್ಷಣ ಬಂದು ಒದಗಿದ್ಯೊ ಸಿಂಧುಶಯನನೆ 1 ದುರುಳಾಸುರನು ತನ್ನ ಕರುಳ ತನ ಕರುಳನಿಟ್ಟುರಿಯಲ್ಲಿ ಗರಳ ಹಾಕಿ ಬಾಧಿಸಲು ಖಳನು ಕಾರಣ ಕಂಬದಲಿ ಬಂದೆಳೆದು ಅವನುರ ಕರುಳ ಮಾಲೆಯ ಕರಾಳವದನವ ತೆರೆದು ತನ್ನಯ ಕೊರಳಲ್ಲಿರಿಸಿದ ಕೋಮಲಾಂಗನೆ 2 ಪಿತನ ತೊಡೆಯಲಿದ್ದ ಸುತನ ಕಂಡು ಸುತನ ಸುರುಚಿಯು ತಾನಾಗ ಹಿತದಂತ್ವಾಕ್ಯಗಳನು ನುಡಿಯಲು ಅತಿಬ್ಯಾಗದಲಜಸುತನ ನುಡಿ ಕೇ ಳುತಲಿ ತಪವನು ಚರಿಸಲಾಕ್ಷಣ ಪತಿತಪಾವನ ಪರಮ ಕರುಣದಿ ಸುತ ಧ್ರುವಗೆ ಸುಖವಿಟ್ಟ ಶ್ರೀಹರಿ3 ಬಾಡಿ ಬಳುಕುವ ದ್ವಿಜನ ನೋಡಿ ತಾ ನೋಡಿ ತಂದವಲಕ್ಕಿ ಬೇಡಿ ಆಡಿ ಭಕ್ತನ ಕೂಡ ನಯನುಡಿ ಮಾಡಿ ಕರುಣವ ತನ್ನ ದಯ ಸೂ- ರ್ಯಾಡಿ ಸಖಗೀಡಿಲ್ಲದರ್ಥವ ನೀಡಿದ್ಯೊ ಬಹು ರೂಢಿಗಧಿಕನೆ 4 ಕಡುಚÉಲ್ವೆಕರೆಯಲುಟ್ಟುಡುಗೆ ಉಟ್ಟ ಉಡುಗೆ ಸೆಳೆಯಲು ಕೃಪ್ಣೆ(ಯಿ)ದ್ದೆಡೆಗೆ ನಡೆದಸುರ ಪಿಡಿದೆಳೆಯೆ ಸೀರೆಯ ಕಡೆಯ ಕಾಣದೆ ಖಳನು ಧರೆಯೊಳು ಯುಡುಗೆಗಕ್ಷಯ ನುಡಿದ ಕೃಷ್ಣನೆ 5 ಸಿಂಧುಶಯನಾರವಿಂದನಯನಾರ- ವಿಂದ ನಯನ ಅಸುರರಿಗತಿ ಭಯಂಕರನಾ- ಗೆಂದಿಗಾದರು ನಿನ್ನ ನಾಮಸುಧೆ ಯಿಂದ ಸುಖ ಸುರಿವಂತೆ ಮಾಡು ಮು- ಕುಂದ ಭೀಮೇಶಕೃಷ್ಣ ನಿನ್ನ ಪ- ದಾಂಬುಜವ ತೋರಾನಂದದಿಂದಲಿ 6
--------------
ಹರಪನಹಳ್ಳಿಭೀಮವ್ವ
ಪಾಲಿಸು ಯದುಪತಿಯೆ ಶ್ರೀಹರಿಯೆ ಹರಿಯೆ ಹರಿಯೆ ಪ ನಾನಾಯೋನಿಗಳಲ್ಲಿ ಶ್ವಾನನಂದದೆ ಸುತ್ತಿ ಶ್ರೀಹರಿಯೆ ಹರಿಯೆ ಹರಿಯೆ 1 ದೇಶಕೋಶವು ಬಂಧು ಪಾಶದೊಳಗೆ ಸಿಕ್ಕಿ ದೋಷಗೈವೆ ಆಶೆಯಬಿಡೆನಾ ಶ್ರೀಹರಿಯೆ ಹರಿಯೆ ಹರಿಯೆ 2 ಅಂಗವು ಕುಂದಿತು ಭಂಗವ ಪೊಂದುವೆ ಶ್ರೀಹರಿಯೆ ಹರಿಯೆ ಹರಿಯೆ 3 ಧೇನುನಗರ ದೊರೆ ಭಾನುಸನ್ನಿಭ ಶೌರೆ ಶ್ರೀಹರಿಯೆ ಹರಿಯೆ ಹರಿಯೆ 4
--------------
ಬೇಟೆರಾಯ ದೀಕ್ಷಿತರು
ಪಾಲಿಸು ಶ್ರೀಶನೆ ಪರಮ ಪವಿತ್ರನೆ ಪಾವನ್ನ ಚರಿತನೆ ಪಾಲಿಸೆನ್ನ ಪ ಕಾಲಕಾಲಕೆ ನಿನ್ನ ಮಹಿಮೆಯ ತೋರಿಸಲಹುದು ಸರ್ವವ್ಯಾಪಕ ಮಾಯಾದೇವಿಯರಮಣ ಶ್ರೀಪತೆ ಕಾಯೊ ಶ್ರೀಹರಿವಾಸುದೇವನೆಅ.ಪ ವಾಸುದೇವನೆ ನಿನ್ನ ಸೋಸಿಲಿ ಭಜಿಪರ ಕ್ಲೇಶಗಳ್ಹರಿಸಿ ಸಂತೋಷವಿತ್ತು ದೋಷದೂರನ ನಾಮ ಆಸೆಯಿಂದ ಭಜಿಪರಸಂಗವನೂ ನೀಡೆನುತ ಬಿನ್ನೈಸುವೆನೂ ಎನ್ನೊಡೆಯ ನೀನೆಂದೆನುತ ಅಡಿಗಳಿಗೆರಗುವೆನೂ ಧೃಡಭಕುತಿ ನಿನ್ನೊಳಗಿರಿಸಿ ರಕ್ಷಿಪುದೆಂದು ಬೇಡುವೆನೂ ನುಡಿನುಡಿಗೆ ನಿನ್ನಯ ನುಡಿಗಳನು ನುಡಿವಂಥ ಭಕ್ತರ ಅಡಿಗಳಾಶ್ರಯ ಕೊಟ್ಟು ಕಾಯ್ವುದು ಬಡವನೆನ್ನಲಿ ಬೇಡ ಎನ್ನನು ಬಡವರಾಧಾರಿ ಶ್ರೀಹರಿ 1 ಶಂಖು ಚಕ್ರವು ಪದ್ಮಗದೆಯು ಹೊಳೆಹೊಳೆಯುತ್ತ ಬಿಂಕದಿಂದಲಿ ನಿಂತು ನೋಡುತಲಿ ಮಂಕುಮತಿಗಳನ್ನು ಶಂಕೆಯೊಳಗೆ ತಳ್ಳಿನೋಡುತ್ತ ನಿನ್ನಯ ಸದ್ಭಕ್ತರ ಶಂಕೆಗಳೆಲ್ಲವನು ಕ್ಷಿಪ್ರದಿ ಕಳೆಯುತ್ತ ಶ್ರೀಹರಿ ನಿನ್ನ ಪಾದ ಪಂಕಜಗಳೆ ಚಿಂತಿಸುವರಿಗೆ ಹರುಷ ನೀಡುತ್ತ ವೈರಿ ನಿನ್ನಯ ವಿಧವಿಧದ ಲೀಲೆಗಳ ತೋರುತ್ತ ಉದಯ ಭಾಸ್ಕರನಂತೆ ಪೊಳೆಯುತ್ತ ಮುದದಿ ಸಿರದಿ ಕಿರೀಟ ಹೊಳೆಯುತ್ತ ಸದಮಲಾತ್ಮಕ ಸತ್ಯಮೂರುತಿ2 ಹೃದ್ಗೋಚರನಾಗು ಪದ್ಮಾನಾಭ ಉದ್ಧರಿಸೆನ್ನನು ಉದ್ಧವಸಖನೆಂದು ನಂಬಿರುವೆ ಮನ್ಮನದ ಭಯಗಳವದ್ದು ಬಿಸುಡುತ ಸಲಹೊ ನರಹರಿಯೆ ಮಮಸ್ವಾಮಿ ನಿನ್ನಯ ಪದ್ಮ- ಪಾದಕೆ ನಮಿಪೆ ಶ್ರೀಹರಿಯೆ ಮೋಹಕ ಬಂಧವ ಬಿಡಿಸಿರಕ್ಷಿಸುತೆನ್ನ ಸಲಹು ಮಾಯಾಪತಿಯೆ ಬಹು ವಿಧದಿ ಪ್ರಾರ್ಥಿಪೆ ತೋಯಜಾಕ್ಷನೆ ತೋರು ನಿನ್ನಯ ಚಾರು ಚರಣಕೆ ಬಾಗಿ ನಮಿಸುವೆ ಕಾಯ್ವುದೆನ್ನನು ಕಮಲನಾಭವಿಠ್ಠಲನೆ ಶ್ರೀಹರಿ ವಾಸುದೇವನೆ 3
--------------
ನಿಡಗುರುಕಿ ಜೀವೂಬಾಯಿ