ಒಟ್ಟು 179 ಕಡೆಗಳಲ್ಲಿ , 60 ದಾಸರು , 172 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಡೆವ ಬನ್ನಿ ಸಡಗರದಿಂದ ಘುಡಘುಡಿಸಿ ದೃಢವೆಂಬುದು ಕಡುಕಂಬನೆ ಮಾಡಿ ನಡನಡಿಸಿ ನುಡಿ ನಿಜ ವಡನೆ ಪಡಗವ ತಂದು ಜಡದಿಡಸಿ ಜಡದಿಡಸಿ ನವನೀತ ಗಡಬಡಿಸಿ ಗಡಬಡಿಸಿ 1 ಮೀಸಲಮನ ಕೆನೆ ಮೊಸರನೆ ಮಾಡಿ ಶೋಧಿಸಿ ಶೋಧಿಸಿ ವಾಸನೆ ಮೊಸರ ಕರುಣಿಕುಸಕಿರಿದು ಮರ್ದಿನಿ ಮರ್ದಿನಿ ಮೋಸಹೋಗದೆ ದುರಾಶದ ಕಿಲ್ಮಿಷ ಝಾಡಿಸಿ ಝಾಡಿಸಿ ಧ್ಯಾನ ಬಲಿದು ಸುವಾಸನೆಕಳಲ ಕಡೆವದಾರಂಭಿಸಿ 2 ನಾಮದಿವ್ಯಮಂತ್ರÀವ ಕಟ್ಟಿ ವಿಷಮ ಬಿಡಿಸಿ ವಿಷಮಬಿಡಿಸಿ ನೇಮದಿಂದ ಸುಪ್ರೇಮದರವಿಗಿ ಘಮಗುಡಿಸಿ ಘಮಗುಡಿಸಿ ಶಮೆದಮೆವೆಂಬ್ಹಗ್ಗನೆ ಸಮವಿಡಿದು ಧಿಮಿಗುಡಿಸಿ ಧಿಮಿಗುಡಿಸಿ ಶ್ರಮಜನ್ಮದಹರುವ ಕ್ರಮಗೊಂಡಾಹಂಬಿಡಿಸಿ 3 ನಾವು ನೀವೆಂಬ ಹೊಲೆಗುಡತಿಯನ್ಯರೆ ಬಿಡಿಸಿನ್ಯರೆಬಿಡಿಸಿ ಸಾವಧಾನದಲಿ ಅನುಭವಾಮೃತ ನಿಜಕುಡಿಸಿ ನಿಜಕುಡಿಸಿ ನವನೀತ ಝಲ್ಲಿಸಿ ಝಲ್ಲಿಸಿ ಸವಿಸವಿಗೊಂಡು ಸುವಿದ್ಯಸಾರಾಯವ ಅನುಭವಿಸಿ 4 ಕಡವು ಕುಶಲಿ ಒಬ್ಬಳೇ ಬಲುನಿಜಙÁ್ಞನಶಕ್ತಿ ಶಕ್ತಿ ಒಡಗೂಡಲು ನಿಜಬಾಹುದು ಕೈಗೂಡಿ ಸದ್ಗತಿ ಸದ್ಗತಿ ಪಡಕೊಂಡರು ಇದರಿಂದಲಿ ಮುನಿಜನ ವಿಶ್ರಾಂತಿ ವಿಶ್ರಾಂತಿ ಕೊಂಡಾಡಿದ ಅನುಭವಸ್ತುತಿ ಮೂಢಮಹಿಪತಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕದವ ತೆಗೆಯೆ ಸುಂದರಿವಯ್ಯಾರಿ ಮುತ್ತಿನ ಪ ಕಡಲ ಶಯನನೆ ಮಡದಿ ಹರುಷದಿ ಸಡಗರದಿ ಮುಂದಡಿ ಇಡುತ ನಿನ್ನ ಒಡೆಯ ಬಂದಿಹನೆಂದು ಹರುಷದಿ ಬೆಡಗು ಮಾಡದೆ ಬಿಡಿಯ ಮುತ್ತಿನ 1 ಯಾರು ನಿನ್ನಯ ಪೆಸರ ಏನೆಂದು ತಿಳಿಯದೆ ಹೇಗೆ ತೆಗೆಯಲಿ ಕದವಾ ಘೋರ ರಾತ್ರಿಯ ವೇಳೆಯಲಿ ಬಂ- ದೀಗ ಬಾಗಿಲ ಬಡಿಯ ನಿಂದಿರೆ ನಾರಿಯರು ಏನೆಂದು ಕೇಳ್ಪರು ದ್ವಾರ ಬಿಡುಬಿಡುತಲಿ ಸಾಗು ಮುಂದಕೆ2 ತೆಗೆಯಲೊಲ್ಲೆನು ಕದವ ಸಮರಾತ್ರಿ ವೇಳದಿ ರುಕ್ಮನ ಅನುಜೆ ಕೇಳೆ ಪೃಥ್ವಿಯೊಳು ಎನ್ನನು ಚಕ್ರಿ ಎನ್ನುತ ಪೇಳ್ವರೆ ಅರ್ಥಿವಚನಗಳನ್ನು ಕೇಳುತ ಸತ್ವರದಿ ನೀ ಬಂದು ಮುಂದಕೆ ಮುತ್ತಿನ ಕದತೆಗೆದು ಬೇಗನೆ ರತ್ನ ಪೀಠದಿ ಕುಳ್ಳಿರಿಸೆ ಹೊಸ ಮುತ್ತಿನರಗಿಣಿ ಸತ್ಯವಾಣಿಯೆ3 ಕೇಳಿ ಹರ್ಷಿತನಾದೆನು ನಿನ್ನಯ ಮಾತ ಕೇಳಿ ನಗುವರು ಜನರು ಹೇಳಿ ಕೇಳುವರಿಲ್ಲ ನಿನ್ನ ಮನಸಾರ ಮಾತುಗಳಾಡಲೇತಕೆ ಕು- ಲಾಲ ಭವನವಿದಲ್ಲ ಸುಮ್ಮನೆ ಹೇಳ ಕೇಳದೆ ಹೊರಡು ಮುಂದಕೆ 4 ಹೀಗೆ ನುಡಿಯುವದೇತಕೆ ಈಗೆನ್ನ ಮಾತಿಗೆ ಬೇಗದಿ ತೆಗೆ ಕದವ ನಾಗವೇಣಿಯೆ ನಗುತ ಪೇಳುವೆ ಬೇಗದಲಿ ಇನ್ನೊಂದು ನಾಮವ ಈಗ ಧರಣಿಧರನು ಬಂದಿಹೆ ಸಾಗರನ ಸುತೆ ಸರ್ಪವೇಣಿಯೆ 5 ಧರಣೀಧರ ನೀನಾದರೆ ಈ ಧರೆಯನೆಲ್ಲವ ಸಿರದ ಮೇಲಿರಿಸುವೆಯ ಸರ್ವ ಜನರಿಗೆ ಭಯವ ಪಡಿಸುವ ಉರಗರಾಜ ನೀನೆಂದು ತಿಳಿದೆನು ಇರುತ ಸರ್ಪಗಳೊಳಗೆ ನೀ ಬಲು ಹರುಷದಿಂದಲಿ ಸಾಗುಮುಂದಕೆ6 ಹರಿಣಾಕ್ಷಿ ಕೇಳೆ ನೀನು ಎನ್ನನು ಜನರು ಹರಿಯೆಂದು ಕರಿಯುವರು ಕರೆ ಕರೆಯ ಮಾಡದಲೆ ಬೇಗನೆ ವರ ಕನಕ ಕದ ತೆಗೆದು ಸುಮ್ಮನೆ ಇರಿಸು ಸುಖ ಸಾಮ್ರಾಜ್ಯ ಪೀಠವ ಹರುಷದಿಂ ಕುಳಿತೆಲ್ಲ ಪೇಳುವೆ 7 ಕೋತಿ ನೀನಹುದಾದರೆ ಮಾತುಗಳ್ಯಾಕೆ ಜಾತಿ ಕಪಿಗಳ ಕೂಡುತ ಪ್ರೀತಿಯಿಂದಲಿ ಮನಕೆ ಬಂದೆಡೆ ನೀತೆರಳುತಲಿ ಪೋಗು ಮುಂದಕೆ ಕೋತಿಗಳ ಗುಂಪಿದಲ್ಲ ತಿಳಿಮಹ- ರೂಪವತಿಯರಿರುವ ಸ್ಥಳವಿದು 8 ಪ್ರೀತಿಸತಿಯೆ ನೀ ಕೇಳೆ ನಿನ್ನೊಳು ಬಹು ಪ್ರೀತಿಯಿಂದಲಿ ಬಂದೆನು ಶ್ರೀಶನ ನುಡಿಕೇಳಿ ರುಕ್ಮಿಣಿ ಆತುರದಿ ಬಾಗಿಲನೆ ತೆಗೆಯುತ ನಾಥ ಕಮಲನಾಭ ವಿಠ್ಠಲನಿಗೆ ತಾನಮಿಸಿ ವಂದಿಸುತ ಭಕುತಿಯಲಿ ಬಾಗಿಲು ತೆಗೆದಳಾಗ ಭಕುತಿಯಲಿ ಶ್ರೀಶಗೆ ಬಾಗಿಲು ತೆಗೆದಳಾಗ9
--------------
ನಿಡಗುರುಕಿ ಜೀವೂಬಾಯಿ
ಕನಸು ಕಂಡೆನು ನಾನು ಸಂತೋಷದಿ| ಕನಸು ಕಂಡೆನು ನಾನು ಅರನಿಮಿಷದೊಳು ಹರಿಯ ಮನಸಿನಲಿ ಸ್ಮರಿಸಿ ಮಹಾರೂಪವನು ಕೂಡ ಪ ವೆಂಕಟರಮಣನ ಯಾತ್ರೆಗೆ ಹೋದ್ಹಾಗೆ ಶಂಕೆ ಇಲ್ಲದೆ ಪರಶಿಜನಕ ಕಂಡ್ಹಾಗೆ ಬಿಂಕದಿಂದಲಿ ದೇವಸ್ಥಾನ ಪವಳಿಯ ಸುತ್ತ ಅಂಕುರಾರ್ಪಣ ಧ್ವಜಸ್ತಂಭದಲಿ ನಿಂತ್ಹಾಗೆ 1 ಅಡಗಿ ಶಾಲೆಯ ಅನ್ನಪೂರ್ಣೆಯನ್ನು ಕಂಡ್ಹಾಗೆ ದೃಢದಿ ಶ್ರೀನಿವಾಸ ದೇವರ ನೋಡಿದ್ಹಾಗೆ ಕಡು ಹರುಷದಲಿ ತೊಟ್ಲ ತೀರ್ಥ ಸೇವಿಸದ್ಹಾಗೆ ಸಡಗರದ ಮಧ್ಯರಂಗದಲಿ ನಿಂತ್ಹಾಗೆ 2 ಶಿರzಲ್ಲಿ ಕಿರೀಟ ಲಲಾಟ ತಿಲಕ ವಿಟ್ಟ್ಹಾಗೆ ಕೊರಳೊಳ್ ಮುತ್ತೀನಹಾರ ಪದಕ ತೋರಿದ ಹಾಗೆ ಕರದಲ್ಲಿ ಶಂಖಚಕ್ರ ಧರಿಸಿ ಕೊಂಡಿರುವ ಹಾಗೆ ಉರದಲ್ಲಿ ಶಿರಿಲಕುಮಿ ವಾಸವಿದ್ಹಾಗೆ 3 ಹೊನ್ನ ಹೊಸ್ತಿಲ ದಾಟಿ ವಳಗ್ಹೋಗಿ ನಿಂತ್ಹಾಗೆ ಚಿನ್ಮಯನ ರೂಪವನು ಚಿಂತಿಸಿದ ಹಾಗೆ ಅನ್ನ ಪ್ರಸಾದಾತಿ ರಸದÉೂೀಶಿ ಕೊಟ್ಹಾಗೆ ಪನ್ನ ಗಾದ್ರಿ ವಾಸನ ಕಣ್ಣಿಂದ ನೋಡಿದ್ಹಾಗೆ 4 ನಡುವಿನಲಿ ಒಡ್ಯಾಣ ಪೀತಾಂಬರವನುಟ್ಹಾಗೆ ಯಡಬಲದಿ ಜಯು ವಿಜಯ ನಿಂತಿರೋಹಾಗೆ ಪೊಡವಿಯೊಳ್ 'ಹೆನ್ನೆವಿಠ್ಠಲ’ ವೆಂಕಟೇಶನ್ನ ಕಡು ಹರುಷದಲಿ ಕಂಡು ಕೈಮುಗಿದು ನಿಂತ್ಹಾಗೆ 5
--------------
ಹೆನ್ನೆರಂಗದಾಸರು
ಕರದಿಂದ ಅಲುಗಿಸುತರುಹುವಳೂ ಪ ನರರು ತವ ದ್ವಾರದಲಿ ತಮ್ಮಯ | ಭರದಿ ನಿದ್ದೆಯ ತ್ಯಜಿಸುತೇಳೆಂದು ಅ ನೇಕೆ ಮಲಗಿಹೆ ಏಳು ಎನ್ನುತ 1 ಸಡಗರ ನೀ ನೋಡು ಎನ್ನುತ2 ಬಾತುರದಿ ಚಿಲಿಪಿಲಿಯ ಗುಟ್ಟುತ್ತಾ ತಿನಿಸನ್ನು ತಹೆವೆಂದು | ಪ್ರೀತಿಯಿಂದಲಿ ಅರುಹಿ ಪಕ್ಕವ ರ್ಭೀತ ಪಾವಂಜೇಶ ಎನ್ನುತ 3
--------------
ಬೆಳ್ಳೆ ದಾಸಪ್ಪಯ್ಯ
ಕರಿಮುಖದ ಗಣಪತಿಯ ಚರಣಕ್ವಂದನೆ ಮಾಡಿ ಶಾರದೆಗೆ ಶಿರಬಾಗಿ ಬೇಡಿಕೊಂಬುವೆ ನಾನು ಒಲಿದೆನಗೆ ವರವ ಕೊಡುಯೆಂದು 1 ಭವ ನಾರಂದ ಸುಜನರ್ವಂದಿತ ವಾಯು ಮುದದಿಂದ ಮುದ್ದು ಮಾಲಕ್ಷ್ಮಿ ನಾರಾಯಣರ ಅಂಬುಜ ಪಾದಕ್ಕೆರಗಿ ನಮೋಯೆಂಬೆ 2 ಪದುಮನಾಭ ಹರಿಗೆ ನಿಜ ಭಕ್ತರಾದಂಥ ಬುಧ ಬೃಹಸ್ಪತಿಗಳ ಕಥೆಯ ಪೇಳುವೆ ನಾನು ಮುದದಿಂದ ಕೇಳಿ ಜನರೆಲ್ಲ3 ಇರುತಿದ್ದ ಬಡವ ಬ್ರಾಹ್ಮಣ ಒಂದು ಪಟ್ಟಣದಿ ಮಡದಿ ಮಕ್ಕಳು ನಾಲ್ಕು ಮಂದಿ ಸುತರು ಸೊಸೆಯರೊಡಗೂಡಿಕೊಂಡು ಸುಖದಿಂದ 4 ಒಬ್ಬೊಬ್ಬ ಸುತಗಿಬ್ಬಿಬ್ಬರು ಗಂಡಸು ಮಕ್ಕಳು ವಿಧ್ಯುಕ್ತದಿಂದ ಜಾವಳ ಜುಟ್ಟು ಉಪನಯನ ಶುದ್ಧಾತ್ಮರಾಗಿ ಇರುತಿಹರು 5 ಪ್ರಾತಃಕಾಲದೊಳೆದ್ದು ನಾಲ್ಕು ಮಂದಿ ಸುತರು ಗೋಪಾಳ ಜೋಳ ನಾಲ್ಕು ಸೇರು ಕಾಳು ತಂದ್ಹಾಕೋರು ಅರ್ಧಗ್ರಾಸವನು 6 ಮೂರು ಪಾವು ಹಿಟ್ಟು ಮುಂಜಾನೆಗೆ ಇಟ್ಟು ಗ್ರಾಸ ಮುದ್ದೆ ಅಂಬಲಿ ಕಾಲ ಕಳೆವೋರು 7 ಒಂದಾನೊಂದಿನದಲ್ಲಿ ಬಂದರಿಬ್ಬರು ದ್ವಿಜರು ಮಂದಿರದ ದ್ವಾರದಲಿ ನಿಂತು ಕೂಗುತಿರೆ ಬಂದಳೊಬ್ಬಿ ್ಹರಿಯ ಸೊಸೆ ತಾನು 8 ದಾರು ಬಂದವರು ನಿಮ್ಮ ನಾಮವೇನೆಂದೆನುತ ಬಾಗಿ ಶಿರಗಳನೆ ಚರಣಕ್ವಂದನೆ ಮಾಡಿ ಭಾಳ ಭಕ್ತಿಂದ ಕರೆದಳು 9 ದಾರಾದರೇನಮ್ಮ ಬಾಯಾರಿ ಬಳಲುತಲಿ ಮೂರು ನಿರಾಹಾರ ಮಾಡಿ ಬಂದೆವು ನಾವು ಆಹಾರ ನೀಡಿ ಕಳಿಸೆಂದ್ರು 10 ಭಿಕ್ಷಕೆ ಹೋದವರು ಈ ಕ್ಷಣದಿ ಬರುವೋರು ಅರೆಕ್ಷಣ ನೀವು ತಡೆದರೆ ಜೋಳದ ಭಕ್ಷ್ಯವನೆ ಮಾಡಿ ಬಡಿಸುವೆನು 11 ಹೊತ್ತು ಭಾಳಾಯಿತು ಹಸ್ತವು ನಮ್ಮೊ ್ಹಟ್ಟೆ ತುತ್ತನ್ನ ಹಾಕಿದರೆ ಈಗ ನಾವದನುಂಡು ತೃಪ್ತರಾಗ್ಹರಸಿ ನಡೆದೇವು 12 ಮಡಿವುಟ್ಟು ಮಾಡಿದೆನು ಮುಂಜಿಮನೆಗಳಿಗಡಿಗೆ ತಡೆಯದೆ ಸ್ನಾನಮಾಡಿ ಬನ್ನಿರೆಂದು ನುಡಿದಳು ಬ್ಯಾಗ ಪತಿವ್ರತೆ 13 ನಾಲ್ಕು ಭಕ್ಕರಿಯೊಳಗೆ ಎಂಟರ್ಧವನು ಮಾಡಿ ಎಂಟುಮಕ್ಕಳಿಗೆ ಬಡಿಸೋ ಗ್ರಾಸವನು ಸಂತೋಷದಿಂದ ಬಡಿಸುವೆನು 14 ಸ್ನಾನ ಸಂಧ್ಯಾನವ ಮಾಡಿ ಬಂದೇವೆನಲು ತಾನು ಎಡೆಮಾಡಿ ಎರಡೆರಡು ಭಕ್ಕರಿಯ ನೀಡಿದಳು ಭಾಳ ಭಕ್ತಿಂದೆ 15 ಬೆಣ್ಣೆ ಬೆಲ್ಲ ತುಪ್ಪ ಕರಣೆ ಕರಣೆ ಕೆನೆಮೊಸರು ನುಣ್ಣನೆ ತವ್ವೆ ಅರೆದಕೊಬ್ಬರಿ ಖಾರ ಉಣ್ಣಿರೆಂದ್ಹಾಕುತಿರಲಾಗ 16 ಸಡಗರದಲದನುಂಡು ಕುಡಿದು ಮ್ಯಾಲ್ ಮಜ್ಜಿಗೆಯ ಒಡೆದಡಿಕೆಯೆಲೆ ಕೊಟ್ಟು ಕೇಳುತ ನಿಮ್ಮ ನಡೆವೊ ನಾಮೇನು ಹೇಳೆಂದ್ಲು 17 ಇಂದುಸುತ ಸುರರ ಗುರುವೆಂದು ಪೇಳುವರ್ ನಮಗೆ ಬಂದೆವು ನಾವು ಬುಧ ಬೃಹಸ್ಪತಿಗಳು ಆ- ನಂದವಾಯಿತು ನಮಗೆಂದ್ರು 18 ಅನ್ನ ಬೇಕಾದರೆ ಅಡಿಗೆ ಒಲೆಗೋಡೆಯಲಿ ನ- ಮ್ಮನ್ನ ಬರೆದು ಪೂಜೆ ಮಾಡಿದರೀಗ ಅನ್ನವನು ನಾವು ಕೊಡುವೆವು 19 ಭಾಗ್ಯ ಬೇಕಾದರೆ ಬರೆದು ಪೆಟ್ಟಿಗೆಮ್ಯಾಲೆ ಭಾಳ ಭಕ್ತಿಂದ ಪೂಜೆ ಮಾಡಿದರೆ ಭಾಗ್ಯ ಕೊಡುವೆವೆಂದ್ಹೇಳಿ ನಡೆದರು 20 ಸುಣ್ಣಸಾರಣೆಮಾಡಿ ಬಣ್ಣ ಚಿತ್ರವ ಬರೆದು ಚೆನ್ನಾಗಿ ಬರೆದು ಬುಧ ಬೃಹಸ್ಪತಿಗಳನೆ ಮನ್ನಿಸಿ ಪೂಜಿಸಿದಳಾಗ 21 ಹಚ್ಚಿಟ್ಟು ಗಂಧಾಕ್ಷತೆ ಪುಷ್ಪಗಳ ಉತ್ರಾಣಿ ಅಕ್ಕಿ ಮಂತ್ರಾಕ್ಷತೆ ಮಾಡಿ ಭಕ್ತಿಂದೆ ಪೂಜಿಸಿದಳಾಗ 22 ಗೋಪಾಳಕ್ಕ್ಹೋದಲ್ಲಿ ಗೋಧಿ ಅಕ್ಕಿ ಬ್ಯಾಳೆ ಹಾಕುವರು ನಾಲ್ಕು ಬೀದಿಯಲಿ ಅದು ಗಂಟು ತಾವ್‍ಕಟ್ಟಿ ಹೊತ್ತರ್ಹೆಗಲಲ್ಲಿ 23 ಹಿಡಿಜೋಳ ಬೇಡಿದರೆ ಪಡಿಜೋಳ ಹಾಕುವರು ಬಡವರು ನೀವು ಬನ್ನಿರೆಂದು ಕರೆದು ಹಿಡಿಹಿಡಿ ರೊಕ್ಕ ಕೊಡುವೋರು 24 ಭರದಿಂದ ಬಂದಾಗ ಸುರುವಿದರು ಧಾನ್ಯವನು ಬರೆದಂಥ ಗೊಂಬೆ ನೋಡಿ ಕೇಳುತ ಅದರ ವಿವರವನು ಹೇಳಬೇಕೆನುತ 25 ಇವರು ಬುಧ ಬೃಹಸ್ಪತಿಗಳೆಂಬೊ ದೇವತೆಗಳು ಇವರು ಬಂದೆನ್ನ ಮನೆಯಲ್ಲೂಟವನುಂಡು ಒಲಿದ್ವರವ ಕೊಟ್ಟು ನಡೆದರು26 ಇಂಥÀವರ ಪುಣ್ಯದಿಂದೀ ಧಾನ್ಯ ದೊರಕಿದವು ನಿ ರಂತರದಿ ನಮ್ಮ ಮನೆಯಲ್ಲಿಟ್ಟವರನು ಸಂತೋಷದಲಿ ಪೂಜಿಸುವಣೆಂದ್ರು 27 ಭಾಳ ಅನ್ನವ ಮಾಡು ಜೋಳ ಭಕ್ಕರಿ ಮಾಡು ಬ್ಯಾಳೆಯ ತವ್ವೆ ಬೆಲ್ಲ ಪಲ್ಯವು ಬೆಣ್ಣೆ ಮಾಡಿ ನೈವೇದ್ಯಕ್ಕಿಡುಯೆಂದ್ರು&ಟಿbs
--------------
ಹರಪನಹಳ್ಳಿಭೀಮವ್ವ
ಕಾಣಿಸುವೆ ನಿಜವಾಗಿ ಚನ್ನಕೇಶವನ ಪ ಸಡಗರದಿ ನಿಂತಿಹನು ವರ ದೂರ್ವಾಪುರದಲ್ಲಿ ಪೊಡವಿಯೊಳು ದಾಸರಿಗೆ ವಲಿಯಬೇಕೆಂದು ಬಿಡದೆ ನೋಡಿರಿ ಹರಿಯ ಕಾಯಕಾಂತಿಯ ನೀಗ ಕಡು ಶ್ಯಾಮ ವರ್ಣದಲಿ ಯೆಸೆಯತ್ತಲಿಹುದು 1 ಮೇಲಿನ ಬಲ ಹಸ್ತದಲ್ಲಿ ಶಂಖವ ನೋಡು ಕೆಳಗಿನ ಬಲ ಹಸ್ತದಲ್ಲಿ ಪದ್ಮವನೂ ಮೇಲಿನ ಯಡ ಹಸ್ತದಲ್ಲಿ ಚಕ್ರವ ನೋಡು ಕೆಳಗಿನ ಯಡ ಹಸ್ತದಲ್ಲಿ ಗದೆಯನ್ನೂ 2 ಸೊಂಟದಲಿ ವಡ್ಯಾಣ ಕಿರುಗೆಜ್ಜೆಗಳ ನೋಡು ಕಂಠದಲಿ ಹಲವು ವಿಧದಾಭರಣಗಳನೂ ಕೌಸ್ತುಭ ನೋಡು ಬಂಟರನು ಸಲಹುವ ಪಾದಯುಗ್ಮವನೂ 3 ಸೂರ್ಯ ಚಂದ್ರಮಂತೆ ಇಳೆಯೊಳಗೆ ರಮಣೀಯವಾಗಿ ಶೋಭಿವವು ಬಲಯಡದ ಶ್ರೋತೃಗಳ ಕುಂಡಲವ ನೋಡು 4 ಉದರ ಮಧ್ಯದೊಳಿಪ್ಪ ನಾಭಿಕಮಲವ ನೋಡು ಮದನಪಿತ ಶ್ರೀಹರಿಯ ತುಲಸಿ ಮಾಲೆಯನೂ ಸದನ ಪೀಠವನುಟ್ಟ ಪಿಂತಾಂಬರವÀ ನೋಡು ಮೃದು ಪಣೆಯೊಳಿಟ್ಟಿರುವ ಶ್ರೇಷ್ಠ ತಿಲಕವನೂ 5 ಚಿನ್ಮಯ ರೂಪವ ಮೌಕ್ತಿಕದ ಸರಗಳನು ಕಂಣಿಗೆಯುವ ಪುಷ್ಪಮಾಲೆಗಳ ನೋಡು ಸನ್ನುತನು ಭಕ್ತರನು ಪೊರೆವ ಮೂರ್ತಿಯ ಬಿಡದೆ ಮನ್ನಿಸುತ ಭಜಕರನು ಕಾವ ರಂಗನನೂ 6
--------------
ಕರ್ಕಿ ಕೇಶವದಾಸ
ಕಾಮನ ಪಿತ ಕೃಷ್ಣ ಕಾಮಿನಿಯಾದನು ಕಾಮನ ಪಿತ ಕೃಷ್ಣ ಕಾಮಿನಿ ಆಗುವೊ ಕಾರಣ ಕೇಳಿರಿ ಕಾಮಿಸಿ ಶ್ರೀಹರಿ ಆ ಮಹಾಸುರರಿಗೆ ಸುಧೆಯನ್ಹಂಚುಣಿಸಲು ಶ್ರೀ ಮಾಯಾಪತಿಯು ತಾ ಸ್ತ್ರೀಯಾದ ಚೆಲುವಿಕೆ ಪ ರುಳಿ ಲುಲ್ಲು ಗೆಜ್ಜೆ ಪೈಜಣ ಪಾಗಡವನಿಟ್ಟು ಚರಣದಿ ಕಾಲುಂಗರ ಪಿಲ್ಯ ಮೆಂಟಿಕೆ ಝಣ ಝಣ ನಾದ ಕಾಳಿಯ ಫಣ ತುಳಿದಂಥ ಖಳರ ಮರ್ದನ ದಿವ್ಯ ತರುಣಿ ತಾನಾದನು 1 ಸೆರಗು ನಿರಿಯು ಜರತಾರಿ ಪೀತಾಂಬರ ಬಿಡಿ ಮುತ್ತಿನುಡಿಗಂಟೆ ನಡುವಿನ್ವೊಡ್ಯಾಣ ಸಡಗರದಿಂದ್ವೊಪ್ಪೊ ತಾಳಿ ಪದಕವಿಟ್ಟು ಮೃಡನ ಪ್ರಿಯನು ಮುದ್ದು ಮಡದಿ ತಾನಾದನು 2 ಕಂಚುಕ ತೋಳಿನಲ್ವಂಕಿ ಬÁಜುಬಂದು ಮಿಂಚಿನಂದದಿ ನಲಿದಾಡುತ ಗೊಂಡ್ಯವು ಕಂಕಣ ತೋಡ್ಯ ವಜ್ರದ್ವಾರ್ಯ ಹರಡಿಯು ಪಂಚ ಬೆರಳಿನಲ್ಲುಂಗುರವನಿಟ್ಟು ಸೊಬಗಲಿ 3 ಚಿಂತಾಕು ಸರಿಗೆ ಚಿನ್ನದ ಗುಂಡು ಹವಳವು ಕೆಂಪು ಏಕಾವಳಿ ಮಲಕು ತಾಯಿತ ಮುತ್ತು ಮಿಂಚುವೋ ಪದಕ ಮುತ್ತಿನ ಕಟ್ಟಾಣಿಯು ಪಂಚರತ್ನದ ಹಾರ ಪರಮಾತ್ಮಗಲೆಯುತ4 ಉಂಗುರ ಕೂದಲು ಶೃಂಗಾರ ಕ್ಯಾದಿಗೆ ಚಂದ್ರ ಚೌರಿ ಜಡೆಬಂಗಾರ ರಾಗಟೆ ಮುಂದೆ ಮುತ್ತಿನದಂಡೆ ಮುಡಿಯಲ್ಲೆ ಒಪ್ಪಿದ ದುಂಡು ಮಲ್ಲಿಗೆ ದÉೂೀಷದೂರನಿಗಲೆವುತ 5 ವಾಲೆ ಬುಗುಡಿ ಬಾಳ್ಯ ಚಳತುಂಬು ಚಂದ್ರ ಮುರುವು ಚಿನ್ನದ ಕಡ್ಡಿ ಕಿವಿಯಲ್ಲಿ ಕುಂದಣ ಕುಸುರು ವಜ್ರಗಳು ಕೆಂಪ್ಹೊಳೆವಂಥ ದುಂಡು ಮುತ್ತಿನ ಮುಕುರ್ಯವ ಮೂಗಿನಲ್ಲಿಟ್ಟು 6 ಅಚ್ಚ ಮುತ್ತಿನ ದಂಡೆ ಕುಚ್ಚು ತೊಂಡಿಲುಗಳು ಹಚ್ಚೆಯ ಬೊಟ್ಟು ಕಸ್ತೂರಿ ಕುಂಕುಮನಿಟ್ಟು ಪಚ್ಚೆ ಮಾಣಿಕ್ಯದರಳೆಲೆ ಚಂದ್ರ ಸೂರ್ಯರು ನಿತ್ಯ ತೃಪ್ತನು ನೀಲವರ್ಣದಂತ್ಹೊಳೆಯುತ 7 ಆ ಮಹಾವೈಕುಂಠಪುರದರಸಾದ ಈ ಮಹಾ ರಜತ- ಪೀಠ ಪುರದಲಿ ಬಂದು ಪ್ರೇಮದಿ ನಿಂತು ನೋಡುತ ಬಂದ ಜನರಿಗೆ ಕಾಮಿತ ಫÀಲ ಮುಕ್ತಿ ಕೊಡುವ ಕಮಲಾಪತಿ 8 ಅಷ್ಟಯತಿಗಳಿಂದಲಿ ಪೂಜೆಯಗೊಂಬೊ ಲಕ್ಷ್ಮಿಯ ಪತಿಯು ಸ್ತ್ರೀರೂಪವ ಧರಿಸಿರೆ ದೃಷ್ಟಿಂದೆ ನೋಡದಿನ್ನಿರುವೋರೆ ಭೀಮೇಶ- ಕೃಷ್ಣ ನಿನ್ನ ಮನದಲ್ಲಿಟ್ಟು ಸ್ತುತಿಸುವೆನು 9
--------------
ಹರಪನಹಳ್ಳಿಭೀಮವ್ವ
ಕಿಂಕರನು ನಾನೊಂದು ಬಿನ್ನಪವ ಪ ಶಂಕೆಯನು ಪರಿಹರಿಸೊ ಕರುಣದಿ ಅ.ಪ ನೆರೆದು ಪಾಲಿಪುದೆನ್ನ ಮುದದಲಿ 1 ಸಡಗರದಿ ಕೊಡು ಜಡಜಲೋಚನ 2 ಒಡೆಯ ನೀನೆ ಗತಿ ಸದಾನಂದ 3
--------------
ಸದಾನಂದರು
ಕೃಷ್ಣನು ನೆಲಸಿರಲು ನಾಕದ ಸಿರಿಯ ನಿರಾಕರಿಸುವ ಸಿರಿತಾಹರ್ಷದೊಳು1 ಮೋಹಿಸಿ ಮನದಿ ಪತಿ ಭಾವದಿ ನೋಡುತ ಭರದಿ 2 ಕಾಮಿಸಿ ಕಾಡಲು ಕಾಕುತ್ಸ್ಥನು ಬಲರಾಮ ಸಹಜನವತಾರದಲಿ ಕಾಮಿತವಹದೆನೆ ಕಾಮಿನಿ ರಾಧಾ ನಾಮದಿ ಜನಿಸಿರೆ ಗೋಕುಲದಿ 3 ಒಂದಾನೊಂದಿನ ನಂದಾದಿಗಳಾ ನಂದಾನ್ವಿತಮತಿ ವೃತ್ತಿಯಲಿ ಒಂದಾಗಿ ಧರಾ ವೃಂದಾರಕರನುವಿಂದಾರಾಧಿಪ ಭಕ್ತಿಯಲಿ 4 ಬಂದರು ವರಕಾಳಿಂದಿಯ ತೀರದಿ ನಂದನದಂತಿಹ ವನದೆಡೆಗೆ ಮುಕುಂದನ ಧ್ಯಾನಿಸುತಡಿಗಡಿಗೆ 5 ಗೋಧನ ದಾನದಲ್ಲಿ ಬಲ್ಲಿದ ಭೋಜನದಲ್ಲಿ ದಣಿಸಿ ಸುಖದಲ್ಲಿರುತಿರಲಾಸಮಯದಲಿ 6 ಸುಜನ ಸ್ತುತದಿನಕರ ನೈದಿರಲು ನಿಸ್ತುಲತಮದಿ ಸಮಸ್ತರದೃಷ್ಟಿಗಳಸ್ತಗೊಳಿಸೆ ಜನಭಯಗೊಳಲು 7 ರಾಧೆಯತಾನೋಡಿ ಕಂದನ ನೀನೇ ಮಂದಿರಕೈದಿಸು ಎಂದರೆ ಬಂದಳು ನಗೆಗೂಡಿ 8 ಬಾ ಕಮಲಾಸನನ ತೊರುವೆ ಶಶಿವದನಾ 9 ನೀನೊಲಿದುದನು ಬೇಡನಿನ್ನನೆ ಕೂಡಿಹೆನು 10 ತನ್ನಯಮನದೊಳಗೆ ಚರಿತ್ರನು ಕಾಮಿನಿಗೆ11 ಬಲು ಸಡಗರದಿ ವೃತ್ತಕುಚಗಳಿಂದೊತ್ತಿಮನೊಭವನರ್ಥಿಗೆ ಸೊಕ್ಕುವ ಕಾತರದಿ 12 ಕರುಣನಾದೊಡೀಗಲೇ ಬೆರೆದು ಬರುತಿರ್ದಳು ನಲಿದು 13
--------------
ಸರಗೂರು ವೆಂಕಟವರದಾರ್ಯರು
ಕೊಡು ಸುಖವ ಜಗಪಾಲಯ ಒಡೆಯ ವೈಕುಂಠದಾಲಯ ಪ ಕೊಡು ಸುಖ ನಿಮ್ಮಯ ಅಡಿಯದಾಸರ ಸೇವೆ ಸಡಗರ ಸಂಪದ ಎಡೆಬಿಡದೆ ಅ.ಪ ಜಡಮತಿಯನು ಕೆಡಿಸಿ ಜಡದೇಹಮೋಹ ಬಿಡಿಸಿ ಜಡಭವತೊಡರನು ಕಡೆಹಾಯ್ಸಿ ಅಡಿಗಡಿಗೆ ನಿನ್ನಡಿದೃಢ ಭಕುತಿ 1 ಸಾಗರಸಂಸಾರಭೋಗದ ಬಲುಘೋರ ನೀಗಿಸಿ ನಿಜಜ್ಞಾನ ಪಾಲಿಸಿ ಬೇಗನೆ ನೀಡು ತವದರುಶನವ 2 ಮನಸಿನ ಹರಿದಾಟ ಘನಘನ ದುಶ್ಚಟ ವನು ಪರಿಹರಿಸಿ ದಯಮಾಡು ಮನಶಾಂತಿ ಸದುಗುಣವ 3 ತನುತ್ರಯದಲಿ ನಿನ್ನ ನೆನಹನು ನಿಲಿಸೆನ್ನ ಬಿನುಗು ತ್ರಿದೋಷ ದೂರಮಾಡಿ ಜನನ ಮರಣಂಗಳ ಗೆಲಿಸಭವ 4 ಭೂಮಿಯೊಳಧಿಕೆನಿಪ ಸ್ವಾಮಿ ಶ್ರೀರಾಮಭೂಪ ನೇಮದಿ ಬೇಡುವೆ ವರ ನೀಡು ಆ ಮಹಕೈವಲ್ಯ ಪದವಿಯ 5
--------------
ರಾಮದಾಸರು
ಗಂಗಾ ಭಾಗೀರಥೀ ಮಂಗಳಾಂಗಿ ಅಳಕನಂದನ ನೀ ಮಹಾ ಸುಂದರಾಂಗಿ ಸಿಂಧುರಾಜನ ರಾಣಿ ಸಿರಿಯು ಸಂಪತ್ತು ಕೊಡು ಕಂಗಳಿಂದಲಿ ನೋಡಿ ಕರುಣಿಸೆನ್ನ ಪ ಕಾಶಿ ಪಟ್ಟಣದಲಿ ವಾಸವಾಗಿ ಸರಸ್ವತಿಯನು ಕೂಡಿ ನೀ ಸರಸವಾಗಿ ಸೋಸಿಲಿಂದಲಿ ಸೂರ್ಯಪುತ್ರಿ ಯಮುನೆಯನು ಕೂಡಿ ಉ- ಲ್ಲಾಸದಿದ್ಹರಿದು ವಾರ್ಣಾಸಿಗ್ಹೋಗಿ 1 ಹಾಲಿನಂತೆ ಹರಿವೊ ಗಂಗೆ ನೀನು ನೀಲದಂತಿದ್ದ ಯಮುನೆಯನು ಕೂಡಿ ಲೀಲೆಯಿಂದಲಿ ಸರಸ್ವತಿಯನು ಕೂಡಿ ಓಲ್ಯಾಡುತ ಬಂದೆ ಒಯ್ಯಾರದಿಂದ 2 ಭಗೀರಥನ ಹಿಂದೆ ನೀ ಬಂದೆ ಓಡಿ ಸಗರನ ಸುತರ ಉದ್ಧಾರ ಮಾಡಿ ಜಗವ ಪಾವನ ಮಾಡೋ ಜಾಹ್ನವಿಯೆ ನೀ ಎನ್ನ ಮಗುವೆಂದು ಮುಂದಕೆ ಕರೆಯೆ ತಾಯಿ 3 ಬಿಂದುಮಾಧವ ವೇಣುಮಾಧವನ್ನ ಆ- ನಂದ ಭೈರವ ಕಾಳ ಭೈರವನ್ನ ಚಂದದಿಂದ್ವಿಶ್ವನಾಥನ್ನ ಗುಡಿಮುಂದೆ ಹೊಂದಿ ಹರಿದ್ಹನುಮಂತ ಘಾಟಿನ್ಹಿಂದೆ 4 ಪೊಡವಿ ಮ್ಯಾಲಿಂಥ ಸಡಗರದಿ ಹರಿದು ಕಡಲಶಯನನ್ನ ಕಾಲುಂಗುಷ್ಠದ ಮಗಳು ಕಡಲರಾಣಿಯೆ ಕಯ್ಯ ಪಿಡಿಯೆ ನೀನು 5 ಮರದ ಬಾಗಿಣ ಕುಂಕುಮರಿಷಿಣವು ಗಂಧ ಪರಿಪರಿಯಿಂದ ಪೂಜೆಯಗೊಂಬುವಿ ಸ್ಥಿರವಾದ ಮುತ್ತೈದೆತನ ಜನುಮ ಜನುಮಕ್ಕು ವರವ ಕೊಟ್ಟು ವೈಕುಂಠವನು ತೋರಿಸೆ 6 ಮಧ್ಯಾಹ್ನದಲಿ ಮಲಕರ್ಣಿಕೆಯ ಸ್ನಾನ ಶುದ್ಧವಾಗಿ ಪಂಚಗಂಗೆಯಲಿ ಭವ ಸ- ಮುದ್ರವನು ದಾಟಿಸೆ ಭಾಗೀರಥಿ 7 ಸುಕೃತ ಒದಗಿತೆಂದು ಗಂಗ ಭೆÀಟ್ಟಿಯಾಗೊ ಪುಣ್ಯ ಬಂದಿತಿಂದು ಚಕ್ರತೀರ್ಥದ ಸ್ನಾನ ಸಂಕಲ್ಪದ ಫಲವ ಕೊಟ್ಟು ರಕ್ಷಿಸು ತಾಯಿ ತರಂಗಿಣಿ 8 ಸಾಸಿರ ಮುಖದಿ ಶರಧಿಯನು ಕೂಡಿ ಹೋಗಿ ಬಾ ಊರಿಗೆ ಭಕ್ತಿಮುಕ್ತಿ ನೀಡಿ ನೀನು ಭೀಮೇಶ ಕೃಷ್ಣನಲಿ ಹುಟ್ಟಿದ್ದು ಪಾದವನು ತೋರೆನ್ನ ಪೊರೆಯಬೇಕೆ 9
--------------
ಹರಪನಹಳ್ಳಿಭೀಮವ್ವ
ಗರುವವು ನಿನಗ್ಯಾಕೆಲೋ ಎಲೋ ಜರ ನಾಚಿಕೆ ಬಾರದೇನೆಲೋ ಎಲೋ ಪ ಮರುಳನೆ ನಿನಗೀಪರಿ ಗರುವ್ಯಾತಕೋ ಅರಿತು ನೋಡ್ಹಿರಿಯರನೆಲೋ ಎಲೋ ಅ.ಪ ಘನತೆಲೊಸಿಷ್ಠನೇನೆಲೋ ಎಲೋ ಜನಕ ಭಾಗ್ಯದೊಳೆಲೋ ಎಲೋ ಮನುಗಳಲ್ವ್ಯಾಸನೇನೆಲೋ ಎಲೋ ನೀ ಮುನಿಗಳೋಳ್ಯುಕನೇನೆಲೋ ಎಲೋ ಮನೆತನದಲಿ ಘನದಶರಥನೆ ದಿನಮಣಿಯೆ ನೀ ಪ್ರಭೆಯೋಳೆಲೋ ಎಲೋ 1 ಧುರದಿ ಕಾರ್ತರ್ವ್ಯನೇನೆಲೋ ಎಲೋ ನೀ ನರಿವಿನೋಳ್ಪ್ರಹ್ಲಾದನೇನೆಲೋ ಎಲೋ ವಿರಸದಿ ರಾವಣನೇನೆಲೋ ಎಲೋ ನೀ ಸ್ಥಿರತನದ್ವಿಭೀಷಣನೇನೆಲೋ ಎಲೋ ಹರಿ ಒಲುಮೆಲಿವರ ಅಗಸ್ತ್ಯನೇನು ಸುರ ಗುರುವೇ ನೀ ಮತಿಯೋಳೆಲೋ ಎಲೋ 2 ತ್ರಾಣದಿ ವಾಲಿಯೇನಲೋ ಎಲೋ ನೀ ಜಾಣರೋಳ್ಬಲಿಯೇನೆಲೋ ಎಲೋ ಜ್ಞಾನದಿ ವಾಲ್ಮೀಕಿಯೇನೆಲೋ ಎಲೋ ನೀ ಗಾನದಿ ನಾರದನೇನೆಲೋ ಎಲೋ ದಾನದೊಳಗೆ ಹರಿಶ್ಚಂದ್ರನೇನೋ ನಿ ಧಾನದಿ ನಳನೇನೆಲೋ ಎಲೋ 3 ಪದವಿಯೊಳ್ಧ್ರುವನೇನೆಲೋ ಎಲೋ ನೀ ನಿಧಿಯೋಳ್ಕುಬೇರನೆಲೋ ಎಲೋ ಮದನನೆ ಪುರುಷರೋಳೆಲೋ ಎಲೋ ವರ ಮದದಿ ಕಶ್ಯಪನೇನೆಲೋ ಎಲೋ ಸದಮಲ ಕುಲದಲಿ ಗೌತಮ ಮುನಿಯೇ ನೀ ಕದನದಿ ಕುರುಪನೇನಲೋ ಎಲೋ 4 ನುಡಿವಲಿ ನರನೇನೆಲೋ ಎಲೋ ನೀ ಕೊಡುವಲಿ ಕರ್ಣನೇನೆಲೋ ಎಲೋ ಇಡುವಲಿ ಧರ್ಮನೇನಲೋ ಎಲೋ ನೀ ಕೆಡುಕಲಿ ಶಕುನಿಯೇನೆಲೋ ಎಲೋ ಕಡುಗಲಿತನದಲಿ ಕಲಿಭೀಮನೇ ಸಡಗರದಿಂದ್ರನೇನೆಲೋ ಎಲೋ 5 ಯುಕ್ತಿಲಿ ದ್ರೋಣನೇನೆಲೋ ಎಲೋ ನೀ ಶಕ್ತಿಲಿ ನಕುಲನೇನೆಲೋ ಎಲೋ ಭಕ್ತಿಲ್ವಿದುರನೇನೆಲೋ ಎಲೋ ನೀ ವೃತ್ತಿಲಿ ಸಹದೇನವನೇನೆಲೋ ಎಲೋ ಚಿತ್ತಶುದ್ಧಿಯಲಿ ವೀರ ಸುಧನ್ವನೆ ತೃಪ್ತಿಲಿ ಭೀಷ್ಮನೇನೆಲೋ ಎಲೋ 6 ದಿಟ್ಟರೋಳ್ಗರುಡನೇ ನೆಲೋ ಎಲೋ ನೀ ಶಿಷ್ಟರೋಳ್ಹನುಮನೇನೆಲೋ ಎಲೋ ಸೃಷ್ಟಿಯೋಳಾರನ್ಹೋಲ್ವೆಲೋ ಎಲೋ ನೀ ಭ್ರಷ್ಟನಾಗುವಿ ಯಾಕೆಲೋ ಎಲೋ ಬಿಟ್ಟುಗರ್ವಮಂ ಶಿಷ್ಟಶ್ರೀರಾಮನ ಮುಟ್ಟಿಭಜಿಸಿ ಉಳಿಯೆಲೋ ಎಲೋ 7
--------------
ರಾಮದಾಸರು
ಗಾನ ವಿಲೋಲನ ನಾಮ ಸುಧಾರಸ ಪಾನಮಾಡು ಸತತ ಪ ಹೀನ ಮನವ ಬಿಟ್ಟು ಸಾನುರಾಗದಿಂದ ಜಾನಕಿ ವಲ್ಲಭ ಆನಂದಮಯನೆಂದ ಅ.ಪ ಉಡಿಗೆ ತೊಡುಗೆಗಳ ಸಡಗರವೆಲ್ಲವು ಕಡು ದು:ಖ ದೇಹವು ನಡುಗುವತನಕ ನಡುಗಲು ದೇಹವು ಮಡದಿ ಮಕ್ಕಳುಗಳು ಒಡೆಯನಾದರು ನಿನ್ನ ಸಿಡುಗುಟ್ಟುವರು 1 ಹಸಿವು ಬಾಯಾರಿಕೆ ಶಿಶು ಮೋಹಗಳಿಂದ ಪಶುಪಕ್ಷಿಗಳೆಲ್ಲ ನಿನಗೆ ಸಮ ವಸುಧೆಯೊಳಗೆ ನಿನಗೆ ಅಸಮ ವಿವೇಕವ ಬಿಸಜಾಕ್ಷನೀಯಲು ಸುಸಮಯವೆಂದರಿತು 2 ತನ್ನನು ನೆನೆಯಲು ಘನ್ನ ಮಹಿಮೆ ಪ್ರ ಸನ್ನ ಮೂರುತಿಯು ಎನ್ನವನೆಂದು ನಿನ್ನಪರಾಧವ ಮನ್ನಿಸಿ ಸಲಹುವ ಚಿನ್ಮಯ ಮೂರುತಿ ಬಿನ್ನೈಸುವೆನೆಂದು 3
--------------
ವಿದ್ಯಾಪ್ರಸನ್ನತೀರ್ಥರು
ಗುರುಕೂರ್ಮಚಾರ್ಯರ ಚರಣಕಮಲಯುಗ್ಮ ಮಾನವ ಪ ಧರಣಿಯೊಳಗೆ ಸುಕ್ಷೇತ್ರಗಾಲವ ಪುರದಿ ಶ್ರಿ ನರಶಿಂಹಾ ಚಾರ್ಯರ ತರುಣಿಯಳ ಗರ್ಭಾಬ್ಧಿಯಲಿಹಿಮ ಕರನ ತೆರದಲಿ ಜನಿಸಿಮೆರೆದ ಅ.ಪ ವರಕೊಲ್ಹಾಪುರದಿ ಪೋಗಿರಲು ಸುಂದರವಾದ ಸಿರಿಯರೂಪವ ಕಾಣುತ್ತ ಅರಿತು ಪ್ರಾರ್ಥಿಸಲು ಶ್ರೀ ನರಶಿಂಹಾರ್ಯರಿಗೊಲಿದು ಕರುಣದಿಂದಲಿ ಕೊಟ್ಟಂಥ ಚರಣಕವಚ ಸ್ವರಣ ಸಂಪುಟದಲ್ಲಿ ನಿರುತ ಪೂಜೆಯ ಮಾಡುತ್ತ ಪ್ರವಚನಾಸಕ್ತ ಧರೆಯೊಳಗೆ ಬಹು ಶರಣು ಜನ ರಘ ತರಿದು ಸೌಖ್ಯವ ಗರಿವುದಕೆ ಸಂ ಚರಿಸುತಲಿ ಸಚ್ಛಾಸ್ತ್ರ ಮರ್ಮವ ನರುಹಿಜನರನುದ್ಧರಿಸಿದಂಥ 1 ಪೊಳೆವ ಫಾಲದಿ ಪುಂಡ್ರ ತಿಲಕ ಮುದ್ರಾಕ್ಷತಿ ವಿಲಸಿತ ಶುಭಗಾತ್ರದಿ ಅಲವ ಬೋಧರ ಮತದೊಳು ತತ್ವಬೋಧಕ ಸುಲಲಿತೋಪನ್ಯಾಸದಿ ಬಲು ವಿಧಾರ್ಥವ ಪೇಳಿಕುಳಿತಪಂಡಿತರನ್ನು ಒಲಿಸುತಿರೆ ಪೂರ್ವದಿ ಪಂಢರಪುರದಿ ಭವ ಮುದ್ಗಲಾಚಾರ್ಯರಿ ಗೊಲಿದು ಬಂದಿಹ ಚಲುವ ವಿಠ್ಠಲ ಮೂರುತಿಯ ಪದ ಜಲಜ ಮಧುಕರರೆನಿಸಿದಂಥ 2 ಜಡಜಾಪ್ತನುದಯದಿ ನಡೆದು ದ್ವಿಜಗೃಹದೇವ ರಡಿ ಗೊಂದನೆಯ ಮಾಡುತ್ತ ಎಡೆಬಿಡದಲೆ ತಮ್ಮ ಅಡಿಗೊಂದಿಸುವ ಭಕ್ತ ಗಡಣವ ಮನ್ನಿಸುತ ಬಿಡದೆ ಶತತ್ರಯ ಕೊಡ ಜಲದಲಿ ಸ್ನಾನ ದೃಢಮನದಲಿ ಮಾಡುತ್ತ ತಂತ್ರ ಸಾರೋಕ್ತ ಎಡಬಲದಿ ಶೇವೆಯನು ಮಾಡುವ ಪೊಡವಿಸುರಕೃತ ವೇದ ಘೋಷದಿ ಜಡಜನಾಭನ ಪೂಜಿಸುವ ಬಹು ಸಡಗರವ ನಾನೆಂತು ಬಣ್ಣಿಪೆ 3 ಭೂತಲದಲಿ ಶ್ರೇಷ್ಠವಾತ ಮಾತಾಂಬುಧಿ ಶೀತ ಕಿರಣನೆನಿಸಿ ಪ್ರಾತರಾರಭ್ಯ ಶ್ರೀನಾಥನೆ ಪರನೆಂಬೊ ಶಾಸ್ತ್ರದಿ ಮನವಿರಿಸಿ ಖ್ಯಾತ ಸತ್ಯಧ್ಯಾನ ತೀರ್ಥರೆಂಬುವ ಗುರು ಪ್ರೀತಿಯ ಸಂಪಾದಿಸಿ ಪುತ್ರರಿಗೆ ಬೋಧಿಸಿ ಪ್ರೀತಿಯಲಿ ಶಿಷ್ಯರಿಗೆ ಭಗವ ದ್ಗೀತೆಯನು ಪ್ರತಿದಿನದಿ ಪೇಳುತ ಪಾತಕವ ಪರಿಹರಿಸಿ ಪರಮ ಪು- ನೀತ ಗಾತ್ರರ ಮಾಡಿ ಸಲಹಿದ 4 ಧರೆಯೊಳಧಿಕಮಾದ ಗಿರಿ ವೇಂಕಟೇಶನ ದರುಶನವನೆ ಕೊಳ್ಳುತ ಗುರುವಾಜ್ಞೆಯಲಿ ಬಂದು ವರ ಸಭೆಯೊಳು ತಮ್ಮ ಪರಿವಾರದಿಂದಿರುತ ವರಷ ಶಾರ್ವರಿಯೊಳು ವರ ಮಾಘ ಪ್ರತಿಪದ ಬರಲು ಧ್ಯಾನವ ಮಾಡುವ ಹರಿಪದಾಸಕ್ತ ಪರಮ ಭಕುತಿಯಲಿಂದ ಶೇವಿಪ ಶರಣು ಜನ ಮಂದಾರ ನೆನಿಸುತ ಮೆರೆವ ಕಾರ್ಪರ ನಿಲಯ ಶಿರಿನರ ಹರಿಯ ಪುರವನು ತ್ವರದಿ ಶೇರಿದ 5
--------------
ಕಾರ್ಪರ ನರಹರಿದಾಸರು
ಗುರುಸುಶೀಲೇಂದ್ರ | ಚರಣವಾರಿಜ ಯುಗ್ಮ ಸ್ಮರಿಸುವ ನರರು ಶ್ರೀಹರಿದಾಸರು ಪ ಹರಿವರ ಸುಮಚಾಬ್ಧಿ | ಹರಿಣಾಂಕರೆನಿಸಿದ ವರಸುವೃತೀಂದ್ರರ ತೀರ್ಥರ ಕರಕಮಲಜ ಅ.ಪ ಮಾಸ ತ್ರಯದಿ ಸಡಗರದಲಿ ಮಹ ಸಭೆ ನಿರ್ಮಿಸಿ ಪೊಡವಿಯೊಳಿದ್ದ ಭೂಸರರಾಜ್ಞ ಪತ್ರ ಬರಮಾಡಿ ವಿದ್ವಾಂಸರ ಒಡಗೂಡಿ | ಮಧ್ವಾಗಮನವನು ನೋಡಿ ಬೆಲೆಯುಳ್ಳವೆಗ್ಗಳ ಒಡವೆ ಉಡುಪಗಳನು ಕರುಣಿಸಿ ಮೃಷ್ಟಾನ್ನ ದ್ವಿಜರಿಗೆ ಕಡು ಸುಪ್ರೇಮದಿ ಸಲಿಸಿ | ಮುದ ಬಡಿಸಿ ಜಡಕುಮಾಯ್ಗಳ | ಗಡಣ ಜಡಧಿಗೆ ವಡೆಯ ತಾನೆನಿಸಿ ಕ್ರೋಢ ಜಾಸ್ಥಿತ | ಒಡೆಯ ಶ್ರೀಗುರು ರಾಘವೇಂದ್ರರ ಅಡಿಗಳಾಬ್ಜಕಾ ರಡಿಯಂತೊಪ್ಪುತ | ಬಿಡದೆ ಸಂತತ ಧೃಢದಿ ಸೇವಿಸಿ ಜಡಜ ಜಾಂಡದಿ ಮೆರೆದ ಅಸ್ಮದ್ 1 ತರಣಿ ಕುಲೇಂದ್ರನ ಕರುಣವೆಷ್ಟಿವರೊಳು ಅರುಹಲಾರೆ ವರಕಾಪ್ಯಾಸನ ಪುರಕೆ ಎರಡಾರು ಯತಿಗಳ ವತಿಯಿಂದ ತಮ್ಮಯ ಶಿಷ್ಯ ತತಿಯಿಂದ ಬಹುವಿಧ ಬಿರುದಾವಳಿಯಿಂದ ತೆರಳಿ ಶಶಿರವಿವರ ಸುವಾದ್ಯಧ್ವಾನ ಮೊಳಗಿಸುತ ‌ಘನ ಭಕ್ತಿ ಪರವಶರಾಗಿ ಸುರಚಿರ ಕನಕಮಣಿ ಧನ ತನುಮನ ತ್ವರಿತ ತೃಣ ಬಗೆಯ ದೇವಕಿ ತರಳ ರುಕ್ಮಿಣಿ ವರ ಮುರಾಂತಕÀ ಚರಣಗರ್ಪಿಸುತ | ಆನಂದಪಡುತ ಸರ್ವಮುನಿ ಜನಗಳಿಗೆ ಬಲು ಉಪಚರಿಸಿ | ಮನ್ನಣೆ ಧರಿಸಿ ಹರುಷದಿ ವರ ಸುಧೀಂದ್ರರ ಕರಜರನು ನೆರೆಸ್ಥಾಪಿಸಿ ಆಶ್ಚÀರ್ಯ ಚರಿತ 2 ಪತಿ ಶೃತಿ ಶಾಸ್ತ್ರಾರ್ಥ ಚತುರ ತನದಿ ಪಡೆದು ವಿತತ ಮಹಿಮನಾದ ಪತಿತ ಪಾವನ ಶಾಮಸುಂದರನ ಸ್ತುತಿಸುತಲಯ ಚಿಂತನೆ ಗೈಯುತ ಶ್ರೀಯುತ ಸಂಸ್ಥಾನಮತಿ ವಿಶಾರದರಾದವರ ಸುವೃತೀಂದ್ರ ತೀರ್ಥರಿಗೆ ಹಿತದಿಂದ ಒಪ್ಪಿಸಿ | ಯತಿ ಧೀರೇಂದ್ರರ ಚಾರುಸ್ಥಳದೊಳಗೆ ತನುವಿತ್ತು | ಹರಿಪುರಪಥವ ಪಿಡಿದೈದಿದರು ಚನ್ನಾಗಿ | ಸೇವಿಪ ಜನರಿಗೆ ಅತಿದಯದಿ ಮನೋರಥವ ನೀಡುತ ಸತತ ಮಾಣದೆ ಪರಮ ಭಕುತಿಲಿ ಪೃಥ್ವಿ ಸುರಕರ ಶತಪತ್ರಗಳಿಂದ ನುತಿಸಿಕೊಳುತಲರ್ಚನೆಗೊಂಬ 3
--------------
ಶಾಮಸುಂದರ ವಿಠಲ