ಒಟ್ಟು 107 ಕಡೆಗಳಲ್ಲಿ , 35 ದಾಸರು , 95 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾಸರ ಸಖ ಮಾಡಂದೆ ಎನ್ನ ಧ್ಯಾಸದಿರಗಲದೆ ಶ್ರೀಹರಿ ತಂದೆ ಪ ಕನಕರಾಯನು ನಿಜದಾಸ ನಿನ್ನ ಘನತರ ಪ್ರಸನ್ನತೆ ಪಡೆದನುಮೇಷ ಅನುದಿನ ನಿಮ್ಮಯ ಘನಮಹಿಮೆಯನು ತೋರಿ ಮುನಿವ್ಯಾಸರಾಯರ ಮನವ ತಣಿಸಿದಂಥ 1 ಘನ ಸತ್ಯ ಕಬೀರದಾಸ ತನ್ನ ತನುಮನಧನವನ್ನು ನಿನಗರ್ಪಿಸೀತ ವನಿತೆಯನೊತ್ತಿಟ್ಟು ತನುಜಾತನನು ಕೊಂದು ಉಣಿಸಿ ಸಂತರಿಂ ಸುತನ ಪ್ರಾಣವ ಪಡೆದಂಥ 2 ವಾಸನಳಿದು ಪುರಂದಾಸ ತನ್ನ ನಾಶಬುದ್ಧಿಗೆ ನಾಚಿ ನೀಗಿ ಮನದಾಸೆ ಸೋಸಿಲಿಂ ತವಪಾದಧ್ಯಾಸ ಬಲಿಸಿ ಜಗದೀಶ ಹೇಸದೆ ನಿಮ್ಮನು ಗಿಂಡಿಲ್ಹೊಡೆದಂಥ 3 ವರನಾಮದೇವ ನಿಜದಾಸ ತನ್ನ ಪರಮಸಂತರಿಗೆಲ್ಲ ಪಾಲಿಸಿ ಭಾಷ ಸಮ ಗೌಪ್ಯದಿಂ ಪಂಪಾಪುರಿಗೈದಿರಲು ನಿನ್ನ ತಿರುಗಿ ಕರೆದೊಯ್ದು ಇರವ ಪೂರೈಸಿದಂಥ 4 ಬಲ್ಲಿದ ತುಕಾರಾಮದಾಸ ಬಲು ಕ್ಷುಲ್ಲಕರುಪಟಳ ಸಹಿಸಿ ಮನದಕ್ಲೇಶ ಎಲ್ಲವ ನೀಗಿ ಹರಿ ಪುಲ್ಲನಾಭನ ಪಾದ ದಲ್ಲೆ ಮನ ನಿಲ್ಲಿಸಿ ಉಲ್ಲಾಸದಿರುವಂಥ 5 ಬಗೆಯ ತಿಳಿದು ಜಗನ್ನಾಥ ನಿಮ್ಮ ಸುಗುಣದರಿದು ವ್ಯಾಧಿ ಕಳೆದುಕೊಂಡು ಪ್ರಮಥ ನಿಗಮಗೋಚರ ನಿನ್ನ ಬಗೆಬಗೆ ಪೊಗಳುತ ಜಗದಮಾಯವ ಗೆಲಿದು ಸೊಗಸಿನಿಂ ನಲಿವಂಥ 6 ಉದಧಿಜಿಗಿದ ಹನುಮಂತ ಮಹ ಪದುಮಾಕ್ಷಿಯಳ ಕಂಡು ನಮಿಸಿದ ಬಲವಂತ ಸದಮಲಾಂಗಿಗೆ ತನ್ನ ಹೃದಯಸೀಳಿದ್ಹಟದಿಂ ಪಾದ ತೋರಿಸಿದಂಥ 7
--------------
ರಾಮದಾಸರು
ದುರಿತ ತಿಮಿರಕೆ ಸೂರ್ಯ ಶರಣ ಜನ ಭಾಗ್ಯೋದಯ ಪ ನರಹರಿಯ ದಾಸಾರ್ಯ ಮರುತಮತ ಪರಿಚರ್ಯ ಶಿರಬಾಗಿ ಮುಗಿವೆ ಕೈಯ್ಯ ಅ.ಪ. ಘೋರತರ ಸಂಸಾರ ಸಾರತರವೆಂದರಿದು ಪಾರಮಾರ್ಥಿಕವ ತೊರೆದು ಭೂರಿ ನರಕದಿ ಬೆಂದು ಗಾರಾಗಿ ಪೋಪರಂದು ನಾರದರೆ ನೀವ್ ಬಂದು ನಾರಾಯಣಾ ಎಂದು ಚೀರಿದಾ ಧ್ವನಿಗೆ ಅಂದು ಘೋರ ಪಾತಕವೆಲ್ಲ ದೂರಾಗಿ ಸ್ವರ್ಗವನು ಸೇರಿ ಸುಖಿಸಿದರು ಎಂದು 1 ಸರಸಿಜಾಕ್ಷನ ಸ್ತುತಿಸಿ ವರ ಪಡೆದು ಧರಣಿಯೊಳು ಮೆರೆವ ಕನ್ನಡ ದೇಶದಿ ಸಿರಿಯಿಂದಲೊಪ್ಪುತಿಹ ಪುರಂದರಗಡದೊಳಗೆ ಇರುವ ಭೂಸುರ ವಂಶದಿ ವರಗರ್ಭದಲಿ ಜನಿಸಿದಿ ನರರಂತೆ ಚರಿಸುತ್ತ ಲೌಕಿಕೆ ಮರುಳಾಗಿ ಸರ್ವಭಾಗ್ಯವ ಗಳಿಸಿದಿ 2 ಚಿನಿವಾರ ವ್ಯಾಪಾರದನುವರಿತು ನವಕೋಟಿ ಧನಕಧಿಪನೆಂದೆನಿಸುತ ಧನಕನಕ ವಸ್ತು ವಾಹನನಿಚಯ ಸಂಗ್ರಹದಿ ತನುಮನಂಗಳ ಶ್ರಮಿಸುತ ಕನಸಿಲಾದರು ದಾನಧರ್ಮಗಳ ನೆನೆಯದೆಲೆ ದಿನಮಾನಗಳ ಕಳೆಯುತ ಇನಿತು ಮಾಯೆಗೆ ಸಿಲುಕಿ ತನ್ನ ಮರೆದಿರಲಾಗ ಘನ ಮಹಿಮ ಬಂದ ನಗುತ 3 ಅಂದು ತಾನೊಲಿದಿತ್ತ ಚೆಂದದಾ ವರಗಳನು ಇಂದು ಸಲಿಸುವೆನು ಎಂದು ಬಂದು ಬ್ರಾಹ್ಮಣ ರೂಪದಿಂದ ನಿಮ್ಮನು ಹರಿಸಿ ಕಂದನಿಗೆ ಮುಂಜಿಯೆಂದು ಮಂದ ಭಾಗ್ಯನ ತೆರದಿ ಪೊಂದಿ ಯಾಚಿಸಲು ನಿಂದು ಒಂದು ದುಡ್ಡನ್ನು ಲೋಭದಿಂ ದೆಸೆಯಲದನುಳಿದು ಸಿಂಧು 4 ಅತ್ತಣಿಂ ಶ್ರೀನಿಧಿಯು ಮತ್ತೆ ಮನೆಯೊಳು ನಿಮ್ಮ ಪತ್ನಿಯನು ಯಾಚಿಸಿದನು ಉತ್ತಮ ಪತಿವ್ರತೆಯೆ ಪುತ್ರನುಪನಯವೆಂದು ಇತ್ತ ಬಂದಿಹೆನೆಂದನು ಚಿತ್ತದೊಲ್ಲಭನ ಸಮ್ಮತಿಯಿಲ್ಲದೆಲೆ ನಾ ನಿತ್ತು ಕಳುಹೆನು ಏನನೂ ಅತ್ತ ಗಮಿಸಿರಿ ಎನಲು ಹೆತ್ತತಾಯ್ ನಿನಗಿತ್ತ ನತ್ತನ್ನು ಕೊಡು ಎಂದನು 5 ನಾಗಾರಿವಾಹನನ ನುಡಿಯು ಮನಸಿಗೆ ಹಿಡಿಯೆ ಮೂಗುತಿಯ ತೆಗೆದಿತ್ತಳು ಭಾಗ್ಯವಂತಳೆ ನಿನಗೆ ಲೇಸಾಗಲೆಂದ್ಹರಿಸಿ ಸಾಗಿ ಬಂದನು ಇತ್ತಲು ಹೋಗು ಹೋಗೆಲೊ ಮತ್ತೆ ನೀನೇಕೆ ಬಂದೆನಲು ಮೂಗುತಿಯ ಕ್ರಯಕೆ ಕೊಡಲು ಈಗ ಬಂದಿಹೆನೆಂದು ನಿಮಗದನು ತೋರಲು ಹೇಗೆ ಬಂದಿತು ಎನ್ನಲು 6 ಮನಕೆ ಸಂಶಯ ಮೂಡಿ ಚಿಂತಿಸುತಿರೆ ನೋಡಿ ವನಜನಾಭನು ಪೇಳ್ದನು ನನಗೀಗ ಧನಬೇಡ ನಿನ್ನಲ್ಲಿಯೇ ಇರಲಿ ಅನುವರಿತು ಬಹೆನೆಂದನು ಸಂತೈಸಿ ಪೊರಮಡಿಸಿ ನಿನಗೆ ನಾಮವನಿಡುವೆನು ಎನುತ ಹರುಷದಿ ನಗುತ ಮನೆಗೆ ಬರುತಲೆ ಕಂಡೆ ವನಿತೆಯಾ ಬರಿ ಮೂಗನು 7 ಮುತ್ತಿನಾ ಮೂಗುತಿಯು ಎತ್ತ ಹೋಯಿತು ಎನಲು ಮುತ್ತೈದೆ ಮನದಿ ನೊಂದು ಮತ್ತೆ ಮುರಿಯಿತು ಎಂದು ತತ್ತರಿಸುತಿರೆ ಕಂಡು ಇತ್ತ ತಾರೆನಲು ನಿಂದು ವಿಪ್ರ ಮತ್ತೇನು ಮಾಡುವರೊ ಕತ್ತಲೆಯು ಮುತ್ತಿ ತಿಂದು ಭಕ್ತವತ್ಸಲ ನಿಂಗೆ ತೆತ್ತರೀತನುವನ್ನು ಕುತ್ತು ಪಾರಾಹುದೆಂದು 8 ತರುವೆನೀಗಲೆ ಎಂದು ತೆರಳಿ ವಿಷವನೆ ಅರೆದು ಕರದಿ ಬಟ್ಟಲನು ಹಿಡಿದು ಹರಣದಾಸೆಯ ತೊರೆದು ಸಿರಿವರನ ಪದನೆನೆದು ಕುಡಿಯುವನಿತರೊಳು ತಿಳಿದು ಕರುಣದಿಂ ಮೂಗುತಿಯ ಗರಳದಲು ಕೆಡಹಲಾ ಮಣಿ ಹರುಷದಳೆದು ಪರಮ ಸಂಭ್ರಮದಿಂದ ಕೊಡಲದನು ನೀವ್ ಕೊಂಡು ಭರದಿ ಅಂಗಡಿಗೆ ಬಂದು 9 ಬೀಗ ಮುದ್ರೆಯ ತೆಗೆದು ನೋಡೆ ಭೂಸುರನಿತ್ತ ಮೂಗುತಿಯು ಕಾಣದಿರಲು ಹೇಗೆ ಹೋಯಿತು ಎಂದು ಮನದೊಳಚ್ಚರಿಗೊಂಡು ಬೇಗನೆ ಮನೆಗೆ ಬರಲು ಹೇಗೆಂದು ತಿಳಿಸದಿರಲು ನೀಗುವೆನು ತನುವನೆಂದು ಬೆದರಿಸಲು ಸಾಧ್ವಿಯಾ ಬಾಗಿ ವಂದಿಸಿ ನುಡಿದಳು 10 ವೃದ್ಧ ಬ್ರಾಹ್ಮಣನಾಗಿ ಹೆದ್ದೈವನೇ ಬಂದು ಪೊದ್ದಿಯಾಚಿಸಲು ಜರಿದೆ ಲುಬ್ಧನಾಗತಿಶಯದಿ ಬದ್ಧನಾದೆನು ದ್ರವ್ಯ ವೃದ್ಧಿಗೋಸುಗವೆ ಬರಿದೆ ಇದ್ದುದಕೆ ಫಲವೇನು ಸದ್ಧರ್ಮದಲಿ ಕೊಡದೆ ಉದ್ಧಾರವಿಲ್ಲೆಂದು ತಿಳಿದೆ ಶುದ್ಧ ಭಾವದಿ ಹರಿಯ ಪದ್ಮಪಾದವ ನೆನೆದು ಹೆದ್ದಾರಿ ಹಿಡಿದು ನಡೆದೆ 11 ಶಿಷ್ಟ ಬ್ರಾಹ್ಮಣರು ನೆಂಟರಿಷ್ಟ ಮಿತ್ರರಿಗೆ ವಿ- ಶಿಷ್ಟವನು ದಾನಗೈದು ನಿಷ್ಠೆಯಿಂ ಮಡದಿ ಮಕ್ಕಳನ್ನೊಡಗೊಂಡು ವಿಠ್ಠಲನ ಪುರಕೆ ನಡೆದು ಕಷ್ಟ ನಿಷ್ಠುರ ಸಹಿಸಿ ಕೃಷ್ಣನಂಘ್ರಿಯ ಭಜಿಸಿ ಇಷ್ಟಾರ್ಥ ಸಿದ್ಧಿಗೈದು ನೆಟ್ಟನೇ ಹಂಪೆ ಪಟ್ಟಣದಿ ವ್ಯಾಸಮುನಿ ಶ್ರೇಷ್ಠರಿಂದುಪದೇಶ ಪಡೆದು 12 ಮಧ್ವಮತ ಸಿದ್ಧಾಂತ ಪದ್ಧತಿಯನುದ್ಧರಿಸಿ ಗದ್ಯಪದ್ಯಗಳಿಂದಲಿ ಮಧ್ವಪತಿ ಪದಪದ್ಮ ಹೃದ್ಯದೊಳು ನೆನೆನೆನೆದು ಮುದ್ದಾಗಿ ವರ್ಣಿಸುತಲಿ ಮದ್ದಳೆಯ ತಾಳ ವೀಣೆಗಳ ಗತಿಹಿಡಿದು ಶುದ್ಧರಾಗಗಳಿಂದಲಿ ಉದ್ಧವನ ಸಖನೊಲಿದು ತದ್ಧಿಮಿತ ಧಿಮಿಕೆಂದು ಪೊದ್ದಿ ಕುಣಿಯುವ ತೆರದಲಿ 13 ಈರೆರೆಡು ಲಕ್ಷಗಳ ಮೇಲೆ ಎಪ್ಪತ್ತೈದು ಸಾ- ವಿರ ಗ್ರಂಥ ರಚಿಸಿ ಈರೆರೆಡು ದಿಕ್ಕಿನಲಿ ಚರಿಸಿ ತೀರ್ಥಕ್ಷೇತ್ರ ಸಾರ ಮಹಿಮೆಗಳ ತುತಿಸಿ ಶೌರಿದಿನದಲಿ ಮಾಳ್ಪ ವ್ರತನೇಮ ಉಪವಾಸ ಪಾರಣೆಯ ವಿಧಿಯ ತಿಳಿಸಿ ತಾರತಮ್ಯವು ಪಂಚ ಭೇದಗಳು ಸ್ಥಿರವೆಂದು ಸಾರಿ ಡಂಗುರವ ಹೊಯಿಸಿ 14 ತರುಣಿ ಮಕ್ಕಳು ಶಿಷ್ಯ ಪರಿವಾರಗಳ ಸಹಿತ ಧರೆಯನೆಲ್ಲವ ತಿರುಗುತ ಕರದಿ ಕಿನ್ನರಿ ಧರಿಸಿ ಸ್ವರವೆತ್ತಿ ಪಾಡುತಿರೆ ಕೊರಳುಬ್ಬಿ ಶಿರ ಬಿಗಿಯುತ ಎರಡು ಕಂಗಳು ಧಾರೆ ಸುರಿಯೆ ಬಾಷ್ಪೋದಕವ ಹರಿ ಮಹಿಮೆ ಕೊಂಡಾಡುತ ತಿರಿ ತಂದ ಧನದಿಂದ ವಿಪ್ರರಿಗೆ ಮೃಷ್ಟಾನ್ನ ಹರುಷದಿಂದಲಿ ಉಣಿಸುತ 15 ಗುಪ್ತವಾಗಿರೆ ಕಂಡು ವ್ಯಕ್ತ ಮಾಡುವೆನೆಂದು ಶಕ್ತನಹ ದೇವ ಬಂದ ಓಗರ ಉಂಡ ಸುತನಾಗಿ ನೀರ ತಂದ ಯತಿಯ ಪಂಕ್ತಿಗೆ ಭಾಗಿರಥಿಯನ್ನು ತರಿಸಿದ ಕ್ಷಿತಿಪತಿಗೆ ದೃಢ ತೋರಿದ ಸತಿಯೆಂದ ಮಾತಿಗೆ ಅತುಳ ಭಾಗ್ಯವನಿತ್ತು ಪಥದಲ್ಲಿ ತಲೆಗಾಯಿದ 16
--------------
ಲಕ್ಷ್ಮೀನಾರಯಣರಾಯರು
ದ್ರೋಹಿಗಳ ವಿವರವನು ನಾ ಪೇಳ್ವೆನಯ್ಯ ಕೂಡಿದೆಡೆಯಲಿ ಕಪಟವೆಸಗುವನೆ ದ್ರೋಹಿಮಾಡಿದುಪಕಾರವನು ಮರೆವವನೆ ದ್ರೋಹಿಚಾಡಿ ಕೊಂಡೆಗಳನಾಡಿ ನಡೆವವನೆ ದ್ರೋಹಿರೂಢಿಯೊಳು ಬಾಳುವರ ಸಹಿಸದನೆ ದ್ರೋಹಿ 1 ಸತಿಯಿದ್ದು ಪರಸತಿಯ ಬಯಸುವನೆ ದ್ರೋಹಿಹೆತ್ತವರೊಡನೆ ಕಲಹ ಮಾಡುವನೆ ದ್ರೋಹಿಯತಿಗಳನು ಒಂದೆ ಸಮ ನಿಂದಿಸುವನೆ ದ್ರೋಹಿಸತಿಯನ್ನು ಪರರ ವಶ ಗೈವವನೆ ದ್ರೋಹಿ 2 ಹೊನ್ನಿದ್ದು ಅನ್ನದಾನ ಮಾಡದವನೆ ದ್ರೋಹಿತನ್ನ ಗುರು ಸತಿಯ ಬಯಸುವವನೇ ದ್ರೋಹಿಸನ್ನುತಾಂಗ ಕಾಗಿನೆಲೆಯಾದಿಕೇಶವನತನ್ನೊಳಗೆ ತಾ ತಿಳಿದು ಸುಖಿಸದವ ದ್ರೋಹಿ 3
--------------
ಕನಕದಾಸ
ಧುರಧೀರನಿವನೆಂದು ನೆರೆವೆರೆಯಲೈತಂದು ಮರುಳಾದೆ ನಾನಿಂದು ಮುಂದೆ ನಿಂದು ನಾರ್ವಟ್ಟೆಯುಟ್ಟಿರುವ ಅರಣ್ಯದೊಳಗಲೆವ ನಾರುಬೇರನೆ ಮೆಲುವ ಅರರೆ ಚಲುವ ಜನಪನಂದನನೆನಿಸಿ ಮುನಿಜನರ ತಾವೆರಸಿ ವನವನದಿ ಸಂಚರಿಸುತಿರುವ ಸಹಿಸಿ ಲಲನೆಯನು ಕರೆತರಲು ಪಲವು ಕಪಿಗಳನೆರೆದು ಜಲಧಿಯನು ಬಂಧಿಸಿದನಲಘುಬಲನೆ ಇನಿತು ಸಾಹಸವುಳ್ಳ ಸುಗುಣನಿಧಿಗೆ ಮನವೊಲಿದು ನಾ ಬಂದು ಮೋಸಪೋಗೆ ಮಿಣುಕಿ ಫಲವೇನಿನ್ನು ಮಿಂಚಿದುದಕೆ ಧಣಿಯೆನಗೆ ಶೇಷಾದ್ರಿವರನೆ ಸಾಕೆ
--------------
ನಂಜನಗೂಡು ತಿರುಮಲಾಂಬಾ
ನಗುವರಲ್ಲೋ ಕೃಷ್ಣಾ ನಿನ್ಹಾಸಕೆ ನೋಡಿ ಪ ಸುತನಾ ಸತಿಯರು ಸಹಿಸದೆ ವಿರಸವಾಗುತಿರೆಸುಮ್ಮನಿಪ್ಪುದು ನೋಡಿ ಅ.ಪ. ಕಂದ ನಾನಲ್ಲವೇ ನಿನ್ನ ರಾಜಾ ಹಿಂದೆ ಮುಂದೆಬಲು ನಿಂದಿಪರೈ ಭೋಜಾಇಂದು ಮುಂದು ಎಂದೆಂದಿಗೂ ನಂಬಿದ ನರನಾಪಾಲಿಸದಿಪ್ಪುದು ಕಂಡು1 ಸಹಿಸಲಾರೆ ಸಹಿಸಲಾರೆ ಈ ತಾಪವ ಸಹಿಸಲಾರೆನೋಘನತಾಪಕೆ ಒಳಮಾಡಿ ಕ್ಲೇಶಪಡಿಸೋದಕೆ 2
--------------
ತಂದೆವರದಗೋಪಾಲವಿಠಲರು
ನಂಬಿದೆ ನಿಂನನು ಅಂಬುಜಲೋಚನ ಅಂಬುಜೋದ್ಭವ ಪಿತ ಅಂಬುಜ ರಮಣಾ ಪ ಹಲವು ಯೋನಿಗೆ ಬಿದ್ದು ಬಲೆ ದಾಟಿ ಬಂದೇ ಬಳಲುತ್ತ ಪರಿಪರಿ ದುಃಖಗಳಿಂದ ಬಲ್ಲವಿಲ್ಲ ಸಹಿಸಲು ಭವರೋಗ ವೈದ್ಯನೇ ವಲಿದೆನ್ನ ಪಾಲಿಸೋ ಸಾನುರಾಗದಲೀ 1 ಏನು ಮಾಡಲಿ ನಿಂನ ಚರಣ ಸೇರಲಿಕೇ ಹೀನ ಪಥವ ಪಿಡಿದು ಕಡು ನೊಂದೆನಯ್ಯ ಗಾನ ಲೋಲನೆ ಭಜಿಪ ಭಾಗ್ಯವ ಕೊಡಬೇಕು ನೀನೇ ಗತಿಯೆಂದು ಯಾದವ ಪತಿಯೇ 2 ಕತ್ತಲೆಯಾವರಿಸಿತು ದೇಶವೆಲ್ಲವ ಬತ್ತಲೆಯಾಗಿ ನಿಂತರು ಮೂಢಜನರು ಮೃತ್ಯು ತುತ್ತಿಗೆಯಂನ ಕೊಡದೆ ಕತ್ತಲೆ ನೀಗಿಆತ್ಮ ಜ್ಞಾನವ ನೀಡೋ ಚನ್ನಕೇಶವನೇ3
--------------
ಕರ್ಕಿ ಕೇಶವದಾಸ
ನಂಬಿದೆನೊ ನಿನ್ನ ಅಂಬುಜನಯನ ಕೃ ಪಾಂಬುಧೆ ದೃಢದಲಿ ಪ ಸಂಭ್ರಮದಲಿ ಕಿವಿ ತುಂಬುತಿರುವ ಆ ಡಂಬರ ವಚನಕೆ ಮುಂಬರಗೊಳ್ಳುತ ಅ.ಪ ನವ ಘನ ನಿಭಕಾಯ ನಿನ್ನಯ ಕರುಣಮಯ ಸಹಾಯ ವಿಲ್ಲದೆ ಬಿಗಿಯುತಿರುವ ಮಾಯಾ ಪಾಶವ ತೊರೆಯಲಳವೆ ಜೀಯಾ ನಿನ್ನಯ ದಯವ ಪಡೆದ ಪರಿಯನರುಹುವ ಯತಿವರೇಣ್ಯ ಗುರುಮಧ್ವರಾಯರ ಪರಮ ಸಮಯ ಸಾರಗಳನು ಸಂತತ ಶ್ರವಣ ಮನನ ಧ್ಯಾನಗಳಿಂದ ಪರಿಚಯ ಪಡೆದು ದು ಷ್ಟ ವಿಷಯಗಳಲಿ ಮತಿಯನು ಮುರಿಯುವಂತೆ ಕರುಣಿಸೋ ಸುಗುಣಾಲಯ 1 ನೀರಜದಳ ನೇತ್ರ ವರ ಸುಖ ಚಿನ್ಮಯೈಕ ಗಾತ್ರ ಸುಜನ ಮಿತ್ರ ಸುರವರ ಸರಸಿಜಭವ ಪುತ್ರ ರುಚಿರರ ಮುಕುಟಾಕ್ಷಪಾತ್ರ ನಿನ್ನಯ ವಿವಿಧ ಲೀಲೆಗಳು ಚಿತ್ರವಿಚಿತ್ರವು ಅರಿತೆನೆಂದು ತಿಳಿದು ಮೆರೆಯುತಲಿರುವ ನರರ ಮದವ ಮುರಿದು ದೈನ್ಯದಿಂದಲಿ ಮರೆತೆನೆಂದು ದಿನದಿನದಲಿ ಭಜಿಪರ ಪೊರೆವ ಪರಮ ಕರುಣಾರಸಮಯನೆ 2 ದೀನಭಕುತರನ್ನು ಪೊರೆಯುವ ದಾಸಿಯೆಂದು ನಿನ್ನ ಪೊಗಳುವ ಮಾನತತಿಗಳನ್ನು ಸಂತತ ಧ್ಯಾನ ಮಾಡಿ ಎನ್ನ ಕ್ಲೇಶವ ಮೌನದಿಂದ ಇನ್ನೂ ಸಹಿಸುತ ಜಾನಕೀಶ ತವ ಪಾದಕಮಲದ ರೇಣುವನ್ನು ಶಿರದಿ ಧರಿಸುತಲಿ ಅನು ಮಾನವನ್ನು ತೊರೆದು ಮುದದಿ ಸುವಿಮಲ ಜ್ಞಾನಮೂರ್ತೆ ಜ್ಞಾನಿವರ ಪ್ರಸನ್ನನೆ ನೀನೆ ಎನ್ನ ರಕ್ಷಕನೆಂದರಿಯುತ 3
--------------
ವಿದ್ಯಾಪ್ರಸನ್ನತೀರ್ಥರು
ನಾರಿಯರಲಿ ಮಾದರಿಯೆಂದೆನಿಸಿರಮ್ಮ ಮೂರುಕುಲಕೆ ಕೀರುತಿಯನು ತನ್ನಿರಮ್ಮ ಸೇರಿದ ಪತಿಮಂದಿರವನುದ್ಧರಿಸಿರಮ್ಮ ಬೇರೆ ಜನಕೆ ಸೋದರಿಯೆಂದರಿಯಿರಮ್ಮ ಅಬಲೆಯರಿರಬಹುದು ದೇಹ ಶಕುತಿಯಲಿ ಪ್ರಬಲಸ್ಥಾನ ನಿಮಗಿಹುದು ಸಮಾಜದಲ್ಲಿ ಶುಭಪರಂಪರೆಗಳ ಪತಿಗೆ ಕೋರಿರಮ್ಮ ಲಭಿಸುವುದತಿಸುಲಭದಿ ಪರಲೋಕವಮ್ಮ ಗೃಹಿಣಿಯೇ ಗೃಹವೆಂಬ ಮಾತನರಿಯಿರಮ್ಮ ಗಹನದ ಸಂಸಾರಪಥವ ಜರಿಯಬೇಡಿರಿ 10 ವಹಿಸಿರಿ ಗೃಹಕೃತ್ಯಗಳನು ಆದರದಲ್ಲಿ ಸಹಿಸಿರಿ ಸುಖದು:ಖಗಳನು ಖೇದವಿಲ್ಲದೆ ಶ್ರದ್ಧೆಯಿರಲಿ ಗೃಹಿಣಿಯ ಕಾರ್ಯದಲಿ ಸರ್ವದ ಸ್ಪರ್ಧೆಯ ಮಾಡಬೇಡಿ ಪುರುಷಗುಚಿತ ಕಾರ್ಯದಿ ತಿದ್ದಿರಮ್ಮ ವಿನಯದಿಂದ ಪತಿಯ ದೋಷವÀ ಹದ್ದಿನಂತೆ ಕಾಯಿರಮ್ಮ ಪತಿಯ ಶ್ರೇಯವ ದೈವದತ್ತವಿಹುದು ನಿಮ್ಮ ಮುಖದ ಕಾಂತಿಯು ಸೇರಿಸಿ ಫಲವೇನು ವಿವಿಧ ಸುಣ್ಣಬಣ್ಣವ ಹೂವುಗಳನು ಕಸಕಲದರ ಗಂಧವಿರುವುದೆ ಯಾವ ಕೃತಕ ಬೇಕಿದೆ ಸ್ವಭಾವ ಶೋಭೆಗೆ 20 ಅನುಗಾಲವು ಊರಿಗೆ ಉಪಕಾರಿಯಾದರು ಮನೆಗೆ ಮಾರಿಯಾಗಬೇಡಿರಮ್ಮ ಎಂದಿಗು ವಿನಯವಿರಲಿ ನಡೆನುಡಿಯಲಿ ಸರ್ವ ಜನರಲು ಪ್ರಣಯ ಸರಸ ಬೇಡಿರಮ್ಮ ಬಂಧು ಜನರಲಿ ದುಡಿದು ದಣಿದು ಉಶ್ಶೆನುತಲಿ ಬರುವ ಪತಿಯಲಿ ಕಿಡಿಕಿಡಿಯಾಗಲಿ ಬೇಡಿರಿ ತರಲು ಮರೆತರೆ ಬಡತನವಿರಬಹುದು ಸದ್ಯ ನಿಮ್ಮ ಪಾಲಿಗೆ ಅಡಿಗಡಿಗದನಾಡಬೇಡಿ ಒಡೆಯನೆದುರಲಿ ನೆರೆಮನೆ ವೆಂಕಮ್ಮನೊಂದು ಸೀರೆ ಕೊಂಡರೆ ಗುರು ಗುರುಗುಟ್ಟುತಲಿ ನೋಡಬೇಡಿ ಪತಿಯನು 30 ಮರುಕದಿ ಸಂತೈಸಲವನು ಮನವು ಕರಗದೆ ಸೆರೆಸೆರೆ ಕಣ್ಣೀರುಗಳನು ಸುರಿಸಬೇಡಿರಿ ತುಳಸಿಯ ಪೂಜೆಯನು ಮಾಡ ಮರೆಯಬೇಡಿರಿ ಕೆಲಸಗಳನು ದಿಟ್ಟತನದಿ ಮಾಡಿ ಮುಗಿಸಿರಿ ಕಲಿಯಿರಿ ಸಂಸಾರದಲಿ ನೆಪ್ಪು ನೇರವ ಹಳಿಯಬೇಡಿರಮ್ಮ ನೀವು ನೆರೆ ಹೊರೆ ಜನರ ಉಳಿಸಿ ಬಳಸಿರಮ್ಮ ತಂದ ಧಾನ್ಯವ ತಿಳಿಸಬೇಡಿ ಮನೆಯ ಗೋಪ್ಯ ಪರರಿಗೆಂದಿಗು ಕಾಲ ಕಳೆಯಬೇಡಿ ಕೆಲಸವಿದ್ದರೆ ಪ್ರಳಯ ಮಾಡಬೇಡಿ ಸಣ್ಣ ಪುಟ್ಟ ಮಾತಿಗೆ 40 ಸೊಟ್ಟ ಬೈತಲೆಯನು ತಗೆಯಲಿಷ್ಟಪಡದಿರಿ ಅಷ್ಟವಕ್ರದುಡುಪುಗಳನು ಧರಿಸಬೇಡಿರಿ ರಟ್ಟು ಮಾಡಬೇಡಿರಮ್ಮ ರೂಪು ರಚನೆಯ ಸಿಟ್ಟು ಮಾಡಬೇಡಿ ಮುದಿಯ ಬುದ್ಧಿವಾದಕೆ ಶ್ರವಣ ಮಾಡಿರಮ್ಮ ಹರಿಯ ಕಥೆಗಳನುದಿನ ಶ್ರವಣ ಮಾಡುವಾಗ ಹರಟೆ ನಿದ್ರೆ ಬೇಡವು ಕಿವಿಯ ಕಚ್ಚಬೇಡಿರಮ್ಮ ಪರರ ವಾಕ್ಯಕೆ ಲವಲವಿಕೆಯು ಬೇಡಿರಮ್ಮ ಚಾಡಿ ಚುದ್ರದಿ ರೂಢಿಯಿಲ್ಲದಿರುವ ನಡತೆ ಬೇಡಿರೆಂದಿಗು ಮೂಢರೆನಿಸಬೇಡಿ ಹಾಡುಹಸೆಯ ಕಲಿಯದೆ 50 ಪಾಡುಪಡುತ ಪತಿಗೆ ಹರುಷನೀಡಿ ಗೃಹದಲಿ ಪ್ರೌಢವಿದ್ಯೆ ಕಲಿತು ದುಡಿಯಬೇಡಿ ಪರರಿಗೆ ಬಣ್ಣವಿಲ್ಲದಿರುವುದು ಬಂಗಾರವಲ್ಲವು ಕಣ್ಣಿಗೆ ಹಿತವಲ್ಲದು ಶೃಂಗಾರವಲ್ಲವು ಉಣಲು ತಾ ದೊರೆಯದಿರಲು ಸಂಪತ್ತಲ್ಲವು ಅನ್ನ ಮಾಡಲರಿಯದಿರಲು ಹೆಣ್ಣದಲ್ಲವು ದುಂದುಗಾರಿಕೆಯನು ಕಲಿಯಬೇಡಿರೆಂದಿಗು ಮುಂದೆ ಕಾಲಚಕ್ರಗತಿಯನು ಮನದಿ ಯೋಚಿಸಿ ಬಂದ ಮಾತುಗಳನು ಬಾಯಿತಡೆದು ಆಡಿರಿ ನಂದಗೋಕುಲವನೆ ಮಾಡಿ ಗೃಹವ ನಗುತಲಿ 60 ಬಳಕೆಯಲ್ಲದಿರುವ ಕಲೆಯ ಕಲಿಯಬೇಡಿರಿ ಕಲಿಸಿರಮ್ಮ ಕೆಲಸಕಾರ್ಯ ಮಕ್ಕಳುಗಳಿಗೆ ಗಳಿಸಿರಮ್ಮ ಪುಣ್ಯಕೀರ್ತಿ ತಿಳಿಯಮನದಲಿ ಸುಲಭವು ಸಾಧನವು ನಿಮಗೆ ಪುಣ್ಯಲೋಕಕೆ ಮನವತಿ ಚಂಚಲತೆಯನ್ನು ಹೊಂದಬಿಡದಿರಿ ಅನುಮತಿ ಕೊಡಬೇಡಿ ದುಷ್ಟ ಜನರ ಬೋಧೆಗೆ ಘನಮತಿಯನು ಪೊಂದಿ ಸತಿಯ ಮಾರ್ಗ ತೋರಿರಿ ಗುಣವತಿಯೆಂದೆನಿಸಿರಮ್ಮ ಹಿರಿಯ ಜನರಲಿ ದುಡುಕಿನ ಹೆಣ್ಣೆಂದು ಹೆಸರು ಪಡೆಯಬೇಡಿರಿ ಸಿಡುಕಿನ ಮೋರೆಯನು ತೋರಬೇಡಿ ಜನರಿಗೆ 70 ಒಡಕಿನ ಬಾಯವಳು ಎಂದು ಎನಿಸಬೇಡಿರಿ ಕೆಡುಕ ಕೋರಬೇಡಿ ಕೋಪದಿಂದ ಪರರಿಗೆ ಧ್ವನಿಯು ಮಧುರವಿರಲಿ ನಿಮ್ಮ ಮಾತುಕಥೆಯಲಿ ಕೆಣಕಬೇಡಿ ಮರೆತುಬಿಟ್ಟ ಜಗಳ ಕದನವ ಇಣಕಿ ನೋಡಬೇಡಿ ಪರರ ನಡೆನುಡಿಗಳನು ಸಾರಥಿಯೆಂದೆನಿಸಿರಿ ಸಂಸಾರ ರಥದಲಿ ವೀರರಮಣಿಯೆಂಬ ದಿವ್ಯ ಕೀರುತಿ ಬರಲಿ ನಾರಿಯರಲಿ ಮಾದರಿಯನು ಪಡೆದು ತೋರಿದ ಭಾರತ ಭೂಮಾತೆಗೆ ಪ್ರತಿಬಿಂಬವೆನಿಸಿರಿ 80 ದೇಶಸೇವೆಯೆಂದು ರಾಜಕೀಯ ಬೇಡಿರಿ ಮೋಸ ಹೋಗಬೇಡಿ ಆಸೆ ತೋರುವ ನುಡಿಗೆ ಕಾಯ ಕ್ಲೇಶ ಬೇಡಿರಿ ಭಾಷಣ ಬಹಿರಂಗದಲ್ಲಿ ಭೂಷಣಲ್ಲವು ಸಿರಿರಮಣಗೆ ತುಳಸಿಗಿಂತ ಪುಷ್ಪವಿಲ್ಲವು ಹಿರಿಯತನಕೆ ಸತ್ಯಕ್ಕಿಂತ ಯುಕ್ತಿಯಿಲ್ಲವು ಅರಸಿ ನೋಡೆ ತಾಯಿಗಿಂತ ನಂಟರಿಲ್ಲವು ಕರಿಮಣಿ ಸಮ ನಾರಿಜನಕೆ ನಗಗಳಿಲ್ಲವು ದಾಸರ ನುಡಿ ಧರ್ಮಗಳ ಪ್ರಕಾಶ ಮಾಡಿತು ಸ್ತ್ರೀ ಸಮೂಹದಿಂದ ನಾಶವಾಗದುಳಿದವು 90 ಆ ಸುಧಾಮ ಸತಿಯರೆ ಈ ದೇಶದ ಸೊಬಗು ಮಾಸದಂತೆ ರಕ್ಷಿಸಿ ಪ್ರಾಚೀನ ನಡತೆಯ ನುಡಿಯಬೇಡಿರಮ್ಮ ಪರರ ವಂಚನೆನುಡಿಯ ಕೊಡಲಿ ಹಾಕಬೇಡಿರಮ್ಮ ಕುಳಿತ ಕೊಂಬೆಗೆ ಇಡಲಿಬೇಡಿ ಮತ್ಸರವನು ದೀರ್ಘ ಕಾಲದಿ ಪುಡಿಯನಿಡಲಿಬೇಡಿರಮ್ಮ ಪುಣ್ಯ ಕಾರ್ಯಕೆ ಸಣ್ಣನುಡಿಗಳೆಂದು ತಿಳಿಯಬೇಡಿರಿವುಗಳ ಭಿನ್ನ ಭಿನ್ನ ದೇಶಕಾಲದನುಭವಗಳಿದು ಬಣ್ಣವತಿಶಯೋಕ್ತಿಯಲ್ಲ ಅರಿತು ನೋಡಿರಿ ಘನ್ನ ಸುಗುಣಭರಿತ ಶ್ರೀ ಪ್ರಸನ್ನ ಸಲಹುವ 100
--------------
ವಿದ್ಯಾಪ್ರಸನ್ನತೀರ್ಥರು
ನಿನ್ನ ಧ್ಯಾನವ ಕೊಡು ಎನ್ನ ಧನ್ಯನ ಮಾಡು ಚೆನ್ನ ಶ್ರೀ ಶೇಷಾದ್ರಿ ಸನ್ನಿವಾಸಾ ಪ ಭೀಷಣವಾಗಿಹ ಭವಸಾಗರದೊಳು ನಾಶಗೊಳಿಪುವರು ನೆಗಳಿಗಳು ಬೀಸುವವನುದಿನ ಮೂರು ಘಾಳಿಗಳು ಈ ಸಂಖ್ಹ್ಯಾಂಗ ಕೈಪಿಡಿಯೋ ಕೃಪಾಳು1 ಭವವೆಂಬ ಕಿಚ್ಚನ್ನ ಸಹಿಸುವ ಪರಿಯೇನೋ ಯುವತೀ ವಿಷಯ ಸುಖಲುಬ್ಧನಾಗಿಹೆನೋ ಹವ್ಯವಾಹನನೆನ್ನನಾಡು ಮಾಡಿದೆಯೇನೋ ಪವನನೈಯಾತ್ವತ್ಪದಾಪದ್ಮ ಭೃಂಗನೋ2 ಪರಿಪರಿ ದುರಿತಂಗಳಿಂದ ಮನದೆಡೆಯೊಳು ಹರಿಸೇವಾರ್ಚನೆಗಳಿಗೆ ಅನುವಿಲ್ಲವು ಪರಮ ಭಾಗವತರ ಜರೆವ ಖಳ ಜನರಾ ನೆರೆಯಿರದಂತೆ ಮಾಡೊ ನರಸಿಂಹವಿಠ್ಠಲಾ 3
--------------
ನರಸಿಂಹವಿಠಲರು
ನಿನ್ನ ಪೋಲುವ ಕರುಣಿಗಳನಾರ ಕಾಣೆ ಪ್ರ ಪನ್ನ ತಾ ಪಾಪಹರನೇ ಪ ಎನ್ನಪರಾಧಗಳ ಎಣಿಸದಿರು ಅಜಭವಶ ರಣ್ಯ ಪರಿಪೂರ್ಣೇಂದಿರಾಗಾರ ಅ ಶುದ್ಧಾಖ್ಯ ದ್ವಿಜನು ದಾರಿದ್ರ್ಯದಲಿ ನೆರೆ ನೊಂದು ಸದ್ಧರ್ಮ ತೊರೆದು ಮರೆದು ಶ್ರಾದ್ಧಾದಿ ದುಷ್ಟನ್ನ ಮೆದ್ದು ನಿಂದಿತನಾಗಿ ಬಿದ್ದಿರಲು ಸತಿಯು ಮತಿಯು ತಿದ್ದಿ ಪೇಳಲು ಕೇಳಿ ಶುದ್ಧ ಭಾವದಿ ತವ ಪ ದದ್ವಯಕ್ಕೆರಗಿ ಮರುಗಿ ಪದ್ಮೇಶ ಸಲಹೆನಲು ಸಿದ್ಧಿಸಿ ಮನೋರಥವ ಉದ್ಧಾರವನು ಮಾಡ್ದೆ ನೋಡ್ದೆ 1 ವಿಧಿಯ ಸಂಸ್ತುತಿ ಕೇಳಿ ಮಧ್ವಜಾಕಾರಿ ಮದಡತಮನುದರ ಬಗೆದೇ ಉದಧಿ ಮಥನದಲುದಿಸಿದಮೃತ ದೇವತೆಗಳಿಗೆ ಮುದದಿಂದಲೆರೆದೆ ಪೊರೆದೆ ಹೇಮ ಲೋಚನನ ನೀ ದೌಂಷ್ಟ್ರ ತುದಿಯಿಂದ ಕೊಂದೆÀ ತಂದೆ ಬೆದರದಲೆ ಕರೆದರ್ಭಕನ ನುಡಿಗೆ ಅವನಯ್ಯ ನುದರ ರಕ್ತವನು ಸುರಿದೇ ಮೆರೆದೇ 2 ವೈರೋಚನಿಯ ಭೂಮಿ ದಾನವನು ಬೇಡಿ ಭಾ ಗೀರಥಿಯ ಪಡದಿ ಪದದಿ ಧಾರಿಣಿಯ ದಿವಿಜರಿಗೆ ದಾನವಿತ್ತವನಿಪರ ಗಾರು ಮಾಡಿದೆ ಸವರಿದೇ ನೀರಧಿಯ ಬಂಧಿಸಿ ದಶಾಸ್ಯನ ಬಲವನು ಸಂ ಹಾರ ಮಾಡಿದೆ ರಣದೊಳು ಕಾರಗೃಹದೊಳಗಿಪ್ಪ ಜನನಿ ಜನಕರ ಬಿಡಿಸಿ ತೋರಿಸಿದೆ ವಿಶ್ವರೂಪಾ ಶ್ರೀಪಾ 3 ಆದಿತೇಯರು ಮಾಳ್ಪ ಸಾಧುಕರ್ಮಗಳ ಶುದ್ಧೋದನಾಚರಿಸೆ ತಿಳಿದು ವೇದ ಶಾಸ್ತ್ರಾರ್ಥ ಪುಸಿಯೆಂದರುಪಿ ಜಿನನತಿ ಭೇದಗೈಸಿದೆ ಸಹಿಸಿದೇ ಭೇದಗೊಳಿಸುವ ಕಲಿಯ ಕೊಂದು ಶೀ ಘ್ರದಿ ತಮಸಿಗೈಸಿದೆ ಕಲ್ಕಿ ಭಳಿರೇ ನಿಖಿಳ ಲೋಕವನೆಲ್ಲ ಧರಿಸಿ ಪ್ರಳ ಯೋದಕದಿ ಮಲಗಿ ಮೆರೆದೇ ಪೊರೆದೇ 4 ಹಂಸರೂಪದಲಿ ಕಮಲಾಸನಗೆ ತತ್ವೋಪ ದೇಶಮಾಡಿದೆ ಕರುಣದೀ ವ್ಯಾಸಾವತಾರದಲಿ ದೇವ ಋಷಿ ಪಿತೃಗಳಭಿ ಲಾಷೆ ಪೂರೈಪ ನೆವದೀ ಭಾಷ್ಯತ್ರಯಗಳಿಂದ ಭಗವದ್ಗುಣಂಗಳ ಪ್ರ ಭಾಷ್ಯತ್ರಯಗಳಿಂದ ಭಗವದ್ಗುಣಂಗಳ ಪ್ರ ಕಾಶÀ ಮಾಡಿದೆ ಮೋದದಿ ವಾಸವಾನುಜ ಜಗನ್ನಾಥವಿಠಲ ನಿನ್ನವರ ಸಲ ಹೋ ಸಮರ್ಥಾ ಕರ್ತಾ 5
--------------
ಜಗನ್ನಾಥದಾಸರು
ನಿನ್ನ ಮಾತ ಕೇಳಿ ಗಾಳಿ ನಿಲ್ಲಬೇಕೆ ಶೀತವನ್ನು ಸಹಿಸು ನೀನು ಮಾಯಾಬಲೆಗೆ ಸಿಲುಕೆ ಪಮುನ್ನ ಕಾಯವೆತ್ತಬೇಡವೆಂದಡದಕೆ ನೀನುಧನ್ಯನಾಗದೀಗ ಋತುಧರ್ಮಕಳುಕೆ ಅ.ಪಬಲೆಯ ಬೀಸಬೇಡವೆಂದು ಪಕ್ಷಿ ಪೇಳಲು ಕೇಳಿಬಲೆಯ ಬೀಸುದಿಪ್ಪುದೆಂತು ಪಕ್ಷಿ ಸಿಕ್ಕಲುಅಳುಕಿ ಸಾದು ಬಲೆಯ ಬಾಧೆ ಬಲಿಗನಾಗಲು ಹಾಗೆಛಳಿಯು ನಿನ್ನ ಬಾಧಿಸದು ಪರಮನಾಗಲು1ಬಲಿಗನಂತು ಪಕ್ಷಿ ಭಕ್ಷಣೆಯ ಮಾಳ್ಪನು ಹಾಗೆನಳಿನನಾಭ ತಾನು ವಿಷಯಾಸಕ್ತನೊ ಯೇನುಸಿಲುಕದಿಪ್ಪನೊಂದರೊಳಗೆಂಬುದಿದೇನು ಎಂದುಬಲಿಯವಾಗೆ ಶಂಕೆ ಮನವೆ ನಿನಗೆ ಪೇಳ್ವೆನು 2ಇಲ್ಲವಾದ ಜಗª ಮಾಯೆುಂದ ನಿರ್ಮಿಸಿ ತಾನುಅಲ್ಲಿ ಪೊಕ್ಕು ಉಳ್ಳದೆಂಬಹಾಗೆ ನಟಿಸಿನಿಲ್ಲಲೀಸದಿದನು ಮತ್ತೆ ಕ್ಷಣದೊಳಳಿಸಿ ಕೂಡೆನಿಲ್ಲುವನು ನಿಜದಿ ನಿರ್ವಿಕಾರಿಯೆನಿಸೀ 3ತಾನು ಸುಖಿಸುವಂತೆ ಎನ್ನ ಸುಖಿಸಬಾರದೆ ಲೋಕದೀನಬಂಧುವೆಂಬ ನುಡಿಯ ಹೋಗಲಾಡದೆಮಾನವರ ತನ್ನ ಹಾಗೆ ಕಾಣಬಾರದೆ ಎಂದುನೀನು ಕೇಳೆ ಪೇಳ್ವೆ ನಿನ್ನ ಮಾತ ಮೀರದೆ 4ಆನಂದರೂಪಗೆ ದುಃಖ ತೋರಿಸುವದೆ ಆತನೀನೆಂದೊಮ್ಮೆ ತಿಳಿಯೆ ನಿನಗೆ ದುಃಖ ಮರೆಯದೆಭಾನುವಿನ ಮುಂದೆ ತಮವು ನಿಲ್ಲಬಲ್ಲುದೆ ಜೀವನಾನೆಂಬುದರಿಂದ ಸುಖವು ಮರೆಸಿಕೊಂಡಿದೆ 5ವೇದದಲ್ಲಿ ಪೇಳಿದಂತೆ ಋಗಳೆಲ್ಲರೂ ತಾವುವೇದವೇದ್ಯಬ್ರಹ್ಮವೆಂದು ಸುಖವ ಕಂಡರೂಆದಿಮಧ್ಯತುದಿಗಳಲ್ಲಿ ಬ್ರಹ್ಮವೆಂಬರು ಅದಸಾದರದಿ ಸಾಧಿಸಲು ಸುಖವ ಕಾಂಬರು 6ಅರಿವು ಮರವೆ ಎರಡು ಬಳಿಕ ಕರಣಧರ್ಮವೂ ತಾವುಕರಣಸಾಕ್ಷಿಯಾದ ನಿಜವನರಿಯಲರಿಯವುಕುರುಹನಿಟ್ಟು ನೋಡಲರಿವಿನೊಳಗೆ ಬೆರೆವವೂ ಕೂಡೆತಿರುಪತೀಶ ವೆಂಕಟೇಶನೊಳಗೆ ಬೆರೆವವೂ7ಕಂ||ತನು ತಾ ಜೀವನ ನುಡಿಗೇಳ್ದನುವಾಗಿ ಮೇಲೆ ಮುಕ್ತಿಮಾರ್ಗಕ್ಕೆತನದಿಅನುಕೂಲನಪ್ಪೆನು ನಾ ನಿನ್ನನು ಮೀರೆನೆನುತ್ತ ಪೇಳುತ ತನುವಾದಿಪುದು
--------------
ತಿಮ್ಮಪ್ಪದಾಸರು
ನಿಲ್ಲು ನಿಲ್ಲು ಕೃಷ್ಣ ನಿನ್ನ ಸೊಲ್ಲ ಮುರಿಯ ಬಂದೆವು ಸೊಲ್ಲ ಮುರಿಯ ಬಂದೆವು ಈ ಕಳ್ಳತನವ ಸಹಿಸೆವು 1 ದಿಕ್ಕು ರಕ್ಷಿಪರಿಗೆ ದಿಕ್ಕು ಕಾಣದಂತೆ ಇರುವುದು ಸೊಕ್ಕು ಮುರಿದು ನಿಮ್ಮ ಕಾರ್ಯ ಧಿಕ್ಕರಿಸುವೆ ಕ್ಷಣದಲಿ 2 ಈಡುಮಾಡಲೇಕೆ ಇಂಥ ಕೇಡಿಗೆ ಈ ಅಬಲೆಯ ನೋಡಿ ಎಮ್ಮ ಅವಿತುಕೊಂಡ ಹೇಡಿ ಇವನ ಬಿಡುವೆನೆ 3 ಎಂಟು ಜನ ದಿಕ್ಪಾಲಕರು ಸೊಂಟ ಮುರಿವ ರಾಣಿಯ ಶೌರಿ ತಂಟೆಗಾರು ಬರುವರು 4 (ಸತ್ಯಭಾಮೆ ಮತ್ತು ದೇವೇಂದ್ರನ ವನಪಾಲಕರ ಸಂವಾದ)
--------------
ವಿದ್ಯಾಪ್ರಸನ್ನತೀರ್ಥರು
ನೀನೆ ದಯಮಾಡಲು ನಾನುದ್ಧಾರಾಗುವೆನು ಏನೇನು ಪರಲೋಕ ನಾನರಿಯೆ ಶ್ರೀಹರಿಯೆ ಪ ಹೀನಸಂಸಾರದೊಳಗೆ ಮುಳುಗಿ ಶ್ವಾನನಂದದಿ ಕರಗಿ ಕೊರಗಿ ಜ್ಞಾನಶೂನ್ಯನಾಗಿ ಬಳಲುವೆ ಜ್ಞಾನಮೂರುತಿ ಅಭಯ ಪಾಲಿಸು ಅ.ಪ ಉದಯದಲ್ಲೇಳುತ ಸದಮಲ ತವಪಾದ ಮುದದಿಂದ ನೆನೆಯದೆ ಅಧಮತನದಿ ವಿಧವಿಧದಿ ಅಧಮಜನರ ಸುದ್ದಿ ವದನದಿಂದಾಡುತ ಮುದಿಕೋಣನಂದದಿ ಮದಮುಚ್ಚಿ ನಡೆದೆ ಎಡಬಿಡದೆ ಕುದಿದೆನನುದಿನ ಪರರ ಮನೆ ಸಂ ಪದವ ನೋಡಿ ಸಹಿಸದವರ ಸದನ ಮುರಿಯುವ ಬುದ್ಧಿ ಹುಡುಕಿದೆ ಪದುಮನಾಭಪರಾಧ ಕ್ಷಮಿಸಿ1 ಒಂದು ನಾನರಿಯದೆ ಮುಂದೆ ಭಲಾಯೆಂದು ಹಿಂದೆ ನಿಂದಿಸಿ ನಕ್ಕೆ ದ್ವಂದ್ವಕರ ಬಡಿದು ಬಲು ಜರಿದು ಹಂದ್ಯಮೇದ್ಯಕಂಡಾನಂದಿಪತೆರದನ್ಯ ಸುಂದರಿಯರ ನಯನದಿಂದ ನೋಡಿದೆ ಎವೆಯಿಕ್ಕದೆ ಇಂದಿರೇಶನೆ ನಿಮ್ಮ ಪಾದವ ಒಂದೆ ಮನದಿಂ ಭಜಿಸದೆ ಭವ ದಂದುಗದಲಿ ಬಿದ್ದು ನೊಂದವ ಕಂದನೊಳು ಕೃಪಾದೃಷ್ಟಿಯಿತ್ತು 2 ದಾಸಜನರ ಆವಾಸ ನಾ ಬಯಸದೆ ಈಷಣ ಪ್ರಪಂಚದ್ವಾಸನದಲ್ಲಿ ಬಹು ತೊಳಲಿ ಆಸೆಯೆಂಬುವ ಮಹಪಾಶದಬಲೆಯೊಳು ಘಾಸಿಯಾಗುವೆ ಸಿಲ್ಕಿ ಸೋಸಿ ನೋಡದಲೆ ಮರೆ ಮೋಸದಲಿ ದಾಸ ಬುದ್ಧಿಯಿಂದ ಮಾಡಿದ ಬಲು ದೋಷರಾಶಿಗಳೆಲ್ಲ ನಾಶಿಸಿ ಶ್ರೀಶ ಶ್ರೀರಾಮ ನಿಮ್ಮ ಪಾದ ದಾಸನಿಗೆ ನಿಜಧ್ಯಾಸ ನಿಲ್ಲಿಸು 3
--------------
ರಾಮದಾಸರು
ನೆಚ್ಚದಿರು ಸಂಸಾರ ಕಾಡಗಿಚ್ಚಿನಂದದಿ ದಹಿಸುವದತಿ ಘೋರ ಪ ಕ್ಷುದ್ರ ಜನರ ಸಂಗತ್ಯಜಿಸೊ | ಸದಾ ಮಧ್ವಸುಶಾಸ್ತ್ರ ಕೇಳಿ ನೀ ಗ್ರಹಿಸೊ ಸದ್ಗುರುಗಳ ಪಾದಾಶ್ರೈಸೊ | ನೀನೆ ಉದ್ಧಾರಕನೆಂದು ಹರಿಯನ್ನೆ ಬಯಸೊ 1 ನಾನೆಂಬೊ ಅಹಂಕಾರಸಲ್ಲ | ನಿನ್ನ ಮಾನಿನಿ ಸುತರು ಸಂಗಡ ಬಾಹೋರಿಲ್ಲ ಈ ನುಡಿ ದಿಟ ಸಟಿಯಲ್ಲ | ಹೀಗೆ | ನೀನಾಚರಿಸಲು ಒಲಿವ ಶ್ರೀನಲ್ಲ2 ಆಶಾಕ್ರೋಧಂಗಳ ಕೀಳೊ | ಹರಿ | ದಾಸರ ದಾಸರ ದಾಸನೆಂದ್ಹೇಳೊ || ದೋಷಕ್ಕೆ ಅಂಜಿ ನೀ ಬಾಳೊ | ಎಲ್ಲ | ಈಶನಾಧೀಶವೆಂಬುದೆ ಮುಕ್ತಿ | ಕೇಳೋ 3 ಹರಿವಾಸರುಪವಾಸ ಮಾಡೊ | ಇರುಳು ಜಾಗರ ಮರಿಬ್ಯಾಡೊ ಮರುದಿನ ನಿದ್ರೆಯ ದೂಡೊ | ಇಂತು ಪರಿಯಲ್ಲಿ ನಡೆದರೆ ನಿನಗಿಲ್ಲ | ಕೇಡು 4 ಇಂದ್ರಿಯಗಳ ನಿಗ್ರಹಿಸೊ | ಮನಿಗೆ | ಬಂದ ಭೂಸುರರಿಗೆ ವಂದಿಸಿ | ಉಣಿಸೊ ಕುಂದು ನಿಂದೆಗಳೆಲ್ಲ ಸಹಿಸೊ | ಶಾಮ ಸುಂದರ ವಿಠಲನ್ನ ನೀ ಪೊಂದಿ ಸುಖಿಸೊ 5
--------------
ಶಾಮಸುಂದರ ವಿಠಲ
ನೆಚ್ಚಬ್ಯಾಡ ನೀರುಗುಳ್ಳೆಗೆ ಸರಿಯಾದ ಕುತ್ಸಿತ ದೇಹವೆಂದಿಗು ಸ್ಥಿರವಲ್ಲ ನ- ಮ್ಮಚ್ಚುತನಾನಂತನ ನೆನವುತ ಅನುಗಾಲ ಸ್ವಚ್ಛನಾಗಲು ಹರಿ ಮೆಚ್ಚುವನು ಪ. ಸ್ವಾತಂತ್ರ್ಯ ಲೇಶವಾದರು ನಿನಗಿಲ್ಲದೆ ಪಾತಕ ಫಲಕಿನ್ನು ಗುರಿಯಾದಿಯಲ್ಲದೆ ಯಾತರ ಸುಖವೆಂದೀ ಸಂಸಾರ ಕೂಪದಿ ಪ್ರೀತಿ ಬಡುವಿ ಪಂಚಬಂಧದಲಿ ವಾತ ಪಿತ್ತ ಶ್ಲೇಷ್ಮ ಪೂಯ ಸೃಕ್ಪೂರಿತ ಘಾತವಾಗುವುದೊಂದು ನಿಮಿಷಾರ್ಧದಲಿ ಜಗ- ನ್ನಾಥ ನಂಬಿದರೆಂದಿಗು ಪದಪಂಕ- ಜಾತಪತ್ರದ ನೆರಳಿರಿಸುವನು 1 ದೇಹವೆ ಸ್ಥಿರವಿಲ್ಲವಾದ ಮೇಲಿದರ ಸ- ನ್ನಾಹವಾಗಿರುವದನೇನೆಂದು ಗ್ರಹಿಸುವಿ ಗೇಹಧನಾಪತ್ಯ ಸ್ನೇಹವೆಲ್ಲವು ವ್ಯರ್ಥ ಮೋಹವಲ್ಲದೆ ನಿಶ್ಚಯವಲ್ಲವು ಐಹಿಕಾಮುಷ್ಮಿಕವೆಂಬ ಸಕಲ ಸುಖ ದೋಹನ ಧೇನು ಸರ್ವೇಶ್ವರ ಹರಿಯ ಸ- ಮಾಹಿತ ಮನದಿಂದ ಭಜಿಸೆ ನಿನ್ನನು ಪಕ್ಷಿ ವಾಹ ಕೈ ಬಿಡದೆ ಕಾಪಾಡುವನು 2 ಒಂದು ದಿವಸ ನೀರೊಳದ್ದದಿದ್ದರೆ ದು- ರ್ಗಂಧ ಭೂಯಿಷ್ಠವು ಸಹಿಸಲಸಾಧ್ಯವು ಹಿಂದಿನ ಕರ್ಮಾನುಬಂಧವು ತಿಳಿಯದು ಮುಂದಿನ ಹೊಂದಿಕೆ ಒಂದಾದರು ಇಂದಿರಾವರ ವೆಂಕಟೇಶನ ಪಾದಾರ- ವಿಂದ ಧ್ಯಾನಗಳೆಂಬದೊಂದೆ ಪರಮಸುಖ ವೆಂದು ತಿಳಿದು ಭಕ್ತಿಯಿಂದ ಭಜಿಸು ನಮ್ಮ ತಂದೆ ಬಿಡದೆ ಕಾವನೆಂದೆಂದಿಗು 3
--------------
ತುಪಾಕಿ ವೆಂಕಟರಮಣಾಚಾರ್ಯ