ಒಟ್ಟು 53 ಕಡೆಗಳಲ್ಲಿ , 15 ದಾಸರು , 50 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶೋಧಿಸಿ ನೋಡಿರೋ ಸದಾ ಬೋಧದ ನಿಜಬೋಧ ಧ್ರುವ ಸಾಧಿಸಿ ನೋಡಿ ಸದ್ಗುರು ಕೃಪೆಯಿಂದ ಸಾಧನಕೆದುರಿಡುವುದು ಆನಂದ ಭೇದಿಸಿ ನೋಡುವದಿದೇ ತನ್ನಿಂದ ಆದಿ ಅನಾದಿದೇ ಸಹಜಾನಂದ 1 ತಂದುವಿಡಿದರಂತತ್ತೆ ನೋಡಿ ಎಂತೆಂತೀಹ್ಯ ನಿಜದಂತೆ ಗೂಡಿ ಅಂತರಾತ್ಮದಲೆ ಅನುಭವ ಬೆರೆದಾಡಿ ಸಂತತ ಸದಮಲ ಸುಖಸೂರ್ಯಾಡಿ 2 ವಿಹಿತಕೆ ವಿಹಿತಾಗುವ ಸುಪಥ ದ್ವೈತಾದ್ವೈತಕಿದೆ ರಹಿತ ಮಹಾಮಹಿಮರ ಆನಂದಭರಿತ ಮಹಿಪತಿ ಮನೋನ್ಮನದ ಸುವಸ್ತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀನಾಥ ವಿಠಲ ಹರಿ | ನೀನೆ ಪೊರೆ ಇವನಾ ಪ ಮಾನನಿಧಿ ಮಧ್ವಾಖ್ಯ | ವಂದಿತ ಸಂಚರಣಾ ಅ.ಪ. ಯೋನಿ ಆನೇಕದಲಿ | ಜನುಮಗಳ ತಾಪೊತ್ತುಮೌನಿ ಜನ ಸಂಯೋಗ | ಸತ್ಸಂಗಗಳ ಪಡೆದೂಧ್ಯಾನ ಸಾಧನಕಾಗಿ | ಮೌನಿರಾಯರ ಸೇವೆಸಾನುರಾಗದಿ ಗೈಯ್ಯೆ | ಶ್ರೀನಾಥ ಒಲಿದೇ 1 ದಾಸ ಸತ್ಪಂಥಾನು | ವಾಸಿಪೆನು ಎಂದೆನುತವಿೂೀಸಲದ ಸನ್ಮನದಿ | ಪ್ರಾರ್ಥಿಸುತ್ತಿಹಗೇಲೇಸು ತೈಜಸನಾಜ್ಞೆ | ಪೋಷಿಸುತ ವಿಠಲನ ಸಸೂಸಿ ಸೇವಿಸಿ ಇತ್ತೆ | ಅಂಕಿತವನಿವಗೇ 2 ಮಾರಾರಿ ಸದ್ವಿನುತ | ತಾರತಮ್ಯವ ತಿಳಿಸಿಮಾರೆರಡು ಭೇಧಗಳ | ಅರಹುತಲಿ ಇವಗೇಪಾರಗಾಣಿಸು ಭವವ | ನೀರೋಜೋದ್ಭವನಯ್ಯಕಾರುಣಿಕ ಶ್ರೀಹರಿಯೆ | ಕಾರುಣ್ಯ ಮೂರ್ತೇ 3 ಸಖನಾಗಿ ಇವನಲ್ಲಿ | ಸುಖ ಕವನ ಪೇಳಿಸುತ ಪ್ರಕಟ ಗೈ ತವರೂಪ | ನಿಕಟ ಹೃದ್ಗುಹದೀವಿಖನಸಾಂಡದ ಓಡೆಯ | ಸಕಲ ಪ್ರೇರಕ ನಿನ್ನಅಕುಟಿಲದೆ ಮನದಿಂದ | ಪ್ರಾರ್ಥಿಸುವೆ ಹರಿಯೇ 4 ಸಿರಿ ಭೂಮಿ ರಮಣನೇಅರಹಲೇನಿಹುದಿನ್ನು | ಸರ್ವಜ್ಞ ಮಾರ್ತೇಕರುಣ ದೃಷ್ಟಿಲಿ ನೋಡಿ | ಪರಿಹರಿಸೊ ದುಷ್ಕರ್ಮಹರಿಯೆ ಗುರು ಗೋವಿಂದ | ವಿಠಲ ಮಾರುತಿಯೆ 5
--------------
ಗುರುಗೋವಿಂದವಿಠಲರು
ಶ್ರೀಹರಿಯು ದಾಸರಿಗೆ ಒಲಿದ ಸ್ತೋತ್ರ ನೀನಾಗಿ ನೀಎನಗೆ ಒಲಿಯೋ ಸರ್ವೇಶ ಪ ದೀನ ವತ್ಸಲ ವೇಧಪಿತ ಶ್ರೀದ ಶ್ರೀಶ ಅ.ಪ ಕರಿಯಂತೆ ನಿನ್ನರಿತು ಕರೆಯಲರಿಯೆನು ನಾನು | ನಾರಿಯಂತೆ ಸವಿದು ಕೊಡಲರಿಯೆ ಪಣ್ಣು || ತರುಗಳಂತೆ ತಪಸ್ಸು ಸಂಸ್ಮರಣೆ ನಾನರಿಯೆ ಕರುಣಾಭ್ಧಿ ನೀನೇ ಪೊರೆ ಎನ್ನ ಶ್ರೀಹರಿಯೆ 1 ಹೇಮ ಕಾಮಿನಿ ಭೂಮಿ ಸಾಧನಕ್ಕೊದಗಬೇಕು | ಮಮ ಅಹಂಕಾರ ದುಷ್ಟದಿ ರತಿ ಸಾಕು || ಭೂಮನಿನಗೆ ಪ್ರಿಯ ಸೇವೆಯಾಗಲಿ ಸರ್ವ | ಕಾಯ ಕ್ರಿಯೆಗಳು ದೇವ ದೇವ 2 ಎನ್ನ ಸರ್ವಾಭೀಷ್ಟಗಳು ಸಿಧ್ಧಿ ಆಗುವವು | ನಿನ್ನ ಔದಾರ್ಯ ಕೃಪೆಯಿಂದ ಎಂದೆಂದೂ || ನಿನ್ನಧೀನವು ನಾನುರಕ್ಷಕನು ನೀ ಶ್ರೀಶ || ಎನ್ನುವದೊಂದೇ ಬಲ್ಲೆ ಪ್ರಸನ್ನ ಶ್ರೀನಿವಾಸ 3
--------------
ಪ್ರಸನ್ನ ಶ್ರೀನಿವಾಸದಾಸರು
ಸತ್ಸಂಗದಿಹುದು ನೇಮ ಧ್ರುವ ಸಾಧು ಸಮಾಗಮ ಸಮಾಗಮ ಛೇದಿಸುವದು ಭವಭ್ರಮ 1 ತರಣೋಪಾಯಿದು ಒಂದೆ ಇದು ಒಂದೆ ನಿರ್ಣೈಸದೆ ಮೊದಲಿಂದೆ 2 ಸಾಧನಿದೆ ಸ್ವಹಿತ ಇದೆ ಸ್ವಹಿತ ನವನೀತ 3 ಸರಿ ಈ ಸಾಧನಕಿಲ್ಲ ಸಾಧನಕಿಲ್ಲ ಗುರು ಶರಣಾಗತ ಬಲ್ಲ 4 ಸಾಧನದಿ ಸುವಸ್ತ ಸುವಸ್ತ ಸಾಧಿಸಿತು ಮಹಿಪತಿಗೆ ಸಾಭ್ಯಸ್ತ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸರ್ವ ವಿಪತ್ ಪರಿಹಾರ ಸ್ತುತಿ ಕರ್ಮ ಫಲದಾತನು ಶೂನ್ಯ ಪ ವಾಹನ ಪತನ ಉಕ್ಕಿ ಪ್ರವಹಿಸುವ ನದಿ ಮೊದಲಾದ್ದರಿಂದ ಏಕ ಕಾಲದಿ ಸಂಗ ಮರಣ ಸಂಭವಿಸುವುದು ಏಕೆಂದು ಶಂಕಿಸುತಿ ಕೇಳು ಶ್ರದ್ಧಾಳು 1 ಏಕ ಕಾಲದಿ ನಾನಾ ಜನರು ಸಂಗದಿ ಕೂಡಿ ಮಂದ ಮಾರುತ ಪುಷ್ಪವನದಿ ಶ್ರೀಕರ ಕಥಾ ಶ್ರವಣ ನಾಟಕ ಕೇಳಿಕೆಯು ಹೀಗೆ ಜನ ಸಂಘದಲಿ ನಾನಾ ಸಂಭವವು 2 ಒಂದೊಂದು ಮನುಜನಿಗು ಇಂಥಾ ಕಾಲದಿ ಇಂಥಾ ರೀತಿಯಲಿ ಇಂಥಾ ಸ್ಥಳದಲ್ಲಿ ಇಂಥಾ ಹಿತಕರವೊ ಅಹಿತವೊ ಕರ್ಮಗತಿ ಸಂಭವವು ಶ್ರೀದ ನಿಯಮಿಸುವ ವೈಷಮ್ಯವಿಲ್ಲದಲೆ 3 ಮಳೆ ಬಿಸಿಲುಭೂಕಂಪ ಚಂಡಮಾರುತ ಸುಳಿಸುಳಿದು ಪ್ರವಹಿಸುವ ನದಿ ಹರಡುವ ದಾವಾಗ್ನಿ ಎಲ್ಲ ಇಂಥಾ ಅಹಿತ ಸಂಭವದಿ ಸಿಲುಕುವರು ಅಲ್ಲಲ್ಲಿ ಬಹುಜನರು ಕರ್ಮಗತಿಯಲ್ಲಿ 4 ಘೋರ ಭೂಕಂಪದ ಪೀಡೆಗೆ ಯೋಗ್ಯರು ಯಾರು ಯಾರೊ ಒಳ್ಳೆವರೋ ಕೆಟ್ಟವರೊ ಹರಿಯು ಆ ಜನರನ್ನು ಕಂಪನಕೆ ಒಳಮಾಡಿ ಮರಣಾಂಗ ಹೀನತೆಯು ರಕ್ಷಣೆಯು ಈವ 5 ಭಿನ್ನ ಜೀವರು ಭಿನ್ನ ಕರ್ಮಗತಿ ಉಳ್ಳವರು ಭಿನ್ನ ಫಲಯೋಗ್ಯರು ಆದ ಕಾರಣದಿ ಕ್ಷೋಣಿ ಕಂಪನದಲ್ಲಿ ಮರಣ ಕೆಲವರಿಗೆ ಅಂಗ ಹೀನತೆ ಕೆಲವರಿಗೆ ರಕ್ಷಣೆ ಕೆಲವರಿಗೆ 6 ಘೃಣಿ ಹರಿಯು ಭೂಕಂಪ ಆಗುವ ಪೂರ್ವದಲೆ ಜನರು ಕೆಲವರನ್ನು ಬೇರೆ ಊರಿಗೆ ಕಳುಹಿ ಹಾನಿಗೊಳಿಸುವ ಕಂಪನಕೆ ಸಿಲುಕದಂತೆ ಇನ್ನು ಕೆಲವರನ್ನು ಅಲ್ಲಿ ಬಾರದೇ ಮಾಳ್ಪ 7 ಸಿಂಧು ವಿಜ್ಞಾನಂದ ಹರಿಯೇ ಕರ್ಮಾಧ್ಯಕ್ಷನು ಕರ್ಮಫಲದಾತ ಕರ್ಮ ಕೊಡದು ಫಲ ಕರ್ಮಾಧ್ಯಕ್ಷ ಶ್ರೀಹರಿಯೇ ಫಲದಾತ 8 ಸಂಘ ದುಃಖ ಪ್ರಾಪ್ತಿಯು ಹಾಗೆ ಭವಿಸುವುದು ಐಹಿಕ ವಿಷಯಜವು ಉದಾನಿಸಿ ಅಘದೂರ ಗುರುಗ ಶ್ರೀ ಹರಿಯ ಸ್ಮರಿಸು 9 ನರಜನ್ಮ ಹೊಂದಿದವ ಹರಿನಾಮ ಸರ್ವದಾ ಸ್ಮರಿಸುವುದು ಕರ್ತವ್ಯ ದೊರಕಿದ ಸ್ಥಳದಿ ಹರಿನಾಮ ಭಕ್ತಿ ಪೂರ್ವಕದಿ ನುಡಿಯಲೇ ಬೇಕು ನರಪಶÀು ಜಡಮತಿ ಮೂಢನು ನುಡಿಯ 10 ಹರಿಯೇ ಸರ್ವೋತ್ತಮನು ಮುಖ್ಯಕಾರಣ ವಿಷ್ಣು ಶ್ರೀರಮಾಪತಿಯೇ ಸ್ವತಂತ್ರ ಜಗನ್ನಾಥ ಸರಸಿಜೋದ್ಭವ ಶಿವ ಶಕ್ರಾದಿ ಸರ್ವರಿಗೂ ಪ್ರೇರಕನು ಸ್ವಾಮಿಯು ಚಿತ್ ಅಚಿತ್ ನಿಯಂತ 11 ವಿಹಿತ ಸಾಧನಕ್ಕೊದಗೆ ನ್ಯಗ್ರೋಧೋದುಂಬರ ಹರಿ ದೇಹ ಬೆಳಸುವ ಪೋಷಿಸುವ ರಕ್ಷಿಸುವನು ಅಹರ್ನಿಶಿ ಪಾಲಿಸುವ ಭಕ್ತವಾತ್ಯಲ್ಯದಿ ಮಹಾರ್ಹರ ರಕ್ಷಿಸಿದ ಪ್ರಹ್ಲಾದ ಗಜಪತಿಯ 12 ಹರಿಯ ಪಾದಕೆ ಅಭಿಷೇಕ ಮಾಡಿದ ಬ್ರಹ್ಮ ಹರನು ಕೈಲಾಸ ವಾಸನು ಆ ತೀರ್ಥ ಸಹಸ್ರನಾಮ ಬೃಹತೀ ಸಹಸ್ರ ಸಹ ಪಠಿಸುತ್ತಾ ಸತಿ ಪಾರ್ವತಿಗೆ ಎರೆದ 13 ಹರಿನಾಮ ಸಂಸ್ಮರಣೆ ಪೂರ್ವಕದಿ ಈ ನುಡಿಯ ಬರೆಯುವ ಪಠಿಸುವ ಕೇಳುವ ಭಕ್ತರನ್ನು ಶ್ರೀರಮಾಯುತ ಹರಿ ಸುರವೃಂದ ಸಹ ಬಂದು ಸಂರಕ್ಷಿಸುವ ಸರ್ವವಿಪತ್ ದೂರ ಮಾಡಿ 14 ವರಾಹ ನರಸಿಂಹ ಭೂತಿದ ದಯಾಬ್ಧಿ ಶ್ರೀ ಪ್ರಸನ್ನ ಶ್ರೀನಿವಾಸ ನಮೋ ಸದಾ ಶರಣು ಮಾಂಪಾಹಿ ಸಜ್ಜನರ 15
--------------
ಪ್ರಸನ್ನ ಶ್ರೀನಿವಾಸದಾಸರು
ಸಾಧನಕೆ ಸಾಧನಾಖ್ಯಾನ ವೃಂದಾವನಾ ಪ ಸೋದೆ ಪುರವಾಸಿ ಶ್ರೀ ವಾದಿರಾಜರ ಕರುಣಾ ಅ.ಪ. ಕುರುಡು ಶುನಕವು ತಾನು ನೆರೆದ ಸಂತೆಗೆ ಬಂದುಸರಕು ವಿನಿಮಯ ಮಾಡಿ ಮರಳಿ ಬರುತಿರುವಾ |ಪರಿಯ ಮಾಡದಲೆನ್ನ ಇರುವ ಸ್ವಪ್ನದಿ ತಿಳುಹಿಕರುಣಿಸಿಹೆ ಮಹ ಮಹಿಮ ಗುರು ಸಾರ್ವಭೌಮಾ 1 ಕಾರ್ಯ ವೃಂದಾವನಚಾರ್ಯರೊಡೆವೆರಸುತ್ತಧೈರ್ಯದಿಂದಲಿ ಗೈಸಿ ಭಾರ್ಯಸಹಕೃತದಿ |ಪ್ರೇರ್ಯ ಪ್ರೇರಕ ಹೃದಯ ಧಾರ್ಯಮಾರ್ಗವನರುಪಿಸ್ಥೈರ್ಯವನು ಎನಗಿತ್ತ ಆಯ್ ಲಾತವ್ಯಾ2 ಜೀವ ಅಸ್ವಾತಂತ್ರ ದೇವ ನಿಜ ಸ್ವಾತಂತ್ರನೀವೆ ಎಮ್ಮೊಳು ನಿಂತು ಸರ್ವ ಕಾರ್ಯಗಳಾ |ಓವಿ ಗೈವುತ ದೇವ ದೇವ ಹಯ ಮೊಗ ಗುರುಗೋವಿಂದ ವಿಠಲಂಗಿತ್ತು ತಾವಕನ ಸಲಹುವುದು 3
--------------
ಗುರುಗೋವಿಂದವಿಠಲರು
ಸಾಧನಕ್ಕೆ ಬಗೆಗಾಣೆನೆನ್ನಬಹುದೆ ಸಾದರದಿ ಗುರುಕರುಣ ತಾ ಪಡೆದ ಬಳಿಕ ಪ ಕಂಡಕಂಡದ್ದೆಲ್ಲ ಕಮಲನಾಭನ ಮೂರ್ತಿ ಉಂಡು ಉಟ್ಟದ್ದೆಲ್ಲ ವಿಷ್ಣು ಪೂಜೆ ತಂಡತಂಡದ ವಾರ್ತೆ ವಾರಿಜಾಕ್ಷನ ಕೀರ್ತಿ ಹಿಂಡು ಮಾತುಗಳೆಲ್ಲ ಹರಿಯ ನಾಮ 1 ವಾಗತ್ಯಪಡುವದೆ ವಿಧಿನಿಷೇಧಾರಚರಣೆ ರೋಗಾನುಭವವೆಲ್ಲ ಉಗ್ರತಪವು ಆಗದವರಾಡಿಕೊಂಬುವುದೆ ಆರ್ಶೀವಾದ ಬೀಗುರುಪಚಾರವೇ ಭೂತದಯವು 2 ಮೈಮರೆತು ಮಲಗುವುದೆ ಧರಣಿ ನಮಸ್ಕಾರ ಕೈಮೀರಿ ಹೋದದ್ದೆ ಕೃಷ್ಣಾರ್ಪಣ ಮೈ ಮನೋವೃತ್ತಿಗಳೆ ವಿಷಯದಲಿ ವೈರಾಗ್ಯ ಹೋಯ್ಯಾಲಿತನವೆಲ್ಲ ಹರಿಯ ವಿಹಾರ 3 ಹಿಡಿದ ಹಟ ಪೂರೈಸಲದು ಹರಿಯ ಸಂಕಲ್ಪ ನಡೆದಾಡುವೋದೆಲ್ಲ ತೀರ್ಥಯಾತ್ರೆ ಬಡತನವು ಬರಲದೇ ಭಗವದ್ಭಜನೆಯೋಗ ಸಡಗರದಲ್ಲಿಪ್ಪುದೆ ಶ್ರೀಶನಾಜ್ಞಾ 4 ಬುದ್ಧಿಸಾಲದೆ ಸುಮ್ಮನಿರುವುದೇ ಸಮ್ಮತವು ಯದೃಚ್ಛಾಲಾಭವೇ ಸುಖವುಯೆನಲು ಮಧ್ವಾಂತರ್ಗತ ಶ್ರೀ ವಿಜಯವಿಠ್ಠಲರೇಯ ಹೃದ್ಗತಾರ್ಥವ ತಿಳಿದು ಒಪ್ಪಿಸಿಕೊಳನೆ 5
--------------
ವಿಜಯದಾಸ
ಸಾಧಿಸಿದೇ ನೋಡಿ ಪೂರ್ಣ ಆದಿ ತತ್ವದ ಸುಸ್ಥಾನ ಭೇದಿಸುವದನುದಿನ ಸದಾನಂದ ಗುರುಜ್ಞಾನ ಧ್ರುವ ಮಾತಿನಂತಲ್ಲವಿದು ಸ್ವಾತ್ಮಸುಖದ ಸಾಧನ ಶ್ರುತಿಗಗೋಚರ ನೋಡಿ ಪ್ರತ್ಯೇಕದನುಸಂಧಾನ ಅತಿಗುಹ್ಯಗೂಢವಿದು ಹಿತೋಪಾಯದ ಖೂನ ರತಿಗೊಟ್ಟುನೋಡಿ ಪ್ರತ್ಯಕ್ಷ ಇಹ್ಯ ನಿಧಾನ 1 ನಡಿನೋಟ ನೀಟಮಾಡಿ ಪಡಕೊಳ್ಳದೆ ಸ್ವಹಿತ ನುಡಿಆಟದೋರಬ್ಯಾಡಿ ಕೂಡಿ ಸುಜ್ಞಾನÀಸನ್ಮತ ಬಡಬ್ಯಾಡಿ ನಾನಾಶ್ರಮವಿಡಿಯದೆ ಸುಗಮ ತಾ ಇಡಿದು ತುಂಬೇದ ಸಾಂದ್ರ ನೋಡಿ ಅನಂದೋಭರಿತ 2 ಸಾಧನಕಿದೇ ಮುಖ್ಯ ಸಾಧಿಸಿದೆ ಗುರುದಯ ಇದಕಿಲ್ಲ್ಲಿನ್ನೊಂದಧಿಕ ಬುಧಜನರ ಉಪಾಯ ಅದರಿಂದೊಲುವ ತಾನು ಸದ್ಗುರು ಭಾನುಕೋಟ್ಯುದಯ ಸದ್ಗೈಸಿ ಮಹಿಪತಿಯ ಸದೋದಿತ ಉದಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾಧು ಸಮಾಗಮ ಸಾಧನಕುತ್ತಮೋತ್ತಮ ಸಾಧಿಸಿದವ ಸಕಲಕ ನಿಸ್ಸೀಮ ಧ್ರುವ ಸಾಧು ಸುದರುಶನ ಸದಮಲಾನಂದ ಪೂರ್ಣ ಸದಾ ಸದ್ಗೈಸುವ ಸುಖಸಾಧನ 1 ಸಾಧು ಸಂಭಾಷಣ ಸುಧಾರಸ ಪ್ರಾಶನ ಸದೋದಿತ ಸಹಿತ ಭೂಷಣ2 ಸದಾ ಸಕಾಲದಲಿ ಮಹಿಪತಿಗಾನಂದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾನುಭವದ ಸುಖ ಸಾಧಿಸಿ ನೋಡಿ ತಾನಾಗದೇ ನಿಜಗೂಡಿ ಸ್ವಾನುಭವ ಧ್ರುವ ಮನದ ಕೊನಿಯಲ್ಯದ ಘನಸುಖದಾಟ ಅನುಭವಕಿದು ಬಲು ನೀಟ ಖೂನದೋರುವ ಘನ ಗುರುದಯ ನೋಟ ಮುನಿಜನಕಾಗುವ ಪ್ರಗಟ 1 ಸುರಿಯುತಲ್ಯದ ಸುಖ ಸಂತ್ರಾಧಾರಿ ಇರುಳ ಹಗಲದೀ ಪರಿ ಅನುದಿನ ನಿಜಸಾರಿ ತೋರುತಲ್ಯದ ಘನ ಬೀರಿ 2 ಸ್ವಹಿತ ಸಾಧನಕಿದು ಸವಿಸಾರ ಮಹಾನುಭವದಾಗರÀ ಮಹಿಪತಿಗಿದು ಮಾಡುವ ಮನೋಹರ ಇಹಪರ ಘನ ಸಹಕಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹಯಗ್ರೀವ ವಿಠಲ | ಪೊರೆಯ ಬೇಕಿವನಾ ಪ ಭಯ ಭರಿತ ಭಕ್ತಿಯಿಂ | ಪ್ರಾರ್ಥಿಸುತ್ತಿಹನು ಅ.ಪ. ಗುರುತಂದೆ ಮುದ್ದು ಮೋಹ | ನರಿತ್ತಂಕಿತ ಪದಮರೆಯಾಗಿ ಕಾಣದಲೆ | ಪೋದುದಕ್ಕಾಗೀಪರಿತಪಿಸಿ ಬಹುವಾಗಿ | ಮೊರೆಯನಿಡುತಿಹ ಹರಿಯೆಕರುಣಿಗಳು ಗುರು ಪರವು | ಪದರಚಿಸಿ ಇತ್ತೇ 1 ಪರಿ ಪರಿಯಸೂಚಿಸೋ ಸನ್ಮಾರ್ಗ | ಸಾಧನಕೆ ಹರಿಯೇ ವಾಚಾಮ ಗೋಚರನೆ | ನೀಚೋಚ್ಚ ತರತಮವವಾಚಿಸುತ ಇವನಲ್ಲಿ | ಮೋಚಕನು ಆಗೋ 2 ಭವ ಶರಧಿ ದಾಟಿಸಲುತವನಾಮ ಸಂಸ್ಮøತಿಯ | ಶ್ರವಣ ಸುಖವಿತ್ತೂಭವರೋಗ ವೈದ್ಯ ಗುರು | ಗೋವಿಂದ ವಿಠ್ಠಲನೆಹವಣದಲಿ ಪೊರೆಯಲ್ಕೆ | ಪ್ರಾರ್ಥಿಸುವೆ ಹರಿಯೇ 3
--------------
ಗುರುಗೋವಿಂದವಿಠಲರು
ಹರಿ ಗೋವಿಂದ ವಿಠಲ | ಪೊರೆಯ ಬೇಕಿವಳಾ ಪ ನಿರುತ ಹರಿ ಗುರುದಾಸ್ಯ | ಅರ್ಥಿಸುತ್ತಿಹಳಾ ಅ.ಪ. ಸುಪ್ತೀಶತೋರ್ದಪರಿ | ಪ್ರಾಪ್ತಿ ಪ್ರಾಣನ ವಶವುಕ್ಲಪ್ತವಾಯ್ತಿವಳೀಗೆ | ಮುಕ್ತಿ ಸಾಧನಕೆ |ಎತ್ತ ನೋಡಿದರತ್ತ | ಆಪ್ತಮುಖ್ಯ ಪ್ರಾಣಪೊತ್ತಿಹನು ಸರ್ವತ್ರ | ವ್ಯಾಪ್ತಿ ಮೂರುತಿಯೇ 1 ಭವ ಹಾರೀ 2 ಭುವನ ಪಾವನ ನಿನ್ನ | ಸ್ತವನ ವೈಭವ ಕೇಳೆಸರ್ವದಾ ಸರ್ವತ್ರ | ಶ್ರವಣ ಸುಖದಲ್ಲೀನಿರ್ವಿಕಾರದ ತಿರಗಲೀಕೆಯ ಮನಸುಸರ್ವಾಂತರಾತ್ಮಕನೆ | ಸಾರ್ವಭೌಮ 3 ತಾಪ ಭಯಅಧ್ಯಕ್ಷ ಶ್ರೀಹರಿಯೆ ನೀನಾಗಿ ಕಳೆದೂ |ಮಧ್ವಾಂತರಾತ್ಮಕನ | ಹೃದ್ಗುಹದಿ ತೋರೆಂದುಬುದ್ಧಿ ಪೂರ್ವಕ ಬೇಡ್ವೆ | ಪದ್ಮನಾಭಾ 4 ಸಾಧನದ ಜೀವಿಗಳ | ಸಾಧನದ ಪ್ರತಿಭಂಧಸಾದರದಿ ವಾರಿಸುತ | ಮೋದಮನ ನೀಯೋ |ಮೋದಮುನಿ ವಂದ್ಯ ಗುರು | ಗೋವಿಂದ ವಿಠಲನೆನೀದಯದಿ ಪೊರೆ ಇವಳ | ಪ್ರಹ್ಲಾದ ವರದಾ 5
--------------
ಗುರುಗೋವಿಂದವಿಠಲರು
ಹರಿಯ ಭಜನೆ ಮಾಡೋ ನಿರಂತರ ಪ. ಪರಗತಿಗಿದು ನಿರ್ಧಾರ ಅ.ಪ. ಮೊದಲೆ ತೋರುತದೆ ಮಧುರ ವಿಷಯಸುಖ ಕಡೆಯಲಿ ದುಃಖ ಅನೇಕ 1 ವೇದಶಾಸ್ತ್ರಗಳನೋದಿದರೇನು ಸಾಧನಕಿದು ನಿರ್ಧಾರ 2 ಸಾರವೊ ಬಹುಸಂಸಾರ ವಿಮೋಚಕ ಸೇರೊ ಶ್ರೀಹಯವದನನ್ನ 3 ತತ್ವವಿವೇಚನೆ
--------------
ವಾದಿರಾಜ
ಹರಿರೇವ ಪರೋ ಹರಿದೇವ ಗುರೋ ಹರಿಯೇ ಗುರುವೆಂದರವ್ಹಿರೋ ಧ್ರುವ ಗುರುಮಧ್ವಪರ್ಹೇಳಿದ ನಿಜಕೀಲು ಅರಿತುಕೊಂಬುವಾದಿದೆವೆ ಮೇಲು ಪರಮ ಭಗತರನುಭವದ ಬಾಗಿಲು ಪರಗತಿ ಸಾಧನಕಿದೆ ಮಿಗಿಲು 1 ಹರಿಗುರುವೆರಡಾಗಿ ತೋರಿತು ನಾಮವು ಅರಿಯಲರಿಯದವಾಗಿದೆ ಭ್ರಮವು ತೋರುವದೊಂದೇ ಸಜ್ಜನರಿಗಿದೇ ನೇಮವು ಅರಿಕ್ಯುಳ್ಳವರಿಗಿದೇ ಕ್ರಮವು 2 ಹರಿಗುರು ಒಂದಾಗಿ ತೋರಿತು ನಿಜಘನ ತರಳ ಮಹಿಪತಿಸ್ವಾಮಿಯ ಕರುಣ ಗುರುಭಾನುಕೋಟಿತೇಜನೆ ಪರಿಪೂರ್ಣ ತೋರುವದೊಂದಾಗಿದೆ ನಿಜಖೂನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹೃತ್ಪದ್ಮದೊಳಿದ್ದು ಹೃತ್ತಾಪಗಳ ಕಳೆಯೊ ಜೀ- ವತ್ಪಿತಾಮಹ ಜನಕನೇಪ ಮೃತ್ಪಿಂಡದಂತೆನ್ನ ಉತ್ಪತ್ತಿಗೆ ಕ- ಣ್ಣೆತ್ತಿ ನೋಡಲರಿಯಾ ಜೀಯಾ ಅ.ಪ ನಿತ್ಯ ನಿತ್ಯ ಜಗವೆಲ್ಲವು ನಿತ್ಯವು ನಿತ್ಯತ್ವವೆಲ್ಲ ಸರಿಯೇ ಏನಿದ್ದರೇನು ಅನಾದಿಕರ್ಮದ ಬವಣೆ ಬೆನ್ನಟ್ಟಿ ಬರುತಿರ್ಪುದ- ಜ್ಞಾನಾಂಧಕಾರದಿಂ ಧ್ಯಾನವನು ತಿಳಿಯದೇ ಕಾನನದೊಳಿಪ್ಪೆನೋ ಜ್ಞಾನಗಮ್ಯನೆಂದು ಸಾರುತಿದೆ ಶ್ರುತಿ ಶಾಸ್ತ್ರ ಜ್ಞಾನಗುರು ದೊರೆತಿಲ್ಲವೋ ಸಾನುರಾಗದಿ ನೀನೆ ಸಾಧನಕೆ ಕರುಣಿಸಿ ಧ್ಯಾನದಲಿ ಮನಸು ನಿಲಿಸೋ ಉಳಿಸೋ 1 ಬಂಧ ಮೋಕ್ಷಕೆ ಎಲ್ಲ ಮನವೆ ಕಾರಣವೆಂದು ಎಂದೆಂದಿಗು ಪೇಳುತಿಹರು ಸಿಂಧುಶಯನನೆ ಭವಬಂಧಮೋಚಕನೆಂದು ವಂದಿಸಿ ಪೊಗಳುವರೊ ಮಂದರೊದ್ಧರ ನಿನ್ನ ಮಂದಮತಿಯಿಂದಲಿ ವಂದಿಸಲು ನಾನರಿಯೆನೊ ಕಂದರ್ಪಜನಕ ನೀ ಮಂದಭಾಗ್ಯನ ಮನವ ನೋಯಿಸದೆ ನಿನ್ನ ಪದದಲ್ಲಿರಿಸೊ ಅಂದೆ ಎನ್ನಯ ಭವಬಂಧನಾಶವಾಗುವು- ದೊಂದೆ ನಿನ್ನನು ಬೇಡುವೆನೊ ಜೀಯ 2 ಜೀವರೆಲ್ಲರು ಗುಣತ್ರಯಾವರಣದಿಂದ ಕರ್ಮ- ಪ್ರವಹದೊಳಿಪ್ಪರೊ ಕವಿಸಿ ಮೋಹವ ನೀನು ಭವಕೆ ಕಾರಣವಹುದು ದೇವೇಶ ನಿನ್ನಾಟವೋ ಶ್ರವಣದಿಂದಲಿ ಭವಬಂಧಮೋಚಕನೆಂದು ತವ ಬಿರುದು ಸಾರುತಿದೇಕೋ ಭಾವ ಬಲ್ಲವರಾರೋ ಕಾವ ಕರುಣಿ ನೀನೆ ಭಾವಜನ ಪಿತನು ಅದೇ ಭವಪಾಶ ಬಿಡಿಸೆ ನಾ ಭಕುತಿಪಾಶದಿಂದ ಪಾದ ಬಿಗಿವೆನಯ್ಯ ಜೀಯ 3 ಸ್ವಾತಂತ್ರ್ಯವೆಲ್ಲಿಹುದು ಸ್ವಾಮಿತ್ವವೆಲ್ಲಿಹುದು ಅ- ಸ್ವತಂತ್ರನಾಗಿಪ್ಪೆನೊ ಕಾತುರದಿ ನಾ ಮಾಳ್ಪ ಕ್ರಿಯೆಗಳೆಲ್ಲವು ಎನ್ನ ಸ್ವಾತಂತ್ರ್ಯವೆಂದ್ಹೇಳುವೆ ನೀ ತಂತ್ರಿಯಾಗಿದ್ದೆನ್ನ ನಡೆಸುವುದನರಿಯೆ ಕು- ತಂತ್ರವನು ನಾ ಮಾಡುವೆ ಸ್ವಾ- ತಂತ್ರನು ನೀನು ಸೂತ್ರನಾಮಕ ದೇವ ಮಂತ್ರಿಯಾಗೀದೇವ ಯಂತ್ರ ನಡೆಸುವ ಎಂತಾದರಡಿಗಡಿಗೆ ಅತಂತ್ರನಾಗಿಹೆ ನಾನೇ ಭ್ರಾಂತಿಪರಿಹರಿಸಿ ಕಾಯೊ ಶೌರೇ 4 ಭಕ್ತಿ ಇಲ್ಲದೆ ನಿನ್ನ ಭಕ್ತನಾಗುವುದೆಂತೋ ಭುಕ್ತಮಾತ್ರನು ನಾನು ಮುಕ್ತರೊಡೆಯ ನೀನು ಯುಕ್ತಿತೋರಿಸು ಎನಗೆ ಭಕ್ತಾಪರಾಧಸಹಿಷ್ಣು ಶಕ್ತ ನೀನಹುದೊ ವೇದೋಕ್ತ ಮಹಿಮಾತೀತ ಸಕ್ತವಾಗಲಿ ನಿನ್ನ ಪದದಿ ಮನಸು ವ್ಯಕ್ತನಲ್ಲವೊ ಸರ್ವ ಸಾರಭೋಕ್ತನು ನೀನು ಭಕ್ತವತ್ಸಲ ಪುರುಷಸೂಕ್ತಮೇಯ ಅಪ್ರಮೇಯ ಯುಕ್ತಿಮಾತಲ್ಲಿದು ಭಕ್ತಿಪೂರ್ವಕ ನಿನ್ನ ಭಕ್ತ ಶ್ರೇಷ್ಠರ ಸೇವೆ ಕೊಟ್ಟು ರಕ್ಷಿಸೊ ದೇವಾ 5 ನಾದಕ್ಕೆ ಪರನಾಗಿ ವಾದಕ್ಕೆದೊರೆಯೇ ನೀ ವೇದವೇದಾಂತವೇದ್ಯ ಸಾಧನವು ಕಾಣೆ ಸಾಧನಶರೀರವಿದು ಸಾದರದಿ ಕರುಣಿಸಿದೆ ಅನಿರುದ್ಧದೇವ ಬಾಧಿಪುದು ಬಂಧಗಳು ಅನಾದಿಕರ್ಮದಿ ಬಂದು ನಾ ಅಧಮತಮಸಾಧನವನ್ನೆಸಗಿದೆ ನೀ ದಯಾಸಿಂಧು ಎಂದಡಿಗಡಿಗೆ ಬೇಡುವೆನು ಕೃದ್ಧನಾಗದೆ ಇನ್ನು ಉದ್ಧರಿಸು ತಂದೇ ಎಂದೇ 6 ಶಂಖಚಕ್ರಾಂಕಿತನೆ ಮಂಕುಬುದ್ಧಿಯ ಬಿಡಿಸೋ ಅಂಕಿತವೆನಗೆ ಇಲ್ಲ ಅಂಕೆ ಇಲ್ಲವೊ ನಿನ್ನ ನೆನೆಹುದಕೆ ಎಂದಿಗೂ ಶಂಕೆಯ ಪಡುವನಲ್ಲ ವೇಂಕಟಾದ್ರಿಯ ವಾಸ ಶ್ರೀ ವೇಂಕಟೇಶನು ಮಮಕುಲಸ್ವಾಮಿ ದೈವವೆಂದನುದಿನ ಸಂಕಟಾಗಾಮಿಗಳ ಕಂಟಕವ ಹರಿಸಿ ಪದ ಪಂಕಜದಿ ಮನವ ನಿಲ್ಲಿಸೋ ಬಿಂಕದ ಮಾತಲ್ಲ ಪಂಕಜದಳಾಯತಾಕ್ಷ ಅಕ- ಳಂಕಮಹಿಮ ಕಾಯೋ ಜೀಯಾ7
--------------
ಉರಗಾದ್ರಿವಾಸವಿಠಲದಾಸರು