ಒಟ್ಟು 178 ಕಡೆಗಳಲ್ಲಿ , 49 ದಾಸರು , 168 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಿಸೆನಗಿನಿತು ಕರುಣಾರ್ಣವನೆ ನಿನ್ನ ಚರಣಾಬ್ಜದಲಿ ಭಕುತಿ ವಿಷಯದಿ ವಿರಕುತಿ ಪ ಬಿಂಬನೇ ಸರ್ವ ಪ್ರಯೋಜನವ ಮಾಡಿ ಪ್ರತಿ ಬಿಂಬರಿಗೆ ತತ್ಫಲಗಳೀವ ಕಾವ ಬಿಂಬನೆ ಸ್ವತಂತ್ರ ಪ್ರತಿಬಿಂಬಾ ಸ್ವತಂತ್ರತಮ ನೆಂಬ ಸುಜ್ಞಾನ ಪೂರ್ವಕ ನಿನ್ನ ಭಜಿಪ ಸುಖ 1 ಕಾರ್ಯ ಕಾರಣ ಅಂಶಿ ಅಂಶಾವತಾರ ಅಂ ತರ್ಯಾಮಿ ವ್ಯಾಪ್ಯ ವ್ಯಾಪಕ ಪ್ರೇರಕ ಪ್ರೇರ್ಯ ಬಾಧಕ ಬಾಧ್ಯ ಪೋಷ್ಯ ಪೋಷಕ ರೂಪ ಆರ್ಯರಿಂದರಿತು ಅನುದಿನದಿ ಸುಖಿಸುವ ಭಾಗ್ಯ 2 ತಾರತಮ್ಯದ ಜ್ಞಾನ ದುರ್ವಿಷಯಗಳಲಿ ಸ ದ್ವೈರಾಗ್ಯ ಹರಿದ್ವೇಷಿಗಳಲಿ ದ್ವೇಷಾ ಸೂರಿಗಳ ಸಂಗ ಗುಣರೂಪಕ್ರಿಯೆಗಳನು ಸುವಿ ನಿತ್ಯ ಅನುಮೋದ ಬಡುವಂತೆ 3 ಮಿಂದೋದಕಗಳೆಲ್ಲ ಮಜ್ಜನವು ದೇಹಾನು ಬಂಧಿ ಜನರೆಲ್ಲ ನಿನ್ನ ಪರಿವಾರವು ನಿಂದ್ಯ ಕರ್ಮಗಳೆಲ್ಲ ಪಾದುಕಗಳೆಂಬ ಅನು ಸಂಧಾನ ಮನಕೆ ನಿತ್ಯದಲಿ ಬರುವಂತೆ4 ಚೇತನಾಚೇತನಗಳೆರಡು ಪ್ರತಿಮೆಗಳು ಸಂ ಪ್ರೀತಿಯಲಿ ಸುರಕ್ಷಿಸುವುದು ಪೂಜೆ ಈ ತನುವೆ ಸದನವೆಂದರಿತು ನಿತ್ಯದಿ ಜಗ ನ್ನಾಥ ವಿಠ್ಠಲನೆಂಬ ವಿಷಯವೇ ಮುಖವೆಂದು 5
--------------
ಜಗನ್ನಾಥದಾಸರು
ಕಲಶಾಬ್ಧಿಜಾತೆ ಸೀತೆಗಾರತಿಯನು ಬೆಳಗುವೆ ಲಲನಾಮಣಿಯ ಸೇರಿ ಸುಖಿಸಿ ನಲಿದು ಪಾಡುವೆ ಪ ಸರಸಿಜಾಸನಾದಿವಿನುತೆ, ಸುರವರಾರ್ಚಿತೆ ಶರದಿಂದುಹಾಸೆÉ ಧರಣಿಜಾತೆ ಕರುಣಿಸೆನ್ನುತೆ 1 ಕಮಲವದನೆ ಕಮಲನಯನೆ ಕಮಲವಾಸಿನೀ ವಿಮಲಚರಣೆ ರಾಮರಮಣಿ ಮಧುರಭಾಷಿಣಿ 2 ಶೇಷಶೈಲಾವಾಸದಯಿತೆ ವಿಶ್ವಸನ್ನುತೆ ಪೋಷಿಸೆನ್ನ ಜನಕಜಾತೆ ಸೀತೆಯೆನ್ನುತೆ 3
--------------
ನಂಜನಗೂಡು ತಿರುಮಲಾಂಬಾ
ಕಾಲ ಹಮ್ಮದೇಕೆ ಮನವೇ ಪ ಪೆರ್ಮೆ ಸಲ್ಲದು ಭಜನೆಗೆ ಅ.ಪ ನಿಲುವೆಡೆಯೊಳು ಕುಳಿತೆಡೆಯೊಳು ಸಲಿಲದೊಳು ಸಲೆ ನಲಿಯುವೆಡೆಯೊಳು ಒಲಿದು ಭೋಜನ ಗೈಯುವೆಡೆಯೊ ಳೊಲಿದು ರಾಮರಾಮ ಯೆನ್ನದೇ 1 ಕುಳಿತು ಲಾಲಿಪ ಪರಮಾನಂದ ನಿಲಲು ನಲಿವನಾ ಮುಕುಂದ2 ಕಾಲಪಾಶ ಎಳೆವ ಕಾಲದಿ ನಾಲಗೆಯೊಳಕೆಸೆಳೆವಕಾಲದಿ ಬಾಲಗೋಪಾಲನ ಧ್ಯಾನಿಸಲಾರೆನೀ 3 ಮಾಧವ ಮುಕ್ತಿಯೀವನಾ ರಮಾಧವಾ 4 ದೇವನ ನೆನೆದು ಸುಖಿಸದೀಪರಿ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾಸನಿತ್ತಿರಿ ಭರದಲಿ ಹಾಗದ ಕಾಸನಿತ್ತಿರಿ ಭರದಲಿ ಪ. ವಾಸುದೇವನ ದಯೆಯೆ ಸಾಕು ಕಾಸುಬೇಡಿದವರಲ್ಲ ನಾವ್ ಕೃಪಣರ ಕಾಸಮುಟ್ಟುವರಲ್ಲ ನಾವ್ ಅ.ಪ ಘನತೆಯೊಂದಿಹ ಧನಿಕರೆಂದು ಗಣಿಸಿಸಾರಿದೆವಿಲ್ಲಿಗೆ ಘನತೆಗೊಪ್ಪುವ ಬಗೆಯ ತೋರದೆ ಧನದ ಮೋಹದಿ ಮೆರೆದಿರೆ ನೀವ್ ಅಣುಗಿಯರೋಳ್ ಮುಳಿದಿರೇ 1 ಮಂದಿಯಿದಿರೋಳ್ ಮೌನದಿಂ ನೀ ವಿಂದು ಲೋಭದ ಮಂತ್ರದಿಂ ತಂದೆ ನಿಮ್ಮೀ ಒಂದು ಹಣವನು ಕೈಗೊಂಡು ನೀವೇ ನಲಿಯಿರಿ ಬಂಧು ಮಿತ್ರರನೊಲಿಸಿರಿ 2 ಭಳಿರೆ ನೀವೌದಾರ್ಯಗುಣದೊಳು ಬಲಿದರೆನ್ನಿಸಿ ಮೆರೆದಿರೆ ಜಲಜಲೋಚನ ಶೇಷಶೈಲನಿವಾಸನೊಲವಿಂ ಸಂತತಂ ನಲಿದು ಸುಖಿಸಿರಿ ಸಂತತಂ 3
--------------
ನಂಜನಗೂಡು ತಿರುಮಲಾಂಬಾ
ಕೇಶವಾಚ್ಯುತ ಮಾಧವಾನಂತ|ಶ್ರೀ ಶಕಮಲದಳೇಕ್ಷಣಾ| ವಾಸುದೇವ ಮುಕುಂದ ಮುರಹರ ಕ್ಲೇಶಹರಣ ಜನಾರ್ಧನಾ|| ವಾಸುಕಿಯ ಪರಿಯಂಕನೆನುತಲಿ|ನೆನೆವನಾವ ನರೋತ್ತಮಾ| ಮೋಸಹೋಗದಿರವರೊಳೆಂದು|ಚರರಿಗ್ಹೇಳಿದನೈಯಮಾ 1 ರಾಮರಾಘವ ರಾಜಶೇಖರ|ರಾವಣಾಸುರಮರ್ದನಾ| ಶಾಮಸುಂದರ ಸಕಲ ಗುಣನಿಧಿ|ಶಬರಿಪೂರಿತ ವಾಸನಾ ಭೂಮಿಜಾಪತಿ ಭೂತನಾಥ|ಪ್ರಿಯನೆಂಬ ನರೋತ್ತಮಾ| ಪ್ರೇಮಿಕನ ನುಡಿಸದಿರಿಯೆಂದು|ಚರರಿಗ್ಹೇಳಿದನೈಯಮಾ 2 ಬಾಲಲೀಲವಿನೋದ ಶ್ರೀ ಗೋಪಾಲ ಗೋಕುಲ ಲಾಲನಾ| ಕಾಲಜಲಧರ ನೀಲಮುರಲೀ ಲೋಲಸುರವರ ಪಾಲನಾ| ಕಾಲಕಾಲನೆ ಕಂಸಹರನನು ತಾವ ನೆನೆವ ನರೋತ್ತುಮಾ| ಕಾಲಿಗೆರಗಿರಿ ಅವರಿಗೆಂದು|ಚರರಿಗ್ಹೇಳಿದನೈಯಮಾ 3 ಮಕರಕುಂಡಲ ಕಿರೀಟ ಕೌಸ್ತುಭ|ಕಟಕಕೇಯೂರ ಭೂಷಣಾ| ಅಖಿಲ ಜಗನುತ ಚರಣಪೀತಾಂಬರನೆ ಶ್ರೀವತ್ಸಲಾಂಭನಾ| ಪ್ರಕಟಿತಾಯುಧ ಶಂಖಚಕ್ರಗದಾಬ್ಜ ನೆನೆವನರೋತ್ತಮಾ| ಸುಖಿಸುವವರನು ತ್ಯಜಿಸಿರೆಂದು ಚರರಿಗ್ಹೇಳಿದನೈಯಮಾ 4 ಶ್ರವಣಪೂಜನೆ ಸ್ಮರಣಕೀರ್ತನೆ ವಂದನೆದಾಸ್ಯದಿ ಸಖ್ಯವಾ| ಬಿಡದನಾವನರೋತ್ತುಮಾ| ಅವನ ಸೀಮೆಯ ಹೋಗದಿರೆಂದು ಚರರಿಗ್ಹೇಳಿದನೈಯಮಾ 5 ಯಾರಮನೆಯಲಿ ತುಲಸಿವೃಂದಾವನದಿ ಶಾಲಿಗ್ರಾಮವು| ಚಾರುದ್ವಾದಶನಾಮ ಹರಿಚಕ್ರಾಂಕಿತದ ಶುಭಕಾಯವು| ಮೀರದಲೆ ಹರಿದಿನದ ವ್ರತದಲಿ ನಡೆವನಾವನರೋತ್ತಮಾ| ದಾರಿ ಮೆಟ್ಟದಿರೆಂದು ತನ್ನಯ ಚರರಿಗ್ಹೇಳಿದನೈಯಮಾ 6 ಸಾಧುಸಂತರು ಬಂದರೆರಗುತ ಪಾದೋದಕದಲಿ ಮೀವನು| ಆದಿನವಯುಗ ವಾದಿಚತುರ್ದಶ ಪರ್ವಕಾಲಗಳೆಂಬನು| ಸಾದರದಿ ಹರಿಪೂಜೆಯಿಂದರ್ಚಿಸುವ ನಾವನರೋತ್ತಮಾ| ಮೋದದಿಂದಲಿ ಬಾಗಿರೆಂದು ಚರರಿಗ್ಹೇಳಿದನೈಯಮಾ 7 ಅಂದು ಹೇಳಿದ ಕಥೆ ರಹಸ್ಯದ ಹರಿಯನಾಮದ ಮಾಲಿಕಾ| ತಂದೆ ಮಹೀಪತಿ ಎನ್ನ ಮುಖದಲಿ ನುಡಿಸಿದನು ಭೋಧಾಷ್ಟಕ| ತಂದು ಮನದಲಿ ಭಕುತಿಯಿಂದಲಿ ನೆನೆವನಾವನರೋತ್ತಮಾ| ಇಂದು ಜೀವನ್ಮುಕ್ತನಮಗಿನ್ನೇನು ಮಾಡುವನೈಯಮಾ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳು ಜೀವನವೆ ನೀ ಮಧ್ವಮತವನುಸರಿಸಿ ಶ್ರೀಲೋಲನಂಘ್ರಿಯನು ನೆನೆದು ಸುಖಿಸೊ ಪ. ನರನಾಗಿ ಪುಟ್ಟುವುದು ದುರ್ಲಭವೆಲವೊ ಭೂ- ಸುರಕುಲದಿ ಜನಿಸುವುದು ಬಹು ದುರ್ಲಭ ಪರಮ ಸುಕೃತವದೇನು ಫಲಿಸಿತೊ ನಿನಗೀಗ ದೊರಕಿದೀ ಜನುಮವನು ಸಫಲ ಮಾಡೊ 1 ಅರಘಳಿಗೆ ಮಾತ್ರವೆ ಪೊತ್ತು ಪೋಗಲು ಆಯು ಕೊರತೆಂದು ತಿಳಿ ನಿನ್ನ ಕ್ಲುಪ್ತದೊಳಗೆ ಮರಳುತನದಲಿ ಬರಿದೆ ದಿನಗಳಿಯಬ್ಯಾಡೆಲವೊ ಸ್ಥಿರವಲ್ಲ ಈ ದೇಹ ಸ್ವಪ್ನಸಮವೊ 2 ದುರುಳರೊಡನಾಡಿ ದುರ್ವಿಷಯ ಲಂಪಟನಾಗಿ ನರಕಯಾತನೆಗೆ ಗುರಿಯಾಗದಿರೆಲೊ ಎರಡುದಿನದೋಡ್ಯಾಟ ಇರಬಂದುದಲ್ಲವಿದು ಪರಗತಿಗೆ ಸಾಧನ ಮಾಡಿಕೊಳ್ಳೊ 3 ಹೋಗುತಿವೆ ಹೋಗುತಿವೆ ದಿವಸ ವ್ಯರ್ಥವಾಗಿ ಹೀಗೆ ಮೈಮರೆದಿಹುದು ನಿನಗೊಳ್ಳಿತೆ ಬ್ಯಾಗ ಹರಿಯನು ಭಜಿಸು ಬಾ ಈ ಮಾತಲ್ಲ ನೀ ಹೋಗಿನೋಡಲು ಯಮನ ಬಾಧೆ ಬಿರುಸೊ4 ಏನ ಹೇಳಲಿ ನಿನ್ನ ಮಂದಮತಿಯನು ಹಿಂದೆ ಶ್ವಾನಸೂಕರ ಮೊದಲಾದ ನೀಚ- ಯೋನಿಗಳೊಳಗೆ ಬಂದು ಅಂದದನು ಕ್ರಮಿಸಿದವನು ಆ ನೋವನಾಗಲೆ ಮರೆದಿಯಲ್ಲೊ 5 ಮುನ್ನ ದುಷ್ಕರ್ಮವ ಮಾಡಿದ ಪ್ರಾಣಿಗಳು ಉನ್ನತ ನೀಚ ದೇಹಗಳ ಧರಿಸಿ ಬನ್ನಬಡುತಿಹುದು ನೀ ನೋಡಿ ನೋಡಿ ಮತ್ತೆ ದುರ್ನಡತೆಯನು ಮಾಡಲುದ್ಯೋಗಿಪೆ 6 ಎಂಬತ್ತು ನಾಲ್ಕು ಲಕ್ಷ ಯೋನಿಗಳೊಳಗೆ ಕುಂಭಿಣಿಯೊಳಗೆ ತಿರುತಿರುಗಿ ಪಾಪ ಉಂಬುದನುಚಿತವೆಂದು ಮನ ಹೇಸಿ ವಾಕರಿಸಿ ನಂಬುನಾರಾಯಣನ ಇನ್ನಾದರೂ 7 ಜನನಿಯ ಗರ್ಭವಾಸ ದುಃಖ ಅತಿಶಯವೊ ಜನನ ಮರಣದ ದುಃಖ ಬಲು ಅಧಿಕವೊ ಘನ ನರಕದಾ ದುಃಖ ಪೇಳಲೊಶವಲ್ಲ ನಿನ- ಗಿನಿತಾದರೂ ನಾಚಿಕಿಲ್ಲವೇನೊ 8 ಸಾರಿ ಪೇಳುವೆನೀಗ ಪುಟ್ಟಿ ಬೆಳೆದಳಿವ ಸಂ- ಸಾರ ಸುಖವಲ್ಲ ಮಹ ದುಃಖಪುಂಜ ಘೋರ ಸಂತಾಪಕ್ಕೆ ಕಡೆಮೊದಲಿಲ್ಲವೊ ವಾರಿಜಾಂಬಕನ ಮರೆಯೊಕ್ಕು ಬದುಕೊ 9 ಹಿಂದೆ ಬಹುಜನುಮದಲಿ ಬಂದು ಬಳಲಿದ ಬವಣೆ ಒಂದೊಂದು ನೆನೆಸಿಕೊಳಲತಿ ಕಷ್ಟವೊ ಮುಂದಾದರು ಸರಿ ಎಚ್ಚೆತ್ತು ಬಿಡದೆ ಗೋ- ವಿಂದನ ಪದಾಂಬುಜವ ಧ್ಯಾನ ಮಾಡೊ 10 ಮಾರಿ ಇಲ್ಲಿದೆಯೆಂದು ಕೇಳುತಲಿ ಪೋಗಿ ನೀ ಭೂರಿ ಭಯಕೊಳಗಹದು ನೀತಿಯಲ್ಲ ದೂರ ತಿಳಿದು ನೋಡಿ ದುರ್ಮಾರ್ಗವನು ಜರಿದು ಸೇರಿ ಸಜ್ಜನರ ಸುಪಥವ ಪಡೆಯೊ 11 ನಿನ್ನಯ ಸ್ವರೂಪಕ್ಕೆ ಹೀಗಾಗುವುದೆಂದು ಪುಣ್ಯವನೆ ಗಳಿಸಿಕೊ ಬ್ಯಾಗ ನೀನು ಇನ್ನು ಈ ಧರೆಯಲ್ಲಿ ಬಿಟ್ಟು ಹೋಗುವ ದೇಹ- ವನ್ನು ಪೋಷಿಸಿಕೊಂಡು ಹಿಗ್ಗಬೇಡ 12 ವನಿತೆಸುತರನು ಪೊರೆಯಬೇಕೆಂಬ ಬುದ್ಧಿಯಲಿ ಧನದಾಸೆಯಿಂದಲಗಣಿತ ಪಾಪವ ಕ್ಷಣದೊಳಗೆ ಸಂಪಾದಿಸಿಕೊಂಬೆ ಎಲೊ ಮೂಢ ನಿನಗಿವರು ಕೊನೆಗೆ ಸಂಗಡ ಬರುವರೆ 13 ಕೆಡಬ್ಯಾಡ ವ್ಯರ್ಥಮೋಹಕೆ ಸಿಲುಕಿ ಜವನವರು ಪಿಡಿದೊಯ್ದು ಕಡಿದಿರಿದು ಕೊಲ್ಲುವಾಗ ಬಿಡಿಸುವವರಾರಿಲ್ಲ ಈಗಳೆ ಮುಂದರಿತು ಕಡಲಶಯನನ ಪೊಂದಿ ಮುಕುತಿ ಪಡೆಯೊ 14 ಈಗಲೇನೊ ಇನ್ನು ಕ್ಷಣಕೇನು ಬಪ್ಪುದೊ ನೀ ಗರುತರಿಯದಲೆ ಹಿತ ರಾಗದಲಿ ಸರ್ವವನು ಎನ್ನದೆಂದಾಡದಿರು ನಾಗಾರಿಗಮನನಾಧೀನವೆನ್ನೊ 15 ನೀ ಮಗುಳೆ ಮಹಿಯೊಳಗೆ ಕಂಡುಕಂಡುದ ಬಯಸಿ ಭ್ರಾಮಕರ ನುಡಿಗೇಳಿ ಭ್ರಾಂತಿಗೊಳದೆ ಕಾಮಾದಿಗಳ ತ್ಯಜಿಸಿ ಸತ್ಕರ್ಮವನು ಮಾಡಿ ಶ್ರೀಮನೋ ಹರನಿಗರ್ಪಣೆಯ ಮಾಡೊ16 ಏನುಧಾವತಿಗೊಳಲೇನೇನು ಫಲವಿಲ್ಲ ಮಾನವಜನುಮ ಜೊಳ್ಳು ಮಾಡಬ್ಯಾಡ ಆನಂದತೀರ್ಥರ ಪಾದಕಮಲವ ಪೊಂದಿ ಅಚ- ಲಾನಂದವಿಠಲನ್ನ ನೀನೊಲಿಸಿಕೊ 17
--------------
ಅಚಲಾನಂದದಾಸ
ಕೇಳು ಮನವೇ ನೀನು | ಅನವರತಾ | ಬಾಳು ಹಿರಿಯ ನಂಬಿರು ತಾ ಪ ಸದ್ಗುರು ದಯ ಪಡೆದು | ಭವದಲಿ ಪಡಿ ಭಾಗ್ಯದಲಿ 1 ಹಲವು ಹಂಬಲ ತ್ಯಜಿಸಿ | ದೃಢದಿಂದ | ಬಲಗೊಳ್ಳುಗುರು ಪದದ್ವಂದ್ವ 2 ಉದರ ಕುದಿಯಗಾಗಿ | ಕಂಡವನಾ | ವದಕೆರಗಲು ಬಹದೇನಾ 3 ಇಂದು ಸುಖಿಸು ಹೊಂದಿ ಕೃಷ್ಣಯ್ಯನ | ಸನ್ನುತ ಮಹಿಪತಿ ಚರಣಾ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೋಲ ಕೋಲೆನ್ನ ಕೋಲ ಕೃಷ್ಣಯ್ಯನ ನೆನೆದೇವ ಕೋಲ ಪ. ಶಿರವ ದೂಗಿದನೆ ಬ್ರಹ್ಮ ದೂಗಿದನೆಮಂದಗಮನೆಯರ ಭಾಗ್ಯ ಚಂದ್ರ ಸೂರ್ಯರಿಗಿಲ್ಲಇಂದ್ರಗೆ ಇಲ್ಲವೆಂದು 1 ಲೋಕನಾಯಕಗೆ ಏಕಾರತಿಯನೆತ್ತಿ ಗೋಕುಲಾಧೀಶ ಸಲುಹೆಂದುಗೋಕುಲಾಧೀಶ ಸಲುಹೆಂದು ಕೈಮುಗಿದುಏಕೋಭಾವದಲಿ ಕೆಲದೆಯರು2 ಭೂಮಂಡಲಪತಿ ಮುಂದೆ ಮಂಡಲ ಮಾಡಿಅನ್ನಭಾಂಡವ ತಂದು ಇಟ್ಟಾರುಅನ್ನಭಾಂಡವ ತಂದಿಟ್ಟು ಕೈಮುಗಿದಾರುಪುಂಡರಿಕಾಕ್ಷ ಕೈಕೊಳ್ಳೊ 3 ತುಪ್ಪ ಸಕ್ಕರಿಯಲಿ ಪಕ್ವಾದ ಭಕ್ಷ್ಯಮಿತ್ರೆಯರು ತಂದು ಇಡುವೋರುಮಿತ್ರೆಯರು ತಂದಿಟ್ಟು ಕೈಮುಗಿದಾರುಭಕ್ತವತ್ಸಲನೆ ಕೈಕೊಳ್ಳೊ4 ಯಾಲಕ್ಕಿ ಕಸಕಸಿ ಮೇಲಾದ ಪಾಯಸ ಬಾಲೆಯರು ತಂದು ಇಡುವೋರುಬಾಲೆಯರು ತಂದಿಟ್ಟು ಕೈಮುಗಿದಿಹರುಬಾಲಗೋಪಾಲ ಕೈಕೊಳ್ಳೊ5 ಕರ ಮುಗಿದಿಹರುಸುಲಭ ಮೂರುತಿಯೆ ಕೈಕೊಳ್ಳೊ6 ಭೇರಿ ಮೊದಲಾದ ಭೋರೆಂಬೊ ತುತ್ತೊರಿವಾರುಜ ಗಂಟೆ ಮೊದಲಾಗಿವಾರುಜ ಗಂಟೆ ಮೊದಲಾಗಿ ರಂಗನಸಾರುತಲಿವೆ ಸಭೆಯೊಳು 7 ಪಟ್ಟಿದರಸಿಯರು ಇಟ್ಟ ಪದಾರ್ಥವದೃಷ್ಟಿಲಿನೋಡಿ ಸುಖಿಸುತದೃಷ್ಟಿಲಿನೋಡಿ ಸುಖಿಸುತ ಅವರಿಗೆಕೊಟ್ಟಾನು ಬ್ಯಾಗ ಕೈವಲ್ಯ8 ನಿತ್ಯ ಪ್ರಕಾಶಗೆ ಮುತ್ತಿನಾರುತಿಯಸತ್ಯಭಾಮೆಯರು ಮೊದಲಾಗಿಸತ್ಯಭಾಮೆಯರು ಮೊದಲಾಗಿ ಬೆಳಗಿದರುಮತ್ತ ರಾಮೇಶ ಸಲುಹೆಂದು9
--------------
ಗಲಗಲಿಅವ್ವನವರು
ಗಿರಿವರ ತನಯೆ ಮುರರಿಪು ಸಿರಿಯೆ ಪ ಶರಣು ಬಂದವರನ್ನು ಮರೆವುದು ಥರವೆ ಅ.ಪ. ತುಟಿಯಲಿ ಸೌಭಾಗ್ಯ ಹಣದಿ ಗೆಲಿಯೆ ಸದಾಪಠಿಸಿ ಭುಂಜಿಸಿದೆಯೇ 1 ಯಕ್ಷ ಪೋಗಲು ಅವಸಾಕ್ಷಿ ಬರಲು ಸಹಈಕ್ಷಿಸಿ ಹರಿಯ ಸ್ತುತಿಸಿ ಶಿಕ್ಷೆ ನೀಡಿದೆಯೇ 2 ಆ ಸುಮುಖಗೆ ಹರ ಭೂಷಿತ ಶ್ರುತಿ ಸ್ಮøತಿರಾಶಿ ಗ್ರಂಥವ ಪೇಳಿ ನೀ ಸುಖಿಸಿದೆಯೇ ಇಂದಿರೇಶನಸೊಸೆಯೇ 3
--------------
ಇಂದಿರೇಶರು
ಗುರುರಾಯನಾ ಮನಿಯಾ ನಾಯಿ ನಾನು ಪ ಗುರು ಗುರು ಎನುತಲಿ ಇರುವೆ ಬಾಗಿಲದೊಳು | ಗುರುವಿನೆಂಜಲ ನುಂಡು ಸುಖಿಸುವೆ ನಮ್ಮಯ್ಯನಾ 1 ಹರಿ ಶರಣರ ಕಂಡು ಗರುವಿಸಿ ಕೆಲಿಯೆನು | ದುರುಳರ ಬೆನ್ನಟ್ಟಿ ಹೋಗೆನಾ ನಮ್ಮಯ್ಯನಾ 2 ಒಡೆಯನ ಮುಂದೆ ಯನ್ನಾ ಒಡಲವ ತೋರುವೆ | ಬಿಡದೆ ಅಂಗಣದೊಳು ಹೊರಳುವೆ ನಮ್ಮಯ್ಯ ನಾ3 ಹರಿನಾಮದಿಂದ ಭೋಂಕರಿಸಿ ವದರುವೆ | ಬರಗುಡೆ ಹಮ್ಮ ಸ್ವಜಾತಿಯ ನಮ್ಮಯ್ಯ ನಾ 4 ತಂದೆ ಮಹಿಪತಿ ಸ್ವಾಮಿ ಬಂದು ಮೈಯ್ಯಾದಡವಿ | ನಿಂದು ತನ್ನ ಬಿರುದಕ ಹಾಕಿದ ನಮ್ಮಯ್ಯನ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುಲ್ಲು ಹುಟ್ಟಿತು ಗ್ರಾಮದೊಳಗೆ ಗಲಿಬಿಲಿಯಾಯಿತು ನೀವು ಕೇಳಿಖುಲ್ಲರು ಕುಲಸಹ ಕೂಡೆ ಮಡಿದರು ನೀವು ಕೇಳಿ ಪ ಮರ ಮುರಿದೊರಗಿತು ನೆರಳೆ ನೆಲೆಯಾಯಿತು ನೀವು ಕೇಳಿಕುರಿತಳೇ ಸತ್ತವು ನರಿ ಮಾಳಿಗೆ ಏರಿತು ನೀವು ಕೇಳಿ 1 ಅತ್ತೆಯು ಅಳಿದಳು ಸೊಸೆಯು ಸುಖಿಸಿದಳು ನೀವು ಕೇಳಿಮುತ್ತೈದೆಯಾದಳು ರಂಡೆ ತಾನೀಗ ನೀವು ಕೇಳಿ2 ಕೊಡವೊಡೆಯಿತು ಕಳ್ಳರ ತಲೆ ಹೋದವು ನೀವು ಕೇಳಿನಡೆದುಹೋದರು ಬಯಲೂರಿಗೆ ಗೂಳೆಯ ನೀವು ಕೇಳಿ 3 ಮಂಡೆಗೆ ಕೈ ಬಂದಿತು ಮುರುಕು ಆಯಿತು ಹುಟ್ಟು ನೀವು ಕೇಳಿರುಂಡವಿಲ್ಲದೆ ತಲೆ ಬಂದು ಹತ್ತಿತು ನೀವು ಕೇಳಿ 4 ಗುಡ್ಡದ ಸಂದಿಯ ನೀರನೆ ಕುಡಿದು ನೀವು ಕೇಳಿದೊಡ್ಡ ಚಿದಾನಂದ ಗುರುವ ಸೇರಿದರು ನೀವು ಕೇಳಿ 5
--------------
ಚಿದಾನಂದ ಅವಧೂತರು
ಗೋಪಿ ನೋಡಮ್ಮಾ ಪ ಗೋಪಿ ನೋಡಮ್ಮಾ ದೇವ ದೇವೋತ್ತಮನಾದ ಕೇವಲ ಪರಬ್ರಹ್ಮ| ದೇವಿಮಗನಾಗಿ ಬಂದಿಹನೆ ನರರಂದದಿ ನಮ್ಮಾ ಭಾವಿಸಿ ಬ್ರಹ್ಮನ ಜನಕನ ಶಿಶುವೆಂದು ಮುದ್ದಾಡಿಸುವಾ ಸಂಭ್ರಮಾ1 ಮುಖಸಾರಭೋಕ್ತನಿಗೆ ಮೊಲೆ ಹಾಲನುಣಿಸಿ| ಮಜ್ಜನ ಗೈಸಿ| ಪ್ರಕಟಿದಿ ಶೇಷಶಾಯಿಗೆ ತೊಟ್ಟಿಲದಿ ಮಲಗಿಸಿ| ಸುಖಯೋಗ ನಿದ್ರೆಯುಳ್ಳಂಗೆ ಮಲಗೆಂದು ಜೋ ಜೋ ಎಂಬಳಾಕೆ 2 ಆವ ಯೋಗ ಮಾಯದಲಿ ಮೂಜಗವಾಡಿಸುವ| ಆವ ಮುಂಜರಗ ಸಿಡಿದು ಬೆಣ್ಣೆ ಬೇಡುತ ಕುಣಿವಾ| ಗೋಪಿ ಕೈಯೊಳಾಡುವಾ| ಆವನಲಿ ಮಹಿಪತಿ-ಸುತ ಪ್ರಭು ಲೀಲೆಯ ಕಣ್ಣಲಿ ನೋಡಿ ಸುಖಿಸುವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಚರಣವದೋರಿ ಸಲಹೋ ಮುರಾರಿ | ಧರಿಯೊಳು ಸಾರಿದವರ ಸಹಕಾರಿ ಪ ಸುರಧೇನು ನೀನು | ಕರೆದುಂಬೆ ನಾನು | ಸುರತರು ನೀನು | ಆಶ್ರಯಿಸುವೆ ನಾನು 1 ಸುರಮಣಿ ನೀನು | ಅರ್ಥಾರ್ಥಿ ನಾನು | ದೊರೆಯನ್ನ ನೀನು | ಸುಖಿಸುವೆ ನಾನು 2 ಗುರುಮಹಿಪತಿ ಪ್ರಭು | ಪರದೈವ ನೀನು |
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯ ಜಯ ಮಂಗಳಜಯ ಮಂಗಳ ಶುದ್ಧಾದೈತನಿಗೆ ಪ ಅಗಣಿತ ಮಹಿಮಗೆ ಅಕ್ಷಯರೂಪಗೆಅಖಂಡ ಸಹಜಾನಂದನಿಗೆಝಗಿ ಝಗಿತಾತ್ಮಗೆ ಝಳುಕಿಸಿ ಕರ್ಣದಿಝಣನಾದವ ಕೇಳ್ವನಿಗೆಸೊಗಯಿಸಿ ಚಂದ್ರನ ಶತಕೋಟಿಯಪ್ರಭೆ ಸಾರವ ಸವಿಸವಿದುಣ್ಣುವಗೆಬಗೆ ಆನಂದದಿ ಸುಖಿಸುವ ದೇವಗೆಭಾಸ್ಕರ ತೇಜಃಪುಂಜನಿಗೆ1 ನಿತ್ಯಾನಂದಗೆ ನಿರ್ಮಲರೂಪಗೆನಿಶ್ಚಲ ಪರಬ್ರಹ್ಮಾತ್ಮನಿಗೆನಿತ್ಯಶುದ್ಧಗೆ ನಿಜನಿರ್ಮಾಯಗೆನಿಜಬೋಧ ಜ್ಞಾನೈಕ್ಯನಿಗೆಪ್ರತ್ಯಗಾತ್ಮಗೆ ಪೂರ್ಣಬ್ರಹ್ಮನಿಗೆಪರಮ ಪರತರ ಪಂಡಿತಗೆನಿತ್ಯತೃಪ್ತಗೆ ನಿಗಮಾಗಮನಿಗೆನಿಶ್ಚಿಂತಾತ್ಮ ನಿಸ್ಪøಹಗೆ 2 ಕೈಯಲಿ ಪಿಡಿದಿಹ ಜಪಮಾಲೆಯಸರ ಕರ್ಣಕುಂಡಲವಿಟ್ಟಿಹಗೆಮೈಯೊಳು ಪೊದ್ಹಿಹ ಕಾಷಾಯಂಬರಮಿರುಪಿನ ಕೌಪೀನವುಟ್ಟಿಹಗೆಮೈಯೊಲೆದಾಡುವ ಸ್ವಾತ್ಮಾನಂದದಿನಲಿವ ಸದ್ಗುಣ ಶಾಂತನಿಗೆಮೈಯನೆ ಸದ್ಗತಿ ಭಕ್ತರಿಗೀಯುವವ್ಯಾಪಿತ ಜೀವನ್ಮುಕ್ತನಿಗೆ3 ಆರವಸ್ಥೆಯ ಧರಿಸಿಯೆ ಜಗದಲಿಅನಂತರೂಪ ತಾನಾಗಿಹಗೆಮೀರಿಯೆ ಸದ್ಗುಣ ನಿರ್ಗುಣ ರೂಪವಮೆರೆದಿಹ ಮುಮುಕ್ಷಾಂಗನಿಗೆತೋರುವ ತ್ವಂಪದ ತತ್ತ್ವಮಸಿಪದತೋರಿ ವಿರಾಜಿಪ ತುಷ್ಟನಿಗೆಧೀರೋದ್ಧಾರಗೆ ದೀನರನಾಥಗೆದೃಶ್ಯಾದೃಶ್ಯ ವಿದೂರನಿಗೆ 4 ನಿರುಪಮ ನಿರಮಯ ನಿಜ ನಿರ್ಲಿಪ್ತಗೆನಿರ್ಭಯ ನಿರ್ವಿಕಲ್ಪನಿಗೆಪರಮಪುರುಷಗೆ ನಿಗಮೋದರನಿಗೆಪರಮಾರೂಢಾ ಮಾರ್ಗನಿಗೆಗುರುಚಿದಾನಂದ ಅವಧೂತಾತ್ಮಗೆಗುಣನಿಧಿ ತುರಿಯಾತೀತನಿಗೆಸ್ಥಿರಸಿದ್ಧ ಪರ್ವತದಾಸ ಶ್ರೀಪುರುಷಗೆಬಗಳಾ ಶ್ರೀಗುರು ರೂಪನಿಗೆ 5
--------------
ಚಿದಾನಂದ ಅವಧೂತರು
ಜಿಜ್ಞಾಸುವಿನ ಲಕ್ಷಣಾ ಕೇಳು ನೀಕ್ಷಣಾ ಪರಮಸುಖಾಕಾಂಕ್ಷಕನಾ ಬಾಳಿನ ವಿಷಯದಿ ಬೇಸರಗೊಳು ತಾ ವಿರತಿಯಿಂದರುವಾ ಬೋಧ ಕೇಳ್ವನಿವಾ ಚಿತ್ತದಿ ಭಕ್ತಿಭಾವನಾ ತಾಳುತ ಸಾಧನಾ ಮಾಡುತಲಿಹನಿವ ಕಾಣಾ ಆತ್ಮಾನಾತ್ಮನಿವೇಕ ವಿಚಾರ ಕೇಳುತ ತನ್ನೊಳಗÉೀ ಮಿಥ್ಯಾರೊಪಿತ ಜೀವಭಾವನನಾ ಜರÉಯುತ ಮನದೊಳಗೇ ಮಾಡುವ ಸುವಿಚಾರಾ ಇವನೆ ಧೀರ ಪರಮಸುಖಕಾಂಕ್ಷಕನಾ ವಿಷಯದಿ ಹರಿಯುವ ಮನವÀನೆಳೆÀದು ಬೋಧದೊಳಗಿರುವಾ ಮೋದ ಹೊಂದುವ ತಾ ಶ್ರೀ ಗುರುಶಂಕರನಾ ಆನಂದರೂಪನಾಬೆರೆತು ನಾ ಸುಖಿಸುವನಾ
--------------
ಶಂಕರಭಟ್ಟ ಅಗ್ನಿಹೋತ್ರಿ