ಒಟ್ಟು 85 ಕಡೆಗಳಲ್ಲಿ , 33 ದಾಸರು , 79 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಸನ್ನ ಶ್ರೀ ಬುದ್ಧ ಜ್ಞಾನಸುಖ ಬಲಪೂರ್ಣ ಅನಘ ಲಕ್ಷ್ಮೀರಮಣ ಅನುಪಮಾದ್ಭುತ ಶಿಶುರೂಪ ನಿರವಧಿಕ ಅಮಿತ ಕಲ್ಯಾಣಗುಣಧಾಮ ಬುದ್ಧ ಶರಣು ಮಾಂಪಾಹಿ ಪ ಮಾಧವ ಗೋವಿಂದ ಶ್ರೀಶ ವಿಷ್ಣೋ ಮಧುಸೂಧನ ತ್ರಿವಿಕ್ರಮ ಈಶ ವಾಮನ ಶ್ರೀಧರ ಹೃಷಿಕೇಶ ಪದ್ಮನಾಭ ದಾಮೋದರ1 ವಾಸುದೇವ ಪ್ರದ್ಯುಮ್ನ ನಮೋ ಅನಿರುದ್ಧ ಪುರುಷೋತ್ತಮ ಅಧೋಕ್ಷಜ ನರಸಿಂಹ ಅಚ್ಯುತ ಶ್ರೀಕರ ಜನಾರ್ಧನ ಉಪೇಂದ್ರ ಹರಿ ಕೃಷ್ಣ 2 ಈಜಿ ನಿಂತು ಪೊತ್ತು ಮಣ್ಣೆತ್ತಿ ಎಲ್ಲರನು ಅಂಜಿಸಿ ಬೇಡಿ ಸುತ್ತಾಡಿ ಕಡಲ್‍ದಾಟಿ ರಂಜಿಸಿ ಮೋಹಿಸಿ ಬೋಧಿಸಿದ ವಿಪ್ರಸುತ ತ್ರಿಜಗದೀಶನೇ ಶ್ರೀಶ ಶರಣು ಮಾಂಪಾಹಿ 3 ವಿಶ್ವ ವಿಷ್ಣು ವಷಟ್ಕಾರ ಈಶಾವಾಸ್ಯವು ಸರ್ವ ಈ ಹದಿನಾಲ್ಕು ಭುವನಂಗಳು ಶ್ರೀವರನೇ ನೀ ಪರಮ ಮುಖ್ಯ ನಿಯಾಮಕನು ಸರ್ವದಾ ಅಚಿತ್ ವಸ್ತುಗಳಿಗೆ 4 ಜೀವರುಗಳ ಸತ್ತಾ ಪ್ರವೃತ್ತಿ ಪ್ರತೀತಿಗಳು ಸರ್ವೇಶ್ವರ ನಿನ್ನ ಅಧೀನವು ಸ್ವಾಮಿ ಸರ್ವಪಾಲಕತ್ವ ಗುಣ ನಿನ್ನದೇ ಆದುದರಿಂದ ಸರ್ವಜೀವರುಗಳ ಸ್ವರೂಪ ರಕ್ಷಿಸುತಿ 5 ಜೀವನ ಸ್ವರೂಪಾನುಸಾರದಿ ಮೂರು ವಿಧವು ಸರ್ವ ಹರಿಭಕ್ತರು ಮುಕ್ತಿಸುಖ ಯೋಗ್ಯರು ಸರ್ವ ಹರಿದ್ವೇಷಿಗಳು ತಮೋ ದುಃಖ ಯೋಗ್ಯರು ಸರ್ವದಾ ಸುಖದುಃಖ ಮಿಶ್ರ ಸಂಸಾರಿಗಳು 6 ಬೇವಿನ ಬೀಜಕ್ಕೆ ಸಕ್ಕರೆ ಲೇಪಿಸಲು ಬೇವು ದ್ರಾಕ್ಷಿಗೆ ಸಮ ಆಗುವುದು ಇಲ್ಲ ಬೇವು ಬೀಜವ ಸಕ್ಕರೆ ಪಾತ್ರೆಯಲಿ ಕಂಡ ಯಾವನೂ ಸ್ವೀಕರಿಸ ಎತ್ತಿ ಎಸೆವ 7 ತ್ರಯೀಪುರ ಬೇವುಗಳು ಸತ್ಯಧರ್ಮ ಸಕ್ಕರೆ - ಯೋಳೂ ಪೊಕ್ಕು ದ್ರಾಕ್ಷಿಯಾ ಪೋಲು ಇರೆ ಕಂಡು ಶ್ರೀಪ ನಿನ್ನ ಪಾಲಸಾಗರತಟ ಬಂದು ಶಂಭು ಶಿವ ಶಕ್ರಾದಿಗಳು ಪ್ರಾರ್ಥಿಸಿದರು 8 ಅದ್ರಿ ಚಾಪವನಿತ್ತಿ ತ್ರಿಪುರವ ಸುಟ್ಟ ಸನ್ನುತ ಇವಗೆ ನೀ ಪ್ರಭಂಜನ ಸಹ ಸಹಾಯ ಮಾಡಿದಿಯೋ 9 ಅಂದು ಭಸ್ಮವು ಆದ ತ್ರಿಪುರ ದೈತ್ಯರುಗಳು ಬಂದು ಪುನರ್‍ಜನಿಸಿ ವೈದಿಕ ಸದ್ಧರ್ಮದಲ್ಲಿ ಮುಕ್ತಿ ಯೋಗ್ಯರು ತಿಳಿವ ಬ್ರಹ್ಮ ವಿದ್ಯೆಯ ಕಲಿಯೆ ಸುರರು ನಿನ್ನಲ್ಲಿ ಪೇಳಿದರು 10 ಕಲಿಯುಗದಿ ಈ ತಮೋಯೋಗ್ಯ ದೈತ್ಯರಿಗೆ ಬೆಳೆಯುವುದು ಮೋಹವು ದ್ವೇಷ ಪರಿಪಾಕ ಮಿಳಿತವಾಗಲಿ ಕೂಡದು ಮುಕ್ತಿ ಯೋಗ್ಯರ ಸಹ ಒಳ್ಳೇ ಮುತ್ತಿನ ಸರದೋಳ್ ಮುಳ್ಳ ಬೀಜಗಳೇ ? 11 ಆ ತ್ರಿಪುರ ದೈತ್ಯರ ಪ್ರಮುಖನೂ ತಮೋಯೋಗ್ಯ ಧಾತ್ರಿಯಲಿ ಸೌದ್ಧೋದನ ಜಿನನೆಂದು ಪರಿವಾರ ಸಹ ಜನಿಸಿ ಮುಕ್ತಿಯೋಗ್ಯರ ತೆರದಿ ಚರಿಸಿದರು ಸ್ವಸ್ವ ಯೋಗ್ಯತೆ ಅತಿಕ್ರಮಿಸಿ 12 ದೇವವೃಂದದ ಪ್ರಾರ್ಥನೆ ಅರಿಕೆಯನು ಕೇಳಿ ದೇವವರೇಣ್ಯ ನೀ ಅಭಯವನಿತ್ತಿ ದಿವ್ಯ ಶಿಶುರೂಪವ ಪ್ರಕಟಿಸಿ ಆಗಲೇ ತ್ವರಿತ ಪೋದೆಯೋ ಆ ಜಿನನ ಮಂದಿರಕೆ 13 ಆಗಲೇ ಜಿನನಿಗೆ ಮಗು ಒಂದು ಹುಟ್ಟಿತ್ತು ಪೋಗಿ ನೀ ಆ ಮಗುವ ಮರೆಯಾಗಿಸಲು ಬೇಗನೆ ತೊಟ್ಟಿಲಲಿ ಮಲಗಿದಿಯೋ ವಿಭುವೇ ಜಗನ್ಮೋಹನ ಶಿಶುರೂಪ ಚಿನ್ಮಾತ್ರ 14 ಇದನ್ನರಿಯದೇ ಜಿನಾದಿಗಳು ನಿನ್ನನ್ನೇ ಜಾತವಾದ ತಮ್ಮ ಮಗುವೆಂದು ನೆನೆದು ಬಂಧು ಮಿತ್ರರ ಗುಂಪು ಸ್ತ್ರೀಯರೂ ಪುರುಷರೂ ಮುದದಿ ಕೊಂಡಾಡಿದರು ಪುತ್ರೋತ್ಸವವ 15 ಕದಳೀ ತೆಂಗು ಪೂಗಿ ಮಾವು ತೋರಣವು ವಾದ್ಯಂಗಳ ಅರ್ಭಟ ವೇದ ಘೋಷಗಳು ದೈತ್ಯ ವಿದ್ವಾಂಸರ ವಾದ ಮೀಮಾಂಸವು ಸುಧ್ವನಿಯಲಿ ಪಕಪಕಾ ಎಂದು ನಕ್ಕಿ ನೀನು 16 ಆಶ್ಚರ್ಯ ಏನಿದು ಹಸಿಮಗು ನಗುತಿದೆ ಹೇ ಚಿನ್ನ ನೀನ್ಯಾಕೆ ನಗುತಿ ಎಂದು ಕೇಳೆ ಬುದ್ಧ ನಿನ್ನ ಹೆಸರೆಂದು ಮೆಚ್ಚಲಾರೆನು ವೈದಿಕಕರ್ಮ ಎಂದಿ 17 ವೇದ ಅಪ್ರಾಮಣ್ಯ ಬೋಧಕವೆಂದು ತೋರುವ ಬೌದ್ಧಮತ ಪೇಳಿದಿ ದೈತ್ಯರ ಮೋಹಿಸಲು ಬೋಧಿಸಿದ ಮೋಹಕ ಮಾತು ಜಿನಾದಿಗಳು ಅದರಿಸದಿರೆ ಹರೇ ನೀ ಸುರರನ್ನ ಕರೆದಿ 18 ಪ್ರತ್ಯಗಾತ್ಮನೇ ಈಶ ಸರ್ವಪ್ರೇರಕ ನೀನು ವೇದೋಕ್ತ ಸುರರನ್ನ ಸ್ಮರಿಸಿದಾಕ್ಷಣವೇ ಬಂದರು ಆ ಜಿನಾದಿಗಳಿಗೆ ಕಾಣಿಸುತ ಯುದ್ದಕ್ಕೆ ನಿಂತರು ನೀನು ಪ್ರೇರಿಸಲು 19 ವೇದ ವಿರುದ್ಧ ಮಾತುಗಳಾಡುತ ನೀನು ವೇದ ಅಪ್ರಾಮಣ್ಯ ವಾದಿಸುತ್ತಿ ಸದೆದು ಹಾಕುವೆವು ಎಂದು ಕೂಗುತ್ತ ಆಯುಧಗಳ ಪ್ರಯೋಗಿಸಿದರು ವಿಡಂಬನದಿ 20 ಮೋದಮಯ ಶಿಶುರೂಪ ಅಚ್ಯುತನೇ ನೀನು ಆ ದೇವತೆಗಳು ಪ್ರಯೋಗಿಸಿದ ಆಯುಧ ಒಂದನ್ನೂ ಬಿಡದೇ ನುಂಗಿ ನಗುತ ಎಲ್ಲಿ ಮಧುಸೂಧನ ವಿಷ್ಣು ಬರಲೀ ಅವ ಎಂದಿ 21 ಲೀಲಾ ವಿನೋದದಿ ಮತ್ತೊಂದು ರೂಪದಿ ನೀ ಪೊಳೆವ ಚಕ್ರವ ಪಿಡಿದು ಬಂದು ನಿಲ್ಲೆ ಸೊಲ್ಲು ಹೆಚ್ಚಾಡದೆ ಚಕ್ರವ ಕಿತ್ತುಗೊಂಡು ಒಳ್ಳೆ ಆಸನವೆಂದು ಅದರಮೇಲ್ ಕುಳಿತಿ22 ಸ್ವತಂತ್ರ ಪರಮಾತ್ಮ ನೀ ಸ್ವಸ್ವಯೋಗ್ಯ ಸಾಧನ ಪ್ರವರ್ತಕ ದೈತ್ಯರ ಮೋಹಕ್ಕೆ ಈ ಲೀಲೆ ಸಾಧು ನೀ ಪೇಳಿದ ಶಾಸ್ತ್ರ ಎನ್ನುತ ನಮಿಸಿ ಸುರರು ತಮ್ಮ ತಮ್ಮ ಸ್ಥಳಕೆ 23 ಎಲ್ಲೂ ಕಂಡಿಲ್ಲವು ಇಂಥಾ ಮಹಾತ್ಮನ ಎಲ್ಲ ದೇವತೆಗಳು ಸೋತು ಓಡಿ ಹೋದರು ಬಲಿಷ್ಟ ತತ್ವವು ಶಿಶುರೂಪ ಬುದ್ಧನದೇ ಎಲ್ಲ ದೈತ್ಯರು ಹೀಗೆ ನಿಶ್ಚೈಯಿಸಿಕೊಂಡರು 24 ಅಭಾವ ಕ್ಷಣಿಕ ಶೂನ್ಯವಾದ ಮೋಹಿತರಾಗಿ ಸ್ವಭಾವ ಯೋಗ್ಯತೆಯಂತೆ ವೈದಿಕವ ತೊರೆದು ಬುದ್ಧ ಆ ಜಿನಾದಿ ದೈತ್ಯರ ಸಮೂಹವು ತಬ್ಬಿಕೊಂಡರು ತಮಸ್ ಸಾಧನ ಮತಿಯ 25 ಜಿನಾದಿ ದೈತ್ಯರು ಮೇಲ್ವಾರಿ ಅರ್ಥವ ಮನದಲ್ಲಿ ನಿಶ್ಚಯಿಸಿ ಮೋಹ ವಶರಾಗೇ ನಿನ್ನಲ್ಲಿ ಸ್ವರೂಪತಹ ಭಕ್ತಿಯುತ ಸುರರು ಧನ್ಯರಾದರು ಕೇಳಿ ಯಥಾರ್ಥ ತಿಳಕೊಂಡು 26 ಏನೆಂದು ವರ್ಣಿಪೆ ಪ್ರಶಾಂತ ವಿದ್ಯೆಯ ಸೊಬಗು ಆನಂದ ಸೌಭಾಗ್ಯ ಸಮೃದ್ಧಿ ಸಿದ್ಧಿಪುದು ಮನ ಪುಳಕವಾಗುತ್ತೆ ಜ್ಞಾನ ತೇಜಃಪುಂಜ ನಿನ್ನ ದಯದಿಂದ ಸುಖ ಅನುಭವಕೆ ಸುಲಭ 27 ಅದೋಷನು ನೀನು ದೋಷ ಅಭಾವವಾನ್ ಸದಾ ನೀನು ಭಿನ್ನನು ಜಡ ಜೀವರಿಂದ ಮೋದಮಯ ಅನಂತಕಲ್ಯಾಣಗುಣಪೂರ್ಣ ನೀ ಆದುದರಿಂ ಅ ಎಂದು ನೀನೇವೇ ಜÉ್ಞೀಯ 28 ಭವ್ಯವಾಗಿರುವುದು 'ಅ' ಯಿಂದ ಜಗತ್ತು ಭವ್ಯ ಎಂದರೆ ಉತ್ಪಾದ್ಯ ಎಂಬುವುದು ಅ ಎಂಬ ನಿನ್ನಿಂದ ಉತ್ಪಾದ್ಯ ಜಗತ್ತನ್ನ ಅಭಾವವೆಂದಿ ವಿಭುವೇ ಸತ್ಯಜ್ಞಾನ 29 ಕಾಲ ಅವಯವ ಕ್ಷಣಕ್ಕೆ ಕ್ಷೋಣಿಯು ಸ್ಥಿರವಾಗಿ ಇರುತಿದೆ ಅದರೂ ಕ್ಷಣ ಸ್ಥಾಯಿಯಾಗಿರುವ ಕ್ಷಣದ ಸಂ¨ಂಧದಿ ಜಗತ್ ಕ್ಷಣಿಕವು ಎಂದು ನೀ ಪೇಳಿದಿಯೋ ಧೀರ 30 ಶಂ ಎಂದರೆ ಸುಖವು ಉ ಉತ್ತಮತ್ವವು ಶಂ ಸಹ ಉ ಸೇರಿ ಶೂ ಆಯಿತು ಶೂ ಎಂಬ ಸುಖರೂಪ ಅನುತ್ತಮೋತ್ತಮ ನೀನೇ ಶೂ ವಾಚ್ಯ ನೀನೇವೇ ಅನ್ಯರು ಅಲ್ಲ 31 ಶೂನ್ಯ ಎಂಬುವರು ಜ್ಞಾನವಂತರು ಹೀಗೆ ವಿಗ್ರಹ ಮಾಡುವರು ಆನಂದಮಯನಾದ ಅನುತ್ತಮೋತ್ತಮ ನಿನ್ನ ಅನುಗ್ರಹದಿಂದ ಜಗತ್ ರಕ್ಷಣೆ ನಿಯಮನವು 32 ಜ್ಞಾನಪೂರಿತ ಅರ್ಥ ಪೇಳಿದ ನಿನಗೆ ನಮೋ ಅನ್ಯ ವಸ್ತುಗಳಿಗಿಂತ ಅತ್ಯಂತ ಪ್ರಿಯತಮನೇ ಜನ್ಮಾದಿಕರ್ತನೇ ಪೂಷ ಪೋಷಕನೇ ನಮಸ್ತೇ 33 ದೇವವೃಂದಕ್ಕೆ ನೀ ಪ್ರಶಾಂತವಿದ್ಯೆಯ ಪೇಳಿ ಅವರುಗಳ ಸಹ ನಿಂತು ಮತ್ತೊಂದು ರೂಪದಿಂದ ದಿವಪರ ಸ್ವಸ್ಥಾನ ಸೇರಿದಿಯೋ ಸುಖಮಯನೇ ಭಾವಕರು ಸ್ಮರಿಸೆ ಸರ್ವವಿಧದಲಿ ಒಲಿವಿ 34 ಬುದ್ಧಾವತಾರ ಪರಮಾತ್ಮ ಚಿದಾನಂದಮಯ ಶ್ರೀಶ ದೇವತಾ ವೃಂದಕ್ಕೆ ಸುಬೋಧ ಮಾಡಿದ್ದು ಸಾಕಲ್ಯ ತಿಳಿಯಲಸಖ್ಯ ಶ್ರೀವೇದವ್ಯಾಸ ಶ್ರೀಶ ಶ್ರೀಮಧ್ವ ಆನಂದತೀರ್ಥರ ಅನುಗ್ರಹದಿಂದಲೇ ಯಥಾಯೋಗ್ಯ ತಿಳುವಳಿಕೆ ಉಂಟಾಗುವುದು 35 ವೇದಾರ್ಥ ನಿರ್ಣಾಯಕ ಸೂತ್ರಗಳ ಮಾಡಿ ಇತಿಹಾಸ ಪುರಾಣಾದಿಗಳ ನಮಗಿತ್ತ ವೇದವ್ಯಾಸ ಸುಹೃತ್ ಬುದ್ಧನು ನೀನೇವೇ ಸತ್ಯಧರ್ಮರಿಗೆ ಸೌಭಾಗ್ಯ ಸುಖದಾತ 36 ಜ್ಞಾನಭಕ್ತ ಆಯುರಾರೋಗ್ಯ ಐಶ್ವರ್ಯ ಶ್ರೀಮಧ್ವ ಹನುಮಸ್ಥ ವನಜಭವ ಪಿತ ಶ್ರೀ ಪ್ರಸನ್ನ ಶ್ರೀನಿವಾಸ ನಮೋ ಅನಿಮಿತ್ತ ಬಂಧು ಹರೇ ಕೃಷ್ಣ ರಾಮ ವೇದವ್ಯಾಸ ಬುದ್ಧಾವತಾರ ಮೋದಮಯ ಕರುಣಾಳು 37 -ಇತಿ ಶ್ರೀ ಬುಧ್ಧ ಪ್ರಾದುರ್ಭಾವ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಾಣದೇವ ಚಿತ್‍ಸ್ವಭಾವ | ಕಾಣೆ ನಿನಗೆಣೆ ಪ ತ್ರಿಜಗ ತ್ರಾಣ ಗುರುವರ ಅ.ಪ ಮುಖ್ಯ ಪ್ರಾಣನೆಂದು ನಿನ್ನ ಅಕ್ಕರೆಯಿಂ ರಾಮ ಕರೆಯೆ ಮಿಕ್ಕಾಮರರಿಗೀ ಭಾಗ್ಯವುಂಟೇ ಮಿಹಿರಜಾಮಾತ್ಯ 1 ಧಾರುಣಿಜೆ ರತ್ನದ ಹಾರ ನಿನ್ನ ಕೊರಲಿಗೆ ಹಾಕಿ ಪರಸಿದಳ್ 2 ರಾಗದಿ ಸತಿಸಹ ತತ್ವೋಪದೇಶವಾಗ ಕೊಟ್ಟನು 3
--------------
ಗುರುರಾಮವಿಠಲ
ಪ್ರಾಣಾ - ದೇವನೇ | ಸಕಲ ಜಗ | ತ್ರಾಣ ನಾದನೇ ಪ ರೇಣು ವಂತಿರಿಸೊ ಅ.ಪ. ಪಂಚ - ರೂಪನೇ | ಪ್ರಾಣಾದಿ | ಪಂಚ ಕಾರ್ಯನೇ |ವಂಚಿಸಿ ದೈತ್ಯರ | ಸಂಚುಗೊಳಿಸಿ - ನಿ-ಷ್ಕಿಂಚಿನ ಜನಪ್ರಿಯ ಸಂಚಿಂತನೆ ಕೊಡು 1 ಹಂಸ ನಾಮವಾ | ಪ್ರತಿದಿನ | ಶಂಸಿಪೆ ಪವನಾ |ಹಂಸ ಮಂತ್ರವೇಕ | ವಿಂಶತಿ ಸಾಸಿರ ಶಂಸಿಸಿ ಷಟ್ಯತ | ಹಂಸನಿಗೀವೆ 2 ವಿಧಿ | ಪೂರ್ವಕ ಸಾಧನನಿರ್ವಹಿಸುವ ತೆರ | ತೋರ್ದನು ನೀನೇ 3 ವಿಶ್ವ-ವ್ಯಾಪಕಾ | ಹರಿಗೆ ಸಾ | ದೃಶ್ಯ ರೂಪಕಾ |ಅಶ್ವರೂಪ ಹರಿ | ವಶ್ಯನೆನಿಸಿ ಬಹುವಿಶ್ವಕಾರ್ಯ ಸ | ರ್ವಸ್ವ ಮಾಳ್ಪೆಯೊ 4 ದೇವ-ಋಷೀ-ಪಿತ | ನೃಪರು-ನರ | ರೈವರೊಳಗಿರುತಾ |ಜೀವರುಗಳ ಸ್ವ | ಭಾವ ವ್ಯಕುತಿಗೈ ದೀವಿರಿಂಚಾಂಡವ | ನೀ ವಹಿಸಿದೆಯೋ 5 ಶುದ್ಧ-ಸತ್ವಾತ್ಮದ | ದೇಹದೊ | ಳಿದ್ದರೂ ಲಿಂಗದ |ಬದ್ಧ ವಿಹೀನನೆ | ದಗ್ದ ಪಟದ ಪರಿಸಿದ್ಧ ಸಾಧನ ಅನ | ವವ್ಯ ನೆನಿಸುವೇ 6 ಹೀನ-ಸತು ಕರ್ಮವಾ | ಪವಮಾನ | ತಾನೇ ಮಾಡುವಾ |ಜ್ಞಾನದಿಂದಲೇ | ನೇನು ಮಾಳ್ಪುದನುಪ್ರಾಣಪಗೊಂಡು ಕು | ಯೋನಿಯ ಕಳೆವ 7 ಕ | ವಾಟ ಅಹಿಪವಿಪ ಲ-ಲಾಟ ನೇತ್ರಗೆ | ಸಾಟಿ ಮೀರ್ದನೇ 8 ವಾಙ್ಮನೋ-ಮಾಯನೇ | ದೇವ | ಸ್ತೋಮ ದೊಳಗಿಹನೇ |ಶ್ರೀ ಮಹಿನುತ ಶ್ರೀ | ರಾಮಚಂದ್ರ ಗುಣಸ್ತೋಮ ಪೊಗಳ ನ | ಮ್ಮಾಮಯ ಹರ9 ಮೂಲೇಶ ಪದವ | ಪಿಡಿದಿಹ | ಪ್ರಾಣನ ಚರಣಾಕಿಲಾಲಜವನು | ಓಲೈಸುತಲಿಹಕಾಲ ಕರ್ಮದಿಹ | ಕೀಳು ಜೀವನ ಪೊರೆ 10 ಭಾವಿ ಬ್ರಹ್ಮನೇ | ಜೀವರ | ಸ್ವಭಾವ - ವರಿತನೇ ಕಾವ ಕಾಲ್ಪ ಗುರು | ಗೋವಿಂದ ವಿಠಲನಪಾವನ ಚರಣವ | ಭಾವದಿ ತೋರೈ 11
--------------
ಗುರುಗೋವಿಂದವಿಠಲರು
ಬದರೀ ಪ್ರಸನ್ನವಿಠಲ | ಮುದದಿ ಪೊರೆ ಇವನಾ ಪ ವಿಧಿ ಭವಾದೀ ವಂದ್ಯ | ಸಕಲ ಜಗತ್ರಾಣಅ.ಪ. ಬುದ್ಧಿಯಲಿ ನೀ ಸ | ದ್ಭುದ್ಧಿ ಪ್ರೇರಕನಾಗಿಮಧ್ವಮತ ದೀಕ್ಷೆಯಲಿ | ಬದ್ಧವೆನಿಸಿವನಾಹೆದ್ದಾರಿ ಮೀರದಲೆ | ಶುದ್ಧ ಸಾಧನಗೈಸಿಉದ್ಧಾರ ಮಾಡೋಹರಿ | ಬದರೀ ನಿವಾಸ 1 ಗುರುಹಿರಿಯನುಸರಿಪ | ವರಮತಿಯ ಕರುಣಿಸುತತರಳನನು ಕೈಪಿಡಿದು | ತೋರೋ ಸನ್ಮಾರ್ಗಅರಹುಲೇನಿಹುದಿನ್ನು | ಸರ್ವಜ್ಞ ನೀನನ್ನುದರ್ವಿ ಜೀವನ ಕಾವ | ಹವಣೆ ನಿನದಲ್ಲೇ 2 ಸತ್ಸಂಗ ಇವಗಿತ್ತು | ಕುತ್ಸಿತವ ಹೊರದೂಡಿವತ್ಸಾರಿ ಶ್ರೀಹರಿಯೆ | ವತ್ಸನ್ನ ಪೊರೆಯೇ |ಮತ್ಸಕೇತನ ಜನಕ | ಉತ್ಸವದಿ ಮೆರೆವಂಥಸತ್ಸ್ವಭಾವನೆ ದೇವ | ಭಿನ್ನವಿಪೆ ನಿನಗೆ 3 ಜ್ಞಾನ ಭಕ್ತಾದಿಗಳ | ನೀನಾಗಿ ಕೊಟ್ಟವಗೆಮಾನನಿಧಿ ಪೊರೆಇವನ | ಧೀನಜನಬಂದೊಕಾಣೆ ಮೂರ್ಲೋಕದೊಳು | ನಿನ್ನಂಥ ಕರುಣಿಗಳಶ್ರೀನಿವಾಸನೆ ತೋರೋ | ಹೃದ್ಗುಹದಿ ಇವಗೇ 4 ಸುಪ್ತೀಶ ನೀನಾಗಿ | ಗೊತ್ತು ಮಾಡ್ಡಂಕಿತವಇತ್ತಿಹೆನೊ ತರಳನಿಗೆ | ವ್ಯಾಪ್ತ ಮೂರುತಿಯೇಇತ್ತು ಮನದಿಪ್ಟವನಾ | ಎತ್ತು ಭವದಿಂದೆಂದುಗೋಪ್ತ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ಬಲ್ಲನೆಂಬೊ ಮಮಕಾರ ಬಿಡು ಎಲ್ಲೆಲ್ಲಿ ಇರುವ ಶ್ರೀಹರಿಯ ನೋಡು ಒಲಿಸಿ ಒಲಿಸಲು ನಿಲುವುದು ಜಿತವಾಗಿ ಹಾಡು ಪ ನೋಡಿದ್ದನ್ನೆ ನೀ ನೋಡು | ನಿನ್ನೆ ನೋಡಿದೆನೆಂಬೊ ಖೋಡ್ಯಾಲಸ್ಯ ಬಿಡು ಹುಡುಕಿ ತತ್ವಂಗಳ ಸಮನಾಗಿ ಜೋಡು ನಡುವೆ ತತ್ಪತಿಯ ಒಡೆಯನ ಇಡು 1 ಕೇಳಿದ್ದನ್ನೇ ನೀ ಕೇಳು | ನಿನ್ನ ಆಳುವರ ಪಾದಕೆ ಬೀಳು ಹಳೆವ ವಾರ್ತಿಗೆ ಅಳುಕುವ ಮನ ಸೀಳು ಬಲು ಪರಿಯಲಿ ಕಾಮ ಕ್ರೋಧಂಗಳ ಹೂಳು 2 ಅಭಿವೃದ್ಧೀಗೆ ಬರುವುದು ಲೋಭ ನಿಭಾಯಿಸಲು ಅದು ಹೊರುವುದು ಲಾಭ ಸಭೆಯೊಳು ಪೇಳಬ್ಯಾಡ ಸ್ವಭಾವ ಇಭವರದನಾಗುವ ಅಭಾವ 3 ನರ ಜನ್ಮವೇ ಬರುವೊದು ಕಷ್ಟ ಹರಿ ಸರ್ವೋತ್ತಮೆಂಬೋದೆ ಇಷ್ಟ ಸ್ಥಿರವಲ್ಲ ತ್ವರಿತ ಮಾಡೆಲೊ ಭ್ರಷ್ಟ ಅರಿತವರ ಕೂಡೆ ನಿರತಾಡು ಶ್ರೇಷ್ಠ 4 ಅಂಕುರಾವು ಪುಟ್ಟಿಹದೀಗ ಬಿಂಕದಿಂ ಪರಿಪಾಲಿಸೊ ಬೇಗ ಶಂಕರನುತ ವಿಜಯ ರಾಮಚಂದ್ರವಿಠಲನ ಪದ- ಪಂಕಜಕೆ ಅಳಿಯಂತೆ ಸಾಗು 5
--------------
ವಿಜಯ ರಾಮಚಂದ್ರವಿಠಲ
ಬೋಧ ಭಾನು ಬರುತೈದನೆ ನಾದ ವಿನೋದವೆಂಬ ಈಕೋಳಿಯು ಕೂಗುತೈತವರನೀಕ್ಷಿಸೆ ಸತ್ಕರುಣಾ ಕಟಾಕ್ಷದಿಂಏಳಯ್ಯ ಗುರುವರ್ಯ ಏಳಯ್ಯ ಗುರುವರ್ಯ ಯತಿಜನಾಲಂಕಾರಪಏಳು ಭಕ್ತಾಧಾರ ಯಮನಿಯಮ ಸಂಚಾರಏಳು ವಿದ್ವದ್ವರ್ಯ ಪರಮಹಂಸಾಚಾರ್ಯ ಏಳು ಗೋಪಾಲ ಯತಿವರ್ಯಾ ಸ್ವಾಮಿಅ.ಪಆಧಾರ ಮಣಿಪೂರ ಹೃದಯ ಕಮಲಗಳಲ್ಲಿನಾದ ಬಿಂದು ಕಲೆಗಳೆಂಬರುಣನುದುಸಿದಬೋಧೆಯೆಂಬರ್ಕನಾವಿರ್ಭವಿಸಿದನು ಸಹಸ್ರಾರ ಕಮಲದ ತುದಿಯಲಿವೇದವೇದ್ಯಾನಂತಮಹಿಮ ಚಿನ್ಮಯರೂಪನಾದಸೌಖ್ಯಾಕಾರ ಕಲಿ ಕಲ್ಮಷವಿದೂರಆದಿಮಧ್ಯಾಂತರಹಿತಾನಂದ ನಿತ್ಯನಿಜಬೋಧನೊಲಿದುಪ್ಪವಡಿಸಾ ಸ್ವಾಮೀ1ನಿತ್ಯವೆ ನಿಮ್ಮ ಪದವೆಂದಜಾಂಡವನಿದನನಿತ್ಯವೆಂದಖಿಳ ವಿಷಯಗಳಲಿ ವಿರತರಾಗಿಅತ್ಯಂತ ಶಮ ದಮಾದಿಗಳೆಂಬ ಸಾಧನದಿ ಮುಕ್ತಿ ಸುಖವನು ಬಯಸುತಾಪ್ರತ್ಯಕ್ಷರ ಬ್ರಹ್ಮರೈಕ್ಯವರಿಯದೆ ವಿದುಗಳತ್ಯಂತ ತ್ವರೆುಂದ ನಿಮ್ಮ ಮುಖಕಮಲದಿಂತತ್ವಮಸಿ ವಾಕ್ಯದರ್ಥವ ತಿಳಿಯಬೇಕೆಂದು ನೃತ್ಯವನು ಮಾಡುತಿಹರೂ ಸ್ವಾಮಿ 2ದೇಹೇಂದ್ರಿಯಾಂತರಂಗವನೇತಿಗಳಿದು ಸಂದೇಹದಲಿ ಕೂಟಸ್ಥ ನೀನೆಂಬುದರಿಯದೆಮಹಾ ವಿಚಾರಿಸಿ ಭಕ್ತ ಸುಲಭನೆ ದಾಟಿಸೈ ಮೋಹಸಾಗರವನೆನುತಾಪಾಹಿ ನೊಂದೆವು ಸಂಸ್ಕøತಿಯ ಬಂಧದಲಿ ನಮ್ಮಬೇಹುದೈಪಾಲಿಸಲು ಯೋಗನಿದ್ರೆಯ ಬಿಟ್ಟುದಾಹರಿಸು ವೇದಾಂತಗೋಪ್ಯವನೆನುತ ನತಸಮೂಹ ಕಾದಿದೆ ಕೃಪಾಳು ಸ್ವಾಮಿ 3ಕೇಳಿ ಭಕುತರ ದೈನ್ಯ ಸಲ್ಲಾಪಗಳನಿಂತುಲೀಲಾವತಾರ ಗುರುರಾಯನೊಲಿದೆದ್ದವರಲಾಲಿಸುತ ಧನ್ಯರಾದಿರಿ ಸನ್ಮತಿಯೊಳಿಂತು ಮೇಳಾಪವಾುತೆನುತಾಬಾಲರಿರ ನಿಮ್ಮನಂತಃಕರಣದ ಧ್ಯಾನಜಾಲಸುತ್ತಿರಲಾಗಿ ನಿಮ್ಮ ನಿಜವನು ಮರೆದುಕಾಲಕರ್ಮಾಧೀನವಾಗಿ ನೊಂದಿರಸತ್ಯವೀ ಲೋಕವೆಂದರಿಯದೆ ಎನಲು ಗುರುವೇ 4ಜೀವೇಶ್ವರರ ವಾಚ್ಯ ಲಕ್ಷ್ಯಾರ್ಥವನು ನಿಚ್ಚ ಭಾವಿಸುತ ಬ್ರಹ್ಮ ಕೂಟಸ್ಥರೆಂದವರಿಗೆ ಸ್ವಭಾವದಿಂ ಭೇದವಿಲ್ಲೌಪಾಧಿಕವಿದೆಂದು ಸಾವಧಾನದಲಿ ತಿಳಿದೂನಾವೆ ಪರಿಪೂರ್ಣಾತ್ಮರೆಂದು ಬೋಧಾಮೃತವಸೇವಿಸಿದಡನುದಿನಂ ಕೃತಕೃತ್ಯರಹಿರೆನಲ್‍ದೇವ ಕೃತಕೃತ್ಯರಾದೆವು ನಮೋ ಎನುತ ಸ್ವಭಾವ ಪದದಲಿನಿಂದರೂ ಸ್ವಾಮೀ 5
--------------
ಗೋಪಾಲಾರ್ಯರು
ಭಜನಗೈವ ನಿನ್ನ ದÉೀವಿ ಭುಜಗಭೂಷರಾಣಿಯ ಪ ಭುಜಗಭೂಷರಾಣಿಯೆ ಭೂಜಗತಾಲವೇಣಿಯೆ ಅ.ಪ. ಕಾಲಕಾಲ ಚಿತ್ತ ಕುಮುದ ಬಾಲ ಚಂದ್ರಮಂಡಲೆ ಬಾಲ ಚಂದ್ರಮಂಡಲೆ ವಿಲೋಲ ನೀಲಕುಂಡಲೆ 1 ಚಂಡಶೂಲ ಖಂಡನೈಕ ಚಂಡಶೂಲಧಾರಿಣಿ ಚಂಡಶೂಲಧಾರಿಣಿ ಪ್ರಚಂಡ ಪ್ರಾಣಹಾರಿಣಿ 2 ದೇವಿ ದೇವಿ ಸುಪ್ರಸನ್ನೇ ಭಾವನೈಕ ಗೋಚರೆ ಭಾವನೈಕೆ ಗೋಚರೆ ಸ್ವಭಾವ ಭಾವಿ ಭಾಸುರೆ 3 ಪಂಕಸಕ್ತ ಭಕ್ತಚಿತ್ತ ಸಂಕಟ ಪ್ರಮಾಥಿನೀ ಸಂಕಟ ಪ್ರಮಾಥಿನೀ ಶುಭಕರಾರ್ತಿ ನಾಶಿನೀ4 ಮಾನಿನಿ ಧೇಪುರ ನಿವಾಸಿನೀ 5
--------------
ಬೇಟೆರಾಯ ದೀಕ್ಷಿತರು
ಮಂಗಳ ಜಯ ಜಯ ಜಯ ಮಂಗಳ ಪ. ಮಂಗಳ ಮೂರ್ತಿಗೆ ಮಂಗಳ ಕೀರ್ತಿಗೆ ಮಂಗಳ ದೇವಿಯರರಸನಿಗೆ ಮಂಗಳ ಮನುಮಥಪಿತನಿಗೆ ಮಂಗಳ ಮಂಗಳ ಮಹಿಮಗೆ ಮಂಗಳ 1 ಅಚ್ಚುತಾನಂತ ಗೋವಿಂದಗೆ ಮಂಗಳ ಸಚ್ಚÀರಿತ್ರನಿಗೆ ಸಕಲ ಮಂಗಳ ಸಚ್ಚಿದಾನಂದ ಸ್ವರೂಪಗೆ ಮಂಗಳ ಅಚ್ಚಹೃದಯನಿಗೆ ಅತಿ ಮಂಗಳ 2 ಕೇಶವ ನಾರಾಯಣನಿಗೆ ಮಂಗಳ ಕೇಶಿಸೂದನನಿಗೆ ಅತಿ ಮಂಗಳ ಶೇಷಶಯನ ಹೃಷೀಕೇಶಗೆ ಮಂಗಳ ವಾಸುದೇವನಿಗೆ ಸಕಲ ಮಂಗಳ 3 ದಾನವವೈರಿ ದೆಸೆದೆಸೆಗಳಿಗೆ ಮಂಗಳ ಹೀನಕುಲದವಗೆ ಹೆಚ್ಚು ಮಂಗಳ ಆನಂದತೀರ್ಥಮುನಿಯ ಮುದ್ದುಕೃಷ್ಣಗೆ ಶ್ರೀನಾರಿಯೆತ್ತುವ ಶುಭಮಂಗಳ 4 ನಿಗಮವ ತಂದ ಮತ್ಸ್ಯನಿಗೆ ನಿತ್ಯಮಂಗಳ ನಗಧರ ಕೂರ್ಮಗೆ ಅತಿಮಂಗಳ ಜಗತಿಯನೆತ್ತದ [ವರಾಹಗೆ]ಮಂಗಳ ಮಗುವ ಕಾಯಿದ ನೃಸಿಂಹಗೆ ಮಂಗಳ 5 ದಾನವ ಬೇಡಿದ ಸ್ವಾಮಿಗೆ ಮಂಗಳ ಕ್ಷೋಣಿಶಾಂತನಿಗೆ ಸಕಲ ಮಂಗಳ ಜಾನಕೀರಮಣ ರಾಮಗೆ ಮಂಗಳ ಶ್ರೀನಂದಾಚ್ಯುತನಿಗೆ ಶುಭಮಂಗಳ 6 ಬುದ್ಧವತಾರ ಶ್ರೀಬದ್ಧಗೆ ಮಂಗಳ ಸದ್ಧರ್ಮ ಮೂಲಸ್ವಾಮಿಗೆ ಮಂಗಳ ಮಧ್ವವಲ್ಲಭ ಹಯವದನರಾಯನಿಗಿಂಥ ಶುದ್ಧಸ್ವಭಾವಗೆ ಶುಭಮಂಗಳ 7
--------------
ವಾದಿರಾಜ
ಮಹಾಲಕ್ಷ್ಮಿದೇವಿ ಪ ಆಹಾ ನಿನ್ನ ಮಹಿಮೆ ಹೊಗಳಲಳವೆ ಅ.ಪ ಮೂಲ ಪ್ರಕೃತಿ ಮಹಾಮಾಯೆ ನಿನ್ನ ಲೀಲೆಯಲ್ಲವೆ ಸಮಸ್ತವೂ ಸಾಲದೆಂಬುವ ದುಸ್ವಭಾವ ಬಿಡಿಸಮ್ಮ 1 ಕ್ಷೀರಸಾಗರಾತ್ಮಜೇ ಭಜೇ ಅಂ ಭೋರುಹಾಕ್ಷನರ್ಧಾಂಗಿ ಸಾರಸ ವೈರಿಯ ತಂಗಿ ಶುಭಾಂಗಿ 2 ತುತ್ತುಮಾಡಿವುಣಿಸಮ್ಮ ಮತ್ತಾರನು ಕಾಣೆಮ್ಮ ನಮ್ಮಮ್ಮ 3 ತಾನೆ ಶ್ರೇಷ್ಟನೆಂಬ ಹೀನರ ಸಂಗವು ಜ್ಞಾನಿಗಳಿಗೆಯಿದು ಹಾಸ್ಯವಲ್ಲದೆ 4 ನಿನ್ನ ಪತಿಯಾದ ಗುರುರಾಮ ವಿಠಲನ ಘನ್ನ ಚಿತ್ತಗನುಸಾರ ಮನ್ನಿಸಿ ಕಾಯಿ ನೀ ನೆನ್ನನು ನಿಜದೆÉ ಮಹಾಲಕ್ಷ್ಮಿದೇವಿ 5
--------------
ಗುರುರಾಮವಿಠಲ
ಮೋಸ ಪೋದೆಯಲ್ಲೇ ಭಾಸುರಾಂಗಿ ನೀನು ಪ ಕಾಶಿ ನಿವಾಸಿ ವಿಶ್ವೇಶ್ವರನಹುದೆಂದು ಅ.ಪ. ವಿಶ್ವೇಶ್ವರನವನಲ್ಲ ತಿಳಿದು ನೋಡು ನೀನು ವಿಶ್ವಪತಿಯಾ ವಿಷ್ಣುವಿನಡಿಯಾಳು ಅವನು ಸುಸ್ವಭಾವದ ಸರಳ ಹೃದಯಾನ್ವಿತಳು ನೀನು ಕಪಟ ಕಿರಾತನವನು 1 ತ್ರಿಪುರ ಸುಂದರಿಯೆಂಬ ಬಿರುದು ಪೊತ್ತಿಹೆ ನೀನು ಕಪಟ ವೇಷದೊಳು ಬಂದ ವಿಷಕಂಠನವನು ಚಪಲಾಕ್ಷಿಯೆ ನಿಜಸ್ಥಿತಿ ಅರಿಯಲಿಲ್ಲ ನೀನು ಗುಪಿತದಲಿ ನಿನ ಕಂಡು ಮರುಳು ಮಾಡ್ದನವನು 2 ರಾಜರಾಜೇಶ್ವರಿಯಾಗಿ ರಾಜಿಸುವೆ ನೀನು ಭೋಜನಕಾಗಿ ಭಿಕ್ಷ ಬೇಡುವನಲ್ಲೆ ಅವನು ಮೂಜಗವು ಮೋಹಿಸುವ ಕೋಮಲಾಂಗಿಯು ನೀನು ಈ ಜಗವರಿಯೆ ಸರ್ವದ ಭಸ್ಮಾಂಗನವನು 3 ಕನಕ ಮಣಿಮಯದಂತಃಪುರವಾಸಿಯು ನೀನು ಶುನಕ ಗೋಮಾಯ್ಗಳೆಡೆ ಮಸಣವಾಸಿಯವನು ಘನ ವಿಶಾಲಾಕ್ಷಿಯೆ ಮಂದಹಾಸಮುಖಿ ನೀನು ಮಿನುಗುವ ಬೆಸಗಣ್ಣಿನುರಿಮೊಗದೊಳಿಹನವನು 4 ಚಾರು ಪೀತಾಂಬರ ಧರಿಸಿ ಶೋಭಿಸುವೆ ನೀನು ಕೋರಿ ಗಜಚರ್ಮಧರಿಸುವ ಭಿಕಾರಿಯವನು ಭೂರಿ ಸುಖಭೋಗಂಗಳನನುಭವಿಸುವೆ ನೀನು ನಾರಸಿಂಹ ಮಂತ್ರ ಜಪಿಪ ವಿರಾಗಿಯವನು5 ಕರುಣಾ ಕಟಾಕ್ಷದಿಂ ಜಗವ ಪೊರೆದಪೆ ನೀನು ಕರುಣವಿಲ್ಲದೆ ಮೂಜಗವನುರುಹುವನವನು ಪರಮ ಭಕತರಿಗೆ ಮುಕುತಿಪಥ ತೋರುವೆ ನೀನು ನರನಾದ ಭಕ್ತನೊಳು ಹೋರಾಡಿದವನು 6 ಮಂಗಳಪ್ರದೆಯೆಂದು ಖ್ಯಾತಿಗೊಂಡಿರುವೆ ನೀನು ಜಂಗಮ ಜೋಗಿಗಳಿಗೆ ನೆಲೆಯಾಗಿಹನವನೂ ಗಂಗಾಜನಕನ ಪ್ರಿಯತಮ ಸೋದರಿಯು ನೀನು ರಂಗೇಶವಿಠಲನ ಚರಣ ಸೇವಕನವನು 7
--------------
ರಂಗೇಶವಿಠಲದಾಸರು
ಯಾಕೆ ನಿರ್ದಯವೋ ದೇವ ದೇವ ಸ್ವಭಾವ ಯಾಕೆ ಮರೆತೆ ದೇವಾ [ಎನ್ನನು] ಪ ಯಾಕೆಂಬುದರಿಯೆನಾ ಶ್ರೀಕರಾಂಬುಜನೇತ್ರ ಕಾಕುಮನುಜನೆಂದು ನೀಕರಿಸಿದೆಯೋ ಅ.ಪ ಉದರ ಪೋಷಣೆಗಾಗಿ ವಿಧ ವಿಧ ದೇಶದಿ ಬಧಿರ ಹೆಳವ ಮೂಗ ಅಧಿಕರೋಗಿಯು ಅಂಧಾ ವಿದಿತ ವೇಷಗಳಿಂದ ಅಧಿಕ ಬಳಲಿದೆನಯ್ಯ ಪದುಮಾಕ್ಷ ಪರಂಧಾಮ ಮುದದೆ ಪೋಷಿಸಲು1 ಪರರ ನಿಂದನೆ ಗೈದೆ ನೆರೆಯವರನು ಕೊಂದೆ ಪರರ ಸ್ವತ್ತನು ತಂದೆ ಪರರನ್ನವನು ತಿಂದೆ ದುರಿತಕಾರ್ಯವಗೈದೆ ನರಹರಿ ನಿನ್ನ ಮರೆದೆ ಪರರು ಕಾವವರಿಲ್ಲ ನೆರೆನಂಬಿದೇ ನಿನ್ನ 2 ಸಾವು ಜನ್ಮಂಗಳಿಂದ ನೋವು ಬಂಧನವಡೆದು ಬೇವಿನಂದದೆ ದುರ್ಗುಣಭಾವವ ತಳೆದೆನೋ ಕಾವರಿಲ್ಲವೋಯೆನ್ನ ಶ್ರೀವನಿತಾರನ್ನ ಸಾವುನೋವನು ಬಿಡಿಸೊ ಮಾವಿನಕೆರೆರಂಗ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯಾತರವ ನಾನಯ್ಯ ಇಂದಿರೇಶ ಹೋತಾಹ್ವಯನೆ ನಿನ್ನಾಧೀನ ಜಗವೆಲ್ಲ ಪ ಕಾಲಗುಣಕರ್ಮ ಸ್ವಭಾವಗಳ ಮನ ಮಾಡಿ ಶ್ರೀಲೋಲ ನೀ ಸರ್ವರೊಳಗೆ ಇದ್ದು ಲೀಲೆಗೈಯುತ ಲಿಪ್ತನಾಗದೆ ನಿರಂತರದಿ ದಿವಿಜ ದಾನವ ತತಿಯ 1 ತಿಳಿಸಿಕೊಂಬುವ ನೀನೆ ಶ್ರುತಿತತಿಗಳೊಳಗಿದ್ದು ತಿಳಿಸುವವ ನೀನೆ ಉಪದೇಶಕರೊಳು ತಿಳಿವವನು ನೀನೆ ಬುದ್ಧ್ಯಾದಿಂದ್ರಿಯಗಳೊಳು ನಿಖಿಳ ವ್ಯಾಪಾರ ಮಾಡುತಲಿಪ್ಪೆ 2 ಅಗಣಿತ ಮಹಿಮೆ ಜಗಜ್ಜನ್ಮಾದಿಕಾರಣನೆ ತ್ರಿಗುಣವರ್ಜಿತ ತ್ರಿವಿಕ್ರಮ ತ್ರಿಧಾಮಾ ವಿನುತ ಜಗನ್ನಾಥ ವಿಠ್ಠಲ ನಿನ್ನ ಪೊಗಳಿ ಹಿಗ್ಗುವ ಭಾಗ್ಯಕೊಡು ಜನ್ಮ ಜನ್ಮಕೂ 3
--------------
ಜಗನ್ನಾಥದಾಸರು
ರಕ್ಷಿಸೋ ಪವಮಾನ ಸದ್ಗುರುವರಾ ಪ ಜೀವರ ಬಂಧಗಳಿಂದ ಎಲ್ಲ ಪಾವನ ಮಾಳ್ಪದರಿಂದ ದೇವ ಪಾವನಮೂರ್ತಿಯು ನಿನ್ನ ಮುಖದಿ ಜಗ ತ್ಪಾವನ ಮಾಳ್ಪುದರಿಂದ ಪವನನೆಂಬೋರೆ ನಿನ್ನ ಅ.ಪ ಜ್ಞಾನೈಶ್ವರ್ಯ ವೈರಾಗ್ಯ ನಿನಗೆ ನಿನ್ನ ಸ್ವರೂಪ ಸ್ವಭಾವಕೆ ಯೋಗ್ಯ ನಿಜ ಘನ್ನ ಮಹಿಮ ನಿನ್ನ ಭಾಗ್ಯ | ಆಹಾ ತನು ಚತುಷ್ಟಯದೊಳಗನವರತ ವ್ಯಾಪ್ತನೋ ಇನ್ನೂ ಮುನ್ನೂ ಜಗತ್ಕಾರ್ಯ ನಿನ್ನದೋ ದೇವಾ1 ಬೃಹತಿನಾಮಕ ಕರುಣಾಳು ನಿನ್ನ ದೇಹದಿ ಭಗವದ್ರೂಪಗಳೂ ನಿತ್ಯನೋಡುತ ಅನೇಕಂಗಳು | ಆಹಾ ಬೃಹತಿ ಛಂದಸ್ಸು ಅನ್ನವು ಶ್ರೀಹರಿಗೆ ಛಂದಸ್ಸಿನಿಂದಾಚ್ಛಾದಿತ ತ್ವದ್ಗಾತ್ರನೊ2 ಪ್ರಾಣಾಪಾನ ವ್ಯಾನೋದಾನ ಸಮಾನಾದಿ ಪಂಚಪ್ರಾಣ ಜೀವ ಶ್ರೇಣಿಗಳೊಳಗೆ ನೀ ಪ್ರವೀಣ ಜಗತ್ರಾಣ ನೀನಹುದೋ ಸದ್ಗುಣ |ಆಹಾ ಪ್ರಾಣಾಪಾನದಿಂದ ದೇಹದ ಸ್ಥಿತಿ ಕಾರ್ಯಕ್ಷಣ ತಪ್ಪಲು ಕುಣಪನೆಂದಪರೋ ಈ ದೇಹಕೆ3 ಇಪ್ಪತ್ತೊಂದು ಸಾವಿರದಾರುನೂರು ಶ್ವಾಸ ತಪ್ಪದೆ ಜೀವರು ಮಾಡಿ ಅಹರ್ನಿಶಿ ದೇಹವ ಧರಿಪರೋ ನಿನ್ನ ಒಪ್ಪಿಗೆಯಂತೆ ಸಾಧಿಪರೋ | ಹಾ ಅಹೋರಾತ್ರಿ ಶ್ವಾಸನಿಯಾಮಕ ಜೀವರ್ಗೆ ಅಯುಮಾನವ ನೀವ ಮಾತರಿಶ್ವದೇವಾ 4 ನಿನ್ನಂತರದಿ ಇಟ್ಟು ಅವಸ್ಥಾಭೋಗ್ಯವನಿತ್ತು ತ್ವರದಿ | ಆಹಾ ಪಾವನ ಮೂರ್ತಿಗೆ ಅರ್ಪಿಸುತ್ತ ಶ್ರೀಪತಿ ಕರವ ಮುಗಿದು ನಿಂದಿಹೆ 5 ಪರಿಶುದ್ದ ಸತ್ವಾತ್ಮಕವಾಗಿ ಇನ್ನು ನಿರುತ ಪೂರ್ಣಪ್ರಜ್ಞನಾಗೀ ಜೀವ ಸ ರ್ವರೊಳು ಶುಚಿತಮನಾಗಿ ಇರ್ಪ ಮಾರುತ ನಿನ್ನೊಳು ಅನುವಾಗಿ |ಆಹಾ ಹರಿಯು ನಿನ್ನ ಶುಚಿ ತನುವಿನೊಳಿದ್ದು ಶುಚಿಹೃತ್ ಎಂದು ತಾ ನಿಂದು ನಲಿವನಯ್ಯ6 ಅಂಡಾವರಣದ ಗುಣತ್ರಯ ಕಂಡಿಹೆ ವ್ಯಾಪ್ತಸದ್ಗುಣ ಉ ದ್ದಂಡ ಮಹದ್ರೂಪನೆ ಮಹಘನ್ನ ಇನ್ನು ಮೃಡನಾಪೇಕ್ಷ ಶತಗುಣ | ಆಹಾ ತನುರೂಪದೊಳೆಲ್ಲ ಅಣುರೂಪವಾಗಿಹೆ ತೃಣಮೊದಲು ಸರ್ವಜೀವರೊಳು ವ್ಯಾಪ್ತನೊ7 ಅಂದು ತ್ರಿಕೋಟಿರೂಪದಲಿ ನಿಂತು ನಿಂದ ತ್ರಿವಿಕ್ರಮಾವತಾರದಲೀ ಸೇವೇ ಆ ನಂದದಿ ಸಲಿಸುತ್ತಲಲ್ಲಿ ಇನ್ನು ನಿಂದು ಅಂ ಡದ ಬಹಿರ್ಭಾಗದಲಿ |ಆಹಾ ಅಂಡ ಖರ್ಪರ ಉದ್ದಂಡ ಮೂರುತಿಯೊ 8 ವಾಯುಕೂರ್ಮನಾಗಿ ನಿಂದೇ ಜಗದಾದ್ಯಭಾರವು ಎಲ್ಲ ನಿನ್ನಿಂದೇ ಎಂದು ಕಾಯಜಪಿತ ತರುವ ಮುಂದೇ ನಿನ್ನ ಗಾಯತ್ರೀಪತಿಯ ಪಟ್ಟಕೆಂದೇ | ಆಹಾ ಶ್ರೀಯರಸಾ ಶ್ರೀ ವೇಂಕಟೇಶಾತ್ಮಕ ಉರಗಾದ್ರಿವಾಸವಿಠಲನ ನಿಜದಾಸ 9
--------------
ಉರಗಾದ್ರಿವಾಸವಿಠಲದಾಸರು
ರಂಗ ಕರುಣಿಸೊ ಚರಣಾ ಶ್ರೀ ಪ ರಂಗಗರುಡತುರಂಗಸಿರಿಮನ ತುಂಗಭವಗಜ ಸಿಂಗರಿಪುಕುಲ ಭಂಗ ಮಹಿಮತರಂಗ ದೇವೋತ್ತುಂಗನಿಜನಿಸ್ಸಂಗ ನರಹರಿ ಅ.ಪ ದೇವಸಕಲ ಸೃಷ್ಠಿಯಗೈವ ಸುಸ್ವಭಾವ ದೇವ ತ್ರಿಭುವನ ಜೀವಭಕ್ತರ ಕಾವಶೃತಿತತಿ ಭಾವ ದೋಷಾಭಾವನಿಜಸುಖ ವೀವ ಬ್ರಾಹ್ಮಿಯ ಮಾವ ತರಿತರಿ ನೋವ ಪರಿಮರ 1 ಛೇಧಖಳಜನ ಖೇದ ಸಜ್ಜನ ಮೋದನಿರ್ಗತ ಭೇದ ಸಿರಿನುತ ಪಾದವ್ಯಾಹೃತಿ ನಾದಸಿರಿಜಗ ಭೇದ ಸುಖಮಯ ಸಾಧು ಶಿರಶ್ರೀ2 ಶ್ರೀಶ ನಿಜದಾಸ ಜನರ ಮನ ಉಲ್ಲಾಸಾ ಶ್ರೀಶ ತರಿತರಿ ಪಾಶ ಕೊಡುಕೊಡು ಲೇಸ ನಿಖಿಳರ ಭಾಸ ಸಿರಿಮನೆ ವಾಸ ವಿಶ್ವನು ಪೋಷ ಬ್ರಹ್ಮಸುಕೋಶ ನಿರ್ಗತ ನಾಶ 3 ಸತ್ಯ ನಿತ್ಯಾನಿತ್ಯ ಜಗರೂಪ ಸ್ವತಂತ್ರ ಕಳತ್ರ ಪರಮಪ ವಿತ್ರ ಚಿನ್ಮಯ ಭೃತ್ಯವತ್ಸಲ ನಿತ್ಯನೂತನ ಸತ್ಯವತಿಸುತ ಚಿತ್ತಮಂದಿರ 4 ವಿಶ್ವತೈಜಸ ಪ್ರಾಜ್ಞತುರಿಯ ಶರಣು ಅಶ್ವತ್ಥ ವಿಶ್ವವಿಶ್ವಗ ವಿಷ್ಣುಜಗ ಬಲ ವಿಶ್ವಪ್ರೇರಕ ಜಿಷ್ಣುಸಾರಥಿ ಕೃಷ್ಣವರಸ್ಥಿತ “ಕೃಷ್ಣವಿಠಲ” ಶಿಷ್ಟದೋಷಸಹಿಷ್ಣುವಂದಿಪೆ 5
--------------
ಕೃಷ್ಣವಿಠಲದಾಸರು
ರಾಘವೇಂದ್ರರ ಸ್ತೋತ್ರ ಬಂದರಾ ರಾಘವೇಂದ್ರರಾಯರು ಮಂತ್ರ ಮಂದಿರ ವೆಂಬೀ ಸ್ಥಳಕೆ ವಿಭವದಿ ಪ ಇಂದು ಭಜಕ ದ್ವಿಜ ವೃಂದಕೆ ಪರಮಾ ನಂದ ಗರಿಯಲು ಶ್ಯಂದನವೇರಿ ಅ.ಪ ಶ್ಯಂದನವೇರಿ ಧಣಂ ಧಣ ವಾದ್ಯದಲಿ ಪೌರಜನ ಸಂದಣಿಸಿತು ಆನಂದದಿ ನೋಡುತಲಿ ಪ್ರಾರ್ಥಿಪರು ಮುಗಿಯುತಲಿಕೈಯಾ ಕವಿಗೇಯಾ ಶುಭಕಾಯಾ ಸುಧೀಂದ್ರರ ತನಯಾ ಗುರುವರಮಧ್ವ ಮು- ನೀಂದ್ರರಾ ಸುಮತಾಂಬುಧಿ ಚಂದಿರ ಅತಿ ಸುಂದರ ವೃಂದಾವನದಲಿ ನಿಂದಿಹರೆಂದರಿದೊಂದಿಪರಿಗೆ ಭವ ಬಂಧವ ಬಿಡಿಸಲು 1 ಸಡಗರದಲಿ ಬಿಳಿಗೊಡೆ ಚಾಮರ ವ್ಯಜನಾದಿಗಳನು ಪಿಡಿದು ಸೇವಿಸುವ ಎಡಬಲದಲಿ ಸುಜನಾ ಸಚ್ಛಾಸ್ತ್ರ ವೇದ ಪುರಾಣ ಪ್ರವಚನ ಪಾವನ್ನ ಗುರುಗಳ ಗುಣಸ್ತವನ ಮಾಡುವಾ ವರಗಳ ಬೇಡುವಾ ಕುಣಿಕುಣಿದಾಡುವಾ ಪಾಡುವಾ ಪೊಡವಿ ನಿರ್ಜರರ ಕಡು ವೈಭವದಲಿ 2 ಮಣಿ ಮುಕುಟ ದಿಂದ ದಿ- ಗ್ವಲಯ ಬೆಳಗುತಿಹ ಚಲುವ ಮುಖದ ಮಾಟಾ ಗಳದಲ್ಲಿ ಮೌಕ್ತಿಕದ ಹಾರ ಕೇಯೂರ ನೂಪರ ಸ- ಪೊಳೆಯುತ ಭಜಕರ ಕ- ಲುಷಾಭ್ರಕೆ ಮಾರುvರೆÀನಿಸುತ ಇಳೆಯೊಳು ಪಂಡಿತ ಯಳೆಮೇಲಾರ್ಯಗೊಲಿದು ಭಕುತ ವತ್ಸಲರೆಂದೆ ನಿಸುತ3 ಮಂಗಳ ತುಂಗ ತರಂಗಿಣಿ ತೀರದಲಿ ಭಕುತ ಜ- ನಂಗಳಿಗೆ ನಿಖಿಲಾರ್ಧಂಗಳ ಸಲಿಸುತಲೀ ಪಾಲಿಸುವ ದೇವ ಸ್ವಭಾವ ಶರಣ ಸಂಜೀವ ಕರದಲ್ಲಿಗೆ ಬರುವ ಎನ್ನುತ ತುತಿಪರು ದೃಗ್ಭಾಷ್ಪವ ಸುರಿಸುತ ಮೈಮರೆಯುತ ಬಲು ನಿರ್ಮಲ ಅಂತರಂಗದಿತವ ಪದಂಗಳ ಸ್ಮರಿಪರ ಸಂಘಕೆ ಸತತ ಸುಮಂಗಳವೀಯಲು 4 ಪುರದರಸನು ತನ್ನ ಸಿರಿಪರಿವಾರದಲಿ ಚರಿಸುತ ಬರುತ ಕಾಣುತಲೆ ಗುರುವರ ಚರಣದಲಿ ಕಾಣಕೆಯನ್ನಿತ್ತು ಶಿರಬಾಗಿ ಚನ್ನಾಗಿ ಆರುತಿಯ ಬೆಳಗಿ ಬರುತಿರೆ ರಥಸಾಗಿ ತೋರುವಾ ನೋಳ್ಪರ ನಯನಕ್ಕೆ ಪರಮೋತ್ಸವಾ ಶರಣರ ವಾಂಛಿüತಗಳ ಗರಿಯುವಾ ಪೊರೆಯುವ ಧರೆಯೊಳು ಮೆರೆಯುವ 'ಶಿರಿ ಕಾರ್ಪರ ನರಹರಿಯ' ನೊಲಿಸಿರುವ ಗುರು ಪ್ರಹ್ಲಾದರು 5
--------------
ಕಾರ್ಪರ ನರಹರಿದಾಸರು