ಒಟ್ಟು 109 ಕಡೆಗಳಲ್ಲಿ , 40 ದಾಸರು , 107 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತರಣಿ ಪಾವಕ ಶಶಿ ನೇತ್ರಗಳುಪರಶುಮೃಗಂಗಳ ಧರಿಸಿರೆ ಕರಗಳು ವರದಾಭಯಗಳಲೊಪ್ಪಿರಲು 1ವಾಮವ ಗೌರಿಗೆ ಕೊಟ್ಟಿರಲು ಸಾಮಜಕೃತ್ತಿಯ ಹೊದ್ದಿರಲುಭೀಮನು ಮೂರ್ತಿಯ ಬೇಡಲು ಕೊಡಲು ಕಾಮನ ನೋಟದಿ ಕೆಡಹಿರಲು 2ಧರೆಯೊಳು ದಕ್ಷಿಣ ಕಾಶಿಯಲಿ ುರೆ ಗಂಗಾಧರ ರೂಪಿನಲಿತಿರುಪತಿ ವೆಂಕಟ ವರ ನಾಮದಲಿ ಮೆರೆವೆ ಮಹೇಶ್ವರ ಮಹಿಮೆಯಲಿ 3ಓಂ ಕೋಟಿಸೂರ್ಯಸಮಪ್ರಭಾಯ ನಮಃ
--------------
ತಿಮ್ಮಪ್ಪದಾಸರು
ತಿಳಿಯದು ಶ್ರೀ ಗುರು ಮಹಿಮೆ ಧ್ರುವ ತೋರುವ ರೂಪದ ಮಾಟ ನಿರ್ಮಿಸಿಹ್ಯ ಬ್ರಹ್ಮ ವಿಷ್ಣು ಮಹೇಶ ಉತ್ಪತ್ತಿ ಸ್ಥಿತಿ ಲಯದಾಟ ಮೋಹದ ಅವ್ಹಾಟ ಬ್ಯಾರಿಹ ಅನಿಮಿಷ ನೋಟ 1 ಕಂಭ ಸೂತ್ರದ ವಿಚಾರ ನಿತ್ಯವಿಲ್ಲದನಿತ್ಯದ ಆಟವು ನಂಬಬಾರದು ಸಂಸಾರ ನಂಬಿದವರು ಇಂಬಿಲ್ಲಿದೆ ಹೋದರು ಮಿತಿ ಇಲ್ಲದೆ ಅಪಾರ ನಿಲುಕಡೆ ಇಲ್ಲದೆ ಸೂರ್ಯಾಡುವ ಬಗೆ ಇದು ಯಾತನೆ ಶರೀರ 2 ಕಂಡಂತಾಗುವುದೇನು ಸಂತೋಷ ಕಂಡಂತನುಭವಿಸುವದೇನು ಕ್ಲೇಶ ಪರಿ ಹೋದರು ಶತಂ ಭೀಷ್ಮ ತೋರು ಗುರು ಜಗದೀಶ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾಸರಾಗಿರೊ ವೈಷ್ಣವ ದಾಸರಾಗಿರೊ ದಾಸರಾಗಿ ಬಯಲಾಸೆಯ ನೀಗಿ ರ- ಮೇಶನ ಗುಣವಾರಾಶಿಯೊಳಿರಿಸುವ ಪ. ಸುಂದರ ಮಾನಾನಂದತೀರ್ಥಮತ ಸಾಂದ್ರ ಸುಖಾಂಬುಧಿಮಿಂದ ಮಹಾತ್ಮರ 1 ದಿವ್ಯಲೋಕಜನ ಭವ್ಯೋಭಯವಿಧ ಕಾವ್ಯರಚನ ಲಾತವ್ಯಯತೀಂದ್ರರ 2 ಸೀತಾಪತಿ ರಘುನಾಥನ ಮನದೊಳ- ಗಾತು ಭಜಿಪ ಗಣನಾಥ ಜನಕನ 3 ಶ್ರೀ ಮಹೇಶ ವಟು ವಾಮನ ಪದಯುಗ ಸಾಮಜವಾಹನ 4 ಕಾಕರಟನದೊಳ ಭೀಕರ ಮತವ ನಿ- ರಾಕರಿಸಿರುವ ಸುಧಾಕರ ಮೂರ್ತಿಯ 5 ತಂತ್ರ ದೀಪಿಕಾ ಯಂತ್ರವ ರಚಿಸಿದ ಮಂತ್ರಾಲಯವರ ಮಂತ್ರದೇವತೆಯ 6 ಗೋಪಿನಾಥನೆ ಭೂಪನೆಂದು ಸಂ- ತಾಪವ ಬಿಡಿಸುವ ಶ್ರೀಪಾದರ ಪದ 7 ಮಂದಕಲಿಯ ಕಾಲಿಂದಲೊರಿಸಿದ ಪು- ರಂದರದಾಸರ ಹೊಂದಿ ಹರಿಯ ನಿಜ8 ಸುಜನ ಹೃದಂಬುಜ ಸುಖಕರ ದಿನಮಣಿ ವಿಜಯರಾಜ ಪದ ಭಜನೆಯ ಮಾಡುತ 9 ಭಂಗುರ ಭವಭಯ ಭಂಗದ ಸುಗುಣ ತರಂಗನ ಒಲಿಸಿದ ಮಂಗಳ ಮಹಿಮರ 10 ಹರಿಕಥಾಮೃತದ ತೆರೆಗಳೊಳಾಡುವ ಪರತರಸಾರವ ಸುರಿದ ಮಹಾತ್ಮರ 11 ಸಿಡುಕರ ಸಂಸ್ಕøತಿ ಕಡಲೊಳು ಮುಳುಗಲು ಬಿಡದಲೆ ಕೈಪಿಡಿದೊಡೆಯನ ತೋರ್ಪರ 12 ಅರಿಷಡ್ವರ್ಗವ ತರಿದು ಬಿಸುಟು ಶ್ರೀ- ವರನ ಕೃಪಾರಸ ಸುರಿಸಿದ ಧನ್ಯರ 13 ಮೂಕನ ವಾಗ್ಮಿಯ ಮಾಡಿ ಮುರಾರಿಗೆ ಸಾಕ ಕೊಟ್ಟಿ ದೀನಾಕರದಾಸರ 14 ಮಾತಿಗೆ ಕಂಸಾರಾತಿನಲಿಯೆ ಜಗ ನ್ನಾಥರೆಂ¨ ವಿಖ್ಯಾತಿ ಪಡೆದವರ 15 ತಾಪತ್ರಯಗಳ ತಪ್ಪಿಸಿ ವೆಂಕಟ ಭೂಪನ ಸದಯಾರೋಪಗೈದವರು 16
--------------
ತುಪಾಕಿ ವೆಂಕಟರಮಣಾಚಾರ್ಯ
ದೇವ ದೇವತೆಗಳ ಸ್ತುತಿ 1 ಅಂಬ ಕಟಾಕ್ಷಿಸೆ ಅಂಬಅಂಬ ಪರಾಂಬ ಬಗಳಾಂಬ ಪ ಮಧು ಕೈಟಭಾರಿಯೆ ಮಹಿಷಾಸುರೇಶ್ವರಿಯೆಕದನ ಶುಂಭಾಂತಕಿ ಕರುಣಾ ಕೃಪಾಕಟಾಕ್ಷೆ1 ಪರಮ ಪಾವನದೇವಿ ಪಂಡಿತ ಜನ ಸಂಜೀವಿಶರಣ ಜನರ ತಾಯಿ ಸುಧಾ ಶರಧಿ ಸಂಭಾವಿ2 ನಾರಾಯಣಿ ಭದ್ರೇ ನರಸಿಂಹಿಣಿ ರೌದ್ರಿವಾರಾಹಿ ಕಾಳಿಯೆ ಗೌರಿ ಉಮಾಮಹೇಶ್ವರಿ ಶಂಕರಿ 3 ನಿತ್ಯ ನಿಗಮ ಸ್ತುತ್ಯ ಚಿದ್ರೂಪೇನಿತ್ಯ ನಿರ್ವಿಕಾರಿ ನಿಂದಕಜನಸಂಹಾರಿ 4 ಚಿದಾನಂದಾವಧೂತೇ ಚಿನ್ಮಯ ಬಗಳ ಪ್ರಖ್ಯಾತೇಬೋಧ ಸದ್ಗುರುನಾಥೇ ಭಕ್ತವಿಲಾಸ ಪ್ರೀತೆ 5
--------------
ಚಿದಾನಂದ ಅವಧೂತರು
ದೇವನ ನೆರೆನಂಬಿರೊ ಶ್ರೀವರ ವೇಲಾಪುರಿಯ ಚೆನ್ನಿಗನ ಪ ಕರೆಯರಿಗೊರಳಭವನ ಕೃಪೆಯಿಂದ ದಶಗ್ರೀವ ನೆರೆಭಾಗ್ಯಪಡೆದು ಗರ್ವದೊಳಿರಲು ಅರೆಯಟ್ಟಿ ಶಿರಗಳ ಕುಟ್ಟಿಹಾಕಿ ತನ್ನ ಮೊರೆಹೊಕ್ಕ ವಿಭೀಷಣಗೆ ಪಟ್ಟಗಟ್ಟಿದ 1 ಭಾಗೀರಥಿಯ ತಾಳ್ದ ಮಹೇಶನ ತಲೆ ವಾಗಿಲ ಕಾಯಿಸಿಕೊಂಡಿಹ ಬಾಣನ ತಾಗಿ ತೋಳಕಡಿದ ಸುರನ ಕುಮಾರತಿಗೆ ಭೋಗಿಸುವಂತೆ ತಮ್ಮಗೆ ಕೈವರ್ತಿಸಿ ಕೊಟ್ಟ2 ಲೋಕದೊಳಜಭವಾದಿಗಳಿಂದ ಉಬ್ಬಿದ ಅ- ನೇಕ ರಕ್ಕಸರನೊಟ್ಟಿಗೆ ತಾಹೆನು- ತಾ ಕೊಟ್ಟ ವರವನೆ ಶಿರಮುಟ್ಟಿ ಕೊಂಡಾ ಕರು ಣಾಕರ ವರ ವೇಲಾಪುರಿಯ ಚೆನ್ನಿಗನ 3
--------------
ಬೇಲೂರು ವೈಕುಂಠದಾಸರು
ಧುರ ಧೀರಾ ಉದಾರಾ ಗಂಭೀರ ಕುಮಾರ ಪ ಕಂದರ್ಪ ರೂಪಾರ್ಧ ಚಂದ್ರಫಾಲಾ ಗುಣಮಾಲಾ ಜನಲೋಲಾ ಉಮೆ ಬಾಲಾ ಸುಶೀಲ 1 ನಿಗಮಾಳಿ ಪೊಗಳುವ ಖಗಧ್ವಜ ಮಿತ್ರಾ | ಜಗಪಾವನ ಶಶಿಮೊಗ ಕಂಜನೇತ್ರಾ ತ್ರಿನೇತ್ರಾ ಪ್ರಿಯಮಿತ್ರಾ ಸುಚರಿತ್ರಾ ಪವಿತ್ರಾ 2 ಪಾವನ ಮೂರುತಿ ಪಾವಂಜೆ ವಾಸಾ | ಕೋವಿದರೊಡೆಯ ರಕ್ಷಕ ದಾಸಾ ಗುಹೇಶಾ ಸರ್ವೇಶಾ ಸೇನೇಶಾ ಜಗದೀಶಾ 3
--------------
ಬೆಳ್ಳೆ ದಾಸಪ್ಪಯ್ಯ
ನಂಬಿದೆ ನಿನ್ನ ಗಣೇಶ ಜಗ- ದಂಬಿಕಾತನಯ ವಿಶ್ವಂಭರದಾಸ ಪ. ಲಂಬೋದರ ವಿಘ್ನೇಶ ಶರ- ಣೆಂಬುದು ಸುರನಿಕುರುಂಬ ಮಹೇಶ ಅ.ಪ. ತರುಣಾದಿತ್ಯಪ್ರಕಾಶ ನಿನ್ನ ಶರಣಾಗತನಾದೆ ಮೋಹನ ವೇಷ ಸುರುಚಿರ ಮಣಿಗಣ ಭೂಷ ಜಗ ದ್ಗುರುವೆ ಗುಹಾಗ್ರಜ ಪೊರೆಯೋ ನಿರ್ದೋಷ 1 ಸಂತಜನರ ಮನೋವಾಸ ಮೋಹ ಭ್ರಾಂತಿಯಜ್ಞಾನಧ್ವಾಂತವಿನಾಶ ಶಾಂತಹೃದಯ ಸುಗುಣೋಲ್ಲಾಸ ಏಕ ದಂತ ದಯಾಸಾಗರ ದೀನಪೋಷ 2 ಲಕ್ಷ್ಮೀನಾರಾಯಣನೆ ವ್ಯಾಸ ಗುರು ಶಿಕ್ಷಿತ ಸುಜ್ಞಾನ ತೇಜೋವಿಲಾಸ ಅಕ್ಷರ ಬ್ರಹ್ಮೋಪದೇಶವಿತ್ತು ಹುತಾಶ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಂಬಿದೆನು ಜಗದಂಬೆ ನಿನ್ನನು ಪಾಲಿಸು ಸರ್ವಾ- ರಂಭಸೂತ್ರಳೆ ಇಂಬುದೋರಿನ್ನು ಪ. ಅಂಬುಜಾಂಬಕಿ ಶುಂಭಮರ್ದಿನಿ ಕಂಬುಗ್ರೀವೆ ಹೇರಂಬ ಜನನಿ ಶೋ- ಣಾಂಬರಾವೃತೆ ಶಂಭುಪ್ರಿಯೆ ದಯಾ- ಲಂಬೆ ಸುರನಿಕುರುಂಬಸನ್ನುತೆ ಅ.ಪ. ಕ್ರೂರದೈತ್ಯವಿದಾರೆ ಮಹದಾಕಾರೆ ಮಂಗಲೇ ವಿಶ್ವಾ- ಧಾರೆ ಕಲ್ಮಷದೂರೆ ಕದನಕಠೋರೆ ನಿಶ್ಚಲೆ ಪಾರಾ- ವಾರ ಸಮಗಂಭೀರೆ ಸುಗುಣವಿಹಾರೆ ನಿರ್ಮಲೆ ರತಿಶೃಂ- ಗಾರೆ ರಿಪುಸಂಹಾರೆ ತುಂಬುರು ನಾರದಾದಿಮುನೀಂದ್ರ ನುತಚರ- ಸೂರಿಜನ ಸುಮನೋರಥಪ್ರದೆ 1 ವಿಶಾಲಸುಗುಣಯುತೆ ಮುನಿಜನ- ಲೋಲತರುಣಮರಾಳೆ ಸಚ್ಚರಿತೆ ನವಮಣಿ ಮಾಲೆ ಮನ್ಮಥಲೀಲೆ ರಿಪುಶಿರಶೂಲೆ ಸಚ್ಚರಿತೆ ಹಿಮಗಿರಿ- ಬಾಲೆ ನೀಲತಮಾಲವರ್ಣೆ ಕ- ರಾಳಸುರಗಿ ಕಪಾಲಧರೆ ಸುಜ- ನಾಳಿಪಾಲನಶೀಲೆ ಹಿಮಕರಮೌಳಿಶೋಭಿತೆ ಕಾಳಿಕಾಂಬಿಕೆÉ2 ಶೋಕಮೋಹಾನಾನೀಕದೂರೆ ಪಿನಾಕಿಸುಪ್ರೀತೆ ಕೋಟಿ ದಿ- ಪರಾಕು ಶರಣಜನೈಕಹಿತದಾತೆ ಸುರನರ- ಲೋಕಮಾತೆ ನಿರಾಕುಲಿತೆ ಸುವಿವೇಕಗುಣವ್ರಾತೆ ಮಾನಸ- ವಾಕುಕಾಯದಿಂದ ಗೈದಾ ನೇಕ ದುರಿತವ ದೂರಗೈದು ರ- ಮಾಳಕಳತ್ರನ ಪಾದಭಕುತಿಯ ನೀ ಕರುಣಿಸು ಕೃಪಾಕರೇಶ್ವರಿ3 ಈಶೆ ಪಾಪವಿನಾಶೆ ಮಣಿಗಣಭೂರಿಪ್ರದೆ ಶಕ್ತಿವಿ- ಲಾಸೆ ವಿಗತವಿಶೇಷೆ ಕೃತಜಯಘೋಷೆ ಸರ್ವವಿದೆ ಮನ್ಮನ- ದಾಸೆಗಳ ಪೂರೈಸು ಸಜನರ ಪೋಷೆ ಕುಂದರದೆ ಶಂಕರೋ- ಲ್ಲಾಸೆ ಯೋಗೀಶಾಶಯಸ್ಥಿತೆ ವಾಸವಾರ್ಚಿತೆ ಶ್ರೀಸರಸ್ವತಿ ದೋಷರಹಿತೆ ಮಹೇಶೆ ಸುಗುಣರಾಶಿ ಸುರತತಿದಾಸಜನಯುತೆ4 ಸಾಮಗಾನಪ್ರೇಮೆ ರಾಕ್ಷಸ ಭೀಮೆ ರುದ್ರಾಣಿ ಅರಳ- ಗ್ರಾಮದೇವತೆ ಕ್ಷೇಮದಾಯಿನಿ ತಾಮರಸಪಾಣಿ ಪಶುಪತಿ- ವಾಮಭಾಗ ಲಲಾಮೆ ಮಂಗಲಧಾಮೆ ಫಣಿವೇಣಿ ಜಯಜಯ ಶ್ರೀಮಹಾಲಕ್ಷ್ಮಿ ನಾರಾಯಣಿ ರಾಮನಾಮಾಸಕ್ತೆ ಕವಿಜನ- ಸೋಮಶೇಖರಿ5
--------------
ತುಪಾಕಿ ವೆಂಕಟರಮಣಾಚಾರ್ಯ
ನಿಂತ ಕಾರಣ ಪೇಳು ಹಣುಮಂತರಾಯಾ ಪ ಶಾಂತನಾಗಿ ವಿಶ್ರಾಂತಿಯಗೋಸುಗಕಂತುಪಿತನ ಮಹಮಂತ್ರವ ಜಪಿಸುತಅ.ಪ. ದಾಶರಥಿಯ ದೂತಾ ದಶಮುಖಪುರವಸ್ವಾಹೇಶಗೆ ದಾತಾ ಗುರುತು ಕೊಟ್ಟು ದಾತನ ಎದುರಿಗೆ ಬಂದು1 ಶಂಖ ಕುಲದಲಿ ಜನಿಸಿ ನಿಃಶಂಖದಿ ಖಳರನು ವರಿಸಿ ಶಂಕರಾದಿನುತ ಪದ ಶಂಬಧರನ ಕಾಜಲ್ಕದಿ ಸ್ಮರಿಸುತ 2 ಮೂರನೇ ರೂಪವ ಧರಿಸಿ ಧರೆಯೊಳು ಬಂದು ಅವತರಿಸಿ ಬೋಧಿಸಿ ಮಾರ್ಗವ ತೋರಿಸಿ ತಂದೆವರದಗೋಪಾಲವಿಠ್ಠಲನಸೇವಿಸಿ 3
--------------
ತಂದೆವರದಗೋಪಾಲವಿಠಲರು
ನಿನ್ನನೆ ತಿಳಿದು ನೀ ನೋಡು ಕಂಡ್ಯಾನೀ ನನ್ನ ತಿಳಿಯೆ ನೀ ಶಿವನು ಕಂಡ್ಯಾ ಪ ಆದಿ ಮಧ್ಯಂತರ ಅನಾದಿ ಕಂಡ್ಯಾನಾದ ಬಿಂದು ಕಳಾತೀತ ಕಂಡ್ಯಾಭೇದಾಭೇದಕೆ ಅಭೇದ ಕಂಡ್ಯಾ ನೀವಾದ ಸುವಾದ ವರ್ಜಿತನು ಕಂಡ್ಯ 1 ಮೂರು ಗುಣಕೆ ನೀ ಮೂಲ ಕಂಡ್ಯನೀನಾರು ಅರಿಗಳಿಗತ್ತತ್ತ ಕಂಡ್ಯತೋರುವುದಕೆ ನೀ ತೋರ್ಕೆ ಕಂಡ್ಯನೀ ಮಾರನಟ್ಟುಳಿಗೆ ಮಹೇಶ ಕಂಡ್ಯ 2 ಮಂಗಳ ತರಕೆ ಮಂಗಳನು ಕಂಡ್ಯ ನೀಮಂಗಳ ಮೂರುತಿ ಮಹಾತ್ಮ ಕಂಡ್ಯಮಂಗಳ ವಸ್ತುಮಾಪತಿಯು ಕಂಡ್ಯ ನೀಮಂಗಳನಿಗೆ ಮಾಯೆ ಮಾತು ಕಂಡ್ಯ 3 ಸಿಂಧು ಕಂಡ್ಯ4 ಪಾದ ಸೇರು ಕಂಡ್ಯಗುರು ಕಟಾಕ್ಷವ ನೀನು ಪಡೆಯೋ ಕಂಡ್ಯಗುರುವೆಂದು ಎಲ್ಲವನರಿಯೋ ಕಂಡ್ಯಗುರು ಚಿದಾನಂದ ನೀನೆನ್ನು ಕಂಡ್ಯಾ 5
--------------
ಚಿದಾನಂದ ಅವಧೂತರು
ಪರಮಾನಂದ ಕರುಣಾಸಿಂಧು ವರವ ನೀಡಲು ಭಕುತಬಂಧು ಪ ಪರಮಚರಿತ ದುರಿತರಹಿತ ಪೊರೆಯೊ ಪ್ರಥಮಜನರ ಪ್ರೀತ ಸ್ಮರಿಪೆ ನಿರುತ ಸುರಗಣನುತ ಮೊರೆಯೊ ಕೇಳೆಲೊ ವರಪ್ರದಾತ 1 ಉರಗಭೂಷ ಭಜಕಪೋಷ ದುರಿತನಾಶ ಸುಜನವಾಸ ವರಮಹೇಶ ತ್ರಿ ಜಗದೀಶ ಪೊರೆ ಪ್ರಕಾಶ ತ್ರಿಪುರನಾಶ 2 ನಿಗಮವಿನುತ ಭಗವದ್ಭಕ್ತ ಸುಗುಣವಿಖ್ಯಾತ ಜಗನ್ನಾಥ ಜಗಜೀವಿತ ಶ್ರೀರಾಮ ಪ್ರೀತ ಈಗೆನ್ನಂತರಂಗ ಪಾಲಿಸೊ 3
--------------
ರಾಮದಾಸರು
ಪರೇಶ ಸರ್ವೇಶ ಗಂಗಾಧರಾ ಗಿರೀಶ ಗೌರೀಶ ಕೃಪಾಕರಾ ಪ ಸುರೇಶ ಸುಖಕರ ಬಾಲೇಂದುಧರ ಹರ ಧರೇಶ ಶುಭಕರ ಭವಾಭ್ದಿ ಪರಿಹರ ಅ.ಪ ಉಮಾಮಹೇಶ್ವರ ಕುಮಾರಪಿತ ಹರ ನಮಾಮಿ ಶಂಕರ ಪರಾತ್ಪರಾ 1 ಪಿನಾಕಧರಕರ ಪುರಾರಿ ಸ್ಮರಹರ ತ್ರಿನೇತ್ರ ಹರ ಮಾಂಗಿರೀಶ ಸಹಚರ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪಶುಪತಿ ಬಂದ ಆನಂದದಿಂದ ಪ ಶಶಿಧರ ಶಂಕರ ಸುರಗಂಗಾಧರ ಅಸಮ ಸುಶೋಭಿತ ಜಟಾಜೂಟಧರ ಅ.ಪ ಕರÀದಿ ಧರಿಸಿದ ಡಮರುಗ ತ್ರಿಶೂಲ | ಸುಂದರವಾದ ವರಸಾರಂಗ ಸರಸಿಜಭವ ಕಪಾಲ | ಕೊರಳಲಿ ನೋಡೆ ಧರಿಸಿದ ಬಹುಪರಿ ರುಂಡಮಾಲಾ | ಕಿಡಿಗಣ್ಣಿನ ಫಾಲಾ ಗರಳಕಂಠ ಕರಿವರ ಚರ್ಮಾಂಬರ ಸ್ಮರ ಮದಪರಿಹರ 1 ರಜತಾಚಲ ಮಂದಿರವಾಸ | ಮಹೇಶ ಶಿವಕೃತ್ತಿವಾಸ ಭುಜಗಭೂಷಣ ಶೋಭಿತ ವರವೇಷ | ಭಕ್ತರ ಪೋಷ ಗಜಮುಖ ಜನಕ ಭೂತ ಗಣೇಶ ಪಾಪೌಘ ವಿನಾಶ ಕುಜನಾವಳಿ ಮದಗಜ ಮೃಗರಾಜನು ಸುಜನಜಾಲ ಪಂಕಜಹಿತ ದಿನಮಣಿ 2 ಸುರವರನಮಿತಚರಣನು ಬಂದ | ಶೋಭಿತವಾದ ಪರಿಪರಿ ಚಿತ್ರ ಭೂಷಣನು ಬಂದ | ಕೋರಿದವರ ಕರೆದೀವ ಕರುಣಾಭರಣನು ಬಂದ | ತಾನೊಲವಿಂದ ಚರಣ ಶರಣರಘ ಪರಿಹರಗೈಸುವ ಪುರಹರ ಶಂಕರ 3
--------------
ವರಾವಾಣಿರಾಮರಾಯದಾಸರು
ಪಾಲಿಸು ಪರಮೇಶ್ವರಿ ಅಂಬಾ ಪ ಶ್ರೀಲಲಿತೇ ಗೌರಿ ಶೌರಿಸಹೋದರಿ ಫಾಲಾಕ್ಷಸಹಚರಿ ಬಾಲೇಂದುಶೇಖರಿ ಅ.ಪ ಭ್ರಮರಾಂಬೆ ದುರಿತಾರಿ ಹಿಮವಂತ ಸುಕುಮಾರಿ ಹೇಮಾಂಬರಧಾರಿ ಜಗದೀಶ್ವರೀ ಜಂಭಾರಿ ವಿನುತೆ ಮಾಹೇಶ್ವರಿ ಶ್ರೀಮಾಂಗಿರೀನಾಥ ಪ್ರೇಮಾಂಬುಲಹರೀ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪಾಹಿ ಪದ್ಮದಳಾಯತಾಂಬಕ ಪಾಹಿ ಪದ್ಮಾರಮಣ ಪರಾತ್ಪರ ಪಾಹಿ ಪದ್ಮಾಸನ ಜನಕ ಮಾಂ ಪಾಹಿ ಪ್ರಪನ್ನ ಪಾಲಕ ಪ ವಾಸುದೇವ ಕೃತೀಶ ಶಾಂತಿಪ ಕೇಶವಾಚ್ಯುತ ವಾಮನ ಹೃಷೀಕೇಶ ಪ್ರಶ್ನಿಗರ್ಭ ಋಷಭ ನೃಕೇಸರಿ ಹಯಗ್ರೀವ ವೇದ ವ್ಯಾಸ ದತ್ತಾತ್ರಯ ಉರುಕ್ರಮಾ ವಾಸವಾನುಜ ಕಪಿಲ ಯಜ್ಞ ಮ ಹೇಶ ಧನ್ವಂತ್ರಿ ಹಂಸ ಮಹಿ ದಾಸ ನಾರಾಯಣ ಕೃಷ್ಣಹರೆ 1 ಮಾಧವ ಪ್ರದ್ಯುಮ್ನ ಶ್ರೀ ದಾಮೋದ ರಾಧೋಕ್ಷಜ ಜನಾರ್ದನ ಶ್ರೀಧರ ಶ್ರೀ ಪದ್ಮನಾಭ ವೃಕೋದರ ಪ್ರಿಯತಮ ತ್ರಿವಿಕ್ರ ವಿರಿಂಚಿ ವಿನುತ ಗದಾಧರ ಗಯಾಸುರ ವಿಮರ್ದನ ಸಾಧಿತ ಜಗತ್ರಯ ಪುರಾತನ ಪಾದ ಪರಮ ಕೃಪಾಂಬುಧೇ ಮಾಂ 2 ನಂದಗೋಪನ ಕುಮಾರ ಗೋಪಿ ವೃಂದ ಪೋಷಿತನಮಿತ ಸಂಕ್ರಂಡನ ಕೃಪಾ ಸಾಂದ್ರ ವರ ಕಾಳಿಂದಿ ತಟನಿ ವಿಹಾರ ಪಾಂಡವ ಬಂಧು ದ್ರೌಪದಿವರದ ನೃಪ ಮುಚು ಕುಂದಸ್ತುತಿ ಸಂಪ್ರೀತ ಲಕ್ಷ್ಮೀ ನಂದಮಯ ನಿಜ ಭಕ್ತವತ್ಸಲ 3 ಮೀನಕೂರ್ಮವರಾಹ ಪಂ ದಿತಿಸುತ ವಾಮನ ಕ್ಷೋಣಿಪಾರ್ವನ ಬ್ರಾಹ್ಮಣ ಪ್ರಿಯ ವನೌಕಸನಾಥ ಮುಖ್ಯ ಪ್ರಾಣಸಖ ವಸುದೇವ ದೇವಕಿ ಸೂನು ಸುಂದರಕಾಯ ಪುರಹರ ಬುದ್ಧ ಕಲ್ಕಿ ಪ್ರ ಧಾನ ಪುರುಷೇಶ್ವರ ದಯಾಕರ 4 ನಿಂತ ನಿಜಬಲ ಮಾತುಳಾಂತಕ ಶ್ವೇತವಾಹನ ಸೂತ ತ್ರಿಗುಣಾ ತೀತ ಭವನಿಧಿ ಪೋತ ಮೋಕ್ಷನಿ ಕೇತನಪ್ರದ ಭೂತಭಾವ ಧೌತ ಪಾಪ ವ್ರಾತ ತ್ರಿಜಗತಾತ ನಿರ್ಗತ ಭೀತ ಶ್ರುತಿ ವಿಖ್ಯಾತ ಭಕ್ತಿಸುವೇತನ ಪ್ರಿಯ ಭೂತಿದ ಜಗನ್ನಾಥ ವಿಠ್ಠಲ 5
--------------
ಜಗನ್ನಾಥದಾಸರು