ಒಟ್ಟು 922 ಕಡೆಗಳಲ್ಲಿ , 84 ದಾಸರು , 672 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಮಾ ರಾಮಾ ಎಂಬ ನಾಮ ಜಿಹ್ವೆಯೊಳಿರುವನೇಮವನೆ ಸ್ಥಿರನಿಜವ ಮಾಡೋ ರಾಮರಾಮ ದಶರಥರಾಮ ಪಟ್ಟಾಭಿರಾಮ ರಘುರಾಮ ಸೀತಾರಾಮ ರಾಮ(ರಾಮ) ಪ ಬಾಲತನವೆಂಬುದೆಂತು ಲೀಲೆಯಿಂದಲಿ ಸಂತು ಮೇಲೆ ಯೌವನವು ಬಂತೋ ರಾಮಲೋಲಲೋಚನೆಯರ ವಿಶಾಲರತಿಸುಖದೊಳಗೆ ವೋಲಾಡುತಿದ್ದೆನಲ್ಲೋ ರಾಮಕಾಳು ಜರೆ ಮುಸುಕಿ ಕೈಕಾಲು ಕಸದಿಂ ಮುರುಪಿ ನಾಲಿಗೆಯ ಧೃತಿ ತಪ್ಪಿತೋ ರಾಮಕಾಲನವರಿಗೆ ಕರುಣವಿಲ್ಲ ನೀ ಕೈಬಿಟ್ಟ ಮೇಲೆ ರಕ್ಷಿಸುವರಿಲ್ಲಾ ರಾಮ 1 ಹೆತ್ತ ತಾಯಿ ಮೊಲೆವಾಲನುಂಡುದಕೆ ಪಡಿಗೆಟ್ಟೆ ಸಪ್ತಶರನಿಧಿ ಸಾಲದೋ ರಾಮಸತ್ತು ಹುಟ್ಟಿದ ದೇಹದಸ್ಥಿಗುಪಮಿಸೆ ಮೇರುಮಸ್ತಕಕ್ಕತ್ಯಧಿಕವೋ ರಾಮಚಿತ್ರಗುಪ್ತರು ಕರ್ಮಗಳನು ಬರೆಬರೆದು ಬೇಸತ್ತು ಬೆಂಡಾದರಲ್ಲೋ ರಾಮಅತ್ಯಂತ ಕರುಣರಸವೆನ್ನ ಮೇಲೆ ನಿನಗಿರ್ದರೆ ಮುಕ್ತಿಯನು ಕೊಟ್ಟು ಸಲಹೋ ರಾಮ2 ತಂದೆ ತಾಯ್ಗಳು ನೀನೆ ಬಂಧುವರ್ಗವು ನೀನೆ ಮುಂದೆ ರಕ್ಷಿಪನು ನೀನೆ ರಾಮಮುಂದುಗಾಣದೆ ಬಹು ಮದಾಂಧತನದಲಿನಡೆದು ಮಂದಮತಿಯಾಗಿದ್ದೆನೋ ರಾಮಮುಂದಾದರೂ ತಂದೆ ತಾಯಿಯ ಜಠರದಿ ಬಾರದಂದವನು ಮಾಡಿ ಸಲಹೋ ರಾಮಚಂದ್ರಶೇಖರ ಕೆಳದಿ ರಾಮೇಶ್ವರನು ನೀನೆ ಎಂದು ನಾನಿಂದು ತಿಳಿದೆ ರಾಮ 3
--------------
ಕೆಳದಿ ವೆಂಕಣ್ಣ ಕವಿ
ರಾಮಾನುಜ ಮತೋದ್ಧಾರಕತಾಮಸಗುಣಪಾಶಗಿರಿವಜ್ರದಂಡ ಪ ವ್ಯಾಸರ ತೋಳೆಂದು ನಂದಿಯ ಧ್ವಜದಲ್ಲಿಹೇಸದೆ ಕಟ್ಟಿ ಪೂಜಿಪರು ನೋಡವ್ಯಾಸರದೊಂದು ತೋಳಿಗೆ ಶಿವಶರಣನಸಾಸಿರ ತೋಳ್ಗಳ ತರಿದ ನಮ್ಮಯ್ಯ 1 ಹರಿ ಎಂಬ ಶಬ್ದವ ಕೇಳಿ ಪಿಟ್ಟಕ್ಕನುಹರನ ಹೊಟ್ಟೆಯಲ್ಲಿ ಪುಟ್ಟುವೆನೆಂಬಳುಹರಹರ ಎಂಬ ಶೈವರ ಏಳ್ನೂರುಶಿರಗಳನರಿದನು ನಮ್ಮ ತಾತಯ್ಯ2 ಪಾದ ಮೇಲು ತಿಳಿದು ನೋಡಣ್ಣ 3 ಲಿಂಗವೆ ಘನವೆಂದು ಹೆಚ್ಚಿ ಕುಣಿದಾಡುವಸಂಗನ ಶರಣರೆಲ್ಲರು ಕೇಳಿರಿಲಿಂಗಪ್ರಸಾದವು ಮುಟ್ಟದಂತಾಯಿತು ನಮ್ಮರಂಗನ ಪ್ರಸಾದವು ಲೋಕಪಾವನವು 4 ಧರೆಯೊಳು ವಿರಕ್ತರು ವೀರ ಪವಾಡವಇರಿದು ಎಬ್ಬಿಸುವೆವೆಂದಾಡುವರುಹರಿಯ ನಾಮಾವಳಿಯ ಅನುಮಾನವಿಲ್ಲದೆಯೆಧರಿಸಿದಲ್ಲದೆ ದೊರೆಯದು ಗತಿಯಣ್ಣ 5 ಹರಬಂದು ಓಂಕಾರ ಗುರುವೆ ಎನ್ನುತ ಕೃಷ್ಣನರಮನೆಯ ಮುಂದೆ ಭಿಕ್ಷವ ಬೇಡಲುಹರಿಯುಂಡ ಮೇಲೆ ಪ್ರಸಾದವ ನೀಡಲುಹರ ಉಂಡು ಬ್ರಹ್ಮ ಹತ್ಯೆ ಕಳಕೊಂಡ 6 ಶಿವ ಮಹಾದೇವನು, ಧರೆಗೆ ಹರಿಯೆ ದೈವಭುವನಕ್ಕೆ ಹರಿಹರರೇಕಸ್ಥರುಭವರೋಗ ಹರ ಕಾಗಿನೆಲೆಯಾದಿಕೇಶವನವಿವರ ತಿಳಿದು ಭಜಿಸಿರೊ ಭಕ್ತ ಜನರು7
--------------
ಕನಕದಾಸ
ರುದ್ರದೇವರು ಭಜನೆ ಮಾಡೆಲೊ ಮನವೆ ಭಜನೆ ಮಾಡೆಲೊ ಪ ಭಜನೆಯನ್ನು ಮಾಡಿ ಸುಖಿಸೊಭುಜಗಭೂಷಣ ಶಿವನೆ ಅ.ಪ. ನಾನೆ ನಾನೆ ನಾನು ಎಂಬ ಶ್ವಾನಬುದ್ಧಿಯನ್ನು ಬಿಟ್ಟುನೀನೆ ನೀನೆ ಗತಿಯೆಂದು ಸಾನುರಾಗದಿಂದ ಮೃಡನ 1 ಕಾಕುಜನರ ವಾಸ ಬಿಟ್ಟು ಏಕಭಾವದಿಂದ ಕುಳಿತುಸಾಕು ಸಾಕೆನಿಸದಂತೆ ನಾಲ್ಕು ಮೊಗದವನ ಸುತನ 2 ತಂದೆವರದವಿಠಲನು ತಂದೆ ಜಗಕೆಲ್ಲವೆಂದುಛಂದಛಂದಾದಿ ಭಜಿಪ ಇಂದುಶೇಖರ ಭವನ 3
--------------
ಸಿರಿಗುರುತಂದೆವರದವಿಠಲರು
ಲಕ್ಷ್ಮೀ ಮನೋಜ್ಞ ವಿಠಲ | ಕಾಪಾಡೊ ಇವಳಾ ಪ ಪಕ್ಷೀಂದ್ರವಹ ಹರಿಯೆ | ಇಕ್ಷುಶರ ಪಿತನೇ ಅ.ಪ. ಸುಕೃತ | ದಿಂದ ಫಲ ತೊರೆತಿಹುದುಮಂದಾಕೀನಿ ಜನಕ | ಇಂದಿವಳ ಪೊರೆಯೆ 1 ಹರಿಯೆ ಪರತರನೆಂಬ | ಸುರರ ಮನೊ ಭಾವದಲಿಹರಿ ಗುರು ಹಿರಿಯರಲಿ | ವರಭಕ್ತಿಯುತಳೂತರತಮದ ಸುಜ್ಞಾನ | ವರಭೇದ ಪಂಚಕದಅರಿವಿತ್ತು ಪೊರೆ ಇವಳ | ಮರುತಾಂತರಾತ್ಮ 2 ಕಂಸಾರಿ ಪೂಜೆ ಎಬಂಶವನು ತಿಳಿಸುತ್ತ | ಕಾಪಾಡೊ ಹರಿಯೇಸಂಶಯವುರಹಿತ ತ | ತ್ವಾಂಶ ದರಿವಿತ್ತು ವಿಪಾಂಸಗನು ಹರಿಯಪದ | ಪಾಂಸುವನೆ ತೊಡಿಸೋ 3 ಅಕ್ಷಯ ಫಲದಾತಈಕ್ಷಿಸೋ ಇವಳ ಕರು | ಣೇಕ್ಷಣದಿ ಹರಿಯೇ 4 ಗೋವತ್ಸ ದನಿಕೇಳಿ | ಧಾವಿಸುವ ಪರಿಯಂತೆಶ್ರೀವರನೆ ನೀನಾಗಿ | ಓವಿ ಪೊರೆ ಎಂಬಾಆವ ಈ ಬಿನ್ನಪವ | ನೀವೊಲಿದು ಸಲಿಸುವುದುಗೋವಿದಾಂಪತಿ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀ ಮನೋಹರ ವಿಠಲ | ರಕ್ಷಿಸೋ ಹರಿಯೇ ಪ ಲಕ್ಷಿಸದಲೇ ಇವಳ | ಲಕ್ಷಾಪರಾಧಾ ಅ.ಪ. ತೈಜಸ ಮೂರ್ತಿದರುಶನವ ತಾನಿತ್ತು | ಹರುಷ ಪಡೆಸಿಹನೋಹರಿದಾಸ್ಯಕೇ ಮಾರ್ಗ | ವರಸೂಚಿ ಎಂಬಂತೆಪರಮ ಸಿದ್ಧತೆ ತೋರ್ದೆ | ವರಸತೀ ಮಣಿಗೇ 1 ಕಾರುಣಿಕ ನೆಂ | ದರಿತು ಬೇಡುವೆ ಹರಿಯೆಸರುವ ಕಾರ್ಯದಿ ನಿನ್ನ | ಸ್ಮರಣೆ ಸುಖವೀಯೋ 2 ಎರಡು ಮೂರ್ಭೇಧಗಳ | ಅರಿವನೀಕೆಗೆ ಇತ್ತುಎರಡು ನಾಲ್ಕರ ವರ್ಗ | ದೂರಗೈಸೋಮರುತಾಂತರಾತ್ಮ ನಿ | ನ್ಹೊರತು ಕಾಯುವರಾರೊಎರಡೇಳು ಭುವನಗಳ | ಅರಸಿಯೂ ಕಾಣೇ 3 ವಿಶ್ವ ಕರ್ಮ | ಸತ್ಶ್ರವಣ ಕೊಡುತಾ 4 ಭೂವಿ ಬುಧ ಹೆದ್ದೈವ | ಮಾವಿನೋದಿಯೆ ಹರಿಯೆನೀವೊಲಿಯ ದಿನ್ನಿಲ್ಲ | ಮಾವ ಕಂಸಾರೀದೇವ ದೇವೇಶ ಗುರು | ಗೋವಿಂದ ವಿಠ್ಠಲ್ಲಭಾವದೊಳು ಮೈದೋರಿ | ಕಾವುದೀಕೆಯನೂ 5
--------------
ಗುರುಗೋವಿಂದವಿಠಲರು
ಲಕ್ಷ್ಮೀಶ ಹರಿ ವಿಠಲ | ಸಲಹ ಬೇಕಿವಳಾ ಪ ಪಕ್ಷೀಂದ್ರವಹ ಹರಿಯೆ | ತ್ರ್ಯಕ್ಷಪಿತಸೇವ್ಯಾ ಅ.ಪ. ಕನ್ಯೆ ಬಹು ವಿನಯವತಿ | ಅನ್ಯಸಹವಾಸವನುಮನ್ನಿಸಳು ಎಂಬುವದೆ | ಸ್ವಪ್ನದಲಿ ಸೂಚ್ಯಪನ್ನಂಗ ಶಯನ ಹರಿ | ನನ್ನೆಯಂ ಕೈ ಪಿಡಿದುಮನ್ನಿಸೋ ತರಳೆಯನು | ಮಧ್ವಂತರಾತ್ಮ 1 ಉಚ್ಛ ನೀಚದ ಭಾವ | ಜಗವೆಲ್ಲ ತುಂಬಿಹದುಅಚ್ಯುತನೆ ಸರ್ವರೊಳು | ಉತ್ತಮನೆಂಬಾಸ್ವಚ್ಛ ಪಂಚಕ ಭೇದ | ನಿಚ್ಛ ಮನದಲಿ ಪೊಳೆದುಉಚ್ಛ ಪದವಿಗೆ ದಾರಿ | ನೀನಾಗಿ ತೋರೋ 2 ಹರಿಗುರು ಸದ್ಭಕ್ತಿ | ನಿರುತ ಹಿರಿಯರ ಸೇವೆಮರುತ ಮತ ತತ್ವದಲಿ | ಪರಮ ಅಭಿಲಾಷೇವರಸುನಾಮಮೃತವೆ | ಸರ್ವದಾ ಸವಿವಂತೆಕರುಣಿಸುತ | ಪೊರ ಗುರು | ಗೋವಿಂದ ವಿಠಲಾ3
--------------
ಗುರುಗೋವಿಂದವಿಠಲರು
ಲೋಕನೀತಿಯ ಹಾಡುಗಳು ಶ್ರೀನಾಥನ ನಾಮಾಮೃತ ರುಚಿಯೆಲ್ಲ ಪರಮ ಭಕುತಗಲ್ಲದೆ ಪ ಹೀನ ಮನುಜರು ಕೇಳಿ ಹಿರ್ರನೆ ಹಿಗ್ಗಿ ಆನಂದಪಡಬಲ್ಲರೆ ಅ.ಪ. ಕ್ಷೀರ ವಾರಿಯ ಕೂಟ ಮರಾಳ ತಿಳಿವಂತೆನೀರು ಕೋಳಿಯು ಬಲ್ಲುದೆಸಾರಮೇಯನ ಬಾಲ ನಳಿಗೆಯೊಳಿಟ್ಟರೆನೇರವಾಗಬಲ್ಲದೆದಾರು ಪ್ರತಿಮೆಗೆ ಸೀರೆಯನುಡಿಸಲುನಾರಿಯಾಗಬಲ್ಲುದೆಭಾರತಿಪತಿ ಪಾದವರಿಯದ ಮನುಜನುನಾರಾಯಣನ ಬಲ್ಲನೆ1 ಉದರಕ್ಕೆ ಗ್ರಾಸವ ನಡೆಸದ ಮನುಜನುಮದುವೆ ಮಾಡಲು ಬಲ್ಲನೆಸದನಕ್ಕೆ ಜನ ಬರೆ ಕದನವ ತೆಗೆವವಬುಧರು ಎಂಬುದ ಬಲ್ಲನೆವಿಧಿಯಂತೆ ಮಸೆದು ಮತ್ಸರಿಸುವವ ನಮಗೆಹದುಳ ಹಾರೈಸುವನೆಮದವೆಗ್ಗಳಿಸಿ ಮೆರೆವ ಮನುಜ ಹರಿಪದಗಳರ್ಚಿಸಬಲ್ಲನೆ 2 ಕನ್ನಡಿಯೊಳು ರೂಪು ಹೊಳೆದಂತೆ ಹಂಚಿನೊಳ್‍ಇನ್ನು ಕಾಣಿಸಬಲ್ಲುದೆಕಣ್ಣಿಲ್ಲದವನಿಗೆ ಚಿನ್ನವ ತೋರಲುಬಣ್ಣ ಹೇಳಲು ಬಲ್ಲನೆಹೆಣ್ಣಿನ ಮೇಲಿನ ವ್ಯಾಮೋಹ ಬಿಡದವಸಂನ್ಯಾಸಿಯಾಗುವನೆಅನ್ಯ ದೈವಂಗಳ ಭಜಿಸುವ ನರಗೆ ಮೋ-ಹನ್ನ ವಿಠ್ಠಲ ಒಲಿವನೇ 3
--------------
ಮೋಹನದಾಸರು
ವನಜನಯನನ ಮನವ ಮಧುಪ ನಂಬುವರೆಮನದೆಗೆದ ಮದನಪಿತ ವಿಠಲರೇಯಾ ಪ ಅರಿಯದ ಬಾಲೇರಿಗೆ ತನ್ನ ಪರಿಯನರುಹಿಸಿ ಮುನ್ನನೆರೆದು ರತಿಪತಿಯ ಸುಖ ನೆರೆದೋರಿದತೊರೆದು ಬದುಕುವೆವೆಂತೋ ರತಿಪತಿಯ ಪಿತನಗಲಿವಿರಹದುರಿ ತಾನಳವಡರಿ ಸುಡುತಿಹುದು 1 ನಡೆ ನಗೆಯ ತುದಿನೋಟ ಬಲೆಯನೆಮ್ಮೊಳು ಬೀಸಿಬಿಡದೆ ಯೆಮ್ಮನು ತನ್ನ ವಶಮಾಡಿದಪಡಿಯಿಲ್ಲದನುಭವದ ಸುಖದ ಸವಿಯನೆ ತೋರಿಮಡದಿ ತಡೆದಳೊ ಮಧುರೆಯಲಿ ನಲ್ಲನ2 ಎಂದೆಂದು ನಿಮ್ಮ ವಶದಲ್ಲಿಹೆನೆಂದಭಯವಿತ್ತುಇಂದುಮುಖಿ ನಾರಿಯರ ನೆರೆ ನಂಬಿಸಿನಂದನಂದನ ನಮ್ಮ ಕಾನನದೊಳೀಡ್ಯಾಡಿಇಂದು ಮಧುರೆಯ ನಾರಿಯರ ನೆಚ್ಚಿದ 3 ಕಪಟ ತಿಳಿಯಲರಿಯದೆ ನಾವುನವ ಹರಿಣಿಯಂತೆ ಮರುಳಾಗಿ ಕೇಳಿವಿವರವರಿಯದೆ ನಾವು ಕಡು ನೊಂದೆವೆಲೊ ಮಧುಪಇವನ ಗುಣವರಿಯದೆ ಕಡುಕರುಣಿ ಎಂಬುವರು 4 ಭವ ಬಂಧನಗಳೆಲ್ಲ ಈಡ್ಯಾಡಿಗತಿ ನಮಗೆ ಅವನೆಂದು ಮನಸೋತೆವೋಕೃತಕವರಿಯದೆ ನಮ್ಮ ವನದೊಳು ನಿಲ್ಲಿಸಿ ಪೋದಪತಿಯೊಡನೆ ಸಂಧಾನವೆಂತೊ ಎಲೊ ಮಧುಪ 5 ಮರುಳುಗಳು ನಾವು ಶ್ರೀಪತಿಯ ಕೂಟವ ಬಯಸಿಇರುಳು ಹಗಲು ಜರಿಜರಿದಳಲುವೆವುಸಿರಿಯವನ ಉಂಗುಟದ ಉಗುರು ಗುಣ ಕಾಣಳೆಲೋಹರಿ ನಮ್ಮ ನೆನೆವುದಚ್ಚರಿಯಲ್ಲವೆ6 ಭೃಂಗ ಮಧುರೆಗೆ ಪೋಗಿರಂಗವಿಠಲನ ತಂದೆಮ್ಮನುಳುಹುವುದೋ 7
--------------
ಶ್ರೀಪಾದರಾಜರು
ವಾದಿರಾಜಗುರು ನಿಮ್ಮಡಿಗೆರಗುವೆ ಸಾದರದಿಂದಲಿ ಮಂದನ ಕೈಪಿಡಿಯೋ ಪ ಸಾಧುಜನಾಶ್ರಯ ಮೇದಿನೀಸುರತರು ಪಾದವಪಿಡಿದಿಹೆ ಬೋಧಿಸು ವಿಜ್ಞಾನ ಅ.ಪ. ಕಾದಿಡೆ ಸುಜನಕೆ ಮಧ್ವಾಗಮನಿಧಿ ಸಾದರದುದಿಸಿದಿ ಬುಧಜನಕುಲಮೌಳಿ ಬೂದಿಯ ಮಾಡುತ ದುರ್ಮತಜಾಲವ ಮಾಧವ ಮಧ್ವರ ಸೇವೆಯ ಸಲ್ಲಿಸಿದೇ 1 ಕವಿತಾವನಿತೆಯ ಕುಣಿಸುತ ಶಾಸ್ತ್ರವ ನವವಿಧ ರಸದಿಂ ಪೇಳಿದೆ ಶಿಷ್ಯರಿಗೆ ಭುವಿಯಲಿ ಮೆರೆದೆಯೋ ಮಧ್ವಾನುಜ ತೆರ ಪವನ ಮತಾಬ್ಧಿಯ ಸೋಮನೆ ಶರಣೆಂಬೆ2 ರಿಕ್ತಬ್ರಹ್ಮನ ಭಕ್ತರ ನೊಲ್ಲನು ಯುಕ್ತಿಗಳೆಂಬುವ ಮಲ್ಲಿಗೆ ಪಟ್ಟಲಿ ಶಕ್ತಯತೀಂದ್ರನೆ ಅಡಗಿಸಿ ಸರ್ವೋ- ದ್ರಿಕ್ತನ ಗುಣಗಣ ಸಾಧಿಸಿ ನೀ ಮರೆದೇ3 ತೀರ್ಥಕ್ಷೇತ್ರವ ಪಾವನಗೈಯ್ಯಲು ಸುತ್ತುತನೀಡಿದೆ ತೀರ್ಥಪ್ರಬಂಧವನೂ ಪಾರ್ಥಿವ ಮೊರೆಯಿಡೆ ಅಕ್ಷತೆನೀಡುತ ಶತ್ರುಗಳಳಿಸುತ ಪೊರೆದೆಯೊ ಕರುಣಾಳು4 ಅರವತ್ನಾಲ್ಕು ಕಲಾಜ್ಞನೆ ಗುಣನಿಧಿ ಸುರಗಣಗಚ್ಚಿರಿಯೇ ಸರಿ ತವ ಮಹಿಮ ಹರಿಸಿದೆ ಮೃತ್ಯುವ ರಾಜನ ಅಳಿಯಗೆ ಸಿರಿಪತಿ ವ್ಯಾಸರ ಕಂಡೆಯೊ ಪ್ರತ್ಯಕ್ಷ5 ಗುಂಡಕ್ರಿಯೆ ವೈಕುಂಠ ವರ್ಣನೆ ಕಂಡಕಂಡಪದ ಪುಂಜವ ಪಾಡುತಲೀ ಕೂಡದು ಭಾಷಾ ಸಡಗರ ವೆಂಬುದ ಪಂಡಿತನಿಕರಕೆ ತೋರಿದೆ ಯತಿತಿಲಕಾ6 ಜಂಗಮಗರುವನ ಭಂಗಿಸೆ ತವಕದಿ ಇಂಗಿಸಿ ಸಲಹಿದೆ ವಿಪ್ರರ ಕಷ್ಟಗಳ ಗಂಗಾಪಿತ ತ್ರಿವಿಕ್ರಮ ದೇವನ ಮಂಗಳ ಸುರಿಸಲು ಸ್ವಾದಿಲಿ ಸ್ಥಾಪಿಸಿದೆ7 ಗೋಧರ ಹಯಮುಖ ಸಾಕ್ಷಾತ್ತಿ ಎಂಬುವ ಛಂದದಿ ನೀಡಿದ ಓದನವೆಂತೆನೆ ಸಾಧ್ಯವೆ ಶೇಷನು ಪೊಗಳಲು ನಿಮ್ಮನು ಮಂದಿರನವನಿವ ನೆನ್ನುತ ಕೈ ಪಿಡಿಯೋ8 ಇಂದ್ರನ ದೂತರ ತಡೆಯುತ ದಿನತ್ರಯ ಚಂದದಿ ಕುಳಿತೆಯಾ ಬೃಂದಾವನದೊಳಗೆ ಇಂದಿಗು ನೋಳ್ಪರು ಬುಧಜನ ನಿಮ್ಮನು ವೃಂದಾರಕಗಣ ವಂದಿತ ಚರಣಯುಗ9 ಸುಂದರ ಹಯಮುಖ ರಾಮನು ಕೃಷ್ಣನು ವೇದವ್ಯಾಸರು ಹನುಮಾದಿ ತ್ರಯರು ಮಧ್ಯದಿ ಕುಳಿತಿಹ ನಿನ್ನ ಸುನಾಲ್ಕೆಡೆ ನಿಂದಿಹರೆಂಬುದು ಸಿದ್ಧವು ಮಹಮಹಿಮಾ 10 ಬೃಂದಾವನ ಪಂಚದಿ ಹರಿ ತಾನಿಹ ಚಂದದಿ ಸೇವೆಯ ಕೊಳ್ಳುತ ನಿನ್ನಿಂದ ಸುಂದರ ದಶಗಳ ಪಂಚನುರೂಪವ ವಂದಿಸಿ ನೋಡುತ ನೆನೆಯುವೆ ಏನೆಂಬೆ11 ಗಂಗಾಪಿತ ತ್ರಿವಿಕ್ರಮದೇವನ ಹಿಂಗದೆ ನೆನೆಯುವೆ ಲಕ್ಷಾಭರಣವನು ರಂಗಗೆ ನೀಡಿದೆ ನಮ್ಮಯ ಭವವನು ಇಂಗಿಸೆ ಕಷ್ಟವೇ ಗುರುವರ ದಯಮಾಡೋ12 ಜಯಮುನಿ ಹೃದಯದಿ ವಾಯುವಿನಂತರ ಜಯದಿಂ ನಲಿಯುವ ಶ್ರೀಕೃಷ್ಣವಿಠಲನ ದಯದಿಂ ತೊರಿಸು ಭಾವೀಜಯಾಸುತ ಹಯಮುಖ ಕಿಂಕರ ನಮಿಸುವೆ ಭೂಯಿಷ್ಠಾ13
--------------
ಕೃಷ್ಣವಿಠಲದಾಸರು
ವಾಯುದೇವರ ಸ್ತೋತ್ರ ಲಾಲಿ ಲಾಲಿ ತ್ರಿಭುವನ ಪಾವನ ಲಾಲಿ ಪ ಅಂಜನದೇವಿಯ ಕಂದಗೆ ಲಾಲಿಕಂಜಾಕ್ಷಿಗೆ ಮುದ್ರಿಕೆಯಿತ್ತಗೆ ಲಾಲಿ ||ಅಂಜದೆ ಅಸುರರ ಕೊಂದಗೆ ಲಾಲಿಸಂಜೀವನ ಗಿರಿ ತಂದಗೆ ಲಾಲಿ 1 ಕುಂತಿಯುದರದಿ ಬಂದಗೆ ಲಾಲಿದಂತಿಯ ಗಗನಕ್ಕೆ ಒಗದಗೆ ಲಾಲಿ ||ಭ್ರಾಂತನ ಉದರವ ಬಗೆದಗೆ ಲಾಲಿಚಿಂತಾಮಣಿ ಭೀಮರಾಯಗೆ ಲಾಲಿ 2 ಸೋಹಂ ಎಂಬರ ತರಿದಾಗೆ ಲಾಲಿ ದಾ-ಸೋಹಂ ಎಂಬರ ಪೊರೆದಗೆ ಲಾಲಿ ||ಮೋಹನ್ನ ವಿಠ್ಠಲನ್ನ ಭಜಿಪಗೆ ಲಾಲಿಸ್ನೇಹದಿ ಭಕತರ ಪೊರೆವಗೆ ಲಾಲಿ 3
--------------
ಮೋಹನದಾಸರು
ವಾಯುದೇವರು ಇದು ಏನು ಕೌತುಕವೊ ಹನುಮರಾಯ ಪದುಮನಾಭನ ದಯಾಪಾತ್ರ ಶುಭಕಾಯ ಪ. ಅಂಜನೆಯ ಸುತನಾಗಿ ಅಂದು ಶ್ರೀ ರಾಮರಡಿ ಕಂಜಗಳ ಸೇವಿಸುತ ಮುದ್ರಿಕೆಯನು ಕಂಜಾಕ್ಷಿಗಿತ್ತು ಕ್ಷೇಮವನರುಹಿ ಬಂದಾಗ ಸಂಜೀವ ನಿನಗಿಷ್ಟು ತೊಡಿಗೆ ಕೊಟ್ಟಳೆ ದೇವಿ 1 ಮರುವಾರ್ತೆ ತಂದು ರಾಮಗರುಹಿ ಸೇತುವೆಯ ಗಿರಿಯಿಂದ ಕಟ್ಟಿ ಕಾರ್ಯವ ಸಾಧಿಸೆ ಸಿರಿಸಹಿತ ಶ್ರೀ ರಾಮ ರಾಜ್ಯಕೆ ಬಂದಾಗ ಮರುತ ನಿನಗಿಷ್ಟು ಆಭರಣ ಕೊಟ್ಟನೆ ಪೇಳು 2 ಎಲ್ಲೆಲ್ಲಿ ನಿನ್ನ ಕೀರ್ತಿಯ ಕೇಳೆ ಕೌಪೀನ ವಲ್ಲದಲೆ ಮತ್ತೊಂದರ್ಹಂಬಲಿಲ್ಲ ಮಲ್ಲ ವೈರಾಗ್ಯದಲಿ ಎಂಬುದನು ಕೇಳಿದೆನು ಇಲ್ಲಿ ನೋಡಲು ಇಷ್ಟು ವೈಭವವ ಪಡುತಿರುವೆ 3 ರಾತ್ರೆಯಲಿ ಕೀಚಕನ ಕೊಲ್ಲಲೋಸುಗ ಅಂದು ಮಿತ್ರೆ ರೂಪವ ಧರಿಸಿ ಶೃಂಗರಿಸಿಕೊಂಡು ಕತ್ತಲೊಳು ನೋಡಿಕೊಳ್ಳಲು ಆಗಲಿಲ್ಲೆಂದು ಹಸ್ತ ಕಡಗ ಹರಡಿ ಇಟ್ಟು ಮೆರೆಯುವೆಯೊ 4 ಹುಟ್ಟುತಲೆ ಸಂನ್ಯಾಸ ತೊಟ್ಟು ಬ್ಯಾಸತ್ತೊ ನಡು ಪಟ್ಟಿ ಉಡುದಾರ ಉಡುಗೆಜ್ಜೆ ಕಾಲ್ಗಡಗ ಇಟ್ಟು ನಾನಾ ಬಗೆ ಕದರುಂಡಲಿಯಲಿ ನೆಲಸಿ ಶ್ರೇಷ್ಠ ಗೋಪಾಲಕೃಷ್ಣವಿಠ್ಠಲನ ಪ್ರಿಯನಾದಿ 5
--------------
ಅಂಬಾಬಾಯಿ
ವಾಯುವಂದಿತ ವಿಠಲ | ಪೊರೆಯ ಬೇಕಿವನಾ ಪ ಪಾದ | ಭಜಕನಾದವನಾಅ.ಪ. ಗುರುಹಿರಿಯರಾ ಸೇವೆ | ನಿರುತ ಗೈಯುವ ಮನವಕರುಣಿಸುವುದಿವ ನೀಗೆ | ಮರುತಾಂತರಾತ್ಮಗರುಡ ಗಮನನೆ ದೇವ | ಗರ್ವಗಳ ಪರಿಹರಿಸಿಸರ್ವಾಂತರಾತ್ಮಕನೆ | ಕಾಪಾಡೊ ಇವನಾ 1 ಹರಿಯೆ ಪರನೆಂಬಂಥ | ವರಸುಜ್ಞಾನವ ಕೊಟ್ಟುತರತಮಂಗಳು ಅಂತೆ | ಎರಡು ಮೂರುರ್ಭೇದಾಪರಮ ಸತ್ಯವು ಎಂಬ | ವರಜ್ಞಾನ ಪಾಲಿಸುತಪರಿಪರಿಯ ಭವಭಂದ | ಪರಿಹರಿಸೊ ಹರಿಯೇ 2 ಕಾಕು ಸಂಗಮಕೆಡಿಸೊಪ್ರಾಕ್ಕುಕರ್ಮವ ಕಳೆಯೊ | ಶ್ರೀ ಕರಾರ್ಚಿತನೆ 3 ದುರಿತವನ ಕುಠಾರ | ಶರಣಜನ ವತ್ಸಲನೆದುರಿತಾಳಿ ದೂರೈಸಿ | ಪೊರೆಯೊ ಹರಿಯೇಕರುಣ ನಿಧಿ ನೀನೆಂದು | ಮರೆಹೊಕ್ಕೆ ತವಪಾದಚರಣ ದಾಸನ ಪೊರೆಯೊ | ಹರಿಯೆ ಪರಮಾಪ್ತ 4 ಶ್ರೀವರನೆ ಸರ್ವೇಶ | ಭಾವದಲಿ ಮೈದೋರಿಭಾವುಕನ ಪೊರೆ ಎಂದು | ದೇವ ಪ್ರಾರ್ಥಿಸುವೇಈ ವಿಧದ ಬಿನ್ನಪವ | ನೀವೊಲಿದು ಸಲಿಸುವುದುದೇವ ದೇವೇಶ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಾಸುದೇವ ಕೃಷ್ಣ ವಿಠಲನೇ | ಪಾಲಿಸಿವಳಾದೇಶಕಾಲ ಗುಣ ಅತೀತನೇ ಪ ಬಾಸುರಾಂಗ ನಿನ್ನಪಾದ | ಸೂಸಿ ಭಜಿಪ ಮತಿಯು ಇಹುದುಲೇಸು ನಿನ್ನ ಅಂಕಿತೋಪ | ದೇಶದಿಂದ ಸಲಹೊ ಇವಳ ಅ.ಪ. ಅಂಚೆಗಮನ ಪದಕೆ ಯೋಗ್ಯರಾ | ದೃಶ್ಯತೋರ್ದೆಸಂಚಿತಾದಿ ಕಳೆವ ಮಾರ್ಗದಾ |ಪಂಚಬೇಧ ತಾರತಮ್ಯ | ಮುಂಚೆ ತಿಳಿವ ಮತಿಯನಿತ್ತುಮಿಂಚಿನಂತೆ ಮನದಿಕಾಂಬ | ಪಂಚರೂಪಿ ನೀನೆ ವಲಿಯೊ 1 ಪತಿಯು ಸುತರು ಮಿತ್ರರ್ಗೆ ಸೂಸುವಾ | ಶ್ರೀಶ ಶ್ರೀಪತಿಯ ಸೇವೆ ಎಂದು ಕರೆಸುವಾ | ಮತಿಯನಿತ್ತು ಪೊರೆಯೊ ಹರಿಯೆ | ಗತಿಯು ಇದಕೆ ಅನ್ಯಕಾಣೆ ಪತಿಯ ಪರಮದೈವವೆಂಬ | ಪಥವ ತೋರಿ ಪೊರೆಯೊ ಇವಳಾ 2 ಮುಕ್ತಿಯೋಗ್ಯ ದಾರಿ ಎನಿಸುವಾ | ಮಧ್ವ ಶಾಸ್ತ್ರವೃತ್ತಿಯಲ್ಲಿ ಭಕ್ತಿ ಪೂರ್ಣವಾ |ಇತ್ತು ಜ್ಞಾನ ವೃದ್ಧಿಯ ಪ್ರ | ವೃತ್ತಿ ಮನ ವಿರಕ್ತಿಯಲ್ಲಿಶಕ್ತಿ ಕೊಡುವುದೆಂದು ತುತಿಪೆ | ಪ್ರಾರ್ಥನೆಯ ಸಲ್ಲಿಸಯ್ಯ 3 ಅಂಬುಜಾಕ್ಷ ಭವಸಮುದ್ರವಾ | ದಾಟಿಸೂವಅಂಬಿಗಾನೆ ನಿನ್ನ ನಾಮವಾ |ನಂಬಿಹೇನೊ ದೃಢದಿ ಮನದಿ | ಇಂಬಿನಿಂದ ನಾಮ ಮಂತ್ರಉಂಬ ಸುಖವ ನಿವಳಿಗಿತ್ತು | ಸಂಭ್ರಮವ ತೋರಿ ಸಲಹೋ 4 ಗೋವ್ಗಳೇಶ್ಯುಪೇಂದ್ರ ಹಯಮುಖ | ಶರ್ವ ಗುರು -ಗೋವಿಂದ ವಿಠಲ ಸರ್ವ ಪ್ರೇರಕಾ |ಭಾವದಿಂದ ಭಜಿಪ ನಿನ್ನ ಸೇವಕಾಳ ಸಲಹೊ ಎಂಬದೇವದೇವ ಭಿನ್ನಪಾವ | ಓವಿ ಸಲಿಸು ಎಂದು ಬೇಡ್ವೆ 5
--------------
ಗುರುಗೋವಿಂದವಿಠಲರು
ವಿಠ್ಠಲನ ಪದವನಜ ತುಂಬೆ ಸೃಷ್ಟಿಯೊಳಗೆ ಎನ್ನ ಬಿಡದೆ ಪೊರೆ ಎಂಬೆ ಪ ಜ್ಞಾನ ಭಕುತಿ ವೈರಾಗ್ಯದಲಿ ಜಾಣ ದಾನ ಮಾಡುವರೊಳಗೆ ಪೂತುರೆ ನೀನೆ ನಿಪುಣ ಮಾನಸದಲಿ ಹರಿಯ ಧ್ಯಾನ ಮಾಡುವ ಆನಂದಮತಿ ವಿಮಲ ಸರ್ವವಿಧಾನ 1 ಮಾತುಮಾತಿಗೆ ನೆನೆಸಿದವರ ಭವದ ಮಾಯಾ ಸೇತುವಿಯ ಕಡಿದು ಸಂತತವಾಗಿ ಸಹಾಯಾ ಪ್ರೀತಿಯಲಿ ಬಂದು ಶ್ರೀ ಹರಿಯ ಪದ ಸೇವಿಯಾ ತಾ ತೋರಿ ತಿಳಿಸುವಾ ಪ್ರಿಯನೆನಿಸುವಾ ಪುರಂದರ ರಾಯಾ 2 ವಜ್ರ ಪಂಜರಾ ಕೂವಾದಿ ಮತಹರ ನಂಬಿದವರಾಧಾರ ಪಾವಮಾನಿಯ ಮತದಲಿಪ್ಪ ಮನೋಹರ ಶ್ರೀ ವಿಜಯನಗರ ಮಂದಿರದೊಳಗುಳ್ಳ ಶ್ರೀ ವಿಜಯವಿಠಲನ್ನ ಪೂಜಿಸುವ ಧೀರ 3
--------------
ವಿಜಯದಾಸ
ವಿಶೇಷ ಸಂದರ್ಭದ ಹಾಡುಗಳು ರಂಗನತೇರಿಗೆ ಬನ್ನಿರೋ ತೆಂಗು ಹೂ ಹಣ್ಣುಗಳ ತನ್ನಿರೋ ಬಂಗಾರದ ಗಿರಿಯಪ್ಪ ಎನ್ನಿರೋ ರಂಗ ಪರ್ಸಾದವ ಕೊಳ್ಳಿರೊ 1 ತೆಂಗಿನಮರ್ದುದ್ದ ತೇರೈತೆ ಅಲ್ಲಿ ರಂಗಿನ ಬಾವುಟ ಹಾರೈತೇ ಸಿಂಗಾರದಬಟ್ಟೆಯೇರೈತೇ ಹಂಗೂ ಹಿಂಗೂ ಜನ ಸೇರೈತೇ 2 ಬಾಳೆಕಂಬಗಳನು ಕಟ್ಟವ್ರೇ ತೋಳುದ್ದ ಹೂಸರ ಬಿಟ್ಟವ್ರೇ ತಾಳಮ್ಯಾಳ್ದೋರೆಲ್ಲಾ ನಿಂತವ್ರೇ ಬಾಳತುತ್ತೂರ್ಗೋಳನೂತ್ತವ್ರೇ 3 ತೇರಿನ ಗದ್ದುಗೆ ಬಂಗಾರ ತೋರಗಲ್ದಪ್ಪ ಅಲಂಕಾರ ಹಾರುವರ ಬಾಯಲ್ಲಿ ಓಂಕಾರ ರಂಗಪ್ಪಗಾಗೈತೆ ಸಿಂಗಾರ 4 ಭಟ್ಟರು ಮಂತ್ರವ ಹೇಳ್ತವ್ರೆ ಕಟ್ಟುನಿಟ್ಟಾಗಿ ನಿಂತವ್ರೇ ಬಟ್ಟಂದ ಹೂಗೊಳ ಹಾಕ್ತವ್ರೇ ಸಿಟ್ಟಿಲ್ಲದೆ ರಂಗ ನಗತವ್ನೇ 5 ಇಂಬಾಗಿ ಹೂರ್ಜಿಯ ಹಿಡಿದವ್ರೆ ದೊಂಬರೆಲ್ಲ ಕುಣಿತವ್ರೆ ಹಿಂಬದಿಯಲಿ ತೇರ ನಡೆಸವ್ರೇ 6 ಹಣ್ಣು ಜನ್ನವ ತೇರಿಗೆಸಿತಾರೆ ತಣ್ಣನೆ ಪಾನಕ ಕೊಡುತಾರೆ ಸಣ್ಣೋರೆಲ್ಲ ಕೈಮುಗಿತಾರೆ, ಹಣ್ಣು ಕಾಯ್ಗಳ ಗಾಲಿಗಿಡುತಾರೆ7 ತಕ್ಕೋ ಹಣ್ಕಾಯ ಎಂಬೋರು ಕೆಲವರು ನಕ್ಕು ಕುಣಿಯುವರೆಲ್ಲ ನೂರಾರು ಜನರು 8 ರಂಗಪ್ಪನ ತೆಪ್ಪ ತೇಲುತಿವೆ ಸಂಗೀತ ವಾದ್ಯ ಕೇಳುತಿವೆ ರಂಗುವiತಾಪು ಹೊಳೆಯುತಿವೆ ಮಂಗಳಾರತಿ ದೀಪ ಕಾಣುತಿವೆ 9 ಜೋಮಾಲೆ ಸರಗಳು ಹೊಳೆಯುತಿವೆ ನಾಮ ಮಂತ್ರಗಳೆಲ್ಲ ಮೊಳಗುತಿವೆ 10 ರಂಗಿನದೀಪ ಉರಿಯುವುದಣ್ಣ ಮಾಂಗಿರಿರಂಗನೆ ಬಲುಸೊಗಸಣ್ಣ 11
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್