ಒಟ್ಟು 1110 ಕಡೆಗಳಲ್ಲಿ , 105 ದಾಸರು , 916 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಿಪಾಹಿ ಪದ್ಮಸಂಭವ | ದೇವ ದೇವ ಪ ಕರುಣಾಂಬುನಿಧೆ ತವ ಚರಣವನ್ನು ನಂಬಿದವರ ಅ.ಪ ಸೃಷ್ಟಿಸ್ಥಿತಿಲಯವ ನಿನ್ನಿಷ್ಟದಂತೆ ಮಾಡಿ ಪರ- ಮೇಷ್ಟಿ ಪದದಲಿ ಬಹು ಶ್ರೇಷ್ಠನಾಗಿ ಶೋಭಿಸುವ 1 ಮೂರುಲೋಕಗಳಿಗೆ ಆಧಾರ ನೀನೆ ಎಂದು ನಿನ್ನ ಸಾರ ಸುಖವ ಕೊಡುವ ದೇವ 2 ಗುರುರಾಮವಿಠಲನ ಬಸುರೊಳು ಬಂದವನೆ3
--------------
ಗುರುರಾಮವಿಠಲ
ಪವಮಾನ ಜಗದ ಪ್ರಾಣ ಸಂಕರುಷಣ ಭವನೇ ಭಯಾರಣ್ಯದಹನ ಪ ಶ್ರವಣವೆ ಮೊದಲಾದ ನವವಿಧ ಭಕುತಿಯ ತವಕದಿಂದಲಿ ಕೊಡು ಕವಿಗಳ ಪ್ರೀಯ ಅ.ಪ. ಹೇಮ ಕಚ್ಚುಟ ಉಪವೀತ-ಧರಿಪ ಮಾರುತ ಕಾಮಾದಿ ವರ್ಗರಹಿತ ವ್ಯೋಮಾದಿ ಸರ್ವವ್ಯಾಪುತ-ಸತತ ನಿರ್ಭೀತ ರಾಮಚಂದ್ರನ ನಿಜದೂತ ಯಾಮ ಯಾಮಕೆ ನಿನ್ನರಾಧಿಪುದಕೆ ಕಾಮಿಪೆ ಎನಗಿದ ನೇಮಿಸಿ ಪ್ರತಿದಿನ ಪಾಮರ ಮತಿಯನು ನೀ ಮಾಣಿಪುದು 1 ವಜ್ರ ಶರೀರ ಗಂಭೀರ-ಮಕುಟಧರ ದುರ್ಜನವನ ಕುಠಾರ ನಿರ್ಜರಮಣಿ ದಯಾ ಪಾರಾ-ವಾರ ಉದಾರ ಸಜ್ಜನರಘ ಪರಿಹಾರ ಅರ್ಜುನಗೊಲಿದಂದು ಧ್ವಜವಾನಿಸಿ ನಿಂದು ಮೂರ್ಜಗವರಿವಂತೆ ಗರ್ಜನೆಮಾಡಿದೆ ಹೆಜ್ಜೆ ಹೆಜ್ಜೆಗೆ ನಿನ್ನ ಅಬ್ಜಪಾದದ ಧೂಳಿ- ಮೂರ್ಜನದಲಿ ಭವವರ್ಜಿತನೆನಿಸೊ 2 ಪ್ರಾಣ ಅಪಾನ ಉದಾನ-ವ್ಯಾನ ಸಮಾನ ಆನಂದ ಭಾರತೀರಮಣ ನೀನೆ ಯಾಮ ಯಾಮಕೆ ಜ್ಞಾನ ಧನಪಾಲಿಪ ವರೇಣ್ಯ ನಾನು ನಿರುತದಲಿ ಏನೇನನೆಸಗಿದೆ ಕರ್ಮ ನಿನಗೊಪ್ಪಿಸಿದೆನೊ ಪ್ರಾಣನಾಥ ಸತ್ಯ ವಿಜಯವಿಠ್ಠಲನಕಾಣಿಸಿ ಕೊಡುವುದು ಭಾನು ಪ್ರಕಾಶ 3
--------------
ವಿಜಯದಾಸ
ಪಾದ | ಸೋಕಿದ ಕೊನೆಧೂಳಿ ಪ ತಾಕಿದ ಮನುಜರಿಗೆ ಕಾಕುಬುದ್ಧಿಗಳೆಲ್ಲ ಪರಿಹಾರವಾಗುವವೊ | ಬೇಕಾದ ಪದವಿಯ ಕೊಡುವನು ಶ್ರೀ ಹರಿ ಅ.ಪ ಮಧ್ವಮತವೆಂಬ ಅಬ್ಧಿಯೊಳಗೆ ಪೂರ್ಣ | ಉದ್ಭವಿಸಿದ ಚಂದ್ರನಾ ಗುಣಪೂರ್ಣನಾ || ಅದ್ವೈತಮತÀ ತಮನಿಧಿ ನಿಶಿಕುಠಾರ | ವಿದ್ಯಾರಣ್ಯವ ಗರುವಕೆ ಪರಿಹಾರ 1 ತತ್ವ ವಾರಿಧಿಗಳ ತತ್ವಸುಧೆಯ ಭಾಷ್ಯ | ವಿಸ್ತರಿಸಿ ಇರಲು ಬೇಗದಲಿ || ಚಿತ್ರವಲ್ಲಭನÀ ಸೇವೆಯ ಮಾಡಿ ಟೀಕಂಗಳ || ಸುತ್ತೇಳು ಲೋಕಕ್ಕೆ ಪ್ರಕಟಿಸಿ ಮೆರೆವರ 2 ಎಂದಿಗಾದರು ಒಮ್ಮೆ ಕೊನೆ ನಾಲಿಗೆಯಿಂದ | ಬಿಂದು ಮಾತ್ರದಿ ನೆನೆಯೆ || ಮಂದ ಮತಿಯಾದರೂ ಅಜ್ಞಾನನಾಶವು | ಸುಂದೇಹÀವಿಲ್ಲವು ಅವಾವ ಕಾಲಕ್ಕೆ 3 ಜ ಎಂದು ಪೊಗಳಲು ಜಯಶೀಲನಾಗುವ | ಯ ಎನ್ನೆ ಯುಮರಾಯನಂಜುವನು || ತೀ ಎಂದು ಪೊಗಳಲು ತೀವ್ರ ಪದವಿ ಉಂಟು | ರ್ಥ ಎಂದು ಪೊಗಳಲು ತಾಪತ್ರಯುಪಶಮನ 4 ಯೋಗಿ ಅಕ್ಷೋಭ್ಯತೀರ್ಥರ ಕರಕಮಲಸಂಜಾತ | ಭಾಗವತರ ಸುಪ್ರೇಮ || ಕಾಗಿಣಿ ತೀರದ ಮಳಖೇಡ ನಿವಾಸಾ | ಶ್ರೀ ಗುರು ವಿಜಯವಿಠ್ಠಲ ಸೇವಕ ಭಕ್ತಾ 5
--------------
ವಿಜಯದಾಸ
ಪಾದ ಕೂಡಿ ಸಾಧು ಸಂಗ ಮಾಡಿ ಭೇದಾಭೇದೀಡ್ಯಾಡಿ ಧ್ರುವ ಮರಹು ಮರಿಯ ನೀಗಿ ಅರವ್ಹಿನೊಳಗಾಗಿ ಕುರುಹ್ಹದೋರಿಕೊಡುವ ಗುರು ಬ್ರಹ್ಮಾನಂದಯೋಗಿ 1 ತಿರುಗಿನೋಡಿ ನಿಮ್ಮ ಅರಿತು ನಿಜವರ್ಮ ಪಾರಗೆಲಿಸುವದಿದು ಗುರುಪಾದ ಧರ್ಮ 2 ಕಣ್ದೆರೆದು ನೋಡಿ ತನ್ನೊಳು ಬೆರೆದಾಡಿ ಧನ್ಯವಾದ ಮಹಿಪತಿ ಗುರುಪಾದ ಕೂಡಿ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪಾದ ನಿಜವಾಗಿ ಕಂಡೆನು ಪ್ರೇಮದಿಂದಲಿಯೆನ್ನ ಸೇರಿ ಕೊಂಡಾಡೋ ಪ ನಿತ್ಯ ನಲಿಯುತ್ತಲಿರುವದು ಕಾಲಕಾಲಕೆ ಮತ್ತೆ ಸೇವೆಗೊಳುವದು ಬಾಲರು ಪಿಡಿದರೆ ಇಷ್ಟವ ಕೊಡುವದು ಓಲೈಸಿ ಭಕ್ತಗೆ ವರವನೀಯುವÀದು 1 ಪಾದ ಮಧ್ಯದಿ ಪದ್ಮ ರೇಖೆಯ ಕಂಡೆನು ಸಾಧು ಸಜ್ಜನರು ಪೂಜೆಯ ಮಾಡುವುದನು ಖೇದವ ನೀಗುವ ಬೆರಳನು ಕಂಡೆನು ಆದ್ಯಂತವಿಲ್ಲದೆ ನಿರುತವಾದುದನು2 ಮನದಣಿ ನೋಡಿದೆ ಪಾದಯುಗ್ಮಗಳನ್ನು ಮನಲೇಪ ಮಾಡಿದೆ ಹರಿಪಾದಗಳಿಗೇ ಅನುದಿನ ದೂರ್ವಾಪುರದಿ ನೆಲೆಸಿರುವಂಥ ಘನಕೋಟಿ ತೇಜದ ಕೇಶವ ಪದವ 3
--------------
ಕರ್ಕಿ ಕೇಶವದಾಸ
ಪಾದ ಪದ್ಮದಲಿಮಾಯೆ ದಾಟಿತು ಮಹಿಮಳೇ ದೇವಿ ಪಕಾಯ ಕರ್ಮಗಳೆಂಬ ಕಾತ್ಯ ಸಮುದಾಯವನುದಾಯದಿಂದಳವಡಿಸಿದೆ ದೇವಿ ಅ.ಪಆಜಸುರಾದಿಗಳಿಂಗೆ ಅಮರಿಸಿಹೆ ಭಾಗ್ಯವನುಭಜಿಸುತಿಹರನವರತವೂ ದೇವಿನಿಜದಿರವನೂ ಕೊಟ್ಟು ನಿಲಿಸಿರಲು ನೀನವರತ್ರಿಜಗ ವಂದಿತರಾದರು ದೇವಿಸುಜನ ವಂದಿತನಾದ ಶ್ರೀಹರಿಯೆ ನೀನಾಗಿರುಜುಕರದಲಾಳುತಿರುವೆ ದೇವಿಕುಜನನಾದರು ನಾನು ಕರವಿಡಿದು ನೀ ಕಾಯ್ದುದ್ವಿಜಜನ್ಮದೆಣಿಕೆದೋರ್ದೆ ದೇವಿ 1ಅಣುಮಾತ್ರವಿರಲಿಲ್ಲ ವಿಷಯ ಭೋಗಕೆ ಬೀಜದಣಿಸಿದುದು ದಾರಿದ್ರವು ದೇವಿಕಣುಗಾಣದಿದ್ದವಗೆ ಕೊಟ್ಟಿಯನ್ನವ ನೀನೆಮಣಿವದನು ಮಾಡ್ದೆ ನೀನೆ ದೇವಿಪ್ರಣತ ರಕ್ಷಾಮಣಿಯೆ ಪರತತ್ವವನ್ನಿತ್ತೆಎಣಿಪುದೆಂತೀ ಮಹಿಮೆಯಾ ದೇವಿಕ್ಷಣಮಾತ್ರ ಪೂಜೆಯನು ಕ್ರಮದಿ ಮಾಡ್ದವನಲ್ಲಭಣಿತೆುದ ಬಗೆವರಾರು ದೇವಿ 2ಪರಿತೃಪ್ತಳಾಗಿರುವೆ ಪರಮಭಾಗ್ಯವನೀವೆನೆರೆ ನೀನೆ ನಿರ್ಮಿಸಿರಲು ದೇವಿಇರಿಸಿದಂತಿರುವರಿಂದೇನಹುದು ಕೊಡುವದಕೆಅರಿಯಲಖಿಳವು ನಿನ್ನದೇ ದೇವಿಮರುಗಿ ನೀನೇ ಕಾಯ್ವೆ ಮಾತೃ ರೂಪಹುದಾಗಿಸುರತರುವಿನುಪಮಾನಳೇ ದೇವಿವರದ ತಿರುಪತಿ ವಾಸ ವೆಂಕಟೇಶನ ರೂಪಧರಿಸಿಹಳೆ ದಿವ್ಯ ಲಕ್ಷ್ಮೀದೇವಿ 3ಕಂ||ಸ್ಥಿರವಾರವಿಂದು ಕೇಶವಸ್ಥಿರವಹುದಿತ್ತಭಯವೆನಗೆ ಭಯವನು ಬಿಡಿಸೈಸ್ಥಿರವಲ್ಲದ ಸಂಸಾರವಸ್ಥಿರವೆಂದೇ ನೊಂದೆನೈಯ ವೆಂಕಟರಮಣಾಓಂ ನಾರಾಯಣಾಯ ನಮಃ
--------------
ತಿಮ್ಮಪ್ಪದಾಸರು
ಪಾದ ಸರೋಜಯುಗಳವ ನೆರೆ ನಂಬಿದೆ ಜೀಯ್ಯ ಪ ತಿಮಿರ ಕಾನನ ಯತಿವರ್ಯ ಮಹಾಶೌರ್ಯ ಮೇರು ಸಮ ಧೈರ್ಯ ತ್ರಿವಿಧ ಜೀವರಿಗೆ ಆಚಾರ್ಯ ಅ.ಪ ರಾಮದೂತಾನಾಗಿ ಸೀತೆಗುಂಗುರವಿತ್ತೆ ಕಲಿಯುಗದಿ ಭೂಸುರಕುಲದಿ ಪುಟ್ಟಿ ನೀ ಮೆರೆದಿ ಆರ್ತಜನ ಕೃಪಾಶರಧಿ 1 ಅನುಸಂಧಾನ ಪೂರ್ವಕ ಕೊಡು ವಿಜ್ಞಾನ 2 ಮೂರವತಾರದಿ ಶ್ರೀರಾಮ ಕೃಷ್ಣ ವ್ಯಾಸ- ರಾರಾಧಿಸಿ ಗೈದ ಧೀರ ಶಿಖಾಮಣಿ ಭವ ಭಯನಾಶ ಕೊಡುವುದು ಲೇಸಾ ಗುರುರಾಮವಿಠಲನದಾಸ 3
--------------
ಗುರುರಾಮವಿಠಲ
ಪಾದುಕವೇ ಗುರು ಪಾದುಕವೇ | ಪಾದುಕವೇ ಗತಿ ದಾಯಕವೇ ಪ ಕಲ್ಪತರು ಬೇಡಿದಲ್ಪವ ಕೊಡುವದು | ಕಲ್ಪಿಸದೀವುದ ಕಲ್ಪಿತ ಫಲಗಳ 1 ದಾರುಶಿಲೆಯ ವಂದವಾರಿಸ ಲರಿಯದು | ತೋರುವಫಾದ್ರಿ ವಿದಾರಿಸಿ ನೂಕುವಾ 2 ತಂದೆ ಮಹೀಪತಿ ದ್ವಂದ್ವ ಪಾದಕ ಹೊಂದಿ | ವಂದ್ಯ ಸರ್ವರಿಗಾಗಿ ನಂದನ ಸಲಹುವ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪಾನವ ಮಾಡುವೆನು ನಾಮನದಣಿಯ ನಾಮಾಮೃತವ ಪಾನವ ಮಾಡುವೆನು ಪ. ಶ್ರೀನಿವಾಸನ ನಾಮಸುಧಾರಸಏನುರುಚಿಯೋ ಕಾಣೆ ಜೇನುತುಪ್ಪದಂತೆ1 ಸಕ್ಕರೆ ಬೆರೆಸಿದ ಚೊಕ್ಕಪಾನಕವನ್ನುಮಿಕ್ಕು ಮೀರುತಲಿದೆ ರಕ್ಕಸಾರಿಯ ಧ್ಯಾನ 2 ಕದಳಿ ಖರ್ಜುರ ದ್ರಾಕ್ಷಿ ಅಡಕೆಯಿಮ್ಮಿಗಿಲಾಗಿಮುದಕೊಡುವುದು ಜಿಹ್ವೆಗೊದಗಿದ ತತ್‍ಕ್ಷಣ 3 ಕಾಸಿದ ಕೆನೆಹಾಲ ದೂಷಿಸುವಂತಿದೆಏಸುರುಚಿಯೋ ಹರಿದಾಸರೆ ಬಲ್ಲರು 4 ಹಯವದನನ ನಿರ್ಭಯದಿಂ ಭಜಿಸಲುದಯಮಾಡುವ ಸಾಯುಜ್ಯಪದವನಿತ್ತು5
--------------
ವಾದಿರಾಜ
ಪಾರುಗಾಣಿಸೊ ಎನ್ನ ಪಾವನಕಾಯ ಶ್ರೀ ಗುರು ರಾಘವೇಂದ್ರಾರ್ಯನೇ ಪ. ಶ್ರೀ ರಮಾಪತಿ ಗುಣವ ನೀ ಮನದೊಳು ತಿಳಿಸಿ ಭವ ಬಂಧ ಬಿಡಿಸೋ ಅ.ಪ. ಮಿಂಚಿನಂತಿಹ ಎನ್ನ ಚಂಚಲ ಮನದಲ್ಲಿ ಸಂಚಿತನೆ ಎನೆ ನೆಲಸೋ ಸಂಚಿತಾಗಮಿಗಳು ಕೊಂಚ ಉಳಿಯದ ತೆರದಿ ಪಂಚ ಭೇದಾರ್ಥ ತಿಳಿಸೊ ಪಂಚವಕ್ತ್ರನ ತಾತ ಮಿಂಚಿನಂದದಿ ಪೊಳೆವೊ ಹಂಚಿಕೆಯ ಎನಗೆ ತೋರೋ | ಮನಕ್ಹರುಷ ಬೀರೋ 1 ಶ್ರೀ ನರಹರಿ ಕೃಷ್ಣ ರಾಮ ವ್ಯಾಸರ ಪದವ ನೀ ನಿರ್ಮಲದಲಿ ನೆನೆವೆ ಮಾನನಿಧಿ ಮುರಹರಿಯ ಧಾಮತ್ರಯಗಳ ಮಾರ್ಗ ಕಾಮಿಸಿದ ಭಕ್ತಗೀವೆ ನಾನಧಮೆ ನಿನ್ನಡಿಗೆ ಬಾಗಿ ಭಜಿಸುವೆ ಗುರುವೆ ನೀನಿತ್ತ ನೋಡಿ ಪೊರೆಯೊ | ನೀ ದಯವ ಗರೆಯೊ 2 ತರಳತನದಲಿ ಶ್ರೀ ನರಹರಿಯ ಭಜಿಸುತ್ತ ಉರುತರದಿ ಭಾದೆ ಸಹಿಸಿ ಹರಿಯು ಸರ್ವತ್ರ ವ್ಯಾಪಕನೆಂಬೊ ಮಹಿಮೆಯ ಉರ್ವಿಯೊಳಗೆಲ್ಲ ನೆಲಸಿ ಸಿರಿ ಕೃಷ್ಣನಾ ಭಜಿಸಿ ಮರುತ ಮತವನೆ ಸ್ಥಾಪಿಸಿ | ಗುರುರಾಯನೆನಸಿ 3 ತುಂಗ ತೀರದಿ ನಿಂದು ಮಂಗಳರೂಪದಲಿ ಪಂಗು ಬಧಿರರ ಸಲಹುತ ಸಂಗೀತ ಪ್ರಿಯನೆನಿಸಿ ಶೃಂಗಾರರಾಮನ ಮಂಗಳರೂಪ ಭಜಿಸಿ ಹಿಂಗದೇ ಸುಜನರಿಗೆ ವರವ ಕೊಡುವೊ ಬಿರುದು ರಂಗನಾ ಪದದೊಲುಮೆಯೋ | ನಿನ್ನಯ ಮಹಿಮೆಯೋ 4 ಗೋಪಾಲಕೃಷ್ಣವಿಠ್ಠಲನ ಪರಿಪರಿಯಿಂದ ಪಾದ ಮೌಳಿ ನೋಳ್ಪೆ ಶ್ರೀ ಪತಿಯ ತೋರೆನಗೆ ಪಾಪ ಕಲುಷವ ಕಳದು ತಾಪಪಡಲಾರೆ ಭವದಿ ಕಾಪಾಡುವವರಿಲ್ಲ ನೀ ಕೃಪಾನಿಧಿಯೆಂದು ಪರಿ ಕೇಳ್ದೆ ಗುರುವೆ | ಭಕ್ತರ ಕಲ್ಪ ತರುವೆ5
--------------
ಅಂಬಾಬಾಯಿ
ಪಾರ್ಥನರಸಿಯರು ಪ್ರಾರ್ಥಿಸಿ ಕೈಮುಗಿಯೆ ತೀರ್ಥಯಾತ್ರೆಗಳೆಲ್ಲಾ ಕ್ಷೇತ್ರ ಮೂರ್ತಿಗಳು ಗೆಲಿಸಲಿ ಪ. ರಾಮೇಶ್ವರ ಕಂಚಿ ಪ್ರೇಮದಿ ಕುಂಭಕೋಣಸ್ವಾಮಿ ಶ್ರೀ ರಂಗ ತೋತಾದ್ರಿಸ್ವಾಮಿ ಶ್ರೀ ರಂಗ ತೋತಾದ್ರಿಬೇಲೂರು ಚೆನ್ನನ ಮೊದಲೆ ಬಲಗೊಂಬೆ 1 ಅಹೋಬಲ ಮೊದಲಾದ ಆ ವೆಂಕಟಾದ್ರಿ ಅಲ್ಲಿರೊ ಅನಂತ ಅಳಗಿರಿಅಲ್ಲಿರೊ ಅನಂತ ಅಳಗಿರಿ ದರ್ಭಶಯನದೇವರ ಮೊದಲೆ ಬಲಗೊಂಬೆ 2 ದೇವ ಜನಾರ್ಧನ ಕಾಯೊ ಸಾರಂಗಪಾಣಿಭಾವ ಭಕ್ತಿಲೆ ನಮಿಸೇವ ಭಾವ ಭಕ್ತಿಯಲೆ ನಮಿಸೇವ ಚಕ್ರಪಾಣಿ ಬೇಗ ಗೆಲಿಸೆಂದು 3 ಅಕ್ಕ ಶ್ರೀಮುಷ್ಣಿವಾಸ ಮುಖ್ಯಚಲುವರಾಯದೇವಕ್ಕಳಿಗೆ ವರವ ಕೊಡುವೋಳುದೇವಕ್ಕಳಿಗೆ ವರವ ಕೊಡುವೋಳು ಕನ್ಯಾಕುಮಾರಿ ಮುಖ್ಯಳ ಮೊದಲೆ ಬಲಗೊಂಬೆ4 ಛಾಯಾಭಗವತಿ ನಮ್ಮ ಕಾಯೆ ಕರುಣಾಂಬುಧೆಸಹಾಯವಾಗಮ್ಮ ಕಾಲಕಾಲಸಹಾಯವಾಗಮ್ಮ ಕಾಲಕಾಲಕೆಬ್ರಮ್ಹನ ತಾಯ ಗೆದ್ದು ಬರಬೇಕು 5 ಸುಬ್ರಹ್ಮಣ್ಯ ಸಾಸಿ ಒಬ್ಬ ಶ್ರೀ ಕೃಷ್ಣರಾಯ ನಿರ್ಭಯದಿ ಸ್ವಾದಿ ನಿಲಯನೆನಿರ್ಭಯದಿ ಸ್ವಾದಿ ನಿಲಯನೆ ತನುಮನಉಬ್ಬಿ ವಂದಿಸುವೆ ಕರುಣಿಸು6 ಹಂಪಿವಿರೂಪಾಕ್ಷದಿ ನಿಂತು ಪೂಜೆಯಗೊಂಬಯಂತ್ರೋದ್ದಾರಕಗೆ ಒಲಿದವನೆಯಂತ್ರೋದ್ದಾರಕಗೆ ಒಲಿದ ರಾಮೇಶನಕಾಂತೆಯರ ಗೆದ್ದು ಬರಬೇಕು 7
--------------
ಗಲಗಲಿಅವ್ವನವರು
ಪಾರ್ವತಿದೇವಿ ಪಾದ ನಂಬಿದೆ ಪ ಪಾದ ಜಗದಂಬೆ ಅರುಣೆ ಪಂಚಭೇದಾ ಆಹಾಶಂಭುವಿನರ್ಧಾಂಗಿ ಬಿಂಬನ ತೋರಿಸೆಅಂಬುಜೋದ್ಭವನ ಪ್ರತಿಬಿಂಬವ ರಾಣಿಯೆ ಅ.ಪ. ಮನದಭಿಮಾನಿ ದೇವತೆಯೆ ಯನಮನವ ನಿಲ್ಲಿಸು ಪಾರ್ವತಿಯೆ ಆಹಾಮುನಿಜನ ವಂದ್ಯಳೆ ಮನ್ಮಥ ಜನನಿಯೆಸಾನುರಾಗದಲಿ ನೀ ಜ್ಞಾನ ಕೊಡುವೆಯೆಂದು 1 ಸಾರಥಿ 2 ಶರಣು ಬಂದೆನೆ ನಾ ನಿನಗೆ ತವಚರಣ ಭಜನೆ ಕೊಡು ಎನಗೆ ಆಹಾಶರಧಿ ಶಯನ ತಂದೆವರದವಿಠಲನನ್ನುಪರಿಪರಿ ಸ್ತುತಿಸುವ ವರಕಾಳಿ ದೇವಿಯೆ3
--------------
ಸಿರಿಗುರುತಂದೆವರದವಿಠಲರು
ಪಾಲಸಾಗರ ಸಂಭೂತೆ ಕೈವಲ್ಯದಾತೆ ಪಾಲಿಸೆನ್ನನು ನಿಜಮಾತೆ ಪ ಆಲಿಸು ನಿನ್ನಯ ಬಾಲನ ನುಡಿ ಈ ಕಾಲದಿ ಮನ್ಮನ ಆಲಯದೊಳು ನಿಂದು ಅ.ಪ ನಿತ್ಯ ನಿರ್ಮಲೆ ಈ ಮಹಾಮಹಿಮ ವಿಶಾಲೆ ಕಾಮನ ಜನನಿ ಸುಲೀಲೆ ಜಲಜಸುಮಾಲೇ ತಾಮರಸಾಂಬಕೆ ಸಾಮಜಭವ ಸು - ತ್ರಾಮ ಪ್ರಮುಖ ಸುರಸ್ತೋಮ ನಮಿತಗುಣ - ಪಾದ ಯಾಮ ಯಾಮಕೆ ನಿತ್ಯ ನೇಮದಿ ಭಜಿಪೆ ಶ್ರೀರಾಮನ ತೋರೆ 1 ವೇದಾಭಿಮಾನಿ ಅಂಬ್ರಾಣಿ ಸುಗಣಸನ್ಮಣಿ ವೇದವತಿಯೆ ರುಕ್ಮಿಣಿ ವೇದವಂದ್ಯಳೆ ಗುಣಪೂರ್ಣೇ ನಿತ್ಯಕಲ್ಯಾಣಿ ಖೇದಗೊಳಿಸುವ ಭವೋದಧಿ ದಾಟಿಸಿ ಮೋದ ಕೊಡುವ ಪಂಚಭೇದಮತಿಯನಿತ್ತು ಯಾದವಗುಣವನುವಾದ ಮಾಡಿಸಿ ನಿತ್ಯ ಮೋದಬಡಿಸು ಶ್ರೀ ಮಾಧವರಾಣಿ 2 ಜಾತರೂಪಾಭಾಶುಭಗಾತ್ರಿ ಈ ಜಗಕೆ ಧಾತ್ರಿ ಸೀತೆ ನೀನೆ ಲೋಕಪವಿತ್ರೆ ಧಾತಾಪ್ರಮುಖಸುರಸ್ತೋತ್ರೇ ನೀರಜನೇತ್ರೆ ವೀತಭಯಳೆ ತ್ರಿನೇತ್ರೇ ಪಾತಕವನಕುಲವಿತಿಹೋತ್ರ ಸುರ - ವಿನುತ ಸುಖವ್ರಾತ ಕೊಡುವ ನಮ್ಮ ದಾತ ಗುರುಜಗನ್ನಾಥವಿಠಲಗೆ ನೀ ನೀತಸತಿಯೆ ಎನ್ನ ಮಾತೆ ವಿಖ್ಯಾತೆ3
--------------
ಗುರುಜಗನ್ನಾಥದಾಸರು
ಪಾಲಿಪರೊಬ್ಬರಿಲ್ಲ ಪ ದಂಡಾದಿ ರಾಜ್ಯವು ಕೆಟ್ಟು ಪೋಕ ಪುಂಡರು ಹೆಚ್ಚಿ ಮಾರ್ಗವತೋರಿ ಕೊಟ್ಟು ಪೆಂಡಾರರಿಗೆ ಸುಲಿಗೆ ಕೊಟ್ಟು ಭೂ ಮಂಡಲದೊಳಗಣ ಜನರೆಲ್ಲ ಕೆಟ್ಟು 1 ಎತ್ತು ಮುಟ್ಟುಗಳೆಲ್ಲ ಹೋಗಿ ಬೀಳು ಬಿದ್ದು ಗದ್ದೆಯ ಪೈರು ನಿಸ್ಥಳವಾಗಿ ತುತ್ತುರಿಗಳು ಸುಟ್ಟು ಹೋಗಿ ದಂಡು ನಿತ್ತು ಪ್ರಜೆಗೆ ಮನೆ ಮುಖವಿಲ್ಲದಾಗಿ 2 ಕರಿದೋ ಬಿಳಿದೋ ಕಾಣೆ ಕ್ಷೀರ ಕೊಡುವ ತರುಗಳಿಲ್ಲವು ಮರ ಒಣಗಿ ಅರಮನೆ ಯತ್ತಣಿಂ ಘೋರ ಕರೆ ಕರೆಯೊಳು ಬಂದಿತಯ್ಯ ಗ್ರಹಚಾರ 3 ಗಂಜಿ ಗಾಸ್ಪದವಿಲ್ಲವಾಯ್ತು ಮೂರು ಸಂಜೆಯ ದೀಪಕೆ ಕೊಳ್ಳಿ ಬೆಳಕಾಯ್ತು ಅಂಜನ ಪಾತ್ರೆ ಹೆಚ್ಚಾಯ್ತು ಬದುಕಲು ನಾಲ್ಕು ವರ್ಣ ಒಂದಾಯ್ತು 4 ಕಾಲಗತಿಯು ಬಲು ಬಿರುಸು ಮುಂದೆ ಬಾಳುವ ಜನರಿಗೆ ನೃಪರಿಂದ ಹೊಲಸು ಶೂಲಿ ಸಾಯುಜ್ಯವ ಬಯಸು ಲಕ್ಷ್ಮೀ ಲೋಲನ ನಾಮವ ಮನದೊಳುಚ್ಚರಿಸು 5
--------------
ಕವಿ ಪರಮದೇವದಾಸರು
ಪಾಲಿಸಮ್ಮ ತುಳಸಿ ಹೂ ತಡವ ಮಾಡದೆ ನಿನ್ನ ವಾರಿ ತುರುಬಿನಲ್ಲಿ ಇರುವ ಪಾರಿಜಾತವಾ ಪ. ಒಂದೊಂದು ದಳದಲ್ಲಿ ಒಂದೊಂದು ಮೂರುತಿ ಒಂದನೇ ಕಾಲದಲ್ಲಿ ವರವ ಕೊಡುವಳು 1 ಎರಡೆರಡು ದಳದಲ್ಲಿ ಎರಡು ಮೂರುತಿ ಎರಡನೆ ಕಾಲದಲ್ಲಿ ವರವ ಕೊಡುವಳು 2 ಮೂರನೇ ಕಾಲದಲ್ಲಿ ಮೂರು ಮೂರುತಿ ಸಾರಿ ಶ್ರೀ ಶ್ರೀನಿವಾಸ ಸಲಹುವನೆ 3
--------------
ಸರಸ್ವತಿ ಬಾಯಿ