ಒಟ್ಟು 2332 ಕಡೆಗಳಲ್ಲಿ , 112 ದಾಸರು , 1676 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಗದಾದಿಮಾತೆಯೆ ಪ ಮೊರೆಯ ಕೇಳಮ್ಮ ಪರಮ ಪಾವನೆಯೆ ಕರುಣ ಹಸ್ತವ ಶಿರದಿ ಇಡು ದಯೆ ಭರಿತೆ ಜಗನ್ಮಯೆ ಅ.ಪ ಕಮಲಜಾತನ ಪ್ರೇಮ ಸುಂದರಿಯೆ ಅಮರ ವಿನುತೆಯೆ ಕಮಲನೇತ್ರೆ ಸಾವಿತ್ರಿ ಶಾರದೆಯೆ ವಿಮಲಚರಿತಳೆ ದಮೆ ದಯಾನ್ವಿತೆಯ ಶಮೆ ಶಾಂತಿನಿಲಯೆ ಕುಮುದಬಾಂಧವಕೋಟಿಪ್ರಭಾಮಯೆ 1 ವರ ಸುವಿದ್ಯ ಸಂಗೀತ ಶರ್ವಾಣೆ ಪರಮಕಲ್ಯಾಣೆ ಶರಣ ಜನಪ್ರಿಯೆ ವೀಣಾಧರಪಾಣಿ ಸ್ಮರಿಪ ಜನ ಮನದಿಷ್ಟ ಪರಿಪೂರ್ಣ ದುರಿತದೂರಿಣೆ ಪೊರೆದೆ ಮನುಗಳ ಜ್ಞಾನದಿಂ ವಾಣಿ 2 ಚರಣದಡಿಲೆನ್ನ ಶಿರವನಿಕ್ಕಿ ಬೇಡಿಕೊಂಬುವೆ ನಾ ಮರೆವ ಹರಿಸಿ ಭರದಿಂ ಕೊಡು ಜ್ಞಾನ ಸ್ಥಿರಮತಿಯ ಮುನ್ನ ನಿರುತದ್ಹೊಗಳುವೆ ನಿಮ್ಮ ಚರಿತವನು 3
--------------
ರಾಮದಾಸರು
ಜಗದಾದಿವಂದ್ಯನಿಗೆ ಶರಣುಪ ಪನ್ನಗಾನಗದೊಡೆಯ ಶರಣು 1 ತವಪದನಖಾಗ್ರಕೆ ಶರಣು2 ಮೂಡಲಾಗಿರಿಗೆ ಶರಣು ಗಿರಿಯ ಅಡಿದಾವರೆಗಳಿಗೆ ಶರಣು3 ನಡೆರ್ವಡಿಗಳಿಗೆ ಶರಣು4 ಮೆಟ್ಟು ಮೆಟ್ಟಲಿಗೆ ಶರಣು ಮನಮುಟ್ಟ ಮೆಟ್ಟಲೇರುತಿಹ ನಿನ್ನಿಷ್ಟ ಭಕ್ತರಿಗೆ ಶರಣು 5 ತನುಕಷ್ಟ ಹರಿಸಿ ಮನತುಷ್ಟಿಯನು ತೋರ್ವ ಬೆಟ್ಟದಂದಕ್ಕೆಲ್ಲ ಶರಣು 6 ಪರಿವಾರಕ್ಕೆಲ್ಲ ಶರಣು7 ಸ್ವರಶಬ್ದವಾಚ್ಯತವ ಶರಣು 8 ಚೆಲ್ವ ಗಾಳಿಗೋಪುರ ದ್ವಾರಕ್ಕೆ ಶರಣು 9 ಲೀಲೆಯಿಂದಲಿ ನಿನ್ನನೋಲೈಪ ಭಕ್ತರ ಪಾದಪಲ್ಲವಂಗಳಿಗೆ ಶರಣು 10 ಗೋವಿಂದ ಸಚ್ಚಿದಾನಂದ ಮುಕುಂದನೆಂದು- ಚ್ಚರಿಪ ಭಕ್ತರಿಗೆ ಶರಣು11 ಹರಿ ಹರೀ ಹರಿ ಎಂದು ಹರಿದಾರಿ ಪಿಡಿದ ವರ ಅಡಿದಾವರೆಗಳಿಗೆ ಶರಣು 12 ಪರಿಪರಿ ಭಾಧೆಯಿಂ ತರಳನ್ನ ಕಾಯ್ದ ಶ್ರೀ ನರಹರಿಯ ಚರಣಾರವಿಂದಕ್ಕೆ ಶರಣು 13 ತಿರುದಾರಿ ಮೊಣಕಾಲ ಮುರಿಗೆ ಶರಣು 14 ಭಕ್ತರಾಪತ್ತಳಿವ ಶಕ್ತಿಸಂಪತ್ತೀವ ಉತ್ತಮೋತ್ತಮ ಭಕ್ತರಾ ಮಂಟಪಕ್ಕೆ ಶರಣು 15 ಭಕ್ತಿಯಿಂದಲಿ ಸಪ್ತಗಿರಿಯ ದಾಟಿದ ಹರಿ- ಭಕ್ತಜನಸಂದೋಹಗಳಿಗೆ ಶರಣು 16 ಭಕ್ತರುಧ್ಧರಿಸಲು ನಿಂದ ಸಮೀರನಿಗೆ ಶರಣು17 ಜೀವರಿವರೆನ್ನುವರು ದರುಶನವನೀಯೆಂದು ಕ- ರವ ಮುಗಿದು ಹರಿಯ ಸ್ತುತಿಸುವಗೆ ಶರಣು 18 ಪಾವನಾ ಮೂರ್ತಿಯನು ಮಾನಸದಿ ಧೇನಿಸಲು ಭಾವಶುಧ್ದಿಯನೀವ ಜೀವೇಶನಿಗೆ ಶರಣು 19 ಸಚ್ಚಿದಾನಂದಾತ್ಮ ಶ್ರೀ ಮುಕುಂದನ ದಿವ್ಯ ಅರಮನೆಯ ಮಹಾದ್ವಾರಕ್ಕೆ ಶರಣು 20 ಸಿರಿ ಅವ್ಯಾಕೃತಾಕಾಶಾವರಣಕ್ಕೆ ಶರಣು 21 ತೀರ್ಥಮಹಿಮೋಪೇತ ಸ್ವಾಮಿಪುಷ್ಕರಣೀ- ತಟವಿರಾಜಿತ ಅಶ್ವತ್ಥವೃಕ್ಷರಾಜನಿಗೆ ಶರಣು22 ಭೂದೇವಿಯಾರಮಣ ಆದಿಭೂವರಹ ಮೂರ್ತಿಯ ಶ್ರೀಪಾದಯುಗ್ಮಕ್ಕೆ ಶರಣು 23 ಬ್ರಹ್ಮಾಂಡದೊಡೆಯನ ದಿವ್ಯ ನಿಲಯದೊಳಿರುವ ಬಹಿರಾವರಣಕ್ಕೆ ಶರಣು 24 ಸರ್ವಗುಣಸಂಪೂರ್ಣ ವೈಕುಂಠಮಂದಿರನ ಸ್ವರ್ಣಮಯ ಸುಪರ್ಣಸ್ಥಂಭಕ್ಕೆ ಶರಣು 25 ಗಮನ ನಿರ್ಗಮನವುಳ್ಳ ಸುಮನಸರ ಭಕ್ತಜನಸಂಘಕ್ಕೆ ಶರಣು26 ಅಂತರಾವರಣಕ್ಕೆ ಶರಣು 27 ಕಾಂಚನರೂಪ ಸುವರ್ಣಮುಖರೀನದಿ ವಿ- ರಾಜಿತ ತೊಟ್ಟಿತೀರ್ಥ ಸಮಸ್ತ ತೀರ್ಥಗಳಿಗೆ ಶರಣು 28 ಸುಮನಸರು ಹೃನ್ಮನದಿ ಧೇನಿಸುವ ಕಾಂಚನ ವಿಮಾನದಲಿ ಬೆಳಗುತಿಹ ಶ್ರೀ ಶ್ರೀನಿವಾಸನಿಗೆ ಶರಣು 29 ಭೂಗಿರಿಯ ಸೇರಿದ ಶ್ರೀಹರಿಗೆ ಶರಣು 30 ವಾರಿಯೊಳಗ್ಯೋಲಾಡಿ ಶ್ರೀಶೈಲದೊಳು ನಿಂ- ತ ಶ್ರೀಲೋ¯ನಾಗಿರ್ಪಗೆ ಶರಣು31 ಶೇಷ್ಠನೆನಿಸಿದ ದಿಟ್ಟ ಮೂರುತಿಗೆ ಶರಣು 32 ಧರೆಯ ಕೆದರೀ ಬಂದು ಗಿರಿಯ ವರಹನ ಬೇಡಿ ಮರುಳುಮಾಡಿದ ಮಾಯಾರಮಣನಿಗೆ ಶರಣು 33 ತರಳರೂಪವ ಕೆಡಿಸಿ ಗಿರಿಯ ಹುದರಯೊಳಡಗಿ ಸುರಜೇಷ್ಠನೆಂದೀಗ ಪೂಜೆ ಗೊಂಬುವಗೆ ಶರಣು 34 ವಟಪತ್ರಶಾಯಿ ನೀ ವಟುವಾಗಿ ಬೇಡಿ ಭ- ವಾಟವಿಯ ದಾಟಿಸಲು ನಿಂದವಗೆ ಶರಣು 35 ಪೆತ್ತಮಾತೆಯ ಹರಿಸಿ ಮೆತ್ತನಿಲ್ಲಿಗೆ ಬಂದು ಉತ್ತಮಾಗತಿಪ್ರದ ಸರ್ವೋತ್ತಮಗೆ ಶರಣು 36 ಕ್ಷಿತಿಸುತೆಯ ಮಾತನು ಹಿತದಿ ಪಾಲಿಸೆ ವೇದ- ವತಿಯ ಪತಿಯಾಗಿ ನಿಂದವಗೆ ಶರಣು 37 ಗುಟ್ಟಾಗಿ ಪಾಲ್ಕುಡಿದು ಪೆಟ್ಟಿನಾ ನೆಪದಲ್ಲಿ ದೃಷ್ಟಿಗೋಚರನಾದ ಬೆಟ್ಟದೊಡೆಯನಿಗೆ ಶರಣು38 ಉತ್ತಮಾಸ್ತ್ರೀಯರಿಗೆ ನಾಚಿ ಬತ್ತಲೆಯಾಗಿ ಹುತ್ತದೊಳು ಅಡಗಿಯೆ ಮೆರೆದವಗೆ ಶರಣು 39 ಸಿರಿಯ ಹಯವನು ಮಾಡಿ ಚರಿಸಿ ಹರಿಸಿಕೊಂಡವನಿಗೆ ಶರಣು 40 ಹಿರಣ್ಯಗರ್ಭನ ಜನಕ ಸನ್ಮಹಿಯ ಸನ್ನಿಧಿಯ ಕನಕಮಯಕವಾಟಕ್ಕೆ ಶರಣು 41 ತಟಿಕ್ಕೋಟಿನಿಭ ಪೂರ್ಣ ಸಂಪೂರ್ಣ ಲಕ್ಷಣ ಸನ್ಮಾಂಗಳಾ ಸುಂದರ ಮೂರ್ತೇ ತವ ಶರಣು42 ಮುಕ್ತಾಮುಕ್ತಗಣ ವಂದಿತಾ ತವ ಶರಣು43 ನಂದಸುನಂದನ ಜಯವಿಜಯಾದಿ ಪಾ- ಸಂಸೇವ್ಯಮಾನ ತವ ಶರಣು44 ಸರ್ವಾಂಗುಳ್ಳಂಗುಷ್ಠದಳ ವಿಲಸಿತ ಸತ್ ಪಾದ- ಪಂಕಜ ಧ್ವಜ ವಜ್ರಾಂಕುಶಾದಿ ಸುಚಿಹ್ನ ಚಿಹ್ನಿತ ತವ ಶರಣು 45 ಗುಲ್ಫಾರುಣನಖ ಧೃತಾ ದೀಧಿತಿಯುಕ್ತ ತವ ಶರಣು 46 ಬೃಹತ್ ಕಟಿತಟಶ್ರೋಣಿ ಕರಭೋರು ದ್ವಯಾನಿಶ್ರ ತವ ಶರಣು 47 ವೈಜಯಂತಿ ವನಮಾಲ ತವ ಶರಣು 48 ಪ್ರಲಯ ಪೀವರಭುಜ ತುಂಗಂಶೋರಸ್ಥ ಲಾಶ್ರಯ ತವ ಶರಣು 49 ನ್ವಿತ ತವ ಶರಣು50 ಚಾರುಪ್ರಸನ್ನವದನ ಮಂದಹಾಸ ನಿರೀಕ್ಷಣ ಸು- ಭದ್ರನಾಸ ಚಾರುಸುಕರ್ಣ ಸುಕಪೋಲಅರುಣ ತವ ಶರಣು 51 ಸಹಸ್ರ ಫÀಣಶಿರೋಮಣಿಪ್ರಭಾನ್ವಿತ ಶೇಷಶೈಲಸ್ಥ ಶಾಂತ ಪದ್ಮಪತ್ರಾಯತೇಕ್ಷಣ ತವ ಶರಣು 52 ಅನಂತವೇದೋಕ್ತ ಮಹಿಮೋಪೇತ ಸರ್ವಸ್ವರವರ್ಣ ಸರ್ವಶಬ್ದವಾಚ್ಯ ಪ್ರತಿಪಾದ್ಯ ಶರಣು 53 ಸಚ್ಚಿದಾನಂದಾತ್ಮ ಸರ್ವಸುಗುಣೋಪೇತ ಸರ್ವ ಹೃತ್ಕಮಲಸ್ಥಿತ ತವ ಶರಣು 54 ಅಣುತ್ರ್ಯಣು ತೃಟಿಲವ ಕ್ಷಣಾದಿಕಾಲ ಮಹ- ತ್ಕಾಲಾತ್ಮಕ ನಿತ್ಯನಿರ್ಮಲಮೂರ್ತೇ ತವ ಶರಣು 55 ಪರ ಮೇಷ್ಟಿವಂದಿತ ತವ ಶರಣು 56 ತೈಜಸ ಪ್ರಾಜ್ಞ ತುರ್ಯಾ ದ್ಯಷ್ಟರೂಪಾತ್ಮಕ ತವ ಶರಣು57 ಕಂಸಾರಿ ಮುರಾರಿ ಶ್ರೀಹರಿಯೆ ಶರಣು58 ಭವರೋಗಭೇಷಜ ಭಕ್ತಜನಬಂಧೋ ಮುಚುಕುಂದವರದ ಗೋವಿಂದ ಶರಣು 59 ಮುಕ್ತಾಮುಕ್ತಾಶ್ರಯ ಭಕ್ತಜನಸಂರಕ್ಷಣಾ ವ್ಯಕ್ತಾವ್ಯಕ್ತ ಮಹಿಮ ತವ ಶರಣು 60 ತತ್ತದಾಕಾರ ಜಗದಾಪ್ತ ಶರಣು 61 ಚೇತನಾಚೇತನ ವಿಲಕ್ಷಣ ಸ್ವಗತಭೇದವಿವ- ರ್ಜಿತ ಪತಿತಪಾವನಮೂರ್ತೇ ತವ ಶರಣು 62 ಕ್ಷರಾಕ್ಷರ ಪರುಷಪೂಜಿತ ಪಾದ ಪುರಾಣಪುರುಷೋತ್ತಮನೆ ಶರಣು 63 ರವಿಕೋಟಿಕಿರಣ ರತ್ನಕನಕಮಯ ಮುಕು- ಟಾನ್ವಿತ ತವಶಿರಸ್ಸಿಗೇ ತವ ಶರಣು 64 ಸುಂದರಾನಂದ ಆನನಕೆ ಶರಣು 65 ಶ್ರೀಲೋಲ ಶರಣು 66 ಪೂವಿಲ್ಲನಾ ಬಿಲ್ಲ ಪೋಲ್ವ ಹುಬ್ಬು ಕಂಜ - ದಳದೋಲ್ ಚಂಪಕಾಮುಗುಳಿಗೆಣೆನಾಸಿಕಕೆ ಶರಣು 67 ಮಕರ ಕರ್ಣಕುಂಡಲಾನ್ವಿತ ತವ ಕರ್ಣಕ್ಕೆ ಶರಣು 68
--------------
ಉರಗಾದ್ರಿವಾಸವಿಠಲದಾಸರು
ಜಗನ್ನಾಥದಾಸರು ರಕ್ಷಿಸೋ-ಗುರುವರ-ರಕ್ಷಿಸೋ ಪ ಈಕ್ಷಿಸೊ ಕರುಣ ಕಟಾಕ್ಷದಲಿನ್ನ ಶಿಕ್ಷಿಸು ಮಧ್ವಾಗಮವ ಮುನ್ನ ಉಕ್ಕಿಸು ಭಕ್ತಿ ವಿರಕ್ತಿ ಚೆನ್ನ | ಆಹ ಲಕ್ಷ್ಮೀಕಾಂತನ ಅಪರೋಕ್ಷದಲಿ ಕಂಡು ಪ್ರ- ತ್ಯಕ್ಷ ಔತಣ ಉಂಡ ದಕ್ಷ ಶ್ರೀ ಜಗನಾಥ ವಿಠಲನ ದೂತ ಅ.ಪ. ನರಸಿಂಹದಾಸರ ಕುವರಾ-ಧರಿಸಿದೆ ಶ್ರೀನಿವಾಸನಪೆಸರ ವರಕವಿತಾ ಹುಟ್ಟಿನ ಸಾರ-ಮೆರೆಯಿತು ಕೀರ್ತಿ ಅಪಾರ \ಆಹ ವರದೇಂದ್ರನ್ನ ಅಶುಕವಿತಿಯಲಿಪೊಗಳಿ ವರಶಿಷ್ಯನಾಗುತ ಮೂರೊಂದು ಶಾಸ್ತ್ರದಿ ಕಡುಹುಲಿ ಎನಿಸಿದೆ 1 ನ್ಯಾಯಶಾಸ್ತ್ರದಿ ಜಗಜ್ಜಟ್ಟೀ-ವೇದಾಂತರಸಗಳ ಭಟ್ಟಿ ಮಾಯಾವಶಿರ ಮೆಟ್ಟಿ-ಅಹಂಕಾರ ಶಿರದಲಿಟ್ಟಿ ಆಹ ಶ್ರೇಷ್ಠವಿಜಯದಾಸರು ಮನೆ ಮುಟ್ಟಿ ಕರೆದರು ನಿನ್ನ ಬಹು ಬಹು ಕಂಗೆಟ್ಟೀ ಬತ 2 ಹೋಯಿತು ಕಳೆಮುಖದಿಂದ ಕಚ್ಚಿತು ಭರದಿಂದ ಆಹ ಭರದಿ ಹರಿಯ ಕರುಣ ಜರುಗಿ ಪೋದುದಕಂಡು ಕೊರಗಿ ಕೊರಗುತ ಕ್ಷೇತ್ರ ತಿರುಗುತ ಕೊನೆಗೆ ಗುರು ರಾಘವೇಂದ್ರರ ಪುರವ ಸೇರುತ ಬಹಳ ಕಾಯ ದೆರಗಿ ಸೇವೆಯಗೈದೆ 3 ಕರುಣಾಮಯನು ಸ್ವಪ್ನದಿ ಗುರುವು- ಗುರು ದ್ರೋಹ ಕಾರಣ ವರುಹಿ ಸುರಿಸಿ ಆಶೀರ್ವಾದವ ಶಿರದಿ- ತೆರಳೆಂದ ವಿಜಯದಾಸರ ಬಳಿ ಆಹ ತೆರೆದು ಕಂಗಳು ಒಡನೆ ತರಿದು ಮದಮಾತ್ಸರ್ಯ ಕರೆದು ಕುಡಿಯುತ ಶಿಷ್ಯ- ವರನು ಎನಿಸುತ ಚರಣಸಾರುವ ಬಿಡದೆ ಗೋಪಾಲದಾಸರ 4 ಸ್ವಗುರುಭಾವವತಿಳಿದು ತನ್ನಾಯುವನೆ ಇತ್ತ ಆಹ ಕೊಂಡು ಆಯುರ್ದಾನ ತೊಂಡನೆಂದಡಿಗೆರಗಿ ಕೊಂಡು ಶ್ರೀಹರಿದಾಸ ಗಂಡುದೀಕ್ಷೆಯ ಒಡನೆ ತಾಂಡವಾಡುತ ಪೋಗಿ ಪಾಂಡುರಂಗನ ಪುರದಿ ಮಂಡೆ ಮುಳುಗಿಸೆ ನದಿಲಿ ಕಂಡೆ ಅಂಕಿತ ಶಿರದಿ 5 ಪಂಡಿತನಾನೆಂಬ ಹೆಮ್ಮೆ ಬರಿ-ಪುಂಡತನವಲ್ಲದೆ ಹರಿಯ ನಿಜ ನಿನ್ನ ಚರಿತೆ ಆಹ ತಂಡತಂಡದ ಕವನ ದಂಡೆ ಹಾರಲು ಹರಿಗೆ ಕೊಂಡು ಔಡಣ ನಡಿಸೆ ಉಂಡು ಸಂತಸದಿಂದ ತುಂಡುಗೈಯುವ ಭವವ ಕಂಡೆ ನಾಕವ ಭುವಿಲಿ 6 ದೇಶದೇಶಗಳ ಸಂಚರಿಸಿ-ಹೇಸಿ ಮತಗಳ ನಿರಾಕರಿಸಿ ಪೊರೆದೆ ಹರೆಸಿ ಆಹ ಭಾಷಾದ್ವಯ ಯೋಜನೆ ಮೀಸಲು ನಿನಗೆಂಬೆ ವ್ಯಾಸ ರಾಜಾದಿಗಳ ಆಶೆಯಂದದದಿ ತತ್ವ- ರಾಶಿ ತುಂಬುತ ಗ್ರಂಥರಾಜ ರಚಿಸುತ ಜಗಕೆ ತೋಷ ತಂದಿತ್ತಿಯೊ ದಾಸಜನರುಲ್ಲಾಸ 7 ಶ್ರೀಮದ್ಧರಿಕಥಾಮೃತಸಾರ-ನೇಮ ದಿಂದೋದುವನೆ ಧೀರ ತಾಮಸರಿಗಿದು ಬಹಳದೂರ- ನೀಮಾಡಿದೆ ಮಹೋಪಕಾರ ಆಹ ಕಾಮವರ್ಜಿತವಾಗಿ ಪ್ರೇಮದಿ ನರಹರಿಯ ಭಾಮಸಹ ಸಂತತ ನೇಮದಿಂ ಧ್ಯಾನಿಸುತ ನಿತ್ಯ ಸಕಲೇಂದ್ರಿಯ ವ್ಯಾಪಾರ ಧೂಮಕೇತುವು ಎನಿಸುತ ನಮ್ಮಘಕಾನನಕೆ 8 ಪ್ರಾಣೇಶ ಕರ್ಜಗಿ ದಾಸಾರ್ಯರವೃಂದ- ನೀನಾಗಿ ಪೂರೆದಂತೆ ಘನ ಅಭಿಮಾನದಿಂದ ದೀನರೆಮ್ಮಯವೃಂದ ಕಾಯೆಂಬೆ ಮುದದಿಂದ- ತಾಣ ನಿಮ್ಮದೆ ನಮಗೆ ದಾಸಪಂಥ ಸ್ತಂಭ ಆಹ ಕೃಷ್ಣಾಗ್ರಜ ಶಲ್ಯ ಸಹ್ಲಾದ ಮತ್ತಾ ಪುರಂದರ ದಾಸಾತ್ಮಜನೀನಂತೆ ದೀನಜನೋದ್ಧಾರಗೈಯ್ಯೆ ಮುಂದೇಳುಬಾರಿ ಜನ್ಮಯೆತ್ತು ವಿಯಂತೆ ಶರಣು ಕರುಣಾಮಯ 9 ಕನ್ನಡಕೆ ಮುಳ್ಳು ಕುವರ ನೀಮುದ್ದು ಆಹ ಶರ್ಕರಾಕ್ಷಸಗೋಸ್ಥ ಅನುಸಂಧಾನ ಕ್ರಮ ಸು ನೀಕವಡಗಿಸಿ ಕವನ ಕಡಲೊಳು ಸಾಕಿಹೆ ಹರಿ ಭಕ್ತಸಂಘವ ಹಿರಿಯ ದಾಸರ ಪಥವನನುಸರಿಸಿ ಶಕ್ತನಾವನು ಗುಣಿಸೆ ನಿನ್ನುಪಕಾರ ಜಗಕೆ 10 ಸಣ್ಣವನು ನಾ ನಿನ್ನು ಗುರುವೇ-ನಿನ್ನವ ಸತ್ಯ ಮನ್ಮನ ಪ್ರಭುವೆ ಮನ್ನಿಸಪರಾಧ ಕಲ್ಪ ಧ್ರುಮವೆ-ಚಿಣ್ಣರ ಸಲಹೆ ಪಿತಗೆ ಶ್ರಮವೆ ಆಹ ಘನ್ನ ಜಯತೀರ್ಥ ವಾಯ್ವಂತರ್ಗತ ಶ್ರೀ ಕೃಷ್ಣವಿಠಲ ತದ್ವನನೆಂದು ಭಜಿಸುವ ಭಾಗ್ಯ ಜನ್ಮಜನ್ಮಂತರ ಕೊಟ್ಟು ಕಾಪಾಡುವಂಥ ನಿನ್ನಭಯಕರವೆನ್ನ ಶಿರದಲಿಡುವಲಿ ಸತತ 11
--------------
ಕೃಷ್ಣವಿಠಲದಾಸರು
ಜಗನ್ನಿವಾಸ ಜಾನಕೀರಮಣ ಪ ಅಗಣಿತ ಚರಿತಾನಂದ ಮುಕುಂದಾ 1 ಶಂಕ ಚಕ್ರ ಗದ ಶಾಙ್ರ್ಞಪಾಣಿ ಪಂಕಜೋದರ ಪಾಲಕ ಪಾವನ 2 ಗಮನ ಕರಿವರದ ಗೋವಿಂದ ಪರಮಾತ್ಮಾ ಪರಬ್ರಹ್ಮ ಪರಮಾನಂದಾ 3 ವಾರಿಧಿ ಬಂಧನ ನೀರಜನಯನ ವಾರಿಜೋದ್ಭವ ಪಿತ ವಸುದೇವನಂದನ 4 ಸ್ವಾಮಿ ಪರಂಧಾಮ ಸರ್ವ ರಕ್ಷಕ ಹರಿ 5
--------------
ಹೆನ್ನೆರಂಗದಾಸರು
ಜನನ ಮರಣ ಎರಡು ಇಲ್ಲವೊ ತಾ ತಿಳಿದ ಮೇಲೆ ಪ ಮನದೊಳಿರುವ ಮಮತೆ ಅಳಿದು ಘನವಿವೇಕವಾಗಿ ಕಾಣುವ ಇನಕುಲೇಶನನ್ನು ಬಿಡದೆಅನುರಾಗದೊಳು ಭಜಿಸಿದವಗೆ ಅ.ಪ ಆರುಮೂರು ಮೀರಿ ನೋಡೆಲೈ ಅಲ್ಲಿರುವ ತಾರಕದಾರಿ ಪ್ರಣವ ಸಾರುತಿದೆ ನೋಡೈ ಘೋರ ಕತ್ತಲೆಯನರಿದು ಮಾರಜನಕನನ್ನು ನೆನೆದು ಏರಿ ಶಿಖರದೊಳಗೆಯಿರುವ ತೇರು ಕಂಡುಬಂದಬಳಿಕ 1 ದಾನವಾರಿಯನ್ನು ಕಾಣೆಲೊ ಶ್ರೀಪರಮ ಚರಿತ ಗಾನಲೋಲನನ್ನು ಕಾಣೆಲೈ ಭಾನುಕೋಟಿರೂಪನಹುದು ಗುರುವು ತುಲಸಿರಾಮದಾಸ ದೀನರಕ್ಷಕನೆಂದು ಭಜನೆ ಮಾಡಿಕೊಂಡು ಬಂದಬಳಿಕ 2
--------------
ಚನ್ನಪಟ್ಟಣದ ಅಹೋಬಲದಾಸರು
ಜನನಿ ಬ್ರಹ್ಮಾಣಿಯೆ | ವರ ವೀಣಾಪಾಣಿಯೆ || ಜನನಿ ಬ್ರಹ್ಮಾಣಿಯೆ ಪ. ಕರುಣಿಯೆ | ಫಣಿವೇಣಿಯೆ || ಬಾ ಬಾ ಶುಕವಾಣೀ | ಜನನೀ ಬ್ರಹ್ಮಾಣಿಯೆ 1 ದೋರುತೆ ವರಗಳೀಯುತೆ | ಬಾ ಬಾ ಗೀರ್ವಾಣೀ ಜನನಿ ಬ್ರಹ್ಮಾಣಿಯೆ 2 ವಿಮಲಚರಿತೆಯೆ || ಬಾ ಬಾ ವಾಗ್ವಾಣೀ | ಜನನಿ ಬ್ರಹ್ಮಾಣಿಯೆ 3
--------------
ವೆಂಕಟ್‍ರಾವ್
ಜಯ ಜಯ ಶ್ರೀಹರಿಪ್ರಿಯೆ ಜಯಕ್ಷೀರಾಂಬುಧಿತನಯೇ ಜಯ ಜಯ ಕೋಮಲಕಾಯೆ ಬಿಡದೆನ್ನನು ಕಾಯೆ ಪ ಜಯ ರತ್ನಾಕರ ತನಯೆ ಕುರುಕರುಣಾಮಯಿ ಸದಯೆ ಹರಿ ವಕ್ಷ ಸ್ಥಳ ನಿಲಯೆ ಸುರಮುಖಗೇಯೆ 1 ಜಯ ಜಯ ಪಾವನ ಚರಿತೆ ಜಯಚತುರಾನನ ಮಾತೆ ಜಯ ಭಕುತಾಭಯ ದಾತೆ ನಮಿಸುವೆ ಭೂಜಾತೆ 2 ಜಯ ಜಯ ಕಾರ್ಪರ ಸದನೆ ಜಯನರಸಿಂಹನ ರಾಣಿ ಸುರಸಂಶೇವಿತಚರಣೆ ಪಾಹಿಜಗಜ್ಜನನಿ 3
--------------
ಕಾರ್ಪರ ನರಹರಿದಾಸರು
ಜಯ ಜಾನಕೀಪ್ರಿಯ ರಾಘವ ಜಯ ಪಾವನ ಚರಣಾ ಪ ಜಯ ದಾನವಭಯ ತಾರಣ ಜಯ ಭವಸಾಗರ ತರಣಾ ಅ.ಪ ಸೇವ್ಯ ಚರಣ ದಾನವ ಕುಲ ಹರಣಾ ಚಾರು ಚರಿತ ಮಾರಜನಕ ಸಾಗರಜಾ ರವiಣಾ 1 ಸುರುಚಿರ ಮಣಿಗಣ ವಿತರಣ ಸುರನಾಯಕ ಶರಣಾ ಉರಗಶಯನ ಮರಕತ ಮಾಂ ಗಿರಿನಾಯಕ ಕರುಣಾ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜಯಕೃಷ್ಣ ಜಗದೀಶ ಜಯ ಶಶಿಕುಲಾಧೀಶ ಜಯವಿನುತ ವಾಣೀಶ ಜಯ ರುಕ್ಮಿಣೀಶ |ಜಯಜಯ ಪ ಕಮಲಭವನುತಿಪಾತ್ರ ಕಮಲಸಖನಿಭಗಾತ್ರ ಕಮಲರಿಪು ಸಮವಸ್ತ್ರ ಕಮಲದಳ ನೇತ್ರ ಕಮಲ ಕರಧೃತಗೋತ್ರ ಕಮನೀಯ ಸುಚರಿತ್ರ ಕಮಲಾರಿ ಧರ ಮಿತ್ರ ಕಮಲಾಕಳತ್ರ 1 ನವನೀತ ದಧಿ ಚೋರ ಸುಂದರೀ ಕುಲಜಾರ ಸ್ಮರಸಮರ ಶೂರ ಕಂದರ್ಪಸಹಕಾರ ಕಾಮಿನೀ ಪರಿವಾರ ಬೃಂದಾವನ ವಿಹಾರ ಭಕ್ತ ಮಂದಾರ 2 ಧರಣೀ ಧರಾಸ್ಫಾಲ ದಮನಕರ ನಿಜಲೀಲ ನರಪೌತ್ರ ಪರಿಪಾಲ ನವ್ಯ ವನಮಾಲಾ ಮುರನರಕ ಶಿಶುಪಾಲ ಮುಖದನುಜ ಕುಲ ಕಾಲ ವರವ್ಯಾಘ್ರಗಿರಿಲೋಲ ವರದಾರ್ಯವಿಠಲಾ 3
--------------
ಸರಗೂರು ವೆಂಕಟವರದಾರ್ಯರು
ಜಯದೇವ ಜಯದೇವ ಜಯಜಯ ಹನುಮಂತಾ | ದಯದೊಲವಿಂದಲಿ ಸಲಹು ಜಯ ಕೀರುತಿವಂತ ಪ ಅಂಜನೆ ಉದರದಿ ಬಂದು ಮೌಂಜೀಬಂಧನದಿ | ಕಂಜ ಸಖನ ಮಂಡಲ ತುಡಕಲು ಹವಣಿಸಿದಿ | ಭಂಜನೆ ಇಲ್ಲದೆ ರಾಮರ ಸೇವೆಗೆ ತತ್ಪರದಿ | ರಂಜಿಸುವಂದದಿ ಮಾಡಿದೆ ಇಳೆಯೊಳು ತನುಮನದಿ 1 ರಘುಪತಿ ಮುದ್ರೆಯ ಕೊಂಡು ಸಾಗರ ಲಂಘಿಸಿದೆ| ಭುಕುತಿಲಿ ಜಾನಕಿದೇವಿಗೆ ಅರ್ಪಿಸಿ ಕೈಮುಗಿದೆ | ಯಕುತಿಲಿ ವನವನೆ ಕಿತ್ತಿ ಲಂಕೆಯ ಸದೆಬಡಿದೆ| ಮಗುಳೆ ಪ್ರತಾಪದಿ ಬಂದು ಅಜಪದವಿಯ ಪಡೆದೆ 2 ಮೂರವತಾರ ನೀ ಆಗಿ ಪರಿಪರಿ ಚರಿತೆಯನು | ದೋರಿದೆ ಜಗದೊಳು ಅನುಪಮ ಹರಿಪ್ರಿಯನಾದವನು | ಚಾರು ಭಕ್ತೀಭಾವ ಪ್ರೇಮವ ಕಂಡವನು | ಅನುದಿನ ಮಹೀಪತಿನಂದನು ನಿಮ್ಮವನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯಮಂಗಳಂ ಶುಭೋದಯ ಮಂಗಳಂ ಜಯ ಕಕುದ್ಗಿರಿ ಗಂಗಾಧರ ಲಿಂಗಗೆ ಪ ಜಡೆಯುಡುಪತಿಯು ಗಂಗೆಯೊಡಗೂಡ್ದ ಮಸ್ತಕಕೆ ಮಡುಹಿ ಮಾರನ ಭಸಿತದಾಳ್ದ ಪಣೆಗೆ ಪೆಡೆಯೆತ್ತಿ ಗಾನಗೈವಹಿ ಕುಂಡಲಂಗಳಿಗೆ ದೃಢಭಕತರಿಷ್ಟದಾಯಕ ಶಿವನಿಗೆ 1 ಸೋಮಸೂರ್ಯಾಗ್ನಿ ಲೋಚನೆಗೆ ವಿಷದಾಳಿ ಸುರ ಸ್ತೋಮವನು ಕಾಯ್ದ ಶೋಭನ ಕಂಠಕೆ ಭೀಮನಿಗೆ ಭಯಹರಗೆ ಪರಶುಮೃಗ ಹಸ್ತನಿಗೆ ಕಾಮಿತಾರ್ಥದ ವರಾಭಯ ಕರನಿಗೆ 2 ನಾಗಕಂಕಣಧರಗೆ ನಾಗೋತ್ತರೀಯನಿಗೆ ನಾಗಯಜ್ಞೋಪವೀತವ ತಾಳ್ದಗೆ ನಾಗಚರ್ಮಾಂಬರಗೆ ನಗರಾಜ ಚಾಪನಿಗೆ ಗಮನ ಬಾಣಗೆ ಶಿವನಿಗೆ 3 ಗಿರಿಜೆಗರ್ಧಾಂಗವನ್ನಿತ್ತ ಶುಭವಿಗ್ರಹಗೆ ವರ ವೃಷಭವನ್ನೇರಿ ಸಂಚರಿಪಗೆ ಬರೆದುಂಗುಟದಿ ಹೊಳೆದ ಚಕ್ರದಿಂ ದೈತ್ಯಕುಲ ಹರಣ ವರದಾಯಕಗೆ ಸರ್ವೆಶಗೆ 4 ತಿರುಪತಿಯ ವಾಸವನು ದೃಢಗೈದು ಕಕುದ್ಗಿರಿಯ ಪರಮ ಕ್ಷೇತ್ರದಿ ಮಹಿಮೆಗಳ ತೋರ್ಪಗೆ ವರದ ವೆಂಕಟಪತಿಗೆ ಗಂಗಾಧರೇಶ್ವರಗೆ ಶರಣಾಗತರ ಕಾಯ್ವ ಸಾಂಬಶಿವಗೆ 5
--------------
ತಿಮ್ಮಪ್ಪದಾಸರು
ಜಯರಘುರಾಮಾ | ಸದ್ಗುಣ ಧಾಮಾ | ದಯದಾಗರ ಘನಶಾಮಾ ಪ ಜಯರಘರುರಾಮಾ | ಸದ್ಗುಣ ಧಾಮಾ ದಯದಾಗರ ಘನ ಶಾಮಾ | ಭಯಹರನೇಮಾ ರಣನಿಸ್ಸೀಮಾ | ತ್ರಯಂಬಕ ವಿಶ್ರಾಮಾ | ಪ್ರಿಯಕರ ನಾಮಾ ಪೂರಿತ ಕಾಮಾ | ಶ್ರಯಸುದಾಯಕ ಮಹಿಮಾ 1 ಸುರಸಹಕಾರ ಇನಕುಲೋದ್ದಾರಾ | ಧರಣೀಸುತೆ ಮನೋಹಾರಾ | ಶರಯುತೀರಾಯೋಧ್ಯ ವಿಹಾರಾ | ಚರಿತಪಾರಾ ವಾರಾ | ಪರಮೋದಾರಾ ಸರ್ವಾಧಾರಾ | ದುರತಾವಳಿವಿದಾರಾ 2 ವನರುಹಾಸನ ವಂದಿತಚರಣಾ | ಜನನಿ ಕೌಶಲ್ಯಾ ನಿಧಾನಾ | ಅಣುರೇಣು ಜೀವನಾ ವ್ಯಾಪಕಪೂರ್ಣ | ಕನಕಾಂಬರ ಭೂಷಣ | ಮುನಿಜನ ರಂಜನಾ ದೈತ್ಯವಿಭಂಜನಾ | ಮಹಿಪತಿ ನಂದನ ಪ್ರಾಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯಾ ಜಯಾ ಪ ಈ ಮುದ್ದುಮುಖವೊ ಮತ್ತೆ ತನುವಿನ ಕಾಂತಿ ಈ ಬಿಲ್ಲು ಈ ಬಾಣ ನಿಂತಭಾವ 1 ಬಂಟ ಈ ಭಾಗ್ಯ ಆವ ದೇವರಿಗುಂಟು ಮೂಲೋಕದೊಳಗೆ 2 ಜಯ ಇನಕುಲೋದ್ಧರಣ ಜಯ ಮುನಿಕೃತ ಶರಣ ಜಯ ದನುಜವಿದಾರಣ ಜಯ ತಮಹರಣ 3 ಧರೆಯೊಳತಿಭಾರವನು ಇಳುಹಿ ಕಮಲಜ ಮುಖ್ಯ ಸುರರ ಮೊರೆಯನು ಕೇಳ್ದು ನರರೂಪ ತಾಳ್ದು 4 ದಶರಥನ ಗರ್ಭದಲಿ ಜನಿಸಿ ಮುನ್ನ ಮುನಿ ಮನೋರಥ ಕಾಯಿದ ಪುಣ್ಯಚರಿತ್ರ5 ಅಸುರರನು ಅಳಿದು ಅಹಲ್ಯಳಿಗಿತ್ತ ವರವಿತ್ತು ಮಿಥಿಳ ಪುರದಿ ಹರನ ಧನುವನುರೆ ಮುರಿದು 6 ಅತುಳ ಬಲದಲಿ ಸೀತೆಯ ಒಲಿಸಿದ ಭಾರ್ಗವ ಮ- ಹಿತÀಳ ಬಲವಂತ ದೇವೋತ್ತುಂಗ ಜಯತು 7 ಭರದಿಂದಲಯೋಧ್ಯಾಪುರವನು ಶೃಂಗರಿಸೆ ಹರುಷತನದಲಿ ರಾಮಗರಸುತನವೆನಲು 8 ಕಿರಿಯ ಮಾತೆಯು ಬಂದು ಭರತನಿಗೆ ಪಟ್ಟವೆನೆ ಸಿರಿಸಹಿತ ಹೊರಹೊಂಟ ಕರುಣಾಳು ಜಯತು 9 ಅನುಜ ಅವನಿಜೆ ಸಹಿತ ವನವಾಸವ ಮಾಡಿ ವನಜಾಕ್ಷ ಪತಿಯಾಗೆಂದು ರಾಕ್ಷಸಿಯು ಬರಲು 10 ಅನುವಾಯಿತೆಂದು ನಾಸಿಕವ ಹರಿದು ಭಂಗಿಸಿದೆ ಬಿನುಗು ಹೊಮ್ಮøಗವೆಚ್ಚ ಘನಮಹಿಮ ಜಯತು 11 ಜಕ್ಕಿದ ವಾಲಿಯನು ಕೊಂದು ಕುಲಸೈನ್ಯ ಸಹವಾಗಿ ನಿಲ್ಲದೆ ಸೇತುವೆಗಟ್ಟಿ ಅಸುರರೊಡಗೂಡಿ 12 ಖುಲ್ಲ ದಾನವ ಕುಂಭಕರ್ಣ ರಣಮುಟ್ಟಿ ಎಲ್ಲರನು ತರಿದಂಥ ಬಲ್ಲಿದನೆ ಜಯತು 13 ದÉೀವಕ್ಕಳು ಹರುಷದಲ್ಲಿ ಪೂಮಳೆಗರೆಯೆ ಭೂಮಿಜೆಯ ಸಹಿತ ಸೌಮಿತ್ರಿಯೊಡಗೂಡಿ 14 ಕ್ಷೇಮದಿಂದಯೋಧ್ಯಪುರದಿ ಸುಖದಲ್ಲಿರ್ದ ಸ್ವಾಮಿ ಶ್ರೀಹಯವದನ ರಘುಕುಲತಿಲಕನಲ್ಲವೆ 15
--------------
ವಾದಿರಾಜ
ಜರಿಯಬೇಡ ಹರಿಯ ಮರೆಯಬೇಡೆಂದೆಂದು |ತಿರಿಯಬೇಡ ಖಳರ ಮನೆಗೆ ಪೋಗಿ ||ಪ||ಒರೆಯಬೇಡನ್ಯರಿಗೆ ರಹಸ್ಯ ತತ್ವಗಳನು |ಬೆರೆಯಬೇಡ ಪರರ ಸತಿಯ ಸ್ವಪ್ನದಲೂ ||ಅ|| ||ಪ|| ಮೂಕವಾರ್ತೆಯ ನಿನ್ನ ಕಿವಿಗೆ ಕೇಳಿಸಬೇಡ |ಶ್ರೀಕಾಂತ ಚರಿತೆಯನು ಕೇಳದಿರಬೇಡ |ಪಾಕವನು ಮಾಡಿ ಏಕಾಂಗಿಯಾಗುಣಬೇಡ|ಭೂಕಾಂತರನುಸರಿಸಿ ಬೆಸಗೊಳ್ಳಬೇಡ || ಪಂಡಿತರು ಪಾಮರರು ಆರಿಗಾದರೂ ನಿನ್ನ |ಕಂಡವರಿಗೆಲ್ಲ ಕೌತುಕವು ತೋರಿದರೂ |ಹೆಂಡಿರು ಮಕ್ಕಳು ಅಳಿಯ ಸೋಸೆ ಮೊಮ್ಮಕ್ಕಳು |ಉಂಡುಟ್ಟು, ದ್ವಿಜರು ಸಹ ಗಂಡುಗಲಿಯಾದರೂ|| ಮಂದಮತಿಗಳ ಕೂಡೆ ಮಾತಾಡಲಿ ಬೇಡ |ನಿಂದಕರ ಕಣ್ಣೆತ್ತಿ ನೋಡಬೇಡ |ಇಂದಿರೆಯರಸ ಶ್ರೀ ವಿಜಯ ವಿಠಲರ ಚರಣ|ದ್ವಂದ್ವದಲಿ ಮಸ್ತಕವನಿಡದಿರಬೇಡ ||
--------------
ವಿಜಯದಾಸ
ಜಾಗರ ಮಾಡಿದೆನೇ ಪ ಜಾಗರ ಮಾಡಿದೆ ಸಾಗರನಿಲಯನ ನೀಗದಮಹಿಮೆ ಶಿವ ಯೋಗದಿ ತಿಳಿಸೆಂದು ಅ.ಪ ಲಕ್ಷಪತ್ರರ್ಪಿಸಿ ತ್ರಿಜಗದ್ರಕ್ಷ ನಿನಗೆ ನಮಿಸಿ ಲಕ್ಷದಿಂದ ಸತಿಗಕ್ಷಯವಿತ್ತ ಭಕ್ತ ಪಕ್ಷನ ನಾಮ ಎನ್ನ ಕುಕ್ಷಿಗೆ ನೀಡೆಂದು 1 ಮನವನು ಮಡಿಮಾಡಿ ಹರಹರ ನಿನಗೆ ನಾ ಎಡೆಮಾಡಿ ಮನಸಿಜಜನಕನ ಘನಸಚ್ಚರಿತೆಯನ್ನು ಕೊನೆಯ ನಾಲಗೆ ಮೇಲೆ ನೆನವು ಸ್ಥಾಪಿಸೆಂದು 2 ಪ್ರೇಮ ದೃಷ್ಟಿ ತೆರೆದು ಶಂಭು ಎನ್ನ ಕಾಮಿತಗಳ ಕಡಿದು ಭೂಮಿಗಧಿಕ ಮಮಸ್ವಾಮಿ ಶ್ರೀರಾಮನ ಕೋಮಲ ಪಾದವೆನ್ನ ಮಂಡೆಮೇಲ್ಹೊರಿಸೆಂದು 3
--------------
ರಾಮದಾಸರು