ಒಟ್ಟು 1320 ಕಡೆಗಳಲ್ಲಿ , 98 ದಾಸರು , 1038 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡಿದೆನು ತಿರುವೆಂಗಳೇಶನಾ ಮಾಡಿದೆನು ಭಕುತಿಯಲಿ ವಂದನೆ ಬೇಡಿದೆನು ಕೊಂಡಾಡಿ ವರಗಳ ನಾಡೊಳಗೆ ಈಡಿಲ್ಲದಪ್ಪನಾ ಪ ಘನಸುಂದರ ಜ್ಞಾನ ತೀರ್ಥ ಆನಂದ ಧನ ವರಹಾ ವೈರಾಗ್ಯನಿಲಿ ರ ತುನ ಚಂದ್ರಮ ವರಧÀರ್ಮ ನಾರಾ ಯಣ ಭಕುತಿ ಶ್ರೀಕಾಂತಿ ಬ್ರಹ್ಮಾ ರುಣ ವೃಷಭ ಶ್ರುತಿ ಗರುಡ ಸರ್ಪ ಜನತ ಪೂಜಿಪ ಸುರ ಸುಧಾನಂತ ಇನಿತು ಪೆಸರುಳ್ಳ ಪುಷ್ಕರಾದ್ರಿಯಾ1 ಖಗನ ಪೆಗಲಲಿ ನಗವ ತಂದ ಜಗದೊಳು ಸುವರ್ಣಮುಖರಿ ನಿ ಮ್ನಗ ತೀರದಲಿ ಸ್ಥಾಪಿಸಿದ ಸುತ್ತಲು ಝಗಝಗಿಸುದೆ ನೋಳ್ಪ ಜನರಿಗೆ ಹಿಮ್ಮೊಗವಾಗಿ ಪೋದವು ಯುಗ ಯುಗ ಕಥಾಭೇದ ಬಗೆಬಗೆ ಪೊಗಳಿದರೆ ನೆಲೆಗಾಣೆ ಅನುದಿನಾ 2 ಸರಸ್ವತಿಗೆ ಮುನಿಯಿಂದ ಶಾಪವು ಬರಲು ಭರದಲಿ ಬಂದು ವಿರಜಾ ಸರತಿಯೊಳು ಬೆರಸಿದಳ್ ತಪದಲಿ ಹರಿಯ ಕರುಣವ ಪಡೆದು ಪ್ರತಿದಿನ ಸ್ಮರಸಿದವರಿಗೆ ಪುಣ್ಯವೀವುತ ಸರುವ ಸರೋವರಧಿಕವೆನಿಪ ಸುಂ ದರ ಸ್ವಾಮಿ ಪುಷ್ಕರಣಿಯನು ತ್ರಿ ಕರಣ ಬಲು ಒಂದಾಗಿಬಿಡದಲೆ 3 ಎರಡೈದು ಪ್ರಾಕಾರ ಗೋಪುರಾ ಎರಡೈದು ದ್ವಾರಗಳು ಕಟ್ಟಿದಾ ಮಕರ ತೋರಣ ಧರೆಗೆ ಮಟ್ಟಿದ ಎಡಬಲದ ಪೂ ಸರಗಳೊಪ್ಪಲು ದ್ವಾರಪಾಲಕರಿ ರುತಿಪ್ಪರಲ್ಲೆಲ್ಲಿ ಕಾವುತಾ ನಿಕರ ತುಂಬಿರೆ ಪರಿಪರಿಯ ಮಂಟಪಗಳಿಂದಾ 4 ಭಂಗರಹಿತ ಬಂಗಾರಮಯವಾದಾ ತುಂಗ ಆನಂದ ನಿಲಯ ವಿಮಾನಾ ಕಂಗಗಳಿಗೆ ಬಲು ತೇಜಿಃಪುಂಜದಿ ಹಿಂಗದಲೆ ಗೋಚರಿಸುತದೆ ನರ ಸಿಂಗ ಮೂತ್ರ್ಯಾದಿಗಳು ಪ್ರಾಣ ಭು ಜಂಗಧರಾದಿ ದಿಕ್ಪಾಲರೆಲ್ಲರು ಸಂಗ ಮತಿಯಲಿ ವಾಸವಾಗಿರೆ ಮಂಗಳಾಂಗ ಪ್ರಿಯಾಂಗ ಪ್ರಿಯನಾ 5 ಮುಕ್ತಿ ಬೀದಿಗಳೆರಡು ವಿ ರಕ್ತಿ ಜ್ಞಾನ ಸತ್ಕರ್ಮ ಬಲು ದೃಢ ಭಕ್ತಿಯೋಗವು ಯಾವ ತ್ಯಾಗ ಸಂ ವ್ಯಕ್ತ ರಾಗವು ಈಪರಿ ಸು ಉಕ್ತಿ ದ್ವಾದಶ ಸಾಲ ಬೀದಿಗ ಳುಕ್ತ ಜನ ಸಂಚರಿಸುತ್ತಿಪ್ಪರು ಶಕ್ತನೊಬ್ಬನೆ ಜಗದೊಳೀತನೆ ವ್ಯಕ್ತ ಅವ್ಯಕ್ತದಲಿ ಚಿತ್ರವಾ 6 ಲೋಕೇಶ ಲೋಕಪಾಲಕರು ಖಗ ಕಾಕೋದರ ಗಂಧರ್ವ ಸನಕಾದಿ ಲೋಕ ಚಕ್ಷು ಸೀತಾಂಶು ಉದಿಸಿದರು ಏಕಾಂತನು ವಾಯುನಂದನ ಪಾಕಶಾಸನ ಸೌಮ್ಯ ಗುರು ಕವಿ ನಾಕಜನ ಮಿಗಿಲಾದ ಭಕ್ತರು ಏಕಗುಣವಾರಂಭಿಸಿ ಅ ನೇಕ ಗುಣದಲಿ ಭಜಿಸುತಿಪ್ಪುದಾ7 ಸಾರಿದರೆ ನೆಲೆದೋರದು ಕಂ ಸಾರಿ ಚಿನ್ಮಯ ಲೀಲೆಗೆ ಮತ್ತಾರಾದರು ಗಣ್ಯಮಾಳ್ಪರೆ ಧಾರುಣಿಲಿ ಮಧ್ಯದಲಿದಕೆ ಎ ದಿರುಗಾಣೆನು ಎಲ್ಲಿ ಚರಿಸಲು ಮಾರುತನು ತಾನೊಬ್ಬ ಬಲ್ಲ ವಿ ಸ್ತಾರವಿದರ ವಿಚಾರ ಮತಿಯಲಿ8 ಧೀರ ಜಗದೋದ್ಧಾರ ರಿಪು ಸಂ ಹಾರ ನಾನಾವತಾರ ನವನೀತ ಜಾರ ಶಿರೋಮಣಿ ಶ್ರೀ ನಾರಿಯರರಸನೆ ತಾ ಭಕ್ತ ಚ ಕೋರ ಚಂದ್ರಮ ಪೂರ್ಣ ಸುಂದರ ಸಾರ ಭವಾರ್ಣವತಾರ ಕಾರಣ ವೀರ ವಿತರಣ ಶೂರನೆನಿಪನ್ನ ದ್ವಾರದಲಿ ಬಂದು ಸ್ತುತಿಸಿದೆನು ನಿಂದೂ 9 ಈ ವೈಲಕ್ಷಣವುಳ್ಳ ದೊರೆತನ ಈ ವೈಭವ ಸರ್ವೋತ್ತಮನೆಂಬದು ಈ ವೈಭೋಗ ಸಾಕಲ್ಯವಾಗಿದೆ ಈ ವೈಯಾರವು ಈತಗಲ್ಲದೆ ಈ ವೈಕುಂಠನ ನೋಡುವುದು ಮಹಾ ಈ ವೈದಿಕದ ಭಾಗ್ಯಕ್ಕೆಣೆಯೆ ಈ ವೈಧಾತ್ರಿಗೆಯಿವನು ಪೇಳಿದ ಈ ವೈಚಿತ್ರವ ಕೇಳಿ ಮನದಲಿ 10 ರನ್ನಮಯ ಕಿರೀಟ ಕುಂಡಲ ಕರ್ಣ ಕಸ್ತೂರಿನಾಮ ಪಣೆಯಲಿ ಕೆನ್ನೆ ಚಂಪಕ ನಾಸದಂತ ಪ್ರ ಸನ್ನ ವದನಾಂಭೋಜಲೋಚನಾ ಚಿನ್ನಸರ ಉಡುದಾರ ಸರಿಗೆ ಮೋ ಹನ್ನ ಪೀತಾಂಬರ ನೂಪುರಗೆಜ್ಜೆ ಸನ್ನಿಧಿಗೆ ನಡೆತಂದು ದೇವವರೇ ಣ್ಯನಂಘ್ರಿಯ ನೆನೆದೆ ಚೆನ್ನಾಗಿ 11 ಮೆರೆವ ಉತ್ಸವ ವಾಹನಂಗಳು ನೆರೆದ ಪ್ರಜೆದಟ್ಟಡಿಯಾಗಿದೆ ನೋಡಿ ಎರಡೊಂದು ವಿಧದವರುಯಿಲ್ಲಿಗೆ ಬರುವರೈ ಅವರವರ ತಕ್ಕದು ಹರಿಯ ಫಲವನು ಕೊಡುವನಿಲ್ಲದೆ ಅರಮರೆ ಇಲ್ಲಿದಕೆ ಎಂದಿಗು ಮೊರೆವ ನಾನಾ ವಾದ್ಯ ರಭಸ ವಿ ಸ್ತರಿಸ ಬಲ್ಲೆನೆ ನೂತನೂತನಾ 12 ರಥದ ಸಂಭ್ರಮವಾರು ಬಲ್ಲರು ಪ್ರತಿಗಾಣೆ ಈ ಪೃಥ್ವಿಯೊಳಗೆ ಅ ಪ್ರತಿ ಸಾಹಸಮಲ್ಲ ತನ್ನಯ ಸತಿಯೊಡನೆ ಪರುಠವಿಸಿ ಪೊಳೆವುತ್ತ ಚತುರ ಬೀದಿಯ ಸುತ್ತಿ ಸುಮನಸ ತತಿಯ ಸಂಗಡ ಬರುವ ಭರ ಉ ನ್ನತವ ಗುಣಿಸುತ್ತ ನಲಿನಲಿದು ಅ ಚ್ಯುತನ ಕ್ರೀಡೆಯ ಸ್ಮರಿಸಿ ನಮೋ ಎಂಬೆ13 ರಾಜರಾಜೇಶ್ವರ ನಿರಂತರ ರಾಜಿಸುತಿಪ್ಪ ಬಗೆಬಗೆ ಸಂಪೂಜೆಯಲಿ ರಾಜೋಪಚಾರದಿ ಮೂಜಗದೊಳು ಈ ನಿಧಿಯಲಿದ್ದ ಸೋಜಿಗವೆ ಮತ್ತೆಲ್ಲಿಯಿಲ್ಲವು ರಾಜಶೇಖರ ಬಲ್ಲವನೊಬ್ಬನೆ ಮಾಜದಲೆ ಸಜ್ಜನರು ಸತ್ಕರ್ಮ ಬೀಜಮಂದಿ ಮಾಡಿಬಿಡಲೆ 14 ದರ ಸುದರಶನ ಪಾಣಿ ತನ್ನ ಸಂ ದರುಶನವೆಮಗಿತ್ತು ಘನ ಆ ದರ ಪಾಲಿಸಿ ಸಂಚಿತಗಾಮಿ ಪಠಿಸಿ ಪ್ರಾರಬ್ಧವೇ ತೀರಿಸಿ ಕರುಣದಿಂದಲಿ ದಿವ್ಯರೂಪದ ಗುರುತು ತೋರುವ ಅಂತರಂಗದಿ ಪರಮಪಾವನ ವಿಜಯವಿಠ್ಠಲ ಪೊರೆವ ಪ್ರೀತಿಲಿ ಬಂದು ಮರಿಯದೆ15
--------------
ವಿಜಯದಾಸ
ನೋಡಿರೈ ಜನಾ ರಂಜನೆಯಲ್ಲಿ | ನೋಡಿರೈ ಜನಾ | ಮಾಡದೆ ಹಿರಿಗುರು ಭಕ್ತಿಯ ಶೀಲದಿ | ರೂಢಿಯ ಡಂಭಕ ಹರಿದಾಡುವದು ಪ ಸಾಧು ಸಂತರ ಮನೆಯಲ್ಲಿ | ಆದರವಿಲ್ಲಾ ಮನದಲ್ಲಿ | ಮೇದಿನಿಯಲಿ ನುಡಿಸಿದ್ಧಿಯ ಹೇಳಲು | ಸಾಧಿಸಿ ಹೋಗುತ ಬಾಗುತಲಿಹುದು 1 ಚಂದನವಿಡಿದು ತೆಯ್ವಲ್ಲಿ | ಒಂದು ಬಾರದು ನೊಣವಲ್ಲಿ | ಕುಂದದೆ ಎಂಜಲ ತೊಳೆವಾಸ್ಥಳದಲ್ಲಿ | ಸಂದಿಸಿ ಮುಕುರುವ ಸಂದಲಿ ಯಂದದಿ 2 ಪರಗತಿ ಸಾಧನ ವರಿಯರು | ಬರಿದೆ ಭ್ರಾಂತಿಗೆ ಬೆರೆವರು | ಗುರುಮಹಿಪತಿಸುತ ಪ್ರಭು ಕಲ್ಪತರು | ಸೇರದೆ ಬೊಬ್ಬುಲಿ ಮರಕೆಳಗಾಡುವ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡು ನೋಡು ನೋಡಯ್ಯ ರಂಗ ಮಾಡು ದಯ ಕರುಣಾಂತರಂಗ ಪ ಖೋಡಿಸಂಸಾರದ ಪೀಡೆಯ ಕಡೆಹಾ ಕರ ಭವಭಂಗ ಅ.ಪ ಮಡದಿಮಕ್ಕಳುಯೆಂಬ ಕಡುತೊಡರಿನ ಬಳ್ಳಿ ತೊಡರಿಕೊಂಡೆನ್ನನು ಕಡುವಿಧ ನೋಯಿಸುವುದೊಡೆಯನೆ ಕಡಿ ಗಡ1 ಸಜ್ಜಾಗಿಲ್ಲೊಲ್ಲೆ ನಾನು ಪ್ರಪಂಚವಿದು ಹೆಜ್ಜೆ ಹೆಜ್ಜೆಗೆ ಕಷ್ಟ ಗರ್ಜಲ್ಲೊರ್ಜಿಸು ಸುಜನರಜ್ಜನೆ 2 ಪ್ರೇಮದಿಂ ಕಂದನ ಪಾಮರಮನಸಿನ ಕಾಮಿತವಳುಕಿಸಿ ಕ್ಷೇಮವ ಪಾಲಿಸು ಸ್ವಾಮಿ ಶ್ರೀ ರಾಮನೆ 3
--------------
ರಾಮದಾಸರು
ನೋಡುವ ಬನ್ನಿ ಪೂಜೆ ಮಾಡುವ ಬನ್ನಿ | ಪಾಡಿ ನಲಿದಾಡುತಲಿ ಎನ್ನೊಡೆಯಾ ಲಿಂಗಗ ಪ ದೇಹ ದೇವಾಲಯದಲ್ಲಿ ಹೃದಯ ಜಲ ಹರಿಯಲಿ | ಊಹಿಸಿ ನೆಲೆಯಾಗಿ ಹೊಳೆವ ಆತ್ಮಲಿಂಗಗ 1 ಜ್ಞಾನದಭಿಷೇಕ ಸಮ್ಯಕ್ ಜ್ಞಾನದಾ ವಸ್ತ್ರ ನೀಡಿ | ಧ್ಯಾನದೀಪಾ ಸಂಚಿತದ ಧೂಪಾರತಿಯಾ ಲಿಂಗಗ 2 ಭಾವಭಕ್ತಿ ಗಂಧಾಕ್ಷತೆ ಸುಮನ ಪುಪ್ಪದಲಿಂದು ಅವಗು ಸುವಾಸನೆಯು ಪರಿಮಳ ಲಿಂಗಗ 3 ಘನ ಗುರು ಮಹಿಪತಿ ಸುತ ಪ್ರಭುಲಿಂಗಗ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡುವೆನು ನೋಡುವೆನು ತೋರಿಸುನಿಮ್ಮ ನೋಡುವೆ ಪ ಮದನ ಜನಕನೊಳು ಕದನ ಮಾಡಿದ ದು-ರ್ಯೋಧನನ ಶಿರದೊಳಿಟ್ಟ ಪದುಮ ಪಾದಗಳನು 1 ನೂರುಗಾವುದ ಜಲ ಹಾರುವಾಗಲೆ ದಿವ್ಯಭೂರುಹ ಕೆಡದಿಹ ಊರುಗಳನ್ನು ಸ್ವಾಮಿ 2 ಕೆಟ್ಟ ಬಕನ ಕೊಂದು ಅಷ್ಟು ಅನ್ನವನುಂಡಹೊಟ್ಟಿ ನೋಡುವೆ ದಿವ್ಯ ದೃಷ್ಟಿ ನೀಡಿರಿ ಸ್ವಾಮಿ 3 ಭೂಮಿ ಸುತೆಯ ವಾರ್ತೆ ರಾಮನು ಕೇಳಿದಾಪ್ರೇಮಾಲಿಂಗನವಿತ್ತ ಆ ಮಹಾವುರವನ್ನೆ 4 ಮದಗಜಗಳ ಕೂಡ ಕದನ ಮಾಡಿದ ದಿವ್ಯಗದೆಯ ಪಿಡಿದ ಕರವದು ಮಗಳನು ಸ್ವಾಮಿ5 ಅಜಗರ ನಹುಷನ ವಿಜಯ ಸಹೋದರ ಪದುಮನಾಭನ ಗುಣಮುದದಿ ಸಾರುತ ದೈತ್ಯ ಕದನಗೆಳೆದ ನಿನ್ನ ವದನಕಮಲವನ್ನು 6 ವೇದ ಶಾಸ್ತ್ರಗಳನ್ನು ಓದಿ ಹೇಳುತ ಶಿಷ್ಯಮೋದಗರೆವ ನಿನ್ನ ವಾಣಿ ಸ್ವಾದು ಕೇಳುವೆ ನಿನ್ನ 7 ಇಂದಿರೇಶನ ದಯದಿಂದ ಗೆಲಿದಿ ಇಪ್ಪ-ತ್ತೊಂದು ಮತವ ಆನಂದ ತೀರ್ಥರೆ ನಿಮ್ಮ 8
--------------
ಇಂದಿರೇಶರು
ನ್ಯಾಯದ ನುಡಿ ನರಲೀಲೆಗಿದು ಬಲ್ಲವರಲಿ ಸಲ್ಲದು ನ್ಯಾಯದ ನುಡಿ ನರಲೀಲೆಗಿದು ಪ. ಮಾಯಾತೀತ ಮನೋಭವತಾತ ಪ ರಾಯಣ ತವ ಗುಣ ನಾನೆಂತರಿವೆನು ಅ.ಪ. ಪಾದ ಶ್ರೀದ ಚೆಲುವೆ ರಮಾಕರನಳಿನಾಶ್ರಯಕರಮಾದ ಜಲಜಭವಾದಿ ಸುರಾಳಿಗಳರ್ಚಿಪ ಸುಲಲಿತ ತವ ಪದದೊಲವೆಂತರಿವೆನು 1 ಶರಣಾಗತಜನ ದುರಿತನಿವಾರಣ ನೀನು ಇನ್ನೇನು ತರುಣೀಮಣಿಯಳ ಸೆರೆಯನು ಬಿಡಿಸುವದಿನ್ನು ಕರುಣಾಕರ ನಿನ್ನ ಸ್ಮರಿಸುವಳನುದಿನ ಸ್ಥಿರಚರ ಜೀವಾಂತರ ಪರಿಪೂರ್ಣನೆ2 ಆಕ್ಷೇಪಿಸದಿರು ರಕ್ಷಿಸು ರಘುಕುಲಚಂದ್ರ ರಾಜೇಂದ್ರ ಲಕ್ಷ್ಮೀನಾರಾಯಣ ಸದ್ಗುಣ ಗಣಸಾಂದ್ರ ಈಕ್ಷಿಸು ಕರುಣಾಕಟಾಕ್ಷದಿ ಪೂರ್ವದ ಲಕ್ಷಣ ಹೊಂದಲಿ ಲಕ್ಷ್ಮಣಾಗ್ರಜನೆ3
--------------
ತುಪಾಕಿ ವೆಂಕಟರಮಣಾಚಾರ್ಯ
ಪಕ್ಷಿವಾಹನ ಸತ್ಯಭಾಮೆ ಸದನದ್ವಾರದಿ ನಿಂತು ಸದನದ್ವಾರದಿ ಮಿತ್ರೆ ಎನಗೆ ಕದವ ತೆಗೆಯೆ ಬರುವೆ ತೀವ್ರದಿ 1 ಸಾಕೊ ಸಾಕೊ ನಿನ್ನ ಸಂಗ ಯಾಕೊ ಕೃಷ್ಣನೆ ನಮಗಿನ್ಯಾಕೊ ಕೃಷ್ಣನೆ ಅ- ನೇಕ ಸ್ತ್ರೀಯರಿಂದ ರಮಿಸ್ಹೋಗಾದಿ ಪುರುಷನೆ 2 ವಾಕು ವಾಕು ತಿಳಿಯದೊ ವಿ- ವೇಕದಿಂದ ನಿಂತು ಪೇಳೆ ಮಾತುಯೆನ್ನೊಳು 3 ಎನ್ನ ಬಿಟ್ಟು ಅನ್ಯಸ್ತ್ರೀಯರ ಮನೆಗೆ ಪೋಗುವಿ ಸ್ತ್ರೀಯರ ಮನೆಗೆ ಪೋಗುವಿ ಘನ್ನ ಘಾತಕತನದಿಂದಿಲ್ಲಿಗಿನ್ನು ಬರುವರೆ 4 ನಿನ್ನ ಸರಿಯಸವತೇರೆನಗೆ ಸತಿಯರಲ್ಲವೆ 5 ಅತ್ತಸಾಗೊ ರುಕ್ಮಿಣಿ ಒಲವು ಚಿತ್ತವ್ಹಿಡಿಯದೆ ಆಕೆ ಚಿತ್ತವ್ಹಿಡಿಯದೆ ಲೆತ್ತಪಗಡೆನಾಡದ್ಹೀಗೆ ಇತ್ತ ಬರುವರೆ6 ಕಾಳಕತ್ತಲು ಪ್ರಳಯಜಲದಿ ಕಾದುಕೊಂಡೆನ್ನ ಇರುವೋಳು ಕಾದುಕೊಂಡೆನ್ನ ಆದಿಲಕ್ಷ್ಮಿ ಮುನಿದರೆನಗಿನ್ನಾ ್ಹ್ಯಗೆ ಭಾಮಿನಿ 7 ಜಾಂಬುವಂತೇರ್ಹಂಬಲಬಿಟ್ಟು ಬಂದ ಕಾರಣ ನೀನು ಬಂದ ಕಾರಣ ಆ- ನಂದ ಬಡಿಸುತವರ ಗೃಹದಲ್ ಹೊಂದಿಕೊಂಡಿರು 8 ಜಾಂಬುವಂತೇರಿಂದ ಬಂದ ನಿಂದ್ಯ ಕಳೆದನೆ ನಾ ಅಪನಿಂದ್ಯ ಕಳೆದೆನೆ ತಂದು ರತ್ನತೋರಿ ನಿನ್ನ ತಂದೆ ಭಾಮಿನಿ 9 ಕಮಲನಾಭ ಕಾಳಿಂದಿ ಕಳವಳಿಸುವಳೊ ಕಾಣದೆ ಕಳವಳಿಸುವಳೊ ಕಾಣದೆ ಕಾಲಕಳೆಯೊದ್ಯಾ ್ಹಗಿನ್ನಾಕೆ ಆಲಯಕೆ ಪೋಗೊ 10 ಭಾಳ ತಪಸಿಲ್ವಲಿಸಿ ಭಾರ್ಯಳಾದ ಬಗೆ ನೀ ಅರಿಯದೆ 11 ನೀಲವರ್ಣ ನೀಲಾದೇವಿ ನಿನ್ನ ಕಾಣದೆ ಇರುವಳು ನಿನ್ನ ಕಾಣದೆ ಗಮನ ನಿಲ್ಲದೆ ನೀ ಪೋಗೊ 12 ಸಪ್ತಗೂಳಿ ಕಟ್ಟಿ ನಾ ಸಮರ್ಥನೆನಿಸಿದೆ ಬಲು ಸಮರ್ಥನೆನಿಸಿದೆ ನೀಲ ನನಗೆ ಶ್ರೇಷ್ಠಳಲ್ಲವೆ 13 ಎದ್ದು ಪೋಗಾಕಿದ್ದಸ್ಥಳಕಿಲ್ಲಿರಲು ಸಲ್ಲವೊ 14 ಅರಸರಾಕೆ ಅಗ್ರಜರೈವರು ಕರೆಸಿ ಕೇಳೋರೆ ಎನ್ನ ಕರೆಸಿ ಕೇಳೋರೆ ಹೋಗಿ ಹರುಷ ಬಡಿಸದಿರಲು ಆಕೆನ್ನರಸಿ ಅಲ್ಲವೆ 15 ಆಕೆ ಸಿಟ್ಟಿಲಿಂದ ದೃಷ್ಟಿತೆಗೆದು ಎನ್ನ ನೋಡಳೆ 16 ನಿನಗೆ ಇಷ್ಟು ಕ್ರೋಧ ನಿಷ್ಠೂರ್ವಚನ ಬ್ಯಾಡೆ ಭಾಮಿನಿ 17 ಲಕ್ಷಣ ದೇವೇರಲ್ಲಿ ಭಾಳಾಪೇಕ್ಷವಲ್ಲವೆ18 ನಾನು ಲಕ್ಷಣೆಯನೆ ತಂದೆ ಕೇಳೆ ಸತ್ಯಭಾಮೆ ನೀ 19 ಹತ್ತು ಆರು ಸಾವಿರ-ಶತ ಪತ್ನೇರಿಲ್ಲವೆ ನಿನಗೆ ಪತ್ನೇರಿಲ್ಲವೆ ತಿರುಗಿ ಸುತ್ತಿ ಸುತ್ತಿ ಹಾದಿ ಹೀಗೆ ತಪ್ಪಿಬರುವರೆ 20 ದಾರಮನೆಗೆ ಹೋಗಲೆನ್ನ ದೂರು ಮಾಡೋರೇ ಹೀಗೆ ದೂರು ಮಾಡೋರೇ ಸ್ವಾಮಿ ಪಾರಿಜಾತಕೊಟ್ಟ ಸತಿಯಲ್ಲೊ ್ಹೀಗಿರೆಂಬರೆ 21 ಸರಸವಾಡದಿರೊ ಶ್ರೀರಮಣ ಅರಸೇರ್ಯಾತಕೊ ನಿನಗೆ ಅರಸೇರ್ಯಾತಕೊ ಹರುಷದಿಂದ ಎರಗದೆನ್ನ ಶಿರಸಿದ್ಯಾತಕೊ 22 ಶ್ರೀಶ ಎನ್ನ ಮನದಲಿರೊ ಭೀಮೇಶಕೃಷ್ಣನೆ ಇರೊ ಭೀಮೇಶಕೃಷ್ಣನೆ ನಿನ್ನ ವಿಲಾಸ ಬಯಸದಿರುವರ್ಯಾರೊ ಇಂದಿರೇಶನೆ 23
--------------
ಹರಪನಹಳ್ಳಿಭೀಮವ್ವ
ಪಂಚೀಕರಣಮಾಡಿ ತಾ ಸಂಚರಿಸುವ ಪ ಪಂಚೀಕರಣತಿಳಿಯದೆ ಪ್ರಪಂಚದೊಳು ಮುಳುಗಿ ನಾ ವಂಚಿತನಾದೆ ವಿರಿಂಚಿಭಕ್ತಿಗೆ ಅ.ಪ ಸಚ್ಚಿದಾನಂದ ರೂಪ ವ್ಯಾಪ್ತರೂಪಿ ನಾರಾಯಣ ಅಪ- ಅಚ್ಯುತ ತನ್ನಿಚ್ಛೆಯಿಂದ ವೈಕೃತಾಕಾಶಕ್ಕೆ ಅಂಭ್ರಣಿದೇವಿಯರನೆ ಮುಖ್ಯ ಮಾಡಿದಾ 1 ಗುಣರಾಶಿಯೊಳು ಸತ್ವಕ್ಕೆ ಶ್ರೀದೇವಿಯರು ಮುಖ್ಯ ರಜಕೆ ಭೂದೇವಿ ತಮಕೆ ದುರ್ಗಾದೇವೇರು ಸತ್ಯಜ್ಞಾನಾನಂದದಯೆ ಮೌನಪಂಚೇಂದ್ರಿಯ ಜಯ ಅಕ್ರೌರ್ಯಗುರು ಸೇವೆಯೇ ಸತ್ವಕಾರ್ಯವು2 ತಮಕ್ರೋಧ ಅಹಂಕಾರ ಮದೋನ್ಮಾದ ಚಪಲೋದ್ಯೋಗ ಡಂಭ ಸ್ವಚ್ಛಂದರಜದ ಕಾರ್ಯವು ತಮದ ಕಾರ್ಯ ಅಜ್ಞಾನ ಮೋಹ ನಿದ್ರಾಲಸ್ಯ ಬುದ್ಧಿಶೂನ್ಯ ತಾಪವಾದಿ ಹಿಂಸಾಕಾರ್ಯವು 3 ಸತ್ವಪ್ರಾಚುರ್ಯದಿ ಮದ ಗುಣತ್ರಯವೈಷಮ್ಯಹೊಂದಿ ಶ್ರೇಷ್ಠಕಾರ್ಯಕೆ ಮಹತ್ತತ್ವವಾಯಿತು ಸಾತ್ವತಾಂಪತಿಯ ಇಚ್ಛೆಯಿಂದ ಮಹತ್ತತ್ವದಿ ಅಹಂಕಾರ ತತ್ವವೆಂಬುದೇರ್ಪಟ್ಟಿತು 4 ತೈಜಸ ತಾಮಸ ಅಹಂಕಾರ ವೆನುತಲಿ ಮೂರಹಂ- ಕಾರದಿ ಮೂರು ರುದ್ರರೂಪಗಳು ಬ್ರಹ್ಮವಾಯು ಶೇಷರಿಂದುದಯಿಸಿದರು5 ವೈಕಾರಿಕ ಅಹಂಕಾರದಿ ದೇವತಾ ದೇಹ ಮನಸು ತೈಜಸದಿಂದ ದಶೇಂದ್ರಿಯ ಹುಟ್ಟಿತು ತಾಮಸಾಹಂಕಾರದಿಂದುತ್ಪನ್ನವಾದುವು6 ಸರ್ವ ಮಿಳಿತಮಾಡಿ ಬ್ರಹ್ಮಾಂಡವನೆ ಸೇರಿ ಹರಿಯು ಪದ್ಮನಾಭರೂಪದಿಂದ ಶಯನಗೈದನು ಸರ್ವಲೋಕೋದ್ಧಾರ ಹರಿಯು ನಾಭಿಯೊಳು ಪದ್ಮ ತೋರಿ ಪದುಮದಲ್ಲಿ ಪದ್ಮಸಂಭವನಾಸೃಜಿಸಿದ 7 ಸರ್ವರಂತರ್ಯಾಮಿ ಸಕಲಜೀವರನ್ನು ಸೃಷ್ಟಿಗೈಸಿ ಜೀವಯೋಗ್ಯತಾ ಕಾರ್ಯ ನಡೆಸುತಿರುವನು ಸರ್ವಜೀವಕಾರ್ಯವು ಪಂಚವಿಂಶತಿತತ್ವ ಈ- ಶರಿಂದಲೆ ಕಾರ್ಯನಡೆಯತಿರುವುದು8 ಶಬ್ದತನ್ಮಾತ್ರದಿಂದ ಆಕಾಶ ಹುಟ್ಟಿತು ವಾಯುಹುಟ್ಟಿತು ಸ್ಪರ್ಶತನ್ಮಾತ್ರದಿ ರೂಪತನ್ಮಾತ್ರದಿ ಅಗ್ನಿಭೂತ ಹುಟ್ಟಿತು ಆಗ ರಸತನ್ಮಾತ್ರದಿ ಅಷ್ಟು ಹುಟ್ಟಿತು 9 ಈ ಪರಿವಿರಾಟದಿಂದುಯಿಸಿದವು ಆಕಾಶ ಕೊಂದೆ ಶಬ್ದಗುಣವು ಮಾತ್ರ ಇರುವುದು ಅಹುದು ವಾಯವಿಗೆ ಶಬ್ದ ಸ್ಪರ್ಶವೆರಡುಗುಣಗಳು10 ತೋರುತಿರ್ಪುದಗ್ನಿ ಶಬ್ದಸ್ಪರ್ಶರೂಪ ಗುಣಗಳು ಗುಣ ಶಬ್ದ ಸ್ಪರ್ಶ ರೂಪ ರಸ ಗಂಧವೈದು ಪರಿ ಭೂತಪಂಚಕಗಳ ಅರಿವುದು 11 ಪಂಚಭೂತಗಳು ತಮ್ಮ ಸ್ವಾಂಶಗಳ ಭಾಗಗೈಸಿ ಪ್ರ- ಪಂಚ ಕಾರ್ಯಕಿತ್ತ ಪರಿಯದೆಂತೆನೆ ಆಕಾಶ ದರ್ಧಭಾಗ ಭೂತ ಪ್ರೇತ ಪಿಶಾಚಿಗಳಿಗೂ ಉಳಿ ಪಾದ ಪಾದವೆನ್ನೆ ಜೀವಕೋಟಿಗೂ12 ವಾಯು ತನ್ನರ್ಧಭಾಗ ಪಕ್ಷಿ ಪನ್ನಗಾದಿಳಿಗೂ ಪಾದ ಭಾಗ ಜೀವಕೋಟಿಗೂ ಅಗ್ನಿತನ್ನರ್ಧಭಾಗ ದೇವ ಋಷಿಗಳಿಗೂ ಮಿಕ್ಕಧರ್Àದೊಳ್ ಪಾದಭಾಗ ಜೀವಕೋಟಿಗೂ13 ಅಪ್ಪುತನ್ನರ್ಧಂಶ ಜಲಚರಪ್ರಾಣಿಗಳಿಗು ಮಿಕ್ಕರ್ಧದೊಳು ಪಾದಭಾಗ ಜೀವಕೋಟಿಗೂ ಪೃಥ್ವಿ ತನ್ನರ್ಧಂಶ ಜಡಜೀವಕೋಟಿಗೂ ಮಿಕ್ಕ ರ್ಧದೊಳ್ ಪಾದಭಾಗ ಜೀವಕೋಟಿಗೂ14 ಪೃಥ್ವಿ ಅಪ್ಪು ತೇಜೋ ವಾಯು ಆಕಾಶಗಳು ಸೂಕ್ಷ್ಮರೂಪದಿಂದೆರಡೆರಡಾದವು ಆಕಾಶತನ್ನರ್ಧಾಂಶದಲ್ಲಿ ವಾಯ್ವಗ್ನಿ ಅಪ್ಪು ಪೃಥ್ವಿಗಳಿ ಗೆ ಕೊಟ್ಟು ಸ್ವಾಂಶ ಅಂತಃಕರಣವೆನಿಸಿತು 15 ವಾಯು ಸ್ವಾಂಶದಿಂದುದಾನವೆಂದೆನಿಸಿ ಮಿಕ್ಕ ಪೃಥ್ವೈ ಪ್ತೇಜಾಕಾಶಗಳಿಗೆ ತನ್ನ ಚಲನ ಕೊಟ್ಟಿತು ಅಗ್ನಿ ತನ್ನಸ್ವಾಂಶದಿಂದ ಚಕ್ಷುಸೇಂದ್ರಿಯ ವೆನಿಸಿ ವಾಯ್ವಾಕಾಶಅಪ್ಪು ಪೃಥ್ವಿಗುಷ್ಣ ಕೊಟ್ಟಿತು 16 ಅಪ್ಪು ತನ್ನ ಸ್ವಾಂಶದಿಂ ರಸವೆಂದೆನಿಸಿ ಮಿಕ್ಕ ವಾಯ್ವಾಕಾಶಾಗ್ನಿ ಪೃಥ್ವಿಗೆ ದ್ರವವ ಕೊಟ್ಟಿತು ಪೃಥ್ವಿತನ್ನ ಸ್ವಾಂಶದಿಂ ಗಂಧವೆಂದೆನಿಸಿ ಮಿಕ್ಕ ಅಪ್ತೇಜವಾಯ್ವಾಕಾಶಕೆ ಕಠಿಣ ಕೊಟ್ಟಿತು 17 ಭೂತಪಂಚಕಗಳಿಗೆ ಸದ್ಯೋಜಾತ ವಾಮದೇವ ಅಘೋರ ತತ್ಪುರುಷ ಈಶಾನ ರೂಪವು ಅಧಿಷ್ಠಾನರಾಗಿ ಅವರಂತರ್ಯಾಮಿಯಾಗಿ ಅನಿರುದ್ಧಾದಿ ಐದು ಭಗವನ್ಮೂರ್ತಿ ಇರುವುದು 18 ನಾಮರೂಪ ವರ್ಣಗುಣ ಸ್ವಭಾವ ತೇಜ ಸುಮುಖ ದೇವರಶಕ್ತಿ ಅಕ್ಷರ ಕ್ರಿಯಾ ಎಂಬೀ ಹತ್ತು ಗುಣಗಳು ಭೂತ ಒಂದಕ್ಕೆ ತಿಳಿದು ಉಪಾಸನ ಮಾಳ್ಪಾದೂ ಬುಧರು ಎಲ್ಲರು 19 ನಾಮವೇ ಆಕಾಶ ರೂಪ ಒಟ್ಟು ಭಾವ ಬಯಲು ವರ್ಣ ಕಪ್ಪು ಗುಣಶಬ್ದ ಕ್ರಿಯ ಅನುಗ್ರಹ ಮುಖವೇ ಈಶಾನ ದೇವತೆ ಪರಶಿವಶಕ್ತಿ ಪರಾಶಕ್ತಿ ಅಕ್ಷರವೇ ನಾದವು20 ನಾಮ ವಾಯುರೂಪ ಷಟ್ಕೋಣ ವರ್ಣನೀಲ ಮುಖ ತತ್ಪುರುಷ ದೇವತೆ ಸದಾಶಿವ ಶಕ್ತಿ ಅಕ್ಷರ ಬಿಂದುವೆನಿಪುದು 21 ನಾಮ ಅಗ್ನಿರೂಪ ಮುಕ್ಕೋಣವರ್ಣ ರಕ್ತವರ್ಣ ಮುಖ ಅಘೋರ ದೇವತೆ ರುದ್ರಶಕ್ತಿ ಪಾರ್ವತಿ ಅಕ್ಷರ ಮಕಾರ 22 ನಾಮ ಅಪ್ಪುರೂಪ ಅಧರ್Éೀಂದು ಶ್ವೇತವರ್ಣ ಸ್ವಭಾವದ್ರವ ಗುಣ ಮಾಧುರ್ಯ ವಿಷ್ಣುಶಕ್ತಿ ಅಕ್ಷರಉಕಾರ ಎಂದು ಪೇಳ್ವರು 23 ನಾಮವೇ ಪೃಥ್ವಿರೂಪ ಚತುಷ್ಕೋಣ ವರ್ಣ ಹೇಮ ಸ್ವಭಾವವೇಕಠಿಣ ಕ್ರಿಯ ಸೃಷ್ಟಿ ಗುಣವೆ ಗಂಧವು ಮುಖಸದ್ಯೋಜಾತ ದೇವತೆ ಬ್ರಹ್ಮಶಕ್ತಿ ಸರಸ್ವತಿ ಅಕ್ಷರ ಅಕಾರವು 24 ಉಕ್ತರೀತಿ ಹತ್ತು ಗುಣಗಳೊಳ್ ಭೂತ ಒಂದ- ಕ್ಕೆತಿಳಿದು ಈ ಜ್ಞಾನೇಂದ್ರಿಯಗಳೆಂತಾದವು ಎಂದರಿವುದು ಆಕಾಶಸಮಾನಾಂಶ ಅಗ್ನಿಯು ಮುಖ್ಯಾಂಶದಿರೆ ಶ್ರೋತ್ರೇಂದ್ರಿಯ ಹುಟ್ಟಿ ತೋರುತಿರುವುದು25 ವಾಯುಸಮಾನಾಂಶ ಬಂದು ಅಗ್ನಿ ಮುಖ್ಯಾಂಶದಿರೆ ತ್ವಗೇಂದ್ರಿಯವು ತಾನೆ ತೋರುತಿರುವುದು ಜಿಹ್ವೇಂದ್ರಿಯವು ತೋರುತಿರುವುದು26 ಘ್ರಾಣೇಂದ್ರಿಯವು ತಾನೆ ತೋರುತಿರುವುದು ಅಗ್ನಿ ಸ್ವಾಂಶದಿಂದ ಚಕ್ಷುಷೇಂದ್ರಿಯವೆಂದು ಹಿಂದೆಯೇ ಈ ವಿವರ ಪೇಳಿರುವುದು27 ಪೃಥ್ವಿಸಮಾನಾಂಶದೊಡನೆ ಆಕಾಶ ಸಮಾಂಶಸೇರೆ ವಾಗೇಂದ್ರಿಯವೆ ತಾನೆ ತೋರುತಿರುವುದು ಪೃಥ್ವಿ ಮುಖ್ಯಾಂಶದೊಡನೆ ವಾಯು ಸಮಾಂಶಸೇರೆ ಘ್ರಾಣೇಂದ್ರಿಯವು ತಾನೆ ತೋರುವುದು 28 ಪೃಥ್ವಿಮುಖ್ಯಾಂಶದೊಡನೆ ಅಗ್ನಿ ಸಮಾಂಶಸೇರೆ ಪಾದೇಂದ್ರಿಯವು ತಾನೆತೋರುತಿರ್ಪದು ಪೃಥ್ವಿ ಮುಖ್ಯಾಂಶರೊಡನೆ ಅಪ್ಪು ಸಮಾವಾಂಶ ಸೇರೆ ಪಾಯೇಂದ್ರಿಯವೆಂದು ತೋರುತಿರ್ಪುದು29 ಪೃಥ್ವಿಸ್ವಾಂಶವೇ ಗುಹ್ಯೇಂದ್ರಿಯವೆಂದು ಪೂ ರ್ವೋಕ್ತ ರೀತಿಗಣನೆ ತರುವುದು ಈ ರೀತಿ ಕರ್ಮೇಂದ್ರಿಯಗಳೆಲ್ಲ ಪೃಥ್ವಿ ತತ್ವದಿಂದಲೇ- ರ್ಪಟ್ಟು ಬೆಳಗುತಿರುವುದು30 ಆಕಾಶ ಸಮಾನಾಂಶ ಅಪ್ಪು ಮುಖ್ಯಾಂಶದಿರೆ ಶಬ್ದ ವಾಯು ಸ್ವಯಾಂಶದಿ ಅಪ್ಪು ಮುಖ್ಯಾಂಶದಿ ಸ್ಪರ್ಶತೋರ್ಪುದು ಅಗ್ನಿ ಸಮಾನಾಂಶ ಅಪ್ಪು ಮು ಅಪ್ಪು ಮುಖ್ಯಾಂಶದಿಂದಲೆ31 ಅಪ್ಪುಸ್ವಯಾಂಶವೇ ರಸವು ಎಂದೆನಿಸಿತು ತನ್ಮಾತ್ರಪಂಚಕಕ್ಕೆ ಮೂಲ ಅಪ್ಪುತತ್ವವು ಪ್ರಾಣಾದಿಪಂಚಗಳ ಮುಂದೆ ವಿವರಿಸಿಹುದು ವಾಯುತತ್ವವೇ ಅದಕೆ ಮುಖ್ಯಕಾರಣ32 ವಾಯು ಮುಖ್ಯಾಂಶದೊಳು ಆಕಾಶ ಸಮಾನಾಂಶ ಸೇರೆ ಸಮಾನ ವಾಯುವೆಂತೆಂದೇರ್ಪಟ್ಟಿತು ವ್ಯಾನ ವಾಯು ಎಂತೆಂದೇರ್ಪಟ್ಟಿತು 33 ವಾಯು ಮುಖ್ಯಾಂಶದೊಳು ಅಪ್ಪು ಸಮಾನಾಂಶ ಸೇರೆ ಅಪಾನವಾಯುವೆಂತೆಂದೇರ್ಪಟ್ಟಿತು ವಾಯು ಮುಖ್ಯಾಂಶದೊಡನೆ ಪೃಥ್ವಿಸಮಾನಾಂಶ ಸೇರಲು ಪ್ರಾಣ ವಾಯು ಉತ್ಪನ್ನವಾಯಿತು34 ವಾಯುವಿನ ಸ್ವಯಾಂಶವೇ ಉದಾನವಾಯುವೆನಿಸಿತು ಮುಂದೆ ವಿವರಿಸುವುದು ಜ್ಞಾನ ಪಂಚಕ ಈ ಜ್ಞಾನ ಪಂಚಕಕ್ಕೆ ಆಕಾಶ ತತ್ವವೇ ಮುಖ್ಯಕಾರಣವೆಂದು ಬುಧರು ಪೇಳ್ವರು35 ಆಕಾಶ ಮುಖ್ಯಾಂಶದಿ ವಾಯು ಸಮಾನಾಂಶ ಸೇರಿ ದಾಗಲೆ ಮನಸು ಎಂಬುವುದು ಹುಟ್ಟಿತು ಆಕಾಶ ಮುಖ್ಯಾಂಶದಿ ಅಗ್ನಿ ಸಮಾನಾಂಶ ಸೇರಿ ದಾಗಲೆ ಬುದ್ಧಿ ಎಂಬುದು ಗೋಚರವಾಯಿತು 36 ಸೇರೆ ಚಿತ್ತವೆಂಬುದು ವ್ಯಕ್ತವಾಯಿತು ಆಕಾಶ ಮುಖ್ಯಾಂಶದೊಳು ಪೃಥ್ವಿಸಮಾನಾಂಶ ಸೇರಿ ಅಹಂಕಾರವೆಂಬುದೇರ್ಪಟ್ಟಿತು 37 ಆಕಾಶ ಸ್ವಾಂಶವೇ ಕತೃತ್ವವೆಂದೆನಿಸಿತು ಈಪರಿಯ ತಿಳಿವುದು ಜ್ಞಾನಪಂಚಕ ಜ್ಞಾನೇಂದ್ರಿಯ ಕರ್ಮೇಂದ್ರಿಯ ಪಂಚತನ್ಮಾ ತ್ರಗಳಿಗೆ ಆಧ್ಯಾತ್ಮಿಕಾದಿಭೌತಿಕದೇವತೆಗಳ ತಿಳಿವುದು 38
--------------
ಉರಗಾದ್ರಿವಾಸವಿಠಲದಾಸರು
ಪಚ್ಚೆಯ ಬಂದೀಗ ಶ್ರೀ ಪುಲಿಗಿರಿ ಪಚ್ಚೆಯ ನೋಡಿ ಬೇಗ ಪ ಸಚ್ಚಿದಾನಂದರೂಪಚ್ಚರಿಯಾದಂಥ ಮುಚ್ಚುಮರೆಯಿಲ್ಲದಚ್ಚುತನೆಂಬುವ ಅ.ಪ ಕೈಗೆ ಸಿಕ್ಕುವುದಲ್ಲವೈ ತಕ್ಕಡಿಯಲ್ಲಿ ತೂಗಿ ನೋಡುವುದುಲ್ಲ ವೈ ಯೋಗಿ ಹೃದಯದಲ್ಲಿ ಭಾಗವತರೊಳನುರಾಗದಿ ಮೆರೆಯುವ 1 ಬೆಲೆಯ ಕಟ್ಟುವದಲ್ಲವೈ ಈ ಪಚ್ಚೆಯ ನೆಲೆಯ ಕಂಡವರಿಲ್ಲವೈ ನಲಿದು ಧ್ಯಾನಿಪರಿಗೆ ಒಲಿದು ತೋರುವ ದಿವ್ಯ ಜಲಧರವರ್ಣದ ಜಲಜಾಕ್ಷನೆಂಬುವ 2 ಧರೆಯೊಳುತ್ತಮವಾಗಿಹ ಶ್ರೀ ಪುಲಿಗಿರಿಯೆಂಬ ಗಿರಿಯೊಳು ನೆಲೆಯಾಗಿಹ ಚರಣವ ನಂಬಿದ ಶರಣರ ಪೊರೆಯುವ ವರದವಿಠಲ ದೊರೆ ವರದೆನಂದೆಸರಾದ3
--------------
ವೆಂಕಟವರದಾರ್ಯರು
ಪಚ್ಚೆಯು ಬಂತೀಗ-ಶ್ರೀಪುಲಿಗಿರಿ ಪಚ್ಚೆಯ ನೋಡಿ ಬೇಗ ಪ ಮುಚ್ಚುಮರೆಯಿಲ್ಲದಚ್ಚುತ ನೆಂಬುವ ಅ.ಪ ಕೈಗೆ ಸಿಕ್ಕುವದಲ್ಲವೈತ-ಕ್ಕಡಿಯಲ್ಲಿ-ತೂ ಗಿನೋಡುವದಲ್ಲವೈ ಯೋಗಿ ಹೃದಯದಲ್ಲಿ ಭಾಗವತರೊಳನುರಾಗದಿಮೆರೆಯುವ 1 ಬೆಲೆಯ ಕಟ್ಟುವದಲ್ಲವೈ ಈ ಪಚ್ಚೆಯ ನೆಲೆಯಕಂಡವರಿಲ್ಲವೈ ನಲಿದು ಧ್ಯಾನಿಪರಿಗೆ-ಒಲಿದು ತೋರುವ ದಿವ್ಯ ಜಲಧರವರ್ಣದ ಜಲಜಾಕ್ಷನೆಂಬುವ 2 ಗಿರಿಯೊಳು ನೆಲೆಯಾಗಿಹ ವರದವಿಠಲ ಧೊರೆವರದನೆಂದೆಸರಾದ 3
--------------
ಸರಗೂರು ವೆಂಕಟವರದಾರ್ಯರು
ಪತಿ ಪಿತ | ಅರವಿನುತಗೆ (ಮಾರುತನುತಗೆ) 1 ಕಾಲಜನನುಜಗ ಕಾಕಾದಲಯ ಕಾಲದುರಿತರಿದ ಕಾಲಕಾಲಗ 2 ಕಾಲಿಂದಿ ನದಿ ಯೊಳು ಕಾಳಿಯಸಿರದಲಿ ಕಾಲಲಿ ಕುಣಿದ ಲೋಕಾವಳಿ ವ್ಯಾಪಕಗ 3 ಕಾಳರೂಪದಿ ಗಜಕಾಲ್ವಿಡಿದ ಮಕರಿ ಕಾಲ ಜಲದ ಭಗ 4 ಪತಿ ಜನಗ ತಂದೆ ಮಹಿಪತಿನಂದನ ಪಾಲ ಮುಕುಂದ ಶ್ರೀಹರಿಗೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪತ್ರ ಜಲದಂತೆ ಇಹ ಮಹಾತ್ಮರು ಬುದ್ಧಿ ಶಿಷ್ಯಂಗೆ ಹೇಳ್ವುದು ಹ್ಯಾಗೆಪತ್ರ ಜಲದಂತೆ ಇರುವವರ ವಿವರವ ಕಂಡದ್ದಪೇಳುವೆ ತಿಳಿದ್ಹಾಗೆ ಪ ಪರಮ ಶಿಷ್ಯರಿಗೆ ತತ್ವದ ಬೋಧೆ ಬೋಧಿಸಿಪರವಾಗಿಹರದು ಹ್ಯಾಗೆಹುರಿದ ಚಣಕ ತಿನಲಿಕೆ ಬಹುದಲ್ಲದೆ ಹುಟ್ಟುವಣಿಲ್ಲದ ಹಾಗೆ 1 ವೆಗ್ಗಳವಾಗಿಹ ತತ್ವಗ್ರಂಥವ ಹೇಳಿ ವಸ್ತುವಾಗಿರದು ಹ್ಯಾಗೆಬೊಗ್ಗೂವಡೆದ ಮಾಡಬಾಹಣವಲ್ಲದೆಬೊಗ್ಗೂ ಕಟ್ಟಿಗೆಯಾದ್ಹಾಗೆ 2 ಶಬ್ದಡಗಿದ ಚಿದಾನಂದ ಮಹಾತ್ಮರುಶಬ್ದವಾಡುವರದು ಹ್ಯಾಗೆಶಬ್ದವು ಗವಿಯಲ್ಲಿ ಮಾಡಲು ಮಾಡುವುದುಶಬ್ದವೀ ಗವಿಗಿಲ್ಲದ ಹಾಗೆ3
--------------
ಚಿದಾನಂದ ಅವಧೂತರು
ಪದಯುಗಳಂ ಪ ರಾಮಸುಂದರ ಘನ ಶ್ಯಾಮರಘೂದ್ವಹ ಅ.ಪ. ದಶರಥ ಹೃದಯಾನಂದಕರಂ ತ್ರಿದಶಗಣಚಿತ್ತಾಮೋದಕರಂ 1 ಪೂರಿತ ಕೌಶಿಕಯಜನಂ ಸಂತಾರಿತಗೌತಮ ಲಲನಾಂ 2 ಖಂಡಿತ ಶಂಕರ ಚಾಪಂ ಪರಿ-ದಂಡಿತ ಭಾರ್ಗವ ಕೋಪಂ 3 ಪಾತಕ ನಿಚಯಂ 4 ಮುನಿಜನ ಸ್ತುತಿರಚನಂ5 ಭಾರದ್ವಾಜಾರ್ಪಿತ ಭೋಜ್ಯಂ 6 ಉದ್ದಂಡ ವಿರಾಧಪಾತಕ ಹರಣಂ 7 ನಿರ್ಜಿತರಾಕ್ಷಸಷಂಡಂ8 ಧೃತಜಗದುಲ್ಲಾಸಂ 9 ವಿವಿಧಾಯುಧಜಾಲಂ 10 ಶೂರ್ಪನಖಾಂಗಂ 11 ನರವರಮುನಿಗಣ ಪರಿಪಾಲಂ12 ಮಾಯಾಮೃಗಾರ್ಪಿತ ಬಾಣವರಂ- ಜಟಾಯುಸಂಪಾದಿತ ಲೋಕವರಂ 13 ರಾವಣಹೃತ ನಿಜ ಪತ್ನೀಕಂ ಲೋಕಾವನಗತ ಕೋಪೋದ್ರೇಕಂ 14 ಬಂಧನ ಮೋಚನ ಚತುರಂ 15 ವಾತತನೂಭವ ಕೃತಸ್ತೋತ್ರಂ-ಪಂಪಾತಟಿನಿರ್ಮಿತ ಸುಕ್ಷೇತ್ರಂ16 ಶಿಕ್ಷಿತ ಸಂಕ್ರಂದನ ತನುಜಂ-ಸಂರಕ್ಷಿತ ಚಂಡ ಕಿರಣ ತನುಜಂ17 ಸೀತಾಲೋಕನ ಕೃತಕಾಮಂ-ನಿಜಧೂತಾಮೋದನ ಸುಪ್ರೇಮಂ18 ಯವನಾಲಯ ಪರಿವಾರಂ19 ಧೂತಾಹೃತ ಶುಭದೃಷ್ಟಾಂತಂ-ವಿಜ್ಞಾತನಿಜಸ್ತ್ರೀ ವೃತ್ತಾಂತಂ20 ಭೀಷಣ ಜಲನಿಧಿ ಬಂಧಕರಂ-ವಿಭೀಷಣ ಸಂರಕ್ಷಣ ಚತುರಂ21 ಶೋಷಿತ ರಾವಣ ಜಲದಿಂ-ಸಂತೋಷಿತ ದೈವತ ಪರಿಧಿಂ22 ಪಾತಕ ನಿಜ ನಾಮಾಂಕಂ 23 ಸ್ವೀಕೃತ ಸಾಕೇತವಾಸಂ-ಅಂಗೀಕೃತ ಮಾನುಷ್ಯ ವಿಲಾಸಂ24 ವಿಠಲಮತಿಶಯರುಚಿರಂ25
--------------
ಸರಗೂರು ವೆಂಕಟವರದಾರ್ಯರು
ಪನ್ನಂಗಶಯನ ನಿನ್ನ ನಾ ಬಿಡೆನಯ್ಯ ಪ ನಿನ್ನ ಬಿಡುವೆನೆಂತು ಎನ್ನ ಮನಸಿನ ಡೊಂಕನ್ನು ಚೆನ್ನಾಗಿ ತಿದ್ದಿ ಮನ್ನಿಸಿ ಸಲಹುವನಕ ಅ.ಪ ಕಾಲಿಲ್ಲದವನಾಗಿ ತಲೆಯುದರದಡಗಿಸಿ ಜಲದಿ ಮುಳುಗಲು ನಿನ್ನ ಬಲವ ಪಡೆಯದೆ ಬಿಡೆ 1 ನೆಲವನಗೆದು ಬೇರು ಮೆಲುತ ಚರಿಸಲು ಮತ್ತೆ ಹಲ್ಲುಕಿಸಿದು ಗರ್ಜಿಸಲು ಬಿಡೆನೊಲಿಸದೆ 2 ತಿರುಕನೀನಾದರು ಕರದಿ ಕೊಡಲಿಪಿಡಿದು ಶಿರ ತರಿವೆನೆನೆ ನಿನ್ನ ಚರಣಕಾಣದೆ ಬಿಡೆನು 3 ವನವಾಸಿಯಾದರು ಘನಚೋರನಾದರು ವನತೇರೊಳ್ಬತ್ತಲೆ ಕುಣಿದರು ಬಿಡೆ ನಿನ್ನ 4 ಭವಭಯನಾಶನ ದಯಾಕರ ಶ್ರೀರಾಮ ಹಯವೇರೋಡಲು ನಿನ್ನ ಸಹಾಯ ಪಡೆಯದೆ ಬಿಡೆ 5
--------------
ರಾಮದಾಸರು
ಪರಮ ಪುರುಷ ಪರೇಶ ಪಾವನ ಪರಮ ಮುನಿಜನ ಪಾಲನ ಶರಧಿ ಶಯನೆ ವಿಹಂಗವಾಹನ ಶಾರದಾಂಬುಜಲೋಚನಾ 1 ವಿರಿಂಚಿ ವಂದಿತ ವಾಸವಾದಿ ಸುರಾರ್ಚಿತ ವಾಸುಕಿ ಪ್ರಿಯ ಭೂಷಭಾವಿತ ವಾಸರೇಶಕುಲೋದಿತ 2 ಶರಣ ಜನರ ಸೌಖ್ಯವಿತರಣ ಶುಭಗುಣಸಾಗರ ವರದ ಪುಲಿಗಿರಿವಾಸ ವೆಂಕಟ ವರದ ವಿಠಲ ದಯಾಕರ 3
--------------
ಸರಗೂರು ವೆಂಕಟವರದಾರ್ಯರು