ಒಟ್ಟು 1587 ಕಡೆಗಳಲ್ಲಿ , 108 ದಾಸರು , 1227 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾಮ ಧರಿಸಿಹೆಯಾ ಮೂರು ನಾಮ ಧರಿಸಿಹೆಯಾ ಶ್ರೀನಿವಾಸ ಪ. ನೀನೆ ಕರ್ತನೆಂದಾ ಮನುಜರಿಗೆಲ್ಲಾ ನಾನೆ ಸಲಹುವೆನೆಂಬ ಬಿರುದಿನ ಮೂರು ಅ.ಪ. ಅಂಬೆಯ ವಕ್ಷದಿ ಇಂಬಿನೊಳಿಟ್ಟು ಸಂಭ್ರಮದೊಳು ಕುಡಿ ನೋಟದಿಂದಾ ಅಂಬುಜಾಕ್ಷ ಬಡವರ ಧನ ಸೆಳೆಯುತ್ತವರ ಬೆಂಬಿಡದೆ ಕಾವೆನೆಂಬ ಬಿರುದ 1 ಸಿರಿ ಅರಸಾನೆಂಬೊ ಬಿರುದು ಥರವೇ ನಿನಗೆ ಹೊರವೊಳಗಿದ್ದು ಜನವ ನಂಬಿಸಿ ಥರಥರದಾಭರಣ ಸುಲಿಗೆಯಗೊಂಬ ತಿರುಪತಿ ತಿರುಮಲರಾಯ ದೊರೆ 2 ನಿನ್ನ ಧ್ಯಾನ ಮಾಳ್ಪ ಭಕ್ತರು ಬಲೆಗೆ ಸಿಕ್ಕುವರೇನೊ ನಿನ್ನ ಪಾದಧ್ಯಾನವನ್ನೆ ಬಯಸುತ್ತ ನಿನ್ನನೆ ಭಕ್ತಪಾಶದಿ ಕಟ್ಟಿ 3 ಚಾರು ಮುಖನೆ ವಂದ್ಯ ನಿನ್ನ ಹಾರೈಸುವ ಭಕ್ತರ ವೃಂದ ಹಾರ ಹಾಕಿ ಮನ ಸೂರೆ ಕೊಟ್ಟ 4 ಭಕ್ತರ ಕಟ್ಟಿಗೆ ಸಿಕ್ಕಬೇಕಲ್ಲದೆ ಭಕ್ತವತ್ಸಲನೆಂಬೊ ಬಿರುದಿಟ್ಟ ಕಾರಣವೇಕೊ ಯುಕ್ತಿಲಿ ನಿನ್ನ ನೆನೆದು ಸಿಕ್ಕಿಸೀ ಭವ ಕಷ್ಟಕಳೆವರೊ ಶ್ರೀ ಶ್ರೀನಿವಾಸ ನಿನ್ನ ಭಕ್ತರಿಷ್ಟಾ 5
--------------
ಸರಸ್ವತಿ ಬಾಯಿ
ನಾರಸಿಂಹ ನಮಿಪೆ ನಿಮ್ಮ ನತಜನಾಶ್ರಯ ಪ ಘೋರ ದುರಿತದೂರ ಭಕ್ತಕುಮುದಕುಡುರಾಯ ಅ.ಪ ವಿವಿಧಗತಿಯಲಸುರ ಸುತನ ವೇಧೆಪಡಿಸಲು ತವ ಪದಾಂಬುರುಹವ ನೆನೆಯೆ ಒಂದೆ ಕ್ಷಣದೊಳು 1 ಕೋಟಿ ಸಿಡಿಲು ಬಡಿದ ತೆರದಿ ಕೂಗು ಪುಟ್ಟಲು ಚಾಟ ಸ್ತಂಭದೊಳುದಿಸೆ ದನುಜಕೂಟ ಬೆದರಲು 2 ತರಳಗೊಲಿದೆ ಗುರುರಾಮ ವಿಠಲ ನಂಬಿದೆ 3
--------------
ಗುರುರಾಮವಿಠಲ
ನಾರಾಯಣ ರಕ್ಷಿಸೊ ನಮ್ಮನು ಲಕ್ಷ್ಮೀನಾರಾಯಣ ರಕ್ಷಿಸೋ ಪ ಭವ ದೂರ ನಿತ್ಯೋದಾರ ಕರುಣದಿ ಅ.ಪ. ಶ್ರೀಶ ನಿನ್ನರ್ಚಿಸದೆ ಶ್ರೇಯಸ್ಸುಖದಾಶಯನೇ ತೊರೆದೆ ಕಳತ್ರ ನಿವೇಶ ತನುಜ ಮಾಯಾ ನಿಖಿಲಸುರೇಶ ಕಮಲ ಭವ ಭಯ ಪಾಶ ಹರಪರಮೇಶ ವಂದಿತ||ನಾರಾಯಣ|| 1 ದೇಹಾಭಿಮಾನದಲ್ಲಿ ತೀವಿದಭೂತ ದ್ರೊಹವನಾಚರಿಸುತಲಿ ಸಿಲುಕಿ ದಾಸೋಹಮೆನ್ನದೆ ದೈವ ವಿದೇಹ ಜಾವರಿಗೂಹನೋಚಿತದೇಹ ವಿಜಿತವಿದೇಹ ಖಗವರವಾಹ ಶುಭಪರಿವಾಹ ನಿಖಿಲ ನಿರೀಹ ಲೋಕವಿ ಮೋಹನಾಚ್ಯುತ ||ನಾರಾಯಣ|| 2 ಧರ್ಮಾಚರಣೆಯನೆರೆತೊರೆದು ದುರುಳರ ಸಂಗದಿ ಜರಿದು ಸಜ್ಜನರನು ಜರಿದು ದುರ್ಗತಿಗೆ ನಾ ಗುರಿಯಾದೆನು ಹರಿ ಪರಮ ಪುರುಷ ಪರಮ ಪಾವನ ಭವ ಸಂಹರಣ ವಿಶ್ವಂಭರಣ ಪುಲಿಗಿರಿ ವರದ ವಿಠಲ ||ನಾರಾಯಣ|| 3
--------------
ಸರಗೂರು ವೆಂಕಟವರದಾರ್ಯರು
ನಾರಾಯಣ ರಕ್ಷಿಸೋ ನಮ್ಮನು ಲಕ್ಷ್ಮೀ ನಾರಾಯಣ ರಕ್ಷಿಸೋ ಪ ಪಾರರಹಿತ ಭವಪಾರಾವಾರದಿ ಬಲು ಘೋರತಾಪವು ಮೀರಿತೋ ಭವದೂರ ನಿತ್ಯೋದಾರ ಕರುಣದಿ ಅ.ಪ ಶ್ರೀಶ ನಿನ್ನರ್ಚಿಸದೆ ಶ್ರೇಯಸ್ಸುಖ ಕಳತ್ರ ನಿವೇಶ ತನುಜ ಮಾಯಾ ಪಾಶದೊಳಗೆ ಶಿಲ್ಕಿ ಗಾಸಿಯಾದೆನು ಜಗದೀಶ ನಿಖಿಲಸು ರೇಶ ಕಮಲಫಲಾಶನಯನ ದಿ ನೇಶಶತ ಸಂಕಾಶ ವ್ಯಾಘ್ರಗಿರೀಶ ಭವಭಯ ಪಾಶ ಹರಪರಮೇಶ ವಂದಿತ 1 ದೇಹಾಭಿಮಾನದಲ್ಲಿ ತೀವಿದ ಭೂತ ಸೋಹಮೆಂಬುವ ಬಲು ಮೋಹದಿ ಸಿಲುಕಿ ದಾ ಸೋಹಮೆನ್ನದೆ ದೈವ ದ್ರೋಹಿಯಾದೆನು ವಿದೇಹಜಾವರಿ ಗೂಹ ನೋಚಿತದೇಹ ವಿಜಿತ ವಿ ದೇಹ ಖಗವರವಾರಶುಭಪರಿವಾಹ ನಿಖಿಲ ನಿ ರೀಹ ಲೋಕವಿಮೋಹನಾಚ್ಯುತ 2 ಗುರುಹಿರಿಯರ ಮರೆದು ಗರ್ವದಿ ಧರ್ಮಾವ ಚರಣೆಯ ನೆರೆತೊರೆದು ಜರಿದು ದುರ್ಗತಿಗೆ ನಾ ಗುರಿಯಾದೆನು ಹರಿ ಪರಮಪುರುಷ ಪಾವನ ಚರಣ ಸುಗುಣಾ ಭರಣ ದೀನೋ ಭವ ಸಂಹರಣವಿಶ್ವಂ ಭರಣ ಪುಲಿಗಿರಿ ವರದವಿಠಲ 3
--------------
ವೆಂಕಟವರದಾರ್ಯರು
ನಾರಾಯಣನು ನಾರಿಯಾದನು ನಾರಾಯಣನು ನಾರಿಯಾಗಲು ಉಗರು ಕಾಂತಿ ಪೋಗಿ ಸಾರಸುಂದರವ ತಿರಸ್ಕರಿಸೆ ಶೃಂಗಾರಸ ನಿಧೆ ಪ ಸುರರಸುರ ಕರೆಸಿ ವೈರೆವ ಮರೆಸಿ ಸ್ನೇಹದಿಂದಿರಿಸಿ ಈ ಕುಲ ವರಿಸಿ ನಿಮ್ಮೊಳು ಬೆರಸಿ ಸುಖವಂಕುರಿಸುವಂತೆ ಸಂಚರಿಸೆಂದು ಸರಸದಿಂದಲಾದರಿಸೆ ಸುರರ ಧರಿಸಿ ಬಿಡದುದ್ಧರಿಸುವೆ ನಿದ್ರಿ ತರಿಸಿ ದೈತ್ಯರ ವರಿಸೆಂದು ಸಿರಿ 1 ದಿತಿಜಾದಿತಿ ಜ್ಯಾತ ತತಿಗಳನು ಸ ಅಮೃತ ಬಪ್ಪದಕ್ಕೆ ಹಿತವ ಪೇಳುವೆನೆಂದತಿಶಯದಿಂದ ಚತುರಾತುಮ ಮಾರುತ ಪಿತಾ ಕ್ಷಿತಿಯೊಳು ನೂರು ಶತ ಯೋಜನ ಪರ್ವತ ಮಂದಾರುಂಟು ಜತೆಯಲಿ ಏಕಮತರಾಗಿ ಪೊಲ್ ಜಾತವ ಕಿತ್ತೆತ್ತಿಸಿತಾಬ್ಧಿಯೊಳು ಮಥಿüಸೆಂದು 2 ಹರಿ ನಿರೂಪವÀ ಧರಿಸಿ ಎಲ್ಲರು ಗಿರಿಯ ಬಳಿಗೆ ಹರಿದರಾಗಲೆ ಕಿರಿ ಬೆರಳ ಅಬ್ಬರದಾಟವು ಬೊಬ್ಬಿರುವ ಧ್ವನಿ ಭೀಕರ ಕರಿ ಶರಧಿ ಮಿಕ್ಕ ಗೋತುರ ಸಪ್ತದ್ವೀಪ ತರು ಮೃಗಾದಿ ಜೀವರು ತಲ್ಲಣಿಸೆ ಗಿರಿ ವೆಗ್ಗಳಿಪ ಭರಕಂದು3 ಸುತ್ತ ಈ ಪರಿಯಾಗುತ್ತಿರೆ ಇತ್ತ ಪ ರ್ವತವಲ್ಲಾಡಿಸಿ ಕಿತ್ತಿ ತೆಗೆದೆತ್ತಿ ಹೊತ್ತರಿತ್ತಂಡದಿ ಚಿತ್ತ ಮಾರ್ಗವನು ಹತ್ತಿ ಬರಲು ದೇವತೆಗಳು ಹೊತ್ತರದ್ರಿಮೂಲ ಎತ್ತಲಾರದಲೆ ತತ್ತಳಗೊಂಡು ಮಾರುತ್ತ ಅಡಿಗಡಿ ಎತ್ತಿಡಲರಿದು ದೈತ್ಯರ ವಂಚಿಸಿ ಆ ದಿತ್ಯರಿಗಿರಿಸಿದುತ್ತಮನೊ4 ವನಧಿsಯೊಳದ್ರಿ ದನುಜ ಮರರ ಗುಣವಿಳಹಿ ಸ ರ್ಪನ ತಂದೀಗ ನೇಣನೆ ಮಾಡಿದರು ಸುರರು ಬಾಲನು ದೈತ್ಯಯರು ಹೂಣಿಕೆಲಿ ವಿನಯದಿಂದ ಮಥಿüಸುವಾಗ ವದನದನಿಲಕೆ ಅನಿಮಿಷರು ತಲ್ಲಣಿಸೆ ಹರಿ ತನ್ನನು ನಂಬಿದವರ ಕಾಯಿದ ವಂಚನೆಯಿಂದ5 ಉಭಯ ಜನರು ಗಂಭೀರವಾದ ಕ್ಷೀರಾಂಬುಧಿ ಕಟವ ರಭಸಗೈದು ಕಕುಭದಲಿ ಪ್ರತಿ ಶಬ್ದಪುಟ್ಟಿ ಉ ದುಭವಿಸಿದವು ಶುಭಾ ಶುಭ ಪ್ರಭು ಧನ್ವಂತ್ರಿ ಸುಲುಭ ರಸ ತಾರೆ ವಿಭುದರೊಳಗೆ ಗಲಭೆಯ ಬೀಸಿ ಅ ನಿಬರು ಒಯ್ಯಲು ಋಭುಜಾದ್ಯರು ಅಬುಜಾಪ್ತ ಪೋದನಭವಾಗೆ6 ಹರಿ ತಿಳಿದ ಭಕ್ತರ ಮನೋಕ್ಲೇಶ ಸಿರಿ ಸ್ತುತಿಗಗೋಚರನೆನ್ನಲು ಧರಿಸಿ ಬಂದನು ಮಿರುಗುತಿಪ್ಪ ಸುಂ ದರ ನಾರೀ ರೂಪ ಪರದೈವ ಕುಸುಮ ಪೊಂಗೆಜ್ಜೆಯ ಸರಪಳಿಯ ಮೇಲೊಲಿವ ಕಾಂಚಿದಾಮ ಶರತ್ಕಾಲದ ಚಂದಿರನಂತೆ7 ಸಣ್ಣವನಾರಾ ಮೋಹನ್ನಕರವು ಪಾ ಕೌಸ್ತುಭ ರನ್ನ ವನಮಾಲೆ ಚಿನ್ನದ ಸರ ಶೋಭನ ಕರಡಿಗೆ ಚನ್ನಗೋಡಿ ಸರ ಬಣ್ಣ ಸರ ರನ್ನದಪದಕ ಕನ್ನಡಿ ಮಲಕು ಚನ್ನಪ ನ್ಯಾವಳ ಮುನ್ನೆ ಸರ್ವಹಾರ ಮೂರ್ತಿ 8 ಮುತ್ತಿನ ಚಿಂತಾಕ ಮುತ್ತಿನೋಲೆ ಜಾತ ಮುತ್ತಿನ ಮೂಗುತಿ ಮುತ್ತಿನಕ್ಷತಿಯು ಮುತ್ತಿನ ಸೂಸುಕಾ ಮುತ್ತಿನ ಜಡೆಯು ಮುತ್ತಿನ ಗೊಂಚಲು ಮತ್ತೆ ತೋಳು ಮುತ್ತು ಮೇಲಗೊಪ್ಪು ಕತ್ತಲೆ ಸೋಲಿಪ ಕಸ್ತೂರಿ ತಿಲಕಾ ನೆತ್ತಿಯ ಬೈತಲು ಸುತ್ತ ತಳಪು ಸುರೋತ್ತಮ ಚಂದ್ರಮಾ ನಿತ್ಯಾನಂದ ಪರುಷೋತ್ತಮನು 9 ನೀಲಗೂದಲು ಸುಫಲಾದಿ ಶ್ರವಣ ಭ್ರೂಲಾದಿಕÀವು ಚಂ ಕಪೋಲ ನಾಸಿಕ ತಾಂಬುಲದ ವದನ ನಾಲಿಗೆತಳ ವಿಶಾಲ ಭುಜ ಕಂದರ ಸುಂಡಾಲಾಕಾರವಾದ ತೋಳು ಕರತಳ ಪಾಲು ಬಪ್ಪ ಸ್ತನ ಸ್ಥೂಲೋದರ ನಾಭಿ ಲೀಲಾ ನಡವು ಪಂ ಚಳ ಊರು ಜಾನು ಲೋಲಾಡುತಾ 10 ಹರಡಿ ಕೈಕಟ್ಟು ಬೆರಳುಂಗುರವ ವರ ಕಂಕಣಾದಿ ಸರಿಗೆ ತಾಯಿತ ಸರ ಹುಲೆಯುಗರು ಎಣ್ಣೆ ನೂಲು ತರುಳಹಾರ ಚೌರಿಯಿಂದ ಪರಿಪರಿ ಚಿತ್ರ ಬರೆದ ಕಂಚುಕಾ ಸರಿಸರಿ ಬಂದಾಭರಣ ಧರಿಸಿ ಅರೆ ಶರಗು ಗಹ್ವರದಿ ಮಾಡುತ್ತ ಮರಿಯಾನೆ ಬಪ್ಪ ತೆರದಂತೆ 11 ಗಂಧ ಪಚ್ಚಿಕೊಂಡು ಒಂದು ಕರದೊಳು ಗಂಧ ವಿಳ್ಯವು ಮತ್ತೊಂದು ಕರದೊಳು ಕಂದುಕ ಪುಟಿಸುತ್ತೊಂದೊಂದು ಹೆಜ್ಚೆಯನು ನಿಂದಲ್ಲಿ ನಿಲ್ಲದೆ ಚಂದದಿಂದ ಬಂದಬಂದಂತೆ ಪೂ ಮಂದರಾದಿ ಮುಡಿಯಿಂದ ಉದರಲು ಮಂದಹಾಸದಿಂದ ವೇಗ ನಡೆ ತಂದು ಸಮೀಪದಿ ನಿಂದನು ಖಳರಿಗೊಂಡಿ ಮಾರಿ12 ದುರುಳ ಸಮೂಹ ಪರವಶನಾಗಿ ಬೆರಗಾಗಿ ನಿಲ್ಲೆ ಪರಿ ಏನೆನಲು ಇರದೆ ಪೇಳಲು ಶಿರವದೂಗುತ್ತಾತಾರವೆಂದ ಭರ ಯೌವ್ವನ ಸ್ತ್ರೀ ಪರಪುರಷರ ಸರಿತದಲ್ಲಿಗೆ ಚರಿಸಬಾರದು ಎರಡು ಬಲದವರು ಕರದಿ ಲೋಚನವ ಮುಚ್ಚಿ ಸಾಗಿರೆ ಪಂಙÂ್ತ 13 ಬಡಿಸೂವೆನೆ ಒಡನೆ ತಮ್ಮಯ ಪಡೆ ಸಮ್ಮತ ಸಾಲ್ಹಿಡಿದು ಕುಳ್ಳಿರೆ ನಡುವೆ ಪಿಯೂಷ ಪಿಡಿದು ದುಷ್ಟರ ಕಡಿಗೊಂದು ಬಿಂದು ಬಡಿಸದೆ ದೃಢ ಭಕ್ತರಿಗೆ ಕುಡಿಸುತ್ತಿರಲು ಬಡ ರಾಹು ತಾನು ದುಡುಗಿ ಸುರರಾ ಎಡೆಯೊಳಿರಲು ಕುಡಿತಿಯೊಳು ತಾ ಬಡಿಸಿ ಚಕ್ರವಾ ತುಡುಕಿದ14 ಓರ್ವನ ತರಿದು ಈರ್ವಗೆ ಮಾಡಿದ ಊರ್ವಿಗೆ ಕೆಡಹಿ ಗರ್ವ ಮುರಿದು ಸರ್ವಬಗೆಯಿಂದ ನಿರ್ವಾಹ ಕರ್ತನು ಓರ್ವನಲ್ಲದೆ ಮತ್ತೋರ್ವನಾರೊ ಗೀರ್ವಾಣ ಜನರ ನಿರ್ವಾಧಿಕವೊಹಿಸಿ ಪರ್ವತೆಡೆಯಿದ್ದ ದು ರ್ವಿಷಯಾಬ್ಧಿಗೆ ಚೀರ್ವನಾಗಿದ್ದ ವಿಜಯವಿಠ್ಠಲ ನಿರ್ವಾಣೇಶ15
--------------
ವಿಜಯದಾಸ
ನಾರಿ ಗೌರಿ ಕೌಮಾರಿ ವಾರಿಜಾಕ್ಷನ ಚರಣ ವಾರಿಯನು ಧರಿಸುವ ನಾರಿ ಗೌರಿ ಕೌಮಾರಿಪ ಬಾಣ ಕುಂಭನೆಂಬೊ ದಾನವರೀರ್ವರು ಕ್ಷೋಣಿಯೊಳು ಬಂದಲ್ಲಿ ತಪವ ಮಾಡಿ ಕಮಲ ಗರ್ಭನವೊಲಿಸಿ ವೇಗದಲಿ ಏನು ವರ ಬೇಡೆನಲು ನಗುತಲವನು ಸುರಿದನು 1 ಸಂಬಂಧಿಗಳೆಮ್ಮ ಕೊಲ್ಲಲ್ಲಿ ಉಳಿದವರ ಬಗಿಯದಂತೆ ವರವನು ಪಾಲಿಸೆನಲು ನಗುತ ಲೋಕೇಶ ದುರುಳರಿಗೆ ಸಲೆ ಇತ್ತಾ 2 ಚತುರ್ದಶ ಲೋಕವನು ಗೆದ್ದು ತ್ರಿದಶರಾ ಮಿತಿಯಿಲ್ಲದೆ ಮಾನಭಂಗ ಮಾಡಿ ಪತಿತರು ಈ ತೆರದಲಿರುತಿರಲು ವಿಬುಧರು ಚತುರ ಮುಖಗೆ ಮೊರೆಯಿಡಲು ಹರಿಗೆ ಬಿನ್ನೈಸಿ3 ತಿಳಿದು ಕುಂಡಲನೊಲಿದು ದ್ವಾಪಾರಾಂತ್ಯದಲಿ ಖಳ ಕಂಸನೆಂಬುವನು ಪುಟ್ಟಿ ತನ್ನ ಬಲದಲಿ ತನ್ನ ಅನುಜೆಯರ ಶರೆಯುಯಿಟ್ಟು ಬಳಲಿಸುವವಳಿಗೊಲಿದು ಅವತಾರ ಮಾಳ್ಪ ಯುದಕುಲದಲಿ 4 ಎನ್ನ ಕೂಡಲೀ ದುರ್ಗಿ ಜನಿಸಿ ಬರಲು ಅವ ಳನ್ನ ಕೊಲ್ಲುವೆನೆಂದು ಕಂಸ ಮುನಿಯೆ ತನ್ನ ಶಕ್ತಿಯಿಂದಾ ಗಗನಕ್ಕೆ ಪಾರಿ ಬರಲು ಘನ್ನ ಘಾತುಕರನ್ನ ಮಡುಹಿ ಬಿಡುವಳೆನಲು 5 ಇಂತು ಪೇಳಲಿ ಅಜನು ಸಂತೋಷದಿರಲಿತ್ತ ದಂತಿ ಗಮನಳು ಉದುಭವಿಸಿ ಬಂದು ಪಿಂತೆ ಮಾಡಿದ ತಪಸು ಸಿದ್ಧಿಸಿತು ಎನಗೆನುತ ಅಂತಕರಾಗಿದ್ದ ಖೂಳರ ಸದೆ ಬಡಿದು 6 ಹರಿಕೃಪೆಯಿಂದ ದಕ್ಷಿಣ ಶರಧಿಯಲಿ ನಿಲ್ಲಲು ಪರಮ ಮುನಿ ಅಗಸ್ತ್ಯ ಪೂಜಿಸಿದನು ಶರರಾಜ ಬಂದು ಮದುವೆನೈದಲು ಪರಮೇಷ್ಠಿ ಹರನ ಸಹಿತಲಿ ನಡೆತಂದಾ 7 ಬರಲಾಕ್ಷಣದಲ್ಲಿ ಕಲಿಯುಗ ಪ್ರಾಪುತವಾಗೆ ಮರಳೆನಿಂದರು ವರ ಸುಧೇಂದ್ರವೆಂಬೊ ಪುರದಲ್ಲಿ ಪೂಜೆಗೊಳ್ಳುತಲ್ಲಿರಲು ಇತ್ತ ಸುಂ ದರ ಕನ್ಯಾಮಣಿಯಾಗಿ ದಶದಿಶಿಗೆ ಪೊಳೆಯುತಿರೆ8 ಅಂದಾರಭ್ಯನಾಗಿ ಕನ್ಯಾಕುಮಾರಿ ಎನಿಸಿ ಬಂದು ನವತೀರ್ಥದಲಿ ಯಾತ್ರೆ ಜನರು ಮಿಂದಾಗಲೆ ಮನದಂತೆ ಭಕುತಿಯನಿತ್ತು ಪೊಂದಿಸುವೆ ವಿಜಯವಿಠ್ಠಲನ ಪಾದದಲ್ಲಿ9
--------------
ವಿಜಯದಾಸ
ನಾರಿ ನಾನರಿಯೆನೆ ನಿನ್ನಯ ಮಹಿಮ ಕರುಣದಿ ಇಡು ಪ್ರೇಮ ಪ ಬಾರಿ ಬಾರಿಗೆ ನಿನ್ನ ಭಜಿಸುವ ಭಕ್ತರ ಪಾರುಗಾಣಿಸಿ ಪೊರೆ ನಾರಿ ಶಿರೋಮಣಿ ಅ.ಪ ಕನಸು ಮನಸಿನೊಳ್ ನಿನ್ನಯ ಧ್ಯಾನ ಬಿಡದಲೆ ನಾ ಇನ್ನ ನೆನಸಿ ನೆನಸಿ ಸುಖಿಸುವೆ ಮುನ್ನ ವನಜಾಕ್ಷಿಯೆ ನಿನ್ನ ಅನುದಿನ ನಿನ್ನನು ಸ್ಮರಿಸುವ ಸುಜನರ ಘನವನುಳುಹಿ ಕಾಯೆ ಮನಸಿಜನ ತಾಯೆ 1 ಸೃಷ್ಟಿಯೊಳಗೆ ಶೆಟ್ಟಿ ಕೆರೆಯ ತಟದಲಿ ನೀ ನಿಂತು ಶ್ರೇಷ್ಠಳೆನಿಸಿ ಭಕ್ತರ ಮೊರೆಯ ನಿತ್ಯದಿ ನೀನರಿತು ಇಷ್ಟದಿ ಕೇಳುತ ಶಿಷ್ಟಜನರ ಅಘ ಹಿಟ್ಟುಮಾಡಿ ಕಾಯೆ ಶ್ರೀ ಕೃಷ್ಣನ ಜಾಯೆ 2 ಮದನನಯ್ಯನ ಮೋಹದ ರಾಣಿ ಮದಮುಖದ ಶ್ರೇಣಿ ವಧಿಸಿದ್ಯೆಲೆ ಪರಮ ಕಲ್ಯಾಣಿ ಜಗದೊಳಗತಿ ಜಾಣೆ ಸದನ ಮಾಡಿಕೊಂ ಡೊದಗಿ ಭಕ್ತರ ಮುದವಪಡಿಸಿದ್ಯೆಲೆ 3 ಜಗದೊಳು ನಿನಗೆ ಸರಿಯಾರೆ ಪರಿಪರಿ ವಯ್ಯಾರೆ ಅಗಣಿತ ಗುಣಗಂಭೀರೆ ಸುಂದರ ಸುಕುಮಾರೆ ಬಗೆಯಲಿ ಎನ್ನವಗುಣಗಣ ವೆಣಿಸದೆ ಸೊಗದಿಂದಲಿ ಕಾಯೆ ನಗಧರನ ಪ್ರಿಯೆ 4 ಅನುವನರಿತು ಪಾಲಿಸು ಮುನ್ನನಂಬಿದ ಮನುಜರನ ಅನುದಿನ ನಿನ್ನ ಪಾದಧ್ಯಾನ ಮನಸಿಗೆ ಕೊಟ್ಟೆನ್ನ ವನಜಾಕ್ಷಶ್ರೀ ಪ್ರಾಣನಾಥ ವಿಠಲನ ಸನ್ನಿಧಾನವಿತ್ತು ಮನ್ನಿಸು ತಾಯೆ 5
--------------
ಬಾಗೇಪಲ್ಲಿ ಶೇಷದಾಸರು
ನಾಲ್ಕನೆಯ ಸಂಧಿ ಶಶಿಹಾಸ ಕಾಳಿಯನೊಲಿಸಿ ಪೊಸತಾಗಿ ತೋರಿತಾಶ್ಚರ್ಯ ಮಿಥ್ಯದ ವಿಷವನು ಉಣಿಸಿ ಕೃತ್ಯವೆ ಪಥ್ಯವಾದುದನು 1 ಕರುಣದ ಬಗೆಯ ತನುಜೆಯು ವಿಷಯು 2 ವಿಷಯೆ ಇದ್ದೆಡೆಗೆ ತಲೆಯ ತಗ್ಗುವಳು 3 ಪನ್ನಗಧರನ ಕೃಪೆಯಿಂದ ಸನ್ಮಾನವನೆ ಮಾಡಿದರು 4 ಜಾರಿದ ಕುರುಳನೋಸರಸಿ ಚಾರುಮಾಣಿಕಖಚಿತ ಪೀಠಕ್ಕೆ 5 ಹರಸಿ ಅಕ್ಷತೆಗಳನಿಟ್ಟು ಅರಸಿನಗಳ ತಿವರಿದರು 6 ಮಜ್ಜನ ತಂಬಿಗೆಯ ಲೋಕುಳಿಯ ಬೆನ್ನಲೋಕುಳಿಯನೆರೆದರು 7 ಮುಡಿಮೈಗಳನೋಸರಿಸಿ ದುಕೂಲವ ಬಡನಡುವಿಗೆ ಅಳವಡಿಸಿ ಜಡಿತದಾಭರಣಕರಡಿಗೆಯನು ತಂದಿಡುವರು ಇಕ್ಕೆಲದಲ್ಲಿ8 ಪಾಟಿಸಿ ತುರುಬನೋಸರಿಸಿ ಮಧ್ಯದಲಿ ಇಡುವರು 9 ಬೆಳಗುವ ಮೂಗುತಿಯ ಮಂದ ಗಮನೆಯರು ಹರುಷದಲಿ 10 ಮೂಗುತಿಯನಿಕ್ಕುವರು ಕೋಕಿಲಗಾನೆ ಕುಟಿಲಕುಂತಳದಾನೆ ಬಾಗಿದ ಬಾವುಲಿಗಳಲಿ11 ಇಟ್ಟರು ತೋಳ ಚಳರಕ್ಷೆ ಮಣಿಗಳ ಗಟ್ಟಿಕಂಕಣ ಚಳಕಗಳ ಬೆರಳ ಮುದ್ರಿಕೆಯು 12 ಕಡಗ ಮುತ್ತಿನ ಹತ್ತೆ ಕಡಗ ಎಡೆಪಣಿಚಿಂತಾಕದ ಸರಿಗೆಯ ತಂದಿಡುವರಂಗನಗೆ ನಾರಿಯರು 13 ಕಂಠೀಸರ ಬಿಲ್ಲಸರವು ಸರಸಿಜ ಗಂಧಿಯರೊಲಿದು 14 ಕಣಕಾಲುಗಳೆಸೆವ ಭಾವಕಿಯ ಸಾಲುಗಂಟೆ ಗೆಜ್ಜೆ ಸರಪಳಿ ಘಲಿರೆಂಬ ಕಾಲಂದಿಗೆಯನಿಡುವರು15 ಉಂಗುರ ಮುದ್ರಿಕೆಯಿಟ್ಟು ಮಂದಗಮನೆಗೆ ಒಪ್ಪಿದವು 16 ಸಾರಿಸಿ ಅಂಗಕ್ಕೆ ತಿಗುರಿ ಹಾವುಗೆಯನೆ ಮೆಟ್ಟಿಸಿದರು 17 ನಾರಿಯರೆಡಬಲದಲಿ ಕರವಿಡಿಯಲು ಚಾರುವದನೆ ಚಂಚಲಾಕ್ಷಿ ಬಂದೇರಿದಳೊಜ್ರದಂದಣವ 18 ಹೊತ್ತರು ಕಳಸ ಕನ್ನಡಿಯ ಹೊತ್ತಿದ ಕಾಳಂಜಿಯವರು 19 ಜಗಜಗ ಬೆಳಕುಗಳು ತುಂಬಿ ಜಗಜಗಿಸುವ ಜೊ‑ಂಪಿನ ಸುರೆಪಾನವು ನೆಗಪಿದವಗಣಿತವಾಗ20 ಉದುರು ಬಾಣ ಪುಷ್ಪಬಾಣ ಸದನದಿ ನಡೆತಂದಳಬಲೆ 21 ಹೊನ್ನಂದಣವನೆ ಇಳಿಸುವರು ಬಂದಳು ವಿವಾಹ ಮಂಟಪಕೆ 22 ಪಿಡಿದಳು ಮದನನರ್ಧಾಂಗಿ23 ಮುಕುಂದಗರ್ಪಿತವಾಗಲೆಂದು ಮಂದಾರಮಾಲೆ ಹಾಕಿದರು 24 ಪೊರೆಯಲಿ ತಂದು ನಿಲ್ಲಿಸಿದರು ಅರುಹಬೇಕೆಂದು ಕೇಳಿದರು 25 ಎನ್ನ ಪರಮ ಗುರುವೆಂದ 26 ಸಮಯವು ಲಗ್ನವೆಂದೆನುತ ಬ್ರಾಹ್ಮಣೋತ್ತಮರು ಹೇಳಿದರು 27 ಸಮಯವು ಲಗ್ನವೆಂದೆನುತ ಮೇಲೆ ಸೂಸಿದನು 28 ಶತಪತ್ರನಯನೆ ಸಮಗಾತ್ರೆ ಚಮತ್ಕಾರದಿಂದ ಸೂಸಿದಳು 29 ಸೊಡರುಗಳನೆ ಹಚ್ಚುವರು ಪಿಡಿದರು ಇತ್ತಂಡದಲ್ಲಿ 30 ಮುತ್ತೈದೆಯರೆಲ್ಲ ಅಲಂಕರದಿ ವಿಷಯೆ ಸಂಭ್ರಮದಿ 31 ಕೈಯಿಂದ ತೋರುವರು ಸುತ್ತ ನಕ್ಷತ್ರದ ಮಧ್ಯದಿ ಕಂಡಳು ಪ್ರತ್ಯಕ್ಷದಿಂದರುಂಧತಿಯ 32 ದಿನಕರ ಪ್ರತಿಬಿಂಬದಂತೆ ಅನುಕೂಲಗಳನೆ ಮಾಡಿದರು 33 ಮಾಡಿದನು ಶ್ರೀಪತಿಯ ಆಜ್ಯತಂಡುಲ ಆಪೋಶನೆ ಮಾಡಿದ ನಿರ್ಜರಪತಿ ಮೆಚ್ಚುವಂತೆ34 ಎಡೆಮಾಡಿ ಚಪ್ಪರದೊಳಗೆ ಭೋಜನಕೆ ಕುಳ್ಳಿರಿಸಿ 35 ಉಪ್ಪಿನೆÀಸರುಕಾಯಿ ಪರಿಪರಿ ಶಾಕವು ಹಪ್ಪಳ ಬಾಳಕಗಳನು ಅಪ್ಪಲು ಅತಿರಸ ಸೂಪಾಕ್ಷತಶಾಲ್ಯನ್ನ ಚಪ್ಪರದಲಿ ಬಡಿಸುವರು 36 ಕಾಮಿನಿಯರು ಕನಕದ ಹರಿವಾಣದಿ ಶಾವಿಗೆ ಪರಮಾನ್ನಘೃತವ ಭೂಮಕ್ಕೆ ಬಡಿಸಿದರಾಗ 37 ರಾಜೀವ ಮುಖಿ ತನ್ನ ಪತಿಗೆ ಮ- ಹಾಜನರೆಲ್ಲ ಉಂಡು ಕೈತೊಳೆದರು ಹೂಜಿಯಲ್ಲುದಕವ ಪಿಡಿದು38 ಸಂಭ್ರಮದಿಂದ ಸೂಸಿದರು39 ವಾಸುದೇವ ಕೃಷ್ಣ ಎನುತ ಮದನ ವಿಲಾಸದಿಂದಲಿ ನಿದ್ರೆಗೈದ 40
--------------
ಹೆಳವನಕಟ್ಟೆ ಗಿರಿಯಮ್ಮ
ನಾವು ಕುರುಬರು, ನಮ್ಮ ದೇವರು ಬೀರಯ್ಯಕಾವ ನಮ್ಮಜ್ಜ ನರಕುರಿಯ ಹಿಂಡುಗಳ ಪ ಅಷ್ಟಮದ ಮತ್ಸರಗಳೆಂತೆಂಬ ಟಗರುಗಳುದೃಷ್ಟಿ ಜೀವಾತ್ಮನೆಂತೆಂಬ ಆಡುಸೃಷ್ಟಿ ಸಿದ್ಧ ಪ್ರಸಿದ್ಧವೆಂತೆಂಬ ಹೋತಗಳುಕಟ್ಟಿ ಕೋಲಿನಲಿ ಇರಿಯುತಿಹ ನಮ್ಮಜ್ಜ 1 ವೇದಶಾಸ್ತ್ರ ಪುರಾಣವೆಂತೆಂಬ ಶ್ವಾನಗಳುಕಾದಿದ್ದು ನಮ್ಮಜ್ಜನ ಹಿಂಡೊಳಗೆಹಾದಿಗಾಣದೆ ಕೂಗಿ ಬಾಯಾರಿ ಕಾಲ್ಗೆಡಲುಆದರಿಸಿ ಅಂಬಲಿಯನೆರೆವ ನಮ್ಮಜ್ಜ 2 ಅರಿವೆಂಬ ಮರಿಗಳು ಹಿಂಡಿನೊಳಗಡೆ ಬರಲುಮರೆವೆಂಬ ವ್ಯಾಘ್ರ ಕಿರುಬ ತೋಳಗಳು ಹೊಕ್ಕುತರುಬಿ ಹಿಂಜಾವದಲಿ ಕುರಿಯ ಮುರಿವುದ ಕಂಡು ಅರಿತು ಅರಿಯದ ಹಾಗೆ ಇರುವ ನಮ್ಮಜ್ಜ 3 ಹುಟ್ಟುದಕೆ ಮೊದಲಿಲ್ಲ ಸಾವುದಕೆ ಕೊನೆಯಿಲ್ಲಹುಟ್ಟು ಸಾವಿನ ಹೊಲಬ ಬಲ್ಲ ನಮ್ಮಜ್ಜಅಷ್ಟು ಪ್ರಾಣಿಗಳಿಗೆ ಇಷ್ಟು ಅಂಬಲಿ ಮಾಡಿಹೊಟ್ಟೆ ತುಂಬುವ ಹಾಗೆ ಎರೆವ ನಮ್ಮಜ್ಜ 4 ಕಲಿಯುಗಕೆ ಗೌಡನಿವ ಸಂಗಾತಿ ಮಂತ್ರಿಸುತಕಲಿಯುಗಂಗಳನೆಲ್ಲ ಪೊರೆವಾತನೀತಜಲಜಾಕ್ಷ ಕಾಗಿನೆಲೆಯಾದಿಕೇಶವನ ಮನವೊಲಿಸಿ ಭಜಿಸದ ಮನುಜ ಹುಚ್ಚು ಕುರುಬ 5
--------------
ಕನಕದಾಸ
ನಿಖಿಳ ಯಾದವರೊಳಗೆಮಾನಾಭಿಮಾನವೆಳ್ಳನಿತಿಲ್ಲ ಕೃಷ್ಣ ಪ ದೇವಕೀದೇವಿಯುದರದಿ ಜನಿಸಿ ಬಾಲ್ಯದಲಿಓವಿ ಮೊಲೆ ಕುಡಿಸಿದಳ ಅಸುವ ಸೆಳೆದುಮಾವ ಕಂಸನ ಕೊಂದು ಮನುಜ ವೇಷದಲಿ ಗಾಂ-ಡೀವಿಯ ಮನೆಯ ಬಂಡಿ ಬೋವನಾದೆ1 ಸುರನದಿಯ ಸುತನು ಪಾಂಡವರಿಗಾಪ್ತನು ನಿನಗೆಪರಮಭಕ್ತನು ಸ್ವಯಿಚ್ಛಾ ಮರಣಿಯುಧುರದೊಳಗೆ ಪೂರ್ವ ವೈರದ ಶಿಖಂಡಿಯ ತೋರಿಶರಮಂಚದೊಳುಪಾಯದಲಿ ಮಲಗಿಸಿದೆ 2 ಸೋದರತ್ತೆಯ ಸೊಸೆಯ ಮಗ ನಿನಗೆ ಭಾವಿಸಲುಸೋದರಳಿಯನು ಮೂರು ಲೋಕವರಿಯೆಸಾಧಿಸಿಯೆ ಅಸಮ ಚಕ್ರವ್ಯೂಹವನು ರಚಿಸಿಸೋದರನ ಷಡುರಥರ ಕೈಲಿ ಕೊಲ್ಲಿಸಿದೆ 3 ಕುರುಪತಿಯ ಮೈದುನನ ಕೊಲ್ಲ ಬಗೆದವನ ಸಂ-ಗರದೊಳೇರಿಸಿ ನುಡಿದ ನುಡಿಯ ಕೇಳಿ ಮೈ-ಗರೆಯೆ, ರವಿ ಮಂಡಲಕೆ ಚಕ್ರದಿ ಮರೆಯ ಮಾಡಿನರನ ಕೈಯಿಂದ ಸೈಂಧವನ ಕೊಲ್ಲಿಸಿದೆ 4 ಶಪಥದಲಿ ರಣದೊಳರಸನ ಹಿಡಿವೆನೆಂಬವಗೆತಪಸಿಗಳ ತಂದು ತತ್ತ್ವವ ಬೋಧಿಸಿಕಪಟವರಿಯದ ನೃಪನ ಕೈಯೊಳನೃತವ ನುಡಿಸಿಉಪಮೆಯಲಿ ಶಸ್ತ್ರ ಪಂಡಿತನ ಕೊಲ್ಲಿಸಿದೆ 5 ಯಮಳರನು ಪಡೆದ ತಾಯಿಗೆ ಸಹೋದರನ ಭೂರಮಣರೊಳಗಗ್ಗಳೆಯನತಿ ಧೈರ್ಯನುಸಮರದಲಿ ರವಿಸುತನ ರಥಕೆ ಸೂತನ ಮಾಡಿಯಮಸುತನ ಕೈಲಿ ಮಾವನ ಕೊಲ್ಲಿಸಿದೆ 6 ಜನವರಿಯದಂತೆ ಜೀವನದೊಳಡಗಿರ್ದವಗೆಮನಕೆ ಖತಿಗೊಳಿಸಿ ಬರ ಸೆಳೆದು ನಗುತಅನುವರದೊಳಾಯತದ ತೊಡೆಯ ಸನ್ನೆಯ ತೋರಿಅನಿಲಜನ ಕೈಲಿ ಕೌರವನ ಕೊಲ್ಲಿಸಿದೆ7 ಉರಿಯೊಳಗೆ ಜನಿಸಿದಂಗನೆಯ ನಿಜಸುತರು ಮಂ-ದಿರದೊಳೈವರು ನಿದ್ರೆಗೈಯುತಿರಲುನರವೃಕೋದರ ಧರ್ಮನಂದನರನಗಲಸಿಯೆಗುರು ಸುತನ ಕೈಲಿ ಬಾಲಕರ ಕೊಲ್ಲಿಸಿದೆ 8 ಈ ವಿಧದೊಳವರ ಸುರಲೋಕದಲಿ ನೆಲೆಗೊಳಿಸಿಭಾವ ಮೈದುನರೈವರನು ರಕ್ಷಿಸಿಭೂವಲಯದೊಳು ಕೀರ್ತಿಯನು ಪಡೆದೆಸೆವ ನಮ್ಮದೇವ ನೆಲೆಯಾದಿಕೇಶವ ವೆಂಕಟೇಶ 9
--------------
ಕನಕದಾಸ
ನಿತ್ಯ ಇಂದಿರಾಧವನೊಲಿಮೆ | ಸಂಧಿಸುವುದೂ ಪ ಪರಮ ಪ್ರಿಯ ಗುರುವರ್ಯ ನರಸಿಪುರ ದಾಸರಪರಮ ಮಂಗಳ ನಾಮ ಸುಸ್ತವನದೀ ||ಉರುತರದ ಸಂಚಿತವು ಮಿಂಚಿನಂದದಿ ಕರೆಗುಗರುವ ವೇತಕೊ ಮನುಜ ಭಜಿಸೊ ನಿತ್ಯಾ 1 ಪಥ ದೊರಕಿತೆನಗೆ2 ಶ್ರೀದಾಸಗುರುತಿಲಕ | ಮೋದತೀರ್ಥರ ಪ್ರೀಯಭೇದಾಗಮಜ್ಞಾನಿ ಪ್ರಾಜ್ಞ ಮೌಳೀ ||ಆದರಿಸಿ ಉದ್ಧರಿಸು | ಮೋದಮಯ ರತ್ನನೇವಾದಿಗಜ ಪಂಚಾಸ್ಯ | ಬುಧಜನರ ಪ್ರೀಯಾ 3 ಜ್ಞಾನ ಪ್ರಕಾಶನೇ | ಜ್ಞಾನ ಮಾರ್ಗವ ತೋರ್ವಪೂರ್ಣೇಂದು ಮತ್ತುದಯ | ಘನಗುಣಜ್ಞಾ ||ಮೌನಿವರ ಕರುಣಿಸಿ | ನಿನ್ನಕಾಂಬುವ ಹದನನೀನೆ ತಿಳಿಸಲಿ ಬೇಕು | ಆ ನಮಿಪೆ ನಿನ್ನ 4 ಮುದ್ದು ಮೋಹನ ದಾಸ ಪದಕಮಲ ಭೃಂಗನೇಸಿದ್ಧಜನ ಸನ್ಮೌಳಿ | ತಿದ್ದಿ ಮನ್ಮನವಾಮಧ್ವಾಂತರಾತ್ಮಗುರು | ಗೋವಿಂದ ವಿಠಲನಮದ್ಗುರುವೆ ಮನ್ನನದಿ | ಸಿದ್ಧಿಸೋ ಜೀಯಾ 5
--------------
ಗುರುಗೋವಿಂದವಿಠಲರು
ನಿತ್ಯ ತೃಪ್ತಾ ಅನ್ಯರಿಂದಲಿ ಎನಗೆ ಏನು ಪ್ರಯೋಜನವೊ ಪ ದರುಶನಕೆ ಬಂದವ ನಾನಲ್ಲವೆಂದು ನಾನಂದು ಹರಿ ನಿನಗೆ ನುಡಿದದ್ದು ಮನಸ್ಸಿನೊಳಗೆ ಇರುತಿಪ್ಪದೇನಯ್ಯಾ ಬಿನ್ನಪವೆ ಲಾಲಿಸು ಶರಣ ಜನರ ಅಭಿಪ್ರಾಯವೊಂದು ಬಗೆ ಇಪ್ಪದೊ1 ನಿರುತ ವ್ಯಾಪ್ತತ್ವ ಕರುಣತ್ವ ಅಣುಮಹತ್ತು ಸರುವ ಚೇತನ ಜಡ ಮತ್ತೆ ಮತ್ತೆ ಪರಿ ಪರಿಯಿಂದಲಿ ನಿನ್ನಲಿ ಉಂಟು ನಿನ್ನ ವರ ಮೂರ್ತಿಗಳ ಪೇಳದೆ ಇದಷ್ಟು ವಿನಯದಲಿ 2 ಧ್ಯಾನಕ್ಕೆ ನೀನು ಪ್ರಧಾನನೆಂದು ನುಡಿದೆ ಅಪ್ರಮೇಯ ಕ್ಷೋಣಿಜನಕಿಂತ ದ್ವಾರದವರು ವೆಗ್ಗಳವಾಗೆ ಏನೆಂಬೆ ತಿರುವೇಂಗಳೇಶ ನಿನ್ನಾಟಕ್ಕೆ 3 ಮಿಕ್ಕ ಮಂದಜನಕೆ ನಿನ್ನ ಭಕುತರ ಮೇಲೆ ಭಕುತಿ ಪುಟ್ಟುವುದಕ್ಕೆ ನಾ ಪೇಳಿದದ್ದು ಅಕಟಕಟ ನಿನ್ನ ದೊರೆತನಕೆ ಏನೆಂಬೆ ತಕ್ಕ ಮಾತುಗಳೇನೊ ಆಲೋಚಿಸಿ ನೋಡೆ 4 ಹೊನ್ನು ಹಣ ತೂಗಬೇಕಾದರೆ ಮೊದಲಿಗೆ ಚಿನ್ನ ಹಾಕುವರೇನೊ ಚಿನ್ಮಯರೂಪ ಮುನ್ನೆ ನಿನ್ನವರ ದರುಶನವಾದ ಮೇಲೆ ಪಾ ವನ್ನ ಶಾರೀರನೆ ನಿನ್ನ ಕಾಂಬುವದುಚಿತ 5 ಜರೆಮರಣರಹಿತ ಸುಜನರ ಪರಿಪಾಲಾ ನಿ ನಿತ್ಯ ವಜ್ರಪಂಜರಾ ಜರಗೆ ವರವಿತ್ತ ದನುಜರ ವಂಶನಾಶಾ ನಿ ರ್ಜರ ನದಿ ಜನಕಾಂಬುಜ ರವಿ ನಯನ ದೇವಾ 6 ಸ್ಥೂಲಮತಿಯಿಂದ ಪೇಳಿದೆನೆಂದು ಚನ್ನಾಗಿ ಲಾಲಿಸು ಲಲಿತಾಂಗಿ ಲಕುಮಿ ರಮಣಾ ನೀಲಗಿರಿ ನಿವಾಸ ವಿಜಯವಿಠ್ಠಲ ವೆಂಕಟವಾಲಗವ ಕೈಗೊಳ್ಳು ಎನ್ನ ಯೋಗ್ಗಿತವರಿತು7
--------------
ವಿಜಯದಾಸ
ನಿತ್ಯ ನಿರುಪಮ ಚಿದಾನಂದ ಕರುಣಾಬ್ಧಿ ನೀನೆ ದೊರಕೆ ನಿಲುಕೆ ಅಪಮಂಗಳನೆ ಮಂಗಳವನಿತ್ತೆ ಮನಸಿಗೆ ನೀನು ಅಂಗ ಮಂಗಳವಾುತುಹಿಂಗಿದವು ದುರಿತಗಳು ಸಂಗವಿದ್ದರು ಜಡದ ತೊಂಗವವ ಮನ ಮೀರಿತುನುಂಗುತಿದೆ ದೋಷಗಳ ಬಂದಡೊಡಬನ ತೆರದಿ ಭಂಗವೆಂಬುದು ಹೋುತುಅಂಗ ಲಿಂಗದ ಕಾಂತಿ ಹೊಂಗಿ ಹೊರಹೊಮ್ಮುತಿದೆ ರಂಗ ನಿನ್ನೊಲವಾುತು ುನಿತು 1ಹೊನ್ನಿನೊಳಗಿದ್ದ ಮಲಿನವನಗ್ನಿ ಕಳಚಿದರೆ ಮುನ್ನಿನಂದದಿ ಮಲಿನವೆಹೊನ್ನಾದ ಕಬ್ಬಿನವು ಕಬ್ಬಿನದ ಸಂಗದಲಿುನ್ನು ಕಬ್ಬಿನ ಭಾವವೆಬೆಣ್ಣೆ ಕ್ಷೀರದಿ ಬಂದು ಘೃತವಾದ ಬಳಿಕ ತಾ ಬೆಣ್ಣೆಯಲ್ಲದೆ ಕ್ಷೀರವೆನಿನ್ನ ಕೃಪೆುಂದ ಮಂಗಳನಾಮವನು ಸ್ಮರಿಸೆ ನಿನ್ನವಗೆ ದೋಷ ಬಹವೆ ಇಹವೆ 2ಬಾಳೆಯನು ಬಿತ್ತಿ ಪ್ರತಿ ದಿವಸ ನೋಡಿದಡಲ್ಲಿ ನೀಳವಾಗಿಹುದು ಸುಳಿಯುಕಾಲ ಬಂದರೆ ಗೊನೆಯು ಹಾಯ್ದು ಫಲವಾಗಿರಲು ಮೇಲೊಮ್ಮೆಯುಂಟೆ ಯೆಲೆಯುಕಾಲ ಕರ್ಮಾಧೀನವಾಗಿರುವ ಸಂಸಾರ ಲೋಲ ಮನಸಿನ ವೃತ್ತಿಯುಜಾಲದಿಂದಿರಲಲ್ಲಿ ನಿನ್ನಂಘ್ರಿ ಸ್ಮರಣೆುಂಮೇಲುಂಟೆ ಕರ್ಮಗತಿಯು ಸ್ಥಿತಿಯು 3ವೃತ್ತಿ ಮಾಯಾಕಾರ್ಯ ಮಾಯೆ ನಿನ್ನಾಧೀನ ವೃತ್ತಿ ಮಾಯೆಯು ಕಲ್ಪಿತಸುತ್ತಿ ಸುಳಿಸುಳಿದಾಡಿ ಸತ್ಯದಂದದಿ ತೋರಿ ಮತ್ತೆ ನಿನ್ನೊಳಗರ್ಪಿತಚಿತ್ತು ತಾನೆ ನಾಮರೂಪಾದ ಬಗೆುಂದ ಚಿತ್ತು ಚಿತ್ತಾಹುದುಚಿತಸತ್ಯಸಂಧನು ನೀನು ಚಿತ್ತವನು ಬಿತ್ತರಿಸಿ ವೃತ್ತಿಯಾುತು ಬೆಳೆಯುತಾ ಇರುತಾ 4ಮನದ ಸಂಶಯ ಬಿಡದು ಶ್ರವಣಮನನಾದಿಗಳನನುದಿನವು ಮಾಡುತಿರಲುಮನಕೆ ಸಾಕ್ಷಿಕನಾದ ನೀನು ಘನಮಾಯೆಯನು ಮನಕೆ ಮರೆಮಾಡುತಿರಲುಚಿನುಮಯನೆ ಮಾಯೆಯನು ಕಡೆಗೆ ತೆಗೆಯಲು ಜ್ಞಾನ ಜನಿಸುವುದು ನೀನು ಕೊಡಲುಇನಕೋಟಿಸಂಕಾಶ ಇಭರಾಜದುರಿತಹರ ಎನಲು ನಿಜವಾಗುತಿರಲು ನಿಲಲು 5ತರಣಿಕಿರಣಗಳಿಂದ ಜನಿಸಿದಾ ಮೇಘಗಳು ತರಣಿಯನು ಮುಚ್ಚಲಳವೆತರಣಿ ತಾನೆನದಿವನು ಹರಹಿ ಹಿಂದಕೆ ತೆಗೆಯೆ ನೆರೆ ಹಿಂಗಿ ಹೋಗದಿಹವೆಪರಮಪುರುಷನು ನೀನು ಸ್ಮರಿಸಿ ಮಾಯೆಯ ಬೀಸಿ ತಿರುಗಿಸಲು ಮಾಯೆಗಿರವೆದುರಿತವಾಗಿರೆ ಜನಕೆ ನೆರೆ ಭಕ್ತಿಯನು ನೀನು ಕರುಣಿಸಲು ಮತ್ತೆ ಭವವೆ ಧ್ರುವವೆ 6ಅರಣಿುಂದುದುಭವಿಸಿದನಲ ಮುನ್ನಿನ ತೆರದ ಅರಣಿಯಾಗಿಯೆ ತೋರ್ಪನೆಅರೆದು ತಿಲವನು ತೆಗೆಯೆ ತೈಲವನು ತಿಲ ಬಳಿಕ ಇರುವದೆ ತೈಲದೊಡನೆಬೆರೆದು ಕರ್ಪುರವಗ್ನಿಯೊಡನಾಡಿ ಬೇರ್ಪಟ್ಟು ಮೆರೆವುದೆಂತಗ್ನಿಯೊಡನೆತಿರುಪತಿಯ ವೆಂಕಟನೆ ನಿನ್ನ ಚರಣದೊಳಿಟ್ಟ ಶರಣ ಮುನ್ನಿನ ಮನುಜನೆಯಹನೆ 7ಓಂ ಪುಣ್ಯ ಶ್ಲೋಕಾಯ ನಮಃ
--------------
ತಿಮ್ಮಪ್ಪದಾಸರು
ನಿತ್ಯ ನೂತನ ಮಹಿಮಭೃತ್ಯನನು ಪೊರೆಯೆಂದು | ಪ್ರಾರ್ಥಿಸುವೆ ಹರಿಯೇ ಅ.ಪ. ವಿತ್ತ ಕರ್ತು ನೀನಾಗಿರಲುಆರ್ತರುದ್ಧರ ಕಾರ್ಯ | ಪೂರ್ತಿಗೊಳಿಸೋ 1 ಉದಧಿ ವಿಧಿ ಜನಕ ವಿಶ್ವೇಶ | ಮುದ ಮುನಿಯ ಸದ್ವಂದ್ಯವದಗಿ ವರಪ್ರದನಾಗಿ | ಮುದವನ್ನೆ ಬೀರೋ 2 ಯೇಸೊ ಜನ್ಮದ ಪುಣ್ಯ | ರಾಶಿ ವದಗಿತೊ ಇವಗೆಆಶಿಸುವ ಹರಿದಾಸ್ಯ | ವಾಸವಾನುಜನೇ ಆಸುರೀ ಭಾವಗಳ | ನಾಶನವ ಗೈಯ್ಯುತ್ತಪೋಷಿಸುವುದಿವನ ಹರಿ | ದಾಸ್ಯ ಕರುಣಿಸುತಾ 3 ನಾನು ನನ್ನದು ಎಂಬ | ಹೀನ ಮತಿಯನೆ ಕಡಿದುದಾಸವಾಂತಕ ಸಲಹೊ | ಜ್ಞಾನ ಪ್ರದನಾಗೀಮೌನಿ ಮಧ್ವರ ಮತದಿ | ಸಾನು ಕೂಲಿಸಿ ದೀಕ್ಷೆಮಾನನಿಧಿ ಗುಣಪೂರ್ಣ | ನೀನಾಗಿ ಪೊರೆಯೋ 4 ಸರ್ವವ್ಯಾಪ್ತ ಸ್ವಾಮಿ | ನಿರ್ವಿಕಾರನೆ ದೇವಸರ್ವಜ್ಞ ಸರ್ವೇಶ | ಸರ್ವಸಮ ಮೂರ್ತೇಗುರ್ವಂತರಾತ್ಮಕನೆ | ದರ್ವಿಜೀವಿಯ ಕಾಯೊದುರ್ವಿ ಭಾವ್ಯನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ನಿತ್ಯ ಶುಭ ಮಂಗಳಂ ಪ ಮತ್ಸ್ಯಾವತಾರಿಗೆ | ವೇದ ಉದ್ಧಾರಿಗೇ ಪೊತ್ತ ಬೆನ್ನಲಿ ಗಿರಿಯ | ಮುದ್ದು ಕೂರ್ಮನಿಗೇ1 ದನುಜ ಸಂಹಾರಿಗೇ | ಮಧು ಕೈಟಭಾರಿಗೇ ವನದಿ ವಸನೆಯ ಪೊತ್ತ | ವರಹಾವತಾರಿಗೇ 2 ಪೋರನ್ನ ಪೋಷಕಗೆ | ಧಾರುಣಿಯ ಬೇಡ್ಡವಗೆಮೂರು ಲೋಕವನಳೆದ | ಮೂರ್ವಿಕ್ರಮ ನಿಗೇ 3 ಮೃಡ ಸಖನು ಕಾಳೀಯ | ಹೆಡೆಯ ಮೆಟ್ಟಿದಗೇ 4 ಬೆತ್ತಲೆ ನಿಂತವಗೆ | ಬುದ್ದಾವತಾರಿಗೇಉತ್ತಮ ಕಲ್ಕಿ ಗುರು | ಗೋವಿಂದ ವಿಠಲಗೇ 5
--------------
ಗುರುಗೋವಿಂದವಿಠಲರು