ಒಟ್ಟು 3520 ಕಡೆಗಳಲ್ಲಿ , 121 ದಾಸರು , 2542 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರಿವರದ ಗೋಪಾಲ ವಿಠಲ ಸಲಹೋ ಪ ತರಳನನು ನಿನ್ನಡಿಗೆ ಒಪ್ಪಿಸಿಹೆ ಹರಿಯೇ ಅ.ಪ. ಸ್ವಾಪದಲಿ ನರಸಿಂಹ ರೂಪದಲಿ ಕರವೆತ್ತಿಶ್ರೀಪತಿಯೆ ಅನುಗ್ರಹಿಸಿ ಕರುಣಿಸಿರುವೇಈ ಪರಿಯ ಮಹಿಮೆಗಳ ನಾ ಪೇಳಲಳವಿಲ್ಲಕೈಪಿಡಿದು ತರಳನ್ನ ಕಾಪಾಡೊ ಹರಿಯೇ 1 ಸಿದ್ಧಾಂತ ಜ್ಞಾನಗಳು ಸಿದ್ಧಿಯಾಗಲಿ ಇವಗೆಮಧ್ವ ಮತ ದೀಕ್ಷೆಯಲಿ ಶುದ್ಧವಾಗಿರಲೀಶುದ್ಧಭಕ್ತಿಯಲಿಂದ ವೃದ್ಧರನು ಸೇವಿಸಲಿಮಧ್ವ ವಲ್ಲಭ ನಿನ್ನ ಪ್ರಾಧ್ಯಾನ ವಿರಲೀ 2 ನಿತ್ಯ ಮಂಗಳದಾ 3 ಪರಿಪರಿಯ ಮಹಿಮೆಗಳ | ತೋರುತಲಿ ಇವನಲ್ಲಿಧರೆಯ ಜನಗಳಿಗೆಲ್ಲ | ತೋರಿ ಕೌತುಕವಾಮೆರೆವ ಸಂಪದವಿತ್ತು | ಮರೆಸಿದೆ ತವಸ್ಮøತಿಯಪೊರೆಯ ಬೇಕೆಂದೆನುತ | ಮೊರೆ ಇಡುವೆ ಹರಿಯೇ 4 ಅಷ್ಟ ಸೌಭಾಗ್ಯಗಳು | ಅಷ್ಟು ಸ್ಥಿರವಲ್ಲೆಂಬಸುಷ್ಠು ಮತಿಯಿಲ್ಲವಗೆ | ನಿಷ್ಠೆ ಇರಲೆಂಬಶೇಷ್ಠ ಭಿನ್ನಪಕೃಷ್ಣ | ದ್ವೈಪಾಯ ನಾತ್ಮಕನೆಕೃಷ್ಣ ಗುರು ಗೋವಿಂದ ವಿಠ್ಠಲನೆ ಸಲಿಸೋ 5
--------------
ಗುರುಗೋವಿಂದವಿಠಲರು
ಕರುಣ ಬಾರದೆ ವಿಠ್ಠಲಾ | ಶ್ರೀ ಪಾಂಡುರಂಗ ಪ. ಸ್ಮರಣೆ ಮಾಡುತ ಪೊರೆ ಎಂದೆನ್ನುತ ವರಲುವಾ ಧ್ವನಿ ಕೇಳದೇ ಈ ಪರಿಯ ಗರ್ವವಿದೇನೊ ಹರಿಯೆ ಅ. ದೂರದಿಂದಲಿ ಬಂದೆನೋ | ಇಲ್ಲಿಂದ ಮುಂದೆ ದಾರಿ ಕಾಣದೆ ನಿಂದೆನೋ ದ್ವಾರಕಾಪತಿ ನೀನಲ್ಲದಿ ನ್ನಾರು ಕಾಯುವರೀಗ ಪೇಳು ಸಾರಿದೆನು ನಿನ್ನಂಘ್ರಿ ಕಮಲವ ಚಾರು ಚರಿತನೆ ಮಾರನೈಯ್ಯ 1 ತನುಸುಖ ಬೇಡಲಿಲ್ಲಾ | ನಿನ್ನ ನಾನು ಘನವಾಗಿ ಕಾಡಲಿಲ್ಲ ಮನದ ಹಂಬಲ ನೀನೆ ಬಲ್ಲೆಯೊ ಮನಕೆ ತಾರದೆ ಸುಮ್ಮನಿಪ್ಪೆಯೋ ಎನಗೆ ಪ್ರೇರಕ ನೀನೆ ಅಲ್ಲವೆ ನಿನಗೆ ದಾಸಳು ನಾನು ಅಲ್ಲವೆ 2 ಕರೆಕರೆ ಪಡಿಸುವುದೂ | ಸರಿಯಲ್ಲ ನಿನಗೆ ಕರಿವರದ ಕೇಳು ಇದೂ ನರಸಖನೆ ದಯದಿಂದ ನಿನ್ನ ಚರಣ ದರುಶನವಿತ್ತೆ ಒಲಿದು ಕರಪಿಡಿದು ಸಲಹೆಂದರೀಗ ತೆರೆದು ನೋಡದೆ ನೇತ್ರವಿರುವರೆ 3 ಜ್ಞಾನಿ ಹೃತ್ಕಮಲವಾಸ | ಶ್ರೀ ರುಕ್ಮಿಣೀಶ ಭಾನುಕೋಟಿ ಪ್ರಕಾಶ ನೀನೆ ಗತಿ ಇನ್ನಿಲ್ಲ ಅನ್ಯರು ಸಾನುರಾಗದಿ ಸಲಹೊ ಎನ್ನಲು ಆನನದಿ ಈಕ್ಷಿಸದೆ ನಿಂತರೆ ಮಾನ ಉಳಿವುದೆ ಭಕ್ತವತ್ಸಲ 4 ಇಟ್ಟಿಗೆ ಕೊಟ್ಟವನೊ ಕೊಟ್ಟನಿನ್ನೇನು ಅಷ್ಟು ಭಾಗ್ಯವನೂ ಕೊಟ್ಟೆ ಬಡ ಬ್ರಾಹ್ಮಣನ ಅವಲಿಗೆ ದೃಷ್ಟಿ ಬಿದ್ದರೆ ಕಷ್ಟ ಉಂಟೆ ಕೊಟ್ಟು ಅಭಯ ಪೊರೆ ಗೋಪಾಲ- ಕೃಷ್ಣವಿಠ್ಠಲ ಮನದಿ ತೋರೋ5
--------------
ಅಂಬಾಬಾಯಿ
ಕರುಣ ಬಾರದೇ ಸ್ವಾಮಿ ಕರುಣ ಬಾರದೆ ಪ ಶ್ರುತಿ ಪುರಾಣ ವೇದ ಶಾಸ್ತ್ರ ಪತಿತಪಾವನ ನೀನೆಯೆಂದು ನುತಿಸಿ ಸಾರಿ ಪೇಳ್ವುದ ಕೇಳಿ ಪಿತ ನೀನೆಂದು ನಂಬಿದೆನಯ್ಯಾ ಅ.ಪ ಕಡಲಿಗುರುಳಿದೆನ್ನ ಕೈಯ ಪಿಡಿವರಿಲ್ಲ ಮಾರನಯ್ಯ ದಡವ ಸೇರಿಸಿ ಪಾಲಿಸೊ ಜೀಯ ಅಡಿಯ ಪಿಡಿದು ಬೇಡುವೆನು 1 ಶತಶತಾಪರಾಧಿ ನಾನು ಸತತ ದೀನದಯಾಮಯನು ಪಿತನು ಹಿತನು ನೀನೇ ಬೇರೆಗತಿಯ ಕಾಣೆ ಮಾಂಗಿರೀಶ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕರುಣದಿ ಕಾಯಬೇಕಿನ್ನು ಪ್ರಾಣೇಶ ಅರಿಯೆನೊ ಅನ್ಯರ ಜಗದ್ವಾಸ ಪ. ಪರಿಪರಿ ಬವಣೆಯ ಪರಿಹಾರಗೈಸುತ ತ್ವರಿತದಿ ಸಲಹೊ ಭಾರತಿಗೀಶ ಅ.ಪ. ಅನ್ನವಸನಗಳಿಗೆ ಅಲ್ಪರ ತೆರದೊಳು ಬನ್ನಬಡುತಲಿರಲು ನಿನ್ನ ಪಾದವ ನಂಬಿ ನೀ ಗತಿ ಎನುತಿರೆ ಮನ್ನಿಸಿದ ಮಹಿಮ ನಿಸ್ಸೀಮ 1 ಮನದಿ ಬಹುನೊಂದು ನಿನ್ನ ಘನತೇನೆಂದು ಅನುದಿನ ಕಾಯೊ ಎಂದು ಎನುತಿರೆ ಸ್ವಪ್ನದಿ ಹನುಮ ನಿನ್ನಭಯ ಹಸ್ತ ವನೆ ಶಿರದಿ ಇಟ್ಟೆ ಶ್ರೇಷ್ಠನೆ 2 ಉಭಯ ಹಸ್ತವು ಎನ್ನ ಶಿರದ ಮ್ಯಾಲಿಡುತಲಿ ಅಭಯ ಕೊಡುತಲಿರಲು ನಿರ್ಭಯದಿಂದ ನಾ ನಿನ್ನ ಭಜಿಪೆನಯ್ಯ ಶುಭಗುಣನಿಲಯ ಜೀಯಾ 3 ಹನುಮ ಭೀಮಾನಂದ ಮುನಿಯಾಗಿ ಜಗದಲಿ ಹನನಗೈಯುತ ದನುಜರ ವನಜಾಕ್ಷ ಹರಿಯನು ಘನವಾಗಿ ಸೇವಿಸಿ ಅನುದಿನದಲಿ ಕಾಯ್ವೆ ಸುಜನರ4 ಶ್ವಾಸಜಪವ ಮಾಡಿ ರಾಶಿ ಜೀವರ ಕಾಯ್ವೆ ಶ್ವಾಸ ನಿಯಾಮಕನೆ ಶ್ರೀಶ ಶ್ರೀ ಗೋಪಾಲಕೃಷ್ಣವಿಠ್ಠಲನಿಗೆ ಕೂಸು ಎಂದೆನಿಸಿರುವೆ ನೀ ಕಾವೆ 5
--------------
ಅಂಬಾಬಾಯಿ
ಕರುಣದಿ ಕಾಯೊ ಗೋಪಾಲಾಚರಣವ ಸ್ಮರಿಸುವೆ ಶರಣರ ಪಾಲಾ ಪ ಹರಣ ಹೋಗದ ಮುನ್ನ | ಹರಿ ನಿನ್ನ ಹಂಬಲನ್ನಕರುಣಿಸಿ ಕಾವುದೆನ್ನ | ಕರುಣ ನಿಧಿಯೆ ಘನ್ನಮೊರೆಯಿಡುವೆನು ನಿನ್ನ | ಚರಣ ಸರೋಜವನ್ನಶಿರದೊಳಗಿರಿಸೆನ್ನ | ಪರಮ ಪಾವನ್ನ 1 ಮರುತನ ಮತದಲ್ಲಿ | ಕರೆ ತಂದು ಎನ್ನನುತರತಮ ಜ್ಞಾನವ | ಅರುಹುವುದೊಳಿತಲ್ಲೆ |ಹರಿಯೆ ಸರ್ವೋತ್ತಮ | ಮರುತ ಜೀವೋತ್ತಮಹರ ವೈಷ್ಣವೋತ್ತಮ | ವರ ಜ್ಞಾನ ಪಾಲಿಸಿ 2 ಪನ್ನಗಾಚಲವಾಸ | ಪ್ರಸನ್ನರಘನಾಶನಿನ್ನ ನಾಮವ ಅನಿಶ | ಎನ್ನಿಂದ ನುಡಿಸೀಶ |ಅನ್ನಂತ ಗುಣ ಗುರು | ಗೋವಿಂದ ವಿಠಲನೆಎನ್ನ ಬಿನ್ನಪ ಸಲಿಸು | ಮನ್ನಿಸಿ ಕುಂದುಗಳ 3
--------------
ಗುರುಗೋವಿಂದವಿಠಲರು
ಕರುಣದಿ ಕಾಯೋ ಎನ್ನ ಕಾರುಣ್ಯನಿಧಿ ಕರುಣದಿ ಕಾಯೋ ಎನ್ನ ಪ ಚರಣಸೇವಕಭಯಹರಣ ಶ್ರೀ ಕೌಸ್ತುಭಾಭರಣ ಸೌಖ್ಯವಿ ತರಣ ನಿನ್ನಯ ಚರಣಯುಗಳವ ಶರಣುಹೊಕ್ಕೆನು ಅ.ಪ ಕರ್ಮತಂತ್ರವನುಳಿದು ಕಾಮಿಸಿ ಮ£ವ ನಿರ್ಮಲತ್ವವ ತೊರೆದು ಹಮ್ಮಿನಿಂದಲೆ ಭಕ್ತಿಯುಮ್ಮಳಿಸದೆ ಕಾಮವು ಹೊಮ್ಮುತಿದೆ ಪರಬೊಮ್ಮ ಮೂರುತಿ 1 ಸ್ನಾನ ಮೌನವ ತೊರೆದು ಸಂಧ್ಯಾದ್ಯನುಷ್ಠಾನ ನೇಮವ ಮರೆದು ಮಾನಸಪೂಜಾ ವಿಧಾನವನರಿಯದೆ ದೀನಜನಸುರಧೇನು ಭಕ್ತರಮಾನನಿಧಿಯಹ ಶ್ರೀನಿವಾಸನೆ2 ಶರಣಜನಾವನನೆ ಶಕ್ರಾದಿ ನಿರ್ಜರಕುಲಪಾಲಕನೆ ಪುರಹರ ಸನ್ನುತ ಚರಿತಪೂರಿತ ದುರಿತ ಸದ್ಗುಣ ಭರಿತ ಪುಲಿಗಿರಿ ವರದ ವಿಠಲ 3
--------------
ವೆಂಕಟವರದಾರ್ಯರು
ಕರುಣದಿ ಕಾಯೋ ಗೋವಿಂದಾ ಯಂವ ದುರಿತಗಳಿಂದ ನೀನೀಗೊ ಮುಕುಂದ ಪ ಹರಿಸೇವೆ ಮಾಡುತ್ತ ಬಂದೆ ಮುಂದೆ ಚಿರ ಸಾಯುಜ್ಯವನ್ನು ನೀಡೋ ಶರಣಂದೆ ಅ.ಪ. ಲಕ್ಷಯೆಂಬತನಾಲ್ಕು ಜನ್ಮಯೆತ್ತಿ ಭಕ್ಷಿಸಿ ಬಂದೆನು ಕೋಟಿ ದುಃಖಗಳಾ 1 ಸಾಕ್ಷಿಯಾಗಿರುವಂಥ ಜೀವಾತ್ಮನನು ಲಕ್ಷಕೆ ತಂದೆ ಮನುಜ ಜನ್ಮದಲೀ 2 ಪಾಪ ಪುಣ್ಯಕೆ ಕರ್ತೃವಾಗಿ ಭವದಿ ಕೂಪದಿ ನಿಂದೆನು ಬೋಕ್ತøವು ಆಗೀ 3 ಪಾಪವ ಕ್ಷಮಿಸೋ ಸರ್ವಾತ್ಮಯಂನ ತಾಪವ ನೀಗುತ್ತ ಜನ್ಮ ಪರಿಪರಿಸೋ4 ಜನ್ಮ ತಾಳಲಾರೆ ಹರಿಯೇ ತಾಳಿ ಜನ್ಮದಿ ಹರಿಪಾದ ನಾ ಬಿಡಲಾರೆ 5 ಸನ್ನುತವರ ದೂರ್ವಾಪುರದ ನಂಮ ಚನ್ನಕೇಶವನೇ ಭಕ್ತಿಯನು ನೀ ಕೊಡೆಲೋ6
--------------
ಕರ್ಕಿ ಕೇಶವದಾಸ
ಕರುಣದಿ ಕಾಯೋ-ಕರುಣಾಲ ವಾಲ ಪ ಶಿರಿಯರಸನೆ ನಿನ್ನ ಚರಣವ ನಂಬಿದೆ ಸುರಗಣ ಸೇವಿತ ಸುರರಾಜ ಪಾಲ ಅ.ಪ. ಸತಿ ಶಾಪದಿಂದರೆಯಾಗಿರಲಂದು ನೀದಯದಿ ಇಂದಿರೇಶನೆ ನೀ ||ಕರು|| 1 ಮಾರೆಹೊಕ್ಕರೆ ನುತಿಸಿ ಚಕ್ರದಿ ಮಕರಿಯನಿಕ್ಕಿ ಗಜೇಂದ್ರನರಕ್ಷಿಸಿದಾಪರಿಯಕ್ಕರೆ ತೋರಿಸಿ2 ಶಿರಸರಿಸಕ್ಕೆಗುರಿಯಿಡಲು ಚರಣದುಂಗುಟದಿಂದ ಧರಣಿಯನೂರಿ ನರನ- ಶಿರವುಳುಹಿದ ಶಿರಿ ವರದವಿಠಲ ಹರಿ3
--------------
ಸರಗೂರು ವೆಂಕಟವರದಾರ್ಯರು
ಕರುಣದಿ ಕಾಯೋಯನ್ನ ಕಾರುಣ್ಯನಿಧಿ ಕರುಣದಿ ಕಾಯೊಎನ್ನ ಪ ಚರಣ ಸೇವಕ ಭಯಹರಣ ಶ್ರೀಕೌಸ್ತುಭಾಭರಣ ಸೌಖ್ಯವಿತರಣ ನಿನ್ನಯ ಚರಣ ಯುಗಳವ ಶರಣುಹೊಕ್ಕೆನು ಅ.ಪ. ಕರ್ಮತಂತ್ರವನುಳಿದು ಕಾಮಿಸಿ ಮನ ನಿರ್ಮಲತ್ವವ ತೊರೆದು ಹಮ್ಮಿನಿಂದಲೆ ಭಕ್ತಿಯುಮ್ಮಳಿಸದೆ ಬಲು ನಿರ್ಮಲತ್ವವನಳಿದು ಪರ ಬೊಮ್ಮ ಮೂರುತಿ1 ಸ್ನಾನ ಮೌನವ ತೊರೆದು ಸಂಧ್ಯಾದ್ಯನುಷ್ಠಾನನೇಮವ ಮರೆದು ಮಾನಸ ಪೂಜಾ ವಿಧಾನ ವನರಿಯದೆ ದೀನಜನ ಸುರಧೇನು ಭಕ್ತರ ಮಾನನಿಧಿಯಹ ಶ್ರೀನಿವಾಸನೆ 2 ಶರಣಜನಾವನನೆ ಶಕ್ರಾದಿನಿ-ರ್ಜರಕುಲ ಪಾಲಕನೆ ಪುರಹರ ಸನ್ನುತ ಚರಿತದೂರಿತ ದುರಿತಸದ್ಗುಣ ಭರಿತ ಪುಲಿಗಿರಿ ವರದ ವಿಠಲ 3
--------------
ಸರಗೂರು ವೆಂಕಟವರದಾರ್ಯರು
ಕರುಣದಿ ಭವಾರ್ಣವದಿಂದಾ ದಾಟಿಸುವುದು ಜೀಯಾ ಪ ಯೋನಿ ಮುಖದಿ | ಘಾಶಿಯಾದೆನೋ ವಿಷಯಾಭಿಲಾಷದಿ | ಸೋಸಿದೆನೋ ದು:ಖ ತಾಪವ ಮಾರದೀ | ಮಾಯಾ ಮೋಹದಿ 1 ಧ್ಯಾನ ಮೌನವೆಂಬ ಸಾಧನವನು | ಈ ನಿಯಮ ಯಮ ಯೋಗವನು | ಙÁ್ಞನ ಭಕುತಿ ವೈರಾಗ್ಯವನು | ಏನು ಇಂತರಿಯದ ಮಹಾಪತಿತÀನು 2 ಮುನ್ನ ಮಾಡಿದೆಲ್ಲ ಪರಾಧ ಕ್ಷಮಿಸಿ | ಇನ್ನು ಅಭಯಕರ ಸಿರಸಲಿರಿಸಿ | ಎನ್ನ ಹೃದಯಾಲಂದಃ ಕಾರಹರಿಸಿ | ಸನ್ನುತ ಮಹಿಪತಿ ಎನ್ನ ಭಕ್ತನೆನಿಸಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣದಿ ರಕ್ಷಿಸುಯನ್ನನು-ಪುಲಿಗಿರಿ ಲೋಲ ನಂಬಿದೆ ನಿನ್ನನು ಕರುಣದಿ ರಕ್ಷಿಸು ಚರಣಸೇವಕ ಭಯಹರಣ ಸೌಖ್ಯವಿತರಣ ನಿನ್ನಯಚರಣ ಯುಗಳದಿ ಶರಣು ಹೊಕ್ಕೆನುಪ ಯತಿಗಣ ನೇಮವನರಿಯದ-ಸ್ವರ-ಗತಿತಾಳ- ಲಯಬಂಧ ತಿಳಿಯದ ಮಹಿಮೆಯ ಕೇಳದ ಶೃತಿಗೋಚರ ನಿಮ್ಮಸ್ತುತಿಯು ಅನುಭವವಿತ್ತು ಪತಿತ ಪಾವನ ಪುಲಿಗಿರೀಶನೆ ಪತಿತನುದ್ಧರಿಪಂತೆ ಗತಿಮತಿಗಳೇನೇನು ಅರಿಯದಪತಿತನೆನ್ನನು ಭವಜಲಧಿ ಮಧ್ಯದಿ 1 ಕೃಪರಮುಂದೆಡೆಯಲ್ಲಿ ದುರುಳದುಶ್ಯಾಸನನ ಕೈಯಲ್ಲಿ ಪಡಿಸಲೆಂದೆನುತಲುಜ್ಜುಗಿಸಲು ಪೊರೆಯೆಂದು ಮೊರೆಯಿಡಲಾಕ್ಷಣ ಸಂಸಾರ ಶ್ರೀಹರಿ ||ಕರು|| 2 ವರುಷ ಜಲದೊಳು ಪರಾತ್ಮರ ಪುಲಿಗಿರಿ ಕರಿ ಮೊರೆಯಿಡಲಾಗಬೇಗ ಕರುಣದಿಂ ಮೊರೆಕೇಳಿ ಗರುಡನ ಪೆಗಲೇರಿಸಾರಿ ಕರದ ಚಕ್ರದಿ ಸೀಳಿ ನಕ್ರನ ಕರಿಯ ಪೊರೆದಾ ವರದ ವಿಠಲ 3
--------------
ಸರಗೂರು ವೆಂಕಟವರದಾರ್ಯರು
ಕರುಣಾ ತೋರದದೇನೊ ನರಹರಿಯೆ ನಿನ್ನ ಕರುಣೆ ತೋರದೆ ಇರುವ ಪರಿಯೆನ್ಹರಿಯೇ ನಿನ್ನಯ ಕಮಲ ಸ್ಮರಣೆಯ ಇಹಪರಕೆ ಗತಿಯಂ ದಿರುವ ಮನಜರಿಗ್ಹರುಷದಿಂದಲಿ ಪ ಸುಸಾಮಗಾನಪ್ರಿಯ ನರಸಿಂಗ ದೈತ್ಯಾರಿ ಭಕ್ತಾಧೀನ ಗರುಡತುಂಗ ಕರುಣಾಂತರಂಗ ಶೌರಿ ಪುರಾಣಪುರುಷ ದಾನವಾಂತಕ ಶ್ರೀನಿವಾಸನೆ ಶರಪಾಣೆ ವಿಷ್ಟಕ್ಸೇನವರ ಗೀರ್ವಾಣವಂದಿತ ಜಾನಕೀಧರ ನೀನೇ ಸಲಹೆನೇ 1 ಸಂಯಮಿ ವೃಂದನುತ ಮುಚ- ಪಾಲನ ಕೃಪಾಸಿಂಧು ಶ್ರೀ ಗೋವಿಂದ ಇಂದಿರಾನಂದ ನಂದ ಗೋಪಿಯಾನಂದ ನಾಚ್ಯುತ ಮಂದರಧರ ಮಾಪತೆ ಕಂಬುಕಂಧರ ಇಂದು ಮುಖ ಶ್ರೀ ಸುಂದರಾಂಗನೆ ರೂಪದಿ ಬಂದು ಸ್ತಂಭದಿ ರಕ್ಷಿಸೆಂದೆನಲು ಹರಿ 2 ತ್ರಿಜಗದ್ಭರಿತ ಕೌಸ್ತುಭಹಾರ ನರಮೃಗಾಕಾರ ಮಂಗಳಕರ ಮಹಿಮಾ ಶರಣು ಭಾಸುರ ಕಿರೀಟನೆ ನಿರತದಲಿ `ಹೆನ್ನೆಪುರ ನಿಲಯ' ಸಿರಿಯರಸ ನಿನ್ನಯ ಮೊರೆಯ ಹೊಕ್ಕರೆ ತ್ವರದಲಿ ನೀ 3
--------------
ಹೆನ್ನೆರಂಗದಾಸರು
ಕರುಣಾ ಪೊಂದಿರೆ ಕೊರತೆಗಳುಂಟೆ ಶ್ರೀ ನರಹರಿಯ ಪ ನರಿಗಳ ಕೂಗಿಗೆ ಹುಲಿಯಂಜುವುದೆ ಬಿರುಗಾಳಿಗೆ ದೊಡ್ಡ ಗಿರಿ ನಡುಗುವುದೆ ಅ.ಪ ನಾನು ತಾನೆಂದು ಕುಣಿಯುತಲಿದ್ದ ಮಾನವರನು ಜರಿದು ನೀನೆ ಸೇವೆಯನು ಮಾಡೆಂದೆನುತ ತಾನೊಲಿಯುತಲಿ ಹೀನ ಜನರು ಅಪಮಾನವ ಬಯಸಲು ನಾನಿಹೆನೆನ್ನುವ ಜಾನಕಿನಾಥನ 1 ಬಂಧುಗಳೆನ್ನ ನಿಂದಿಸುತಿಹರು ಒಂದನೂ ಕೊಡೆಯೆಂದು ಹಿಂದು ಮುಂದೆನಗೆ ಕುಂದು ಕೋರುವರು ಒಂದನರಿಯರು ಮುಂದೆ ಎನಗೆ ಬಲು ತೊಂದರೆಗಳಿರುವು ವೆಂದು ಪೇಳುವರು ಮಂದರಧರನ 2 ಧನಿಕನಲ್ಲೆಂದು ಅಲ್ಲಗೆಳೆಯುವರು ಧನವಿಲ್ಲದಿರಲು ಘನತೆ ಎಂತೆಂದು ಜರಿಯುತಲಿಹರು ಮನವನರಿಯರು ಧನ ಪಿಶಾಚಿಯನು ಮನದಿಂದ ತೊಲಗಿಸಿ ಮನದಲಿ ನೆಲಸಿಹ ವನರುಹ ನಯನನ 3 ನಂಬಿದರೆಮ್ಮ ಧನಕನಕಗಳ ತುಂಬುವೆವೆಂಬ ಜಂಭದ ಮಾತ ನಂಬದೆ ಇರಲು ಹಂಬಲಿಸುವರು ನಂಬುವ ಭಕುತರ ಹಿಂಬಾಲಿಸುತಲಿ ಬೆಂಬಲಿವೀಯುತವ ಅಂಬುಜನಾಭನ 4 ಚತುರನಲ್ಲೆಂದು ಅತಿದೂರುವರು ಹಿತರಂತೆ ನಟಿಸಿ ಮಿತಿಮೀರಿ ಎನಗೆ ಬೋಧಿಸುತಿಹರು ಮನ್ಮತಿಯನರಿಯರು ರತಿಪತಿಯೆನ್ನನು ಪ್ರಸನ್ನನಾಗಿ ದಿವ್ಯ ಗತಿ ತೋರುತಲಿರೆ ಚತುರತೆಯೇತಕೆ 5
--------------
ವಿದ್ಯಾಪ್ರಸನ್ನತೀರ್ಥರು
ಕರುಣಾಕರ ದೇವಾ ಶೀತಾ ಚರನೋಕೆ ಕೇಶವಾ ಪ ಪಾತಕಾರಿ ವೋಂ ಪ್ರಸನ್ನಹನುಮನೆ ಪ್ರೀತಿಯೊಳಿರಿಸೆನ್ನಂ ನುತಿಸುವನಾ ನಿನ್ನಂ ಶರಣಂ 1 ಲಂಕಾಪುರದೀ ಕಿಂಕಿಣಿಧಾರಿ ಲಂಕಿಣಿಕೆ ಸಂಹಾರಿ ವಾಹನ ಹೌರ ಬ್ರಹ್ಮಚಾರಿ ಶರಣ ಕರು 2 ಪರಾಂಧಮ ತುಮ ಪ್ರಹ್ಲಾದಾರ್ಚಿತ ಪರಂದೇಹಿ ಸನ್ನಾಸಿ ಗೀರ್ವಾಣಭಾಷಿ | ಶರಣಂ 3
--------------
ಚನ್ನಪಟ್ಟಣದ ಅಹೋಬಲದಾಸರು
ಕರುಣಾಕರ ಭಕ್ತ ಪಾರಾಯಣ ಸತ್ಯನಾರಾಯಣ ಪ ಭಕ್ತಿ ಭಾವದೆ ನಿನ್ನ ಸೇರಿದೆನು ವ್ರತ ಮಾಡಿದೆನು ಸತ್ಯ ದೇವನೆ ಕೃಪೆ ತೋರುವುದು ವರ ನೀಡುವುದು ಸತ್ಯ ದೇವೇಶನೆÀ ಬೇಡುವೆನು ನುತಿ ಮಾಡುವೆನು 1 ಗಂಧ ಪುಷ್ಪಾಕ್ಷತೆ ದೀಪಗಳಿಂ ಪಂಚಫಲಂಗಳಿಂ ಇಂದಿರೇಶನೆ ನಿತ್ಯ ಭಾವಿಸಿದೆ ವಂದಾರು ಮಂದಾರ ಪಾಲಿಸೆನ್ನನು ಬೇಡಿಕೊಂಬೆನು 2 ಮೌನೀಶ ವಂದ್ಯನೆ ಸರ್ವೇಶನೆ ದೀನಪಾಲಕನೆ ಸುಜ್ಞಾನ ಭಾವಿಪುದು ನಿಜತೋರುವುದು ದಯೆಯಿಂದ ಬಹು ವಿಧದಿಂದ 3
--------------
ಬೇಟೆರಾಯ ದೀಕ್ಷಿತರು