ಒಟ್ಟು 783 ಕಡೆಗಳಲ್ಲಿ , 93 ದಾಸರು , 630 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರವಣ ಮಂಗಳನೀವುದೊ ಎನ್ನ ಕರ್ಣಗಳಿಗಾ- ನಂದ ಕೊಡುವುದು ಶರಣ ಜನರಿಗೆ ಬಂದ ದುರಿತಗಳ್ಹರಣ ಮಾಡುವುದು 1 ಭರಣ ಭೂಷಿತನಾದ ಲಕ್ಷ್ಮೀರಮಣ ನೀಲಾ- ವರಣ ನಿನ್ನ ಝಣ ಝಣಂದಿಗೆ ನಾದ ನೂಪುರ ಚರಣಕ್ವಂದಿಸುವೆ 2 ಕಮಲನಾಳದಿ ಪುಟ್ಟಿದಾತನ ಜನನಿ ಪತಿ ಜಗಜ್ಜನಕ ನಿನ್ನ ವನಜಪಾದಕೆ ನಮಿಸುವೆನೊ ಈ ಮನವು ನಿನ್ನಲ್ಲಿ 3 ನಿಲಿಸಿದರೆ ನಾ ನಿನ್ನ ನಾಮವ ನೆನೆಸಿದರೆ ಫÀಲಫಲಿಸಿ ಬಾಹೋದು ಒಲಿಸುವನು ವೈಕುಂಠಪತಿ ನೀ ಮನಸು ಮಾಡುವರೆ 4 ಘನಮಹಿಮ ಗಾಂಧಾರಿ ಸುತರನು ಹನನ ಮಾಡಿದ ಪವನ ಪ್ರಿಯನೇ ಜನುಮ ಜನುಮದಿ ನಿನ್ನ ಬಿಡೆ ನಾ ಜಗದ ವಲ್ಲಭನೆ 5 ಪತಿ ನಿನ್ನ ಸುಂದರಾಂಗವನು ತೋರದಲೆ ಭವ ಭಂಗ ಬಿಡಸುವು- ದ್ಯಾತಕೋ ಶ್ರೀರಂಗ ಪೇಳಿನ್ನು 6 ಚಕ್ರದಂದದಿ ತಿರುಗೊ ಎನಮನ ಚಕ್ರಧಾರಿಯೆ ನಿನ್ನ ಕಾಣದೆ ಶಕ್ರಸುತನ ಸಖನೆ ದಯಮಾಡ್ಹಕ್ಕಿವಾಹನನೆ 7 ಅನ್ನದಾತನು ಇರಲುಕಾಣದೆ ಅನ್ಯರಿಗೆ ಬಾಯ್ತೆರೆಯಲ್ಯಾತಕೆ ಪನ್ನಗಾದ್ರಿಶಯನ ನೀ ಸಲಹೆನ್ನ ಶ್ರೀಹರಿಯೆ 8 ಸರ್ವಗುಣ ಸಂಪನ್ನ ಸರ್ವೋತ್ತಮನೆ ಸರ್ವ ವ್ಯಾಪಾರಗಳನು ಸರ್ವಕಾಲದಿ ನಡೆಸುತಿರುವ ಸರ್ವರಾಧಾರಿ 9 ವರಮಹಾಲಕ್ಷ್ಮೀಪತಿಯೆ ವಾರಣವರದ ನಿನ್ನ ಸುರ ವಿರಿಂಚನಾ ಹರನು ವೀಣಾ- ಪಾಣಿನಾರದ ಬರಿದೆ ನಮಿಸುವರೆ 10 ಪರಮ ಕರುಣಾಶರಧಿ ಎನ್ನ ದುರಿತಗಳ ನೀ ದೂರ ಮಾಡುವೆ ಬಿರುದು ನಿನ್ನದÀು ಬಿಡದೆ ಭೀಮೇಶಕೃಷ್ಣ ಸಲಹೆನ್ನ 11
--------------
ಹರಪನಹಳ್ಳಿಭೀಮವ್ವ
ಶ್ರೀ ಅಕ್ಷೋಭ್ಯ ತೀರ್ಥರ ಚರಿತ್ರೆ ಅಕ್ಷೋಭ್ಯ ತೀರ್ಥಗುರು ಸಾರ್ವಭೌಮರು ಎಮ್ಮ ರಕ್ಷಿಪ ಕೃಪಾನಿಧಿಗೆ ಶರಣು ಶರಣೆಂಬೆ ಪಕ್ಷೀಶ ವಾಹನ್ನ ಲಕ್ಷ್ಮೀಶ ಕಮಲಾಕ್ಷ ವಿಷ್ಣು ಆತ್ಮಗೆ ಪ್ರಿಯ ಸತ್ತತ್ವವಾದಿ ಪ ಅಖಿಳಗುಣ ಆಧಾರ ನಿರ್ದೋಷ ಶ್ರೀರಮಣ ಜಗದಾದಿ ಮೂಲಗುರು ಅಗುರು ಶ್ರೀ ಹಂಸ ವಾಗೀಶ ಸನಕಾದಿ ದೂರ್ವಾಸಾದಿಗಳ ಪೀಳಿಗೆ ಗುರುಗಳಿಗೆ ಶರಣು ಶರಣೆಂಬೆ 1 ಅಚ್ಯುತ ಪ್ರೇಕ್ಷಾಖ್ಯ ಪುರುಷೋತ್ತಮತೀರ್ಥ ಅಚ್ಯುತ ಪ್ರೇಕ್ಷರ ಶಿಷ್ಯರೆಂದೆನಿಪ ಅಚ್ಯುತನ ಮುಖ್ಯಾಧಿಷ್ಠಾನ ಶ್ರೀಮಧ್ವ ಖಚರೇಂದ್ರ ಫಣಿಪಮೃಡ ಅಮರೇಂದ್ರವಂದ್ಯ 2 ಕರ ಅಬ್ಜಜರು ಪದ್ಮನಾಭನೃಹರಿ ಮಾಧವಾಕ್ಷೋಭ್ಯ ಈ ಮಹಾಗುರುಗಳು ಸರ್ವರಿಗು ಆನಮಿಪೆ ಸುಮನಸ ಶ್ರೇಷ್ಠರು ಮಹಿಯಲಿ ಪುಟ್ಟಿಹರು 3 ಸಾಧು ವೈದಿಕ ವೇದಾಂತ ಸತ್ತತ್ವ ಮತ ಮಧ್ವ ಮತವೇ ಅನ್ಯ ಯಾವುವೂ ಅಲ್ಲ ಎಂದು ನಿಶ್ಚೈಸಿ ಶೋಭನಭಟ್ಟಸ್ವಾಮಿ ಶಾಸ್ತ್ರಿ ಮೊದಲಾದವರು ಮಧ್ವಗೆರಗಿದರು 4 ಸೂರಿವರ ಶೋಭನ ಭಟ್ಟಾದಿಗಳಂತೆ ಸಾರಾಸಾರ ವಿವೇಕಿ ಗೋವಿಂದ ಶಾಸ್ತ್ರಿಯು ಮಹಾ ದೊಡ್ಡ ಪಂಡಿತರು ತಾನೂ ಎರಗಿ ಶರಣಾದರು ಮಧ್ವರಾಯರಲಿ 5 ಇಂಥಾ ಮಹಾತ್ಮರ ಇನ್ನೂ ಬಹು ಸಜ್ಜರನ ಉದ್ಧರಿಸಲಿಕ್ಕೇವೆ ಹರಿ ಅಜ್ಞೆಯಿಂದ ಈ ಧರೆಯಲ್ಲಿ ತೋರಿಹ ಮಧ್ವರಾಯರ ಶಾಸ್ತ್ರಿ ಬೇಡಿದರು ಸಂನ್ಯಾಸ ಕೊಡು ಎಂದು 6 ಸಚ್ಚಾಸ್ತ್ರ ಪ್ರವಚನ ಪಟು ವಿದ್ವನ್ಮಣಿಯು ನಿಶ್ಚಲ ಭಕ್ತಿಮಾನ್ ಸವೈರಾಗ್ಯ ವಿಪ್ರ ಅಚಲ ಸತ್ತತ್ವನಿಶ್ಚಯ ಜ್ಞಾನಿ ಶಾಸ್ತ್ರಿಗೆ ಅಕ್ಷೋಭ್ಯ ನಾಮನ ಇತ್ತರಾಚಾರ್ಯ 7 ಪ್ರಣವ ಮೂಲಾದಿ ಸುಮಂತ್ರ ಉಪದೇಶಿಸಿ ತನ್ನ ಮಠದಲ್ಲಿ ಅಕ್ಷೋಭ್ಯತೀರ್ಥರಿಗೆ ವನರುಹನಾಭರಿಂದ ನಾಲ್ಕನೇ ಸ್ಥಾನವ ಘನದಯದಿ ಇತ್ತರು ಆನಂದಮುನಿಯು 8 ಬದರಿಗೆ ಮೂರನೇ ಬಾರಿ ತೆರಳುವ ಪೂರ್ವ ಮಧ್ವ ಮುನಿ ನೇಮಿಸಿದ ಕ್ರಮದಿಂದಲೇವೆ ಮಾಧವ ತೀರ್ಥರು ವೇದಾಂತ ಪೀಠದಲಿ ಕುಳಿತುಜ್ವಲಿಸಿದರು 9 ಪದ್ಮನಾಭತೀರ್ಥರ ಪಾದಪದ್ಮಗಳಿಗೆ ಸದಾ ನಮೋ ನಮೋ ಎಂಬೆ ಇವರ ಪೀಳಿಗೆಯ ವಿದ್ಯಾಕುಶಲರು ಸೂರಿಗಳ ಚರಣಕ್ಕೆ ಸಂತೈಪರೆಮ್ಮ ಸದಾ ನಮೋ ಸರ್ವದಾ 10 ನರಹರಿತೀರ್ಥರು ಚರಣ ಸರಸೀರುಹದಿ ಶರಣಾದೆ ಕಾಯ್ವರು ಈ ಮಹಾನ್ ಇಹರು ವರಾಹ ತನಯಾ ಸರಿದ್ವರಾಕ್ಷೇತ್ರದಲಿ ಶ್ರೀ ವೃಂದಾವನದೊಳು ಹರಿಯ ಧ್ಯಾನಿಸುತ 11 ಮಾಧವತೀರ್ಥರ ಪಾದಪದ್ಮಗಳಿಗೆ ಸದಾನಮೋ ನಮೋ ಎಂಬೆ ಇವರ ಪೀಳಿಗೆಯ ಯತಿಗಳೂ ಭಕ್ತಿಮಾನ್ ಜ್ಞಾನಿಗಳ ಚರಣಕ್ಕೆ ಆದರದಿ ನಮಿಸುವೆ ಸದಾ ಪೊರೆವರೆಮ್ಮ 12 ಸುಲಭರು ಸುಜನರಿಗೆ ಶರಣರ ಸಲಹುವರು ಮಾಲೋಲನೊಲಿದಿಹ ಅಕ್ಷೋಭ್ಯತೀರ್ಥ ಬಲು ಖಿನ್ನ ಬ್ರಾಹ್ಮಣನು ಬ್ರಹ್ಮ ಹತ್ಯ ಮಾಡಿದವ ಕಾಲಲ್ಲಿ ಬಿದ್ದು ಶರಣಾದ ಗುರುಗಳಲಿ 13 ಗುರು ದಯಾನಿಧಿ ಅಕ್ಷೋಭ್ಯತೀರ್ಥರು ಆಗ ಶರಣಾದ ಪುರುಷನ ಪಶ್ಚಾತ್ತಾಪ ಖರೆಯೇ ಎಂಬುವುದನ್ನು ಜನರಿಗೆ ತಿಳಿಸಲು ಏರಿ ಮರ ನದಿಯಲಿ ಬೀಳೆ ಹೇಳಿದರು 14 ತನ್ನಯ ಮಹಾಪಾಪ ಕಳೆಯುವ ಗುರುಗಳು ಏನು ಹೇಳಿದರೂ ಮಾಡುವೆ ತಾನೆಂದು ಸನ್ನಮಿಸಿ ಗುರುಗಳಿಗೆ ನದಿ ಬದಿ ಮರಹತ್ತೆ ದೀನ ರಕ್ಷಕ ಗುರು ಇಳಿಯೆ ಹೇಳಿದರು 15 ವೃಕ್ಷದಿಂದಿಳಿದ ಆ ವಿಪ್ರಘಾತುಕನ ಮೇಲೆ ಅಕ್ಷೋಭ್ಯತೀರ್ಥರು ಶಂಖತೀರ್ಥವನ್ನ ಪ್ರೋಕ್ಷಿಸಿ ಆತನ ಮಹಾ ಬ್ರಹ್ಮಹತ್ಯಾ ದೋಷ ಕಳೆದರು ಪಂಕ್ತಿಯಲಿ ಸೇರಿಸಿದರು 16 ಶಂಖತೀರ್ಥದ ಮಹಿಮೆ ಅಲ್ಲಿದ್ದ ಜನರಿಗೆ ಶಂಕೆಯಲ್ಲದೆ ತಿಳಿಸಿ ಬಂದು ಬೇಡುವವರ ಡೊಂಕು ಕೊರತೆಗಳೆಲ್ಲ ನೀಗಿಸಿ ಯೋಗ್ಯದಿ ಶ್ರೀಕಾಂತನಲಿ ಭಕ್ತಿ ಪುಟ್ಟಿಸಿಹರು 17 ತಮ್ಮಲ್ಲಿ ಬೇಡುವ ಅಧಿಕಾರಿಯೋಗ್ಯರಿಗೆ ಶ್ರೀಮಧ್ವಶಾಸ್ತ್ರದ ದಾಢ್ರ್ಯ ಜ್ಞಾನ ಶ್ರೀ ಮನೋಹರನನ್ನ ಅಪರೋಕ್ಷಿಕರಿಸುವ ಸುಮಹಾ ಉಪಾಯವ ಅರುಹಿಹರು ದಯದಿ 18 ಮಧ್ವಸಿದ್ಧಾಂತ ಸ್ಥಾಪನ ಮಾತ್ರವಲ್ಲದೇ ವೇದ ವಂಚಕ ದುರ್ಮತಗಳ ಖಂಡನವ ಪೋದಕಡೆ ಮಾಡುತ್ತಾ ದಿಗ್ವಿಜಯ ಜಯಶೀಲ - ರೆಂದು ಮರ್ಯಾದೆಗಳ ಕೊಂಡಿಹರು ಜಗದಿ 19 ಅದ್ವೈತವಾದಿಯು ಶಾಂಕರ ಮಠಾಧೀಶ ವಿದ್ಯಾರಣ್ಯರು ಪ್ರಸಿದ್ಧ ಪಂಡಿತರು ಎದುರು ನಿಂತರು ಅಕ್ಷೋಭ್ಯ ತೀರ್ಥರ ಮುಂದೆ ವಾದಿಸಿದರು ಮುಳುಬಾಗಿಲು ಸಮೀಪ 20 ಶ್ವೇತಕೇತು ಉದ್ದಾಲಕರ ಸಂವಾದ ತತ್ವ ಮಸಿ ವಾಕ್ಯವೇ ವಾದದ ವಿಷಯ ವೇದಾಂತ ದೇಶಿಕರು ರಾಮಾನುಜೀಯತಿಯ ಅಧ್ಯಕ್ಷತೆಯಲ್ಲಿ ಸಭೆಯು ಕೂಡಿತ್ತು 21 ಛಾಂದೋಗ್ಯ ಉಪನಿಷತ್ತಲ್ಲಿರುವ ವಾಕ್ಯವು ಸಆತ್ಮಾ ತತ್ವಮಸಿ ಎಂಬುವಂಥಾದ್ದು ಭೇದ ಬೋಧಕವೋ ಅಭೇದ ಬೋಧಕವೋ ಎಂದು ವಾದವು ಆ ಈರ್ವರಲ್ಲಿ 22 ಆತ್ಮ ಶಬ್ದಿತ ನಿಯಾಮಕಗು ನಿಯಮ್ಯ ಜೀವನಿಗೂ ಭೇದವೇ ಬೋಧಿಸುವುದು ಆ ವಾಕ್ಯವೆಂದು ಸಿದ್ಧಾಂತ ಬಹುರೀತಿ ಸ್ಥಾಪಿಸಿದರು ಅಕ್ಷೋಭ್ಯರು ಸೋತಿತು ವಿದ್ಯಾರಣ್ಯರ ಐಕ್ಯವಾದ 23 ಅಸಿನಾತತ್ವ ಮಸಿನಾ ಪರಜೀವಪ್ರಭೇದಿನಾ ವಿದ್ಯಾರಣ್ಯ ಮಹಾರಣ್ಯಂ ಅಕ್ಷೋಭ್ಯ ಮುನಿರಚ್ಛಿನತ್ ಎಂದು ಬರೆದರು ತಮ್ಮಯ ಗ್ರಂಥದಲ್ಲಿ ಮಧ್ಯಸ್ತ ವೇದಾಂತದೇಶಿಕ ಸ್ವಾಮಿಗಳು 24 ಇಳೆಯ ಸಜ್ಜನರಿಗೆ ಜಯತೀರ್ಥರನಿತ್ತ ಮಾಲೋಲಪ್ರಿಯ ಅಕ್ಷೋಭ್ಯರ ಮಹಿಮೆ ಅಲ್ಪಮತಿ ನಾನರಿಯೆ ಇಲ್ಲಿ ಒಂದೋ ಎರಡೋ ಸ್ಥಾಲಿ ಪುಲೀಕ ನ್ಯಾಯದಲಿ ಪೇಳಿಹುದು 25 ನದಿ ದಡದಿ ಕುಳಿತಿದ್ದ ಅಕ್ಷೋಭ್ಯತೀರ್ಥರು ಎದುರಾಗಿ ನದಿಯಲ್ಲಿ ಆಚೆ ದಡದಿಂದ ಕುದುರೆ ಸವಾರನು ವರ್ಚಸ್ವಿ ಯುವಕನು ಬೆದರದೆ ಪ್ರವಾಹದಲಿ ಬರುವುದು ಕಂಡರು 26 ಕುದುರೆ ಮೇಲ್ ಆಸೀನನಾಗಿದ್ದ ಯುವಕನು ಕ್ಷುತ್‍ತೃಷಿ ಶಮನಕ್ಕೆ ಯತ್ನ ಮಾಡುತ್ತಾ ಉದಕವ ಕೈಯಿಂದ ತುಂಬಿಕೊಳ್ಳದಲೇ ಎತ್ತುಗಳು ಕುಡಿವಂತೆ ಬಾಯಿ ಹಚ್ಚಿದನು 27 ಮಾಧವ ಮಧ್ವರು ಮೊದಲೇ ಸೂಚಿಸಿದಂತೆ ಇಂದು ಆ ಕುರುಹರಿತು ಅಕ್ಷೋಭ್ಯರು ಇದು ಏನು ಪಶುವಂತೆ ಎಂದು ಧ್ವನಿಗೂಡಲು ಹಿಂದಿನ ಜನ್ಮ ಯುವಕಗೆ ನೆನಪು ಬಂತು 28 ಪಶು ಶಬ್ದ ಗುರುಮುಖದಿಂಬಂದಲಾಕ್ಷಣ ಪೂರ್ವ ಸಂಸ್ಕಾರ ಪ್ರತಿಭೆಯು ಉದಯವಾಯ್ತು ದಶಪ್ರಮತಿಗಳ ತಾನು ಎತ್ತಾಗಿ ಸೇವಿಸಿದ್ದು ಹಸನಾಗಿ ಟೀಕೆ ಬರೆಯಲಾಜÉ್ಞ ಕೊಂಡದ್ದು 29 ನಗಾರಿಸಮ ಬಲಿಯುವಕನು ಪ್ರವಾಹದ ವೇಗ ಲೆಕ್ಕಿಸದಲೇ ದಡಕೆ ತಾ ಬಂದು ಮುಗಿದುಕರ ಬಾಗಿಶಿರ ನಮಿಸಿ ಅಕ್ಷೋಭ್ಯರ ಆಗಲೇ ಸಂನ್ಯಾಸ ಕೊಡಲು ಬೇಡಿದನು 30 ಗಾಧಿ ಅರ್ಜುನ ಸಮ ಬಲರೂಪದಲಿ ತೋರ್ಪ ಈತ ರಾಯರ ಸುತನಾದರೂ ವೈರಾಗ್ಯ ಯುತ ಭಕ್ತಿಮಾನ್ ಸುಶುಭಲಕ್ಷಣನು ಎಂದು ಹರಿ ಮಧ್ವನಿಯಮಿತ ಅವಗೆ ಕೊಟ್ಟರು ಸಂನ್ಯಾಸ 31 ಶ್ರೀಯಃಪತಿಗೆ ಪ್ರಿಯತರ ಜಯತೀರ್ಥನಾಮವ ದಯಾಶೀಲ ಹೊಸಯತಿಗೆ ಇತ್ತು ಅಭಿಷೇಕ ಅಕ್ಷೋಭ್ಯ ಗುರುಮಾಡೆ ಗಗನದಿಂ ಪೂವರ್ಷ ಜಯ ಘೊಷ ಹರಡಿತು ಪರಿಮಳ ಸುಗಂಧ 32 ಶ್ರೀಮಧ್ವಾಚಾರ್ಯರು ಬೋಧಿಸಿ ತೋರಿಸಿದ ರಮಾಪತಿ ಪೂಜಾಸತ್ತತ್ವವಾದ ದುರ್ಮತ ಖಂಡನದ ರೀತಿಯ ಜಯಾರ್ಯರಿಗೆ ಸುಮ್ಮುದದಿ ಅರುಹಿದರು ಗುರುಸಾರ್ವಭೌಮ 33 ಶೀಲತಮ ಗುರುವರ್ಯ ಅಕ್ಷೋಭ್ಯತೀರ್ಥರು ಇಳೆಯಲ್ಲಿ ಮಧ್ವಮತ ಹರಿಭಕ್ತಿಯನ್ನ ಬೆಳೆಸಲು ಪ್ರತ್ಯೇಕ ಮಠವ ಸ್ಥಾಪಿಸಿದರು ತ್ರೈಲೋಕ ಭೂಷಣ ತೀರ್ಥರ ಮೊದಲ್ಮಾಡಿ34 ಆದಿ ಮಠ ಹರಿನೈದು ಸಮೀಪ ಪಟ್ಟವ ಆಳಿ ಹನ್ನೊಂದು ನೂರು ಅರವತ್ತೇಳ ಶಕವರುಷ ವದ್ಯ ಪಂಚಮಿ ಮಾರ್ಗಶಿರ ವಿಶ್ವಾವಸುವಲ್ಲಿ ಮಧ್ವ ಹೃದಯಾಬ್ಜಗನ ಪುರವ ಐದಿದರು 35 ಮತ್ತೊಂದು ಅಂಶದಲಿ ಮಳಖೇಡ ಗ್ರಾಮದಲಿ ನದಿ ತೀರದಲಿ ಹರಿಯ ಧ್ಯಾನ ಮಾಡುತ್ತಾ ಬಂದು ಬೇಡುವವರಿಷ್ಟಾರ್ಥ ಪೂರೈಸುತ ವೃಂದಾವನದಲ್ಲಿ ಕುಳಿತಿಹರು ಕರುಣಿ 36 ಶಾಶ್ವತ ಸರ್ವಾಶ್ರಯ ಗುಣಗಣಾರ್ಣವ ಅನಘ ಜೀವ ಜಡ ಭಿನ್ನ ಪರಮಾತ್ಮ ವಿಧಿತಾತ ಮಧ್ವಹೃತ್ಪದ್ಮಗ ಶ್ರೀ ಪ್ರಸನ್ನ ಶ್ರೀನಿವಾಸಗೆ ಸರ್ವದಾಪ್ರಿಯ ಅಕ್ಷೋಭ್ಯ ಗುರೋ ಶರಣು 37 ಪ || ಶ್ರೀ ಅಕ್ಷೋಭ್ಯ ತೀರ್ಥಚರಿತೆ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಕೃಷ್ಣ ಚರಿತ್ರೆ ಅಧ್ಯಾಯ ಒಂದು ರಾಗ:ಸೌರಾಷ್ಟ್ರ ತಾಳ:ತಿವಿಡೆ ಸ್ವರ ಋಷಭ ಶ್ರೀ ರಮಣ ಚರಣಾರವಿಂದವ ಆರಡಿ ಪರಿಯಾಗಿ ಸೇವಿಸಿ ಶ್ರೀ ರಮಾ ಬ್ರಹ್ವಾದಿ ಗುರುಪದ ಸೇರಿ ಸೇವಿಸುವೆ| ನಾರಿಮಣಿ ಶಿರಿದೇವಿ ಅಪಾರ ಮಹಿಮೆಯ ತಿಳಿವುದಕೆ ಪೂರ ಮನಗಂಡಿಲ್ಲ ಮತ್ತಿನ್ನಾರು ಬಲ್ಲವರು 1 ಆರಗೊಡವಿನ್ನೇನು ಮತ್ತಿನ್ನಾರು ದೂರಿದರೇನುಸರ್ವವು ಪೂರಮಾಡುವ ನಮ್ಮ ಗುರುಗಳ ಪೂರದಯವಿರಲು| ಮನದಲಿ ಘೋರತರ ಅಭಿಲಾಷೆ ಯೋಗ್ಯತೆ ಮೀರಿ ಇರುವುದು 2 ಮನಸಿನಲಿ ಮಾತ್ಸರ್ಯವಿಲ್ಲದೆ ಘನಕವೀಶ್ವರಗಳಿಗೆವಂದಿಸಿ ಅನುಸರಿಸಿ ಭಾಗವತವನು ಬಹುವಿನುತ ದಶಮ ಸ್ಕಂದದರ್ಥವ ಕನ್ನಡಿ ತೋರಿಸಿದಂತೆ ಸ್ಪಷ್ದದಿ ಕನ್ನಡಿಲ್ಹೇಳುವೆನು 3 ಪದ್ಯ ಭಾರ ಆಘೋರದುಃಖವನು ಶ್ರೀ ರಮೇಶನ ಸ್ತುತಿಸುತಿರುವ ಕಾಲದಲಿ| ಸಾರ ಸಾರಿ ಹೇಳಿದನು ವೃಂದಾರ ಕರುಗಳಿಗೆ 1 ಪದ, ರಾಗ:ಯರಕಲಕಾಂಬೋದಿ ಅಟತಾಳ ಸ್ವರಧೈವತ ಕೇಳಿರೋ ಭೋ ದೇವತೆಗಳಿರಾ ಹೇಳುವೆ ಹರಿಭಾವವ ಹೇಳಿರೋ ನಿಮ್ಮವರಿಗೆಲ್ಲಾ ಭಾಳ ಸಂತೋಷದಿಂದಲೇ ಪ ಇಷ್ಟುದಿವಸ ಭೂದೇವಿ ಕಷ್ಟವ ಬಟ್ಟಳು ಬಹಳ ಸ್ಪಷ್ಟವಾಗಿ ಆಕೆಯಾ ಕಷ್ಟವು ದೂರಾಗುವುದಿನ್ನು || ವಿಷ್ಣುನಾಜ್ಞೆಯಲಿ ನೀವು ವೃಷ್ಣಿ ಕುಲದಲ್ಹುಟ್ಟಿರೋ|| ವಿಷ್ಣುತಾ ದೇವಕಿಯಲ್ಲಿ ಕೃಷ್ಣನಾಗಿ ಹುಟ್ಟುವಾ1 ಪದ ಈ ವಚನವ ಕೇಳಿ ದೇವತಿಗಳಾಗ ಹರಿಸೇವೆ ಆಗಲಿಯೆಂಬೋ ಭಾವದಲಿ ಜನಿಸಿದರು| ಈ ವಸುಧಿಯೊಳಗವರು ಭಾವಕನು ಕಶ್ಯಪ ವಿಭಾವಸುವನ ಪೋಲ್ವ ವಸು ದೇವನಾದನು ಅದಿತಿದೇವಿ ತಾ ಜನಿಸಿದಳು ದೇವಕಿಯು ಆಗಿ| ದೇವ ಪೂಜಕನು ವಸುದೇವ ತಾ ಪ್ರೀತಿಯಲಿ ದೇವಕಿಗೆ ಕೊಟ್ಟ ಸದ್ಭಾವದಲಿ ಬೇಕಾದ್ದು ದೇವಕಿಯಲಿ ವಸುದೇವ ರಥವೇರಿದನು ಆವಾಗ ಕಂಸ ತಾ ತೀವ್ರ ನÀಡಿಸಲಾವತ್ತಿಗಾಯಿತಲ್ಲೆ ವಿಯದ್ವಾಣಿ ಪದ, ರಾಗ(ದೇಸಿ) ಅಟತಾಳ, ಸ್ವರಷಡ್ಜ ಕೇಳು ಕಂಸನೆ ನಿನಗೇಳುವೆ ನಾ ಬಂದು| ಕೇಳು ಕಂಸಾ|| ಬಹಳ ದಿವಸ ಬಾಳಿ ಇರುವವನಲ್ಲ ಕೇಳು ಕಂಸ ಪ ಮಂಗಳಾಂಗಿಯು ಈಕೆ ತಂಗಿ ಎಂದೆನಬೇಡ ಕೇಳು ಕಂಸಾ| ತಂಗಿಯ ಮಗನೇ ನಿನ್ನಂಗಕ್ಕೆ ವೈರಿಯು ಕೇಳು ಕಂಸಾ|| 1 ಭಂಡ ನಾನೆಂದು ಉತ್ಕಂಠಿದಿಂದರ ಬೇಡ ಕೇಳು ಕಂಸಾ| ಎಂಟನೆಯವ ನಿನ್ನ ಘಂಟಸಿ ಕೊಲ್ಲುವನು ಕೇಳು ಕಂಸಾ|| 2 ವೈರಿ ದಾವಾತಿದ್ದಾನೆಂದೆನ ಬೇಡ ಕೇಳು ಕಂಸಾ| ಶುದ್ಧ ಅನಂತಾದ್ರೀಶ ಅವತಿಳಿ ಕೇಳು ಕಂಸಾ|| 3 ಪದ್ಯ ನುಡಿದಿರುವ ಆ ಸತ್ಯವಾಣಿಯ ಕೇಳಿ ಮೃತ್ಯುಗಂಜಿಕೀನ್ನ ಹೊತ್ತುಗಳೆಯದಲೆ ಆ ಹೊತ್ತು ಕೊಲಬೇಕೆಂದು ಸತ್ವರದಿ ಕೇಶದಲಿ ಒತ್ತಿ ಹಿಡಿದು ಕತ್ತಿ ಹಿರಿದೆತ್ತಿದನು ಕÀಂಸಾ| ಆ ವೃತ್ತಿಯನು ತಿಳಯುತಲೆ ಅತ್ಯಂತವಾಗಿ ತನ್ನ ಚಿತ್ತದಲಿ ಮಿಡುಕಿ ಮದಮತ್ತ ಕಂಸಗೆ ನುಡಿದ ಒತ್ತಿ ಈ ಪರಿಯಾ || 1 ಪದ, ರಾಗ:ಆನಂದಭೈರವಿ ಆದಿತಾಳ ಬೇಡಲೊ ನೋಡಿ ಈಕೆಯಲಿ ಮಾಡು ಮಮತೆಯನು ಮಾಡಬೇಡ ಹಿಂಸಾ|| ಪ ಯಾಕೆಕೊಲ್ಲುವಿಯೋ ನೀ ಕರುಣಿಸು ಸಣ್ಣಾಕಿ ನಿರ್ಮಲಾಂಗಿ|| 1 ಕೊಂದರೆ ಎನಗೆ ಕೇಡು | ಮತ್ತದರಿಂದ ನಿನಗೆ ಕೇಡು ತಿಳಿದು ನೋಡು|| 2 ಏಸು ದಿವಸ ನೀನು ಬದುಕುವಿ ನಾಶವಿಲ್ಲವೇನು| ಮೋಸವಾಗದಿರು ಶ್ರೀಶ ಅನಂತಾದ್ರೀ ಕೋಪಿಸುವನು 3 ಆರ್ಯಾ ಬಹಳ ರೀತಿಯಲಿ ಹೇಳಿಕೊಂಡರೂ ಕೇಳಲಿಲ್ಲ ಕಂಸನು ಶೌರಿಯು ಹೀಗೆ || 1 ಪದ, ರಾಗ:ಅನಂದ ಭೈರವಿ ತಾಳ:ಆದಿ ಬೇಡಿದ್ದು ಕೊಡುವೆನು ನಾನು| ಪ ಜೇವ ಹತ್ಯವೇ ಮುಂಚೆ ಕೇವಲ ನಿಂದ್ಯದು ಸ್ತ್ರೀ ವಧಕಂತು ಇನ್ನು ದಾವುದು ಸರಿಯದು || 1 ಹುಟ್ಟುದರೀಕೆಯ ಹೊಟ್ಟೆ | ಮಕ್ಕಳು ಘಟ್ಟಿ ಮನಸು ಮಾಡಿ ಕೊಟ್ಟುಬಿಡುವೆನು ಕೇಳು || 2 ಬಲ್ಲಿದಾನಂತಾದ್ರಿವಲ್ಲಭನ ಆಣಿ|| 3 ಪದ, ರಾಗ:ಯರಕಲಕಾಂಬೋಧಿ ಶೌರಿಯ ವಚನವ ಕೇಳಿ ವೈರಿಯ ಕಂಸನು ಆಗ ಮೋರೆಯ ತೆಗ್ಗಿಬಿಟ್ಟನು ನಾರಿಯ ಕೊಲ್ಲುವದು | ವೈರಿಯ ಭಯ ಕಳೆವುತ ನಾರಿಯ ಕರಕೊಂಡು ||1 ಮುಂದಾ ದೇವಕಿಯಲಿ ಕಂದನು ಆದಾಕ್ಷಣಕೆ ತಂದೊಪ್ಪಿಸಿದನು ಕಂಸಗೆ ನೊಂದ ವಸುದೇವ| ಮುಂದಾ ಕಂಸನ ನೋಡಿ| ಮನನ ಹಾಸ್ಯದಿ ಮತ್ತ ಕಂದನ ತಿರಿಗಿ ಒಪ್ಪಿಸಿ ಆಗಂದನು ಈ ಪರಿಯು || 2 ಶಿಷ್ಟನೆ ನೀಕೇಳೈ ಬಂದಿಷ್ಟಿಲ್ಲಿವನಿಂದೆನಗೆ| ಸ್ಪಷ್ಟದಿ ನಿನಗ್ಹೇಳುವೆ ಎನಗಷ್ಟಮನೇ ವೈರಿ| ದುಷ್ಟನ ಮಾತಿಗೆ ಶೌರಿಯು ತುಷ್ಟನು ಇದು ಎಂದು || 3 ಪದ, ರಾಗ:ಕನ್ನಡ ಕಾಂಬೋದಿ ತಾಳ:ಬಿಲಂದಿ ಮುಂದ ಶೌರಿಯು ತನ್ನ ಮಂದಿರಕ್ಕೆ ಪೋಗಲು ಬಂದ ನಾರದನು ಆಗಲ್ಲೆ ಕಂಸ ಇದ್ದಲ್ಲೆ || 1 ಮಾಡಿದಾ | ಮಾತನಾಡಿದಾ|| 2 ಸುದ್ದಿಯಂಬೋದ್ಹುಟ್ಟಿತು | ಕೆಲಸ ಕೆಟ್ಟಿತು|| 3 ದಾವ ಮೊತೇನ್ಹೇಳಲಿ ದೇವದೇವ ಶ್ರೀಹರಿ ದೇವಕಿಯಲ್ಲಿ ಪುಟ್ಟುವಾ| ನಿನ್ನ ಕೊಲ್ಲುವಾ|| 4 ಅಸುರರಾದವರುಗಳಾ ಅಸುಗಳನ್ನೆ ಹೀರುವಾ ವಸುಧಿ ಭಾರವನಿಳಿಸುವಾ ಕೀರ್ತಿ ಬೆಳಿಸುಮವಾ|| 5 ನಂದಗೋಪಾದಿUಳೆÀಲ್ಲ ನಂದ ಬಾಂದವರು ಮತ್ತು ಮುಂದ ವಸುದೇವಾದಿಗಳು | ದೇವತಿಗಳು|| 6 ಇನ್ನಕೇಳು ಇವರ ಹೊರ್ತು ಅನ್ನರಾದವರು ಎಲ್ಲಾನಿನ್ನ ಅನುಸರಿಸೆ ಇರುವುವರು | ಅಸುರರೇ ಅವರು|| 7 ಮೂಲದಲ್ಲೇ ಮುಂಚೆ ನೀ ಕಾಲನೇಮಿಯೆನಿಸಿ ಈ ಕಾಲಕ್ಕೆ ಕಂಸನಾಗಿರುವಿ | ಮೈಮರ್ತು ಇರುವಿ || 8 ನಿನ್ನ ಪೂರ್ವ ವೈರಿಯು ಚನ್ನಿಗಾನಂತಾದ್ರೀಶಾ ನಿನ್ನ ಕೊಲ್ಲುವನೆಂಬುದದು |ನಿನಗೆ ತಿಳಿಯದು || 9 ಧಿಟ್ಟ ನಾರದನು ಮುನಿಮುಟ್ಟಿ ಬಂದ್ಹೀಂಗನಲು ಥಟ್ಟನೆ ಕಂಸ ಭಯಬಟ್ಟು ಅವರಿಬ್ಬರಿಗೆ ಘಟ್ವ ಬೇಡಿಯ ಬಿಗಿದು ಹುಟ್ಹುಟ್ಟದವರನ್ನ ಬಿಟ್ಟು ಬಿಡುದಲೆÀ ಕೊಂದ ಹುಟ್ಟಿದಾಕ್ಷಣಕೆ|| ಹುಟ್ಟುಗ್ರ ಸೇನನಲಿ ಹುಟ್ಟಿದಾರಭ್ಯ ಬಹು ದಿಟ್ಟಾದ ಸ್ನೇಹವನು ಬಿಟ್ಟ ಆ ಕಂಸ ಕಂಗೆಟ್ಟು ಬಹುಕಾಸೋಸಿ ಬಟ್ಟವನ ಬಂದಿಯ ಲ್ಲಿಟ್ಟುತಾನೆ ಆದ ಪಟ್ಟಕಾಧಿಪತಿಯು|| 1 ಪದ:ರಾಗ:ಶಂಕರಾಭರಣ ಸ್ವರ:ಷಡ್ಜ, ತಾಳ:ಆದಿ ಯೂದವರನ್ನು ಬಹುಪೀಡಾ ಬಡಿಸೀದಾ || 1 ದುಷ್ಟನ ಕೈಯೊಳು ಸಿಕ್ಕು ಶಷ್ಟ ಬಡಲಾರೆವು ಎಂದು ಅಷ್ಟೂರು ನಿಲ್ಲದೆ ದೇಶಭ್ರಷ್ಟರಾಸರು|| 2 ಅನುಬಂಧಿಗಳೆಂಬುವರು ಅನುರಾಗದಿಂದಲ್ಲೆ| ಅವನ ಅನುಸರಿಸಿಕೊಂಡಿರುತಿಹರು ಅನುದಿನದಲ್ಲಿ||3 ಕ್ರೂರಾಗಿ ಇರುವೊನು ಕಂಸಾ ನಾರಿ ದೇವಕ್ಕಿ ದೇವಿಯು ಆರು ಮಹಾಕಾಳಿಯ ಹರೊ ಆಜ್ಞೆಯಿಂದ ಕೀಳುತು ರೋಹಿಣಿ ಗರ್ಭದೊಳಿಟ್ಟಳು|| 4 ದೇವಕಿದೇವಿಯು ವಸುದೇವಾದಿಗಳೆಲ್ಲ ಗರ್ಭ ಸ್ರಾವವಾಯಿತೆಂದೊದರಿದರು ಆ ವ್ಯಾಳ್ಯದಲ್ಲಿ|| 5 ಎಂಟನೆ ಗರ್ಭಾಗಿ ಶ್ರೀ ವೈಕುಂಠೇಶ | ನಿಂತಾನು ಸಾಧು ಕಂಟಕರನ್ನು ಕೊಲ್ಲುವೆ ನೆಂದುತ್ಕಂಠದಿಂದಲಿ || 6 ಶಂಜಾಕ್ಷಿ ದೇವಕಿ ದೇವಿ ಶಂಜನಾಭನುದರವೆಂಬೋ ಪಂಜರದೊಳಿರಲು ತೇಜಃ ಪುಂಜಳಾದಳು7 ಇಂಥಾಕಿಯ ಕಂಡು ಕಂಸಾನಂತಾದ್ರೀಶ ಗರ್ಭದಲ್ಲಿ ನಿಂತಾನೆಂದು ತಿಳದೀಪರಿ ಚಿಂತಿ ಮಾಡಿದಾ|| 8 ಪದ:ರಾಗ:ಶಂಕರಾಭರಣ ಏನು ಮಾಡಲಿ | ನಾ ಇನ್ನೇನು ಮಾಡಲಿ | ಏನು ಮಾಡಲೇನು ವಿಷ್ಟು ತಾನೆ ಬಂದಿನ್ನೇನು ಗತಿ ಇನ್ನೇನು|| ಪ ವೀರರೊಳಗೆ ಸೇರಿ ಎನ್ನ ಮಾರಿ ಹ್ಯಾಂಗ ತೋರಲಿನ್ನೇನು ||1 ತಂಗಿ ವಧ ಜಗಂಗಳೊಳಗೆ ಅಮಂಗಳಿದು ಸು
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ಗ್ರಂಥಮಾಲಿಕ ಮಧ್ವಸ್ತೋತ್ರ ಜಯ ಮಧ್ವ ಮುನಿರಾಯ ನಿನ್ನ ಚಾರು ತೋಯಜಾಂಘ್ರಿಯಲಿ ನಾ ಶರಣು ಅಹ ಮಾಯೇಶನಿಗೆ ಪ್ರಿಯ ಮುಖ್ಯಪ್ರಾಣನೇ ಎನ್ನ ಕರ್ಮ ದೋಷ ಮನ್ನಿಸಿ ಕಾಯೋ ಪ ಭಾವಿ ವಿರಂಚಿ ಮಹೋಜ ಜಯಾ - ದೇವಿ ಸಂಕರ್ಷಣ ತನೂಜ ಸೂತ್ರ ಸಂವಿದ್ ಬಲಾದಿ ಸುಭ್ರಾಜ ಶ್ರಧ್ಧಾ - ದೇವಿ ಹೃದಬ್ಜವಿರಾಜ ಅಹ ಇನಶಶಿ ಋಷಿಕುಲ ತಿಲಕ ಶ್ರೀವರನಂಘ್ರಿ ವನರುಹ ನಿಷ್ಠ ಹನುಮಭೀಮ ಮಧ್ವ 1 ಜಯತು ಶ್ರೀಹರಿ ರಾಮಚಂದ್ರ ಭಕ್ತ ಜಯದ ಮೋದದ ಅರ್ತಿಹಂತ ಕೃಷ್ಣ ಜಯತು ಕಾರುಣ್ಯ ಸಮುದ್ರ ಭಕ್ತ ಜಯದ ಕ್ಷೇಮದ ಜ್ಞಾನ ಸುಖದ ಅಹ ರಾಮವಚನ ಕಾರ್ಯರತ ಹನುಮಗೆ ನಮೋ ನಮೋ ಕುರುಕುಲ ಹರ ಭೀಮ ಕೃಷ್ಣೇಷ್ಟಗೆ 2 ಜಯತು ಶ್ರೀಹರಿ ವೇದವ್ಯಾಸ ಭಕ್ತ ಜಯದ ಹೃತ್ತಿಮಿರ ನಿರಾಸ ಮಾಳ್ಪ ಸೂರ್ಯ ಸ್ವಕಾಂತಿ ಪ್ರಕಾಶ ಮಧ್ವ - ರಾಯಗೆ ನಿಜಗುರು ಶ್ರೀಶ ಅಹ ವೈದಿಕಶಾಸ್ತ್ರದಿಂದಲೇ ವೇದ್ಯ ಶ್ರೀಶನ ಹಿತದಿ ನಮಗೆ ತೋರ್ಪಾನಂದ ಮುನಿಗೆ ನಮೋ 3 ಅಸುರರು ಪುಟ್ಟಿ ಭೂಮಿಯಲಿ ಸಾಧು ಭೂಸುರರೆಂದು ತೋರುತಲಿ ವೇದ ಶಾಸ್ತ್ರಕ್ಕೆ ಅಪಾರ್ಥ ಪೇಳಿ ಮೋಹ ವಶವಾಗೆ ಸುಜನರಲ್ಲಿ ಅಹ ಶ್ರೀಶನಾಜೆÉ್ಞ ಯತಾಳಿ ಮಧ್ವಾಭಿದಾನದಿ ಮೋಸ ದುರ್ಮತ ಧ್ವಾಂತ ಭಾಸ್ಕರನುದಿಸಿದಿ 4 ಮಧ್ಯಗೇಹರ ಮನೆಯಲ್ಲಿ ಮುಖ್ಯ ವಾಯುವೇ ಶಿಶುರೂಪ ತಾಳಿ ಬಲ ಸಂನ್ಯಾಸ ಸುಪ್ರಮೋದದಲಿ ಅಹ ಮಧ್ಯಗೇಹರ ಪುರುಷೋತ್ತಮತೀರ್ಥರ ಭಾಗ್ಯಕ್ಕೆ ಎಣೆವುಂಟೇ ಮೂರ್ಲೋಕದೊಳಗೆ 5 ಪುರುಷೋತ್ತಮಾಚ್ಚ್ಯುತಪ್ರೇಕ್ಷ ತೀರ್ಥ ಗುರುಗಳ ಸೇವಿಸಿ ಮೋಕ್ಷ ಮೋದ ಉರುಗುಣಸಿಂಧು ನಿರ್ದೋಷನಾದ ಶಿರಿವರನು ಕಮಲಾಕ್ಷ ಅಹ ಭಾರಿ ಪ್ರಸಾದವ ದಯದಿ ಬೀರಲ್ಲೇವೆ ದೊರೆಯುವದೆಂದು ಬೋಧಿಸಿದೆಯೋ ಮಧ್ವ 6 ಶ್ರೀಶ ವೇದವ್ಯಾಸನಲ್ಲಿ ಗೀತಾ ಭಾಷ್ಯ ಸಮರ್ಪಿಸಿ ಅಲ್ಯಿಲ್ಲಿ ಉಪ - ದೇಶಕೊಂಡು ಮತ್ತಿಲ್ಲಿ ಬಂದು ವ್ಯಾಸನಭಿಪ್ರಾಯದಲ್ಲಿ ಅಹ ಸರಿಯಾದ ತತ್ವಬೋಧಕ ಗ್ರಂಥಗಳ ಮಾಡಿ ಬೀರಿದ ಅಧಿಕಾರಿಗಳಿಗೆ ನೀ ದಯದಿ ಮೂಲಗ್ರಂಥಗಳು ಮೂವತ್ತು ಏಳು 7 ಳಾಳುಕ ಪ್ರಿಯತಮವಾದ್ದು ಭಕ್ತಿ ಪರ - ಕೈವಲ್ಯ ತೋರುವುದು ಅಹ ಪುನರಪಿ ಬದರಿಗೆ ಪೋಗಿ ಶ್ರೀಶನ ಕಂಡು ಧನ್ಯ ಮನದಿ ಬಂದು ಶಾಸ್ತ್ರ ಬೋಧಿಸಿದಿ 8 ಸೂತ್ರ ಭಾಷ್ಯಗೀತಾ ತಾತ್ಪರ್ಯ ಸೂತ್ರಾಣುಭಾಷ್ಯ ವಿಷ್ಣು ತತ್ವನಿರ್ಣಯಾ ಋಗ್ಭಾಷ್ಯ ತತ್ವೋ - ಭಾಗವತ ತಾತ್ಪರ್ಯ ಅಹ ನಿರ್ಣಯ ಶ್ರೀಮಹಾಭಾರತ ತಾತ್ಪರ್ಯ ಕರ್ಮ ನಿರ್ಣಯ 9 ಸನ್ನ್ಯಾಯ ವಿವರಣ ತಂತ್ರಸಾರ ಅನುವ್ಯಾಖ್ಯಾನವು ಸದಾಚಾರ ಸ್ಮøತಿ ಅನುತ್ತಮ ದ್ವಾದಶಸ್ತೋತ್ರ ಯತಿ ಪ್ರಣವ ಕಲ್ಪದಿ ಪ್ರಣವಸಾರ ಅಹ ಉಪನಿಷದ್ಭ್ಬಾಷ್ಯವು ಹತ್ತು ಉತ್ಕøಷ್ಟವು ಷಟ್ಟ್ರಶ್ನಕಾಠಕ ಬೃºದಾರಣ್ಯಾಖ್ಯ 10 ಮನನ ಮಾಡಲು ಐತರೇಯ ಪುನಃ ಶ್ರವಣ ಮಾಡಲು ತೈತಿರೀಯ ಸಂ - ಚಿಂತಿಸಲು ಈಶಾವಾಸ್ಯ ಬಹು ಘನವಿದ್ಯಾಯುತವು ಛಾಂದೋಗ್ಯ ಅಹ ಅರ್ಥವಣಮಾಂಡೂಕ್ಯ ತಲವ ಕಾರೋಕ್ತವು ಸತತ ಸಂಸ್ಮರಣೀಯ ಜ್ಞಾನದಾಯಕವು11 ಕೃಷ್ಣಾಮೃತ ಮಹಾರ್ಣದಿ ಬಾಲ ಕೃಷ್ಣ ಜಯಂತಿ ನಿರ್ಣಯದಿ ಭಕ್ತಿ ಜ್ಞಾನ ಸಾಧನವ ಬೋಧಿಸಿ ನರ - ಸಿಂಹನ ನಖಸ್ತುತಿ ಮುದದಿ ಅಹ ಪಠಿಸೆ ಭದ್ರದ ಕಥಾಲಕ್ಷಣದಲಿ ವಾದ ಮಾಡುವ ಬಗೆ ತೋರ್ದಿಯೈನೃಹರಿಯ ನಮಿಸಿ 12 ಅವಿದ್ಯಾ ಆವೃತವು ಬ್ರಹ್ಮ ಅದ್ಯಸ್ಥ ಜಗತೆಂಬ ಮತವ ತರಿದು ಮಾಯಾವಾದ ಖಂಡನವ ಮಾಡಿ ನ್ಯಾಯ ಪ್ರಮಾಣ ಲಕ್ಷಣವ ಅಹ ನುಡಿದು ಪ್ರಪಂಚ ಮಿಥ್ಯಾತ್ವಾನುಮಾನ ಖಂ - ಡನವ ಉಪಾಧಿಖಂಡನ ಸಹಗೈದಿ 13 ಪಂಚಭೇದ ಸತ್ಯ ಹರಿಯೇ ಸರ್ವೋತ್ತಮ ಸುಹೃದ ಶಿರಿ ವರನೇ ಸ್ವತಂತ್ರ ಪ್ರಮೋದ ಸ್ವಾಮಿ ಸೃಷ್ಟಾ ಪಾತಾ ಅತ್ತಾತ್ರಾಹ ಅಹ ತತ್ವ ವಿವೇಕವು ತತ್ವ ಸಂಖ್ಯಾನವು ನಿತ್ಯ ಸುಪಠನೀಯ ಹರಿ ಸರ್ವೋತ್ಕøಷ್ಟ 14 ನೀನಿಂತು ನುಡಿಸಿದೀ ನುಡಿಯು ನಿನ್ನ ಸನ್ನಿಧಾನದಿ ಸಮರ್ಪಣೆಯು ನಾನು ಏನೂ ಓದದ ಮಂದಮತಿಯು ನೀನು ಪೂರ್ಣಪ್ರಜ್ಞನು ಜೀವೋತ್ತಮನು ಅಹ ಎನ್ನ ಕೊರತೆಗಳ ನೀಗಿಸಿ ಹೃಸ್ಥಶ್ರೀ 'ಪ್ರಸನ್ನ ಶ್ರೀನಿವಾಸ' ನ್ನೊ ಲಿಸೋ ಎನಗೆ ಜೀಯ 15
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಧ್ರುವಚರಿತ್ರೆ ಪದ ಭಜ ಭಜ ಭಜ ಶ್ರೀ ಗಣರಾಜ ತ್ಯಜ ತ್ಯಜ ತ್ಯಜ ತಾಮಸ ಬೀಜ ಪ ಶಂಕರ ಪುತ್ರ ಶುಭಂಕರ ವರನಿಜ ಪಾದ ಸರೋಜ 1 ಲಂಬೋದರ ಪೀತಾಂಬರಧರ ಕರು ಣಾಂಬುಧಿ ವರ ದೇವ ಮಹೀಜ 2 ಶ್ರೀಶಾನಂತಾಜದ್ರೀಶ ವರಾನ್ವಿತ ದಾಸ ಸುವೃತ ಮಾನಸ ಪೂಜ 3 ಆರ್ಯಾ ರಾಜ ಸುಪೂಜಿತ ರಾಜ ರಾಜ ನೃಪ ರಾಜ್ಯ ಮಾಡುತಾ ಇರುತಿಹನು ದುರ್ಜನ ಪುರುಷರ ತರ್ಜನ ಮಾಡುವ ಸಜ್ಜನ ಆತ್ಮಾರಿಂಗ್ಯತಿ ಪ್ರಿಯನು 1 ದೀನ ಬಂಧು ಬಹುದಾನವಂತ ಉ ಪಾದ ಎಂಬುವ ಹೆಸರು ಮಾನಿತರೊಳಗತಿ ಮಾನಯುಕ್ತರು ಮಾನಿನಿಯರು ಇಬ್ಬರು ಇಹರು2 ಸುರಚಿ ಗಣ್ಯಳು ಪಟ್ಟದರಸಿ ಸುನೀತಿಯು ವಿರಸದಿ ಆರಸಗ ನಿಷ್ಟ್ರಿಯಳು 3 ಮುತ್ತಿನಂಥ ವರಪುತ್ರರಿಬ್ಬರು ಉತ್ತಮನೆಂಬ ಸುರುಚಿಪುತ್ರಾ ಉತ್ತಮ ಗಣ್ಯ ಗುಣೋತ್ತಮ ಧ್ರುವನು ಮತ್ತ ಸುನೀತಿಗೆ ತಾ ಪುತ್ರಾ 4 ಮಂದಿರದೊಳಗೆ ವಸುಂಧರೇಶನು ಛಂದದಿ ತಾ ಸುಖದಿಂದಿರಲು ಒಂದಿನದಲಿ ಬಹುಸುಂದರಸಭಿಯಲ್ಯಾ ನಂದದಿ ಬಂದು ತಾ ಕುಳಿತಿರಲು 5 ಶ್ಲೋಕ ಕೂಡಿಸಿತಾ ತೊಡಿಯಲ್ಲಿ| ಮುದ್ದಿಸಿದಾ ಸಭಿಯಲ್ಲಿ | 1 ಛಂದ ನೋಡಿ ಧ್ರುವನು ತಾ ಹರುಷದಿಂದಲಿ ಓಡಿ ಬಂದನು ರಾಜ ಸಭಿಯಲಿ ಕೂಡಬೇಕು ತಾ ಎಂದು ತೊಡಿಯಲಿ ಇಂದು ಮನದಲಿ 1 ನಾಥ ಭೂಮಿಪಾ ನೋಡಿ ಬಾಲನ ಪ್ರೀತಿಯಿಂದಲ್ಯೊಂದು ಮಾತನಾಡನು ತಾತ ಸುತಗೆ ಬಾಯೆಂದು ಕರೆಯನು ಆತ ಧ್ರುವನು ತಾ ಅನಾಥನಾದನು 2 ಆಗ ಸುರುಚಿ ಬಾಲನ್ನ ನೋಡುತಾ ಬ್ಯಾಗನುದರದಲ್ಲಿ ಬಹಳ ಗರ್ವಿತಾ ಯೋಗ್ಯವಲ್ಲ ಕೂಡಲಿಕ್ಕೆ ತೊಡಿಯಲಿ ಹೀಂಗ ದುಷ್ಟ ಮಾತುಗಳು ಬಾಯಲ್ಲಿ 3 ಪದ ಬಾರದೊ ಧ್ರುವಾ ನಿನಗೆ ಸಿಂಹಾಸನ ಪದವಿ ಬಾರದೊ ಧ್ರುವಾ ನಿನಗೆ ಸಾರಸಿಂಹಾಸನವು ಪ ಏರ ಬೇಕೆಂಬುವಂಥಾ ಘೋರತನವ ಬಿಡು ಅ.ಪ ಅನ್ಯಳ ಮಗನೊ ನೀ ಯನ್ನಲಿ ಜನಿಸಿಲ್ಲಾ ಚೆನ್ನಿಗ ಉತ್ತುಮಾಗಿನ್ನ ನೀ ಸರಿಯೇನೋ 1 ಇಂದಿನಾ ಮನೋರಥಾ ಎಂದಿಗಾವುದಲ್ಲಾ ಕಂದ ಸುನೀತಿಯಾ ಮುಂದ ಕೂಡಾಲಿ ಪೋಗೊ 2 ಇಚ್ಛಿ ಮಾಡಾದಿರೋ ಹೆ ಚಿನ್ನಾ ಶ್ರೀ ವತ್ಸನಾರಾಧನಿ ಮಾಡಿಲ್ಲಾ 3 ವೀರ ಸಿಂಹಾಸನ ಏರಬೇಕಾದರೆ ವಾರಿಜನಾಭ ನಾರಾಧನಿ ಮಾಡೊನೀ 4 ` ಚೆನ್ನಿಗಾನಂತಾದ್ರೀಶ್ನ ' ನೀ ಪೂಜಿಸಿ ಯೆನ್ನಲ್ಲಿ ಪುಟ್ಟಾದೆ ಉನ್ನತ ಪದವಿಯು 5 ಶ್ಲೋಕ ಅತ್ಯಂತ ಘೋರತರ ವಾಕ್ಯಗಳನ್ನು ತಾಳಿ ಸಂತಪ್ತನಾದ ಮನದಲ್ಲಿ ಸುನೀತಿ ಬಾಲಾ ಪುತ್ರನ್ನ ನೋಡಿ ಪಿತ ಸುಮ್ಮನೆ ಕೂತನಾಗಾ ತಾತನ್ನು ಬಿಟ್ಟು ನಡದಾ ಧ್ರುವ ತಾನು ಬ್ಯಾಗಾ 1 ಶ್ವಾಸೋಚ್ಛ್ವಾಸವು ಬಾಯಿಲಿಂದ ಬಿಡುತಾ ಕಣ್ಣಿಂದ ನೀರ ಹೋಗುತಾ ಸೂಸು ಬಾಹುವ ದು:ಖದಿಂದ ಮರಗಿತಾ ರೋದನಾ ಮಾಡುತಾ ಬಂದಾ ತೀವ್ರದಿ ತಾಯಿ ಸನ್ನಿಧಿಯಲ್ಲಿ ಆಳುತಾಗ ತುಟಿ ಬಿರಿಗಿಸಿ ಬಂದಾ ಕಂದನ ಮುಂದ ಕುಳ್ಳಿರಿಸಿ ಸತಿ ಕೇಳ್ಯಾಳು ವಿಚಾರಿಸಿ 2 ಪದ ಕಂದ ನೀ ಬ್ಯಾಗ ಹೇಳೊ ಎಲ್ಲೊ ನಿನಗೆ ಇಂದು ಬಡಿದವರ್ಯಾರು ನಿನಗೆ ಪ ಎಂದು ಪೋಗದಲೆ ತನಯ ನೀನು ಇಂದು ಪೋಗಿದ್ದಿಯೊ ದಾರ ಮನಿಗೆ 1 ಘೋರತರ ದು:ಖವೇನೊ ಈ ಪರಿ ನೀರ ತುಳಕುವ ಕಣ್ಣುಗಳಿಗೆ 2 ಏನಂತ ಪೇಳಲಿ ಸ್ವಲ್ಪ ಇಲ್ಲಾ `ಅನಂತಾದ್ರೀಶನ ' ದಯವು ನಮಗೆ 3 ಪದ ತನಯನ ಕೇಳಲು ಹೀಂಗೆ ಪೌರಜನರು ನುಡದರಲ್ಯಾಗೆ ಅರುಚಿನುಡಿಗಳ ಲ್ಹ್ಯಾಂಗೆ ಆ ಸುರುಚಿ ನುಡಿದಳ್ಹಾಂಗೆ 1 ಕೇಳಿದಳೀ ಪರಿವಾಣಿ ಮನ ಪನ್ನಗ ವೇಣಿ ಸಾಗರ ಬಿದ್ದಳು ತರುಣಿ ತಾ ಕೂಗುತ ಕೋಕಿಲವಾಣಿ 2 ಒಡಲೊಳು ಕಿಚ್ಚುರದಂತೆ ಬಹು ಮಿಡುಕೊಳು ತಾಮನದಂತೆ ನಡುಗುತ ಹಿಮ ಹೊಡದಂತೆ ತಾ ನುಡು(ಡಿ)ವಳು ಕರುಣಾದಂತೆ 3 ಏನು ಮಾಡಲಿ ಇನ್ನಯ್ಯೋ ಬಹು ದೀನಳಾದೆ ನಯ್ಯಯ್ಯೊ ಮಾನದ ಪತಿಯೆನ ಕಾಯೊ ಗುರು ಮಾನಸ ದು:ಖವ ತಿಳಿಯೋ4 ಶರಣು ಕೇಳು ದೇವೇಶಾಯನ್ನೊಳು ಕರುಣಾಬಾರದೆ ಲೇಶಾ ಚರಣಕೆರಗುವೆನು ಶ್ರೀಶಾ ಮರಣ ಕುಡಾ`ನಂತದ್ರೀಶ' 5 ಛಂದ ನಾರಿ ಸುರುಚಿಯಾ ಮಾತು ಮರಿಯದೆ ಘೊರ ದು:ಖದಾಪಾರ ತಿಳಿಯದೆ ನೀರ ಧಾರಿಯ ಕಣ್ಣಲ್ಯುದುರುತಾ ಧೈರ್ಯ ಭಾವ ತಾ ಬಿಟ್ಟಳು ಸರುತಾ 1 ಸುಂದರಾಂಗಿಯು ನೊಂದು ಮನದೊಳು ಕಂದಧ್ರುವನ ತಾ ಮುಂದ ನುಡದಳು ಬಂದ ತಾಪವ ಸಹಿಸಬೇಕಯ್ಯಾ ಇಂದು ಮನಸಿನಾ ಕೋಪ ತಾಳಯ್ಯಾ 2 ಕೇಳು ಬಾಲನೆ ರಾಜಯನ್ನನು ಭಾಳ ತುಚ್ಛವ ಮಾಡುತಿಹನು ಭಾಳ ಲಜ್ಜದಿ ಸುನೀತಿ ಭಾರ್ಯಳೆಂದು ಹೇಳಲಿಕ್ಕೆ ನಾಚುತಿಹನು 3 ಯನಗ ಪುತ್ರ ನೀನಾದ ಕಾರಣಾ ನಿನಗ ಮಾಡುವಾ ಅರಸು ನಿರ್ಘೃಣಾ ಕನಸಿಲಿಲ್ಲವೊ ಯನಗ ಹಿತಕರು ತನಯ ವೈಯಲಿಲ್ಲವೊ ಯನ್ನದೇವರು 4 ಮಿಥ್ಯವಲ್ಲವೊ ಸುರುಚಿ ನುಡಿಗಳು ಸತ್ಯ ವಾದ ಮಾತುಗಳು ನುಡಿದಳು ಪಥ್ಯವೆ ಸರಿ ಪರಮ ನಿನಗಿವೆ ಪೊತ್ತುಗಳಿಯದೆ ಪೋಗರಣ್ಯಕೆ 5 ಗುರ್ವನುಗ್ರಹ ಶಿರಸಿ ಗ್ರಹಿಸೈಯ್ಯಾ ಶರ್ವಸಖಗ ನೀ ಪೂಜಿಮಾಡಯ್ಯಾ ಪೂರ್ವದಲ್ಲಿ ನಿನ್ನ ಮುತ್ಯ ಮಾಡಿದಾ ಸಾರ್ವಭೌಮ ಆಧಿಪತ್ಯ ಏರಿದಾ 6 ಇಂದಿರೇಶನಾ ಬ್ರಹ್ಮ ಪೂಜಿಸಿ ಮುಂದ ಏರಿದಾ ಸತ್ಯಲೋಕ ನೇಮಿಸಿ ಕಂದ ಭಜಿಸು ನೀ ಛಂದದಿ ಧ್ರುವಾ ಮುಂದ ಕೇಶವಾನಂದ ಸುರಿಸುವಾ 7 ಶ್ಲೋಕ ಜನನಿಯಾಡಿದ ವಾಕ್ಯವು ಕೇಳಿ ಆಗಾ ಮನಿ ಆಸಿಯು ಬಿಟ್ಟು ನಡದಾನು ಬ್ಯಾಗಾ ಘನಾರಣ್ಯಕೆ ಪೋಗಲು ಶೋಕಸಿಂಧು ಸಿಂಧು 1 ಆರ್ಯಾ ಇಂದಿರೇಶನಾ ಸುಂದರ ಗುಣಗಳ ಬಂದಾಕ್ಷಣಹೀಗೇಂದು ನುಡದನು ಕಂದಗ ಮುನಿ ಆ ಸಮಯದಲಿ 1 ನಿಲ್ಲೆಲೊ ಬಾಲಕ ಬಲ್ಲಿದರಣ್ಯದಿ ನಿಲ್ಲದೆ ಪೋಗುತಿ ಎಲ್ಲಿಗೆ ನೀ ಯೆಲ್ಲಿಂದ ಬಂದಿ ನೀ ಫುಲ್ಲಲೋಚನ ಯೆಲ್ಲ ಬಳಗ ಬಿಟ್ಟಿಲ್ಲಿಗೆ ನೀ 2 ಕಂದ ಬಿಟ್ಟ ನೀ ಬಂದ ಕಾರಣಾ ಇಂದು ತಾಯಿ ತಂದೆಗಳೆಲ್ಲ ಸುಂದರಾನನಾ ಛಂದದಿ ನುಡಿನೀ ಮಂದಿರ ವೃತ್ತಾಂತಗಳೆಲ್ಲಾ 3 ಶ್ರೇಷ್ಠನಾರದ ನೀ ಅಷ್ಟುಲೋಕವಾ ದೃಷ್ಟಿಲಿ ನೋಡುವಿ ಇಷ್ಟರಿಯಾ ಕೆಟ್ಟ ಮಾತು ಆದುಷ್ಟ ಮಳಾಯಿಯು ಎಷ್ಟು ನುಡದಳೊ ಯನಗÀಯ್ಯಾ4 ಏನು ಪೇಳಲಿ ನಾನು ಮುನೀಶ್ವರ ಮಾನ ಗೇಡಿ ಮಾಡಿದಳೆನ್ನಾ ಮಾನ ಹೋಗಿ ಅಪಮಾನಿತನಾಗಿ ಕಾನನ ಶೇರಿದೆ ನಾ ಮುನ್ನ 5 ಮಾನಪಮಾನಗಳೆನಾದರೂ ಸರಿ ಧ್ಯಾನಕ ತರಬಾರದು ನೀನು ನಾನಾ ಲೀಲಿಯಾ ಮಾಡುವ ಬಾಲಕಗೇನು ಚಿಂತೆ ಕೇಳರೆ(ಳುವೆ?) ನಾನು 6 ಶಾಂತನಾಗು ಗುಣವಂತ ಬಾಲ ನಿ ನ್ನಂತರಂಗ ಚಿಂತಿಯು ಬಲ್ಲೆ ಚಿಂತಿಸಿ ಬಂದ್ಯೋ ನೀ ಸತತ ಸುಖ ಭಗವಂತನನೆ ಬ(ರ?) ಬೇಕಂತಿಲ್ಲೆ 7 ಎಂಥವರಿಗೆ ಭಗವಂತ ದೊರಕ ನಿ ನ್ನಂಥ ಬಾಲನಾ ಗತಿಯೇನು ಕಾಂತನಯನ ಶ್ರೀಕಾಂತ ದೊರಕ ಛೀ ಭ್ರಾಂತಿ ಬಿಟ್ಟು ತ್ವರ ನಡಿ ನೀನು 8 ಪದ ನಡಿನಡಿ ನಡಿ ಧ್ರುವಾನೆ ತಿರುಗಿ ಮನಿಗೆ ನಡಿ ನಡಿ ನಡಿ ದೊಡ್ಡ ಅಡವಿಯು ಸೇರಾದೆ ಹುಡುಗ ಬುದ್ಧಿಯನು ಬಿಡು ತಡಮಾಡದೆ ಪ ಅಂಬಕಗಳಿಗೆ ತಾನು ತೋರಾನು ಪೀ ತಾಂಬರಧರ ದೇವಾನು ಅಂಬುಜನಾಭನ ನಂಬಿ ಭಜಿಸುವಂಥ ಹಂಬಲ ಬಿಟ್ಟು ವಿಳಂಬನ ಮಾಡದೆ 1 ಕಾಲಾವಲ್ಲವೋ ಬ್ಯಾಡಯ್ಯ ವಿಗ(ಹಿ?)ತವಾದ ಕಾಲಕೆ ತಪ ಮಾಡಯ್ಯ ಕಾಲಕಾಲಕೆ ಸ್ತನ ಪಾಲನುಂಬುವ ಸಣ್ಣ ಬಾಲ ಈ ವಚನ ಬಿಟ್ಟು ಕಾಲಗಳಿಯದೆ 2 ದೇಶದೇಶವ ತಿರುಗಿ ಬಹಳ ಕಾಸೋಸಿ ಇಂದಲೆ ಮರುಗಿ ಕ್ಲೇಶಾದಿ `ಅನಂತಾದ್ರೀಶ' ದೊರಕ ಘಾಸಿ ನೀ ಆಗದೆ 3 ಆರ್ಯಾ ಮುನಿಯ ವಚನ ನೃಪತನಯ ಕೇಳಿ ಬಹುವಿನಯದಿಂದಲಿ ಹೀಗೆಂದಾ ಘನದು:ಖದಿ ಯನ್ನ ಮನಿಗೆ ಪೋಗಲಿಕ್ಕೆ ಮನಸುವಲ್ಲದು ವಲ್ಲೆಂದಾ 1 ಪದ ಮನಿಗೊಲ್ಲೆ ವಲ್ಲೆ ಮುನಿರಾಯಾಪ ಬಹುತಲ್ಲಣಗೊಳು ತಿಹ(ಹೆ?)ನೈಯ್ಯಾ ಅ.ಪ ಶೋಣೀತ ವಸ್ತ್ರನೆ ಪಾಣಿವಿನಾದಿತ ವೀಣಾಧರ ಕೇಳಯ್ಯ 1 ದುಷ್ಟಮಳಾಯಿಯ ಕೆಟ್ಟಮಾತು ಒಂದಿಷ್ಟು ಸಹಿಸಲಾರೈಯ್ಯ 2 ದೀನದಯಾಳುವೆ ಮಾನಗಳಿದು ಮು ನ್ನೇನು ಉಳಸಲಿಲ್ಲೈಯ್ಯ 3
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ಪ್ರಹ್ಲಾದ ಚರಿತ್ರೆ ಅಧ್ಯಾಯ ಒಂದು ಪದ ಆದಿಯಲಿ ಲಕ್ಷ್ಮೀಸಹಿತ ಪ್ರಹ್ಲಾದವರದನ ಪಾದಕೊಂದಿಸಿ ಬೋಧನಿಧಿ ಮಧ್ವಾದಿ ಗುರುಗಳ ಪಾದಕೊಂದಿಸುತಾ ಕೇಳುವರ ಮನಕಾ ಲ್ಹಾದ ಕೊಡುತಿರುವಂಥ ಶ್ರೀ ಪಹ್ಲಾದ ಚರಿತವನು 1 ಸಹಿತಾಗಿ ಪರಮಾ ನಂದದಿಂದ ವಿಹಾರ ಮಾಡುತ ಚಂದದಿಂದಿರಲು ಬಂದರಾ ಕಾಲದಲಿ ಸನಕ ಸನಂದನಾದಿಗಳಲ್ಲೆ ಬೇಡೆಂ ತೆಂದು ಆ ಜಯವಿಜಯರವನು ಹಿಂದುಕೊತ್ತಿದರು 2 ಮೂರುಜನ್ಮದೊ ಳಸುರರಾಗಿರಿ ನೀವು ಹೀಗೆಂತೆಂದು ಶಾಪಿಸಲು ಅಸುರರಾಘ್ಯುಟ್ಟಿದರು ಶಾಪದಿ ಹುಸಿಯದಾಗದು ದೊಡ್ಡವರು ಕೋಪಿಸುತ ನುಡಿದದ್ದು 3 ದಿತಿಯ ಸುತರಾಗ್ಯವರು ಮುಂದಕೆ ಪ್ರಥಿತರಾದರು ದ್ವಿತೀಯ ಹಿರಣ್ಯಾಕ್ಷಾ ಪೃಥಿವಿಯನು ಮುಣುಗಿಸಿದ ಕಾರಣ ಅತಿರಭಸದಲೆ ಕೊಂದು ಮತ್ತಾ ಪೃಥಿವಿಯನು ತಂದಾ 4 ತನ್ನ ಅನುಜನ ನಾಶವನು ಕೇಳುತಲೆ ಮನದಲಿ ಕ್ಲೇಶವನು ಪಟ್ಟು ಶ್ರೀಸುರೇಶನ ಮೇಲೆ ಬಹಳಾಕ್ರೋಶದಿಂದಲೆ ನಡೆದ ತಪಸಿಗೆ ದೋಷ ರಹಿತಾನಂತಾದ್ರೀ±ನÀ ದ್ವೇಷಿತಾನಾಗಿ5 ವಚನ ಸುರರು ಆ ಸಂಧಾನ ಯುದ್ಧವ ಮಾಡಿ ಕೊಂದುಹಾಕಿದರು ಆ ಇಂದ್ರನಾ ಕಂಡು ಒಂದು ನೋಡದೆ ಪ್ರಾಣ ಒಂದು ಉಳಿದರೆ ಸಾಕು ಯೆಂದು ಓಡಿದರು 1 ಅಡಗಿರಲು ದೇವೇಂದ್ರ ಬಂದು ನಡತೆ ಕಂಡವನ ಬಿಡು ಬೇಗ ಈಕೆಯ ನಿಮಗೆ ಕೆಡಕು ಕೊಡುತೆಲ್ಲರ ಮುಂದೆ ನುಡಿದನಾ ರಾಜನ ಮಡದಿಗೀಪರಿಯು 2 ರಾಗ ಅಂಜಿಕೆಯ ಬಿಡಿಸುವೆನಮ್ಮಾ ಪ ಪುಟ್ಟುವನಮ್ಮಾ ಸಂದರ್ಭವನು ತಿಳಿಸುವೆನಮ್ಮಾ 1 ಸ್ಮರಿಸುವನು ಹರಿಗುಣಗಳಮ್ಮಾ ಗಭಯ ಕಾಣಮ್ಮಾ 2 ಅಭಯದಾನಂತಾದ್ರೀಶನ ಭಕ್ತನಮ್ಮಾ ನಿಶ್ಚಿಂತೆಯಿಂದಲಿ ನೀನಿರಮ್ಮಾ 3 ರಾಗ ಕೇಳಿ ಅರ್ಭಾಟವು ಗರ್ಭಿಣಿಯುದರದಲಿರುವಾ ನಡೆದರು ಅರ್ಭಕನಾ ಸ್ಮರಿಸಿ 1 ಕೊಟ್ಟು ತಂದೆಯ ಪರಿ ಮುಂದಾಕೆಯು ನಾರದನ ಬೇಡಿದಳು ವಂದಿಸಿ ವರಗಳನ್ನು2 ಭೋ ಮಹಾ ಮುನಿಯೇ ಮಾತನು ಕೇಳುತಲೆ ಆ ಮಹಾ ಮುನಿ ನಾರದನು ಪ್ರೇಮದಿ ನುಡಿದನು ಕೊಟ್ಟಕಾಮಿತ ವರಗಳನ್ನು 3 ನಿನಗಿನ್ನು ಪರತತ್ವವÀ ನೀ ಕೇಳಮ್ಮಾ ಹರಿಮಹಿಮೆಯ ಹರುಷವ ಕೊಡುತಿಹುದು 4 ಪರಿ ಗರ್ಭದಲಿ ಇರುವನೆ ವರದಾನಂತಾದ್ರೀಶನ ಸ್ಮರಿಸುತ ಪರಮೇಷ್ಠಿಯ ಸುತನು 5 ವಚನ ತಪವನು ಮಾಡಿ ಮನಸಿನೊಳಗಿಟ್ಟು ಪಾದದುಂಗುಷ್ಠವನು ನೆಟ್ಟನೆ ಮೇಲೆತ್ತಿ ಘಟ್ಯಾಗಿ ನಿಂತಾ 1 ಸುಡತಲೆ ಸಕಲ ಕಣವಿದು ಮುಚ್ಚಿತು ಅವನ ಭಯದಲಿ ತಮ್ಮ ಭವನ ಅವನ ಮುಂದು ಸುರಿದರು ಅವನ ಕಥೆಯಾ ಸಕಲ ಭುವನ ಪಾಲಕರೂ 2 ರಾಗ ಮೊರೆಯ ಕೇಳೋ ನೀನುಪ ಹಿರಣ್ಯ ಕಶಿಪು ಮೂಜಗ ಸಂಹರಿಸುವನಯ್ಯ ಅ.ಪ ದಿಟ್ಟ ಕೇಳವನ ವಿಶಿಷ್ಟ ಕಥೆಯ ಪಾದಾಂಗುಷ್ಟದಿಂದಲಿ ಭೂಮಿ ಮೆಟ್ಟಿನಿಂತಿ- ಮಂದರಾದ್ರಿಯಲ್ಲಿರುವಾ 1 ಉಪವಾಸದಿಂದುಗ್ರ ತಪಸಿ ಲೋಕಗಳನೆಲ್ಲ ಸುಡುವಾ 2 ರೋಷದಿ ಮಾಡುವಾ ದ್ಷೇಷ ನಮ್ಮಲ್ಲೆ ನಿತ್ಯದಲ್ಲೆ ನಿತ್ಯದಲ್ಲೆ ಅನಂತಾದ್ರೀಶನಲ್ಲೆ 3 ವಚನ ಮಾಡುವ ಚರ್ಯಾ ಹತ್ತಿತಾ ಹಂಸವನು ಸತ್ವರದಿ ಕಂಡು ನೆತ್ತಿಯಾ ಮೇಲಗ್ನಿ ಬೆಳದಿಹದಲ್ಲೆ ಸುತ್ತಲೆ ನುಡಿದನು ಬ್ರಹ್ಮದೈತ್ಯ ಗೀಪರಿಯ 1 ರಾಗ ಹಿರಣ್ಯ ಕಶಿಪು ಏಳು ಏಳು ಏಳು ಬೇಗನೇ ಪ ಮಾತು ನಿನ್ನ ಭಾಳ ತಪಸಿಗಾಗಿ ನಾನು ಭಾಳ ಮೆಚ್ಚಿದೆನೋ ಇನ್ನು ಅ.ಪ ಹೋದುವಯ್ಯಾ ಮತ್ತು ತಪಸಿ ನಲ್ಲಿ ನೀನು ಚಿತ್ತಮಾಡಬೇಡ ಬಿಟ್ಟು 1 ಕೊಡುವೆನು ವರಗಳನ್ನು ದಾನವೇಶ ಎನ್ನ ನೋಡು ಮೌನಬಿಟ್ಟು ಮಾತನಾಡು 2 ಬಲ್ಲಿದವನೋ ನೀನು ಬೇಡಿ ದ್ದೆಲ್ಲ ನಾನು ಕೊಡುವೆ ನಿನಗೆ 3 ವಚನ ಮನ್ನಿಸಿದನಾ ದೇಹವನ್ನು ಘನ್ನದಿವ್ಯೋದಕದಿ ಚೆನ್ನಾಗಿ ಘನ್ನ ದೈತ್ಯನು ಎದ್ದು ಮುನ್ನನತಿ ಸ್ತುತಿಮಾಡಿ ಹಿರಣ್ಯ ಕಶಿಪಿಂತು 1 ರಾಗ ಮರಣ ಬೇಡಾ ಧರೆಯೊಳು ನಿನ್ನಿಂದ್ಹುಟ್ಟಿರುವ ಪ್ರಾಣಿಗಳಿಂದ ಮರಣಬೇಡಾ 1 ಮರಣ ಬೇಡ ಇಳೆ ಯೊಳೆನಗಾಕಾಶದೊಳೆನಗೆ ಮತ್ತು ಮರಣ ಬೇಡಾ 2 ಮರಣ ಬೇಡಾ ಮೃಗಗಳೊಗ್ಹೆಚ್ಚಿನ ಮೃಗಗಳಿಂದಾದದರು ಮರಣ ಬೇಡಾ 3 ಮರಣಬೇಡಾ ನರರಿಂದ ವಿಷವುಳ್ಳ ಹರಿವ ಹಾವುಗಳಿಂದ ಮರಣ ಬೇಡಾ 4 ವಿಸ್ತಾರವಾದ ದೇ ವಾಸ್ತ್ರಗಳಿಂದಲಿ ಮರಣಬೇಡಾ 5 ಮರಣಬೇಡಾ ಅಂತಕ ನಾದ ಅನಂತಾದ್ರೀಶನ ಮುಂಚೆ ಸ್ಮರಣೆ ಬೇಡಾ 6 ರಾಗ ಹಾಗೆ ಆಗಲಿ ಎಂದು ಸಾಗಿದತಾನು ಆಗೆದ್ದು ಮದವೇರಿದ ನಾಗೇಂದ್ರನಂತೆ ಬೇಗ ಮನೆಯಲಿ ಬಂದಸಾಗಿ ದೈತ್ಯೇಂದ್ರಾ 1 ತಂದು ಒಪ್ಪಿಸಿದಾತಗೆ ಚಂದಾಗಿ ಮುನಿಯು ಹಿಂದಾದುದೆಲ್ಲಾತನ ಮುಂದೆ ತಿಳಿಸಿದನು ಮುಂದಾ ಸ್ಥಳವನು ಬಿಟ್ಟು ಬಂದಾ ಸ್ವಸ್ಥಳಕೆ
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ಭಾಗೀರಥಿ ತಾಯೇ ಶೃಂಗಾರ ಶುಭಕಾಯೆ | ಶ್ರೀ ಭೂರಮಣನ ತನಯೇಪ ನಿನ್ನ ಯಾತ್ರಿಗೋಸುಗ ಎನ್ನ ಮನಸು ಪುಟ್ಟಿತು | ಇನ್ನು ನೀ ಮರಿಸದೇ | ಪುಣ್ಯನರನ ಮಾಡೊ ಪೂತೋಭಾವವೆಂದು | ಧನ್ಯ ಜನ ಮಾನ್ಯಾ ಭಕ್ತಜನ ಪ್ರಸನ್ನೇ 1 ಶಿವ ನಿನ್ನ ಶಿರದಲ್ಲಿ ಧರಿಸಿದೆ ಕಾರಣ ಪವಿತ್ರಂಗನಾದನೆಂದು | ಅವನಿಯೊಳಗೆ ಮಹಾ | ಕವಿಜನ ಪೇಳಿದ ಶ್ರವಣದಿಂದಲಿ ಭಕುತಿಯಿಂದಲಿ ನಿಂದೆ 2 ದೂರದಿಂದಲಿ ನಿನ್ನ ಸ್ಮರಿಸಿದವರ ಪಾಪ | ಪಾದ | ವಾರಿಜ ಪೊಗಳುವಂತೆ ಬುದ್ಧಿ ಪಾಲಿಸುವದು 3
--------------
ವಿಜಯದಾಸ
ಶ್ರೀ ಭಾರತೀದೇವಿ ಎಂತು ನೀವಶವಾದಿಯೇ ಭಾರತಿದೇವಿ ಎಂತು ನೀ ಮರುಳಾದಿಯೆ ಪ ಕಂತು ಹರನ ತಾಯಿ ದಂತಿಗಮನೆ ದಮಯಂತಿ ಕಾಂತಸುತೆ ಅ.ಪ ಧರೆಯೊಳು ಪುಟ್ಟುತಲಿ | ಆಕಾಶಕ್ಕೆ ಭರದಿಂದ ಜಿಗಿಯುತಲಿ ಸರಸಿಜ ಸಖನಾದ | ತರಣಿಯ ಫಲವೆಂದು ಅರಿತು ಭಕ್ಷಿಸಲ್ಹೋದ | ತರು ಚರ ರೂಪಿಗೆ 1 ಪುಂಡರೀಕಾಕ್ಷ ಕೇಳಿ | ದ್ವಾಪರದಿ ಪ್ರಚಂಡಗೆ ಒಲಿಯುತಲಿ ಭಂಡ ಬಕನ ಶಿರದಿಂಡು ಗೆಡಹಿ ಅವನ ಭಂಡಿ ಓದನವನ್ನು ಉಂಡ ಪುಂಡಗೆ ಮಾತೆ 2 ಶ್ರೀ ಶಾಮಸುಂದರನೇ ತ್ರೈಲೋಕ್ಯಕ್ಕೆ ಈಶನೆಂಬುದು ತಾನು ಲೇಸಾಗಿ ಪೇಳಲು | ಲೇಶವಾದರು ನಿನ್ನ ಆಶೆ ಇಲ್ಲದೆ ಸನ್ಯಾಸಿ ಆದವನಿಗೆ 3
--------------
ಶಾಮಸುಂದರ ವಿಠಲ
ಶ್ರೀ ಮಧ್ವಮತ ಸಾಗರದೊಳಗೆ ಲೋಲಾಡಿ ಆ ಮಹಾತತ್ವ ತಾರತಮ್ಯಗಳ ತಿಳಿದು ಕಾಮ ಕ್ರೋಧಗಳೆಲ್ಲ ಹಳಿದು ಗುರು ಹನುಮಂತ ಭೀಮ ಮಧ್ವಮುನಿಯ ಸಾರಿರಯ್ಯ | ಅಯ್ಯಯ್ಯಾ ಪ ಅಂಜನೇಯ ಗರ್ಭದಲಿ ಜನಿಸಿ ಆಕಾಶದಲ್ಲಿ ಕಂಜನಾಪ್ತನ ತುಡುಕಿ ಕಿಷ್ಕಿಂಧದಲಿ ಕಪಿ ರಂಜನನ ಕೂಡಿ ಪಂಪಾ ತೀರದಲಿ ದೇವಂಜನ ಪಾದವ ಅಕ್ಷರಿ ಎನೊ ಭಂಜನವ ಮಾಡಿ ಲಂಕೆಯನುರಿಪಿ ಬಂದ ಪ್ರ ಭಂಜನಿಯ ಭಜಿಸಿರಯ್ಯಾ | ಅಯ್ಯಯ್ಯಾ | 1 ಧರ್ಮನಂದನೊಡನೆ ಜನಿಸಿ ಹಾಲಹಲ ಉಂಡು ಸೀರ್ಮುಟ್ಟಿ ಪೋಗಿ ನಾಗನ ಗೆದ್ದು ಅರಗಿನ ಅರ್ಮನೆಯ ದಾಟಿ ವನದೊಳಗೆ ಹಿಡಂಬನ ಶಾ ರಿರ್ಮುರಿದು ಸೀಳಿ ಬಿಸಟು ಕಿರ್ಮೀರ ದನುಜರ ಸದೆದು ಪೂತಂದು ಸು- ಶರ್ಮಕನ ಬಿಗಿದು ಕಣದೊಳಗೆ ದುಶ್ಯಾಸನನ ನಿರ್ಮಳಾತ್ಮಕನ ಭಜಿಸಿರಯ್ಯಾ | ಅಯ್ಯಾಯ್ಯಾ 2 ಹರಿಯೆ ಪರನೆಂದು ಬೊಬ್ಬಿಕ್ಕಿ ವಾದಿಗಳೆದೆ ಬಿರಿಯೆ ದು:ಶಾಸ್ತ್ರಜ ಜರಿಯೆ ದುರ್ಮತಗಳು ಪರಿಯ ಬಿಡದು ಠಕ್ಕೆ ಮೆರೆಯೆ ಧರೆಯೊಳಗೆ ಈ ಪರಿಯೆ ಮುನಿಗಾರು ಸರಿಯೆ ಪೊರೆಯ ಭಕ್ತರಿಗೆ ಸುಧೆ ಗರಿಯೆ ಜ್ಞಾನ ಮಾರ್ಗಾಂಕುರಿಯೆ ವೇದದ ಸಾರ ನೆರಿಯೆ ರಿಪುಕಾಲ ಮದಕರಿಗೆ ಕೇಸರಿಯೆ ಒಪ್ಪುವ ಭಜಿಸಿರಯ್ಯಾ | ಅಯ್ಯಯ್ಯಾ 3 ಅಜನಾಗಿ ಮುಂದೆ ಪಸರಿಸಿ ಬೆಳೆದು ಹರುಷದಲಿ ತ್ರಿಜಗವನು ನಿರ್ಮಾಣವನು ಮಾಡಿ ಒಂದೊಂದು ಸೃಜಿಸುವನು ಚಿತ್ರವಿಚಿತ್ರ ಗುಣಗಣವುಳ್ಳ ಇವನೆಂದು ವೇದಗಳು ಸಾರುತಿವೆ ಕುಜನಮತವನೆ ಪಿಡಿದು ಪುಸಿಯಿದು ಎಂದೆನ್ನದೆ ಭಜಿಸಿ ಗುರುಪಥವಿಡಿದು ಸಂದೇಹವನೆ ತೊರೆದು ಸುಜನರ ಶಿರೋಮಣಿಯಯ್ಯ | ಅಯ್ಯಾಯ್ಯಾ4 ಜಾತಿ ಸಂಕರವಾಗಿ ಜಾತಿ ಧರ್ಮವ ತೊರೆದು ಜಾತವೇದ ಸಯಜ್ಞ ಇಲ್ಲದಿದರೆ ವನಜ ಸಂ ಮೌಕ್ತಿದಮಣಿ ನುಡಿದ ಕರುಣದಲಿ ದ್ವಿ ಜಾತರನ ಉದ್ಧರಿಸ ಪೋಗೆನಲು ಜಯ ತನೋ ಜಾತ ಪುಟ್ಟಿದನು ಇಳಿಯೊಳಗೆ ಮಧ್ಯಗೇಹರ ಜಾತನಂ ಭಜಿಸಿರಯ್ಯ | ಅಯ್ಯಯ್ಯಾ | 5 ಇಳಿಯೊಳಗೆ ಬಲವಂತನಾದ ಮತ ಮಧ್ವಮತ ಸುಲಭವಾಗಿಹುದು ಸುಲಭರಿಗೆ ಕಮಲಕೇತಪನ ಹೊಳಪು ಹೊಳೆದಂತೆ ವಿಕಸಿತಾ ಮಾಡಿ ಸುಜ್ಞಾನ ಜಲಧಿಯೊಳಗಾಡಿಸುವುದು ಮಲತು ನಿಂತಿರ್ದ ಹರಿನಾಮ ದಂಡವಾ ಗುರುಕುಲತಿಲಕನಂ ಭಜಿಸಿರಯ್ಯಾ | ಅಯ್ಯಯ್ಯಾ |6 ದುರವಾದಿಗಳ ಗಂಡ ಗಜದಭೇರುಂಡ ಸಂ ಕರಣ ಪ್ರಾಣವನರದು ದುರ್ಮಾಯಿ ಮಿಥ್ಯದ ಕುಹಕ ಮುರಿದು ಉರಹಿ ಅರಿಗಳಂಗದ ಚರ್ಮ ಸುಲಿದು ಭೇರಿಗೆ ಹಾಕಿ ಹರಿಸೆ ಓಂಕಾರ ಮಣಿಯಂ ಭಜಿಸಿಯ್ಯಾ | ಅಯ್ಯಯ್ಯಾ 7 ಗುರುಕರುಣ ಪಡೆದ ಮಾನವನೆ ಸರ್ವಕೃತಾರ್ಥ ಗುರುಕರುಣ ಪಡೆಯದಿದ್ದವನ ಜನ್ಮವೇ ವ್ಯರ್ಥ ಉರಗ ಉಪವಾಸ ತಂತ್ರ ಕರಿ ಕರುಣತಿಪ್ಪುವದು ಗುರು ದಯಾಕರನಾಗೆ ಹರಿವೊಲಿದು ಸಲಹುವನು ಪಾದವ ನಂಬಿರೈಯ್ಯ | ಅಯ್ಯಯ್ಯಾ 8 ಪದ್ಧತಿಯ ಕೇಳಿ ಶುದ್ಧಾತ್ಮರಿದು ವರಗುರು ಮಧ್ವ ದುಗ್ಧಾಬ್ಧಿಯನು ಕಟಿದ ನವ ನವನೀತ ಮುದ್ದೆಯನು ತೆಗೆದು ನವವಿಧ ಭಕುತಿರಸದಿಂದ ಮೆದ್ದು ಸದ್ಭಾವದಲಿ ಸದ್ವೇಷ್ಣವರಾಗಿ ಮೃತ್ಯುವಿನ ಗೋನಾಳಿ ಒದ್ದು ಕಾಲನ ಮೀರಿ ವೈಕುಂಠಪುರ ಸಾರಿ ಸಿರಿ ಪಾದದ್ವಯವ ಭಜಿಸಿರಯ್ಯಾ ಅಯ್ಯಯ್ಯ 9
--------------
ವಿಜಯದಾಸ
ಶ್ರೀ ಯತಿವರ ಗುರುರಾಘವೇಂದ್ರರನ್ನಾ ಪ ಶರಣ-ಜನ-ಸುರ-ಪಾದಪನೆ ತವ ಚರಣಯುಗಳತೆ ಮೊರೆಯ ಪೊಕ್ಕೆನೊ ಕರುಣಿಸೆನ್ನನು ದೂರ ನೋಡದೆ ಕರುಣಸಾಗರನೆ ನೀ ಅ.ಪ ಆರು ಕಾಯ್ವರೊ ಪೇಳೋ ಎನ್ನ - ನೀ ದೂರ ನೋಡುವದೇನು ಘನ್ನ ಸಾರಿದವರಿಗಿಷ್ಟವನ್ನ - ಬೀರುವನೆಂಬೋ ಬಿರುದು ಪೋಗಿಹದೋ ನಿನ್ನ ಪಾದ - ಪದುಮ ಸೌರಭ ಸ್ವೀಕರಿಪ ಜನರೊಳು ಸೇರಿಸೆನ್ನನು ದೂರ ನೋಡದೆ ಭೂರಿ ಕರುಣಾಕರನೆ ನೀ 1 ದುರುಳು ಭವಾಂಬುಧಿ ಬಾಧಾ - ಎನ್ನ ಮೀರಿ ಪೋಗಿಹÀ್ಯದು ಅಗಾಧಾ ಮದನ - ಶರ - ಬಂಧಾ - ದಿಂದ ದೂರಾಗಿಹದೋ ನಿನ್ನ ಸಂಭಂಧ ಪರಮ ಪಾಮರನಾದ ಎನ್ನಯ ಮರುಳು ಮತಿಯನು ಬಿಡಿಸಿ ನಿನ್ನ - ವರೊಡನೆ ಸೇರಿಸೊ ಪರಮ ಕರುಣಿಯೆ ಚಾರತರನಾದ ಎನ್ನಾ 2 ದುಷ್ಟಜನರ ಸಂಗದಿಂದ ನಿನ್ನಯ ಪಾದ ಮುಟ್ಟ ಭಜಿಸದರಿಂದ ಸೃಷ್ಟಿಯೊಳಗೆ ಮತಿಮಂದಾ ನಾಗೀ ಪುಟ್ಟಿ ಬಂದೆನೊ ವೇಗದಿಂದಾ ಕಷ್ಟಹರ ಗುರು ಜಗನ್ನಾಥ ಪಾದ ಪದುಮಕೆ ಘಟ್ಟದೋಪಮ ನೆನಿಸಿ ಎನ್ನಾ ಪುಟ್ಟಿ ಬರದಂತೆ ಮಾಡೊ ನೀ 3
--------------
ಗುರುಜಗನ್ನಾಥದಾಸರು
ಶ್ರೀ ಲಕ್ಷ್ಮೀನೃಸಿಂಹ ಪ್ರಾದುರ್ಭಾವ ದಂಡಕ ಶ್ರೀರಮಾ ಮಾನಿನೀ ಮಾನಸೇಂದೀವರೋತ್ಫುಲ್ಲ ಸಂಫುಲ್ಲ ಚಂದ್ರಾ ಚಿದಾನಂದ ಸಾಂದ್ರಾ ಸದಾ ಸನ್ನುತೇಂದ್ರಾ ನಮೋಪೇಂದ್ರ ನಿಸ್ತಂದ್ರ ನೀ ಕೇಳು, ಆ ರೀತಿ ಪ್ರಹ್ಲಾದನಲ್‍ಸಜ್ಜನಾಹ್ಲಾದನಲ್ ದೈತ್ಯ ಸತ್ಪುತ್ರರಾವೇಳೆ ಶ್ರೀಕಾಂತನ ಜ್ಞಾನ ಭಕ್ತಿ ಕ್ರಿಯಾಗಾಧೆಗಳ್ ಬೋಧೆಗಳ್ ಕೇಳಿ ತಾವೆಲ್ಲರಾಮಾರ್ಗದಲ್ಲೇ ಸುನಿರ್ದಿಷ್ಟ ಸನ್ಮಾರ್ಗದಲ್ಲೇ ಪರಾಭೂತ ಷಡ್ವರ್ಗದಲ್ಲೇ ಮನಸ್ಸಿತ್ತು ಧರ್ಮಾರ್ಥ ಕಾಮಸ್ಪøಹ ಗ್ರಂಥಗಳ್ 10 ಸಿದ್ಧ ಸಂಸಾರ ಸಂಬಂಧಗಳ ಹತ್ತುವೂದಾಗದೇ ದಾನವಾಚಾರ್ಯರಾಶ್ಚರ್ಯದಿಂದಾಗ ತಾವೇಸುರೀತಿಂದಲಾಯಾಸುರೀವಿದ್ಯೆಗಳ ಗದ್ಯಗಳ್ ಪದ್ಯಗಳ್ ಪಾಠ ಪೇಳ್ತಿದ್ದರಾ ಪಾಠಗಳ್ ಒಪ್ಪದೇ ತಪ್ಪದೇನಿಂತು ಮಾರಾಟಗಳ್ ಮಾಡುತಾ ವಿಷ್ಣುಭಕ್ತಿ ಕ್ರಿಯಾಪಾಠಗಳ್ ಪಾಡುತಾ ಎಲ್ಲರೊಂದಾಗೆ ತಾವ್‍ನೋಡಿ ಅಂಜ್ಯಾಡಿ ಇನ್ನೇನು ಈಸೂನುಗಳ ದೈತ್ಯರಾಟ್ ಸೂನನಲ್ ಬುದ್ಧಿ ಭೇದೈಸಿ ದುರ್ಬೋಧಗಳ್ ಕೇಳಿ ದುಸ್ಸಾಧ್ಯರಂ 20 ಕರ್ಣ ಕಾಠೋರ್ಯ ಬಾಣಾಳಿಗಳ್ ರೀತಿ ಅಪ್ರೀತಿಯಾಸೂತಿ ದುರ್ನೀತಿ ತಾ ಸೈಸದೇ ಕೋಪಸಂದೀಪನಾವೇಶದಿಂದಲ್ ಚಲದ್ಗಾತ್ರನಾಗೆದ್ದು ಪ್ರೋದ್ಯದ್ದಯಾಪಾತ್ರನಂತಿಪ್ಪ ತತ್ಪುತ್ರ ಸಂಹಾರದಲ್ ಚಿತ್ತವಂ ಪೆತ್ತವಂ ಪಾಪÀಸಂವೃತ್ತನೇತ್ರ ಪ್ರಮಾಕ್ಷೇಕ್ಷನಾಗಲ್ ಸಮ 30 ಕ್ಷೈಸಿ ದುಷ್ಟೋಕ್ತಿಗಳ್ ಬಾಗುತಾ ಕೂಗುತಾಸಾಧು ಸಧ್ಭಕ್ತಿಯಿಂದಲ್ ಮಹದ್ಭಕ್ತಿಯಿಂದಲ್ಲಿ ತನ್ನಲ್ಲಿ ಚೆನ್ನಲ್ಲಿ ಬದ್ಧಾಂಜಲಿಯಾಗಿ ಸಿದ್ಧಾಂತ ಸದ್ಭಕ್ತಿಯಿಂದಲ್ಲಿ ನಿಂದಿದ್ದ ಪ್ರಹ್ಲಾದ ಧೀಮಂತಗೇ ನಿರ್ಮಲಸ್ವಾಂತಗಾವೇಳೆ ಪಾದಾಹತವ್ಯಾಳಿಯಂತೇ ಭುಜಶ್ವಾಸಗಳ್ ಬೇಸಿಗಳ್ ಬೀಸುತಾಕಂದಗಾ ತಂದೆ ಸುಭಾಷಿಪಂ. ಹೋಯೆಲೋ ದುರ್ವಿನೀತಾಯೆಲೋ ಮಂದಬುದ್ಧೇಯೆಲೋಇಂತು ನೀ ಸ್ತಬ್ಧನಾದೇತಕೋ ವಂಶಘಾ40 ತೀಯೆಲೋ ಪಾಪಜಾತೀಯೆ ನೀ ಹೀಗೆ ಮಚ್ಛಾಸನಾತೀನಾಗಪ್ಪೊಡೇ ನಿನ್ನ ನಿನ್ನಾ ಯಮದ್ವಾರಕೇ ಕಳುಹುವೆಂ ನೋಡೆಲಾನಾನು ಕೋಪಿಷ್ಠನಾಗಿಪ್ಪೊಡೇ ಅಂಜಿ ಮೂರ್ಲೋಕಗಳ್ ಲೋಕಪಾನೀಕಗಳ್ ಕಂಪ ಕಾಣುತ್ತವಿಂಥಾ ಬಲಿಷ್ಠನ್ನ ನೀನೆನ್ನ ಸಂಪದ್ಬಲ ಶ್ರೀಯನಾಶ್ರೈಸದೇ ಬಿಟ್ಟರಿನ್ನಾವನಲ್ ನೀಂ ಬಲಶ್ರೀಯನಾಶ್ರೈಸುವೇಯೋ ಎಲಾ ಏಕೆ ಮಚ್ಛಾಸನಾತೀತನಾಗೂವಿಯೋ ಕಂದ ಪೇಳೆಂದರೇ, ತಂದೆಗಾ 50 ತಂದೆ ಕೇಳಯ್ಯ ಬ್ರಹ್ಮಾದಿ ಆಸ್ತಂಭಪರ್ಯಂತವುಂ ಜಂಗಮಸ್ಥಾವರಾತ್ಮ ಪ್ರಪಂಚೋಚ್ಚ ನೀಚ ಪ್ರಜಾನೀಕ ಯಾವತ್ತದಾವಾತನಾಧೀನದಲ್ಲಿಪ್ಪುದೋ ಆತನೇ ಎನ್ನಗೇ ನಿನ್ನಗೇಇನ್ನು ಮಿಕ್ಕಾದ ಚೈತನ್ಯಕೆಲ್ಲಾ ಬಲಶ್ರೀಯು ತಾನಾದನೇ ಕಾದನೇ ಕಾಲರೂಪೀಶ್ವರೋರುಕ್ರಮಾಕಾರನೆಂಬಾತನೇಆತನೇ ಆತನೇ ತೇಜ ಓಜಸ್ಸಹಾಸತ್ವ ಸಂಪದ್ಬಲ ಶ್ರೀಂದ್ರಿಯಾತ್ಮನ್ ಸ್ವಯಂ60 ಸ್ವಾಂತ ನೀನಿತ್ತು ಸರ್ವತ್ರ ಸಮಚಿತ್ತನಾಗಯ್ಯ ಎನ್ನಯ್ಯನೇ ನಿನ್ನಗಾಮೇಲೆ ವಿದ್ವೇಷ ಮಾಡೂವರಾರಿಲ್ಲವಂತಸ್ಸಿನಲ್ಲಿಪ್ಪ ಕಾಮಾದಿ ಷಡ್ವರ್ಗವೆಂಬಾ ಮಹಾವೈರಿಗಳ್ ಕಳ್ಳರಂತೆಲ್ಲರುಂ 70 ದೇಹವೆಂಬೋ ಮಹಾರಾಜಧಾನೀ ವೃಥಾಹಾನಿ ಮಾಡೂವರಂಥಾವರಂ ಗೆಲ್ಲದೇಕೆಲ್ವರೀ ದಿಕ್ಕುಗಳ್ ಸರ್ವವಂ ಗೆದ್ದವೆಂತೆಂದು ಹಿಗ್ಗೂವರಂತಸ್ಸಿನಲ್ಲಿಪ್ಪ ಕಾಮಾದಿ ಷಡ್ವರ್ಗ ಗೆದ್ದಾತಗೇ ಜ್ಞಾನಸಂಪೂತಗೇ ಸಾಧು ಸಂಭೂತ ಸರ್ವಂಸಮಂಚೇತಗಾಮೇಲೆ ತನ್ಮೋಹ ಸಂಜಾತವೆಂತಪ್ಪುದೋ ಶಾತ್ರವವ್ರಾತವೆಲ್ಲಿಪ್ಪುದಯ್ಯಾ ಸದಯ್ಯಾತ್ಮನೇ ತಿಳಿದು ನೋಡೆಂದು ತಾನಿಂದು ಮಾತಾಡಲು, ಶತ್ರುವಂತಿಪ್ಪ ಪು 80 ಇಂದು ನಾವೊಂದು ಪೇಳುತ್ತಿರುತ್ತಿದ್ದರೊಂದಕ್ಕೆ ಹತ್ತಾಗಿ ನೀನೇವನೋ ವಿಷ್ಣುವೆಂಬಾತ ಬೇರೊಬ್ಬ ತಾನಿಪ್ಪನೆಂದೂಹಿಸೂವೇಯ ಹೋ ಹೋಯೆಲಾಸಾವಿಗೀ ಬುದ್ಧಿ ನೀ ಸಿದ್ಧ ಮಾಡೀದಿ ಎಂಬೋದಿದಂ ವ್ಯಕ್ತವಂತೆಲ್ಲ ನಾಂ ಬಲ್ಲೆ ಇಂ 90 ತಲ್ಲದೇ ನಿನ್ನಗೀರೀತಿ ದುರ್ಬುದ್ಧಿ ಪುಟ್ಟೂವುದೇ ಮೃತ್ಯುಸಿದ್ಧರ್ಗೆ ವಿಷ್ಣುತ್ವ ಸಂಭಾಷೆಯಲ್ಲಿಚ್ಛೆ ಬೇಕಾಗಿ ಹೋದಲ್ಲದೇಬಲ್ಲೆನೆಲ್ಲಾ ಎಲೋ ಮಂದನೇ ಮಂದಭಾಗ್ಯೋಕ್ತಿಗಳ್ ಏಕೆ ನೀನಾಡುವೇ ಅಕ್ಕಟಾಎನ್ನಗಿನ್ನಾ ಜಗನ್ನಾಥನಿನ್ನಾವನೋಆತನೆಲ್ಲಿಪ್ಪ, ಸರ್ವತ್ರದಲ್ಲಿಪ್ಪ ನೀನೆಂದಡೇ ಡಿಂಭಕಾಡಂಭಕಾಡೋಣಗಳ್‍ಸಾಕು ಮಾಡಿನ್ನು ಮೇಲೀ ಸಭಾಸ್ತಂಭದಲ್‍ಶೀಘ್ರ ಸಂರಂಭದಲ್ ತೋರು ನೀ ತೋರದೇ 100 ಪೋದೆಯಾ ಇನ್ನು ನೀ ಮಾರುಮಾತಾಡದ್ಹಾಗೇ ಶಿರಚ್ಛೇದ ಮಾಡೂವೆನೋ ನಿನ್ನಗೀವೇಳೆಯಲ್ ವಿಷ್ಣುವೆಂತೆಂದದಾವಾತ ತಾನಡ್ಡ ಬಂದಾನೋ ನಾ ನೋಡುವೆಂ ವಿಷ್ಣುವೇಬೇಡಬೇಕಾದ ದಿಕ್ಕಾಗಿ ನಿನಗಿಪ್ಪಡೇಬೇಡಿಕೋ ಮೂರ್ಖನೇ ಎಂದು ಕ್ರೋಧಾಗ್ನಿಯಿಂದುರ್ಪಿ ದುರ್ಭಾಷೆಯಲ್ ತನ್ನ ಪುತ್ರನ್ನ ತಾದೂರುತಾ ಹಾರುತಾ ಕೈಲಿ ಖಟ್ ಪೆಟ್ಕವಂಖಡ್ಗವಂ ಕೊಂಡು ದುಷ್ಟಂ ಮಹಾದೋರ್ಬಲಿಷ್ಠಂ ಸ್ವಯಂ ಮುಷ್ಟಿಯಿಂದಲ್ಲಿ ಪೆಟ್ಟಿತ್ತನು. 110 ಆ ಭೀಕರಧ್ವಾನ ಸಂಭಿನ್ನ ದುಷ್ಟಾಸುರೀಗರ್ಭಸಂರಂಭವುಂ ಶುಂಭದಂಭೋದ ವೀಥೀ ಸಮಾರಂಭಿತೋ ಜೃಂಭವುಂ ವೈಷ್ಣವೋತ್ಕøಷ್ಟ ವಿಶ್ರಂಭವುಂ ಶಾತಕುಂಭೊಲ್ಲಸದ್ರತ್ನಚಿತ್ರಪ್ರಭಾಗುಂಭವುಂ ತತ್ಸಭಾಸ್ತಂಭವಂ ಆಗಲೇ ಬೇಗಲೇ ಘಳಾಘಳಾರಾವ ಉದ್ಭೂತವಾಗೆದ್ದು ಬ್ರಹ್ಮಾಂಡವೆಲ್ಲಾ ಪರಿಸ್ಫೋಟವಂ ಮಾಡುವಂತೊಪ್ಪೆ ಬ್ರಹ್ಮಾದಿಗಳ್ ತಮ್ಮ ಧಾಮಕ್ಕೆ ವ್ಯಾಘಾತವೇನಾದರುಂ ಬಾಹೋದೇನೋ ಇದೇನೆಂದು ವಿ 120 ಭ್ರಾಂತ ಚೇತಸ್ಕರಾಗಿಪ್ಪರಂತೇ ದುರಂತೇಕ್ಷಣಂಗಳ ಕುವರಾಗ್ರನಲ್ ತುಂಬುತಾಕತ್ತಿ ಕೈಹತ್ತಿ ಪುತ್ರನ್ನ ತಾ ಚಿತ್ರಹಿಂಸಿತ್ತು ಕೊಲ್ಲೂವೆನೆಂದಾಗ್ರಹೋಗ್ರ ಗ್ರಹಗ್ರಸ್ತನಾಗೇನು ಮೈತಿಳಿಯದೇ ಕೂಡಿಓಡ್ಯಾಡಿ ಬಾಹೋ ಹಿರಣ್ಯಾಖ್ಯಗಾ ವೇಳೆ ಕಾಲಾಡದದ್ಹಾಗೇ ಸಭಾಸ್ತಂಭದಲ್ ತನ್ಮಹಾರಾವ ತಾನಡ್ಡಕಟ್ಟಿಪ್ಪದಂತಾ ಮಹಾಧ್ವಾನ ಕೇಳುತ್ತಲೇ ನಿಂತನಾ ಹೇತುವಂ ಕಾಣದೇ ಆಗ ಆಯಾಸುರೀ ಹಿಂಡುಗಳ್ 130 ತುಂಬಿ ಕಾಳ್ಗಿಚ್ಚುಗಳ್ ಚೆಂದದಿಂಜಂತು ಸಂಘಕ್ಕೆ ಸಂತಾಪಗೈಸೇ ಛಿಟಾಛಿಟ್ ಛಿಟಾಂಗಾರಗಳ್ ಬೀಸೆ ಇದೇವುದೋಭೂತ ಉದ್ಭೂತವಾಗೊಪ್ಪಿತೆಂದಾಗ ಮೂರ್ಲೋಕವೆಲ್ಲಾ ಸಮುಲ್ಲೋಕವಾಗಿಪ್ಪುದಾವೇಳೆ ತದ್ಭøತ್ಯವಾಕ್ ಸತ್ಯವಂ ಮಾಡಬೇ 140 ಕಾಗಿ ಸರ್ವತ್ರ ತಾನ್ ತನ್ನ ವ್ಯಾಪ್ತತ್ವವಂಪಥ್ಯವಾಗಿಪ್ಪವೋಲ್ ಅದ್ಭುತಾಕಾರ ಪೊತ್ತಂ ಜಗದ್ಭರ್ತ ತಾನೊಂದೆ ಸಿಂಹಾಕೃತೀಯಾಗದೇ ಮತ್ರ್ಯಮೂತ್ರ್ಯಲ್ಲದೇ ತತ್ಸಭಾಸ್ತಂಭದಲ್ ಡಿಂಬ ಸಂಭಾವನಕ್ಕಾಗಿ ಸಂಭೂತನಾದಂ.ದಿತೀಪುತ್ರನಾ ರೂಪವಂಕಂಡಿದೇನೋ ಮಹಾ ಚಿತ್ರವಾಗಿಪ್ಪುದೇಸಿಂಹದಂತಲ್ಲದೇ ಮತ್ರ್ಯನಂತಲ್ಲದೇಯಾವುದೀ ಭೂತವೆಂತೆಂದು ಮೀಮಾಂಸಮಾನಾತ್ಮನಾದಂ.ಜಗತ್ಸ್ಯಾಮಿ ತಾನಾಗಲೇ 150 ತಪ್ತಭಾಂಗಾರ ಶೃಂಗಾರವಲ್ಯಂತೆ ಕಂಗಳ್ ಸಮುದ್ಯತ್ಸಟಾ ಕೇಸರಂಗಳ್‍ವಿಜೃಂಭತ್ಕರಾಳಾಸ್ಪದಂ ಉಗ್ರನಾಸಾಸಮುಚ್ಚಾಸ್ವ ನಿಶ್ವಾಸಗಳ್ ಸಂಚಲದ್ವಸ್ತವ್ಯಾಳ ಕ್ಷುರಾಂತೋಗ್ರ ಜಿಹ್ವಾಗ್ರ ಲೇಲೀಹನಂಗಳ್ ಭ್ರಮದ್ಭ್ರೂಲ್ಪಲಂಗಳ್ ಹನೊರೋಷಭೀಷ್ಣಂಗಳುಂ ಊಧ್ರ್ವಕರ್ಣಂಗಳುಂ ಭೂಮಿ ಭೃ ತ್ಕಂದರಾಶ್ಚರ್ಯವವ್ಯಾತ ಘೋರಾಸ್ಯನಾಸಾಪುಟಂಗಳ್ ಅದೀರ್ಘೊನ್ನತಗ್ರೀವವುಂದೀರ್ಘದಂತೊಪ್ಪುವೋ ದೇಹವಂ ವಿಸ್ತøತೋ160 ಶುಂಡಾಲ ಶುಂಡಪ್ರಕಾಂ170 ಡ ಪ್ರಚಂಡೋಲ್ಲಸದ್ದೋಹ ಸಾಹಸ್ರ ದೀಪ್ತಾಯುಧಾಭೋ ನಖಾನೀಕವುಂ ಚಕ್ರ ಶಂಖಾದಿ ನಾನಾಯುಧ ಶ್ರೇಷ್ಠ ವಿದ್ರಾವಿತಾsಭದ್ರ ರಕ್ಷಃ ಪಿಶಾಚಾಸುರೋದ್ರೇಕವುಂಪ್ರೋನ್ನಿತಂಬೋರು ಸತ್ಸಾನು ಜಂಘಪ್ರದೇಶಾವೃತ ಪ್ರೋಲ್ಲಸತ್ಪೀತ ಕೌಶೇಯವುಂಬದ್ಧಕಾಂಚೀಕಟಿಸ್ಥಾನವುಂ ಮಂಜುಮಂಜೀರ ಸಂಚಿನ್ನನಾದಾಂಘ್ರಿಕಂಜಾತ ವಿನ್ಯಾಸವುಂ ಕೋಟಿ ಮಾರ್ತಾಂಡ ಸಂಕಾಶವುಂಪೋಲ್ವುದಂಥಾ ದುರಾಲೋಕವಂತಿಪ್ಪ ಜ್ವಾ180 ಲಾ ನೃಸಿಂಹಾಕೃತಿ ಸ್ವಾಮಿನಂ ನೋಡುತಾದೃಷ್ಟಿಗಳ್ ಬಾಗೆ ತಾ ನಿಂತು ನನ್ನ ವರಜಾರಾತಿಯಾದ ಸ್ವಯಂ ಜ್ಯೋತಿ ಈ ರೀತಿ ತಾನಿಂದಿಗೇ ನಾರಸಿಂಹಾಕೃತೀಯಾಗಿ ನಾಂಪುತ್ರಂ ಸಂಹಾರಕುದ್ಯುಕ್ತನಾಗಿಪ್ಪೊಡೇಎನ್ನ ಸಂಹಾರಕಾಗಿಲ್ಲಿಗೇ ಬಂದನೋಇನ್ನು ಮೇಲೀತನಿಂದೆನ್ನಗೇ ಮೃತ್ಯು ತಾಸಿದ್ಧವಾಂತಿಪ್ಪುದೇನೋ ಪುರಾಣ ಪ್ರಸಿದ್ಧೋಕ್ತ್ಯಭಿವ್ಯಕ್ತಿಗೈತೇನಹೋ ಎಂದು ಮಾತಾಡುತಾ ನಿಂತು ಉದ್ಯದ್ಗದಾಧಾರಿ ತ 190 ಪೂರ್ವದಲ್‍ಅಸ್ಯತೇಜೋಂಶದಿಂದಲ್ ಜಗಧ್ವಾಂತ ಯಾವತ್ತುಮಿಂ ತಾ ಸ್ವಯಂ ಪಾನಮಾಡಿಪ್ಪ ಸತ್ಯಾತ್ಮಗೀ ನಾರಸಿಂಹಾತ್ಮಗೇ ಈ ಹಿರಣ್ಯಾಸುರ ಶ್ರೇಷ್ಠ ಸಂಹಾರ ಹೆಚ್ಚಲ್ಲವಂತಾದರುಂ ಲೋಕದೃಷ್ಟ್ಯಾನುಸಾರ ಕ್ರಿಯಾಕಾರಿಯಾಗಿಪ್ಪ ನೃಸಿಂಹನುದ್ಯದ್ಗದಾಧಾರಿ ತಾನಾಗಿ ಸದ್ವಿದ್ಯುದಾಭ್ಯೋದ್ಯದು 200 ದ್ವೇಗವೇಗೋರು ಸಂಪದ್ಗದಾ ದಂಡವಂಕೊಂಡು ಯುದ್ಧಕ್ಕೆ ಬಾಹೋ ಮಹಾದೈತ್ಯವರ್ಯನ್ನ ತಾ ನೋಡಿ ರೋಷೋಜ್ವಲ ಜ್ವಾಲೆಗಳ್‍ಲೇಲಿಹಾನೋಲ್ಲ್ಲಸಜ್ಜಿಹ್ವೆಯಿಂದಲ್ ಪ್ರಕಾಶೈಸುತಾ ಚೀರುತಾಗಾಟ್ಟಹಾಸಕ್ರಮನ್ಯಾಸದಿ ಹಾರುತಾ ಕೋಟಿ ಸೂರ್ಯಪ್ರಭಾಬೀರುತಾ ಆ ಗರುತ್ಮಂತ ಕಾಳಾಹಿಂಪಿಡಿವನಂತೊಪ್ಪಿ ತಾನಾ ದಿತೀಪುತ್ರನಲ್‍ನೂಕಿದಂ ಶೀಘ್ರದಲ್ ಪಿಡಿದನಾ ದೈತ್ಯರಾಜೇಂದ್ರನಾವೇಳೆ ತದ್ಧಸ್ತದೋಳ್ ಸಿಕ್ಕದೇ 210 ಸುಕ್ಕದೇ ಘಕ್ಕನೇ ಬಿಡಿಸಿಕೊಂಡಾ ಗದಾದಂಡವಂ ಕೊಂಡು ಸನ್ನದ್ಧ ಸದ್ಯುದ್ಧವಂಮಾಡುವೋನಂತೆ ಯಾವಾಗ ನೃಸಿಂಹನಲ್‍ಸಿಕ್ಕಿ ಮತ್ತೇಬಿಡೂವಾದನಾ ವೇಳೆಯಲ್‍ಶರ್ವ ಶಕ್ರಾದಿ ದಿಕ್ಪಾಲಕಾನೀಕವುಂಸೂರ್ಯಚಂದ್ರಾದಿ ಸರ್ವಗ್ರಹಕ್ರ್ಷಾವಳೀಲೋಕವುಂ ಮೇಘಸಂತಾನದೋಳ್ ಲೀನವಾಗಿದ್ದು ಇನ್ನೇನು ಈ ದೇವತಾರಾತಿ ಈನಾರಸಿಂಹಾತ್ಮನಲ್ ಸಿಕ್ಕದೇ ದಕ್ಕದಂತಿಪ್ಪನೇ ಈತನೀ ದುಷ್ಟ ದೈತ್ಯನ್ನ ಗೆ 220 ಲ್ಲಾರನೋ ಗೆಲ್ವನೋ ಎಂದು ತದ್ವೀರ್ಯವಂತಿಳಿಯದೇ ಭ್ರಾಂತಚಿಂತಾಂತರಂಗೋದ್ಯದುದ್ವೇಗದಿಂ ಕಾಂಬಂತಿಪ್ಪುದು.ಆಮೇಲೆ ಢಾಲ್ ಕತ್ತಿ ಕೈಗೊಂಡು ಆಯಾಸದಿಂದಲ್ಲಿ ಆ ದೈತ್ಯನಾನಾರಸಿಂಹಾತ್ಮನಲ್ ಸಂಗರ ಶ್ರಾಂತಿ ಮತ್ತೇನು ತಾ ಕಾಣದೇ ದೂಕಿದಂ ತಾಕಿದಂಸೋಕಿದಂ ಅಂಘ್ರಿವಿನ್ಯಾಸಗಳ್ ಕೂಡಿ ತಾಮೇಲೆಯುಂ ಕೆಳಗೆಯುಂ ಶ್ಯೇನಪಕ್ಷಂತೆ ಸುತ್ತಾಡುತಾ ಛಿದ್ರವಂ ಕಾಣದೇ ತನ್ನನೇಪಿಡಿವುದಕ್ಕಾತನಂತೋಡುತಾ ಬಾಹೊ ಬ 230 ಲ್ಲಿಷ್ಠನಾ ಅಟ್ಟಹಾಸೈಸಿಯುಕ್ಕೇಸರಂಗಳ್ ಪ್ರಸಾದೈಸಿ ಕ್ರೂರಾಹಿತಾನಂದಘಗ್ರಾಹಿಯಂತೇ ಸ್ವಭಾ ಸಾಸಿರಂ ಸೂಸಿ ಜಂಘಾಲ ಲೀಲಾ ಸಮುಲ್ಲಂಘನಾ ಗೋಪದಿಂಹಾರಿಯಾ ನಾರಹರ್ಯಕ್ಷನಾ ದೈತ್ಯದಕ್ಷನ್ಪಿಡಿರ್ದಂ ಫಟಾಫಟ್ ತಲಾಘಾತವಂಗೈಲ್ಬಡಿರ್ದಂ ಥಟಾಥಟ್ ಪದಾಘಾತದಿಂ ದಲ್ ಹೊಡೆರ್ದಂ ಗದಾಘಾತದಿಂದಲ್ ಮಹೋರಸ್ಕಿಡಿರ್ದಂ ಸಭಾದ್ವಾರದಲ್ ಹಾಕಿ ಭಾಸ್ವನ್ನಖ ಶ್ರೇಣಿಯಿಂದಲ್ ಫಟಾಫಟ್ ಗುರು240 ತ್ಮಂತಕಾಲಾಹಿನಂ ಸೀಳುವೋ ರೀತಿ ಜಂಭಾರಿದಂಭೋಳಿಯಂತಾಗಲುಂ ಸೀಳುತಿರ್ದಾಮಹಾದೇವನ್ನಾ ಹಗಲ್ ರಾತ್ರಿಯೊಂದಲ್ಲದ್ಹಾಗೇ ದಿವಾಸಂಧಿಯಲ್ ಸೀಳಿದಂ.ಘೋರ ಸಂರಂಭ ದಂಷ್ಟ್ರೇಕ್ಷವ್ಯಾವೃತ್ಕರಾಳಾಕ್ಷನಾಗಿ ಸ್ವಜಿಹ್ಪಾಗ್ರದಿಂದಲ್ ಲಸದ್ವ್ಯಾತ್ತ ವಕ್ತ್ರಾಂತ ಶೋಣಿಯ ಮಾನಾಧರಾದ್ಯಂತವಂ ಲೇಲಿಹಾನೋಗ್ರವಂ ತೋರುತಾರಾಕ್ಷಸ ಶ್ರೇಷ್ಠನಂ ಪಿಡಿದು ವಕ್ಷೋನ್ನತಸ್ಥಾನವಂ ತೋಡಿ ಕಾಸಾರವಂ ಮಾಡುತಾ 250 ತುಂಬಿ ಶುಂಡಾಲ ಸಂಹಾರದಲ್ ಮುಂಚುವೋ ಘೋರ ಪಂಚಾನನೋದಾರ ಲೀಲೆಂಗಳಂ ಬೀರುತಾ ರಾಕ್ಷಸಾಧ್ಯಕ್ಷ ವಕ್ಷಸ್ಸಿನೋಳ್ ಕಿತ್ತುತಾ ಹಾರಗಳ್‍ಮಾಡಿಕೊಂಡೊಪ್ಪಿ ತದ್ರಕ್ತ ಸಿಕ್ತಾನನೋದ್ಯಚ್ಛಟಾ ಕೇಸರಂಗಳ್ ಪ್ರಕಾಶೈಸುತಾ 260 ದೈತ್ಯರಾಜೇಂದ್ರನಾ ಪ್ರಾಣಗಳ್‍ಗೊಂಡನಾಮೇಲೆ ಸುತ್ತಿದ್ದ ತದ್ಭಂಧು ಸಂದೋಹದಲ್ಲಿದ್ದನೇಕಾಸುರೀನೀಕವಂ ಸಾಯುಧೋದ್ರೇಕವಂ ಅಲ್ಲಕಲ್ಲೋಲವಂ ಮಾಡಿ ಚಂಚನ್ನಖಶ್ರೇಣಿಯಿಂ ಸಂಹರಂ ಮಾಡಿದಂ.ಆಗ ತದ್ಭೀಕರಾಕಾರವಂ ಕಾಂಬ ಶಕ್ತ್ಯಾವುದಂ ಕಾಣದೇ ತತ್ಸಟಾ ಕೇಸರೋದ್ಭೂತ ಸಂಘಾತಗಳ್ ಘೋರ ಜೀಮೂತಗಳ್‍ಸರ್ವವಂ ನೋಡುತಾ ಮತ್ರ್ಯಸಿಂಹೋಗ್ರದೃಷ್ಟಿಜ್ವಲಜ್ವಾಲೆಗಳ್ ಸೈಸದೇ ಸೂರ್ಯಚಂ270 ಪಾದ ಸಂಘಟ್ಟದಿಂದಲ್ ಧರಾಚಕ್ರವಲ್ಲಾಡಿತಾಘೋರ ತೇಜಸ್ಸಿಗವಕಾಶಂಗಳಾಕಾಶವೂಬಾಡಿತಾ ಶಾಕಿನೀ ಡಾಕಿನೀ ಮುಖ್ಯ ದು 280 ಷ್ಟಗ್ರಹಾನೀಕವುಂ ಭೀತಿಗೊಂಡೋಡಿತಾಮೇಲೆ ಉದ್ಯತ್ಸಭಾ ಮಧ್ಯೆ ದೈತ್ಯೇಂದ್ರ ಸಿಂಹಾಸನಸ್ಥಾನದಲ್ ನಾರಸಿಂಹಂ ಸಮಾಸೀನನಾಗಿಪ್ಪನಾ ತೇಜ ಓಜ ಪ್ರಭಾಪುಂಜರಂಜನ್ನ ಭಾಸ್ವತ್ಕರಾಳೋಗ್ರ ಜಿಹ್ವ ಸ್ಫುರದ್ದಂಷ್ಟ್ರ ವಕ್ತ್ರನ್ನ ಬಿಭ್ರಲ್ಲಸದ್ಭ್ರೂತನಂ ಆ ಮಹಾಕೋಪ ಸಂರಂಭ ಗಂಭೀರ ನೇತ್ರನ್ನ ಕಣ್ಣೆತ್ತಿ ಕಾಂಬೋದರಲ್‍ಬ್ರಹ್ಮ ರುದ್ರಾದಿಗಳ ಶಕ್ತಿಯುಂ ಸಾಲದೇದೂರದಲ್ ಪಾಶ್ರ್ವ ಭಾಗಸ್ಥರಾಗಿಪ್ಪರಂತೇ.290 ಆಗ ಮೂರ್ಲೋಕ ಸಂತಾಪಿಯಾಗಿಪ್ಪ ದೈತ್ಯನ್ನ ನಾರಾಯಣಂ ನಾರಸಿಂಹಾಕೃತೀಯಾಗಿ ಸಂಹಾರವಂ ಮಾಡಿದಂ ಎಂಬುದಾವಾರ್ತೆ ಕೇಳುತ್ತಲೇ ದೇವನಾರೀಜನಂಗಳ್ ಪ್ರಹರ್ಷಾನನೋತ್ಪುಲ್ಲರುಲ್ಲಾಸದಿಂವಾಸಿತಾಮೋದ ಮಂದಾರ ಕುಂದಾರವಿಂದಾದಿ ಸತ್ಪುಷ್ಟ ಸಂತಾನ ವರ್ಷÀಂಗಳಂವರ್ಷಿಸುತ್ತಿಪ್ಪರಾಕಾಲಾವಾಕಾಶದಲ್‍ನಿಂತು ಕಾಣೂವರಾ ದೇವದೇವೀ ಸಮೂಹಂಗಳಾಯಾವಿಮಾನಂಗಳೆಲ್ಲಾ ಮಹಾ 300 ಸಂಕುಲೀ ಭೂತವಾಗಿಪ್ಪವಾ ದೇವತಾದುಂದುಭಿಧ್ವಾನ ಇಂಬಾಗಿ ತಾ ದೇವಗಂಧರ್ವ ಸಂಗೀತ ನಾಟ್ಯಂಗಳಿಂದಪ್ಸರಾಕಾಮಿನೀ ತಾನ ಗಾನಂಗಳಿಂದಾಗ ಆಕಾಶವುಂ ತುಂಬಿತಾ ಬ್ರಹ್ಮರುದ್ರೇಂದ್ರ ಮುಖ್ಯಾಮರ ಶ್ರೇಣೀಗಳ್ ಪಿತೃಗಳ ಮನ್ವುಗಳ್‍ಸಿದ್ಧ ವಿದ್ಯಾಧರಾನೀಕಗಳ್À ಅಪ್ಸರಾ ಕಾಮಿನೇರಾ ಪ್ರಜಾಪಾಲ ಗಂಧರ್ವರಾಯಕ್ಷ ಕಿಂಪುರುಷರಾ ಚಾರಣಾನೀಕವಾಕಿನ್ನರಸ್ತೋಮ ನಂದಾ ಸುನಂದಾದಿ ತ 310 ತ್ಪಾರ್ಷದಾನೀಕವೆಲ್ಲಾ ಶಿರೋಭಾಗದಲ್‍ಪಾಣಿಗಳ್ ಜೋಡಿಸೀತೆಲ್ಲ ಮುನ್ನಾತಿ ದೂರಸ್ಥರಾಗಿದ್ದು ನಿಂತಾಮೃಗೇಂದ್ರಾಸನಾಸೀನನಾಗಿಪ್ಪ ಅತ್ಯುಗ್ರ ತೇಜಸ್ವಿನಂಮೆಲ್ಲನೇ ಬೇರೆ ಬೇರಾಗಿ ಕೊಂಡಾಡುತಾನಿಂತರಾವೇಳೆಯಲ್ ಬ್ರಹ್ಮ ತಾ ಭಾಷಿಪಂನಿನಗೆ ವಂದೀಸುವೆಂ ತಂದೆ ನೀನೆ ಅನಂತಂ ದುರಂತ್ಯೋರು ಶಕ್ತ್ಯುಳ್ಳವಂ ಲೋಕಪಾವಿತ್ರ್ಯ ಕಮ್ರ್ಯಂ ಮಹಾಶ್ಚರ್ಯ ವೀರ್ಯ ಜಗತ್ಸøಷ್ಟಿ ಸಂರಕ್ಷ ಸಂಹಾರಗಳ್ ಲೀಲೆಯಿಂ320 ದಲ್ ಸದಾ ಮಾಳ್ಪೆಯೋ ಅವ್ಯಯಾತ್ಮನ್ನೆ ನೀ ನೆಂದನು.ಈಶ ತಾ ಬಂದೆಲೋ ತಾತನೇನಿನ್ನಗೀ ಕೋಪ ಬಾಹೋದಕಿಂದಾ ಯುಗಾಂತಾಖ್ಯ ವೇಳ್ಯಲ್ಲವೋ ಕ್ಷುಲ್ಲನೀ ದೈತ್ಯನೀವೇಳೆ ನಿನ್ನಿಂದ ತಾನ್ ಮೃತ್ಯುಪಾಲಾದನಂತಿನ್ನುಮೇಲ್ ಕೋಪ ಸಂಕ್ಷೇಪ ಮಾಡಯ್ಯ ಈದೈತ್ಯ ಪುತ್ರನ್ನ ಪ್ರಹ್ಲಾದನಂ ಸರ್ವದಾನಿನ್ನ ಭಕ್ತನ್ನ ಸಂರಕ್ಷಿಸೋ ಭಕ್ತವಾತ್ಸಲ್ಯದಿಂದೆಂದನು.ಇಂದ್ರ ತಾ ನಿಂತೆಲೋ ಸ್ವಾಮಿಯೇ ಅಣ್ಣತಮ್ಮಂದ್ರ ದೀಟಾಗಿ ನೀನೇ ಸದಾ ನಮ್ಮ ಸಂ330 ರಕ್ಷಿಸೂವೇಯೊ ನಿನ್ನಿಂದಲಾ ಯಜ್ಞ ಭಾಗಂಗಳುಂ ನಮ್ಮಗೇ ಮತ್ತೆ ಉಂಟಾದವಯ್ಯಾ ಹಿರಣ್ಯಾಸುರಂಗಾದುದೀಗೆಮ್ಮ ಸುಸ್ವಾಂತಗಳ್ ನಿನ್ನಗಾವಾಸಯೋಗ್ಯತ್ವ ಪೊಂದಿಪ್ಪುವಂತೆ ವಿಕಾಸ್ಯೆಸಿತೋ ನಿನ್ನ ಶುಶ್ರೂಷೆ ಬೇಕೆಂಬ ಲೋಕಾಳಿಗೇ ಕಾಲಸಂಗ್ರಸ್ತವಂತಿಪ್ಪ ಲೋಕಾಳಿಯಲ್ ಯಾವದೂಲಕ್ಷ್ಯವಿಲ್ಲಂತೆ ಮುಕ್ತ್ಯಾದರುಂ ಹೆಚ್ಚು ನಿಶ್ಬೈಸುವಂತೇ ನೃಹರ್ಯಾತ್ಮನೇ ಮಿಕ್ಕ ಸಂಭೂತಿಯಿಂದಾಗಬೇಕಾದುದೇ ನಿಪ್ಪುದೆಂದಂ.340 ಬೊಮ್ಮ ನೀನೆಮ್ಮ ಶ್ರೇಯಸ್ಸಿಗೆ ಮುನ್ನ ನಿನ್ನ ಸ್ವತೇಜಾಂಶವನ್ನೇ ತಪೋಯೋಗವಂ ನಮ್ಮಗೇಕೊಟ್ಟೆಯೊ ಆ ತಪಸ್ಸಿಂದ ನಿನ್ನಲ್ಲಿಹೋವಿಶ್ವವೆಲ್ಲಾ ಬಹೀರಂಗ ಮಾಡೀದೆಯೋನಮ್ಮದಂಥಾ ತಪಸ್ಸಂ ಹಿರಣ್ಯಾಸುರಶ್ರೇಷ್ಠತಾ ಕದ್ದನಂತಿದ್ದನೇ ಈಗ ನೀನೀ ಜಗದ್ರಕ್ಷಣಕ್ಕಾಗಿಯೇ ಭಕ್ತ ಸಂರಕ್ಷನೇ ನಾರಹರ್ಯಕ್ಷನಾಗಿನ್ನು ರಕ್ಷೋಗಣಾಧ್ಯಕ್ಷ ವಕ್ಷಸ್ಕವಂ ಸೀಳಿ ನೀ 350 ನಮ್ಮಗೆಲ್ಲಾ ತಪೋಯೋಗವಂ ಮತ್ತೆ ತಂದಿತ್ತೆಯಂತೆಂದರು.ಪಿತೃಗಳ್ ನಿಂತೆಲೋಧರ್ಮರೂಪೀಯೆ ಇಂಥಾ ಕ್ರಿಯಾಲಾಪಗಳ್‍ಪುತ್ರರಿಂದಲ್ ತಿಲೋದಂಗಳಿಂದಲ್ ಮಹಾಪುಣ್ಯ ತೀರ್ಥಂಗಳಲ್ ಕ್ಷೇತ್ರ ಪಾತ್ರಂಗಳಲ್‍ನಮ್ಮ ನಮ್ಮಲ್ಲಿ ಇಂತಿತ್ತ ಶ್ರಾದ್ಧಂಗಳಂತನ್ನ ಪ್ರೀತ್ಯರ್ಥವೆಂತಿರ್ದನೈ ನಾಥ ಸಂಪೂರ್ಣ ಸೌಭಾಗ್ಯ ಸಂಸ್ಥಾನಿಯೋ ನೀನು ಭಾಸ್ವನ್ನಖ ಶ್ರೇಣಿಯಿಂದಲ್ ಮಹಾ ದೈತ್ಯವಕ್ಷಸ್ಕವಂ ಸೀಳಿ ಇತ್ತಾವ ಪಾಂತ್ರಾತ್ಮಿಕಾ 360 ಶ್ರಾದ್ಧ ನಮ್ಮಲ್ಲಿ ತಾ ಸೇರಿತೈ ನಾರಹರ್ಯಾತ್ಮನೇ ನಿನ್ನಗೇ ನಾವು ಸಾಷ್ಟಾಂಗ ಪ್ರಣಾಮಗಳ ಮಾಡುವೇವೆಂದರು.ಸಿದ್ದರೆಲ್ಲಾಂಜಲೀಬದ್ಧರಾಗೆದ್ದೆಲೋಅಷ್ಟಸಿದ್ಧಾತ್ಮನೇ ನಮ್ಮಲಿದ್ದಾ ಮಹಾಯೋಗ ಸಿದ್ಧಿಂಗಳೆಲ್ಲಾ ತಪೋಯೋಗಸಾಮರ್ಥ್ಯದಿಂ ಕದ್ದನೇ ಗೆದ್ದೆನೆಂತಿದ್ದ ದೈತ್ಯ ಪ್ರಬುದ್ಧನ್ನ ವಕ್ಷಸ್ಕ ಸಂಭಿನ್ನವಂಮಾಡಿಯಾ ನಮ್ಮಗಾಧಾರವಾಗಿದ್ದ ಸದ್ಯೋಗ ಸಿದ್ಧಿಂಗಳಂ ಮತ್ತೆ ನೀನಿತ್ತೆಯೋ 370 ನಾರಸಿಂಹಾತ್ಮ ನಾವೆಲ್ಲರುಂ ನಿನ್ನಗೇವಂದನಂಗಳ್À ಸಮರ್ಪೀಂಸುವೇವೆಂದರು.ಆಮೇಲೆ ವಿದ್ಯಾಧರಾನೀಕಗಳ್ ನಿಂತೆಲೋಸರ್ವ ವಿದ್ಯಾತ್ಮನೇ ನಮ್ಮಲಿದ್ದಾ ಪೃಥಕ್‍ಧಾರಣಾಯೋಗ ಸಂಪಾದ್ಯಗಳ್ ವಿದ್ಯೆಗಳ್‍ನಷ್ಟಗೈಸಿದ್ದನತ್ಯಂತ ದರ್ಪಿಷ್ಠನೀಅಜ್ಞ ದೈತ್ಯೇಂದ್ರನಾ ಯಜ್ಞದೋಳ್‍ಬದ್ಧ ಪಶ್ವಂತೆ ತಾನಿಂದು ನಿನ್ನಿಂದಲಾ ಮೃತ್ಯುಪಾಲಾದನೇ ನಮ್ಮ ಸದ್ವಿದ್ಯೆಗಳ ಮತ್ತೆ ನಮ್ಮಲ್ಲೆ ಬಂದಿಪ್ಪುದಯ್ಯಾ ನೃಹರ್ಯಾತ್ಮ ತು 380 ನಾಗರಾವೇಳೆಲೋsನಂತನೇ ನಮ್ಮಲಿದ್ದಾ ಮಹಾರತ್ನಗಳ್‍ಮಾನಿನೀ ರತ್ನಗಳ್ ತಾ ಬಲಾತ್ಕಾರದಿಂಗೊಂಡನೀ ಪಾಪಿ ದೈತ್ಯನ್ನ ವಕ್ಷಸ್ಕವಂಸೇದಿ ಈ ರತ್ನಗಳ್ ಮತ್ತೆ ನೀ ನಮ್ಮಗೇಸೇರುವಂತೇ ದಯಾಮಾಡಿದೀಯೈ ನಮಸ್ತೇ ನಮೋ ಎಂದರು.ಮನ್ವುಗಳ್‍ನಿಂತೆಲೋಧರ್ಮ ಸಂರಕ್ಷನೇ ನಾವು ನಿನ್ನಾಜ್ಞೆಯಿಂದೀ ಪ್ರಜಾನೀಕಕೇರ್ಪಾಟು ಮಾಡಿದ್ದ ಮರ್ಯಾದೆಗಳ್ ಸರ್ವವೀ ದೈತ್ಯ ತಾ ಕೆಡಿಸಿ ಕ390 ಲ್ಲೋಲವಂ ಮಾಡಿ ನಿನ್ನಿಂದಲೀ ಈಗ ಸಂಹಾರಿಸಲ್ಪಟ್ಟನೇ ಇನ್ನು ಮೇಲ್ ನಾವು ನಿಮ್ಮುಟ್ಟಕ್ತಿಗಳ್ ನಡೆಸುವೇವೆಮ್ಮಗಾಜ್ಞಾಪಿಸೋನಾವು ತ್ವದ್ದಾಸ್ಯವಂ ಬಯಸಿದೇವೆಂದರು.ಆ ಪ್ರಜೇಶ್ಯಾಳಿಗಳ್À ನಿಂತು ಕೇಳೋ ``ಪ್ರಜೇಶಾ ವಯಂ ತೇ ಪರೇಶಾಭಿಸೃಷ್ಟಾ ನ ಯೇನ ಪ್ರಜಾ ವೈ ಸೃಜಾಮೋ ನಿಷಿದ್ಧಾಃ ಸ ಯೇಷ ತ್ವಯಾ ಭಿನ್ನವÀಕ್ಷಾನು ಶೇತೇ ಜಗನ್ಮಂಗಲಂ ಸತ್ವಮೂರ್ತೇವತಾರಃ’’ ಪ್ರಭೋಎಂದರು. ಆಗ ಗಂಧರ್ವರೆಲ್ಲಾ ಎಲೋ 400 ಸ್ವಾಮಿಯೇ ನಾವು ನಿಮ್ಮ ಪ್ರಸನ್ನಾವತಾರೈಕ ಲೀಲಾ ಕಥಾಸೂಕ್ತಿಗಳ್ ನಾಟ್ಯ ಶೃಂಗಾರ ಚೇಷ್ಟಾ ಕಳಾದರ್ಶನಾದ್ಯಭಿನಯಾವ್ಯಕ್ತಿಗಳ್ ತಾನ ಗಾನಾನುಸಂಧಾನ ಸಮ್ಮೋಹಿನೀ ಶಕ್ತಿಗಳ್ ಕೂಡಿ ಆಶ್ರಾಂತವುಂನಿನ್ನ ಕೊಂಡಾಡುತಾ ಗಾಯಕಶ್ರೇಷ್ಠರಂತಿಪ್ಪೆವೇ ತನ್ನ ಸದ್ವೀರ್ಯ ತೇಜೋಬಲೋಜಸ್ಕದಿಂದಲ್ ಪ್ರಭೋ ನಮ್ಮ ಸಾಮಥ್ರ್ಯಗಳ್‍ತನ್ನಗಾಧೀನ ಮಾಡಿಟ್ಟುಕೊಂಡಿದ್ದನೀದೈತ್ಯನೀ ವೇಳೆ ನಿನ್ನಿಂದ ಪಂಚತ್ವವಂ 410 ಆ ಯಕ್ಷರೆಲ್ಲಾ ಎಲೋ- 420 ಧ್ಯಕ್ಷನೇ ತ್ವನ್ಮನೋಭಿಜ್ಞ ಕರ್ಮಂಗಳಿಂದಲ್ ಸದಾ ನಿನ್ನಗೇ ಭೃತ್ಯರಾಗಿಪ್ಪ ನಾವೆಲ್ಲರುಂ ದೈತ್ಯಗೇ ಪಾಲಕೀ ಹೊರ್ವರಂತಾದೆವೇ ನಮ್ಮ ಸಂತಾಪಗಳ್ ಬಲ್ಲ ನಿನ್ನಿಂದಲೀ ದೈತ್ಯನೀ ವೇಳೆ ಪಂಚತ್ವವಂಹೊಂದಿದಂ ನಾವು ಸಂತೋಷವಂ ಕಂಡೆವಯ್ಯಾ ನೃಪಂಚಾಸ್ಯನೇ ಪಂಚವಿಂಶಾಖ್ಯ ನೀ ನೆಂದರು. ಆಮೇಲೆ ಕಿಂಪೂರುಷಾನೀಕವುಂಬಂದೆಲೋ ಪುರುಷನೇ ನಾವು ಕಿಂಪೂರುಷರ್‍ನೀಂ ಮಹಾಪೂರುಷಂ ಈಶ್ವರಂ ನಿನ್ನ ಕೈ 430 ನಿತ್ಯ ಕೊಂಡಾಡುತಾಭೂರಿಯೂಟಂಗಳಂ ಉಣ್ಣುತಾಲಿದ್ದೆವೇತಾನಿವೆಲ್ಲಾ ಪರಿಗ್ರಾಹಿಸೀ ದೈತ್ಯ ನಿನ್ನಿಂದ ಪೆಟ್ಟಾಂತು ತಾ ಪೋದನೇ ದೈವದಿಂ440 ಕಿನ್ನರ ಪ್ರಾಣಿಗಳ್‍ಪೂರ್ವದಲ್ ನಿನ್ನ ದಾಸಾನುದಾಸರ್ಗಳಾಗಿಪ್ಪೆವೀ ದೈತ್ಯ ನಮ್ಮಿಂದ ತಾ ಬಿಟ್ಟಿಕಾರ್ಯಂಗಳೆಲ್ಲಾ ಸದಾ ಮಾಡಿಸೂವಂ ವiಹಾದು:ಖಗೋಣಿಸುವಂ ಇಂಥ ಪಾಪಿಷ್ಠ ದೈತ್ಯನ್ನ ಸಂಹಾರ ವಂ ಮಾಡಿದೀ ಇನ್ನು ನೀನಮ್ಮಗೆಲ್ಲಾ ಸಮುಲ್ಲಾಸಗಳ ಶ್ರೇಯಗಳಕೊಟ್ಟು ಸಂರಕ್ಷಿಸೋ ನಾರಹರ್ಯಕ್ಷನೇ ಎಂದರು. 450 ಅಚ್ಯುತದ್ವಾರಪಾಲಾಳುಗಳ್‍ನಿಂತೆಲೋ ಭೂಮನೇ ಕಂಡೆವೋ ಇಂದಿಗೇನಾರಹರ್ಯದ್ಭುತಾಕಾರವಂ ಲೋಕಕೆಲ್ಲಾ ಸುಖಾನಂದವಂ ನಮ್ಮಗಾಧಾರ ನೀನಲ್ಲದಿನ್ನಿಲ್ಲವೋ ಈಗ ವೈಕುಂಠದಲ್‍ನಿನ್ನ ದ್ವಾರಸ್ಥನಾಗಿಪ್ಪನಾ ವಿಪ್ರರಿಂದಲ್ ಮಹಾದೈತ್ಯಜನ್ಮಕ್ಕೆ ತಾ ಬಂದನೇ ಬಂದನಂತಿಂದಿಗೇ ವೈರಮಾರ್ಗಕ್ಕೆ ನೀನಿಂದು ಗೈದಂಥ ಈ ದೈತ್ಯಸಂಹಾರ ವ್ಯಾಪಾರವೆಮ್ಮಲ್ ಮಹಾನುಗ್ರಹಕ್ಕಾಗಿ ನೀ ಬಂದೆ ನಾವ್ 460 ಸ್ವಾಂತ ಸಂತೋಷ ಮಾಡೆಂದು ಬಿನ್ನಾಹಗಳ ಮಾಳ್ಪರು.ಆಮೇಲೆ ಆ ಬಾಲೆ ಸಾಕ್ಷಾಜ್ಜಗನ್ಮೋಹಿನೀ ಲೀಲೆಗಳ್ ಮಿಂಚುತಾ 470 ಪೂಂಚುತಾ ಬಂದು ಸಿಂಹಾಸನಸ್ಥಾನದಲ್‍ಉಗ್ರನಂತಿಪ್ಪನೃಸಿಂಹ ಮೂತ್ರ್ಯುಗ್ರವಂಕಂಡತಿವ್ಯಗ್ರಳಂತಾಗಿ ಆ ತಾಯಿ ಹಿಂದಕ್ಕೆ ತಾ ಬಂದಳಮ್ಮಮ್ಮ ಏಂ ಗುಮ್ಮನಂತಪ್ಪÀನೇ ಸ್ವಾಮಿ ಮುನ್ನಿಂತು ಆಶ್ಚರ್ಯವಂಈಸು ವಿಕ್ರಮ್ಯವಂ ಎಂದಿಗಾನೆಲ್ಲಿ ಕಂಡಿಲ್ಲವಲ್ಲಾ ಕಿವಿಲ್ಯಾದರುಂ ಕೇಳಲೇ ಇಲ್ಲವಲ್ಲಾ ಇದೇನೋ ವಿಚಿತ್ರಾಕÀೃತೀಯಂತೆ ತೋರೂವನೆಂದಂಜಿಕೇಗೊಂಡ ರೀತಿಂದ ತಾ ಹೆಜ್ಜೆ ಕಾಲ್ಗೆಜ್ಜೆಗಳ್ ಸಪ್ಪುಳಂ480 ಮಾಡದೇ ಮೆಲ್ಲನೇ ಪಾಶ್ರ್ವದಲ್ ನಿಂತಳುಆಮೇಲೆ ಪ್ರಹ್ಲಾದನಂ ಕಂಡು ಸಂಭಾಷಿಪಂಬ್ರಹ್ಮ ಬಾರೈ ಎಲೋ ವತ್ಸ ನೀನೀ ನೃಸಿಂಹಾತ್ಮನಲ್ ಮೆಲ್ಲನೇ ಸೇರಿ ನಿಮ್ಮಪ್ಪಗಾ ಗಿಂದು ನಮ್ಮಪ್ಪನಲ್ಲಿಪ್ಪ ತತ್ಕೋಪ ಸಂಕ್ಷೇಪ ಗೈಸೆನ್ನೆ ತದ್ವಾಣಿಗಳ ಕೇಳುತಾಮೆಲ್ಲನೇ ಪಿಲ್ಲೆ ಪ್ರಹ್ಲಾದನಾಹ್ಲಾದದಲ್‍ವೈಷ್ಣವಶ್ರೇಷ್ಠ ತಾನಾಗ ಬಂದಂ ಮಹಾಭಕ್ತಿಯಿಂದಲ್ ಮಹೀಮಂಡಲೀ ಮೇಲೆ ಸಾಷ್ಟಾಂಗ ಬಿದ್ದಂ ನಮೋ ಎಂದು ದಂಡಪ್ರಣಾ 490 ಮಂಗಳಂ ಮಾಡುವೋ ವೇಳೆ ತನ್ನಂಘ್ರಿಕಂಜಾತದಲ್ ಬಿದ್ದ ಬಾಲನ್ನ ಬಾಳಾ ಸುಶೀಲನ್ನ ಕಂದನ್ನ ದೃಷ್ಟಿಂದ ತಾ ಕಾಣುತಾಚಕ್ರ ಶಂಖಾಂಕಿತಾ ಶ್ರೀಲಸದ್ಬಾಹುಗಳ್‍ಚಾಚಿ ಭಕ್ತನ್ನ ತಾನೆತ್ತಿ ತನ್ಮಸ್ತಕಸ್ಥಾನದಲ್ ಪೋಕಲಾಗಿನ್ನು ಸಂಸ್ರಸ್ತ ಚೇತೋಭಯಧ್ವಸ್ಥವಂ ಸ್ವಸ್ತಿದಾನ ಕ್ರಿಯಾಭ್ಯಸ್ತವಂ ಶ್ರೀ ಸತೀ ಸ್ತಂಬಕವಿನ್ಯಸ್ತವಂಹಸ್ತವನ್ನಿತ್ತನವ್ಯಾಹತ ಸ್ಪರ್ಶದಿಂದಲ್ ವಿಧೂತಾ ಶುಭವ್ರಾತನಾಗೀಯಭಿ 500 ವ್ಯಕ್ತ ಲಕ್ಷ್ಮೀವಿಲಾಸಾತ್ಮ ಸಂದರ್ಶನೈಶ್ವರ್ಯವಂ ಕೂಡಿ ತತ್ಪಾದ ಪದ್ಮಂಗಳಂಚಿತ್ತದಿಂದಿತ್ತನಾನಂದದಿಂದಲ್ ಪ್ರಹೃಷ್ಯತ್ತನು ಕ್ಲಿನ್ನ ಚಿತ್ತಾಶ್ರುನೇತ್ರಾಬ್ಜನಾಗಿದ್ದು ಪ್ರಹ್ಲಾದನುಂ ನಾರಸಿಂಹಾತ್ಮನಲ್‍ನಿಂತು ಸಂಸ್ತೋತ್ರಗಾರಂಭಿಪಂ. ಶ್ರೀರಮಾದೇವಿ ತಾನಾಗ ಸಮ್ಮೋಹಿನೀ ಸಂಪುಗಳ್‍ಕೂಡಿ ಬಂದಾ ನೃಸಿಂಹಾಂಕದಲ್ ನಿಂತಳಾಬ್ರಹ್ಮನಾವೇಳೆಯಲ್ ನಾರಸಿಂಹಾತ್ಮನಲ್‍ಸೇರಿ ಸುಕ್ಷೀರ ನೀರಾಭಿಷೇಕಂಗಳಂ 510 ಚೀನಿ ಚೀನಾಂಬರಂಗಳ್ ಮಹಾನಘ್ರ್ಯ ರತ್ನಾವಳೀ ಭೂಷಣಂಗಳ್ ಲಸನ್ಮೌಕ್ತಿಕಾಹೀರ ಹಾರಂಗಳಂ ಗಂಧ ಕಸ್ತೂರಿಕಾಲೇಪಗಳ್ ಶ್ರೀ ತುಳಸ್ಯಾಪ್ತ ಶಾಮಂತಿಕಾ
--------------
ಶ್ರೀಪಾದರಾಜರು
ಶ್ರೀ ವಿದ್ಯಾಧೀಶರು ದಯಮಾಡೋ ಗುರುವೇ ವಿದ್ಯಾಧೀಶ ಪ ಅವಿದ್ಯಾ ನಿನ್ನ ಹೊರತು ನನಗನ್ಯ ಗತಿಯಿಲ್ಲ ಧನ್ಯನಿನ್ನಯ ಕುಲ ಮುನ್ನ ಉದ್ಧರಿಸಯ್ಯಾ 1 ತಾಪ ನಿನಗೆ ಇಲ್ಲಾಪೋತಗೆಲ್ಲರು ಬೋಧಾ ಯೋತಿ ಸಿಕ್ಕುವುದುಂಟೆ 2 ಹಾಕಿದ ಬೀಜವಾ ಬೀಕಲ ಮಾಡೋರೆತೋಕನಲ್ಲೆ ಕೃಪ ಯಾಕೆ ಮಾಡವಲ್ಲಿ3 ಅನವದ್ಯ ಕುಲದಿ ಪುಟ್ಟಿವಿದ್ಯಾರಹಿತನಾಗಿ ಹದ್ದಿನಂದದಿ ನಾನು4 ನಿಂದಿಸುವರೊ ನಿನ್ನ ವಂದಿತ ಕುಲವನ್ನುಮುಂದೆ ಮಾರ್ಗವ ಪೇಳಿಂದಿರೇಶನ ಪ್ರೀಯಾ 5
--------------
ಇಂದಿರೇಶರು
ಶ್ರೀ ವೆಂಕಟೇಶ ಸ್ತೋತ್ರ(2) ವೈಕುಂಠವಾಸ ಹರಿ ಶ್ರೀ ಕಂಠನುತ ನಿನ್ನ ಸಾಕಾರರೂಪ ತೋರೋ ಯಾಕಿಂತು ನಿರ್ದಯವು ಈ ಕುಮತಿ ಮೇಲಿನ್ನು ನೀ ಕರುಣಿಸೀಗ ಕಾಯೊ 1 ವಾಕು ಲಾಲಿಸುತ ನೀ ಬೇಕೆಂದು ಬೆಟ್ಟದಲ್ಲಿ ಲೋಕದ ಜನರನ್ನು ಸಾಕುತ್ತ ನಿಂತಿರುವ ಆಕಳ ಕಾಯ್ದ ದೇವಾ 2 ಕನಸು ಮನಸೀನಲ್ಲಿ ವನಜಾಕ್ಷ ನಿನ ದಿವ್ಯ ಘನರೂಪವನ್ನೆ ತೋರೊ ಅನುರಾಗದಿಂದ ಸಲಹೋ 3 ವೆಂಕಟಗಿರಿನಿಲಯ ಮಂಕುಮತಿಯ ಬಿಡಿಸಿ ಸಂಕಟಗಳನೆ ಹರಿಸೊ ಶಂಖಚಕ್ರಾಂಕಿತನೆ ಪಂಕಜಪಾದ ಮನ ಪಂಕಜದೊಳಗೆ ತೋರೊ 4 ಪದ್ಮಾಕ್ಷ ಪದ್ಮಮುಖ ಪದ್ಮಾನಾಭನೆ ನಿನ್ನ ಪದ್ಮ ಪಾದವೆ ಗತಿಯೊ ಪದ್ಮಾವತಿಪ್ರಿಯ ಪದ್ಮಹಸ್ತಾನೆ ನಿನ್ನ ಪದ್ಮಾದಿ ನಿನ್ನ ತೋರೊ 5 ಸೃಷ್ಟಿ ಸ್ಥಿತಿ ಲಯಕೆ ಕರ್ತಾನೆ ಎನ್ನ ಮನ ದಿಷ್ಟಾವ ಸಲಿಸಿ ಕಾಯೋ ಥಟ್ಟಾನೆ ಮನಕೆ ತೋರೊ 6 ತತ್ವಾಧಿಪತಿಗಳೊಳು ವ್ಯಾಪ್ತಾನಾಗಿರುತಿರ್ದು ಕರ್ಮ ಮಾಳ್ಪೆ ಎತ್ತಾ ನೋಡಿದರು ಸುರರರ್ಥಿಯಿಂ ಸ್ತುತಿಸುವರೊ ನಿತ್ಯಾಮೂರುತಿ ನೀ ಎಂದೂ 7 ನಿಗಮಾದಿ ವೇದದಿಂ ಬಗೆಬಾಗೆ ಸ್ತುತಿಸಿ ಕೊಂ ಬಗಣೀತ ಮಹಿಮ ದೇವಾ ಖಗರಾಜ ವಾಹನನೆ ನಗೆಮೊಗದ ಚೆಲುವ ಪ ನ್ನಗಶಾಯಿ ಸಲಹೊ ಎನ್ನ 8 ನಿತ್ಯಾ ತೃಪ್ತಾನೆ ಹರಿ ನಿತ್ಯಾ ಪ್ರಾಪ್ತಾನೆ ಸಿರಿ ನಿತ್ಯಾ ವಿಯೊಗಿ ದೇವಾ ನಿತ್ಯ ನಿರ್ವೀಕಾರ ನಿತ್ಯಾ ಕಲ್ಯಾಣಪೂರ್ಣ 9 ಜೀವಾಂತರಾತ್ಮಕನೆ ಜೀವಾ ನಿಯಾಮಕನೆ ಜೀವಾದಿ ಭಿನ್ನ ದೇವಾ ಜೀವೇಶ ಜೀವರಿಂ ಸೇವ್ಯಾನೆಂದೆನಿಪ್ಪೆ ಜೀವಾರ ಕರ್ಮಕರ್ತ 10 ಸತ್ವಾರಜೋತಮದಿ ನಿತ್ಯಾ ಸೃಷ್ಟೀಸುತಲಿ ವ್ಯಾಪ್ತಾನಾಗಿರುವೆ ಜಗದಿ ಸತ್ಯಾಮೂರುತಿ ಜಗತ್ಕರ್ತಾ ಕಾರಣರೂಪ ಸತ್ಯಾಧಿಪತಿಯ ವಂದ್ಯ 11 ಆದಿಯಲಿ ಅಸುರ ತಾ ವೇದ ಕದ್ದೊಯ್ಯೆ ಛೇದೀಸಿ ತಮನ ಕೊಂದೂ ನಿಗಮ ತಂದಾದರದಿ ಸುತಗಿತ್ತೆ ಶ್ರೀಧರನೆ ಮಚ್ಛರೂಪಿ 12 ಸುರರೆಲ್ಲ ಕಂಗೆಟ್ಟು ಮೊರೆ ಇಡಲು ನಿನ್ನ ಬಲು ಕರುಣೆಯಿಂದಾಲಿ ಬಂದೂ ಗಿರಿ ಎತ್ತಿ ಅಮೃತವ ಸುರರೀಗೆ ತಂದಿತ್ತ ವರ ಕೂರ್ಮರೂಪಿ ಸಲಹೊ 13 ಆದಿಹಿರಣ್ಯಾಕ್ಷ ಮೇದಿನಿಯ ಕದ್ದೊಯ್ಯೆ ಛೇದೀಸಿ ಅವನ ಕಾಯಾ ಆದರಿಸಿ ಧರಣಿಯನು ಆ ದಿವಿಜರಿಗೆ ಇತ್ತೆ ವರಾಹ ಕಾಯೊ 14 ದುಷ್ಟಾದಾನವ ಸುತನು ಅಟ್ಟೂಳಿಪಡಿಸುತಿರೆ ಸೃಷ್ಟೀಶ ಪೊರೆಯೊ ಎನಲು ಪುಟ್ಟಿ ನೀ ಸ್ಥಂಭದಲಿ ಕುಟ್ಟೀ ಅಸುರನನ್ನು ಪುಟ್ಟಾನ ಕಾಯ್ದ ನೃಹರಿ15 ಇಂದ್ರಾಲೋಕಾವನು ಬಲೀಂದ್ರಾನಾಕ್ರಮಿಸಿರಲು ಪೇಂದ್ರಾ ನೀನಾಗಿ ಬಂದೂ ಇಂದ್ರಾರಿಗೇಸುತಲ ಚಂದಾದಿತ್ತು ನೀ ನಿಂದ್ರಾಗೆ ಸ್ವರ್ಗವಿತ್ತೆ 16 ಪಿತನ ಆಜ್ಞೇಗೆ ಪತಿವ್ರತೆ ಮಾತೆ ಶಿರವಳಿದು ಮತಿವಂತನೆನಿಸಿ ಮೆರೆದೇ ಖತಿಯಿಂದ ಕ್ಷತ್ರಿಕುಲ ಹತಗೈಸಿ ಮೆರೆದ ಅ ಪ್ರತಿ ಭಾರ್ಗವಾನೆ ಕಾಯೋ 17 ಸೇತು ಬಂಧನಗೈದು ಖ್ಯಾತ ರಾವಣನೊರಸಿ ಸೀತೇಯ ತಂದ ರಾಮಾ ಮಾತೆ ವಚನಕಾಯ್ದೆ ವಾತಾತ್ಮಜನ ಪೊರೆದೆ ಪ್ರೀತಿಯಿಂದೆನ್ನ ಕಾಯೊ 18 ವನದಲ್ಲಿ ನಿಂತು ಘನಧ್ವನಿಯಿಂದ ಕೊಳಲೂದಿ ವನಜಾಕ್ಷಿಯರನೆ ಕಾಯ್ದೆ ಮುನಿವಂದ್ಯ ಶ್ರೀ ಕೃಷ್ಣ ಮುನಿನಾರದಗೊಲಿದೆ ಸನಕಾದಿ ವಂದ್ಯ ಸಲಹೋ 19 ತ್ರಿಪುರಾಲಲನೆಯಾರ ವ್ರತಭಂಗವನೆಗೈದು ನಿಪುಣಾನೆಂದೆನಿಸಿ ಮೆರೆದೆ ಬುದ್ಧ ತ್ರಿಪುರಾರಿ ವಂದ್ಯ ಹರಿ ಕೃಪೆಮಾಡಿ ಸಲಹೊ ಎನ್ನ 20 ಕಲಿಬಾಧೆ ವೆಗ್ಗಳಿಸೆ ಛಲದಿಂದ ದುಷ್ಟರನು ತಲೆಯಾ ಚೆಂಡಾಡಿ ಮೆರೆದೆ ಬಲವಂತ ಹಯವೇರಿ ಕಲಿದೈತ್ಯರನು ಕೊಂದೆ ನಳಿನಾಕ್ಷ ಕಲ್ಕಿ ಕಾಯೊ 21 ಭಕ್ತಾವತ್ಸಲನಾಗಿ ಮುಕ್ತಾಜೀವರ ಕಾಯ್ವೆ ಶಕ್ತಾವಂತನೆ ಸ್ವಾಮಿ ಮುಕ್ತೀದಾಯಕ ನೀನೆ ಮುಕ್ತಾಶ್ರಯನು ನೀನೆ ಮುಕ್ತಾರಿಗೊಡೆಯ ನೀನೆ 22 ಬಂದೇಯೊ ಭಕ್ತರನು ಚಂದಾದಿಂದಲಿ ಪೊರೆಯ ಬೇ ಕೆಂದೂ ನೀ ನಾಗಗಿರಿಗೆ ನಂದಾಕಂದಾನೆ ಹರಿ ಇಂದಿರೆಯರಸ ಬಹು ಸುಂದಾರ ಶ್ರೀನಿವಾಸ23 ಹಿಂದೇ ಮಾಡೀದ ಪುಣ್ಯ ಬಂದೂ ತಾ ಒದಗಿಗೋ ವಿಂದಾನ ಗಿರಿಯ ಯಾತ್ರೇ ಸಂದೀಸೆ ವೇಂಕಟನ ಸಂದಾರುಶನದಿಂದ ದುರಿತ 24 ಜಯ ಗುರುಗಳಂತರ್ಯ ಜಯ ನಾಗಶಯನ ಹರೆ ಜಯ ವೆಂಕಟಾದ್ರಿನಿಲಯ ಜಯ ತಂದೆ ಮುದ್ದುಮೋಹನ ದಾಸವರದ ಜಯ ಪದ್ಮನಾಭ ಜಯ ಭೋ 25 ಸ್ವಾಮೀ ಕಾಸಾರದತಿ ಪ್ರೇಮಾದಿ ನೆಲಸಿ ಸುರ ಕಾಮೀತವೀವ ಪ್ರಭುವೇ ಸ್ವಾಮಿ ಶ್ರೀ ವೇಂಕಟನೆ ನೇಮಾದಿಂದಲಿ ಭಜಿಪೆ ಕಾಮೀತವೀಯೊ ದೇವಾ 26 ಇಷ್ಟೂ ಬಿನ್ನಪವನ್ನು ಕೃಷ್ಣಾಮೂರುತಿ ಕೇಳಿ ಕಷ್ಟಾವ ಬಿಡಿಸಿ ಕಾಯೋ ದಿಟ್ಟಾ ಶ್ರೀ ಗೋಪಾಲಕೃಷ್ಣವಿಠ್ಠಾಲಾನೆ ಶ್ರೇಷ್ಠಾ ಶ್ರೀ ಗುರುವರದನೇ 27
--------------
ಅಂಬಾಬಾಯಿ
ಶ್ರೀ ವೆಂಕಟೇಶ ಸ್ತೋತ್ರ(2) ವೈಕುಂಠವಾಸ ಹರಿ ಶ್ರೀ ಕಂಠನುತ ನಿನ್ನ ಸಾಕಾರರೂಪ ತೋರೋ ಯಾಕಿಂತು ನಿರ್ದಯವು ಈ ಕುಮತಿ ಮೇಲಿನ್ನು ನೀ ಕರುಣಿಸೀಗ ಕಾಯೊ 1 ವಾಕು ಲಾಲಿಸುತ ನೀ ಬೇಕೆಂದು ಬೆಟ್ಟದಲ್ಲಿ ಲೋಕದ ಜನರನ್ನು ಸಾಕುತ್ತ ನಿಂತಿರುವ ಆಕಳ ಕಾಯ್ದ ದೇವಾ 2 ಕನಸು ಮನಸೀನಲ್ಲಿ ವನಜಾಕ್ಷ ನಿನ ದಿವ್ಯ ಘನರೂಪವನ್ನೆ ತೋರೊ ಅನುರಾಗದಿಂದ ಸಲಹೋ 3 ವೆಂಕಟಗಿರಿನಿಲಯ ಮಂಕುಮತಿಯ ಬಿಡಿಸಿ ಸಂಕಟಗಳನೆ ಹರಿಸೊ ಶಂಖಚಕ್ರಾಂಕಿತನೆ ಪಂಕಜಪಾದ ಮನ ಪಂಕಜದೊಳಗೆ ತೋರೊ 4 ಪದ್ಮಾಕ್ಷ ಪದ್ಮಮುಖ ಪದ್ಮಾನಾಭನೆ ನಿನ್ನ ಪದ್ಮ ಪಾದವೆ ಗತಿಯೊ ಪದ್ಮಾವತಿಪ್ರಿಯ ಪದ್ಮಹಸ್ತಾನೆ ನಿನ್ನ ಪದ್ಮಾದಿ ನಿನ್ನ ತೋರೊ 5 ಸೃಷ್ಟಿ ಸ್ಥಿತಿ ಲಯಕೆ ಕರ್ತಾನೆ ಎನ್ನ ಮನ ದಿಷ್ಟಾವ ಸಲಿಸಿ ಕಾಯೋ ಥಟ್ಟಾನೆ ಮನಕೆ ತೋರೊ 6 ತತ್ವಾಧಿಪತಿಗಳೊಳು ವ್ಯಾಪ್ತಾನಾಗಿರುತಿರ್ದು ಕರ್ಮ ಮಾಳ್ಪೆ ಎತ್ತಾ ನೋಡಿದರು ಸುರರರ್ಥಿಯಿಂ ಸ್ತುತಿಸುವರೊ ನಿತ್ಯಾಮೂರುತಿ ನೀ ಎಂದೂ 7 ನಿಗಮಾದಿ ವೇದದಿಂ ಬಗೆಬಾಗೆ ಸ್ತುತಿಸಿ ಕೊಂ ಬಗಣೀತ ಮಹಿಮ ದೇವಾ ಖಗರಾಜ ವಾಹನನೆ ನಗೆಮೊಗದ ಚೆಲುವ ಪ ನ್ನಗಶಾಯಿ ಸಲಹೊ ಎನ್ನ 8 ನಿತ್ಯಾ ತೃಪ್ತಾನೆ ಹರಿ ನಿತ್ಯಾ ಪ್ರಾಪ್ತಾನೆ ಸಿರಿ ನಿತ್ಯಾ ವಿಯೊಗಿ ದೇವಾ ನಿತ್ಯ ನಿರ್ವೀಕಾರ ನಿತ್ಯಾ ಕಲ್ಯಾಣಪೂರ್ಣ 9 ಜೀವಾಂತರಾತ್ಮಕನೆ ಜೀವಾ ನಿಯಾಮಕನೆ ಜೀವಾದಿ ಭಿನ್ನ ದೇವಾ ಜೀವೇಶ ಜೀವರಿಂ ಸೇವ್ಯಾನೆಂದೆನಿಪ್ಪೆ ಜೀವಾರ ಕರ್ಮಕರ್ತ 10 ಸತ್ವಾರಜೋತಮದಿ ನಿತ್ಯಾ ಸೃಷ್ಟೀಸುತಲಿ ವ್ಯಾಪ್ತಾನಾಗಿರುವೆ ಜಗದಿ ಸತ್ಯಾಮೂರುತಿ ಜಗತ್ಕರ್ತಾ ಕಾರಣರೂಪ ಸತ್ಯಾಧಿಪತಿಯ ವಂದ್ಯ 11 ಆದಿಯಲಿ ಅಸುರ ತಾ ವೇದ ಕದ್ದೊಯ್ಯೆ ಛೇದೀಸಿ ತಮನ ಕೊಂದೂ ನಿಗಮ ತಂದಾದರದಿ ಸುತಗಿತ್ತೆ ಶ್ರೀಧರನೆ ಮಚ್ಛರೂಪಿ 12 ಸುರರೆಲ್ಲ ಕಂಗೆಟ್ಟು ಮೊರೆ ಇಡಲು ನಿನ್ನ ಬಲು ಕರುಣೆಯಿಂದಾಲಿ ಬಂದೂ ಗಿರಿ ಎತ್ತಿ ಅಮೃತವ ಸುರರೀಗೆ ತಂದಿತ್ತ ವರ ಕೂರ್ಮರೂಪಿ ಸಲಹೊ 13 ಆದಿಹಿರಣ್ಯಾಕ್ಷ ಮೇದಿನಿಯ ಕದ್ದೊಯ್ಯೆ ಛೇದೀಸಿ ಅವನ ಕಾಯಾ ಆದರಿಸಿ ಧರಣಿಯನು ಆ ದಿವಿಜರಿಗೆ ಇತ್ತೆ ವರಾಹ ಕಾಯೊ 14 ದುಷ್ಟಾದಾನವ ಸುತನು ಅಟ್ಟೂಳಿಪಡಿಸುತಿರೆ ಸೃಷ್ಟೀಶ ಪೊರೆಯೊ ಎನಲು ಪುಟ್ಟಿ ನೀ ಸ್ಥಂಭದಲಿ ಕುಟ್ಟೀ ಅಸುರನನ್ನು ಪುಟ್ಟಾನ ಕಾಯ್ದ ನೃಹರಿ 15 ಇಂದ್ರಾಲೋಕಾವನು ಬಲೀಂದ್ರಾನಾಕ್ರಮಿಸಿರಲು ಪೇಂದ್ರಾ ನೀನಾಗಿ ಬಂದೂ ಇಂದ್ರಾರಿಗೇಸುತಲ ಚಂದಾದಿತ್ತು ನೀ ನಿಂದ್ರಾಗೆ ಸ್ವರ್ಗವಿತ್ತೆ 16 ಪಿತನ ಆಜ್ಞೇಗೆ ಪತಿವ್ರತೆ ಮಾತೆ ಶಿರವಳಿದು ಮತಿವಂತನೆನಿಸಿ ಮೆರೆದೇ ಖತಿಯಿಂದ ಕ್ಷತ್ರಿಕುಲ ಹತಗೈಸಿ ಮೆರೆದ ಅ ಪ್ರತಿ ಭಾರ್ಗವಾನೆ ಕಾಯೋ 17 ಸೇತು ಬಂಧನಗೈದು ಖ್ಯಾತ ರಾವಣನೊರಸಿ ಸೀತೇಯ ತಂದ ರಾಮಾ ಮಾತೆ ವಚನಕಾಯ್ದೆ ವಾತಾತ್ಮಜನ ಪೊರೆದೆ ಪ್ರೀತಿಯಿಂದೆನ್ನ ಕಾಯೊ 18 ವನದಲ್ಲಿ ನಿಂತು ಘನಧ್ವನಿಯಿಂದ ಕೊಳಲೂದಿ ವನಜಾಕ್ಷಿಯರನೆ ಕಾಯ್ದೆ ಮುನಿವಂದ್ಯ ಶ್ರೀ ಕೃಷ್ಣ ಮುನಿನಾರದಗೊಲಿದೆ ಸನಕಾದಿ ವಂದ್ಯ ಸಲಹೋ 19 ತ್ರಿಪುರಾಲಲನೆಯಾರ ವ್ರತಭಂಗವನೆಗೈದು ನಿಪುಣಾನೆಂದೆನಿಸಿ ಮೆರೆದೆ ಬುದ್ಧ ತ್ರಿಪುರಾರಿ ವಂದ್ಯ ಹರಿ ಕೃಪೆಮಾಡಿ ಸಲಹೊ ಎನ್ನ 20 ಕಲಿಬಾಧೆ ವೆಗ್ಗಳಿಸೆ ಛಲದಿಂದ ದುಷ್ಟರನು ತಲೆಯಾ ಚೆಂಡಾಡಿ ಮೆರೆದೆ ಬಲವಂತ ಹಯವೇರಿ ಕಲಿದೈತ್ಯರನು ಕೊಂದೆ ನಳಿನಾಕ್ಷ ಕಲ್ಕಿ ಕಾಯೊ 21 ಭಕ್ತಾವತ್ಸಲನಾಗಿ ಮುಕ್ತಾಜೀವರ ಕಾಯ್ವೆ ಶಕ್ತಾವಂತನೆ ಸ್ವಾಮಿ ಮುಕ್ತೀದಾಯಕ ನೀನೆ ಮುಕ್ತಾಶ್ರಯನು ನೀನೆ ಮುಕ್ತಾರಿಗೊಡೆಯ ನೀನೆ 22 ಬಂದೇಯೊ ಭಕ್ತರನು ಚಂದಾದಿಂದಲಿ ಪೊರೆಯ ಬೇ ಕೆಂದೂ ನೀ ನಾಗಗಿರಿಗೆ ನಂದಾಕಂದಾನೆ ಹರಿ ಇಂದಿರೆಯರಸ ಬಹು ಸುಂದಾರ ಶ್ರೀನಿವಾಸ 23 ಹಿಂದೇ ಮಾಡೀದ ಪುಣ್ಯ ಬಂದೂ ತಾ ಒದಗಿಗೋ ವಿಂದಾನ ಗಿರಿಯ ಯಾತ್ರೇ ಸಂದೀಸೆ ವೇಂಕಟನ ಸಂದಾರುಶನದಿಂದ ದುರಿತ 24 ಜಯ ಗುರುಗಳಂತರ್ಯ ಜಯ ನಾಗಶಯನ ಹರೆ ಜಯ ವೆಂಕಟಾದ್ರಿನಿಲಯ ಜಯ ತಂದೆ ಮುದ್ದುಮೋಹನ ದಾಸವರದ ಜಯ ಪದ್ಮನಾಭ ಜಯ ಭೋ 25 ಸ್ವಾಮೀ ಕಾಸಾರದತಿ ಪ್ರೇಮಾದಿ ನೆಲಸಿ ಸುರ ಕಾಮೀತವೀವ ಪ್ರಭುವೇ ಸ್ವಾಮಿ ಶ್ರೀ ವೇಂಕಟನೆ ನೇಮಾದಿಂದಲಿ ಭಜಿಪೆ ಕಾಮೀತವೀಯೊ ದೇವಾ 26 ಇಷ್ಟೂ ಬಿನ್ನಪವನ್ನು ಕೃಷ್ಣಾಮೂರುತಿ ಕೇಳಿ ಕಷ್ಟಾವ ಬಿಡಿಸಿ ಕಾಯೋ ದಿಟ್ಟಾ ಶ್ರೀ ಗೋಪಾಲಕೃಷ್ಣವಿಠ್ಠಾಲಾನೆ ಶ್ರೇಷ್ಠಾ ಶ್ರೀ ಗುರುವರದನೇ 27 ಸೀತಾಪತಿವಿಠಲ ದಾಸಳ ನಿರ್ಯಾಣ ಪದ 266 ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ 3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ 22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36
--------------
ಅಂಬಾಬಾಯಿ
ಶ್ರೀ ವ್ಯಾಸರಾಜರು ಏಸು ಮಹಿಮ ನೋಡೋ | ಶ್ರೀ ವ್ಯಾಸಮುನಿಯು ತಾನೂ ಪ ದಾಸಜನರ ಹೃದ್ದೊದ್ದೋಷ ಕಳೆದು ಸಂ | ತೋಷ ಕೊಡುವ ದೊರೆ ಅ.ಪ. ರಾಮಾಚಾರ್ಯರ ಗೃಹದಿ | ಭೂಮಿ ಸೋಕದೆ ಪುಟ್ಟಿಪ್ರೇಮದಿಂದಲಿ ಪುರು | ಷೋತ್ಮ ತೀರ್ಥರ ಗುಹದಿಯಾಮ ಯಾಮಕೆ ಪಾಲು | ಆಮಹಾಮುನಿ ಕೂಡೆಸೀಮೆ ಮೀರಿದ ತೇಜ | ಕೋಮಲ ಕಾಯನು 1 ಪೂರ್ಣ ಬೋಧರ ಪೀಠ | ಬ್ರಹ್ಮಣ್ಯರಿಂಗೊಂಡುಭವಾರ್ಣ ತಾರಿಸುವಂಥ | ನ್ಯಾಯ ಗ್ರಂಥವ ಮಾಡಿಕರ್ಣ ರಹಿತನ ಸುಶಯ್ಯನ ಮಾಡಿಕೊಂಡಅರ್ಣ ಸಂಪ್ರತಿಪಾದ್ಯ | ಕೃಷ್ಣನ್ನ ಮೆರೆಸೀದ 2 ಸುಜನ ಕುಮುದ ಚಂದ್ರ | ನಿಜಭಕ್ತ ಪರಿಪಾಲ ಪರಿವ್ರಾಜಾಕಾಚಾರ್ಯ | ವಿಜಯ ನಗರಿಲಿ ನೆಲೆಸೀಅಜನನಯ್ಯನ ನಾಮ | ಭಜನೆ ಪ್ರಾಕೃತದೊಳುನಿಜಜನ ಕೊರೆಯುತ | ಅಜೇಯನೆನಿಸಿದಂಥ 3 ಮಿಥ್ಯಾಮತವಗೆದ್ದು | ತಥ್ಯಾವು ಜಗವೆಂದುಸ್ತುತ ಶ್ರೀಹರಿಯ ಸರ್ವೋತ್ತುಮನೆನುತಸತ್ಯವು ಪಂಚ ಭೇದ | ನಿತ್ಯವು ತಾರತಮ್ಯಭೃತ್ಯರು ಬ್ರಹ್ಮ ದೇವತೆಗಳೆಂದೊರೆದ 4 ಪುರಂದರ | ದಾಸರೆಂದೆನಿಸೀದ 5 ಅಹಿಪರ್ವತಾಧೀಶ | ಅಹಿತಲ್ಪನ್ನಾಸೇವೆವಿಹಿತದಿ ದ್ವಿಷಡಾಬ್ದ | ಬಹುಗೈದು ಅರಸಿನಕುಹುಯೋಗವಾರಿಸಿ | ಮಹಿಯ ಸುರರಿಗೆಲ್ಲಸಹಸ್ರಾರು ಗ್ರಾಮಗಳ್ | ಜಹಗೀರುಗಳನಿತ್ತ 6 ಛಂದದಿಂದಲಿ ನವ | ವೃಂದಾವನಕೆ ಬಂದುವೃಂದಾವನದಿ ನಿಂದು | ಇಂದೀವರಾಕ್ಷನುನಂದ ಕಂದ ಗುರು ಗೋ | ವಿಂದ ವಿಠಲನ ಹೃನ್‍ಮಂದಿರದಲಿ ನೋಡಿ | ನಂದವ ಪಡುತಿರ್ಪ7
--------------
ಗುರುಗೋವಿಂದವಿಠಲರು