ಒಟ್ಟು 5292 ಕಡೆಗಳಲ್ಲಿ , 123 ದಾಸರು , 3484 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲ್ಲಿದ್ದರು ಕಾಯ್ವ ಯದುಕುಲತಿಲಕ| ಭಕ್ತ ರೆಲ್ಲಿದ್ದರು ಕಾಯ್ವ ಯದುಕುಲತಿಲಕ ಪ ಅಡವಿಯೊಳಿರಲು ಅರಣ್ಯದೊಳಿರಲು ಮಡುವಿನೊಳಿರಲು ಮರದ ಮೇಲಿರಲು ಪೊಡವಿಗೀಶ್ವರ ತಾನು ದೃಢಭಕ್ತನಂ ಬಿಡದೆ ರಕ್ಷಿಸುವ ಯೆಂತೆಂಬೊ ಬಿರುದು 1 ತಂದೆಯ ಬಾಧೆಗೆ ಕಂದ ನಿಮ್ಮನು ಕರೆಯೆ ಬಂದು ಕಂಭದಲಿ ನೀ ಕಾಯ್ದೆ ಗೋವಿಂದಾ ಅಂದು ದ್ರೌಪದಿ ಹಾಯೆಂದು ಬದರಲು ಕೇಳಿ ಆ ನಂದದಿಂದಕ್ಷಯವನಿತ್ತ ರಂಗನು ನೀನು 2 ಭರದೆ ಭಗದತ್ತನು ಅಸ್ತ್ರ ಬಿಡಲು ಕೊರಳ ಚಾಚಿದನಾಗ ಕರುಣಾವಾರಿಧಿಯು ವರುಣಗದೆಯನಾಗ ಮರುಳತನದಿ ಬಿಡೆ ಮರಳಿ ಅವನ ಉರುಳಿಸಿತು ಶೃತಾಯುವು 3 ಸಿಂಧುರಾಜನ ಶಿರವ ಅವನ ತಂದೆ ಕೈಯಲಿ ಹಾಕಿ ಬಂದ ಭಾರವನೆಲ್ಲಾ ಕಾಯ್ದೆ ಗೋವಿಂದ ಕರ್ಣ ಅಪ್ರಮೇಯನು ಭೂಮಿ ಕ್ಷಿಪ್ರದಿಂ ಒತ್ತಿದಾ 4 ಅಂದು ಅರ್ಜುನ ತನ್ನ ಕಂದನೊಡನೆ ಕಾದೆ ಹಿಂದಿನ ವೈರದಿಂ ಶಿರವನ್ನು ಹರಿಯೆ ಬಂದು ಮುಕುಂದ ಸಂಧಿಸಿ ಶಿರವನ್ನು ಆ ಇಂದಿರೆ ರಮಣ5 ಉತ್ತರೆ ಗರ್ಭವು ಬತ್ತಿ ಬೀಳಲು ಆಗ ಉತ್ತಮ ಋಷಿಗಳೆಲ್ಲರ ನೋಡಿ ನಿತ್ಯಬ್ರಹ್ಮಚಾರಿಗಳು ಪಾದದೀ ಮೆಟ್ಟಿದರೆ ಬದುಕುವುದೆಂದನು ಕೃಷ್ಣ 6 ಸನತ್ಕುಮಾರರು ಶೌನಕರು ಮೊದಲಾಗಿ ಪರುಶುರಾಮ ಹನುಮಾದಿಗಳು ಬ್ರಹ್ಮಚರ್ಯವು ನಮಗಿಲ್ಲವೆನುತ ಬ್ರಹ್ಮಚರ್ಯಕ್ಕೆ ಆಧಾರ ನೀನೆನ್ನಲು ವಾಮಪಾದದಿ ತುಳಿದೆಬ್ಬಿಸಿದನು ಶಿಶುವ 7 ಸರಸಿರುಹನಯನಾ ಫಣಿರಾಜಶಯನ ಶರಣಾಗತದುರಿತಾಪಹರಣ ದೈತೇಯಸಂಹರಣ ಗೋವರ್ಧನೋದ್ಧರಣ ಪೀತಾಂಬರಾಭರಣ ಕೌಸ್ತುಭಾಭರಣ 8 ಅಶ್ವತಾಮನ ಅಸ್ತ್ರ ವಿಶ್ವವನು ಸುಡುತಿರೆ ವಿಶ್ವನಾಯಕ ಶಮನ ಮಾಡಿ ಕಾಯ್ದು ಅಸಮಸಾಹಸದಿ ಚಕ್ರವ ಪಿಡಿದು ಗರ್ಭದ ಶಿಶುವನ್ನು ಕಾಯ್ದ ಕುಶಲಿ ವೆಂಕಟಕೃಷ್ಣ 9
--------------
ಯದುಗಿರಿಯಮ್ಮ
ಎಲ್ಲಿರಲಾರನು ಚೆಲುವ ಗೋಪಾಲ ಮೆಲ್ಲುಲಿಗೊಲಿವನು ಇಲ್ಲಿರಲಾರನೆ ಪ ಕ್ಷುಲ್ಲಕರಿರುವೆಡೆ ನಿಲ್ಲಲಾರನು ದಿಟ ಎಲ್ಲ ಭಕ್ತರ ಮನೆಯಲಿ ನಲಿವನಿವ ಅ.ಪ ಸಕಲ ತೀರ್ಥಂಗಳ ಸಕಲಕ್ಷೇತ್ರಂಗಳ ಸಕಲೋತ್ಸವಗಳ ದರ್ಶನಯಾತ್ರೆ ಭಕುತಿಗೆ ಸಾಧನ ಮಂತ್ರವು ಮಾನವ ಭಕುತಿಯ ಭಜನೆಯೆ ಮುಕುತಿಯ ಮಾರ್ಗವು 1 ಮಲಗಿ ಪಾಡಲು ಅವ ಕುಳಿತು ಕೇಳುವನಂತೆ ಕುಳಿತು ಪಾಡಲು ಅವ ನಿಲ್ಲುವನಂತೆ ನಿಲುತ ಪಾಡಲು ಅವ ನಲಿಯುವನಂತೆ ನಲಿದರೆ ಒಲಿವ ಮಾಂಗಿರಿಪತಿಯಂತೆ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಎಲ್ಲಿರುವನೋ ರಂಗ ಎಂಬ ಸಂಶಯ ಬೇಡ ಪ ಎಲ್ಲಿ ಭಕ್ತರು ಕರೆಯೆ ಅಲ್ಲಿ ಬಂದೊದಗುವನುಅ ತರಳ ಪ್ರಹ್ಲಾದ ಹರಿ ವಿಶ್ವಮಯನೆಂದುಬರೆದೋದಲವನ ಪಿತ ಕೋಪದಿಂದಸ್ಥಿರವಾದಡೀ ಕಂಬದಲಿ ತೋರು ತೋರೆನಲುಭರದಿಂದ ಬರಲದಕೆ ವೈಕುಂಠ ನೆರೆಮನೆಯೇ1 ಪಾಪ ಕರ್ಮವ ಮಾಡಿದಜಮಿಳನ ಯಮಭಟರುಕೋಪದಿಂದೆಳೆಯುತಿರೆ ಭೀತಿಯಿಂದತಾ ಪುತ್ರನನು ಕರೆಯೆ ಕೇಳಿ ರಕ್ಷಿಸೆ ಶ್ವೇತದ್ವೀಪವೀ ಧರೆಗೆ ಸನಿಹದಲ್ಲಿಹುದೆ 2 ನೆಗಳು ನುಂಗುತಿರೆ ಭಯದಿಂದಮೊರೆಯಿಡಲು ಕೇಳಿ ತ್ವರಿತದಲಿ ಬಂದುಕರುಣದಲಿ ಬಂಧನವ ಪರಿಹರಿಸೆ ಗಜರಾಜನಿರುವ ಸರಸಿಯು ಅನಂತಾಸನಕೆ ಮುಮ್ಮನೆಯೆ 3 ಕುರುಪತಿಯು ದ್ರೌಪದಿಯ ಸೀರೆಯನು ಸೆಳೆಯುತಿರೆತರುಣಿ ಹಾ ಕೃಷ್ಣ ಎಂದೊದರೆ ಕೇಳ್ದುಭರದಿಂದ ಅಕ್ಷಯಾಂಬರವೀಯೆ ಹಸ್ತಿನಾಪುರಿಗೆ ದ್ವಾರಾವತಿಯು ಕೂಗಳತೆಯೆ 4 ಅಣು ಮಹತ್ತಿನೊಳೆಲ್ಲ ಪರಿಪೂರ್ಣ ವಿಶ್ವಮಯಗಣನೆಯಿಲ್ಲದ ಮಹಾಮಹಿಮನೆನಿಪಘನ ಕೃಪಾನಿಧಿ ಕಾಗಿನೆಲೆಯಾದಿಕೇಶವನುನೆನೆದವರ ಮನದೊಳಿಹನೆಂಬ ಬಿರುದುಂಟಾಗಿ5
--------------
ಕನಕದಾಸ
ಎಲ್ಲಿರುವೆಯೊ ಎಂದು | ತಲ್ಲಣಗೊಳುತ್ತಿದ್ದೆ ಇಲ್ಲೆ ಬಂದೆಯೊ ದೇವನೆ ಪ. ಪುಲ್ಲಲೋಚನ ಎನ್ನ ಉಲ್ಲಾಸಗೊಳಿಸುತ ನಿಲ್ಲೊ ಹೃತ್ಕಮಲದಿ ನೀ ಬಹು ಮುದದಿ ಅ.ಪ. ಕಪಟನಾಟಕ ದೇವ | ಅಪರಿಮಿತ ಮಹಿಮ ಗುಪಿತರೂಪನೆ ನಿನ್ನನು ವಿಪುಲಮತಿಯಿಂದ ವರ್ಣಿಸಲಾಪೆನೆ ಸಪುತ ಸಪುತ ಭುವನೇಶ ಕೃಪೆಮಾಡೊ ಕೃಪಣವತ್ಸಲ ನಿನ್ನ ಕಾಣದೆ ಅಪರಿಮಿತವಾಗಿ ನೊಂದೆನಯ್ಯ ತಪಿಸುವುದು ನಿನಗುಚಿತವೆ ಹರಿ ಕೃಪೆ ಮಾಡೊ ಬೇಗ ಶ್ರೀನಿವಾಸ 1 ಹರಿ ನಿನ್ನ ಪಾದವ | ನಿರುತದಿ ಧ್ಯಾನಿಪ ವರಮತಿ ಎನಗೆ ನೀಡೊ ಗರುವಿಕೆಯನೆ ಬಿಡಿಸು ಶರಣಳ ಪೋಷಿಸು ಸುರವರ ನಿನ್ನಂಘ್ರಿಗೆರಗಿ ಬಿನ್ನೈಸುವೆ ಕರೆಕರೆಗೊಳಿಸುವುದುಚಿತವೆ ತೊರೆದರೆ ಎನ್ನ ಪೊರೆವರ್ಯಾರೊ ಥರವಲ್ಲ ನಿನಗಿನ್ನು ಕೇಳಿದು ಪೊರೆಯದಿದ್ದರೆ ನಗರೆ ಭಕ್ತರು 2 ಮಂದಮತಿಯಿವಳೆಂದು | ಹಿಂದು ಮಾಡಿದರÉನ್ನ ಕುಂದು ನಿನಗೆ ತಪ್ಪದೊ ಬಂಧನ ಬಿಡಿಸು ನೀ ಬಂಧನದೊಳಗಿಡು ಮಂದಿರ ಹೃದಯದಿ ಎಂದೆಂದಿಗಗಲದೆ ಮಂದಭಾಗ್ಯೆಯ ಮಾತು ಕಿವಿಗೆ ಮಂದಗಮನೆಯ ಮಧ್ಯೆ ಇರುವಗೆ ಮಂದಹಾಸ ಮುಖೇಂದು ವದನನೆ 3 ಅಜಸುರ ವಂದ್ಯನೆ | ಭಜಿಸಲಾಪೆನೆ ನಿನ್ನ ತ್ರಿಜಗದೊಡೆಯ ಹರಿಯೆ ವಿಜಯಸಾರಥಿ ಎನ್ನ ರಜತಮವನೆ ಕಳೆದು ಕುಜನರೊಳಿಡದಲೆ ನಿಜಗತಿ ಪಾಲಿಸೊ ಗಜವರದ ಗಂಭೀರ ದೇವನೆ ಧ್ವಜವಜ್ರೌಕುಶ ಪಾದಕಮಲನೆ ಭಜಿಸಿದವರಿಗೊಲಿವ ದೇವನೆ ಭುಜಗಭೂಷಣನಿಂದ ವಂದ್ಯನೆ 4 ಸೃಷ್ಟ್ಯಾದಿ ಕರ್ತನೆ | ಎಷ್ಟು ಬೇಡಲೊ ನಾನು ಇಷ್ಟ ದೈವÀವೆ ಕೇಳಲೊ ಭ್ರಷ್ಟತನವನೆಣಿಸದೆ ದೃಷ್ಟಿಯಿಂದಲಿ ನೋಡಿ ಕಷ್ಟಬಿಡಿಸಿದರೆ ಮುಟ್ಟಿಪೂಜಿಸುವೆನೊ ದಿಟ್ಟ ಗೋಪಾಲಕೃಷ್ಣವಿಠ್ಠಲ ಇಷ್ಟು ಬಿನ್ನಪ ನಷ್ಟ ಮಾಡದೆ ಕೊಟ್ಟು ಧೈರ್ಯವ ಮೆಟ್ಟಿ ಪಾಪವ ಸುಟ್ಟು ಕರ್ಮವ ಕೃಷ್ಣ ಸಲಹೊ 5
--------------
ಅಂಬಾಬಾಯಿ
ಎಲ್ಲಿರುವೇನೋ ಮಾರುತಿ ಸುವ್ರತಿ ಎಲ್ಲಿರುವನೇನೋ ಮಾರುತಿ ಪ. ಎಲ್ಲಾ ಕಡೆಯಲ್ಲಿ ವ್ಯಾಪ್ತಿ ಯುಳ್ಳವ ಭಾರತೀಪತಿ ಅ.ಪ. ನಿತ್ಯ ರಾಮಪದೈಕಾಸಕ್ತಿ- ಚಿತ್ತನು ಸದಾ ಜಾಗರ್ತಿ ಧೂರ್ತರಿಪುದಲ್ಲಣ ಜೀ- ವೋತ್ತಮ ವಿಚಿತ್ರಗತಿ 1 ಪ್ರಾಣಸಮಾನ ಸಂಪ್ರೀತಿ ಜ್ಞಾನಪೂರ್ವಕ ಸದ್ಭಕ್ತಿ- ವಾನ ವಾನರೇಂದ್ರ ಸುಪ- ರ್ವಾಣಕುಲಚಕ್ರವರ್ತಿ 2 ಲಕ್ಷುಮಿನಾರಾಯಣನ ಪಕ್ಟ್ರೆಕಧೃತಿ ಸುಮತಿ ಅಕ್ಷೀಣ ತ್ರಾಣದ ನಿರ- ಪೇಕ್ಷ ಲಕ್ಷಣಮೂರುತಿ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಲ್ಲಿರುವೇನೋ ಮಾರುತಿ ಸುವ್ರತಿ ಎಲ್ಲಿರುವನೇನೋ ಮಾರುತಿ ಪ. ಎಲ್ಲಾ ಕಡೆಯಲ್ಲಿ ವ್ಯಾಪ್ತಿ ಯುಳ್ಳವ ಭಾರತೀಪತಿ ಅ.ಪ. ನಿತ್ಯ ರಾಮಪದೈಕಾಸಕ್ತಿ- ಚಿತ್ತನು ಸದಾ ಜಾಗರ್ತಿ ಧೂರ್ತರಿಪುದಲ್ಲಣ ಜೀ- ವೋತ್ತಮ ವಿಚಿತ್ರಗತಿ 1 ಪ್ರಾಣಸಮಾನ ಸಂಪ್ರೀತಿ ಜ್ಞಾನಪೂರ್ವಕ ಸದ್ಭಕ್ತಿ- ವಾನ ವಾನರೇಂದ್ರ ಸುಪ- ರ್ವಾಣಕುಲಚಕ್ರವರ್ತಿ 2 ಲಕ್ಷುಮಿನಾರಾಯಣನ ಪಕ್ಟ್ರೆಕಧೃತಿ ಸುಮತಿ ಅಕ್ಷೀಣ ತ್ರಾಣದ ನಿರ- ಪೇಕ್ಷ ಲಕ್ಷಣಮೂರುತಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಎಷ್ಟು ದಿವಸ ಹೀಗೆ ಕಳೆಯಲೊ ಗೋಪಾಲಕೃಷ್ಣ ಎಷ್ಟು ದಿವಸ ಹೀಗೆ ಕಳೆಯಲೊ ಪ. ಎಷ್ಟು ದಿವಸ ಹೀಗೆ ಎನ್ನ ಸೃಷ್ಟಿಗೊಡೆಯ ಬಳಲಿಸುವೆಯೊ ಕಷ್ಟಪಡಲಾರೆ ಭವದಿ ದೃಷ್ಟಿಯಿಂದ ನೋಡಿ ಸಲಹೋ ಅ.ಪ. ನಾನಾ ಜನ್ಮದಿ ತೊಳಲಿಸಿ ಎನ್ನನು ನೀನೆ ತಂದೆಯೊ ಮಾನವತ್ವದಿ ನಾನು ಎಂಬುದು ಬಿಡಿಸಿ ಈಗ ನೀನೆ ಕರ್ತನೆನಿಸಿ ಕಾಯೋ1 ದೇಹಸ್ಥನೆಂದೆನಿಸಿ ಎನ್ನ ದೇಹ ಮಧ್ಯದಿ ಕಾಣದಿಹರೆ ದೇಹಗಳನು ಧರಿಸಲಾರೆ ದೇಹ ಮೋಹ ಬಿಡಿಸದಿಪ್ಪರೆ 2 ಭೃತ್ಯವತ್ಸಲನೆಂದು ನಿನ್ನ ಭಕ್ತರೆಲ್ಲರು ಕರೆಯುತಿಹರೊ ಪೊತ್ತ ಬಿರುದು ಬಿಡುವರೇನೊ ಭೃತ್ಯಳೆಂದು ಎನ್ನ ಸಲಹೊ3 ಪೋಗುತಿದÉ ದಿವಸ ನೋಡು ಬೇಗ ಬೇಗನೆ ದಯವ ಮಾಡು ಭೋಗದಲಿ ವೈರಾಗ್ಯ ನೀಡು ಭಾಗವತರ ಸಂಗ ಕೊಡು 4 ಕರ್ಮದಲ್ಲಿ ಶ್ರದ್ಧೆಯಿಲ್ಲ ಧರ್ಮದಲ್ಲಿ ಬುದ್ಧಿಯಿಲ್ಲ ನಿರ್ಮಲದ ಜ್ಞಾನವಿಲ್ಲ ನಿರ್ಮಲಾತ್ಮ ಬಲ್ಲೆಯಲ್ಲ 5 ಅಂಧಕಾರದಿ ಎನ್ನನಿರಿಸಿ ಚಂದವೇನೋ ಹೀಗೆ ಮಾಳ್ಪದು ಕರ್ಮ ಸ್ವೀಕರಿಸಿ ಮುಂದೆ ಕರ್ಮವಿಡದೆ ಸಲಹೋ 6 ಅಪಾರ ಜನುಮದಲ್ಲಿನ ಪಾಪ ಸಮೂಹಗಳ ತರಿದು ಶ್ರೀಪಾದ ಸ್ಮರಣೆ ನೀಡೋ ಗೋಪಾಲಕೃಷ್ಣವಿಠಲ 7
--------------
ಅಂಬಾಬಾಯಿ
ಎಷ್ಟು ಪುಣ್ಯ ಮಾಡಿ ಇಲ್ಲಿ ಇಟ್ಟಿಗೆ ನೆಲಸಿತೋ ವಿಠ್ಠಲನ್ನ ಚರಣ ಶಿರದಿ ಮೆಟ್ಟಿಸಿ ಕೊಂಡಿತೋ ಪ. ಭಕ್ತನಾದ ಪುಂಡಲೀಕನ ಕರಕೆ ಸೋಕಿತೋ ಚಿತ್ತಧೃಡನು ಎಸೆಯೆ ರಂಗನ ಪಾದಕೆರಗಿತೋ 1 ಹರಿಯೆ ಎನ್ನ ಶಿರವ ಮೆಟ್ಟೆಂದ್ಹರಿಕೆ ಮಾಡಿತೋ ಪರಮ ಪುರುಷ ಬಂದು ನಿಲ್ಲೆ ಖ್ಯಾತಿ ಪೊಂದಿತೋ 2 ಪಾದ ಶಿರದಿ ಪೊತ್ತಿತೋ ಪಾದ ಇಲ್ಲಿ ಅಡಿಗಿಸಿಕೊಂಡಿತೋ 3 ಪಾದ ಸೋಕಿಸಿಕೊಂಡಿತೋ ಪಾದ ನನ್ನದೆಂದಿತೋ 4 ಯಮುನ ದಡದಿ ಸುಳಿದ ಪಾದಯತ್ನದಿ ಪೊಂದಿತೋ ಪಾದ ರಜವ ಧರಿಸಿತೋ 5 ಬಂಧ ಬಿಡಿಸುವಂಥ ಪದದಿ ಬಂಧಿಸಿಕೊಂಡಿತೋ ಪಾದ ಸೂಕ್ಷ್ಮದಿ ಪೊತ್ತಿತೋ 6 ಪಾದ ಘಳಿಗೆ ಬಿಡದಾಯ್ತೋ ಜಗದಲಿಟ್ಟಿಗೆ ನಿಲಯನೆಂಬೊ ಲಾಭ ಹೊಂದಿತೋ 7 ನಂದ ಕಂದ ಬಂದನೆಂದು ನಲಿದು ನಿಂತಿತೋ ಇಂದಿರೇಶ ಪೋಗದಿರೆಂದು ಇಲ್ಲೆ ಹಿಡಿದಿತೋ 8 ಪಾಪ ಕಳೆದು ಪಾವನ್ನದಲಿ ಮುಕ್ತಿ ಪೊಂದಿತೋ ಗೋಪಾಲಕೃಷ್ಣವಿಠ್ಠಲನ ಚರಣ ಸೇರಿತೋ9
--------------
ಅಂಬಾಬಾಯಿ
ಎಷ್ಟು ಪುಣ್ಯ ಮಾಡೀ ಕಂಬ ವಿಠ್ಠಲನ್ನ ಗುಡಿ ಸೇರಿತೋ ಪ. ಪುರಂದರ ದಾಸರನ್ನು ಕಟ್ಟಿಸಿಕೊಂಡು ತಾ ಪೂಜೆಗೊಂಡಿತೊ ಅ. ಎಲ್ಲಾ ಕಂಬಗಳಿದ್ದರೂ ಇಂತು ಇಲ್ಲೀ ಇದಕೆ ಈ ಖ್ಯಾತಿಯು ಬಂತು ಸುಜನ ವಂದಿಪರಿ ಪುಲ್ಲನಾಭನ್ನ ಕೃಪೆಯ ಪಡೆದಿತು 1 ಮಾಯಾಕಾರನು ನೀರನು ತಂದು ಈಯಲು ಪುರಂದರದಾಸರಿಗಂದು ನೋಯಿಸೆ ತಿಳಿಯದೆ ಮನಕದ ತಂದು ನ್ಯಾಯದಿ ಕಟ್ಟಿಸಿ ಹೊಡೆಸಿದನಂದು 2 ದಾಸರಂತೆ ತಾನು ವೇಷವ ಧರಿಸಿ ವೇಶ್ಯೆಗೆ ತನ್ನ ಕಂಕಣವನ್ನೆ ಕೊಡಿಸಿ ತಾಸೊತ್ತಿನಾ ರಾತ್ರೆ ಹೊಡೆದದ್ದ ನೆನಸಿ ವಾಸುದೇವ ಬೈಲಿಗೆಳೆಸಿದ ಬಿಗಿಸಿ 3 ಜ್ಞಾನ ಪುಟ್ಟಲು ಹರಿಮಾಯವಿದೆಂದು ಶ್ರೀನಿವಾಸ ತಾ ವಲಿದನು ಅಂದು ಆನಂದದಿಂದೊಂದು ಕವನ ಗೈದು ಶ್ರೀನಿಧೆ ಮುಟ್ಟಿತು ಮುಯ್ಯವಿದೆಂದು4 ದಾಸರ ಅಂಗವು ಸೋಕಿದ್ದರಿಂದ ಶ್ರೀಶನು ಹಗ್ಗದಿ ಬಿಗಿಸಿದ್ದರಿಂದ ದಾಸರ ಪೆಸರಲಿ ಮೆರೆವುದರಿಂದ ಭವ ಬಂಧ5 ಹಿಂದೆ ಕಂಬದಿ ನರಹರಿ ಅವತರಿಸೆ ಅಂದಿನ ಕಂಬವೆ ಈಗಿಲ್ಲ್ಲಿ ಉದಿಸೆ ಸಿಂಧುಶಯನನ್ನ ದಾಸತ್ವ ವಹಿಸೆ ಬಂದಿತು ವಿಠಲನ್ನ ಗುಡಿಯನಾಶ್ರೈಸೆ6 ಕರ್ಮ ಕಳೆವುದು ದಾಸರ ವಾಕ್ಶ್ರವಣ ಜ್ಞಾನವೀಯುವುದು ದಾಸರ ಉಪದೇಶ ಹರಿಯ ತೋರುವುದು ದಾಸರ ಸ್ಪರ್ಶವು ಮುಕ್ತಿಗೊಯ್ಯವುದು7 ಕಂಭವೆ ಸಾಕ್ಷಿಯು ಈ ಕಲಿಯುಗದಿ ಡಾಂಭಿಕ ಜನರಿಗೆ ತಿಳಿಯದು ಹಾದಿ ಬೆಂಬಿಡದೆ ಹರಿ ಕಾಯುವ ಭರದಿ ಇಂಬುಗೊಟ್ಟು ತನ್ನ ನಿಜ ದಿವ್ಯ ಪುರದಿ 8 ದಾಸರ ಮಾರ್ಗವೆ ಸುಲಭವೆಂತೆಂದು ದಾಸರ ಕೃಪೆ ದ್ವಾರ ವಲಿಯುವೆನೆಂದು ದಾಸರ ದೂಷಿಸೆ ಗತಿ ಇಲ್ಲೆಂದು ಶ್ರೀಶ ತಾನಿಲ್ಲೀ ನಿಂತನು ಬಂದು 9 ಶ್ರೀ ರಮಾಪತಿ ಓಡಿ ಬಂದ ನಿಲ್ಲೆಂದೂ ದ್ವಾರಕ ಪುರದೊಂದು ಕಂಭವೆ ಬಂದು ಸೇರಿತೊ ವಿಠಲನ ಮಂದಿರವಂದು ಸೂರೆಗೈದರೊ ಖ್ಯಾತಿ ದಾಸರು ಬಂದು 10 ನಿಜದಾಸರಂಗಸಂಗದ ಫಲದಿ ರಜತದ ಕಟ್ಟಿನಿಂ ಮೆರೆದಿತು ಜಗದಿ ಸುಜನರ ಸಂಗದಿ ಮುಕುತಿಯ ಹಾದಿ ಭುಜಗಶಯನ ತೋರುವ ನಿರ್ಮಲದಿ 11 ತತ್ವವನಿದರಿಂದ ತಿಳಿವುದು ಒಂದು ಉತ್ತಮತ್ವ್ವವು ಜಡಕಾಯಿತು ಬಂದು ಪಾದ ಸೋಂಕಲು ಅಂದು ವ್ಯರ್ಥವಾಗದು ಹರಿಭಕ್ತರೆ ಬಂಧು12 ಪಾಪ ನಿರ್ಲೇಪವಾಗೋದು ವಿಠ್ಠಲನ್ನ ಆಪಾದ ಮೌಳಿಯ ರೂಪ ದರುಶನ್ನ ಪರಿ ಖ್ಯಾತಿ ಪೊಂದಿತು ಕಂಬ ಘನ್ನ ಗೋಪಾಲಕೃಷ್ಣವಿಠ್ಠಲ ಸುಪ್ರಸನ್ನ 13
--------------
ಅಂಬಾಬಾಯಿ
ಎಷ್ಟು ಪೊಗಳಲಿ ನಾನು ಎನ್ನೊಡೆಯ ನಿನ್ನ ವಿ- ಶಿಷ್ಟ ಮಹಿಮೆಗಳನು ಭಕ್ತರಿಗೆ ಬಂದಾ ಕಷ್ಟ ಕಳೆಯುವೆಯೋ ನೀನು ಸುರಕಾಮಧೇನು ವಿಷ್ಣುವೇ ಪರದೈವವೆಂದು ದುಷ್ಟರಾಕ್ಷಸರನ್ನೆ ಕೊಂದು ಸೃಷ್ಟಿಪಾಲಿಪ ಶ್ರೀ ರಮೇಶನೇ ಇಷ್ಟ ಭಕುತರೊಳು ಶ್ರೇಷ್ಠನೆನಿಶಿದಿ ಪ ತಾಯಿಯೂ ಬಂದು ಸೇವೆಗೆ ರಘುಪತಿ ರಾಯನಲೆ ನಿಂದು ಬಯಸಲಿಲ್ಲಾ ಒಂದು ಶ್ರೀಹರಿಗೆ ಬಂದು ಕಾಯಬೇಕು ಸುಗ್ರೀವನೆನುತಲಿ ತೋಯಜಾಕ್ಷಗೆ ಪೇಳಿ ವಾಲಿಯ ಉ- ಪಾಯದಿಂದಲಿ ಕೊಲಿಸಿ ರವಿಜಗೆ ಸ- ಹಾಯ ಮಾಡಿದಿ ವಾಯುತನಯನೆ 1 ಕಡಲ ಬೇಗನೆ ಹಾರೀ ಶ್ರೀರಾಮನ ಮಡದಿಗುಂಗುರ ತೋರಿ ಅಲ್ಲಿದ್ದ ಅಸುರರ ಜಡಿದೆ ಬಲು ಹೊಂತಕಾರಿ ಮಾಡಿಯೊ ಸೂರಿ ಒಡೆಯಗ್ವಾರ್ತೆಯ ಪೇಳಿ ಶೀಘ್ರದಿ ನಡೆಸಿ ಸೈನ್ಯವ ದಶಮುಖನ ಶಿರ ಹೊಡೆಸಿದಾಕ್ಷಣ ಲೋಕಮಾತೆಯ ಒಡಗೂಡಿಸಿದೆಯೋ ಶ್ರೀರಾಮಚಂದ್ರಗೆ 2 ಮೂರು ರೂಪವ ತಾಳ್ದಿ ಮಹಯೋಗ್ಯ ಜನರಿಗೆ ಸಾರ ತತ್ವವ ಪೇಳ್ದಿ ಶರಣ್ಹೊಕ್ಕ ಜನರಪಾರ ದುಃಖವ ಶೀಳ್ದಿ ಮೊರೆಯ ಕೇಳ್ದಿ ಧೀರ ಕದರುಂಡಲಗಿ ಹನುಮಯ್ಯ ಸೇರಿದೆನೊ ನಿನ್ನಂಘ್ರಿ ಕಮಲವ ಗಾರು ಮಾಡದೆ ಸಲಹೊ ಕರುಣವಾರಿಧಿ ನೀಯೆನ್ನನೀಗಲೆ 3
--------------
ಕದರುಂಡಲಗಿ ಹನುಮಯ್ಯ
ಎಷ್ಟು ಪೊಗಳಲಿ ನಾನು ಎನ್ನೊಡೆಯ ನಿಮ್ಮ ವಿ- ಶಿಷ್ಟ ಮಹಿಮೆಗಳನು ಸುಜನರಿಗೆ ಬಂದ ಕಷ್ಟವಳಿಯಲ್ಕೆ ನೀ ಸುರಕಾಮಧೇನು ಪ ವಿಷ್ಣುವೆ ಪರಮದೈವವೆಂದು ದುಷ್ಟ ರಾಕ್ಷಸರ ಕೊಂದೆ ಸೃಷ್ಟಿಸಿ ಪಾಲಿಪ ಶ್ರೀರಾಮರ ಇಷ್ಟ ಭಕ್ತರೊಳು ಶ್ರೇಷ್ಠನೆಂದೆನಿಸಿದೆ ಅ ತಾಯಿಯಪ್ಪಣೆಗೊಂಡು ಸೇವೆಗೆ ರಘುಪತಿ ರಾಯನಲ್ಲಿ ನಿಂದು ತನ್ನಾತ್ಮ ಸುಖ ಬಯಸೆನೆಂದು ಶ್ರೀ ಹರಿಗೆ ನುಡಿದುಕಾಯಬೇಕು ಸುಗ್ರೀವನನೆನುತಲಿ ತೋಯಜಾಕ್ಷಗೆ ಪೇಳಿ ವಾಲಿಯನು ಪಾಯದಿಂದಲಿ ಕೊಲ್ಲಿಸಿ ರವಿಜಗೆ ಸ- ಹಾಯ ಮಾಡಿದೆ ವಾಯುತನಯ1 ಶೌರಿ ಒಡೆಯಗೆ ವಾರ್ತೆಯ ಪೇಳಿ ಶೀಘ್ರದಿ ನಡೆಸಿ ಸೈನ್ಯವ ದಶಮುಖನ ಶಿರವ ನೊಡಿಸಿದಾಕ್ಷಣ ಲೋಕಮಾತೆಯ ನೊಡಗೂಡಿಸಿದೆ ಶ್ರೀವಾಸುದೇವರಿಗೆ 2 ಸಾರ ತತ್ತ್ವವ ಪೇಳ್ದೆ ಶರಣು ಹೊಕ್ಕ ಮನುಜರ ಘೋರ ದುರಿತವ ಸೀಳ್ದೆ ಧೀರ ತನು ಧುರದುಂಡಿ ಹನುಮಯ್ಯರಿಂ ಸೇವಿಸಿದ ನಿಮ್ಮಂಘ್ರಿ ಕಮಲವದೂರ ಮಾಡದೆ ಎನ್ನ ಸಲಹಯ್ಯ ಕರುಣಾವಾರಿಧಿ ಕಾಗಿನೆಲೆಯಾದಿಕೇಶವ ಮುತ್ತತ್ತಿ ದೊರೆಯೆ3
--------------
ಕನಕದಾಸ
ಎಷ್ಟು ಮಾತ್ರ ನಿಂದಲ್ಲದ್ದು ಹರಿ ಸೃಷ್ಟಿಯೊಳಗೆ ಎನ್ನ ಹುಟ್ಟಿಸಿದ್ದು ಪ ನಷ್ಟದೇಹ ಕೊಟ್ಟು ದುಷ್ಟ ಬವಣೆಯಿಂದ ಕಷ್ಟದೊಳಗೆ ಎನ್ನ ನೂಕಿದ್ದುಅ.ಪ ಉಳಿದ ಪಾಪಶೇಷ ಕಳೆಯದಲೆ ಎನ್ನ ಇಳೆಯವಾಸಕ್ಯಾಕೆಳೆಸಿದಲೇ ನಳಿನನಾಭ ನಿನ್ನ ಬಳಿ ಇದೆ ನ್ಯಾಯವೆ ಕಳವಳಪಡಲು ನಾನೊಳಿತೇನು ನಿನಗೆ 1 ಎಷ್ಟು ರೀತಿ ಕಷ್ಟ ತಡಿಬೇಕೊ ಇ ನ್ನೆಷ್ಟುದಿನ ಹೀಗೆ ಕಳೀಬೇಕೊ ಕರ್ಮ ಎನ್ನದಿರಲಿಕ್ಕಾಗಿನು ಶಿಷ್ಟಜನುಮ ಮತ್ತು ಕೊಟ್ಟ್ಯಾಕೊ 2 ಭಕ್ತವತ್ಸಲನೆಂಬ ಬಿರುದೇನೋ ನಿನ್ನ ಭಕ್ತರ ಅಭಿಮಾನ ತೊರೆದೇನೊ ಭಕ್ತರಿಗೀತೆರ ಮೃತ್ಯುಬಾಧೆಯೇನು ಮುಕ್ತಿದಾಯಕ ಜಗತ್ಕರ್ತ ಶ್ರೀರಾಮನೆ 3
--------------
ರಾಮದಾಸರು
ಎಷ್ಟು ಹೇಳಲಿ ವೆಂಕಟಗಿರಿಯ ದೃಷ್ಟಿಗೆ ಬಹು ಸಿರಿಯ ಬೆಟ್ಟವನೆ ಮನಸಿಟ್ಟೇರಲು ಬೇಡಿದ ಇಷ್ಟಾರ್ಥಗಳ ಈಡಾಡುವ ದೊರೆಯ ಪ ಚಿತ್ರ ವಿಚಿತ್ರದ ಮಹಾದ್ವಾರ ಚಿನ್ನದ ಗೋಪುರ ಸ್ವಚ್ಛವಾದ ಸ್ವಾಮಿ ಪುಷ್ಕರಣಿ ತೀರ ಸುತ್ತಲು ಪ್ರಾಕಾರ ಹೆಚ್ಚಿನ ತೀವ್ರತವೆ ಮನೋಹರ ಮಾರುವ ವಿಸ್ತಾರ ಚಿತ್ತಜನಯ್ಯನ ಶೈಲವೆ ದೂರದಿಂ- ದ್ಹತ್ತಿ ಬರುವುದೀತನ ಪರಿವಾರ 1 ಕಟ್ಟಿದ ಉಡಿದಾರ ಉಟ್ಟಿದ್ದ ನಿರಿಜರಪೀತಾಂಬರ ಕೌಂಸ್ತುಭ ಮಣಿಹಾರ ಗಟ್ಟಿ ಕರಕಂಕಣ ಕುಂಡಲಧರ ಚತುರ್ಭುಜದಲಂಕಾರ ವಕ್ಷಸ್ಥಳದಲ್ಲಿ ಹೊಂದಿದ ಶ್ರೀ ಮಹಾ- ಲಕ್ಷ್ಮಿದೇವಿಯರಿಂದೊಲಿವ ಶೃಂಗಾರ 2 ಆಕಾಶರಾಜನ ಕಿರೀಟ ಚಿತ್ರವು ಬಹುಮಾಟ ಹಾಕಿದ್ದ ಹರಿ ಕಡೆಗಣ್ಣಿನ ನೋಟ ಭಕ್ತರ ಕುಣಿದಾಟ ಭವ ಪಡಿಪಾಟ ಬಿಡಿಸುವ ಯಮಕಾಟ ಕೋಟಿ ಜನರ ಓಡ್ಯಾಟವೆ ನಮ್ಮ ಕಿ- ರೀಟಿಯ ಸಖ ಕೇಶವನ ಮಂದಿರದೊಳ್ 3 ತಪ್ಪುಗಾಣಿಕೆಯ ಬೇಡುವ ಸರ್ಪ ಶೈಲದ ತಿಮ್ಮಪ್ಪ ಕಪ್ಪವ ಕಾಸು ಕವಡೆ ಮುಡುಪು ಹಾಕದೆ ತಾನೊಪ್ಪ ಜಪ್ಪಿಸಿ ನೋಡುವ ಜನರ ತಪ್ಪ ಹುಡಿಕ್ಯಾಡುತಲಿಪ್ಪ ಅಪ್ಪ ಮಹಿಮಾನಂತ ಮೂರುತಿ ತಾ- ನೊಪ್ಪಿದರೊಲಿದು ಕೊಡುವ ಸಾರೂಪ್ಯ 4 ದೇಶದೇಶದೊಳು ಈತನ ವಾರುತೆಯು ತುಂಬಿದ ಕೀರುತಿಯು ಆಸೆಯ ದೈವ ಈ ಮೂರುತಿಯು ಫಲ್ಗುಣ ಸಾರಥಿಯು ಲೇಸಾಗಿ ಜನರ ನೋಡುವ ರತಿಯು ಕರ್ಪುರದಾರತಿಯು ವಾಸವಾಗಿರುವ ಈ ಶೇಷಾದ್ರಿಯಲಿ ಭೀ- ಮೇಶ ಕೃಷ್ಣ ಶ್ರೀನಿವಾಸ ಕೃಪಾಳು 5
--------------
ಹರಪನಹಳ್ಳಿಭೀಮವ್ವ
ಎಸಳುಗಂಗಳ ಕಾಂತಿ ಹೊಳೆವ ಮುಖದ ಢಾಳಶಶಿಮುಖಿ ಚೆಲುವಿಕೆಯ ಪ ಕುಸುಮನಾಭನ ಕೂಡೆನೆಂಬೋ ಭರದಿಂದಬಿಸಿ ಹಾಲನೆ ಹೊತ್ತಳು ಅ ಮಾನಿನಿ ರನ್ನೆಕೇಳೀದ್ದು ಕೊಡುವೆನೆಂದ 1 ಕಮ್ಮನೆ ಕಾದಿಹ ಎಮ್ಮೆಯ ಹಾಲಿಗೆಒಮ್ಮನ ಹೊನ್ನೆಂದಳುಬೆಣ್ಣೆಗಳ್ಳ ಕೃಷ್ಣ ಕಣ್ಣು ಸನ್ನೆಯ ಮಾಡಿನಿನ್ನ ಮೋಹಿಪೆನೆನ್ನಲು 2 ಕೆಟ್ಟೆ ಕೆಟ್ಟೆನೊ ಕೃಷ್ಣ ಇತ್ತಲೇತಕೆ ಬಂದೆಅತ್ತೆ ಮಾವಂದಿರುಂಟುಥಟ್ಟನೆ ಕಂಡರೆ ಬಿಟ್ಟು ಬಿಡರು ನಿನ್ನಮುಟ್ಟದಿರೆಂದಳಾಕೆ3 ಎಂದ ಮಾತಿಗೆ ನಾನಂಜುವನಲ್ಲವೆಇಂದಿನ ದಿನದೊಳಗೆಮಂದಿರದೊಳಗಿದ್ದು ಮರುದಿನ ಪೋಗೆಂದುಮುಂಗೈಯ ಪಿಡಿದುಕೊಂಡ4 ಗಂಡನುಳ್ಳವಳ ಮುಂಗೈಯ ಪಿಡಿವಂಥಪುಂಡುತನವು ಸರಿಯೆಪುಂಡರೀಕಾಕ್ಷಿ ಕೇಳ್ ದುಂಡುಮಲ್ಲಿಗೆ ಹುವ್ವಕಂಡರೆ ಬಿಡುವರೇನೆ 5 ಬಾಳುವ ಹೆಣ್ಣಿನ ತೋಳನೆ ಪಿಡಿವುದುನ್ಯಾಯವೇನೋ ನಿನಗೆಫುಲ್ಲನಯನೆ ಕೇಳೆ ಆಯ್ದ ಮಲ್ಲಿಗೆ ಹುವ್ವಬಲ್ಲವರು ಬಿಡುವರೇನೆ6 ಬೈಗಾಯಿತು ಬೈದಾರು ಮನೆಯಲ್ಲಿಬಿಡು ಬಿಡು ಎಲೊ ಗೋವಳಐಗಾರ ನಾ ಕಾಣೆ ಜಗದಲ್ಲಿ ಜೀವರಹಿಡಿದು ಬಿಡುವನಲ್ಲವೆ 7 ಸಕ್ಕರೆ ಚಿಲಿಪಾಲು ಅರ್ಥಿ ಆಯಿತೆಂದುಎತ್ತಿಕೊಂಡು ಕುಡಿದಅಕ್ಕರೆಯಿಂದಲಿ ಬೇಡು ನೀ ಕೇಳಿದವಸ್ತುವ ಕೊಡುವೆನೆಂದ8 ವಸ್ತುವೇತಕೆ ಪರವಸ್ತುವೆ ನಾ ನಿನ್ನಮೆಚ್ಚಿ ಬಂದೇನೆಂದಳುಭಕ್ತರ ಸಿರಿಕೃಷ್ಣ ಕುಕ್ಷಿಯೊಳಗೆ ಇಟ್ಟುರಕ್ಷಿಸು ಎಂದಳಾಕೆ 9
--------------
ವ್ಯಾಸರಾಯರು
ಎಳ್ಳು ಕಾಳಿನಷ್ಟು ಭಕ್ತಿ ಎನ್ನೊಳಗಿಲ್ಲ ಪ ಕಳ್ಳರಿಗೆ ಕಳ್ಳನಂತೆ - ಬೆಳ್ಳಕ್ಕಿಯಂದದಿ ಡಂಭಅ ಗಾಣದೆತ್ತಿನಂತೆ ಕಣ್ಣಮುಚ್ಚಿ ಪ್ರದಕ್ಷಿಣೆಯ ಮಾಡಿಕಾಣದೆ ತಿರುಗುವೆನೆರಡು ಕಣ್ಣಿದ್ದು ನಾನುಮಾಣಿಕ್ಯದ ರಾಶಿಯಲ್ಲಿ ಅಂಧಕರೈವರು ಕೂಡಿಆಣಿಮುತ್ತ ಹಿಡಿದು ಹಿಡಿದು ಬಿಡುವ ಭ್ರಮಿತನಯ್ಯ1 ಗುಂಡು ಮುಳುಗನ ಹಕ್ಕಿಯಂತೆ ಕಂಡ ಕಂಡ ನೀರ ಮುಳುಗಿಮಂಡೆ ಶೂಲೆ ಬಾಹೋದಲ್ಲದೆ ಗತಿಯ ಕಾಣೆನೊಮಂಡೂಕನಂದದಲಿ ನೀರ ತಡಿಯಲಿ ಕುಳಿತುಕೊಂಡುಮುಂಡೆ ಮುಸುಕನಿಕ್ಕಿ ಮೂಗು ಹಿಡಿದು ಬಿಡುವ ಭ್ರಮಿತನಯ್ಯಾ 2 ಇಕ್ಕುಳದ ಕೈಯಲ್ಲಿ ಹಿಡಿದ ಕಾದ ಕಬ್ಬಿಣದಂತೆಸಿಕ್ಕಿ ಸಿಡಿಮಿಡಿಗೊಂಬೆ ಗತಿಯ ಕಾಣದೆಹೊಕ್ಕುಳ ಹೂವಿನ ಬಾಡದಾದಿಕೇಶವನ ಮೊರೆಹೊಕ್ಕೆನಿಂದು ಮನ್ನಿಸಿ ಕಾಯೋ ದೇವದೇವೋತ್ತಮನೆ 3
--------------
ಕನಕದಾಸ