ಒಟ್ಟು 950 ಕಡೆಗಳಲ್ಲಿ , 91 ದಾಸರು , 743 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮತಿತಪ್ಪಿ ನಡೆದೆಯಲ್ಲ ಶ್ರೀಲಕುಮೀ ಪತಿಯನು ನೆನೆಯಲಿಲ್ಲ ಹಿತವಾದ ಪಥವು ಸಂತತ ತೋರದೆ ನೀನು ಖತಿಗೊಂಡು ವೆಂಕಟಪತಿಯನು ನೆನೆಯದೆ ಪ ಕೃತ ತ್ರೇತ ದ್ವಾಪರ ಕಲಿಯುಗ ಚತುರ್ವಿಧ ಜೊತೆಯಾಗಿ ಪೋಗಲು ಸಾವಿರ ಬಾರಿಯು ಚತುರಾಸ್ಯ ಬ್ರಹ್ಮಗೆ ಹಗಲೊಂದು ಸಲುವುದು ಗತಿಯ ಕಾಣೆನು ಶ್ರುತಿಯ ಅಯುತ ಕಾಲದೊಳು 1 ಹಿಂದಣ ಭವದೊಳಗೆ ಬಂದ ಭವದೊಳಗೆ ಸಂ - ಬಂಧವಾಗಿಹ ಸತಿಯರೆಷ್ಟು ಮಂದಿಯೋ ಕಾಣೆ ಕಂದರನು ಪಡೆದುದಕೆ ಲೆಕ್ಕ ಸಂಖ್ಯೆಗಳಿಲ್ಲ ತಿಂದ ಅನ್ನವು ಮೇರುವಿಗಿಂತ ಇಮ್ಮಡಿಯು 2 ಕಾಯ ಬಿಡಿಸಿಕೊಂಬುದು ಜೀವ ಅಡಿಗಡಿಗೆ ಹುಟ್ಟುತ್ತ ಸಾವಾಗಯೆನ್ನುವನು ಕಾಲ ಮನದಿ ಬೇಸರಗೊಳಲು ಜಡತೆಕಿಕ್ಕದೆ ಮುಂದೆ ಕಡೆ ಹಾಯು ಮನವೆ 3 ಬಲೆಯ ಕಾಣದೆ ಪಕ್ಷಿ ಮೇವಿನಾಸೆಗೆ ಪೋಗಿ ತಲೆ ಸಿಕ್ಕಿ ಪ್ರಾಣವನು ಕಳಕೊಂಬ ತೆರನಂತೆ ಕುಲವೃಕ್ಷದೊಳಗಿರ್ದ ಫಲದ ಮಮತೆಗಳಿಂದ ಜಲಜನಾಭನ ಬಿಟ್ಟು ಹೊಲಬುದಪ್ಪಿತಲ 4 ಸ್ನಾನಕ್ಕೆ ಚಳಿ ಹುಟ್ಟಿ ಧ್ಯಾನಕ್ಕೆ ಮರವೆಯು ಮೌನಕ್ಕೆ ಕೋಪದ ಬೀಜವಂಕುರಿಸಿತು ದಾನಕ್ಕೆ ಲೋಭವು ಮಾನಕ್ಕೆ ಪಿಸುಣರು ಏನ ಮಾಡಿದರಿವರು ಬಿಡರಲ್ಲೊ ಮನವೆ 5 ಸಂಗಡದಿ ಬರುತಿಪ್ಪ ಶುಭಗಳನು ಕಡೆಗಿಟ್ಟು ಅಂಗಸುಖವ ತಾಳ್ದು ಗೊಂಗುಡಿಯ ಹೊದ್ದು ಕಂಗಳಿಗೆ ಚೆಲುವಾದ ಅಂಗನಾಮೋಹದಿ ಶ್ರೀ- ರಂಗನ ನಾಮದ ಅಂಗಿಯ ಸಡಲಿಸಿದೆ 6 ಹರಿಧ್ಯಾನ ಹರಿಪೂಜೆ ಹರಿನಾಮ ಕೀರ್ತನೆಯು ಹರಿಭಕ್ತಿ ನರ್ತನೆಯು ಹರಿಯ ಸೇವೆಗಳು ಎರವುದೋರದೆ ನೀನು ವರಾಹತಿಮ್ಮಪ್ಪನನು ಸ್ಥಿರವಾಗಿ ನಿಲುವಂತೆ ಕರಕೊಳ್ಳೊ ಮನವೆ 7
--------------
ವರಹತಿಮ್ಮಪ್ಪ
ಮಂದರ ಧರನೆಂಬೊ ಕೋಲಸುಂದರಾಂಗನೆಂಬೊ ಯಾದವೇಂದ್ರಚಂದ್ರನೆಂಬೊ ಕೋಲ ಪಿಡಿದು ನಿಂತಾರು ಪ. ಹದಿನಾರು ಸಾವಿರ ಮಂದಿಮುದದಿಂದ ಹೆಜ್ಜೆಯನಿಕ್ಕುತ ಚದುರೆಯರು ಕೋಲಾಟಕ್ಕಾಗಿಒದಗಿ ನಿಂತಾರು1 ನೂರು ಮಂದಿ ನಾರಿಯರೆಲ್ಲಹಾರಭಾರ ಅಲಿಯುತಲೆಮುರಾರಿಯ ಮುಂದೆಲ್ಲಸಾಲು ಸಾಲಿಲೆನಿಂತರು 2 ನೀಲ ವರ್ಣನ ಮಡದಿಯರೆಲ್ಲಮೇಲಾದ ಕೋಲಾಟಕ್ಕಾಗಿಬಾಲೆಯರು ಬಂದೆಲ್ಲಸಾಲಾಗಿ ನಿಂತರು3 ಚಕ್ರಧರನ ಮಡದಿಯರೆಲ್ಲಚಕ್ಕನೆ ಕೋಲಾಟಕ್ಕಾಗಿನಕ್ಕು ಮುಗುಳನಗೆಯಸಖ್ಯದಲೆ ನಿಂತರು 4 ಪ್ರೇಮದಿಂದ ನಾರಿಯರೆಲ್ಲಭಾವೆ ರುಕ್ಮಿಣಿಗೆ ಎರಗಿಶ್ರೀಮಂತ ಧೀಮಂತ ನಮ್ಮಸ್ವಾಮಿ ಗೆಲಿಸೆಂದು 5 ಅಂಗನೆಯರು ರಾಮೇಶನ ಮಂಗಳ ಮಹಿಮೆಯಬೆಳದಿಂಗಳ ತುಂಬಿದರುಮೋಹನಾಂಗ ಚಂದ್ರಗೆ 6
--------------
ಗಲಗಲಿಅವ್ವನವರು
ಮಂದರೋದ್ಧರಾ-ಬಂದು ಕಣ್ಣಮುಂದೆ ನಿಲ್ಲೋ ಪ ಬಡವರೊಡೆಯನೆಂದು ನಿನ್ನ ಅಡಿಯ ಬಿಡದೆ ನಂಬಿದೆನೋ ಕಡುದಯಾನಿಧೆ ಬಡಕುಚೇಲನ ಪಿಡಿಯವಲಿಗೆ ಒಲಿದು ಪೊರೆದೆ1 ಸರ್ವಸಾರಭೋಕ್ತ ನೀನೆ ತೋರ್ವುದಿಲ್ಲ ಕೊಡಲು ನಿನಗೆ ಸರ್ವದೇವಸಾರ್ವಭೌಮನೀ ನೋರ್ವ ವ್ಯಾಪ್ತನಿರ್ಲಿಪ್ತ 2 ಪ್ರಣತಕಾಮದನೆಂದು ಅಂದು ಅಣುಗಧೃವನಾಕ್ಷಣದಿ ದಣಿಸಲಾಗದೋ ದೀನರಕ್ಷಕ 3 ಮುಕುತರೊಡೆಯ ಭಕುತವತ್ಸಲ ಯುಕುತಿತೋರದೊ ನಿನ್ನ ಧ್ಯಾನಕೇ ಶಕುತಿಯಿತ್ತು ಸಲಹೊ ಎನ್ನನು ಸಕಲಲೋಕೋದ್ಧ್ದಾರ ಧೀರ 4 ಎಲ್ಲಜನರ ಪೊರೆಯಲು ಶ್ರೀನಲ್ಲ ನಿಂತೆಯೊ ಶೇಷಶೈಲದಿ ವಲ್ಲಭಾ ಶ್ರೀ ವೆಂಕಟೇಶ ನೀ- ನೆಲ್ಲಬಲ್ಲೆನ್ನ ಸೊಲ್ಲ ಲಾಲಿಸೊ 5
--------------
ಉರಗಾದ್ರಿವಾಸವಿಠಲದಾಸರು
ಮನರಥದಿಂದಲಿ ಘನರಥಕೀಗಲೆ ಬೇಗನೆ ಬಾರೊ ಪ. ಶ್ರೀ ಶ್ರೀನಿವಾಸ ಶ್ರೀ ವೆಂಕಟೇಶ ದನುಜದಲ್ಲಣ ಬೇಗ ಬಾರೋ ಕೃಷ್ಣ ಅ.ಪ. ಮುತ್ತಿನ ತೋರಣ ಸುತ್ತು ಛತ್ತರಿಗೆಯು ಬೇಗನೆ ಬಾರೊ ಸಿರಿ ಸಹ ಬೇಗನೆ ಬಾರೊ ಉತ್ತಮ ಭಕ್ತರು ಎತ್ತಿ ಕೈ ಕರೆವರು ಬೇಗನೆ ಬಾರೊ ನಿತ್ಯ ಮಂಗಳ ನಿನ್ನ ಉತ್ತಮ ರೂಪವ ಚಿತ್ತದಿ ತೋರುತ ಸತ್ಯ ಸಂಕಲ್ಪನೆ 1 ಗಡಗಡ ನಡೆಯುವ ಘನರಥದಲಿ ನಿಂದು ಬೇಗನೆ ಬಾರೊ ಎಡಬಲದಲಿ ಶ್ರೀ ಭೂಮಿಯರೊಡಗೂಡಿ ಬೇಗನೆ ಬಾರೊ ಧಡಧಡ ನಡೆಯುತ ದೈತ್ಯದಲ್ಲಣನೆ ಬೇಗನೆ ಬಾರೊ ನುಡಿಸುವ ವಾದ್ಯಗಳ್ ಪಿಡಿದಿಹ ಚಾಮರ ಕಡೆಗಣ್ಣೊಳು ಭಕ್ತರನೀಕ್ಷಿಸುತಲಿ 2 ನಾರದ ತುಂಬುರ ನಾಟ್ಯವನಾಡ್ವರು ಬೇಗನೆ ಬಾರೊ ಬಾರಿ ಬಾರಿಗೆ ಭಕ್ತರು ನುತಿಗೈವರು ಬೇಗನೆ ಬಾರೊ ವಾರಿಜಾಸನ ವಂದ್ಯ ಶ್ರೀನಿವಾಸ ದೊರಿ ಬೇಗನೆ ಬಾರೊ ತೋರುತ ರೂಪವ ಬೀರುತ ಕರುಣವ ಮಾರಜನಕ ಅಪಾರ ಮಹಿಮನೆ 3 ವಂದಿಸಿ ಕರೆವರೊ ನಿಂದು ಭಕ್ತರೆಲ್ಲ ಬೇಗನೆ ಬಾರೊ ಇಂದಿರೆಯರಸನೆ ಮಂದರೋದ್ಧರ ಕೃಷ್ಣ ಬೇಗನೆ ಬಾರೊ ಇಂದು ಸ್ಥಿರವಾರ ಸ್ಥಿರವಾಗಿ ಸಲಹಲು ಬೇಗನೆ ಬಾರೊ ಹಿಂದೆ ಮುಂದೆ ಭಕ್ತ ಸಂದಣಿಯೊಳು ಗುರು ವೃಂದ ಬಿಂಬ ಮನ್ಮನ ಬಿಂಬನೆ ರಥಕೆ 4 ಅಪಾರ ಕರುಣದಿ ಭಕ್ತರ ಪೊರೆಯಲು ಬೇಗನೆ ಬಾರೊ ಶ್ರೀಪತಿ ಶೇಷಾಚಲನಿಲಯನೆ ಹರಿ ಬೇಗನೆ ಬಾರೊ ಗೋಪಾಲಕೃಷ್ಣವಿಠ್ಠಲನೆ ತ್ವರಿತದಿ ಬೇಗನೆ ಬಾರೊ ಭೂಪರೈವರ ಕಾಯ್ದ ಗೋಪಕುವರ ಕೃಷ್ಣ ಈ ಪರಿಯಿಂದಲಿ ಭಕ್ತರ ಪೊರೆಯಲು 5
--------------
ಅಂಬಾಬಾಯಿ
ಮನವೆ ಶ್ರೀನಾರಾಯಣನನು ಸ್ಮರಿಸದೆ ಮಾಯಾಪಾಶಕೆ ಸಿಲುಕುವರೇ ಪ. ವನಜನಾಭನ ಪದ ವನರುಹಯುಗ್ಮವ ಅನುದಿನ ನೆನೆಯದೆ ಒಣಗುವರೇ ವನಿತಾಲಂಪಟನಾಗುತ ಸಂತತ ಮನಸಿಜಯಂತ್ರಕೆ ಮನಮರಗುವರೇ ಅ.ಪ. ತುಂಡು ಸೂಳೆಯರ ದುಂಡುಕುಚವ ಪಿಡಿದು ಗಂಡಸುತನವನು ಕೆಡಿಸುವರೆ ದಂಡಧರನ ಬಾಧೆ ಹೆಂಡತಿಯನು ಪಡ ಕೊಂಡು ವೇದನೆಯನು ತಾಳುವರೆ ಕಂಡು ಕಂಡು ನೀ ಗುಂಡಿಗೆ ಬಾಳ್ವರೆ ಹೆಂಡಿರ ಸುಖರಸ ಉಂಡರು ಸಾಲದೆ 1 ಬಂದ ಸುಖಕೆ ನೀ ಮುಂದುವರೆಯುತಲಿ ಮಂದ ಅಸಮ ದುಃಖ ತಾಳುವರೇ ಬಂದುದೆನ್ನ ಕಣ್ಣ ಮುಂದೆಯನುಭವಿಪೆ ಎಂದಿಗೆನ್ನಾಜ್ಞೆಯು ಬಂದಪುದೋ ನಿಜ 2 ಇಷ್ಟು ದಿನದಿ ನೀ ಭ್ರಷ್ಟೆಯರಲಿ ಮೋಹ ಪಟ್ಟ ಭಾಗ್ಯವನೆಲ್ಲ ತೋರೊ ನೀನು ಕಷ್ಟ ಮಾನಧನ ನಷ್ಟವಲ್ಲದೆ ಎಳ್ಳಿ- ನಷ್ಟು ಸುಖವನ್ನು ಕಾಣೆನಿನ್ನು ಇಷ್ಟಾರ್ಥಗಳೆಲ್ಲ ದೊರೆಕುವುದೈ ಪರ ಮೇಷ್ಠಿ ಪಿತನ ಮನಮುಟ್ಟಿ ನೀವ್ ಭಜಿಸಿರೊ 3 ವಿಷಯ ಪಳಂಚಿತನಾಗುವ ಸಂತತ ಪಂಚಡಕೀರನು ಆಗುವರೇ ಕರ್ಮ ಸಾಲದೆಂದೆನುತಲಿ ಸಂಚಿತ ಪಾಪವ ಸಂಗ್ರಹಿಸುವರೇ ಚಂಚಲಾಕ್ಷಿಯರ ಚಪಲದ ಮಾತನು ವಂಚನೆ ಎಂಬುದು ತಿಳಿಯದೆ ಇರುವರೆ 4 ಸಾರಿಸಾರಿ ಕೈ ಮುಗಿದು ಬೇಡುವೆನು ವಿ- ಕಾರ ದುರ್ಬುದ್ಧಿಯ ಬಿಡು ಎಂದು ಭಾರಿ ತಪ್ಪುಗಳ ಕ್ಷಮಿಸಿ ಕಾವ ಲಕ್ಷ್ಮೀ ನಾರಾಯಣ ನೀನೇ ಗತಿಯೆಂದು ಪಾರಮಾರ್ಥಿಕ ವಿಚಾರವ ಮಾಡುತ ಶ್ರೀ ರಮೇಶನ ಚರಣಾರವಿಂದವ ಸೇರೋ 5
--------------
ತುಪಾಕಿ ವೆಂಕಟರಮಣಾಚಾರ್ಯ
ಮನವೇ ಸುಮ್ಮನೆ ಇರಬೇಡ ಅರೆನಿಮಿಷವಾದರುಮನವೇ ಸುಮ್ಮನೆ ಇರಬೇಡಪ ಕನಸಿನಂತಿಹ ಸಂಸಾರವ ನೆಚ್ಚಿಘನತರ ಪಾಪಕೆ ಗುರಿಯಾಗಬೇಡ ಅ ರೊಕ್ಕದಾಸೆಯ ಬಿಡಬೇಕು ಸ್ತ್ರೀ ಮೋಹಕೆಸಿಕ್ಕದೆ ನಡಕೊಳಬೇಕುಅಕ್ಕರು ದೇಹದೊಳಿರದಿರಬೇಕುಶಕ್ತಿಯ ಮೀರಿ ಧರ್ಮವ ಮಾಡಬೇಕುಮುಕ್ಕಣ್ಣ ಹರನ ಪೂಜಿಸಬೇಕುಮುಕ್ತಿ ಮಾರ್ಗವ ಪಡಕೊಳಬೇಕು 1 ಸರ್ವನಿಸ್ಪøಹನಾಗಬೇಕು ಸಂಸಾರದಿಚರಿಸುತಲೂ ಇರಬೇಕುಗುರುಹಿರಿಯರ ಕಂಡು ನಡೆಯಲು ಬೇಕುಪರರ ನಿಂದಿಸಿ ನುಡಿಯದೆ ಇರಬೇಕುಬರೆ ಸುಖ ದುಃಖವು ಸಮಗಾಣಬೇಕುಇರುಳು ಹಗಲು ಶಿವ ಶಿವ ಎನ್ನಬೇಕು2 ತನ್ನ ತಾನೆ ತಿಳಿಯಬೇಕು ತೋರುವ ಲೋಕವನ್ನು ದೃಶ್ಯವೆಂದಿರಬೇಕುತನ್ನಂತೆ ಸಕಲರ ನೋಡಲು ಬೇಕುಮಾನ್ಯರ ಕಂಡರೆ ಮನ್ನಿಸಬೇಕುಅನ್ಯನಾದರು ಹಿತವನೆ ಮಾಡಬೇಕುಪ್ರಸನ್ನ ರಾಮೇಶನನೆನಹಿರಬೇಕು 3 ವಣಗಿದ ಕಂಭದೊಳೊಗೆದುಬಣಗು ದಾನವನ ಗೆಲಿದುಕುಣಿಕುಣಿದಾಡಿದೆಯಂತೆ ಯಾಕಯ್ಯ ಶ್ರೀಕೃಷ್ಣಸೆಣಸಿದ ರಾಕ್ಷಸನ ಗೆಲಿದುವಿನಯದೆ ಪ್ರಹ್ಲಾದಗೊಲಿದುಅಣಿಯರ ಲೋಕವ ಕಾಯ್ದೆ ಎಲೆಸತ್ಯಭಾಮೆ 4 ಬಲು ಚಂದವಾಯಿತಯ್ಯ ಲೋಕಾ-ವಳಿಯೊಳು ದೊಡ್ಡವನಯ್ಯಬಲಿಯ ಕೂಡೆ ದಾನವ ಬೇಡುವರೆ ಕೃಷ್ಣಬಲಿಯ ದಾನವನ್ನೇ ಬೇಡಿಇಳೆಯ ಮೂರಡಿಯ ಮಾಡಿಸಲಹಿದೆ ಸರ್ವಸುರರ ಎಲೆ ಸತ್ಯಭಾಮೆ 5 ಧರಣೀಪಾಲಕರ ಗೆಲಿದಗರ್ವವಿರಲಿ ಹೆತ್ತತಾಯಶಿರವನರಿದ ದುರುಳರುಂಟೆ ಹೇಳಯ್ಯ ಕೃಷ್ಣಗುರುವಚನವನ್ನು ಮೀರೆನರಕಲೋಕವೆಂದು ಕಾಯಶಿರವನರಿದು ಮರಳಿ ಪಡೆದ ಎಲೆ ಸತ್ಯಭಾಮೆ6 ಮೂರು ಲೋಕವರಿಯೆ ಸೀತಾನಾರಿಯ ಕಳೆದುಕೊಂಡುಊರೂರ ತಿರುಗಿದೆಯಂತೆ ಯಾಕಯ್ಯಾ ಕೃಷ್ಣನೀರೊಳು ಸೇತುವ ನಿಲಿಸಿವೀರ ರಾವಣನ ಜಯಿಸಿವಾರಿಜಾಕ್ಷಿಯ ತಂದೆನೆ ಎಲೆ ಸತ್ಯಭಾಮೆ 7 ದುರುಳ ಪರಮಹಂಸರಂತೆಕರದಿ ನೇಗಿಲ ಹಿಡಿದೆಶರಖಡ್ಗಗಳಿಲ್ಲವೇನೋ ಶ್ರೀಕೃಷ್ಣರಾಯಸುರರಿಪು ಪ್ರಲಂಬಾದಿಗಳಶಿರವನರಿದು ಜೈಸಿದಂಥಾಗುರುತಿನ ಆಯುಧ ಕಾಣೆ ಎಲೆ ಸತ್ಯಭಾಮೆ8 ಮಂದಿಯ ಮುಂದೆ ಬತ್ತಲೆನಿಂದು ಓಡಾಡಿದೆಯಂತೆಚಂದವಾಯ್ತು ನಿನ್ನ ನಡತೆ ಹೇಳೆಲೋ ಕೃಷ್ಣಹಿಂದೆ ತ್ರಿಪುರದ ನಾರೀವೃಂದವ ಮೋಹಿಸಿ ಸರ್ವವೃಂದಾರಕರ ಪೊರದೆ ಎಲೆ ಸತ್ಯಭಾಮೆ 9 ದೊರೆತನವು ನಿನ್ನದೆಂದುಧರಣೀದೇವತೆಯು ಬಂದುಮೊರೆಯಿಟ್ಟಳದೇಕೋ ಪೇಳೋ ಶ್ರೀಕೃಷ್ಣರಾಯತುರಗವನೇರಿ ಖಡ್ಗವಧರಿಸಿ ಯವನ ಸೈನ್ಯವನ್ನುಮುರಿದು ಧರೆಯ ಪೊರೆದೆ ಕಾಣೆ ಎಲೆ ಸತ್ಯಭಾಮೆ 10 ಇಂತು ಕೇಳ್ದ ಸತ್ಯಭಾಮಾಕಾಂತೆಯ ಮಾತಿಗೆ ಮೆಚ್ಚಿಕಾಂತೆಯರೊಳು ಕಟ್ಟಾಣಿ ಬಾರೆಂದು ಕರೆದುಕಂತುಜನಕ ಕೆಳದಿಪುರದಕಾಂತ ಗೋಪಾಲಕೃಷ್ಣನುಸಂತಸವ ಮಾಡಿದನಿನ್ನೆಂತು ಪೇಳ್ವೆನೆ11
--------------
ಕೆಳದಿ ವೆಂಕಣ್ಣ ಕವಿ
ಮನೆಯ ನಿರ್ಮಲಗೈದು ಮೋದಬಡಿಸುವುದು ವನಜನಾಭನ ಭಕ್ತಿಯಂಬವಳ ಬಿರಿದು ಪ. ಬಾಯಿಮೊದಲಾದೈದು ಬಾಗಿಲುಗಳಲ್ಲಿ ವಾಯುವಂದ್ಯನ ಚರಿತ ವರ್ಣನಾದಿಗಳಾ ಛಾಯಗೊಂಬುವ ತೆರದಿ ಚಿತ್ರಕೃತ್ಯವನೂ ನಿತ್ಯ ನಲಿವುದನು 1 ಬುದ್ಧಿ ದೀಪವನು ಬಹು ಶುದ್ಧಕನು ತಾ ತದ್ದಾರಿ ಮನವ ಮೇಲುದ್ಧರಿಸಿಕೊಳುತಾ ಸಿದ್ಧಗಮ್ಯನ ಪದಕೆ ಸರಿಯಾಗಿಸುತಾ ಬದ್ಧ ಬೊಗಳುತಾ ಜನರ ಬಾಯಿ ಮುಚ್ಚಿಸುತಾ 2 ದೋಷ ದುಷ್ಕøತ ಕೆಸರ ಲೇಶವಿಡಗೊಡಳು ಆಶೆಯೆಂಬುವ ಬಲೆಯ ಕೊೈಸಿ ಬಿಸುಟುವಳು ಈಶ ಮಾನಿತ್ವಕವಕಾಶವೇನಿಡಳು ಕೇಶವನ ಕರತಂದು ಕಾವಲಿರಿಸುವಳು 3 ಇವಳಾಶ್ರಯವ ಪೊಂದಲ್ಯಾರಭಯವಿಲ್ಲ ನವರೂಪಳನ್ನುಸರಿಸಿ ನಲಿವ ಸಿರಿನಲ್ಲ ತವಕದಿಂದಲಿ ತಾನೆ ಓಡಿ ಬಂದೆಲ್ಲಾ ಯುವತಿಯರ ಕೂಡಿ ತಾ ಪಾಡುವರೆ ಬಲ್ಲಾ 4 ಕಂಜನಾಭನ ಕರುಣ ಪಂಜರದೊಳಿರಿಸಿ ಸಂಜೀವನೌಷಧವ ಸುಲಭದೋಳ್ ಕುಡಿಸಿ ಅಂಜಿಕೆಯ ಬಿಡಿಸಿ ರಿಪು ಪುಂಜವನ ಕಡಿಸಿ ಮಂಜುಳಾತ್ಮಕ ಮಾಧವನ ಮುಂದೆ ಕರಿಸಿ 5 ದಾನ ವ್ರತಾದಿಗಳನೇನ ಮಾಡಿದರು ಶ್ರೀನಿವಾಸನ ಕರುಣ ಸಾಧ್ಯವಾಗಿರದು ನೀನೆ ರಕ್ಷಕನೆಂಬ ಧ್ಯಾನದಲಿ ಮೆರದು ಜ್ಞಾನ ಭಕ್ತಿಗಳಿಂದ ನಲಿವುದೇ ಬಿರುದು 6 ಯುಕ್ತಿಯಿಂದಲಿ ನೋಡಲೆಲ್ಲ ಶಾಸ್ತ್ರದಲಿ ಭಕ್ತಿಯೋಗವ ಪೇಳ್ವವೇಕಮತ್ಯದಲಿ ಭುಕ್ತಿ ಮುಕ್ತಿಯ ಶೇಷ ಭೂಧರೇಶನಲಾ ಸಕ್ತಿಯಿರೆ ಸಕಲಾರ್ಥವೀವನುತ್ಸವದಿ 7
--------------
ತುಪಾಕಿ ವೆಂಕಟರಮಣಾಚಾರ್ಯ
ಮನ್ಮಥ ಚರಿತೆ340 ವರಸಿದ್ಧಿ ಗಣೀಶನ ಬಲಗೊಂಡೀ- ಶ್ವರನ ಪದಕೆ ನಮಿಸಿ | ಶಾರದೆಯ ಹರುಷದಿ ಸಂಸ್ಮರಿಸಿ | ಚ ತುರ್ಮುಖಗಳ ನೆರೆ ಭಜಿಸಿ ಹರುಷದಿ ನುತಿ ಮಾಡಿ | ಮಾಡಿ- ದ ಕೃತಿಯ ಸುಜನರು ನೋಡಿ 1 ಕಾಮಜನಕ ನಿಷ್ಕಾಮಜನಾಪ್ತ | ಸು- ಧಾಮನ ಸಖ ಹರಿಯು | ಮೂರು ಲೋಕಗಳಿಗೆ ತಾ ದೊರೆಯು | ಎನ್ನಹೃ- ತ್ಕಮಲದೊಳೀಪರಿಯು ಕಾಮನ ಸುಚರಿತೆಯು | ಸಜ್ಜನರು- ಇಹಪರ ಸದ್ಗತಿಯು | 2 ಪೃಥಿವಿಯೊಳಿಹ ಸುಜನರು ಕೇಳಿ | ಮ ನ್ಮಥ ಚರಿತ್ರೆಯನು | ಸಹ- ರ್ಷೋತ್ಕರದಿ ನೀವ್ಗಳಿದನು | ಭಜಿಸೆ ಸ- ದ್ಗತಿಗಳನು ಕೊಡುವನು | ಶತಮುಖವಂದಿತ ಸಿರಿದೇವಿಯರಸ- ನೊಲಿದು ಪಾಲಿಸುವನು | ಜನರ ಕೋ- ರಿದ ಕೋರಿಕೆಗಳನು | ತಾ ಕೊಟ್ಟವರನು ಪಾಲಿಪ ತಾನು 3 ತಾರಕಾಸುರನ ಭಯದಿಂದಲಿ ವೃಂ- ದಾರಕರೆಲ್ಲ ಕೂಡಿ | ಮನದಿ ಆಲೋಚನೆಗಳ ಮಾಡಿ | ವನಜ ಸಂ- ಭವನಡಿಗಳ ಬೇಡಿ | ಯಾರು ನಮಗೆ ದಿಕ್ಕೆಂದು ಕಳವಳಿಸಿ ನಾರಾಯಣನ ತ್ವರಿತದಲಿ | ಕಂಡು ವಂ- ದಿಸಿದರು ತವಕದಲಿ | 4 ವಾರಿಜಾಕ್ಷ ಪರುಷೋತ್ತಮ ವಿಶ್ವಾ- ಧಾರ ಪರಾತ್ಪರನೆ | ಅನಂತನವ- ತಾರ ಕೃಪಾಕರನೆ | ನಾವೆಲ್ಲ ಸೇರಿದೆವೈ ನಿನ್ನನೆ | ತಾರಕಾಸುರನ ಬಾಧೆ ಪರಿಹರಿಪ- ರ್ಯಾರನು ನಾವ್ ಕಾಣೆವೈಯ್ಯ | ಉ-- ದ್ಧಾರ ಮಾಳ್ಪನು ನೀನೆ | ಭಕ್ತಜನ- ವಾರಿಧಿ ಚಂದ್ರಮನೆ | 5 ಎನಲು ಸುರರೊಡನೆ ನುಡಿದನಾಗಲಾ- ವನಜನಾಭ ತಾನು | ಈ ಕಾರ್ಯ- ಕೆನಾ ಮಾಡುವುದೇನು | ಭ- ವಾನೀಧವನಾಗಿ ಶಿವನು | ಘನತಪವನಾಚರಿಸುತ್ತ ಮೇರುಗಿರಿ ಗುಹೆಯೊಳು ಕುಳಿತಿಹನೊ | ಫಾಲದಲಿ ಉರಿಗುಣ್ಣುಳ್ಳವನು | ಏನಾದರು ಸರಿ ತಾ ಲೆಕ್ಕಿಸನು | 6 ಕಾಮನಿಂದ ಶಂಕರನ ತಪಕಿಡಿಸಿ ಕರುಣಿಸಬೇಕೆಂದು ಬೇಡಿ | ಕೊಂ- ಡರವ ನಿಮ್ಮೊಳು ದಯಮಾಡಿ | ತ- ಕ್ಕಯೋಚನೆಗೈಯ್ಯುವ ನೋಡೀ | ತಾಮಸನ ಮುರಿದು ನಿಮಗೆ ಸಂತತವ ಕೊಡುವನು ಮುದಗೂಡಿ | ಎಂದು ಪೇಳಿದ ಶ್ರೀಹರಿಯನುಡಿ | ಕೇಳಿ ಇಂದ್ರನು ಗುರುವನು ನೋಡಿ 7 ಚಂದದಿಂದ ಸೇರಿ | ಸ್ಮರಗೆಯಿದ- ರಂದವೆಲ್ಲವುಸುರಿ | ಅವನಮನ ಶೌರಿ ಕಂದನೆಯಂತಾದರು ತಂದರೆ ಸುಖ- ವೆಂದನುಪಕಾರಿ | ಗುರು ವಂದಿಸೆ ಸುರರ ದೊರಿ | ಬೀಳ್ಕೊಂಡು ಬಂದನು ಕುಸುಮಪುರಿ8 ಕುಸುಮಾವತಿಯಲಿ ಮೀನಕೇತನನ ಶಶಿನಿಭವದನೆಯರು | ಸೇ- ವಿಸುತಿರೆ ಹಸನಾದ ಪನ್ನೀರು | ಪುನಗು ಅಗರು | ಕುಸುಮಶರನ ಉಪಚರಿಸುತ ಬಾಲೆಯ- ರೆಸೆಯಲು ಮೋದದೊಳು | ರತಿ- ಕ್ರೀಡೆಯಲಿ ಮನಕರಗಲು | ಬೃ ಹಸ್ಪತಿಯನಿತರೊಳೈತರಲು 9 ಊಳಿಗದವರಿಂದ್ಹೇಳಿ ಕಳುಹೆ ಗುರು ಕೇಳಿ ಸುದ್ದಿ ಮಾರಾ | ತವಕ ಪರಿಪರಿಯುಪಚಾರ | ಶ್ರೀಪತಿಯ ಕುಮಾರ | ಬಂದಹದ- ನೇನೆನುತ ಪದಾರ | ವಿಂದ- ಕೆರಗಿದನಾ ಕುಸುಮಶರ 10 ಭಯದೊಳಮರರೆಲ್ಲ | ಕ್ಷೀರಸಾಗರಕೆ ಪೋಗಿ ಎಲ್ಲ | ಬಿನ್ನೈ- ಸಲು ಕೇಳಿ ಸಿರಿಯನಲ್ಲಾ | ಅರಘಳಿಗಾಲೋಚಿಸಿ ಎನ್ನೊಳುನುಡಿ- ದನುಕೇಳಿಸಿರಿಯನಲ್ಲಾ | ಖಳಗೆಧರೆ- ಪರಿ ಎಲ್ಲವನು ಬಲ್ಲ 11 ಕಾಮನು ಪುಷ್ಪ ಶರಗಳಿಂದೆಸೆಯಲು ಗೌ- ರಿಮನೋಹರನೂ | ಬ- ಹಿರ್ಮುಖನಾಗುತ ಶಂಕರನೂ | ನಿ- ಕ್ಷೇಮವ ಪಾಲಿಪನು | ರಜತಗಿ ರಿವಾಸಿ ಮಹೇಶ್ವರನು | ಇದಕೆ ಗುರಿಯಾದ ಎನ್ನ ಮಗನು 12 ನಾವು ಪೇಳಿರುವೆವೆಂದು ನಮ್ಮ ಸು- ಕುಮಾರ ಮನ್ಮಥನಿಗೆ | ಇದೆಲ್ಲಾ ಪೇ- ಳಿವಿವರಮಾಗೆ | ಕರೆದುಕೊಂ- ಡ್ಹೋಗಿ ಶಿವನ ಬಳಿಗೆ | ಪಾವಕಾಕ್ಷ ಬಲು ಕರುಣಾನಿಧಿಯಿ- ನ್ನೇನು ಚಿಂತೆ ನಮಗೆ | ಬೇಗನಡೆ ಯೆಂದ ಹರಿಯು ಎನಗೆ | ಸಕಲವೂ ತಿಳಿಸಿದೆ ನಾನಿನಗೆ | 13 ಪರಿಯೋಚನೆ ಮಾಡು | ಸ- ತ್ಕೀರ್ತಿಯ ಸಂಪಾದನೆ ಮಾಡು | ಭರದಿ ಹೂ ಶರಗಳ ನೀ ಹೂಡು | ಹರನ ತಪವ ಭಂಗಿಸಿ ನಮ್ಮೆಲ್ಲರ ಕರುಣದಿ ಕಾಪಾಡು | ತಂದೆಯ- ಪ್ಪಣೆಯ ಮನದಿ ನೋಡು | ಮೂಜಗದಿ ಯಾರು ನಿನಗೆ ಜೋಡು | 14 ಈ ಪರಿಪೇಳಿದ ಗುರುವಿನ ನುಡಿಯನು ಶ್ರೀಪತಿಯ ಕುಮಾರ | ರತಿಯೊಡನೆ ಮಾರ | ನುಡಿದಳಾ ಶಿವನು ಮಹಾಕ್ರೂರ | ಆಪತ್ತೊದಗುವುದೀಗ ಬೇಡ ಎಂ- ಕಂದರ್ಪಮನದಿ ಸೋತು | ಬೃಹಸ್ಪತಿ- ಗೆಂದ ಕಾಮನಿನಿತು 15 ಸಮ್ಮತಿಯಿದು ಕೇಳಿ | ಪೂಶರನ ಬಿಡಲು ಚಂದ್ರಮೌಳಿ | ಕೋಪಿಸಲಾ ಹಣೆಗಣ್ಣೆನಗಾಳೀ | ಬ್ರಹ್ಮಾಂಡಗಳಾದರು ದಹಿಸುವುದು ಎನ್ನಳವೇ ಎಂದಾ | ಈ ಕಾರ್ಯಕೆ ನಾನು ಬಾರೆನೆಂದ | ನುಡಿಗೆ ಸುರ- ಗುರುಮತ್ತಿಂತೆಂದ | 16 ಮರೆಹೊಕ್ಕಿರುವಮರರ ಪಾಲಿಸುನೀ ಕಂದರ್ಪ | ಜಗ- ತ್ಕಾರಣನೈನಿಮ್ಮಪ್ಪ | ಪೇಳ್ದನುಡಿ ನಡಿಸಲು ಬೇಕಪ್ಪಾ | ಪರಿಪರಿಯಲಿ ನೋಡಿದರು ಜಗದೊಳಗೆ ನಿನ್ನ ಸರಿಯಾರಪ್ಪಾ | ನಮ್ಮ ನುಡಿ ಮೀರಬಾರದಪ್ಪಾ | ಅಷ್ಟು ಪೇಳಿ- ದರು ಕಾಮವೊಪ್ಪಾ | 17 ಕಾಮನವೊಪ್ಪಿಸಿ ಕರದೊಯಿದಮರರು ಕೈಲಾಸವ ಸೇರಿ | ಅರುಹಿದರು ಗಿರಿರಾಜ ಕುಮಾರಿ | ಕೇಳಿನಡೆತಂದಳಾಗಗೌರಿ | ವ್ಯೋಮಕೇಶನಿಹ ಗವಿಯ ದ್ವಾರಕೇ ಬರಲು ನೋಡಿ ನಂದಿ | ತಾಯಿನೀ- ನಿಲ್ಲಿಗೇಕೆ ಬಂದಿ | ಏನು ಅ- ಪ್ಪಣೆಯೆಂದನು ನಂದಿ 18 ವಂದನೆ ಒಳಗೆ ಹೋಗುವನು ಇವನನೀ ತಡೆಯಬೇಡವಯ್ಯ | ಎನ್ನ ಕಂದನು ಇವ ಕೇಳಯ್ಯ | ಎಂದು ಪೇ- ಳಿದ ಗೌರಿಯ ನುಡಿಯಾ | ಮುದದಿ ಶಿರದೊಳಾಂತನು ನಂದೀಶ್ವರ ಮುಂದೆ ಕೇಳಿ ಕಥೆಯ | ಅನಿತರೊಳ್ ಬಂದ ಕಾಮರಾಯ | ಪೋಗ ಬಹು- ದೆಂದ ಪ್ರಥಮಗೇಯ | 19 ಕಾಮಪೊಕ್ಕನಂದು | ಕರದಿ ಜ- ಪಮಾಲೆ ಪಿಡಿದು ಮುಂದು | ಮ- ಹಾಮಂತ್ರಗಳ ಜಪಿಸುತಂದು | ನೇಮದೊಳೇಕೋಭಾವದೊಳಿರುತಿಹ ಸೋಮಧರನ ಕಂಡ | ಏ- ನು ಮಾಡುವದೆಂದು ಪ್ರಚಂಡಾ | ಇಕ್ಷುಧ- ನುಶರಗಳ ಕೈಕೊಂಡಾ | 20 ವಿನಯದಿಂದ ಪ್ರಾರ್ಥಿಸಿ ಮಾತಾಡಿಸು- ವೆನೆಂದು ಶಂಕರನ | ನುತಿಸಿ ಬೇಡಿ- ದನು ಶೂಲಧರನಾ | ಎಷ್ಟಾದರು ಕರಗಲಿಲ್ಲವನಮನಾ | ಪರಿಪರಿಯೋ- ಚನೆ ಮಾಡಿ ಮನ್ಮಥನು | ಬೆರಗಾಗುತಾ ನಿಂತಾ ಸಮಯನೋಡುತ- ಲಿರತಿಯ ಕಾಂತಾ | ಮನ ದಿ ಹೊಂದಿದನು ಮಹಾಚಿಂತಾ 21 ನೆಂದು ಯೋಚಿಸಿದನು | ಇ- ಕ್ಷು ಧನುವನು ಜೇ ಹೊಡೆದಾನು | ಮಹೇ- ಶನ ಮರ್ಮಸ್ಥಳಗಳನು | ಪುಷ್ಪ ಬಾಣಗಳೂಡೆಸೆಯೆ ಮ- ಶರಗಳನು ಸುರಿದಾನು | ಜ- ನರೆ ಕೇಳೀಯಾಶ್ಚರ್ಯವನು | 22 ಆ ಮಹೇಶ್ವರನ ಮೂಲ ತಿಳಿಯಲಿಂ- ದ್ರಾದಿಸುರರಿಗಳವೆ | ಕೇಳಿಯೀ ಕಾಮನೇನು ಲಕ್ಷ್ಯವೆ | ಕರಿಚರ್ಮಾಂಬರನಾ | ಮೀನ ಕೇ- ತನನ ಬಾಣಕೆ ಮನಾ | ಬಹಿರ್ಮು- ಖನಾಗಿ ನೋಡಿ ಸ್ಮರನಾ | 23 ಕಣ್ಣುತೆಗೆದು ಮುಕ್ಕಣ್ಣಯಲೋ ನಿನ- ಗೆನ್ನೊಳೇಕೆ ಪಂಥಾ | ಛೀ ಛೀನಡಿ ಹೋಗು ಹೋಗು ಭ್ರಾಂತ | ಎಂದು ತಾ- ತನ್ನನಿಜಸ್ವಾಂತ-| ವನ್ನು ಪೂರ್ವದಂದದಿ ತಪದಲ್ಲಿರಿಸಚ- ಪೋಲ್ವಂದದಲಾ ಶಾಂತಾ | ಶೂರ್ಪಕಾ- ರಿಯು ಎದುರಲಿ ನಿಂತಾ | 24 ನಾನು ಬಂದಾ ಕಾರ್ಯವ ಕೇಳದಲೆ ಇ- ದೇನೀ ಪುರಹರನು | ಛೀಹೋಗೋ- ಗೆಂದು ಗರ್ಜಿಸಿದನು | ಎನುತ ತೆ- ಗೆದೆಚ್ಚ ಪೂಶರವನು | ನಾನಾವಿಧದಲಿ ತನ್ನ | ಚಮತ್ಕಾ- ರಗಳ ತೋರಿಸಿದನು | ಮನದಿ ಭಯಗೊಳುತ ಮನಸಿಜನು | ಮುಂದಾಗುವ ಕಥೆಯ ಕೇಳಿಯಿನ್ನು 25 ಭರ್ಗಕಣ್ದೆರೆದು ನೋಡಲಾಕ್ಷಣದಿ ಭರದಿಂ ಮನ್ಮಥನಾ | ಕೋಪಕಿಡಿ- ಯಿಡುತ ಫಣೆಗಣ್ಣ | ತೆಗೆದು ನೋಡಲು ತಕ್ಷಣ | ಚಿಣ್ಣಾ ಭುಗ್ಗು ಭುಗ್ಗುಯೆಂದೇಳ್ವ ಉರಿಗಳಿಂ ದಗ್ಧನಾದ ಮದನಾ | ಭಸ್ಮದಂ- ತಿದ್ದು ಮರ್ಮಸದನಾ | ಅಗ್ನಿವ್ಯಾ ಪಿಸೆ ಬ್ರಹ್ಮಾಂಡವನಾ 26 ಸುರರು ಕಿನ್ನರರು ಗಡಗಡ ನಡುಗುತ ಬೆರಗಾದರು ನೋಡಿ | ಅವರ- ಶಿರವನಲ್ಲಾಡಿ | ಚರರು ಬಂದು ರತಿಗೀ ಸುದ್ದಿಯ ಪೇಳಿ- ದರು ದುಃಖ ಮಾಡಿ | ಕೇಳಿ ನಾರಿಯರು ಶೋಕವಮಾಡಿ | ರತಿಯು ನೆಲದೋಳ್ ಬಿದ್ಹೊರಳಾಡಿ | 27 ಹಾಹಾರಮಣಾ ಹಾ ನಿಜೇಶ ಹಾ ಪ್ರಾಣಕಾಂತಕಾಮಾ | ಎನ್ನ ಕರ್ಕಶನಿಸ್ಸೀಮ | ಸಾಹಸ ಮಾಡುವೆನೆಂದು ಪೋಗಿ ಶಂ- ಕರನಿಂದಲಿ ಮಡಿದೆ | ಪೇಳಿದಮಾ- ತ್ಕೇಳದೆ ನೀ ನಡೆದೇ | ಪೋಗಬೇ- ಡೆಂದು ನಾನು ನುಡಿದೆ 28
--------------
ಗುರುರಾಮವಿಠಲ
ಮರಗವ್ವ ತಂಗಿ ಮರಗವ್ವ ದುರುಳ ಗುಣದ ಸವಿ ಸುರಿಯವ್ವ ಪ ಪರಿಪರಿಯಿಂದಲಿ ಹರಿಹರಿಯೆನ್ನದೆ ದುರಿತದುರುಲಿನೊಳು ಬಿದ್ದೆವ್ವ ಅ.ಪ ಗುರುಹಿರಿಯರನು ಜರೆದೆವ್ವ ಪರಿಪರಿ ಪಾಪ ಕಟ್ಟಿಕೊಂಡೆವ್ವ ಹರಿಶರಣರ ಸೇವೆ ಅರಿಯವ್ವ ಹರಿಹ್ಯಾಂಗೊಲಿತಾನು ನಿನಗವ್ವ 1 ಹಿಂದಿನ ಕರ್ಮದು ನೋಡವ್ವ ಮುಂದೆ ಚಂದಾಗಿ ತಿಳಕೊಂಡುಳಿಯವ್ವ ಮಂದರಧರ ಗೋವಿಂದನ ಮಾನಸ ಮಂದಿರದೊಳಗಿಟ್ಟು ಭಜಿಸವ್ವ 2 ಗುರುವರ ಶ್ರೀರಾಮ ಚರಣವ್ವ ತಂಗಿ ಅನುದಿನ ಸ್ಮರಿಸವ್ವ ಶರಣ ಜನರ ಪ್ರಿಯ ಕರುಣಾಕರನು ನಿನ್ನ ಪೊರೆಯದೆ ಎಂದಿಗೆ ಇರನವ್ವ3
--------------
ರಾಮದಾಸರು
ಮರಣ ಕಾಲವ ತಿಳಿಸೋ ಮಧುಸೂದನಾ ಪ ಶರಣು ಬಂದವರ ಭಯಹರಣಾ ಅ.ಪ. ಸ್ನಾನಮಾಡಲಿಬೇಕು ಮೌನದಿಂದಿರಬೇಕು ಹರಿಜ್ಞಾನಪೂರ್ವಕ ಹರಿಯ ಧ್ಯಾನಬೇಕುನಾನಾ ವಿಷಯದ ಚಿಂತೆ ಮಾನಸದಿ ಬಿಡಬೇಕುದಾನ ಧರ್ಮಗಳನು ಮಾನಸದಿ ಮಾಡಬೇಕು 1 ಸುತ್ತಲು ಜನರುಗಳ ಹತ್ತಿರ ಕೂಡುತಲಿನಿತ್ಯ ಭಾಗವತಾದಿ ಶಾಸ್ತ್ರಗಳನುಮೃತ್ಯು ಕಾಲದಿ ಪರಿಸೆ ಶ್ರೋತ್ರದಿಂ ಕೇಳಿ ಯಮ-ಭೃತ್ಯರು ಓಡಲಿಬೇಕು ಎತ್ತಿ ಕಾಲುಗಳು 2 ಮಕ್ಕಳು ಮನೆಗಳಲಿ ಚಿಕ್ಕ ಯುವತಿಗಳಲ್ಲಿಮಿಕ್ಕಾದ ಪಶು ಕೃಷಿ ರೊಕ್ಕಗಳಲ್ಲಿಪೊಕ್ಕಿ ಮನಸಿಲಿ ವಿಷಯ ಸಿಕ್ಕಿ ತೊಡಕೆನೊ ಎನ್ನವಕ್ರವಾ ತೋರಿಸುತ ಮೆಲ್ಲ ಕೈ ಬಿಡಿಸಿನ್ನು 3 ಕಮಲ ಮಂದಹಾಸವ ತೋರೋಸಿಂಧು ಉದ್ಧರನೆ ವೃಂದಾವನೀಯೋ 4 ಸಿಂಧುವಿನ ತಟದಿ ಗೋವೃಂದದೊಳಗೆ ಚಂದದಲಿ ಕೊಳಲೂದೋ ಸುಂದರ ಮುಖ ಕಮಲಒಂದೇ ಮನದಲಿ ನೋಡಾನಂದದಲಿ ಮಾಡೋಇಂದಿರೇಶ ನಿನ್ನ ಮುಂದೆ ನಿಂತಿರುವಾನಾರಂದ ಮುನಿ ಗುರುವರ ಮಂದಸ್ಮøತಿ ನೀಡೋ 5
--------------
ಇಂದಿರೇಶರು
ಮರುದಂಶ ಮಧ್ವಮುನಿರನ್ನ ನಿನಗೆಸರಿಗಾಣೆ ಜಗದೊಳಗೆ ಸರ್ವರೊಳು ಪೂರ್ಣ ಪ. ಹಿಂದೆ[ರಾಮರು] ಮುಂದೆ ಬಂಟನಾಗಿ ನೀ ನಿಂದೆಚಂದ್ರದ್ರೋಣದ ಗಿರಿಯ ತಂದೆ ದನುಜರ ಕೊಂದೆ[ಎಂದೆಂದಿಗಳಿವಿಲ್ಲದ]ಬ್ರಹ್ಮ ಪದವಿಗೆ ಸಂದೆಇಂದ್ರಾದಿ ಸುರರುಗಳ ತಂದೆ ಸ್ವಾಮಿಇಂದೆಲ್ಲರಿಗೆ ನೀನು ಗುರುವೆನಿಸಿ ನಿಂದೆ 1 ಕೌರವ ಬಲವ ತರಿದೆ ಕೀಚಕನ ಕುಲವ ಮುರಿದೆಒರ್ವನೆ ಬೇಸರದೆ ಷಡ್ರಥಿಕರನು ಗೆಲಿದೆಉರ್ವಿಯೊಳು ಭುಜಬಲದಿ ಭೀಮನೆನಿಸಿ ಮೆರೆದೆ ಹರಿಯ ಕಿಂಕರರ ಪೊರೆದು ಈಗಸರ್ವವನು ತೊರೆದು ಶಾಸ್ತ್ರಾಮೃತವಗರೆದೆ 2 ದುರುಳವಾದಿಗಳೆನಿಪ ಘನತಾಮಸಕೆ ದಿನಪಸಿರಿಯರಸ ಹಯವದನಪದಕಂಜಯುಗಮಧುಪಗುರುಮಧ್ವಮುನಿಪ ನಿರ್ಲೇಪ ಶುದ್ಧಸ್ಥಾಪ ವರ-ವಿದ್ಯಾಪ್ರತಾಪ ಭಾಪುರೆಪರಮಪಾವನರೂಪ ಭಳಿರೆ ಪ್ರತಾಪ 3
--------------
ವಾದಿರಾಜ
ಮರುಳು ಜೀವ ಏನು ಕಾಣುವೆ ಕೊನೆಗೆ ಪ ಸರ್ವಸಮರ್ಪಣೆ ಮಾಡದೆ ಇದರೊಳು ಅ.ಪ ಯಮನವರೆಳೆಯದೆ ಬಿಡುವರೆ ಛೀ ಹುಚ್ಚಾ 1 ಇಂದ್ರಿಯಂಗಳು ನಿನ್ನಾಧೀನವಲ್ಲ ಬಂದಮಾರ್ಗ ಸುಖ ಮರೆತು ಹೋದೆಯಲ್ಲ ಮುಂದಿನ ಗತಿ ಗೋತ್ರ ಮೊದಲಿಗೆ ಇಲ್ಲ ಮುಪ್ಪುತನವು ಹತ್ತಿರೇ ಬಂದಿತಲ್ಲ 2 ಕರ್ಮವೆಂಬುವುದೊಂದು ಅನಾದಿಯಾಗಿ ಧರ್ಮವ ಗಳಿಸುವವನೆ ಪರಮತ್ಯಾಗಿ ನಿರ್ಮಲ ಮನದಿ ದುರಾಶೆಯ ನೀಗಿ ಮರ್ಮವನರಿತುಕೊಂಡವನೇ ಮಹಾಯೋಗಿ3 ಭೋಗದಾಸೆಯ ಬಿಡು ಮೂರುದಿನದ ಬಾಳು ಕೂಗುತಿಹವು ಶೃತಿ ಸ್ಮøತಿಪುರಾಣಗಳು 4 ಸತಿಸುತರನು ನಾನೆ ಸಾಕುವೆನೆಂದು ಮತಿಗೆಟ್ಟು ಭ್ರಾಂತಿ ಹೊಂದುವೆ ನೀ ಮುಂದು ಮಿತಿಯ ಬರಹ ತಪ್ಪುವುದಿಲ್ಲ ಎಂದು ಪತಿ ಗುಣಸಿಂಧು 5 ಆಹಾರ ನಿದ್ರೆಯಲ್ಲವೆ ನಿನ್ನ ಆಟ ಸಾಹಸ ನೋಡೆ ಮಾಳಿಗೆಯ ಓಡ್ಯಾಟ ಮೋಹದಿಂದಲಿ ಮುಂದೆ ಬರುವುದು ಗೂಟ ಮೂಜಗದೊಳಗೆಲ್ಲಾ ಇದು ಗೊಂಬೆ ಆಟ 6 ಕಾಮಕ್ರೋಧಗಳು ಬಿಡಲಾರೆಯೇನೊ ಪಾಮರ ಜೀವ ಅಸ್ವಾತಂತ್ರಾ ನೀನೊ ಯಾಮಯಾಮಕೆ ಗುರುರಾಮವಿಠಲನಂಘ್ರಿ ನೇಮದಿಂದಲಿ ಭಜಿಸಿ ಸುಖವಾಗುವುದು ಕಾಣೊ7
--------------
ಗುರುರಾಮವಿಠಲ
ಮರೆಯದಿರು ಮಹಾಮಾಯೆ ಮಾರುತನ ತಾಯೆ ಕರುಣಿಕರಕಮಲವನು ಶಿರದೊಳಿರಿಸುತ ಕಾಯೆ ಪ. ಪುಷ್ಟಿಕರಿ ನೀ ಪೂರ್ಣ ದೃಷ್ಟಿಯಿಡಲೀಗಖಿಳ ಕಷ್ಟ ಪರಿಹಾರಗೈವುತಿಷ್ಟಾಪೂರ್ತಿಗಳು ಸ್ಪಷ್ಟವಾಗುವವು ಸಕಲೇಷ್ಟದಾಯಕ ನಮ್ಮ ವಿಠ್ಠಲನ ಸೇವೆಗುತ್ಕøಷ್ಟ ಸನ್ನಹವಹದು 1 ಲೋಕನಾಯಕಿಯೆ ಕರುಣಾಕಟಾಕ್ಷವನಿರಿಸು ಭೀಕರಿಸುತಿಹ ಮನದ ವ್ಯಾಕುಲವ ಹರಿಸು ಪಾಕ ಶಾಸನ ಪೂಜೈ ಪದಕಂಜ ಭಕ್ತಜನ ಶೋಕಸಾಗರ ಶೋಷಣೈಕ ನಿಧಿ ಹರಿಸಹಿತ 2 ಹಿಂದೆ ಬಹು ಥರದಿ ನಾನೊಂದ ಪರಿಯನು ಮನಕೆ ತಂದು ದಯದೋರಿ ನೀ ಬಂದಿರುವಿ ಮನೆಗೆ ಮುಂದೆನ್ನ ಬಿಡದೆ ಗೋವಿಂದ ವೆಂಕಟಪತಿಯ ಹೊಂದಿರುವನಲಿ ಮಮತೆಯಿಂದಿಲ್ಲಿ ನೆಲೆಯಾಗು 3
--------------
ತುಪಾಕಿ ವೆಂಕಟರಮಣಾಚಾರ್ಯ
ಮರೆವರೇನೊ ರಾಮ ನಿನ್ನ ಚರಣ ಸೇವಕನÀನ್ನು ಪರರಿಗೊಪ್ಪಿಸಿ ಹೀಗೆ ಪ ಪರಮ ದಯಾನಿಧಿ ಅಲ್ಲವೆ ಮುನ್ನ ಶರಣರ ಪಾಲಿಸಲಿಲ್ಲವೆ ಇದು ಸರಿಯೇನೊ ಜನ ನಗರೇನೊ ಇನ್ನು ಧರಣಿಯೊಳ್ ನಾನೇನು ಭಾರವೆ ದೂರವೆ ಅ.ಪ. ಗತಿಹೀನರಿಗೆ ನೀ ಗತಿಯೆಂದು | ನೀನೆ ಪತಿತರ ಪತಿಕರಿಸುವನೆಂದು ಕೇಳಿ ಬಂದೆನೈ ಭವದಿ ನೊಂದೆನೈ ಮುಂದೆ ಗತಿದೋರೆಂದು ಸಾರಿದೆ ಚೀರಿದೆ ದೂರಿದೆ 1 ದೋಷರಾಶಿಗಳೆಲ್ಲ ಅಳಿಸಯ್ಯ ವಿಷಯ ವಾಸನೆ ವಿಷವೆಂದು ತಿಳಿಸಯ್ಯ | ನಿನ್ನ ದಾಸಾನುದಾಸ ದಾಸನು ಎನಿಸಿ | ಪರಿ- ಪೋಷಿಸಬೇಕಯ್ಯ ದಮ್ಮಯ್ಯ ಎಮ್ಮಯ್ಯ 2 ಏನು ಸಾಧನವನ್ನು ನಾ ಕಾಣೆ | ನಿನ್ನಾ- ಧೀನದವನು ನಾ ನಿನ್ನಾಣೆ ದೀನ ಬಂಧುವೆ ದಯಾಸಿಂಧುವೆ ನಿನ್ನ ಪರಮಾನಂದ ಮೂರ್ತಿಯ ತೋರೋ ಶ್ರೀಕಾಂತನೆ 3
--------------
ಲಕ್ಷ್ಮೀನಾರಯಣರಾಯರು
ಮಹಿಮೆಯನಾರು ಬಲ್ಲರುನಹಿಪ್ರತಿಯೆಂದು ನಿನ್ನ ಪಾಡುವರಲ್ಲದೆ ರಂಗ ನಿನ್ನ ಪ. ವಾಮನನಾಗಿ ಬಂದು ಬಲೀಂದ್ರನಿಗೆ ಸಂದಸೀಮೆಯನೆಲ್ಲವ ಸಲೆವಿಟ್ಟ ತ್ರಿವಿಕ್ರಮ ನಿನ್ನಸಾಮಥ್ರ್ಯವ ಶ್ರುತಿಗಳು ಪೇಳೆ ಉಗುರ್ಗೊನೆಆ ಮಹಾ ಬೊಮ್ಮಾಂಡವ ಸೀಳೆ ದೇವೇಂದ್ರನುಸಾಮ್ರಾಜ್ಯದಿ ಸುಖದಿಂ ಬಾಳೆ ಕೃಷ್ಣ ನಿನ್ನ1 ಇಂದ್ರ ಕೋಪಿಸಿ ಮಳೆಗರೆಯಲು ನಿನ್ನತಂದೆ ತಾಯಿ ಬಂಧು ಬಳಗಂಗಳೆಲ್ಲ ಕಂಗೆಡಲುಅಂದು ಬಲುಗಿರಿಯನೆತ್ತಿ ಗೋ ಗೋಪಾಲರವೃಂದದ ಭಯವ ನುಗ್ಗೊತ್ತಿ ಪಾಲಿಸಿದೆಚೆಂದದಿ ನಿನ್ನಯ ಸಂಪತ್ತಿ ಕೃಷ್ಣ ನಿನ್ನ2 ಇಂದು ಮಧ್ವಮುನೀಂದ್ರಗೊಲಿದು ಕಡುಕೃಪೆಯಿಂದತÀಂದೆ ಹಯವದನ ಮುಕುಂದ ಉಡುಪಿನೊಳಗೆನಿಂದು ಸದಾ ಪೂಜಿಸಿಕೊಂಡೆ ನಿನ್ನ ಮುಂದೆನಂದಾದೀಪಗಳನು ಕಂಡೆ ಭಕ್ಷ್ಯಭೋಜ್ಯಕಂದಮೂಲ ಫಲಂಗಳುಂಡೆ ಕೃಷ್ಣ ನಿನ್ನ 3
--------------
ವಾದಿರಾಜ