ಒಟ್ಟು 9384 ಕಡೆಗಳಲ್ಲಿ , 131 ದಾಸರು , 5285 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಕ್ಕೊ ಇಲ್ಲೆ ಹರಿ ಇದ್ದಾನೆ | ಸಿಕ್ಕುವಾ ಸದ್ಗುರು ಕರುಣದಲಿ ಧ್ರುವ ಆದಿ ಅನಾದಿಯ ಹಾದಿ ವಿಡಿದು | ಸಾಧಿಸಿ ನೋಡಿರಯ್ಯ ಸಜ್ಜನರು | ವೇದಾಂತದ ಸುಸಾರವಿದು | ಭೇದಿಸಿದವರಿಗೆ ಭಿನ್ನವಿಲ್ಲ 1 ತನ್ನೊಳಗಾಗಿರಲಿಕ್ಕೆ ಭಿನ್ನವ್ಯಾಕೆ | ಚೆನ್ನಾಗಿ ನೋಡುವದು ಉನ್ಮನದಲಿ | ಇನ್ನೊಬ್ಬರಿಗೆ ತಾ ತಿಳಿಯದು | ಧನ್ಯವಾದರು ಅನುಭವಿಗಳು2 ಸೆರಗು ಸಿಲ್ಕಲಿಲ್ಲ ನಾಲ್ಕರಲಿ | ಅರಹು ಆಗಲಿಲ್ಲ ಆರರಲಿ | ಪೂರಿಸಲಿಲ್ಲ ಭಾವ ಮೂರಾಗಲಿ | ತೋರಿದ ಸದ್ಗುರು ಎನ್ನೊಳಗೆ 3 ಮೋಸಹೋಯಿತು ಜಗ ವೇಷದಲಿ | ವಾಸತಿಳಿಯದೆ ವಾಸುದೇವನ | ಕಾಸಿನ ಆಶೆಗೆ ದಾಸರಾಗಿ | ಘಾಸಿ ಆಯಿತು ಭವಪಾಶದಲಿ 4 ಸಣ್ಣದೊಡ್ಡದರೊಳು ಸಾಕ್ಷವಾಗಿ | ಬಣ್ಣ ಬಣ್ಣದಲಿ ತಾ ಭಾಸುತಿಹ್ಯ | ಕಣ್ಣಾರೆ ಕಂಡು ಗುರು ಕೃಪೆಯಿಂದ | ಧನ್ಯವಾದ ಮೂಢ ಮಹಿಪತಿಯು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಕ್ಕೊ ಇಲ್ಲೆ ಹಾನೆ ಅಖಂಡವಾಗಿ ಸದ್ಗುರು ನಮ್ಮ ಅಕ್ಕಿಸಿಕೋಬೇಕು ಗುಕ್ಕಿ ತನ್ನೊಳು ತಾ ಗುಹ್ಯವರ್ಮ ಧ್ರುವ ಹೇಳಬಾರದು ಇನ್ನೊಬ್ಬರಗೀ ಮಾತು ಬಹಳ ಗೂಢ ತಿಳಿದ ಮಹಿಪನೀವಾ ಲಕ್ಷಕೋಟಿಗೆ ಒಬ್ಬ ಪ್ರೌಢ ಒಳಗುಟ್ಟಿನ ಕೀಲು ತಿಳಿಯಲಿಕ್ಕೆ ಮಾಡಿ ಮನದೃಢ ಸುಳಹು ಕಂಡಮ್ಯಾಲೆ ಪ್ರಾಣಹೋದರೆ ಒಬ್ಬನು ಬಿಡಾ 1 ದೂರಿಲ್ಲ ದೂರಿಲ್ಲ ತಿಳಿಕೊಳ್ಳಿ ಪೂರ್ಣ ಅರಿತು ಬ್ಯಾಗ ತಿರುಗಿನೋಡಲು ತನ್ನೊಳು ದೋರುತಿದೆ ಬ್ರಹ್ಮಯೋಗ ಸಾರವೇ ಸುಖಗರವುತದೆ ನೋಡಿರೋ ರಾಜಯೋಗ ಪರದೆ ಇಲ್ಲದೆ ಗುರುತದೋರುವಾ ನೋಡಿ ಕಣ್ಣಾರೆ ಈಗ 2 ಗುರುಕೃಪೆಯಿಂದ ಗುರುತಕ ದೂರಿಲ್ಲ ಕೊಳ್ಳಿ ಖೂನ ಒಳಹೊರಗೆ ತುಂಬಿತುಳುಕುತದೆ ತಾನೆ ನಿಧಾನ ತರಳ ಮಹಿಪತಿ ಸ್ವಾಮಿ ನೋಡಲಿಕ್ಕೆದ ಒಂದೆ ಸಾಧನ ಸ್ವರೂಪರಿಯಲಿಕ್ಕೆ ಆಗುತ್ತದೆ ಬಲುಬ್ಯಾಗಲುನ್ಮನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಕ್ಕೊ ಇಲ್ಲೆ ಹಾನೆ ಸಕಲ ಪಾಲಕ ತಾನೆ ಭಕುತಿ ನಿಜವಾಗಲಿಕೆ ಪ್ರಕಟವಾಗತಾನೆ ಧ್ರುವ ಒಡನೆ ತನ್ನೊಳು ನೋಡಲಿಕ್ಕೆ ಜಯಜಯವೆನ್ನಿ 1 ಪಡೆದುಕೊಳ್ಳಿ ಖೂನವಿಡಿದು ಗುರುಙÁ್ಞನ ಬಿಡದೆ ಭಾಸುತಾನೆ ಒಡಿಯ ನೋಡಿ ನಿಜಸ್ಥಾನ 2 ಹಿಡಿಯಬೇಕು ಬ್ಯಾಗ ಜಡಿದು ಮನಯೋಗ ಕುಡುವಾ ಮಹಿಪತಿ ಗುರು ಸ್ವಾನುಭವಭೋಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಕ್ಕೊ ಇಲ್ಲೆವೆ ಅದ ನಿಜಧನಾ ತಕ್ಕೊಂಬುದು ಬಲುಕಠಿಣ ಧ್ರುವ ಅದಕೊಂದದ ಉಪಾಯ ನೋಡಿ ಸದ್ಗುರುಪಾದಕ ಮನಗೂಡಿ ಒದಗಿ ಬಾಹುದು ತಾಂ ಕೈಗೂಡಿ ಇದೇ ಸಾಧಿಸಿ ಸುಖ ಸೂರ್ಯಾಡಿ 1 ಎಡಬಲಕ ತಾಂ ತುಂಬೇದ ದೃಢಮನಕ ತಾಂ ಸಿದ್ಧದ ಮೂಢಜನರಿಗಿದೇ ದೂರದ ನೋಡೇನೆಂದರ ಬಲು ಸಾರ್ಯದ 2 ಗುರುಪಾದಲ್ಯದ ಧನಸಮಸ್ತ ಅರಿತುಕೊಂಬುದು ಮನಮಾಡಿ ಸ್ವಸ್ಥ ತರಳಮಹಿಪತಿಗಿದೆ ಸುಪ್ರಸ್ತ ಗುರುನಾಥನೆ ತಾಂ ಸುವಸ್ತಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಕ್ಕೊ ಇಲ್ಲೆಹಾನೆ ಅಖಂಡ ಗುರುತಾನೆ ಬೇಕಯೆಂದವರಿಗೆ ಪೂರ್ಣ ಸಿಕ್ಕುತಾನೆ ಧ್ರುವ ಅರವ್ಹಿನ ಮುಂಧಾನೆ ಮರವ್ಹಿನ ಹಿಂಧಾನೆ ಕುರಹು ತಿಳಿದರೆ ತಾನೆ ಸ್ಥಿರವಾಗ್ಯಾನೆ 1 ಗುರುತ ಕಂಡವಘಾನೆ ಗುರುಸ್ವರೂಪಧ್ಯಾನೆ ಗುರುಕೃಪ್ಯಾದವಘಾನೆ ಗುರುತಾನೆ 2 ಅಣುರೇಣುದೊಳಘಾನೆ ಜನವನ ತುಂಬ್ಯಾನೆ ಅನುಭವಕ ತಾನೆ ಖೂನಾಘ್ಯಾನೆ 3 ಮನದ ಕೊನಿಲಿಹಾನೆ ಘನವೆ ಘನವಾಘ್ಯಾನೆ ದೀನ ಮಹಿಪತಿ ಸ್ವಾಮಿ ತಾನೆ ತಾನೆ4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಕ್ಕೊ ಘನಪರಬ್ರಹ್ಮದ ಬೆಳಗಿದು ಶುಕಾದಿ ಮುನಿಗಳು ಸೇವಿಸುವದು ಧ್ರುವ ಅಗಣಿತವರ್ಣ ಅನೇಕವಿದು ತೇಜಃಪುಂಜವಿದು 1 ತಾ ತುಂಬಿಹುದು ಸುಬೋಧವಿದು 2 ಅಸಿಪದಲಕ್ಷಣ ಅಸಾಧ್ಯಯೋಗಿದು ಪಾಶಬದ್ಧಕರಿಗೆ ಭಾಸಿಸದು ಲೇಸಾಗಿ ಮಹಿಪತಿ ಸಾಧಿಸಿದು ಭಾಸ್ಕರಕೋಟಿ ಪ್ರಕಾಶವಿದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಕ್ಕೊ ನಮ್ಮಸ್ವಾಮಿ ಸಕಲಾಂತರ್ಯಾಮಿ ಪ್ರಕಟ ಸಹಸ್ರನಾಮಿ ಭಕ್ತಜನ ಪ್ರೇಮಿ ಧ್ರುವ ಒಳಗೆ ನೋಡಿ ನಿಮ್ಮ ಹೊಳೆವ ಪರಬ್ರಹ್ಮ ತಿಳಿಯಲಿಕ್ಕೆ ನೋಡಿವರ್ಮ ಅಳಿಯಬೇಕು ಹಮ್ಮ 1 ಸ್ವಸ್ತ ಮನಮಾಡಿ ವಸ್ತು ಇದೇ ನೋಡಿ ಅಸ್ತವ್ಯಸ್ತ ಬ್ಯಾಡಿ ಸಾಭ್ಯಸ್ತ ನಿಜಗೂಡಿ 2 ಬಿಟ್ಟು ನಿಜಖೂನ ಕೆಟ್ಟು ಹೋಗುದೇನ ಗುಟ್ಟು ಮಹಿಪತಿಗಿದೆ ಮುಟ್ಟಿ ಗುರುಙÁ್ಞನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಟ್ಹಾಂಗಿರಬೇಕು ಮಾಂ ಇಟ್ಹಾಂಗಿರಬೇಕು ಸೃಷ್ಟೀಶ ನಮ್ಮ ಧ್ರುವ ಸಕಳವೆಲ್ಲ ಹರಿ ಸೂತ್ರವು ಇರಲಿಕ್ಕೆ | ವಿಕಳಿತಗೊಂಬುವದ್ಯಾಕೆ ಮಾಂ | ಅಖಿಳ ಭುವನಕೆಲ್ಲ ಸಾಕಿ ಸ - | ಹಕಾರ ನೊಬ್ಬ ಶ್ರೀಪತಿಯ ಮಾಂ | 1 ಯಂತ್ರಜೀವ ತಂತ್ರ ಶಿವ ಇರಲಿಕ್ಕೆ ಸ್ವ | ತಂತ್ರವೆ ನಾನೆಂಬುದ್ಯಾತಕೆ ಮಾಂ | ಚಿತ್ರ ವಿಚಿತ್ರವು ದೋರುವ ಸೂತ್ರವು | ಕರ್ತು ಸದ್ಗುರು ಸುತಂತ್ರವು ಮಾಂ 2 ಅಂತ್ರ ಬಾಹ್ಯ ವ್ಯಾಪಕನಾಗಿರಲಿಕ್ಕೆ | ತಂತ್ರ ಮಂತ್ರಗಳ್ಯಾತಕೆ ಮಾಂ | ಜಂತ್ರ ಮಾಡಿ ಜನ್ಮ ಮರಣದ ತಿರಿಹುವಾ | ಗಂತ್ರವು ಎಂದಿಗೆ ತಿಳಿಯದು ಮಾಂ 3 ಇಟ್ಹಾಂಗ ಇರಬೇಕು ಕೊಟ್ಹಾಂಗ ಕೊಂಡಿನ್ನು | ತುಟ್ಟಿಲೆ ಮಿಸುಕದೆ ಗುಟ್ಟಿಲೆ ಮಾಂ | ಹೊಟ್ಟಿಗಾಗಿ ಅಷ್ಟು ಸಾಯಾಸ | ಬಟ್ಟರೆ ಸಾರುಸದೇ ಅಟ್ಟಿಸುವದು ಮಾಂ 4 ಇಟ್ಹಾಂಗ ಇರೋ ಮಹಿಪತಿ ಸೃಷ್ಟಿಯೊಳಿನ್ನು | ಘಟ್ಟಿಗೊಂಡ ಗುರುಪಾದವು ಮಾಂ | ಮುಟ್ಟಿ ಮುದ್ರಿಸಿ ಕೃಪಾದೃಷ್ಟಿಲೆ ಹೊರೆವನು | ಕೊಟ್ಟು ನಿನಗೆ ಸ್ವಾನುಭವವು ಮಾಂ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಟ್ಹಾಂಗೆ ಇರುವೆನೋ ಹರಿಯೇ ಎನ್ನ ದೊರೆಯೇ ಪ ಸೃಷ್ಟಿವಂದಿತ ಪಾದಪದುಮ ಶ್ರೀ ಹರಿಯೇ ಅ.ಪ. ಸಣ್ಣ ಶಾಲ್ಯೋದನ ಬೆಣ್ಣೆ ಕಾಸಿದ ತುಪ್ಪಚಿನ್ನದ ಹರಿವಾಣದಲಿ ಭೋಜನಘನ್ನ ಮಹಿಮ ನಿನ್ನ ಕರುಣ ತಪ್ಪಿದ ಮ್ಯಾಲೆ ಕ-ದನ್ನ ಕಾಣದೆ ಬಾಯ್ಬಿಡಿಸುವೆಯೋ ಹರಿಯೇ 1 ಕೆÀಂಪಿಲಿ ಪೊಳೆವ ಪೀತಾಂಬರ ಉಡಿಸುವಿಸೊಂಪಿನಂಚಿನ ಶಾಲು ಹೊದಿಸುವಿಯೋಕಪಿಲಹರೇ ನಿನ್ನ ಕೃಪೆಯು ತಪ್ಪಿದ ಮ್ಯಾಲೆಕಪರ್ದಕ ಕೌಪೀನವು ದೊರೆಯದೋ ಹರಿಯೇ 2 ಚಂದ್ರಶಾಲೆಯಲ್ಲಿ ಚಂದ್ರಕಿರಣದಂತೊಪ್ಪುವಚಂದದ ಮಂಚದೊಳ್ಮಲಗಿಸುವಿಮಂದರೋದ್ಧರ ನಿನ್ನ ಮಮತೆ ತಪ್ಪಲು ಧರ್ಮಮಂದಿರದೊಳು ತೋಳ್ತಲಗಿಂಬು ಹರಿಯೇ 3 ನರಯಾನದೊಳು ಕ್ಷಣ ನರವರನೆನಿಸುವಿವರಛತ್ರ ಚಾಮರ ಹಾಕಿಸುವಿಕರುಣಾನಿಧೇ ನಿನ್ನ ಕರುಣ ತಪ್ಪಿದ ಮ್ಯಾಲೆಚರಣರಕ್ಷೆಯು ದೊರೆಯದು ಶ್ರೀಹರಿಯೇ 4 ಗಂಗಾಜನಕ ಪಾಂಡುರಂಗ ನಿನ್ನಯ ಭಕ್ತರಸಂಗವಿರಲಿ ದುಷ್ಟರ ಸಂಗ ಬ್ಯಾಡಅಂಗನೆಯರ ಕೂಡಿ ಅನಂಗಬಾಣಕೆ ಸಿಲುಕಿಭಂಗವ ಪಡಲಾರೆ ಶ್ರೀರಂಗವಿಠಲ ಹರಿಯೇ 5
--------------
ಶ್ರೀಪಾದರಾಜರು
ಇತರ ಗುರುಗಳ ಸ್ತುತಿ ಶ್ರೀ ನಾರದರ ಸ್ತುತಿ 7 ಇದೇ ಪೇಳಿ ಪೋದರು ವಿಧುವದನೆ ನಮ್ಮ ಬುಧನುತ ಪದದ ನಾರದರು ಈ ಜಗದಿ ಬಂದು ಪ ಸಿರಿ ಅರಸನೆ ಈ ಧರೆಯೊಳಗುತ್ತಮ ಮರುತ ದೇವರೆ ಜಗದ್ಗುರುಗಳೆಂದು ಪಂಚಭೇದ ಜ್ಞಾನಶೀಲನೆ ಸುರಲೋಕವಾಸಿ ಶ್ರೀ ಹರಿ ಪ್ರೇಮ ಪಾತ್ರನೆಂಬೊದೆ ಪೇಳಿ 1 ಜರದೂರ ನರಹರಿ ಧರೆಯೊಳು ವ್ಯಾಪಿಸಿ ಇರಲು ತ್ರಿಗುಣ ಕಾರ್ಯವಾಹವೆನ್ನುತಾ ಪರತಂತ್ರ ಜೀವವೆಂದರಿದು ಪಾಪ ಪುಣ್ಯ ಸರಸಿಜನಾಭನಿಗರ್ಪಿಸಿ ಒಟ್ಟಿಗೆ ಬರಬೇಕು ಯೆಂದು 2 ಸಿರಿಗೋವಿಂದ ವಿಠಲ ವಿಶ್ವವ್ಯಾಪಕ ಗಿರುವವು ಎರಡು ಪ್ರತಿಮೆ ಜಗದಿ ಚರ ಅಚರಗಳನ್ನು ಅರಿತು ಮಾನಸದಲ್ಲಿ ಹರಿ ಪೂಜೆ ಮಾಡಿ ಸೇರಿರಿ ವೈಕುಂಠವೆಂಬೊದೆ ಪೇಳಿ ಪೋದರು 3
--------------
ಅಸ್ಕಿಹಾಳ ಗೋವಿಂದ
ಇತರೆಯಳ ಸುತನೆನಿಪ ಐತರೇಯ |ಗತಿಪ್ರದ ಶ್ರೀ ವಿಷ್ಣು ಸರ್ವಾಂತರಾತ್ಮಾ ಪ ವಿಭೂತಿ ಪಾದ್ಯ ಹರಿಯೇ 1 ಕರ್ಮ ಕರ್ಮಾಂಗದಲಿಪ್ರಕಟವಾಗಲು ಅಲ್ಲಿ ಸನ್ನಿಹಿತನಿರುವೇ 2 ಭೂತ ಪಂಚಕದಲ್ಲಿ ಪಂಚಾತ್ಮ ನೀನಿದ್ದುಭೂತ ವಾಯುವಿನಲ್ಲಿ ಮತ್ತೆ ಪಂಚಾತ್ಮಾ |ಈ ತೆರದಿ ನೀನಿದ್ದು ಭೂತೇಂದ್ರಿ ಮಾನಿಸಹವಾತನಡೆಸುವುದೆಲ್ಲ ಯಜ್ಞವೆನಿಸುವುದು 3 ಇಂತಿಪ್ಪ ಯಜ್ಞದಲಿ ಸಂತ ಶ್ರೀಪಾದಾರ್ಯಅಂತೆ ತಮ ಶಿಷ್ಯ ಸಹಕೃತ ಸುಮಂಗಳದಲಿ |ಧ್ವಾಂತ ಹರ ಶ್ರುತಿಯನ್ನೆ ಐತರೇಯದಿ ವಾಚ್ಯಪಂಥಬಿಧ ಸರ್ವರಿಗೆ ಒಲಿಯೆ ಪ್ರಾರ್ಥಿಸುವೇ 4 ಪರಮ ಹಂಸರು ಎನಿಪ ವಿಶ್ವೇಶ ತೀರಥರವರ ಸುನೇತೃತ್ವದಲಿ ಮಂಗಳದ ಕಾರ್ಯ |ಪರಕಿಸುವ ಸೌಭಾಗ್ಯ ದೊರಕಿದವನಿಗೆ ಭಾಗ್ಯಹರಿ ಗುರು ಗೋವಿಂದ ವಿಠಲ ಕರುಣಿಸುವ 5
--------------
ಗುರುಗೋವಿಂದವಿಠಲರು
ಇಂತಾ ಸಾಟಿಗಳೆಷ್ಟೊ ಜಗದೊಳಗಿಂತಾ ಸಪ್ಪಳೆಷ್ಟೊ ಪ ಅಂತರವರಿಯದೆ ಅಧಮನು ತಾನಾ ಗಿಂತಿದರೊಳು ಬೊಗಳುವ ಕಂತೆ ಅ.ಪ ಕುಂತರೆ ನಿಂತರೆ ಸುಜನರ ದೂಷಿಸೆ ಅಂತಕನಿಗೆ ಸಿಲ್ಕುವೆಯಹುದೊ ಪಂಥವಿಲ್ಲ ಪರೀಕ್ಷಿಸಿ ನೋಡೆಲೊ ಸಂತೆಯೊಳಗೆ ನೀಮಾಡುವ ಡಂಬದ 1 ಮಸ್ತಿಯೊಳಾಡಲು ಮಥನಿಪುದಹುದೆಲೊ ದುಸ್ತರವೆಲೊ ದುರಿತಾಂಬುಧಿಯು ನಿಸ್ತರಂಗನಿಗೆ ನಿಜಸುಖವೆನ್ನುತ ಶಿಸ್ತೊಡೆಯುವನಂಥಡಿಯನು ಅರಿಯದ 2 ಆಗದು ಅನುಭವ ನೀಗದು ಕತ್ತಲೆ ಹ್ಯಾಗೆಂಬುವ ಸಂಶಯ ನಿನಗೇ ನಾಗರೀಯೆ ನಿಜ ತುಲಸೀ ರಾಮ ಮದ್ಗುರುವಿ ನಪ್ಪಣೆಯ ಬಿಟ್ಟಿರೆ ಬೊಗಳುವ 3
--------------
ಚನ್ನಪಟ್ಟಣದ ಅಹೋಬಲದಾಸರು
ಇಂತಿದೆ ಬ್ರಹ್ಮ ಇಂತಿದೆ ಅದುಎಂತೋ ಇಹುದು ಎಂದು ಚಿಂತೆ ಮೂಡಲದೇಕೆ ಪ ಎರಡು ಕೈಗಳಿವೆ ಎರಡು ಕಾಲ್ಗಳಿವೆಎರಡು ಕಣ್ಣುಗಳು ಮತ್ತು ಎರಡು ಕಿವಿಗಳಿವೆಎರಡಕ್ಕೆ ಠಾವಿಲ್ಲ ಏಕವೇ ತಾನಿದೆಎರಡು ಎಂಬುದು ಮಾತಿನಿಂದೆರಡಾಗಿದೆ 1 ತಾನೆ ಬೇಡುತಲಿದೆ ತಾನೆ ಉಣ್ಣುತಲಿದೆತಾನೆ ತನ್ನ ಬಾಯ ತೊಳೆದುಕೊಳ್ಳುತಿದೆತಾನೆ ನಡೆಯುತಿದೆ ತಾನೆ ಮಲಗುತಿದೆತಾನೆ ಕುಳ್ಳಿರ್ದು ಹಾಡಿ ಪಾಡಿ ನಗುತಲಿದೆ 2 ಒಬ್ಬನೇ ಎನಿಸಿದೆ ಒಬ್ಬನೇ ತೋರಿದೆಒಬ್ಬನೇ ಆಗಿ ಆಡುತ್ತಲಿದೆಒಬ್ಬ ಚಿದಾನಂದ ಗುರುವರ ತಾನಿದೆಒಬ್ಬನೇ ಒಬ್ಬನೇ ಒಬ್ಬನೇ ಇದೆ ಇದೆ 3
--------------
ಚಿದಾನಂದ ಅವಧೂತರು
ಇಂಥಾ ಗುರುಗಳ ಕಾಣೆನೋ ಈ ಜಗದೊಳು ನಾ ಪ ಇಂಥಾ ಗುರುಗಳನೆಂದು ಕಾಣೆನಾ ನಂತ ಚೇತನರಂತರ ಬಹಿರದಿ ನಿಂತು ಕರ್ಮವವರಂತೆ ಮಾಳ್ಪಾ - ನಂತ ಮಹಿಮಾನಂತನಾಂಶಜರಿಂಥಾಅ.ಪ ತುಂಗಾತೀರದಿ ನಿವಾಸಾ ಮಂತ್ರಾಲಯಕೀಶ ತುಂಗ ವಿಕÀ್ರಮ ಜಗದೀಶಾ ಶ್ರೀಹರಿ ದಾಸಾ ಮಂಗಲ್ಮಾತಕ ವೃಂದಾವನ ದೇಶಾ ಸಾರಿದ ವ್ರತೀಶಾ ಮಂಗಲ ಮಹಿಮ ರಂಗನ ಕರುಣಾಪಾಂಗ ಪಡೆದ ಕೃ - ಪಾಂಗ ಯತಿಕುಲೋತ್ತುಂಗ ಮಾಯಿ ಮಾ - ತಂಗ ಸಂಘಕೆ ಸಿಂಗ ದುಷ್ಟ ಭು - ವಿಹಂಗ ಸ್ವಮತೋ - ಭೃಂಗ ಮನ್ಮನೋ - ರಂಗ ಬಿಂಬನ ಇಂಗಿತಙ್ಞರ ಸಂಗ ನೀಡಿ ಕಂಗಳಿಗೆ ತಾವು ಕಂಗೊಳಿಪರಿಂಥಾ 1 ಮೇದಿನಿ ತಳದಲಿ ಜನಿಸೀ ಸುಖತಿರ್ಥರ ಭಜಿಸೀ ಭೇಧಮತವನೆ ಸಾಧಿಸೀ ವಾದದಿ ಜೈಸಿ ಮಾಧವನೆ ಸರ್ವೋತ್ತಮನೆನಿಸಿ ಸ್ವಮತವ ಸ್ಥಾಪಿಸಿ ಭೋಧಿಸಿ ತತ್ತ್ವವ ಭೇಧಿಸಿ ಪರಮತ ಛೇಧಿಸಿ ಕುಮತಿಯ ಶೋಧಿಸಿ ತತ್ತ್ವದ ಹಾದಿಯ ಹಿಡಿಸಿ - ಮೋದಕೊಡುವ ಪಂಚ ಭೇದವ ತಿಳಿಸೀ ಸಾದರ ತನ್ನಯ ಪಾದಸೇವೆಯ ಮೋದವ ನೀಡುವ ಮೇದಿನೀ ದಿವಿಜಾರಾಧಿತ ಪದಯುಗ ಶೋಧಿಸಿ ಜನಮನೋ ಖೇದಗೊಳಿಪ ಭ - ವೋಧಧಿ ದಾಟಿಸಿ ಶ್ರೀದÀನ ತೆರದಲಿ ಮೇದಿನಿಯಾಳುವರಿಂಥಾ 2 ಧಿಟ್ಟ ಗುರು ಜಗನ್ನಾಥ ವಿಠಲದೂತಾ ಸೃಷ್ಟಯೊಳಗತಿ ವಿಖ್ಯಾತಾನೆನಿಸಿದ ಯತಿನಾಥಾ ಕುಷ್ಟಾದಿ ರೋಗದ ಘಾತಾ ಮಾಡುವೊದಾತಾ ಇಷ್ಟಾರ್ಥವಾ ತಾ ಸೃಷ್ಠಿಗೆ ಬೀರುವ ಶಿಷ್ಟಜನರನುತ್ನøಷ್ಟದಿ ಪಾಲಿಪ ಎಷ್ಟು ಪೇಳುವುದೋ ಉತ್ಕøಷ್ಟನ ಗುಣಗಳ ಭ್ರಷ್ಟರರಿಯರೆಲೆ ಶಿಷ್ಟರು ಬಲ್ಲರು ಇಷ್ಟೇ ಅಲ್ಲವೀತನ ವಿಶಿಷ್ಟ ಮಹಿಮೆಗ - ಳೆಷ್ಟು ಪೇಳಲವಶಿಷ್ಟವೆನಿಪವೋ ದೃಷ್ಟಿಹೀನರಿಗೆ ದೃಷ್ಟಿ ನೀಡುವ ದೃಷ್ಟಿ ಮಾತ್ರದಿ ತುಷ್ಟಿಬಡಿಸುವೊರಿಂಥಾ 3
--------------
ಗುರುಜಗನ್ನಾಥದಾಸರು
ಇಂಥಾ ಬಾಲನೆಲ್ಲು ಕಾಣೆನೊ ಪ ಉದಿಸಿದೇಳನೆ ದಿನದಿ ತ್ರಿದಶರೊಡನೆ ಕೂಡಿ ಮದಮುಖತಾರಕ | ಸದನವನೇರಿ ಕದನವಗೈಯುತ | ಹದವಿಹ ಶಸ್ತ್ರದಿ ಅಧಮ ದೈತ್ಯನ ಯಮ | ಸದನಕಟ್ಟಿರುವಂಥ 1 ಅಸಿತನ ಶಾಪದಿ | ಅಸುರೆಯಾದದಿತಿಯು ನಿಶಿಚರ ತಮನ ವರಿಸಿಕೊಂಡು ಇರಲು | ಅಸುರ ಹರನು ಖಳ | ನನು ಸೆಳೆಯಲಿಕೆನು-ತಿಸುವದಿತಿಗೆ ಪೂರ್ವ | ದೆಸೆಯನಿತ್ತಿರುವಂತಾ 2 ದುರುಳ ರಕ್ಕಸನಾಶಿ | ಧರಣಿಯೊಳ್ತೊಳಲುವ ದೊರೆ ಸುಧರ್ಮನ ಶಾಪ | ಪರಿಹರಿಸುತಲೇ | ನಿರತ ತನ್ನಯನಾಮ | ಸ್ಮರಿಪ ದಾಸರ ಸದಾ ಪೊರೆಯೆ ಪಾವಂಜೆಯೊಳು | ಸ್ಥಿರವಾಗಿನಿಂತ ತಾ 3
--------------
ಬೆಳ್ಳೆ ದಾಸಪ್ಪಯ್ಯ