ಒಟ್ಟು 531 ಕಡೆಗಳಲ್ಲಿ , 88 ದಾಸರು , 470 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮರವನು ನುಂಗುವ ಪಕ್ಷಿ ಮನೆಯೊಳಗೆ ಬಂದಿದೆ ಪ.ಒಂಟಿ ಕೊಂಬಿನ ಪಕ್ಷಿ ಒಳಗೆ ಕರುಳಿಲ್ಲಗಂಟಲು ಮೂರುಂಟು ಮೂಗು ಇಲ್ಲಕುಂಟು ಮನುಜನಂತೆ ಕುಳಿತಿಹುದು ಮನೆಯೊಳಗೆಎಂಟು ಹತ್ತರ ಭಕ್ಷ ಭಕ್ಷಿಸುವುದು 1ನಡುವೆ ತಲಿಯೆಂಬುವದು ನಡು ನೆತ್ತಿಯಲಿ ಬಾಯಿಕಡು ಸ್ವರಗಳಿಂದ ಗಾನ ಮಾಡ್ವದುಅಡವಿಯಲಿ ಹುಟ್ಟುವುದು ಅಂಗವೆರಡಾಗುವುದುಬಡತನ ಬಂದರೆ ಬಹಳ ರಕ್ಷಿಪುದು 2ಕಂಜ ವದನೆಯರ ಕರದಲ್ಲಿ ನಲಿದಾಡುವುದುಎಂಜಲನುಣಿಸುವುದು ಮೂರ್ಜಗಕೆರಂಜಿಪಶಿಖಾಮಣಿ ಸಿಂಹಾಸನದ ಮೇಲಿಪ್ಪಸಂಜೀವ ಪಿತ ಪುರಂದರವಿಠಲನೇ ಬಲ್ಲ * 3
--------------
ಪುರಂದರದಾಸರು
ಮಾಡಿದನೆನ್ನ ಫಕೀರನಾಗಿ ಸದ್ಗುರುಮಾಡಿದನೆನ್ನ ಫಕೀರನ ನೋಡಲಿಕ್ಕಾಶ್ಚರ್ಯಪ್ರಪಂಚ ಕಳೆದೆ ನಾಮರೂಪಕೆ ದೂರಪಅನುಭವಕಪ್ಪರ ಹೃದಯದ ಜೋಳಿಗೆಎನ್ನುವ ಕಂಕುಳೊಳಿಟ್ಟುಅನಿಮಿಷದೃಷ್ಟಿ ಅರುಹಿನಕಪನಿಅಮೃತ ಕಮಂಡಲು ಕೊಟ್ಟು1ನಾದದ ಕಿನ್ನರಿ ಕೈಯೊಳಗಿಟ್ಟುಟೊಪ್ಪಿಗೆ ಪೆಟ್ಟಿಗೆಯಿಟ್ಟಬೋಧದ ಅಂಗಿಯು ನಿರ್ಗುಣಲುಂಗಿಯ ಸೈರಣೆಲುಟಿಕೆಯ ಕೊಟ್ಟ2ಈಪರಿಮಾಡಿಯೆ ಬಯಲನುಹಿಡಿ ಎಂದು ಕರವನು ನೆತ್ತಿಯಲಿಟ್ಟಭೂಪ ಚಿದಾನಂದ ಫಕೀರನಾಗಿಯೆತಿರುಗೆಂದಪ್ಪಣೆ ಕೊಟ್ಟ3
--------------
ಚಿದಾನಂದ ಅವಧೂತರು
ಮಾತು ಸುಳ್ಳಾಗೊದೆ ದುರಿತಾರಿ | ಯನ್ನನಾಥನಿಂದಿಗೆ ರಕ್ಷಿಸೇ ಗೌರಿ ಪಮಾತೆ ನಿನ್ನಯಪಾದಪ್ರೀತಿಂದ ಭಜಿಸಿದ್ದ |ಕ್ಕೀತ ಸಿಕ್ಕಿದ್ದನು ಚಾತುರ್ಯ ಪುರುಷ 1ಧಾತಾಜನಾಡೀದ ಮಾತೀಗೆ ಕೋಪಾದಿ |ಈ ತೆರ ಮಾಡಿದ ತಾತನು ನೊಂದೂ 3ಪೋರಾನಲ್ಲಮ್ಮಿವಾ ಆರೆಂದು ಹೇಳಾಲಿ |ಶೌರಿಯ ಮೊಮ್ಮಗನೀರಜನೇತ್ರೆ 3ಭೃತ್ಯಾರ ಅಭಿಮಾನ ಮತ್ರ್ಯಾಪಗುಂಟಲ್ಲೆ |ಅತ್ತತ್ತವಾದೀನೆ ಹೆತ್ತವ್ವ ನಿನಗೇ 4ಪ್ರಾಣೇಶ ವಿಠಲನು ಬಾಣನ ಶಿಕ್ಷಿಸಿ |ತಾನೆ ಯೀವಂದಾಗಿ ನೀನೊಲಿಯವ್ವಾ 5
--------------
ಪ್ರಾಣೇಶದಾಸರು
ಮಾಯೆಯು ಎಂತಿಹುದೆಂಬೆಯ ಮಗನೆಮಾಯೆಯು ಸ್ತ್ರೀಯೇಮಾಯೆಮಾಯೆಯಗುರುಕರುಣದಿ ತಾಗೆ ಅದರೆಮಾಯೆಯೆಲ್ಲವೂ ನಿರ್ಮಾಯೆಪಎಸಳಿನ ಕಂಗಳ ಓರೆನೋಟಕೆಎದೆಗುಂದುವುದೇಮಾಯೆಮುಸುಕನೇ ಹಾಕಿ ಹಲ್ಲನು ತೆರೆಯಲುಮುಂದುಗೆಡಿದುವುದೇಮಾಯೆಕುಸುಮದ ಸೂಡಿದ ಮುಡಿಯಾಭಾವಕೆಕುಸಿಯುತಲಿಹುದೇಮಾಯೆಮುಸಿ ಮುಸಿ ನಗುತ ಮುದ್ದು ಮಾತಾಡಲುಮರುಳಾಗುವುದೇಮಾಯೆ1ಚೆಳ್ಳು ಪುಳ್ಳು ಎಂದೆಂಬ ಅಂದುಗೆಗೆಚಿತ್ತುಡುಗುವುದದೇಮಾಯೆಬಳ್ಳಿಯ ತೆರದಲಿ ಬಳುಕುವ ತನುವಿಗೆಬಾಯಿ ಬಿಡುವುದೇಮಾಯೆಮೆಲ್ಲನೆ ಹೆಜ್ಜೆಗೆ ಜಗ್ಗುವ ನಡಿಗೆಗೆಮರುಗುತಲಿಹುದೇಮಾಯೆಗಲ್ಲದ ನುಣುಪಿಗೆ ಚಿಬುಕದ ಸಿರಿಗೆವಶವಾಗುವುದೇಮಾಯೆ2ಮೋರೆಯ ಮುರುಕಿಸೆ ಹುಬ್ಬನು ಏರಿಸೆಮುಳುಗಿಹೋಗುವುದೇಮಾಯೆತೋರ ಹರಡಿಯ ತಿರುಹುವ ಬಗೆಗೆದೃಢಗೆಡುವುದೆಮಾಯೆಸೀರೆ ಸಿಂಗಾರಕೆ ಒಲವು ಒಯ್ಯಾರಕೆಸಿಕ್ಕಿಹೋಗುವುದೇಮಾಯೆಹಾರವ ಎತ್ತಿ ಎದೆ ಬದಿ ತೋರಿಸೆಹುಚ್ಚನಾಗುವುದೇಮಾಯೆ3ಕಂಚುಕಿ ತೆರೆದು ನಡುವನು ಸಡಿಲಿಸೆಕಾಲುಡುಗುವುದೇಮಾಯೆಚಂಚಲ ದೃಷ್ಟಿಯ ಆಲಿಯ ಹೊರಳಿಸೆಚೇತನಗುಂದುವುದುಮಾಯೆಗೊಂಚಲ ನಾಗೋತ್ತರ ಚಳತುಂಬಿಗೆ ಮಾರುಹೋಗುವುನೇಮಾಯೆಮಿಂಚುವ ಮೋರೆಯ ಮೀಟಿನ ಬಣ್ಣಕೆಮುಳುಗಿಯಾಡುವುದೇಮಾಯೆ4ಸತಿಯಿಂದಲಿಸುತ ಸುತನಿಂದಲಿ ಸೊಸೆಸರಗೊಳಿಸುವುದೇಮಾಯೆಮಿತಿಯಿಲ್ಲದೆ ವಾಸನೆಯಲಿ ಜನ್ಮವಮುಂದುವರಿಸುವುದೇಮಾಯೆಪಥಗಾಣದೆ ಅನಂತ ಯೋನಿಯಲಿಪುಡಿಯಾಗುವುದೇಮಾಯೆಚಿದಾನಂದನ ತಿಳುವಿಗೆ ಮುಳುಗಿಸಿಪಸರಿಸಿ ಇಹುದೆಮಾಯೆ5
--------------
ಚಿದಾನಂದ ಅವಧೂತರು
ಮುಕ್ಕೋಟ ದ್ವಾದಶಿಯ ದಿವಸ(ಮಾರ್ಗಶಿರ ಶುದ್ಧ ದ್ವಾದಶಿಯ ಉತ್ಸವ)ವ್ರತತಿಯಧಿಪನಂತೆ ನೀರೆ ತೋರ್ಪಅತಿಶಯಾಗಮ ಬಗೆ ಬ್ಯಾರೆ ರತ್ನದ್ಯುತಿಯಾಭರಣವ ಶೃಂಗಾರ ಆಹಾಶ್ರುತಗೊಲಿಸೆನಗೆ ಆಶ್ರಿತ ರಕ್ಷಾರ್ಥಿತನ ಸಂ-ಗತಿಸ್ಮøತಿತತಿಗಳ ಮತಿಗಗೋಚರನಂತೆ1ಲೋಲಲೋಚನನ ನಾಟಕ ಸತ್ಕಥನವಮೇಲಾಗಿ ಜಗದಿ ಶೋಭಿಪ ಶೇಷಾದ್ರಿಯಲಿಬಾಲಾರ್ಕಸದೃಶನೀತನು ಇರ್ಪನಲ್ಲಿನೀಲನಿಭಾಂಗನು ನೆನೆವರ ಪಾಪವಘೋಲುಘಡಿಸಲೆಂದೆನುತಲಿಭಾರ್ಗವಕೋಲಿಂದೆಸಗಿದ ಧರಣಿಗೆ ಬಂದು ಸ-ಲೀಲೆಗಳೆಸಗುವ ಜಾಲವಿದೆಲ್ಲ 2ಸರಸಿಜಗಂಧಿ ಕೇಳ್ ದಿಟದಿ ತನ್ನಅರಮನೆಯಿಂದ ಸದ್ವಿಧದಿ ಈರ್ವ-ರರಸಿಯರ್ ಸಹಿತ ಮಿನಿಯದಿ ಅತಿಭರದಿಂದ ಸೂರ್ಯನುದಯದಿ ಆಹಾಉರುತರ ಹೇಮಪಲ್ಲಂಕಿಯೊಳಡರಿತ್ವರಿತದಿ ಪೋಗುವ ಭರವಿದೆಲ್ಲಿಗೆ ಪೇಳೆ 3ಬದ್ಧನೀ ಪೇಳ್ದ ಮನದ ಶಂಕಾವ್ರಾತತಿದ್ದಿಪೆ ಕೇಳು ಮಾರ್ಗಶಿರ ಮಾಸದೊಳುಶುದ್ಧ ದ್ವಾದಶಿಸೂರ್ಯಉದಯ ಕಾಲದೊಳುಭದ್ರಭವನವನು ಪೊರಟು ವಿನೋದದಿಅದ್ರಿಧರನು ಸಜ್ಜನರೊಡಗೂಡಿ ಉ-ಪದ್ರಿತ ಪಾಪವ ಛಿದ್ರಿಪ ಸ್ನಾನಕೆರೌದ್ರಿತ ರಾಮಸಮುದ್ರದ ಬಳಿಗೆ 4ರಂಭೆ : ಆರರೆ ಆಶ್ಚರ್ಯವಾಯ್ತೆನಗೆ ಅತಿಪರಮಮಹಿಮೆನೆಂದ ಮೇರೆಗೆ ಘನ-ತರ ಸ್ನಾನವೇನಿದು ಕಡೆಗೆ ವೃತದಿರವೋ ಉತ್ಸವವೋ ಪೇಳೆನಗೆ ಆಹಾತರುಣಿ ರನ್ನಳೆ ನಿನ್ನ ಚರಣಕ್ಕೆ ನಮಿಪೆ ಈಪರಿಗಳ ಸಾಂಗದಿಂದರುಹಬೇಕೆನಗಿನ್ನು 5ಸಕಲಾಂತರ್ಯಾತ್ಮನೀತನು ಸತ್ಯಶೀಲೆ-ಪ್ರಕಟ ವ್ರತವಿದಲ್ಲ ಅಂಜನಾದ್ರಿಯಲಿಭಕುತವತ್ಸಲನು ಉತ್ಸವಿಸುವನಲ್ಲಿವಿಕಳಹೃದಯ ನರನಿಕರಕಸಾಧ್ಯವೆಂದ್ಯುಕುತದಿ ಈ ಧರೆಯಲ್ಲಿ ಪ್ರತ್ಯೇಕದಿಅಖಿಳೋತ್ಸವ ಮಸ್ತಕಕಿದುವೆಗ್ಗಳಮುಕುಟೋತ್ಸವವೆಂದೆನುತಲಿ ರಚಿಸುವ 6ರಂಭೆ : ನಳಿನಾಕ್ಷಿ ಲಾಲಿಪುದಿನ್ನು ಸ್ನಾನವೊಲವಿಂದ ಗೈದ ಮೇಲಿವನು ತನ್ನರಮಣಿಯರ್ಸಹಿತಂದಣವನು ಏರಿನಿಲುನಿಲುತ್ಯಾಕೆ ಬರುವನು ಆಹಾಪೊಳಲೊಳಗಿಹ ಜನನಿಳಯದ ದ್ವಾರದಿಕಳಕಳವೇನಿದ ತಿಳುಪೆನಗೀ ಹದ 7ಮಿಂದು ತೋಷದಿ ಅಂದಣವನ್ನೇರಿ ತಾನುಇಂದೀ ಪುರದೊಳಿರ್ಪ ಜನರ ದೋಷಗಳಕುಂದಿಸಲೆಂದವರವರ ದ್ವಾರದೊಳುನಿಂದಿರುತಲ್ಲಿಯದಲ್ಲಿ ಆರತಿಗಳಚಂದದಿ ಕೊಳುತೊಲವಿಂದಕಾಣಿಕೆಜನ-ವೃಂದದಿ ಕೊಡುತಾನಂದ ಸೌಭಾಗ್ಯವಒಂದಕನಂತವ ಹೊಂದಿಸಿ ಕೊಡುವ 8ರಂಭೆ : ಸರಸಿಜಾನನೆ ಮತ್ತೇನಿದನು ತನ್ನಅರಮನೆಯಲ್ಲಿ ಭೂದ್ವಿಜನರನು ಸರ್ವಪುರಜನ ಸಹಿತೊಳಗಿವನು ನಾನಾತರದಿ ಮೆರೆವ ಭೋಜನವನು ಆಹಾ-ಕರಿಸಿ ಆಮೇಲೆ ರಾತ್ರಿಯಲಿ ಸಾಲಿನಲಿ ವಿ-ಸ್ತರದ ಲಾಜದ ರಾಸಿಗಿರದೆ ಪೂಜಿಪುದ್ಯಾಕೆ 9ಗಂಗಾಜನಕತನ್ನ ಗೃಹದಿ ವಿಪ್ರರನುಹಿಂಗದೆ ಕರೆಸಿ ವಿಪ್ರರನೆಲ್ಲ ಬರಿಸಿಸಂಗಾತದಲಿ ಆರೋಗಣೆ ಗೈದು ಮೆರೆಸಿಅಂಗಣದಲಿ ರಾತ್ರೆಯಲಿ ವಿನೋದದಿಕಂಗೊಳಿಸುವ ಉರಿದರಳ ಸಮೂಹಕೆರಂಗಪೂಜೆಯನುತ್ತಂಗವಿಸುವ ನಿಗ-ಮಂಗಳೊಡೆಯನು ವಿಹಂಗಮಾರೂಢ 10ರಂಭೆ : ಅಮಮ ಮತ್ತೇನಿದ ಪೇಳು ಶ್ವೇತ-ಕುಮುದಾಪ್ತ ಠಾವಿನ ವೋಲು ಬಂದುಆದರಿಸಲಿದರ ಮಧ್ಯದೊಳು ತನ್ನರಮಣಿಯರ್ ಸಹಿತ ತೋಷದೊಳು ಆಹಾವಿಮಲವನ್ನೇರಿನ್ನೆಲ್ಲಿಗೈದುವನೆಂಬಾ-ಗಮವ ಪೇಳೆನೆಗೆ ನೀ ನಮಿಪೆ ನಿನ್ನಂಘ್ರಿಯ 11ಶ್ರೀ ರಮಾರಮಣ ಪೂಜೆಯಗೊಂಡಾ ಮೇಲೆಚಾರುಈ ಹೂವಿನ ತೇರನೇರುತಲಿಕೇರಿ ಕೇರಿಯೊಳಾರತಿಗೊಳ್ಳುತಲಿಭೋರಿಡುತಿಹ ವಾದ್ಯಧ್ವನಿ ಘನತರಭೇರಿಮೃದಂಗಾದ್ಯಖಿಳ ವಿನೋದದಿಸ್ವಾರಿಗೆ ತೆರಳುವ ಕ್ರೂರ ನರರ ಆ-ಘೋರಪಾಪ ಜರ್ಝರಿಸಲೆಂದು12ರಂಭೆ : ಅರವಿಂದಾಕ್ಷಿಯೆ ಮತ್ತೇನಿದನು ತನ್ನಅರಮನೆಯಿದಿರು ರಥವನು ತಾನುಭರದೊಳಗಿಳಿದಂದಣವನು ಏರಿಮೆರೆವಾಲಯದ ಸುತ್ತುಗಳನು ಆಹಾತಿರುಗುವನ್ಯಾಕೆ ಭೂದ್ವಿಜರ ಘೋಷದಿ ವಾದ್ಯ-ಭರಿತ ಗಾಯನಭೇರಿಧ್ವನಿಗಳೇನಿದ ಪೇಳೆ13ದುಷ್ಟಮರ್ದನ ರಥವಿಳಿವುತ್ತಲಾಗೇಅಷ್ಟದಿಗ್ಭಾಗದಿ ಗೃಹಸುತ್ತಿನೊಳಗೆಅಷ್ಟಾವಧಾನವ ರಚಿಸುತ್ತ ಕಡೆಗೆಶ್ರೇಷ್ಠನು ರತ್ನಾಸನದಿ ಗ್ರಹದಿಪರಮೇಷ್ಟಜನಕೆ ಸಂತೋಷಾನಂದದಿಸೃಷ್ಟಿಯ ಜನರ ಅನಿಷ್ಟವ ತ್ಯಜಿಸುತಇಷ್ಟವನೀವ ಯಥೇಷ್ಟ ದಯಾಬ್ಧ 14ರಂಭೆ : ಅರಿತೆನಾ ಸ್ವಚ್ಛ ಚಿತ್ತದಲಿ ಇನ್ನುಹರಿಏಕರೂಪನೆನ್ನುತಲಿ ಲಕ್ಷ್ಮೀಕರವೆನಿಸುವ ಕಾರ್ಕಳದಲಿ ಭಾಗ್ಯೋ-ದಯ ದೇವಾಲಯದ ಮಧ್ಯದಲಿ ಆಹಾತ್ವರಿತದಿ ನುತಿಸಿರೊಗುರುನಾರಸಿಂಹ ಶ್ರೀ-ಕರವೆಂಕಟೇಶನ ಚರಣಕಮಲಗಳ15
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮುಕ್ತನು ನೀನಣ್ಣ ನಿನಗೆ ಎತ್ತ ಜನನವಣ್ಣ ಪಹೆಣ್ಣಿನ ಕಾಲನು ನೀನೀಗ ಗಂಡೆಂದು ನೋಡಿದರೆಚೆನ್ನವು ಬಿದ್ದಿರೆ ಮನದಲಿ ಹೆಂಟೆಂದು ತಿಳಿದರೆ1ಕಲ್ಲನು ಮುಳ್ಳನು ಕೇವಲ ದೇವರೆಂದರಿತರೆಎಲ್ಲಪಮಾನವು ತನಗೆ ಸ್ತೋತ್ರವು ಎಂದರೆ2ನರನು ಆದವನತ್ರಿಪುರಹರನೆಂದರಿತರೆಚರಅಚರವನೆಲ್ಲ ಚಿದಾನಂದ ಗುರುವೆಂದು ಕಂಡರೆ3
--------------
ಚಿದಾನಂದ ಅವಧೂತರು
ರಂಗನೊಲಿದ ನಮ್ಮ ಕೃಷ್ಣನೊಲಿದ |ಅಂಗನೆ ದ್ರೌಪದಿಗೆ ಅಕ್ಷಯವಸ್ತ್ರವನಿತ್ತುಪಕರಿಯಪುರದ ನಗರದಲ್ಲಿ ಕೌರವರು ಪಾಂಡವರು |ಧರೆಯನೊಡ್ಡಿ ಲೆತ್ತವಿಡಿದು ಜೂಜನಾಡಲು ||ಪರಮಪಾಪಿ ಶಕುನಿ ತಾನು ಪಾಸಿನೊಳಗೆ ಪೊಕ್ಕಿರಲು |ಧರುಮರಾಯ ಧಾರಿಣಿ - ದ್ರೌಪದಿಯ ಸೋತನು 1ಮುದ್ದುಮೊಗದ ದ್ರೌಪದಿಯ ಮುಂದೆಮಾಡಿ ತನ್ನಿರೆಂದು |ತಿದ್ದಿ ತನ್ನ ಮನ್ನೆಯರಿಗೆ ತಿಳಿಯಹೇಳಿದ ||ಮುದ್ರೆಮನ್ನೆಯರು ಬಂದು ದ್ರೌಪದಿಯ ಮುಂದೆ ನಿಂತು |ಬುದ್ಧಿಯಿಂದಲೆಲ್ಲವನು ಬಿನ್ನಹಮಾಡಲು 2ಅಮ್ಮ ಕೇಳೆ ಅರಸುಗಳು ಅಚ್ಚ ಪಗಡೆ ಪಂಥವಾಡಿ |ಹೆಮ್ಮೆಯಿಂದ ಜೂಜಿಗಿಟ್ಟು ಲೆತ್ತವಾಡಲು ||ಧರ್ಮರಾಯ ಸೋತನೆಂದು ಸತ್ಯವಚನಿ ಕೌರವಂಗೆ |ನಿಮ್ಮ ನಿಜದಿ ಸೇರಿ ಆಗ ಕೊಟ್ಟರೆಂದರು 3ಪಟ್ಟಪದವಿ ಅವರಿಗಾಗಿ ಬಡವರಾಗಿ ಇರುವೆವೆಂದರೆ |ಕಿಟ್ಟ ಪಗಡೆ ಪಂಥ ಜೂಜಿದೆಲ್ಲಿ ಒದಗಿತು ? ||ದುಷ್ಟ ಕೌರವನು ಎನ್ನ ಲಜ್ಜೆ - ನಾಚಿಕೆಯ ಕೊಂಡು |ಭ್ರಷ್ಟ ಮಾಡುವನು ಎಂದು ಬಳಲಿ ದ್ರೌಪದಿ 4ಬಾಗಿ ಬಳುಕಿ ಬೆದರಿ ಬಿಕ್ಕಿ ಕಣ್ಣ ನೀರನುದುರಿಸುತಲಿ |ಮಾಗಿಯ ಕೋಗಿಲೆಯಂತೆಕಾಯ ಒಲೆಯುತ ||ಆಗ ಕೃಷ್ಣನಂಘ್ರಿಗಳನು ಅಂತರಂಗದಲಿ ನೆನೆದು |ಸಾಗಿಸಾಗಿ ಹೆಜ್ಜೆ ಇಡುತ ಸಭೆಗೆ ಬಂದಳು 5ವೀರಕರ್ಣ ಅಶ್ವತ್ಥಾಮ ವಿದುರ ಶಲ್ಯ ಭಗದತ್ತರು |ಕ್ರೂರ ಕೌರವ ದುಃಶಾಸನ ಗುರುಹಿರಿಯರು ||ಸಾರುತಿಪ್ಪ ಭಟರು ಪರಿವಾರ ರಾವುತರ ಕಂಡು |ಧಾರಿಣಿಗೆ ಮುಖವ ಮಾಡಿ ನಾಚಿನಿಂತಳು 6ಚೆಂದದಿಂದ ದುರ್ಯೋಧನ ಚದುರಿ ದ್ರೌಪದಿಯ ಕಂಡು |ಮುಂದರಿಯದೆ ಮುಗುಳುನಗೆಯ ಮಾತನಾಡಿದ ||ಅಂದು ಸ್ವಯಂವರದಲ್ಲಿ ಐವರಿಗೆ ಆದ ಬಾಲೆ |ಇಂದು ಎನ್ನ ಪಟ್ಟದರಸಿಗೊಪ್ಪಿದೆಯೆಂದನು7ಮಲ್ಲಿಗೆಯನು ಮುಡಿಯೆ ನಾರಿ ಮುದ್ದುಮೊಗದ ಒಯ್ಯಾರಿಚೆಲ್ಲೆಗಂಗಳ ದ್ರೌಪದಿಯೇ ಬಾರೆ ಎಂದನು ||ಬಿಲ್ಲು ಎತ್ತಲಾರದವನೆ ಬಂಡಣ ಕಾದದಿದ್ದವನೇ |ಹಲ್ಲುಕೀಳುವರೈವರು ಬೇಡವೆಂದಳು 8ಬಟ್ಟೆಬಡಕರೈವರಿಗೆ ಮಿತ್ರೆಯಾಗುವುದು ಸಲ್ಲ |ಪಟ್ಟಿಮಂಚಕೊಪ್ಪುವಂತ ಬಾರೆ ಎಂದನು ||ಕೆಟ್ಟಮಾತನಾಡದಿರೊ ಕ್ರೋಧದಿಂದ ನೋಡದಿರೊ |ರಟ್ಟೆಕೀಳುವರೈವರು ಬೇಡವೆಂದಳು 9ಅಡವಿತಿರುಕರೈವರಿಗೆ ಮಡದಿಯಾಗುವುದು ಸಲ್ಲ |ತೊಡೆಯ ಮೇಲೆ ಒಪ್ಪುವಂತೆ ಬಾರೆ ಎಂದನು ||ಬೆಡಗುಮಾತನಾಡದಿರೊ ಭೀಮಸೇನನ ಗದೆಯು ನಿನ್ನ |ತೊಡೆಯ ಮೇಲೆ ಒಪ್ಪುವದು ಬೇಡವೆಂದಳು 10ಅಚ್ಚ ಪೊಂಬಣ್ಣದ ಬೊಂಬೆ ಆನೆಯಂತೆ ನಡೆವ ರಂಭೆ |ಅಚ್ಚ ಮುತ್ತಿನಂತೆ ಬಿಂಬೆ ಬಾರೆ ಎಂದನು ||ಹೆಚ್ಚು - ಕುಂದನಾಡದಿರೊ ಪರರ ಹೆಣ್ಣ ನೋಡಿದಿರೊ |ಚುಚ್ಚಿ ಹಾಕುವರೈವರು ಬೇಡವೆಂದಳು 11ಎಷ್ಟುಬಿಂಕ - ಬಡಿವಾರವು ಹೆಣ್ಣ ಬಾಲೆಗಿವಳಿಗೆಂದು |ಸಿಟ್ಟಿನಿಂದ ದುರ್ಯೋಧನ ಸಾರಿ ಕೋಪಿಸಿ ||ಉಟ್ಟ ಸೀರೆ ಸೆಳೆಯಿರಿವಳಉಬ್ಬು ಕೊಬ್ಬು ತಗ್ಗಲೆಂದು |ದೃಷ್ಟಿಯಿಂದ ದುಃಶಾಸಗೆ ಸನ್ನೆ ಮಾಡಿದ 12ದುರುಳ ದುಃಶಾಸನ ಬಂದು ದ್ರೌಪದಿಯ ಮುಂದೆ ನಿಂತು |ಕರವ ಪಿಡಿದು ಸೆರಗಹಿಡಿದು ನಿರಿಯ ಸೆಳೆಯಲು ||ಮರುಳು ಆಗದಿರೋ ನಿನ್ನ ರಕ್ತದೊಳಗೆ ಮುಡಿಯನದ್ದಿ |ಕರುಳ ದಂಡೆಯನ್ನೆ ಮಾಡಿ ಮುಡಿವೆನೆಂದಳು 13ಗುಲ್ಲುಗಂಟಿ ಹೆಣ್ಣೆ ನಿನ್ನ ಕಾಡಿ ಬಳಲಿಸುವೆನು ಎಂದು |ಗಲ್ಲದಲ್ಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ನಿಲ್ಲೊ ನಿಲ್ಲೊ ಪಾಪಿ ನಿನ್ನ ನಾಲಗೆ ಎರಡಾಗಿ ಸೀಳಿ |ಪಲ್ಲಿನಲ್ಲಿ ಕೇಶ ಹಿಕ್ಕಿಕೊಂಬೆನೆಂದಳು 14ಬೆನ್ನಿನಲಿ ಪೆಟ್ಟನಿಕ್ಕಿ ಭಂಡುಮಾಡುವೆನು ಎಂದು |ಕೆನ್ನೆಯಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ರನ್ನೆ ವೀರಬೊಬ್ಬೆಯಿಕ್ಕಿ ರಭಸದಿಂದ ಸಾರುತಲಿ |ಪನ್ನಗಶಯನ ಕೃಷ್ಣ ಕೃಷ್ಣ ಕಾಯೊ ಎಂದಳು 15ಮಚ್ಚ ಕೂರ್ಮವರಹ ಕಾಯೊ, ಮುದ್ದು ನಾರಸಿಂಹ ಕಾಯೊ |ಹೆಚ್ಚಿನ ವಾಮನನೆ ಕಾಯೊಭಾರ್ಗವ ಕಾಯೊ ||ಅಚ್ಯುತ ರಾಮಕೃಷ್ಣ ಕಾಯೊ ಬೌದ್ಧ ಕಲ್ಕಿರೂಪ ಕಾಯೊ |ಸಚ್ಚಿದಾನಂದ ಸ್ವಾಮಿ ಕಾಯೊ ಎಂದಳು16ಸಜ್ಜನರ ಪ್ರಿಯನೆ ಕಾಯೊ ಸಾಧುರಕ್ಷಕನೆ ಕಾಯೊ |ನಿರ್ಜರವಂದಿತನೆ ಕಾಯೊ ನರಹರಿ ಕಾಯೊ |ಅರ್ಜುನನ ಸಖನೆ ಕಾಯೊ ಆನತಪಾಲಕನೆ ಕಾಯೊ |ಲಜ್ಜೆ - ನಾಚಿಕೆಯ ಕಾಯೊ ಸ್ವಾಮಿ ಎಂದಳು 17ಸಿಂಧು ಸಾಗರದ ಶಯನ ದ್ರೌಪದಿಯ ಮೊರೆಯಕೇಳಿ |ಅಂದು ಉಟ್ಟ ವಸ್ತ್ರಗಳುಅಕ್ಷಯ ವೆಂದನು||ಒಂದು ಎರಡು ಮೂರು ನಾಲ್ಕು ಕೋಟ್ಯಸಂಖ್ಯ ಸೀರೆಗಳು |ನೊಂದು ಬೆಂದು ದುಃಶಾಸನು ನಾಚಿಕುಳಿತನು 18ನೋಡಿದರು ದ್ರೌಪದಿಯ ಮಾನರಕ್ಷ ಲೀಲೆಗಳನು |ಮಾಡಿದರು ಮಾಧವನ ಮುದ್ದು ಸ್ತೋತ್ರವ ||ಮೂಢ ಕೌರವನ ಕೂಡಮಾನಿನಿ ದ್ರೌಪದಿಯು ಪಂಥ - |ವಾಡಿ ತನ್ನ ಪತಿಗಳೈವರನ್ನು ಗೆಲಿದಳು19ಕೇಶಮುಡಿಗಳನ್ನಕಟ್ಟಿ ಕ್ಯೆಯಕಾಲಮಣ್ಣನೊರಸಿ |ಸಾಸಿರನಾಮದ ಕೃಷ್ಣನು ಸುರರ ಪಾಲಿಪ |ವಾಸಿಯುಳ್ಳ ಕೃಷ್ಣ ಎನ್ನ ವಹಿಸಿ ಮಾನಕಾಯ್ದನೆಂದು | ಸಂತೋಷದಿಂದ ದ್ರೌಪದಿಯು ಮನೆಗೆ ಬಂದಳು 20ಇಂತು ಆ ದ್ರೌಪದಿಯ ಮಾನರಕ್ಷ ಲೀಲೆಗಳನು |ಸಂತತದಲಿ ಹಾಕಿಕೇಳಿ ನಲಿವ ಜನರಿಗೆ |ಸಂತಾನ ಸೌಭಾಗ್ಯ ಸಕಲಭೀಷ್ಟೆಗಳನು ಕೊಡುವ |ಕಂತು ಜನಕ ನಮ್ಮ ಪುರಂದರವಿಠಲನು21
--------------
ಪುರಂದರದಾಸರು
ರಾಮ ಶ್ರೀರಾಮ ಸೀತಾರಾಮ ಶ್ರೀರಾಮರಾಮನೆ ರವಿಕುಲಸೋಮಶ್ರೀರಾಮಪರಾಮ ರಾಮ ರಘುರಾಮನೆ ದಶರಥರಾಮನೆ ಗುಣಗಣಧಾಮನೆ ಶ್ರೀರಘು ಅ.ಪಕೌಸಲ್ಯಾದೇವಿಯ ಕಂದನೆ ರಾಮಕೌಶಿಕಯಜÕವ ಕಾಯ್ದ ಶ್ರೀರಾಮಹಿಂಸಿಸಿದ ತಾಟಕಿಯನು ಕೊಂದರಾಮಧ್ವಂಸಮಾಡಿದೆ ಶಿವಧನು ಮುರಿದುರಾಮಸಂಶಯವಿಲ್ಲದೆ ಸೀತೆಕರವಪಿಡಿದುತನ್ನಂಶದ ಪರಶುರಾಮನಿಗೊಲಿದನೆ ಶ್ರೀ 1ದಶರಥರಾಮ ನೀನರಸನಾಗೆನಲುಅಸುರಾವೇಶದಿ ಕೈಕೆ ವರವ ಯಾಚಿಸಲುಎಸೆವ ಸಿಂಹಾಸನ ತೊರೆದು ಪೊರಮಾಡಲುಶಶಿಮುಖಿಸೀತಾಲಕ್ಷ್ಮಣರ ಕೂಡಿ ಬರಲುಭರತಗೆ ಪಾದುಕೆ ಕೊಡುತಲಿ ಕಳುಹಿಸಿಗುಹನ ಮನ್ನಿಸಿ ವನರಾಜ್ಯದೊಳ್ ಮೆರೆದೆ 2ವನದೊಳುಮಾಯಾಮೃಗವ ಕಂಡು ಸತಿಯುಮನದಿ ಚಿಂತಿಸಿರಾಮ ತೆರಳೆ ರಕ್ಕಸನುವನಜಾಕ್ಷಿ ಸೀತೆಯ ಕಳವಿನಿಂ ತರಲುವನವನಚರಿಸಿ ಪುಡುಕೆ ಕಂಡು ಕಪಿವರನುಶರಧಿಲಂಘಿಸಿ ಸೀತೆಯನು ಕಂಡು ಹನುಮನುಕುರುಹು ಪಡೆದು ಲಂಕೆ ದಹಿಸುತ ಬರಲು 3ಸೇತುಬಂಧನ ಮಾಡಿ ಕಪಿಗಳ ಕೂಡಿನೀತಿ ಪೇಳಿದ ವಿಭೀಷಣಗಭಯ ನೀಡಿಭೂತ ರಾವಣನ ದಶಶಿರವ ಚಂಡಾಡಿಸೀತಾಸಹಿತ ರಾಮ ಪುಷ್ಪಕವನೇರಿಆತುರದಿಂದಿಹ ಭರತನಿಗ್ವಾರ್ತೆಯಪ್ರೀತಿಲಿ ಕಳುಹಿದ ಶ್ರಿ ರಘುರಾಮ 4ಬಂದ ಶ್ರೀರಾಮಚಂದ್ರ ಬಹುಪ್ರೀತಿಯಿಂದಛಂದದಿಂ ಭರತನ ಮನ್ನಿಸಿ ಮುದದಿಂದಕುಂದಣಮಯದ ಸಿಂಹಾಸನ ಚಂದ-ದಿಂದಲೇರುತ ರಾಮ ನಸುನಗೆಯಿಂದಇಂದಿರಾಸೀತಾ ಸಹಿತ ಅಯೋಧ್ಯದಿಬಂದು ಪೊರೆವ ಕಮಲನಾಭ ವಿಠ್ಠಲನು 5
--------------
ನಿಡಗುರುಕಿ ಜೀವೂಬಾಯಿ
ಲೊಳ್ಳ ಕಳ್ಳೊಟ್ಟೆ ಜಂಬಾಳಗಟ್ಟೆ ಸಂಸಾರ ನೋಡಮ್ಮಲೊಳ್ಳ ಕಳ್ಳೊಟ್ಟೆ ಸರಸನಂಬಲುಗತಿಯದು ಲೊಳ್ಳಟ್ಯಮ್ಮಮ್ಮಪಹೆಂಡಿರು ಮಕ್ಕಳು ತಂದೆ ತಾಯಿಗಳುಭಾಗ್ಯವು ಲೊಳ್ಳಟ್ಯಮ್ಮಮ್ಮಚಂಡ ಯಮದೂತರುಮಂಡೆತಿವಿವಾಗಬಿಡಿಸುವರಾರು ಇಲ್ಲಮ್ಮ1ಶ್ರೇಷ್ಠತೆ ಚೆಲುವಿಕೆ ವಸ್ತ್ರವು ಪ್ರಾಯವುಸಿದ್ಧಿಯು ಲೊಳ್ಳಟ್ಯಮ್ಮಮ್ಮದುಷ್ಟಮದೂತರು ದುಬುದುಬು ಬಡಿವಾಗಬಿಡಿಸುವರಾರು ಇಲ್ಲಮ್ಮ2ವಾರೆ ಮುಂಡಾಸವು ಗೀರು ಗಂಧಗಳುಪೋರತನವು ಲೊಳ್ಳಟ್ಯಮ್ಮಮ್ಮಘೋರ್ಯಮದೂತರು ಘರ್ಜಿಸುತ ಒಯ್ವಾಗಬಿಡಿಸುವರಾರು ಇಲ್ಲಮ್ಮ3ಕನಸಿನ ತೆರವಿದು ಸಂಸಾರವೆಂಬುದುಅನುಮಾನವಿದಕಿಲ್ಲಮ್ಮಮ್ಮಕನಸೆಂದು ನಿಶ್ಚೈಸೆ ಕಾಲನು ಬಾರನುಮನದಲಿ ತಿಳಿದುಕೊ ನೀನಮ್ಮ4ತನ್ನನು ಮರೆತು ಸಂಸಾರ ನೆಚ್ಚಲುತಿರುಗುವ ಜನ್ಮವ ನಮ್ಮಮ್ಮಚೆನ್ನ ಚಿದಾನಂದ ಗುರುವೆಂದು ನಂಬಲುಜನ್ಮವ ಕಳೆವುವು ತಿಳಿಯಮ್ಮ5
--------------
ಚಿದಾನಂದ ಅವಧೂತರು
ವರುಣಗೂ ನಾರಾಯಣಗು ನೆಂಟತನ ಮಾಡುವದಕೆ |ಸರಿಯೆ ಸಂದೇಹವೇನು ಸಮ್ಮೀಸಿ ನೋಡಿರಿ ಪಹೆಂಡಾರು ಬಹು ಮಂದಿ ಜಾರಾ ಪುತ್ರನು ಒಬ್ಬ |ಪಂಡೀತ ಮಗನೊಬ್ಬ ಸಮನೆಲ್ಲಿ ನೋಡಿ1ವಂಶಾ ವಂದೆ ಇಬ್ಬರದು ಛಲದಿಂದ ಕೊಲ್ಲುವಂಥಾ |ಕೂಸು ಪಾಲಿಸಿದಾರು ಸಮನೆಲ್ಲಿ ನೋಡಿ 2ಸ್ಥೂಲಾ ವಿಗ್ರಹದವರು ಜಡ ಚೇತನಗಳಿಗೆ |ಆಲಯವಾಗಿಹರು ಸಮನೆಲ್ಲಿ ನೋಡಿ 3ಕನಕಾ ಭೂಮಿ ವಜ್ರದಾಹಾರ ಒಬ್ಬಾಗೊಬ್ಬಾಗೆ |ವನಮಾಲಿವೈಜಯಂತಿಸಮನೆಲ್ಲಿ ನೋಡಿ 4ತುಳಿಸೀಕೊಂಡೂ ಕೋಪಿಸದೆಲೆವೇ ಹಿಗ್ಗಿದಾರು |ಕಲುಷಾ ವಿದೂರರೂಪಸಮನೆಲ್ಲಿ ನೋಡಿ 5ದ್ವಾರಕ ಪಟ್ಟಣವ ಪ್ರೀತಿಂದ ಪಾಲೀಸೀ |ಹಾರಾವ ಮಾಡಿದಾರು ಸಮನೆಲ್ಲಿ ನೋಡಿ 6ವೃದ್ಧಿ ಹ್ರಾಸಗಳಿಲ್ಲಾ ಅನ್ನಾದಾಪೇಕ್ಷವಿಲ್ಲ |ನಿದ್ರಾ ಶೂನ್ಯರಾಗಿಹರು ಸಮನೆಲ್ಲಿ ನೋಡಿ 7ಸರಸೀಜಾರೂಪಉಳ್ಳವರು ಪೂರ್ತಿ ಮಾಡಿದಾರು |ಸುರರಾ ಮನೋಭೀಷ್ಟಿಯಾ ಸಮನೆಲ್ಲಿ ನೋಡಿ 8ವಿಧಿಯಿಂದ ಜನಿಸಿದಾರು ಜನರೀಗಸಹ್ಯವಾಗಿ |ಒದರುವರು ಇದರಿಂದ ಸಮನೆಲ್ಲಿ ನೋಡಿ 9ನೂತನ ಯಜೊÕೀಪವೀತಾವ ಧರಿಸುವರು ಪ್ರ- |ಖ್ಯಾತಿ ವಸ್ತು ಕೊಟ್ಟಾರು ಸಮನೆಲ್ಲಿ ನೋಡಿ 10ದಾರಿ ತೋರಿದಾರು ವಾನರಾಗಳಿಗೆ ಗುಂಜಿ |ಹಾರಾಯೀಸೂವರಿದು ಸಮನೆಲ್ಲಿ ನೋಡಿ11ವಾಸಾವಿವರ್ಜಿತಾರು ದ್ವೇಷಿಗಳ ಶರೀರ |ನಾಶಾಗೈಸಿದರಿದು ಸಮವೆಲ್ಲಿ ನೋಡಿ12ಶೋಧಿಸೀ ನೋಡಿದಾರೆ ಕರ್ದಾಮ ಜಾಲಯಳ |ಭ್ಯೋದಯಕ್ಕೆ ಕಾರಣರು ಸಮವೆಲ್ಲಿ ನೋಡಿ13ಧರಿಗಾನಂದಾವಿತ್ತಾರಾಲಂಕಾರವಾಗಿ ಖಳರಾ |ತರಿದು ಭಾರವ ಕಳದು ಸಮವೆಲ್ಲಿ ನೋಡಿ 14ಶ್ರೀನಿವಾಸಾಗೆ ಮಾವನೀತಾ ನೀತಾಗು ಹಾಗೆ |ಪ್ರಾಣೇಶ ವಿಠ್ಠಲನು ಸಮವೆಲ್ಲಿ ನೋಡಿ 15
--------------
ಪ್ರಾಣೇಶದಾಸರು
ವಾಸುಕಿಶಯನನೆ ವೆಂಕಟಗಿರಿ |ವಾಸನೆಯಜ್ಞಾದ್ಯವತಾರನೆ |ಮೇಶಾ ನರಸಿಂಹಾ ಹಸಿಗೇಳೂ ಪಬೊಮ್ಮಾ ಶಂಕರ ಮುಖ ವಂದಿತ |ಸಮ್ಮೀರವಾಹನಗರುಡಧ್ವಜ |ಅಮ್ಮರೇಶಾನುಜ ಶ್ರೀ ಉಪೇಂದ್ರಾ || ಉಪೇಂದ್ರದಾಮೋದರಹರಿ| ತಮ್ಮನಾ ತಮ್ಮ ಹಸಿಗೇಳೂ 1ವಾಮನ ನಾರಾಯಣಅಚ್ಯುತ|ತಾಮಸಗುಣಜನ ಸಂಹಾರಕ |ಶ್ಯಾಮಾಂಗ ಕೋಟಿ ರವಿತೇಜಾ ||ರವಿತೇಜಾ ತ್ರೈಲೋಕದಗುರುಹೇಮಾಂಗದ ವರದಾ ಹಸಿಗೇಳೂ 2ಜಲಜಾಕ್ಷನೆಕೌಸ್ತುಭಶೋಭಿತ |ಜಲನಿಧಿ ಶಯನನೆ ನರಕಾಂತಕಾ |ಬಲಿಬಂಧಿಸೀದನೆ ಪರತತ್ವಾ ||ಪರತತ್ವರವಿದರ ಗದಧರಫಲುಗುಣನಾ ಸಖನೇ ಹಸಿಗೇಳೂ 3ಕನಕಾಂಬರ ಕಶ್ಯಪರಿಪುಹರಿ|ಧನಪತಿ ಮಿತ್ರನ ಭಯ ಬಿಡಿಸಿದ |ಇನಪುತ್ರಗೊಲಿದಾ ರಘುಪತೀ ||ರಘುಪತಿ ಭಕ್ತಸುರತರುಮನಸಿಜಾ ಪಿತನೆ ಹಸಿಗೇಳೂ 4ಶತಯಾಗನ ಗರ್ವ ವಿಭಂಜನ |ಕ್ಷಿತಿವಂದಡಿ ಮಾಡಿದವನೇ |ಸುತನಲ್ಲಿ ಪಾಲು ಕುಡಿದಾನೆ ||ಕುಡಿದಾನೆ ರುಗ್ಮಿಣಿವಲ್ಲಭಪತಿತಾ ಪಾವನ್ನಾ ಹಸಿಗೇಳೂ5ಝಗ ಝಗಿಸುವ ಪೀತಾಂಬರದುಡಿ |ಗಿಗಳಿಂದಲಿ ಹೊನ್ನುಡದಾರದಿ |ಮಿಗಿಲಾದ ವೈಜಯಂತೀ ವನಮಾಲೀ ||ವನಮಾಲಿ ಕೊರಳೊಳಗೊಪ್ಪುವಜಗದೀಶ ಕೃಷ್ಣಾ ಹಸಿಗೇಳೂ 6ಗಂಗೆಯ ಚರಣದಿ ಪಡದಿಹ ಬಹು |ಮಂಗಳ ಮೂರುತಿ ಶ್ರೀ ವಾಮನಾ |ಜಂಗುಳಿ ಹೆಣ್ಣುಗಳಾ ಒಲಿಸೂತಾ ||ಒಲಿಸುತಾ ಚಿಂತಿಗಳೆಲ್ಲನುಹಿಂಗಿಸುವಾ ದೇವಾ ಹಸಿಗೇಳೂ 7ಧ್ರುವ ದ್ರೌಪದಿಯ ಸುರಜ ಪೋಷಕ |ಅವಿವೇಕ ದಶಮುಖ ವಿನಾಶಕಾ |ಲವಣಾಸುರ ಕಂಸಾ ಮುರಾ ಧ್ವಂಸೀ ||ಮುರಧ್ವಂಸೀ ಐದೊಂದಬಲೆರಾಧವವಾಸುದೇವಾ ಹಸಿಗೇಳೂ 8ಕೇಶವ ಸತ್ರಾಯಣ ಸುತ ಪ್ರಾ- |ಣೇಶ ವಿಠ್ಠಲ ದಕ್ಷಿಣವಲ್ಲಭ|ದೋಷ ರಹಿತನೆ ಅನಿರುದ್ಧಾ ||ಅನಿರುದ್ಧಾ ಭಾಗವತರಘನಾಶಾ ಪರಮಾತ್ಮಾ ಹಸಿಗೇಳೂ 9
--------------
ಪ್ರಾಣೇಶದಾಸರು
ವೀರೆಯ ನೋಡಿರೋ ಅಸುರರ ಮಾರಿಯ ನೋಡಿರೋಶೂರಾದಿ ಶೂರರ ದಾರಿಯ ಹಚ್ಚಿಸಿಮುರಿದ ಮಹಿಷಾಸುರನ ತರಿದಪರಿಶಿಲೋಮನು ಶಕ್ತಿಯ ಪಡೆದು ನಡೆದು ಕಣ್ಕೆಂಪಿಡಿದುಮಸಗುತಲಿಡಲು ಶಕ್ತಿಯ ದೇವಿಯು ಹಿಡಿದೆ ಹಲ್ಲನು ಕಡಿದೆಕೊಸರಿಯೆ ಇಟ್ಟಳು ಅಸುರನ ಎದೆಗೆ ಹೊಯ್ದು ರಕ್ತದಿ ತೊಯ್ದುಬಸವಳಿಯುತ ರಿಶಿಲೋಮನು ಭೂಮಿಗೆ ಬೀಳೆ ಬಹು ಹುಡಿಯೇಳೆ1ವರರುದಗ್ರನು ಗದೆಯನು ಹೊತ್ತು ಬರಲು ದೇವಿಗೆರಗಲುಶರದಿಂದಲಿ ತಲೆಯುರುಳಿಸಿ ಶಿರ ಬೊಬ್ಬಿರಿದು ಡಿಂಬವು ನಡೆದುಭರದಲಿ ಹೊಯ್ದುದು ಗದೆಯಲಿ, ಶರ ಸೋನೆಯ ಸುರಿದು ಖಡ್ಗವಹಿರಿದು ಪರಮೇಶ್ವರಿ ಭಾಪೆನಲು ನಡೆದು ಬಿತ್ತು ಪ್ರಾಣ ಹೋಗಿತ್ತು2ದಳಪತಿಯಹ ಚಿಕ್ಷುರಗೆ ಸಮನೆ ತ್ರಿಣಯನ ಕಾಣೆನು ಎಣೆಯನಹೊಳಕಿದ ನಾನಾಪರಿಆಯುಧದಿ ಮುಂದೆ ಧಿರುಧಿರು ಎಂದೆಒಳ ಹೊಕ್ಕಿರಿದನು ದೇವಿಯ ಶೂಲದಿ ಎದೆಯ ಶೌರ್ಯ ಶರಧಿಯಬಳಿಯದ ದೇವಿಯು ತಪ್ಪಿಸಿ ಶೂಲದಿ ತಿವಿಯೆ ಕಂಗಳ ಮುಗಿಯೆ3ದುಷ್ಟ ಬಿಡಾಲನು ಶರಗಳ ಸುರಿದನು ಮುಚ್ಚೆ ಸುರರೆದೆ ಬಿಚ್ಚೆಎಷ್ಟನು ಹೇಳಲಿ ಮಾಯದಿ ಮುಸುಕಿ ಇರಿದ ಬಹು ಬೊಬ್ಬಿರಿದಮುಷ್ಟಿಯಲಿ ತಿವಿದನು ದೇವಿಯ ಕೋಪವು ಹೆಚ್ಚಿ ತಾನವುಡುಗಚ್ಚಿಬಿಟ್ಟನು ದೇಹವ ದೇವಿಯು ಶೂಲದಿ ತಿವಿಯೆ ರಿಪುಭವವಳಿಯೆ4ಎಡಬಿಡದಲೆ ರೌದ್ರದಿ ಮಹಿಷಾಸುರನೊತ್ತೆ ದೇವಿಯು ಮತ್ತೆಕಿಡಿಕಾರುತ ಹೊಕ್ಕೊದೆದಳು ಬೀಳಲು ಕವಿದು ಶೂಲದಿ ತಿವಿದುಕಡಿದಳು ಕೊರಳನು ತಲೆಯನು ಮೆಟ್ಟಿ ಓಡಿತು ಭಯ ಹಿಮ್ಮೆಟ್ಟಿಮೃಡಚಿದಾನಂದನು ತಾನಾದ ಬಗಳ ಕರುಣಿ ಭಕ್ತರಭರಣಿ5
--------------
ಚಿದಾನಂದ ಅವಧೂತರು
ವ್ಯಾಪಾರವೆನಗಾಯಿತುಶ್ರೀಪತಿಯ ಪಾದಾರವಿಂದ ಸೇವೆಯೆಂಬ ಪಹರಿಕರುಣವೆಂಬಂಗಿಗುರುಕರುಣಮುಂಡಾಸುಹರಿದಾಸರ ದಯವೆಂಬ ಒಲ್ಲಿ ||ಪರಮಪಾಪಗಳೆಂಬ ಪಾಪೋಸವನೆ ಮೆಟ್ಟಿದುರುಳಾತ್ಮರಾದವರ ಎದೆ ಮೇಲೆ ನಡೆವಂಥ 1ಬಿಳಿಯ ಕಾಗದ ಹೃದಯ ಬಾಯಿ ಕಲಮದಾನಿನಾಲಗೆಯೆಂಬ ಲೆಕ್ಕಣಿಕೆ ||ಶ್ರೀಲೋಲನ ದಿವ್ಯನಾಮವೆಂಬುವ ಲೆಕ್ಕಶೀಲದಿ ಬರೆದು ಶ್ರೀಹರಿಗೆ ಒಪ್ಪಿಸುವಂಥ 2ನುಡಿನುಡಿಗಾನಂದ ಬಾಷ್ಪ ರೋಮಾಂಚನಮುಡುಪಿನೊಳಗೆ ಇಟ್ಟ ಕೈಜೀತವು ||ಕಡಿಮೆ ಸಂಬಳಕೆಲ್ಲ ಮುಕ್ತಿಸಾಧನವನ್ನುಕೊಡುವ ತೆರನಂತೆ ಚೀಟಿ ಬರೆಸಿಕೊಟ್ಟ 3ಹಿಂದಿನ ಸಂಸಾರ ಆಗಮನದ ಭಯಎಂದೆಂದಿಗದರ ಚಿಂತೆಯು ಬಿಟ್ಟಿತು ||ಮುಂದಿನ ಸಂಸಾರ ಸ್ಥಾನ ಭಾರಕೆಲ್ಲಸಂದಾಯವನು ಮಾಡಿ ಕತಬಿ ಹರಿಸಿಕೊಟ್ಟ 4ಕಂಡಕಂಡವರ ಕಾಲುಗಳಿಗೆರಗಿ ನನ್ನಮಂಡೆದಡ್ಡುಗಟ್ಟಿ ಬಳಲಿದೆನೊ ||ಪುಂಡರೀಕಾಕ್ಷಶ್ರೀಪುರಂದರವಿಠಲನುಕಂಡು ವೀಳೆಯ ಕೊಟ್ಟು ತನ್ನ ಸೇವೆಗೆ ಇಟ್ಟ 5
--------------
ಪುರಂದರದಾಸರು
ಶರಣು ಶರಣು ಶರಣ್ಯವಂದಿತ ಶಂಖಚಕ್ರಗದಾಧರ |ಶರಣು ಸರ್ವೇಶ್ವರ ಅಹೋಬಲ ಶರಣ ಸಲಹೋ ನರಹರಿ ಪ.ಶೀಲದಲಿ ಶಿಶು ನಿನ್ನ ನೆನೆಯಲುಕಾಲಲೋತ್ತುತ ಖಳರನು |ಲೀಲೆಯಿಂದಲಿ ಚಿಟಿಲು ಭುಗಿಭುಗಿ -ಲೆನುತ ಉಕ್ಕಿನ ಕಂಬದಿ ||ಖೂಳದೈತ್ಯನ ತೋಳಿನಿಂದಲಿ ಸೀಳಿಹೊಟ್ಟೆಯ ಕರುಳನು ||ಮಾಲೆಯನು ಕೊರಳೊಳಗೆ ಧರಿಸಿದಜ್ವಾಲನರಸಿಂಹಮೂರ್ತಿಗೆ 1ಖಳಖಳಾ ಖಳನೆಂದು ಕೂಗಲು ಕೋಟಿ ಸಿಡಿಲಿನ ರಭಸದಿ ||ಜಲಧಿ ಗುಳಗುಳನೆದ್ದು ಉಕ್ಕಲು ಜ್ವಲಿತ ಕುಲಗಿರಿ ಉರುಳಲು ||ನೆಲನು ಬಳಬಳನೆಂದು ಬಿರಿಯಲು ಕೆಳಗೆ ದಿಗ್ಗಜ ನಡುಗಲು ||ಥಳ ಥಳಾ ಥಳ ಹೊಳೆವ ಮಿಂಚಿನೊಲ್ಹೊಳೆವ ನರಸಿಂಹ ಮೂರ್ತಿಗೆ 2ಕೋರೆ ಕೆಂಜೆಡೆ ಕಣ್ಣು ಕಿವಿ ತೆರೆ -ಬಾಯಿ ಮೂಗಿನ ಶ್ವಾಸದಿ||ಮೇರುಗಿರಿ ಮಿಗಿಮಿಗಿಲು ಮಿಕ್ಕುವ ತೋರ ಕಿಡಿಗಳ ಸೂಸುತ ||ಸಾರಿಸಾರಿಗೆ ಹೃದಯರಕುತವ ಸೂರೆ ಸುರಿಸುರಿದೆರಗುತಘೋರರೂಪಗಳಿಂದ ಮೆರೆಯುವ ಧೀರ ನರಹರಿಮೂರ್ತಿಗೆ3ಹರನು ವಾರಿಜಭವನು ಕರಗಳ ಮುಗಿದು ಜಯಜಯವೆನುತಿರೆ ||ತರಳ ಪ್ರಹ್ಲಾದನಿಗೆ ತಮ್ಮಯ ಶರಿರಬಾಧೆಯ ಪೇಳಲು ||ಕರುಣಿ ಎನ್ನನು ಕರುಣಿಸೆನ್ನಲು ತ್ವರದಲಭಯವನೀಡುತ ||ಸಿರಿಬರಲು ತೊಡೆಯಲ್ಲಿ ಧರಿಸಿದ ಶಾಂತ ನರಹರಿಮೂರ್ತಿಗೆ4ವರವ ಬೇಡಿ ದನಿರುವ ತಂದೆಯ ಪರಿಯನೆಲ್ಲವ ಬಣ್ಣಿಸಿ ||ನಿರುತದಲಿ ನಿನ್ನೆರಡು ತೊಡೆಯಲಿ ಶರೀರವಿರಲೆಂದೆನುತಲಿ ||ಸುರರು ಪುಷ್ಪದ ವೃಷ್ಟಿಗರೆಯಲು ಸರಸಿಜಾಕ್ಷನು ಶಾಂತದಿ ||ಸಿರಿಯ ಸುಖವನು ಮರೆದಹೋಬಲವರದ ಪುರಂದರವಿಠಲಗೆ 5
--------------
ಪುರಂದರದಾಸರು
ಶ್ರೀ ವಿಠಲ ಹೃಷಿಕೇಶನೆ ನತಜನಪೋಷ ವಾಸುಕೀಶಯನಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ವಾಸವನುತ ರಜಿತೇಶ ನಮಿತಪದಕ್ಲೇಶಹರಣ ಜಗದೀಶ ಜನಾರ್ದನಅ.ಪನೀರೊಳಿಳಿದು ಮತ್ಸ್ಯಾವತಾರದಿಂದಲಿನಲಿದುಘೋರತಮನ ಗೆಲಿದುಚಾರುವೇದವ ತಂದೆ ಧೀರ ಕಮಠನಾದಿಕೇಸರಿಯಾಕಾರವನೇತಾಳಿಸಾರಿ ಕಂಬದಿ ಮೈದೋರುತ ತರಳಗೆಧೀರನ ಸೀಳಿದೆನಾರಮೃಗೇಶನೆ1ಬಲಿಯೊಳ್ ದಾನವ ಬೇಡಿ ನೆಲನಈರಡಿಮಾಡಿಛಲದಿ ಬಂಧಿಸಿ ಬಲಿಯ ತಲೆಯ ಮೆಟ್ಟಿದೆ ವಾಮನಾಛಲದಭಾರ್ಗವರಾಮ ಧರಣಿಜೆಗೊಲಿದನೆರಘುರಾಮ ಕೊಳಲನುಡಿಸಿ ಗೋವುಗಳೊಡನಾಡಿದೆತ್ರಿಪುರನ ಸತಿಯರ ವ್ರತವ ಪರಿಹರಿಸಿದಕಪಟಮೋಹನರೂಪನಿಪುಣಾ ಬೌದ್ಧಾವತಾರಕಪಟದೀ ಹಯವೇರಿ ಬಂದಾ ನಿಪುಣಕಲ್ಕ್ಯಾವತಾರೀ ಗುಪಿತದಿ ಸರ್ವಾ ವ್ಯಾಪಕನೆನಿಸಿದೆಕಪಟನಾಟಕಗೋವಿಂದದಾಸನ ಪ್ರಿಯಾ3
--------------
ಗೋವಿಂದದಾಸ