ಒಟ್ಟು 2565 ಕಡೆಗಳಲ್ಲಿ , 117 ದಾಸರು , 1820 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಸುಶೀಲೇಂದ್ರ | ಚರಣವಾರಿಜ ಯುಗ್ಮ ಸ್ಮರಿಸುವ ನರರು ಶ್ರೀಹರಿದಾಸರು ಪ ಹರಿವರ ಸುಮಚಾಬ್ಧಿ | ಹರಿಣಾಂಕರೆನಿಸಿದ ವರಸುವೃತೀಂದ್ರರ ತೀರ್ಥರ ಕರಕಮಲಜ ಅ.ಪ ಮಾಸ ತ್ರಯದಿ ಸಡಗರದಲಿ ಮಹ ಸಭೆ ನಿರ್ಮಿಸಿ ಪೊಡವಿಯೊಳಿದ್ದ ಭೂಸರರಾಜ್ಞ ಪತ್ರ ಬರಮಾಡಿ ವಿದ್ವಾಂಸರ ಒಡಗೂಡಿ | ಮಧ್ವಾಗಮನವನು ನೋಡಿ ಬೆಲೆಯುಳ್ಳವೆಗ್ಗಳ ಒಡವೆ ಉಡುಪಗಳನು ಕರುಣಿಸಿ ಮೃಷ್ಟಾನ್ನ ದ್ವಿಜರಿಗೆ ಕಡು ಸುಪ್ರೇಮದಿ ಸಲಿಸಿ | ಮುದ ಬಡಿಸಿ ಜಡಕುಮಾಯ್ಗಳ | ಗಡಣ ಜಡಧಿಗೆ ವಡೆಯ ತಾನೆನಿಸಿ ಕ್ರೋಢ ಜಾಸ್ಥಿತ | ಒಡೆಯ ಶ್ರೀಗುರು ರಾಘವೇಂದ್ರರ ಅಡಿಗಳಾಬ್ಜಕಾ ರಡಿಯಂತೊಪ್ಪುತ | ಬಿಡದೆ ಸಂತತ ಧೃಢದಿ ಸೇವಿಸಿ ಜಡಜ ಜಾಂಡದಿ ಮೆರೆದ ಅಸ್ಮದ್ 1 ತರಣಿ ಕುಲೇಂದ್ರನ ಕರುಣವೆಷ್ಟಿವರೊಳು ಅರುಹಲಾರೆ ವರಕಾಪ್ಯಾಸನ ಪುರಕೆ ಎರಡಾರು ಯತಿಗಳ ವತಿಯಿಂದ ತಮ್ಮಯ ಶಿಷ್ಯ ತತಿಯಿಂದ ಬಹುವಿಧ ಬಿರುದಾವಳಿಯಿಂದ ತೆರಳಿ ಶಶಿರವಿವರ ಸುವಾದ್ಯಧ್ವಾನ ಮೊಳಗಿಸುತ ‌ಘನ ಭಕ್ತಿ ಪರವಶರಾಗಿ ಸುರಚಿರ ಕನಕಮಣಿ ಧನ ತನುಮನ ತ್ವರಿತ ತೃಣ ಬಗೆಯ ದೇವಕಿ ತರಳ ರುಕ್ಮಿಣಿ ವರ ಮುರಾಂತಕÀ ಚರಣಗರ್ಪಿಸುತ | ಆನಂದಪಡುತ ಸರ್ವಮುನಿ ಜನಗಳಿಗೆ ಬಲು ಉಪಚರಿಸಿ | ಮನ್ನಣೆ ಧರಿಸಿ ಹರುಷದಿ ವರ ಸುಧೀಂದ್ರರ ಕರಜರನು ನೆರೆಸ್ಥಾಪಿಸಿ ಆಶ್ಚÀರ್ಯ ಚರಿತ 2 ಪತಿ ಶೃತಿ ಶಾಸ್ತ್ರಾರ್ಥ ಚತುರ ತನದಿ ಪಡೆದು ವಿತತ ಮಹಿಮನಾದ ಪತಿತ ಪಾವನ ಶಾಮಸುಂದರನ ಸ್ತುತಿಸುತಲಯ ಚಿಂತನೆ ಗೈಯುತ ಶ್ರೀಯುತ ಸಂಸ್ಥಾನಮತಿ ವಿಶಾರದರಾದವರ ಸುವೃತೀಂದ್ರ ತೀರ್ಥರಿಗೆ ಹಿತದಿಂದ ಒಪ್ಪಿಸಿ | ಯತಿ ಧೀರೇಂದ್ರರ ಚಾರುಸ್ಥಳದೊಳಗೆ ತನುವಿತ್ತು | ಹರಿಪುರಪಥವ ಪಿಡಿದೈದಿದರು ಚನ್ನಾಗಿ | ಸೇವಿಪ ಜನರಿಗೆ ಅತಿದಯದಿ ಮನೋರಥವ ನೀಡುತ ಸತತ ಮಾಣದೆ ಪರಮ ಭಕುತಿಲಿ ಪೃಥ್ವಿ ಸುರಕರ ಶತಪತ್ರಗಳಿಂದ ನುತಿಸಿಕೊಳುತಲರ್ಚನೆಗೊಂಬ 3
--------------
ಶಾಮಸುಂದರ ವಿಠಲ
ಗುರುಸ್ತುತಿ ದಾಸರ ಭಜಿಸುತ ಕ್ಲೇಶವ ಕಳೆಯಿರೊ ವಾಸುದೇವನ ಭಕ್ತರಾದ ಶ್ರೀಪುರಂದರ ಪ ಮೀಸಲ ಮನದಲಿ ಕೇಶವನಡಿಗಳ ಆಸೆಲಿ ಪೂಜಿಪ ದಾಸರೊಳಗೆ ಶ್ರೇಷ್ಠ ಅ.ಪ ಪುರಂದರ ಗಡದೊಳು ಹಿರಿಯನೆಂದೆನಿಸಿದ ವರದಪ್ಪನಿಗೆ ವರಕÀುವರ ನೆಂದೆನಿಸಿದೀ ಧರೆಯೊಳು ತನಗ್ಯಾರು ಸರಿಯಿಲ್ಲದಂತೆ ಮೆರೆಯೆ ಸಿರಿಯರಸನು ಶೀಘ್ರದಲಿ ತಾನರಿಯುತ 1 ಬಂದನು ಮಗನಿಗೆ ಮುಂಜಿಯೆಂದೆನುತಲಿ ಚಂದದಿಂದಲಿ ಬೇಡಲು ಧಣಿಯ ಬಂದೆಯಾತಕೆ ನಮ್ಮ ಚಂದದ ಬೀದಿಲಿ ಹಿಂದಕೆ ತೆರಳೆನೆ ಬಂದನು ಬಾರಿ ಬಾರಿ 2 ಹರಿಯೆಂದು ತಿಳಿಯದೆ ಜರಿಯುತ ನುಡಿಯಲು ಮರಳಿ ಮರಳಿ ಯಾಚಿಸೆ ಬಿಡದೆ ತೆರಳನು ಈ ವೃದ್ಧ ತೆರಳಿಪೆನೆನುತಲಿ ಸರಸರ ತೆಗೆಯುತ ಸುರಿದನು ನಾಣ್ಯವ 3 ನೋಡುತ ಶ್ರೀಹರಿ ಗಾಡದಿ ಕೈನೀಡೆ ನೀಡಿದ ಸವೆದ ರೊಕ್ಕವ ನೋಡೀ ಗಾಡನೆ ಬಂದು ನಾಯಕನ ಸತಿಯಳನು ಬೇಡಿದ ಪುಣ್ಯವು ಬಾಹೋದೆನುತಲಿ 4 ಏನು ನೀಡಲಿ ಎನಗೇನಿಹುದೆನ್ನಲು ಮಾನಿನಿ ಮೂಗುತಿ ನೀಡೆಂದೆನಲು ಮಾನಿನಿ ಮಾಡಲು ಜ್ಞಾನಿಗಳರಸನು ಗಾಡ ಹಿಂತಿರುಗುತ 5 ಗಾಡನೆ ಮೂಗುತಿ ನೀಡುತ ದ್ರವ್ಯವ ಬೇಡಲು ಬೇಗದಿ ನೀಡುತ ನುಡಿದನು ನೋಡುತ ವಡವೆಯ ನೀಡಿದ ಭರಣಿಲಿ ಸತಿ ಮುಖವಾ 6 ಮೂಗುತಿ ಎಲ್ಲೆನೆ ಬೇಗದಿ ನಡುಗುತ ನಾಗವೇಣಿಯು ಪ್ರಾರ್ಥಿಸಿ ಹರಿಯ ಆಗ ಕುಡಿವೆ ವಿಷವೆನ್ನುತ ಕರದಲಿ ನಾಗವಿಷದ ಬಟ್ಲಲಿ ಇರಲು 7 ತೋರಿದಳಾಗಲೆ ತನ್ನಯ ರಮಣಗೆ ತೋರದಿರಲು ಮುಂದಿನ ಕಾರ್ಯ ಭಾರಿ ಆಲೋಚನೆಯ ಮಾಡುತ ಮನದಲಿ ಸಾರಿದ ತನ್ನ ವ್ಯಾಪಾರದ ಸ್ಥಳಕೆ 8 ತೆರೆದು ನೋಡಲು ಆ ವಡವೆಯ ಕಾಣದೆ ಮಿಗೆ ಚಿಂತೆಯು ತಾಳುತ ಮನದಿ ನಗಧರನ ಬಹು ಬಗೆಯಲಿ ಪೊಗಳುತೆ ತೆಗೆದ ಅಸ್ಥಿರ ರಾಜ್ಯದಿ ಮನವ 9 ಕಳವಳ ಪಡುತಲಿ ಆ ಲಲನೆಯ ಸಹಿತದಿ ತನುಮನ ಧನ ಹರಿಗರ್ಪಿಸುತಾ ಕ್ಷಣ ಬಿಡದಲೆ ಹರಿ ಚರಣವ ಸ್ಮರಿಸುತ ಕಮಲನಾಭ ವಿಠ್ಠಲನೆನ್ನುವ ಹರಿ 10
--------------
ನಿಡಗುರುಕಿ ಜೀವೂಬಾಯಿ
ಗುರುಸ್ತುತಿ ರಾಘವೇಂದ್ರ ಸಲಹೊ ಗುಣಸಾಂದ್ರ ಪ ಭಗವದ್ಗೀತಾ ವಿವರಣ ತಂತ್ರದೀಪ ನಿಗಮತತಿಗೆ ಖಂಡಾರ್ಥವ ರಚಿಸಿ ಖಗರ್ಥಗಳನು ಅತಿ ಸ್ಫುಟವಾಗಿ ವಿವರಿಸಿ ಖಗವಾಹನ ತೋರಪಡಿಸಿದ ಧೀರ 1 ಧರಣಿ ವಿಜರರಿಗೆ ವರಗಳ ಕೊಡುವಂಥ ಸುರತರುವೆ ನಿಂಗೆ ಕರಗಳ ಮುಗಿದು ಪರಮಪುರುಷ ಹರಿಚರಣ ಕಮಲದಲಿ ಸ್ಥಿರವಾದ ಭಕುತಿಯ ಬೇಡುವೆ ಧೀರ 2 ಚಂಡ ಕುಮತಗಳ ಖಂಡಿಸಿ ಬುಧಜನ ಮಂಡಲದೊಳಗೆ ಪ್ರಚಂಡನೆಂದೆನಿಸಿ ಕುಂಡಲಿಶಯನ ಪಾದಮಂಡಿತ ಹೃದಯ ಭೂ ಮಂಡಲದೊಳಗೆ ಅಖಂಡಲನಾದ 3 ಶ್ರದ್ಧೆಯಿಂದಲಿ ವರ ಮಧ್ವಾಚಾರ್ಯರ ಮತ ಪದ್ಧತಿ ಬಿಡದಂತ ಬುದ್ಧಿಯನಿತ್ತು ಉದ್ಧರಿಸಯ್ಯ ಕೃಪಾಬ್ಧಿಯೇ ಬುಧಜನಾ ರಾದ್ಯಚರಣ ಪರಿಶುದ್ಧ ಚರಿತ್ರ 4 ಕಾಮಜನಕನಾದ ನಾಮಗಿರೀಶ್ವರಿ ಸ್ವಾಮಿ ನೃಹರಿಪಾದ ತಾಮರಸಂಗಳ ಪ್ರೇಮದಿ ಪೂಜಿಪೆನೆಂಬೊ ಕಾಮಿತವರ ನೀಡೊ ಶ್ರೀ ಮತ್ಸುಧೀಂದ್ರಕರ ತಾಮರಸಭವನೆ 5
--------------
ವಿದ್ಯಾರತ್ನಾಕರತೀರ್ಥರು
ಗುರುಹಿರಿಯರನುಸರಿಸಿ ಹÀರಿಯ ಮನದೊಳಗಿರಿಸಿಪರಗತಿಯ ಬೇಗ ಸಾಧಿಸಿರೊ ಪ. ಲೆಕ್ಕವಿಲ್ಲದ ದೇಹವೆಂಬ ಸೆರೆಮನೆಯೊಳಗೆಸಿಕ್ಕಿ ಬಹುಕಾಲ ಬಳಲದಿರಿರಕ್ಕಸಾರಿಯ ಭಕ್ತರೊಳು ಸೇರಿ ಮುಂದೆ ಸೆರೆ-ಯಿಕ್ಕದಂತವನ ಮರೆಹೋಗಿರೊ 1 ಕಂಬಳಿಯ ಬುತ್ತಿಯಂತೀ ದೇಹದೊಳಗೆ ಸುಖವೆಂಬುದಿಲ್ಲವು ದುಃಖಭರಿತಅಂಬುಜಾಕ್ಷನ ದಿವ್ಯ ಮಂಗಳ ಕಥಾಮೃತವ-ನುಂಬ ಸಂಭ್ರಮಕೆ ಸರಿಗಾಣೆನು 2 ಮಕ್ಕಳುಗಳಳುವಾಗ ಮಡದಿಯರು ಜರಿವಾಗಭಿಕ್ಷುಕರು ಬಂದು ಬೈದ್ಹೋಗುವಾಗಇಕ್ಕಿ ಪೊರೆವುದಕೆ ಬಗೆಯಿಲ್ಲದ ದರಿದ್ರಂಗೆಸೌಖ್ಯವೆತ್ತಣದು ಮನುಜರಿಗೆ 3 ತಾಯ ಮಾರಿ ತೊತ್ತಕೊಂಬ ಪಾಮರನಂತೆಹೇಯಕುಜನರ ಚರಣಕೆರಗಿಶ್ರೀಯರಸನಂಘ್ರಿಗಳ ನೆನೆಯಲೊಲ್ಲದ ಮನುಜರಿಗೆಆಯುಷ್ಯ ಬರಿದೆ ಹೋಯಿತಲ್ಲ 4 ಐವರಿತ್ತೊಡವೆಯನು ಅವರವರು ಒಯ್ವರು ಮ-ತ್ತೈವರೆಂಬುವರು ತೊಲಗುವರುಮೈಯ ಹತ್ತರಕೂಟ ಹರಿದು ಹೋಗುವ ಮುನ್ನಕೈಯ ಪಿಡಿದೆತ್ತುವರ ಕಾಣೆ 5 ಕಾಲು ಜವಗುಂದಿದವು ರೋಗರುಜಿನಗಳಿಂದಕಾಲನ ಭಟರು ಬಂದು ಕವಿದುಸಾಲಾಗಿ ನಿಂತಾಗ ಮುಖಘಂಟೆಯೊಳಗಿನನಾಲಿಗೆಗೆ ನಾದವೆಲ್ಲಿಹುದೊ 6 ಈಗಲೆ ಹರಿನಾಮನಾದದಿಂದೆಚ್ಚೆತ್ತುನಾಗಶಯನನ ಪುರದ ಪಥವಆಗಮಜ್ಞರ ಕೈಯ ಕೇಳಿಕೊಳ್ಳಿರೊ ನೀವುಈ ಗಾಳಿದೀಪ ಸ್ಥಿರವಲ್ಲ7 ಜರೆ ಬಂದು ಕಡೆಯಲ್ಲಿ ಗುರುಗುರುಟ್ಟುವಾಗಶರೀರಸಂಬಂಧಿಗಳ ಕಾಟತರುಣಿಯರ ಮೇಲಾಸೆ ತಮ್ಮ ಹಿತವರಿಯದೆಬರಿದೆ ಭವದೊಳಗೆ ಬಳಲದಿರಿ 8 ವೇದಶಾಸ್ತ್ರವನೋದಲಿಲ್ಲ ಜಪತಪಸಾಧು ಸತ್ಕರ್ಮಗಳ ಸರಕಿಲ್ಲಮಾಧವನ ಪೂಜೆಯನು ಮಾಡಿದವನಲ್ಲ ಹರಿಪಾದತೀರ್ಥ ವ್ರತಗಳಿಲ್ಲ 9 ಊಧ್ರ್ವಪುಂಢ್ರsÀಗಳೆಲ್ಲಿ ಹರಿಯ ಲಾಂಛನವೆಲ್ಲಿಪದ್ಮಾಕ್ಷಿ ಶ್ರೀತುಲಸಿ ಸರಗಳೆಲ್ಲಿಸದ್ಧರ್ಮಪಥವೆಲ್ಲಿ ವಿಷಯಾಂಧಕೂಪದೊಳುಬಿದ್ದು ಹೋರಳುವ ಮನುಜರೆಲ್ಲಿ 10 ಏಕಾದಶಿಯ ಮಾಡಿ ಯತಿಗಳೊಡನೆ ಆಡಿಪೋಕವೃತ್ತಿಗಳನೀಡಾಡಿಶ್ರೀಕಾಂತನನು ಬೇಡಿ ಸುಕೃತಿಗಳನೆ ಕೂಡಿಆ ಕೃಷ್ಣನಂಘ್ರಿಗಳ ಪಾಡಿ 11 ಉಕ್ಕಿ ಹರಿಯನೆ ಪೊಗಳಿ ಅವನಂಗಣದಿ ಹೊರಳಿಶುಷ್ಕ ತರ್ಕಗಳ ಮೇಲೆ ಉಗುಳಿಭಕ್ತಿಜ್ಞಾನಗಳಿರಲಿ ಮಿಕ್ಕ ಪಥದಿಂ ಮರಳಿಮುಕ್ತಿಮಾರ್ಗದಲಿನ್ನು ತೆರಳಿ 12 ಕೊಳ್ಳೆನಾಯಕ ಬಂದು ಕೋಟೆಗಡರದ ಮುನ್ನಕಳ್ಳರೈವರ ಕಾಟದಿಂದಉಳ್ಳ ಪುಣ್ಯಾರ್ಥಗಳು ಕೊಳ್ಳೆ ಹೋಗದ ಮುನ್ನಫುಲ್ಲನಾಭದಲಿ ಬಚ್ಚಿಡಿರೊ 13 ಮಲಮೂತ್ರರಕ್ತಮಾಂಸದ ರಾಸಿಗಳು ಕೂಡಿಎಲುವಿನ ಬಿಲದಲ್ಲಿ ಗೂಡಮಾಡಿಬೆಳೆಸಿದೀ ತನುವೆಂಬ ನರಕದಾಸೆಯ ಬಿಟ್ಟುಜಲಜನಾಭನ ಸೇರಿಕೊಳ್ಳಿರೊ14 ಒಂಬತ್ತು ಛಿದ್ರವುಳ್ಳ ದೇಹವೆಂಬ ಮಡಕೆಯಲ್ಲಿತುಂಬಿದ ವಾಯು ಸ್ಥಿರವೆಂದುನಂಬಿಕೊಂಡಿರಬೇಡಿ ಹಯವದನ ಹರಿಯ ಪಾ-ದಾಂಬುಜವ ಸೇರಿ ಬದುಕಿರೊ 15
--------------
ವಾದಿರಾಜ
ಗೃಹಸಮರ್ಪಣೆ ಪುರುಷಾರ್ಥದಾಯಿ ಶ್ರೀವರ ನೀ ನಿಲಯದಿ ಸ್ಥಿರವಾಗು ಕರುಣಾನಿಧೆ ವರದೇಶ ನಿಜಪಾದ ಸರಸೀಜ ಮಕರಂದ ನಿತ್ಯ ಪ. ಆವ ಕಾಲಕು ಸಿರಿದೇವಿಯರಸ ನೀನೆ ಕಾವಲಾಗಿರುವಿ ಎಂದು ಭಾವಶುದ್ಧದಿ ನಿನ್ನ ಸೇವಾರತಿಯನಿತ್ತು ಪಾವನಗೊಳಿಪ ಬಂಧು ಕಾರುಣ್ಯಸಿಂಧು ವಿರಿಂಚಿ ಭವಾಹಿ ವಿಪತಿ ಸು- ರಾವಳೀಶಯವೆಂದು ರವಿಮುಖ ದೇವ ಋಷಿಗಣ ದೇವ್ಯ ನಿನ್ನ ಕ- ನಿತ್ಯ ಬಯಸುವೆ 1 ನಿನ್ನ ಕಟಾಕ್ಷ ಸಂಪೂರ್ಣವಾಗಿರಲೆನ- ಗನ್ಯರ ಭಯವಿಲ್ಲವು ಪರಮ ಸುಗು- ಣಾರ್ಣವ ನಿನಗೆಲ್ಲವು ತಾ ಸೇರಿರುವವು ಪನ್ನಗಾರಿ ಧ್ವಜ ಪರೇಶ ಮ- ಹೋನ್ನತಿ ಪ್ರದ ಮೂಜಗದ್ಭವ ನಿನ್ನ ದಾಸರದಾಸನೆಂದರಿ- ದೆನ್ನ ಮೇಲ್ಕಡೆಗಂಣನಿರಿಸುತ 2 ಪಂಕಜಾಲಯ ಭೂವರ ಕಿಂಕರಾಧಾರನಿ:- ಶಂಕ ಕೃಪಾಕರ ಅಂಕಿತ ಕೊಡು ಸಾದರ ಬಲಭದ್ರ ಸೋದರ ಶಂಕರನೆ ಶುಭಕರ ಕಮಲವನು ಶಂಕಿಸಿದೆ ಶಿರದಲ್ಲಿ ಕಲ್ಪಿಸಿ ಅಂಕುರಿತ ಭಯ ಬಿಡಿಸು ಸಕಲಾ- ಶಂಕವಾರಣ ವೆಂಕಟೇಶ್ವರ 3
--------------
ತುಪಾಕಿ ವೆಂಕಟರಮಣಾಚಾರ್ಯ
ಗೋದಾವರಿ ಎನಗೆ ಶ್ರೀಧರನ ತೋರೆ ಪ. ನೀ ದಯದಿ ಸಲಹೆನ್ನ ಮಾಧವಗೆ ಪ್ರಿಯೆ ಅ.ಪ. ಸ್ವಚ್ಛವರ್ಣಳೆ ಬಹು ಹೆಚ್ಚಾಗಿ ಪರಿಯುವಳೆ ಮುಚ್ಚಿರುವ ಮಲಗಳನು ದೂರಮಾಡೆ ಅಚ್ಯುತನ ಪದವೀವ ಹೆಚ್ಚಿನಾ ಜ್ಞಾನವನು ಸ್ವಚ್ಛತನದಲಿ ಕೊಟ್ಟು ಮೆಚ್ಚಿ ಎನ್ನನು ಸಲಹೆ 1 ಧರೆಯ ಜನರು ನಿನ್ನೊಳ್ ಬರುತ ಮಲಗಳ ತೊಳೆಯೆ ಅರಿತು ಅದನು ಮನದಿ ಪರಿಹರಿಸಿಕೊಳಲು ಪರಮ ಭಾಗವತರ ವರ ಮಂದಿರಕೆ ಪೋಗಿ ವರಹ ವೆಂಕಟಗಿರಿಯೊಳ್ ಸ್ಥಿರವಾಗಿ ನಿಂತೆ 2 ಬರುತ ದಾರಿಯೊಳೆನಗೆ ಸ್ವಪ್ನದಲಿ ತೋರಿದೆ ವರ ದಿವ್ಯರೂಪವನು ನಾರಿಮಣಿಯೆ ಸರಿಗೆ ಕಂಕಣ ಮುತ್ತಿನಾ ಬುಗುಡಿಯನೆ ಧರಿಸಿ ವರ ಮುತ್ತೈದೆಯರಿಬ್ಬರಂದದಲಿ ತೋರಿದೆ 3 ಮುಕ್ಕೋಟಿ ಗಂಧರ್ವ ದೇವರ್ಕಳೂ ಬರುತಿರಲು ಅಕ್ಕರದಿ ತಂಗಿಯನೆ ಒಡಗೂಡುತ ಲಕ್ಕುಮಿ ಸ್ವಾಮಿ ಶ್ರೀ ಪುಷ್ಕರಣಿ ಸಾರಿರಲು ಉಕ್ಕುವೋ ಉಲ್ಲಾಸದಿಂದ ತೆರಳಿದೆಯೆ 4 ಜಿಷ್ಣು ಸಖನ ದಿವ್ಯ ಪಟ್ಟಣವ ಸೇರಲು ಕೃಷ್ಣವೇಣಿಯ ಒಡಗೂಡಿ ವಿಷ್ಣುಪಾದೋದ್ಭವೆಗೆ ಸರಿಯೆನಿಸಿ ಗೋಪಾಲ ಕೃಷ್ಣವಿಠ್ಠಲನ ಬಹುನಿಷ್ಠೆಯಿಂ ಧ್ಯಾನಿಸುವೆ 5
--------------
ಅಂಬಾಬಾಯಿ
ಗೋವಿಂದ ನಿನ್ನಾನಂದದಲ್ಲಿಡೋ ಗೋವಿಂದ ಪ ಗೋವಿಂದ ಹೃದಯಾರವಿಂದದಲ್ಲಿ ಇಂದೂ ಮುಂದೂ ಚರಣಾರವಿಂದ ತೋರೊ ಅ.ಪ ಬೆಟ್ಟದ ದರುಶನ ಲಾಭವು ಕಷ್ಟ ಪಟ್ಟರು ದೊರೆಯಲಸಾಧ್ಯವು ನೋಡೆ ಸುಟ್ಟು ಹೋಗುವುದಘರಾಶಿಯು ಪಟ್ಟ ಶ್ರಮವು ಇಷ್ಟಾರ್ಥವು ದಿಟ್ಟ ಮನವ ಕೊಟ್ಟು ಅಟ್ಟುರಿಯ ಕಳೆದು ಮೆಟ್ಟು ಮೆಟ್ಟಲನೇರಿ ದಿಟ್ಟಿಪರೋ ನಿನ್ನ1 ಪದುಮಜಾಂಡ ಕೋಟಿ ನಾಯಕ ದೇವ ಶ್ರೀದ ಸೃಷ್ಟಾದ್ಯಷ್ಟ ಕರ್ತೃ ನೀನೆ ಆದ್ಯಂತ ಜಗದಾಧಾರಕ ಅಂತರಾತ್ಮಕ ವಿಶ್ವವ್ಯಾಪಕ ಆದಿಮೂಲ ಚತುಷ್ಪಾದ ಎಂದೆನಿಸಿ ತ್ರಿ- ಪಾದ ಇಳೆಯೊಳಿಟ್ಟೆ 2 ಸದಮಲಾತ್ಮಕನೇ ದೇವ ಸರ್ವದಾ ಎಲ್ಲಾ ಹದಿನಾಲ್ಕು ಲೋಕವ ಧರಿಸಿದೆ ದಿವ್ಯ ನೆಲೆಸಿದೆ ಸರ್ವರ ಹೃದಯದ ಪದುಮದಲಿ ಪೊಳೆದು ತ್ರಿಜಗವಂದಿತನಾಗಿ ಮೇದಿನಿಯೊಳು ಮೆರೆಯುತಿಹೆ 3 ಧ್ವಜವಜ್ರಾಂಕುಶಯುಕ್ತಲಾಂಛನ ದೆÉೀವ ಅಬ್ಜಭವಾರಾಧ್ಯ ಚರಣದಿವ್ಯ- ಅಬ್ಜಸಖಕೋಟಿಕಿರಣ ಪಾದಾಭರಣದಿಂದ ಕಿರಣಾ ತಾ ಝಗಝಗಿಸುತ್ತ ನೂಪುರ ಕಾಲಂದಿಗೆ ಗೆಜ್ಜೆ ಸಜ್ಜುಗೊಂಡಿಹ ಮೂರ್ಜಗದೊಡೆಯನೆ ಹರಿ 4 ತಟಿತಕೋಟಿನಿಭಸಮಕಾಯ ಕಟಿಯ ದಿವ್ಯರತ್ನಖಚಿತದಟ್ಟಿಯಾ ತೊಟ್ಟ ಪಟ್ಟೆಪೀತಾಂಬರ ಬಟ್ಟೆಯಾ ಸೊಂಟಪಟ್ಟಿಯ ಇಟ್ಟ ಪರಿಯಾ ಅಟ್ಟಹಾಸದಿ ನಿಂದ ಸೃಷ್ಟಿಗೊಡೆಯ ಮನೋ- ಭೀಷ್ಟದಾಯಕ ಬೆಟ್ಟದೊಡೆಯನೆ 5 ಕರಚತುಷ್ಟಯದಲ್ಲಿ ಮೆರಯುವಾ ಶ್ರೀ ಸು- ದರ್ಶನ ಶಂಖದಿಂದಿರುವಾ ದೀನ ಶರಣಜನರಿಗಭಯ ಹಸ್ತವಾ ಕರೆದು ನೀಡುವ ಕಾಮಿತಾರ್ಥವ ಪರಿಪರಿ ಭಾಪುರಿ ಭುಜಗಾಭರಣಾದಿಗಳ ಧರಿಸಿರುತ ಭಕ್ತಜನರಘ ಹರಿಸುವಾ6 ವಕ್ಷಸ್ಥಳದಲ್ಲಿ ಶ್ರೀವತ್ಸವೂ ಕಂಠ ದಕ್ಷಿಣದಲ್ಲಿ ತೋರ ನಕ್ಷತ್ರದಂತಿಹ ಹಾರವೂ ಕುಕ್ಷಿ ಅಂದವೂ ಮೋಕ್ಷದಾತೃವು ಅಕ್ಷರ ವಾಚ್ಯತ್ರ್ಯಕ್ಷಾದಿ ಸುರವಂದ್ಯ ಈ ಕ್ಷಿತಿಗಿಳಿದು ಪ್ರತ್ಯಕ್ಷನಾಗಿ ನಿಂದೆ 7 ಮಂದಹಾಸಮುಖ ಅರವಿಂದ ದಂತ ಚಂದಕರ್ಣಕುಂಡಲದಿಂದ ಕೆಂದುಟಿಯಿಂದ ಒಪ್ಪುವ ಚೆಂದ ಪೊಂದಿ ಮಕುಟ ಸರ್ವಾಲಂಕಾರ ಪರಿಪೂರ್u ಬಂಧ ಮೋಚನ ಹರಿ ಶ್ರೀ ವೇಂಕಟೇಶನೆ 8 ಪರಿಪರಿ ಮುಕ್ತಜೀವರುಗಳು ಇಲ್ಲಿ ಪರಿವಾರ ತರುಲತೆ ಶಿಲೆಗಳು ಇನ್ನು ವಿರಜೆ ಮೊದಲಾದ ಸರ್ವತೀರ್ಥವು ಸ್ವಾಮಿ ತೀರ್ಥವೂ ಮೋಕ್ಷದಾತೃವೂ ಭವ ಶಕ್ರಾದಿನುತಉರಗಾದ್ರಿವಾಸವಿಠಲ ಜಗದೀಶನೆ 9
--------------
ಉರಗಾದ್ರಿವಾಸವಿಠಲದಾಸರು
ಗೋವಿಂದ ರಾಮ ಗೋವಿಂದ ಹರೇ ಗೋವಿಂದ ನಾರಾಯಣ ಕಾಯ್ದೆ ಶ್ರೀ ಕೃಷ್ಣ ಪ ಜಾನಕಿಯ ಕೈವಶ ಮಾಡಿದೆ ಶ್ರೀ ರಾಮ ಸಂಹರಿಸಿದೆ ಶ್ರೀ ಕೃಷ್ಣ 1 ಪರಾಕ್ರಮವನು ತಮಿಸಿದೆ ಶ್ರೀ ರಾಮ ಮರೆದೋಚಿತೆಗೆದುಂಡೆ ಶ್ರೀ ಕೃಷ್ಣ2 ಸ್ತ್ರೀರೂಪವ ಮಾಡಿದೆ ಶ್ರೀ ರಾಮ ಧುಮುಕಿ ಹೆಡೆಯ ಮೆಟ್ಟಿ ವಾರಿಧಿಗಟ್ಟಿದೆ ಶ್ರೀ ಕೃಷ್ಣ ಮುಕ್ತಿಯನಿತ್ತೆ ಶ್ರೀ ಕೃಷ್ಣ 3 ವನವಾಸವ ಮಾಡಿದೆ ಶ್ರೀರಾಮ ಕರುಣದಿ ಶ್ರೀ ಕೃಷ್ಣ 4 ಕಪಿಗಳ ನೆರಹಿ ಖಳನ ಕೊಂದೆ ಶ್ರೀ ರಾಮ ಶರಣಗೆ ಪಟ್ಟವ ಕಟ್ಟಿ ಇರಿಸಿದೆ ಸ್ಥಿರವಾಗಿ ಶ್ರೀ ರಾಮ ಮೆರೆದನು ಶ್ರೀ ರಾಮ ಶ್ರೀ ಕೃಷ್ಣ 5
--------------
ಕವಿ ಪರಮದೇವದಾಸರು
ಗೋವಿಂದ ವಿಠಲ ನಿನ್ನ ವಂದಿಸುವೆ ಸ್ವಾಮಿನೀ ಒಲಿದು ರಕ್ಷಿಸುವುದು ಜೀವಿ ಇವ ಬಹುಕಾಲಸಾವ ಸಾವ ನಿನ್ನ ಸೇವೆಯೊಳಗೆ ಇಟ್ಟು ಕಾವುದು ನಿರುತ ಪ. ಆವ ಈ ಯುಗದಲ್ಲಿ ನಿನ್ನ ವಿಷಯರಾಗಿಈವ ಸುಜನರು ಸ್ವಲ್ಪರು ತಾ ವ್ಯಾಪಿಸಿ ಇಹರುಅಸುರರೆ ಬಹುಳಾಗಿ ಆವದವಸ್ಥೆಗಳಲಿನೀ ವರವನು ಕಲಿಗೆ ಇತ್ತ ಕಾರಣ ಉಪಜೀವರ ವ್ಯಾಪಾರಈ ವಿಧದಲಿ ತಳೆದು ನಿನ್ನ ಹುಡುಕುತಲಿನ್ನುಜೀವಿ ಸಾತ್ವಿಕನು ಮೊರೆಯಿಡಲು ಬಿನ್ನಯಿಸಿದೆನೊ 1 ಏನು ಸಾಧನವನು ಖೂಳವನು ಕಂಡಿನ್ನುನೀನು ವಂದಿಸಿವೆಂದರೆ ಜ್ಞಾನಭಕುತಿ ಉಳ್ಳಜ್ಞಾನಿಗಳಲಿವಗೆ ನಾನು ಕಂಡೆನು ಭಕುತಿಯಕ್ಷೋಣಿಯಲಿ ಭಕುತಿ ನಿನ್ನಲಿ ಪುಟ್ಟಲಿಬಹುದುಜ್ಞಾನಿಗಳ ದುರ್ಲಭ ನೀನು ಒಲಿವುವ ಅವಗೆನಾನವರಲಿ ಭಕುತೀವೆ ನಾನಾಸಾಧನ ಫಲವಿದೆ ನೋಡಾ 2 ಪ್ರಾರ್ಥಿಸುವೆ ನಾ ನಿನ್ನ ಪ್ರೇರಣೆಯ ಅನುಸಾರಕೀರ್ತಿ ನಿನ್ನದು ಜಗದೊಳು ಪಾತ್ರ ಇವನೆಂದುನಿನ್ನ ಚಿತ್ತದಲಿ ಇತ್ತೆ ಸಾರ್ಥಕನ ಮಾಡು ಚೆಂ ಸ್ವಾ ?ಕೀರ್ತನೆಯ ಮಾಡಿಸು ನಿನ್ನ ಪರವಾಗಿ ನಿಜಸ್ಫೂರ್ತಿಸಖರಂಗ ಗೋಪಾಲವಿಠಲ ಶ್ರುತಿಶಾಸ್ತ್ರಾರ್ಥವನುಸಾರ ಪ್ರಾಪ್ತಿ ನೀನಾಗಿವಗೆ3
--------------
ಗೋಪಾಲದಾಸರು
ಗೋವಿಂದ ಸಲಹೆನ್ನನು - ಸದಾನಂದಗೋವಿಂದ ಸಲಹೆನ್ನನು ಪ ಗೋವಿಂದ ಸಲಹೆನ್ನ ಕುಮುದಲೋಚನ ನಿನ್ನಸೇವಕರಡಿಯ ಸೇವಕನಯ್ಯ ಗೋವಿಂದ ಅ ಅಚ್ಯುತ ಸರ್ವೋ-ತ್ತಮನೆ ಚಿನ್ಮಯ ಗೋವಿಂದ - ನಿಶ್ಚಲಭಕ್ತಿಕ್ರಮವ ಬೋಧಿಸೊ ಗೋವಿಂದ - ಪಾಪವನೆಲ್ಲಶಮನಗೊಳಿಪ ಗೋವಿಂದ - ಲಕ್ಷ್ಮೀರಮಣನಮೋ ದಶಾವತಾರಿ ಗೋವಿಂದ 1 ಮನವೆನ್ನ ಮಾತು ಕೇಳದು ಕಾಣೊ ಗೋವಿಂದಮನವ ಗೆಲ್ಲುವ ಬಲ ಎನಗಿಲ್ಲ ಗೋವಿಂದಕನಸಿನಂತಿಹ ದೇಹ ಸ್ಥಿರವಲ್ಲ ಗೋವಿಂದಬಿನುಗು ಬುದ್ಧಿಗಳ ಬಿಡಿಸಯ್ಯ ಗೋವಿಂದನೆನಹು ನಿನ್ನೊಳಗಿಟ್ಟು ನಡೆಸಯ್ಯ ಗೋವಿಂದನೆನೆವ ದಾಸರ ಮನದೊಳಗಿರ್ಪ ಗೋವಿಂದವನಜಲೋಚನ ನಾ ನಿನ್ನವನಯ್ಯ ಗೋವಿಂದಘನ ಮಹಿಮನೆ ನಿನ್ನ ಮೊರೆಹೊಕ್ಕೆ ಗೋವಿಂದಮುನಿಗಳ ಮನದೊಳು ಮಿನುಗುವ ಗೋವಿಂದನಿನಗಲ್ಲದಪಕೀರ್ತಿ ಎನಗೇನೊ ಗೋವಿಂದಜನನ ರಹಿತ ಗೋವಿಂದ - ನಿನ್ನಡಿಗಳನೆನವು ಕೊಡೊ ಗೋವಿಂದ - ದುರ್ವಿಷಯ ವಾ-ಸನೆಯ ಬಿಡಿಸೊ ಗೋವಿಂದ - ಕುತ್ಸಿತ ಕೆಟ್ಟತನವ ಬಿಡಿಸೊ ಗೋವಿಂದ - ಸದ್ಗುಣವೆಂಬಧನವ ತುಂಬಿಸೊ ಗೋವಿಂದ - ಇದಕ್ಕೆ ಬಡ-ತನವೆ ನಿನಗೆ ಗೋವಿಂದ - ಸದಾ ನಿನ್ನಘನ ಸ್ಮರಣೆ ಕೊಡು ಗೋವಿಂದ - ಸನಕಸನಂದನಾರ್ಚಿತ ಗೋವಿಂದ 2 ಕಿನ್ನರ ಸನ್ನುತ ಗೋವಿಂದ - ಅಪರಿಮಿತಕರುಣಾಸಾಗರ ಗೋವಿಂದ - ಅರಿಯದಂಥಪರಮ ಜ್ಯೋತಿಯೆ ಗೋವಿಂದ - ಗಂಗೆಯ ಪೆತ್ತಚರಣ ನಿರ್ಮಲ ಗೋವಿಂದ - ತೆತ್ತೀಸ ಕೋಟಿಸುರರ ಪೊರೆವ ಗೋವಿಂದ - ಶ್ರೀವೈಕುಂಠಪುರದೊಳಗಿಹ ಗೋವಿಂದ - ಅಚ್ಯುತಾನಂತತಿರುಪತಿ ನೆಲೆಯಾದಿ ಕೇಶವ ಗೋವಿಂದ 3
--------------
ಕನಕದಾಸ
ಘನ ಲಂಪಟಗೆಲ್ಲಿಹುದು ಗುರುಕೃಪೆ ಜ್ಞಾನ ತನು ಲಂಪಟಗೆಲ್ಲಿಹುದು ತನ್ನೊಳು ಖೂನ ಧ್ರುವ ವಿಷಯ ಲಂಪಟಗೆಲ್ಲಿಹುದು ತಾ ವಿರಕ್ತಿಯು ದೆಸೆಗೆಟ್ಟವಗೆಲ್ಲಿಹುದು ಯುಕ್ತಿಯು ಮುಸುಕಿದ ಮಾಯದವಗೆಲ್ಲಿಹುದು ಮುಕ್ತಿಯು ಹುಸಿಯಾಡುವಂಗೆಲ್ಲಿಹುದು ಋಷಿ ಭಕ್ತಿಯು 1 ಮರುಳಗುಂಟೆ ಅರುಹ ರಾಜಸನ್ಮಾನದ ತರಳಗುಂಟೆ ಭಯವು ಘಟಸರ್ಪದ ಮೃಗ ಜಲವೆಂಬುವದ ಸೂರಿಗೆ ಉಂಟೆ ಮಾತು ಚಾತುರ್ಯದ 2 ಕನಸ ಕಾಂಬುವಗೆಲ್ಲಿಹುದು ತಾನಿರುವ ಸ್ಥಾನ ಮನದಿಚ್ಛೆಲಿದ್ದವಗೆಲ್ಲಿಯ ಧ್ಯಾನ ದೀನ ಮಹಿಪತಿ ಸ್ವಾಮಿ ಕಾಣದವಗೆಲ್ಲಿ ಘನ ಅನುಭವಿಸಿಕೊಳ್ಳದೆ ಜನ್ಮಕ ಬಂದದ್ದೇನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಚಂಚಲಿಸಲು ಕೊಡದಿರು ನೀನೆನ್ನ ಮನಕೆ ಶ್ರೀಹರಿಯೇ ಪ ವಂಚಿಸುತಿಹುದೀ ಮನವು ಸ್ಥಿರಗೊಳಿಸಲರಿಯೇ ಅ.ಪ. ನಿನ್ನ ಪದದಿ ಏನಿರಿಸೆ ಇನ್ನು ಭಜಿಸಬೇಕೆಂದರೆಭಿನ್ನ ದೆಸೆಗೆ ಓಡಿಸದೆ ಅನ್ಯವನ್ನೆ ಚಿಂತಿಸುವುದು 1 ಕಡಲ ಕಡಿಯುವಾಗ ಗಿರಿಯು ನಡುಗದಂತೆ ಗಟ್ಟಿ ನಿಂತುಹಿಡಿದ ತೆರದೊಳಡಲ ಹೊಕ್ಕು ಜಡಿದು ಎನ್ನ ಮನದಿ ನಿಂದು 2 ಸದಾ ಭಜಿಸುವಂತೆ ಮಾಡೋ ಗದುಗು ವೀರನಾರಾಯಣ 3
--------------
ವೀರನಾರಾಯಣ
ಚರಣದಾಸರ ಸದುಹೃದಯ ನಿವಾಸನೆ ಸಿರಿರಾಮ ಪರಮ ಪಾವನೆ ವರಜಾಹ್ನವೀ ಜನಕನೆ ಸಿರಿರಾಮ ಪ ಶರಣಜನರ ಮೇಲ್ನುಡಿಯೋಳ್ಸಂಚಾರನೆ ಸಿರಿರಾಮ ನೆರೆನಂಬಿ ಭಜಿಪರ ಭವಮಲಹರಣನೆ ಸಿರಿರಾಮ ಕರುಣದೊದೆದು ಯುವತಿಕುಲವನುದ್ಧರಿಸದನೆ ಸಿರಿರಾಮ ವರದ ವಾಸುಕಿಶಾಯಿ ಜಗದೇಕ ಬಂಧುವೇ ಸಿರಿರಾಮ 1 ಧುರಧೀರವಾಲಿಯ ಗರುವನಿವಾರನೆ ಸಿರಿರಾಮ ಮರೆಬಿದ್ದ ಸುಗ್ರೀವನ ದು:ಖಪರಿಹಾರನೆ ಸಿರಿರಾಮ ಪರಮಭಕ್ತ್ಹನುಮಗೆ ಕರವಶನಾದನೆ ಸಿರಿರಾಮ ಶರಣುಬಂದಸುರಗೆ ಸ್ಥಿರಪಟ್ಟವಿತ್ತನೆ ಸಿರಿರಾಮ 2 ಶರಧಿಮಥನಮಾಡಿ ಸುರರ ರಕ್ಷಸಿದನೆ ಸಿರಿರಾಮ ಹರನಕೊರಳ ಉರಿ ಕರುಣದ್ಹಾರಿಸಿದನೆ ಸಿರಿರಾಮ ವರಗಿರಿನಂದನೆಮನ ಸೂರೆಗೈದನೆ ಸಿರಿರಾಮ ಸರುವದೇವರದೇವ ಅದ್ಭುತಮಹಿಮನೆ ಸಿರಿರಾಮ 3 ಕರಿಯ ರಕ್ಷಣೆಗಾಗಿ ಕಾಸಾರಕ್ಕಿಳಿದನೆ ಸಿರಿರಾಮ ತರುಣಿಮೈಗಾವಗೆ ಚರನಾಗಿ ನಿಂತನೆ ಸಿರಿರಾಮ ಚರಣದಾಸರಮನೆ ತುರಗವ ಕಾಯ್ದನೆ ಸಿರಿರಾಮ ಪರಮಭಾಗವತರನರೆಲವ ಬಿಟ್ಟಿರನೆ ಸಿರಿರಾಮ 4 ಅನುಪಮ ವೇದಗಳಗಣಿತಕ್ಕೆ ಮೀರಿದನೆ ಸಿರಿರಾಮ ಸನಕಸನಂದಾದಿ ಮನುಮುನಿ ವಿನಮಿತನೆ ಸಿರಿರಾಮ ವನರುಹ ಬ್ರಹ್ಮಾಂಡ ಬಲುದರದಿಟ್ಟಾಳ್ವನೆ ಸಿರಿರಾಮ ಮನಮುಟ್ಟಿ ಭಜಿಪರ ಘನಮುಕ್ತಿ ಸಾಧ್ಯನೆ ಸಿರಿರಾಮ 5
--------------
ರಾಮದಾಸರು
ಚರಣವೆಂಬ ದುರ್ಗಮ ದುರ್ಗ ಸೇರಿದೆ ನಿಜಭಕ್ತ ಜನರಿಗೆ ಆಭಯವ ಕೊಡುವಂಥ ಧ್ವಜವುಳ್ಳ ಪುರವಿದು ಪರರಿಗಸಾಧ್ಯ 1 ತನ್ನ ನಂಬಿದ ಇಂದ್ರ ಗಣಪತಿ ಇಹರೆಂದು ಚನ್ನ ವಜ್ರಾಂಕುಶ ಧರಿಸಿದೆ ನಿಧಿ ಪೂರ್ಣ 2 ನಿತ್ಯ ನಿರ್ಮಲವಿದು ಅಜ ಮೊದಲಾದವರು ಇಲ್ಲೆ ಸೇರುವರಯ್ಯ 3 ಕೆಳಗ ರವಿಯ ಕಾಂತಿ ಮ್ಯಾಲರ್ಧಾ ಶಶಿ ಛವಿ ಸ್ಥಳವಿದೆ ಭಾಗ್ಯಾಭಿಮಾನಿ ದೇವತೆಗೆ 4 ಸವಿಯಾದ ನದಿ ಇಲ್ಲಿ ಜನಿಸಿದೆ ಫಲ ಪದ್ಮ ಯವ ಮೊದಲಾದವಿವೆ ವಾಸುದೇವವಿಠಲನ್ನ ಚರಣವೆ 5
--------------
ವ್ಯಾಸತತ್ವಜ್ಞದಾಸರು
ಚರಿತೆಯ ಪೇಳಬೇಕೆ ಪ ಕೊರತೆಗಳೆಣಿಸದೆ | ಸ್ಥಿರಸುಖದೊಳು ಬಾಳಿ ಅ.ಪ ಚದುರ ಚೆನ್ನಿಗ ಮುದ್ದು | ಪದುಮದಳಾಕ್ಷನ 1 ಕಾಲಿನೊಳೊದೆದೆಲ್ಲ | ಶ್ರೀಲೋಲನುಣಲೊಲ್ಲ 2 ಹರಿಣಾಕ್ಷಿಯರಿರೇನು | ಮರುಳರಂತೊರೆವಿರೆ 3 ಮೆಚ್ಚಿನ ಮಾತಿದು | ಸಚ್ಚರಿತವಿದೆಂದು 4 ಬಿಗಿವೆ ಸದಾನಂದ | ವಾಗಲಿ ನಿಮಗೆಲ್ಲ 5
--------------
ಸದಾನಂದರು