ಒಟ್ಟು 791 ಕಡೆಗಳಲ್ಲಿ , 89 ದಾಸರು , 684 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಜಿಯಿದ್ದೋರೆಲ್ಲ ಕೇಳ್‍ಬಹುದಣ್ಣ ಪೂಜೆ ಮಾಡೋ ಇದ ಹೇಳತೀನಣ್ಣ ಪ ಸಾಜದ ಹಾದಿಲಿ ಬಾಳ್ಯವ್ರಣ್ಣ ಅ.ಪ ಹಾಸಿಗೇಲಿ ತಿಂಡಿ ತಿನಬಾರ್ದಣ್ಣ ಮೋಸದ ಯೋಚನೆ ಯಿರಬಾರ್ದಣ್ಣ ಕಾಸಿಗೆ ಸುಳ್ಳ ಯೋಳ್ಬಾರದಣ್ಣ 1 ನಾಮ ಇಬೂತಿಯ ಅಣೆಗಚ್ರಣ್ಣ ರಾಮಾ ನಿನ್ಪಾದ್ವೇಗತಿಯೆನ್ನಣ್ಣ 2 ಮಣ್ಣಿನ ಭೂಮಿಯ ನಂಬದಿರಣ್ಣ ಸಣ್ಣ ಕೃಷ್ಣನೇ ಗತಿಯೆನ್ನಣ್ಣ 3 ನೋಡುವ ಕಣ್ಗಳ ಮನದಲಿಡಣ್ಣ ನೋಡದರಲಿ ಹೊಳೆ ಹೊಳೆವಾಬಣ್ಣ 4 ಅದರ ಮೇಲೆಳ್ಡು ಕಾಲ್ಗಳ ನೋಡಣ್ಣ ಮದನ ಗೋಪಣ್ಣನು ಕಾಣುವನಣ್ಣ 5 ಮಡಿಯ ಪೀತಾಂಬ್ರದವುಡಗೆಯ ನೋಡಣ್ಣ ಹಿಡಿದೆತ್ತಿದ ಕೈಕೊಳಲನು ನೋಡು 6 ಮುಡಿಯ ಕಿರೀಟದ ಹೊಳಪನು ನೋಡು ನಡುಹಣೆಯ ನಿಡು ತಿಲಕವ ನೋಡು ಕಡೆನೋಟದ ಕಣ್ಮಿಂಚನು ನೋಡು 7 ಅಂಬರದಂತೆ ಸರೀರವ ನೋಡು ನಂಬಿಕೆಯಲಿ ಸರಣಾರ್ತಿಯ ಮಾಡು 8 ಬೋಗಾನಂದವ ಪಡಿತೀಯಣ್ಣ ಕೂಗಿಗೆ ಬರುವನು ಮಾಂಗಿರಿಯಣ್ಣ 9
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಾಜೋಪಚಾರರಾಜೋಪಚಾರರಾಜೀವನೇತ್ರ ನೀನವಧರಿಸು ಬೇಗ ಪಸಾವಿರದ ದಳವುಳ್ಳ ಕಮಲವೊಂದಕೆ ಶಕ್ತಿಸಾವಿರದ ಮೌಕ್ತಿಕದ ಸರಗಳೊಪ್ಪಿಹವುಕಾವಿಹುದು ಸಕಲ ದೇವಾತ್ಮಕದ ಶಾರದೆಯುನಾ ವಹಿಸಿ ತುರಿಯ ಕಲಶದ ಛತ್ರವೆಂದೆಂಬ 1ಆವಗವು ಸತ್ವಾದಿ ಗುಣಗಳಿಂದೊಪ್ಪಿರುವಆವರಣ ವಿಕ್ಷೇಪ ಶಕ್ತಿಯೆಂಬೆರಡುದೇವ ನಿನ್ನುಭಯ ಪಾಶ್ರ್ವದಲೊಲವುತಿಹ ಸರ್ವಭಾವದಿಂದುಭಯ ಚಾಮರವೆರಡರಿಂದ 2ಗಂಧರ್ವ ನಗರದಿಂದೈತಂದ ನಾರಿಯರುಛಂದದಿಂ ನರ್ತಿಸುತಲಿಹರೈವರಿವರುಒಂದಾಗಿ ಬಳಿಕಿವರ ಹೊಂದಿ ಮತ್ತೈವರಿರೆಹಿಂದೆ ನಾಲ್ವರುವೆರಸಿ ನಲಿವ ನರ್ತನವೆಂಬ 3ಪರವೆಂದು ನಾಭಿಯಲಿ ಪಶ್ಯಂತಿ ಹೃದಯದಲಿಸ್ವರವಿಹುದು ಕಂಠದಲಿ ಮಧ್ಯಮಾಖ್ಯೆಯಲಿಸ್ಫುರಿಸಿ ಮುಖಕಮಲದಲಿ ವೇದಶಾಸ್ತ್ರಗಳಾಗಿಮೆರೆವ ವೈಖರಿಯೆಂಬ ಗೀತವಿದ ಕೇಳು 4ತಾಳ ಮರ್ದಳೆ ಘಂಟೆ ಭೇರಿ ಶಂಖಗಳಿಂದಮೇಲಾದ ವೀಣೆ ವೇಣುಗಳ ರವದಿಂದಲಾಲಿಸುವ ಛಿಣಿ ಛಿಣೀ ಛಿಣಿಗಳೆಂಬವರಿಂದನೀಲ ಮೇಘಧ್ವಾನ ದಶನಾದದಿಂದ 5ಪರಿಪರಿಯ ಗತಿಯುಳ್ಳ ಚಿತ್ತವೆಂಬಶ್ವವನುವರ ಸತ್ವ ಗುಣವೆಂಬ ಹಲ್ಲಣವ ಬಿಗಿದುನಿರತ ಪರಮಾತ್ಮನೀಕ್ಷಣದ ಕಡಿವಾಣವನುಪಿರಿದಾಗಿಯಳವಡಿಸಿ ಮುಂದೆ ನಿಂದಿಹುದಾಗಿ 6ಒಲವುತಿಹ ಸುಖ ದುಃಖವೆರಡು ಘಂಟೆಗಳಿಂದನೆಲನ ಸೋಕುವ ಕಾಮ ಸುಂಡಿಲದರಿಂದಫಲ ಚತುಷ್ಟಯ ಪಾದ ಮೇಲು ಮಂಟಪದಿಂದಬಲುಮೆಯಹ ಮೂಲ ಕಾರಣವೆಂಬ ಗಜವು 7ಹಿಂದೆಮುಂದರುವರೊಂದಾಗಿ ವಹಿಸಿರಲದಕೆಹೊಂದಿಸಿದ ಚೌಕಿ ಮನವೆಂಬುದದರಲ್ಲಿಮಂದ ಮೃದು ಬಹು ವಿಷಯ ಸುಖದ ಹಾಸಿಕೆ ಹಾಸಿದಂದಳವಿದನುಭವದ ಕೊಂಬಿನಿಂದೊಪ್ಪಿರುವ 8ಆರು ನೆಲೆಯುಳ್ಳ ರಥವದಕೆ ಶಕ್ತಿಗಳೆಂಬಮೂರು ಕಲಶಗಳಲ್ಲಿ ನಾಲ್ಕು ಸತ್ತಿಗೆಯುಮೂರವಸ್ಥೆಗಳದರ ತುರಿಯವೆಂಬುದೆ ನಾಲ್ಕುಮೂರುಲೋಕವನಾಳ್ವ ಮಹಿಮ ನೀ ಪ್ರತಿಗ್ರಹಿಸು 9ನುಡಿವುದೆಲ್ಲವು ವೇದ ನಡೆವುದೆಲ್ಲವು ಶಾಸ್ತ್ರಬಿಡದೆ ನಿನ್ನಾಜ್ಞೆಯೊಳಗಿರೆ ಪುರಾಣದೃಢವಾಗಿ ನಿನ್ನ ಭಜನೆಯ ಮಾಳ್ಪ ದಿವಸವದುಕಡುಪುಣ್ಯವಾದ ಪಂಚಾಂಗವೆನಿಸುವದು 10ಉದಯದಲಿ ನಿನ್ನ ಸ್ಮರಣೆಯ ಮಾಡೆ ಪುಣ್ಯತಿಥಿಒದಗಿಸುವ ಸತ್ಕರ್ಮ ವಾರವೆನಿಸುವದುಅದರಲ್ಲಿಯನುಭವವೆ ನಕ್ಷತ್ರ ನಿನ್ನಲ್ಲಿಹುದುಗೆ ಜೀವನು ಯೋಗ ಹುದುಗುವದೆ ಕರಣ 11ಸಕಲ ವೇದಂಗಳಲಿ ಪ್ರತಿಪಾದಿಸಿದ ಫಲವುವಿಕಳವಿಲ್ಲದೆ ನಿನ್ನ ನಿಮಿಷ ಧ್ಯಾನಿಸಲುಸಕಲ ತೀರ್ಥಸ್ನಾನ ದಾನ ಜಪ ತಪ ಯಜ್ಞಸಕಲವೂ ಬಹುದೆಂಬ ಸರ್ವೋಪಚಾರ 12ಸುರ ಸಿದ್ಧ ಮುನಿವೃಂದ ನಿರತ ಸೇವಿತ ಚರಣಶರಣಾಗತೋದ್ದರಣ ಶರಧಿಜಾರಮಣತಿರುಪತಿಯ ಸ್ಥಿರವಾಸ ನಿರುಪಮ ಮಹಾಕರುಣಮರೆಯೊಕ್ಕೆ ಸಲಹೆನ್ನ ಪ್ರಾಣ ವೆಂಕಟರಮಣ 13ಓಂ ಜುನೇ ನಮಃ
--------------
ತಿಮ್ಮಪ್ಪದಾಸರು
ರಾಧೆ ಗೋಪಾಲ ಕೃಷ್ಣ ರಾಧೆಗೋಪಾಲ ರಾಧೆ ಗೋಪಾಲ ಕೃಷ್ಣ ರಾಧೆಗೋಪಾಲ ಪ ನಂದನಕಂದ ಮುಕುಂದಮುರಾರೆ ಇಂದಿವರಾಕ್ಷ ಗೋವರ್ದನಧಾರೆ ವೃಂದಾವನ ಸಂಚಾರ ವಿಹಾರೇ ಸಿಂಧುಶಯನ ಕ್ಷೀರಾಬ್ಧಿವಿಹಾರ 1 ಚಕ್ರಧರ ವೇಣುವಿನೋದ ಶಂಕರಾದಿ ವಂದಿತ ದಿವ್ಯಪಾದ ಬಿಂಕದಿಂದ ಕೊಳಲೂದುವನಾದ ಪಂಕಜಾದಿಗಳು ನಲಿವ ಸುಸ್ವಾದ 2 ಮಂದರಧರÀ ಗೋವರ್ಧನ ಧಾರಿ ಮಂದೆ ಗೋವತ್ಸವ ಕಾಯ್ವ ಶೌರಿ ಇಂದಿರೆಯರಸ ಶ್ರೀಹರಿಯೆ ಮುರಾರಿ ನಂದಯಶೋದೆಯ ಮೋಹದ ಶೌರಿ3 ವೃಂದಾವನದೊಳು ನಿಂದ ಗೋವಿಂದ ಮಂದಹಾಸ ಮುಖನಗೆ ಮೊಗದಿಂದ ಸುಂದರ ಗೋಪಿಯರೊಡಗೂಡಿ ಬಂದ ಮಂದರಧರ ಆನಂದ ಮುಕುಂದ 4 ಕಾಮನಪಿತ ಶ್ರೀ ಕಂಜಜನಾಭ ಕಾಮಿತ ಫಲಗಳ ಕರುಣಿಪ ಶ್ರೀಧ ಕಮಲನಾಭ ವಿಠಲ ನಿಮ್ಮ ಪಾದ ಕರುಣದಿ ನೆನೆವರ ಸಲಹುವಮೋದ 5
--------------
ನಿಡಗುರುಕಿ ಜೀವೂಬಾಯಿ
ರಾಮ ರಾಮ ರಾಮ ಹರೇ ರಘೂ ಪ ರಾಮ ಜಾನಕಿ ಪ್ರೇಮ ಕೃಪಾಂಬುಧಿ ಸ್ವಾಮಿ ಪರಂಧಾಮ ಸಾರುಚಿವರದಾ ಅ.ಪ ಪತಿತಪಾವನದೇವಾ ಸದ್ಭಕ್ತರ ಸತತ ಬಿಡದೆ ಕಾಯುವಾ ಮಹಾನುಭಾವ- ನತಿಶಯದಲಿ ಮನಹಿತದಲಿ ಅನುದಿನ ಸ್ತುತಿಯನು ಮಾಡುವರಿಗೆ ಗತಿ ಕಾಣಿಸುವಂಥ 1 ಅಂಡಜವಾಹನನೆ ಅನೇಕ ಭೂ ಮಂಡಲ ನಾಳುವನೆ ಮಣಿಯ ಮುಕುಟಧರನೆ ಉದ್ದಂಡ ರಕ್ಕಸರಳಿದ ಚಂಡಪರಾಕ್ರಮಿ2 ಪನ್ನಗಾದ್ರಿಯವಾಸಾ ಭಜಕರ ಪೋಷಾ ಶ್ರೀ ಹೆನ್ನವಿಠ್ಠಲ ವೇಶಾ ಪರಮೋಲ್ಹಾಸಾ ಚಿನ್ಮಯ ಮೂರುತಿ ಶ್ರೀ ಗೌರೀವರಪ್ರಿಯ ಮದನ ಜನಕ ಹರೆ 3
--------------
ಹೆನ್ನೆರಂಗದಾಸರು
ರಾಮಚಂದ್ರನೆ ನಿನ್ನ ನಾಮಮೃತವು ಎನ್ನ ನಾಲಿಗೆಯೊಳು ನಿಲಿಸು ಪ ದಾನವಾಂತಕ ನಿನ್ನ ಧ್ಯಾನ ಬಿಡದೆ ಇತ್ತು ದೀನ ರಕ್ಷಕ ಹರಿ ಜಾನಕಿ ರಮಣನೆ ಅ.ಪ ಕ್ಷೀರವಾರಿಧಿ ಶಯನ ಶ್ರೀ ಹರಿಯನು ಸ್ಮರಿಸುತ ಧ್ಯಾನವ ಮಾಡಿ ಭಕುತಿಲಿ ನಾರದ ಹರ ಬ್ರಹ್ಮಾದಿ ಋಷಿ ಗಂಧರ್ವರು ಸುರರೆಲ್ಲರು ಕೂಡಿ ಮಾರಮಣನ ಕೊಂಡಾಡುತ ಸ್ತೋತ್ರವ ಮಾಡಿ ಪಾರುಮಾಡು ಜಗದೀಶನೆ ಎನುತಲಿ ತವಕದಿ ಶ್ರೀ ಭೂರಮಣನು ದೀನರ ನುಡಿಗಳ ಕೇಳುತ ಆಲೋಚಿಸುತಲಿ ಬೇಗದಿ ಭೂನಾಥನ ಮನೆಯೊಳಗವತರಿಸುವೆ ಎನ್ನುತವರಿಗೆಲ್ಲಾಭಯವ ನೀಡಿದ 1 ದಶರಥನುದರದಿ ಜನಿಸಲು ನಾಲ್ವರು ಅಂದು ಯಾಗಕೆ ಕೌಶಿಕನಲ್ಲಿ ವಿದ್ಯೆಗಳನ್ನು ಕಲಿಯುತ ಬಂದು ಶಶಿಮುಖ ಜಾನಕಿ ಕರಪಿಡಿದನು ತಾನಂದು ಅಯೋದ್ಯದಿ ಎಸೆವ ಸಿಂಹಾಸನವೇರುವ ಸಮಯದಿ ಬಂದು ರಸಕಸಿ ಮಾಡಲು ಕೈಕೇಯಿಯು ತಾ ಶಶಿಮುಖ ಸೀತೆಯ ಒಡಗೂಡುತಲಿ ಬಿಸಿಲು ಗಾಳಿಮಳೆಯೊಳು ವನಚರಿಸುತ ಸತಿಯು ಬೇಡೆ ಮಾಯಮೃಗವ ಬೆನ್ನಟ್ಟಿದ 2 ಶಶಿಮುಖ ಸೀತೆಯ ದಶಶಿರನೊಯ್ಯಲು ಕೇಳಿ ದಶರಥಸುತ ಅರಸುತ ಬಲು ಶೋಕವ ತಾಳಿ ಚಿಂತಿಸಿ ಎಸೆವ ಗಿರಿ ಗುಹೆಗಳ ಹುಡುಕಲು ಮಾರುತಿ ನೋಡಿ ಮುದ್ರಿಕೆ ವಸುಧೆ ತನಯಳಿಗರ್ಪಿಸೆ ಆಕೆಯು ಮುದ ತಾಳಿ ಚೂಡಾಮಣಿ ಕೊಡಲು ಶ್ರೀ ರಘುವೀರನು ಸೇತುವೆ ಕಟ್ಟುತ ಕ್ರೂರ ಖಳರನು ಸಂಹರಿಸಿದ ಕಮಲ-ನಾಭ ವಿಠ್ಠಲ ಅಯೋದ್ಯದಿ ಮೆರೆಯುವ 3
--------------
ನಿಡಗುರುಕಿ ಜೀವೂಬಾಯಿ
ರಾಮನ ನೋಡ ಬನ್ನಿರೆ ಭಾಮೆಯರೆಲ್ಲ ಪ ರಾಮನ ನೀವು ನೋಡ ಬನ್ನಿರೆ ಕಾಮಿತಾರ್ಥವಬೇಡಿಸುಖಿಸಿರೆ ಸ್ವಾಮಿ ನೀನೆ ಗತಿ ಎಂದರೆ ಕಾಮಿತಾರ್ಥವನೀವ ದೊರೆಯನ ಅ.ಪ ಧೂರ್ತ ರಾವಣನ Wಟ್ಟಿಸಿ ಖ್ಯಾತಿಯಿಂದಲಿ ರಥವನೇರಿ ಸೀತೆಸಹಿತ ಬರುವನಂತೆ 1 ಅಯೋಧಾü್ಯಪುರದಿ ನಿಂದು ಮರೆವ ಸಿಂಹಾಸನವನೇರುತ ಹರುಷದಲಿ ತಾ ಕೂಡುವನಂತೆ 2 ಮಾನನಿಧಿ ಪ್ರಾಣನಾಥವಿಠಲ ಸಾನುರಾಗದಿ ಭಜಿಸುವರಸುರ ಧೇನುವಂದದಿ ಸಲಹುವನು ಮಾನಿನಿಯರು ಮನ್ನಿಸುತ ಬೇಗ 3
--------------
ಬಾಗೇಪಲ್ಲಿ ಶೇಷದಾಸರು
ರಾಮಾನಾಮಾಮೃತಪಾನಸುಖಧಾಮನು ಮುಖ್ಯಪ್ರಾಣ ಸೋಮಶೇಖರಮುಖ್ಯಾಮರಸಂಕುಲಸ್ವಾಮಿ ಮಹಾಸುತ್ರಾಣ 1 ಯಾವತ್ಕಾಲ ಕಳೇವರದೊಳನಿಲ ತಾವದ್ಧರಿಸನ್ನಿಧಾನ ದೇವಬ್ರಹ್ಮ ಸುಜನಾವಳಿಸುಖದ ಮಹಾಪ್ರಭು ಪವಮಾನ 2 ಲಕ್ಷ್ಮಣಪ್ರಾಣದಾತಾರ ನಿಭೃತಮೋಕ್ಷಹೃದಯ ಪರಿಪೂರ್ಣ ಲಕ್ಷ್ಮೀನಾರಾಯಣಾಂಘ್ರಿಭಕ್ತಿದಕ್ಷ ಲೋಕೈಕಧುರೀಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷ್ಮೀದೇವಿ ಕಮಲಾಕ್ಷಿ ತಾಯೆ ಸೂಕ್ಷ್ಮಮತಿಯನಿತ್ತು ಪೊರೆದು ರಕ್ಷಿಪದೇವಿ ಪ ಹರಿಯರಾಣಿ ಭುಜಗವೇಣಿ ಪರಿಪರಿಯ ಕ್ಲೇಶಗಳಳಿವ ದುರಿತದೂರನ ಕರಪಿಡಿಯುತ ಬಾ ಪರಿ ವೈಭವದಿ 1 ವಂದಿಸುವೆ ನಿನ್ನ ಪದಕೆ ಅಂಬುಜಾಕ್ಷಿ ಕರುಣವ ಮಾಡಿ ಕಂಬು ಕಂಧರನೊಡಗೂಡುತ ಬಾ ಸಂಭ್ರಮ ಸೂಸುತಲಿ 2 ಗೆಜ್ಜೆ ಪೈಜನಿ ಪಾಡಗರುಳಿಯು ಸಜ್ಜಾಗಿಹ ಕಾಲುಂಗುರ ಧ್ವನಿಯ ಮೂರ್ಜಗದೊಡೆಯನ ಕರಪಿಡಿಯುತ ಬಾ ಸಜ್ಜನ ರಕ್ಷಕಳೆ 3 ನಡುವಿಗೆ ನವರತ್ನದ ಪಟ್ಟಿ ಬಿಡಿಮುತ್ತುಗಳುದುರುವ ಪೀತಾಂಬರ ಬಡನಡÀು ಬಳುಕುತ ಅಡಿ ಇಡು ಬಾ ನಿ- ನ್ನೊಡೆಯನ ಕೂಡುತಲಿ 4 ಕರದಲಿ ಕಂಕಣ ಹಾಸರ ಬಳೆಗಳು ಬೆರಳಲಿ ಉಂಗುರ ಥಳಥಳಿಸುತಲಿ ಗರುಡಗಮನ ನೊಡಗೂಡುತ ಬಾ ಬಾ ಗರುವವು ಮಾಡದಲೆ5 ವಂಕಿನಾಗಮುರುಗಿ ಕರದಲಿ ಬಿಂಕದಿ ಪಿಡಿದಿಹ ತಾವರೆ ಕುಸುಮವು ಪಂಕಜಾಕ್ಷನೊಡಗೂಡುತ ಮನ ಶಂಕೆಯು ಮಾಡದಲೆ6 ಕಠ್ಠಾಣಿಸರ ಪದಕಗಳ್ಹೊಳೆಯುತ ಕಟ್ಟಿದ ಉಂಗುರಡ್ಡಿಕಿ ಶೋಭಿಸುತ ಚಿತ್ತಜನಯ್ಯನನೊಡಗೂಡುತ ಬಾ ಮತ್ತೆ ಹರುಷದಲಿ 7 ಥಳಥಳಿಸುವ ಗಲ್ಲಕೆ ಅರಿಶಿನವು ನಲಿಯುವ ಮೂಗುತಿ ಮುಖುರ ಬುಲಾಕು ಹೊಳೆವ ಮೀನು ಬಾವಲಿ ಚಳತುಂಬುಗಳ್ಹೊಳೆಯುತ ಘಳಿಲನೆ ಬಾರಮ್ಮ 8 ಕುರುಡಿ ಬಾವಲಿ ಬುಗುಡಿ ಚಂದ್ರ ಮುರುವಿನ ಕಾಂತಿ ಮುಗುಳ್ನಗೆ ಮುಖವು ಉರುಗಾದ್ರೀಶನ ಕರಪಿಡಿಯುತ ಬಾ ಕರೆ ಕರೆ ಮಾಡದಲೆ 9 ಘಣೆಯಲಿ ಕುಂಕುಮ ಬೈತಲೆ ಬಟ್ಟು ಥಳಥಳಿಸುವ ಕಣ್ಣಿಗೆ ಕಪ್ಪಿಟ್ಟು ಎಳೆಬಾಳೆಯ ಸುಳಿಯಂದದಿ ಬಳುಕುತ ಘಳಿಲನೆ ಬಾರಮ್ಮ10 ಕೆಂಪಿನ ರಾಗುಟಿ ಜಡೆ ಬಂಗಾರವು ಸಂಪಿಗೆ ಮಲ್ಲಿಗೆ ಸರಗಳ ಮುಡಿದು ಸೊಂಪಿಲಿ ಶ್ರೀ ಹರಿಯೊಡನಾಡುತ ನಲಿಯುವ ಸಂತಸ ತೋರಮ್ಮ11 ಇಂದಿರೆ ಶ್ರೀರಮೆ ಭಾರ್ಗವಿಯೆ ನಂದತ್ರಯಾ ಸದಾಸುಶೀಲೆ ಸುಗಂಧಿ ಸುಂದರಿ ಮಂದಗ ಮನೆಯೆ ಚಂದದಿ ಬಾರಮ್ಮ 12 ಸುತ್ತೆಲ್ಲ ಸುರಸ್ತ್ರೀಯರು ಮುತ್ತಿನ ಛತ್ರ ಚಾಮರದರ್ಪಣ ಪಿಡಿದು ನೃತ್ಯಗಾಯನ ಮಾಡುತ ಕರೆವರು ಸತ್ವರ ಬಾರೆನುತ 13 ಶ್ರಮ ಪರಿಹರಿಸೆನುತಲಿ ಬೇಡುವೆನು ಮಮತೆಲಿ ಕರಗಳ ಮುಗಿಯುತ ಬೇಡಲು ಕಮಲನಾಭ ವಿಠ್ಠಲನೊಡನೆ ಶ್ರೀ- ಕಮಲೆಯು ಬರುತಿಹಳು14
--------------
ನಿಡಗುರುಕಿ ಜೀವೂಬಾಯಿ
ಲಲಾಟದಲ್ಲಿ ಇಡುವನೋ ಕಾವನು ಅವನನು ನಮ್ಮ ಪವಮಾನನೊಡೆಯನು ವಾಮ ಉದರದಲ್ಲಿ ಯಾವಾನಲೂ ಇಟ್ಟು ಮೆರೆಯುವನೋ ಅವನ ಗೊವತ್ಸ ನ್ಯಾಯದಿ ಕರವನು ಪಿಡಿವನು ಗಧಾಧರನು ಹಾವನ್ನೆ ಹಾಸಿಗೆ ಮಾಡಿಕೊಂಡ ಶ್ರೀಧರನ ಸ್ಥಾನದ ಕೆಳೆಗೆ ಪವಮಾನಿಗುವ ಮತಾ ಎರಡು ಗಧಾಯುಧ ಧರಿಸಲು ಪಾವನನಂತಾದವನು ಅವರ ದುರಿತಕಾನನಕೆ ಸಾವು ಹುಟ್ಟಿಲ್ಲದ ಪರಮಪುರುಷನ ಈ ಆಯುಧವ ಅವನು ವಾಮಸ್ತನದಿ ತಾನೊಮ್ಮೆ ಇಕ್ಕುವನೋ ಸಾನು ಹುಟ್ಟುಗಳಿಂದ ದೂರಗೈಸುವ ಗುರು ಕಾಳೀಮರ್ಧನಕೃಷ್ಣ 4 ಪದ್ಮ ಮುದ್ರೆಯನ್ನು ಭಕುತಿ ಪೂರ್ವಕವಾಗಿ ಹೃತ್ ಪದ್ಮದಿ ಬಂದು ಧರಿಸಲುಬೇಕು ದಕ್ಷ ಭುಜದ ಕೆಳೆಗೆ ಪದ್ಮಂಗಳೆರಡನ್ನು ದಕ್ಷ ಉದರಕೆಳೆಗೆ ಪದ್ಮವೆ ಒಂದನ್ನು ವಕ್ಷಸ್ಥಾನದಿ ಒಂದು ಪದ್ಮವ ಧರಿಸಲು ಭಕ್ತವತ್ಸಲನಾದ ಪದ್ಮ ರಮಣಗುರು ಕಾಳಿಮರ್ಧನಕೃಷ್ಣ ಪೊಳೆವಾ 5
--------------
ಕಳಸದ ಸುಂದರಮ್ಮ
ಲಾಲಿ ನಿತ್ಯಾನಂದ ಲಾವಣ್ಯ ಕಂದ ಲಾಲಿ ಭೃತ್ಯಾರ್ತಿ ವಾರಣನೆ ಗೋವಿಂದ ಲಾಲಿ ಜೀಯಾ ಪ್ರತ್ಯಗಾತ್ಮ ಮುಕುಂದ ಲಾಲಿ ರಮಾಧೃತ ಚರಣಾರವಿಂದ ಲಾಲಿ ಪ. ಆದಿ ಮಧ್ಯಾಂತ ವಿದೂರನಾಗಿಹನ ವೇದಾಂತ ವೇದ್ಯ ವೈಭವ ಪಕ್ಷಿಗಮನ ತಾಪ ಕಳಿವವನ ಮೋದದಿ ಪಾಡಿ ತೂಗುವೆನು ಮಾಧವನ 1 ಈರಾರು ದಿಗ್ಗಜವೆಂಟು ಕಾಲುಗಳು ಪಾರಾವಾರಗಳೆಂಬ ಪೊಳೆವ ಪೊಟ್ಟಿಗಳು ಧಾರಾರೂಪ ಭಾಗೀರಥಿ ಸರಪಣಿ ಸೇರಿಸಿ ಡೋಲ ಶೃಂಗಾರ ಗೈಯುವೆನು 2 ನಿರ್ಮಲವಾದೇಳು ಹಲಿಗೆಗಳಿರುವ ಭರ್ಮಗಿರಿಯೆ ಸಿಂಹಾಸನವನಿಟ್ಟಿರುವ ಧರ್ಮಾರ್ಥ ಕಾಮ ಮೋಕ್ಷಗಳೆಂಬ ಫಲವ ಮರ್ಮವನರಿತು ಕಟ್ಟುವೆ ಒಳ್ಳೆಯ ರಥವ 3 ಸೂರ್ಯ ಚಂದ್ರಮರೆಂಬ ಧಾರಾದೀಪಗಳು ತಾರಕಿಗಳು ಸುತ್ತಲಿರುವ ಚಿನ್ಹೆಗಳು ಭವ ಜಯ ಜಯವೆಂಬ ಭರವು ನೀರಜಾಲಯೆ ಕೂಡಿ ಪಾಡುವ ಸ್ವರವು 4 ಕೋಟಿ ಭಾಸ್ಕರ ರಾಭ ಕೋಟೀರ ಕುಂಡಲ ಪಾಟಲಾಧರ ಮುಕುರರಾಭ ಕಪೋಲ ನಳಿನ ಪತ್ರ ನೇತ್ರ ಜ- ಚಾಪ ಧಾಟಿ ಭ್ರೂಯುಗಳ 5 ಪೂರ್ಣ ಮಾಲಾನಂತ ಪೌರ್ಣಮಿಯ ವಿಧು ವರ್ಣ ಮುಖಾಬ್ಜಸುಪರ್ಣವರೋಹ ಕರ್ಣ ಹೀನ ಕಶಿಪೂ ಪರಿಶಯನ ದು- ಗ್ಧಾರ್ಣವ ಮಂದಿರ ಸ್ವರ್ಣ ನಿಭಾಂಗ 6 ಕಂಬು ಸುಗ್ರೀವ ವಿಲಂಬಿತ ವನಮಾಲ ಅಂಬುಜ ಚಕ್ರ ಗದಾಕರ ಹಸ್ತ ಕೌಸ್ತುಭ ಜಗ- ನಾಭ 7 ವಿತತ ರೇಖಾತ್ರಯಯುತಮೃದುದರ ಮಧ್ಯ ಗತ ಕಿಂಕಿಣೀ ಜಾಲ ಕಾಂಚಿ ಕಲಾಪ ಪೀವರೋರು ಸಂ- ಮೂರ್ತಿ 8 ಸಿಂಜನ ಜೀರ ರಂಜಿತ ಚರಣ ಕಂಜಾಂಕುಶಕೇತು ರೇಖಾಲಂಕರಣ ಮಂಜುಳ ಮೃದು ಪಾದತಳ ಮುಕ್ತಾಭರಣ ಸಂಜೀವನ ರಾಜ ಸಂಪ್ರೀತಿ ಕರಣ 9 ಔತ್ತಾನಪಾದಿಯನಾಧಾರಗೊಂಡು ನಿತ್ಯ ತೂಗಾಡುವ ತೊಟ್ಟಿಲ ಕಂಡು ಹಿಂಡು ಬಹು ತೋಷಗೊಂಡು ಸತ್ಯಭಾಮೆಯ ಕಾಂತನಾಡುವ ಚೆಂಡು 10 ಪತಿತ ಪಾವನ ಪರಮಾನಂದ ರೂಪ ಸತತ ತಾನೆ ಪರಿಹರಿಸುವ ತಾಪ ವಿತತ ಮಹಿಮ ವೆಂಕಟಾಚಲ ಭೂ ಗತಿಯಾಗಿ ತೋರುವ ತನ್ನ ಪ್ರತಾಪ 11
--------------
ತುಪಾಕಿ ವೆಂಕಟರಮಣಾಚಾರ್ಯ
ಲೋಕನೀತಿ ಮತ್ಸರಿಸುವವರಲ್ಲಿ ಮಾನ್ಯವಿರಲೀ ಪ ಬಚ್ಚಲಿಲ್ಲದ ಮನೆಯು ಸ್ವಚ್ಛತಾನಾಗಿಹುದೆ ಅ.ಪ ಅರಿಷಡ್ವರ್ಗಗಳು ತುಂಬಿಕೊಂಡಿಹ ದೇಹ ಪರಿಶುದ್ಧವಹುದೇನೊ ಆವಾಗಲೂ ಪರಿಪರಿಯಿಂದಲಿ ಪರಿವಾರ ಜನಗಳು ಪರಿಹಾಸ್ಯಮಾಡಿ ಅಘವ ಕದ್ದೊಯ್ವರಯ್ಯ 1 ಗುಣತ್ರಯಗಳಿಂದಲಿ ನಿಬಿಡವಾದೀದೇಹ ಗುಣಕಾರ್ಯ ಮಾಡದೇ ಬಿಡದೆಂದಿಗೂ ಅಣಿಯಾಗಿ ದುರ್ಗುಣಗಳೊಕ್ಕಣಿಸಿ ಪೇಳುವಡೆ ಗುಣವ ತಿದ್ದಲು ತಾವು ಋಣಿಯಾಗುವರಯ್ಯ2 ಅಭಿಮಾನವೆಂಬುದು ನಭೋಮಂಡಲವರೆಗಿಹುದು ಶುಭವೆಂತೊ ಡಾಂಭಿಕದ ಹೇ ಮಾನವಾ ತುಂಬಿತುಳುಕುವ ದುರಭಿಮಾನವನೆ ತೊಲಗಿಸಿ ಇಂಬು ತೋರುವರಯ್ಯ ಮನಸ್ಥೈರ್ಯಕೇ3 ಕಕ್ಕುಲತೆ ಪಡದೆ ನಕ್ಕುಸಂತೈಸಿಲಾಲಿಸುವ ತೆರದಿ ಅಕ್ಕರದಿ ತನ್ನ ಅಪರಾಧಗಳನೆಲ್ಲ ಲೆಕ್ಕಿಸದೆ ಪೇಳ್ವರದು ಉಪಕಾರವಯ್ಯ 4 ಮಚ್ಚರದಿ ನಿಂದಿಸೆ ಅಚ್ಚುತನ ಭಕುತರಿಗೆ ನಿಚ್ಚದಲಿ ಸ್ವಚ್ಛಭಕುತಿ ಇಹುದು ಮಚ್ಚರಕೆ ಸ್ವೇಚ್ಛೆಯಿಂದೆದುರು ಉಚ್ಚರಿಸದಿರೆ ಮೆಚ್ಚಿ ಕಾಯುವನಯ್ಯ ಶ್ರೀ ವೇಂಕಟೇಶ 5
--------------
ಉರಗಾದ್ರಿವಾಸವಿಠಲದಾಸರು
ವಂದನೆ ಮಾಡಿರೈ ವ್ಯಾಸ ಮುನೀಂದ್ರರ ಪಾಡಿರೈ ಪ ವಂದಿಸುವರ ಭವಬಂಧವ ಬಿಡಿಸಿ ಆ ನಂದವ ಕೊಡುವ ಕರ್ಮಂದಿವರೇಣ್ಯರ ಅ.ಪ ಸದ್ಗುಣ ಸಾಂದ್ರಾ ಚಂದ್ರಿಕಾದಿ ಪ್ರಬಂಧತ್ರಯ ನಿರ್ಮಿಸಿದಾ ಮತವರ್ಧಿಸಿದಾ ಸತಿ ಮೆಚ್ಚಿಸಿದಾ ಹಿಂದಕೆ ಹರಿಯನು ಸ್ತಂಭದಿ ತೋರಿದ ಕಂದ ಪ್ರಹ್ಲಾದರೆ ಬಂದಿಹರೆನ್ನುತ 1 ಕೃಷ್ಣರಾಯನಿಗೆ ದುಷ್ಟಯೋಗ ಪರಿಹರಿಸಿ ರಾಜ್ಯವಹಿಸಿ ಯ- ಥೇಷ್ಟ ದಾನಫಲಕೊಟ್ಟು ನೃಪನನುಗ್ರಹಿಸಿ ರಾಜ್ಯದೊಳಿರಿಸಿ ಶ್ರೇಷ್ಠವಾದ ಸಿಂಹಾಸನದಲಿ ಕುಳ್ಳಿರಿಸಿ ಆಜ್ಞೆಯ ತಿಳಿಸಿ ಎಷ್ಟು ಮಹಿಮರೆಂದರಿತು ಇವರ ಮನ ಮುಟ್ಟಿ ಭಜಿಪರಿಗ ಭೀಷ್ಟೆಯಗರಿವರ 2 ಸೂರ್ಯಯತಿ ಕುಲ- ವರ್ಯ ಗುರುಮಧ್ವಮ ತದಿಸದ್ವೈಷ್ಣವ ಕುಮುದಕೆ ಭಾರ್ಯಾ ಪಾವನ ಚರ್ಯ ಪರಮಮಹಿಮ ಬ್ರಹ್ಮಣ್ಯ- ತೀರ್ಥರಿಗೆ ತನಯಾ ಕವಿಜನಗೇಯಾ ಶರಣರ ಪೊರಿಯುವ ಶಿರಿಕಾರ್ಪರನರಹರಿಯ ನೊಲಿಸಿರುವ ಪರಮ ಮಹಾತ್ಮರ3
--------------
ಕಾರ್ಪರ ನರಹರಿದಾಸರು
ವಂದಿಸುವೆನು ರಘುವರನಾ ಸುರವಂದಿತ ಚರಣಾಂಬುಜನ ಪ ತಂದೆ ಮಾತಿಗೆ ವನಕ್ಹೋಗಿ ಬಂದವನಾಸುಂದರ ಸಹ ಸೀತೆಯಿಂದ ಅನುಜನಾ ಅ.ಪ ಚಾಪ ಭಂಜಕನಾ 1 ವಾರಿಧಿ ಸೇತು ಬಂಧಕನಾ ಸೀತಾ -ಚೋರನ ಶಿರವಳಿದವನಾಚಾರು ಸಿಂಹಾಸನವೇರುತ ಸರಯು -ತೀರದ ಅಯೋಧ್ಯಾ ವಿಹಾರ ಸುಂದರನಾ2 ಕೇಸರಿ ಸುತಗೆ ತನುಧನಮಣಿಆಶ್ರಯವನು ಕೊಟ್ಟವನಾಕೋಸಲ ಜನರಿಗೆ ಮೋಕ್ಷವವಿತ್ತವನಾಇಂದಿರೇಶ ಸುಖಾತ್ಮ ನಿರ್ದೋಷ ಪುರುಷನಾ 3
--------------
ಇಂದಿರೇಶರು
ವಂದೇ ಗೋಪಾಲಂ ಕೃಷ್ಣಾನಂದ ಜಲಪಾಲಂ ಮಂದಹಾಸ ಮುನಿವೃಂದ ವಿಶಾಲಂ ಇಂದಿರೇಶ ಯದುನಂದನ ಬಾಲಂ ಪ ಸಾರಿದನು ಸಾರಂ ಕೃಷ್ಣ ಚಾರು ಮೋಹನಾ ಕಾರಂ ಸಾರೋದ್ದಾರಂ ಸುಜನಮಂದಾರಂ ಶ್ರೀರಮಣೀ ಮುಖ ಚಂದ್ರ ಚಕೋರಂ 1 ಕಾಂಚೀ ಮಣಿಹಾರಂ ಕೃಷ್ಣ ವಾಂಛಿತದನುಸಾರಂ ಪಂಚಭೂತ ಪಂಚಸ್ಯಾಕಾರಂ ಪಾಂಚ ಜನ್ಯ ಭೃಗುಲಾಂಛನ ಧಾರಂ 2 ಚಾಪಲ ಗುಣಧಾಮಂ ಕೃಷ್ಣ ಗೋಪೀಜನ ಕಾಮಂ ನೀ ಪರಮಾತ್ಮ ಸ್ವರೂಪ ಸುನಾಮಂ ಶ್ರೀಪತಿ ಯದು ಕುಲದೀಪ ನಿಸ್ಸೀಮಂ 3 ಪಾಂಡವ ಸಾಕಾರಂ ಕೃಷ್ಣ ಪಂಡಿತನುಸಾರಂ ಚಂಡ ಕಿರಣ ಮಣಿಕುಂಡಲ ಧಾರಂ ಮಂಡಲದೊಡೆಯ ಉದ್ದಂಡತಿ ಶೂರಂ 4 ಶರಣರ ಭವದೂರಂ ಕೃಷ್ಣ ಸುರಜನ ಸಾಕಾರಂ ಹರಿಸೂನು ಕೋಣೆ ಲಕ್ಷ್ಮೀಶ ಶೃಂಗಾರಂ ಪರಮಾತ್ಮಕ ಸದ್ಗುರು ಮಂದಾರಂ 5
--------------
ಕವಿ ಪರಮದೇವದಾಸರು
ವಂದೇಹಂ ಕಮಲಾದ್ರಿನಿವಾಸಂ-ಪಲ್ಲವೀಶಂ-ಇಂದೀವರಭಾಸಂಪ ಗಣಾನಂದ ವಿಲಾಸಂ ಅ.ಪ ಪರಿ ಶಿಷ್ಟಶಿಖರಿವಿಹಾರಂ ಅಷ್ಟಮೂರ್ತಿಪರಮೇಷ್ಟಿಸಮರ್ಚಿತ- ಮಷ್ಟಸಿದ್ಧಿದಾತಾರಮುದಾರಂ 1 ಅಂಬುಜಭವಪಿತ ಮಂಬುಜ ಪತ್ರ ವಿಡಂಬಿನಯನ ಯುಗಳಂ ಘಟ ಚರಣಾಂಬುಜಯುಗಳಂ 2 ನಂದ ಗೋಕುಲಾನಂದ ಕಾರಣ ನಂದೋಪವರ ಕರುಣಂ ಮಂದಹಾಸ ವಿಜಿತೇಂದು ಕಿರಣಮತಿ- ಸುಂದರಾಂಗಮಾನಂದ ವಿತರಣಂ 3 ಮೋಹನ ವೇಣುನಿನಾದಂ ಲಲನಾಜನಸಂಮಿಳಿತವಿನೋದಂ 4 ಧರಣೀಭರ ಪರಿಹರಣೋಚಿತವರ ಕರುಣಾಯತನಿಜವೇಷಂ ವಿಠಲಾ ನತಪದ ಶರಣ ಸುಪೋಷಂ 5
--------------
ಸರಗೂರು ವೆಂಕಟವರದಾರ್ಯರು