ಒಟ್ಟು 7928 ಕಡೆಗಳಲ್ಲಿ , 135 ದಾಸರು , 4955 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದರದಕೊ ಬಲರಾಮ ಮುಕುಂದರುಬಂದರಕೊಭಾವೆಕೆಲೆಯುತ ನಲಿಯುತಪ.ನೀರಜಸಖನುದಯಾಗದ ಮುನ್ನ ಝೇಂಕಾರದೊಳಳಿ ಮೊತ್ತವೇಳದ ಮುನ್ನಸಾರಸಕೀರಮಯೂರಸ್ವನದ ಮುನ್ನನಾರಿಯರು ಮೊಸರ ಮಥಿಸುವುದರಿತು 1ನವ ನವನೀತಕೆ ಮಚ್ಚಿ ಮನವಿಟ್ಟುತವಕದಿ ಗೋಡೆಯ ಧುಮುಕುತಲಿಯುವತಿ ಗೊಲ್ಲತಿಯರ ಮರುಳು ಮಾಡುವರು ಸಣ್ಣವರೊಳು ತಾಳ ಮೇಳದ ಅಬ್ಬರದಲಿ 2ಸಾರಗೋರಸ ಚೋರರು ಗೋಪಿಮಕ್ಕಳುಸೂರಿಡುವರು ಮನೆ ಮೀಸಲನುಸಾರಿಸಾರಿಗೆ ಪ್ರಸನ್ವೆಂಕಟ ಕೃಷ್ಣರಚಾರುಒಡ್ಯಾಣಘಂಟಾರವವನಾಲಿಸವ್ವ3
--------------
ಪ್ರಸನ್ನವೆಂಕಟದಾಸರು
ಬಂದಳು ಸಿರಿಲಕುಮಿಯು ನಮ್ಮ ಮನೆಗೆತಂದಳೈಶ್ವರ್ಯಂಗಳ ಪಇಂದಿರೆಹರಿಯುರ ಮಂದಿರ ನಿತ್ಯಾನಂದನಿಲಯಭವಬಂಧ ವಿಮೋಚನಿಅ.ಪಸುಂದರಾಂಗಿ ಸುಗುಣಾಸಿಂಧುಜಗಜ್ಜನನೀಇಂದುಸೋದರಿ ಪೂರ್ಣೇಂದು ಬಿಂಬಾನನೆ 1ಯೆಂದಿಗೆ ಸಂಪದಕುಂದಬರವ ಹಾಂಗೆನಿಂದುಪಾಲಿಸುವನೆಂದು ದೀಕ್ಷೆಯು ಮಾಡಿ2ಬೃಂದಾರಕಸಂಕ್ರಂದನವಂದಿತೆಮಂದಹಾಸದಿ ರಘು ನಂದನ ಸುಪ್ರಿಯೆ 3ಕಂದ ತುಲಸಿದಾಸನೆಂದು ಸಂಭ್ರಮದಿ ಮುಚುಕುಂದವರದ ಪಾದದ್ವಂದ್ವ ಭಕ್ತಿಯು ಕೊಡಲು 4
--------------
ತುಳಸೀರಾಮದಾಸರು
ಬಂದೆನೇಳೆ ಗೋವಿಂದ ನಾ ಇಂದುಮುಖಿ ನಿದ್ರೆ ಬಿಟ್ಟುಬಂದು ನೀ ಬಾಗಿಲ ತೆಗೆಯೆ ಗೋವಿಂದ ನೀ ಗೋವೃಂದವ ಕಾಯಲು ಹೋಗಯ್ಯ ಪ.ಸೋಮಕ ಖಳನ ಕೊಂದು ನೇಮದಿ ವೇದವ ತಂದಶ್ರೀ ಮತ್ಸ್ಯಾವತಾರ ಬಂದೆನೆ ಮತ್ಸ್ಸ್ಯನಾದರೆಆ ಮಹಾಂಬುಧಿಗೆ ಹೋಗಯ್ಯ 1ಸಿಂಧುಮಥÀನ ಕಾಲಕೆ ವೃಂದಾರಕರಿಗÉೂಲಿದಸುಂದರ ಕೂರ್ಮನು ಬಂದೆನೆ ಕೂರ್ಮನಾದರೆಮಂದರಹೊರಲು ಹೋಗಯ್ಯ2ಪ್ರಳಯಾಂಬುಗಿಳಿದೊಬ್ಬನ ಸುಲಭದಿ ಕೋರೇಲಿ ಸೀಳಿದಚೆಲುವ ವರಾಹನು ಬಂದೆನೆ ವರಾಹನಾದರೆಇಳೆಯ ಕೂಡಾಡ ಹೋಗಯ್ಯ 3ಸೊಕ್ಕಿ ಕಂಬವ ಗುದ್ದ್ದಿದ ರಕ್ಕಸನಂತರ ಮಾಲೆಯನಿಕ್ಕಿದ ನರಹರಿ ಬಂದೆನೆ ನರಹರಿಯಾದರೆಚಿಕ್ಕವನೊಳಾಡ ಹೋಗಯ್ಯ 4ಹೋಮವ ಮಾಡಿ ಮೀರಿದ ಭೂಮಿಪನುಕ್ಕ ಮುರಿದನೇಮದ ವಾಮನ ಬಂದೆನೆ ವಾಮನನಾದರೆನೇಮ ನಿಷ್ಠೆಗೆ ನೀ ಹೋಗಯ್ಯ 5ಭೂಭಾರವನಿಳುಹಿ ದ್ವಿಜರ್ಗೆ ಭಾಗ್ಯವ ಕೊಟ್ಟ ಶೌರ್ಯಶೋಭಿತಭಾರ್ಗವಬಂದೆನೆ ಭಾರ್ಗವನಾದರೆಆ ಬಾಲೇರಂಜಿಸ ಹೋಗಯ್ಯ 6ಸೀತೆಗಾಗಿ ರಾವಣನ್ನ ಘಾತಿಸಿದೆ ಕೇಳೆವಾತಜಾತ ವಂದ್ಯ ರಾಮ ಬಂದೆನೆ ರಾಮನಾದರೆ ಸರಯೂ ತೀರದಲ್ಲಿರ ಹೋಗಯ್ಯ 7ಸೋಳಸಾಸಿರ ಗೋಪೇರನಾಳುವ ಪ್ರೌಢ ಕಾಣೆ ಗೋಪಾಲ ಚೂಡಾಮಣಿ ಬಂದೆನೆ ಗೋಪಾಲನಾದರೆ ಗೋಪಾಲೇರೊಡನಾಡ ಹೋಗಯ್ಯ 8ದೃಢದಲ್ಲಿ ತಪವಿದ್ದ ಮಡದೇರ ಮನಗೆದ್ದಕಡುಮುದ್ದು ಬುದ್ಧ್ದ ಬಂದೇನೆ ಬುದ್ಧನಾದರೆ ಮಿಥ್ಯದಸಡಗರದಲ್ಲಿರ ಹೋಗಯ್ಯ 9ಪದ್ಮಗಂಧಿ ನಿನ್ನ ರತಿಗೊದಗಿದೆ ಬಿಂಕವಿನ್ನ್ಯಾಕೆಕುದುರೆಯೇರಿ ಕಲ್ಕಿ ಬಂದೆನೆ ಕಲ್ಕಿಯಾದರೆಕದನಕೆ ಜಾಣ ಹೋಗಯ್ಯ 10ವಲ್ಲಭನ ನುಡಿಕೇಳಿ ನಲ್ಲೆ ಸತ್ಯಭಾಮೆಪಾದಪಲ್ಲವಕೆರಗಿ ನಿಂತಳು ಪ್ರಸನ್ವೆಂಕಟಚೆಲುವ ನೀನೆಂದರಿಯೆನೆಂದಳು 11
--------------
ಪ್ರಸನ್ನವೆಂಕಟದಾಸರು
ಬಂದೆವಯ್ಯ ಶ್ರೀಕೃಷ್ಣಮೂರ್ತಿ ನಿನ್ನ ಸುಂದರಚರಣಾರವಿಂದ ನೋಡುವುದಕ್ಕೆ ಬಂದೆ ಪಮಂದರೋದ್ಧರ ಅರವಿಂದ ನೇತ್ರಗೆ ನಮ್ಮೊ-ಳಿಂದು ಕೃಪೆಯ ತೋರಿ ಸಲಹೋ ಸಚ್ಚಿದಾನಂದ ಅ.ಪಭಾವಸಂವತ್ಸರ ಪೌಷ ಬಹುಳಮವಾಸೆಮಹಾ ದೃಢದಿ ಸಮುದ್ರವ ಸ್ನಾನಗೈದುಆ ವಡಭಾಂಡೇಶ್ವರದಿಂದ ಬಲರಾಮದೇವರ ಕಂಡು ನಾವೆರಗಿ ಕೈಮುಗಿದೀಗ ಬಂದೆ 1ಮಧ್ವಸರೋವರವೆಂಬ ತೀರ್ಥದಿ ಮಿಂದುಶ್ರದ್ಧೆ ಭಕ್ತಿಯೊಳ್ ನಿನ್ನ ಕಂಡು ಬಲಬಂದುಬದ್ಧಾಂಜಲಿಯ ನೀಡಿ ಸ್ಮರಿಸಿ ವಂದನೆಗೈದುಉದ್ಧರಿಸೆಂದು ವರವ ಬೇಡುವದನೀಗ ಬಂದೆ 2ಅಷ್ಟಾವಧಾನ ಸೇವೆಯೊಳು ನಿನ್ನನುಯತಿಶ್ರೇಷ್ಠರು ಪೂಜಿಸಿ ವರವ ನೀಡಿ ಕೊಟ್ಟಮಂತ್ರಾಕ್ಷತೆ ತೀರ್ಥ ಪ್ರಸಾದವ ಪಡೆದುನಮ್ಮಯ ಭವಕಷ್ಟ ನೀಗುವುದಕ್ಕೆ ಬಂದೆ 3
--------------
ಗೋವಿಂದದಾಸ
ಬನ್ನಿಗಡ ಸುಜನರೆಲ್ಲ ಪಾವನಕಾಯ ಸುಜನಪ್ರಿಯಪುಣ್ಯ ಸತ್ಯನಾಥಯತಿರನ್ನನ ಪಟ್ಟಣಕಿಂದು ಪ.ಪರಬೊಮ್ಮನೆಂಬುವ ಮನೆದೈವನಾಗಿಹಪರಸುಖವನೀವ ಮರುತದೇವನೆಂಬಾತಪರಮಪದದ ಗುರುವು ಯುಕ್ತಿಯಿಂದ ಕಾಪುರುಷರಗಲಿಸುವಂತೆ ಸತ್ಯನಾಥಪುರಪತಿಗೆ ಬೋಧಿಸುವ ಪರಮವಾರ್ತೆಯ ಕೇಳ 1ನವಭಕುತಿರತುನದಿಂದ ನಿರ್ಮಿತ ಪ್ರಾಕಾರಕೆನವದ್ವೇಷಿಗಳು ದಾಳಿಯಿತ್ತು ಅಂಡಲೆಯಲು ದಾನವಾರಿಯ ನಾಮಾಯುಧವ ಸತ್ಯಾಭಿನವÀÀ ತೀರ್ಥರೆಂಬೊ ಪುತ್ರಗೆ ನೀಡುತಮಾನವ ಹರಿಯೆಂಬಸುರರ ಮಡುಹಿಸುವುದು ನೋಡ 2ಕಾಯಜಚೋರನೆಂಬವ ತಾ ಕಳ್ಳ ಹನ್ನೊಂದರ ಕೂಡಿಕಾಯವೆಂಬ ರಾಜಗೃಹಕೆ ಕನ್ನವಿಕ್ಕುವುದ ಕಂಡುಕಾಯುವ ಜ್ಞಾನೆಂಬ ಭಟನು ಅಟ್ಟಲವನಕೈದು ಚಾಪವ ಸೆಳೆದು ಮಿಕ್ಕು ಚೋರನೀಕಾಯಕಟ್ಟಿಸುವಂಥ ಕರುಣಿಗೆ ನಮಿಸುವ3ಹರಿದಾಸರೆನಿಸುವ ಹಲವು ದೊರೆಗಳುಂಟುಹರದಾರಿಕ್ಕೆಲದಿ ಪಣ್ಯವ ಮಾಡಿ ಸುಧೆüವೀರಿಹರಿತತ್ವ ನಾಣ್ಯದೊಳು ರಾಮನಾಮದಹಿರಿದುಮುದ್ರೆಯನೊರೆದು ಪರಂಪರಹರುಷ ವ್ಯವಸಾಯವುಂಟು ಹಿರಿಯಾಮೃತವುಣ್ಣ 4ಅಭಿನವ ಚಂದ್ರಿಕೆದೋರಿ ಅಭಿಜ್ಞಾನತೆ ಮೆರೆದಅಭೀತ ಮಂಗಳಗಾತ್ರ ಅಮಿತ ಬುಧರಮಿತ್ರಅಭಿಜÕಗುರು ಸತ್ಯನಿಧಿಯ ಸುತ ಸತ್ಯನಾಥಅಭು ಪ್ರಸನ್ವೆಂಕಟೇಶನ ಭಜಕನ ಕವಿತಅಬುಜ ಪರಿಮಳಮಂದಾನಿಲವಿಡಿವಳಿಯಂತೆ 5
--------------
ಪ್ರಸನ್ನವೆಂಕಟದಾಸರು
ಬರಬೇಕೋ ರಂಗಯ್ಯ ನೀ - ಬರಬೇಕೊ ಪಬರಬೇಕೊ ಬಂದು ಒದಗಬೇಕೊ ಮಮಗುರು |ನರಹರಿ ನಾರಾಯಣ ನೀನಾ ಸಮಯಕೆ ಅ.ಪಕಂಠಕೆ ಪ್ರಾಣ ಬಂದಾಗ - ಎನ್ನ |ನಂಟರಿಷ್ಟರು ಬಂದಳುವಾಗ ||ಗಂಟು ಹುಟ್ಟಿನ ಕಾಲಬಂಟರು ಕವಿದೆನ್ನ |ಗಂಟಲೌಕುವಾಗ ವೈಕುಂಠನಾರಾಯಣ 1ನಾರಿಯು ಪುತ್ರ ಮಿತ್ರರು -ಬಂಧುಗಳು |ಆರೆನ್ನ ಸಂಗಡ ಬಾರರು ||ಆರಿಗಾರಿಲ್ಲ ಯಮನಾರುಭಟಕೆ ಅಸು-|ರಾರಿ ಮೈಮರೆದಾಗ ನೀರೇರುಹನಾಭ 2ಕರಿಪ್ರಹಲ್ಲಾದಾದಿ ಭಕ್ತರ -ಪತಿ|ಕರಿಸಲು ಒದಗಿದೆ ಶ್ರೀಧರ ||ನೆರೆಹೀನನೆನ್ನ ಉದ್ಧರಿಸಿಅಚ್ಯುತನಿನ್ನ |ಚರಣದೊಳಿಂಬಿಡೊ ಪುರಂದರವಿಠಲ 3
--------------
ಪುರಂದರದಾಸರು
ಬರಿದೆ ಬಯಸದಿರಿಹಲೋಕಸುಖವೆಂಬ ಬರಗಿನ ಪಾಯಸವ |ಶರಿಧಿಶಯನನ ಬೇಡೊ ಪರಲೋಕಸುಖವೆಂಬಸೇವಗೆ ಪಾಯಸವ ಪ.ಮುಂದರಿಯದೆ ಮಾಳ್ಪ ಮೂಢನೃಪನ ಸೇವೆ ಮುಗ್ಗುರಾಗಿಯ ಹಿಟ್ಟು |ಮಂದಮತಿಯೆ ನೀನನ್ಯರಲಿ ಬಯಸುವ ನೀಚಮಾರ್ಗವ ಬಿಟ್ಟು ||ಕಂದರ್ಪಜನಕನ ಕಿಂಕರನೆಂಬುವ ಕಲಸೋಗರ ಕಟ್ಟು |ಸಂದೇಹಿಸದೆಪರಾತ್ಪರವಸ್ತು ಮುಕುಂದನಂಘ್ರಿಯ ತಟ್ಟು1ಅಗ್ಗದಾಸೆಗೆ ಸಂಗ್ರಹಿಸದಿರಘವೆಂಬ ಅಡಿಗಂಟು ದವಸವನು |ಬಗ್ಗನುಳಿದು ಸಂಪಾದಿಸು ಪರವೆಂಬ ಪುಣ್ಯದ ದವಸವನು ||ಯೋಗ್ಯರನರಿಯದೆ ಏತಕೆ ಬೇಡುವೆ ಸಾಕಾರ ಕೇಶವನು |ಕುಗ್ಗಗೊಡದೆ ಸಂಸಾರವೆಂತೆಂಬುವ ಕೋಟಲೆ ತಪ್ಪಿಸುವನು 2ಸಕ್ಕರಿ ಚಿಲಿಪಾಲು ಘ್ರತ ರಾಜಾನ್ನಕೆ ಸವಿಯೀವಹರಿಕಥೆಯ - ಬಿಟ್ಟು |ಅಕ್ಕರೆಯಿಂದಪೇಕ್ಷಿಸುವರೆ ನೀ ಅಲ್ಪರ ಸಂಗತಿಯ ||ಸೊಕ್ಕೊಳಿತಲ್ಲೆಲೊ ಮದಡು ಜೀವಾತ್ಮನೆ ಸ್ವಾಮಿಕಾರ್ಯಸ್ಥಿತಿಯ |ಗಕ್ಕನಂತು ಸೇರು ಪುರಂದರವಿಠಲನ ಚರಣಕಮಲದ್ವಿತಯ 3
--------------
ಪುರಂದರದಾಸರು
ಬರಿದೆ ಹೋಯಿತು ಹೊತ್ತು - ಹರಿಯೆ |ಶರೀರವೆ ಸ್ಥಿರವೆಂದು ಮರೆತು ನಾನಿದ್ದೆನೆ ಪಆಸೆಯೆಂಬುದು ಎನ್ನ ಕ್ಲೇಶಪಡಿಸುತಿದೆ |ಗಾಸಿಯಾದೆನೊ ಹರಿಯೆ ||ಶೇಷಶಯನನು ನೀನು ನಿನ್ನ ನಂಬಿದೆ ನಾನು |ನಾಶವಾಯಿತು ದಿನ ಮೋಸ ಹೋದೆನಯ್ಯ 1ಸತಿಸುತರೆಂದೆಂಬ ಅತಿ ಭ್ರಾಂತಿಗೊಳಗಾದೆ |ಮತಿಹೀನ ನಾನಾದೆನೊ ||ಸತತ ನಿರಂತರ ಜಡದೇಹ ನಾನಾದೆ |ರತಿಗೆಳೆಯುತಿದೆ ಮನಸು ಹರಿಸರ್ವೋತ್ತಮನೆ 2ಪರರ ಸೇವೆಯ ಮಾಡಿ ಪರರನೆ ಕೊಂಡಾಡಿ |ಮರೆತೆನೊ ನಿನ್ನ ಧ್ಯಾನ |ಕರುಣದಿಂದಲಿ ಎನ್ನ ಕಾಯ್ದು ನೀ ಸಲಹಯ್ಯ |ಪುರಂದರವಿಠಲ ನಿನ್ನನೆ ನಂಬಿದೆ ನಾನು3
--------------
ಪುರಂದರದಾಸರು
ಬರಿಯ ಮಾತಲಿಲ್ಲ ಶ್ರೀಹರಿಯ ಪ್ರೀತಿರಣ್ಣ ಮಧ್ವಾಚಾರ್ಯರುಪದೇಶವೆ ಮುಕ್ತಿಪುರದೊಳು ಖ್ಯಾತಿರಣ್ಣ ಪ.ರಂಗನ ಪ್ರತಿಮೆಯನು ಬಿಡದೆ ಬಹಿರಂಗದಿ ಪೂಜೆಯ ಮಾಡಿಕಂಗಳುತುಂಬಲು ಮೆಲ್ಲನೆ ಅಂತರಂಗದಿ ಪೀಠದಿ ನೋಡಿಹಿಂಗದೆ ಗುರುಶಿಕ್ಷಾಕ್ರಮದಲಿ ಧ್ಯಾನಂಗತನಾಗ್ಯೊಲಿದಾಡಿಲಂಘಿಸಿ ಜನ್ಮಾಯುಷಗಳ ತುದಿಯಲಿಮಂಗಳ ಬಿಂಬವ ನೋಡದೆ ನೋಡಿ 1ಒಮ್ಮಿಂದೊಮ್ಮೆ ಹೃದಯದದ್ದಕೆಧರ್ಮವ ಜರಿದರೆ ಹೀನನಿರ್ಮಳ ಶೌಚಾಚಮನವೆ ಗಳಿಸಿದಸಮ್ಯಕ್‍ಜ್ಞಾನ ನಿಧಾನತಮ್ಮವಗುಣ ರೋಗಕೆ ಔಷಧವುಕರ್ಮದ ಮೂಲವೆ ಸ್ನಾನಹಮ್ಮಿಲಿ ಸನ್ಮಾರ್ಗಕೆ ಕುಂದಿಡದೆಇಮ್ಮಡಿ ಸಾಧಿಸಿ ನವನವೀನ 2ಸದ್ವ್ವ್ರತ ದೀಕ್ಷೆಯು ಧ್ರುವಪದ ಮುಕ್ತಿಯುಸುದ್ವಾರವ ಬಿಡಬಹುದೆಮಧ್ವೇಶನ ಮಹಿಮೆಯ ಕೇಳದೆ ರಕ್ಷಾಧ್ವರ ಕಥೆ ಕೇಳಬಹುದೆವಿಧ್ವಂಸಿಸುವ ಚೋರರು ಹೇಳ್ಯಾಡುವಸದ್ವಚನದಿ ಸುಖವಾಹುದೆಅದ್ವಯ ಪ್ರಸನ್ವೆÉಂಕಟೇಶನ ಪಾದಕಮಲದ್ವಯ ಬಿಟ್ಟಗೆ ತಮಸಹುದಹುದೆ 3
--------------
ಪ್ರಸನ್ನವೆಂಕಟದಾಸರು
ಬಲ್ಲವರು ಮೊರೆ ಹೋಗುವರೆ ನೀನಾವಬಲ್ಲಿದನೆಂದೆನ್ನನುಪೇಕ್ಷಿಪೆ ರಂಗ ಪ.ಸಲ್ಲದವನು ಸಾಲಗೂಳಿ ನೀ ಎಂದೆನ್ನಕ್ಷುಲ್ಲನ ಮಾಡಿ ನೀಕರಿಸದಿರೊಒಳ್ಳೆ ಸತ್ಯವ್ರತರ ಋಣ ನುಂಗಿ ಸೆರೆಸಿಕ್ಕಿಕಲ್ಹೊತ್ತು ಪುಲ್ಗಚ್ಚಿ ಹಲ್ದೆರೆದೆ ನೀನು 1ಬೇಡಿ ತಿರಿದು ಉಂಬ ಬಡವ ಛೀ ಸಾರೆಂದೀಡಾಡುವುದುಚಿತೆ ನೀ ನೃಪನೊಂಚಿಸಿಬೇಡಿ ಮನೆಯ ಕೊಂಡೆ ನೀರಿನರಸನಲ್ಲಿರೂಢಿಯ ಗೂಡ ಬಿಟ್ಟೋಡಿದೆತುಡುಗ2ನಾ ದೋಷಪೂರ್ಣನೆನುತ ಮನ ಬಲ್ಲದುನೀ ದೋಷದೂರನುಶ್ರುತಿಬಲ್ಲವುಭೂದೋಷಹರ ಪ್ರಸನ್ವೆಂಕಟೇಶ ತಿಳಿಯದೆನಾ ದಾಸನಾದೆ ನಾಮಸ್ವಾದಕ್ಹುಚ್ಚಾದೆ 3
--------------
ಪ್ರಸನ್ನವೆಂಕಟದಾಸರು
ಬಲ್ಲಿದ ನೀನೆಂದು ಬಡವರ ಬಾಯನು ಬಡಿಯದಿರೆಚ್ಚರಿಕೆ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಎಳ್ಳಷ್ಟು ತಪ್ಪಿದರೆ ಯಮನವರೆಳೆದೊಯ್ವರು ಎಚ್ಚರಿಕೆಚ್ಚರಿಕೆ ಪ.ಮಾಡು ದಾನ - ಧರ್ಮಪರ ಉಪಕಾರವ ಮರೆಯದಿರೆಚ್ಚರಿಕೆಕೇಡ ನೆಣಿಸಬೇಡ ನಂಬಿದ ಠಾವಿಗೆ ಕೆಡುವೆ ಮತ್ತೆಚ್ಚರಿಕೆಮೂಢರ ಒಡನಾಡಿ ಮುಂದರಿಯದೆ ನೀನು ಮುನಿಯದಿರೆಚ್ಚರಿಕೆನೋಡಿ ನಡೆವ ಸುಗುಣರ ನೋಡಿ ನಡೆಯೊನೀ ನಟನೆ ಬೇಡಚ್ಚರಿಕೆ 1ಹೊನ್ನ - ಹೆಣ್ಣು - ಮಣ್ಣು ತನ್ನನೆಅಣಕಿಸಿ ಹೋಹುವು ಎಚ್ಚರಿಕೆಮುನ್ನ ಮಾಡಿದ ಫಲದಿಂದಲಿ ಬಂದೆಯೊ ಮುಂದೆ ಇನ್ನಚ್ಚರಿಕೆಚೆನ್ನಾಗಿ ತಾ ಬಾಳಿ ಬದುಕುವೆನೆಂತೆಂಬ ಚೇಷ್ಟೆ ಬೇಡೆಚ್ಚರಿಕೆಬೆನ್ನನು ಬಡಿಯದೆ ಬಿಡುವರೆ ಯಮನವರು ಮರೆಯದಿರೆಚ್ಚರಿಕೆ 2ಬಾಳಿ ಬದುಕಿ ಸಿರಿವಾಹಗೆ ಟವಳಿಯಬಣಗು ಬೇಡದೆಚ್ಚರಿಕೆಹಾಳು ಬದುಕಿಗಾಗಿ ಹಲವರ ಕೂಡಣ ಹಗಣ ಬೇಡಚ್ಚರಿಕೆಕಾಲನವರು ಬಂದುಆವಾಗ ಕರೆವರೊ ಕಾಣದು ಎಚ್ಚರಿಕೆಶ್ರೀಲೋಲ ಪುರಂದರವಿಠಲರಾಯನ ಮರೆಯದಿರೆಚ್ಚರಿಕೆ 3
--------------
ಪುರಂದರದಾಸರು
ಬಾ ದೀನವತ್ಸಲ ಲಕ್ಷ್ಮೀನಿವಾಸ ಶ್ರೀವೆಂಕಟೇಶಮಾಧವಮಧುರಿಪು ಮಾನುಷವೇಷ ಶರಣಾಗತಪೋಷಪ.ವೇದಾಗಮ್ಯ ದಯೋದಧಿ ಗೈದಪ-ರಾಧ ಕ್ಷಮಿಸಿ ಸುಗುಣೋದಯನಾಗುತ ಅ.ಪ.ಅನಾಥ ಜನರ ಕಾಮಧೇನು ಕಾಯೊ ಎಮ್ಮನುದಾನವಕಾನನಕಲ್ಪಕೃಶಾನು ಸರ್ವೋತ್ತಮ ನೀನುಆನತಜನ ಸುತ್ರಾಣಿಸುವಂತೆ ಪ್ರ-ದಾನಿಯಂತೆ ಶತಭಾನು ಪ್ರಕಾಶದಿ 1ಕೋಟಿ ಬ್ರಹ್ಮಾಂಡವ ಕಾಯುವ ಮಹಿಮ ಸದ್ಗುಣಗಣಧಾಮಹಾಟಕವಸನ ಕೈರವಶ್ಯಾಮ ಮುನಿಮನವಿಶ್ರಾಮಕಾಟಕ ಮನಸಿನ ಮಾಟವ ನಿಲ್ಲಿಸಿಘೋಟಕಾಸ್ಯ ನರನಾಟಕಧಾರಿ 2ಸೇನಾನಾಯಕನಿಲ್ಲದ ಸೇನೆ ಕಂಡರೆ ತಾನೆಭೂನಾಥಗಿಲ್ಲವೇನು ಬೇನೆ ಉಂಟೆಂಬುದು ನೀನೆಕಾಣಿಸದೆಮ್ಮಲಿ ಮೌನವ ಮಾಳ್ಪರೆದೀನಜನರ ದುಮ್ಮಾನಗೊಳಿಸುವರೆ 3ಹಿಂದೆಮ್ಮ ಕಾಯ್ದವ ನೀನೆಹರಿಸುರನರ ಕೈವಾರಿಮಂದಜ್ಞಾನಿಗಳ ತಪ್ಪನುಮಾರಿಮೂರ್ಲೋಕೋದ್ಧಾರಿಹೊಂದಿದವರಿಗೆಂದೆಂದಿಗು ಬಿಡನೆಂ-ಬಂದವ ತೋರಿ ಆನಂದವ ಬೀರುತ 4ಸರ್ಪಾದ್ರಿಯಿಂದ ಓಡಿಬಂದ ಕಾರ್ಕಳದೊಳು ನಿಂದಚಪ್ಪರ ಶ್ರೀನಿವಾಸ ಮುಕುಂದ ಪರಿಪೂರ್ಣಾನಂದಒಪ್ಪಿಸಿದೆಮ್ಮಭಿಪ್ರಾಯವ ತಿ-ಮ್ಮಪ್ಪ ಲಕ್ಷ್ಮೀನಾರಾಯಣ ಸಲಿಸಲು 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಾಣವದನ ಸಲಹೋ - ನಾ ನಮಿಸುವೆ |ಬಾಣವರದ ನಿನಗೆ | ಹರ ಹರ ಪಕುಧ್ರೇಡ್ಜ ಮುಖ ಕಂದ-ರವಿಅಘ|ಅದ್ರಿಸಮೂಹ ಋಷಿಜಾ | ಹರಹರ ||ನಿದ್ರರಹಿತ ವಿಧಿಜಾ ಸತತ ಅ- |ಭದ್ರ ಭಕ್ತರಿಗೆ ಕುಜ 1ಗಜಋಷಿ ಅಂಬಕನೆಪಶುಪತಿ|ತ್ರಿಜಗದಿ ಪೂಜಿತನೆ | ಹರಹರ ||ಅಜಿನಾಂಬರ ಧರನೇ ಕರುಣಿಸೊ |ವಿಜಯೇಕ್ಷಣ ಶಿವನೆ | ಹರಹರ 2ಕಾಮಾದಿ ಮುಖ ಜನಕ ಧೂರ್ಜಟ |ಭೂಮಿಜವೈರಿಸಖಾ | ಹರಹರ ||ಸಾಮಜರಿಪುಧನಿಕ ಮಿತ್ರನೆ |ಕಾಮಿತ ಫಲದಾಯಕ | ಹರಹರ 3ಧರಣಿಜೆ ರಮಣ ನಾಮಾ ಸರ್ವದಾ |ಸ್ಮರಿಸುವೆನತಪ್ರೇಮಾ || ಹರಹರ ||ಗರಳನಾಶನ ಭೀಮವಿಕ್ರಮ|ಸರೋಜ ಧ್ವಜ ವಿರಾಮ | ಹರಹರ 4ಘನನಿಭ ಪ್ರಾಣೇಶ ವಿಠ್ಠಲ |ನನುಗನೆನಿಪುದನಿಶ | ಹರಹರ ||ಘನಮಹಿಮನೆ ಈಶಕುಧರ| ಸ-ದನನಾಕಜಪೋಷ | ಹರಹರ 5
--------------
ಪ್ರಾಣೇಶದಾಸರು
ಬಾತೆಗೆ ಬಾರದ ವಸ್ತು ಬಹಳಿದ್ದರೇನುಹೋತಿನ ಕೊರಳೊಳಗೆ ಮಾಲೆಯಿದ್ದರೇನು ? ಪ.ತಾನು ಉಣ್ಣದ ದ್ರವ್ಯ ತಾಳೆಯುದ್ದ ಇದ್ದರೇನು?ದಾನವಿಲ್ಲದ ಮನೆಯು ದೊಡ್ಡದಾದರೇನು ?ಹೀನ ಕುಲದವಂಗೆ ಹಿರಿತದ ಬಂದರೇನುಶ್ವಾನನ ಮೊಲೆಯೊಳು ಹಾಲಿದ್ದರೇನು 1ವಾದಿಸುವ ಮಗನು ಒಯ್ಯಾರದಲಿದ್ದರೇನುಕಾದುವಸತಿ ಕೆಲದೊಳಿದ್ದರೇನು ?ಕ್ರೋಧವನು ಅಳಿಯದ ಸೋದರನು ಇದ್ದರೇನುಮಾದಿಗರ ಮನೆಯಲಿ ಮದುವೆ ಆದರೇನು 2ಹೋಗದೂರಿನ ಹಾದಿಕೇಳಿ ಮಾಡುವುದೇನುಮೂಗನ ಕಾಡ ಏಕಾಂತವಿನ್ನೇನು ?ಯೋಗಿ ಶ್ರೀ ಪುರಂದರವಿಠಲನ ನೆನೆಯದವಯೋಗಿಯಾದರೆ ಏನು ಜೋಗಿಯಾದರೆ ಏನು ? 3
--------------
ಪುರಂದರದಾಸರು
ಬಾರದೇತಕೋ ತವದಯ ಭಗವತಿಭಾರ್ಗವಿದೇವೀಪಘೋರದುರಿತಪರಿಹಾರಿಣಿ ಭಕ್ತೋದ್ಧಾರಿಣಿ ಭಾಗ್ಯ ವಿಹಾರಿಣಿ ಜನನೀ 1ವಂದಿಪೆ ಪಾದದ್ವಂಧ್ವ ಸರೋಜವಇಂದಿರೆಹರಿಯುರಮಂದಿರ ವಾಸಿನಿ2ನಾರಿಶಿರೋಮಣಿ ನಂಬಿದೆ ನಿನ್ನನುನಾರಾಯಣೀ ಭವನಾಶಿನಿ ಶಾರ್ಙಣಿ 3ದಾರಿದ್ರ್ಯಾಪಹ ಧನಧಾನ್ಯಪ್ರದಕ್ಷೀರಾರ್ಣವ ಸುತೇ ಶ್ರೀಮಹಾಲಕ್ಷ್ಮೀ 4ಹೇಮಗಿರೀಶ್ವರಿ ಭಾಮಾ | ತುಲಸೀರಾಮದಾಸನುತ ಸುಕ್ಷೇಮವು ನಿನ್ನದು 5
--------------
ತುಳಸೀರಾಮದಾಸರು