ಒಟ್ಟು 11370 ಕಡೆಗಳಲ್ಲಿ , 137 ದಾಸರು , 5713 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ವಾಮಿ ನಿಮ್ಮ ಕರುಣ ನಮ್ಮ ಸರ್ವಾಭರಣ ಸ್ವಾಮಿ ನಿಮ್ಮ ಚರಣ ನಮ್ಮ ಜನ್ಮೋದ್ಧಾರಣ ಧ್ರುವ ಸ್ವಾಮಿ ನಿಮ್ಮ ದಯ ನಮ್ಮ ಹಿತೋಪಾಯ ಸ್ವಾಮಿ ನಿಮ್ಮ ಭಯ ನಮ್ಮ ಪುಣ್ಯೋದಯ 1 ಸ್ವಾಮಿ ನಿಮ್ಮ ಖೂನ ನಿಜಸ್ಥಾನ ಸ್ವಾಮಿ ನಿಮ್ಮ ಙÁ್ಞನ ನಿಜಧ್ಯಾನ 2 ಸ್ವಾಮಿ ನಿಮ್ಮ ನೋಟ ನಮ್ಮ ಮನದೂಟ ಸ್ವಾಮಿ ನಿಮ್ಮ ಮಾಟ ನಮ್ಮ ಸುಖದಾಟ 3 ಸ್ವಾಮಿ ನಿಮ್ಮ ನಾಮ ನಮ್ಮ ಅತಿಪ್ರೇಮ ಸ್ವಾಮಿ ನಿಮ್ಮ ನೇಮ ನಮ್ಮ ನಿಜಾಶ್ರಮ 4 ಸ್ವಾಮಿ ನಿಮ್ಮ ಸೋಹ್ಯ ನಮ್ಮ ನಿಜಾಶ್ರಯ ಸ್ವಾಮಿ ನಿಮ್ಮ ಸಾಹ್ಯ ಮಹಿಪತಿ ಮನೋತ್ರಾಹ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ನೀನಹುದೋ ಶ್ರೀಗುರು ಸಾರ್ವಭೌಮ ನೇಮದಿಂದಲಿ ಹೊರೆವ ದಯಗುಣನಿಸ್ಸೀಮ ಧ್ರುವ ಜಗತ್ರಯಕ ಜೀವಭಗತ ಜನಕಾವ ಸುಗಮ ಸುಪಥವೀವ ಸುಗುಣ ಶ್ರೀದೇವ 1 ದಾತ ದೀನದಯಾಳು ನೀನಹುದು ಶ್ರೀನಾಥ2 ನಿಜದಾಸರ ಪಕ್ಷ ಸುಜನರ ಸಂರಕ್ಷ ಗಜವರ ಸಮೋಕ್ಷ ಭಜಕರಿಗೆ ಸುಭಿಕ್ಷ 3 ತೇಜೋಮಯ ಸಾಂದ್ರ ನಿಜಸುಖ ಸಮುದ್ರ ರಾಜಾಧಿರಾಜ ಮಹಾ ರಾಜರಾಜೇಂದ್ರ 4 ಶರಣಜನಪಾಲ ಸಿರಿಯ ಸುಖಲೋಲ ತಗಳ ಮಹಿಪತಿ ಸ್ವಾಮಿ ನೀನಹುದೊ ಕೃಪಾಲ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ನೀನೆ ಸಾರ್ವಭೌಮ ಶ್ರೀ ರಘುರಾಮ ಸೋಮಶೇಖರ ಪ್ರಿಯ ದಿವ್ಯ ನಿನ್ನ ನಾಮ ಧ್ರುವ ಕಾಕುಸ್ಥತಿಲಕ ಕಾರುಣ್ಯನಿಧಿ ಕೃಪಾಲ ಪ್ರಕಟ ಪ್ರಖ್ಯಾತಲಿಹ ಸತ್ಯಶೀಲ ನಾಕಜರ ಸೆರೆಬಿಡಿಸ್ಯಾದೆ ಸಾನುಕೂಲ ಸಕಲ ಸುಖದೀವ ಮೂಲೋಕಪಾಲ 1 ಖರದೂಷಣಾರಿ ಶರಣಾಗತರ ಸಹಕಾರಿ ಸರ್ವರಾಧಾರಿ ಕೋದಂಡ ಧಾರಿ ದುರುಳ ದುಷ್ಟ ಜನಸಂಹಾರಿ ವರಪೂರ್ಣವೀವ ಪರಮ ಉದಾರಿ 2 ಅನುದಿನದಲಿ ನಿನ್ನ ನಡಿನುಡಿಗಳೊಂದವೆ ನೇಮ ಅನಂತಗುಣ ಪೂರ್ಣಾನಂದ ಮಹಮಹಿಮ ದೀನ ಮಹಿಪತಿ ಅತ್ಮಾರಾಮ ಪೂರಿತ ಕಾಮ ಭಾನುಕೋಟಿ ತೇಜ ಘನದಯ ನಿಸ್ಸೀಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ನೀನೆ ಸ್ವಹಿತ ಗುರುನಾಥ ಬ್ರಹ್ಮಾನಂದ ಸದ್ಘನ ಸದೋದಿತ ಧ್ರುವ ನೀನಹದೋ ಬಡವನಾಧಾರಿ ಸಾನುಕೂಲ ನೀನೆವೆ ಪರೋಪರಿ ಅನುದಿನದಲಿ ನೀ ಸಹಕಾರಿ ಮನೋಹರ ಮೂರುತಿ ನೀ ಶ್ರೀ ಹರಿ 1 ದಯಗುಣಕೆ ನಿಮ್ಮ ನಾ ಸರಿಗಾಣೆ ತಾಯಿ ತಂದೆ ಸಕಲ ಬಂಧು ನೀನೆ ತ್ರೈಲೋಕ್ಯವಂದ್ಯ ನೀ ದೇವನೆ ಶ್ರೇಯ ಸುಖದಾಯಕ ಎನ್ನ ನೀನೆ 2 ಶ್ರುತಿ ಸಾರುತಲ್ಯದ ನಿಮ್ಮ ಖ್ಯಾತಿ ಸ್ತುತಿ ಮಾಡಲೇನು ನಾ ಮಂದಮತಿ ಅತಿ ದೀನ ನಾ ನಿಮ್ಮ ಮಹಿಪತಿ ಪ್ರತಿಪಾಲಕಹುದೋ ನೀ ಶ್ರೀಪತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ನೃಸಿಂಹ ಸರಸ್ವತಿಗೆ ಮಂಗಳಾ |ಕಾಮಿತ ಕಾಮ ಫಲ ತೃಪ್ತಿಗೆ ಮಂಗಳಾ ಪ ನಿತ್ಯ ನಿರ್ಮಾಯಗೆ ಮಂಗಳಾ |ನಿರ್ವಾಣ ಸುಖ ಯತಿರಾಯಗೆ ಮಂಗಳಾ 1 ಭಕ್ತಜನರ ಕಲ್ಪವೃಕ್ಷಗೆ ಮಂಗಳಾ |ಭಕ್ತಿಯಿಂದ ಭಜಿಸುವ ಮೋಕ್ಷಗೆ ಮಂಗಳ |ಭೀಮಾ ಗಂಧರ್ವಪುರ ವಾಸಗೆ ಮಂಗಳಾ |ಶ್ರೀ ಭೀಮಾಶಂಕರ ಗುರು ಈಶಗೆ ಮಂಗಳಾ 3
--------------
ಭೀಮಾಶಂಕರ
ಸ್ವಾಮಿ ಬಂದನು ಸತ್ಯಭಾಮೆರುಕ್ಮಿಣಿಯರಿಂದ ಕಾಮಿತ ಫಲವ ಕೊಡುತಲೆ ಪ. ವಾಸುದೇವ ತಾಯಿ ದೇವಕಿದೇವಿಎಂಭತ್ತುಕೋಟಿ ಯಾದವರುಎಂಭತ್ತುಕೋಟಿ ಯಾದವರು ಬರುತಾರೆ ತೊಂಭತ್ತು ಮಹಲು ತೆರವಿರಲಿ 1 ಸರ್ಪಶಯನನ ಬದಿಯಲೊಪ್ಪುತ ಬಲರಾಮ ಛsÀಪ್ಪನ್ನ ಕೋಟಿ ದ್ವಿಜರಿಂದ ಛsÀಪ್ಪನ್ನ ಕೋಟಿ ದ್ವಿಜರಿಂದ ಬರುತಾರ ಎಪ್ಪತ್ತು ಮಹಲು ತರವಿರಲಿ 2 ಸೂರ್ಯ ಸೂರ್ಯ ಹೊಳೆವಂತೆ ಗರುಡನೇರಿಅಂಗಳಕ ಬಂದ ನರಹರಿ 3 ನಾಗಶಯನನು ಬಂದ ಬೇಗಆರುತಿ ತಾರೆ ನೂರು ಸೂರ್ಯರ ಬೆಳಕಿಲೆ ನೂರು ಸೂರ್ಯರ ಬೆಳಗೊ ಗರುಡನೇರಿಬಾಗಿಲಿಗೆ ಬಂದ ಯದುಪತಿ4 ಮದಗಜಗಮನೆ ಬ್ಯಾಗ ಕಡಲಾರತಿಯ ತಾರೆ ಚದುರೆ ನೀ ತಾರೆ ಫಲಗಳಚದುರೆ ನೀ ತಾರೆ ಫಲಗಳ ಐವರಿಗೆ ಎದುರಿಗೆ ಬಾರೆಂದು ಕರಿಯಮ್ಮ 5 ಕೃಷ್ಣರಾಯನು ಬಂದ ಬುಕ್ಕಿಟ್ಟು ಸೂರ್ಯಾಡೆಅಷ್ಟ ಸೌಭಾಗ್ಯ ಇವು ನೋಡಅಷ್ಟ ಸೌಭಾಗ್ಯ ಇವು ನೋಡ ಮಾಡಿದ್ದುಎಷ್ಟು ಸುಕೃತವು ಸ್ಮರಿಸಮ್ಮ6 ಮಾಧವ ರಾಮೇಶನ ಉಪಚರಿಸೆ7
--------------
ಗಲಗಲಿಅವ್ವನವರು
ಸ್ವಾಮಿ ಭಜನೆ ಮಾಡೊ ಮನುಜ ಪ್ರೇಮದಿಂದಲಿ ಪಾದ ಹಿಡಿದು ಪ ಬಂಧು ಬಳಗ ಭಾಗ್ಯವೆಂಬ ಬಯಲು ವಸ್ತುವೊ ಹಿಂದು ಮುಂದೇನು ಬರುವರು ಯಾರು ಇಲ್ಲವೊ ಎಂದು ತಿಳಿದು ಹರಿಯ ಮನದಿ ಮರೆಯಬೇಡವೊ ಇಂದಿರೇಶ ಸಕಲಕರ್ತ ವೆಂಕಟಾದ್ರಿ ನಿಲಯನಾದ 1 ನಿತ್ಯನೇವÀು ನಿಷ್ಠೆಯಿಂದ ನಿಜವು ತಿಳಿದು ನಿ ಸತ್ಯವಂತರ ಸಂಗ ಬಿಡದೆ ಸರ್ವಕಾಲದಿ ಭೃತ್ಯರಿಗೆ ಭೃತ್ಯನಾಗಿ ಪೂರ್ಣಭಾವದಿ ಮರಿಯದ್ಹೋಗಿ ಬಿಡದೆ 2 ಗಾನಲೋಲ ಕರುಣಾಸಾಗರ ಘನವಿಲಾಸನ ಭಾನುಕೋಟಿ ತೇಜನಾದ ಪರಮ ಪುರುಷನಾ ಶರಧಿ ಧ್ಯಾನದಲಿ ಚಿತ್ತವಿಟ್ಟು ಧೇನು ಪಾಲಕ ದಿವಿಜವಂದ್ಯನ 3
--------------
ಹೆನ್ನೆರಂಗದಾಸರು
ಸ್ವಾಮಿ ಯಾತಕೆನ್ನೊಳುಪೇಕ್ಷೆ ಮಾಡುವಿ ದೀನನಾಥ ಸುಮ್ಮನೆ ನಿಂತು ನೋಡುವಿ ಪ. ನಡೆವನ ಕಣ್ಣ ಕಟ್ಟಿ ಕೆಡಹುವುದುಚಿತವೆ ಒಡೆಯ ನಿನ್ನಡಿಗಳ ಪೊಗಳುವ ಪಾಡಿ ನುಡಿವ ಕಾರ್ಯಕೆ ಬಾಡಿ ಬಳಲುತ ನಾ ನಿತ್ಯ ನೋಡುತ ಬಡವನ ಬಿಡದಿರು ಕಡಲಶಯನ ನಿಜ ಮಡದಿ ಸಹಿತನಾಗಿ ಶ್ರೀಶನೆ ಕೃಪೆ ಕಂಜಕರ ಶ್ರೀನಿವಾಸನೆ1 ಭಾವಜ ಪಿತ ನಿನ್ನ ಸೇವೆ ಮಾಳ್ಪರಿಗೆಂದು ನೋವ ನೀಡದೆ ಕಾವ ಬಿರುದನು ಭವ ಸಾರÀ ನೀ ಮರೆವುದು ನೀತಿಯೆ ಎನ್ನ ನೀ ವಿಧ ಮಾಳ್ಪುದು ಖ್ಯಾತಿಯೆ ಪಾವನ ಚರಿತ ಪುರಾಣ ಪುರುಷ ಮಹ ದೇವ ನೀ ಕರಪಿಡಿದೆನ್ನನು ಕರು- ಣಾವಲಂಬನವಿತ್ತು ಪೊರೆವುದು 2 ದುರುಳ ಭಾವನೆಯಿಂದ ಸರಿದು ಹೋಗುವ ಪಂಚ ಕರಣಕೆ ನೀನರಸನಲ್ಲವೆ ಭಕ್ತಾ- ಭರಣಕೆ ನಿನ್ನೊಳಿರಿಸು ಮಾರ್ಗವನಂತ:- ಕರಣಕೆ ತರಿದು ಪಾಪಗಳನು- ದ್ಧರಿಸೆನ್ನ ವೆಂಕಟಗಿರಿವರ ದೀನಾರ್ತಿ ಚಕ್ರಧರ ಸಕಲಾನಂದ ಕಾರಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ವಾಮಿ ಸಗುಣ ನಿರ್ಗುಣ ಬಾರಯ್ಯ ಬ್ರಹ್ಮಾನಂದ ಸುಖವು ದೋರಯ್ಯ ಧ್ರುವ ಕಣ್ಣು ಬಡೆಯುತದೆ ನಿಮ್ಮ ನೋಡೇನೆಂದು ಪುಣ್ಯಚರಣ ಸುಪ್ರಭೆದೋರೋ ನೀ ಬಂದು ಧನ್ಯಧನ್ಯಗೈಸುವದೋ ಕೃಪಾಸಿಂಧು ಎನ್ನೊಡೆಯ ನೀನಹುದೋ ದೀನಬಂಧು 1 ಅನುದಿನ ಸುಸೇವೆ ನಿಮ್ಮ ಮಾಡೇನೋ ಕ್ಷಣಕ್ಕೊಮ್ಮೆ ಸ್ವರೂಪ ನಾನೋಡೇನೋ ಘನ ಸುಖದೊಳು ನಾ ಬೆರೆದಾಡೇನೋ ನೆನೆವಂಥ ದಾಸರ ನಿಮ್ಮ ಕೂಡೇನೋ 2 ಹೃದಯದೊಳು ನಿಜವಾಗಬೇಕಿಗ ಸದಾಸರ್ವದಾ ಮಾಡೋ ಏನ್ನೊಳೀವ್ಹಾಂಗ ಪಾದಪದ್ಮಕ್ಯೋಗ್ಯ ಮಾಡೋ ಮಹಿಪತಿಗೆ ಇದೆ ಪುಣ್ಯ ನೋಡಯ್ಯ ಕುಲಕೋಟಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿಯು ನೀನಲ್ಲವೊ ಪಾಮರನೆ ಪ ಸ್ವಾಮಿಯು ನೀನಾಗೆ ಭೃತ್ಯಾನು ನಿನಗ್ಯಾರು ಈ ಮಾತಿಗೇನೆಂಬೆಯೊ ಸೋಮಾರಿ ಮನುಜನೆ ಅ.ಪ. ನಿತ್ಯತೃಪ್ತನು ದೇವದೇವೋತ್ತಮನವನು ಸತ್ಯ ಸಂಕಲ್ಪನು ಸಕಲ ಜಗವರಿಯೆ ಹೊತ್ತು ಹೊತ್ತಿಗೆ ಗ್ರಾಸಕಿಲ್ಲದವ ಗೃಹಪಾಲ ಸತ್ಯದನುಭವವಿಲ್ಲವೊ ನಿನಗೆ 1 ಸ್ವಾಮಿ ಭೃತ್ಯರಿಗೆ ಬೇಧವಿಲ್ಲೆಂಬುವ ನಿನ್ನ ಭೃತ್ಯ ತಾ ಬರಲು ಕಾಮಾರಿಯಂತೆ ಕೋಪವ ತಾಳುವೆ ನಮ್ಮ ಸ್ವಾಮಿಗೆ ತಾಮಸ ಗುಣವೆಲ್ಲಿಹುದೊ 2 ಕಾಸು ಕೊಟ್ಟರೆ ನೀನು ಹೇಸಿಕ್ಯಾದರು ಬಳಿವೆ ದಾಸ ನೀನಲ್ಲದೆ ಈಶನೆಂತಾದೆಯೊ ವಾಸುದೇವ ನೀನೆಂದು ಘಾಸಿಯಾಗಲು ಬೇಡ ರಂ- ಗೇಶವಿಠಲನ ದಾಸರ ದಾಸ ನೀನಾಗೊ 3
--------------
ರಂಗೇಶವಿಠಲದಾಸರು
ಸ್ವೀಕರಿಸೈ ಕರುಣಾಕರ ಶ್ರೀವರ ಲೋಕವಂದಿತ ಪ್ರಭುವೆ ಪ ಮಾಕಮಲಾಸನ ನಾಕಪಾಲವಂದ್ಯ ಮಾತುಳಾಂತಕ ಮಧುಸೂದನ ಶ್ರೀಹರಿ ಅ.ಪ ಮಾವು ಮಾದಳ ದ್ರಾಕ್ಷ ಬಾಳೆ ಕಿತ್ತಳೆ ಮೊದಲಾದ ಫಲಗಳೆಲ್ಲ ಮಾಧವ ನೀನಿದನಾರೋಗಣೆ ಮಾಡು ಶ್ರೀ ರಮಣಿಯ ಪ್ರಿಯ ಶ್ರೀನಿವಾಸನೆ ಬೇಗ 1 ನಾನಾ ವಿಧದ ಫಲ ಹಾಲು ಸಕ್ಕರೆ ಬೆಣ್ಣೆ ನಾರಾಯಣ ನಿನಗೆ ಬಾಲೆ ಲಕುಮಿ ಪರಮಾದರದಿಂದಲಿ ಸೇವೆಗೆ ಪರಮಾನ್ನವನರ್ಪಿಸುವಳು2 ತನುವೆಂಬೊ ತಟ್ಟೆಯೊಳಿರಿಸಿ ಫಲವ ನಿ- ರ್ಮಲಮನವೆಂಬ ವಸ್ತ್ರವನ್ಹೊದಿಸಿ ಸನ್ಮತವೆಂಬ ಸಾರಣೆಮಾಡಿ ನಮ್ಮ ಗುರುಕರುಣದ ರಂಗವಲಿಯನ್ಹಾಕುವೆ 3 ನವವಿಧ ಭಕುತಿಯ ನಳನಳಿಸುವ ವೀಳ್ಯ ಚಲುವ ಶ್ರೀ ಹರಿ ನಿನಗೆ ಸವಿನಯ ನುಡಿಗಳ ಮಂತ್ರ ಪುಷ್ಪಗಳು ಸನಕಾದಿವಂದ್ಯ ಸರ್ವೇಶ ಶ್ರೀ ಕೃಷ್ಣ 4 ಕ್ಷೀರ ಸಾಗರವಾಸಿ ಶ್ರೀ ಭೂರಮಣನೆ ಮಾರಜನಕ ಹರಿಯೆ ಕಾರುಣ್ಯಸಾಗರ ಕಮಲನಾಭ ವಿಠ್ಠಲ ಪಾರುಗಾಣಿಸೊ ಭವಸಾಗರದಿಂದಲಿ5
--------------
ನಿಡಗುರುಕಿ ಜೀವೂಬಾಯಿ
ಹಚ್ಚಡವಗೆಯ ಬೇಕಮ್ಮಾ | ಬಹುಕೊಳೆ ಮುಚ್ಚಿ ಕೊಂಡಿಹುದು ನೋಡಮ್ಮಾ ಪ. ಸ್ವಚ್ಛವ ಮಾಡುತ ಅಚ್ಯುತನಂಘ್ರಿಗೆ ಬೆಚ್ಚಗೆ ಹೊದಿಸಲು ಇಚ್ಛೆಯ ಮಾಡುತ ಅ.ಪ. ಏಳು ಪದರವಿಹುದೊ | ಬಹು ಕಾಲದಿಂ ಬಾಳುತ ಬಂದಿಹುದೂ ಕಾಲಕಾಲಕೆ ಬದಲಾವಣೆ ಪೊಂದುತ ಬೀಳುತೇಳುತ ಬೆನ್ನು ಬಿಡದಿರುತಿಹುದೊ 1 ಹೊರಗಡೆ ನವ ದುರ್ಗಂಧಾ | ಒಳಗಡೆ ಇನ್ನು ಅರುಹಲಾರದ ಕಲ್ಮಷಾ ಸುರರೆಲ್ಲ ಇದಕಿನ್ನು ಸರಿ ಇಲ್ಲವೆಂಬೋರು ಮರುತಾಂತರ್ಯಾಮಿಗೆ ಸರಿತೋರುವಂದದಿ 2 ಎಪ್ಪತ್ತೆರಡು ಸಾಸಿರಾ | ನೂಲುಗಳಿಂದ ವಪ್ಪಾಗಿ ಹೊಲಿದ ಪಾರ ಕಪ್ಪು ಕೆಂಪು ಬಿಳಿ ವಪ್ಪೆ ಬಣ್ಣಗಳಿಂದ ಸರ್ಪಶಯನ ಸತತ ಸಲಹಿ ಕೊಡುವಂಥ 3 ನಿರ್ಮಲೋದಕವ್ಯಾವುದೇ | ಇದನೊಗೆಯಲು ಸಮ್ಮತ ಶಿಲೆಯಾವುದೇ ಬೊಮ್ಮನೈಯ್ಯನ ಸುಜ್ಞಾನ ಸುಕೊಳದೊಳು ವಮ್ಮನಸಿನೊಳದ್ದಿ ವದ್ದೆ ಮಾಡುತಲಿನ್ನು 4 ವ್ಯಕ್ತಿ ವೈರಾಗ್ಯ ಶಿಲೇ | ಶ್ರೀ ಹರಿಗುರು ಭಕ್ತಿ ಎರಡು ಕೈಗಳೇ ಎತ್ತಿ ವಗೆದು ಎಲ್ಲಾ ಕಶ್ಮಲ ಕಳೆಯುತ ಮತ್ತೆ ಜಾಲಾಡಿ ಹಿಂಡಿಕೆ ಮಾಡಿ ಶುಭ್ರದಿ 5 ಎತ್ತಿ ತಂದು ಕೊಡುವುತಾ | ಮತ್ತೆ ಕೊಳೆ ಹತ್ತದಂದದಿ ನೋಡುತಾ ಉತ್ತಮವಾದ ಮೈದಾನದೊಳಗೆ ಹರಹಿ ನೆತ್ತಿ ಜ್ಯೋತಿಯ ಘನ ದೀಪ್ತಿಯಲ್ಲೊಣಗಿಸು 6 ಶುದ್ಧ ಸಾತ್ವಿಕವರ್ಣದೀ | ಹೊಳೆವಂಥ ಈ ಶುದ್ಧ ಹೊದ್ದಿಕೆ ಸ್ಥಾನದೀ ಮುದ್ದುಕೃಷ್ಣನು ತನ್ನ ಪರಿವಾರ ಸಹಿತದಿ ಪೊದ್ದಿಕೊಂಡಿಪ್ಪ ಬಲು ಭದ್ರವ ಮಾಡುತ 7 ಹಿಂದೆ ಮುಂದಿನ ಭಯವೆಲ್ಲಾ | ತಪ್ಪುವುದಿನ್ನು ಸಂದೇಹಪಡಲು ಸಲ್ಲಾ ತಂದೆ ಮುದ್ದುಮೋಹನ್ನ ಗುರುಗಳು ಪೇಳಿದ ಒಂದೆ ವಾಕ್ಯವ ಆನಂದದಿ ನಂಬುತ 8 ನೂತನ ಹಚ್ಚಡವೂ | ನೂಲುಗಾರ ಜಾತಿಯರರಿಯರಿವೂ ಪ್ರೀತಿಯೋಳ್ ಗೋಪಾಲಕೃಷ್ಣವಿಠ್ಠಲ ಕೊಟ್ಟ ಖ್ಯಾತಿಯೊಳ್ ಬಾಳಿ ಶ್ರೀನಾಥನ್ನ ಪೊಂದುವೋ 9
--------------
ಅಂಬಾಬಾಯಿ
ಹಟವ ಮಾಡದಿರು ಕೇಳೆಲೊ ಮೂಢ ಪ ಕುಟಿಲವ ಬಿಡು ನೀ ಗಾಢ ಅ.ಪ. ಹರಿ ಸರ್ವೋತ್ತಮ ವಾಯು ಜೀವೋತ್ತಮ ಹರ ವೈಷ್ಣವೋತ್ತಮನೆನ್ನೊ 1 ಮಧ್ವ ಸಿದ್ಧಾಂತದ ಪದ್ಧತಿ ಬಿಡದಲೆ ಶುದ್ಧ ವೈಷ್ಣವರೊಳಾಡೊ 2 ಹರಿ ಶರಣರ ಚರಣ ಕಮಲಂಗಳಿಗೆ ಗರುವಪಡದೆ ನೀ ಬೀಳೊ 3 ಸಂತತದಲಿ ಶ್ರೀಕಾಂತನ ಗುಣಗಳ ಚಿಂತನೆ ಮಾಡುತ ಬಾಳೊ 4 ಮಂಗಳಾಂಗ ತ್ರಿಜಗಂಗಳ ಪೊರೆವವ ರಂಗೇಶವಿಠಲನೆನ್ನೊ 5 ನೆಲವಿತ್ತ ದಯವಂತ ಶ್ರೀಕಾಂತ 3
--------------
ರಂಗೇಶವಿಠಲದಾಸರು
ಹಡಪ ಕಾಳಾಂಜಿ ಚಾಮರ ಛತ್ರ ವ್ಯಜನ ಪಾ ವಡಗಾಡಿ ವಸಡುಗ ಪಾವುಗೆ ಸುವರ್ಣದರ್ಪಣವಾ ಪ ಪಿಡಿದ ನಾರಿಯರು ಯಡಬಲದ ಕೈದೀವಿಗೆಯ ಕೊಡುತ ಕೈಲಾಗಿನವರಡಿಗಳೆಚ್ಚರಿಕೇ ಅ.ಪ ವೀಣೆ ದಂಡಿಗೆ ತಾಳ ಮೇಳ ಸನಕಾದಿ ಸುರ ನಾರಿಯರು ಗೀತ ಪ್ರಬಂಧ ನರ್ತನದ ಪು ರಾಣ ಕೋವಿದರು ಪಾಠಕನಿಕರ ಸಹಿತ ಗೀ ರ್ವಾಣರೈದಿರಲು ಅವಧಾನವೆಚ್ಚರಿಕೇ 1 ಗಂಧ ಪರಿಮಳ ಪುಷ್ಪ ತಾಂಬೂಲ ಫಲಗಳನು ತಂದು ಉಡುಗೊರೆಯ ಕಾಣೆಕೆಯಿಟ್ಟು ಜಯವೆನುತ ನಂದ ಮುಕುಂದ ಗೋವಿಂದ ಕೇಶವಯೆನುತ ವಂದನೆಗಳನೆ ಮಾಡಿ ನಿಂದರೆಚ್ಚರಿಕೇ 2 ಭಾಗವತ ಜನರು ಬಿರುದಾವಳಿಯ ಪೊಗಳೆ ಮುನಿ ಯೋಗಿಗಳು ತತ್ವ ಪ್ರಬಂಧದಧ್ಯಾಪಕರು ಮೇಘವಾಹನ ಪೂಮಳೆಗರೆಯೆ ಸಕಲ ವಿನಿ ಯೋಗದವರನು ಕಳುಹುವಾಗಲೆಚ್ಚರಿಕೇ3 ಸರಸಿಜೋದ್ಭವನು ದಿಕ್ಪಾಲನಾರದ ಧ್ರುವನು ಗರುಡ ಗಂಧರ್ವ ವಿದ್ಯಾಧರರು ಅನಿಲಜನು ಪರಮ ಭಕ್ತಿಯಲಿ ಊಳಿಗಕೆ ಬಂದೈದಾರೆ ಧರೆಗಧಿಕ ವೈಕುಂಠ ಚನ್ನ ಕೇಶವ ಚಿತ್ತೈಸೋ 4
--------------
ಬೇಲೂರು ವೈಕುಂಠದಾಸರು
ಹಣವೆÉ ನಿನ್ನಯ ಗುಣವೇನು ಬಣ್ಣಿಪೆನೊ ಪ. ಹಣವಿಲ್ಲದವನೊಬ್ಬ ಹೆಣವೇ ಸರಿ ಕಂಡ್ಯಾ ಅ.ಪ. ಬೆಲೆಯಾಗದವನೆಲ್ಲ ಬೆಲೆಯ ಮಾಡಿಸುವಿ ಎಲ್ಲ ವಸ್ತುಗಳನಿದ್ದಲ್ಲೆ ತರಿಸುವಿ ಕುಲಗೆಟ್ಟವರ ಸತ್ಕುಲಕೆ ಸೇರಿಸುವಿ ಹೊಲೆಯನಾದರೂ ತಂದೊಳಗಿರಿಸುವಿ 1 ಅಂಗನೆಯರ ಸಂಗ ಅತಿಶಯದಿ ಮಾಡಿಸುವಿ ಶೃಂಗಾರಾಭರಣಂಗಳ ಬೇಗ ತರಿಸುವಿ ಮಂಗನಾದರೂ ಅನಂಗನೆಂದೆನಿಸುವಿ ಕಂಗಳಿಲ್ಲದವಗೆ ಮಗಳ ಕೊಡಿಸುವಿ 2 ಚರಣಕ್ಕೆ ಬಂದಂಥ ದುರಿತವನು ಬಿಡಿಸುವಿ ಸÀರುವರಿಗೆ ಶ್ರೇಷ್ಠನರನ ಮಾಡಿಸುವಿ ಅರಿಯದ ಶುಂಠನ ಅರಿತವನೆನಿಸುವಿ ಸಿರಿ ಹಯವದನನ ಸ್ಮರಣೆ ಮರೆಸುವಿ 3
--------------
ವಾದಿರಾಜ