ಒಟ್ಟು 1215 ಕಡೆಗಳಲ್ಲಿ , 94 ದಾಸರು , 965 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರ ಉಪಕಾರವ ಮರೆಯದಿರೆಚ್ಚರಿಕೆ ಪ ಕೇಡು ನೆನೆಯ ಬೇಡ ನಂಬಿದವರ ಮೇಲೆ ಕೆಡುವೆ ನೀನೆಚ್ಚರಿಕೆ ಅ ಸಿರಿ ಇರುವಾಗ ಬಂಧುಬಳಗಗಳೆಚ್ಚರಿಕೆಹಾಳು ಸಂಸಾರಕ್ಕೆ ಹಲವರ ಬಾಯ್ಗಳ ಬಡಿಯದಿರೆಚ್ಚರಿಕೆ 1 ಮೂಢರ ಒಡನಾಡಿ ಮುಂದೆ ಕೆಡಲು ಬೇಡ ಮೋಸ ನೋಡೆಚ್ಚರಿಕೆನಾಡೊಳು ಸುಜನರ ನೋಡಿ ನಡೆ ಕಂಡ್ಯ ನಟನೆ ಬೇಡೆಚ್ಚರಿಕೆ 2 ಚೆನ್ನಾಗಿ ಬದುಕಿದೆ ಗಳಿಸಿದೆ ನಾನೆಂಬ ಹೆಮ್ಮೆ ಬೇಡೆಚ್ಚರಿಕೆನಿನ್ನಾಯು ಮುಗಿಯಲು ಯಮದೂತರು ಬಂದು ಎಳೆಯುವರೆಚ್ಚರಿಕೆ 3 ಹೆಣ್ಣು ಹೊನ್ನು ಮಣ್ಣು ನಿನ್ನನ್ನಗಲಿ ಹೋಗುವರೆಚ್ಚರಿಕೆಮುನ್ನ ಮಾಡಿದ ಪುಣ್ಯ ಬೆನ್ಹತ್ತಿ ಬರುವುದು ಮುಂದೆ ನೋಡೆಚ್ಚರಿಕೆ 4 ಒಬ್ಬರಂತೆಲ್ಲರ ನೋಡು, ಸತ್ಕರ್ಮದಿ ಉಬ್ಬಬೇಡೆಚ್ಚರಿಕೆಕಬ್ಬುಬಿಲ್ಲನ ಪಿತನ ಏಕಾಂತ ಭಾವದಿ ನೆರೆನಂಬು ಎಚ್ಚರಿಕೆ 5 ತಿಂದೋಡಿ ಬಂಧುಬಳಗ ತಪ್ಪಿಸಿಕೊಂಬರೆಂದು ನೋಡೆಚ್ಚರಿಕೆಎಂದೆಂದು ಅಗಲದ ಬಂಧು ಶ್ರೀಹರಿ ನಮಗೆಂದು ನೋಡೆಚ್ಚರಿಕೆ 6 ಕಾಲನ ದೂತರು ಯಾವಾಗ ಎಳೆವರೊ ಕಾಣದು ಎಚ್ಚರಿಕೆಬೇಲೂರ ಪುರವಾಸ ನೆಲೆಯಾದಿಕೇಶವನಾಳಾಗು ಎಚ್ಚರಿಕೆ 7
--------------
ಕನಕದಾಸ
ಪರ ಪುರುಷರಾಚರಣೆ ಬೇರೆ |ಈ ಪಾಪಿ ಜನಕೆ ಮತ್ತೊಂದು ಬಗೆದೋರೆ ಪ ಚಿಂತೆಯೆಂಬುದು ಚಿತ್ತದಲ್ಲಿಲ್ಲಾ | ಅಂತರಂಗದಿ ಆನಂದದಲಿಹರೂ | ಸಂತ ಸಮೂಹದಿ ಶಾಂತದಿ ಒಡಗೂಡಿ | ಕಂತುಹರನ ಯೋಗ ಮಾಡುತಿಹರೂ 1 ಮಾಯಾ ನಿತ್ಯ ವಸ್ತುವಿನೊಳು ಪೂರ್ಣರಾಗಿಹ 2 ಬೇಕೆಂದು ಬೇಡರು ಬೇಕೆಂದು ಮಾಡರು |ಕಾಡು ಮಂದಿಗಳೊಡನೆ ಮಾತನಾಡರು | ಲೋಕನಾಯಕ ಭವತಾರಕನ ಚರಣವ | ಏಕಾಂತದಲಿ ಪೂಜಿಸುತಿಹರು 3
--------------
ಭಾವತರಕರು
ಪರ ಅಕ್ಷರವ ಧ್ರುವ ಕ್ಷರ ಅಕ್ಷರವ ಸೆÉರಗ ಪಿಡಿಯೋ ಗುರು ಮುಖದಲಿ ನೀ ಪೂರ್ಣ ಪರಮಾನಂದ ಸುಖದೋರುವ ಬಗೆ ಅರಿಯೋ ಕೂಟ ಸ್ಥಳದಲಿ ಪ್ರಾಣಿ 1 ರೇಚಕ ಪೂರ್ವಕದನುಭವ ತಿಳಿದು ಯೋಚಿಸಿ ನೋಡಲಿಂದ ಸೂಚಿಸಿ ತಾನೆ ಭಾಸುವ ಕ್ರಮವಿದು ಅಚರಿಸೋ ಅನುಭವದಲಿ ಪ್ರಾಣಿ 2 ಕ್ಷರ ಅಕ್ಷರವ ತಿಳಿಯದೆ ಬರೆÀವಾ ಅಕ್ಷರದಾ ಖೂನ್ಯಾಕ ಎರಡೇ ಮಾತಿನ ಅರಿವೇ ಅದರೆ ಪರಲೋಕಕ್ಕೆ ಸೋಪಾನವಿದು ಪ್ರಾಣಿ 3 ಇದೇ ಹೇಳಿದ ಗೀತೆಯಲ್ಲಿ ಶ್ರೀಕೃಷ್ಣನೆ ತಾಂ ಅರ್ಜುನಗೆ ಇದರಿಟ್ಟಿದು ಘನಸುಖ ಆ ಮಹಿಮನೆ ಇದರಿಂದಲಿ ತಿಳಿವದು ನೀ ಪ್ರಾಣಿ 4 ಇಡಾ ಪಿಂಗಳ ನಾಡಿ ನಡುವಿದು ಸಾಧಿಸಿ ಮಾತಿನ ಖೂನ ಎಡಬಲ ನೋಡದೆ ಪಡಕೋ ಮಹಿಪತಿ ಒಡನೆ ನಿನ್ನೊಳು ನಿಧಾನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪರಮ ಕರುಣಾಕರನೆ ಕರಪಿಡಿದು ಸಲಹೆನ್ನ ವರ ತಂದೆ ಮುದ್ದುಮೋಹನರೊಡೆಯನೆ ಪ. ಸಿರಿಯರಸ ಶ್ರೀ ಶ್ರೀನಿವಾಸ ಶ್ರೀ ಕೃಷ್ಣಹರೆ ಪರಮದಯಾಳು ದೇವ | ದೇವಅ.ಪ. ನಿರುತ ನೀ ಸ್ವಪ್ನದಲ್ಲಿ ಪರಿಪರಿಯ ರೂಪದಲಿ ತ್ವರಿತದಲಿ ತೋರಿ ಕಾಯ್ದೆ ಪರಮಪಾವನಮೂರ್ತಿ ಗುರು ಅಂತರ್ಯಾಮಿಯೆ ಕರಕರೆಯ ಬಿಡಿಸಿ ಸಲಹೊ | ದೇವ 1 ವಿಶ್ವತೈಜಸ ಪ್ರಾಜ್ಞ ತುರಿಯ ರೂಪಗಳಿಂದ ನೀ ಸ್ವಪ್ನಗಳನೆ ತೋರ್ವೆ ವಿಶ್ವೇಶ ಎನ್ನೊಳಗೆ ಸಾಕ್ಷಿಯಾಗಿರುತ್ತಿರ್ದು ವಿಶ್ವಮಯ ಚೇಷ್ಟೆ ಮಾಳ್ಪೆ | ದೇವ 2 ಈ ಶರೀರದೊಳಗೆ ಶ್ರೀ ತೈಜಸನೆ ನೀನು ವಾಸವಾಗಿರುತಲಿರ್ದು ನಾಶರಹಿತನೆ ಮೋಹಪಾಶದಲಿ ಸಿಲುಕಿಸಿ ಮೋಸಪಡಿಸುವರೆ ಎನ್ನ | ದೇವ 3 ಬಿಡಿಸೊ ದುರ್ವಿಷಯಗಳ ತಡವಾಕೊ ಹರಿ ಇನ್ನು ಒಡಲಿಗೊಡೆಯನೆ ಶ್ರೀಹರಿ ಕೊಡು ನಿನ್ನ ಪದಸೇವೆ ನುಡಿಸು ನಿನ್ನಯ ನಾಮ ಪಡಿಸು ಸುಖ ಅನವರತದಿ | ದೇವ 4 ಸ್ವಪ್ನ ವ್ಯಾಪಾರದಲಿ ಅಪ್ರತಿಮಮಹಿಮೆಗಳ ಕ್ಷಿಪ್ರದಿಂದಲಿ ತೋರಿದೆ ಸಪ್ತಫಣಿಮಂಡಿತನೆ ಒಪ್ಪದಿಂದಲಿ ಎನ್ನ ತಪ್ಪನೆಣಿಸದಲೆ ಕಾಯೋ | ದೇವ 5 ನೀತ ಗುರುಗಳ ದ್ವಾರ ಪ್ರೀತನಾದ ಹರಿಯೆ ಪಾತಕವÀ ಕಳದೆ ಸ್ವಾಮಿ ವಾತಜನಕನೆÀ ನಿನ್ನ ಖ್ಯಾತಿ ಪೊಗಳಲು ಅಳವೆ ಪ್ರೀತನಾಗಿದ್ದು ಸಲಹೊ | ದೇವ 6 ಶ್ರೀಪತಿಯೆ ಪರಮಪಾವನಮೂರ್ತಿ ವಿಖ್ಯಾತ ನೀ ಪ್ರೀತಿಲೀಲೆ ತೋರ್ದೆ ಕಾಪಾಡಿದೆಯೊ ಎನ್ನ ಶ್ರೀ ಗುರುಗಳೊಳಗಿರ್ದು ಗೋಪಾಲಕೃಷ್ಣವಿಠ್ಠಲ ದೇವ 7
--------------
ಅಂಬಾಬಾಯಿ
ಪರಮ ಪುರುಷ ಹರಿ ಗೋವಿಂದ - ಸಿರಿವರ ನಾರಾಯಣ ಗೋವಿಂದ ಪ ನಿಶೆವೆಸರಸುರನ ಉಸಿರ ತೊಲಗಿಸಿದೆಕುಸುಮ ಶರನ ಪಿತ ಗೋವಿಂದವಸು ಪೂರಿತ ಶ್ರುತಿ ಮಸುಳಿಸದೆ ತಂದೆಬಿಸಜ ಸಂಭವನಯ್ಯ ಗೋವಿಂದ 1 ಮಂದರ ಸಿರಿ ಗತವಾಗದ ಮುನ್ನಕ್ಷಿತಿ ಪೆತ್ತನಯ್ಯ ಗೋವಿಂದ 2 ಭೂತಳವೆರಸಿ ರಸಾತಳಕಿಳಿದಿಹಪಾತಕನ ಕಂಡೆ ಗೋವಿಂದಆತನೊಡನೆ ಕಾದಾತನ ಗೆಲಿದು ಮ-ಹೀತಳವನು ತಂದೆ ಗೋವಿಂದ 3 ದುರುಳಾಸುರನ ನಡುಗರುಳ ಮಾಲೆ ಮುಂ-ಗೊರಳೊಳು ಧರಿಸಿದೆ ಗೋವಿಂದಗರಳ ಕೊರಳನು ಬೆರಳೆತ್ತಿ ಪೊಗಳಲುತರಳಗೊಲಿದೆ ನೀ ಗೋವಿಂದ4 ವಾಮನನಾಗಿ ನಿಸ್ಸೀಮ ಬಲಿಯ ಕೈಯಭೂಮಿಯನಳೆಕೊಂಡೆ ಗೋವಿಂದತಾಮರಸ ಪದದಿ ಕನಕ ಗರ್ಭಯೋಗವ್ಯೋಮ ಗಂಗೆಯ ತಂದೆ ಗೋವಿಂದ 5 ಸುರ ಪಶುವಿಗೆ ಋಷಿಯನು ಕೊಂದನ ಬಹುಕರ ಬಲ ಮುರಿದೆಯೊ ಗೋವಿಂದತರ ಹರಿಸದೆ ವಸುಧೆಯ ಒಡೆತನ ಭೂಸುರರಿಗೆ ನೀಡಿದೆ ಗೋವಿಂದ 6 ತ್ರಿಣಯನ ತಾತ್ಪರ್ಯ ರಾವಣನ ಶಿರರಣದೊಳುರುಳಿಸಿದೆ ಗೋವಿಂದಕ್ಷಣಮೆಣಿಸದೆ ಸದ್ಗುಣವಂತ ವಿಭೀ-ಷಣಗಭಯವಿತ್ತೆ ಗೋವಿಂದ 7 ಕ್ರತು ಸಿರಿ ಭೂಭಾರೋತ್ತಾರಣ ಬಲಯುತ ಗೋವಿಂದ 8 ಕಥೆಯನು ನಿರ್ಮಿಸಿ ಪತಿವ್ರತೆಯರ ಘನವ್ರತಗಳ ಕೆಡಿಸಿದೆ ಗೋವಿಂದಜತೆಯಗಲದ ಪುರ ತ್ರಿತಯ ಗೆಲಿದು ದೇ-ವತೆಗಳ ಸಲಹಿದೆ ಗೋವಿಂದ 9 ಜಾಜಿಯ ಮರಕತ ತೇಜಿಯನೇರಿ ವಿ-ರಾಜಿಪ ರಾವುತ ಗೋವಿಂದಸೂಜಿಯ ಬೆನ್ನೊಳು ರಾಜಿಪ ತೆರದಿ ಸ-ಹಜರೊಳಡಗಿರ್ಪ ಗೋವಿಂದ 10 ಮೇದಿನಿಗೋಸುಗ ಕಾದಿ ಕಲಹದಿ ವಿ-ರೋಧಿಗಳ ಕೊಂದೆ ಗೋವಿಂದಸಾಧುಗಳಿಗೆ ಸುಖವೀಯುವ ಬಾಡದಶ್ರೀಧರ ಕೇಶವ ಗೋವಿಂದ 11
--------------
ಕನಕದಾಸ
ಪರಮ ಸಾಹಸವಂತ ಧೀಮಂತ ಹನುಮಂತ ಪ ಸರಸರನೆ ತಾ ಬೆಳೆದ ತಾ ಮುಗಿಲ ಪರ್ಯಂತ ಅ.ಪ. ಇಳೆಯಿಂದ ನಭವ ಪರಿಯಂತವೇಕಾಕೃತಿಯು ಬೆಳಗುತಿರೆ ನೋಡಲತಿ ಚೋದ್ಯವು ವಿಲಸಿತದ ವಿಂಧ್ಯಗಿರಿಯಂತೆ ಶೋಭಿಸಿತು ಫಲಗುಣಾಗ್ರಜ ನೋಡಿ ಬೆÉರಗಾಗುತಿರಲು 1 ಪಿಂಗಾಕ್ಷಿಗಳು ದಿಕ್ತಟಂಗಳನು ಬೆಳಗುತ್ತ ಕಂಗೊಳಿಸುತಿರ್ದುದಾ ಸಮಯದಿ ಶೃಂಗಾರ ಕಾಂತಿಯಿಂ ತುಂಗವಿಕ್ರಮನ ಉ ತ್ತುಂಗ ದೇಹವು ದಿವ್ಯರಂಗು ಒಡೆದೆಸೆಯೆ 2 ಶರಧಿಶತಯೋಜನ ನೆರೆದಾಂಟಿದಾ ದೇಹ ಅರಿಭಯಂಕರ ದೇಹ ಗುರುತರದ ದೇಹ ಕರಿಗಿರೀಶನ ಚರಣ ಸರಸೀರುಹ ದ್ವಂದ್ವ ಪರಿಚರ್ಯಕ್ಕನುವಾದ ಪರಮದೇಹವಿದೆನಲು 3
--------------
ವರಾವಾಣಿರಾಮರಾಯದಾಸರು
ಪರಮ ಸುಗುಣಸಾಂದ್ರ ಗುರುರಾಘವೇಂದ್ರ ಪ ಕರುಣಾಳೋ ಮುನಿ | ವಂಶಸುಧಾಕರ | ಗುರುರಾಜ ಪ್ರಭೋ | ಶ್ರೀ ರಾಘವೇಂದ್ರ ಅ.ಪ ಮುರುಕುಮಂಟಪದೊಳು | ಹರಕುಚಿಂದಿಯನ್ಹೊದ್ದು | ಉರಿಯ ಬೆಳಕಿನಲ್ಲಿ | ಪರಿಮಳ ರಚಿಸಿದೆ || ಗುರುಗಳಾಕ್ಷಣ ಕಂಡು | ಪರಮಸಂಭ್ರಮದಿಂದ | ಪರಿಮಳಾಚಾರ್ಯನೆಂಬ | ಬಿರುದಿತ್ತು ಕರೆದರೊ 1 ಜಡಮತಿ ಬ್ರಾಹ್ಮಣ | ಮಿಡುಕಿ ನಿರೂಪಿಸೆ | ವಡನೆ ಗಂಧವ ತೇದೆ | ಅನಲನ ಜಪಿಸುತೆ || ಒಡಲ ಬೇಗೆಯಿಂ ಜನರು | ಬಡಬಡಿಸಿದ ಕಂಡು | ಕಡಲರಸನ ದಯದಿ | ಕಡುಶಾಂತಿ ಇತ್ತೆಯೊ2 ಬಾದರಾಯಣಮುನಿ | ಭೇದಮತವ ಬಿತ್ತೆ | ಮೋದತೀರ್ಥರು ತರುವ | ಸಾದರಗೈದರೊ || ಸ್ವಾದಫಲಂಗಳು | ನಿನ್ನಿಂದ ತೋರ್ದವು | ಸಾಧುಜನಾರ್ಚಿತ | ಶ್ರೀಶಕೇಶವಪ್ರಿಯ 3
--------------
ಶ್ರೀಶ ಕೇಶವದಾಸರು
ಪರಮಾನುಗ್ರಹ ಮಾಡು -ಈ ತರಳನ ದಯದಿಂ ನೋಡು ಪ ನರಹರಿ ನೀನಲ್ಲವೆ ಕರುಣಾಳು ಅ.ಪ ಅನ್ನ ಸೇರಲಿಲ್ಲವಂತೆ -ಮಲಗಿ ನಿನ್ನಿಂದಲಿ ಹೀಗಿಹನಂತೆ ಘನ್ನಮಹಿಮ ನಿನ್ನವರಿಗೆಲ್ಲ -ಈ ಬನ್ನ ನ್ಯಾಯವೆ ಪ್ರಸನ್ನ ನೃಸಿಂಹ 1 ತುಡುಗಾಟಗಳಾಡಿ ಬಳಲಿ -ಈ ಹುಡುಗ ಮನೆ ಮನೆಯ ತೊಳಲಿ ಕಡುಭೀತಿಯ ಹೊಂದಿರುವ ನಾವು ನಿ- ನ್ನೊಡವೆಯಲ್ಲವೆ ಒಡೆಯ ನರಹರಿಯೆ 2 ಔಷಧ ಪಥ್ಯಗಳೇಕೆ -ನಿ ರ್ದೋಷ ನೀನೊಳಗಿರಲಿಕ್ಕೆ ಶೇಷಶಯನ ಗುರುರಾಮವಿಠಲ ಪÉೂೀಷಿಸುವನು ನೀನೆ ನೀನೆ ನಿಜ3
--------------
ಗುರುರಾಮವಿಠಲ
ಪರಾಕು ಜೀಯ ವೆಂಕಟರಾಯ ಪರಾಕು ಸರ್ವೋದ್ವøಕ್ತ ನೀನೊಬ್ಬ ಸಾಕು ಉಕ್ತಿಯ ಕೇಳಬೇಕು ಪಾಲಿಸು ಸಾಕು ಪ. ಇಂದಿರಾವರ ದೀನ ಬಂಧು ನಿನ್ನ ಪಾದಾರ- ವಿಂದವೆ ಶರಣವೆಂದು ಹೊಂದಿದೆನಿಂದು ಮಂದ ಭಾವನೆಯ ಕುಂದು ಕ್ಷಮಿಸು ಯೆಂದು 1 ಕಾಲ ಶುಭ ಲೀಲೆಯರಸವೆಂಬ ಪಾಲ ಕುಡಿಸುತೆನ್ನನು ಪಾಲಿಸು ಪದ್ಮ ಲೋಲ ನಿನ್ನಣುಗನನ್ನು ಕೈಪಿಡಿದಿನ್ನು 2 ತಡೆಯದೆ ಸಕಲಾರ್ಥ ಕೊಡುವೆ ಶ್ರೀ ವೆಂಕಟಾದ್ರಿ ಒಡೆಯ ನೀನೊಲಿದಿರಲು ವೈರಿಗಳನ್ನು ಕೆಡವುತ ಸುಖ ಲಾಭವು ಸಿದ್ಧವಾಗಿಹವು 3
--------------
ತುಪಾಕಿ ವೆಂಕಟರಮಣಾಚಾರ್ಯ
ಪರಾಕು ಪ ಕಾಮಿತ ಫಲವೀವ ಕರುಣಾಂಬುಧಿ ಎಂದು ನಾ ಮೊರೆಹೊಕ್ಕೆನಲ್ಲೋ ರಾಮರಾಮಾ ಪ್ರಫುಲ್ಲ ಅ.ಪ. ಎಡವಿದ್ದ ಮಾತ್ರದಿ ಪೆಣ್ಣಾದ ಗೌತಮಮಡದಿಯು ನಿನ್ನವಳೇನೋಕಡುಪ್ರೀತಿಯಿಂದ ಕಾಯಿದಿ ಕರಿರಾಜನು ನಿನ್ನಒಡಲಲ್ಲಿ ಜನಿಸಿದನೇನೋನಡುಗುತ ಮಗನ ನಾರಗನೆನ್ನಲುನುಡಿ ಕೇಳಿ ಪೊರೆದೆಲ್ಲೊ ರಾಮರಾಮಾ1 ಹಿಂದ್ವೈರಿ ದೆಸೆಯಿಂದ ಬಂದ ವಿಭೀಷಣನುತಂದೆಯ ಕಡೆಯವನೇನೋಕಂದು ಕುಂದೆಣಿಸದೆ ಕಾಯಿದಿ ಘಂಟಾಕರ್ಣಾಎಂದಾ ಮಾತಿನ ಬಗೆಯೇನೋಬಂದು ಕಂಬದಿ ಶಿಶುವ ಬಾಧೆಯ ಬಿಡಿಸಿದಿ ಆಪದ್ಬಾಂಧವ ನೀನಲ್ಲೋ ರಾಮರಾಮಾ 2 ಉಲ್ಲಾಸದಿಂದ ಶಬರಿ ಉಂಡೆಂಜಲಿಗೊಡ್ಡಿದವಲ್ಲಭ ನೀನಲ್ಲವೇನೋಎಲ್ಲಿಯ ಬಲ್ಲಿದ ಪಿಡಿಯವಲಕ್ಕಿಗೆ ನೀ ಪೋಗಿವಲ್ಲ್ಯೊಡ್ಡಿದ್ದು ಮರೆತ್ಯೇನೋಎಲ್ಲಿಯ ಮಾತಿದು ಪೇಳಲಂಜುವೆ ರಂಗ ವಿ-ಠಲ ನೀನಲ್ಲೋ ರಾಮರಾಮಾ 3
--------------
ಶ್ರೀಪಾದರಾಜರು
ಪರಿ ನಿರ್ದಯಗೈದಿರಿ ತಂದೆ ಶ್ರೀ ಗುರುವೆ ಪೇಳಿ ಪ. ನೊಂದೆನು ಈ ದಿನ ನಿಮ್ಮ ವಾರ್ತೆ ತಿಳಿಯದೆ ಕುಂದೇನು ತೊರಿತೋ ಎನ್ನಿಂದ ಕ್ಷಮಿಸಿರಿ ಅ.ಪ. ಪ್ರತಿದಿನದಲಿ ನಿಮ್ಮ ಹಿತವಾರ್ತೆ ಕೇಳುತ ಅತಿಶಯಾನಂದವ ಪಡುತಲಿದ್ದೆ ಇಂದು ಅತಿಶಯದ ನಿಮ್ಮ ಹಿತವಾರ್ತೆ ತಿಳಿಯದೆ ಮತಿ ಹೀನಳಾಗಿಹೆ 1 ಉಲ್ಲಾಸಗೊಳಿಸುವ ಪುಲ್ಲನಾಭವ ಮಹಿಮೆ ಸೊಲ್ಲು ಸೊಲ್ಲಿಗೆ ನುಡಿಸಿ ಭವದಾಟಿಸಿ ಒಲ್ಲೆನು ನಾನೊಂದು ಇಹಪರ ಸೌಖ್ಯವು ನಿಲ್ಲಲಿ ಎನ್ನಮನ ನಿಮ್ಮ ಪಾದದಿ ನಿರುತ 2 ತನುಮನ ಒಪ್ಪಿಸಿ ಮನದಿ ಧ್ಯಾನಿಸುವುದು ಘನಮನಕಿನ್ನೀಗ ಬರಲಿಲ್ಲವೆ ವನಜಜಾಡಂಡದೊಳಿನ್ನು ಎನ್ನ ರಕ್ಷಿಸುವರ ಮನದಿ ನಾ ಕಾಣೆನು ವನಜಾಕ್ಷ ಬಲ್ಲನು 3 ಮೊರೆಯ ಕೇಳುತಲೀಗ ತ್ವರಿತದಿಂ ಬನ್ನಿರಿ ಸರಸಿಜಾಕ್ಷನ ತೋರಿ ಹರುಷವಿತ್ತು ದುರಿತವ ತೊಲಗಿಸಿ ಕರಕರಗೊಳಿಸದೆ ಪರಮಪ್ರಿಯರು ಎಂಬೊ ಬಿರುದುಳ್ಳ ಶ್ರೀ ಗುರುವೆ 4 ತಡಮಾಡದೆ ಭವಕಡಲ ದಾಟಿಸಿ ಈಗ ಮೃಡಸಖನನು ತೋರಿ ದೃಢ ಮನದಿ ಒಡೆಯ ಶ್ರೀ ಗೋಪಾಲಕೃಷ್ಣವಿಠ್ಠಲ ಜಗಕೆ ಬಿಡದೆ ಪೊರೆಯುವನೆಂಬೊ ದೃಢವೆನಗೆ ಕರುಣಿಸಿ 5
--------------
ಅಂಬಾಬಾಯಿ
ಪಶುಗಳ ಒಡನಾಡಿ ಪಾಮರನು ನಾನಾದೆ ಪಶುಪತಿಯೆ ನೀ ಬೇಗ ಬಾರೈ ಪ ಎಸೆವ ಆ ಸಮಯನುಣ್ಣಲೋಸುವನೊ ನಾನಿನ್ನು ಶಿಶು ಹಾದು ನಿಜ ಸುಖವು ತೋರೈ ಅ.ಪ ಕಚ್ಚಿ ಕೈಬಾಯಿ ನಿಮ್ಮಿಚ್ಚೆಯಾಗಿರುತಿಹುದೂ ಸಚ್ಚಿದಾನಂದಾತ್ಮ ನೋಡೈ ಉಚ್ಚರಿಸುವಾದಿ ವ್ಯಾಸಚ್ಚರಿತ ನಾಮವನೂ ಅಚ್ಚಳಿಯದಿರದಂತೆ ನೋಡೈ 1 ತೃಷೆಯ ನೀಗಿಸಲಿಂತಾ ಹೊಸಪರಿಯ ಬಿನ್ನಹುವು ಹಸುವಿಗಾಧಾರವನು ತೋರೈ ಪುಸಿಯದಿರು ನೀನಿದಕೆ ಬಿಸನಾಡದಿರುಯೆನ್ನಾ ನೊಸಲ ತಿಲಕವೆ ವೋಡಿಬಾರೈ 2
--------------
ಚನ್ನಪಟ್ಟಣದ ಅಹೋಬಲದಾಸರು
ಪಶುಪತಿ ಶಂಭೋ |ಅಸುಪತಿಯನೆ ತೋರೋ || ಕರುಣವ ನೀ ಬೀರೋ ಪ ಮನಸೀನ ಒಡೆಯನೆ | ಕನಸು ಮನಸಿನಲಿಅನಘ ಹರಿಯ ಪದ | ನೆನೆವ ಮತಿಯನಿತ್ತುಎಣಿಸು ಭಕ್ತನೆಂದು || ಬೇಡುವೆ ಇನಿತೆಂದು ಅ.ಪ. ಮಾಹಿತಾಂಘ್ರಿಯ | ವಾಹಕನ ಸಮಮೋಹಶಾಸ್ತ್ರ ಪ್ರ | ವಾಹ ರಚಿಸುತ ||ದ್ರೋಹಿಗಳ ಬಲು | ಮೋಹ ಪಡಿಸುತಶ್ರೀ ಹರಿಯ ಸಖ | ಪಾಹಿ ಸುಖಪ್ರದ1 ಕಟಿ ಸೂತ್ರ | ಒಪ್ಪೊತವ ಸುತ ||ಸರ್ಪಾರಿ ಸಮಪದ | ಕಪ್ಪೊಗೊರಳ ಹರತಪ್ಪೊಗಳನು ಎಲ್ಲ | ಒಪ್ಪಿಕೊಳ್ಳಯ್ಯ 2 ಕರ್ಪರ | ಮೈಲಿ ಭಸ್ಮವು |ಶೂಲ ಪಾಣಿಯೆ | ಶೈಲಜಾಪತೆ ||ಕಾಲಕಾಲಕೆ | ಕಾಲನಾಮನಶೀಲ ಸ್ಮøತಿಯನು | ಪಾಲಿಪುದು ಹರ 3 ವಾಸ ಮಶಣವು | ಕೇಶ ವ್ಯೋಮವುಹೇ ಸದಾಶಿವ | ನೀ ಸಲಹೊ ಎನ್ನ ||ಮೀಸಲದ ಮನ | ಕಾಶಿಸುವೆ ಹರಹೇ ಸದಾಗತಿ ಕೂಸು ನೀ ನಲ್ಲೆ 4 ದೇವ ವರ ಶಿವ | ಮಾವ ವೈರಿಯಹಾವ ಭಾವಕೆ | ಓದಿ ಮೋಹಿಸುತ ||ಧಾವಿಸಲು ಹರಿ | ತೀವ್ರ ಕಾಯ್ದನುಗೋವಳನು ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಪಾದ ಎಂಥ ಸುಂದರ ಪಾದಎಂಥೆಂಥವರಿಗದರ ಅಂತ ತಿಳಿಯದಂಥಾ ಅ.ಪಸರ್ವದಾ ಸಿರಿದೇ'ಯು ತೊಡೆಯಮೇಲೆಇಟ್ಟು ಮೆತ್ತಗೆ ಒತ್ತುತಾ ದಿಟ್ಟಿಸಿ ನೋಡುತಾದ್ಟೃತಾಕೀತೆಂದು ಗಟ್ಟಿ ಹಣೆಯ ಹಚ್ಚಿಬಚ್ಚಿಟ್ಟುಕೊಂಡಂಥಾ 1ಹುಡಗರ ಕೂಡಿಕೊಂಡು ಗಡಿಗೆಯ ಒಡೆದುಕುಡಿದು ಕೆನೆಪಾಲ್ ಮೊಸರು 'ಡಿತುಂಬ ಬೆಣ್ಣೆಯ'ಡಕೊಂಡು ಓಡುತ 'ಡಿಯಬಂದರೆ ದೊಡ್ಡಗಿಡವೇರಿ ಅಡಗು' 2ಚಲುವ ಗಂಗೆಯ ಪಡೆದ ಪಾವನಪಾದಶಿಲೆಯು ಸತಿಯ ಮಾಡಿತು ಪ್ರಲಯಕಾಲದ ಆಲ-ದೆಲೆ ಮೇಲೆ ಮಲಗುತ ಬಲಪಾದಾಂಗುಟಚೀಪುವ ಭೂಪತಿ'ಠ್ಠಲ 3
--------------
ಭೂಪತಿ ವಿಠಲರು
ಪಾದ ನೋಡಿದೆ ಪ ಚೆನ್ನದೇವಿಯ ಪಾದಕೆರಗಿದೆ ಮನ್ನಿಸೆಂತೆಂದವಳ ಬೇಡಿದೆ ಅ.ಪ. ಚರಣ ಯುಗಳಲಿ ಮೆರೆವ ನೂಪುರಧರಿಸಿ ಪೀಠದೊಳಿಂದಿರೆಜರದ ಶೀರೆಯನುಟ್ಟು ನಡುವೊಳುಹಿರಿದು ಒಡ್ಯಾಣದೊಳು ನಿಂದಿರೆ 1 ಕುಂಡಲ ಮೂಗು ಮುಕುರವುಪರಮ ತೇಜದ ಸೊಬಗ ತಂದಿರೆ 2 ಹೊಳೆವ ಕಂಗಳು ಹಣೆಯ ಕುಂಕುಮಥಳಿಸೆ ಸರಸಿಜ ಮಂದಿರೆಬಿಳಿಯ ಕೊಡೆಯನು ಹಿಡಿವ ತೆರದಲಿಎಳೆಯ ನಾಗವು ಹಿಂದಿರೆ 3 ಬೆರಳೊಳುಂಗುರ ಕುರುಳು ಸುಂದರಹೆರಳು ಸಿಂಗರದಿಂದಿರೆತಿರುಳು ಗಂಧದ ಸರಳ ಮೂರ್ತಿಯತರಳೆ ಎನ್ನಾಯ ಮುಂದಿರೆ 4 ಧೀರ ಭಕುತರ ಪೊರೆವುದಕೆ ಕರವೀರ ಪುರದೊಳು ಬಂದಿರೆಧಾರುಣೀಯೊಳು ಮೆರೆವ ಗದುಗಿನವೀರನಾರಾಯಣನ ಚಂದಿರೆ5
--------------
ವೀರನಾರಾಯಣ