ಒಟ್ಟು 589 ಕಡೆಗಳಲ್ಲಿ , 89 ದಾಸರು , 493 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈಗಲೆ ಭಜಿಸಲೆಜಿಹ್ವೆ - ನೀ - |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಜಾಗುಮಾಡದೆಶ್ರೀ ಹರಿಪಾದಾಂಬುಜವಪ.ದೇಹದೇಹ ಸಂಬಂಧಿಗಳು - ಅವರು |ಮೋಹಬದ್ಧರಾಗಿ ಕುಳಿತಿಹರು ||ಆಹಾರ ಗುಹ್ಯೇಂದ್ರಿಯವೆಂಬ ಎರಡರ |ಬೇಹಾರದಲಿ ನೀನು ಮುಳುಗಿಸದಲೆ ಮನ 1ಮರಣ ತೊಡಗಿ ನಾಲಗೆಯುಡುಗಿ - ನಿನ್ನ - |ತರುಣಿ ಪುತ್ರ ಮಿತ್ರರಳುತಿರಲು ||ಕೊರಳೊಳು ಗುರುಗುರು ಗುರುಗುಟ್ಟುವಾಗನರ - |ಹರಿಯ ನಾಮವೆನ್ನಗೊಡದೆಲೊ ಪ್ರಾಣಿ 2ಅಸಿಪತ್ರವನದೊಳು ಹೊಗಿಸಿ - ನಿನ್ನ - |ಬಸೆವಸೆಖಂಡ ಹೊರವೊಡಿಸಿ |ಬಿಸಿಬಿಸಿ ನೆತ್ತರು ಬಸಿದು ಹೋಗುವಾಗ |ಕುಸುಮನಾಭನ ನಾಮ ನೆನೆಯಗೊಡದು ಮನ 3ತಪ್ತಲೋಹದ ಮೋಲೊರಗಿಸಿ - ನಿನ್ನ - |ಕತ್ತರಿಸಿದ ಖಂಡ ಬೇಯಿಸುವರು ||ನೆತ್ತಿಯ ಕೊರೆದು ನಾಲಗೆ ಹಿರಿದೊಗೆವಾಗ |ಚಿತ್ತಜನಯ್ಯನ ನೆನೆಯಗೊಡದು ಮನ 4ಕುಂಭಿಪಾಕದೊಳಗೆ ಕುದಿಸಿ - ನಿನ್ನ |ಅಂಬುಮೊನೆಗಳಿಂದಿರಿಯಿಸಿ ||ಅಂಬರಕೊಗೆಯ ಕಾಗೆಯು ಕಚ್ಚಿ ಕಡ್ಞಿಗ |ಅಂಬುಜಾಕ್ಷನ ನಾಮ ನೆನೆಯಗೊಡದು ಮನ 5ದುರುಳ ಯವದೂತರಾರ್ಭಟಿಸಿ - ನಿನ್ನ - |ಎರಕದ ಕಾಯ್ದ ಕಂಬಕೆ ತಕ್ಕೆಗೆಯ್ಸಿ ||ಪರಿಪರಿ ಭವದೊಳು ಬಳಲಿಸುತಿರುವಾಗ |ಪುರುಷೋತ್ತಮನ ನಾಮ ನೆನೆಯಗೊಡದು ಮನ 6ದುರಿತಕೋಟಿಗಳ ಹರಿಸುವ - ನಿನ್ನ - |ನರಕಬಾಧೆಗಳ ತಪ್ಪಿಸುವ ||ಪರಮ ಪುರುಷ ನಮ್ಮ ಪುರಂದರವಿಠಲನ |ನಿರುತದಿ ನೆನೆದು ನೀ ಸುಖಿಯೊಗೋ ಮನವೆ 7
--------------
ಪುರಂದರದಾಸರು
ಉಪ್ಪವಡಿಸಯ್ಯ ಹರಿಯೇಏಳೈ ಹೃಷಿಕೇಶ ಏಳುರವಿ-ಶಶಿನಯನಪ.ಏಳು ಪಶುಗಳ ಕಾಯ್ದು ಪಾಲಿಸಿದೆ ಗೋಕುಲವಏಳು ಸುರವಂದಿತನೆ ಏಳು ಭೂಸತಿರಮಣಉಪ್ಪವಡಿಸಯ್ಯ ಹರಿಯೇ ಅಪಪಚ್ಚೆ ಮುಡಿವಾಳಗಳು ಅಚ್ಚ ಸೇವಂತಿಗೆಯುಬಿಚ್ಚು ಮಲ್ಲಿಗೆ ಜಾಜಿ ಸಂಪಿಗೆಯುಪುನ್ನಾಗಅಚ್ಚರಿಯ ಬಕುಲ ಕೆಂಜಾಜಿ ಕೇತಕಿಕುಸುಮಗುಚ್ಛಗಳಅಚ್ಚ ಜಾಣೆಯರು ಶ್ರೀಗಂಧ ಕಸ್ತೂರಿ ಪುನುಗುಬಿಚ್ಚು ಬಿಳಿಯೆಲೆಯಡಿಕೆ ಪಿಡಿದು ನಿಂತಿಹರಯ್ಯಮುಚ್ಚುತಿವೆ ತಾರೆಗಳು ಹೆಚ್ಚುತಿವೆ ರವಿಕಿರಣ ಅಚ್ಯುತನೆಉಪ್ಪವಡಿಸೊ 1ಚೆನ್ನೆಯರು ಚದುರೆಯರು ಸುಗುಣಸಂಪನ್ನೆಯರುಪನ್ನೀರು ತುಂಬಿರ್ದ ಪೊನ್ನ ತಂಬಿಗೆಗಳನುರನ್ನಗನ್ನಡಿಯನ್ನು ಪಿಡಿದು ನಿಂತಿರುವರೈ ಪನ್ನಂಗಶಯನ ಏಳೈ ||ಮನ್ನಣೆಯ ನಾರದರು ಮೊದಲಾದ ಮುನಿನಿಕರನಿನ್ನ ಮಹಿಮೆಗಳನ್ನು ಪಾಡಿ ನಲಿಯುವರಯ್ಯಇನ್ನು ಏಳೇಳು ಉದಯದ ಸಮಯ ಸಿರಿಯರಸಚೆನ್ನಿಗನೆ ಉಪ್ಪವಡಿಸೊ 2ದೇವದುಂದುಭಿ ಮೊಳಗೆ ದೇವಕನ್ನೆಯರೆಲ್ಲದೇವಾಂಗ ವಸ್ತ್ರವನು ಪಿಡಿದು ನಿಂತಿಹರಯ್ಯದೇವ ದೇವೇಶ ನಿಮ್ಮೋಲಗದ ಸಂಭ್ರಮಕೆ ದೇವತೆಗಳೆಲ್ಲ ಕರೆದು ||ದೇವ ಪ್ರಹ್ಲಾದಬಲಿ ಮುಖ್ಯರನು ಕಾಯ್ದವನೆದೇವ ಬ್ರಹ್ಮನ ಪಡೆದ ದೇವಗಂಗೆಯ ಪಿತನೆದೇವ ದೇವೋತ್ತಮನೆ ದೇವಾಧಿದೇವ ಪುರಂದರವಿಠಲಉಪ್ಪವಡಿಸೊ 3
--------------
ಪುರಂದರದಾಸರು
ಊದೊ ಕೊಳಲನು ಕೃಷ್ಣ ಊದೊ ಕೊಳಲನುವೇದ ವೇದ್ಯ ಊದು ಕೊಳಲ ನಾದ ತುಂಬೆ ನಭದಿ ಕೃಷ್ಣ ಪಮದನಜನಕ ಮೋಹನಾಂಗಚದುರೆಯರಿಗೊಲಿದು ವನದಿವಿಧ ವಿಧ ಕ್ರೀಡೆಗಳನಾಡಿಮುದವನಿತ್ತ ಮಧುಸೂದನನೆ 1ಗೋಪಿಕಾ ಸ್ತ್ರೀಯರ ವಾಕ್ಯಶ್ರೀಪತಿಯುಕೇಳಿಮುದದಿತಾಪಕಳೆದುಸುರರುತಲೆಯತೂಗೆ ಹರುಷದಿಂದಕೊಳಲನೂದಿದ ಚಲುವ ಕೊಳಲನೂದಿದ 2ನಾರಿಯರು ನಲಿದು ಬಂದುವಾರಿಧಿಯೊಳು ಸರಸವಾಡೆಮಾರಮಣನು ಸೀರೆಗಳನುಗಾರುಮಾಡಿ ಕದಿವರೇನೊತಾರೊ ವಸನವದುರುಳಕೃಷ್ಣ ತಾರೊ ವಸನವÀ3ಅಂಗನೆಯರೆ ನಿಮ್ಮ ವ್ರತಕೆಭಂಗವಾದ ಕಾರ್ಯವೆಸಗೆವಂದಿಸಿದರೆ ಕೊಡುವೆನೆಂದುರಂಗ ನಲಿದು ನುಡಿದ ಮುದದಿವಸನನೀಡಿದ ರಂಗವಸನನೀಡಿದ4ತರುಳರೆಲ್ಲ ಕೂಡಿಕೊಂಡುಕರುಗಳನ್ನೆ ಪಾಲಿಸುತಿರೆಮರೆಯ ಮಾಡಿ ಕರುಗಳನ್ನುದುರುಳತನವು ತರವೆ ಕೃಷ್ಣತಾರೊ ಕರುಗಳ ಕೃಷ್ಣ ತಾರೊ ಕರುಗಳ 5ಮಾತೆಯರನೆ ಅರಸುತಿರಲುಪ್ರೀತಿಯಿಂದ ಕರುಗಳನ್ನುಜೋಕೆಯಿಂದ ಪಿಡಿದು ತರಲುಯಾತಕೀಪರಿ ನಿಂದಿಸುವದುನೋಡಿ ಕರುಗಳ ನಿಂತಿರುವದು ನೋಡಿ ಕರುಗಳ 6ಗೊಲ್ಲತಿಯರ ಮನೆಯ ಪೊಕ್ಕುಮೆಲ್ಲುತಿರಲು ಬೆಣ್ಣೆ ಮೊಸರುನಲ್ಲೆಯರು ಪಿಡಿದು ಹರಿಯನಿಲ್ಲೊ ನಿಲ್ಲೊ ನಿಲ್ಲೊ ಕೃಷ್ಣಚೋರ ಕೃಷ್ಣನೆ ತೋರೊ ನಿಜವಜಾರಕೃಷ್ಣನೆ7ಚಿಕ್ಕ ಪ್ರಾಯದವರೆಕೇಳಿಸೊಕ್ಕಿನಿಂದ ನುಡಿವರೇನೆಬೆಕ್ಕು ತಿಂದ ತೆರವರಿಯದೆಧಿಃಕರಿಸುವುದುಚಿತವಲ್ಲನುಡಿವರೇನೆಲೆ ನಿಷ್ಠುರ ನುಡಿವರೇನೆಲೆ 8ಮಕ್ಕಳೆಲ್ಲ ಆಡುತಿರಲುಕಕ್ಕು ಬಿಕ್ಕು ಮಾಡಿಅವರದಿಕ್ಕು ದಿಕ್ಕುಗಳಿಗೆ ನಡೆಸಿಠಕ್ಕುತನವು ತರವೆ ಕೃಷ್ಣನಡತೆಯಲ್ಲವೊತುಡುಗಕೃಷ್ಣ ನಡತೆಯಲ್ಲವೊ9ಮಕ್ಕಳಾಡುತಿರಲು ಮಧ್ಯಸರ್ಪವೆರಡು ಕಾದಿ ಬರಲುದಿಕ್ಕು ತೋರದಂತೆ ಭಯದಿದಿಕ್ಕು ದಿಕ್ಕಿಗೆ ಓಡದಿಹರೆದುಡುಕು ನನ್ನದೆ ದೂರುವಿರೆನ್ನ ದುಡುಕು ನನ್ನದೆ 10ಹರಿಯ ಮಾತುಕೇಳಿಮುದದಿಹರುಷದಿಂದ ನಮಿಸಿ ಕೃಷ್ಣಗೆತ್ವರಿತದಿಂದಲಿ ಒಲಿಯೊ ಮುರಳೀ-ಧರನೆ ಹರುಷದಿಂದ ಕೃಷ್ಣನಮಿಸಿ ಬೇಡುವೆವೊ ಕೃಷ್ಣ ಸ್ಮರಿಸಿ ಪಾಡುವೆವೊ 11ಸರಸವಾಡÀುತಿಹಿರಿ ಎನ್ನಸ್ಮರಣೆಯಿಂದ ತನುವ ಮರೆತುಕ್ಷಮಿಪೆ ನಿಮ್ಮ ಗೃಹಕೆ ತೆರಳಿವನಜಮುಖಿಯರೆಲ್ಲರುತೆರಳಿರೆಂದನು ತರುಣಿಯರೆನ್ನ ಸ್ಮರಿಸಿರೆಂದನು 12ಕರುಣದಿಂದ ಸಲಹುತಿಹೆನುದುರಿತವೆಲ್ಲ ತರಿದು ಮುದದಿಕಮಲನಾಭ ವಿಠ್ಠಲನೆಂದುಕುಣಿದು ಪಾಡಿ ವನಿತೆಯರೆನಲಿದು ಪಾಡಿರೆ ನಾರಿಯರೆಲ್ಲ ಕುಣಿದು ಪಾಡಿರೆ 13
--------------
ನಿಡಗುರುಕಿ ಜೀವೂಬಾಯಿ
ಎಂತು ವರ್ಣಿಸಲಹುದು ಸಿರಿವರನಸಿರಿನಾರಸಿಂಹನಪಅಂತರಂಗದಿ ಹರಿಯ ಸ್ಮರಣೆಯಸಂತತವು ಬಿಡದಂತೆ ಮಾಡುವಕಂತುಪಿತ ಭಕ್ತರನು ಪೊರೆಯಲುನಿಂತಿರುವ ಸಿರಿಕಾಂತನೆನುತಲಿ ಅಪನಿಷ್ಠೆಯಿಂದಲಿ ಬೆಟ್ಟವೇರುತ್ತಹರಿಭಕುತರೆಲ್ಲರುಕಷ್ಟಗಳ ಪರಿಹರಿಸು ಎಂದೆನುತಮನಮುಟ್ಟಿ ಭಜಿಪರುಸೃಷ್ಟಿಕರ್ತನೆ ರಕ್ಷಿಸೆಂದೆನುತಇಷ್ಟದಾಯಕ ನಿನ್ನ ಮಹಿಮೆಯಎಷ್ಟು ಪೊಗಳುವರಯ್ಯ ಕೇಶವಭಕ್ತರನು ಉದ್ಧರಿಸಲೋಸುಗಬೆಟ್ಟದಲಿ ಉದ್ಭವಿಸಿದಾತನ 1ವಾಸುದೇವನ ಮಹಿಮೆ ಪೊಗಳುತ್ತ ನ-ರಸಿಂಹ ಲಕ್ಷೀ ನಾರಸಿಂಹ ನ-ರಸಿಂಹ ನರಸಿಂಹ ಎಂದೆನುತ ಹರಿ-ದಾಸರೆಲ್ಲರು ಸಾರಸಾಕ್ಷನೆ ನಿನ್ನ ಪೊಗಳುತ್ತದ್ವಾರ ದ್ವಾರದಿ ಪೂಜೆUಷÉೂಳ್ಳುತಮಾರಪಿತ ಮಹಲಕ್ಷೀ ಸಹಿತದಿದೋರ ರಥÀದೆಡೆಯಲ್ಲಿ ನಿಲ್ಲುತತೇರ ನೇರುವ ಶ್ರೀ ರಮೇಶನ 2ಸಾರಪದಕಗಳಿಂದ ಶೋಭಿಸುತ ಝಳಝಳಿಪವಜ್ರದ ತೋರ ಮುತ್ತಿನ ಮಾಲೆಹೊಳೆಯುತ್ತ ಥಳಥÀಳಿಪ ನೊಸಲಲಿಸಾರಕಸ್ತೂರಿ ತಿಲಕ ರಂಜಿಸುತಮಾರಬಿಲ್ಲೆಂತೆಸೆವ ಪುಬ್ಬಿನಚಾರುತರ ಶೃಂಗಾರ ನಯನದವಾರೆ ನೋಟÀದಿ ನೋಡಿ ಭಕುತರ ಅ-ಪಾರದುಃಖಗಳನ್ನ ನೀಗುವರ3ಕೋಟಿಸೂರ್ಯಪ್ರಕಾಶಮಯವಾದನವರತ್ನ ಖಚಿತ ಕಿರೀಟಕುಂಡಲಧರಿಸಿ ಅನುವಾದಎಡಬಲದ ಭುಜದಲಿಮಾಟದ ಭುಜಕೀರ್ತಿ ಸುಲಲಿತದನೋಟಕಾಶ್ಚರ್ಯವನೆ ತೋರುತಶ್ರೀ ಕಳತ್ರನು ರಥದಿ ಮೆರೆಯುತ ದಿ-ವಾಕರನ ಪ್ರಭೆಯಂತೆ ಪೊಳೆಯುವರಮಾ ಮನೋಹರ ರಮೆಯ ರಮಣನ 4ಛತ್ರಿ ಚಾಮರಗಳನೆ ಪಿಡಿದಿಹರು ಎಡಬಲದಿಸ್ತುತಿಸುತ ಎತ್ತಿ ಸ್ವರಗಳ ಗಾನಪಾಡುವರುಚಿತ್ತೈಸುಹರಿಬಾ ಬಾರಿತ್ತಬಾಬಾರೆಂದು ಕರೆಯುವರುಸುತ್ತ ತುಂಬರು ನಾರದರಪರಿನೃತ್ಯಗಾನಗಳಿಂದ ಸ್ತುತಿಪರುಕರ್ತೃ ಕಮಲನಾಭ ವಿಠ್ಠಲರ-ಥೋತ್ಸವದಿ ನಲಿನಲಿವ ದೇವನ 5
--------------
ನಿಡಗುರುಕಿ ಜೀವೂಬಾಯಿ
ಏಕೆ ಚಿಂತಿಸುತಿರುವೆ ಕೋತಿಮನವೆ |ಶ್ರೀ ಕೃಷ್ಣರಾಯನನು ಸ್ತುತಿಸಲೊಲ್ಲದಲೆ ಪ.ಹುಟ್ಟಿದಾಗುತ್ಪತ್ತಿಗಾರು ಚಿಂತಿಸಿದವರು |ಕಟ್ಟಕಡೆಯಲಿ ಲಯಕೆ ಏನು ಚಿಂತೆ ? ||ನಟ್ಟನಡುವಿನ ಬದುಕಿಗೇಕೆ ಚಿಂತಿಸುತಿರುವೆ ? |ಕಟ್ಟಕಡೆಯಲಿ ಮೂರುಬಟ್ಟೆತಾನಲ್ಲವೆ ?1ನವಿಲಿಂಗೆ ಚಿತ್ರಪತ್ರವನಾರು ಬರೆದವರು ? |ಪವಳಜಾತಿಗೆ ಕೆಂಪನಾರಿತ್ತರು ? ||ಸವಿಮಾತಿನರಗಿಳಿಗೆ ಹಸಿರಾರು ಬರೆದವರು ? |ಇವ ಮಾಡಿದವ ಕೃಷ್ಣ ನಮ್ಮ ಮರೆದಿಹನೆ ? 2ಬಸಿರೊಳಗೆ ಇದ್ದಾಗ ಶಿಶುವ ಹೊರೆದವರಾರು |ವಸುಧೆಯನು ಬಸಿರೊಳಗೆ ಹೆತ್ತರಾರು ?ವಸುದೇವಸುತ ನಮ್ಮ ಪುರಂದರವಿಠಲನ |ಪೆಸರ ಬಸಿರೊಳಗಿಟ್ಟು ಸ್ತುತಿಸುತಿರು ಮನವೆ 3
--------------
ಪುರಂದರದಾಸರು
ಕಂಡೆನಾ..............ಸಾಸಿರನಾಮದಶೇಷಮಹಿಮ ವೆಂಕಟೇಶನ ಮೂರುತಿಯ ಪ.ಶೇಷಗಿರಿಗೆ ಕೈವಲ್ಯವೆನಿಪ ಸ್ವಾಮಿಪುಷ್ಕರಿಣಿಯವಾಸನಕಂಡೆನಾಅ.ಪ.ವಿಕಸಿತಸರಸಿಜ ಸಮಪದಯುಗಳನಅಖಿಳಜಗದೆರೆಯನನಖಶ್ರೇಣಿಗಳೊಳು ತರತರದಿ ಮೆರೆವಸುಖಮಣಿಗಳ ಕಂಡೆನಾ 1ಗುಲ್ಛಕೆ ನೂಪುರ ಭೂಷಿತ ವರಫಣಿತಲ್ಪನ ಮೂರುತಿಯಒಪ್ಪುವ ದ್ವಿಜದಂತಿಹ ಜಘನ ಕಂದರ್ಪನಯ್ಯನ ಕಂಡೆನಾ 2ಹೊಂಗನ್ನಡಿಗಳ ಹಳಿದೊಪ್ಪುವ ಜಾನುಂಗಳ ಚೆನ್ನಿಗನಬಂಗಾರ ಬಾಳೆಯ ಕಂಬದಂತೆಸೆವ ಬೆಡಂಗಿನ ತೊಡೆಯವನ ಕಂಡೆನಾ 3ಕಟ್ಟಿಹ ಕಟಹವನಿಟ್ಟ ಝಗ ಝಗಿಸುವ ಪೊಂಬಟ್ಟೆಯನುಟ್ಟವನಇಟ್ಟ ಕಿಂಕಿಣಿದಾಮ ಮಧ್ಯತ್ರಿವಳಿ ನಾಭಿಸೃಷ್ಟಿಯುದರದವನ ಕಂಡೆನಾ 4ಉರದಿ ಮೆರೆವ ಸಿರಿವತ್ಸಲಾಂಛನಕೇಯೂರ ಕೌಸ್ತುಭಧರನಸಿರಿತುಲಸಿ ಪದಕಹಾರ ಕಂಬುಕಂದರತಿರುವೆಂಗಳಯ್ಯನ ಕಂಡೆನಾ5ಅರಿಮಥÀನವ ಮಾಳ್ಪರಿ ಶ್ರುತಿಮಯವಾದವರಶಂಖೋಧೃತನವರಾಭಯ ನೀಡುವವರಗದೆಪದುಮದಪರಮಾಂಗನ ಕಂಡೆ ನಾ 6ಅಂಬುಜಮೊಗದೊಳು ಕಾಂತಿಯ ಬೀರುವಲಂಬಿತ ಕುಂಡಲನಪೊಂಬಣ್ಣದ ಸಂಪಿಗೆ ಸಂಪಿಗೆನಾಸಿಕಲುಳಿ ನಾಸಾಪುಟದವನ ಕಂಡೆನಾ 7ಮರಿಕೂರುಮನಂದದಿ ಕದಪುಗಳು ಅಮರುತ ಬಿಂಬಾಧರನಪೆರೆನೊಸಲಿನ ಭ್ರೂಲತೆ ಕಿರುನಗೆ ಕಸ್ತೂರಿ ತಿಲಕಾಂಕಿತನ ಕಂಡೆನಾ 8ಕೋಟಿಇನತೇಜದಮಕುಟವರಕರುಣನೋಟದ ಜಗಪಾಲನಹಾಟಕಗಿರಿಯ ಪ್ರಸನ್ನವೆಂಕಟ ಜಗನ್ನಾಟಕ ಸೂತ್ರಧಾರನ ಕಂಡೆನಾ 9
--------------
ಪ್ರಸನ್ನವೆಂಕಟದಾಸರು
ಕರುಣಾಸಾಗರನ ನೋಡಿರೈ ಪತರುಣಾಕರ್Àನಿಭ ಸುಪರಣವಾಹನಗುಣ-ವರಣನ ಮಾಡುವ ಕರ್ಣಹೀನಾಂಶನ ಅ.ಪನಾನಾವಿಧದ ಫಲ ದಾನಮಾಡುವ ಸುರ -ಧೇನುನಿನಗೆ ಸೋತು ಪೋಯಿತಯ್ಯಾಮಾನನಿಧಿಯೆ ಎನ್ನ ನೀನೆ ಕಾ -ನಾನಯ್ಯ ಇದಕೇನುಪಾಯಾದೀನ- ಜನ-ಮಂದಾರ- ಶಾಶ್ವತದಾನಿ ನಿನಪದಧ್ಯಾನ ಮಾಡಿಸೋ 1ಸೇವಕ - ಜನರನ್ನ ಕಾವೋನೀತನು ಎಂಬೊನೀನಿರಲುನಿತ್ಯಆವ ಭಯ ಎನಗೇನು ಇಲ್ಲಾಈ ವಿಧದಿ ಮಹಿಮವ ತೋರಿ ಮೆರೆವ 2ಪಾತಕವನಕುಲ - ವೀತಿಹೋತ್ರನು ಎನಿಸೀದಾತಗುರುಜಗನ್ನಾಥ ವಿಠಲಗತಿಜಾತರೂಪಸುಶಯ್ಯತನಯದೂತನಾದವಗೇನು ಭಯ ನಿ -ರ್ಭೀತನಾಗಿದ್ದೆಲ್ಲ ಕಾರ್ಯವ -ನೀತೆರದಿ ತಾ ಮಾಡುತಿರುವಾ 3
--------------
ಗುರುಜಗನ್ನಾಥದಾಸರು
ಕರುಣಿಸಿ ಬಾರೆಲೆ ತಾಯೆ ಮಾಧವನಾವ್ಯಾಕೃತನಕರೆತಾರೆ ನೀರೆ ಬೇಕಾದವಳನಿನಿತುವಿರಹವಾರಿಧಿಯಲ್ಲಿ ನೂಕಿ ಓಡಿರುವನಲ್ಲೆ ಸಲೆ ಪ.ಬಿಸಜಕುಟ್ಮಳಕುಚವಸೋಂಕಿಮುದದಿ ಪಿಡಿದುಶಶಿಮೊಗದಿ ಮೋಹವನಿಡುವ ನುಡಿವಎಸೆವ ಕೊನೆವಲ್ಲಲಳುಕಿಸಿ ಎನ್ನಅಧರಪೀಯೂಷವನೊಲಿದೊಲಿದು ಸವಿದಕೋವಿದಪೊಸಮದಕರಿಯ ಸೊಂಡಿಲ ತೋಳಲಮರ್ದಪ್ಪಿಮಿಸುನಿಪುತ್ಥಳಿಯ ತೆರದಿ ಮೆರೆದಅಸಿಯ ಮಾಣಿಕಳೆ ಕೇಳಸುರಹರನಾಳಿದನೀಅಸುತೊರೆವೆ ತಾನಪಕಾರೆ ನೀರೆ1ಎಂಟೆರೆಡು ಕಳೆದೋರಿ ಸವಿದೋರಿ ಸುಖಬೀರಿ ಸಲೆಕಂಠಮಾಲೆಯ ಕೊಟ್ಟನೆ ನೆಟ್ಟನೆಎಂಟೆರಡವಸ್ಥೆಗಳ ಮೇಳಿಗೆಯ ಕ್ಷಣಲವಕೆವೆಂಠಣಿಸಿ ಅಮೃತವೆರೆದ ನೆರೆದಕಂಟಕಿಯು ದಾವಳೊ ಹರಿಯನೊಯ್ದಳಕದಿಂಗಂಟಿಕ್ಕಿದಳೊ ಬಿಡದೆ ಮಡದೆಉಂಟು ಮಾಡಿದನಲಾಮಂದಮುಗ್ಥೆಗೆ ಅಸಿಕಕಂಟಕಬಲೆಯ ಕಾಣೆ ಜಾಣೆ 2ಸರಸವಾತಿನ ಜಾಣ್ಮೆಯೆಂತುಸುರುವೆನಬಲೆಹರಣಳಿಯದೆಂದು ಪೇಳೆ ಕೇಳೆನಿರುತವನ ಕಿರುವೆರಳ ಸೌಂದರ್ಯಮಂ ನೆನೆಯುತಿರುವೆ ಪುಸಿಯಲ್ಲ ಕಾಣೆ ಪ್ರಾಣೆಕರುಣಿ ಬಲುನೊಂದರೆಂದದು ತನಗೆಕುಂದುಮರೆಯದಿನಿತೆಲ್ಲ ಒರೆಯೆ ಚತುರೆಯೆಭರದಲೊಮ್ಮದೊಮ್ಮೆ ಬಂದು ಪ್ರಸನ್ನವೆಂಕಟಗಿರಿಯರಸನೆಂದನಕ್ಕ ರಸಿಕ 3
--------------
ಪ್ರಸನ್ನವೆಂಕಟದಾಸರು
ಚಂಡಿಯ ಕಂಡಿರಾ ಪ್ರಚಂಡೆಯ ಕಂಡಿರಾದಿಂಡೆಯರಾದವರ ಖಂಡಿಸುತಿರುವ ಕತ್ತಿಯತಿರುಹುತಿರುವ ಗದೆಯಪನಿಷ್ಟರಾಗಿಹ ಭಕ್ತರ ದೂರನುಕೇಳಿಕೋಪವತಾಳಿಕಟ್ಟುಗಳಿಲ್ಲದ ರೌದ್ರವು ತೋರಲುಮೋರೆಕಂಗಳುಕೆಂಪೇರಲುಉಟ್ಟಿಹ ಪೀತಾಂಬರವನೆ ಕಾಶಿಯಹೊಯ್ದು ದಿಟ್ಟ ನಿಟ್ಟುಸಿರಸುಯ್ದುಕಟ್ಟಿದಳು ಆಯುಧಂಗಳ ಧರಿಸಿ ಝಳಝಳ ಝಳಪಿಸಿ1ಹೂಕಾಂರವನೇ ಮಾಡುತ ದೇಹವ ಮರೆದು ಕಂಗಳ ತೆರೆದುಬೆಂಕಿಯ ಸುರಿಯಲು ಎಡಬಲ ಅದಿರೆ ಹರಿಹರ ಬೆದರೆಅಂಕೆಯಿಲ್ಲದ ಸಿಡಿಲಬ್ಬರದಂತಾಗೆ ಹಾ ಎಂದು ಕೂಗೆಪಂಕಜಮುಖಿತಾ ಕೂಗುತ ಅವುಡುಗಚ್ಚೆಭೂಮಿ ಬಾಯಿ ಬಿಚ್ಚೆ2ನಡೆದಳು ಶತ್ರುಗಳೆಡೆಗೆ ಆಗ ವೇಗದಲಿ ಮನೋ ಯೋಗದಲಿತೊಡರಿಕೊಂಡಳುವೈರಿಸೇನೆಯ ನಿಲಿಸಿ ತಾ ಘುಡು ಘುಡಿಸಿತುಡುಕಿ ಪಿಡಿದಳು ದುಷ್ಟರ ಜಿಹ್ವೆಯನೂಕಿ ತಾ ಮುಂದಕೆ ಜೀಕಿಖಡುಗದಿ ಸೀಳುತ ರೌದ್ರದಿ ನಿಂತಳು ವೀರೆಕಂಗಳುಕಿಡಿಯನೆ ಕಾರೆ3ಹೊಯ್ದಳಾಕ್ಷಣ ದುರ್ಜನ ಸೇನೆಯ ಬಗಳೆರಿಪುತಲೆಗಳು ಉರುಳೆತೊಯ್ದಳಾಕ್ಷಣ ರಕ್ತದ ಬಿಂದಿಗೆ ಉಕ್ಕೆ ಮುಖ ಪುಟವಿಕ್ಕೆಸುಯ್ದರು ವೈರಿಗಳೆಲ್ಲರು ಗತಿಮತಿಗೆಟ್ಟು ಬಹುಕೇಡ ಕೆಟ್ಟುಕಾಯ್ದಳು ತನ್ನನು ನಂಬಿದವರ ಭಯ ಹರಿಯೆಬಹು ಸುಖ ಸುರಿಯೆ4ಹಮ್ಮಿನವರನೆಲ್ಲರ ತೊಳೆದು ಶಾಂತಳಾಗಿ ಬಗಳೆ ತಾ ತೃಪ್ತಳಾಗಿಬ್ರಹ್ಮ ಚಿದಾನಂದ ಭಕ್ತನಾಥನ ಸೇರಿ ಅಮಿತಾನಂದವೇರಿಸುಮ್ಮಗೆ ಪೂಜಿಸಿಕೊಳುತ ಕೇವಲ ಘನದಿ ತಾ ನಿತ್ಯನುದಿನದಿಬ್ರಹ್ಮರಂದ್ರದಿ ವಾಸ ಮಾಡಿಹ ಸುಖಿಯಆ ಬಗಳಾಮುಖಿಯ5
--------------
ಚಿದಾನಂದ ಅವಧೂತರು
ತದಿಗೆಯ ದಿವಸ(ಶೇಷ ದೇವರನ್ನು ಕುರಿತು)ರಂಭೆ :ನ್ಯಾರೆಂಬುದನೆನಗೆ ಪೇಳೆಕ್ರೂರತನದಿ ತಾ ತೋರುವನೀಗ ಮ-ಹೋರಗನೆನ್ನುತ ಕೋರಿಕೆ ಬರುವದು 1ಒಂದೆರಡು ಶಿರವಲ್ಲ ಬಹುಹೊಂದಿಹವು ಸಟೆಯಲ್ಲಕಂಧರದಲಿ ಕಪ್ಪಂದದಿ ತೋರ್ಪವುಚಂದಿರಮುಖಿ ಯಾರೆಂದೆನಗರುಹೆಲೆ 2ಊರ್ವಶಿ : ಕೋಮಲಗಾತ್ರೆ ಮಹಾಮಹಿಮನು ಇವನ-ಸಾಮಾನ್ಯನೆ ಕಾಣೆಭೂಮಿಯ ಪೊತ್ತ ನಿರಾಮಯನಾದಸುಧೀಮನಿವನು ಜಾಣೆ 1ವಾಸುದೇವಗೆ ಈತ ಹಾಸಿಗೆಯವ ನಿ-ರ್ದೋಷನಿವನು ಜಾಣೆಸಾಸಿರಮುಖದ ವಿಲಾಸನಾಗಿಹ ಮಹಾ-ಶೇಷನಿವನು ಕಾಣೆ 2ಅದರಿಂದಲಿ ಕೇಳ್ ತದಿಗೆಯ ದಿವಸದಿಮಧುಸೂದನನಿವನಅಧಿಕಾನಂದದಿ ಒದಗಿಸಿ ಬರುವನುಇದೆಯಿಂದಿನಹದನ3ಎಂದಿನಂತೆ ಪುರಂದರವಂದ್ಯ ಮುಕುಂದಸಾನಂದದಲಿಅಂದಣವೇರಿ ಗೋವಿಂದ ಬರುವನೊಲ-ವಿಂದತಿ ಚಂದದಲಿ 4ಕಂಟಕಗಳು ಎಲ್ಲುಂಟೆಂಬಂತೆ ನೃಪ-ಕಂಠೀರವಗೈದಘಂಟಾನಾದದಿ ಮಂಟಪದೊಳು ವೈ-ಕುಂಠನು ಮಂಡಿಸಿದಾ 5ಕಾಂತಾಮಣಿ ಕೇಳಿಂತೀಪರಿ ಶ್ರೀ-ಕಾಂತ ನತತಂಡಸಂತವಿಸುತ ಮಹಾಂತಮಹಿಮನೇ-ಕಾಂತಸೇವೆಯಗೊಂಡ 6* * *ಪರಶಿವನನ್ನು ಕುರಿತುರಂಭೆ : ಯಾರಮ್ಮಾ ಮಹಾವೀರನಂತಿರುವನುಯಾರಮ್ಮಾ ಇವನ್ಯಾವ ಶೂರ ಯಾವಊರಿಂದ ಬಂದ ಪ್ರವೀರ ಆಹಾಮಾರಜನಕನ ವಿಸ್ತಾರಪೂಜೆಯ ವೇಳ್ಯಧೀರನಂದದಿ ತಾ ವಿಚಾರ ಮಾಡುವನೀತ 1ಕರದಿ ತ್ರಿಶೂಲವ ಧರಿಸಿ ಮತ್ತೆವರಕೃಷ್ಣಾಜಿನವನುಕರಿಸಿಹರಿಚರಣಸನ್ನಿಧಿಗೆ ಸತ್ಕರಿಸಿ ಆಹಾಜರಿಯ ದುಕೂಲವ ನಿರಿದುಟ್ಟುಕೊಂಡು ವಿ-ಸ್ತರವಾದ ತೋಷದಿ ಮೆರದು ನಲಿವ ಕಾಣೆ 2ಊರ್ವಶಿ : ಈತನೀಗ ಕಾಲಭೈರವ ಕೇಳೆಲೆಗೆ ನೀರ ಪ.ಈತನೀಗ ಪೂರ್ವದೊಳಗೆಭೂತನಾಥ ಸೇವೆಯೊಲಿದಓತು ವಿಷ್ಣುಭಕ್ತಿಯಿಂದಪೂತನಾದ ಪುಣ್ಯಪುರುಷ ಅ.ಪ.ಊರು ಇವಗೆ ಮೊದಲು ಗಂಗಾತೀರವಾಯ್ತುವೇಣುತಾ ವಿ-ಚಾರದಿಂದ ಪೊದನೈಉದಾರತನದಿ ರಾಮೇಶ್ವರಕೆಸಾರಗ್ರಹಿತ ಮುಕ್ತಿ ಪಥವನು ಕರುಣದಿಂದತೋರಿಸುವನು ವಿಷ್ಣುವೆಂದೆನುತ ಗಿರಿಯನೇರಿ ಕರುಣ ವಾರಿಧಿಯಪದಾರವಿಂದಸೇವೆಗೈದುಮಾರಪಿತನ ಭಕ್ತಿಯೊಳು ತಾ ಹೇರಿನಲಿವ ಚಾರುಚರಿತ 1ಪರಮಪುರುಷ ಹರುಷದಿಂದೀಪುರಕೆಬರುವಕಾಲದಲ್ಲಿಚರಣವನ್ನು ಬಿಡದೆ ಯಿಲ್ಲಿರುವನೈ ಮಹಾತ್ಮನೀತಸ್ಫುರಿತತೇಜೋಮೂರ್ತಿ ಈತನು ಲೋಕದೊಳಗೆಚರಿಸುವ ತ್ರಿಕಾಲಪ್ರಜÕನು ಇವನ ಗುಣವ-ನರಿವರ್ಯಾರು ಮನುಜಭುಜಂಗರಲಿಮಹತ್‍ಕಾರಣೀಕಪುರುಷನಿವ ಮಹಾ ಬಲಾಢ್ಯಕರುಣವುಳ್ಳ ವಿಷ್ಣುಭಕ್ತ 2ಶ್ರೀನಿವಾಸ ಕರುಣದಿಂಪ್ರಧಾನಿಯೆಂದು ನಡೆಸಿಕೊಡುವಏನಗೈದರೀತ ಮನದಿ ತಾನುತೋಷಪಟ್ಟು ಇರುವಕಾಣಿಕೆಗಳ ತರಿಸಿ ಇರಿಸುವ ಬೇತಾಳಪ್ರೇತನಾನಾ ಉಪದ್ರವಗಳ ಬಿಡಿಸುವ ಧನಿಯ ಆಜೆÕಏನ ದೊರಕಿತದನು ಬೇಗ ತಾನೆಬಂದು ಪೇಳಿ ಜನರಮಾನಿಸುತ ನಿಧಾನಗೊಳಿಸಿಕ್ಷೋಣಿಯೊಳಗೆ ಕೀರ್ತಿಪಟ್ಟ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತಪ್ಪ ಪಾಲಿಸಯ್ಯ ತಿಮ್ಮಯ್ಯತಪ್ಪ ಪಾಲಿಸಯ್ಯ ಪ.ತಪ್ಪ ಪಾಲಿಸದೆಯಿಪ್ಪರೆ ಯೆನ್ನೊಳುಒಪ್ಪಿಗೆ ಪಟ್ಟೊಲಿಯಪ್ಪ ತಿಮ್ಮಪ್ಪನೆ ಅ.ಪ.ಜಲಜನಾಭ ನಿನ್ನ ಮಹಿಮೆಯನೆಲೆಯನರಿಯದೆನ್ನ ಮನವದುನೆಲೆಯಿಲ್ಲದ ಭವಜಲಧಿಯೊಳಾಡುತ್ತಲಲನಾ ವಿಷಯದ ಬಲೆಗೆ ಮೋಹಿಸಿ ಮನಸಿಲುಕಿ ಮಲಿನವಾಯ್ತು ತತ್ವದನೆಲೆಯನರಿಯದಾಯ್ತು ಹೀಗೆನ್ನುತಕಳೆದುಹೋಯ್ತು ವಿಂಶತಿ ವತ್ಸರಗಳುತೊಳಲಿ ಸಕಲ ಭವದೊಳಗಾರ್ಜಿತವಹ 1ಹಾಳು ಮನವು ಕೂಡಿ ನಾನಾಚಾಳಿ ಮಾಳ್ಪುದಾಡಿ ಬುದ್ಧಿಯಪೇಳಿದಷ್ಟು ದುಶ್ಯೀಲವೆ ಮಾಳ್ಪುದುತಾಳೆಂದರೆ ಒಂದು ವೇಳೆಗೆ ಸುಮತಿಯಆಲೋಚನೆಯೊಳಗೆ ಬಿದ್ದರೆಮೇಲಿಲ್ಲವು ಕ್ಷಣಕೆ ತನ್ನಯಶೀಲವನೆ ಸ್ವೀಕರಿಸುತಿರುವುದುಪೇಳಲೇನು ಕರುಣಾಳು ನೀ ಯೆನ್ನಯ 2ನಾನಾ ಕಷ್ಟಪಟ್ಟೆ ಇನ್ನಾದರುಮಾನಿಸಬೇಕಷ್ಟೆ ಎನ್ನೊಳುಊನ ಗ್ರಹಿಸಿ ಅನುಮಾನ ಸಾಧಿಸಿದರೆನಾನೆಂಬುವದೇನು ಸ್ವತಂತ್ರವಕಾಣೆನು ಎನ್ನೊಳಗೆ ಸಂತತನೀನೇ ಗತಿಯೆನಗೆ ಇದಕನು-ಮಾನವಿಲ್ಲ ಪಾದಾನತಜನರಾಧೀನನೆಂಬ ಬಿರುದಾನಬೇಕಾದರೆ 3ಅಪರಾಧಿಯೆ ನಾನು ಹೇಗೈಅಖಿಲಾತ್ಮನು ನೀನು ಹೃದಯದಿಕೃಪೆಯ ಬೀರಿ ತೋರಿಪ ಪರಮಾತ್ಮನೆಚಪಲನಾಗಿ ಎನ್ನುಪಮೆಗೆಯೊಡ್ಡಿದೆಸಫಲವಾಯ್ತು ಎನಗೆ ಕೀರ್ತಿಯುಅಪಕೀರ್ತಿಯು ನಿನಗೆ ಪಾದವಜಪಿಸುವಂತೆ ಕರುಣಿಪುದಿನ್ನಾದರೂಕಪಟವಾಯ್ತೆ ಸರೀಸೃಪಗಿರಿರಾಜನೆ 4ದೂಷಣಾರಿ ನಿನ್ನ ಪಾದದದಾಸಗೈಯ್ಯೊ ಎನ್ನ ಎನ್ನೊಳುದೋಷವಿಲ್ಲ ಜಗದೀಶ ಜನಾರ್ದನದಾಶರಥಿಯ ಕರುಣಾಶರಧಿಯೊಳಗೆಈಸಾಡಿದ ದಾಸ ಕಾರ್ಕಳಾಧೀಶ ಶ್ರೀನಿವಾಸ ರವಿಶತಭಾಸ ಶ್ರೀಲಕ್ಷ್ಮೀನಾರಾಯಣ ಸರ್ವೇಶ ಭಕ್ತಜನಪೋಷ ನೀಯೆನ್ನಯ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತಪ್ಪು ನೋಡದೆ ಬಂದೆಯಾ ನನ್ನ ತಂದೆಯೆಅಪ್ಪ ತಿರುವೆಂಗಳೇಶನೆ ನಿರ್ದೋಷನೆ ಪ.ಆಪಾದಮೌಳಿ ಎನ್ನೊಳುಅಘಬಹಳಶ್ರೀಪತಿ ಕ್ಷಮಿಸಿ ಕಾಯಿದೆಯ ಉದಧಿಶಯ್ಯಾ 1ಜಗದಘಹರನೆಂಬುದು ನಿನ್ನ ಬಿರುದುತ್ರಿಗುಣಾತೀತನೆ ರಾಮನೆ ಗುಣಧಾಮನೆ 2ಇನ್ನೆನ್ನ ಕಲುಷವಾರಿಸೊ ಭವತಾರಿಸೊ ಪ್ರಸನ್ನ ವೆಂಕಟರಮಣ ಭಯಶಮನ 3
--------------
ಪ್ರಸನ್ನವೆಂಕಟದಾಸರು
ದೃಷ್ಟಿ ನಿನ್ನ ಪಾದದಲ್ಲಿ ನೆಡುವ ಹಾಗೆ - ಧರೆಯದುಷ್ಟ ಜನರ ಸಂಗಗಳನು ಬಿಡುವ ಹಾಗೆ ಪ.ಕೆಟ್ಟ ಮಾತ ಕಿವಿಯಿಂದ ಕೇಳದ ಹಾಗೆ ಮನವಕಟ್ಟು ಸದಾ ನಿನ್ನ ಧ್ಯಾನ ಬಿಡದ ಹಾಗೆ ಅಪದೃಷ್ಟನಾಗಿ ಕೈಯನೆತ್ತಿ ಕೊಡುವ ಹಾಗೆ ಶ್ರೀಕೃಷ್ಣ ನಿನ್ನ ಪೂಜೆಯನ್ನು ಮಾಡುವ ಹಾಗೆ ||ಭ್ರಷ್ಟನಾಗಿ ನಾಲ್ವರೊಳು ತಿರುಗದ ಹಾಗೆ ಬಲುಶಿಷ್ಟ ಜನರ ಸೇವೆಯನು ಮಾಡುವ ಹಾಗೆ 1ಪುಟ್ಟಿಸಿದ ತಾಯಿ - ತಂದೆಯಲ್ಲವೆ ನೀನು - ಒಂದುಹೊಟ್ಟೆಗಾಗಿ ದೈನ್ಯ ಪಡಬೇಕೇ ನಾನು ||ಪಟ್ಟೆ -ಪಟ್ಟಾವಳಿ ಬೇಡಲಿಲ್ಲ ನಾನು ಎನ್ನಗುಟ್ಟು ಅಭಿಮಾನಗಳ ಕಾಯೋ ನೀನು2ನಟ್ಟನಡು ನೀರೊಳೀಸಲಾರೆ ನಾನು ಎತ್ತಿಕಟ್ಟೆಯ ಸೇರಿಸಬೇಕಯ್ಯ ನೀನು ||ಬೆಟ್ಟದಷ್ಟು ಪಾಪ ಹೊತ್ತಿರುವೆ ನಾನು ಅದನುಸುಟ್ಟು ಬಿಡುಪುರಂದರ ವಿಠಲ ನೀನು3
--------------
ಪುರಂದರದಾಸರು
ನಂಬಿ ಚೊಕ್ಕಟಿಂಬು ಪಡೆಯಿರೈ ಪ.ಇಂಬುಪಡೆದು ಹರಿಯಚರಣಅಂಬುಜಬಂಡುಂಡು ಮಿಕ್ಕಹಂಬಲವ ಉಳಿದುಭೂರಿಸಂಭ್ರ್ರಮಿಸುವವರಕೇಳಿಅ.ಪ.ಹರಿವ ಮನವಕಟ್ಟಿವಿೂರಿಬರುವ ದುರಿತಕಂಜದೆ ಸುತ್ತಿರುವ ಮಾಯಾಪಾಶ ಹರಿವ ಹರುವನಾಲಿಸಿಗುರುವಿನಾಜ್ಞಾದಂತೆ ಪುಣ್ಯದುರುಹು ಬಲ್ಲ ಪ್ರೇಕ್ಷಕಲ್ಪತರುವ ಪಿಡಿದು ನಷ್ಟ ಕಳೇವರವು ತನ್ನದಲ್ಲವೆಂದು 1ಆವಾಗೆ ಸಚ್ಛಾಸ್ತ್ರ ಶ್ರವಣಭಾವಗುಟ್ಟುಕೇಳಿಭಕುತಿಠಾವುಗಂಡು ಹಸಿವು ತೃಷೆಯಕಾವಘಸಣೆಯಸಾವಿಗ್ಹೊಂದದಂತೆ ಸಾಧುಸೇವ್ಯಗರುಡಗಮನನಂಘ್ರಿಸೇವೆಗಧ್ಯಕ್ಷಿತರಾಗಿ ನೀವೀಗ ವೈರಾಗ್ಯ ಬಲಿದು 2ಕ್ಷುದ್ರಭೋಗಬಯಸದೆ ದಾರಿದ್ರ ಭೀತನಾಗದೆ ಸಮುದ್ರಭವನನೆಂದು ಶ್ರೀಮುದ್ರಾಭರಣದಭದ್ರ ಭಾಗವತನು ಆಭದ್ರ ಬುದ್ಧಿಯಲ್ಲಿ ಕೂಡಿಚಿದ್ರೂಪ ಪ್ರಸನ್ನವೆಂಕಟಾದ್ರಿ ಭೋಗಶಯನನೆಂದು 3
--------------
ಪ್ರಸನ್ನವೆಂಕಟದಾಸರು
ನಾರದ ಕೊರವಂಜಿ1ಜಯ ಜಯ ಜಯ ಜಯ ಜಯ ಜಯ ಪ.ಶ್ರೀ ರಮಾರಮಣ ಜಯ ಶ್ರೀಕರ ಗುಣಾಬ್ಧಿ ಜಯಶ್ರೀ ರುಕ್ಮಿಣೀಶ ಜಯ ಶ್ರೀ ಶ್ರೀನಿವಾಸ ಜಯನೀರಚರಕಮಠಕಿಟಿನೃಹರಿವಟುಭೃಗುಜ ರಘುವೀರ ಯದುಪತೆಬುದ್ಧಕಲ್ಕಿ ಸ್ವರೂಪಾ ಜಯ ಜಯ1ಶ್ರೀ ಮತ್ಕಪಿಲ ಋಷಭ ಯಜÕದತ್ತ ಕಂಸ್ತುಘ್ನ ?ಕೌಮಾರ ವ್ಯಾಸ ಹಯಗ್ರೀವ ಶ್ರೀಮದ್ದಜಿತ ಜಯಸ್ವಾಮಿ ಮಹಿದಾಸ ತಾಪಸ ಉರುಕ್ರಮಶೂಲಿವ್ಯಾಮೋಹ ಧನ್ವಂತರೆ ಹಂಸ ಶುಕ್ಲಾ ಜಯ ಜಯ 2ಆನಂದ ಜ್ಞಾನ ಬಲಮಯ ಚಿತ್‍ಸ್ವರೂಪ ಜಯಅನಂತ ಮಹಿಮ ವೈರಾಜ ಪುರುಷೋತ್ತಮ ಜಯಅನಂತ ಬ್ರಹ್ಮ ರುದ್ರೇಂದ್ರಾದಿಸೇವ್ಯಜಯಅನಂತ ಜೀವಗ ಪ್ರಸನ್ವೆಂಕಟ ಕೃಷ್ಣಾ ಜಯ ಜಯ 32ಶರಣು ಮಂಗಳ ದೇವತೇವರಶರಣುಚಿತ್ಸುಖಸಾಗರಶರಣುಅಗಣಿತಗುಣಶುಭಾಕರಶÀರಣು ವೆಂಕಟ ಮಂದಿರ 4ದುರುಳದೈತ್ಯರು ಸೊಕ್ಕಿ ವರದಲಿಧರೆಗೆ ಕಂಬನಿ ತರಿಸಲುತ್ವರದಿ ಸುರರಿಗೆ ಮೊರೆಯನಿಟ್ಟಳುಧರಿಸಲಾರೆನು ಎನುತಲಿ 5ಸರಸಿಜೋದ್ಭವಭವಪುರುಹೂತರರಿದು ಚಿಂತಿಸಿ ಮನದಲಿವರಪಯೋನಿಧಿಗೈದಿ ಸ್ತುತಿಸಲುಕರುಣದಲಿ ಅವತರಿಸಿದೆ 6ಬಂದು ಧರ್ಮದ ವೃಂದ ರಕ್ಷಿಪೆನೆಂದು ದೀಕ್ಷೆಯವಿಡಿದು ನೀಅಂದಗೆಡಿಸುತ ದನುಜನಿಕರವಹೊಂದಿ ದ್ವಾರಕ ನಗರವ 7ಇಂದಿರೆಯು ನಿನ್ನಿಚ್ಛೆಯನುಸರದಿಂದ ಕ್ರೀಡಿಪಳನುದಿನÀಮಂದಜನರಿಗೆ ಮೋಹಿಸುತನರರಂದದಲಿ ತೋರಿದೆ ಹರೆ 8ದೇವಋಷಿ ನಾರದನು ಶ್ರೀಪದಸೇವೆಗÉೂೀಸುಗ ಕೊರವಿಯಭಾವದಲಿ ಜಗದಂಬೆ ರುಕ್ಮಿಣಿದೇವಿಯಳ ಬಳಿಗೈದು ತಾ 9ದೇವ ನಿನ್ನಯ ಬರವ ಬೆಸಸಿದಕೋವಿದತೆಯನು ಪೇಳುವೆಶ್ರೀವರ ಪ್ರಸನ್ವೆಂಕಟ ಕೃಷ್ಣಪಾವನ ಮತಿಯ ಕರುಣಿಸೊ 103ಶ್ರೀ ರಂಭೆ ಭೀಷ್ಮಕನಭೂರಿಪುಣ್ಯದ ಗರ್ಭವಾರಿಧಿಯಲ್ಲಿ ಜನಿಸಿನಾರಿ ರುಕ್ಮಿಣಿಯೆಂಬ ಚಾರುನಾಮದಿಕಳೆಯೇರಿ ಬೆಳೆದಳಂದವ್ವೆ 11ಜನನಿಜನಕರೆಲ್ಲ ತನುಜೆಯ ಹರಿಯಂಘ್ರಿವನಜಕೆ ಕೊಡಬೇಕೆನ್ನೆನೆನೆದು ತಾನೊಂದು ರುಕ್ಮನು ದಮಘೋಷನತನುಜಗೆ ತಂಗಿಯನು 12ಕೈಗೂಡಿಸುವೆನೆಂಬ ವೈಭವದಲ್ಲಿರೆವೈಮನಸದೊಳು ಕನ್ಯೆಯುಸುಯ್ಗರಿಯುತ ಮುರವೈರಿ ಪ್ರಸನ್ವೆಂಕಟಕೃಷ್ಣಯ್ಯನೊಳ್ ಮನವಿಟ್ಟಿರೆ 134ದನುಜಮಥನÀ ಹರಿಸೇವೆ ಇದೆಂದುಅನಿಮಿಷಮುನಿ ಧರೆಗಿಳಿದು ತಾ ಬಂದುವನಿತೆ ಕೊರವಂಜಿಯ ವೇಷವÀ ಧರಿಸಿಜನಪ ಭೀಷ್ಮಕನೋಪವನದಲ್ಲಿ ನೆಲಸಿ 14ಹಲವು ಕೊರವಿಯರ ಕೂಡಿ ಸಿಂಗರದಿಬೆಲೆ ಇಲ್ಲದುಡಿಗೆ ತೊಡಿಗೆ ಇಟ್ಟು ಮುದದಿಇಳೆಯ ಜನರು ಮೋಹಿಸುವಪರಿಇಹಳುಕೆಳದೇರ ಗಡಣದಲಿ ಚೆಲುವೆ ಒಪ್ಪಿದಳು 15ಮಂಜುಗಾವಿಯ ಸೀರೆ ನಿರಿತೆಗೆದುಟ್ಟುಕೆಂಜೆಡೆ ಬಿಟ್ಟೋರೆದುರುಬಿನ ಕಟ್ಟುಪಂಜಿನೋಲೆಯ ಮೂಗುತಿಯ ಬಲಿದಿಟ್ಟು ಗುಲಗಂಜಿ ಹೊಂದಾಳೆ ಸರಗಳಳವಟ್ಟು 16ಕಂಚುಕಪುಟ ಬಿಗುಪೇರಿದ ಕಟ್ಟುಚಂಚಲನೇತ್ರಕಂಜನ ಕಾವಲಿಟ್ಟುಮಿಂಚುವಾಭರಣಿಟ್ಟು ಪ್ರಸನ್ವೆಂಕಟ ಕೃಷ್ಣನಂ ಚಿಂತಿಸಿ ಜಯ ಜಯಯೆಂದಳುಕೊರವಿ175ಅಡಿಗಡಿಗೆ ಝಣ ಝಣರೆಂದು ನಡೆತಂದು ನಡೆತಂದುಮಡದಿ ರಾಜಬೀದಿಯಲಿನಿಂದು18ಮೃಡಗಹಿತನ ಪಟ್ಟದಾನೆ ಮಂದಗಮನೆ ಮಂದಗಮನೆಕಡುಮೌನಿ ಜನರ ಮೋಹಿನೆ 19ಚಪಲ ನೋಟಕೆ ನಾಗರಿಕರು ನೋಟಕರು ನೋಟಕರುಲಿಪಿಯ ಚಿತ್ರದೊಲು ನಿಂತಿಹರು 20ನಿಪುಣೆಕೊರವಿಶ್ರೀಪ್ರಸನ್ವೆಂಕಟ ಕೃಷ್ಣನ್ನ ಕೃಷ್ಣನ್ನಶ್ರೀಪ್ರÀ್ರಸಾದವ ಬೇಡುತಿದ್ದಳಣ್ಣ 216ಬೆಡಗಿನ ಗಮನದಿ ಎಡಬಲಕೊಲಿದುಕಡಗ ಶಂಖದ ಬಳೆ ನುಡಿಸುತ ನಡೆದುಅಡಿಗೊಮ್ಮೆ ತಿರುಮಲ ಒಡೆಯನ ನೆನೆದು ತಕ್ಕಡ ಧಿಗಿಧಿಮಿಕೆಂದುಜಡಿದುತಾಳ್ವಿಡಿದು22ತಿಗುರಿದ ಗಂಧ ಸೆಳ್ಳುಗುರಿನ ನಾಮಮೃಗಮದದ ಬೊಟ್ಟಿನ ನಗೆಮೊಗದ ಪ್ರೇಮಮಗುವನುಡಿಯಲೆತ್ತಿ ಜಗಚ್ಚರಿಯಮ್ಮಹೆಗಲ ರನ್ನದ ಬುಟ್ಟಿ ಮುಳ್ಳುವಿಡಿದಮ್ಮ 23ನಗರದ ಜನದ ಕಣ್ಣಿಗೆ ಕೌತುಕೆನಿಸಿಬಗೆ ಬಗೆ ಒಗಟು ಮಾತುಗಳನುಚ್ಚರಿಸಿನಗರಾಧಿಪತಿಯ ಮನೆಯಕೇಳಿನಡೆದುಮಿಗೆ ಪ್ರಸನ್ವೆಂಕಟ ಕೃಷ್ಣಗೆ ಕೈಮುಗಿದು 247ಬ್ರಾಹ್ಮರ ಕೇರಿಗೆ ಬಂದಳಾಕೊರವಿಪರಬ್ರಹ್ಮನ ಗುರುತ ಕೇಳುತ್ತನಮ್ಮಮ್ಮ ನಮ್ಮವ್ವೆ ನಮ್ಮಜ್ಜಿ ನೀಡೆಂದುಸನ್ಮಾನದಾಲಯವ ಪೊಗುತಾ 25ಇಂತಪ್ಪ ಸೊಬಗುಳ್ಳ ಕೊರವಿಯನು ಕಂಡುನೃಪನಂತಃಪುರದ ಸತಿಯರೈದಿಕಂತುವಿನ ಜನನಿಗೆ ಕರವೆರಡು ಮುಗಿದು ಏಕಾಂತ ಪೇಳಿದರು ಚೆನ್ನಾಗಿ 26ಓರ್ವ ಕಾಲಜ್ಞಾನ ಪೇಳ್ವ ಕೊರವಮ್ಮ ನಮ್ಮೂರ್ವಳಗೆ ತಿರುಗುತಿಹಳಮ್ಮಸರ್ವೇಶ ಪ್ರಸನ್ವೆಂಕಟ ಕೃಷ್ಣನಾಗಮದನಿರ್ವಚನ ಕರೆಸಿ ಕೇಳಮ್ಮ 278ಬಂದಳು ನೃಪನರಮನೆಗೆ ತಾನಿಂದಲ್ಲಿ ನಿಲ್ಲದೆ ಕಿಲಿಕಿಲಿ ನಗುತಾ ಕುಲು ಕುಲು ನಗುತಾ ಪ.ಬಂದ್ಹೇಳಿದ ನುಡಿಗೇಳ್ದು ಪೂರ್ಣೇಂದುವದನೆ ಮುದತಾಳ್ದುಮಂದಿರಕೆ ಕರೆಸಿದಳು ನಲವಿಂದಲಿ ಬಲು ಬೆಡಗಿನ ಕೊರವಂಜಿ 28ತಳಪಿನ ಮುತ್ತಿನ ಕಟ್ಟುಶುಭತಿಲಕದ ಹಚ್ಚೆಯ ಬಟ್ಟುಅಲುಗುವ ಮೂಗುತಿಯಬಲೆ ಸಲೆಬಳುಕುತ ಬಡನಡುವಿನ ಚಪಲೆ 29ಬಟುಗಲ್ಲದ ಮಕರಿಕಾಪತ್ರ ಪವಳದುಟಿ ದಾಡಿಮರದಗೋತ್ರವಿಟಮೃಗಸ್ಮರಶರ ನೇತ್ರ ಕೊರಳ್ದಟಿಸುವಮಣಿಮುತ್ತಿನ್ಹಾರಗಳೊಲಪಲಿ30ಇಟ್ಟೆಡೆ ಮೊಲೆಯ ಪಟ್ಟಿಕೆಯು ಶ್ರೋಣಿಮುಟ್ಟುವ ಮುಡಿಯ ಮಾಲಿಕೆಯುಬಿಟ್ಟ ಮುಂಜೆರಗಮಲಿಕೆಯು ಕಣ್ಣಿಟ್ಟ ಮೃಗಕೆ ಭ್ರೂಸ್ಮರಕಾರ್ಮುಕೆಯು 31ತೆಳ್ವೋದರದ ತ್ರಿವಳಿಯ ಜಗುಳಿಬೀಳ್ವ ಮಣಿಮುಕ್ತಾವಳಿಯಸಲ್ಲಲಿತ ಸಂಪಿಗೆ ಕಳೆಯ ಗೆಲ್ವಚೆಲ್ವೆಕೊರವಿಪುರವೀಥಿಯ ಬಳಿಯ32ಕಿಣಿ ಕಿಣಿ ರವದ ಕಿಂಕಿಣಿಯುಝಣ ಝಣತ್ಕಾರಿಪಂದುಗೆ ಮಣಿಯುಕಣಿ ಕಣಿ ಒಯ್ಯೆಂಬೊಕ್ಕಣಿಯು ಕುಚಕುಣಿ ಕುಣಿಸಿ ನಟಿಪ ನಡೆವಾಂಗನೆಯು 33ಸಿಂಗನ ಉಡಿಯಲ್ಲಿಕಟ್ಟಿಉತ್ಸಂಗದೊಳೊಲಪಿನ ದಿಟ್ಟಿರಂಗ ಶ್ರೀ ಪ್ರಸನ್ವೆಂಕಟ ಕೃಷ್ಣಾಂಗನೆಯನು ಕಾಂಬುವೆನೆಂಬ ತವಕದಿ 349ವಚನಪದುಮನಾಭನ ರಾಣಿ ರಾಣಿವಾಸದಲಿಯದುಕುಲೇಂದ್ರನ ಚರಣೋಚ್ಚಾರಣೆಯಲ್ಲಿರಲುಒದಗಿ ಬಂದಳುಕೊರವಿಕರೆಯುತ್ತ ತಾನುಚದುರ ಪ್ರಸನ್ವೆಂಕಟ ಕೃಷ್ಣನರಸಿಯನು 3510ಎಲ್ಲಿಹಳೆಲ್ಲ್ಲಿಹಳಾ ರಾಯನ ಮಗಳೆಲ್ಲಿಹಳೆ ನೀಡೆಯವ್ವನಲ್ಲೆ ಬಾ ನಲ್ಲೆ ಬಾ ನಲ್ಲೆ ಬಾ ರುಕ್ಮಿಣಿನಲ್ಲೆ ಬಾರೆ ಮುಂದಕವ್ವ 36ಬಲ್ಲೆ ನಾ ಬಲ್ಲೆ ನಿನ್ನಯ ಮನದೆಣಿಕೆಯಸೊಲ್ಲುವೆನೆ ನೀಡೆಯವ್ವನಿಲ್ಲದು ನಿಲ್ಲದಕ್ಕಿಯು ನಿನ್ನದ್ಹಸಿತ ಕೈಒಳ್ಳೆ ಕಜ್ಜಾಯ ನೀಡೆಯವ್ವ 37ಕೆಟ್ಟೋಗರಕೆ ಚಿತ್ತವಿಟ್ಟ ಕೊರವಿಯಲ್ಲಮೃಷ್ಟಾನ್ನವ ನೀಡೆಯವ್ವಶ್ರೇಷ್ಠಾದ ಶಾವಿಗೆ ಬಟ್ಟುವಿ ಪಾಯಸಹೊಟ್ಟೆ ತುಂಬ ನೀಡೆಯವ್ವ 38ಅಟ್ಟಿಟ್ಟ ಪಂಚವಿಧ ಭಕ್ಷ್ಯ ಎನಗಿಂದುಇಷ್ಟ ಕಾಣೆ ನೀಡೆಯವ್ವಇಷ್ಟುಣಲಿಕ್ಕೆನ್ನತುಷ್ಟಿಬಡಿಸಿ ಸತ್ಯಗೋಷ್ಠಿಕೇಳೆ ನೀಡೆಯವ್ವ39ಮನ್ನಣೆ ಇಲ್ಲದ ಮನೆಯ ಹೊಗುವಳಲ್ಲಕನ್ನೆ ಬಾರೆ ಮುಂದಕವ್ವಮುನ್ನ ರಕ್ಕಸನೊಯ್ದ ಮಡದಿಗೆ ಒಳಿತವನೆಲ್ಲ ಹೇಳಿದ್ದೆನವ್ವ 40ನಿನ್ನ ಪ್ರಾಣದ ಪ್ರಿಯನೊಬ್ಬನೆ ಪರದೈವಕನ್ನೆ ಕೇಳಜಕಾಮರವ್ವಕಣ್ಣಾರ ಕಾಂಬೆ ನಿನ್ನಣ್ಣನಪಾಟುಪ್ರಸನ್ನವೆಂಕಟ ಕೃಷ್ಣನಿಂದವ್ವ 4111ಚೂರ್ಣಿಕೆಈ ವಾಕ್ಯವಂಕೇಳಿತೀವಿ ತೋಷವ ತಾಳಿದೇವಿ ರುಕ್ಮಿಣಿಯಕ್ಕ ಪಾವನ ಹಾಸಂಗಿಯಿಕ್ಕಿಆವಲ್ಲಿಂ ಬಂದ್ಯವ್ವ ದೇವಲೋಕದ ಕೊರವೆಈ ಒಳ್ಳೆ ಮೆಚ್ಚು ಮಾತು ಆವಾಗನುಭವೆಂ ಮಾತೆಹೀಗೆಂದಾಸನ ಕೊಟ್ಟು ಬಾಗಿಲೊಳು ಕಾವಲಿಟ್ಟುಬೇಗ ಪ್ರಸನ್ವೆಂಕಟ ಕೃಷ್ಣನಾಗಮವ ಮನದಿ ಕೇಳ್ದಳವ್ವೆ 4212ಕುಳ್ಳಿರೆ ಕುಳ್ಳಿರೆ ಕುಳ್ಳಿರೆ ಕೊರವಂಜಿಫುಲ್ಲಬಾಣನಾನೆ ಕುಳ್ಳಿರೆಸೊಲ್ಲಮ್ಮ ಸೊಲ್ಲಮ್ಮ ಹಲವು ಮಾತಿನ ಜಾಣೆಎಲ್ಲ ಬಯಕೆಯನೆಲ್ಲ ಸೊಲ್ಲಮ್ಮ ಕೊರವಂಜಿ 43ಆದರದಾ ಮಾತ ಕೇಳುತ ಕುಳಿತಳುಯಾದವರರಸ ಮುಕುಂದನಕೋದಂಡಪಾಣಿ ತಿರುವೆಂಗಳ ಮೂರ್ತಿಯಪಾದಕೆ ಮಾಡಿದಳೊಂದನೆ ಕೊರವಂಜಿ 44ಮಣಿಮಯ ಬುಟ್ಟಿಯ ಎಡದಲಿಟ್ಟುಕೊಂಡುವನಿತೆ ಪದ್ಮಾಸನವಿಟ್ಟಳುಮಿನುಗುವ ಎಳೆನಗೆಯಣುಗನ್ನ ಮಲಗಿಸಿವನಿತೆ ರುಕ್ಮಿಣಿಯನ್ನು ಕರೆದಳು ಕೊರವಂಜಿ 45ಜಾಣೆ ಬಾರೆ ಸುಗುಜಾಣೆ ಬಾರೆ ನಾರಿಮಾಣಿಕಳೆಕಟ್ಟಾಣಿಬಾರೆವಾಣಿಪತಿಪಿತ ಪ್ರಸನ್ವೆಂಕಟ ಕೃಷ್ಣನರಾಣಿ ಬಾರೆಸುಪ್ಪಾಣಿಬಾರೆ ಕಲ್ಯಾಣಿ ಬಾರೆ ಫಣಿವೇಣಿ ಬಾರೆಶುಭಶ್ರೋಣಿ ಬಾರೆ ಎಂದು ಕರೆದಳು ಕೊರವಂಜಿ 4613ವಚನಅಮ್ಮ ರುಕ್ಮಿಣಿಯಮ್ಮ ಉಮ್ಮ್ಮಯವಟ್ಟುಮುಮ್ಮೊರದ ರತುನ ಮುತ್ತಿನ ಕಾಣಿಕಿಟ್ಟುಪರಬೊಮ್ಮಪ್ರಸನ್ವೆಂಕಟಕೃಷ್ಣನ ಅಡಿಗಳನಮ್ಮಿಸುತ ಮನೋರಥವÀ ಮನದಿ ಬೆಸಗೊಳ್ಳಲು 47ಉಂಡ ಊಟ ಕಂಡ ಕನಸು ಪುಂಡರೀಕಾಂಬಕಿಯೆತಂಡ ತಂಡದ ವಾರುತೆಗಳ ಪೇಳುವೆನು ಸಖಿಯೆಹಿಂಡುದೈವದಗಂಡಪ್ರಸನ್ವೆಂಕಟ ಕೃಷ್ಣನ ಕಣ್ಣಾರಕಂಡು ಸಾರುವಕೊರವಿಎಳ್ಳನಿತು ಸಟೆಯರಿಯೆ4815ಚೂರ್ಣಿಕೆಕಾಸಿನಾಸೆಯವಳು ನಾನಲ್ಲಭಾಷೆ ಹುಸಿದರೆ ಬಿರುದು ಬಿಸುಡುವೆನೆಲ್ಲಭಾಷೆ ಪಾಲಕರು ನಮ್ಮ ಸಿದ್ಧರೆಲ್ಲ ಲೇಸುಲೇಸೆಂದುಕೇಸಕ್ಕಿತಿಮ್ಮಯ್ಯನ ಬೆತ್ತವ ಮುಟ್ಟೆಲೆ ದುಂಡೆಎನ್ನ ಮನದ ದೈವ ಎನ್ನಕ್ಕ ಕೇಳೆಯವ್ವತಿರುಮಲೆ ತಿರುವೆಂಗಳಯ್ಯವರಅಹೋಬಲ ನರಸಿಂಗಯ್ಯಹರಿಕಂಚಿ ವರದರಾಜಯ್ಯಶಿರಿ ರಂಗದ ರಂಗರಾಯಯ್ಯಬದರಿಯ ನರನಾರಾಯಣಯ್ಯಪುಂಡರೀಕವರದ ಪಂಢರಿರಾಯ ಎಮ್ಮಉಡುಪ ಕುಲಜ ಮನ್ನಾರು ಕೃಷ್ಣಮ್ಮಒಡ್ಡಿಜಗನ್ನಾಥ ಅಲ್ಲಾಳನಾಥಯದುಗಿರಿನಾಥ ಶಿರಿಮುಷ್ಣನಾಥಕೃತಪುರದ ವೀರ ನಾರಾಯಣಕೊಲ್ಲಾಪುರದ ಕನ್ನೆ ವೇಲಾಪುರದ ಚೆನ್ನಅನಂತಶಯನ ಜನಾರ್ದನ್ನಅನವರತಪರಸನ್ನ ವೆಂಕಟ ಕೃಷ್ಣನ ಕನ್ನೆಇಂತಪ್ಪಾನೇಕ ದೈವ ಏಕವೆಂದು ಏಕಾನೇಕವೆಂದುನಂಬಿಪ್ಪೆನೆ ಕೇಳೆಯವ್ವ 4916ಇಂತಿಪ್ಪ ಎನ್ನ ಮನೆಯ ದೈವ ಅವರಂತವ ಬೊಮ್ಮರರಿಯರವ್ವ ವಿಶ್ರಾಂತಿಲಿ ಕೊಂಡಾಡುವೆನವ್ವ ನಾನುಕಂತುವಿನಣ್ಣನ ಮಗಳವ್ವ 50ಇಪ್ಪಲ್ಲಿಪ್ಪಕೊರವಿನಾನಲ್ಲ ಹೋಗಿಬಪ್ಪೆ ಹದಿನಾಲ್ಕು ಲೋಕಕೆಲ್ಲಛಪ್ಪನ್ನದೇಶಗಳ ಸುದ್ದೀನೆಲ್ಲಕೇಳಿಬಪ್ಪುವ ಕಜ್ಜವ ಕೃಷ್ಣ ಬಲ್ಲ 51ಆವಾವ ದೇಶದ ಸುದ್ದಿ ಕೇಳವ್ವ ನಿನ್ನಭಾವದ ಬಯಕೆಯನೆಲ್ಲ ಕೇಳವ್ವಶ್ರೀವರ ಪ್ರಸನ್ನವೆಂಕಟಾದ್ರಿ ಕೃಷ್ಣ ದ್ವಾರಕಿಂದಾವಾಗ ಬಪ್ಪನೆಂದು ಕೇಳವ್ವ 5217ಚೂರ್ಣಿಕೆಓಯಮ್ಮ ನಿನ್ನವರುಗಳು ಆ ಬಲಮಗು ಮದನಕಾಮಬುಡುಕ್ಕಾನೆ ಪರತಾನು ಚಿಂತಿಶೆ ಮಾಣಮ್ಮನಾ ತಿರುಕ್ಕಿ ವಂದ ದೇಶ ಐವತ್ತಾರು ಶೊಲ್ಲರೆಅಂಗ ವಂಗ ಕಳಿಂಗ ಕಾಂಬೋಜ ಭೋಟಕರ್ನಾಟಕ ಘೋಟ ಮಹಾಘೋಟಜಿನ್ನ ಮಹಾಜಿನ್ನ ಜೊನ್ನಗಕಾಶ್ಮೀರ ತುರುಷ್ಕಮಾಗಧಬಂಗಾಳ ಗೌಳ ಮಾಳವ ಮಲೆಯಾಳನೇಪಾಳ ಗೌಡ ಗುರ್ಜರ ಕೊಂಕಣದರ್ದುರಬರ್ಬರ ಸೌರಾಷ್ಟ್ರ ಮಹಾರಾಷ್ಟ್ರಸಂಬರ ಮುಂಗಿಳ ಘೋಟ ಮುಖಏಕಪಾದ ಸೌಳ ಸಂಸಾಳಕಆನರ್ತ ಹಮ್ಮೀರ ಕೊಮ್ಮೀರಮತ್ಸ್ಯಪಾಂಚಾಲರಾಜಶೇಖರ ವರಶೇಖರ ಯುಗಂಧರ ಮಧ್ಯದೇಶಲಂಬಕರ್ಣ ಸ್ತ್ರೀರಾಜ್ಯ ಆಂಧ್ರ ದ್ರವಿಡಅರವ ಕನ್ನಡ ತುಳುವ ತುಳಾಂಡಜಾಳೇಂದ್ರ ಕೈಕೇಯ ಕೌಸಲ ಕಂಚಿಕನೋಜ ಸವ್ವೀರಸಿಂಧುಕೇರಳವೈದರ್ಭ ದೇಶದೊಳ್ಕುಂಡಿನಾಪುರದೊಳ್ ನಿನ್ನಂ ಕಂಡುಮನದಂಡಲಿಕೆಗೆ ಸಾಗಿತ್ತೆನೆಲೆ ದುಂಡೆ 5318ಈ ನಾಡ ಚರಿಸಿ ನಿನ್ನರಸುತ ಬಂದೆನೆಜಾಣೆ ಬಂಗಾರವ್ವ ಕೈ ತೋರೆ 54ನಿನ್ನ ಕಾಣುತ ಹಸಿವೆ ನೀರಡಿಕೆಲ್ಲ ಹೋಯಿತುಜಾಣೆ ಬಂಗಾರವ್ವ ಕೈ ತೋರೆ 55ಸಂಧಾನಕ್ಹಾರುವನಟ್ಟಿದ್ದೆ ಮೊದಲಹುದೇನೆ ಮಂಗಳದೇವಿ ಕೈ ತೋರೆ 56ನೀ ಬರೆದೊಕ್ಕಣೆ ಯದುರಾಯನರಿತಾನುಸೌಭಾಗ್ಯವಂತೆ ಕೈ ತೋರೆ 57ರಥವನೇರಿಕೊಂಡು ಬರಹ ನೋಡಿಕೊಳ್ವಜಾಣೆ ಬಂಗಾರವ್ವ ಕೈ ತೋರೆ 58ಧ್ಯಾನದ ಕಳವಳ ಮುಸುಡುಗಂಟಿನ ಚಿಂತೆಮಾಣು ಮಂಗಳದೇವಿ ಕೈತೋರೆ 59ತ್ರಿಭುವನೇಶ ಪ್ರಸನ್ನವೆಂಕಟ ಕೃಷ್ಣತಾ ಬಹನೆಲೆ ದುಂಡಿ ಕೈ ತೋರೆ 6019ಚೂರ್ಣಿಕೆಎಲೆಲೆ ಎಳೆವೆಂಗಳೆ ಎಲೆ ಹುಲ್ಲೆಗಂಗಳೆಮಹಾಭೂಷಣದ ಮಾರುವೇಣಿ ಮಡದಿಯರಸುಪ್ಪಾಣಿಕೀರವಾಣಿ ಕಿಸಲಯಪಾಣಿಕಂಧಿಜ ಬಿಂಬವದನೆ ಕುಲಿಶಮಣಿರದನೆಮದನಕಾರ್ಮುಕೋಪಮ ಭ್ರೂಲತೆಯಳೆ ಮಹಾಲಕುಮಿಯಳೆಅರುಣವಿಧ್ರುಮಾಧರೆ ಅಬ್ಜಜಾ ಕಂಧರೆಅರ್ಧಚಂದ್ರನ ಪೋಲ್ವಡಿ ಪಣೆಯಳೆ ಅನಘ್ರ್ಯ ಚೂಡಾಮಣಿಯಳೆಸಿಂಧೂರಸೀಮಂತಿನಿಯೆಸಿರಿತಿಲಕದ ಶೋಭಿನಿಯೆನುಣ್ಗದಪುನಾಸಿಕಮಣಿಯಳೆ ನೂತನೊಜ್ರದೋಲೆಯಳೆನಿಷ್ಕ ಕಂಠಾಭರಣೆಯಳೆ ನಿತ್ಯಮಂಗಳ ಸೂತ್ರಿಯಳೆನಿಡುಜಾಲಕ ಮಾಲೆಯಳೆಬುಗುಡಿ ಚಳತುಂಬು ಕೊಪ್ಪಿನ ಕಿವಿಯಳೆಬಾವಲಿ ನಾಗೋತ್ರ ಪೊಂಬರಳೆಲೆ ಲಲಿತ ಬಾಹುಲತೆಯಳೆಲಸತ್ವನಜಕೋರಕ ಸ್ತನಿಯಳೆಕಡು ತೆಳ್ವೋದರಿ ನಿಮ್ನ ನಾಭಿಯಳೆಕಂಠೀರವಕಟಿಯಳೆ ಕರಭೋರು ಯುಗಳೆಯಳೆಅಪರಂಜಿಕಂಚುಕಾಂಬರ ಉತ್ತರೀಯಳೆಅಮೂಲ್ಯ ಕಾಂಚಿದಾಮಾಂಕಿತಳೆಬಟುಗನ್ನಡಿ ಜಾನುದ್ವಯಳೆ ಬ್ಞಣ ಪಂಚಕನ ಬತ್ತಳಿಕೆ ಜಂಘೆಯಳೆಕೋಮಲತರಾಂಘ್ರಿ ಸರಸಿಜಯುಗಳೆನೀಲಪಚ್ಚ ಪದ್ಮರಾಗ ಹೀರ ಮುತ್ತಿನ ಪೆಂಡೆಯಳೆಕಾಲಂದಿಗೆ ಮೆಂಟಿಕೆ ವೀರಮುದ್ರೆ ಕಿರಿ ಪಿಲ್ಲಿಯಳೆಮಣಿಮಯಾಂಗುಲ್ಯದ ವಲಯಾಭರಣೆ ಮದಗಜಗಮನೆಪ್ರತಿಯಿಲ್ಲದ ರನ್ನದ ಬೊಂಬೆ ಪರಬೊಮ್ಮನ ಪಟ್ಟದ ರಂಭೆಬಾಬಾ ತಾತಾ ಎಂದು ವಾಮಕರವಬೇಡಲಿತ್ತಳಾ ರುಕ್ಮಿಣಿ ತಾಯಿ 6120ಜಗದ ನಾರಿಯರ ಕೈಗಳ ಕಂಡೆನವ್ವಮೃಗಮದಗಂಧಿ ನಿನ್ಹೋಲ್ವರಿಲ್ಲವ್ವ 62ಯುಗಯುಗಾಂತರ ದೇಶ ದೇಶದಲ್ಲವ್ವಅಗಲ್ಯಾಟವಿಲ್ಲ ನಿನ್ನರಸ ನಿನಗವ್ವ 63ಸವತೇರು ಬಹಳುಂಟು ನೆಂಟರ ಜಾಣೆ ಎಲೆ ಬೀಗರ ಸುಗುಣೆಯುವತಿ ಪ್ರಸನ್ವೆಂಕಟ ಕೃಷ್ಣ ನಿನ್ನ ಪ್ರಾಣ 6421ಕಣಿ ಕೇಳೆ ಕಣಿ ಕೇಳೆ ಕಣಿ ಕೇಳೆ ಚೆಲ್ವೆಕಣಿ ಕೇಳೆ ನಿನ್ನ ಮನದಾ ಮಾತ್ಹೇಳ್ವೆಎಣಿಕೆಗೊಳ್ಳದಿರಮ್ಮಇಂದುನಾಳೆಂದುಗುಣನಿಧಿ ಗೋಪಾಲ ಬಹ ದಯಾಸಿಂಧು 65ತ್ರುಟಿಯುಗವಾಗಿದೆ ನಿನಗೀಗ ಮುಗ್ಧೆಕುಟಿಲಮಾಗಧಸಾಲ್ವ ನೆನೆವ ದುರ್ಬುದ್ಧೆಘಟಿಸದೆಂದಿಗೆ ಖಳರ ಮನೋರಥ ಸಿದ್ಧೆದಿಟವೆನ್ನವಾಕುಸುರಲೋಕ ಪ್ರಸಿದ್ಧೆ66ಹಿಂದೊಮ್ಮೆ ಖಳರು ಗೋವಿಂದ ಬಂದಾಗಮಂದಮತಿಯಲಿ ಮನ್ನಿಸದಿರಲಾಗಇಂದ್ರ ಸಿಂಹಾಸನವ ಹರಿಗೆ ಕಳುಹಿಸಿದವೃಂದ ದೈತ್ಯರಿಗೆಲ್ಲ ಭಯವ ಸೂಚಿಸಿದ 67ಜಂಭಾರಿಕುಲಿಶಕಂಜುತ ಪೋಕರೆಲ್ಲಥಂಬಿಸಿದರು ವಾಗಾಡಂಬರವೆಲ್ಲಅಂಬುಜಾಕ್ಷಗೆ ನಿನ್ನತಾತಪೂಜಿಸಿದಅಂಬುಜನಾಭ ತನ್ನೊಳುವಿಶ್ವತೋರ್ದ68ಅದನೆಲ್ಲ ಬಲ್ಲ್ಯವ್ವ ಹರಿಯ ನಿಜನಲ್ಲೆಬೆದರಿದೊಲ್ಲೋರ್ವ ನಿನ್ನ ಮಾಯವ ಬಲ್ಲೆಪದುಮಜ ಭವರ ಹೃದಯಾಬ್ಜ ನಿಯಂತ್ರೆಉದಧೀಶನಾಜÕದಿ ಸರ್ವಸ್ವತಂತ್ರೆ 69ಕೇಳಮ್ಮ ನಿನ್ನ ಹೆತ್ತವರಿಗೆ ನಿನ್ನಮೇಲೆ ಹಂಬಲ ಬಹಳ ಪಾಪಿ ನಿಮ್ಮಣ್ಣಆಲೋಚನೆಯಿಲ್ಲದೆ ನಿಶ್ಚೈಸಿದ್ದಾನೆ ಶಿಶುಪಾಲಗೆ ನಿನ್ನ ಕೊಡುತೇನಂತೈದಾನೆ 70ಆಗಲ್ಯಾಕವನಿಂದಲೀಕಜ್ಜ ಬುರ್ರಾಬೇಗ ಭೀಷ್ಮಕನಂತರ ಬಲ್ಲ ಶ್ರೀಧರ್ರಾಸಾಗರಶಯನ ತಾ ಸಮಯಕೈತರುವನೇಗಿಲಧರನು ಕೃಷ್ಣನ ಕೂಡ ಬರುವ 71ಆ ಗೌರಿ ಮೌನಿಯೆಂಬುವಳ ಪೂಜೆಯಲಿಯೋಗವಾಗಿದ್ರ್ದಾ ಕಾಪುರುಷ ಸಭೆಯಲ್ಲಿಮೇಘಮುಸುಕಿರ್ದ ಚಂದಿರನಂತೆ ನಿನ್ನಯೋಗೇಶ ಪ್ರಸನ್ವೆಂಕಟ ಕೃಷ್ಣ ನೊಯ್ವ ಚೆನ್ನ 7222ಇನಿತೆಲ್ಲ ಕೊರವಂಜಿಕರವಪಿಡಿದು ಹೇಳಿಕ್ಷಣ ಕ್ಷಣಕೊಡೆಯನ ಹೊಗಳಿನೆನಪಿಗೆ ಬೆಸಗೊಂಬೆ ಕಾಲಜ್ಞಾನದ ವಾರ್ತೆಎನಗೆ ತಿಮ್ಮಯ್ಯ ಹೇಳೆಂದು 73ಶ್ರೀ ರುಕ್ಮಿಣಿಯ ಮನದುಲ್ಲಾಸವನೆಲ್ಲಪೂರೈಸುವೆನೆಂಬ ನುಡಿಯತೋರು ಎನ್ನಯ ನಾಲಿಗೆಯಿಂದಲುಸುರುವೆವೀರ ದ್ರಾವಿಡ ವೆಂಕಟಯ್ಯ 74ಶರಣ್ಯೆಲೆ ಸತ್ಯನೆ ಶರಣ್ಯೆಲೆ ನಿತ್ಯನೆಶರಣು ಶರಣು ನಿತ್ಯಮುಕ್ತಶರಣು ಪರೇಶನೆ ಶರಣು ಅವಿನಾಶನೆಶರಣು ಪ್ರಸನ್ವೆಂಕಟ ಕೃಷ್ಣ 7523ವಚನಓ ರುಕ್ಮಿಣಿ ತಾಯಾರೆಉನ್ನ ಮನಸಿಲೆ ನಿನೈಚ್ಚ ಕಾರ್ಯಂ ಕೈಕ್ಕೂಡಿನಾಲ್ಎನಕ್ಕೆ ಎನ್ನ ಸಂತೋಷಂ ಪಣ್ಣಿರಾಯ್ಓಯಮ್ಮ ಉನ್ ಪ್ರಾಣನಾಯಗನ್ ಶ್ರೀಕೃಷ್ಣನ್ ವಂದುಪೊಟ್ಟಣೆ ಕೈ ಪಿಡಿಚ್ಚಿ ಕಲ್ಯಾಣಂ ಪಣ್ಣಿಕೊಳ್ಳರಾಂಇಂದ ವಾರ್ತೆ ತಪ್ಪಿನಾಲ್ ನಾಂ ಕೊರ್ತಿಯೇ ಅಲ್ಲೆಉನ್ ತಮಯನ್ ರುಗ್ಮಂ ವೇಕ್ಕತ್ತೆ ಕೊಲ್ಲರಂ ವರಾನುಓಯಮ್ಮ ಇಂದ ವಾರ್ತೆಯೈ ಪಣ್ಣಿಕೋ ಅª, À್ಮು 7624ಮದ್ಯಪಾನಿತಾಮಸಯವನನ ಕೊಲಿಸಿದನೆನಿದ್ರೆಗೈವ ರಾಯನಿಂದಲಿಸದ್ದಿಲ್ಲದೆ ಮಧುರೆ ಜನರ ಸಾಗರದಮಧ್ಯ ದ್ವಾರಕೆಯಲ್ಲಿಟ್ಟನೆ 77ಯವನ ಸೈನ್ಯಜಲಧಿಬತ್ತಿಸಿ ಸಾಲ್ವಾದ್ಯರಹವಣಮುರಿದು ನಿಜರ ಹೊರೆವನು ನಿನ್ನವಿವಹ ಮಾಳ್ಪೆನೆಂಬ ಮಾಗಧನು ಚೈದ್ಯ ತನ್ನಕುವರನೆಂದು ಮಾನವಿಡಿದಿಹ 78ಇನಿತರೊಳು ರಂಗರಾಯನು ಮೋಹರದಿಮಣಿರಥವನೇರಿ ಬಹನುವನಿತೆ ನಿನ್ನಂದಣವ ನೋಡುತ ಜಿಗಿವನಲ್ಲಿಂದ ಘನತರ ಮೃಗೇಂದ್ರನಂದದಿ 79ನರಿಯ ಹಿಂಡಿನೊಳಗಿನಾನೆಯ ಒಯ್ವ ತೆರದಿಹರಿನಿನ್ನಪ್ಪಿಕೊಂಡುಹಾರುವಗರುಡನಮೃತ ಕಲಶವ ಸುರರ ಗೆದ್ದುಹರುಷದಿಂದೊಯ್ಯುವಂತೆ ಒಯ್ವನು 80ಸರಸಿಯಾಬ್ಜ ಹಂಸ ಒಯ್ವವೋಲ್ ಪರಮಪುರುಷತ್ವ, ರಿಯ ತನ್ನ ರಥಕೆ ಒಯ್ವನೆಬರಿಯ ದುಗುಡವ್ಯಾಕೆ ಬಾಲಕಿಪ್ರಸನ್ವೆಂಕಟ ಕೃಷ್ಣ ನಿನ್ನ ಮೆಚ್ಚುಗಾರನೆ 81ಬಂದನೆಂಬ ನುಡಿಯು ಬರುತಿದೆಜವದಿಕೃಷ್ಣಬಹನೆಂಬ ನುಡಿಯು ಬರುತಿದೆ 8225ಚೂರ್ಣಿಕೆನೀಡೆಯವ್ವ ಎನ್ನ ಮನೆ ಗಂಡನ ಕಾಟ ಘನ್ನವವ್ವಕ್ಷಣಕೈದು ನಡೆಯವನವ್ವಒಮ್ಮಾನ ತಿರಿತಂದರೆ ಇಮ್ಮಾನ ಬೇಡುವನವ್ವಚೆಂಬಣ್ಣ ಕರಿಬಿಳಿಯಬಟ್ಟೆನಮ್ಮತ್ತೆಗಳವ್ವಆರು ಮಂದಿ ಗಂಡನ ಗೆಳೆಯರವ್ವಏಳು ಪದರು ಮೂರು ತ್ಯಾಪೆ ಗುಡಲುಂಟವ್ವಎಪ್ಪತ್ತೆರಡು ಸಾವಿರ ನುಲಿಯ ಸಿಂಬಿಗಳವ್ವಗುಡಲೊಳು ಮೂರು ಒಲೆಯುಂಟವ್ವಗುಡಲು ಬಿದ್ದರೆ ನುಲಿಗೆ ಮಾರ್ಯೆವ್ವಒಂಬತ್ತು ಗುದ್ದಿನೊಳಗೆ ಹತ್ತು ಹೆಗ್ಗಣದೋಡ್ಯಾಟವವ್ವಕೊರವನ ಕೈಯಿಚ್ಛೆ ಮೂರು ನಾಯಿಗಳವ್ವಎಣಿಕಿಲ್ಲದ ಕುತ್ತಗಳುಂಟವ್ವಕೊಬ್ಬಿನ ಸವತೇರೆಂಟು ಮಂದಿ ಕೊರವಗೆ ಮಚ್ಚೂಡುವರವ್ವಸಂಸಾರದಲೆಳ್ಳನಿತು ಸುಖವಿಲ್ಲವ್ವಅತ್ತೆಗಳಾಟ ಗಂಡನ ಬ್ಯಾಟ ಸವತಿಯರ ಕಾಟನೆರೆಹೊರೆಯವರ ನೋಟ ಮನೆಯ ಮಾಟಗತರಸದೂಟಕಂಜಿ ನಡುನಡುಗಿಮೂರೂರ ಹಾದಿ ಮೆಟ್ಟಿ ಬಂದುಆರೂರರಸಿನ ಮೊರೆ ಹೊಕ್ಕೆನೆಯವ್ವವಿದರ್ಭದೇಶದ ಕುಂಡಿನಾಪುರದೊಳು ನಿನ್ನ ಗುರುತಕೇಳಿಉಪವನದ ಪ್ರದ್ಯೋತನಾಳ್ವ ಎರಡು ಬಾವಿಯ ಮ್ಯಾಗಣಹೂವಿನ ತೋಟದ ನಡುವೆ ಬುತ್ತಿಯನುಂಡು ನಿನ್ನ ಕಂಡುಕುಂತಳಾಪುರದಲ್ಲಿ ಕುಳಿತುಂಬಬ್ರಹ್ಮಾನಂದದವರ ಭಾಗ್ಯವ ಬೇಡ ಬಂದೆನೆ ಅವ್ವಅಸುವಿಗೆ ಹಾಲನೆರೆಯವ್ವಶಿಶುವಿಗೆನವನೀತನೀಡೆಯವ್ವಬಂಗಾರೆವ್ವ ಸಿಂಗಾರೆವ್ವ ಸೋರ್ಮುಡಿಯವ್ವಮಲ್ಲಿಗೆದುರುಬು ಸಂಪಿಗೆದುರುಬುಪಚ್ಚೆ ಮರುಗ ಮುಡಿವಾಳ ಶಾವಂತಿಗೆ ತುರಬಿನವ್ವಪ್ರಸನ್ವೆಂಕಟಕೃಷ್ಣನ ತೋಳ್ತಲೆಗಿಂಬಿನವ್ವ ನೀಡೆಯವ್ವ 8326ವಚನಇಂತಾಧ್ಯಾತ್ಮವಂ ಪೇಳಿಕಂತುವಿನಯ್ಯನ ಕಾಂತೆಯಂ ಸಂತಸಪಡಿಸಿಅಂತರಂಗದಿ ಚಿಂತಾಯಕನಂ ನೆನೆನೆನೆದುಭ್ರಾಂತಿ ಪರವಶಾದಂತೆ ಕೆಂಜೆಡೆಯಂ ತೂಗಿ ತೂಗಿಅಂತದತ್ಯಂತ ತೂಳಂತುಂಬಿಇಂತೆಂದಳಾ ಕೊರವಂಜಿ 8427ಬರುತಾನೆ ಜಾಣೆ ಬರುತಾನೆಬರುತಾನೆ ಚೆಲ್ವೆ ಬರುತಾನೆ 85ಹಿಂಡುಭಂಡರೆಲ್ಲ ಕೂಡಿ ನಿನ್ನ ಮುಚ್ಚಲು ಎತ್ತಿಕೊಂಡು ಒಯ್ವ ಜಾಣ ಬರುತಾನೆಪುಂಡರೀಕಸುರಗಿ ಖಡ್ಗ ಭಿಂಡಿವಾಲ ನುಗ್ಗುಮಾಡಿದಂಡಿಸುವ ಜಾಣ ಬರುತಾನೆ 86ಕುಂಡಿನಾಪುರದಿ ನೆರೆದ ಕೊಂಡಿ ಕುಹಕರ ತಲೆಯಚಂಡನಾಡ್ವ ಜಾಣ ಬರುತಾನೆಮಂಡೆಯಲ್ಲಿ ಪಚ್ಚಚೂಡವಿಟ್ಟು ರುಕ್ಮನಭಿಮಾನಕೊಂಡೇನೆಂಬ ಜಾಣ ಬರುತಾನೆ 87ತಂಡ ತಂಡದಲ್ಲಿ ನಿನ್ನಯ್ಯನ ಸದ್ವಾಸನನ್ನಉಂಡೇನೆಂಬ ಜಾಣ ಬರುತಾನೆಲೆಂಡದಾನವಾರಿ ಪ್ರಸನ್ನವೆಂಕಟಕೃಷ್ಣ ಬೊಮ್ಮಾಂಡಪತಿ ಜಾಣ ಬರುತಾನೆ 8828ಚೆನ್ನೆ ಕೊರವಂಜಿ ಮಾತು ಶ್ರೀಕನ್ಯೆಕೇಳಿನಲಿವಾಂತುಮನ್ನಿಸಿ ಗುಣವ ಕೊಂಡಾಡಿ ಮುಕ್ತಿರನ್ನಗಾಣಿಕೆಯನು ನೀಡಿ 89ಎಲೆ ಸತ್ಯಲೋಕದ ಕೊರವೆ ನೀಬಲು ಸತ್ಯ ನುಡಿದೆ ನಾನರಿವೆಛಲದಂಕ ದೇವರದೇವ ಈಖಳರೊಳು ಒಯ್ವುದರಿದವ್ವ 90ಹರಿರಥವೇರಿ ಬಾಹೋಣ ಕಾಪುರುಷರ ಮತ ಕೆಡಿಸೋಣಗುರುಪ್ರಸನ್ವೆಂಕಟ ಕೃಷ್ಣ ಬಂದುಹೊರೆವುದುಂಟೇನವ್ವ ರಮಣಿ 9129ನಂಬಲೇನೆ ನಿನ್ನ ಮಾತು ಕೆಳದಿ ಕೊರವಮ್ಮ ನಮ್ಮಂಬುಜಾಕ್ಷ ಬಾಹನೇನೆ ದೇವಿ ಕೊರವಮ್ಮ 92ಉಡಿಯ ಕಂದನಾಣೆ ಇಡುವೆ ನಂಬೆ ರುಕ್ಮಿಣಿ ನಾನುಡಿವ ನಾಮದಾಣೆ ಇಡುವೆ ನಂಬು ರುಕ್ಮಿಣಿ 93ಎಡದ ತೋಳು ತೊಡೆಕಂಗಳುಹಾರಲೊಳಿತೇನೆ ಚಿಲಿಪಿಲಿನುಡಿವಶಕುನಎಡದ ಗೌಳಿಯ ನುಡಿಯು ಒಳಿತೇನೆ94ಕಡಲಶಯನ ನಿನ್ನ ಪ್ರಾಣದೊಡೆಯ ಬಪ್ಪನೌ ಎನ್ನಪಡೆದನಯ್ಯ ಪ್ರಸನ್ನವೆಂಕಟಕೃಷ್ಣ ತಪ್ಪನೌ 9530ನಿನ್ನಗಂಡಬೆಣ್ಣೆಗಳ್ಳ ಕನ್ನೆಗೊಲ್ಲತಿಯರ ನಲ್ಲಕಣ್ಣೆವೆ ಸನ್ನೆಗಾರ ನಂದಗೋಪ ಕುಮಾರ 96ಚಿನ್ನತನದಿ ದಶಲಕ್ಷ ಚಿನ್ನರ ಪಡೆದನು ದಕ್ಷಪೊನ್ನ ಕೊಳಲನೂದಿ ಮೂಜಗವ ಮೋಹಿಸುವ 97ಉನ್ಮತ್ತಮಾತುಳನ್ನ ತುಳಿದ ತನ್ನ ಪೆತ್ತವರೆಡರ್ಗಳೆದಮನ್ನಿಸಿ ಪಾಂಡವರÀ ಪೊರೆದ ಚಿನ್ಮಯ ಸುಖದ 98ಪೆಣ್ಗಳ್ ಹದಿನಾರುಸಾವಿರದ ನೂರೆಂಟನಾಳ್ವ ಚದುರನಿನ್ನ ಪ್ರಾಣ ಪ್ರಿಯ ಬಂದ ಪ್ರಸನ್ನವೆಂಕಟ ಕೃಷ್ಣ ಮುಕುಂದ 9931ನುಡಿ ನುಡಿಯೆಲೆ ಬಡನಡುವಿನ ಮಡದಿ ನಿನ್ನುಡಿಗುಚಿತವಕೊಡುವೆನಡಿವಿಡಿವೆ ಮನವಿಡುವನೆ ಕಡಲೊಡೆಯ ಕೈವಿಡಿವನೆ ಎನ್ನ ಕಡೆಯ ನೋಡಿ ನುಡಿವನೆ ಸವಿನುಡಿಯಕಡು ಬಲಿಭುಜ ಗಡಣಂಗಳ ನಡುವ್ಹಂಸನಪಡಿಮಿಡುಕುವೆನುಡಿ ಬೇಗೆಂದು ಪಡೆಗೂಡಿ ಹಲಿಯೊಡನಾಗಮ ನುಡಿಯೇ ನಿನ್ನುಡಿಗಮೃತವ ಪಡೆಯೇ ಮತ್ತೀಜಡಜಡಿ ಲೋಕೊಡೆಯೆ ಪ್ರಸನ್ನವೆಂಕಟ ಕೃಷ್ಣರಾಯನನುಡಿಯೆಲೆ ನುಡಿನುಡಿಯೆ ನುಡಿನುಡಿಯೆ 10032ಹರಿಬರುತಾನೆ ಗುರುತು ಗಂಟ ಕಟ್ಟೆಪಕೇಳೆ ನರಸಿಂಗನಂಗನೆಯನೊಯಿದು ಕೆಟ್ಟನರಿಗಳಾಳಬಲ್ಲವೇನೆ ನಲಿದು ನೀನುದುರುಳರಿಗೆ ದಕ್ಕಬಲ್ಲ್ಯೇನಮ್ಮ ನಿನ್ನಾಚರಣೆಯೆಲ್ಲ ಜಗದ್ವಿಡಂಬನಮ್ಮ 101ನನ್ನ ತರಳನಾಣೆ ಸಟೆಯನಾಡೆನಮ್ಮ ನಾನೊರೆದವಾಕುಸಾಕ್ಷಿ ಬರುತಾವಮ್ಮ ಮ್ಯಾಲರಕೆಯುಳ್ಳ ತಾಯಿಯಾದರೆ ನೀ ನನ್ನಕರೆಸಿ ಕೇಳೆ ನಿನ್ನ ಮನೆಗೆ ಜಾಣೆ 102ನಿನ್ನ ಹೆಸರ ತಕ್ಕ ಊಟವ ನೀಡೀಗ ನಾಹಸಿದೆನೆಂದು ಉಂಡುಕೊರವಿಬೇಗಪ್ರಸನ್ನವೆಂಕಟ ಕೃಷ್ಣನ ರಾಣಿಗೆÉ ಹಾರೈಸಿದಳು ಬಸುರು ಬುಡುಕೆಂದು 10333ಚಕ್ಕನೆ ನಿಂತಳು ಕೊರವ್ಯಮ್ಮ ಕಂಡುಫಕ್ಕನೆ ನಿಂತಳು ರುಕ್ಮಿಣಮ್ಮ ಪ್ರಾಣದಕ್ಕರ ಬಿಡಲಾರೆ ನಿನ್ನ ಗೆಳತಿ ಪ್ರೇಮಉಕ್ಕುತಿದೆ ನೀ ಹೋಗುವುದೊಳಿತೆ ಎನಲು ನಕ್ಕು 104ಶ್ರೀ ಗೋಪಾಲ ಬಾಹನಕ ನಿಲ್ಲೆ ವಿಯೋಗ ತಾಳಲಾರೆ ನೀ ಬಲ್ಲೆಹೀಗೆನೆÀ್ನ ಬೇಡಿಕೊಂಡಳು ಮರುಳೆ ನೆನೆದಾಗೆ ಬಹೆನೆಂದ್ಹೇಳಿ ತೆರಳೆ ಅನುರಾಗದಿಂದ 105ಆವ ಪರಿಂದಾರೆ ಹರಿಸೇವೆ ಮಾಡಿದೇವಋಷಿ ನಿಜಾನಂದ ತೀವಿಶ್ರೀವರ ಪ್ರಸನ್ವೆಂಕಟ ಕೃಷ್ಣನ ಮಹತೇವಿಡಿದು ಹೊಗಳುತ ಮುನಿರನ್ನ ರಾಮೆಯಾಜÕದಿ 10634ಸುರಋಷಿಪೇಳ್ದ ಒಕ್ಕಣೆಯಹರುಷದಿ ಕೇಳ್ದ ರುಕ್ಮಿಣಿಯಅರಸ ಪ್ರಸನ್ನವೆಂಕಟ ಕೃಷ್ಣನಿರುತದಿ ಜಯ ನಮಗೀವ 107ಜಯ ಜಯ ಚಿನ್ಮಯಮೂರ್ತಿಜಯ ಜಗನ್ಮಯ ಸ್ವಚ್ಛಕೀರ್ತಿಜಯ ಜಯ ಪ್ರಸನ್ವೆಂಕಟ ಕೃಷ್ಣಜಯಮೂರ್ತಿನಿನಗೆ ಶರಣು108
--------------
ಪ್ರಸನ್ನವೆಂಕಟದಾಸರು