ಒಟ್ಟು 2420 ಕಡೆಗಳಲ್ಲಿ , 105 ದಾಸರು , 1362 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಿಗ್ವಿಜಯವಂತೆ ಬಂದಳು ರುಕ್ಮಿಣಿ ದೂತೆ ಶೀಘ್ರದಿಂದ ಕೃಷ್ಣರಾಯ ಮಾರ್ಗನೋಡ್ಯಾನೆಂಬೊ ಭಯದಿ ಪ. ಕೃಷ್ಣರಾಯನ ಬಿಟ್ಟುಎಷ್ಟು ಹೊತ್ತು ಆಯಿತೆಂದುಸಿಟ್ಟು ಬರಧಾಂಗೆ ಸುರರಿಗೆ ಎಷ್ಟು ಸಲುಹಲಿ ಎನುತ 1 ವೀಕ್ಷಿಸಿ ಎನ್ನ ಮಾರಿಯನುಲಕ್ಷ್ಮಿಯರು ಕೋಪಿಸದಿರಲಿಲಕ್ಷ ಕೋಟಿದ್ರವ್ಯ ದಾನಈ ಕ್ಷಣ ಕೊಡುವೆನೆ ಎನುತ2 ಮದನಜನೈಯ್ಯನ ದಯವುಮೊದಲ್ಹಾಂಗೆ ಇದ್ದರೆ ನಾನು ಅದ್ಬುತದ್ರವ್ಯ ದಾನ ಬುಧರಿಗಿತ್ತೇನೆ ಎನುತ3 ವಿತ್ತ ಕೋಟಿ ದಾನವನ್ನು ಮತ್ತೆಕೊಡುವೆನೆ ಎನುತ4 ಇಂದಿರೇಶಗೆ ಅಂಜಿಕೊಂಡುಚಂದ್ರ ಸೂರ್ಯರು ತಿರಗೋರಮ್ಮಚಂದಾದ ನಕ್ಷತ್ರ ಬಂದುಅಂಜಿ ಹೋಗಿವೆ ಎನುತ 5 ಹರಿಗೆ ಅಂಜಿಕೊಂಡು ಶರಧಿಮರ್ಯಾದಿಲೆ ಇರುವೋ ನಮ್ಮದೊರೆಗೆ ಅಂಜಿಕೊಂಡು ವಾಯುತಿರುಗಾಡುವನಮ್ಮ ಎನುತ 6 ಅಗ್ನಿಅಂಜಿ ತನ್ನ ದರ್ಪತಗ್ಗಿಸಿ ಕೊಂಡಿಹ ನಮ್ಮಭಾಗ್ಯದರಸು ಅಂಜಿ ಮಳೆಯುಶೀಘ್ರದಿ ಗರೆಯುವನು ಎನುತ 7 ಹಾಸಿಗ್ಯಾಗುವ ಶೇಷ ಅಂಜಿದಾಸಿ ಆಗುವಳಂಜಿ ಲಕುಮಿದೇಶಕಾಲ ಅಂಜಿ ಒಂದುಲೇಸು ಮೀರ್ಯಾವೆ ಎನುತ 8 ವರಗಿರಿ ವಾಸಗೆ ಅಂಜಿಶೇಷ ಜಗವ ಪೊತ್ತಿಹನಮ್ಮಗರಿಯ ಹರವಿ ಗರುಡ ಅಂಜಿಹರಿಯ ಧರಸಿಹನೆ ಎನುತ9 ಸಂಖ್ಯವಿಲ್ಲದ ಗಜಗಳಂಜಿಫಕ್ಕನೆ ನಿಂತಿಹ ವಮ್ಮದಿಕ್ಪಾಲಕರು ಅಂಜಿ ತಮ್ಮದಿಕ್ಕು ಕಾಯುವರು ಎನುತ 10 ನದ ನದಿಗಳಂಜಿಕೊಂಡು ಒದಗಿಮುಂದಕ್ಕೆ ಹರಿವೋವಮ್ಮಸುದತೆ ವೃಕ್ಷ ಅಂಜಿಪುಷ್ಪಫಲವ ಕೊಡುವೊವೆ ಎನುತ 11 ಕಂತು ನೈಯನ ಅರಸುತನಎಂಥದೆಂದು ಬೆರಗುಬಟ್ಟುನಮ್ಮಂಥಾ ಒಣ ಬಳಗಅಂಜಿಲಿವೋದು ಕಾಂತೆ ಅರುವನೆ ಎನುತ 12 ರಮಿ ಅರಸಗಂಜಿಕೊಂಡು ಬ್ರಮ್ಹ ಸೃಷ್ಟಿ ಮಾಡೋನಮ್ಮಸುಮ್ಮನೆ ಸುರರೆಲ್ಲ ಕೂಡಿದಮ್ಮಯ್ಯ ಎನಲೆಂದು ಹರಿಗೆ13
--------------
ಗಲಗಲಿಅವ್ವನವರು
ದಿನ ದಿನ ಹರಿಕೃಷ್ಣಯೆನುತಿರೆ ಮನುಜನ ಮನವೆ ವೈಕುಂಠವೆಂದೆನಿಸುವುದು ಪ ನೆನೆಯುವ ಭಕ್ತನ ಕಿವಿಯಲಿ ಕೊಳಲಿನ ದನಿಜನಿಪುದು ಕಂಬನಿ ಮಿನುಗುವುದು ಅ.ಪ ಪೊಡವಿ ಪತಿಯ ಎಡತೊಡೆಯೊಳಿದ್ದಾ ಮುದ್ದು ಹುಡುಗನ ಬಲತಾಯಿ ಪಿಡಿದೆಳೆಯೇ ಕಡು ದುಗುಡದಿ ಶಿಶು ಅಡವಿಯೊಳಗೆ ಸಿರಿ ಯೊಡೆಯನ ಕಂಡು ಕೊಂಡಾಡಿದನು 1 ದ್ಯೂತದೊಳೆಲ್ಲವ ಸೋತರ ಸತಿಯಳ ಘಾತಿಸಿ ಸೀರೆಯ ಸೆಳೆದಾಗ ಭೀತಿಯಿಂದಲಿ ಪರಂಜ್ಯೋತಿ ಕೃಷ್ಣಾಯೆನೆ ಪ್ರೀತಿಯೊಳಕ್ಷಯ ವರವಿತ್ತಾ ಕೃಷ್ಣಾ2 ಕೂಗಿದೊಡನೆ ತ್ವರೆಯಾಗಿ ಬರುವ ನಮ್ಮ ನಾಗಶಯನ ಮಾಂಗಿರಿಪತಿಯ ರಾಗದಿ ಪೂಜಿಸಿ ವಂದಿಸಲವನನು- ರಾಗದಿ ನರ್ತಿಪನೆಡಬಲದಲಿ ರಂಗಾ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದೀನ ದಯಾಳು ನೀನೆವೆ ನಮ್ಮ ಅನಾಥನಾಥಾ ನಂದೊ ಬ್ರಹ್ಮನಂತುಗಾಣನುಪಮ ಧ್ರುವ ಪರಮಾನಂದ ಪರಮ ಪಾವನ ಶರಣ ಜನರಾಭರಣಾಗಿ ಹ್ಯ ಕರುಣ ಸಾಗರ ಪೂರ್ಣನೆ 1 ಅವ್ಯಕ್ತನಹುದೊ ವಿರಕ್ತ ಶಕ್ತನಹುದೊ ಭಕ್ತವತ್ಸಲ ಭೋಕ್ತರ ಮುಕ್ತಿದಾಯಕ 2 ಭೇದಾತೀತ ಸದೋದಿತ ಪೂರ್ಣ ಸಾಧುಹೃದಯನಿವೇದ ಪೂಜಿತ ಅದಿದೇವ ಸದಾತ್ಮನೆ 3 ವರ ಮುನಿಗಳ ಹರುಷವುದಯ ತರಳ ಮಹಿಪತಿಯ ಹೊರೆವ ಅನುದಿನ ಹರಿಯು ಪರಮ ದಯಾನಿಧೆ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದುರಿತಭಂಜನ ನರಹರಿಯೆ |ಪರಿಪರಿಯಿಂದ ಸಲಹು ಶ್ರೀವೈಕುಂಠ ದೊರೆಯೆ ಪ ನಿನ್ನ ದಾಸರ ದಾಸ ನಾನು |ಎನ್ನವರು ದಾಸರ ದಾಸರಲ್ಲೇನು ||ಇನ್ನು ಒದಗದೆ ಇಹುದೇನು |ಉನ್ನತವಾದ ಬಿರುದಂಗಳ್ನಿನಗಿಲ್ಲವೇನು ? 1 ತೊತ್ತು ಮೆರಿಸಿಕೊಂಡವನಲ್ಲ |ಹೆತ್ತವರ ಭಾವಗಳನೆಲ್ಲ ಮರೆವನಲ್ಲ ||ಒತ್ತಿ ಆಪತ್ತವು ಬರಲು | ಪೊತ್ತವರಿಗೆ ಮೊರೆಯಿಡೆ ಕಡೆಗೆ ಬಿಡುವನಲ್ಲ 2 ಬರುತಿಹುದು ಸಂಕಟವೆಂದು |ಹಿರಿಯರು ನಮ್ಮನೆಲ್ಲವನು ಮರೆದರಂದು ||ಮರೆಯದೆ ರುಕ್ಮಗಿನ್ನಿದು |ಮರೆ ಮಾಡುವ ಪೀತಾಂಬರದಿಂದ ಬಂದು3
--------------
ರುಕ್ಮಾಂಗದರು
ದುಷ್ಟ ಮನುಜ ಕೇಳೊ ನೀ ಬಲು ಭ್ರಷ್ಟನಾದೆಯಲ್ಲೋ ಪ ಎಷ್ಟು ಪೇಳಿದರೇನು ನಿನಗೆಳ್ಳಿ- ನಷ್ಟಾದರು ಮತಿ ಬರಲಿಲ್ಲ ಅ.ಪ ಶುದ್ಧ ವೈಷ್ಣವನೆಂಬೀ ನೀನು ನಿ- ಷಿದ್ಧ ಕೂಳನು ತಿಂಬೀ ಬುದ್ಧಿಪೂರ್ವಕವಾಗಿ ನಮ್ಮ ಅನಿ ರುದ್ಧನ ನಾಮದ ನೆನೆಯದಲಿರುವಿ 1 ಬಾಯೊಳು ಬಹುನೀತಿ | ಬೊಗಳುವೆ ಹೇಯ ಕರ್ಮದಿ ಪ್ರೀತಿ ಮಾಯವಾದಿಯನುತವನು ಪೊಗಳುವೆ ಕಾಯಕ್ಲೇಶ ನಿನಗಾಗದಿರದು 2 ಭಂಗ ಹೋಗದೆ ಬಾಳೊ | ಮುಂದಕೆ ಭಂಗಿಕೋರನೆ ಕೇಳೊ ರಂಗೇಶವಿಠಲನ ಮೊರೆಹೊಗು ನಿನ ದುರಿ- ತಂಗಳು ಪೋಪವು ಮಂಗನಾಗಬೇಡ 3
--------------
ರಂಗೇಶವಿಠಲದಾಸರು
ದೂರಕ್ಕೆ ದೂರನೆಂದು ಹೆರೆ ಸಾರಲಿ ಬೇಡಸಾರಿಗೆ ಸಾರಿ ನಮ್ಮ ಕೃಷ್ಣನ್ನ ಸಾರಿರೈಯ ಪ ಅನಂತ ಜನುಮದೊಳೊಂದೆ ಜನುಮಅನಂತ ಕ್ಷಣದೊಳಗೊಂದೆ ಕ್ಷಣಅನಂತ ನಾಮದೊಳೊಂದೇ ನಾಮವಮುನಮುಟ್ಟಿ ನೆನೆದರೆ ಬೆನ್ಹತ್ತಿ ಬಿಡನೈಯ 1 ಅನಂತರೂಪದೊಳೊಂದೆ ರೂಪಅನಂತ ಗುಣದೊಳಗೊಂದೆ ಗುಣಅನಂತ ಜೀವರೊಳಗಾವನಾದರುಂ ಕನಸಿಲಿ ನೆನೆದರೆ ಋಣಿಯಾಗಿಪ್ಪನೈಯ 2 ಒಂದೆ ಹೂವು ಒಂದೆ ಫಲವೊಂದೆಬಿಂದು ಜಲವೊಂದೆ ತುಳಸಿಒಂದೇ ವಂದನೆಯೊಂದೆ ಪ್ರದಕ್ಷಿಣೆಒಂದನರ್ಪಸಿದೊಡಂ ಕುಂದದಾನಂದವೀವನೈ 3 ಹರಿ ಚಿನ್ಹಾಂಕನ ಹರಿದಿನದುಪವಾಸನೆರೆಯೂಧ್ರ್ವ ಪುಂಡ್ರ ತುಳಸಿಮಾಲೆಹರಿಯುತ್ಸವ ಸೇವೆ ಹರಿದಾಸರ ಸಂಗದುರಿತಾಬ್ಧಿಗೆ ಕುಂಭಸಂಭವನಲ್ಲವೆ 4 ಹರಿಪಾದ ತೀರ್ಥವು ಹರಿಯ ನಿರ್ಮಾಲ್ಯವುಹರಿ ಆರತಿ ಧೂಪ ಶೇಷಂಗಳುಹರಿಯ ಪ್ರಸಾದ ಶಂಖೋದಕ ಪ್ರತ್ಯೇಕದುರಿತ ರಾಸಿಗಳನ್ನು ಸೋಕಲು ಸುಡದೆ 5 ಒಮ್ಮೆ ಪಾಡಿದಡಂ ಒಮ್ಮೆ ಪೊಗಳಿದೊಡಂಒಮ್ಮೆ ಬೇಡಿದಡಂ ಒಮ್ಮೆ ನೋಡಿದಡಂಒಮ್ಮೆ ಸಾರಿದಡಂ ಮತ್ತೊಮ್ಮೆ ಕರೆದಡಂನಮ್ಮಾತನಿವನೆಂದು ಕೈಯ ನೀಡುವನೈಯ 6 ತನ್ನಲ್ಲಿಪ್ಪನಾಗಿ ದೂರನಲ್ಲ ನರಹೊನ್ನು ಬೇಡ ಲಕುವಿರಮಣಗೆ ಅನ್ಯವ್ಯಾತಕ್ಕೆ ಈ ಪರಿಪೂರ್ಣಾನಂದಗೆನಿನ್ನವನೆಂದರೆ ತನ್ನನೀವನು ಕೃಷ್ಣ7
--------------
ವ್ಯಾಸರಾಯರು
ದೂರಿಗೊಳಗಹುದೇನೆಲೊ ಬರಿ ದೂರಿಗೊಳಗಹುದೇನೆಲೊ ಹರಿಧ್ಯಾನವನು ನೀ ಮಾಡದೇ ಪ ಅಪರೂಪ ಜನ್ಮವು ಬಂದಿದೆ ಕಪಿಚೇಷ್ಟೆಗಳು ನಿನ್ನ ಹೊಂದಿದೆ ಜಪ ಶಾಸ್ತ್ರದೊಳು ಹೀಗೆಂದಿದೆ 1 ಕಟಪತನಗಳದ್ಯಾತಕೋ ಯಿದು ತ್ರಿಪುಟಿಯೊಳಗದು ನೀತಿಕೋರ ನ ಪರನಾಗಲಿದ್ಯಾಕೊ ನೋಡದ ಗುಪಿತದಿಂದಲಿ ಭಜಿಸದೆ 2 ನಾನು ನನ್ನದು ಎಂಬುವೇ ಅಲ್ಲಿ ಗೇನು ಬಂದರು ತಿಂಬುವೇ ಹಾನಿಗೊಳಗಾಗಿ ನಮ್ಮಯ ಶ್ರೀನಿವಾಸನ ಭಜಿಸದೆ 3 ಎಂಟುಗೇಣಿನ ದೇಹವು ಅದು [ಕುಂಟು]ಸೋಹಮಸ್ಮಿಯ ಭಾವವು ಕಂಟಕಾಂತಕ ತಲಸಿಮದ್ಗುರು ವುಂಟು ನಿನ್ನೊಳಗರಿಯದೆ 4
--------------
ಚನ್ನಪಟ್ಟಣದ ಅಹೋಬಲದಾಸರು
ದೇವತಾಸ್ತುತಿಗಳು ಅಂಧನೋ ನಾ ಬಲು ಅಂಧನೊ ಪ ಸುಂದರವಾದ ಹೃನ್ಮಂದಿರದಲಿ ನಿನ್ನಸುಂದರಮೂರ್ತಿಯ ಕಣ್ದೆರದು ಕಾಣದ ಅ.ಪ. ಕುಹಕ ಚಿಂತಿಸುವಅಹುದು ಸಜ್ಜನನೆಂದು ಬಹುಜನ ನುಡಿಯಲುಮಹಮೋದ ಮಡುವಿನೊಳ್ ಮಹದಜ್ಞನೆನಿಸಿದ 1 ವಿಷಮ ದುರ್ವಿಷಯಗಳಲಿ ಮನ ಹೊಗಿಸೀವಿಷವೆಂದು ತಿಳಿದು ವಿಷಯ ಸೇವಿಸೀಅಸಮ ಮಹಿಮ ನಮ್ಮ ಝಷಕೇತು ಜನಕನವಿಷಯಗಳ ಬಹು ವಿಷಯೀಕರಿಸಿದಂಥ 2 ಮಾನವ ನಾ3
--------------
ಗುರುಗೋವಿಂದವಿಠಲರು
ದೇವಾದಿ ದೇವಗೆಭಕ್ತ ಸಂಜೀವಗೆಶ್ರೀ ವಿಘ್ನೇಶ್ವರಗೆ ಜಯವೆಂದುಜಯವೆಂದು ಪಾರ್ವತೀಪುತ್ರಗೆಪಾವನಗಾತ್ರಗೆಫಣಿಯಜ್ಞ ಸೂತ್ರಗೆಹೂವಿನಾರತಿಯ ಬೆಳಗಿರೆ 1 ಸಿಂಧುರಗಮನೆಯರುಕುಂದಾಭರದನೆಯರುಇಂದುಶೇಖರಗೆ ಜಯವೆಂದುಜಯವೆಂದು ಇಂದ್ರಾದಿವಂದ್ಯಗೆನಿರ್ಜಿತಚಂದ್ರಗೆ ಸದ್ಗುಣಸಾಂದ್ರಗೆಕುಂದಣದಾರತಿಯ ಬೆಳಗಿರೆ 2 ವಾರಣದವನೆಗೆಧೀರಹೇರಂಬಗೆರಾವಣಾಸುರನ ಜಯಿಸಿದಜಯಿಸಿದಶರಣ ಮಂದಾರಗೆಶರಧಿ ಗಂಭೀರಗೆಕೌಸ್ತುಭಹಾರಗೆಮೇರುವೆಯಾರತಿಯ ಬೆಳಗಿರೆ 3 ಸುರರು ಹೂಮಳೆಗರೆಯೆತರುಣಿಯರ್ಪಾಡಲುಸುರದುಂದುಭಿ ಮೊಳಗೆ ಜಯವೆಂದುಜಯವೆಂದುಸಿಂಧುರವರ್ನಗೆಶೂರ್ಪಸುಕರ್ನಗೆಸರ್ವತ್ರಪೂರ್ಣಗೆಕುರುಜಿನಾರತಿಯ ಬೆಳಗಿರೆ 4 ಪಂಕಜಾಂಬಿಕೆಯರುಭೋಂಕನೆ ಪಾಡಲುಶಂಕರನ ಪುತ್ರ ಜಯವೆಂದುಪಾವನವೇಷಗೆವರದ ಗಣೇಶಗೆಕುಂಕುಮದಾರತಿಯ ಬೆಳಗಿರೆ 5 ರಮ್ಯವಾದಲತಿಗೆಯರಸವ ಪಾದಕೆ ತೊಡೆದುಕಮ್ಮೆಣ್ಣೆಯನು ಕಂಠಕನುಲೇಪಿಸಿಸುಮ್ಮಾನದಿಂದ ಪಟವಾಸ ಚೂರ್ಣವತಳಿದುನಿಮ್ಮ ಪೂಜಿಸುವೆನು ಗೌರಿದೇವಿ 6 ವರಧೂಪದೀಪ ಪರಿಪರಿಯ ನೈವೇದ್ಯ ಭಾ-ಸುರ ಸುತಾಂಬೂಲ ಸೀಗುರಿದರ್ಪಣನಿರುಪಮ ಛತ್ರ ಚಮರಾದಿ ಸೇವೆಯನು ಸ್ವೀ-ಕರಿಸಿ ಪಾಲಿಸೆ ಎನ್ನ ಗೌರಿ ದೇವಿ ಜಯ 7 ಇಂತು ಪರಿಪರಿಯ ರಾಜೋಪಚಾರಗಳಿಂದಸಂತತವು ನಿಮ್ಮ ಪಾದವ ಪೂಜಿಸಿನಿಂತು ಕರವನೆ ಮುಗಿದು ಧ್ಯಾನಿಸುತ ನಲಿನಲಿದುಸಂತಸದಿ ನಿಮ್ಮ ಸ್ತುತಿಸುವೆನು ಗೌರಿ ಜಯ 8 ಮತ್ತೇಭಗಮನೆಗೆ ಮಾಹೇಂದ್ರಸನ್ನುತೆಗೆಅತ್ಯಂತ ಪರಮ ಪಾವನ ಚರಿತೆಗೆನಿತ್ಯ ಸೇವೆಯನು ಮಾಡುವರ ರಕ್ಷಿಸುವಂಥಪ್ರತ್ಯಕ್ಷಮೂರ್ತಿ ಶ್ರೀಗೌರಿ ನಿಮಗೆ ಜಯ9 ಕಲಕೀರವಾಣಿಗೆ ಕಾಳಾಹಿವೇಣಿಗೆಕಲಧೌತಕಮಲ ಶೋಭಿತಪಾಣಿಗೆನಳಿನದಳನೇತ್ರೆಗೆ ನಾರಾಯಣೆಗೆ ನಮ್ಮ-ನೊಲಿದು ರಕ್ಷಿಸುವಂಥಾ ಶ್ರೀಗೌರಿಗೆ ಜಯ 10 ಕುಂಭಸಂಭವನುತೆಗೆ ಜಂಭಾರಿಪೂಜಿತೆಗೆರಂಭಾಸುನರ್ತನಪ್ರಿಯೆಗೆ ಶಿವೆಗೆರಂಭೋರುಯುಗಳೆಗೆ ಬಿಂಬಾಧರೆಗೆ ನಮ್ಮಬೆಂಬಿಡದೆ ರಕ್ಷಿಸುವ ಗಿರಿಜಾತೆಗೆ ಜಯ 11 ಮುತ್ತೈದೆತನಗಳನು ನಿತ್ಯಸಂಪದಗಳನುಉತ್ತಮಾಂಬರ ಛತ್ರಚಾರಮವನುಅತ್ಯಂತ ಪ್ರೀತಿಯಿಂದಿತ್ತು ರಕ್ಷಿಸಿ ಭಕ್ತವತ್ಸಲೆ ಶ್ರೀ ಗೌರಿದೇವಿ ತಾಯೆ12 ಎಂದೆಂದು ಈ ಮನೆಗೆ ಕುಂದದೈಶ್ವರ್ಯವನುಚಂದವಾಗಿಹ ಪುತ್ರ ಪೌತ್ರರನ್ನುಸಾಂದ್ರಕೃಪೆಯಿಂದಿತ್ತು ಸಲಹೆ ಕೆಳದಿಯ ಪುರದಿನಿಂದ ಶ್ರೀ ಪಾರ್ವತಾದೇವಿ ತಾಯೆ ಜಯ 13
--------------
ಕೆಳದಿ ವೆಂಕಣ್ಣ ಕವಿ
ದೊರೆಯಾಗಿ ನಾನಿಹೆನಮ್ಮ ಅಜಹರಿಹರರ್ಗಿಲ್ಲದೆ ಪದ ಸೇರಿತಮ್ಮ ಪ ಪರಿ ಪರಮಾನ್ನವಮ್ಮ 1 ಸಂಗರಹಿತ ಸತಿಯಮ್ಮ ಆಮಂಗಳವೆಂಬ ಘನಸುತರಮ್ಮಜಂಗಮವೇ ಜನವಮ್ಮ ಭೇದಂಗಳ ಪರಿದಿಹುದೇ ಅರಮನೆಯಮ್ಮ 2 ನಾದವೆಂಬುದ ವಾದ್ಯವಮ್ಮ ಸುನಾದವೆಂಬುದೇ ಗೀತಗಾಯಕರಮ್ಮಆದಿ ಬಂಧುವೇ ಮದವಮ್ಮ ತೇಜವಾದ ಚಿತ್ತವೇ ದೀವಟಿಗೆಮ್ಮ 3 ಜ್ಞಾನವೆಂಬುದೇ ಬಲವಮ್ಮ ಮಹದಾನಂದ ರಾಜ್ಯಕ್ಕೆ ಅಧಿಪತಿಯಮ್ಮತಾನೆ ಎಂಬುದೇ ಮುದ್ರೆಯಮ್ಮ ಇಂತುನ್ಯೂನವಿಲ್ಲದೆ ಸ್ಥಿರ ಸೇರಿದುದಮ್ಮ4 ಸುರವರರ್ಗಿನಿತುಂಟೆ ಅಮ್ಮಹಿರಿಯಾರಾರಾದರೇನು ದೊರಕದಮ್ಮಗುರುವಿನ ದಯದಿಂದಲಮ್ಮ ನಿಜಗುರು ಚಿದಾನಂದನೇ ತಾನಾದುದಮ್ಮ5
--------------
ಚಿದಾನಂದ ಅವಧೂತರು
ದೋಷ ದೂರ ಜನಾರ್ದನ ದೋಷ ದೂರಾ ಪ ದೋಷ ದೂರ ಎನ್ನ ಸಾಕುವುದು ಪರಾಶರವರದಾ ಅ ಬಲು ಕಾಲಗಳಿಂದ ನೆಲೆಯ ಕಾಣದೆ ನಿನ್ನ ಚೆಲುವ ಚರಣ ದ್ವಂದ್ವ ನೆಳಲನಾಶ್ರೈಸಿದೆ 1 ಪುಂಡರೀಕ ಪಾದ ತಿಮಿರ ಮಾರ್ತಾಂಡ ಮುರವೈರಿ 2 ಅಜಗೆ ಪ್ರಸನ್ನ ವಿರಜಭಾಗ್ಯ ಸಂಪನ್ನ ವಿಜಯಮೂರುತಿ ನಮ್ಮ ವಿಜಯವಿಠ್ಠಲರೇಯ 3
--------------
ವಿಜಯದಾಸ
ದೋಷ ಬಪ್ಪದೆ ಇಪ್ಪದೆ ಪಾಮರನಿಗೆ ಪ ಜಲಜನಾಭನ ಮರೆತು ಜಲದಲ್ಲಿ ಮಿಂದು ಹೆ ಬ್ಬುಲಿ ಬಣ್ಣದಂತೆ ನಾಮಗಳ ಧರಿಸಲೇನು 1 ಸನಕಾದಿ ಮುನಿವಂದ್ಯ ಮನಸಿಜ ಜನಕಾ ನಮ್ಮನನು ಕಾಯುತಿರೆ ಭೂಮಿಧನವೇ ಜೀವನನೆಂಬುವಗೆ 2 ಶಿರಿಗೋವಿಂದ ವಿಠಲನ ಸಂಸ್ತುತಿಸುವ ಹರಿದಾಸನ ತಿರಸ್ಕರಿಸುವ ದುರುಳಗೆ 3
--------------
ಅಸ್ಕಿಹಾಳ ಗೋವಿಂದ
ದ್ಯಾವಿ ನಮ್ಮ ದ್ಯಾವರು ಬಂದರು ಬನ್ನೀರೆ, ನೋಡ ಬನ್ನಿರೆ ಪ ಕೆಂಗಣ್ಣ ಮೀನನಾಗಿ ನಮ ರಂಗಗುಂಗಾಡು ಸೋಮನ ಕೊಂದಾನ್ಮ್ಯಾಗುಂಗಾಡು ಸೋಮನ ಕೊಂದು ವೇದವನುಬಂಗಾರದೊಡಲನಿಗಿತ್ತಾನ್ಮ್ಯಾ1 ದೊಡ್ಡ ಮಡುವಿನೊಳಗೆ ನಮ ರಂಗಗುಡ್ಡವ ಹೊತ್ಕೊಂಡು ನಿಂತಾನ್ಮ್ಯಾಗುಡ್ಡವ ಹೊತ್ಕೊಂಡು ನಿಂತು ಸುರರನುದೊಡ್ಡವರನ್ನ ಮಾಡ್ಯಾನ್ಮ್ಯಾ 2 ಚೆನ್ನ ಕಾಡಿನ ಹಂದಿಯಾಗಿ ನಮ ರಂಗಚಿನ್ನದ ಕಣ್ಣನ ಕೊಂದಾನ್ಮ್ಯಾಚಿನ್ನದ ಕಣ್ಣನ ಕೊಂದು ಭೂಮಿಯವನಜಸಂಭವಗಿತ್ತಾನ್ಮ್ಯಾ 3 ಸಿಟ್ಟಿಂದ ಸಿಂಹನಾಗಿ ನಮ ರಂಗಹೊಟ್ಟೆಯ ಕರುಳ ಬಗೆದಾನ್ಮ್ಯಾಹೊಟ್ಟೆಯ ಕರುಳ ಹಾರವ ಮಾಡಿ ಪುಟ್ಟಗೆ ವರವ ಕೊಟ್ಟಾನ್ಮ್ಯಾ4 ಹುಡುಗ ಹಾರುವನಾಗಿ ನಮ ರಂಗಬೆಡಗಲಿ ಮುಗಿಲಿಗೆ ಬೆಳೆದಾನ್ಮ್ಯಾಬೆಡಗಲಿ ಮುಗಿಲಿಗೆ ಬೆಳೆದು ಬಲಿಯನ್ನಅಡಿಯಿಂದ ಪಾತಾಳಕೊತ್ತ್ಯಾನ್ಮ್ಯಾ 5 ತಾಯ ಮಾತನು ಕೇಳಿ ಸಾಸಿರ ತೋಳಿನಆವಿನ ಕಳ್ಳನ ಕೊಂದಾನ್ಮ್ಯಾಆವಿನ ಕಳ್ಳನ ಕೊಂದು ಭೂಮಿಯಅವನಿಸುರರಿಗೆ ಇತ್ತಾನ್ಮ್ಯಾ 6 ಪಿಂಗಳ ಕಣ್ಣಿನ ಕೊಂಗಗಳ ಕೂಡಿಛಂಗನೆ ಲಂಕೆಗೆ ಪೋದಾನ್ಮ್ಯಾಛಂಗನೆ ಲಂಕೆಗೆ ಪೋಗಿ ನಮ ರಂಗಹೆಂಗಸುಗಳ್ಳನ ಕೊಂದಾನ್ಮ್ಯಾ7 ಕರಿಯ ಹೊಳೆಯ ಬಳಿ ತುರುಗಳ ಕಾಯುತಉರಗನ ಮಡುವ ಧುಮುಕ್ಯಾನ್ಮ್ಯಾಉರಗನ ಹೆಡೆ ಮೇಲೆ ಹಾರ್ಹಾರಿ ಕುಣಿವಾಗವರವ ನಾರೇರ್ಗೆ ಕೊಟ್ಟಾನ್ಮ್ಯಾ 8 ಭಂಡನಂದದಿ ಕುಂಡೆಯ ಬಿಟುಗೊಂಡುಕಂಡ ಕಂಡಲ್ಲಿಗೆ ತಿರುಗ್ಯಾನ್ಮ್ಯಾಕಂಡ ಕಂಡಲ್ಲಿಗೆ ತಿರುಗಿ ತ್ರಿಪುರರಹೆಂಡಿರನೆಲ್ಲ ಕೆಡಿಸ್ಯಾನ್ಮ್ಯಾ 9 ಚೆಲುವ ಹೆಂಡತಿಯ ಕುದುರೆಯ ಮಾಡಿಒಳ್ಳೆ ರಾಹುತನಾದಾನ್ಮ್ಯಾಒಳ್ಳೆ ರಾಹುತನಾಗಿ ಮ್ಲೇಚ್ಛರಡೊಳ್ಳು ಹೊಟ್ಟೆಯ ಮ್ಯಾಲೊದ್ದಾನ್ಮ್ಯಾ 10 ಡೊಳ್ಳಿನ ಮ್ಯಾಲ್ ಕೈ ಭರಮಪ್ಪ ಹಾಕ್ಯಾನುತಾಳವ ಶಿವನಪ್ಪ ತಟ್ಟಾನ್ಮ್ಯಾಒಳ್ಳೊಳ್ಳೆ ಪದಗಳ ಹನುಮಪ್ಪ ಹಾಡ್ಯಾನುಚೆಲುವ ಕನಕಪ್ಪ ಕುಣಿದಾನ್ಮ್ಯಾ11
--------------
ಕನಕದಾಸ
ದ್ರೋಹಿಯೋ ನಾನಿನಗೆ ದ್ರೋಹಿಯೋ ಪ ಪಾಹಿ ಬ್ರಹ್ಮಜವಂಶ ಪಾಪ ಬ್ರಾಹ್ಮಣ ಪ್ರಿಯ ಅ.ಪ ಸ್ವಪ್ನ ಜಾಗ್ರತೆ ನಿದ್ರೆ ಮೋಕ್ಷಾವಸ್ಥೆಯಲ್ಲಿ ತೈಜಸ ವಿಶ್ವ ಅಪ್ಪತುರೀಯನಾಗಿ ದಾತ ನಿನ್ನನ್ನು ಬಿಟ್ಟು ಬೆಪ್ಪನಂದದಿ ನರರ ಯೆಂಜಲ ಬಯಸುವೆ 1 ಬಿಂಬ ಮೂರ್ತಿಯು ನೀನು ಪ್ರತಿ ಬಿಂಬನಾನಿನಗೆ ತುಂಬಿ ಅಂತರ್ಬಹಿ ಮೆರೆವ ವಿಷ್ಣುವೆ ನಿನ್ನ ನಂಬಿದೆ ದೃಢದಿಂದ ಬರಿದೆ ಹಂಬಲಿಸುವೆ ಬೆಂಬಲನಾಗಿದ್ದು ತುಂಬೊ ನಿನ್ನಯ ಭಕ್ತಿ 2 ಸತಿ ಸುತ ಪಿತರಲ್ಲಿ ತಿಳಿಯದೆ ನಿನ್ನಿರವ ಹಿತರವರು ಬರಿದೆಂಬ ಭ್ರಾಂತಿಯ ನೀಗದೆ ಖತಿಯ ಪಡುವೆನು ಭವದಿ ಕುಮತಿಯನಗೆಮುಂದೆ ಗತಿಯೇನು ಜಗದೀಶ ಮರೆತು ನಿನ್ನನು ದೇವ 3 ಕಸವ ರಸವೆಂದು ಬಯಸುವೆ ವಿಷಯವ ರಸವ ವಿಷವೆಂದು ತೊರೆದು ಜೀವಿಸುತಿರ್ಪೆ ಅಸಮವಿಷಣವಿಷ್ಣು ಆತ್ಮಾಖ್ಯಾತನ ನಿನ್ನ ತುಸಸಹ ನೆನೆಯದೆ ಹುಸಿಯ ದಾಸನಾಗಿ 4 ನನ್ನದಲ್ಲದ ಒಡವೆ ನನ್ನದೆಂದು ತಿಳಿವೆ ನಿನ್ನ ಸ್ವಾಮಿತ್ವವ ಮರದು ಮೆರೆಯುತಿರ್ಪೆ ನನ್ನದೇ ಸ್ವಾತಂತ್ರವೆಂದು ತಿಳಿದು ಭವದಿ ಹುಣ್ಣು ತಿಂದೆನು ದೊರೆಯೆ ಕೊಡದೆ ನಿನ್ನದುನಿನಗೆ 5 ವೇದ ವೋದುವ ನಾನು ನಾನೆನೀನೆಂಬುವೆ ಭೇದವ ತಿಳಿಯದೆ ಭಜಿಸುವೆ ಕುವಿದ್ಯೆ ಬಾದರಾಯಣಗುದರ ಭೇದವ ನುಡಿಯುವೆ ಮಧ್ವಮಂದಿರ ಕೃಷ್ಣ ನೀನಿಲ್ಲ ವೆನ್ನುತ6 ಪೂರ್ಣ ಗುಣದವ ನಿನ್ನ ನಿರ್ಗುಣನೆಂಬುವೆನು ಪೂರ್ಣರಲ್ಲದ ಸುರರ ಸಾಟಿ ನಿನಗೆಂಬುವೆನು ಪೂರ್ಣಬೋಧರ ಕರುಣ ಕೊಡಿಸದ್ದಿದರೆಯಿನ್ನು ಜ್ಞಾನ ಮಾರ್ಗವ ಕಾಣೆ ಸ್ವಾಮಿ ಜಗಜ್ಜನಕ 7 ಜನನ ಮರಣ ರಹಿತ ಜನಿಸುವೆ ನಮ್ಮೊಡನೆ ಕ್ಷಣ ಬಿಟ್ಟಗಲದಲೆಮಗೆ ಉಂಡುಣಿಸುತಿಪ್ಪೆ ಅನಿಮಿತ್ತ ಬಂಧುವೆ ಮರೆತು ನಿಮ್ಮುಪಕಾರ ದನುಜರ ಸೇವಿಸುತ ಹಾಳು ಮಾಡಿದೆ ಬಾಳು 8 ನಿರಯ ಭಾಜನ ನಾದೆ ದೂರವಾಯಿತು ಮುಕುತಿ ದಾರಿಕಾಯುವರ್ಯಾರೊ ಧೀರ ಜಯತೀರ್ಥ ವಾಯು ಅಂತರದಿರ್ಪ ನೀರಜಾಕ್ಷನಮ್ಮ ಶ್ರೀ ಕೃಷ್ಣವಿಠಲನೆ 9
--------------
ಕೃಷ್ಣವಿಠಲದಾಸರು
ಧನ್ಯ ಧನ್ಯ ಧನ್ಯ ಧನ್ಯ ಗುರುವರಾ ಧನ್ಯ ತಂದೆ ಮುದ್ದುಮೋಹನ್ನ ಗುರುವರಾ ಪ. ಮಾನ್ಯ ವಿಭುದ ಮಾನ್ಯ ಜಗದ್ಮಾನ್ಯ ಗುರುವರಾ ಅ.ಪ. ಪುಟ್ಟಿದಂದಿನಿಂದಿನ್ವರೆಗೆ ತೊಟ್ಟು ದಾಸತ್ವ ದೀಕ್ಷೆ ಕರ್ಮ ಜಪತಪಂಗಳಾ ಕರ್ಮ ಮಾಡಿ ಮುಗಿಸಿ ಶ್ರೇಷ್ಠ ಜ್ಞಾನ ಕವಚ ತೊಟ್ಟು ದಿಟ್ಟತನದಿ ಮೆರೆದ ಗುರುವು ಮುಟ್ಟಿದರೀಗ ಹರಿಯ ಪುರವ 1 ಭಕ್ತಿ ಭೂಷಣ ತೊಟ್ಟು ವಿರಕ್ತಿ ಖಡ್ಗ ವರೆಯಲ್ಲಿಟ್ಟು ಮುಕ್ತಿ ಮಾರ್ಗಕೆಲ್ಲ ದೀಕ್ಷೆ ಇತ್ತು ಸುಜನಕೆ ವ್ಯಕ್ತಾವ್ಯಕ್ತ ಮಹಿಮೆಯಿಂದ ವ್ಯಕ್ತಿತ್ವವನು ತೋರಿಕೊಳದೆ ಉಕ್ತಿಗೊಶರಮಾಡಿಕೊಂಡ ಶಕ್ತಿ ಪೇಳಲಳವೆ ಎನಗೆ 2 ಕರ್ಮ ಕುರುಹನರುಹಿ ನಮ್ಮ ಮಧ್ವಮತಕೆ ದಿವ್ಯ ಸಮ್ಮತವಾಗಿ ವಮ್ಮನದ ಸುಜ್ಞಾನ ಬೆಳಕು ತಮ್ಮ ನಂಬಿದರಿಗೆ ತೋರಿ ಬÉೂಮ್ಮನೈಯ್ಯನ ಪುರಕೆ ಸಾರ್ದ ನಮ್ಮ ಗುರುವರಾ 3 ದಾಸಕೂಟ ಸಭಾಸ್ಥಳದಿ ದಾಸ ಪ್ರಾಣರಾಯನ ನಿಲಿಸಿ ದಾಸಜನಕೆ ಮುಕ್ತಿ ಸ್ಥಾನ ಕರಿಗಿರಿ ಎನಿಸಿ ವ್ಯಾಸತೀರ್ಥರಿಂದ ಬಂದ ದಾಸಕೂಟ ನಿಜವೆಂದೆನಿಸಿ ದಾಸಜನರ ಮೆರಸಿ ನೃಹರಿ ದಾಸಕೂಟ ಸಭಾಸ್ಥಾಪಕ 4 ವ್ಯಾಳಶಯನನಾದ ಗೋಪಾಲಕೃಷ್ಣವಿಠ್ಠಲನ್ನ ಲೀಲೆಯಿಂದ ಯನ್ನ ಹೃದಯದಲ್ಲಿ ನಿಲ್ಲಿಸೀ ಕಾಲ ಕಾಲಕ್ಕೆ ಇತ್ತು ಪಾಲಿಸಿದಾ ಪರಮ ಪ್ರಿಯ ಕೃಪಾಳೂ ಗುರುವರಾ 5
--------------
ಅಂಬಾಬಾಯಿ