ಒಟ್ಟು 1848 ಕಡೆಗಳಲ್ಲಿ , 109 ದಾಸರು , 1575 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತುತಿಸಬಲ್ಲೆನೆ ನಾ ನಿನ್ನೆ ವೆಂಕಟರನ್ನ ಪ ಪತಿ ನಿನ್ನ ಬ್ರಹ್ಮ ಪಾ ರ್ವತಿ ಪತ್ಯಾದ್ಯಳವಡದುತುಳ ಮಹಿಮೆಗಳ ಅ.ಪ. ನಮಿಪ ಜನರ ಕಲ್ಪದ್ರುಮ ದುಷ್ಟದಾನವ ದಮನ ದಿವಿಜಕುಲೋತ್ತಮ ಲಕ್ಷ್ಮೀ ಪವನಾದಿ ಸುಮನಸಾರ್ಚಿತ ಪಾದಕಮಲ ಯುಗ್ಮನೆ ಅನು ಕಾಯ ಹೃ ತ್ತಿಮಿರ ಭಾಸ್ಕರ ಶ್ರೀ ಭೂರಮಣ ಸರ್ವಗ ಸದಾ ಗಮವೇದ್ಯ ವೇದವ್ಯಾಸ ಕಪಿಲ ದತ್ತ ಕುಮುದಾಪ್ತ ಕೋಟಿ ಭಾಸಾ ತದ್ಭಕ್ತರ ಸಮುದಾಯಕೀಯೋ ಲೇಸಾ ಆನತ ಬಂಧು ಸುಮುಖ ಸುಲಭನೆಂದಾ ನಮಿಪೆ ಎನ್ನರಸಾ 1 ಘನಮಹಿಮನೆ ವೃಂದಾವನವಾಸಿ ಸ್ವಪ್ರಯೋ ಜನವಿವರ್ಜಿತ ಗೋವರ್ಧನಧಾರಿ ಗೋ ಗೋಪೀ ಜನ ಮನೋರಂಜನ ಜನಕಜಾರಮಣ ಪೂ ತನಿ ಪ್ರಾಣಾಂತಕ ವೇದವಿನುತ ಶ್ರೀ ವತ್ಸಲಾಂ ಕೌಸ್ತುಭ ಮಣಿ ವೈಜಯಂತೀ ಸ ದ್ವನ ಮಾಲಾಂಚಿತ ಕಂಧರಾ ಸತ್ಕಲ್ಯಾಣ ಗುಣ ಜ್ಞಾನಾತ್ಮಕ ಶರೀರಾ ಸಂತತ ನಿಷ್ಕಿಂ ಚನ ಭಕ್ತಜನಮಂದಾರಾ ವಂದಿಸುವೆ ಮ ನ್ಮನದಲಿ ನಿಲಿಸೋ ಕರುಣಾ ಪಾರಾವಾರಾ 2 ಕವಿಭಿರೀಡಿತ ಪುಣ್ಯ ಶ್ರವಣ ಕೀರ್ತನ ಮತ್ಸ್ಯಾ ದ್ಯವತಾರಂತರ್ಯಾಮಿ ಪ್ರವಿವಿಕ್ತ ಭುಗ್ವಿಭು ಭುವನ ನಿಧಿಯ ಪೆತ್ತ ಸವನ ತ್ರಯಾಹ್ವಯ ಶಿವರೂಪಿ ಶಿವದ ಭೂರ್ಭೂವಸ್ವಸ್ಥ ಸ್ವಶ ಭಾ ರ್ಗವ ನಿನ್ನೊಳಿಪ್ಪ ದಾನವನ ಸಂಹರಿಸುವ ನೆವದಿಂದ ದಾಶರಥೀ ಸಂಗಡ ಯುದ್ಧ ತವಕದಿ ಮಾಡಿ ಭೀತಿ ಬಟ್ಟವನಂತೆ ಅವನಿಗೆ ತೋರ್ದ ರೀತಿ ವರ್ಣಿಸಲಿನ್ನು ಪವನಮುಖಾದ್ಯರಿಗವಶ ನಿನ್ನಯ ಖ್ಯಾತಿ3 ಗತಶೋಕ ಗಾಯಿತ್ರಿ ಪ್ರತಿಪಾದ್ಯ ತತ್ವಾಧಿ ಪತಿಗಳೆನಿಸುವ ದೇವತೆಗಳೊಳಗಿದ್ದು ಮಾ ರುತನಿಂದ ಒಡಗೂಡಿ ಪ್ರತಿದೇಹಗಳಲಿ ಯೋ ಗ್ಯತೆಯನರಿತು ಕರ್ಮಗತಿಗಳನೀವೆ ಸಾಂ ಪ್ರತ ಬೇಡಿಕೊಂಬೆ ಆನತರ ಸಂತೈಸೆಂದು ಪ್ರಥಮಾಂಗ ಪ್ರಿಯ ಸತ್ತಮ ಸೌಭಾಗ್ಯ ಸಂ ಭೃತಸಾರ ಸರ್ವೋತ್ತಮ ನೀನೆ ಪಾಂಡು ಸುತರಾದ ಧರ್ಮ ಭೀಮಾ ಪಾರ್ಥರ ಕಾಯ್ದೆ ಪ್ರತಿಗಾಣೆ ನಿನಗೆ ಸಂತತ ಪರಂಧಾಮಾ 4 ಕಲಿ ಮುಖ್ಯ ದೈತ್ಯ ಗಂಟಲಗಾಣ ಗುರುತಮ ಬಲಿಬಂಧಮೋಚಕ ಸುಲಭ ಚೆತ್ಸುಖದಾಯಿ ಫಲ ಚತುಷ್ಟಯನಾಮ ಫಲಸಾರ ಭೋಕ್ತø ಶಂ ಬಲನಾಗಿ ಭಕತರ ಸಲಹುವ ಕರುಣಿ ಶಂ ಫಲಿಪುರವಾಸಿ ಬಾಂಬೊಳೆಯ ಜನಕ ಲಕ್ಷ್ಮೀ ನಿಲಯ ನಿರ್ಗತ ದುರಿತಾ ಮನ್ಮನದ ಚಂ ಚಲವ ಬಿಡಿಸೋ ನಿರುತಾ ಬೇಡಿಕೊಂಬೆ ತಲೆ ಬಾಗಿ ಸರ್ವಗತಾ ನೀನಹುದೆಂದು ತಿಳಿಸೋ ತೀವ್ರದಿ ಮುಪ್ಪೊಳಲುರಿಗನ ತಾತಾ 5 ಉದಿತ ಭಾಸ್ಕರನಂತೆ ಸುದತೇರಿಂದೊಡಗೂಡಿ ಉದರ ನಾಮಕ ನೀನು ಉದರದೊಳಿದ್ದೆನ್ನ ಉದಕಗಳಿಗೆ ನಿತ್ಯಾಸ್ಪದನಾಗಿ ಜೀವರ ಹೃದಯದೊಳಿರುತಿಪ್ಪೆ ಸದಸದ್ವಿಲಕ್ಷಣಾ ವಿಧಿಭವ ಶಕ್ರಾದಿ ತ್ರ್ರಿದಶರೊಂದಿತ ಪಾದ ಬದಿಗನಾಗಿರಲು ಪಾಪ ಕರ್ಮಗಳು ಬಂ ದೊದಗುವುವೇನೋ ಶ್ರೀ ಪಾ ಬಿನ್ನೈಸುವೆ ಬುಧ ಜನರಂತಸ್ತಾಪಾ ಕಳೆದು ನಿತ್ಯ ಬೆದರದಂದದಲಿ ಮಾಳ್ಪುದು ದೋಷ ನಿರ್ಲೇಪಾ 6 ಪಣಿಗಣ್ಣ ಸ್ವರದಿಂದಾಗ್ರಣಿಯಾದ ದುಷ್ಟ ರಾ ವಣನ ಬಾಹುಬಲ ಗಣಿಸಿದೆ ನಿಶಿತ ಮಾ ರ್ಗಣದಿ ಸದೆದು ವಿಭೀಷಣಗೆ ನೀ ಲಂಕಾಪ ಟ್ಟಣ ಭೋಗ ತತ್ಕಾಲ ಉಣಲಿತ್ತು ಭಕ್ತಗೆ ಪ್ರಣತ ಕಾಮದನೆಂಬೋ ಗುಣ ನಿನ್ನಲ್ಲಿದ್ದ ಕಾ ರÀಣದಿ ಪ್ರಾರ್ಥಿಸುವೆ ನಿನ್ನಾ ದಾಸರೊಳು ಗಣಿಸು ನೀ ದಯದಿ ಎನ್ನಾ ತಪ್ಪುಗಳ ನೀ ನೆಣಿಸಲಾಗದು ಪ್ರಸಾನ್ನಾ ಪಾಲಕನೆ ಕುಂ ಭಿಣಿಸುರರನು ಕಾಯೊ ಕ್ಷಣಾ ಲಕ್ಷ್ಮನಣ್ಣಾ 7 ಬಿಸಜ ಸಂಭವನ ನಿರ್ಮಿಸಿ ನಾಭಿಕಮಲದಿ ಸಶರೀರದೊಳು ಸುಮನಸರ ಪಡೆದು ನಿನ್ನಾ ಪೆಸರಿಟ್ಟು ಅವರವರೊಶನಾದೋಪಾದಿ ತೋ ರಿಸಿದಿ ನೀ ಸ್ವಾತಂತ್ಯ ಅಸಮನೆಸಿಕೊಂಡು ಬಸಿರೊಳಗಿಟ್ಟು ಪೊಂಬಸರಾದಿ ಸುರರ ಪಾ ಲಿಸುವಿ ನೀ ಪ್ರತಿ ಕಲ್ಪದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ವಾಸಿಸುತ ರ ಕ್ಕಸರನಂಧಂತಮದಿ ದಣಿಸುತಿಪ್ಪ ಪ್ರಸವಿತ್ತ ನಾಮ ವಂದಿಸುವೆ ಪ್ರಮೋದೀ 8 ಆಪದ್ಭಾಂಧವ ಬಹುರೂಪಾ ರುಕ್ಮಿಣೀಶಾ ತಾಪಸ ಜನರ ಹೃತ್ತಾಪದರ ಧರ್ಮ ಸುಜನ ಲೋ ಕೋಪಕಾರಕ ಧರ್ಮ ವ್ಯೂಪ ಊಧ್ರ್ವಗ ನಿರ್ಗು ಣೋಪಾಸಕರ ಸಲಹಲೋಸುಗದಿ ಸ ಲ್ಲಾಪದಿ ಬಹ ಕಲಹಾ ಮನ್ನಿಸೋ ಭವಾ ಕೂಪಾರ ನಾವಿಕ ಭೂಪತಿ ವರಹಾ 9 ಕೂರ್ಮ ಕ್ರೋಡ ವಪುಷ ಹಿರಣ್ಯಕ ಶಿಪುವಿನ ಸೀಳ್ದ ಕಾಶ್ಯಪಿಯಾಚಿಕನೆ ದುಷ್ಟ ನೃಪರ ಸಂಹರಿಸಿದ ಕಪಿವರ ಪೂಜಿತ ದ್ರುಪದಾತ್ಮಜೆಯ ಕಾಯ್ದ ತ್ರಿಪುರಾರಿ ಕಲಿಮುಖ್ಯ ರುಪಟಳ ಬಿಡಿಸಿದ ಕೃಪಣವತ್ಸಲ ಕಲ್ಕಿ ಅಮಿತ ರೂಪಾತ್ಮಕ ಸುಫಲ ಚಿತ್ಸುಖ ಭರಿತಾ ತ್ರೈ ಲೋಕಕ್ಕೆ ಪ್ರಪಿತಾಮಹನೆ ನಿರುತಾ ಪ್ರಾರ್ಥಿಸುವೆ ನಿ ನ್ನಪರೋಕ್ಷವಿತ್ತು ಪಾಲಿಪುದೆಮ್ಮ ಸ್ವರತಾ 10 ವಟಪತ್ರಶಯನ ವೆಂಕಟಗಿರಿ ನಿಲಯ ನಿ ಷ್ಕುಟಿಲ ದುರ್ವಿಷಯ ಲಂಪಟವ ಸದೆದು ನಿನ್ನ ಭಟಜನರಿಗೆ ಧರ್ಮ ಘಟಕನಾಗುವೆ ನಿತ್ಯ ವಟುರೂಪಿ ಎಡಪಾದಂಗುಟದಿ ಅಬ್ಬಜಾಂಡ ಕಟಾಹ ಭೇದಿಸಿ ದೇವ ತಟನೀಯ ಪಡಿಯೋ ಧೂ ರ್ಜಟಿ ತಲೆಯೊಳು ಧರಿಸಿ ನಿನ್ನ ನಾಮ ಪರಿಸುತ್ತ ಸತಿಗೆರಸಿ ಕುಣಿದನೆಂದು ತ್ಕಟದಿ ಕೈಗಳ ಬಾರಿಸಿ ಜಗನ್ನಾಥ ವಿಠಲ ಸರ್ವೋತ್ತಮ ದಿಟನೆಂದುದ್ಫಟಸೀ11
--------------
ಜಗನ್ನಾಥದಾಸರು
ತುರು ಮನವಾರ್ತೆಯಹರಿಬಲೆಯೊಳುಬಿದ್ದು ಹಲುಗಿರಿವುದ ನೋಡಿಪರಮವೈರಾಗ್ಯ ಖಡ್ಗದಿ ಮೋಹ ಪಾಶವಪರಿದು ಜ್ಞಾನಾಮೃತ ಪಾನಗೈಯೆಂದೆನು 1ಪರಧನವನು ಕಳಬೇಡ ಕೊಲ್ಲುವರೆಂದುವರದರು 'ುೀರಿಕದ್ದೊಡನೆ ಕೊಳದಿ ಸಿಕ್ಕಿಕೊರಗುತೆಲ್ಲರಿಗೆ ಪಲ್ಗಿರಿವಂತೆ ಬಯಲಿಗೆಬೆರತು ನೀ ಮುಂಗೆಡಬೇಡೆಂದು ಪೇಳಿದೆ 2ತಿರಿದುಂಬ ಪಾಪಿಗೆ ತುಪ್ಪ ಸಕ್ಕರೆ ಪಾಲುಬೆರೆದ ಮೃಷ್ಟಾನ್ನ ತಾ ಬರೆ ಸುಖದಿಂದುಂಡುುರದನ್ಯರೆಂಜಲಿಗೆರಗುವಂದದಿ ಪೂರ್ವದಿರವ ಬಯಸಿ ನೀನೀತೆರದಲಿ ಕೆ[ಡದೆ] 3ಹರಿಸ್ಮರಣೆಯ ಮಾಡು ಹರಿಕಥೆಗಳ ಕೇಳುಹರಿಯನರ್ಚಿಸಿ ನೋಡಿ ಹರುಷದಿಂ ಕುಣಿದಾಡುಹರಿ ಸರ್ವೋತ್ತಮನೆಂದು ಹಸನಾಗಿ ಬಾಳುವೆ'ರಿಯರೊಪ್ಪುವ ಮಾರ್ಗ 'ೀಗಿರು ನೀನೆಂದೆ 4ದೂಸುವವನಿಂದ ದೋಷ ಪೋಪುದು ನಿನ್ನಪೋಸುವವನಿಗೆ ಪುಣ್ಯ ಕೈಸಾರ್ವುದುರೋಷ ಹರ್ಷಗಳ ದೂರದಿ ಬಿಟ್ಟುಶ್ರೀಹರಿದಾಸರ ದಾಸರದಾಸ ನೀನಾಗೆಂದೆ 5ಶ್ರವಣಸುಧಾಪಾನ ರುಚಿಯ ಕಂಡರೆ ನೀನುಭವದುಃಖವೆಂಬ ಬಾಡಿದಗಂಜಿಗುಡಿವೆಯಾಸು'ವೇಕತನ ತಾನು ಸುಮ್ಮನೆ ದೊರೆವದೆಅ'ವೇಕತನವ ಬಿಟ್ಟಾನಂದಬಡುಯೆಂದೆ 6ಸಾರಿಗೆ ಸಾರಿಗೆ ಸಾರಿದರೆಯು ನಿನ್ನದಾರಿಯ ಬಿಡೆಯಲ್ಲ ದುಕ್ಕ ತೊಲಗದಲ್ಲಹೊರಲಾರೆನು ನಿನ್ನ ಹತ್ತಿರೆ 'ಧಿ ನನ್ನಸೇರಿಸಿ ಪೇಳಿದೆ ಸುಖಿಯಾಗಿ ಬಾಳೆಂದು 7ಸಾರಿದೆ ಸಾರಿದೆ ಕೆಡಬೇಡ ಭವಸುಖಹಾರುವದಿದು ನಿಜವಲ್ಲ ಸನ್ಮುಕ್ತಿಗೆದಾರಿಗೊಡದು ಸತ್ಸಂಗವ ಮಾಡಿ 'ಚಾರಿಸಿ ನಿನ್ನ ನೀ ಸುಖಮಯನಾಗೆಂದೆ8ಆಶೆಯ ಬಿಡಲೊಲ್ಲೆ ಆನಂದಬಡಲೊಲ್ಲೆಪೊಸದೆ 'ಷಯದ ಪೇರಡ'ಯೊಳಗೆಮೋಸಗೈವಳು ಮೃತ್ಯುವದರಿಂದ ಶ್ರೀಹರಿದಾಸರ ಜೊತೆಯ ಬಿಟ್ಟೊರ್ವ ಪೋಗದಿರೆಂದೆ 9ಬಲ್ಲೆಯ ಬಲ್ಲೆಯ ಗುರುಪದ ಸೇವೆಗೆಬಲ್ಲೆಯ ಬಲ್ಲೆಯ ಹರಿಕಥೆಗೇಳ್ಪರೆಬಲ್ಲೆಯ ಬಲ್ಲೆಯ ಹರಿನಾಮ ಸ್ಮರಣೆಯಕೊಲ್ಲುವೆ ಸಟೆಯಲ್ಲಿ ಕೇಳು ನೀ ನೀ ಮೇಲು 10ಗುರುಕರುಣವದೆಂಬ ಘಾಳಿ ಬೀಸಲಿ ತಾಳುತರಗೆಲೆಯಂತ್ತೆತ್ತಿ ತಂದು ಜ್ಞಾನಾಗ್ನಿಯೊಳ್‍ಉರು' ನಿನ್ನಯರೂಪನಡಗಿಸದಿಪ್ಪೆನೆವರಟು ಮಂಡೆಯದೆ ನಿನ್ನೊಡನೇಕೆ ಹಾರಲಿ 11ಬರಡು ಮನದೊಳೆ ಬರಿಜಗಳ'ದೆಂದುಗುರುವಾಸುದೇವಾರ್ಯ ಗುಪಿತದಿಂ ಚಿಕನಾಗಪುರದಿ ಜ್ಞಾನಾಮೃತಪಾನ ಗೈಸಿದುದರಿಂಬೆರೆದೆನಾತನೊಳು ನೀನಿರು ಪೋಗು ಬಯಲಾಗು 12
--------------
ವೆಂಕಟದಾಸರು
ತೂಗೋಣ ಬನ್ನಿ ರಾಯರ | ರಾಯರ ತೂಗೋಣ ಬನ್ನಿ ಪ ಪ್ರಥಮದಿ ಪ್ರಹ್ಲಾದನಾಗಿ | ಭಕುತಿಯಿಂದ ಹರಿಯಕೂಗಿ | ಪಿತಗೆ ಮುಕುತಿ ಪಥವಾ ತೋರಿದಾ ರಾಯರ 1 ಚಂದ್ರಿಕಾರ್ಯ ಭೂಮಿಯೊಳುಭ ಪೂರ್ಣಚಂದ್ರನಂತೆ ಮೆರೆಯುತಿರುವಾ | ಆನಂಧತೀರ್ಥ ಮತೋದ್ಧಾರರ | ರಾಯರ ತೂಗೋಣ ಬನ್ನಿ 2 ಬೋಗ ಭಾಗ್ಯವೆಲ್ಲ ತೊರೆದು ಯೋಗಿವರ್ಯರಾಗಿ ಮೆರೆದ | ರಾಘವೇಂದ್ರ ಯತೇಂದ್ರರ | ರಾಯರ ತೂಗೋಣ ಬನ್ನಿ 3 ಮಂತ್ರಪುರದಿ ನಿಂತು ಭಜಿಪರಂತರಂಗವನ್ನೆ ತಿಳಿದು ಸಂತಸದಿ ಪೂರ್ಣಗೊಳಿಪ ರಾಯರ ತೂಗೋಣಬನ್ನಿ 4 ನಾಮಸ್ಮರಣಿ ಮಾತ್ರದಿಂದ ಕಾಮಿತಾಥ್ವರ್ಥವನ್ನೆ ಕೊಡುವ | ಶಾಮಸುಂದರ ಹರಿಗೆ ಪ್ರಿಯರ | ರಾಯರ ತೂಗೋಣ5
--------------
ಶಾಮಸುಂದರ ವಿಠಲ
ತೊರೆದು ಜೀವಿಸಬಹುದೆ ಗುರು ನಿಮ್ಮ ಚರಣವ ಪ. ಬರಿಯ ಮಾತಲ್ಲವಿದು ಜರಿದು ನುಡಿವೆ ಕರಕರೆಗೊಳಿಸದೆ ಕಾಯಬೇಕಿನ್ನು ಗುರು ಅ.ಪ. ಅತಿಶಯ ಮಹಿಮೆಯ ಹಿತದಿಂದ ತೋರಿದ ಪಿತನಂತೆ ಪೊರೆಯುವಚ್ಯುತ ದೂರ ಪದವೀವ ಮತಿವಂತರೆ ನಿಮ್ಮ ಕ್ಷಿತಿಯೊಳಗಲಲಾರೆ1 ನೀತಿಯ ಬೋಧಿಪ ಖ್ಯಾತಿ ಶ್ರೀ ಗುರುಗಳೆ ದೂತರಾದವರನು ಈ ತೆರ ಮಾಳ್ಪರೆ ಪಾತಕರಹಿತರೆ ಪ್ರೀತಿಯ ತೋರಿರಿ2 ಬಂದಿರಿ ಮಮತೆಲಿ ಕಂದರಂದದಿ ತಿಳಿದು ಇಂದಿರೇಶನ ತತ್ವಾವೃಂದಗಳರುಹುತ ಮಂದಿಗಳಿಗೆ ಆನಂದವನೆ ತೋರ್ದಿರಿ 3 ಎಲ್ಲಿ ಭಕ್ತರು ಕರಿಯೆ ಅಲ್ಲಿಗೆ ಬರುವ ಗುರುವೆ ಇಲ್ಲಿ ನಿಮ್ಮ ಹೊರತು ಇಲ್ಲವು ಇನ್ನೊಂದು ಒಲ್ಲೆನು ಈ ಜಗದ ನಿಲ್ಲದ ವಸ್ತುಗಳು 4 ಗೋಪಾಲಕೃಷ್ಣವಿಠ್ಠಲ ತಾ ಪರಿಪರಿ ಲೀಲ ವ್ಯಾಪ್ತ ಶ್ರೀ ಗುರು ಸಹ ಶ್ರೀಪತಿ ಹೃದಯದಿ ತೋರ್ಪಂತೆ ಕೃಪೆ ಮಾಡಿ ಕಾಪಾಡಬೇಕೊ ದೊರಿ 5
--------------
ಅಂಬಾಬಾಯಿ
ತೊರೆದು ಜೀವಿಸುಬಹುದೆ ಹರಿ ನಿನ್ನ ಚರಣವನುಬರಿಯ ಮಾತೇಕಿನ್ನು ಅರಿತು ಪೇಳುವೆನಯ್ಯ ಪ ತಾಯಿ ತಂದೆಯ ಬಿಟ್ಟು ತಪವ ಮಾಡಲುಬಹುದುದಾಯಾದಿ ಬಂಧುಗಳ ಬಿಡಲುಬಹುದುರಾಯ ಮುನಿದರೆ ಮತ್ತೆ ರಾಜ್ಯವನು ಬಿಡಬಹುದುಕಾಯಜಪಿತ ನಿನ್ನಡಿಯ ಬಿಡಲಾಗದು 1 ಒಡಲು ಹಸಿಯಲು ಅನ್ನವಿಲ್ಲದಲೆ ಇರಬಹುದುಪಡೆದ ಕ್ಷೇತ್ರವ ಬಿಟ್ಟು ಪೋಗಬಹುದುಮಡದಿ ಮಕ್ಕಳ ಕಡೆಗೆ ತೊಲಗಿಸಿಯು ಬಿಡಬಹುದುಕಡಲೊಡೆಯ ನಿನ್ನಡಿಯ ಗಳಿಗೆ ಬಿಡಲಾಗದು 2 ಪ್ರಾಣವನು ಪರರು ಬೇಡಿದರೆತ್ತಿ ಕೊಡಬಹುದುಮಾನಾಭಿಮಾನ ತಗ್ಗಿಸಲು ಬಹುದುಪ್ರಾಣನಾಯಕನಾದ ಆದಿಕೇಶವರಾಯಜಾಣ ಶ್ರೀಕೃಷ್ಣ ನಿನ್ನಡಿಯ ಬಿಡಲಾಗದು 3
--------------
ಕನಕದಾಸ
ತೊಲಗು ನೀ ತೊಲಗಿನ್ನು ಅಭಿಮಾನವೆಅಲೆಬಡಿಸದಿರೆನ್ನನೂ ಹಲವು ಜನರಕಾಲಕೆಳಗೆ ನಿಲ್ಲಿಸಿಯನ್ನ ಹೊಲೆಗೆಲಸವ ಮಾಡಲೆಳಸಿ ನೆಗ್ಗಿದೆಯಲ್ಲ ಪಸತಿಸುತ ಪೋಷಣೆಯು ಮುಖ್ಯವು ಮಾತಾಪಿತೃಗಳಾರಾಧನೆಯು ಬಳಗ ಬಂಧು ತತಿಗಳ ಮನ್ನಣೆಯು ಕುಲ ಜಾತಿ ದೇವತೆಯ ಪೂಜಿಪ ಹಬ್ಬವು ಬಿಡಕೂಡದುವ್ರತ ಉಪವಾಸವಾರತಿಯಕ್ಷತೆಯು ಮುಂಜಿಯುಸುತೆಗೆ ಮದುವೆಯೆಂದು ಮತಿಗೆಡಿಸಿದೆಯಲ್ಲ 1 ಅರೆಘಳಿಗೆಯು ನಿಲ್ಲಲು ವೇಳೆಯ ಕೊಡದೆರಗಿಸಿ 'ಷಯದೊಳು ನಾನಾ ಬಗೆಹರುಬಿಗೆ ಹರುಸಲು ಮನವನೀಕೊರಗಿಸಿ ಕುಣಿಸುತಲು ಒಂದೇ ಕ್ಷಣಹರಿನಾಮ ಸ್ಮರಣೆಗೆ ತೆರಹುದೋರಿಸದಾಯುಹರಿದು ಪೋಗುವ ಹಾಗೆ ಕರಗಿಸಿದುದೆ ಸಾಕು 2ಶ್ರವಣಕೆ ಮನ'ತ್ತೆಯಾ ನಾಮ ಸ್ಮøತಿ ಸ'ಯ ಸೇ'ಸಬಿಟ್ಟೆಯ ಸಜ್ಜನರೊಳೊಂದುವ ದಾರಿಯ [ತೋರಿ]ದೆಯ ಎಂದಾದರು ಶಿವಸೇವೆಗಳ ತಂದೆಯ 'ೀಗಾಗುವ ಹವಣನರಿಯದೆ ಸಂಗವ ಮಾಡಿ ನಿನ್ನೊಳಗ'ವೇಕವನು ಪಡೆದವನಾದೆನಯ್ಯಯ್ಯೊ 3ಕಂಡವರೊಡವೆಯನು ತಂದು ಕರೆದು'ಂಡು ಬಳಗವನ್ನು ಮನ್ನಿಸಿಯವರ್ಕೊಂಡಾಡೆ ಹರುಷವನು ತೋರಿಸಿ ಬಹಭಂಡಾಟನಡತೆಯನು ಕರೆಸಿಯನ್ನಗುಂಡಿಗೆ ನೂಕಿಸೆ ಕಂಡೆ ನಿನ್ನಾಟವಮೊಂಡಮುಂಡೇದೆನ್ನೀ ಕೂಗಕೇಳಿ ಬೇಗ 4ಶ್ರೌತ ಸ್ಮಾರ್ತದ ಬಟ್ಟೆಯ ಹೊಂದುವರೆ ನೀನೋತು ಮಾರ್ಗವ ತೊಟ್ಟೆಯ ಅನ್ಯಾಯದ ರೀತಿಯ ನೀ ಬಿಟ್ಟೆಯ ನರಕಬಪ್ಪ ಭೀತಿಯ ನೀತೊಟ್ಟೆಯ ಯೇನೆನ್ನದೆಲೆಕಾತರಿಸುತ ಕಾಮಕಾತು ಕ್ರೋಧವ ಮಾಡಿಮಾತಿಗಾದರು ಒಮ್ಮೆ ಸೋತವನಾದೆಯ 5ಕಲಹವ ಜನರೊಳಗೆ ಗಂಟಿಕ್ಕಿತುತೊಲಗಿಸಿ ಬಯಲೊಳಗೆ ನಿಲ್ಲಿಸಿಯೆನ್ನಹಲವು ಬಗೆಯ ಮಾತಿಗೆ ಗುರಿಯ ಮಾಡಿಬಳಲಿ ಬಾಡುವ ರೀತಿಗೆ ಕಂಗೆಡಿಸಿದೆಕಾಲದೊಳು ಧನದೊಳು ಬಲದೊಳು ಛಲದೊಳುನೆಲೆಗೊಂಡು ನೀಯೆನ್ನ ಥಳಿಸಿದುದೇ ಸಾಕು 6ಅರಿಯದಾದೆನು ನಿನ್ನನು ಅದರಿನಿಂದಹುರಿದೆ ನೀನೆನ್ನುವನು ಚಿಕ್ಕನಾಗಪುರದೊಳಗಜ್ಞರನು ರಕ್ಷಿಸಲಾಗಿಗುರುವಾಸುದೇವಾರ್ಯನು ನೆಲಸಿಹನುಮರೆಯೊಕ್ಕೆರಗಿ ನಿನ್ನ ಪರಿಯ ಪೇಳಲು ಜ್ಞಾನದುರಿಯೊಳು ದ'ಪನೆಚ್ಚರ ನಿಲಬೇಡಿನ್ನು 7
--------------
ವೆಂಕಟದಾಸರು
ತೊಳೆಯಲಿ ಬೇಕಿದನು ಮನುಜಪ ಭವಕೂಪದಿ ಬಿದ್ದು ತೊಳಲಿ ಬಳಲಿ ಬಳಲಿ ಮಲಿನವಾಗಿಹ ಮನ ಹರಿಧ್ಯಾನ ಜಲದಲಿ ಅ.ಪ ಕಾಮಕ್ರೋಧದಿಂದ ಜನಿಸಿದ ಲೋಭಮೋಹ ಲೋಭದಿಂದ ಮದಮತ್ಸರ ಷಡ್ವಿಧ ತಾಪಗಳಿಂದ ಹದಗೆಟ್ಟಿರೆ ಮನ ಮುದದಿ ಹರಿಧ್ಯಾನದಿ 1 ದುರ್ಜನ ಸಂಗದೊಳು ಸೇರುತ ಮನ ವರ್ಜಿಸಿ ಹರಿ ಚರಿತ ಅರ್ಜುನ ಸಖ ಸರ್ವೇಶನ ನಾಮವು ಲಜ್ಜೆಯಿಲ್ಲದೆ ಸ್ಮರಿಸುತ ನಲಿಯಲು ಮನ 2 ಜನನ ಮರಣ ಕ್ಲೇಶದಿ ದು:ಖದಿ ಮನ ಮರಳಿ ಮರಳಿ ಪಾಪದಿ ಎಣಿಕೆ ಇಲ್ಲದ ದೋಷದೊಳಗೆ ಮುಸುಕಿದ ಮನ ನಿತ್ಯ 3 ಇಂದಿರೇಶನ ಧ್ಯಾನವ ಮಾಡಲು ಮನ ವೃಂದವ ಕೂಡಿ ಮಂದೋರದ್ಧರ ಗೋ_ ವಿಂದನೆನ್ನಲು ಮನ 4 ನಿಚ್ಚ ಭಕುತಿಯಿಂದ ಶ್ರೀ ಹರಿಪಾದ ಅರ್ಜಿಸಿಮುದದಿಂದ ರುಕ್ಮಿಣಿಯರಸನ ಸತ್ಯಸಂಕಲ್ಪನ ಮೆಚ್ಚಿಸಿ ಮುಕುತಿಯ ನೈದಲು ಈಮನ 5 ಮಧ್ವಮತದಿ ಜನಿಸಿ ನಿರಂತರ ಮಧ್ವರಾಯರ ಭಜಿಸಿ ಸದ್ವೈಷ್ಣವರ ಸಂಗದೊಳಾಡುತ ಲಜ್ಜೆತೊರೆದು ಕಾಲಗೆಜ್ಜೆ ಕಟ್ಟಲುಮನ6 ಕಂಬು ಚಕ್ರಧಾರಿ ಶ್ರೀ ಶೌರಿ ನಂಬುವರಾಧಾರಿ ಶಂಬರಾರಿಪಿತ ನಂಬಿದೆ ನಿನ ಪಾದ ಶಂಭುವಂದಿತ ಪಾಲಿಸಿಂದು ಸ್ಮರಿಸಲು ಮನ 7 ತೊಳೆದು ತೊಳೆದು ವಿಷಯ ವಾಸನೆಯನ್ನು ಹಲವು ವಿಧದಿ ತೊಳೆದು ಕಲುಷದೂರನ ನಾಮ ಸ್ಮರಣೆಯ ಮಾಡಲು ಮರುತ ಮತದ ಸಂಗ ದೊರೆವುದು ತವಕದಿ8 ಕಳವಳಿಸದೆ ಮನವು ನಿಶ್ಚಲದಲಿ ಥಳ ಥಳ ಥಳ ಹೊಳೆಯೆ ಕಮಲನಾಭ ವಿಠ್ಠಲವಲಿದು ಪಾಲಿಸುವನುಹಲವು ಬಗೆಯಲಿ ಹಂಬಲಿಸದೆ ಮನ 9
--------------
ನಿಡಗುರುಕಿ ಜೀವೂಬಾಯಿ
ತೋರು ನಿಮ್ಮ ಪಾದಕುಸುಮ ಮಾರನಯ್ಯಾಪಾರಮಹಿಮ ಪ ಧರೆಯ ಭೋಗದಾಸೆ ತೊರೆಸಿ ನಿರುತವಾದ ಮಾರ್ಗ ಹಿಡಿಸಿ ಕರುಣಿಸು ಎನ್ಹøದಯಕಮಲಕೆ ಕರೆ ತತ್ತ್ವಜ್ಞಾನ ಅಮೃತ1 ಕವಿದುಕೊಂಡಜ್ಞಾನಕತ್ತಲು ಜವದಿಹಾರಿಸಿ ಎನ್ನಯ ಭವದ ಬಂಧನ ದೂರಮಾಡಿ ಜವನಭಯನಿರ್ಬೈಲು ಎನಿಸು 2 ಮಯಾಮೋಹದೊಳಗೆ ಮುಳುಗಿ ಪೋಯಿತೆನ್ನಯ ಅರ್ಧವಯವು ಕಾಯಜಪಿತ ಸ್ವಾಮಿ ಶ್ರೀರಾಮ ನೋಯಿಸದೆ ನಿಜಪಥಕೆ ಹಚ್ಚೆನ್ನ 3
--------------
ರಾಮದಾಸರು
ತೋರೈಯ್ಯ ಚರಣವ ಕ್ಷೀರಾಬ್ಧಿಶಯನಾ ಪ. ಒಂದೂ ಅರಿಯದ ಮಂದಮತಿಯ ಬಂದೂ ನೀ ಕಾಯೋ ಸಿಂಧುಶಯನನೇ 1 ವಾರಿಧಿ ತಂದೆ ಕ್ಷೀರಾಬ್ಧಿ ಶಯನಾ ಪಾರು ಕಾಣಿಸಯ್ಯ | ಮಾರಾನಾಪಿತನೇ 2 ಶೇಷಾದ್ರಿ ವಾಸಾ ವಾಸುಕೀಶಯನಾ ರಮಾವಲ್ಲಭ ವಿಠಲ ಪೊರೆಯನ್ನ3
--------------
ಸರಸಾಬಾಯಿ
ತ್ರಾಣಿ ಶ್ರೀ ಕೃಷ್ಣವೇಣಿ ಪ್ರಾಣಪತಿ ಪದಕಮಲ ಕಾಣಿಸು ಹೃದಯದಿ ತ್ರಾಣಿ ಶ್ರೀ ಕೃಷ್ಣ ವೇಣಿ ಪ ಯಮಧರ್ಮತನಯೆ ಶ್ರೀ ಕೃಷ್ಣ ಸಂಗದಿ ಜನಿಸಿ ಕಮಲ ಸಂಭವನ ಲೋಕದಲಿ ಮೆರೆದೆ ಸುಮನಸರ ನುಡಿಗೇಳಿ ಲೋಕಗಳ ದುರಿತೋಪ ಶಮನ ಗೊಳಿಸಲು ಬಂದೆ ತುಮಲ ಹರುಷದಲಿ 1 ಭೂತನಾಥನ ಜಟಾಜೂಟದಿಂದುದ್ಭವಿಸಿ ಶ್ವೇತಪಿಂಗಳ ಶೈಲಶಿಖರಕಿಳಿದೇ ಭೂತಳಕೆ ಭೂಷಣಳೆನಿಸಿ ಪೂರ್ವವನಧಿ ನಿ ಕೇತನವನೈದಿ ಸುಖಿಸಿದಿ ನಿನ್ನ ಪತಿಯೊಡನೇ 2 ಪ್ರಾಣಿಗಳು ನಿನ್ನ ಜಲಪಾನವನು ಗೈಯೆ ನಿ ತ್ರಾಣ ಸಂಹಾರ ವ್ಯಾಧಿಗೆ ಭೇಷಜಾ ಪ್ರಾಣ ಪ್ರಯಾಣ ಪಾಥೇಯವೆಂದರಿಯೆ ನಿ ರ್ವಾಣಪದವಿತ್ತು ಕಲ್ಯಾಣವಂತರ ಮಾಳ್ಪೆ 3 ಜನಪದಗಳಾಗಿ ಕಾನನವಾಗಿ ಮನ್ವಾದಿ ದಿನಗಳಲ್ಲಾಗಿ ಮತ್ತೇನಾಗಲೀ ಮನುಜ ಮಜನಗೈಯೆ ವಾಜಪೇಯಾದಿ ಮಖ ವನುಸರಿಸಿದಕೆ ಫಲವೇನು ತತ್ಪಲವೀವೆ 4 ಅರವತ್ತು ಸಹಸ್ರ ವರುಷಂಗಳಲ್ಲಿ ನಿ ರ್ಜರ ತರಂಗಿಣಿಯ ಮಜ್ಜನದ ಫಲವು ಗುರುವು ಕನ್ಯಸ್ಥನಾಗಿರಲು ಒಂದಿನ ಮಿಂದ ನರರಿಗಾ ಪುಣ್ಯಸಮನೆನಿಸಿ ತತ್ಫಲವೀವೇ 5 ಮನನಶೀಲ ಸುಯೋಗಿಗಳಿಗಾವ ಗತಿಯು ಇಹ ವನುದಿನದಿ ನಿನ್ನ ತೀರದಲಿ ಇಪ್ಪಾ ಮನುಜೋತ್ತಮರಿಗೆ ಆ ಗತಿಯಿತ್ತು ಪಾಲಿಸುವೆ ಅನುಪಮ ಸುಕಾರುಣ್ಯಕೆಣೆಗಾಣಿ ಜಗದೊಳಗೆ 6 ತಾಯೆ ಎನ್ನನುದಿನದಿ ಹೇಯ ಸಂಸಾರದೊಳ ಗಾಯಾಸ ಗೊಳಿಸದಲೆ ಕಾಯಬೇಕೊ ವಾಯುಪಿತ ಶ್ರೀ ಜಗನ್ನಾಥ ವಿಠ್ಠಲ ಹೃ ತ್ತೋಯಜದೊಳಗೆ ಕಾಂಬುಪಾಯ ಮಾರ್ಗವ ತೋರೆ 7
--------------
ಜಗನ್ನಾಥದಾಸರು
ತ್ರಾಹಿತ್ರಾಹಿ ಮಂತ್ರಾಲಯನಿಲಯ ಪ ತ್ರಾಹಿತ್ರಾಹಿ ಮಂತ್ರಾಲಯ ಗುರುವೆ ಸೂತ್ರನಪಿತಕೃಪಾಪಾತ್ರ ನೀನಹುದೊ1 ಧ್ಯಾನ ಮೌನ ಸುಜ್ಞಾನವಿಲ್ಲದಿಹ ದೀನ ಜನರುದ್ಧಾರ ಗಂಭೀರ 2 ವಸುಧೆಯೊಳಗೆ ದಶಪ್ರಮತಿ ಸುಶಾಸ್ತ್ರವ ಪ್ರಸರಿಸಿ ತೋರಿದ ಅಸಮಮಹಿಮನೆ3 ಮೂಕ ಬಧಿರ ಅಂಧಾದಿಗಳ ಕುಂದುಗಳ ವ್ಯಾಕುಲ ಹರಿಪ ಕೃಪಾಕರ ಮೂರ್ತೇ 4 ಕರುಣಶರಧಿ ಸಿರಿರಮಣನ ಭಕುತಾಗ್ರಣಿ ಸುಗುಣಗಣಾಭರಣಕೆಣೆಯೆ 5 ಬೇಡಿದಿಷ್ಟವ ನೀಡಿ ಕಾಪಾಡುವೆ ಈಡುಗಾಣೆ ನಿನಗೀ ನಾಡೊಳು ಇನ್ನು 6 ಇಂದು ಮುಂದು ಎನ್ನ ಕುಂದುಗಳೆಣಿಸದೆ ಕಂದನೆಂದು ಎನ್ನ ಮುಂದಕೆ ಕರೆಯೊ 7 ಕ್ಷೋಣಿಯೊಳಗೆ ನಿನಗಾರೆಣೆಕಾಣೆನೊ ವೀಣೆವೆಂಕಟ ನೀ ಸಂಕಟ ಹರಿಸೊ 8 ಪಾಲಿಸಯ್ಯ ಪ್ರಹ್ಲಾದ ವ್ಯಾಸ ಭೂ ನಲ್ಲ ನೀನಹುದೋ ಬಾಹ್ಲೀಕ ಪ್ರಭುವೇ 9 ಬಗೆ ಬಗೆ ಪಾಪೌಘಗಳನು ಕಳೆಯುವ ರಘುಪತಿಕಿಂಕರ ಶ್ರೀ ರಾಘವೇಂದ್ರ 10 ಪವನಾಂತರಾತ್ಮ ಶ್ರೀ ವೇಂಕಟೇಶ ಪದ ಕುವಲಯಕೆ ನೀ ಕುಮುದಬಾಂಧವ 11 ಶಂಕುಕರ್ಣ ಲಂಕೇಶನನುಜ ಶ್ರೀರಾಮ- ಕಿಂಕರನಕಳಂಕಮೂರುತೇ12 ಮರುತಮತಾಬ್ಧಿಯ ಸಾರಸುಧೆಯನಿತ್ತೆ ಉರಗಾದ್ರಿವಾಸವಿಠಲನ ದೂತ13
--------------
ಉರಗಾದ್ರಿವಾಸವಿಠಲದಾಸರು
ಥೂ ನಿನ್ನ ಮೋರೆಗೆ ಬೆಂಕ್ಯ್ಹಚ್ಚ ಮನವೆ ಕುಯುಕ್ತಿ ಬಿಡು ಮನವೆ ಪ ಮುನ್ನ ನೀ ಪಡೆದದ್ದು ನಿನ್ನಗಿರಲಿಕ್ಕಾಗಿ ಅನ್ಯರೊಡವೆಯ ಬಯಸಿ ಕಣ್ಣಿಕ್ಕಿ ಕುದಿವಿ ಕುನ್ನಿಮನಸೆ ನಾಳೆ ಕಣ್ಣಿನೋಳುರಿಗೆಂಡ ವನ್ನು ತುಂಬಿಸುವೆ ಮನಚೆನ್ನಾಗಿ ನೋಡೊ 1 ಮಿಥ್ಯ ಸತಿಸುತರಿಗೆ ತೊತ್ತಾಗಿ ದುಡಿದು ಮುದಿಕತ್ತೆ ನೀನಾದಿ ಮೃತ್ವಿಗೆ ತುತ್ತಾಗಿ ಅತ್ತತ್ತು ಬಾಯಿಬಿಡುವ ಹೊತ್ತಿಗಿರರಾರಾರು ಅರ್ತು ನೀ ನೋಡೊ 2 ಚಿತ್ತಜಪಿತನಂಘ್ರಿ ಸತ್ಯಭಜನಕೆ ಕರೆಯೆ ಸುತ್ತಿ ಮಲುಗುವಿ ಸತಿಸತ್ತಳುವನಂತೆ ಮತ್ತೆ ಎತ್ತಕೆ ಕರೆಯೆ ವತ್ತರಿಲ್ಲ ಓಡ್ವಿ ಮುಕ್ತಿಕೊಂಡೆಯ್ವೆ ಮನ ತೊತ್ತಾಗಬೇಡೊ 3 ದಾಸಾನುದಾಸರ ದೂಷಣೆಯ ಮಾಡಿ ಮಹ ಹಾಸ್ಯದಿಂ ನಗುವಿ ಭವಪಾಶದೋಳ್ಸಿಲ್ಕಿ ನಾಶಬುದ್ಧಿಯ ಬಿಡು ಹೇಸಿಮನುಜನೆ ಯಮ ಪಾಶ ಬರುವುದು ಮುಂದೆ ಸೋಸಿ ನೀನೋಡೊ 4 ನೆರೆದು ತೋರುವ ಸಂತೆಪರಿಯಂತೆ ಸಂಸಾರ ಮರೆಮೋಸದ ಉರುಲು ದುರಿತದ ತವರು ಮರುಳತನವನು ನೀಗಿ ಪರಮ ಶ್ರೀರಾಮನ ಚರಣಸ್ಮರಣೆಯೊಳಿರ್ದು ವರಮುಕ್ತಿ ಪಡೆಯೊ 5
--------------
ರಾಮದಾಸರು
ದಯ ಬಾರದ್ಯಾಕೊ ರಾಘವಾ ಪ ಕಾಯಬೇಕು ಯೆಂದು ಕೊರಗಿ ಮೊರೆಯಿಡೆ ನ್ಯಾಯವೇನು ಯೆನ್ನ ಮರತುಬಿಡುವದು ಅ.ಪ ಅಂದು ಅಜಮಿಳನು ಅಂತ್ಯಕಾಲದಲ್ಲಿ ಕಂದ ನಾರ ಬಾಯೆಂದು ಕರಿಯಲು ಅಂದ ಮಾತುಗಳಿಗೆ ಅತಿ ಹರುಷಿಸಿ ಬಂದ ಯಮನ ಬಾಧೆ ಬಿಡಿಸಲಿಲ್ಲವೇನೊ 1 ಹರಿಯೆ ಗತಿಯೆಂದು ಹೊಗಳು ಕಂದನ ಹರುಷವಿಲ್ಲದೆ ಪಿತ ಕಷ್ಟಪಡಿಸಲು ಊರು ತೋರದಂತಾ ಸ್ತಂಭದಿಂದ ಬಂದು ಮೂರು ಜಗವು ಅರಿಯೆ ಮನ್ನಿಸಲಿಲ್ಲವೇನೊ 2 ಸರ್ಪಶಯನನೆ ಸಾರ್ವಭೌಮನೆ ನಾಸಿಕ ಶ್ರೋತ್ರವಳಿದನೇ ಅಪ್ಪ ಗುರುವರ ವಿಜಯವಿಠ್ಠಲನೇ ಒಪ್ಪದಿಂದ ವಲಿವ ವರದರಾಜನೇ 3
--------------
ವಿಜಯದಾಸ
ದಯದಿ ವರಗಳ ನೀಡು ಮಮಸ್ವಾಮಿ ಸರ್ವಂತರ್ಯಾಮಿ ನಯದಿ ಬೇಡುವೆ ಭಕುತಜನ ಪ್ರೇಮಿ ಮಮ ಸರ್ವಸ್ವಾಮಿ ಪ ಸವಿನಯದಿ ಪ್ರಾರ್ಥಿಸುತ ಬೇಡುವೆ ಸುಮನರಸರ ಪ್ರಿಯ ಚಿತ್ಸುಖಪ್ರದ ಅಮಿತ ವಿಕ್ರಮ ಅಪ್ರಮೇಯನೆ ರಮೆಯರಮಣನೆ ರಕ್ಷಿಸೆನ್ನನು ಅ.ಪ ತೀರ್ಥ ಕ್ಷೇತ್ರಗಳನು ಚರಿಸುತಲೆ ಶ್ರೀ ಹರಿಯಗುಣ ಸ- ತ್ಪಾತ್ರರಿಂದನವರತ ತಿಳಿಯುತಲೆ ಶ್ರೋತ್ರಿಯನ ಸಂಗದೊಳು ನಲಿಯುತ್ತಾ ಮನನಲಿದು ನಿನ್ನಯ ಕೀರ್ತನೆಗಳನುದಿÀನದಿ ಕೀರ್ತಿಸುತ ಪಾರ್ಥಸಾರಥೆ ನಿನ್ನ ಪೊಗಳುತ ರಾತ್ರಿ ಹಗಲೆಡಬಿಡದೆ ಸ್ತುತಿಪರ ಗಾತ್ರಮರೆಯುತಲವರ ಸೇವಿಪ ಸಾರ್ಥಕದ ಸೇವೆಯನೆ ನೀಡೈ 1 ಗೋಕುಲಾಪತಿ ಹರಿಯೆ ಗೋವಿಂದ ನೀ ಕಡಿಯೋ ಬಂಧ ನೂಕಿ ಉದ್ಧರಿಸೆನ್ನ ಭವದಿಂದ ಕಾಕುಮತಿಗಳ ಬಿಡಿಸು ದಯದಿಂದ ನೀ ಪೊರೆಯದಿರಲು ಯಾತಕೀ ನರದೇಹ ಮುಕುಂದ ಮಾತುಮಾತಿಗೆ ನಿನ್ನ ಸ್ಮರಿಸದ ಮಾತುಗಳ ಫಲವೇನು ಕೇಶವ ಮದನ ಜನಕ ಮಾಧವ ಮುರಮರ್ದನ ಹರೇ 2 ಕರುಣಿಗಳೊಳು ದೇವನಿನಗೆಣೆಯೆ ದಯ ಮಾಡು ಹರಿಯೆ ಕರಿಯ ಪೊರೆದವನಲ್ಲೆ ನರಹರಿಯೆ ಕರೆಕರೆಯ ಸಂಸಾರ ಇದು ಖರೆಯ ಇದರೊಳಗೆ ಬಳಲಿದೆ ಕರೆದು ರಕ್ಷಿಪುದೆಂದು ಮೊರೆ ಇಡುವೆ ಕಮಲ ಮುಖಿ ಶ್ರೀ ಭೂಮಿ ಸಹಿತದಿ ಕಮಲನಾಭ ವಿಠ್ಠಲನೆ ಭಕುತರÀ ಮಮತೆಯಲಿ ಕೈ ಪಿಡಿದು ಪೊರೆಯುವ ಮನ್ಮಥನ ಪಿತ ಮನ್ನಿಸುತ ಪೊರೆ 3
--------------
ನಿಡಗುರುಕಿ ಜೀವೂಬಾಯಿ
ದಯಾನಿಧೆ ದಯ ಮಾಡಬೇಕು |ದಯ ಮಾಡಬೇಕು ಎನ್ನಯ ದೋಷಾವೆಣಿಸದೆ |ಹಯಮುಖ ಲೋಕಾತ್ರಯ ವ್ಯಾಪ್ತ ಪರಮಾಪ್ತ ಪ ನಿನ್ನ ನಂಬಿದ ಭುಕುತರನ್ನ ಚೆನ್ನಾಗಿ ಕಾಯ್ದಾ |ಘನ್ನಾ ಕೀರುತಿ ಕೇಳಿ ಮನ್ನಾದಿ ನಮಿಸುವೆ ಬನ್ನಾ ಬಡಿಸದೆ ಸಂಪನ್ನ ಗುಣಾರ್ಣವ 1 ಮುಖ್ಯಪ್ರಾಣ ವಂದಿತಾಂಘ್ರಿ |ನೀನೊಲಿಯದಿರೆ ಸುಜ್ಞಾನ ಮಾರ್ಗವ ಕಾಣೆ 2 ಹರಿಕೋಟಿ ತೇಜಾ ಕಾಮಿತ ಕಲ್ಪಿತರು ಮಹರಾಜಾ |ಸುರ ನದಿ ಜನಕ ಅಸುರ ಶೀಕ್ಷಾ ಕಮಲಾಕ್ಷ |ಕರುಣಿ ಕಪಿಲ ವ್ಯಾಸಾ ಗುರು ಪ್ರಾಣೇಶ ವಿಠಲಾ 3
--------------
ಗುರುಪ್ರಾಣೇಶವಿಠಲರು