ಒಟ್ಟು 688 ಕಡೆಗಳಲ್ಲಿ , 88 ದಾಸರು , 616 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶೇಷಗಿರಯವಾಸಾ ಶ್ರೀವೆಂಕಟೇಶಾ ಶಾಶ್ವತ ಜಗದೀಶಾ ಪ ಸಾಸಿರ ನಾಮದೊಡೆಯಾ ಸಕಲ ಭಕ್ತರ ಪ್ರೀಯಾ ಕಾಯ ವಸುದೇವನಂದನ ಜೇಯಾ ಅ.ಪ ಕಟ್ಟಿಕೊಂಡು ಲಂಕೆಯಪುರವಾ ಪುಂಡಮಹಾನುಭಾವ ದಂಡಿದಾನವರನ ಹಿಡದಾ ಖಂಡಗಳು ಕತ್ತರಿಸಿನಿ ದಶಶಿರ ಪುಂಡರೀಕ ವರದ ದೇವ 1 ಪತಿ ಮಾಧವ ಶ್ರೀ ಮುಕುಂದಾ ಭೇದಿಸಿ ಹರಿಕೊಂದಾ ಪೊಗಳಲೊಶವೆ ವೈಭವ ದೇವ ದೇವಾ 2 ತ್ಯಜಿಸಿ ವೈಕುಂಠದಿಂದಾ ಭಜಕಾರ ಪೊರೆವ ನಿಜವುವುಳ್ಳ ಕನ್ನಿಕೆಯ ಸಂಗ ಭಜನಿಯನು ಕಳಕೊಂಡು ಬಂದ ತ್ರಿಜಗವಂದಿತ ಹೊನ್ನ ವಿಠಲಾ 3
--------------
ಹೆನ್ನೆರಂಗದಾಸರು
ಶೋಭಾನವೆನ್ನಿರೆ ಸ್ವರ್ಗಾರೋಹಿಣಿಗೆ | ಶೋಭಾನವೆನ್ನಿ ಶುಭವೆನ್ನಿ ಪ ಹರಿಪಾದ ನಖದಿಂದ ಬ್ರಹ್ಮಾಂಡವ ಶೀಳಲು | ಭರದಿಂದ ಇಳಿದು ಸತ್ಯಲೋಕ || ಭರದಿಂದ ಇಳಿದು ಸತ್ಯಲೋಕಕೆ ಬಂದ | ವಿರಜೆಗಾರುತಿಯ ಬೆಳಗಿರೇ 1 ಸರಸಿಜಾಸನ ನಮ್ಮ ಹರಿಪಾದ ತೊಳಿಯಲು | ಸರಸ ಸದ್ಗುಣ ಸುರಲೋಕ | ಸರಸ ಸದ್ಗುಣದಿ ಸುರಲೋಕಕೈದಿದಾ | ಸ್ವರ್ಣೆಗಾರುತಿಯ ಬೆಳಗಿರೇ 2 ಇಂದ್ರಲೋಕವ ಸಾರಿ ಧ್ರುವನ ಮಂಡಲಕಿಳಿದು | ಚಂದದಿಂದಲಿ ಮೇರುಗಿರಿಗೆ | ಚಂದದಿಂದಲಿ ಮೇರುಗಿರಿಗೆ ಬಂದಾ | ಸಿಂಧುವಿಗಾರುತಿಯ ಬೆಳಗಿರೇ 3 ಶತಕೋಟಿ ಎಂತೆಂಬ ಅಜನ ಮಂದಿರ ಪೊಕ್ಕು | ಚತುರ್ಭಾಗವಾಗಿ ಕರೆಸಿದ | ಚತುರ್ಭಾಗವಾಗಿ ಕರೆಸಿದ ಶ್ರೀ ಭೋಗ | ವತಿಗಾರುತಿಯ ಬೆಳಗಿರೇ4 ಇಂದ್ರ ದಿಕ್ಕಿಗೆ ಸಿತಾ ಚಕ್ಷು ಪಶ್ಚಿಮ ದಿಕ್ಕು | ಚಂದ್ರ ಯಮ ದಿಕ್ಕಿಗೆ ಭದ್ರದೇವಿ | ಚಂದ್ರ ಯಮ ದಿಕ್ಕಿಗೆ ಭದ್ರದೇವಿ ಅಳಕ | ನಂದಿನಿಗಾರುತಿಯ ಬೆಳಗಿರೇ 5 ಕುಂದ ಮಂದರೆ ಇಳಿದು ಗಂಧ ಮಾದನಗಿರಿಗೆ | ಹಿಂಗದೆ ಪುಟಿದು ವಾರಿನಿಧಿಯ | ಹಿಂಗದೆ ಪುಟಿದು ವಾರಿನಿಧಿಯ ನೆರದ | ಗಂಗೆಗಾರುತಿಯ ಬೆಳಗಿರೇ 6 ಗಿರಿಜೆ ಸೂಪಾರಶ್ವಕೆ ಧುಮುಕಿ ಮಾಲ್ಯವಂತಕೆ ಜಿಗಿದು | ಪರಿದಂಬುಧಿಯ ಕೂಡಿ ಮೆರದು | ಪರಿದಂಬುಧಿಯ ಕೂಡಿ ಮೆರದಾ | ತ್ರಿದಶೇಶ್ವರಿಗಾರುತಿ ಬೆಳಗಿರೇ7 ಕುಮುದಾದ್ರಿಗೆ ಇಳಿದು ನಲಾ ಶತ ಶೃಂಗ | ವನಧಿ | ವನಧಿ ಕೂಡಿದಾ | ಸುಮತಿಗಾರುತಿಯ ಬೆಳಗಿರೇ 8 ಮೇರು ಮಂದರಕಿಳಿದು ನಿಷಿಧ ಕಾಂಚನ ಕೂಟ | ಮೀರಿ ಹಿಮಗಿರಿಗೆ ಹಾರಿ ಬದರಿಗೆ | ಮೀರಿ ಹಿಮಗಿರಿಗೆ ಹಾರಿ ಬದರಿಗೆ ಬಂದಾ | ನಾರಿಗಾರುತಿಯ ಬೆಳಗಿರೇ 9 ಕ್ಷಿತಿಪ ಭಗೀರಥನಂದು ತಪವ ಒಲಿದು| ಅತಿಶಯವಾಗಿ ಧರೆಗಿಳಿದು | ಅತಿಶಯವಾಗಿ ಧರೆಗಳಿದು ಬಂದಾ | ಭಾಗೀರಥಿಗಾರುತಿಯ ಬೆಳಗಿರೇ10 ಮುನಿ ಜನ್ಹು ಮುದದಿಂದ ಆಪೋಶನವ ಮಾಡೆ | ಜನನಿ ಜಾನ್ಹವಿ ಎನಿಸಿದಾ| ಜನನಿ ಜಾನ್ಹವಿ ಎನಿಸಿದಾ ಮೂಜಗದ | ಜನನಿಗಾರುತಿಯ ಬೆಳಗಿರೇ 11 ವಿಷ್ಣು ಪ್ರಜಾಪತಿ ಕ್ಲೇತ್ರದಲ್ಲಿ ನಿಂದು | ಇಷ್ಟಾರ್ಥ ನಮಗೆ ಕೊಡುವಳು ಸತತ | ಇಷ್ಟಾರ್ಥ ನಮಗೆ ಕೊಡುವಳು ಸತತ ಸಂ | ತುಷ್ಟಿಗಾರುತಿಯ ಬೆಳಗಿರೇ 12 ಕ್ರಮದಿಂದ ಬಂದು ನಲಿವುತ ಸರಸ್ವತಿ | ಯಮುನೇರ ನೆರೆದು ತ್ರಿವೇಣಿ | ಯಮುನೇರ ನೆರೆದು ತ್ರಿವೇಣಿ ಎನಿಸಿದಾ | ವಿಮಲೆಗಾರುತಿ ಬೆಳಗಿರೇ13 ತ್ರಿವಿಧ ಜೀವರು ಬರಲು | ಅತ್ಯಂತವಾಗಿ ಅವರವರ | ಅತ್ಯಂತವಾಗಿ ಅವರವರ ಗತಿ ಕೊಡುವ | ಮಿತ್ರೆಗಾರುತಿ ಬೆಳಗಿರೇ 14 ಪತಿಯ ಸಂಗತಿಯಿಂದ ನಡೆತಂದು ಭಕುತಿಲಿ | ಸತಿಯಲ್ಲಿ ವೇಣಿಕೊಡಲಾಗಿ | ಸತಿಯಲ್ಲಿ ವೇಣಿ ಕೊಡಲಾಗಿ ಕಾವ ಮಹಾ | ಪ್ರತಿಗಾರುತಿ ಬೆಳಗಿರೇ 15 ವೇಣಿಯ ಕೊಟ್ಟಂಥ ನಾರಿಯ ಭಾಗ್ಯವು | ಪಡಿಗಾಣೆ | ಪಡಿಗಾಣೆ ಸುಖವೀವ | ಕಲ್ಯಾಣಿಗಾರುತಿಯ ಬೆಳಗಿರೇ 16 ಒಂದು ಜನ್ಮದಲಿ ವೇಣಿಯಿತ್ತವಳಿಗೆ | ಎಂದೆಂದು ಬಿಡದೆ ಐದೆತನವ | ಎಂದೆಂದು ಬಿಡದೆ ಐದೆತನವೀವ ಸುಖ | ಸಾಂದ್ರೆಗಾರುತಿಯ ಬೆಳಗಿರೇ 17 ವಾಚಾಮಗೋಚರೆ ವರುಣನರ್ಧಾಂಗಿನಿ | ಪ್ರಾಚೀನ ಕರ್ಮಾವಳಿ ಹಾರಿ | ಮಕರ | ವಾಚಳಿಗಾರುತಿಯ ಬೆಳಗಿರೇ 18 ಅಂತರ ಬಾಹಿರ ಪಾಪ ಅನೇಕವಾಗಿರೆ | ಸಂತೋಷದಿಂದಲಿ ಭಜಿಸಲು | ಸಂತೋಷದಿಂದಲಿ ಭಜಿಸಲು ಪೊರೆವ ಮಹಾ | ಕಾಂತೆಗಾರುತಿಯ ಬೆಳಗಿರೇ 19 ಗುರುಭಕುತಿ ತಾರತಮ್ಯ ಇಹಪರದಲ್ಲಿ ತಿಳಿದು | ಹರಿ ಪರನೆಂದು ಪೊಗಳುವರ | ಹರಿ ಪರನೆಂದು ಪೊಗಳುವರ ಪೊರೆವ | ಕರುಣಿಗಾರುತಿಯ ಬೆಳಗಿರೇ20 ಜಗದೊಳು ಪ್ರಯಾಗ ಕ್ಷೇತ್ರದಲ್ಲಿ ನಿಂದು | ಬಗೆ ಬಗೆ ಶುಭವ ಕೊಡುವಳು | ಬಗೆ ಬಗೆಯ ಶುಭವ ಕೊಡುವ ವಿಜಯವಿಠ್ಠಲನ | ಮಗಳಿಗಾರುತಿಯ ಬೆಳಗಿರೇ ಶೋಭಾನೆ 21
--------------
ವಿಜಯದಾಸ
ಶೌರಿ ಪ ಸಾಕೇತಾಪುರಿಗೀಶನು ಪೂಜ್ಯ ಸಾಮ್ರಾಜ್ಯ ಭಾಸ್ಕರ ಶತತೇಜಅ.ಪ ಸುಖಕರ ಸುಧಾಂಬುಧೀ ನಿತ್ಯಪರಿಪೂರ್ಣ ಹಿರಣ್ಯವರ್ಣನೆ 1 ಮಮತೆಯ ತೋರಿಸುತ ಪೊರೆವಾತ ಜಾಜೀನಾಥ 2
--------------
ಶಾಮಶರ್ಮರು
ಶೌರಿ ಅಡಿಗಳನು ಧ್ಯಾನಿಸುವ ಮತಿ ಕೋರಿ ಪ ಮೃಡ ಪುರಂದರರೊಡೆಯ ಶ್ರೀಹರಿ ಕಡಲಶಯನನ ಬಿಡದೆ ಭಜಿಪರ ಸಡಗರದಿ ಸನ್ಮಾರ್ಗ ತೋರುವ ಬಡವರ ಆಧಾರಿ ನರಹರಿ ಅ.ಪ ನಿನ್ನ ದಾಸರ ಸಂಗದೊಳಿರಿಸೆನ್ನ ಬೇಡುವೆನು ನಿನ್ನ ನಿನ್ನ ನಾಮಸ್ಮರಣೆ ಅನುದಿನ ನಿನ್ನ ಚರಣವ ಭಜಿಪ ಭಕ್ತರನು ಕೊಂಡಾಡುವಂಥ ಅ- ಚ್ಛಿನ್ನ ಭಕ್ತರ ಕೂಟದಲಿರಿಸೆನ್ನ ಸನ್ನುತಾಂಗನೆ ಸರ್ವವ್ಯಾಪಕ ನಿನ್ನ ಮೊರೆ ಹೊಕ್ಕಿರುವೆ ಪಾಲಿಸು ಪನ್ನಗಾದ್ರಿವಾಸ ವೆಂಕಟ ಆ- ಪನ್ನ ಜನರನು ಪೊರೆವ ಕರುಣಿಯೆ 1 ಗಜ ನೀ ಕೇಳಿ ತ್ವರದೊಳು ಬಿಡದೆ ರಕ್ಷಿಸಿ ಪೊರೆದ ಕರುಣಾಳು ಬಡವ ವಿಪ್ರಗೆ ಒಲಿದೆ ಕ್ಷಿಪ್ರದೊಳು ಸೌಭಾಗ್ಯವಿತ್ತೆ ಹುಡುಗ ತಪವಿರೆ ಅಂದು ಅಡವಿಯೊಳು ತಡೆಯದಲೆ ನೀನೊಲಿದೆ ಭಕುತಿಗೆ ಒಡೆಯರೈವರ ಮಡದಿ ಮೊರೆ ಕೇಳಿ ಬಿಡದೆ ಅಕ್ಷಯವೆಂದು ಸಲಹಿದೆ ದೃಢ ಭಕುತರನು ಬಿಡದೆ ಪೊರೆಯುವೆ 2 ರಂಗನಾಥ ನಿನ್ನಂಘ್ರಿ ಕಮಲಗಳ ಭಜಿಸುವವರ ಭವ ಹಿಂಗಿಸುತ ಪೊರೆದಂಥ ಚರಿತೆಗಳ ಸಂಗರಹಿತನೆ ಬಿಡಿಸು ಬಂಧಗಳ ಸಲಹೆಂದು ಪ್ರಾರ್ಥಿಪೆ ಅಂಗಜನಪಿತ ತರಿದೆನ್ನಪರಾಧ ಮಂಗಳಾಂಗ ಪ್ಲವಂಗ ವತ್ಸರ ಗಂಗಾಜನಕ ನಿನ್ನಂಘ್ರಿ ಭಜಕರ ಹಿಂಗದಲೆ ಪಾಲಿಸುತ ಪೊರೆ ಕೃಪಾ-ಪಾಂಗ ಕಮಲನಾಭ ವಿಠ್ಠಲನೆ 3
--------------
ನಿಡಗುರುಕಿ ಜೀವೂಬಾಯಿ
ಶ್ರೀ ಅಕ್ಷೋಭ್ಯ ತೀರ್ಥರ ಚರಿತ್ರೆ ಅಕ್ಷೋಭ್ಯ ತೀರ್ಥಗುರು ಸಾರ್ವಭೌಮರು ಎಮ್ಮ ರಕ್ಷಿಪ ಕೃಪಾನಿಧಿಗೆ ಶರಣು ಶರಣೆಂಬೆ ಪಕ್ಷೀಶ ವಾಹನ್ನ ಲಕ್ಷ್ಮೀಶ ಕಮಲಾಕ್ಷ ವಿಷ್ಣು ಆತ್ಮಗೆ ಪ್ರಿಯ ಸತ್ತತ್ವವಾದಿ ಪ ಅಖಿಳಗುಣ ಆಧಾರ ನಿರ್ದೋಷ ಶ್ರೀರಮಣ ಜಗದಾದಿ ಮೂಲಗುರು ಅಗುರು ಶ್ರೀ ಹಂಸ ವಾಗೀಶ ಸನಕಾದಿ ದೂರ್ವಾಸಾದಿಗಳ ಪೀಳಿಗೆ ಗುರುಗಳಿಗೆ ಶರಣು ಶರಣೆಂಬೆ 1 ಅಚ್ಯುತ ಪ್ರೇಕ್ಷಾಖ್ಯ ಪುರುಷೋತ್ತಮತೀರ್ಥ ಅಚ್ಯುತ ಪ್ರೇಕ್ಷರ ಶಿಷ್ಯರೆಂದೆನಿಪ ಅಚ್ಯುತನ ಮುಖ್ಯಾಧಿಷ್ಠಾನ ಶ್ರೀಮಧ್ವ ಖಚರೇಂದ್ರ ಫಣಿಪಮೃಡ ಅಮರೇಂದ್ರವಂದ್ಯ 2 ಕರ ಅಬ್ಜಜರು ಪದ್ಮನಾಭನೃಹರಿ ಮಾಧವಾಕ್ಷೋಭ್ಯ ಈ ಮಹಾಗುರುಗಳು ಸರ್ವರಿಗು ಆನಮಿಪೆ ಸುಮನಸ ಶ್ರೇಷ್ಠರು ಮಹಿಯಲಿ ಪುಟ್ಟಿಹರು 3 ಸಾಧು ವೈದಿಕ ವೇದಾಂತ ಸತ್ತತ್ವ ಮತ ಮಧ್ವ ಮತವೇ ಅನ್ಯ ಯಾವುವೂ ಅಲ್ಲ ಎಂದು ನಿಶ್ಚೈಸಿ ಶೋಭನಭಟ್ಟಸ್ವಾಮಿ ಶಾಸ್ತ್ರಿ ಮೊದಲಾದವರು ಮಧ್ವಗೆರಗಿದರು 4 ಸೂರಿವರ ಶೋಭನ ಭಟ್ಟಾದಿಗಳಂತೆ ಸಾರಾಸಾರ ವಿವೇಕಿ ಗೋವಿಂದ ಶಾಸ್ತ್ರಿಯು ಮಹಾ ದೊಡ್ಡ ಪಂಡಿತರು ತಾನೂ ಎರಗಿ ಶರಣಾದರು ಮಧ್ವರಾಯರಲಿ 5 ಇಂಥಾ ಮಹಾತ್ಮರ ಇನ್ನೂ ಬಹು ಸಜ್ಜರನ ಉದ್ಧರಿಸಲಿಕ್ಕೇವೆ ಹರಿ ಅಜ್ಞೆಯಿಂದ ಈ ಧರೆಯಲ್ಲಿ ತೋರಿಹ ಮಧ್ವರಾಯರ ಶಾಸ್ತ್ರಿ ಬೇಡಿದರು ಸಂನ್ಯಾಸ ಕೊಡು ಎಂದು 6 ಸಚ್ಚಾಸ್ತ್ರ ಪ್ರವಚನ ಪಟು ವಿದ್ವನ್ಮಣಿಯು ನಿಶ್ಚಲ ಭಕ್ತಿಮಾನ್ ಸವೈರಾಗ್ಯ ವಿಪ್ರ ಅಚಲ ಸತ್ತತ್ವನಿಶ್ಚಯ ಜ್ಞಾನಿ ಶಾಸ್ತ್ರಿಗೆ ಅಕ್ಷೋಭ್ಯ ನಾಮನ ಇತ್ತರಾಚಾರ್ಯ 7 ಪ್ರಣವ ಮೂಲಾದಿ ಸುಮಂತ್ರ ಉಪದೇಶಿಸಿ ತನ್ನ ಮಠದಲ್ಲಿ ಅಕ್ಷೋಭ್ಯತೀರ್ಥರಿಗೆ ವನರುಹನಾಭರಿಂದ ನಾಲ್ಕನೇ ಸ್ಥಾನವ ಘನದಯದಿ ಇತ್ತರು ಆನಂದಮುನಿಯು 8 ಬದರಿಗೆ ಮೂರನೇ ಬಾರಿ ತೆರಳುವ ಪೂರ್ವ ಮಧ್ವ ಮುನಿ ನೇಮಿಸಿದ ಕ್ರಮದಿಂದಲೇವೆ ಮಾಧವ ತೀರ್ಥರು ವೇದಾಂತ ಪೀಠದಲಿ ಕುಳಿತುಜ್ವಲಿಸಿದರು 9 ಪದ್ಮನಾಭತೀರ್ಥರ ಪಾದಪದ್ಮಗಳಿಗೆ ಸದಾ ನಮೋ ನಮೋ ಎಂಬೆ ಇವರ ಪೀಳಿಗೆಯ ವಿದ್ಯಾಕುಶಲರು ಸೂರಿಗಳ ಚರಣಕ್ಕೆ ಸಂತೈಪರೆಮ್ಮ ಸದಾ ನಮೋ ಸರ್ವದಾ 10 ನರಹರಿತೀರ್ಥರು ಚರಣ ಸರಸೀರುಹದಿ ಶರಣಾದೆ ಕಾಯ್ವರು ಈ ಮಹಾನ್ ಇಹರು ವರಾಹ ತನಯಾ ಸರಿದ್ವರಾಕ್ಷೇತ್ರದಲಿ ಶ್ರೀ ವೃಂದಾವನದೊಳು ಹರಿಯ ಧ್ಯಾನಿಸುತ 11 ಮಾಧವತೀರ್ಥರ ಪಾದಪದ್ಮಗಳಿಗೆ ಸದಾನಮೋ ನಮೋ ಎಂಬೆ ಇವರ ಪೀಳಿಗೆಯ ಯತಿಗಳೂ ಭಕ್ತಿಮಾನ್ ಜ್ಞಾನಿಗಳ ಚರಣಕ್ಕೆ ಆದರದಿ ನಮಿಸುವೆ ಸದಾ ಪೊರೆವರೆಮ್ಮ 12 ಸುಲಭರು ಸುಜನರಿಗೆ ಶರಣರ ಸಲಹುವರು ಮಾಲೋಲನೊಲಿದಿಹ ಅಕ್ಷೋಭ್ಯತೀರ್ಥ ಬಲು ಖಿನ್ನ ಬ್ರಾಹ್ಮಣನು ಬ್ರಹ್ಮ ಹತ್ಯ ಮಾಡಿದವ ಕಾಲಲ್ಲಿ ಬಿದ್ದು ಶರಣಾದ ಗುರುಗಳಲಿ 13 ಗುರು ದಯಾನಿಧಿ ಅಕ್ಷೋಭ್ಯತೀರ್ಥರು ಆಗ ಶರಣಾದ ಪುರುಷನ ಪಶ್ಚಾತ್ತಾಪ ಖರೆಯೇ ಎಂಬುವುದನ್ನು ಜನರಿಗೆ ತಿಳಿಸಲು ಏರಿ ಮರ ನದಿಯಲಿ ಬೀಳೆ ಹೇಳಿದರು 14 ತನ್ನಯ ಮಹಾಪಾಪ ಕಳೆಯುವ ಗುರುಗಳು ಏನು ಹೇಳಿದರೂ ಮಾಡುವೆ ತಾನೆಂದು ಸನ್ನಮಿಸಿ ಗುರುಗಳಿಗೆ ನದಿ ಬದಿ ಮರಹತ್ತೆ ದೀನ ರಕ್ಷಕ ಗುರು ಇಳಿಯೆ ಹೇಳಿದರು 15 ವೃಕ್ಷದಿಂದಿಳಿದ ಆ ವಿಪ್ರಘಾತುಕನ ಮೇಲೆ ಅಕ್ಷೋಭ್ಯತೀರ್ಥರು ಶಂಖತೀರ್ಥವನ್ನ ಪ್ರೋಕ್ಷಿಸಿ ಆತನ ಮಹಾ ಬ್ರಹ್ಮಹತ್ಯಾ ದೋಷ ಕಳೆದರು ಪಂಕ್ತಿಯಲಿ ಸೇರಿಸಿದರು 16 ಶಂಖತೀರ್ಥದ ಮಹಿಮೆ ಅಲ್ಲಿದ್ದ ಜನರಿಗೆ ಶಂಕೆಯಲ್ಲದೆ ತಿಳಿಸಿ ಬಂದು ಬೇಡುವವರ ಡೊಂಕು ಕೊರತೆಗಳೆಲ್ಲ ನೀಗಿಸಿ ಯೋಗ್ಯದಿ ಶ್ರೀಕಾಂತನಲಿ ಭಕ್ತಿ ಪುಟ್ಟಿಸಿಹರು 17 ತಮ್ಮಲ್ಲಿ ಬೇಡುವ ಅಧಿಕಾರಿಯೋಗ್ಯರಿಗೆ ಶ್ರೀಮಧ್ವಶಾಸ್ತ್ರದ ದಾಢ್ರ್ಯ ಜ್ಞಾನ ಶ್ರೀ ಮನೋಹರನನ್ನ ಅಪರೋಕ್ಷಿಕರಿಸುವ ಸುಮಹಾ ಉಪಾಯವ ಅರುಹಿಹರು ದಯದಿ 18 ಮಧ್ವಸಿದ್ಧಾಂತ ಸ್ಥಾಪನ ಮಾತ್ರವಲ್ಲದೇ ವೇದ ವಂಚಕ ದುರ್ಮತಗಳ ಖಂಡನವ ಪೋದಕಡೆ ಮಾಡುತ್ತಾ ದಿಗ್ವಿಜಯ ಜಯಶೀಲ - ರೆಂದು ಮರ್ಯಾದೆಗಳ ಕೊಂಡಿಹರು ಜಗದಿ 19 ಅದ್ವೈತವಾದಿಯು ಶಾಂಕರ ಮಠಾಧೀಶ ವಿದ್ಯಾರಣ್ಯರು ಪ್ರಸಿದ್ಧ ಪಂಡಿತರು ಎದುರು ನಿಂತರು ಅಕ್ಷೋಭ್ಯ ತೀರ್ಥರ ಮುಂದೆ ವಾದಿಸಿದರು ಮುಳುಬಾಗಿಲು ಸಮೀಪ 20 ಶ್ವೇತಕೇತು ಉದ್ದಾಲಕರ ಸಂವಾದ ತತ್ವ ಮಸಿ ವಾಕ್ಯವೇ ವಾದದ ವಿಷಯ ವೇದಾಂತ ದೇಶಿಕರು ರಾಮಾನುಜೀಯತಿಯ ಅಧ್ಯಕ್ಷತೆಯಲ್ಲಿ ಸಭೆಯು ಕೂಡಿತ್ತು 21 ಛಾಂದೋಗ್ಯ ಉಪನಿಷತ್ತಲ್ಲಿರುವ ವಾಕ್ಯವು ಸಆತ್ಮಾ ತತ್ವಮಸಿ ಎಂಬುವಂಥಾದ್ದು ಭೇದ ಬೋಧಕವೋ ಅಭೇದ ಬೋಧಕವೋ ಎಂದು ವಾದವು ಆ ಈರ್ವರಲ್ಲಿ 22 ಆತ್ಮ ಶಬ್ದಿತ ನಿಯಾಮಕಗು ನಿಯಮ್ಯ ಜೀವನಿಗೂ ಭೇದವೇ ಬೋಧಿಸುವುದು ಆ ವಾಕ್ಯವೆಂದು ಸಿದ್ಧಾಂತ ಬಹುರೀತಿ ಸ್ಥಾಪಿಸಿದರು ಅಕ್ಷೋಭ್ಯರು ಸೋತಿತು ವಿದ್ಯಾರಣ್ಯರ ಐಕ್ಯವಾದ 23 ಅಸಿನಾತತ್ವ ಮಸಿನಾ ಪರಜೀವಪ್ರಭೇದಿನಾ ವಿದ್ಯಾರಣ್ಯ ಮಹಾರಣ್ಯಂ ಅಕ್ಷೋಭ್ಯ ಮುನಿರಚ್ಛಿನತ್ ಎಂದು ಬರೆದರು ತಮ್ಮಯ ಗ್ರಂಥದಲ್ಲಿ ಮಧ್ಯಸ್ತ ವೇದಾಂತದೇಶಿಕ ಸ್ವಾಮಿಗಳು 24 ಇಳೆಯ ಸಜ್ಜನರಿಗೆ ಜಯತೀರ್ಥರನಿತ್ತ ಮಾಲೋಲಪ್ರಿಯ ಅಕ್ಷೋಭ್ಯರ ಮಹಿಮೆ ಅಲ್ಪಮತಿ ನಾನರಿಯೆ ಇಲ್ಲಿ ಒಂದೋ ಎರಡೋ ಸ್ಥಾಲಿ ಪುಲೀಕ ನ್ಯಾಯದಲಿ ಪೇಳಿಹುದು 25 ನದಿ ದಡದಿ ಕುಳಿತಿದ್ದ ಅಕ್ಷೋಭ್ಯತೀರ್ಥರು ಎದುರಾಗಿ ನದಿಯಲ್ಲಿ ಆಚೆ ದಡದಿಂದ ಕುದುರೆ ಸವಾರನು ವರ್ಚಸ್ವಿ ಯುವಕನು ಬೆದರದೆ ಪ್ರವಾಹದಲಿ ಬರುವುದು ಕಂಡರು 26 ಕುದುರೆ ಮೇಲ್ ಆಸೀನನಾಗಿದ್ದ ಯುವಕನು ಕ್ಷುತ್‍ತೃಷಿ ಶಮನಕ್ಕೆ ಯತ್ನ ಮಾಡುತ್ತಾ ಉದಕವ ಕೈಯಿಂದ ತುಂಬಿಕೊಳ್ಳದಲೇ ಎತ್ತುಗಳು ಕುಡಿವಂತೆ ಬಾಯಿ ಹಚ್ಚಿದನು 27 ಮಾಧವ ಮಧ್ವರು ಮೊದಲೇ ಸೂಚಿಸಿದಂತೆ ಇಂದು ಆ ಕುರುಹರಿತು ಅಕ್ಷೋಭ್ಯರು ಇದು ಏನು ಪಶುವಂತೆ ಎಂದು ಧ್ವನಿಗೂಡಲು ಹಿಂದಿನ ಜನ್ಮ ಯುವಕಗೆ ನೆನಪು ಬಂತು 28 ಪಶು ಶಬ್ದ ಗುರುಮುಖದಿಂಬಂದಲಾಕ್ಷಣ ಪೂರ್ವ ಸಂಸ್ಕಾರ ಪ್ರತಿಭೆಯು ಉದಯವಾಯ್ತು ದಶಪ್ರಮತಿಗಳ ತಾನು ಎತ್ತಾಗಿ ಸೇವಿಸಿದ್ದು ಹಸನಾಗಿ ಟೀಕೆ ಬರೆಯಲಾಜÉ್ಞ ಕೊಂಡದ್ದು 29 ನಗಾರಿಸಮ ಬಲಿಯುವಕನು ಪ್ರವಾಹದ ವೇಗ ಲೆಕ್ಕಿಸದಲೇ ದಡಕೆ ತಾ ಬಂದು ಮುಗಿದುಕರ ಬಾಗಿಶಿರ ನಮಿಸಿ ಅಕ್ಷೋಭ್ಯರ ಆಗಲೇ ಸಂನ್ಯಾಸ ಕೊಡಲು ಬೇಡಿದನು 30 ಗಾಧಿ ಅರ್ಜುನ ಸಮ ಬಲರೂಪದಲಿ ತೋರ್ಪ ಈತ ರಾಯರ ಸುತನಾದರೂ ವೈರಾಗ್ಯ ಯುತ ಭಕ್ತಿಮಾನ್ ಸುಶುಭಲಕ್ಷಣನು ಎಂದು ಹರಿ ಮಧ್ವನಿಯಮಿತ ಅವಗೆ ಕೊಟ್ಟರು ಸಂನ್ಯಾಸ 31 ಶ್ರೀಯಃಪತಿಗೆ ಪ್ರಿಯತರ ಜಯತೀರ್ಥನಾಮವ ದಯಾಶೀಲ ಹೊಸಯತಿಗೆ ಇತ್ತು ಅಭಿಷೇಕ ಅಕ್ಷೋಭ್ಯ ಗುರುಮಾಡೆ ಗಗನದಿಂ ಪೂವರ್ಷ ಜಯ ಘೊಷ ಹರಡಿತು ಪರಿಮಳ ಸುಗಂಧ 32 ಶ್ರೀಮಧ್ವಾಚಾರ್ಯರು ಬೋಧಿಸಿ ತೋರಿಸಿದ ರಮಾಪತಿ ಪೂಜಾಸತ್ತತ್ವವಾದ ದುರ್ಮತ ಖಂಡನದ ರೀತಿಯ ಜಯಾರ್ಯರಿಗೆ ಸುಮ್ಮುದದಿ ಅರುಹಿದರು ಗುರುಸಾರ್ವಭೌಮ 33 ಶೀಲತಮ ಗುರುವರ್ಯ ಅಕ್ಷೋಭ್ಯತೀರ್ಥರು ಇಳೆಯಲ್ಲಿ ಮಧ್ವಮತ ಹರಿಭಕ್ತಿಯನ್ನ ಬೆಳೆಸಲು ಪ್ರತ್ಯೇಕ ಮಠವ ಸ್ಥಾಪಿಸಿದರು ತ್ರೈಲೋಕ ಭೂಷಣ ತೀರ್ಥರ ಮೊದಲ್ಮಾಡಿ34 ಆದಿ ಮಠ ಹರಿನೈದು ಸಮೀಪ ಪಟ್ಟವ ಆಳಿ ಹನ್ನೊಂದು ನೂರು ಅರವತ್ತೇಳ ಶಕವರುಷ ವದ್ಯ ಪಂಚಮಿ ಮಾರ್ಗಶಿರ ವಿಶ್ವಾವಸುವಲ್ಲಿ ಮಧ್ವ ಹೃದಯಾಬ್ಜಗನ ಪುರವ ಐದಿದರು 35 ಮತ್ತೊಂದು ಅಂಶದಲಿ ಮಳಖೇಡ ಗ್ರಾಮದಲಿ ನದಿ ತೀರದಲಿ ಹರಿಯ ಧ್ಯಾನ ಮಾಡುತ್ತಾ ಬಂದು ಬೇಡುವವರಿಷ್ಟಾರ್ಥ ಪೂರೈಸುತ ವೃಂದಾವನದಲ್ಲಿ ಕುಳಿತಿಹರು ಕರುಣಿ 36 ಶಾಶ್ವತ ಸರ್ವಾಶ್ರಯ ಗುಣಗಣಾರ್ಣವ ಅನಘ ಜೀವ ಜಡ ಭಿನ್ನ ಪರಮಾತ್ಮ ವಿಧಿತಾತ ಮಧ್ವಹೃತ್ಪದ್ಮಗ ಶ್ರೀ ಪ್ರಸನ್ನ ಶ್ರೀನಿವಾಸಗೆ ಸರ್ವದಾಪ್ರಿಯ ಅಕ್ಷೋಭ್ಯ ಗುರೋ ಶರಣು 37 ಪ || ಶ್ರೀ ಅಕ್ಷೋಭ್ಯ ತೀರ್ಥಚರಿತೆ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಕರಗ್ರಹ ಎನ್ನ ಸಾಕಲಾರದÉ ಹೀಗೆ ನೂಕಿ ಬಿಡುವುದು ನ್ಯಾಯವೆ ಪ. ಬೇಕೆಂದು ನಿನ್ನ ಪದ ನಾ ಕಾಣ ಬಂದರೆ ಈ ಕಪಟತನವು ಸರಿಯೆ ಹರಿಯೆ ಅ.ಪ. ಎಲ್ಲರನು ಸಲಹಿದಂತೆನ್ನ ನೀ ಸಲಹೆನ ನಿಲ್ಲದೆ ನೀರ ಪೊಗುವೆ ಸೊಲ್ಲು ಸೊಲ್ಲಿಗೆ ನಿನ್ನ ಸ್ತುತಿಪೆನೊ ಬಾರೆನಲು ಕಲ್ಲಡೀ ಅವಿತುಕೊಳುವೆ ಖುಲ್ಲನಲ್ಲವೊ ನಾನು ತಲ್ಲಣಿಪೆ ಪೊರೆ ಎನಲು ಹಲ್ಲು ಕೋರೆಯ ತೋರುವೆ ಎಲ್ಲಿ ಹೋಗಲೊ ನಾನು ಇಲ್ಲವೊ ಇನ್ನೊಬ್ಬ ಸೊಲ್ಲು ಕೇಳುವರನರಿಯೆ | ದೊರೆಯೆ 1 ತಡಬಡಿಸುತಿಹೆನೆನ್ನ ಪಿಡಿದು ಕೈ ಸಲಹೆನಲು ಘುಡು ಘುಡಿಸಿಕೊಂಡು ಬರುವೆ ಬಡವನೋ ನಾನು ನಿನ್ನಡಿಯನೇ ನೀಡೆನಲು ಹುಡುಗತನದಲಿ ಬೇಡುವೆ ತಡೆಯಲಾರೆನೊ ಭವದ ದಡವ ಸೇರಿಸು ಎನಲು ಕೊಡಲಿಯ ಪಿಡಿದು ಬರುವೆ ಕಡು ಬವಣೆ ಬಿಡಿಸೆಂದು ಅಡಿಗಡಿಗೆ ಎರಗಲು ಅಡವಿ ಅಡವಿಯ ತಿರುಗುವೆ | ಥರವೇ 2 ಹತ್ತು ನಾಲ್ಕು ಲೋಕಕೆ ತೆತ್ತಿಗನೊ ನೀನೆನಲು ಮುತ್ತ್ಯದೊರೆ ಎಂದೆನ್ನುವೆ ಸುತ್ತಿರುವ ಆವರಣ ಮತ್ತೆ ನೀ ಛೇದಿಸೆನೆ ಬತ್ತಲೆ ನೀ ನಿಲ್ಲುವೆ ಭೃತ್ಯ ನಾ ನಿನಗೆನಲು ಹತ್ತಿ ಕುದುರೆಯ ಓಡುವೆ ನಿತ್ಯ ಮೂರುತಿ ನಿನ್ನ ಕೃತ್ಯವೇ ಹೀಗಿರಲು ಮತ್ತಿನ್ನ ಹ್ಯಾಗೆ ಪೊರೆವೆ | ಕರೆವೆ 3 ದÉೂರೆಯು ನೀ ಜಗಕೆಂದು ಸುರರೆಲ್ಲ ನುಡಿಯುವರೊ ಅರಿಯೆ ನಾನದರ ಮಹಿಮೆ ಸಿರಿಗೊಡೆಯನಾದರೆ ಪೊರೆಯದೆಲೆ ಎನ್ನನು ಕರೆಕರೆಗೊಳಿಸುವರೆ ತಿರಿಯ ಬರಲಿಲ್ಲ ನಾ ಸಿರಿಯ ನೀಡೆಂದೆನುತ ಉರುತರದ ಭಯವೇತಕೆ ಚರಣ ಧ್ಯಾನವನಿತ್ತು ಪರಮ ಭಕ್ತರೊಳಿಡಿಸಿ ದೊರೆಯೆ ನೀ ಸಲಹ ಬೇಕೋ | ಸಾಕೋ4 ಆಪಾರ ಮಹಿಮನೆ ಆರ್ತಜನ ರಕ್ಷಕ ಪಾಪಿ ನಾನಿಹೆನೋ ಈಗ ನೀ ಪಿಡಿದು ಪೊರೆಯದಿರೆ ಕಾಪಾಡುವವರ್ಯಾರೊ ಶ್ರೀ ಪತಿಯೆ ನೀನೆ ತೋರೊ ತಾಪಪಡಲಾರೆ ಭವಕೂಪದೊಳು ಬಿದ್ದಿಹೆನು ನೀ ಕೃಪಾದಿಂದೀಕ್ಷಿಸೋ ಗೋಪಾಲಕೃಷ್ಣವಿಠ್ಠಲನೆ ನೀನಲ್ಲದಲೆ ಕಾಪಾಡುವವರನರಿಯೆ ದೊರೆಯೆ 5
--------------
ಅಂಬಾಬಾಯಿ
ಶ್ರೀ ಕಲ್ಯಾಣಿ ಸುಗುಣಮಣಿ ಗಿರಿಜೆ ಪ-ರಾಕೆ ಬಾಗಿಲ ತೆಗೆಯೆಸಾಕು ನೀನಾರು ನಿನ್ನಯ ನಾಮವನು ಪ-ರಾಕು ಮಾಡದೆ ಪೇಳಯ್ಯ 1 ಕಾಮಿನಿಯರೊಳು ಕಟ್ಟಾಣಿ ಪಾರ್ವತಿ ಕೇಳೆಕೌಮಾರಿ ಕಾಣೆ ಜಾಣೆಕೌಮಾರಿಯಾದರೊಳ್ಳಿತು ನಡೆ ಋಷಿಗಳಸ್ತೋಮದ ವನಕಾಗಿ 2 ಕಾಳ ಪನ್ನಗವೇಣಿ ಕಲಕೀರವಾಣಿಕೇಳೆ ಶೂಲಿ ಕಾಣೆಲೆ ಕೋಮಲೆಶೂಲಿ ನೀನಾದರೊಳ್ಳಿತು ನಡೆ ವೈದ್ಯರಜಾಲವಿದ್ದೆಡೆಗಾಗಿ3 ನೀಲಕುಂತಳೆ ನಿಗಮಾಗಮನುತೆ ಕೇಳೆನೀಲಕಂಠನು ಕಾಣೆನೀಲಕಂಠನು ನೀನಾದರೆ ತರುಗಳ ಮೇಲೆಕುಳ್ಳಿರು ಪೋಗಯ್ಯ4 ಸೋನೆ ಕೋಕಿಲಗಾನೆಸ್ಥಾಣು ನಾನೆಲೆ ಜಾಣೆನೀನಾದರೊಳ್ಳಿತು ನಡೆ ವಿಪಿನಸ್ಥಾಣದೊಳಿರು ಪೋಗಯ್ಯ5 ಎಸಳುಗಂಗಳ ಬಾಲೆ ಎಸವ ಮೋಹನಮಾಲೆಪಶುಪತಿ ಕಾಣೆ ಕೋಮಲೆಪಶುಪತಿಯಾದರೊಳ್ಳಿತು ನಡೆಗೋಗಳವಿಸರವ ಕಾವುದಕೆ 6 ಜಾತಿನಾಯಕಿ ಕೇಳೆ ನೂತನವೇತಕೆಭೂತೇಶ ಕಾಣೆ ಜಾಣೆಭೂತೇಶನಾದರೊಳ್ಳಿತು ನಡೆ ಭೂತವ್ರಾತದ ವನಕಾಗಿ7 ಮಿಂಚಿನ ಗೊಂಚಲ ಮುಂಚಿ ಪಳಂಚುವಚಂಚಲನೇತ್ರಯುಗೆಅಂಚಿತಮಾದ ವಿಪಂಚಿಯ ಸ್ವರವ ಪಳಂಚುವಿಂಚರದಬಲೆ 8 ಕರಗಿಸಿ ಕರುವಿಟ್ಟೆರದ ಚಿನ್ನದ ಬೊಂಬೆಸುರುಚಿಕರ ಸುನಿತಂಬೆಪರಿಪೂರ್ಣ ಶರದಿಂದುವದನೆ ಕುಂದರದನೆವರಸುಗುಣಾವಲಂಬೆ 9 ಕುಂಕುಮರೇಖಾಲಂಕೃತೆ ಪರತರೆಪಂಕಜಸಮಪಾಣಿಶಂಕರಿ ಪಾಪಭಯಂಕರಿ ಸರ್ವವಶಂಕರಿ ಶುಭವಾಣಿ10 ಚಂಡಮುಂಡಾಸುರಖಂಡನ ಪಂಡಿತೆಮಂಡಲತ್ರಯನಿಲಯೆಮಂಡಿತ ನವರತ್ನಖಚಿತ ಮಹೋಜ್ವಲಕುಂಡಲೆ ಮಣಿವಲಯೆ 11 ವರದಾನದಿಯ ತೀರವಾಸ ಶ್ರೀ ಕೆಳದಿಯಪುರದ ರಾಮೇಶ ಕಾಣೆಪುರದ ರಾಮೇಶನಾದರೆ ನೆರೆಬಾಯೆಂದುಕರೆದಳು ಗಿರಿಜಾತೆ12 ಗಿರಿಜಾ ಶಂಕರರ ಸಂವಾದದ ಪದಗಳಬರೆದೋದಿ ಕೇಳ್ದರಿಗೆಪರಮ ಸೌಭಾಗ್ಯ ಸಂತಾನಗಳನು ಕೊಟ್ಟುಪೊರೆವನು ರಾಮೇಶ13
--------------
ಕೆಳದಿ ವೆಂಕಣ್ಣ ಕವಿ
ಶ್ರೀ ಜಂಬುಖಂಡಿ ವಾದಿರಾಜಾಚಾರ್ಯರ ಸ್ತೋತ್ರ ಕಂಡು ಬಹಳ ಧನ್ಯನಾದೆನೋ |ಸಿರಿಮಂಗಳಾತ್ಮರ ಪ ಪಾದ ||ಪುಂಡರೀಕ ವೀಕ್ಷಣ ಮಾತ್ರ ಘ |ತುಂಡುಗೈಸಿ ಪೊರೆವರನ್ನ ಅ.ಪ. ಸುಕೃತ ಜಂಬುಖಂಡಿ ಶ್ರೀನಿ |ವಾಸಾರ್ಯಾಬ್ಧಿ ಸಂಭವ ||ಕೋವಿದಾಗ್ರಣಿಯ ಆದ |ಶ್ರೀ ವಾದಿರಾಜಾಚಾರ್ಯರನ್ನ 1 ಭೂತದಯಾ ಶೀಲ ದಮನಮೋ |ಪೇತರಾಗಿ ಪೃಥ್ವಿಯೊಳು ಶ್ರೀ |ನಾಥನೊಲುಮೆಯನ್ನು ಪಡೆದು |ಖ್ಯಾತ ಭುವನ ಪಾವನ ಮಾಳ್ಪರಾ 2 ಶ್ರೀಶ ಪ್ರಾಣೇಶ ವಿಠಲ ಹೃದಯಾ |ಕಾಶದಲ್ಲಿ ಸಿರಿಯು ಸಹಿತ ||ವಾಸವಾಗಿ ತೋರಿ ಪೊಳೆವ |ಭಾಸುರ ಕೀರ್ತಿಲಿ ಮೆರೆವರನ್ನೆ 3
--------------
ಶ್ರೀಶಪ್ರಾಣೇಶವಿಠಲರು
ಶ್ರೀ ನರಸಿಂಹ ನರಸಿಂಹ ಪಾಹಿ ಶ್ರೀಶ ಪೊರೆವರಾರಿಲ್ಲ ಬೇರೆ ಸೇವ್ಯ ಪ ಅನಿರುದ್ಧ ನಾ ನಿನ್ನ ಮರೆತೆ ಶುದ್ಧವೈಷ್ಣವತನವನೀಯೊ ಪ್ರಸಿದ್ಧಿ ಅದ್ಭುತಶಕ್ತ ವಿಭುವೆ 1 ಸಾಧ್ಯಸಾಧನವನ್ನು ಬಿಟ್ಟು ಪ್ರದ್ಯುಮ್ನ ನಾ ನಿನ್ನ ಮರೆತೆ ವಿದ್ಯುದೀಶನೆಸ್ವಾಮಿ ಸಲಹೊ ವೇದವೇದ್ಯಾನಂತ ಮಹಿಮ 2 ಸಂಚಿಂತೆ ಸಂಸ್ಮರಣೆ ತೊರೆದು ಸಂಕರ್ಷಣ ನಿನ್ನ ಮರೆತೆ ಸಂಸಾರತಾಪಗಳ 1 ತೊರೆಯೊ ಶಂಕರ ಸುರ ಶಂಭು ಸೇವ್ಯ 3 ವಸನ ಮನೆ ಹಣ ಹೆಣ್ಣು ಹುಡುಕಿ ವಾಸುದೇವನೆ ನಿನ್ನ ಮರೆತೆ ಪಸು ಶಿಶುವಾದೆನ್ನ ಪೊರೆಯೊ ಶ್ರೀಶ ಮುಕ್ತೇಶ ಸರ್ವೇಶ 4 ಅನಿಮಿತ್ತಬಂಧು ಮೂಲೇಶ ಅನ್ಯರ ನಾನರಿಯೆ ನಾರಾಯಣ ವನರುಹಾಸನ ತಾತ ಪ್ರಸನ್ನ ಶ್ರೀನಿವಾಸನೆ ಕೃಷ್ಣವ್ಯಾಸ 5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ನರಸಿಂಹ ದೇವರು ರಕ್ಷಿಸೆನ್ನನು ನಿರುತ ನರಮೃತನಾಥ ಪ ರಕ್ಷಿಸೆನ್ನ ಜಗತ್ಕುಕ್ಷಿಯೆ ಕರುಣಾಕ ಟಾಕ್ಷದಿಂದೀಕ್ಷಿಸಿ ತ್ರ್ಯಕ್ಷಾಂತರ್ಗತದೇವ ಅ.ಪ ಪತಿತಪಾವನ ಪರಶತ ಮೋದಗತ ಬೇದ ಚತುರ್ವೇದ ಪಾಲ ಶತಕ್ರತು ಕೃತಿನಾಥ || ಯತಿ ತತಿ ಮಾನಸವೃತ ತೇಜ ಭಾಸ್ಕರ ಸತತ ನಿನ್ನಯ ಪಾದವ | ಸದ್ಭಕುತಿಯಲಿ ಸ್ತುತಿಪ ದಾಸರ ಸಂಗವ | ಗರೆದು ಭವ ಮಾಧವ ನೀನೊಲಿದತಿ ಹಿತದಿಂದುಣಿಸು ನಿನ್ನ ಕಥೆ ಸುಧಾರಸವ 1 ಅರಿದರ ಗದಾಪದ್ಮಧರ ಚತುಷ್ಟಯಕರ ತಸ್ಕರ ಹರ ನರಗಾತ್ರ ಹರಿವಕ್ರ ಸುರಪಾನುಜವಟು ಪರಶುಪಾಣಿಯೆ ವಾನರ ನರಪಾಲಕವಿgಹಿÀ ತಾಂ ಬರಕಲ್ಕಿ ಶರಣ ಜನರು ಭಕ್ತಿಪರವಶದಲಿ ಕೂಗಿ ಕರೆಯಲಾಕ್ಷಣ ಓ ಎಂದು ಭರದಿ ಬಂದು ಪೊರೆವ ಪ್ರಭು ನೀ ಎಂದು ಬುಧರು ಪೇಳ್ವ ವರವಾಕ್ಯ ಮನಕೆ ತಂದು ಪ್ರಾರ್ಥಿಪೆ ನಿನ್ನ ಚರಿತೆ ಪಾಡುವ ಸುಖಗರಿಯೊ ಬಂಧು 2 ಸಿಂಧು ಶಯನ ಶಾಮ ಸುಂದರ ವಿಠಲ ಇಂದಿರಾತ್ಮಕ ತ್ರಯ ಮಂದಿರ ಕಾರ್ಪರ ಮಂದಿರ ತರುರಾಜ ಮಂದಿರ ದ್ವಿಜ ಮಧ್ಯ ಮಂದಿರಾತ್ಮಜ ಹೃ ನ್ಮಂದಿರ ಸದ್ಧಕ್ತ ಮಂದಾರ ಭೂರುಹ3
--------------
ಶಾಮಸುಂದರ ವಿಠಲ
ಶ್ರೀ ಪಾಂಡುರಂಗ ಪ್ರಾರ್ಥನೆ ಪಾದ ಅಮಿತ ನೀಲಮೇಘಶ್ಯಾಮ ವಿಠಲನ್ನ 1 ಶಿಲೆಯನುದ್ಧರಿಸಿರ್ಪ ಪಾದಕೆ ಬಲಿಯ ಮೆಚ್ಚಿದ ಪಾದಕಮಲಕೆ ನಲಿವಿನಿಂದಲಿ ನಮಿಸಿ ಪೊಗಳುವೆಕಲಿಮಲಂಗಳನೆಲ್ಲ ತರಿಯುತತಲೆಯೊಳಾಶೀರ್ವಾದವೀಯಲು ಬಿದ್ದು ಬೇಡುವೆನು 2 ಕ್ರೂರ ರಕ್ಕಸರುಪಟಳಂಗಳ ವೀರತನದಿಂ ಚಕ್ರದಡಗಿಸಿ ಮಾರಪಿತ ಭವದೂರ ಕಂಸರಲಿ ದಣಿಯುತಲಿ ಯಾರ ಗೊಡವೆ ನಮಗೇನು ಎನ್ನುತ ಶ್ರೀ ರಮಾವರ ದೇವಿ ಸಹಿತೀ ದಾರಿಯೋಳ್ಮಿಜ ಭಕ್ತಗಾಶ್ರಯನಾಗಿ ನಿಂತಿಹನೆ 3 ಕಾಯ ಧರಿಸಿದ ಭಕ್ತವರ್ಯನ ಮಾಯೆಯಿಂದಲಿ ನೋಡಿ ನಲಿಯಲು ಬಂದ ವಿಠ್ಠಲನೆತೋಯಜಾಕ್ಷಿಯಳಾದ ಲಕುಮಿಯರಾಯ ಶ್ರೀಹರಿ ನಿನಗೆ ಇಟ್ಟಿಗೆ ಯಾಯಿತೇ ಬಲು ಸಂಖ್ಯದಂಸನ ನಿಂತುಕೊಳ್ಳಿಲ್ಕೆ 4 ತಾತನಂಘ್ರಿಯ ಸೇವೆಗೆಯ್ದಿರು-ವಾತ ಬರ¯ಂದನಿಮಿಷಾಗ್ರಣಿ ತಾತ ನಿಂತೆಯ ಸೊಂಟದ ಮೇಲೆ ಕೈಯಿಟ್ಟುಮಾತೆಯಾದವರು ಹಾಗೆ ಸಂಗಡ ಪ್ರೀತಿಯಿಂದಲೆ ನಿಂತುಕೊಂಡಳು ಖ್ಯಾತಿಯಾಯಿತು ಪಾಂಡುರಂಗನ ಲೀಲೆ ಭಕ್ತರಲಿ 5 ಸತ್ತು ಹುಟ್ಟುವ ಬಾಧೆಯಿಲ್ಲದಸತ್ಯವಂತನೆ ಕೊಟ್ಟ ಇಟ್ಟಿಗೆ ಮೆತ್ತಗಿಹುದೆÉೀನಷ್ಟು ದಿವಸವು ನಿಂತುಕೊಂಡಿರುವೆಮತ್ತೆ ಪೇಳುವುದೇನು ದೇವನೆ ಸುತ್ತು ಮುತ್ತಿನ ಜಗಕೆ ಆಸರವಿತ್ತೆ ನಿನಗಾಸರವು ಯಾವುದು ಭಕ್ತವತ್ಸಲನೆ 6 ಹೇ ದಯಾನಿಧೆ ಯಾದವಾಗ್ರಣಿ ಮಂದವಾಖ್ಯನೆ ಭೀಮತಡೆಯೊಳು ಆದರಮ್ಮಿಗೆ ತೋರಿ ಕರೆದನೆ ನಿಮ್ಮನೀರ್ವರನು ಬಾಧೆಬಡುತೀ ನಿಂತ ಕಾಲಿಗೆಹಾದಿನೋಡುವವೆಷ್ಟೊ ಬೆಳೆಯುಚೋದ್ಯವಲ್ಲವೆ ನಿನ್ನ ಲೀಲೆಯು ದಿವ್ಯವಿಗ್ರಹನೇ 7 ಆದಿಮೂರುತಿ ನಿನ್ನ ಹುಡುಕಲುವೇದ ಶಾಸ್ತ್ರ ಪುರಾಣವೆಂಬವು ಹಾದಿ ಕಾಣದೆ ನಿಂತವಲ್ಲೈ ನೀನೆ ಬಂದೀಗಮೇದಿನೀ ತಳದಲ್ಲಿ ಭಕ್ತರಹಾದಿ ನೋಡುತ ನಿಂತುಕೊಂಡಿರೆಹೋದವೆಷ್ಟೋ ದಿವಸ ಶ್ರೀಹರಿ ನಿನ್ನ ಲೀಲೆಯಲಿ 8 ನೀಲಮೇಘ ಶ್ಯಾಮ ಕೀರ್ತಿಯ ಜಾಲವನ್ನುರೆ ಭಜನೆ ಮಾಡುತತಾಳಹಾಕುತ ಸಂತಮಂಡಳಿ ಕುಣಿದು ಬರುತಿರಲುಧೂಳವೇಳುವದನ್ನು ಕಣ್ಣಲಿವೇಳೆಗಳೆಯದೆ ನೋಡಿ ನಲಿವುದುಲೀಲೆಯಲ್ಲವೆ ಪಾಂಡುರಂಗನೆ ವಿಶ್ವಚಾಲಕನೆ9 ಸರಸಿಜಾಕ್ಷನೆ ಕರಗಳೆರಡನುಇರಿಸಿ ಟೊಂಕದೊಳೇನು ನೋಡುವಿಪರಮ ಭಕುತನ ತಂದೆ ತಾಯ್ಗಳ ಸೇವೆ ಮಾಡುವುದುದೊರೆಯಲಾರದೆ ಕಲಿಯ ಕಾಲದೆ ದುರಿತ ನೀಗಿಸಿಕೊಂಡನಲ್ಲವೆ ಆರುಗಿಯಾದರು ನೋಡಲೊಲ್ಲನು ಭಕ್ತಿಬಲದಿಂದ 10 ಚಿನ್ನದರಸನೆÉ ನಿನ್ನ ಕೈಯನುಘನ್ನ ಟೊಂಕದ ಮೇಲೆ ಇರಿಸುತನನ್ನಿಯಿಂ ಭರವಸೆಯ ಕೊಡುವಿಯೊ ಭವದ ಸಾಗರವುತನ್ನ ನಂಬುತ ದಾಟಿ ಹೋಗುವಸನ್ನುತಾತ್ಮರಿಗಿಷ್ಟಯೆಂಬುದ ಚೆನ್ನವಾಗಿಯೆ ತಿಳಿಸಲೋಸುಗ ಹೀಗೆ ನಿಂತಿಹೆಯಾ 11 ನಾನು ನಿನ್ನನು ಕರೆಯದಿದ್ದರು ನೀನೆ ಬಂದಿಲ್ಲೇಕೆ ನಿಂತೆಯೊ ದೀನಪಾಲಕನೆಂಬ ಬಿರುದನೆ ಕಾಯಲೋಸುಗವೇಶಾನೆ ಸಂಪದವಿದ್ದ ದ್ವಾರಕೆ ಯಾನೆ ಕುದುರೆಗಳಿಂದ ಶೋಭಿಪ ದಾನವಾಂತಕ ಕೃಷ್ಣರಾಯನೆ ಈಗ ಪಂಡರದೀ 12 ಕರ್ಮ ಮುಗಿದಿಹುದೇಮಿಕ್ಕಿದವರೇನನ್ಯಯ ಪುತ್ರರೆ ತಕ್ಕ ಯೋಚನೆಗೆಯ್ದು ನಂತರತೆಕ್ಕೆಯೋಳ್ಸಲಹುವದು ಲೇಸೈ ಭಕ್ತವತ್ಸಲನೆ 13 ಹಾಲು ಮೊಸರಾ ಬೆಣ್ಣೆಯುಂಡೆಯ |ಲೀಲೆಯಿಂದಲೆ ಕದ್ದ ಕಳ್ಳನೆಚ್ಯಾಳಿಬಲಿತಾ ಬಳಿಕ ಬಿಡುವೆಯಾ ಭಕ್ತರಂತಹರಗಾಳಿ ಸೋಂಕಿದ ನೆವ ಮಾತ್ರಕೆಜಾಲಬೀಸುತ ಕದ್ದು ಕೊಳ್ಳುವಿಹೇಳಲೇನೈ ಹಿಂದಿನೆಷ್ಟೊ ಜನ್ಮದಘನಿದನಾ 14 ನಿನ್ನನೇ ನೆರೆ ನಂಬಿ ಭಜಿಸುವಪುಣ್ಯವಂತರ ಹೃದಯಮಂದಿರ-ವನ್ನೆಮಾಡಿದ ಪಾಂಡುರಂಗನೆ ನೀನು ಜಗದೊಳಗೆಘನ್ನ ಪಾಪದಿ ಬಳಲುತಿರುವವ-ರನ್ನುಸಲುಹಲು ಬಂದೆಯೇನೈಸನ್ನುತಾಂಗನೆ ಭಜನಿಗೊಲೆಯುವ ದಿವ್ಯ ವಿಠ್ಠಲನೆ 15 ವೇದಗಳ್ಳನ ಸದೆದು ಬ್ರಹ್ಮಗೆ ಮೋದದಿಂದಲಿ ಕೊಟ್ಟ ಮತ್ಸ್ಯನೆಆದಿಕೂರ್ಮನೆಯಾಗಿ ಮಂದರನೆಗಹಿ ನಿಂದವನೇಬಾಧೆÉ ಬಿಡಿಸುವ ಕ್ರೂರ ರಕ್ಕಸಭೇದಿಯಾಗುತ ಧರಣಿ ಮಂಡಲಸೇದಿ ತಂದನ ನೀನೆಯಲ್ಲದೆ ದಿವ್ಯ ವಿಠ್ಠಲನೆ 16 ಒಂದೆ ಮನದೊಳು ನೆನೆದ ಕುವರಗೆಬಂದೆ ಕಂಬದೆ ನಾರಸಿಂಹನೆನಿಂದ ಮಾತ್ರಕೆ ಮೂರು ಪಾದದ ಭೂಮಿದಾನದಲೀತಂದು ಪಾತಾಳದಲಿ ಬಲಿಯನುಚಂದದಿಂದಲಿ ಇಟ್ಟ ವಾಮನತಂದೆಯಾಡಿದ ನುಡಿಯ ನಡಿಸಿದ ಭಾರ್ಗವತ್ತೀ 17 ಸೀತೆಗೋಸುಗ ರಾಮನಾಗುತಖ್ಯಾತಿಗೋಸುಗ ಕೃಷ್ಣನಾದೆಯಲೇಪ್ರೀತಿಗೋಸುಗ ಬಾಧ್ಯನಾಗುತ ಜಗವ ಪಾಲಿಸಿದ್ಯಾಜಾತಿಯಶ್ವವನೇರಿ ರಿಪುಗಳÁತ ಮಾಡಿದ ಕಲ್ಕ್ಯರೂಪನೇಯಾತಕೀಪರಿ ಚಂದ್ರಭಾಗದಿ ನಿಂತೆ ಬೆರಗಾಗಿ 18 ನಿನ್ನ ನಾಮಗಳಮಿತವಿದ್ದರುನನ್ನ ನಾಲಿಗೆಗಷ್ಟು ಬರುವವೆ ?ಸನ್ನುತಾಂಗನೆ ಪಾಂಡುರಂಗನೆ ದಿವ್ಯ ವಿಠ್ಠಲನೆನ್ನುತಿಷ್ಟೇ ನಾಮಗರೆವೆನುಚಿನ್ನದರಸನೆ ಭಕ್ತಸಂಘದೊಳೆನ್ನ ಕೂಡಿಸಿ ಕಾಯಬೇಕೈ ಪರಮ ಭಗವಂತಾ 19 ಕಾಲಕಾಲಕೆ ನೇಮನಿತ್ಯಗ-ಳಾಲಯಂಗಳ ಮಧ್ಯದೆಸಗದೆಜಾಲಿಯಂತೇಗೆಲ್ಲ ಜನರಿಗೆ ಬೆಳೆದೆ ಬಾಧಿಸುತಬಾಲ ಯೌವನ ವಾರ್ಧಿಕತ್ವದೆಕಾಲಪೋಯಿತು ನಿನ್ನ ನೆನೆಯದೇ ಹೇಳಲೇನೈ ಕಾಲನೆಳೆಯುವನು 20 ಕಂತು ಜನಕನೆ ನಿನ್ನ ನಾಮದಮಂತ್ರವೆನಗಿನ್ನೆಲ್ಲಿ ಬರುವುದು ಶುದ್ಧ ಪಶುವಾದೇಅಂತರಾತ್ಮನೆ ನೀನು ಈ ತೆರನಿಂತುಕೊಂಡರೆ ನನ್ನ ಗತಿಯೇ-ನೆಂತ ಹೇಳಲಿ ಸಂತೆ ತೀರಿತು ಸಲಹೊ ವಿಠ್ಠಲನೇ 21 ಕಾಲ ಬಂದಿದೆಸದ್ಯಕಾರೂ ಕಾವರಿಲ್ಲವುದ್ಧಪಾಶದಿ ಬಿಡಿಸಬಾರೈ ದೀನ ಬಾಂಧವನೇ 22 ಕಾಯಕಿರುವದ ಬಂಧು ಬಳಗವು ಹೇಯ ದುಡ್ಡನೆ ಶಳಯಲೋಸುಗಜೀಯ ನಿನ್ನಂತಾರು ಇಲ್ಲವು ಜೀವಕನು ಸರಿಸೀತಾಯ ತಂದೆಯ ಜಗಕೆ ಲಕ್ಷ್ಮೀರಾಯ ನೀನೇ ಅಲ್ಲವೇನೈ ಬಾಯ ಬಿಡುವೆ ಅಜ್ಞಬಾಲರ ಕಾಯೊ ವಿಠ್ಠಲನೇ 23 ಅಣ್ಣನಾಗುತ ದ್ರುಪದ ಸುತೆಗಾಬಣ್ಣದಂಚಿನ ಸೀರೆ ಉಡಿಸಿದೆನಿನ್ನ ಬಾಲ್ಯದ ಸುಖ ಸುಧಾಮಗೆ ಕೊಟ್ಟಿಯ್ಯೆಸಿರಿಯಹಣ್ಣಿನಾಶೆಗೆ ಶಬರಿ....ಗೊಲಿದೈಬೆಣ್ಣೆಯಾಶೆಗೆ ಗೋಪಿಗೊಲಿದೈಮಣ್ಣಿನಾಶೆಗೆ ಬಲಿಯ ಬಾಗಿಲ ಕಾಯ್ದ ವಿಠ್ಠಲನೇ 24 ನಿನ್ನ ನೆಂದು ಕಾಣದಿದ್ದವಕುನ್ನಿ ಪಾಮರನಣ್ಣನೆಂಬೆನೆಹಣ್ಣು ಹಂಪಲವೆನಗೆ ಸಾಲವು ನಿನಗೆ ಕೊಡಬಹುದೇನನ್ನ ತೆರದಾಚಾರ ಹೀನರೆಇನ್ನು ಗೆಳೆಯರು ನನಗೆ ಆದರುಮುನ್ನ ಮಾಡಿದ ಪಾಪ ಬಹಳಿದೆ ಕೊಳ್ಳೊ ನೀನದನೂ 25 ಹಿರಿಯರೆಸಗಿದ ಪುಣ್ಯದಿಂದಲೆದೊರಕಿತಲ್ಲವೆ ನಿನ್ನ ನೆನೆವುದುಪರಮ ಸುಂದರ ಪಾಂಡುರಂಗನೆ ಬಾರೊ ಮಾನಸದೀತರಳರಾಟದಿ ತನ್ನ ತಾಯಿಯಮರೆತ ತೆರದಿಂ ಬಿಟ್ಟು ಕೆಟ್ಟೆನುಕರಗದೇನೈ ನನ್ನ ಮನವದು ನಿನ್ನ ದೆಶೆಯಿಂದ 26 ಕೂಸು ಆಟದೊಳಿದ್ದರೇನೈಹೇಸಿ ಕೆಲಸಹೊಳಿದ್ದರೇನೈದೋಷಗಳೆಯುತ ಪೊರೆವಳಲ್ಲಿದೆ ಪಡೆದ ತಾಯವ್ವಶ್ರೀಶ ವಿಠ್ಠಲ ಪಾಂಡುರಂಗನೆಘಾಸಿಗೊಳಿಸುವ ಮುನ್ನಯವನರುಪಾಶ ಬಿಡಿಸೈ ಭಕ್ತವತ್ಸಲ ದಿವ್ಯ ವಿಠ್ಠಲನೇ 27 ಕಾಮನಯ್ಯ ಸುಧಾಮ ಸಖ ಶ್ರೀರಾಮ ವಿಠ್ಠಲ ದಿವ್ಯ ರೂಪನೆಪ್ರೇಮವೆನ್ನಲ್ಲಿಟ್ಟು ಸಲಹೊ ಪುಣ್ಯವರ್ಜಿತನೆತಾಮಸತ್ವದ ಕೆಲಸವೆಲ್ಲವನೇಮದಿಂದಲೆ ಮಾಡಿ ನಾ ನಿ-ಸ್ಸೀಮನಾಗಿಹೆ ಕಾಯೆಯೊ ವಿಶ್ವವ್ಯಾಪಿ ವಿಠ್ಠಲನೇ 28 ನಾನು ಹೇಳುವುದೇನು ದೇವನೆನೀನೆ ತಿಳಕೊಂಡಿರ್ಪೆ ಎನ್ನಯಮಾನಕುಚಿತಪ್ಪಂತೆ ಸತ್ಫಲ ಕೊಡು ದಯಾಂಬುಧಿಯೇನೀನು ನಿಂvಡೆÉಗೆನ್ನ ಜಗ್ಗುತಸಾನುರಾಗದೆ ಪೊರೆಯೊ ವಿಠ್ಠಲನೀನೆಯಾದರು ಬಾರೊ ಭಕ್ತರ ಹೃದಯ ಮಂದಿರಕೆ 29 ಮಂಗಳಂ ಮಧುಕೈಟಭಾರಿಗೆಮಂಗಳಂ ಶ್ರೀವತ್ಸಧಾರಿಗೆಮಂಗಳಂ ಬ್ರಹ್ಮಾಂಡ ಪಾಲಕ ಪಾಂಡುರಂಗನಿಗೆಮಂಗಳಂ ಶ್ರೀ ಲಕುಮಿದೇವಿಗೆಮಂಗಳಂ ಭೀಮಾತಟಾಕಿಗೆಮಂಗಳಂ ಸದ್ಭಕ್ತ ಮಂಡಳಿಗೆಗಳ ಭೂತಳಕೆ 30
--------------
ಪಾಂಡುರಂಗ
ಶ್ರೀ ಮನೋಹರ ಹರಿಯಾಪಾರ ವ್ಯಾಪಾರ ಪ ಶ್ರೀ ಮಹಾಲಕುಮಿ ಮನಕೆ ಗೋಚರಿಸಿದದರಪಾರ ಅ.ಪ. ಕುಂಭಿಣಿ ಪರಮಾಣುಗಳನು ಅಂಬುಕಣಗಳನ್ನು ಗಣನೆ ಗಿಂಬುಗೈದು ತಿಳಿಯಬಹುದು ಅಂಬುಜಾಕ್ಷನ ಗುಣವಗಣಿತ 1 ನಿಕರ ತೋಡಿ ಪುಡುಕಿ ನೀರಜಾಕ್ಷನ ನೆಲೆಯ ಕಾಣದು ಜಗದ ಜನರ ಭಾವನೆಗಿನ್ನು ಸಿಗುವನೆ ಅಚಿಂತ್ಯಮಹಿಮ 2 ಭಜಕ ಜನರ ಮನಕೆ ತನ್ನ ನಿಜ ಕರ್ತೃತ್ವವನು ತೋರಿ ನಿಜ ಸುಜ್ಞಾನವಿತ್ತು ಪೊರೆವ ವಿಜಯಸಾರಥಿ ಕರಿಗಿರೀಶ 3
--------------
ವರಾವಾಣಿರಾಮರಾಯದಾಸರು
ಶ್ರೀ ರಾಘವೇಂದ್ರ ಗುರುವೇ ಪರಮ ದಯಾಳು ಪ್ರಭುವೇ ಪ ನಿರುತಾದಿ ಸೇವಿಸುವರಾ ಕಾಮಿತ ಕಲ್ಪತರುವೇಅ.ಪ ತುಂಗಾ ತೀರದೊಳ್ ಬಂದೂ ಮಂಗಾಳ ಮಹಿಮರು ನಿಂದೂ ಮಂಗಳಾ ಮೂರುತಿ ಶ್ರೀ ರಾಮಚಂದ್ರನ್ನ ಪೂಜೀಪರಿಂದೂ 1 ಕಾವೀಶಾಠಿಯನುಟ್ಟೂ ಗಂಧಾಕ್ಷತೆಗಳಿಟ್ಟೂ | ತಿರ್ದಿ ಹಚ್ಚಿರುವಾನಾಮಾ ಫಣಿಯಲ್ಲಿ ಹೊಳೆÉಯುತಾಲೀ 2 ವೀಣಾವಾದನದಿಂದಾ ಗಾನವ ಮಾಡುತಲೀ ವೇಣುಗೋಪಾಲ ಕೃಷ್ಣನ್ನ ಕುಣಿಸಿ ಕೊಂಡಾಡುತಿಹರು3 ಭಕ್ತಿಯಿಂದಲಿಸ್ತುತಿಪ ಜನರಾ ಆಪತ್ತುಗಳೆಲ್ಲವ ಕಳೆವಾ ಸಂಪತ್ತು ಸೌಭಾಗ್ಯವೀವಾ ಶರಣೇಂದವರ ಪೊರೆವಾ 4 ಸರಿಯಾರು ನಿಮಗೆ ದೇವಾ ಈ ಧರುಣಿಯೊಳರಸೆ ಕಾವಾ ದೊರಗಳ ನಾ ಕಾಣೆನಯ್ಯ ಶ್ರೀ ರಾಘವೇಂದ್ರ ಜೀಯಾ 5
--------------
ರಾಧಾಬಾಯಿ
ಶ್ರೀ ವಾಯುದೇವರು ಕಾಯೊ ಹನುಮರಾಯ ನಿನ್ನ ಕಾಯ ಮನದಿ ನಮೋ ಪ ಭಾರತೀಶ ಕೃಪಾಸಮುದ್ರನೆ ವಾರಿಜಜಾಂಡದಿ ಸರ್ವಜೀವರೊಳಿದ್ದು ಮೂರೇಳು ಸಾಸಿರ ನೂರಾರು ಜಪಗಳ ಇರುಳು ಹಗಲು ನರಹರಿಗೆ ಅರ್ಪಿಪ ಸುರ 1 ಮಾತರಿಶ್ವಪ್ರಖ್ಯಾತ ಮಹಿಮನೆ ವಾತ ಪ್ರಭಂಜನ ಸತತ ಎನ್ನನು ಅತಿ ಹಿತದಿ ನೀ ಸಲಹುವೆ ಪ್ರತತ ಶ್ರೀ ನೃಹರಿಯ ಪ್ರಥಮಾಂಗನೆ ದಣಿ 2 ಸತ್ಪಾತ್ರ ಮಾಡೆನ್ನ ಸೂತ್ರಸುಖ ಸಿತಗಾತ್ರ ಪವಿತ್ರನೆ ಮಾತ್ರಾಕರಣನಿಯಂತೃ ಮಹಂತನೆ ಚಿತ್ರ ಪುರುಷ ಮಾಕಳತ್ರನ ತೋರಿಸೊ 3 ದೇವಜನನುತ ಭಾವಿ ಬ್ರಹ್ಮನೆ ಕಾವ ಕರುಣಿಯೆ ಪವಮಾನ ನಮೋ ನಮೋ ಭಾವುಕರೊಡೆಯ ಶ್ರೀದೇವಿ ಶಾಂತಿಯ ಪತಿ ದೇವವರೇಣ್ಯನನಿರುದ್ಧನ ತೋರಿಸೊ 4 ಶುದ್ಧ P್ಪರುಣಾಬ್ಧಿ ನಮೋ ನಮೋ ಶುದ್ಧ ಭಕ್ತ್ಯಾದಿ ಸಂಪತ್ತು ಎನಗಿತ್ತು ಉದ್ಧರಿಸೊ ಎನ್ನ ಶ್ರದ್ಧೇಶ ಮುಖ್ಯಪ್ರಾಣ ಪದ್ಮೆ ಕೃತೀಶ ಪ್ರದ್ಯುಮ್ನಗೆ ಪ್ರಿಯತಮ 5 ಜ್ಞಾನಬಲರೂಪ ಹನುಮ ನಮೋ ನಮೋ ಜ್ಞಾನಸುಖಮಯ ಜಾನಕೀಶನ ದೂತ ಇನನ ಸುತನಿಗೆ ವಿಭೀಷಣನಿಗೆ ರಾಮ ತಾನೂ ಒಲಿದ ನೀನೊಲಿದ ಕಾರಣದಿ 6 ಕಾಂತ ಕೃಷ್ಣನೇಕಾಂತ ಭಕ್ತಾಗ್ರಣಿ ಅಂತಕ ಸುಜನರ ಸಂತತ ಪೊರೆವ ಧನಂಜಯಗೊಲಿದನೆ 7 ಪಂಚಭೇದ ಪ್ರಪಂಚ ಸತ್ಯವಿ ರಿಂಚಿಪಿತನೆ ಸ್ವತಂತ್ರ ಸರ್ವೋತ್ತಮ ಚಿಂತಿಸೆ ಭಕ್ತಿಯಿಂ ಮಿಂಚುಪೊಲ್ ತೋರಿ ನಿ ರಂತರ ನಿಜಸುಖವೀವನೆಂದೆಯೊ ಮಧ್ವ 8 ಶ್ರೀಶ ಚಿನ್ಮಯ ದೋಷದೂರನು ವ್ಯಾಸ ಸುಖಮಯ ಪ್ರಸನ್ನ ಶ್ರೀನಿವಾಸ ಭಾಸಿಪ ನಿನ್ನಯ ಹೃತ್ಸರಸಿಜದಲಿ ದಾಶರಥಿಯ ಮುಖ್ಯ ದಾಸವರ್ಯನೆ ನಮೋ 9
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸತ್ಯಬೋಧರು ನೋಡಿದೇ | ಗುರುವರರ ನಾ ನೋಡಿದೇ ಪ ಪಾದ | ಈಡಾಡಿ ಶಿರವನುಬೇಡೆ ಭಕ್ತಿ ಜ್ಞಾನ ನೀಡುತ ಪೊರೆವರ ಅ.ಪ. ಪಾದ ತಾಮರಸವ ಧರಿಸಿಭೂಮಿಯೊಳಗೆ ಚರಿಸಿ | ಮೆರೆಸಿದ ಗುರುಗಳ 1 ಶೇಷರೂಪಿಲಿ ಬಂದ ಹರಿಯಾ | ಗುಪ್ತಭಾಷೆಯ ಕೇಳುತ್ತ ಗೃಹವಾ | ಪೊಕ್ಕುಮೀಸಲೆಂದೆನಿಸಿದ ಧನವಾ | ಲೇಸಾಯಾಸಿಲ್ಲದೆ ತೆಗಿಸ್ಯದನಾ | ಆಹಏಸೇಸೋ ಜನುಮದಿ | ಪೋಷಿಸಿರೂವದನಶ್ರೀ ಶಗರ್ಪೀಸುತಲಿ ತೋಷವ ಪಡಿಸಿದರ 2 ವಿನುತ ಗುರುಗೊವಿಂದ ವಿಠಲನಪಾದ ಪಿಡಿದು ಸವಣೂರಲಿ ಮೆರೆವರ3
--------------
ಗುರುಗೋವಿಂದವಿಠಲರು