ಒಟ್ಟು 1764 ಕಡೆಗಳಲ್ಲಿ , 109 ದಾಸರು , 1378 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಯದಿ ವರಗಳ ನೀಡು ಮಮಸ್ವಾಮಿ ಸರ್ವಂತರ್ಯಾಮಿ ನಯದಿ ಬೇಡುವೆ ಭಕುತಜನ ಪ್ರೇಮಿ ಮಮ ಸರ್ವಸ್ವಾಮಿ ಪ ಸವಿನಯದಿ ಪ್ರಾರ್ಥಿಸುತ ಬೇಡುವೆ ಸುಮನರಸರ ಪ್ರಿಯ ಚಿತ್ಸುಖಪ್ರದ ಅಮಿತ ವಿಕ್ರಮ ಅಪ್ರಮೇಯನೆ ರಮೆಯರಮಣನೆ ರಕ್ಷಿಸೆನ್ನನು ಅ.ಪ ತೀರ್ಥ ಕ್ಷೇತ್ರಗಳನು ಚರಿಸುತಲೆ ಶ್ರೀ ಹರಿಯಗುಣ ಸ- ತ್ಪಾತ್ರರಿಂದನವರತ ತಿಳಿಯುತಲೆ ಶ್ರೋತ್ರಿಯನ ಸಂಗದೊಳು ನಲಿಯುತ್ತಾ ಮನನಲಿದು ನಿನ್ನಯ ಕೀರ್ತನೆಗಳನುದಿÀನದಿ ಕೀರ್ತಿಸುತ ಪಾರ್ಥಸಾರಥೆ ನಿನ್ನ ಪೊಗಳುತ ರಾತ್ರಿ ಹಗಲೆಡಬಿಡದೆ ಸ್ತುತಿಪರ ಗಾತ್ರಮರೆಯುತಲವರ ಸೇವಿಪ ಸಾರ್ಥಕದ ಸೇವೆಯನೆ ನೀಡೈ 1 ಗೋಕುಲಾಪತಿ ಹರಿಯೆ ಗೋವಿಂದ ನೀ ಕಡಿಯೋ ಬಂಧ ನೂಕಿ ಉದ್ಧರಿಸೆನ್ನ ಭವದಿಂದ ಕಾಕುಮತಿಗಳ ಬಿಡಿಸು ದಯದಿಂದ ನೀ ಪೊರೆಯದಿರಲು ಯಾತಕೀ ನರದೇಹ ಮುಕುಂದ ಮಾತುಮಾತಿಗೆ ನಿನ್ನ ಸ್ಮರಿಸದ ಮಾತುಗಳ ಫಲವೇನು ಕೇಶವ ಮದನ ಜನಕ ಮಾಧವ ಮುರಮರ್ದನ ಹರೇ 2 ಕರುಣಿಗಳೊಳು ದೇವನಿನಗೆಣೆಯೆ ದಯ ಮಾಡು ಹರಿಯೆ ಕರಿಯ ಪೊರೆದವನಲ್ಲೆ ನರಹರಿಯೆ ಕರೆಕರೆಯ ಸಂಸಾರ ಇದು ಖರೆಯ ಇದರೊಳಗೆ ಬಳಲಿದೆ ಕರೆದು ರಕ್ಷಿಪುದೆಂದು ಮೊರೆ ಇಡುವೆ ಕಮಲ ಮುಖಿ ಶ್ರೀ ಭೂಮಿ ಸಹಿತದಿ ಕಮಲನಾಭ ವಿಠ್ಠಲನೆ ಭಕುತರÀ ಮಮತೆಯಲಿ ಕೈ ಪಿಡಿದು ಪೊರೆಯುವ ಮನ್ಮಥನ ಪಿತ ಮನ್ನಿಸುತ ಪೊರೆ 3
--------------
ನಿಡಗುರುಕಿ ಜೀವೂಬಾಯಿ
ದಯದೊಲವಿರಲು ಪ ತಮದಳುಕಿನ ಬಳಲಿಕೆ ಯೋಗ ಭ್ರಮಿಸುವುದರ ಕಳವಳಹಂಗಾ 1 ಹಿಮ ನಿಲುವುದೇ ಅನಲನಿದಿರಿನಲಿ | ಕುಮತಿರುವದೆ ಸಜ್ಜನ ನೆರಲಿ 2 ಕರ್ಪುರ ದೀವಿಗೆ ಬೆರೆದಂತೆ | ಅಪ್ಪುವಿನೊಳು ಲವಣದಂತೆ | ಇಪ್ಪ ಪವನ ಪರಿಮಳದಂತೆ | ನಮ್ಮಪ್ಪ ಮಹಿಪತಿಯನ್ನೊಳಗಿರುತ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಯವಿರಲಿ ದಯವಿರಲಿ ದಾಮೋದರ ಪ. ಸಯವಾಗಿ ಬಿಡದೆನ್ನ ಸಾಕುವ ಶ್ರೀಕೃಷ್ಣಅ.ಪ. ಹೋಗಿ ಬರುವೆನಯ್ಯ ಹೋದಹಾಂಗೆಲ್ಲಸಾಗುವವನಲ್ಲ ನಾ ನಿನ್ನ ಬಿಟ್ಟುತೂಗಿ ತೊಟ್ಟಿಲು ಕೊನೆಗೆ ಸ್ಥಳದಲ್ಲೆ ನಿಲ್ಲುವುದುಹ್ಯಾಗೆ ನೀ ನಡೆದಂತೆ ಹಾಗೆ ನಾ ನಡಕೊಂಬೆ 1 ಇದ್ದಲ್ಲೆ ಎನ್ನನುದ್ಧರಿಪ ಶಕ್ತಿ ಅ-ಸಾಧ್ಯ ನಿನಗೆಂದು ನಾ ಬಂದವನಲ್ಲನದ್ಯಾದಿ ಕ್ಷೇತ್ರಮೂರ್ತಿಗಳಲ್ಲಿ ನಿಜ ಜ್ಞಾನ-ವೃದ್ಧಜನರ ಹುಡುಕಿ ನಿನ್ನ ತಿಳಿಯಲು ಬಂದೆ 2 ಸತತ ಇದ್ದಲ್ಲೆ ಎನ್ನ ಸಲಹೊ ಅದರೊಳಗಾಗಿಅತಿಶಯವು ಉಂಟು ವಿಭೂತಿಯಲ್ಲಿಗತಿಯು ಸಾಧನಕೆ ಅಭಿವ್ಯಕ್ತ ಸಂದರ್ಶನದಿಸ್ಮøತಿಗೆ ವಿಶೇಷ ಮಾರುತಿರಮಣ ನಿನ್ನ 3 ನೋಡಿದೆನೆ ನಾ ನಿನ್ನ ನೋಡದೆ ಎಂದೆಂದುಪಾಡಿದೆನೆ ಆರಾರು ಪಾಡದೊಂದುಮಾಡಿದೆನೆ ಅರ್ಚನೆಯ ಮೀಸಲಾದುದು ಒಂದುಮೂಢಮತಿಯಲಿ ಮುಂದೆ ನಿಂದೆ ಕೈಮುಗಿದು 4 ಬಂದೆನೊ ನಾನಿಲ್ಲಿ ಬಹುಜನ್ಮದ ಸುಕೃತ-ದಿಂದ ನಿನ್ನ ಬಳಿಗೆ ಇಂದಿರೇಶಒಂದು ಮಾತ್ರವು ಇಟ್ಟು ಸಕಲವು ಅರ್ಪಿಸಿದೆಬಂಧನ ಕಡಿವ ಭಕುತಿಯು ಜ್ಞಾನ ನೀಡುವುದು 5 ಬಿನ್ನಪವ ಕೇಳು ಸ್ವಾಮಿ ಎನ್ನನ್ನೊಬ್ಬನ್ನೆ ಅಲ್ಲಎನ್ನ ಹೊಂದಿ ನಡೆವ ವೈಷ್ಣವರನಇನ್ನವರಿಗೆ ಬಾಹೊ ದುಷ್ಕರ್ಮಗಳ ಕೆಡಿಸಿಘನಗತಿಗೈದಿಸುವ ಭಕುತಿ ಕೊಡು ಕರುಣದಿ 6 ರಾಜರಾಜೇಶ್ವರ ರಾಜೀವದಳನಯನಮೂಜಗದೊಡೆಯ ಮುಕುಂದಾನಂದಈ ಜೀವಕೀದೇಹ ಬಂದದ್ದಕ್ಕು ಎನಗತಿ ನಿ-ವ್ರ್ಯಾಜದಿ ಸುರಗಂಗೆ ಸ್ನಾನವನು ಮಾಡಿಸೊ 7 ಎನಗೆ ಆವುದು ಒಲ್ಲೆ ಎಲ್ಲೆಲ್ಲಿ ಪೋದರುಕ್ಷಣ ಬಿಡದೆ ನಿನ್ನ ನೋಳ್ಪ ಜ್ಞಾನವ ಕೊಡೊಚಿನುಮಯಮೂರುತಿ ಗೋಪಾಲವಿಠಲಘನಕರುಣಿ ಮಧ್ವಮುನಿಮನಮಂದಿರನಿವಾಸ8
--------------
ಗೋಪಾಲದಾಸರು
ದಶಾವತಾರದ ನಿಂದಾಸ್ತುತಿಗಳು ವರನ ಚಂದಮದೇನ ವರ್ಣಿಸುವೆನೆಲೆ ಸಖಿಯೆ ಪರಮಸುಂದರಗಾತ್ರನಿರವ ಕೇಳೆ ಬಿಚ್ಚಿರುವ ಕಣ್ಗಳಂ ಮುಚ್ಚಲಾರದ ವರಗೆ ಪಚ್ಚಕರ್ಪೂರದಾ ಕಪ್ಪಿದೇಕೆ ಕೊಳೆತುನಾರುತಲಿಹಗೆ ಲಲಿತವಸ್ತ್ರಗಳೇಕೆ ಹೊಲಸು ಮಯ್ಯಿಗೆ ಗಂಧ ಬಳಿಯಲೇಕೆ ಜಲಧಿಯಲಿ ವಾಸಿಪಗೆ ಪÀಲವಿಧದ ತೊಡವುಗಳೆ ನೆಲೆಯಿಲ್ಲದಾತಂಗೆ ಲಲನೆ ಸುತರೆ ಅಜ್ಞಾತಪಾದಕ್ಕೆ ಗೆಜೆ ಗೊಲಸೆ ವಿಜ್ಞಾನಮಯಗೆ ವಿವಿಧ ಸಿಂಗರವೆ ಯಜ್ಞಭೋಕ್ತಗೆ ಮತ್ತೆ ಭಕ್ಷ್ಯದೆಡೆಯೆ
--------------
ನಂಜನಗೂಡು ತಿರುಮಲಾಂಬಾ
ದಾತ ಅಂಬುಜಾಸನ ತಾತ ಕುಂಭಿಣಿಯೊಳು ಪುಟ್ಟಿ ಜನನಿಯ ಮೊಲೆ ಪಾಲು ಉಂಬೋದು ಬಿಡಿಸೊ ಜನನವ ಕೆಡಿಸೊ ಪ ರಸಿಕೆ ಮುಹಕದಲಿ ನಿಶಿದಿನದಲಿ ಹೊರಳಿ ಅಸುರುಸುರೆನುತಲಿ ಹಸಗೇಡಿಯಾದೆನೊ ಪರಿ ನೊಂದು 1 ಹಲವು ಲಂಪಟದೊಳು ಹಲುಬಿ ಹಕ್ಕಲನಾದೆ ಬಲೆಯೊಳಗಿದ್ದ ಎರಳೆಯಂತೆ ಮಿಡುಕುತ ಮಲಮೂತ್ರದೊಳು ಬಳಲಿದೆ ಕೇಳೊ 2 ಎಳ್ಳನಿತು ಸತ್ಕರ್ಮವುಳ್ಳದ್ದು ಚರಿಸಿದೆ ಬಲಿಷ್ಠ ನಾನೆಂದು ಬಲು ದುರ್ಮತಿಯಿಂದ ಎಲ್ಲರ ಜರಿದೆ ಧರ್ಮವ ಮರೆದೆ 3 ಚಾರುವಾಕರಗೂಡಿ ಮೂರೆ ವಿಕಾರದಲ್ಲಿ ನೀರೇರ ಒಡಗೂಡಿ ನೀತಿ ನಿರ್ಣಯ ತೊರೆದು ಬಟ್ಟೆ 4 ಎಲ್ಲಿರಲು ನಿನ್ನವನೋ ಅಲ್ಲವೆಂದೆನಿಸದೆ ಬಲ್ಲಿದರೊಡಿಯ ವಿಜಯವಿಠ್ಠಲ ನಿ ನ್ನಲ್ಲಿ ಸೇರಿಸಿ ಎನ್ನ ಪೊರೆಯೋ ಪ್ರಸನ್ನಾ 5
--------------
ವಿಜಯದಾಸ
ದಾಸನಾದರರೂ ಆದ ಘಟಿಕನಾದ ಸೋಜಿಗಾ ವಾಸುದೇವನ ಬಿಡದೆ ಭಜಿಸಿ ಸುಖಿಪ ಮತ್ತೀಗಾ ಪ ಮಂದಿ ಒಳಗೆ ಶೇರದಾಗಿ ನೊಂದು ಬಳಲಿದಾ ಭವ ತಾಪಂಗಳ ಹೊಂದಿ ಅಳಲಿದಾ ಮಂದಿರವೆಲ್ಲೆ ಗೃಹಿಣಿ ಸುತರೆಲ್ಲೆಂದ್ಹಲುಬಿದಾ ಪಾದ ಪಿಡಿದಾನಂದ ತಾಳಿದಾ 1 ಪಿಡಿದ ಕಾರ್ಯ ಬಿಡದೆ ... ಒಡನೆ ಪೀಡೆ ರಾಶಿಯಾಗಿ ಒಡಲ ಮುಸುಕಿತು ಕಡು ಬಡತನದುರಿಯು ಅಡರಿ ಒಡಲ ಸುತ್ತಿತು ಜಡಜನಾಭನೊಲುಮೆಯಿಂದ ಎಡರು ಪೋಯಿತು 2 ಭರದಿ ಸತೀ ಸುತರು ದುಃಖ ಶರದಿ ವಿಹ್ವಲಾ ಇರದೆ ವ್ಯಾಧಿ ಜಲಂಗಳಾ ಉರಿಯ ಉಮ್ಮಳಾ ತೆರೆಯ ಕಂಗಳಿಲ್ಲಾ ಗತಿಯು ಧರೆಯ ಕತ್ತಲಾ ಪೊರೆದ ನರಸಿಂಹವಿಠಲಾ ನಿರುತ ನಿರ್ಮಲಾ 3
--------------
ನರಸಿಂಹವಿಠಲರು
ದಾಸರ ದಾಸರ ದಾಸನೆಂದೆನಿಸುವ ಲೇಸು ಭಾಗ್ಯವ ಕೊಡೊ ಶಾಶ್ವತವಾಗಿಪ ಆಶಾಪಾಶವ ನಾಶನಗೈಸಿ ದೇಶಿಗರೆಲ್ಲರ ಕೂಸೆಂದೆನಿಸಿ ಅ.ಪ. ಉಪಟಳ ಬಹಳ ನೇಮ ನಿಷ್ಠೆಯ ಸುಳಿವೆನಗಿಲ್ಲ ತಾಮಸನಾಗಿ ಬಳಲಿದೆನಯ್ಯ ಪ್ರೇಮದಿ ಪಿಡಿದು ಸಲಹೊ ದಮ್ಮಯ್ಯ 1 ವದನದಿ ನಿನ್ನ ನಾಮವ ನುಡಿಸೊ ಪದದಲಿ ನಿನ್ನ ಯಾತ್ರೆಯ ನಡೆಸೊ ಹೃದಯದಿ ನಿನ್ನ ರೂಪವÀ ತೋರಿ ಅನುದಿನ ಶೌರಿ 2 ಭಕ್ತವತ್ಸಲ ಭಾಗ್ಯಸಂಪನ್ನ ಭಕ್ತರ ಸಂಗತಿ ಪಾಲಿಸೊ ಘನ್ನ ಉಕ್ತಿಯ ಲಾಲಿಸೊ ನಾನು ಅನಾಥ ಮತ್ತೇನು ಬೇಡೆನೊ ಶಕ್ತ ಶ್ರೀಕಾಂತ 3
--------------
ಲಕ್ಷ್ಮೀನಾರಯಣರಾಯರು
ದಾಸರ ನೋಡಿರೈ ಮನದಭಿಲಾಷೆಯ ಬೇಡಿರೈ | ಭಾಸುರ ಕಾರ್ಪರಾಧೀಶನಾ ಸನ್ನಿಧಿ ವಾಸ ಕೃತನತ ಪೋಷಾ || ಹಿಂದೆ ಪ್ರಲ್ಹಾದನು ಮಾತೆಯ ಗರ್ಭದೊಳಿರಲು ಮುಂದೆ ಈತ ಹರಿಭಕ್ತಾಗ್ರೇಸರನೆಂದು ಮನಸ್ಸಿಗೆ ತಂದು | ಛಂದದಿ ಹರಿಪರನೆಂಬೊ ತತ್ವ ಬೋಧಿಸಿದ ಜ್ಞಾನವ ಗರೆದ || ವೃಂದಾರಕ ಮುನಿಯೆಂದಿವರನು ಭಾವಿಸುತ ಅಭಿವಂದಿಸುತ 1 ಬೋಧ ಸಚ್ಛಾಸ್ತ್ರ ಧರ್ಮವ ಮುದದಿ ತಿಳಿಗನ್ನಡದದಿ ಸತಿ ಸುಳಾದಿ ರೂಪದಿ ವಿರಚಿಸಿ ದಯದಿ ಸಾರುತ ಜಗದಿ | ಬಲುವಿಧ ಭವದೊಳು ಬಳಲುವ ಸಜ್ಚನ ಕೊಲಿದ ಕಲುಷವ ಕಳೆದ | ಇಳೆಯೊಳು ಇವರು ಪೇಳಿದ ವಚನವು ವೇದ ದೊಳಗಿನ ಸ್ವಾದ 2 ಈ ಮಹಾಕ್ಷೇತ್ರದ ಸ್ವಾಮಿ ನರಸಿಂಹ ಪಾದ ಅರ್ಚಕರಾದ | ಭೀಮಾರ್ಯರ ಸದ್ಭಕ್ತಿಗೆ ನೆಲಸಿಹರಿಲ್ಲಿ ಅನುದಿನದಲ್ಲಿ || ನೇಮದಿ ತನ್ನನು ಸೇವಿಪ ಭಕುತರ ಕರವ ಕರುಣದಿ ಪಿಡಿವ || ಜಗದೊಳು ಮೆರೆದ 3
--------------
ಶಾಮಸುಂದರ ವಿಠಲ
ದಾಸರೆಂದರೆ ಪುರಂದರದಾಸರಯ್ಯ ಪ ವಾಸುದೇವ ಕೃಷ್ಣನ್ನ ಸೂಸಿ ಪೂಜಿಸುವಅ.ಪ ಗ್ರಾಸಕಿಲ್ಲದೆ ಪೋಗಿ ಪರರ ಮನೆಗಳ ಪೊಕ್ಕುದಾಸನೆಂದು ತುಲಸಿ ಮಾಲೆ ಧರಿಸಿಬೇಸರಿಲ್ಲದೆ ಅವರ ಕಾಡಿ ಬೇಡಿ ಬಳಲಿಸುತಕಾಸುಗಳಿಸುವ ಪುರುಷನವ ದಾಸನೇ 1 ಡಂಭಕದಿ ಹರಿಸ್ಮರಣೆಮಾಡಿ ಜನರಾ ಮುಂದೆಸಂಭ್ರಮದಿ ತಾನುಂಬ ಊಟ ಬಯಸಿಅಂಬುಜೋದ್ಭವ ಪಿತನ ಆಗಮಗಳರಿಯದಲೆತಂಬೂರಿ ಮೀಟಲವ ಹರಿದಾಸನೇ 2 ಯಾಯವಾರವ ಮಾಡಿ ವಿಪ್ರರಿಗೆ ಮೃಷ್ಟಾನ್ನಪ್ರೀಯದಲಿ ತಾನೊಂದು ಕೊಡದ ಲೋಭಿಮಾಯ ಸಂಸಾರದಲಿ ಮಮತೆ ಹೆಚ್ಚಾಗಿಟ್ಟುಗಾಯನವ ಮಾಡಲವ ದಾಸನೇನೈಯ3 ಪಾಠಕನ ತೆರದಲ್ಲಿ ಪದಗಳನೆ ತಾ ಬೊಗಳಿಕೂಟ ಜನರ ಮನವ ಸಂತೋಷಪಡಿಸಿಗೂಟ ನಾಮಗಳಿಟ್ಟುಕೊಂಡ್ಹಿರಿಯ ತಾನೆನುತ,ತೂಟಕವ ಮಾಡಲವ ದಾಸನೇನೈಯ4 ಪುರಂದರ ದಾಸರಿವರೈಯ 5
--------------
ವ್ಯಾಸರಾಯರು
ದಿಗ್ವಿಜಯವಂತೆ ಬಂದಳು ರುಕ್ಮಿಣಿ ದೂತೆ ಶೀಘ್ರದಿಂದ ಕೃಷ್ಣರಾಯ ಮಾರ್ಗನೋಡ್ಯಾನೆಂಬೊ ಭಯದಿ ಪ. ಕೃಷ್ಣರಾಯನ ಬಿಟ್ಟುಎಷ್ಟು ಹೊತ್ತು ಆಯಿತೆಂದುಸಿಟ್ಟು ಬರಧಾಂಗೆ ಸುರರಿಗೆ ಎಷ್ಟು ಸಲುಹಲಿ ಎನುತ 1 ವೀಕ್ಷಿಸಿ ಎನ್ನ ಮಾರಿಯನುಲಕ್ಷ್ಮಿಯರು ಕೋಪಿಸದಿರಲಿಲಕ್ಷ ಕೋಟಿದ್ರವ್ಯ ದಾನಈ ಕ್ಷಣ ಕೊಡುವೆನೆ ಎನುತ2 ಮದನಜನೈಯ್ಯನ ದಯವುಮೊದಲ್ಹಾಂಗೆ ಇದ್ದರೆ ನಾನು ಅದ್ಬುತದ್ರವ್ಯ ದಾನ ಬುಧರಿಗಿತ್ತೇನೆ ಎನುತ3 ವಿತ್ತ ಕೋಟಿ ದಾನವನ್ನು ಮತ್ತೆಕೊಡುವೆನೆ ಎನುತ4 ಇಂದಿರೇಶಗೆ ಅಂಜಿಕೊಂಡುಚಂದ್ರ ಸೂರ್ಯರು ತಿರಗೋರಮ್ಮಚಂದಾದ ನಕ್ಷತ್ರ ಬಂದುಅಂಜಿ ಹೋಗಿವೆ ಎನುತ 5 ಹರಿಗೆ ಅಂಜಿಕೊಂಡು ಶರಧಿಮರ್ಯಾದಿಲೆ ಇರುವೋ ನಮ್ಮದೊರೆಗೆ ಅಂಜಿಕೊಂಡು ವಾಯುತಿರುಗಾಡುವನಮ್ಮ ಎನುತ 6 ಅಗ್ನಿಅಂಜಿ ತನ್ನ ದರ್ಪತಗ್ಗಿಸಿ ಕೊಂಡಿಹ ನಮ್ಮಭಾಗ್ಯದರಸು ಅಂಜಿ ಮಳೆಯುಶೀಘ್ರದಿ ಗರೆಯುವನು ಎನುತ 7 ಹಾಸಿಗ್ಯಾಗುವ ಶೇಷ ಅಂಜಿದಾಸಿ ಆಗುವಳಂಜಿ ಲಕುಮಿದೇಶಕಾಲ ಅಂಜಿ ಒಂದುಲೇಸು ಮೀರ್ಯಾವೆ ಎನುತ 8 ವರಗಿರಿ ವಾಸಗೆ ಅಂಜಿಶೇಷ ಜಗವ ಪೊತ್ತಿಹನಮ್ಮಗರಿಯ ಹರವಿ ಗರುಡ ಅಂಜಿಹರಿಯ ಧರಸಿಹನೆ ಎನುತ9 ಸಂಖ್ಯವಿಲ್ಲದ ಗಜಗಳಂಜಿಫಕ್ಕನೆ ನಿಂತಿಹ ವಮ್ಮದಿಕ್ಪಾಲಕರು ಅಂಜಿ ತಮ್ಮದಿಕ್ಕು ಕಾಯುವರು ಎನುತ 10 ನದ ನದಿಗಳಂಜಿಕೊಂಡು ಒದಗಿಮುಂದಕ್ಕೆ ಹರಿವೋವಮ್ಮಸುದತೆ ವೃಕ್ಷ ಅಂಜಿಪುಷ್ಪಫಲವ ಕೊಡುವೊವೆ ಎನುತ 11 ಕಂತು ನೈಯನ ಅರಸುತನಎಂಥದೆಂದು ಬೆರಗುಬಟ್ಟುನಮ್ಮಂಥಾ ಒಣ ಬಳಗಅಂಜಿಲಿವೋದು ಕಾಂತೆ ಅರುವನೆ ಎನುತ 12 ರಮಿ ಅರಸಗಂಜಿಕೊಂಡು ಬ್ರಮ್ಹ ಸೃಷ್ಟಿ ಮಾಡೋನಮ್ಮಸುಮ್ಮನೆ ಸುರರೆಲ್ಲ ಕೂಡಿದಮ್ಮಯ್ಯ ಎನಲೆಂದು ಹರಿಗೆ13
--------------
ಗಲಗಲಿಅವ್ವನವರು
ದಿವನಿಶಿ ತವಪಾದ ದಿವ್ಯಧ್ಯಾನವನಿತ್ತು ಪ ವಿಷಯಲಂಟಪನಾಗಿ ವ್ಯಸನ ಕೂಪದಿ ಬಿದ್ದು ಮಸಣ ಬುದ್ಧಿಯಿಂ ಕೆಡುವ ಶಿಶುವನುಲಕ್ಷಿಸಿ 1 ಪುಸಿಯ ಸಂಸಾರವ ವಿಷಮವೆಂದರಿಯದೆ ದೆಸೆಗೆಟ್ಟು ಬಳಲುವ ದಾಸನೋಳ್ದಯವಿಟ್ಟು2 ಸುಜನರೊಲುಮೆಯಿತ್ತು ಗಜಿಬಿಜಿ ತೊಲಗಿಸಿ ನಿಜಜ್ಞಾನ ದಯಮಾಡು ಸುಜನಾರ್ಯ ಶ್ರೀರಾಮ3
--------------
ರಾಮದಾಸರು
ದುಂಡುಗಟ್ಟಿ ನಿಂತರಮ್ಮದುಂಡುಗಟ್ಟುತ ಎಲ್ಲರೂದುಂಡುಗಟ್ಟುತ ಪೆಂಡೆಯಗೆಜ್ಜೆಗಳು ಘಿಲ್ಲು ಘಿಲಕು ಎನ್ನುತ ಪ. ಕೋಗಿಲಂತೆ ಸ್ವರವನೆತ್ತಿಬಾಗಿ ಬಳಕುತ್ತ ಎಲ್ಲರೂಬಾಗಿ ಬಳುಕುತ್ತ ನಾಗವೇಣಿಯರುಚಂದ್ರನ್ಹಾಂಗೆ ಒಪ್ಪುತ ಚಂದ್ರನ್ಹಾಂಗೆ ಒಪ್ಪುತ1 ಕಮಲ ಮುದದಿ ಎತ್ತಿಮುಗಿಯುತರಂಗಗೆ ಎತ್ತಿ ಮುಗಿಯುತ 2 ಲಕುಮೇಶನಲ್ಲೆ ಸ್ನೇಹ ಉಕ್ಕಿ ಚೆಲ್ಲುತ ಶರದಿ ಉಕ್ಕಿಚಲ್ಲುತ ಅಕ್ಕನೇತ್ರವೆಂಬೊ ಕುಮುದ ಚಕ್ಕನೆ ಅರಳುತ ಚಕ್ಕನರಳುತ 3 ರಂಗನಂಫ್ರಿಗೆರಗುವಂತೆ ಭೃಂಗವಾಗುತ ಎರಗಿಭೃಂಗವಾಗುತ ತಮ್ಮಅಂಗ ಮರೆದು ಮುದದಿಉತ್ತುಂಗರಾಗುತ ಉತ್ತುಂಗರಾಗುತ4 ಹರವಿದ ಕ್ಯಾದಿಗೆಯು ನÀವಿಲು ಗರಿಯಂತೊಪ್ಪುತ ನವಿಲುಗರಿಯಂತೊಪ್ಪುತ ಶ್ರೀ ರಾಮೇಶನೆಂಬೊ ಮುಗಿಲಿಗೆ ಪರಿವೆ ನಲಿಯುತ ಪರಿವೆನಲಿಯುತ5
--------------
ಗಲಗಲಿಅವ್ವನವರು
ದುರಿತ ಉಪಶಮನೆ | ಅಮಮ ಮಂದಗಮನೆ || ಅಗಣಿತ ಸುಮನೆ ಪ ಆ ಮಹಾ ಮಾರ್ತಾಂಡ ಪುತ್ರೆ ಮಂಗಳಗಾತ್ರೆ | ಕಾಮಿತ ಸುಫಲದಾಯೆ ಕಾಲನಿಭ ಕಾಯೆ | ಆ ಮಂಜುಗಿರಿ ಬಳಿಯ ಅಲ್ಲಿ ಪುಟ್ಟಿದ ಸಿರಿಯೆ | ಸೋಮಕುಲಪಾವನೇ ಶರಣ ಸಂಜೀವನೆ 1 ಗಂಗಾ ಸಂಗಮ ಘನತರಂಗಿಣೀ ಮಹಾಮಹಿಮೆ | ಅಂಗವಟೆ ಅತಿ ಚಲುವೆ ನಲಿದಾಡಿ ನಲಿವೆ | ಮುಂಗುರಳು ಸುಮಲತೆ ಮೂಲೋಕ ವಿಖ್ಯಾತೆ | ಕಂಗಳಲಿ ನೋಳ್ಪಂಗೆ ಹೃತ್ಕಮಲ ಭೃಂಗೆ 2 ವಾರಿನಿಧಿ ಪ್ರಥುಕುಗಾಮಿನಿ | ಹಾರ ಮುಖೆ ಸುಪ್ರಮುಖೆ | ವೀರಶಕ್ತಿ ವಿಜಯವಿಠ್ಠಲನ |ಕಾರುಣ್ಯಪಾತ್ರೆ ಸಂಗೀತಲೋಲೆ 3
--------------
ವಿಜಯದಾಸ
ದುರಿತ ವಿನಾಶನಾ ದುರಿತ ಇಂದು ಪುರಂದರನ ಪೊಂದುತಲಿ ಅತಿ ಭಕುತಿಯಿಂದ ಸ್ಮರಿಸುವ ಜನರ ಉದ್ಧಾರ ಸಂದೇಹ ಸಲ್ಲದಿದಕೆ ಪ ದ್ವಾರಕಾಪುರದಲ್ಲಿ ಶ್ರೀರಮಣ ಸಭೆಯೊಳಗೆ ಚಾರು ಮಂಡಿತನಾಗಿ ಇರುತಿರಲು ಯದು ಪರಿ ವಾಲಗ ಗೋಪಿಕಾ ನಾರಿಯರ ಖ್ಯಾಲದಲ್ಲಿ ವಾರ ಕಾಂತೆಯರು ಮದವೇರಿ ನೃತ್ಯವ ಮಾಡೆ ಭೋರೆಂಬ ವಾದ್ಯವಿಳೆಯೊಳು ಮೊಳಗೆ ದೇವತತಿ ನಾರದನು ಧರೆಗಿಳಿದನು 1 ಬರುತಲೇ ವೈಕುಂಠಪುರದರಸಗೆರಗಿದನು ಕರಗಳನು ಮುಗಿದು ಕಿನ್ನರಿಯನ್ನು ತಾ ಧರಿಸಿ ಮೂವತ್ತೆರಡು ರಾಗಗಳಲಿದಿರುನಿಂದು ಎರಡು ಕಂಗಳಧಾರೆ ಸುರಿಯೆ ಪುಳುಕೋತ್ಸಹದಿ ಕೊರುಳುಟ್ಟಿ ತೊದಲುನುಡಿ ಮೈಸ್ಮರಣೆ ಹಾರೆ ಶ್ರೀ ಸುರರು ಶಿರವನೆ ತೂಗಲು2 ಅಚ್ಚುತನು ಪರಮ ಭಾಗವತನ್ನ ಭಕುತಿಗೆ ಮೆಚ್ಚಿದನು ಬೇಡುವುದು ವರವಧಿಕವೆಂದೆನಲು ಗೀರ್ವಾಣಮುನಿ ಎಚ್ಚರಿಕೆಯನು ಪೇಳುತ ಅಚ್ಚಗನ್ನಿಕೆ ರಮಣ ದೀನನನು ಮನ್ನಿಪುದು ನಿಚ್ಚಟೆನ್ನಯ ಕೂಡೆ ಬಿಡದೆ ಆಡೆನಲು ಕಲಿ- ಕೀರ್ತಿಗಳು ಬಿಚ್ಚಿ ತೋರಿಸುವೆನೆಂದ 3 ವರ ಪಡೆದು ನಾರದನು ಇರುತಿರಲು ತಾವಿತ್ತ ಬರಲು ಕಲಿ ದೊರೆತನವು ಕೆಲವು ಕಾಲಾಂತರಕೆ ಪುರಂದರವೆಂಬ ನಗರಿಯಲ್ಲಿ ಚರಿಸಿದರು ಕೆಲವು ದಿನ ಸಂಸಾರ ವೃತ್ತಿಯಲಿ ಜರಿದು ವೈರಾಗ್ಯವನು ತೊಟ್ಟು ದೃಢಮನಸಿನಲಿ ಕಿಷ್ಕಿಂಧಗಿರಿ-ತುಂಗ ಪಂಪದಲ್ಲಿ 4 ಅಂದು ಭಕುತಗೆ ಇತ್ತ ಭಾಷೆ ತಪ್ಪಲಿಬಾರ- ದೆಂದು ಇಂದಿರೆಪತಿಯು ದಯದಿಂದ ವಲಿದವರ ಕುಣಿಕುಣಿದು ನಂದವನೆ ತೋರಿಕೊಳು ಮಂದಭಾಗ್ಯರಿಗೆ ಈ ಪರಿಯ ಸೊಬಗುಂಟೆ ನಾ ಪರ ಬೊಮ್ಮ ಬಂದು ಸಿಲುಕಿದನೆಂಬುವುದೆ ಇದಕೆ ಪ್ರಾಮಾಣ್ಯವೆಂದು ತಿಳಿದು ಸುಜನರು 5 ವಾಸವನೆ ಮಾಡಿದರು ಪ್ರಹ್ಲಾದನವತಾರ ವ್ಯಾಸರಾಯರ ಬಳಿಯ ಮುದ್ರೆ ಗುರುಮಂತ್ರ ಉಪ ಪುರಂದರ ದಾಸರೆಂಬುವ ಪೆಸರಲಿ ದೇಶಗಳ ತಿರುಗಿ ಪುಣ್ಯಕ್ಷೇತ್ರಗಳ ಮೆಟ್ಟಿ ಲೇಸಾಗಿ ಅಲ್ಲಲ್ಲಿ ಮಹಿಮೆಗಳ ಪೇಳುತ ದು ವಸಿಸಿದರು ಧರ್ಮಬಿಡದೆ 6 ಉಪಾದಾನವ ಬೇಡಿ ವಿಪ್ರರಿಗೆ ಮೃಷ್ಟಾನ್ನ ಅಪರಿಮಿತವಾಗಿ ಉಣಿಸುತ್ತಿರಲು ಅವರಲ್ಲಿ ತಟಿನಿಗಳು ತಪಸು ಫಲವಾಯಿತೆಂದು ತಪನ ಕಾಲದಲೆದ್ದು ದಾಸರಾ ಸದನದಲಿ ಜಪಿಸಿ ತಮ ತಮ ತಕ್ಕ ತಾರತಮ್ಯಗಳಿಂದ ಸುಪಥವನು ಇಚ್ಛಿಸುವರು 7 ಅವರೆಂದ ವಚನಗಳೆÀಲ್ಲ ವೇದಾರ್ಥವಾಗಿ ಅವನಿಯೊಳು ತುಂಬಿದುವು ಬಂದರೇ ಗ್ರಹಿಸಿದರ ಭುವನ ನಿಧಿಯೊಳಗೆ ಮುಳುಗಿ ಪವನ ಮತವಿಡಿದು ಪರಿಪೂರ್ಣಮಾಚಾರದಲಿ ತವಕದಿಂದಲಿ ಹರಿಯ ಪಾದವನೆ ಪಡಕೊಂಡು ನವರೂಪಿನಲಿ ಇಪ್ಪರು 8 ಏನು ಇದು ಎಂತೆಂದು ದೂಷಿಸದಿರಿ ದಾಸರ ಸೂನು ಪೇಳಿದನು ಗುರು ವ್ಯಾಸಮುನಿ ರಾಯರಿಗೆ ಪುರಂದರ ದಾಸರೆಂಬಂಥ ಸೂನೃತದ ಸಿದ್ಧಾಂತದ ಧ್ಯಾನದಲಿ ತಿಳಿದು ಸುಜ್ಞಾನಿಗಳ ವದನಖದ ರೇಣಿನವನಾಗಿ ಬಿನ್ನೈಸಿದನು ಜ್ಞಾನಮಯ ಕಾಣುವಾ ಜನ ಲಾಲಿಸೆ 9
--------------
ವಿಜಯದಾಸ
ದುರಿತ ಅಪ್ರಮೇಯ ವಿನುತ ಎನ್ನ 1 ಕಾಲಕರ್ಮಂಗಳ ಜಾಲಕೆ ಸಿಲುಕಿದಕೀಲುಮುರಿದ ತೇರಂತೆ ನಾ ಬಳಲಿಮೂಲಮಂತ್ರವ ಬಿಟ್ಟು ಲೋಲಮಾನವ ನಾನುಪಾಲಿಸುವರು ಬೇರಿಲ್ಲ ಮಾಂಗಿರಿರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್