ಒಟ್ಟು 2180 ಕಡೆಗಳಲ್ಲಿ , 120 ದಾಸರು , 1676 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರು ವಾದಿರಾಜ ರವಿಕೋಟಿ ತೇಜಾ ಶರಣೆಂಬೆನಯ್ಯಾ ಸತತಗೇಯಾ ಪ ನಂಬಿದೆನು ನಿನ್ನ ದಯ ಸಂಪನ್ನ ಸಂಭ್ರಮದಲ್ಲೆನ್ನ ಪೊರೆಯೊ ಪ್ರಸನ್ನ 1 ವೇದಶಾಸ್ತ್ರ ಬಲ್ಲ ಭಳಿರೆ ಮಲ್ಲ ಭೇದ ಜ್ಞಾನವೆ ಎಂಬೊ ನಿಜವೆಂಬ ಫಲ 2 ಮಾಯಿಗಳ ವದ್ದ ಮಮತಾ ಗೆದ್ದ ಗಾಯನ ಪ್ರಸಿದ್ಧ ಗುಣದಲಿ ಇದ್ದ 3 ನಾನಾ ಚಾರಿತ್ರ ತೋರಿದ ಮಿತ್ರ ಸಿರಿ ಹರಿಯ ಗಾತ್ರದೊಳಿಟ್ಟ ಪಾತ್ರ4 ಸಂತತ ವಿರಕ್ತ ಜೀವನ ಮುಕ್ತಾ ಸಂತಾರಿ ಸುಶಕ್ತಾ ಹರಿನಾಮ ಭೋಕ್ತಾ 5 ಸ್ವಾದಿಪುರವಾಸ ಸಾಧುಗುಣ ಭಾಸಾ ಸದ್ಭಕುತ ಪೋಪ ಮಧ್ವಮುನಿಯ ದಾಸಾ 6 ವಿಜಯವಿಠ್ಠಲನ್ನ ನೆನೆಸುವ ಘನ್ನ ಹರಿ ತ್ರಿಜಗ ಹಯವದನನ್ನ ಪರನೆಂಬೊ ಪೂರ್ಣಿ7
--------------
ವಿಜಯದಾಸ
ಗುರುಗಳ ನೆರೆ ನಂಬಿರೊ ಪರಿಪಾಲಿಪ ಗುರುಗಳ ನೆರೆ ನಂಬಿರೊ ಪ ಪರಿ ಅಘದೊಳು ತೊಳಲುವ ಮನು ಜರ ಬವಣೆಗಳರಿತು ಸಜ್ಜನರ ಪಾಲಿಸುವಂಥ ಅ.ಪ ಚಿಂತೆಯೆಲ್ಲವು ನೀಗಿಸಿ ಮನಸಿಗೆ ಬಹು ಸಂತೋಷವನು ಸೂಚಿಸಿ ಪಾದ ಚಿಂತನೆ ಮಾಡುವ ಅಂತರಂಗದ ಭಕ್ತರೊಡನೆ ಮೆರೆವ ದಿವ್ಯ1 ಬೆಟ್ಟದೊಡೆಯನ ಪೂಜಿಸಿ ಭಕುತರ ಮನ ದಿಷ್ಟಗಳನು ಸಲ್ಲಿಸಿ ಸೃಷ್ಟಿಕರ್ತನ ಗುಣ ಸ್ವಚ್ಛ ತಿಳಿದು ಸರ್ವ ಕಷ್ಟಗಳ್ಹರಿಸಿ ಸಂತುಷ್ಟಿಪಡಿಸುವಂಥ 2 ಸರಿಯುಂಟೆ ಧರೆಯೊಳಗೆ ಗುರುಗಳ ಪೋಲ್ವ ನರರುಂಟೆ ಭುವಿಯೊಳಗೆ ಸಿರಿ ಉರಗಾದ್ರಿವಸ ವಿಠ್ಠಲದಾಸರ ಕೂಡಿ ವರಗಳ ಕೊಡುವಂಥ ಪರಮ ಸಾತ್ವಿಕರಾದ 3 ಪರಮ ಮಂಗಳ ಮೂರ್ತಿಯ ರೂಪವ ಹಗ ಲಿರುಳು ಧ್ಯಾನವ ಮಾಳ್ಪರ ಪರಮ ಗುರುಗಳ ಪರಮ ಪ್ರೀತಿಯ ಪಡೆದಂಥ ಉರಗಾದ್ರಿವಾಸ ವಿಠ್ಠಲದಾಸರೆಂಬಂಥ4 ಕರುಣದಿ ಸಲಹುವರು ಭಕ್ತರನೆಲ್ಲ ಕರೆದು ಬೋಧನೆ ಮಾಳ್ಪರು ವರ ಕಮಲನಾಭ ವಿಠ್ಠಲನ ಭಜಿಸುತ್ತ ಸಿರಿ ಶ್ರೀನಿವಾಸನ ನಿರುತ ಪೂಜಿಸುವಂಥ 5
--------------
ನಿಡಗುರುಕಿ ಜೀವೂಬಾಯಿ
ಗುರುನಿಕರÀ ಸಂಸೇವ್ಯ ಸತಿಪತಿಯ ಬಿಂಬ ಪ ಪರಮ ಪಾವನ ನಾಮ ಪಾಹಿ ಪಾಹೀ ಎನ್ನ ಅ.ಪ ಪತಿತಪಾವನ ಪರಮಗತಿ ನೀನು ಸರ್ವಸ್ವ ಸತತ ತತ್ವದ ಪಾಲಿಸು ಎನ್ನ ಶಿರದಿ ಹಿತದಿಂದ ನೆಲಸಿರಲಿ ಹರಿದಾಸ್ಯ ಕೊಟ್ಟೆನಗೆ ರತಿ ಬಿಡಿಸು ವಿಷಯದಲಿ ಮನ ನಿನ್ನ ಬಿಡದಿರಲಿ 1 ನಿನ್ನ ಕ್ರಿಯ ಗುಣರೂಪ ನಿನ್ನ ತಿಳಿಯದೆ ನಡೆದೆ ಘನ್ನಭಾವವ ನೀಡು ಪೂರ್ಣದಯದಿ ಅನ್ಯವೆಂದಿಗು ಒಲ್ಲೆ ಅನ್ನನೀಯನಗಾಗು ಪೂರ್ಣಪ್ರಜ್ಞರ ದೈವ ಪನ್ನಗಾದ್ರಿನಿಲಯ 2 ಲಕ್ಷ್ಮೀನಿಲಯ ಜಯೇಶವಿಠಲನೆ ವಿಧಿವಂದ್ಯ ಲಕ್ಷ್ಯನಿನ್ನಲಿ ನೆಲಸು ಸತತ ಬಿಡದೆ ಪೃಷ್ಯೇಶ ತವ ಕರುಣ ಬಂದು ಎನ್ನೊಳು ಬೀಳೆ ಭವ ಹಿಂಗಿ ಮೋಕ್ಷಸುಖ ಕರಗತವೊ 3
--------------
ಜಯೇಶವಿಠಲ
ಗುರುರಾಜ | ನಮಿಪರ ಸುರಭೋಜ ಗುರುರಾಜ ಪ. ವರತಂದೆ ಮುದ್ದುಮೋಹನರೆಂದೆನಿಸುತ ಮೆರೆಯುತ ಜಗದೊಳು ಪೊರೆಯುವ ಕರುಣಿ 1 ಅಜ್ಞತೆ ತೊಲಗಿಸಿ ಸುಜ್ಞತೆ ಕೊಡುತಲಿ ವಿಘ್ನವ ತರಿಯುವ ಪ್ರಾಜ್ಞ ಮೂರುತಿಯೆ 2 ಸರಸಿಜಾಕ್ಷನ ಪದ ಹರುಷದಿ ಭಜಿಸುವ ಪರಮಪ್ರಿಯರು ಎಂದು ಬಿರುದು ಪೊತ್ತಿಹರೆ 3 ನಾಗಶಯನನಿಗೆ ಭೋಗವಪಡಿಸುವ ಆಗಮಜ್ಞರೆ ನಿಮಗೆ ಬಾಗುವೆ ಸತತ 4 ಸಾಸಿರ ಫಣೆಯಿಂದ ಸೂಸುವ ಕಾಂತಿಯೊಳ್ ವಾಸವ ವಿನುತ 5 ದೇವತಾಂಶದ ಗುರು ಪವಮಾನಿಗೆ ಪ್ರಿಯ ಭಾವಿಸಿ ಭಜಿಪರ ಕಾವ ಕರುಣಾಳು 6 ಶಾಂತಚಿತ್ತದಿ ಬಹು ಸಂತೋಷಪಡುತಲಿ ಅಂತರಂಗದಿ ಹರಿಯ ಚಿಂತಿಸುತಿರುವ 7 ಉದ್ಭವಿಸಿ ಜಗದಿ ಅಧ್ಭುತ ಮಹಿಮೆಯ ಒಬ್ಬೊಬ್ಬರಿಗೆ ತೋರಿ ಹಬ್ಬಿಪೆ ಹರುಷ 8 ಸೃಷ್ಟೀಶ ಗೋಪಾಲಕೃಷ್ಣವಿಠ್ಠಲನನು ದೃಷ್ಟಿಗೆ ತೋರಿಸಿ ಕಷ್ಟ ಬಿಡಿಸಿರಿ 9
--------------
ಅಂಬಾಬಾಯಿ
ಗುರುರಾಜ ಗುರುಸಾರ್ವಭೌಮ ಪ ಗುರುರಾಜ ತವ ಪಾದ ಸರಸಿಜಯುಗಲಕ್ಕೆ ಮೊರೆಪೊಕ್ಕ ಜನರನ್ನ ಪೊರೆ ಎಂದೇ ಅ.ಪ ಶರಣ ಪಾಲಕನೆಂಬೊ - ಬಿರುದು ಬೀರುತಲಿದೆ ಶರಣರ ಮರೆವೊದು ಥರವೇನೋ 1 ಸಾರಿದಜನರ‌ಘ ದೂರಮಾಡುವೆನೆಂಬೊ ಧೀರರ ವಚನವು ಸಾರುತಿದೆ 2 ದೂರದೇಶದಿ ಜನ - ಸಾರಿ ಬಂದರೆ ವಿ - ಚಾರಿಸಿ ಹರಕೆ ಪೊರೈಸುವೀ 3 ಕುಷ್ಟಾದಿ ಮಹರೋಗ ನಷ್ಟಮಾಡುತಲ - ಭಿಷ್ಟೇಯ ಪೂರ್ತಿಪ ಮಹ ಶ್ರೇಷ್ಠನೆ 4 ಆದಿವ್ಯಾಧಿ ಉ-ಪಾಧಿ ಸಂಘಗಳನ್ನು ಮೋದ ಸಲಿಸುವಿ 5 ಸತಿಜನರಿಗೆ ಅತಿ ಹಿತದಿಂದ ಸುತರನ್ನ ಸತತ ನೀಡುವಿ ಯತಿ ಕುಲನಾಥ 6 ಮತಿ ಹೀನ ಅತಿ ಮೂರ್ಖ ತತಿನಿನ್ನ ಭಜಿಸಲು ವಿತತ ಭಕುತಿ ಜ್ಞಾನ ನೀಡುವೀ 7 ಮೂಕ - ಬಧಿರ - ಪಂಗು - ಏಕೋಭಾವದಿ ಸೇವೆ ಏಕಮನದಿ ಮಾಡೆ ರಕ್ಷೀಪಿ 8 ಅವರ ಮನೋ ಬಯಕೆ ಹವಣಿಸಿ - ನೀಡುತ ಅವನಿಯೊಳಗೆ ನೀ ಮೆರೆಯುವೀ 9 ಅಂಧಜನಕೆÀ ಚಕ್ಷು - ವಂಧ್ಯಜನಕೆ ಸುತರು ಬಂದ ಬಂದವರರ್ಥ ಪೂರೈಸುವೀ 10 ಪರಮಂತ್ರ ಪರಯಂತ್ರ ಪರಕೃತ್ಯಪರಮಾಹಿ ಪರಿಪರಿ ವ್ಯಥೆಗಳ ಹರಿಸುವೀ 11 ದುರುಳಜನರ ಬಾಧೆ ಮೊರಳುಮಾಯದ ಮೊದ್ದು ಕಿರಳುಪದ್ರಗಳೆಲ್ಲ ಕಳೆಯುವೀ 12 ಕಾಮಿತ ಫಲಗಳ - ಕಾಮಿಪ ಜನರಿಗೆ ಪ್ರೇಮದಿ ನೀಡುವೊ ಧ್ವರಿ ನೀನೇ 13 ಅನ್ನ ವಸನ ಧನ - ಧಾನ್ಯ ಹೀನರಗಿನ್ನು ಮನ್ನಿಸಿ ನೀನಿತ್ತು ಸಲಹುವೀ 14 ಅಧಿಕಾರ ಕಳಕೊಂಡು ಬದಕಲಾರದ ಜನ ವದÀಗಿ ನಿನ್ನನು ಭಜಿಸೆ ಕರುಣಿಪೀ 15 ಮಾನವ ನಿನ್ನ ಸೇವೆ ಮಾಡುವನವ ಕೋವಿದನಾಗುವ ನಿಶ್ಚಯಾ 16 ಇನಿತೆ ಮೊದಲಾದ ಘನತರ ಮಹಿಮವು ಜನರಿಗೆ ಶಕ್ಯವೆ ಗುರುರಾಯಾ 17 ಸುರತರು ಸುರಧೇನು ವರಚಿಂತಾಮಣಿ ನೀನೆ ಶರಣವತ್ಸಲ ಬಹು ಕರುಣೀಯೇ 18 ದಿನ ದಿನ ಮಹಿಮವು ಘನ ಘನ ತೋರೋದು ಬಿನಗು ಮಾನವರಿಗೆ ತಿಳಿಯಾದೋ 19 ಕರುಣಾನಿಧಿಯೆ ನೀನು ಶರಣ ಮಂದಾರನೆ ಶರಣ ವತ್ಸಲ ನಿನಗೆ ಶರಣೆಂಬೆ 20 ವಸುಧಿತಳದಿ ನೀನೆ ವಶನಾಗೆ ಜನರಿಗೆ ವ್ಯಸನಗಳುಂಟೇನೊ ಪೇಳಯ್ಯಾ 21 ದುರಿತ ದುಷ್ಕøತವೆಲ್ಲ ದೂರದಲೋಡೋವು ಕರಿಯು ಸಿಂಹನ ಕಂಡತೆರನಂತೆ 22 ನಿನ್ನ ನಾಮದ ಸ್ಮರಣೆ ಘನ್ನ ರೋಗಗಳನ್ನು ಚೆನ್ನಾಗಿ ನಾಶನ ಮಾಳ್ಪೋದೋ 23 ರಾಘವೇಂದ್ರ ಗುರು ಯೋಗಿಕುಲಾಗ್ರಣಿ ವೇಗಾದಿ ಪೊರೆದೆನ್ನ ಪಾಲಿಪೆ 24 ಜನನಿ ಜನಕರು ತಮ್ಮ ತನಯರ ಪೊರೆದಂತೆ ದಿನದಿನ ನೀನೇವೆ ಸಲಹೂವಿ 25 ಅನಿಮಿತ್ತ ಬಾಂಧವ ಅನುಗಾಲ ನೀನಿರೆ ಜನರು ಮಾಡುವ ಬಾಧೆÉ ಎನಗೇನೋ 26 ಮನಸಿನೊಳಗೆ ನಿತ್ಯ ನೆನೆಯುತ ತವ ಪಾದ ವನಜ ಯುಗಳ ಮೊರೆ ಪೊಂದಿದೆ 27 ನಿನ್ನ ಮಹಿಮ ಶ್ರವಣ ನಿನ್ನ ಗುಣಕೀರ್ತನ ನಿನ್ನ ಮೂರ್ತಿಧ್ಯಾನ ನೀಡೈಯ್ಯಾ 28 ನಿನ್ನ ಉಪಾಸನ ನಿನ್ನ ದಾಸತ್ವವ ಚನ್ನಾಗಿ ಎನಗಿತ್ತು ಸಲಹೈಯ್ಯಾ 29 ನಿನ್ನನುಳಿದು ಈಗ ಮನ್ನಿಸಿ ಪೊರೆವಂಥ ಘನ್ನ ಮಹಿಮರನ್ನ ಕಾಣೆನೋ 30 ದಾತ ಗುರು ಜಗ ನ್ನಾಥ ವಿಠಲಗತಿ ಪ್ರೀತಿ ಪಾತ್ರನು ನೀನೆ ನಿಜವಯ್ಯೊ 31
--------------
ಗುರುಜಗನ್ನಾಥದಾಸರು
ಗುರುರಾಜ ವರದ ವಿಠಲ | ಪೊರೆಯ ಬೇಕಿವಳಾ ಪ ಮರುತಂತರಾತ್ಮಕನೆ | ಪ್ರಾರ್ಥಿಸುವೆ ಹರಿಯೇ ಅ.ಪ. ಸೃಷ್ಟಾದಿ ಸತ್ಕರ್ಮ | ಸುಗುಣಮೂರುತಿದೇವಕಷ್ಟಗಳ ಪರಿಹರಿಸಿ ಕಾಪಾಡೋ ಹರಿಯೇಕೃಷ್ಣಮೂರುತಿ ದೇವ | ಅಷ್ಟ ಸೌಭಾಗ್ಯಗಳಕೊಟ್ಟು ಸಂತೈಸುವುದು | ಕಾರುಣ್ಯ ಮೂರ್ತೇ 1 ಆ ಪನ್ನ ಜನಪಾಲ | ಗೋಪಿಜನಪ್ರಿಯತಾಪತ್ರಯ ಕಳೆದು | ಕಾಪಾಡೊ ಹರಿಯೇಶ್ರೀಪತಿ ನೀನಾಗಿ | ಕೋಪಾದಿಗಳ ಕಳೆದುಕೈಪಿಡಿದು ಸಲಹೆಂದು | ಪ್ರಾರ್ಥಿಸುವೆ ಹರಿಯೇ 2 ಪತಿಸುತರು ಹಿತರಲ್ಲಿ | ಹರಿಯುವ್ಯಾಪ್ತನು ಎಂಬಮತಿಯನ್ನೆ ಕರುಣಿಸುತ | ಕಾಪಾಡೊ ಹರಿಯೇಸುಪ್ತಿಜಾಗ್ರತ ಸ್ವಾಪ | ಮಾರವಸ್ಥಾ ಸ್ವಾಮೀಆಪ್ತ ಗುರು ಗೋವಿಂದ | ವಿಠಲೆಂದು ತಿಳಿಸೊ 3
--------------
ಗುರುಗೋವಿಂದವಿಠಲರು
ಗುರುರಾಜಾ ಗುರು ಸಾರ್ವಭೌಮ ಪ ಗುರುರಾಜಾ ಗುರಸಾರ್ವಭೌಮ ನಿನ್ನಯ ಪಾದ ಸರಸಿಜಯುಗಕಭಿ ನಮಿಸುವೇ ಅ.ಪ ಕರುಣ ಸಾಗರನೆಂದು ಚರಣವ ನಂಬಿದೆ ಶರಣನ ಪಾಲಿಸು ಕರುಣಿಯೇ 1 ಅನ್ಯರ ಭಜಿಸದೆ ನಿನ್ನನ್ನೆ ಭಜಿಸುವೆ ಎನ್ನ ಮರೆವೊದಿದು ನ್ಯಾಯವೇ 2 ಪರಮ ಪುರುಷನೆ ನಿನ್ನನು ಚರನೆನಿಸಿ ಧರೆಯೋಳು ನರರÀನ್ನ ಬೇಡೊದು ಘನತೆಯೆ 3 ಸುರನು ಮನೆಯಲ್ಲಿ ಸ್ಥಿರವಾಗಿ ಇರಲಿನು ತಿರಕ ತಕ್ರಕೆ ಬಾಯಿ ತೆರೆವೋರೇ 4 ಬೇಡಿದ ಮನೋರಥ ನೀಡುವ - ನೀನಿರೆ ಬೇಡೆನೆ ನರರನ್ನ ನೀಡೆಂದೂ 5 ಸಂತತ ಎನ ಕಾರ್ಯ ವಂತರಿಲ್ಲದೆ ನೀ - ನಿಂತು ಮಾಡುವದು ಪುಶಿಯಲ್ಲ 6 ಕಾಲಕ್ಕೆ ಸುಖದುಃಖ - ಮೇಲಾಗಿ ಬರುತಿರೆ ಪೇಳಿ ಎನ್ನನು ನೀ ಪಾಲಿಸುವಿ 7 ನಿನ್ನ ಸೇವಿಪರಿಗೆ ಇನ್ನುಂಟೆ ಭಯ ಶೋಕ ಉನ್ನತ ಸುಖದೊಳಗಿರುವರೋ 8 ಭವ ಬನ್ನ ಬಡುವದಿದು ಎನ್ನಪರಾಧವದೇನಯ್ಯಾ 9 ಕುಚ್ಛಿತ ಜನರನ್ನ - ತುಚ್ಛ ಮಾಡದÀಲವರ ಇಚ್ಛೆಕಾರ್ಯವ ಮಾಡಿ ಸಲಿಸುವಿ 10 ಜನನಿ ಪುತ್ರಗೆ ವಿಷsÀ - ವಿನಯದಿ ನೀಡಲು ಜನಕ ತನಯನ ತಾ ಮಾರಲು 11 ವಸುಧೀಶ ವೃತ್ತಿಯ - ಕಸಕೊಂಡ ವಾರ್ತೆಯ ವ್ಯಸನದಿ ಆರಿಗೆ ಉಸರೋದೋ12 ಇದರಂತೆ ನೀ ಮಾಡು - ವದು ಏನು ನ್ಯಾಯವೊ ಪದುಮನಾಭನ ಪ್ರಿಯ ಗುರುರಾಯ 13 ಮೂಕ ಬಧಿರ ಕುರುಡಾ - ನೇಕ ಜನಕೆ ಕಾರ್ಯವಿ - ವೇಕ ಮಾಡಿ ನೀ ಸಲಹಿದಿ 14 ಬಂದು ಬೇಡಿದ - ಮಹ - ವಂಧ್ಯಜನರಿಗೆ ಸು - ಕಂದರ ನೀನಿತ್ತು ಸಲಹುವೀ 15 ಭೂತಾದಿ ಬಾಧವ - ನೀತರಿದು ಸುಖಗಳ ವ್ರಾತವ ಸಲಿಸೀ ಪಾಲಿಸುವಿ 16 ಹಿಂದಿನ ಮಹಿಮ - ದಿಂದೇನು ಎನಗಯ್ಯ ಇಂದು ಮಹಾ ಮಹಿಮೆ - ತೋರಿಸೋ 17 ಯಾತಕೆ ಈ ತೆರ ಮಾಡಿದೀ 18 ಎಲ್ಲೆಲ್ಲಿ ನಾ ಪೋದ - ರಲ್ಲಲ್ಲೆ ನೀ ಬಂದು ಎಲ್ಲ ಕಾರ್ಯಗಳನ್ನು ಮಾಡಿದೀ 19 ಇತರರಿಗಸಾಧ್ಯ ಅತಿಶಯ ಚರ್ಯವ ಯತನಿಲ್ಲದಲೆ ನೀ ಮಾಡಿದಿ 20 ಪೇಳಲೆನ್ನೋಶವಲ್ಲ ಭಾಳ - ನಿನ್ನಯ ಚರ್ಯ ಕೀಳುಮಾನವ ನಾ ಬಲ್ಲೇನೆ 21 ಜ್ಞಾನಿಗಳರಸನೆ ಮೌನಿ ಶಿರೋಮಣಿ ಧ್ಯಾನವ ಸಂತತ ನೀಡಯ್ಯಾ 22 ಸಂತತ ಎನ ಮನೊ - ಅಂತರದಲಿ ನೀ ನಿಂತು ಪಾಲಿಸೊ ಎನ್ನ ಮಹರಾಯಾ 23 ಎಂತೆಂಥ ಭಯ - ಬರೆ - ನಿಂತು ತಳೆದ್ಯೊ ದಯ - ವಂತ ನಿನಗೆಣೆಗಾಣೆನಯ್ಯಾ 24 ನಿನ್ನಲ್ಲಿ ಹರಿ ದಯ - ಉನ್ನತ ಇರಲಿನ್ನು ಎನ್ನಲ್ಲಿ ನಿನ ದಯ ಇರಲಯ್ಯ 25 ದಾತಗುರು ಜಗನ್ನಾಥ ವಿಠಲ ನಿನ್ನ ಮಾತು ಲಾಲಿಸಿದಂತೆ ಪೊರೆ ಎನ್ನಾ 26
--------------
ಗುರುಜಗನ್ನಾಥದಾಸರು
ಗುರುರಾಯ ಪಾಲಿಸುವುದು ನೀ ಎನ್ನ ಪ ಅನ್ಯರೊಬ್ಬರನಾ ನಾ ಕಾಣೆ ಮನ್ನಿಸಿ ಸಲಹುವರನಾ ನಿನ್ನವನೊ ನಾನು ಅನುದಿನದಲಿ ನಿನ್ನ ನೆನೆದು ನೆನೆದು ಇಂದಿನವರೆಗೆ ನಾ ದಿನಗಳೆದೆನೋ ಅ.ಪ. ಇಷ್ಟುದಿನ ಪಟ್ಟ ಕಷ್ಟವು ಸಾಕೋ ಇಷ್ಟಕೆ ನೀ ದಯಾದೃಷ್ಟಿ ಇಟ್ಟು ಜ್ಞಾನವ ಕೊಡಬೇಕೊ ಕಪಟ ಬುದ್ಧಿಯನಷ್ಟು ಕಳೆದಿಷ್ಟವ ಪೂರೈಸಬೇಕೊ ಬಿಟ್ಟವನಲೊ ್ಲನಾ ಕೊಟ್ಟವರು ಪರಿಕರ ಬಿಟ್ಟವರು ಸರಿ ನಾ ಕಟ್ಟಿಕೊಳ್ವೆ ತವ ಚರಣವ ಕೊರಳಿಗೆ 1 ಅಷ್ಟದಿಕ್ಕುಗಳಿಗೆ ಪರಿಹರಿಸಿಹುದೊ ಇಷ್ಟೆಲ್ಲ ಕೇಳಿ ನಾ ಇಟ್ಟೆ ಮನವನು ತವ ಪಾದದಿ ತಿಳಿದು ಸಂತುಷ್ಟನೆ ಎನ್ನ ಬಿಟ್ಟರೆ ಮುಂದಿನ ಬಟ್ಟೆಯ ಕಾಣದೇ ಕೆಟ್ಟು ನಾ ಮೂರಾಬಟ್ಟೆಯಾಗುವೆನೋ 2 ತವ ಪಾದದಿ ತುಳಿದು ಮೆಟ್ಟಿ ಎನ್ನ ಶಿರ ಥಟ್ಟನೆ ಭೂಮಿಯಲಿ ಕೆಡಹುವುದು ಹುಟ್ಟಿದರೆ ದಯವು ಅಟ್ಟಿ ಅಜ್ಞಾನವ ಕಟ್ಟಿ ಸುಜ್ಞಾನವ ಘಟ್ಟಿ ಭಕುತಿಯನು ಕೊಟ್ಟು ನೀ ಪಾಲಿಸೊ 3
--------------
ಹನುಮೇಶವಿಠಲ
ಗುರುವಚನದಲಿ ನಂಬನು ನರಭಾವ ಅವರೊಳು ಕಾಂಬನು ಕರಣ ತ್ರಯದಲಿ ಶುಂಭನು ಗುರು ಭಕ್ತ ನೆನಿಸದರೇನು ಮಾ 1 ಸರ್ವರೊಳು ಹರಿ ನೋಡದೇ ಗರ್ವದ ಗುಣಗಳೀಸಾಡದೆ ನಿಜ | ದರ್ವಿನೊಳು ಮನ ಕೂಡದೇ | ಭಾಗವತರೆನಿಸಿದರೇನು ಮಾ 2 ವಾಸನಿಯ ಬಲ ಕಡಿಯಾ ದೇವೆ | ಆಸೆಯಲಿ ಮನ ಜಡಿಯದೆ ನಿಜ | ದ್ಯಾಸದಂಡವ ಪಿಡಿಯದೆ ಸ | ನ್ಯಾಸಿಯೆನಿಸಿದರೇನು ಮಾ 3 ನುಡಿಯ ಬೀರುತ ಸಂತರಾಜನ | ರೊಡನೆ ಹಾಕುತ ಸಿಂತರಾ ತಮ್ಮ | ನಡತಿ ನೋಡಲು ಭ್ರಾಂತರಾ ತಾ | ಸಂತ ನೆನಿಸಿದರೇನು ಮಾ 4 ತಂದೆ ಮಹಿಪತಿ ಪಾದವಾ ಬೆರೆ | ಭವ | ಬಂಧ ಮಾಡದೇ ವಾತಾ | ಬಂದ ಜನಮಕಿದೇನು ಮಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುವರ ಹರಿ ವಿಠಲ | ಪೊರೆಯ ಬೇಕಿವಳಾ ಪ ಪಾದ | ಸ್ಮರಿಸಿ ಭಜಿಸುವಳಾ ಅ.ಪ. ಪರಿ ಪರಿಯ ಸಂತಸದಿಇರುವ ಈ ಪತಿವ್ರತೆಯ | ದುರಿತಗಳ ಕಳೆದೂ |ಹರಿಯೆ ನಿನ್ನಲಿ ಭಕ್ತಿ | ವರಜ್ಞಾನ ವೃದ್ಧಿಸುತಜರುಗಿಸೋ ಸಾಧನವ | ಕರುಣ ಸಂಪನ್ನಾ 1 ಅಚ್ಯುತ ಮೂರ್ತಿ | ಪ್ರತಿ ರಹಿತ ದೇವಾ 2 ದೇಶ ಕಾಲಾ ತೀತ | ವಾಸುದೇವನೆ ಇವಳಆಶೆ ಪೂರೈಸುತಲಿ | ಹೃದ್ಗುಹದಿ ತೋರೀಮೇಶ ಗುರು ಗೋವಿಂದ | ವಿಠಲ ಪದ ಆನಂದರಾಶಿಯೊಳು ಸುಖಿಪಂತೆ | ಪೋಷಿಸೊ ಇವಳಾ 3
--------------
ಗುರುಗೋವಿಂದವಿಠಲರು
ಗುರುವರ್ಯರನು ಭಜಿಸೋ ರಾಘವೇಂದ್ರ ಗುರುವರ್ಯರನು ಭಜಿಸೋ ಪ ಧರೆತಲದಲಿ ಅವತರಿಸಿ ಸುಜನರನು ಪರಿಪÀರಿ ವಿಧದಲಿ ಪೊರೆಯುತಲಿರುವ ಸದ್ ಅ.ಪ ನಳಿನನಾಭ ಶ್ರೀರಾಮರ ರುಚಿರ ಪದಗಳ ಸಂತತದಿ ಭಜಿಸಿ ಖಳರ ದುರ್ಮತಗಳನಳಿಸಿ ದಶಪ್ರಮತಿ ಗಳ ದಿವ್ಯ ಶಾಸ್ತ್ರಾರ್ಥಗಳನು ಸುಲಭದಲಿ ಇಳೆಯೊಳು ಸುಜನಕೆ ತಿಳಿಯುವ ತೆರದಲಿ ಬೆಳಗುತಿರುವ ಪರಿಮಳ ಮುಖವರ ಗ್ರಂಥ ಗಳನು ರಚಿಸುತ ಉಳಿಸಿ ಸುಮತಿಯನು ಇಳೆಯೊಳು ವರಮಂತ್ರ ನಿಲಯದಿ ನೆಲೆಸಿದ 1 ಮಂಗಳಕರಳೆಂದು ಚರಿತೆಯುಳ್ಳ ತುಂಗಾತೀರದಿ ನೆಲೆಸಿ ಕಂಗೊಳಿಸುತ ಚರಣಂಗಳ ಭಜಿಪರ ಸಂಘಕ್ಕೆ ತಮ್ಮ ಅಪಾಂಗ ವೀಕ್ಷಣದಿಂದ ಮಂಗಳ ತತಿಗಳ ನೀಡಿ ಅವರ ಆಘ ಭಂಗವಗೈಯುತ ಅನುದಿನದಲಿ ದ್ವಿಜ ಪುಂಗವ ನಿಕರದಿ ಪೂಜೆಯಗೊಂಬ ಉ ತ್ತುಂಗ ಚರಿತರಥಾಂಗಧರ ಪ್ರಿಯ 2 ಮುನ್ನ ಪ್ರಹ್ಲಾದನೆನೆಸಿ ಶ್ರೀ ನರಹರಿಯನ್ನು ಸತತ ಭಜಿಸಿ ಇನ್ನೊಂದು ಜನುಮದಿ ಮಾನ್ಯ ಶ್ರೀ ವ್ಯಾಸಮುನಿ ಯೆನ್ನಿಸಿ ಖಲಮತವನ್ನು ಖಂಡಿಸುತಲಿ ಚಿನ್ನ ಶ್ರೀಕೃಷ್ಣನ ಉನ್ನತ ಮಹಿಮೆಗ ಳನ್ನು ಬೋಧಿಸುತ ತನ್ನ ಭಕುತಜನ ರನ್ನು ಹರುಷದಲಿ ಧನ್ಯರೆನಿಸಿದ ಪ್ರ ಸನ್ನ ಶ್ರೀರಾಮರ ಭಕುತ ಶಿರೋಮಣಿ 3
--------------
ವಿದ್ಯಾಪ್ರಸನ್ನತೀರ್ಥರು
ಗುರುವಶಕೆ ನಮೋ ಎಂಬೆ ನಮ್ಮ ಶ್ರೀ ಮದಾನಂದತೀರ್ಥ ಪದ್ಮನಾಭರಿಗೆ | ರಾಮದೇವರ ಕಂದ ನರಹರಿಗೆ || ಕಾಮಿತ ಫಲವೀವ ಮಾಧವಕ್ಷೋಭ್ಯರಿಗೆ | ಆ ಮಹಾಮಹಿಮ ಜಯತೀರ್ಥ ರಾಯರಿಗೆ 1 ವಿದ್ಯಾಧಿರಾಜರಿಗೆ ವಿಜಯ ಕವೀಂದ್ರ ಸು | ಸದ್ಗುಣ ವಾಗೀಶ ರಾಮಚಂದ್ರರಿಗೆ || ವಿದ್ಯಾನಿಧಿ ರಘುನಾಥ ರಘುವರ್ಯತೀರ್ಥರಿಗೆ | ಅದ್ವೈತಮತ ಖಂಡ ರಘೋತ್ತರಾಯರಿಗೆ 2 ವೇದವ್ಯಾಸ ವಿದ್ಯಾಧೀಶ ವೇದನಿಧಿ ಮುನಿಗೆ | ನಿತ್ಯ ವತ್ರರಿಗೆ || ಮೇದಿನಿಯಲಿ ಮೆರೆದ ಸತ್ಯನಿಧಿತೀರ್ಥರಿಗೆ | ವಾದಿಗಜಕೆ ಸಿಂಹ ಸತ್ಯನಾಥರಿಗೆ 3 ಯತಿಶ್ರೇಷ್ಠ ಸತ್ಯಾಭಿನವತೀರ್ಥರಿಗೆ | ಸತತ ಸಜ್ಜನಪಾಲ ಸತ್ಯಪೂರ್ಣರಿಗೆ || ಅತಿಶಯವಾನಂದ ಸತ್ಯ ವಿಜರಿಗೆ | ಮತ ಉದ್ಧಾರಕ ಶ್ರೀ ಸತ್ಯಪ್ರಿಯರಿಗೆ4 ಇಂತು ಗುರುಗಳ ಸಂತರೆ ಕೊಂಡಾಡಿ ಇಂತು ಸುತಾಪವನುರುಹಿ ಬಿಟ್ಟು || ಸಂತೋಷಿ ನಾನಾದೆ ವಿಜಯವಿಠ್ಠಲನ್ನ ಚಿಂತಿಯ ಮಾಡುವೆ ದಾಸರ ದಯದಿಂದ 5
--------------
ವಿಜಯದಾಸ
ಗುರುವಾದಿರಾಜ ತವ | ಚರಣಗಳಿಗಭಿನಮಿಪೆದೊರಕಿಸೆನಗ್ಹರಿಪಾದ | ಸರಸಿರುಹ ಗುರುವೇ ಅ.ಪ. ಯತಿ ಕುಲಾಗ್ರಣಿ ದ್ವೈತ | ಮತ ಜನರ ಉದ್ಧಾರಸತತ ನೀ ನೆಸಗುತಲಿ | ಪ್ರತಿರಹಿತ ನೆನಿಸೀ |ಮತ ಗ್ರಂಥ ವಿಸ್ತರಿಸಿ | ಯುಕ್ತಿಗಳ ಬೋಧಿಸುತಹಿತದಿಂದ ಸಜ್ಜನಕೆ | ಗತಿ ತೋರಿ ಮೆರೆದ 1 ಪಾದ ಪೂಜೆಯನುಹವಣೆಗಳ ತಿಳಿಯೊ ನಾ | ದೈವಗತಿಯಂತೋ 2 ಭಾವಿ ಮಾರುತ ನಿಮ್ಮ | ಭಾವ ತಿಳಿವರು ಯಾರುಓವಿ ನಿಮ್ಮಡಿಗಳನು | ಸ್ತವನ ಗೈದೂ |ಗೋವಳರ ಪ್ರೀಯ ಗುರು | ಗೋವಿಂದ ವಿಠ್ಠಲನಭಾವದಲಿ ಕಾಣ್ವಂಥ | ಭಾವ ಕೊಡು ಸಂತ 3
--------------
ಗುರುಗೋವಿಂದವಿಠಲರು
ಗುರುವೇ ರಾಘವೇಂದ್ರ ಪ ಗುರುವೆ ಆಶ್ರಿತ ಸುರತರುವೆನುತಲಿನಿನ್ನ ಚರಣ ನಂಬಿದವರಿಗೆ ಪರಮಾನುಗ್ರಹ ಮಾಳ್ಪ ಅ.ಪ ಮಂತ್ರಾಲಯದಲಿ ನೀನಿಂತುನಿರಂತರ ಸಂತರಿಷ್ಟಾರ್ಥವ ಸಲಿಸುತಲಿರುವೆ 1 ದೃಢ ಮಾಡಿ ಅವರ ಆದರಿಸುವೆ ಸತತ2 ಭವ ದುರಿತವ ತರಿವೆ ಗುರುರಾಮವಿಠಲನ ಶರಣರಗ್ರಣಿಯೆ 3
--------------
ಗುರುರಾಮವಿಠಲ
ಗುರುಸಂತತಿಗೆ ನಮೊ ನಮೊ ಶ್ರೀ ಹರಿಶರಣರಿಗೆ ನಮೋ ನಮೋ ಪ ಧರಣೀಸುರರಿಗೆ ನಮೋ ನಮೋ ಅ.ಪ ವಿಜಯರಾಮದಾಸಗುರುವೆ ನಮೋ ನಮ ಭಜಕಜನರಸುರತರುವೆ ನಮೋ ವೃಜಿನ ಕಳೆವ ಭಾಗ್ಯನಿಧಿದಾಸ ನಮೋ ವಂದೇ ಸುಪ್ರೇಮದಾಸ ನಮೋ 1 ತಿರುಮಲಾಖ್ಯದಾಸರಿಗೆ ನಮೋ ನಮ ಗುರುಗೋಪಾಲರಾಯರಿಗೆ ನಮೋ ವರ ಭಾಗಣ ವಿಜಯರಾಯರಿಗೆ ನಮೋ ಪುರಂದರಾಖ್ಯ ಸುರಮುನಿಗೆ ನಮೋ 2 ವ್ಯಾಸಾಭಿಧಮೌನೀಶನಮೋ | ಹರಿ ದಾಸಶ್ರೀಪಾದರಾಯರಿಗೆ ನಮೋ ಭೂಸುರ ಪ್ರಿಯಹನುಮತೇ ನಮೋ ಸೀತೇಶ ಶ್ರೀಗುರುರಾಮ ವಿಠಲ ನಮೋ 3
--------------
ಗುರುರಾಮವಿಠಲ