ಒಟ್ಟು 7653 ಕಡೆಗಳಲ್ಲಿ , 132 ದಾಸರು , 4671 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಯೆ ಎನಗಾರು ಗತಿಯೊ ನೀನಲ್ಲದೆ ಪ.ಹಿಂದಿನಾಪತ್ತು ಮರೆತೆಇಂದುಮಾಯದಿ ಬೆರೆತೆಒಂದುಗೂಡಿದವುಅಘಮುಂದಿನರುಹಿಲ್ಲ1ಹಗಲು ಅಶನದ ಕೃತ್ಯ ಇರುಳು ನಿದ್ರೆಯ ಮಬ್ಬುವಿಗಡಕಾವನ ತಡೆ ತಗಲು ಬಿತ್ತೊ ರಂಗಾ2ಅತ್ತಿತ್ತ ಸುತ್ತುವನಕ ಹೊತ್ತು ಹೋಯಿತು ಯಮನಮುತ್ತಿಗೆ ಬಿದ್ದಾಗ ಮತ್ತಾರಿಲ್ಲೊ ಸ್ವಾಮಿ 3ಅಜ್ಞಾನೆಂಬಹಿ ಕಚ್ಚಿ ಯಜೆÕೀಶ ನಿನ್ನಂಘ್ರಿಸಂಜÕವಿಲ್ಲದೆ ದು:ಖ ಮಗ್ನನಾದೆನಲ್ಲೊ 4ಶ್ರೀ ಪ್ರಸನ್ವೆಂಕಟೇಶ ತಾಪತ್ರಯವಿನಾಶನೀ ಪಾಲಿಸಯ್ಯ ವಿಶ್ವವ್ಯಾಪಕ ಸ್ವಾಮಿ 5
--------------
ಪ್ರಸನ್ನವೆಂಕಟದಾಸರು
ಹರಿಯೆನ್ನು ಹರಿಯೆನ್ನು ಹರಿಯೆನ್ನು ಪ್ರಾಣಿಹರಿಯೆನ್ನದಿದ್ದರೆ ನರಹರಿಯಾಣೆ ಪ.ಹೆಂಗಸು ಮಕ್ಕಳು ಹೆರವರು ಪ್ರಾಣಿ |ಸಂಗಡ ಬರುವವರೊಬ್ಬರ ಕಾಣೆ 1ದಾನವಿಲ್ಲದ ದ್ರವ್ಯ ಗಳಿಸದೆ ಪ್ರಾಣಿಪ್ರಾಣ ಹೋಗುವಾಗ ಕಾಣೆ ದುಗ್ಗಾಣೆ 2ನೀರ ಮೇಲಿನ ಗುಳ್ಳೆ ಸಂಸಾರ ಪ್ರಾಣಿಸಾರಿದ ಪುರಂದರವಿಠಲನ ವಾಣಿ 3
--------------
ಪುರಂದರದಾಸರು
ಹರಿಯೆಂಬ ನಾಮಮೃತ ರುಚಿಕರವೆಲ್ಲಪರಮಭಕ್ತರಿಗಲ್ಲದೆ - ಮಿಕ್ಕ -|ಅರಿಯದ ಕಡುಮೂರ್ಖ ಮನುಜರಿಗೆಲ್ಲತಾಹರುಷವಾಗಬಲ್ಲದೆ? ಪಅಂದುಗೆಅರಳೆಲೆಯಿಟ್ಟರೆಕೋಡಗಕಂದನಾಗಬಲ್ಲದೆ? |ಹಂದಿಗೆ ತುಪ್ಪ-ಸಕ್ಕರೆ ತಿನ್ನಿಸಲು ಗ-ಜೇಂದ್ರನಾಗಬಲ್ಲದೆ? ||ಇಂದುಪೂರ್ಣಕಳೆಯೊಳು ತಾನು ತೋರಲುಪರಿಪರಿ ಬಂಗಾರವಿಟ್ಟರೆ ದಾಸಿ ತಾಅರಸಿಯಾಗಬಲ್ಲಳೆ? |ಭರದಿಂದ ಶ್ವಾನನ ಬಾಲವ ತಿದ್ದಲುಸರಳವಾಗಬಲ್ಲದೆ? ||ಉರಗಗೆ ಕ್ಷೀರವನೆರೆಯಲು ಅದು ತನ್ನಗರಳವ ಬಿಡಬಲ್ಲದೆ? ||ಭರದಿಂದ ನೀಲಿಯ ಕರದಿಂದ ತೊಳೆಯಲುಕರಿದು ಹೋಗಬಲ್ಲದೆ? | 2ಮೋಡಕೆ ಮಯೂರ ಕುಣಿವಂತೆ ಕುಕ್ಕುಟನೋಡಿ ಕುಣಿಯಬಲ್ಲದೆ? |ಗೋಡೆಗೆ ಎದುರಾಗಿ ನಾಟ್ಯವಾಡಲುನೋಡಿ ಸುಖಿಸಬಲ್ಲದೆ? ||ಹಾಡಿನ ಕುಶಲತೆ ಬಧಿರನು ತಾ ಸವಿ-ಮಾಡಿ ಕೇಳಬಲ್ಲನೆ? |ರೂಢಿಗೊಡೆಯ ನಮ್ಮಪುರಂದರವಿಠಲಮೂಢಜಾÕನಿ ಬಲ್ಲನೆ3
--------------
ಪುರಂದರದಾಸರು
ಹರಿಶರಣು ಮಧ್ವಗುರು ಶರಣೆಂಬೋದೆ ಬೀಜ ಮಂತ್ರ ಇಹಪರಕಿದೆ ಸಾಧನವೆಂದು ನಂಬಿಬಿಟ್ಟೆ ಹಲವು ತಂತ್ರ ಪ.ಹರಿಕೊಡದಾರು ಕೊಡುವರಿಲ್ಲ ನರರನು ಬೇಡಲ್ಯಾಕೆ ಶ್ರೀಹರಿಕೊಟ್ಟರುಂಟು ಹಗಲಿರುಳು ಒಣಹಂಬಲ್ಯಾಕೆ1ಇದು ನನ್ನದದು ನನ್ನದೆಂದು ಬರಿದೆ ಹೊತ್ತು ಹೋಯಿತಲ್ಲ ಶ್ರೀಪದುಮನಾಭನ ಕೃಪೆ ಭಕುತಿದಾರಿಯ ಹೊಂದಿ ಪಡೆಯಲಿಲ್ಲ 2ಎರವಿನ ಸತಿಸುತ ಪಶು ಧಾನ್ಯ ಒಂದೊಂದಾಗ್ಯಗಲುವಾಗ ಗತಹರುಷನಾಗಿ ರಂಗನಂಘ್ರಿಯ ಮರೆದುಂಡೆನಿರಯಭೋಗ3ಕರ್ಮತ್ರಯಗಳು ಕರಗವೆ ಶ್ರೀನಿವಾಸನೊಲುಮೆಯಿಂದ ದುಷ್ಕರ್ಮಾರಣ್ಯವು ಸುಟ್ಟು ಹೋಗದೆ ನಾಮಾಗ್ನಿಯಿಂದ 4ಬೇಡಿದುದೀವ ಪ್ರಸನ್ವೆಂಕಟೇಶನ ಬೇಡಬೇಕು ಅವನಹಾಡುತ ಹೊಗಳುತ ಜನ್ಮಾಯುಷ್ಯವ ಹೋಗಾಡಬೇಕು 5
--------------
ಪ್ರಸನ್ನವೆಂಕಟದಾಸರು
ಹರಿಹರಿಯೆ ಕಡೆಗಾಣೆನೈ ಜನುಮವಭವಕಡಲ ತಡಿಯ ಸೇರಿಸುಮಾಧವಪ.ವಿಷಯಾಸೆ ತೆರೆಗಳಲ್ಲಿ ಗೃಹವೆ ಗ್ರಹವಿಷಮ ಸತಿಸುತ ಗುಲ್ಮವು ವಡವಾಗ್ನಿಹಸಿವುತೃಷೆದಹಿಸಿತೆನ್ನ ಇದರೊಳಾಲಸಿಕೆಸುಳಿಭ್ರಮಣ ಘನ್ನ1ಷಟ್ಚರ್ಯ ಹಡಗದವರು ಬಿಡದೆ ಬೆನ್ನಟ್ಟಿ ಬಡಿದಂಜಿಸುವರು ಮನವಾಯುವಿನಟ್ಟುಳಿಗೆ ನಿಲವಿಲ್ಲವು ಇಂದ್ರಿಯಜಂತುಕಟ್ಟಿಲ್ಲದೆಳೆದೊಯ್ವವು 2ಸಂಸಾರಸಾರಫೇನ ಭುಂಜಿಸಲುಸಂಶಯದ ರೋಗ ನವೀನ ದುರಿತಾಂಬುಹಿಂಸೆ ಮಾಡದೆ ಉಳುಹಿತು ಅಜÕವ್ಯಾಳದಂಶ ಕ್ಷಣಲವಕಾಯಿತು 3ಸುಖವೆ ಬೊಬ್ಬುಳಿ ರಾಶಿಯು ಬಂಧು ಬಳಗಸಖಸ್ನೇಹ ಪಾಶಲತೆಯು ಅಹಿತಾಗಮ ಕಠೋರ ದುಶ್ಯಬ್ದಕೆಸ್ಮøತಿಹೋಗಿಚಕಿತನಹೆ ದೀನಬಂಧು 4ಇಂತು ಬಳಲುವುದ ನೋಡಿ ಸಿರಿಲಕುಮಿಕಾಂತ ನಿರ್ದಯನಾದೆ ನೀ ಪ್ರಸನ್ನವೆಂಕಟಕಾಂತ ಸಂತರ ಕೂಡಿಸೊ ಶ್ರೀ ಮೂರುತಿಅಂತ್ಯಯಾತ್ರೆಗೆ ಉದಯಿಸೊ 5
--------------
ಪ್ರಸನ್ನವೆಂಕಟದಾಸರು
ಹಾ ಹಾ ಸಾಧುರು ಮೆಚ್ಚದನಕ ಹರಿಗುರು ಮೆಚ್ಚ ಪ.ನನ್ನ ಗುಣಕೆ ನಾ ಮೆಚ್ಚಿದೆ ಬರಿದೆಪುಣ್ಯವಂತನೆಂದನ್ಯರ ಜರಿದೆಉನ್ನತ ಸೂಕ್ಷ್ಮ ಸುಧರ್ಮವ ಕಾಣೆನನ್ನೊಳು ನಾ ವೃಥಾ ಹಿಗ್ಗಿದರೇನು 1ಜನದೊಳು ದಣಿಯದೆ ಜ್ಞಾನವನೊರೆದುಘನವೈರಾಗ್ಯಕೆ ಹಿಂದಕೆ ಸರಿದುತನು ಮನ ಕದ್ದು ಭಕುತಿಯೊಳಿದ್ದುಹೆಣಗಾಡುತ ಭಾಗವತೆನಿಸಿದ್ದು 2ಸಂತರು ಒಪ್ಪಿದ ಜ್ಞಾನಿಯವ ಸಂತಸಂತರಿಗಾಗದವಿರತಿಭ್ರಾಂತಿಸಂತರುಕೂಡಿದಭಕುತಿ ಮುಕುತಿಸಂತರ ಪ್ರಿಯ ಪ್ರಸನ್ವೆಂಕಟಯ್ಯ 3
--------------
ಪ್ರಸನ್ನವೆಂಕಟದಾಸರು
ಹಿಡಿಸುವೆ ಹುಚ್ಚನೆ ಹಿಡಿಸುವೆರಂಗನರಸಿಯರ ಪಾಟ ಬಡಿಸುವೆ ಪ.ತಮವೆಂಬ ಭಂಗಿಯ ಕುಡಿಸುವೆಬುದ್ಧಿಭ್ರಮೆಗೊಂಡ ಮಾತು ನುಡಿಸುವೆಸುಮನಸರಿಗೆ ಹೆಂಡ ಕುಡಿಸುವೆಯಾರೂ ನಮಿಸದಂತೆ ದೂರ ಇಡಿಸುವೆ 1ರಜವೆಂಬೋದ್ರವ್ಯ ಬಚ್ಚಿಡಿಸುವೆಇವರ ರಾಜ ಲಕ್ಷಣಕಟ್ಟಿಇಡಿಸುವೆಗಜಗಮನೆಯರ ಗರ್ವ ಮುರಿಸುವೆನಮ್ಮತ್ರಿಜಗವಂದನ ಹಾಸ್ಯ ಮಾಡಿಸುವೆ2ಸತ್ಯ ಸಾಮಿತ್ಯವತೆಗೆಸುವೆಉನ್ಮತ್ತೆಯರ ಮಾಡಿ ಮೆರೆಸುವೆಕತ್ತಲೆ ಮನೆÀಯೊಳಗೆ ಹೊಗಿಸುವೆಇನ್ನೆತ್ತ ಹೋಗಲೆಂದು ಎನಿಸುವೆ 3ಯಾರೂ ಇಲ್ಲದಲಿ ಇಡಿಸುವೆಇವರ ನೀರು ಕಂಡು ಭಯಬಡಿಸುವೆಓರೆಂದು ಗಾಬರಿಗೆಡಿಸುವೆಕಾಯೋ ಶ್ರೀನಿವಾಸಾನೆಂದೆನಿಸುವೆ 4ಒಬ್ಬರಿÉಲ್ಲದಲಿ ಇಡಿಸುವೆಇವರನು ಗುಬ್ಬಿಯ ಹಾಂಗೆ ಭಯ ಪಡಿಸುವೆತಬ್ಬಿಬ್ಬುಗೊಂಡು ತಳವೆಳಸುವೆಅರ್ಥಿಲೊಬ್ಬ ರಾಮೇಶನ ನೋಡಿಸುವೆ 5
--------------
ಗಲಗಲಿಅವ್ವನವರು
ಹಿಂದಿನ ಪುಣ್ಯ ಫಲವೆಂತೊಇಂದಿರೇಶಾನಂದದ ಲೀಲೆ ಅರುಹಿದ ಪ.ಚಿತ್ರವಿಚಿತ್ರ ಮಹಿಮೆಯ ತೋರುತಖಳದೈತ್ಯರನೆಲ್ಲ ಮಡುಹಿದದೈತ್ಯರನೆಲ್ಲ ಮಡುಹಿ ಬಳಲ್ದನೆಂದುಕಸ್ತೂರಿ ತೈಲವೆರಸಿ ತಂದು 1ಶಂಕಿನಿ ಪದ್ಮಿನಿಯರೊಂದಾಗಿ ಕೃಷ್ಣನಪಂಕಜಾಸನದಲಿ ಕುಳ್ಳಿರಿಸಿಪಂಕಜಾಸನದಲಿ ಕುಳ್ಳಿರಿಸಿ ತಮ್ಮ ಒಲ್ವಕಂಕಣಗೈಯ ಮೌಳಿಯೊಳಿಟ್ಟು 2ಈರೇಳು ಲೋಕದ ದೊರೆಯಾಗು ಭಕುತರಸಿರಿಯಾಗು ದಿತಿಜರರಿಯಾಗುಸಿರಿಯಾಗು ಭಕ್ತರ ದಿತಿಜಾರಿಯಾಗೆನುತಹರಸಿದರರ್ಥಿ ಮಿಗಿಲಾಗಿ 3ಕುಂಭಕುಚದ ಕಾಮಿನಿಯರು ಹರುಷದಿಅಂಬುಜಾಕ್ಷನ ಪೂಸಿ ಕಿರುಬೆಮರಿಅಂಬುಜಾಕ್ಷನ ಪೂಸಿ ಕಿರುಬೆಮರಿ ದಣಿಯದೆ ಕದಂಬ ಕಡಿದಟಕಾಳಿಯ ತಂದು 4ವಿಕ್ರಮಾನ್ವಿವತವಾದವ್ಯಾಕೃತ ಗಾತ್ರಕೆಅಕ್ಕರಿಂದೆ ತೈಲನಾಶನವಅಕ್ಕರಿಂದಲಿ ತೈಲನಾಶನವ ಪೂಸಿ ಜಗುಳಲುಘಕ್ಕನಂಬರವ ಬಿಗಿದುಟ್ಟ 5ಹದವಾದ ಬಿಸಿನೀರ ಪೊಂಬಂಡೆಯೊಳುತುಂಬಿಪದುಮಗಂಧೆಯರು ನೀರೆರೆದರುಪದುಮಗಂಧೆಯರು ನೀರೆರೆವ ಸಂಭ್ರಮಕ್ಕೆಮುದದಿಸುರರುಹೂಮಳೆಗರೆದರು6ಮುಂಬರಿಯುತ ಬಾಲೆಯರುತಕದಿಂದಅಂಬುಧಾರೆಯ ನಿಲ್ಲಗುಡದೆರೆದುಅಂಬುಧಾರೆಯ ನಿಲ್ಲಗುಡದೆರೆದುಜಾಂಬೂನದಾಂಬರವುಡಿಸಿ ಕರೆತಂದು 7ಚಿತ್ರಮಂಟಪಕೆ ನವರತ್ನ ತೆತ್ತಿಸಿದ ಕಂಭಕಸ್ತೂರಿ ಕಾರಣೆ ರಚನೆಯಕಸ್ತೂರಿ ಕಾರಣೆ ರಚನೆಯ ಮಧ್ಯದಿಮುತ್ತಿನ ಹಸೆಯೊಳು ಕುಳ್ಳಿರಿಸಿ 8ನೀಲಮಾಣಿಕಮೋಘದಿಂದಲೊಪ್ಪುವ ಪದಕಲೋಲನೇತ್ರೆಯರಳವಡಿಸಿದರುಲೋಲನೇತ್ರೆಯರು ಅಳವಡಿಸಿ ಅಂಗುಲಿಗೆಲ್ಲ ಮುದ್ರಿಕೆನಿಟ್ಟು ನಲಿದರು 9ಮುಕುಟಕೌಸ್ತುಭಮಣಿಯುಕುತ ಭೂಷಣವಿಟ್ಟುರುಕುಮಿಣಿ ಸತ್ಯರೆಡಬಲದಿರುಕುಮಿಣಿ ಸತ್ಯರೆಡಬಲದಿ ಕುಳ್ಳಿರೆನಿತ್ಯಮುಕುತಗಾರತಿಯ ಬೆಳಗಲು 10ಚಿನ್ನದ ಹರಿವಾಣದಿ ರನ್ನದಾರತಿಯಿಟ್ಟುಕನ್ನೇರು ಕಿರುನಗೆ ಬೀರಿದರುಕನ್ನೇರು ಕಿರುನಗೆ ಬಿರಿಯುತ ಪಣೆಯೊಳುಪೊನ್ನಿನಾಕ್ಷತೆಯಿಟ್ಟು ಲಲಿತವ 11ಜಯ ರಾಮ ತ್ರೈಧಾಮ ಜಯ ಜೀಮೂತಶಾಮಜಯ ಪೂರ್ಣಕಾಮ ಸಾಸಿರನಾಮಜಯ ಪೂರ್ಣಕಾಮ ಸಾಸಿರನಾಮನೆಂದುಭಯರಹಿತಗಾರತಿಯ ಬೆಳಗಿದರು 12ಚಿತ್ತಜನಯ್ಯಗೆ ಚಿನುಮಯ ದೇಹಗೆಉತ್ತಮಗುಣಗಣ ಭರಿತಗೆಉತ್ತಮಗುಣಗಣ ಭರಿತಗೆ ಪರಮಪವಿತ್ರೇರಾರತಿಯ ಬೆಳಗಿದರು 13ಪನ್ನಗಾದ್ರಿವಾಸ ಪ್ರಸನ್ನವೆಂಕಟೇಶಕನ್ನೆ ಲಕ್ಷ್ಮಿಯ ಕೂಡಿ ಆರೋಗಣೆಯಕನ್ನೆ ಲಕ್ಷ್ಮಿಯ ಕೂಡ ಆರೋಗಣೆಯ ಮಾಡಿತನ್ನ ಭಕ್ತರಿಗೆಲ್ಲ ಸುಖಪ್ರೀತ 14
--------------
ಪ್ರಸನ್ನವೆಂಕಟದಾಸರು
ಹೀಗಾದರು ದೂರ ಪರಗತಿಹೀಗಾದರು ದೂರ ಪ.ತಾನೊಳ್ಳೆದುಂಡು ವಿಪ್ರಾನೀಕಕೊಂದುಹೀನ ದಯದಿ ಅತಿಜ್ಞಾನಿಆಗಿದ್ದು1ಆತುರದ ಧರ್ಮಾರ್ತರ ನಡವುಯಾತಕು ಸಲ್ಲದು ಮಾತಿನ ಮಡುವು 2ಭೂರಿಗುಣಜÕ ಉದಾರವನರಿಯದಆರಿಗೆ ಪ್ರಸನ್ವೆಂಕಟ ದೊರೆಯ 3
--------------
ಪ್ರಸನ್ನವೆಂಕಟದಾಸರು
ಹೀಗೆ ಮಾಡಬೇಕೋ-ವಿಠಲ ತಂದೆಹೀಗೆ ಮಾಡಬೇಕೋ ಪಹೇಗಾದರು ದುರಿತಗಳೆನ್ನ ಕಾಡದಹಾಗೆ ಮಾಡ ಬೇಕೋ ಅ.ಪಹಿಂದಿನ ಸುಕೃತಗಳ ಫಲದಿಂದ ಬಂದೀ ನರಜನುಮಮುಂದೆ ನಾ ತಾಯ ಉದರದಲಿ ಜನಿಸದಹಾಗೆ ಮಡಬೇಕೋ ವಿಠಲ ತಂದೆ 1ದಾನಿ ನಿನ್ನನು ಬೇಡುವೆ ದುಷ್ಕರ್ಮದ -ಹಾನಿಯೊಂದೇ ಸಾಲದೆಹೀನ ಮಾನವರಿಗೆ ನಾನು ಕೈಯಾನದಹಾಗೆ ಮಾಡಬೇಕೋ - ವಿಠಲ ತಂದೆ 2ಕರುಣಿಪುರಂದರವಿಠಲ ತಂದೆನೆರೆನಂಬಿದೆ ನಿನ್ನಶರಣ ರಕ್ಷಕನೆಂಬ ಬಿರುದು ಬೇಕಾದರೆಹೀಗೆ ಮಾಡಬೇಕೋ - ವಿಠಲ ತಂದೆ 3
--------------
ಪುರಂದರದಾಸರು
ಹುಚ್ಚು ಹಿಡಿಸಿದೆಯಾಮಾಧವ|ನಿಚ್ಚನಿನ್ನ ಪಾದಾಂಬುಜವ ಭಜಿಪರಿಗೆ ಪಮತ್ತಗಜವೆಂಟು ಸೊಕ್ಕಿಲಿ ಕೊಲ್ವವು |ಕುತ್ತಿಗೆ ಮುರಿವರಾರು ಮಂದಿಯೂ ||ಎತ್ತ ಹೋಯಿತೋ ಬುದ್ಧಿ ಕುಳಿತುಕೊಂಡರೆ ಮೇಲೆ |ಹುತ್ತ ಬೆಳದರೆಚ್ಚರಿಕೆಯಿಲ್ಲದಂಥ 1ದಾರಾಸುತರೆನ್ನದಾರೆಂದು ನೋ |ಡರಾಗಾರ ನಮ್ಮದೆಂದು ಪೋಷಿಸರು ||ಆರಣ್ಯದಲಿ ಮುಸುಕಿಕ್ಕಿ ಧ್ಯಾನಿಸುವರು |ಶಾರೀರದ ಪರವಿಯನ್ನು ಬಿಟ್ಟಹರು 2ಬಿದ್ದು ಯದ್ದ ಕಾಳು ಆದುಕೊಂಡುಂಬರು |ಇದ್ದ ಬದುಕು ಜೋಕೆ ಮಾಡೊಲ್ಲರು ||ಪ್ರದ್ಯುಮ್ನ ಪ್ರಾಣೇಶ ವಿಠಲನೇ ಇಂಥ |ಬುದ್ಧಿಯ ಪ್ರೇರಿಸಿ ನೋಡಿ ಹಿಗ್ಗುವೆನೀ 3
--------------
ಪ್ರಾಣೇಶದಾಸರು
ಹೆಜ್ಜೆಗಳಿವೆ ನೋಡಿರಿ ರಂಗಯ್ಯನಹೆಜ್ಜೆಗಳಿವೆ ನೋಡಿರಿ ಪಹೆಜ್ಜೆಗಳಿವೆ ನೋಡಿರಿ ಮೂರ್ಜಗದÉೂಡೆಯನಅಬ್ಜಭವಾದ್ಯರ ಹೃದ್ಗøಹವಾಸನ ಅ.ಪಮಧುರಾಪುರದಿ ಜನಿಸಿದನ ಬೇಗಮಾವ ಕಂಸನ ಛೇದಿಸಿದನಚದುರೇರಿಗೊಲಿದ ಶ್ರೀಶನ ದಿವ್ಯಮದನಮೋಹನ ಕೃಷ್ಣವಿಧಿಭವಾರಾಧ್ಯನ1ಗೋಕುಲವಾಸನೆಂದೆನಿಪ ದಿವ್ಯನಾಕೇಶವಂದ್ಯ ಸರ್ವೇಶನಭೀಕರ ದೈತ್ಯರ ಸದೆದನ ಸವ್ಯ-ಸಾಚಿಯ ರಥದೊಳು ಏಕಾಂತ ನುಡಿದನ 2ವೇದ ಚೋರನ ಭೇದಿಸಿದನ ಗಿರಿಭಾರಬೆನ್ನಿಲಿ ಪೊತ್ತು ನಿಂತನಆದಿ ದೈತ್ಯನ ಸೀಳಿ ಭೂಮಿಯ ತಂದುಕ್ರೂರ ದೈತ್ಯನ ಕರುಳ್ಹಾರ ಮಾಡಿದ ಹರಿಯ 3ಬಲಿಯ ದಾನವ ಬೇಡಿದನ ಬಲುಛಲದಿ ಕ್ಷತ್ರಿಯರ ಸೋಲಿಸಿದನಲಲನೆಯ ತಂದ ಶ್ರೀವರನಗೊಲ್ಲರ ಕುಲದಲ್ಲಿ ಬೆಳೆದ ಶ್ರೀಚಲುವ ಗೋಪಾಲನ 4ದುಷ್ಟಕಾಳಿಂಗನ ಮದವನಳಿದುಮೆಟ್ಟಿನಾಟ್ಯದಿ ಸಿರದಿ ತುಳಿದನಪುಟ್ಟಪಾದದ ದಿವ್ಯ ಚಲುವನ ಗೋವ್ಗ-ಳಟ್ಟಿ ಹೋಗುವ ನಮ್ಮ ಪುಟ್ಟ ಗೋಪಾಲನ 5ಶಂಖು ಚಕ್ರವು ಗದ ಪದ್ಮವು ಹೊಳೆವÀಕಿಂಕಿಣಿಪೈಜನಿನಾದವುಬಿಂಕದಿ ಊದುವ ಕೊಳಲಗಾನವು ನಿ-ಶ್ಶಂಕೆಯಿಂದಲಿ ಭಕ್ತವೃಂದವ ಪೊರೆದನ 6ಥಳಥಳಿಸುವ ದಿವ್ಯ ತಿಲಕವು ಹೊಳೆಯೆಬರಿಮೈಯ್ಯ ತೋರುತ ನಿಂತನಕುದುರೆಯನೇರುತ್ತ ಬರುವನಸಿರಿಕಮಲನಾಭ ವಿಠ್ಠಲ ಭಕ್ತಪೋಷನ7
--------------
ನಿಡಗುರುಕಿ ಜೀವೂಬಾಯಿ
ಹೆಸರು ತಂದಿರ್ಯಾ ಭಿಕ್ಷಕೆ |ಹೆಸರು ತಂದಿರ್ಯಾಪಅಸಮವೀರರೆಂಬ ಹೆಸರು |ಕುಶಲಗಾರರೆಂಬ ಹೆಸರುಶಶಿಯಂತೆ ಶೋಭಿಸುವ ಶಿಶುವು |ಕುಲಕೆ ಯೋಗ್ಯನೆಂಬ ಹೆಸರು ||ಹೆಸರು||1ದಾನಶೀಲರೆಂಬ ಹೆಸರು |ಮಾನವಂತರೆಂಬ ಹೆಸರು |ಸಾನುರಾಗದಲ್ಲೂ ಆತ್ಮ |ಜ್ಞಾನಿಗಳೆಂದೆಂಬ ಹೆಸರು2ಹಿರಿಯ ಮನೆತನದ ಹೆಸರು |ಗುರುಗಳಾ ಭಕ್ತಿಯಲಿ ಹೆಸರು |ಪರಮಭಾಗವತರ ತೆರದಿ |ಹರಿಯ ಶರಣರೆಂಬ ಹೆಸರು3ಪುತ್ರವತಿಯರೆಂಬ ಹೆಸರು |ಸತ್ಯಶೀಲೆಯರೆಂಬ ಹೆಸರು |ಪತಿಯ ಸೇವೆಯಲ್ಲಿನಿರತ|ಪತಿವ್ರತೇಯರೆಂಬ ಹೆಸರು4ಸತ್ಯಸಂಧರೆಂಬ ಹೆಸರು |ತತ್ವಜÕರೆಂದೆಂಬ ಹೆಸರು |ಚಿತ್ತ ಶುದ್ಧರೆನಿಸಿ | ಗೋವಿಂದಾನ |ದಾಸರೆಂಬ ಹೆಸರು5
--------------
ಗೋವಿಂದದಾಸ
ಹೇ ಮನವೆ ಈ ದೇಹ ಗಾಳಿದೀಪ ಪ.ನಳ ಪುರೂರವ ಹರಿಶ್ಚಂದ್ರ ಪುಣ್ಯಶ್ಲೋಕರುಇಳೆಯೊಳು ಒಯ್ಯಲಿಲ್ಲ ದಾರೂ 1ಹಂಬಲಗಡಲೊಳು ಮುಳುಗಲಿನ್ನಾವ ಸುಖಅಂಬುಜಾಕ್ಷಗೆ ಸಲ್ಲಲೀ ಲೆಕ್ಕ 2ಧರ್ಮವ ಹಳಿದು ಸತ್ಕರ್ಮವ ಜರೆದರೆನಮ್ಮ ಪ್ರಸನ್ನವೆಂಕಟ ದೂರ 3
--------------
ಪ್ರಸನ್ನವೆಂಕಟದಾಸರು
ಹೇಗೆ ಅರ್ಚಿಸಲಿ ಮೆಚ್ಚಿಸಲಿ ನಿನ್ನನಾಗಶಯನ ನಾರದವಂದಿತನೆ ದೇವಾ ಪಮಂಗಳಾಭಿಷೇಕಕೆಉದಕತರುವೆನೆನೆಗಂಗೆಯ ಅಂಗುಟದಿ ಪಡೆದಿಹೆಯೊ ||ಸಂಗೀತ ಕೀರ್ತನೆ ಪಾಡುವೆನೆಂದರೆಹಿಂಗದೆ ತುಂಬುರ ನಾರದರು ಪಾಡುವರೊ 1ಪುಷ್ಪವ ತಂದು ನಿನಗರ್ಪಿಸುವೆನೆಂದರೆಪುಷ್ಪ ಫುಲ್ಲಯಿಸಿದೆ ಹೊಕ್ಕುಳಲಿ ||ಮುಪ್ಪತ್ತು ಮೂರ್ಕೋಟಿ ದೇವತೆಗಳು ನಿನಗೊಪ್ಪಯಿಸೆ ನೈವೇದ್ಯ ನಿತ್ಯತೃಪ್ತನು ನೀನು 2ಕೋಟಿಸೂರ್ಯರ ಕಾಂತಿ ಮಿಗಿಲಾದವನಿಗೊಂದುಮೋಟು ದೀವಿಗೆ ಬೆಳಗೆ ಬೆಳಕಹುದೆ? ||ಸಾಟಿಗಾಣದಸಿರಿಉರದೊಳು ನೆಲಸಿರೆಪೋಟುಗಾಸನು ಎಂತು ಕಾಣಿಕೆಯಿಡಲಯ್ಯ 3ಹಾಸಿಗೆಯನು ನಿನಗೆ ಹಾಸುವೆನೆಂದರೆಶೇಷನ ಮೈಮೇಲೆ ಪವಡಿಸಿಹೆ ||ಬೀಸಣಿಕೆಯ ತಂದು ಬೀಸುವೆನೆಂದರೆಆಸಮೀರಣ ಚಾಮರವ ಬೀಸುತಿಹನೋ4ನಿತ್ಯಗುಣಾರ್ಣವ ನಿಜಸುಖ ಪರಿಪೂರ್ಣಸತ್ತು ಚಿತ್ತಾನಂದ ಸನಕಾದಿ ವಂದ್ಯ ||ಮುಕ್ತಿದಾಯಕ ನಮ್ಮಪುರಂದರವಿಠಲನುಭಕ್ತಿಪ್ರಿಯನು ಎಂದು ಭಜಿಸಿ ಕೊಂಡಾಡುವೆ 5
--------------
ಪುರಂದರದಾಸರು